Headlines

‘ಅಮೃತಧಾರೆ’ ಮಲ್ಲಿಗೆ ಸಾಗರ ಎಂದರೆ ಬಲು ಇಷ್ಟ; ಏಕೆ?

ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ‘ಅಮೃತಧಾರೆ’ ಧಾರಾವಾಹಿ (Amruthadhare Serial) ಸಾಕಷ್ಟು ಗಮನ ಸೆಳೆಯುತ್ತಿದೆ. ಈ ಧಾರಾವಾಹಿ ಭರ್ಜರಿ ಮೆಚ್ಚುಗೆ ಪಡೆಯುತ್ತಿದೆ. ಟಿಆರ್ಪಿಯಲ್ಲೂ ಧಾರಾವಾಹಿ ಟಾಪ್ ಐದರಲ್ಲಿ ಸ್ಥಾನ ಪಡೆದಿರುವುದು ವಿಶೇಷ. ಈ ಧಾರಾವಾಹಿಯಲ್ಲಿ ಗೌತಮ್ ಹಾಗು ಭೂಮಿಕಾ ಪಾತ್ರ ಮಾಡಿರುವ ರಾಜೇಶ್ ನಟರಂಗ ಹಾಗೂ ಛಾಯಾ ಸಿಂಗ್ ಎಷ್ಟು ಗಮನ ಸೆಳೆದಿದ್ದಾರೋ, ಮಲ್ಲಿ ಪಾತ್ರ ಮಾಡಿರುವ ಅನ್ವಿತಾ ಕೂಡ ಮೆಚ್ಚುಗೆ ಪಡೆದಿದ್ದಾರೆ. ಅವರ ಪಾತ್ರ ಗಮನ ಸೆಳೆದಿದೆ. ‘ಅಮೃತಧಾರೆ’ ಧಾರಾವಾಹಿಯಲ್ಲಿ ಮಲ್ಲಿ ಪಾತ್ರದಲ್ಲಿ ಮೊದಲು ರಾಧಾ…

Read More

‘ಪ್ರೀತಿನೇ ಎಲ್ಲಾ ಅಲ್ಲ, ಆದರೆ, ಪ್ರೀತಿ ಇಲ್ದೆ ಏನೂ ಇಲ್ಲ’; ತ್ರಿಷಾ ಮಾರ್ಮಿಕ ಪೋಸ್ಟ್

ನಟಿ ತ್ರಿಷಾ ಕೃಷ್ಣನ್ (Trisha) ಅವರು ಸುದ್ದಿಯಲ್ಲಿದ್ದಾರೆ. ಇದಕ್ಕೆ ಕಾರಣ ಆಗಿದ್ದು ವಿಜಯ್ ಜೊತೆಗಿನ ಗೆಳೆತನ. ವಿಜಯ್ ಹಾಗೂ ತ್ರಿಷಾ ಮಧ್ಯೆ ಅಫೇರ್ ಇದೆ ಎಂಬ ಸುದ್ದಿ ಇತ್ತೀಚೆಗೆ ಹರಿದಾಡಿತ್ತು. ಆದರೆ, ಇದನ್ನು ಯಾರೂ ಒಪ್ಪಿಕೊಂಡಿಲ್ಲ. ಹೀಗಿರುವಾಗಲೇ ವಿಜಯ್ ಪತ್ನಿ ಸಂಗೀತಾ ವಿಚ್ಛೇದನಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದು, ಪತಿಗೆ ನಟಿಯ ಜೊತೆ ಅಕ್ರಮ ಸಂಬಂಧ ಇದೆ ಎಂದು ಆರೋಪಿಸಿದ್ದಾರೆ. ಈ ಮಧ್ಯೆ ತ್ರಿಷಾ ಹಂಚಿಕೊಂಡ ಸಾಲುಗಳು ಗಮನ ಸೆಳೆದಿವೆ. ತ್ರಿಷಾ ಅವರು ತಮಿಳಿನ ಖ್ಯಾತ ನಟಿ. ಅವರಿಗೆ…

Read More

ಆರ್​​ಸಿಬಿ ಮ್ಯಾಚ್​​ಗಳಲ್ಲಿ ಸದಾ ಅನುಷ್ಕಾ ಶರ್ಮಾ ಪಕ್ಕ ಕೂರುವ ಈ ಸುಂದರಿ ಯಾರು?

ಸದ್ಯ ಐಪಿಎಲ್ ಹವಾ ಜೋರಾಗಿದೆ. ಆರ್​​ಸಿಬಿ ಒಳ್ಳೆಯ ಪರ್ಫಾರ್ಮೆನ್ಸ್ ನೀಡುತ್ತಿದ್ದು, ಆಡಿದ ಎರಡು ಪಂದ್ಯಗಳ ಪೈಕಿ ಎರಡೂ ಮ್ಯಾಚ್ ಗೆದ್ದಿದೆ. ಆರ್​​​ಸಿಬಿ ಮ್ಯಾಚ್ ನೋಡಲು ನಟಿ ಅನುಷ್ಕಾ ಶರ್ಮಾ ಆಗಮಿಸುತ್ತಿದ್ದಾರೆ. ಆರ್​​ಸಿಬಿಯ ಎರಡೂ ಪಂದ್ಯಗಳು ಬೆಂಗಳೂರಿನಲ್ಲಿ ನಡೆದಿದ್ದವು. ಹೀಗಾಗಿ, ಅನುಷ್ಕಾ ಶರ್ಮಾ ಅವರು ಬೆಂಗಳೂರಿಗೆ ಬಂದಿದ್ದರು. ಪ್ರತಿ ಪಂದ್ಯದಲ್ಲೂ ಅವರ ಪಕ್ಕ  ಓರ್ವ ಸುಂದರಿ ಕುಳಿತಿರುತ್ತಾರೆ. ಅವರು ಯಾರು ಎನ್ನುವ ಹುಡುಕಾಟ ನಡೆದಿದೆ. ಅನುಷ್ಕಾ ಶರ್ಮಾ ಪಕ್ಕ ಕುಳಿತಿರುವ ಹುಡುಗಿ ಯಾರು ಎಂಬುದನ್ನು ಪತ್ತೆ ಹಚ್ಚಲು ಅನೇಕರು…

Read More

ಇರಾನ್ ಮುಗಿಸಲು ಒಂದೇ ಒಂದು ರಾತ್ರಿ ಸಾಕು, ಗಡುವು ಮುಗಿಯುವ ಮುನ್ನವೇ ಇರಾನ್​ಗೆ ಟ್ರಂಪ್ ಬೆದರಿಕೆ

ವಾಷಿಂಗ್ಟನ್, ಏಪ್ರಿಲ್ 07: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಇರಾನ್​ಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಹಾರ್ಮುಜ್ ಜಲಸಂಧಿಯನ್ನು ತೆರೆಯದಿದ್ದರೆ ಇರಾನ್ ರಾತ್ರೋರಾತ್ರಿ ನಾಶವಾಗಬಹುದು ಎಂದು ಟ್ರಂಪ್ ಬೆದರಿಸಿದ್ದಾರೆ. ಶ್ವೇತಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಟ್ರಂಪ್, ಇಡೀ ದೇಶ ರಾತ್ರೋ ರಾತ್ರಿ ನಾಶವಾಗಬಹುದು ಮತ್ತು ಆ ರಾತ್ರಿ ಮಂಗಳವಾರವೇ ಆಗಿರಬಹುದು ಎಂದಿದ್ದಾರೆ. ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಹೆಚ್ಚುತ್ತಿರುವ ಉದ್ವಿಗ್ನತೆ ಮಧ್ಯೆ ಈ ಹೇಳಿಕೆ ಬಂದಿದೆ. ಟ್ರಂಪ್ ಮಂಗಳವಾರ(ಏಪ್ರಿಲ್ 7) ರಾತ್ರಿ 8 ಗಂಟೆಯವರೆಗೆ ಇರಾನ್​ಗೆ ಸಮಯ…

Read More

Daily Devotional: ನೀವು ಮನೆಯಲ್ಲಿ ಸರಿಯಾದ ದಿಕ್ಕಿನಲ್ಲೇ ಕಸ ಗುಡಿಸುತ್ತಿದ್ದೀರಾ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮನೆಯಲ್ಲಿ ಕಸ ಯಾವ ದಿಕ್ಕಿನಿಂದ ಗುಡಿಸಲು ಶುರು ಮಾಡಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಕಸವನ್ನು ಗುಡಿಸುವ ದಿಕ್ಕು ಮುಖ್ಯವಾಗುತ್ತದೆ. ಮನೆಯಲ್ಲಿ ಸುಖ, ಶಾಂತಿ, ನೆಮ್ಮದಿ ಮತ್ತು ಧನಯೋಗ ನೆಲಸಬೇಕಾದರೆ, ಈಶಾನ್ಯ ದಿಕ್ಕಿನಿಂದ ಕಸ ಗುಡಿಸಲು ಪ್ರಾರಂಭಿಸಬೇಕು. ನಂತರ ಆಗ್ನೇಯದ ಕಡೆಗೆ ಸಾಗಿ, ವಾಯುವ್ಯ ದಿಕ್ಕಿನ ಮೂಲಕ ನೈರುತ್ಯ ದಿಕ್ಕಿನಲ್ಲಿ ಕಸ ಗುಡಿಸುವುದನ್ನು ಪೂರ್ಣಗೊಳಿಸಬೇಕು. ಈ ವಿಧಾನವು ಮನೆಗೆ ಅದೃಷ್ಟ ಮತ್ತು ಸಮೃದ್ಧಿಯನ್ನು ತರುತ್ತದೆ ಎಂದು…

Read More

ದ್ವಿತೀಯ ಪಿಯುಸಿ ಫಲಿತಾಂಶ ವಿಳಂಬ ಯಾಕೆ ಗೊತ್ತೇ? ಅಸಲಿ ಕಾರಣ ಬಹಿರಂಗ!

ಬೆಂಗಳೂರು, ಏಪ್ರಿಲ್ 7: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ (2nd Puc Result) ಇಂದು (ಏಪ್ರಿಲ್ 7) ಪ್ರಕಟವಾಗಲಿದೆ ಎಂದು ಕಾತರದಿಂದ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ನಿರಾಸೆಯಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಫಲಿತಾಂಶ ಪ್ರಕಟಿಸಲು ಸಿದ್ಧತೆ ಮಾಡಿಕೊಂಡಿದ್ದರೂ, ತಾಂತ್ರಿಕ ಕಾರಣಗಳಿಂದಾಗಿ ಪ್ರಕಟಣೆಯನ್ನು ಮುಂದೂಡಲಾಗಿದೆ. ಆದರೆ, ಫಲಿತಾಂಶ ಪ್ರಕಟಿಸುವುದನ್ನು ಮುಂದೂಡಿಕೆ ಮಾಡಲು ಅಸಲಿ ಕಾರಣ ಏನೆಂಬುದು ಈಗ ಬಹಿರಂಗವಾಗಿದೆ. ಚುನಾವಣಾ ನೀತಿ ಸಂಹಿತೆ ಅಡ್ಡಿ ರಾಜ್ಯದಲ್ಲಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ…

Read More

Horoscope Today: ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಲಾಭ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 7, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣ ಪಕ್ಷ, ಷಷ್ಠೀ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ.      …

Read More

‘ಬೆಂಗಳೂರು ಟ್ರಾಫಿಕ್ ನಿಮಗೆ ತಾಳ್ಮೆಯ ಪಾಠ ಕಲಿಸುತ್ತೆ’: ರೋಡ್ ರೇಜ್ ಪ್ರಕರಣದಲ್ಲಿ ಟೆಕ್ಕಿಗೆ ಹೈಕೋರ್ಟ್ ಚಾಟಿ!

ಬೆಂಗಳೂರು, ಏಪ್ರಿಲ್ 7: ‘ನಿಮಗೆ ತಾಳ್ಮೆ ಇಲ್ಲದಿದ್ದರೆ ಇಲ್ಲಿ ಏನೂ ಮಾಡಲು ಸಾಧ್ಯವಿಲ್ಲ. ಬೆಂಗಳೂರಿನ (Bangalore) ಟ್ರಾಫಿಕ್ ನಿಮಗೆ ತಾಳ್ಮೆಯನ್ನು ಕಲಿಸುತ್ತದೆ. ರೋಡ್ ರೇಜ್ ಅಥವಾ ರಸ್ತೆಯ ಮೇಲಿನ ಇಂತಹ ಉದ್ಧಟತನದ ವರ್ತನೆಗಳನ್ನು ಎಂದಿಗೂ ಕ್ಷಮಿಸಲು ಸಾಧ್ಯವಿಲ್ಲ’ ಎಂದು ಕರ್ನಾಟಕ ಹೈಕೋರ್ಟ್ (Karnataka High Court) ಗಂಭೀರವಾಗಿ ಟೆಕ್ಕಿಯೊಬ್ಬರಿಗೆ ಎಚ್ಚರಿಕೆ ನೀಡಿದೆ. ತನ್ನ ವಿರುದ್ಧ ದಾಖಲಾಗಿದ್ದ ರೋಡ್​ ರೇಜ್ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ…

Read More

Horoscope Today 07 April: ಇಂದು ಈ ರಾಶಿಯವರ ಮಾತು ನಂಬಿಕೆಗೆ ಅರ್ಹವಲ್ಲ

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ರೇವತೀ, ವಾರ : ಮಂಗಳ, ಪಕ್ಷ : ಕೃಷ್ಣ, ತಿಥಿ : ಷಷ್ಠೀ, ನಿತ್ಯನಕ್ಷತ್ರ : ಜ್ಯೇಷ್ಠಾ, ಯೋಗ : ಸಿದ್ಧಿ, ಕರಣ : ಭದ್ರ, ಸೂರ್ಯೋದಯ – 06 – 17 am, ಸೂರ್ಯಾಸ್ತ – 06 – 35 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ…

Read More

IPL 2026: ಮಳೆಯಿಂದ ಕೆಕೆಆರ್- ಪಂಜಾಬ್ ನಡುವಿನ ಪಂದ್ಯ ರದ್ದು

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಬೇಕಿದ್ದ ಕೋಲ್ಕತ್ತಾ ನೈಟ್ ರೈಡರ್ಸ್​ ಹಾಗೂ ಪಂಜಾಬ್ ಕಿಂಗ್ಸ್ ನಡುವಿನ ಐಪಿಎಲ್ 2026 ರ 12ನೇ ಪಂದ್ಯ ಮಳೆಯಿಂದ ರದ್ದಾಗಿದೆ. ಹೀಗಾಗಿ ಉಭಯ ತಂಡಗಳಿಗೆ ತಲಾ ಒಂದೊಂದು ಅಂಕ ಸಿಕ್ಕಿದೆ. ಇದರಿಂದ ಕೆಕೆಆರ್​ಗೆ ಲಾಭವಾದರೆ, ಪಂಜಾಬ್ ತಂಡ ಬೇಸರದಿಂದ ಮೈದಾನ ತೊರೆದಿದೆ. ಏಕೆಂದರೆ ಕೆಕೆಆರ್ ತಂಡ ಆಡಿದ ಮೊದಲ ಎರಡು ಪಂದ್ಯಗಳನ್ನು ಸೋತಿತ್ತು. ಇದರಿಂದ ತಂಡ ಯಾವುದೇ ಅಂಕಗಳನ್ನು ಹೊಂದಿರಲಿಲ್ಲ. ಆದರೆ ಈ ಪಂದ್ಯ ರದ್ದಾದ ಕಾರಣ ಕೆಕೆಆರ್​ಗೆ 1 ಅಂಕ ಸಿಕ್ಕಿದೆ….

Read More