ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ‘ಅಮೃತಧಾರೆ’ ಧಾರಾವಾಹಿ (Amruthadhare Serial) ಸಾಕಷ್ಟು ಗಮನ ಸೆಳೆಯುತ್ತಿದೆ. ಈ ಧಾರಾವಾಹಿ ಭರ್ಜರಿ ಮೆಚ್ಚುಗೆ ಪಡೆಯುತ್ತಿದೆ. ಟಿಆರ್ಪಿಯಲ್ಲೂ ಧಾರಾವಾಹಿ ಟಾಪ್ ಐದರಲ್ಲಿ ಸ್ಥಾನ ಪಡೆದಿರುವುದು ವಿಶೇಷ. ಈ ಧಾರಾವಾಹಿಯಲ್ಲಿ ಗೌತಮ್ ಹಾಗು ಭೂಮಿಕಾ ಪಾತ್ರ ಮಾಡಿರುವ ರಾಜೇಶ್ ನಟರಂಗ ಹಾಗೂ ಛಾಯಾ ಸಿಂಗ್ ಎಷ್ಟು ಗಮನ ಸೆಳೆದಿದ್ದಾರೋ, ಮಲ್ಲಿ ಪಾತ್ರ ಮಾಡಿರುವ ಅನ್ವಿತಾ ಕೂಡ ಮೆಚ್ಚುಗೆ ಪಡೆದಿದ್ದಾರೆ. ಅವರ ಪಾತ್ರ ಗಮನ ಸೆಳೆದಿದೆ.
‘ಅಮೃತಧಾರೆ’ ಧಾರಾವಾಹಿಯಲ್ಲಿ ಮಲ್ಲಿ ಪಾತ್ರದಲ್ಲಿ ಮೊದಲು ರಾಧಾ ಭಗವತಿ ಕಾಣಿಸಿಕೊಂಡಿದ್ದರು. ಅವರಿಗೆ ಕಲರ್ಸ್ ಕನ್ನಡದಲ್ಲಿ ‘ಭಾರ್ಗವಿ ಎಲ್ಎಲ್ಬಿ’ ಧಾರಾವಾಹಿ ಸಿಕ್ಕಿತು. ಆ ಬಳಿಕ ಅವರು ಧಾರಾವಾಹಿ ಬಿಟ್ಟರು ಮತ್ತು ಈ ಧಾರಾವಾಹಿ ಆಫರ್ ಅನ್ವಿತಾ ಅವರಿಗೆ ಹೋಯಿತು. ಅವರಿಗೆ ಸಾಗರ ಎಂದರೆ ಬಲು ಇಷ್ಟವಂತೆ.
ಅನ್ವಿತಾ ಸಾಗರ್ ಅವರದ್ದು ಮೂಲ ಶಿವಮೊಗ್ಗ ಜಿಲ್ಲೆಯ ಸಾಗರ. ಅವರು ಹುಟ್ಟಿದ್ದು ಇಲ್ಲಿ. ಅವರ ಅಪ್ಪ-ಅಮ್ಮ, ಅಣ್ಣ ಮಂಗಳೂರಿನಲ್ಲೇ ಇದ್ದಾರೆ. ಅವರಿಗೆ ಸಾಗರ ಎಂದರೆ ವಿಶೇಷ ಪ್ರೀತಿ ಇದೆ. ತಾವು ಹುಟ್ಟಿದ ಊರು ಎಂದು ಅವರಿಗೆ ವಿಶೇಷ ಪ್ರೀತಿ ಇದೆ. ಅನ್ವಿತಾ ಸಾಗರ್ ಅವರ ಸಹೋದರ ಅನೂಪ್ ತುಳು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ.
ಸಾಗರದ ಇಕ್ಕೇರಿ, ಕೆಳದಿ, ಮನೆ ಜಾಗ ಎಲ್ಲವೂ ಇಷ್ಟ. ಅಲ್ಲಿನ ಹಸಿರು ಪರಿಸರ ಇಷ್ಟ ಆಗುತ್ತದೆ. ಅವರಿಗೆ ಜೋಗ್ ಪಾಲ್ ಕೂಡ ಇಷ್ಟ. ಮಂಗಳೂರಿನಲ್ಲಿ ಕುಟುಂಬದವರ ಇದ್ದಾರೆ. ಅವರ ಮನೆಯ ಅಡುಗೆಯನ್ನು ಊಟ ಮಾಡಬಹುದು. ಬೆಂಗಳೂರಲ್ಲಿ ಅವರಿಗೆ ಒಂಟಿತನ ಕಾಡುತ್ತದೆಯಂತೆ. .
ಅನ್ವಿತಾ ಸಾಗರ್ ಅವರು ಮಲ್ಲಿಯಾಗಿ ಎಲ್ಲರಿಗೂ ಇಷ್ಟ ಆಗಿದ್ದಾರೆ. ಅವರ ನಟನೆಗೆ ಎಲ್ಲರೂ ಭೇಷ್ ಎನ್ನುತ್ತಿದ್ದಾರೆ. ಈಗ ಮಲ್ಲಿಗೆ ಎರಡನೇ ಮದುವೆ ಆಗಿದೆ. ಇಲ್ಲಿಂದ ಅವರ ಜೀವನ ಸಂಪೂರ್ಣ ಬದಲಾಗುವ ನಿರೀಕ್ಷೆ ಇದೆ. ಅವರು ಈಗ ಸಿವಿಲ್ ಪರೀಕ್ಷೆ ಪಾಸ್ ಆಗಿದ್ದು, ಸರ್ಕಾರಿ ಅಧಿಕಾರಿ ಆಗುವ ಸಾಧ್ಯತೆಯೂ ದಟ್ಟವಾಗಿದೆ.
ನಟಿ ತ್ರಿಷಾ ಕೃಷ್ಣನ್ (Trisha) ಅವರು ಸುದ್ದಿಯಲ್ಲಿದ್ದಾರೆ. ಇದಕ್ಕೆ ಕಾರಣ ಆಗಿದ್ದು ವಿಜಯ್ ಜೊತೆಗಿನ ಗೆಳೆತನ. ವಿಜಯ್ ಹಾಗೂ ತ್ರಿಷಾ ಮಧ್ಯೆ ಅಫೇರ್ ಇದೆ ಎಂಬ ಸುದ್ದಿ ಇತ್ತೀಚೆಗೆ ಹರಿದಾಡಿತ್ತು. ಆದರೆ, ಇದನ್ನು ಯಾರೂ ಒಪ್ಪಿಕೊಂಡಿಲ್ಲ. ಹೀಗಿರುವಾಗಲೇ ವಿಜಯ್ ಪತ್ನಿ ಸಂಗೀತಾ ವಿಚ್ಛೇದನಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದು, ಪತಿಗೆ ನಟಿಯ ಜೊತೆ ಅಕ್ರಮ ಸಂಬಂಧ ಇದೆ ಎಂದು ಆರೋಪಿಸಿದ್ದಾರೆ. ಈ ಮಧ್ಯೆ ತ್ರಿಷಾ ಹಂಚಿಕೊಂಡ ಸಾಲುಗಳು ಗಮನ ಸೆಳೆದಿವೆ.
ತ್ರಿಷಾ ಅವರು ತಮಿಳಿನ ಖ್ಯಾತ ನಟಿ. ಅವರಿಗೆ ಪರಭಾಷೆಯಲ್ಲೂ ಬೇಡಿಕೆ ಇದೆ. ಅವರು ಕನ್ನಡದಲ್ಲಿ ಪುನೀತ್ ರಾಜ್ಕುಮಾರ್ ಜೊತೆ ‘ಪವರ್’ ಸಿನಿಮಾದಲ್ಲಿ ನಟಿಸಿದ್ದಾರೆ. ಹೀಗಾಗಿ, ಕನ್ನಡದವರಿಗೂ ಅವರ ಪರಿಚಯ ಇದೆ. ತ್ರಿಷಾ ವಿಜಯ್ ಜೊತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇಬ್ಬರ ಬಾಂಧವ್ಯ ಚೆನ್ನಾಗಿಯೇ ಇದೆ. ಇದನ್ನು ಅನೇಕರು ಪ್ರಶ್ನೆ ಮಾಡುತ್ತಿದ್ದಾರೆ. ಹೀಗಿರುವಾಗಲೇ ಅವರು ಪ್ರೀತಿ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
‘ಪ್ರೀತಿಯೇ ಎಲ್ಲವೂ ಅಲ್ಲ, ಆದರೂ ಪ್ರೀತಿ ಇಲ್ಲದೆ ಎಲ್ಲವೂ ಅರ್ಥಹೀನ’ ಎಂಬ ಸಾಲುಗಳನ್ನು ತ್ರಿಷಾ ಹಂಚಿಕೊಂಡಿದ್ದಾರೆ. ಅವರ ಇನ್ಸ್ಟಾ ಸ್ಟೋರಿ ಗಮನ ಸೆಳೆದಿದೆ. ತ್ರಿಷಾ ಹೆಸರು ವಿಜಯ್ ಜೊತೆ ಚರ್ಚೆ ಆಗುವಾಗಲೇ ಈ ರೀತಿಯಲ್ಲಿ ಅವರು ಪೋಸ್ಟ್ ಹಾಕಿದ್ದು ಚರ್ಚೆಗೆ ಕಾರಣ ಆಗಿದೆ.
ಸಂಗೀತಾ ಹಾಗೂ ವಿಜಯ್ ವಿವಾಹ ಆಗಿ 26 ವರ್ಷಗಳು ಕಳೆದಿವೆ. ಈಗ ಇಬ್ಬರೂ ಬೇರೆ ಆಗುತ್ತಿರುವುದು ಬೇಸರದ ಸಂಗತಿ. ಇನ್ನು ತ್ರಿಷಾ ಹಾಗೂ ವಿಜಯ್ ಸಿನಿಮಾ ವಿಷಯ ನೋಡೋದಾದರೆ ಇಬ್ಬರ ಮಧ್ಯೆ ಎರಡು ದಶಕಗಳ ಬಂಧ ಇದೆ. ‘ಗಿಲ್ಲಿ’ (2004), ‘ತಿರುಪಾಚಿ’ (2005), ‘ಆತಿ’ (2006), ‘ಕುರುವಿ’ (2008), ‘ಲಿಯೋ’ (2023) ಸಿನಿಮಾಗಳಲ್ಲಿ ಒಟ್ಟಿಗೆ ನಟಿಸಿದ್ದಾರೆ.
ಸದ್ಯ ಐಪಿಎಲ್ ಹವಾ ಜೋರಾಗಿದೆ. ಆರ್ಸಿಬಿ ಒಳ್ಳೆಯ ಪರ್ಫಾರ್ಮೆನ್ಸ್ ನೀಡುತ್ತಿದ್ದು, ಆಡಿದ ಎರಡು ಪಂದ್ಯಗಳ ಪೈಕಿ ಎರಡೂ ಮ್ಯಾಚ್ ಗೆದ್ದಿದೆ. ಆರ್ಸಿಬಿ ಮ್ಯಾಚ್ ನೋಡಲು ನಟಿ ಅನುಷ್ಕಾ ಶರ್ಮಾ ಆಗಮಿಸುತ್ತಿದ್ದಾರೆ. ಆರ್ಸಿಬಿಯ ಎರಡೂ ಪಂದ್ಯಗಳು ಬೆಂಗಳೂರಿನಲ್ಲಿ ನಡೆದಿದ್ದವು. ಹೀಗಾಗಿ, ಅನುಷ್ಕಾ ಶರ್ಮಾ ಅವರು ಬೆಂಗಳೂರಿಗೆ ಬಂದಿದ್ದರು. ಪ್ರತಿ ಪಂದ್ಯದಲ್ಲೂ ಅವರ ಪಕ್ಕ ಓರ್ವ ಸುಂದರಿ ಕುಳಿತಿರುತ್ತಾರೆ. ಅವರು ಯಾರು ಎನ್ನುವ ಹುಡುಕಾಟ ನಡೆದಿದೆ.
ಅನುಷ್ಕಾ ಶರ್ಮಾ ಪಕ್ಕ ಕುಳಿತಿರುವ ಹುಡುಗಿ ಯಾರು ಎಂಬುದನ್ನು ಪತ್ತೆ ಹಚ್ಚಲು ಅನೇಕರು ಎಐ ಟೂಲ್ಗಳನ್ನು ಬಳಕೆ ಮಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪ್ರಶ್ನೆಗಳನ್ನು ಕೇಳಿದ್ದರು. ಈ ವೇಳೆ ಅನೇಕರಿಗೆ ತಪ್ಪು ಮಾಹಿತಿ ಸಿಕ್ಕಿದೆ. ಅನುಷ್ಕಾ ಶರ್ಮಾ ಅವರ ಅತ್ತಿಗೆ ಭಾವನಾ ಕೊಹ್ಲಿ ಎಂದು ಕೆಲವರು ಹೇಳಿದರೆ, ಇನ್ನೂ ಕೆಲವರು ಹರ್ಭಜನ್ ಸಿಂಗ್ ಪತ್ನಿ ಗೀತಾ ಬಸ್ರಾ ಎಂದಿದ್ದಾರೆ. ಆದರೆ, ಇದು ಯಾವುದೂ ನಿಜವಲ್ಲ.
ಅನುಷ್ಕಾ ಶರ್ಮಾ ಪಕ್ಕದಲ್ಲಿ ಕೂರುವು ಮಹಿಳೆಯ ಹೆಸರು ಮಾಳವಿಕಾ ನಾಯಕ್. ಅವರು ಅನುಷ್ಕಾ ಶರ್ಮಾ ಅವರ ಬೆಸ್ಟ್ ಫ್ರೆಂಡ್. ಕೊಹ್ಲಿ ಅವರಿಗೂ ತುಂಬಾನೇ ಆಪ್ತರು. ಹೀಗಾಗಿ, ಅನುಷ್ಕಾ ಮ್ಯಾಚ್ ನೋಡಲು ತಮ್ಮ ಗೆಳತಿ ಜೊತೆ ಆಗಮಿಸುತ್ತಾರೆ. ಕೆಲವೊಮ್ಮೆ ಇಬ್ಬರೂ ಪತಿಯ ಜೊತೆ ಡಬಲ್ ಡೇಟ್ಗೆ ಹೋದ ಉದಾಹರಣೆಯೂ ಇದೆ.
ಆರ್ಸಿಬಿ ಹಾಗೂ ಚೆನ್ನೈ ಮ್ಯಾಚ್ನಲ್ಲಿ ಮಾಳವಿಕಾ ಹಾಗೂ ಅನುಷ್ಕಾ ಆರ್ಸಿಬಿಗೆ ಚಿಯರ್ ಮಾಡುತ್ತಿರುವ ಫೋಟೋ ಗಮನ ಸೆಳೆದಿದೆ. ಮಾಳವಿಕಾ ಅವರು ಚಿತ್ರರಂಗದ ಜೊತೆ ಯಾವುದೇ ನಂಟು ಹೊಂದಿಲ್ಲ. ಅವರ ಲಿಂಕ್ಡಿನ್ ಪ್ರಾಫೈಲ್ ಪ್ರಕಾರ ಅವರು ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಅಲ್ಲಿ ಎಂಬಿಎ ಪದವಿ ಪಡೆದಿದ್ದಾರೆ. ಅವರು ಈಗ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಬೆಂಗಳೂರು ಮೂಲದವರು. ಅವರ ಪತಿ ನಿಖಿಲ್ ಸೋಸಲೆ ಆರ್ಸಿಬಿ ತಂಡದ ಮಾಜಿ ಮಾಲಿಕತ್ವ ಕಂಪನಿ ಡಿಯಾಜಿಯೋದಲ್ಲಿ ಕೆಲಸ ಮಾಡುತ್ತಿದ್ದಾರೆ.
ವಾಷಿಂಗ್ಟನ್, ಏಪ್ರಿಲ್ 07: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಇರಾನ್ಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಹಾರ್ಮುಜ್ ಜಲಸಂಧಿಯನ್ನು ತೆರೆಯದಿದ್ದರೆ ಇರಾನ್ ರಾತ್ರೋರಾತ್ರಿ ನಾಶವಾಗಬಹುದು ಎಂದು ಟ್ರಂಪ್ ಬೆದರಿಸಿದ್ದಾರೆ. ಶ್ವೇತಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಟ್ರಂಪ್, ಇಡೀ ದೇಶ ರಾತ್ರೋ ರಾತ್ರಿ ನಾಶವಾಗಬಹುದು ಮತ್ತು ಆ ರಾತ್ರಿ ಮಂಗಳವಾರವೇ ಆಗಿರಬಹುದು ಎಂದಿದ್ದಾರೆ. ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಹೆಚ್ಚುತ್ತಿರುವ ಉದ್ವಿಗ್ನತೆ ಮಧ್ಯೆ ಈ ಹೇಳಿಕೆ ಬಂದಿದೆ. ಟ್ರಂಪ್ ಮಂಗಳವಾರ(ಏಪ್ರಿಲ್ 7) ರಾತ್ರಿ 8 ಗಂಟೆಯವರೆಗೆ ಇರಾನ್ಗೆ ಸಮಯ ನೀಡಿದ್ದಾರೆ.
ಮಾರ್ಚ್ ಅಂತ್ಯದಲ್ಲಿ ಇರಾನ್ಗೆ ಒಪ್ಪಂದಕ್ಕೆ ಬರಲು ಅಥವಾ ಹಾರ್ಮುಜ್ ಜಲಸಂಧಿಯನ್ನು ತೆರೆಯಲು 10 ದಿನಗಳ ಅಲ್ಟಿಮೇಟಂ ನೀಡಿದ್ದರು. ನಂತರ ಇರಾನ್ ಕೋರಿಕೆಯ ಮೇಲೆ ಈ ಅವಧಿಯನ್ನು ಇನ್ನೂ 10 ದಿನಗಳವರೆಗೆ ವಿಸ್ತರಿಸಿದ್ದರು.ರಾನ್ನಲ್ಲಿ ಅಪಘಾತಕ್ಕೀಡಾದ ತಮ್ಮ ಫೈಟರ್ ಜೆಟ್ ಎಫ್ -15 ರ ಪೈಲಟ್ನನ್ನು ರಕ್ಷಿಸಲು ಆರಂಭಿಸಲಾದ ಕಾರ್ಯಾಚರಣೆಯನ್ನು ಟ್ರಂಪ್ ಐತಿಹಾಸಿಕ ಎಂದು ಬಣ್ಣಿಸಿದರು.
ಕಳೆದ 37 ದಿನಗಳಲ್ಲಿ, ಅಮೆರಿಕದ ಸಶಸ್ತ್ರ ಪಡೆಗಳು ಇರಾನ್ ಮೇಲೆ 10,000 ಕ್ಕೂ ಹೆಚ್ಚು ಯುದ್ಧ ವಿಮಾನಗಳನ್ನು ಹಾರಿಸಿವೆ. ಇದು ಅಭೂತಪೂರ್ವವಾಗಿದೆ” ಎಂದು ಹೇಳಿದರು. ಕಳೆದ ವಾರ ಇರಾನ್ನಲ್ಲಿ ಹೊಡೆದುರುಳಿಸಿದ ಅಮೆರಿಕದ ಎಫ್ -15, ಈ ಸಂಪೂರ್ಣ ಕಾರ್ಯಾಚರಣೆಯ ಸಮಯದಲ್ಲಿ ಶತ್ರುಗಳಿಂದ ಹೊಡೆದುರುಳಿಸಿದ ಮೊದಲ ಮಾನವಸಹಿತ ವಿಮಾನವಾಗಿದೆ ಎಂದು ಅವರು ಹೇಳಿದ್ದಾರೆ.
ಟ್ರಂಪ್ ಅಮೆರಿಕದ ಮಿಲಿಟರಿ ಕಾರ್ಯಾಚರಣೆಯ ವಿವರಗಳನ್ನು ಹಂಚಿಕೊಂಡರು. ತನ್ನ ಪೈಲಟ್ಗಳಲ್ಲಿ ಒಬ್ಬರನ್ನು ರಕ್ಷಿಸಲು ಅಮೆರಿಕ ಸೇನೆಯು ಇದುವರೆಗಿನ ಅತಿದೊಡ್ಡ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎಂದು ಅವರು ವಿವರಿಸಿದರು. ಈ ಪೈಲಟ್ ಇರಾನ್ನೊಳಗೆ, ಶತ್ರು ಪ್ರದೇಶದಲ್ಲಿ ಅಪಘಾತಕ್ಕೀಡಾಗಿದ್ದರು. ಅಲ್ಲಿನ ಪರಿಸ್ಥಿತಿಗಳು ಅತ್ಯಂತ ಅಪಾಯಕಾರಿಯಾಗಿದ್ದವು. ಈ ಧೈರ್ಯಶಾಲಿ ಪೈಲಟ್ ಅನ್ನು ರಕ್ಷಿಸಲು ಅಮೆರಿಕ 200 ಅಮೆರಿಕದ ಸೈನಿಕರನ್ನು ನಿಯೋಜಿಸಿತು. 21 ಅಮೆರಿಕದ ವಿಮಾನಗಳು ಇಡೀ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದವು.
ಹಾರ್ಮುಜ್ ಜಲಸಂಧಿಯು ವಿಶ್ವದ ತೈಲ ರಫ್ತಿಗೆ ಪ್ರಮುಖ ಮಾರ್ಗವಾಗಿದ್ದು, ಇದರ ಮುಚ್ಚುವಿಕೆಯು ಜಾಗತಿಕ ತೈಲ ಬೆಲೆಗಳು ಗಗನಕ್ಕೇರಲು ಕಾರಣವಾಗಿದೆ. ಇರಾನ್ ಮೇಲೆ ಒತ್ತಡ ಹೆಚ್ಚಿಸಲು, ಡೊನಾಲ್ಡ್ ಟ್ರಂಪ್ ಜಲಸಂಧಿಯನ್ನು ತೆರೆಯದಿದ್ದರೆ, ಇರಾನ್ನ ಎಲ್ಲಾ ಇಂಧನ ಸೌಲಭ್ಯಗಳು ಮತ್ತು ಸೇತುವೆಗಳು ನಾಶವಾಗುತ್ತವೆ.
ಮಾತುಕತೆ ಚೆನ್ನಾಗಿ ನಡೆಯುತ್ತಿದೆ, ಟ್ರಂಪ್ ಅವರ ಆಕ್ರಮಣಕಾರಿ ತಂತ್ರಗಳು ಈ ಪ್ರದೇಶದಲ್ಲಿ ಸ್ಥಿರತೆಯನ್ನು ಪುನಃಸ್ಥಾಪಿಸಲು ಹಾಗೂ ಸುಗಮ ತೈಲ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಇರಾನ್ ಮೇಲೆ ಒತ್ತಡ ಹೇರುವ ಗುರಿಯನ್ನು ಹೊಂದಿದೆ.
ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮನೆಯಲ್ಲಿ ಕಸ ಯಾವ ದಿಕ್ಕಿನಿಂದ ಗುಡಿಸಲು ಶುರು ಮಾಡಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಕಸವನ್ನು ಗುಡಿಸುವ ದಿಕ್ಕು ಮುಖ್ಯವಾಗುತ್ತದೆ. ಮನೆಯಲ್ಲಿ ಸುಖ, ಶಾಂತಿ, ನೆಮ್ಮದಿ ಮತ್ತು ಧನಯೋಗ ನೆಲಸಬೇಕಾದರೆ, ಈಶಾನ್ಯ ದಿಕ್ಕಿನಿಂದ ಕಸ ಗುಡಿಸಲು ಪ್ರಾರಂಭಿಸಬೇಕು. ನಂತರ ಆಗ್ನೇಯದ ಕಡೆಗೆ ಸಾಗಿ, ವಾಯುವ್ಯ ದಿಕ್ಕಿನ ಮೂಲಕ ನೈರುತ್ಯ ದಿಕ್ಕಿನಲ್ಲಿ ಕಸ ಗುಡಿಸುವುದನ್ನು ಪೂರ್ಣಗೊಳಿಸಬೇಕು. ಈ ವಿಧಾನವು ಮನೆಗೆ ಅದೃಷ್ಟ ಮತ್ತು ಸಮೃದ್ಧಿಯನ್ನು ತರುತ್ತದೆ ಎಂದು ನಂಬಲಾಗಿದೆ. ಸೂರ್ಯೋದಯಕ್ಕೆ ಮುಂಚೆ ಕಸ ಗುಡಿಸುವುದು ಉತ್ತಮ. ಸೂರ್ಯಾಸ್ತದ ನಂತರ ಅಥವಾ ಮುರಿದ ಪೊರಕೆಯಿಂದ ಗುಡಿಸುವುದು ಅಶುಭಕರ. ಪೊರಕೆಯನ್ನು ಅಡ್ಡಲಾಗಿ, ಯಾರಿಗೂ ಕಾಣಿಸದ ಜಾಗದಲ್ಲಿ ಇಡುವುದು ಒಳ್ಳೆಯದು ಎಂದು ಗುರೂಜಿ ಹೇಳಿದ್ದಾರೆ.
ಬೆಂಗಳೂರು, ಏಪ್ರಿಲ್ 7: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ (2nd Puc Result) ಇಂದು (ಏಪ್ರಿಲ್ 7) ಪ್ರಕಟವಾಗಲಿದೆ ಎಂದು ಕಾತರದಿಂದ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ನಿರಾಸೆಯಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಫಲಿತಾಂಶ ಪ್ರಕಟಿಸಲು ಸಿದ್ಧತೆ ಮಾಡಿಕೊಂಡಿದ್ದರೂ, ತಾಂತ್ರಿಕ ಕಾರಣಗಳಿಂದಾಗಿ ಪ್ರಕಟಣೆಯನ್ನು ಮುಂದೂಡಲಾಗಿದೆ. ಆದರೆ, ಫಲಿತಾಂಶ ಪ್ರಕಟಿಸುವುದನ್ನು ಮುಂದೂಡಿಕೆ ಮಾಡಲು ಅಸಲಿ ಕಾರಣ ಏನೆಂಬುದು ಈಗ ಬಹಿರಂಗವಾಗಿದೆ.
ಚುನಾವಣಾ ನೀತಿ ಸಂಹಿತೆ ಅಡ್ಡಿ
ರಾಜ್ಯದಲ್ಲಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಡೆಯುತ್ತಿದ್ದು, ಏಪ್ರಿಲ್ 9ರಂದು ಮತದಾನ ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಭಾಗಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಸಾಮಾನ್ಯವಾಗಿ ಫಲಿತಾಂಶವನ್ನು ಶಿಕ್ಷಣ ಸಚಿವರ ಉಪಸ್ಥಿತಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರಕಟಿಸಲಾಗುತ್ತದೆ. ಆದರೆ, ನೀತಿ ಸಂಹಿತೆ ಇರುವುದರಿಂದ ಸಚಿವರು ಅಧಿಕೃತವಾಗಿ ಫಲಿತಾಂಶ ಪ್ರಕಟಿಸಲು ಚುನಾವಣಾ ಆಯೋಗದಿಂದ ಅನುಮತಿ ಪಡೆಯಬೇಕಾಗುತ್ತದೆ.
ಚುನಾವಣಾ ಆಯೋಗದ ಅನುಮತಿಗೆ ಕಾಯುತ್ತಿರುವ ಮಂಡಳಿ
ಫಲಿತಾಂಶ ಪ್ರಕಟಿಸಲು ಅನುಮತಿ ಕೋರಿ ಕೆಎಸ್ಇಎಬಿ ಈಗಾಗಲೇ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ. ಆಯೋಗವು ಅನುಮತಿ ನೀಡಿದ ತಕ್ಷಣವೇ ಫಲಿತಾಂಶದ ದಿನಾಂಕವನ್ನು ಅಧಿಕೃತವಾಗಿ ಘೋಷಿಸಲು ಮಂಡಳಿ ಸರ್ವ ಸಿದ್ಧತೆ ಮಾಡಿಕೊಂಡಿದೆ. 2018 ಮತ್ತು 2023ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲೂ ನೀತಿ ಸಂಹಿತೆ ಜಾರಿಯಲ್ಲಿದ್ದರೂ, ಅಧಿಕಾರಿಗಳ ಮೂಲಕ ಫಲಿತಾಂಶ ಪ್ರಕಟಿಸಲಾಗಿತ್ತು. ಆದರೆ ಈ ಬಾರಿ ಆಯೋಗದ ಒಪ್ಪಿಗೆ ಸಿಗದ ಕಾರಣ ಅನಿವಾರ್ಯವಾಗಿ ವಿಳಂಬವಾಗಿದೆ.
ಸೆಕೆಂಡ್ ಪಿಯುಸಿ ಫಲಿತಾಂಶ ಆನ್ಲೈನ್ನಲ್ಲಿ ನೋಡುವುದು ಹೇಗೆ?
ಸೆಕೆಂಟ್ ಪಿಯುಸಿ ಫಲಿತಾಂಶ ಪ್ರಕಟವಾದ ನಂತರ ಆನ್ಲೈನ್ನಲ್ಲಿ ನೋಡುವುದು ಹೇಗೆಂಬ ಮಾಹಿತಿ ಇಲ್ಲಿದೆ.
ಅಧಿಕೃತ ವೆಬ್ಸೈಟ್ karresults.nic.in ಗೆ ಭೇಟಿ ನೀಡಿ.
ಮುಖಪುಟದಲ್ಲಿರುವ ‘Karnataka 2nd PUC Result 2026’ ಲಿಂಕ್ ಮೇಲೆ ಕ್ಲಿಕ್ ಮಾಡಿ.
ನಿಮ್ಮ ರಿಜಿಸ್ಟ್ರೇಶನ್ ನಂಬರ್ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.
‘Submit’ ಬಟನ್ ಒತ್ತಿದ ತಕ್ಷಣ ನಿಮ್ಮ ಅಂಕಪಟ್ಟಿ ಪರದೆಯ ಮೇಲೆ ಕಾಣಿಸುತ್ತದೆ.
ಭವಿಷ್ಯದ ಉಲ್ಲೇಖಕ್ಕಾಗಿ ಇದರ ಪ್ರಿಂಟ್ಔಟ್ ತೆಗೆದುಕೊಳ್ಳಿ.
ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ನಡೆದಿದ್ದ ಪರೀಕ್ಷೆಗೆ ರಾಜ್ಯಾದ್ಯಂತ ಒಟ್ಟು 7,10,363 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇಲಾಖೆಯು ನಿಗದಿತ ಗುರಿಯಂತೆ ಮೌಲ್ಯಮಾಪನ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಮುಗಿಸಿದೆ. ಆಯೋಗದಿಂದ ಒಪ್ಪಿಗೆ ಸಿಕ್ಕ ಕೂಡಲೇ ಫಲಿತಾಂಶ ಪ್ರಕಟ ಮಾಡಲಿದೆ.
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 7, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣ ಪಕ್ಷ, ಷಷ್ಠೀ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ.
ಬೆಂಗಳೂರು, ಏಪ್ರಿಲ್ 7: ‘ನಿಮಗೆ ತಾಳ್ಮೆ ಇಲ್ಲದಿದ್ದರೆ ಇಲ್ಲಿ ಏನೂ ಮಾಡಲು ಸಾಧ್ಯವಿಲ್ಲ. ಬೆಂಗಳೂರಿನ (Bangalore)ಟ್ರಾಫಿಕ್ ನಿಮಗೆ ತಾಳ್ಮೆಯನ್ನು ಕಲಿಸುತ್ತದೆ. ರೋಡ್ ರೇಜ್ ಅಥವಾ ರಸ್ತೆಯ ಮೇಲಿನ ಇಂತಹ ಉದ್ಧಟತನದ ವರ್ತನೆಗಳನ್ನು ಎಂದಿಗೂ ಕ್ಷಮಿಸಲು ಸಾಧ್ಯವಿಲ್ಲ’ ಎಂದು ಕರ್ನಾಟಕ ಹೈಕೋರ್ಟ್ (Karnataka High Court) ಗಂಭೀರವಾಗಿ ಟೆಕ್ಕಿಯೊಬ್ಬರಿಗೆ ಎಚ್ಚರಿಕೆ ನೀಡಿದೆ. ತನ್ನ ವಿರುದ್ಧ ದಾಖಲಾಗಿದ್ದ ರೋಡ್ ರೇಜ್ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸಾಫ್ಟ್ವೇರ್ ಇಂಜಿನಿಯರ್ ಒಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು ಈ ಮೌಖಿಕ ಎಚ್ಚರಿಕೆ ನೀಡಿದೆ.
ಘಟನೆಯ ಹಿನ್ನೆಲೆ
2025ರ ಅಕ್ಟೋಬರ್ 26ರಂದು ಎಂಎಸ್ ರಾಮಯ್ಯ ಆಸ್ಪತ್ರೆಯ ಸಿಗ್ನಲ್ ಬಳಿ ಘಟನೆ ನಡೆದಿತ್ತು. ಅರ್ಜಿದಾರ ಸಾಫ್ಟ್ವೇರ್ ಇಂಜಿನಿಯರ್ ಕಾರು ಚಲಾಯಿಸುತ್ತಿದ್ದು, ಸ್ಕೂಟರ್ಗೆ ಗುದ್ದಿದ್ದರು ಎಂಬ ಆರೋಪ ಇದೆ. ಇದರಿಂದ ಸ್ಕೂಟರ್ನಲ್ಲಿದ್ದ ದಂಪತಿ ಮತ್ತು ಮಗು ಕೆಳಗೆ ಬಿದ್ದಿದ್ದರು. ಇದು ಉದ್ದೇಶಪೂರ್ವಕವಾಗಿ ನಡೆದ ‘ರೋಡ್ ರೇಜ್’ ಘಟನೆ ಎಂದು ದೂರು ದಾಖಲಾಗಿತ್ತು. ಮೊದಲು ಸಂಚಾರಿ ಪೊಲೀಸರ ಬಳಿ ಇದ್ದ ಪ್ರಕರಣವನ್ನು ಸದಾಶಿವನಗರ ಪೊಲೀಸರಿಗೆ ವರ್ಗಾಯಿಸಿದ ನಂತರ, ಬಿಎನ್ಎಸ್ ಸೆಕ್ಷನ್ 109 (1) ಅಡಿಯಲ್ಲಿ ಕೊಲೆ ಯತ್ನದ ಪ್ರಕರಣವನ್ನೂ ಸೇರಿಸಲಾಗಿತ್ತು.
ಹೈಕೋರ್ಟ್ ಹೇಳಿದ್ದೇನು?
ಅರ್ಜಿದಾರರ ಪರ ವಕೀಲರು, ‘ನನ್ನ ಕಕ್ಷಿದಾರರಿಗೆ ಯಾವುದೇ ಕೆಟ್ಟ ಉದ್ದೇಶವಿರಲಿಲ್ಲ, ಸುಖಾಸುಮ್ಮನೆ ಕೊಲೆ ಯತ್ನದ ಕೇಸ್ ಹಾಕಲಾಗಿದೆ’ ಎಂದು ವಾದಿಸಿದರು. ಆದರೆ ಇದನ್ನು ಒಪ್ಪದ ನ್ಯಾಯಮೂರ್ತಿಗಳು, ‘ರಸ್ತೆಯ ಮೇಲೆ ನಡೆಯುವ ಜಗಳ ಅಥವಾ ಆವೇಶವೇ ಇಂತಹ ಗಂಭೀರ ಸೆಕ್ಷನ್ಗಳನ್ನು ಹಾಕಲು ಕಾರಣವಾಗಬಹುದು. ಸದ್ಯ ತನಿಖೆ ನಡೆಯುತ್ತಿರುವುದರಿಂದ ನಾವು ಮಧ್ಯಪ್ರವೇಶ ಮಾಡುವುದಿಲ್ಲ’ ಎಂದು ತಿಳಿಸಿದ್ದಾರೆ.
ಅಲ್ಲದೆ, ಚಾರ್ಜ್ ಶೀಟ್ ಸಲ್ಲಿಸಿದ ನಂತರ ಬೇಕಿದ್ದರೆ ಮತ್ತೆ ನ್ಯಾಯಾಲಯದ ಮೊರೆ ಹೋಗಬಹುದು ಎಂದು ಸೂಚಿಸಿದರು. ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಸಾಫ್ಟ್ವೇರ್ ಇಂಜಿನಿಯರ್ ತನ್ನ ಅರ್ಜಿಯನ್ನು ಹಿಂಪಡೆದಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ರೇವತೀ, ವಾರ : ಮಂಗಳ, ಪಕ್ಷ : ಕೃಷ್ಣ, ತಿಥಿ : ಷಷ್ಠೀ, ನಿತ್ಯನಕ್ಷತ್ರ : ಜ್ಯೇಷ್ಠಾ, ಯೋಗ : ಸಿದ್ಧಿ, ಕರಣ : ಭದ್ರ, ಸೂರ್ಯೋದಯ – 06 – 17 am, ಸೂರ್ಯಾಸ್ತ – 06 – 35 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 15:31 – 17:04, ಯಮಗಂಡ ಕಾಲ 09:22 – 10:54, ಗುಳಿಕ ಕಾಲ 12:27 – 13:59
ಮೇಷ ರಾಶಿ: ನಿಮ್ಮ ಮೇಲಿನ ಪ್ರೀತಿಯಿಂದ ಯಾರಾದರೂ ಅಗತ್ಯ ಸಹಕಾರವನ್ನು ಕೊಡುವರು. ವ್ಯಾಪಾರವನ್ನು ವಿಸ್ತರಿಸಲು ಕುಟುಂಬದ ಸದಸ್ಯರ ಸಹಾಯ ತೆಗೆದುಕೊಳ್ಳಬೇಕಾಗಬಹುದು. ನಿಮ್ಮ ವೃತ್ತಿಗೆ ಸಂಬಂಧಿಸಿದ ಬೇರೆ ಬೇರೆ ಮಜಲುಗಳನ್ನು ಅರಿಯುವಿರಿ. ಬುದ್ಧಿವಂತಿಕೆಯಿಂದ ಹೂಡಿಕೆ ಮಾಡಿ. ಮುಖ್ಯ ಕೆಲಸವನ್ನು ನೀವು ಮರೆಯುವಿರಿ. ಅಪರಿಚಿತರಿಂದ ನಿಮಗೆ ಕೆಲಸ ಸಿಗಬಹುದು. ಇಂದು ನೀವು ಮಾನಸಿಕವಾಗಿ ತುಂಬಾ ಆಯಾಸವನ್ನು ಅನುಭವಿಸಬಹುದು.
ವೃಷಭ ರಾಶಿ: ಮನಸ್ಸಿನಲ್ಲಿ ನೀವು ತಾಜಾತನವನ್ನು ಅನುಭವಿಸುವಿರಿ. ನೀವು ಕೆಲಸದಲ್ಲಿ ಸಹೋದ್ಯೋಗಿಗಳಿಂದ ಸಹಾಯ ಪಡೆಯುವುದನ್ನು ಮುಂದುವರಿಸುತ್ತೀರಿ. ನಿಮಗೆ ಬೆಂಬಲ ಸಿಗುತ್ತದೆ. ವೈರಾಗ್ಯಭಾವವನ್ನು ಉಂಟಾಗಲಿದೆ. ನೀವು ಕೆಲವು ನಿರಾಶಾದಾಯಕ ಮಾಹಿತಿಯನ್ನು ಇಂದು ಪಡೆಯುವಿರಿ. ಪರಿಚಯವಿಲ್ಲದ ಜನರಿಂದ ನೀವು ಅಂತರವನ್ನು ಕಾಯ್ದುಕೊಳ್ಳುವಿರಿ. ವೃತ್ತಿಗೆ ಸಂಬಂಧಿಸಿದ ಕೆಲವು ಒಳ್ಳೆಯ ಸುದ್ದಿಗಳ ನಿರೀಕ್ಷೆಯಲ್ಲಿ ಇರುವಿರಿ. ಶತ್ರುಗಳು ಪ್ರಬಲರಾಗದಂತೆ ನೋಡಿಕೊಳ್ಳಿ.
ಮಿಥುನ ರಾಶಿ: ನೀವು ಶೈಕ್ಷಣಿಕ ಕೆಲಸಕ್ಕಾಗಿ ಬೇರೆ ಸ್ಥಳಕ್ಕೆ ಹೋಗಬಹುದು. ನಿಮಗೆ ಸ್ನೇಹಿತರಿಂದ ಬೆಂಬಲ ಸಿಗುತ್ತದೆ. ನಿಮಗೆ ಆರ್ಥಿಕ ಲಾಭಗಳು ಸಿಗುವ ಸಾಧ್ಯತೆ ಇದೆ. ವ್ಯವಹಾರದಲ್ಲಿ ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ. ವ್ಯಾಪಾರದಲ್ಲಿ ಲಾಭವಾಗಲಿದೆ. ಪುತ್ರನಿಂದ ಧನಸಹಾಯ ಸಿಗಲಿದೆ. ಭೂಮಿಯ ವ್ಯವಹಾರದಲ್ಲಿ ಬೇಸರ ಬರಬಹುದು. ನಿಮ್ಮ ಬಗ್ಗೆ ಇರುವ ಭಾವನೆ ಬದಲಾಗುವುದು. ನೀವು ಆಡಂಬರದಿಂದ ದೂರವಿರಿ. ಆರ್ಥಿಕ ಪರಿಸ್ಥಿತಿಗೆ ಸಂಬಂಧಿಸಿದಂತೆ ಬಂಧುಗಳ ಜೊತೆ ಚರ್ಚಿಸುವಿರಿ.
ಕರ್ಕಾಟಕ ರಾಶಿ: ಇಂದು ನಿಮ್ಮ ಖರ್ಚಿನ ಪ್ರಮಾಣ ಹೆಚ್ಚಾಗುತ್ತದೆ. ಮಾತನಾಡುವಾಗ ನೀವು ಜಾಗರೂಕರಾಗಿರಬೇಕು. ಆದರೆ ಇಂದು ಲಾಭದ ಅವಕಾಶಗಳು ಇರುತ್ತವೆ, ಆದರೆ ಸುತ್ತಲೂ ಓಡಾಟ ಕೂಡ ಇರುತ್ತದೆ. ಕುಟುಂಬದ ಹಿರಿಯರ ಆರೋಗ್ಯದಲ್ಲಿ ತೊಂದರೆ ಕಾಣಿಸಿಕೊಂಡೀತು. ನಿಮ್ಮ ಇಂದಿನ ದಿನಚರಿಯಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. ನೀವು ದೊಡ್ಡ ಅಪಾಯವನ್ನು ತೆಗೆದುಕೊಳ್ಳುವ ಶಕ್ತಿಯನ್ನು ಇಟ್ಟುಕೊಂಡಿಲ್ಲ. ನಿಮ್ಮ ವೃತ್ತಿಜೀವನಕ್ಕೆ ಮುಖ್ಯವಾದ ಜನರು ಇಂದು ನಿಮಗೆ ಸ್ವಲ್ಪ ತೊಂದರೆ ನೀಡಬಹುದು.
ಸಿಂಹ ರಾಶಿ: ನಿಮ್ಮ ಸಹೋದರ ಸಹೋದರಿಯರಿಂದ ನೀವು ಆರ್ಥಿಕ ಸಹಾಯವನ್ನು ಪಡೆಯಬಹುದು. ಅವರೆದುರು ನಿಮ್ಮ ಪ್ರತಿಭೆಯ ಅನಾವರಣವಿಂದು. ಹಳೆಯ ನೋವುಗಳು ಇಂದು ಹೆಚ್ವಾಗಬಹುದು. ಸಂಗಾತಿಯ ಜೊತೆ ಮನಿಸು ಕಾಣಿಸಿಕೊಳ್ಳುವುದು. ಹಣಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಗೊಂದಲ ಸೃಷ್ಟಿಯಾಗಬಹುದು. ನೀವು ಇಂದು ಕಾನೂನಿಗೆ ಸಂಬಂಧಿಸಿದ ವಿಷಯಗಳಲ್ಲಿ ಸಿಕ್ಕಿಹಾಕಿಕೊಳ್ಳಬಹುದು. ಇಂದು ಹಠಾತ್ ಘಟನೆಯ ಬಗ್ಗೆ ಯಾವುದೇ ತಕ್ಷಣದ ನಿರ್ಧಾರ ತೆಗೆದುಕೊಳ್ಳುವುದನ್ನು ಬೇಡ.
ಕನ್ಯಾ ರಾಶಿ: ನಿಮ್ಮ ವೈವಾಹಿಕ ಜೀವನವು ಸಂತೋಷದಿಂದ ಕೂಡಿರುತ್ತದೆ. ಮಾತನಾಡದೇ ಸುಮ್ಮನಿರುವುದು ಒಳ್ಳೆಯದು. ಅದು ಇಂದು ಪೂರ್ಣಗೊಳ್ಳುವುದಕ್ಕೆ ಒತ್ತಡವು ಅನಿವಾರ್ಯವಾದೀತು. ಸಂಪನ್ಮೂಲಗಳನ್ನು ಕಾಳಜಿಯಿಂದ ರಕ್ಷಿಸಿಕೊಳ್ಳಿ. ಆದಾಯದ ಸ್ವಲ್ಪ ಭಾಗವನ್ನು ಉಳಿಸಲು ಬೇಕಾದ ಚಿಂತನೆ ಇರಲಿದೆ. ಕಠಿಣ ಪರಿಶ್ರಮಕ್ಕೆ ಸರಿಯಾಗಿ ಯಶಸ್ಸು ಸಿಗುತ್ತದೆ. ನಿಮ್ಮ ಆಸೆಯೂ ಈಡೇರುತ್ತದೆ. ನೀವು ಕೈಗೊಳ್ಳುವ ಯಾವುದೇ ಕೆಲಸದಲ್ಲಿ ನೀವು ಅಗತ್ಯ ಸಹಾಯವನ್ನು ಪಡೆಯುತ್ತೀರಿ.
ತುಲಾ ರಾಶಿ: ಧಾರ್ಮಿಕಾರ್ಯಗಳಲ್ಲಿ ಅನಾಸಕ್ತಿಯೆದ್ದು ತೋರುವುದು. ನೀವಾಡುವ ಮಾತುಗಳನ್ನು ನಿಮ್ಮ ಸಹಾಯಕ್ಕೆ ಇದ್ದವರು ಕೇಳಬಹುದು. ಯಾರ ಮೇಲೂ ಅಸೂಯೆಪಡದೇ ನಿರ್ಮಲಮನಸ್ಸಿನಿಂದ ಇರುವಿರಿ. ಇಂದು ನಿಮ್ಮವರೆ ಮೇಲೆ ಅತಿಯಾದ ಅಕ್ಕರೆ ಇರುವುದು. ಯಾವುದುಕ್ಕುಯ ಅತಿಯಾದ ಕ್ರಮವನ್ನು ತೆಗೆದುಕೊಳ್ಳುವುದು ಬೇಡ. ನಿಮ್ಮ ವ್ಯವಹಾರದ ದೀರ್ಘಾವಧಿಯ ಯೋಜನೆಗಳಿಗೆ ನೀವು ಸಂಪೂರ್ಣ ಗಮನ ಹರಿಸಬೇಕು. ನಿಮ್ಮ ತಾಯಿವು ದೈಹಿಕ ನೋವನ್ನು ಅನುಭವಿಸಬಹುದು. ನಿಮ್ಮ ಮಾನಸಿಕ ಸಮತೋಲನವನ್ನು ಕಾಯ್ದುಕೊಳ್ಳಬೇಕಾಗುತ್ತದೆ.
ವೃಶ್ಚಿಕ ರಾಶಿ: ಉದ್ಯೋಗದಲ್ಲಿ ಬಡ್ತಿಯ ಹಾಗೂ ಬದಲಾವಣೆ ಸಿಗುವ ಸಾಧ್ಯತೆ ಇದೆ. ನಿಮ್ಮ ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಶೈಕ್ಷಣಿಕ ಕೆಲಸದಲ್ಲಿ ಯಶಸ್ಸು ಸಿಗುತ್ತದೆ. ಧರ್ಮಕರ್ಮಗಳಲ್ಲಿ ಭಾಗವಹಿಸಿ. ಮಾನಸಿಕ ನೆಮ್ಮದಿಯು ನಿಮ್ಮದಾದೀತು. ನೀವು ಹಿಂಜರಿಕೆಯಿಲ್ಲದೆ ಅಂದುಕೊಂಡ ಕಾರ್ಯದಲ್ಲಿ ಮುಂದುವರಿಯುವಿರಿ. ಇಂದು ನೀವು ಜನರನ್ನು ಆಕರ್ಷಿಸುವಿರಿ. ಜನರು ನಿಮ್ಮ ಆಲೋಚನಾ ವಿಧಾನವನ್ನು ಇಷ್ಟಪಡುತ್ತಾರೆ. ನಿಮ್ಮ ಸಲಹೆಯಿಂದ ಜನರು ಪ್ರಯೋಜನ ಪಡೆಯುತ್ತಾರೆ. ಇಂದು ಕೆಲವು ಒಳ್ಳೆಯ ಸುದ್ದಿಗಾಗಿ ಕಾಯುತ್ತಿದ್ದಾರೆ.
ಧನು ರಾಶಿ: ನಿಮ್ಮ ಕೆಲಸದಲ್ಲಿ ಅಧಿಕಾರಿಗಳಿಂದ ಬೆಂಬಲ ಸಿಗುತ್ತದೆ, ಆದರೆ ಕೆಲಸದ ಸ್ಥಳದಲ್ಲಿ ತೊಂದರೆಗಳು ಉಂಟಾಗಬಹುದು. ಮಾತುಗಳನ್ನು ಎಚ್ಚರದಿಂದ ಆಡಿ. ಮಾತು ಕಂಟಕಗಳನ್ನು ತಂದೀತು. ನಿಮ್ಮ ಜೀವನಶೈಲಿಯನ್ನು ಆಕರ್ಷಕವಾಗಿಸಲು ನೀವು ಹಣವನ್ನು ಖರ್ಚು ಮಾಡಬೇಕಾಗುತ್ತದೆ. ನಿಮ್ಮ ಪೋಷಕರ ಜೊತೆ ಕೆಲವು ವಿಷಯದ ಬಗ್ಗೆ ನೀವು ಕಲಹದ ಸಾಧ್ಯತೆ ಇದೆ. ಕೆಲಸದ ಸ್ಥಳದಲ್ಲಿ ವಾತಾವರಣವು ನಿಮಗೆ ಅನುಕೂಲಕರವಾಗಿಲ್ಲದಿದ್ದರೆ, ನಿಮ್ಮ ಮನಃಸ್ಥಿತಿಯು ಹದಗೆಡುತ್ತದೆ. ದೈನಂದಿನ ಕೆಲಸದಲ್ಲಿ ಸಮಸ್ಯೆಗಳು ಉಳಿಯಬಹುದು.
ಮಕರ ರಾಶಿ: ಪ್ರೀತಿಪಾತ್ರರನ್ನು ಭೇಟಿ ಆಗುವುದರಿಂದ ನೀವು ಸಂತೋಷವನ್ನು ಪಡೆಯಲು ಸಾಧ್ಯವಾಗುತ್ತದೆ. ನಿಮ್ಮ ಕುಟುಂಬದಲ್ಲಿಯೂ ಸಂತೋಷದ ವಾತಾವರಣ ಇರುತ್ತದೆ. ಆರಂಭದಲ್ಲಿ ಕೆಲವು ತೊಂದರೆಗಳು ಎದುರಾಗಬಹುದು. ಆರೋಗ್ಯವನ್ನು ಕಾಪಾಡಿಕೊಳ್ಳುವತ್ತ ಪ್ರಯತ್ನಿಸಿ. ನೀವು ಎಲ್ಲರ ಜೊತೆ ಸಾಮರಸ್ಯವನ್ನು ಕಾಪಾಡಿಕೊಳ್ಳಬೇಕು. ನೀವು ಇಂದು ಅನಿರೀಕ್ಷಿತವಾಗಿ ಆರ್ಥಿಕ ಲಾಭವನ್ನು ಪಡೆಯಬಹುದು. ನೀವು ಕೆಲವು ಉತ್ತಮ ಅವಕಾಶಗಳನ್ನು ಪಡೆಯಬಹುದು.
ಕುಂಭ ರಾಶಿ: ಕಲೆ ಮತ್ತು ಸಾಹಿತ್ಯದಲ್ಲಿ ನಿಮ್ಮ ಕೌಶಲ್ಯಗಳನ್ನು ಪ್ರದರ್ಶಿಸಲು ನಿಮಗೆ ಸಾಧ್ಯವಾಗುತ್ತದೆ. ತಾಯಿ ಮತ್ತು ಕುಟುಂಬದ ಎಲ್ಲ ಸದಸ್ಯರೊಂದಿಗೆ ಆತ್ಮೀಯತೆ ಹೆಚ್ಚಾಗುತ್ತದೆ. ಅಲ್ಪಾವಧಿಯ ವಲಸೆಯ ಸಾಧ್ಯತೆಯಿದೆ. ಚಾಣಾಕ್ಷ ಬುದ್ಧಿಯಿಂದ ಅದನ್ನು ಪರಿಹರಿಸಿಕೊಳ್ಳುವಿರಿ. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ನೀವು ತುಂಬಾ ಕಷ್ಟಪಟ್ಟು ಕೆಲಸ ಮಾಡಬೇಕಾಗುತ್ತದೆ. ನೀವು ಮಕ್ಕಳಿಂದ ಬೆಂಬಲವನ್ನು ಪಡೆಯುತ್ತೀರಿ. ನೀವು ಕಠಿಣ ಪರಿಶ್ರಮದಿಂದ ನಿಮ್ಮ ಯೋಜನೆಯನ್ನು ಪೂರ್ಣಗೊಳಿಸುತ್ತೀರಿ.
ಮೀನ ರಾಶಿ: ಶೈಕ್ಷಣಿಕ ಕೆಲಸವು ಆಹ್ಲಾದಕರ ಫಲಿತಾಂಶಗಳನ್ನು ನೀಡುತ್ತದೆ. ಆದರೆ ನಿಮ್ಮ ತಾಯಿಯ ಅನಾರೋಗ್ಯದ ಕಾರಣ ನೀವು ಚಿಂತೆಯಲ್ಲಿರುತ್ತೀರಿ. ನಿಮ್ಮ ಗೌರವಕ್ಕೆ ಧಕ್ಕೆ ಉಂಟಾಗುವುದರಿಂದ ನೀವು ದುಃಖಿತರಾಗುವಿರಿ. ಆಪ್ತರ ಭೇಟಿ ಹಾಗೂ ಮಾರ್ಗದರ್ಶನದ ಸುತ್ತಾಟದಲ್ಲಿ ಇಂದು ಮುಕ್ತಾಯಗೊಳ್ಳಲಿದೆ. ನಿಮ್ಮ ಕೆಲಸಕ್ಕಿಂತ ಇತರರ ಕೆಲಸಗಳ ಮೇಲೆ ಹೆಚ್ಚು ಗಮನವಿರುವುದು. ನಿಮ್ಮ ಮೇಲೆ ದುಷ್ಪರಿಣಾಮ ಬೀರಬಹುದು. ಉದ್ಯಮಿಗಳಿಗೆ ಸಮಯ ಉತ್ತಮವಾಗಿಲ್ಲ. ಯಾರಿಗೂ ಸಾಲ ನೀಡುವುದನ್ನು ತಪ್ಪಿಸಿ. ಹಳೆಯ ಸಾಲವು ನಿಮಗೆ ಒತ್ತಡವನ್ನು ಉಂಟುಮಾಡಬಹುದು.
ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ನಡೆಯಬೇಕಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವಿನ ಐಪಿಎಲ್ 2026 ರ 12ನೇ ಪಂದ್ಯ ಮಳೆಯಿಂದ ರದ್ದಾಗಿದೆ. ಹೀಗಾಗಿ ಉಭಯ ತಂಡಗಳಿಗೆ ತಲಾ ಒಂದೊಂದು ಅಂಕ ಸಿಕ್ಕಿದೆ. ಇದರಿಂದ ಕೆಕೆಆರ್ಗೆ ಲಾಭವಾದರೆ, ಪಂಜಾಬ್ ತಂಡ ಬೇಸರದಿಂದ ಮೈದಾನ ತೊರೆದಿದೆ. ಏಕೆಂದರೆ ಕೆಕೆಆರ್ ತಂಡ ಆಡಿದ ಮೊದಲ ಎರಡು ಪಂದ್ಯಗಳನ್ನು ಸೋತಿತ್ತು. ಇದರಿಂದ ತಂಡ ಯಾವುದೇ ಅಂಕಗಳನ್ನು ಹೊಂದಿರಲಿಲ್ಲ. ಆದರೆ ಈ ಪಂದ್ಯ ರದ್ದಾದ ಕಾರಣ ಕೆಕೆಆರ್ಗೆ 1 ಅಂಕ ಸಿಕ್ಕಿದೆ. ಇತ್ತ ಪಂಜಾಬ್ ಮೊದಲ ಎರಡು ಪಂದ್ಯಗಳನ್ನು ಗೆದ್ದು 4 ಅಂಕಗಳನ್ನು ಹೊಂದಿತ್ತು. ಇದೀಗ ಈ ಪಂದ್ಯವನ್ನು ಗೆದ್ದು 6 ಅಂಕಗಳನ್ನು ಪಡೆಯುವ ಅವಕಾಶ ಹೊಂದಿತ್ತು. ಆದರೆ ಅದಕ್ಕೆ ಮಳೆರಾಯ ಅವಕಾಶ ಮಾಡಿಕೊಡಲಿಲ್ಲ. ಆದಾಗ್ಯೂ ಪಂಜಾಬ್ 5 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.