ಜಾತಿ, ಧರ್ಮ ಸೇರಿ ಯಾವುದೇ ಪ್ರಭಾವ ನಡೆಯಲ್ಲ: ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​ – Kannada News

ಬೆಂಗಳೂರು, ಜೂನ್​ 04: ನೂತನ ಸಿಎಂ ಡಿ.ಕೆ. ಶಿವಕುಮಾರ್ (DK Shivakumar)​ ನಿನ್ನೆ ಆರು ಪ್ರಮುಖ ನಿರ್ಧಾರಗಳನ್ನು ಘೋಷಣೆ ಮಾಡಿದ್ದರು. ಆ ಬೆನ್ನಲ್ಲೇ ಇಂದು ಅಧಿಕಾರಿಗಳ ಸಭೆ ಮಾಡುವ ಮೂಲಕ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವುದೇ ಒತ್ತಡಕ್ಕೆ ಮಣಿಯದೆ ಜನರ ಕೆಲಸ ಮಾಡಬೇಕು. ಅಧಿಕಾರಿಗಳಿಂದ ಉತ್ತಮ ಕೆಲಸದ ನಿರೀಕ್ಷೆ ಹೊಂದಿದ್ದೇನೆ. ನಮ್ಮ ಸರ್ಕಾರದಲ್ಲಿ ಜಾತಿ, ಧರ್ಮ ಸೇರಿ ಯಾವುದೇ ಪ್ರಭಾವ ನಡೆಯಲ್ಲ. ಆತ್ಮಸಾಕ್ಷಿಗೆ ಅನುಗುಣವಾಗಿ, ಒತ್ತಡಕ್ಕೆ ಮಣಿಯದೆ ಕೆಲಸ ಮಾಡಿ. ನಮ್ಮ ಶಾಸಕರು, ಸಚಿವರು ಸೇರಿದಂತೆ ಯಾವುದೇ ಒತ್ತಡ ಬಂದರೂ ಅದಕ್ಕೆ ಮಣಿಯದೆ ಕೆಲಸ ಮಾಡುವಂತೆ ಸೂಚಿಸಲಾಗಿದೆ. ಜನರಿಗೆ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ಮಾಡಬೇಕು. ತಾಲೂಕು, ಗ್ರಾಮಗಳಿಗೆ ತೆರಳಿ ಅಧಿಕಾರಿಗಳು ಕೆಲಸ ಮಾಡಬೇಕು. ಎಲ್ಲಾ ಇಲಾಖೆಗಳ ಬಾಕಿ ಕೆಲಸದ ಪಟ್ಟಿ ನೀಡಬೇಕು. ಬಾಕಿ ಕೆಲಸದ ಪಟ್ಟಿಯನ್ನು 25 ದಿನದೊಳಗೆ ಪಟ್ಟಿ ಸಲ್ಲಿಸಬೇಕು ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

‘ಟಾಕ್ಸಿಕ್’ ರಿಶೂಟ್, ಮುಂದಿನ ವರ್ಷ ರಿಲೀಸ್ ಎಂದು ಹೇಳಿ ಉಲ್ಟಾ ಹೊಡೆದ ಬಾಕ್ಸ್ ಆಫೀಸ್ ಪಂಡಿತ – Kannada News

‘ಟಾಕ್ಸಿಕ್’ ಸಿನಿಮಾ (Toxic Movie) ತಂಡ ಒಂದು ಒಳ್ಳೆಯ ಉದ್ದೇಶ ಇಟ್ಟುಕೊಂಡು ಸಿನಿಮಾನ ಮುಂದಕ್ಕೆ ಹಾಕಿಕೊಂಡಿದೆ. ವಿಶ್ವ ಮಟ್ಟದಲ್ಲಿ ದೊಡ್ಡದಾಗಿ ಬಿಡುಗಡೆ ಮಾಡಬೇಕು ಎಂಬುದು ತಂಡದ ಪ್ಲ್ಯಾನ್. ಆದರೆ, ಇದನ್ನು ಕೆಲವರು ತಪ್ಪಾಗಿ ಬಿಂಬಿಸೋ ಕೆಲಸ ಮಾಡುತ್ತಿದ್ದಾರೆ. ಹೌದು, ‘ಟಾಕ್ಸಿಕ್’ ಸಿನಿಮಾ ರೀಶೂಟ್ ಮಾಡಲಾಗುತ್ತದೆ, ಸಿನಿಮಾ ರಿಲೀಸ್ 2027ಕ್ಕೆ ಹೋಗುತ್ತದೆ ಎಂದೆಲ್ಲ ಹೇಳಲಾಗುತ್ತಿದೆ. ಈ ಬಗ್ಗೆ ಟ್ವೀಟ್ ಮಾಡಿದವರೇ ಆ ಬಳಿಕ ಉಲ್ಟಾ ಹೊಡೆದಿದ್ದಾರೆ.

ಕಾಲಿವುಡ್ ಸಿನಿಮಾ ಬಗ್ಗೆ ಅಪ್​​ಡೇಟ್ ಕೊಡುವ ವಲೈ ಪೆಚು ಅವರು ‘ಟಾಕ್ಸಿಕ್’ ಮುಂದಕ್ಕೆ ಹೋಗಲಿದೆ ಎಂದು ಹೇಳಿದ್ದರಂತೆ. ಈ ವಿಷಯವನ್ನು ಆಧರಿಸಿ, ಕಾಲಿವುಡ್ ಬಾಕ್ಸ್ ಆಫೀಸ್ ಬಗ್ಗೆ ಮಾಹಿತಿ ನೀಡುವ ಕ್ರಿಸ್ಟೋಫರ್ ಕನಗರಾಜ್ ಅವರು ಟ್ವೀಟ್ ಮಾಡಿದ್ದರು.

‘ಟಾಕ್ಸಿಕ್ ಸಿನಿಮಾ ಬಗ್ಗೆ ಯಶ್​ ಅವರಿಗೆ ಖುಷಿ ಇಲ್ಲ. ಹೀಗಾಗಿ, 100 ದಿನಗಳ ರೀ ಶೂಟ್ ಮಾಡಲು ಅವರು ಪ್ಲ್ಯಾನ್ ಮಾಡಿದ್ದಾರೆ. 2027ರಲ್ಲಿ ಸಿನಿಮಾ ರಿಲೀಸ್ ಆಗಲಿದೆ. ವಿಪಿ ಹೇಳಿದ್ದು’ ಎಂದು ಕನಗರಾಜ್ ಟ್ವೀಟ್ ಮಾಡಿದ್ದರು. ವಿಪಿ ಎಂದರೆ ವಲೈ ಪೆಚು ಎಂದರ್ಥ.

ಆ ಬಳಿಕ ಕನಗರಾಜ್ ಅವರಿಂದ ಸ್ಪಷ್ಟನೆ ಸಿಕ್ಕಿದೆ. ವಲೈ ಪೆಚು ಹಬ್ಬಿಸಿರೋ ಸುದ್ದಿ ಸುಳ್ಳು ಎಂದು ನಿರ್ಮಾಣ ಸಂಸ್ಥೆ ಮಾಹಿತಿ ನೀಡಿದೆ ಎಂದು ಅವರು ಆ ಬಳಿಕ ಟ್ವೀಟ್ ಮಾಡಿದ್ದಾರೆ. ಈ ಮೂಲಕ ವದಂತಿಗೆ ತೆರೆ ಬಿದ್ದಿದೆ. ಇದೆಲ್ಲ ಜನಪ್ರಿಯತೆ ಪಡೆದುಕೊಳ್ಳಲು ಮಾಡುವ ತಂತ್ರ ಎಂದು ಅನೇಕರು ಹೇಳಿದ್ದಾರೆ.

ಇದನ್ನೂ ಓದಿ: ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್​​ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?

ತಮಿಳುನಾಡಿನಲ್ಲಿ ಯಾವುದೇ ದೊಡ್ಡ ಪ್ಯಾನ್ ಇಂಡಿಯಾ ಸಿನಿಮಾ ರಿಲೀಸ್ ಆಗಿಲ್ಲ. ಅವರ ಚಿತ್ರಗಳು ಸಾವಿರ ಕೋಟಿ ರೂಪಾಯಿ ಗಳಿಸಿಲ್ಲ. ಕನ್ನಡ ಚಿತ್ರವೊಂದು ಇಷ್ಟು ದೊಡ್ಡ ಮಟ್ಟಕ್ಕೆ ಹೋಗುವುದನ್ನು ನೋಡಿ ಕಾಲಿವುಡ್ ಮಂದಿ ಹೊಟ್ಟೆ ಉರಿದುಕೊಂಡಿದ್ದಾರೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಯಾರೂ ಮತದಾನದ ಹಕ್ಕು ಕಳೆದುಕೊಳ್ಳಬಾರದು: SIR ಹೆಲ್ಪ್ ಡೆಸ್ಕ್ ಸ್ಥಾಪಿಸಲು ಸಿಎಂ ಡಿಕೆಶಿ ಸೂಚನೆ – Kannada News

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್Image Credit source: tv9

ಬೆಂಗಳೂರು, ಜೂನ್ 4: ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ಎಸ್‌ಐಆರ್ (Special Electoral Roll Purification / SIR) ಪ್ರಕ್ರಿಯೆ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಈ ಪ್ರಕ್ರಿಯೆಯು ಸಾರ್ವಜನಿಕರನ್ನು ತಪ್ಪು ದಾರಿಗೆ ಎಳೆಯದೆ ಅತ್ಯಂತ ಪಾರದರ್ಶಕವಾಗಿ ನಡೆಯಬೇಕು ಮತ್ತು ಎಲ್ಲಾ ಮತದಾರರಲ್ಲಿ ಈ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸಬೇಕು ಎಂದು ಆದೇಶಿಸಿದ್ದಾರೆ.

ಮುಖ್ಯಾಂಶಗಳು

  • ಎಸ್‌ಐಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ನೆರವಾಗಲು ಅಗತ್ಯವಿರುವ ಕಡೆಗಳಲ್ಲಿ ತಕ್ಷಣವೇ ‘ಹೆಲ್ಪ್ ಡೆಸ್ಕ್’ ಸ್ಥಾಪಿಸಲು ಸಿಎಂ ಸೂಚನೆ.
  • ಎಸ್‌ಐಆರ್ ಉಸ್ತುವಾರಿಗಾಗಿ ಪ್ರತ್ಯೇಕ ಅಧಿಕಾರಿಗಳ ತಂಡ ನೇಮಕ.
  • ಜಿಲ್ಲಾವಾರು ಸಮಸ್ಯೆಗಳ ಪಟ್ಟಿ ಸಿದ್ಧಪಡಿಸಲು ಜಿಲ್ಲಾ ಉಸ್ತುವಾರಿ ಸಚಿವರಿಗೆ ಜವಾಬ್ದಾರಿ.

ಜಾಗೃತಿ ಮೂಡಿಸಲು ಪ್ರತ್ಯೇಕ ತಂಡ ನೇಮಕ

ಬೇರೆ ಅನೇಕ ರಾಜ್ಯಗಳಲ್ಲಿ ಎಸ್‌ಐಆರ್ ಪ್ರಕ್ರಿಯೆಯಿಂದಾಗಿ ಲಕ್ಷಾಂತರ ಜನರು ಮತದಾನದ ಹಕ್ಕನ್ನು ಕಳೆದುಕೊಂಡಿದ್ದಾರೆ. ಆದರೆ ಕೇರಳದಲ್ಲಿ ಈ ಪ್ರಕ್ರಿಯೆ ಅತ್ಯಂತ ಯಶಸ್ವಿಯಾಗಿ ನಡೆದಿದೆ. ನಮ್ಮ ರಾಜ್ಯದಲ್ಲೂ ಯಾರೊಬ್ಬರ ಹೆಸರೂ ಮತದಾರರ ಪಟ್ಟಿಯಿಂದ ಕೈತಪ್ಪದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಇದಕ್ಕಾಗಿ ಪ್ರತ್ಯೇಕ ಅಧಿಕಾರಿಗಳ ತಂಡವನ್ನು ನೇಮಿಸಲು ಸೂಚಿಸಿ, ಸಾರ್ವಜನಿಕರ ಕುಂದುಕೊರತೆ ಆಲಿಸಲು ಹೊಸ ಇಲಾಖೆಯನ್ನು ಸೃಷ್ಟಿಸಬೇಕು. ಅದಕ್ಕೆ ಸಚಿವರೊಬ್ಬರನ್ನು ನೇಮಿಸಬೇಕು ಎಂದಿದ್ದಾರೆ.

ಎಸ್‌ಐಆರ್ ಎಂದರೇನು? ಕಾಂಗ್ರೆಸ್ ವಿರೋಧ ಏಕೆ?

ಎಸ್‌ಐಆರ್ ಎಂದರೆ ‘ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (Special Electoral Roll Purification)’ ಪ್ರಕ್ರಿಯೆಯಾಗಿದೆ. ಚುನಾವಣಾ ಆಯೋಗವು ಮತದಾರರ ಪಟ್ಟಿಯಲ್ಲಿರುವ ನಕಲಿ ಹೆಸರುಗಳು, ಮರಣ ಹೊಂದಿದವರ ವಿವರಗಳು ಹಾಗೂ ಒಂದಕ್ಕಿಂತ ಹೆಚ್ಚು ಕಡೆ ಇರುವ ಹೆಸರುಗಳನ್ನು ತೆಗೆದುಹಾಕಲು ಈ ತಾಂತ್ರಿಕ ಪ್ರಕ್ರಿಯೆಯನ್ನು ನಡೆಸುತ್ತದೆ.

ಕಾಂಗ್ರೆಸ್ ವಿರೋಧಕ್ಕೆ ಕಾರಣವೇನು?

ಕಾಂಗ್ರೆಸ್ ಪಕ್ಷವು ಎಸ್‌ಐಆರ್ ಪ್ರಕ್ರಿಯೆಯ ಕೆಲವು ನಿಯಮಾವಳಿಗಳನ್ನು ಮೊದಲಿನಿಂದಲೂ ಆಕ್ಷೇಪಿಸುತ್ತಾ ಬಂದಿದೆ. ಈ ತಾಂತ್ರಿಕ ಪರಿಷ್ಕರಣೆಯ ಹೆಸರಿನಲ್ಲಿ ಬಡವರು, ವಲಸೆ ಕಾರ್ಮಿಕರು ಹಾಗೂ ನಿರ್ದಿಷ್ಟ ಸಮುದಾಯಗಳ ಮತಗಳನ್ನು ವ್ಯವಸ್ಥಿತವಾಗಿ ಪಟ್ಟಿಯಿಂದ ಕೈಬಿಡಲಾಗುತ್ತಿದೆ ಎಂಬುದು ಕಾಂಗ್ರೆಸ್‌ನ ಗಂಭೀರ ಆರೋಪವಾಗಿದೆ. ತಳಮಟ್ಟದ ಪರಿಶೀಲನೆ ಸರಿಯಾಗಿ ನಡೆಯದಿದ್ದರೆ ನಿಜವಾದ ಮತದಾರರು ಹಕ್ಕು ಕಳೆದುಕೊಳ್ಳುತ್ತಾರೆ ಎಂಬ ಕಾರಣಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಈ ಪ್ರಕ್ರಿಯೆಯನ್ನು ಅತ್ಯಂತ ಜಾಗರೂಕತೆಯಿಂದ ನಿಭಾಯಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹಣಕೊಡಲಿಲ್ಲವೆಂದು ತಾವೇ ಸರಿಪಡಿಸಿದ್ದ ಬಾಲಕಿಯ ಮೂಳೆಯನ್ನು ಮತ್ತೆ ಮುರಿದು ಕಳುಹಿಸಿದ ವೈದ್ಯರು – Kannada News

ಮುಜಫರ್‌ನಗರ, ಜೂನ್ 04: ಹಣ ಕೊಡಲಿಲ್ಲವೆಂದು ವೈದ್ಯ(Doctor)ರು ತಾವೇ ಸರಿಪಡಿಸಿದ್ದ ಬಾಲಕಿಯ ಮೂಳೆಯನ್ನು ಮತ್ತೆ ಮುರಿದು ಕಳುಹಿಸಿರುವ ಘಟನೆ ಮುಜಫರ್​ನಗರದಲ್ಲಿ ನಡೆದಿದೆ. ಬಾಲಕಿಗೆ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳೊಂದಿಗೆ ಸಂಪೂರ್ಣ ಉಚಿತ ಮರುಚಿಕಿತ್ಸೆ ನೀಡಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಗಂಡನಿಲ್ಲದ ಮಹಿಳೆ,  ಮಾನಸಿಕವಾಗಿ ಅಸ್ವಸ್ಥ ಮಗಳನ್ನು ಕರೆದುಕೊಂಡು ಸರ್ಕಾರಿ ಆಸ್ಪತ್ರೆಗೆ ಹೋಗಿದ್ದರು, ತಾನು ಕೂಲಿ ಮಾಡಿ ಜೀವನ ಸಾಗಿಸಬೇಕು ಮಗಳ ಕಾಲು ಮೂಳೆ ಮುರಿದಿದೆ.

ದಯವಿಟ್ಟು ಸರಿ ಮಾಡಿಕೊಡಿ ಎಂದು ಅಂಗಲಾಚಿ ಕೇಳಿದ್ದಾರೆ. ಅದಕ್ಕೆ ವೈದ್ಯರು 25 ಸಾವಿರ ರೂ. ಕೊಡುವಂತೆ ಕೇಳಿದ್ದಾರೆ. ಆದರೆ ತನ್ನ ಬಳಿ ಹಣವಿಲ್ಲ ಎಂದಿದ್ದಕ್ಕೆ ಹಾಗಾದ್ರೆ ಶಸ್ತ್ರ ಚಿಕಿತ್ಸೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿ ಕಳುಹಿಸಿದ್ದಾರೆ. ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿ ಅವರ ಮೂಲಕ ಆಸ್ಪತ್ರೆಗೆ ಹೋದಾಗ 8 ಸಾವಿರ ರೂ. ಮುಂಗಡ ಕೊಡುವಂತೆ ಕೇಳಿದ್ದಾರೆ.

ಆಗ 8 ಸಾವಿರ ರೂ. ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿಸಿದ್ದಾರೆ. ಬಳಿಕ ಚೆಕ್​ಅಪ್​ಗೆಂದು ಬಂದ ವೈದ್ಯರು ಪೂರ್ತಿ ಹಣಕೊಡುವಂತೆ ಕೇಳಿದ್ದಾರೆ. ಆಗ ತನ್ನ ಬಳಿ ಹಣವಿಲ್ಲ ಎಂದಾಗ ಮತ್ತೆ ಆ ಬಾಲಕಿಯ ಮೂಳೆಯನ್ನು ಮುರಿದಿದ್ದಾರೆ ಎಂಬುದು ಮಹಿಳೆಯ ಆರೋಪವಾಗಿದೆ.

ಮತ್ತಷ್ಟು ಓದಿ: ಆಪರೇಷನ್ ಮಾಡದೆ ಸುಳ್ಳು ಹೇಳಿ ಹಣ ಪೀಕಿದ ವೈದ್ಯ?: ಸ್ಕ್ಯಾನಿಂಗ್​​ ವರದಿ ಕಂಡು ರೋಗಿಗೆ ಶಾಕ್​​!

ಮಾನಸಿಕ ಅಸ್ವಸ್ಥಳಾಗಿದ್ದ ಮಗಳನ್ನು ಹೊತ್ತುಕೊಂಡು ನ್ಯಾಯಕ್ಕಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಬಂದಿದ್ದ ತಾಯಿ ರೇಷ್ಮಾ ಅವರ ಅಳಲನ್ನು ಅಧಿಕಾರಿಗಳು ಮತ್ತು ಮಾಧ್ಯಮಗಳು ಅತ್ಯಂತ ಗಂಭೀರವಾಗಿ ಪರಿಗಣಿಸಿವೆ.

ಜಿಲ್ಲಾಧಿಕಾರಿಗಳ ಕಟ್ಟುನಿಟ್ಟಿನ ಸೂಚನೆಯ ಮೇರೆಗೆ, ಬಾಲಕಿಯನ್ನು ತಕ್ಷಣವೇ ಪರಿಣಿತ ವೈದ್ಯರ ನಿಗಾಕ್ಕೆ ಒಳಪಡಿಸಲಾಗಿದೆ. ಆಕೆಯ ಕಾಲಿನ ಮೂಳೆಯನ್ನು ಅತ್ಯಾಧುನಿಕ ಶಸ್ತ್ರಚಿಕಿತ್ಸೆಯ ಮೂಲಕ ಉಚಿತವಾಗಿ ಸರಿಪಡಿಸಲು ಮತ್ತು ಗುಣಮುಖವಾಗುವವರೆಗೆ ಆಸ್ಪತ್ರೆಯಲ್ಲೇ ಉನ್ನತ ದರ್ಜೆಯ ಆರೈಕೆ ನೀಡಲು ಆಡಳಿತ ಮಂಡಳಿ ಎಲ್ಲಾ ವ್ಯವಸ್ಥೆಗಳನ್ನು ಮಾಡಿದೆ.

ಆಸ್ಪತ್ರೆಯ ಸಿಬ್ಬಂದಿ ಹಾಗೂ ವೈದ್ಯರು ಈ ಮುಂಚೆ ನಡೆಸಿದ್ದಾರೆನ್ನಲಾದ ಹಣದ ಸುಲಿಗೆಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಕುಟುಂಬಕ್ಕೆ ಆರ್ಥಿಕ ಭದ್ರತೆ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರಕರಣದ ಕುರಿತು ಮಾತನಾಡಿದ ಮುಜಫರ್‌ನಗರದ ಮುಖ್ಯ ವೈದ್ಯಾಧಿಕಾರಿ (CMO) ಸುನಿಲ್ ತೆವಾಟಿಯಾ ಅವರು, ಇದೊಂದು ಅತ್ಯಂತ ಗಂಭೀರ ಮತ್ತು ಸೂಕ್ಷ್ಮ ವಿಷಯವಾಗಿದ್ದು, ವ್ಯವಸ್ಥೆಯಲ್ಲಿ ಇಂತಹ ಬೇಜವಾಬ್ದಾರಿತನವನ್ನು ಸಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬಾಲಕಿಯ ಎಕ್ಸ್-ರೇ ವರದಿ ಹಾಗೂ ತಾಯಿಯ ದೂರನ್ನು ಆಧರಿಸಿ ತನಿಖೆಗೆ ವಿಶೇಷ ವೈದ್ಯಕೀಯ ಮಂಡಳಿಯನ್ನು ರಚಿಸಲಾಗಿದೆ. ಡಾ. ಚತುರ್ವೇದಿ ಹಾಗೂ ಅಲ್ಲಿನ ಸಿಬ್ಬಂದಿಗಳ ವರ್ತನೆ ಮತ್ತು ಲಂಚದ ಆರೋಪದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಯಲಿದೆ. ಯಾವುದೇ ಹಂತದಲ್ಲಿ ವೈದ್ಯರ ನಿರ್ಲಕ್ಷ್ಯ ಅಥವಾ ಕಾನೂನುಬಾಹಿರ ಸುಲಿಗೆ ದೃಢಪಟ್ಟರೆ, ತಪ್ಪಿತಸ್ಥರನ್ನು ತಕ್ಷಣವೇ ಸೇವೆಯಿಂದ ಅಮಾನತುಗೊಳಿಸಿ, ಕಠಿಣ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು, ಎಂದು ಸಿಎಂಒ ಭರವಸೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ತಾಯಿ ರೇಷ್ಮಾ ಅವರು ಅನುಭವಿಸಿದ ನೋವಿಗೆ ಸದ್ಯ ಆಡಳಿತದ ತ್ವರಿತ ಹಸ್ತಕ್ಷೇಪದಿಂದಾಗಿ ಪರಿಹಾರ ಸಿಕ್ಕಂತಾಗಿದೆ. ಬಾಲಕಿಗೆ ಉನ್ನತ ಚಿಕಿತ್ಸೆ ಆರಂಭವಾಗಿರುವುದು ಮತ್ತು ಭ್ರಷ್ಟಾಚಾರದ ವಿರುದ್ಧ ಕಠಿಣ ಕಾನೂನು ಸಮರಕ್ಕೆ ಆಡಳಿತ ಮುಂದಾಗಿರುವುದು ಸರ್ಕಾರಿ ಆರೋಗ್ಯ ವ್ಯವಸ್ಥೆಯ ಮೇಲಿನ ಸಾರ್ವಜನಿಕರ ನಂಬಿಕೆಯನ್ನು ಪುನಃಸ್ಥಾಪಿಸಲು ನೆರವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Monsoon 2026: ಭಾರತಕ್ಕೆ ಮುಂಗಾರು ಪ್ರವೇಶ; ಕೇರಳದಲ್ಲಿ ಆರೆಂಜ್ ಅಲರ್ಟ್ ಘೋಷಣೆ – Kannada News

ನವದೆಹಲಿ, ಜೂನ್ 4: ಮೂರು ದಿನ ತಡವಾಗಿ ಕೊನೆಗೂ ಭಾರತಕ್ಕೆ ಮುಂಗಾರು (Monsoon) ಪ್ರವೇಶವಾಗಿದೆ. ನೈಋತ್ಯ ಮುಂಗಾರು ಮಾರುತಗಳು ಇಂದು ಕೇರಳವನ್ನು ಅಧಿಕೃತವಾಗಿ ಪ್ರವೇಶಿಸಿವೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಪ್ರಕಟಿಸಿದೆ. ಜೂನ್ ಮೊದಲ ವಾರದಲ್ಲೇ ಮುಂಗಾರು ನಿಗದಿತ ಸಮಯಕ್ಕೆ ಸರಿಯಾಗಿ ಕೇರಳ ಕರಾವಳಿಯನ್ನು ತಲುಪಿದ್ದು, ದೇಶಾದ್ಯಂತ ಕೃಷಿ ಚಟುವಟಿಕೆಗಳಿಗೆ ಚಾಲನೆ ಸಿಕ್ಕಂತಾಗಿದೆ. ಮುಂಗಾರು ಆಗಮನದ ಹಿನ್ನೆಲೆಯಲ್ಲಿ ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು ರಾಜ್ಯಾದ್ಯಂತ ‘ಆರೆಂಜ್ ಅಲರ್ಟ್’ (Orange Alert) ಘೋಷಿಸಿದೆ.

ಭಾರತದ ಒಟ್ಟಾರೆ ಮಳೆಯ ಪ್ರಮಾಣದಲ್ಲಿ ಶೇ. 70ಕ್ಕಿಂತ ಹೆಚ್ಚು ಮಳೆ ಈ ನೈಋತ್ಯ ಮುಂಗಾರಿನಿಂದಲೇ ಸಿಗುತ್ತದೆ. ದೇಶದ ಅರ್ಧಕ್ಕಿಂತ ಹೆಚ್ಚು ಕೃಷಿ ಭೂಮಿ ಇಂದಿಗೂ ಮಳೆಯನ್ನೇ ಆಶ್ರಯಿಸಿರುವುದರಿಂದ, ಮುಂಗಾರು ಸಮಯಕ್ಕೆ ಸರಿಯಾಗಿ ಆರಂಭವಾಗಿರುವುದು ರೈತರಲ್ಲಿ ಸಂತಸ ಮೂಡಿಸಿದೆ. ಇದು ದೇಶದ ಜಲಾಶಯಗಳ ನೀರಿನ ಮಟ್ಟವನ್ನು ಹೆಚ್ಚಿಸುವುದಲ್ಲದೆ, ಹಣದುಬ್ಬರ ನಿಯಂತ್ರಣ ಮತ್ತು ಆರ್ಥಿಕ ಬೆಳವಣಿಗೆಗೆ ಪ್ರಮುಖ ಕೊಡುಗೆ ನೀಡಲಿದೆ. ಇದೀಗ ಮುಂಗಾರು ಮಾರುತಗಳು ಯಾವುದೇ ಅಡೆತಡೆಯಿಲ್ಲದೆ ಕೇರಳವನ್ನು ಪ್ರವೇಶಿಸಿದ್ದು, ಮುಂಬರುವ ದಿನಗಳಲ್ಲಿ ದಕ್ಷಿಣ ಭಾರತದಾದ್ಯಂತ ಮಳೆಯ ಪ್ರಮಾಣ ತೀವ್ರಗೊಳ್ಳಲಿದೆ.

ಇದನ್ನೂ ಓದಿ: Monsoon 2026: ಜೂನ್ 4ರಂದು ಕೇರಳಕ್ಕೆ ಮುಂಗಾರು ಪ್ರವೇಶ; ಕರ್ನಾಟಕದಲ್ಲಿ ಮಳೆಗಾಲ ಯಾವಾಗ ಶುರು?

ಕರ್ನಾಟಕಕ್ಕೆ ಮುಂಗಾರು ಪ್ರವೇಶ ಯಾವಾಗ?:

ಕೇರಳಕ್ಕೆ ಮುಂಗಾರು ಪ್ರವೇಶಿಸಿರುವ ಹಿನ್ನೆಲೆಯಲ್ಲಿ ಇನ್ನು ಕೆಲವೇ ದಿನಗಳಲ್ಲಿ ಮಾರುತಗಳು ಕರ್ನಾಟಕದ ಕರಾವಳಿ ಭಾಗವನ್ನು ತಲುಪಲಿವೆ. ಸಾಮಾನ್ಯವಾಗಿ ಕೇರಳಕ್ಕೆ ಮುಂಗಾರು ಪ್ರವೇಶಿಸಿದ 2 ರಿಂದ 3 ದಿನಗಳಲ್ಲಿ (ಅಂದರೆ ಜೂನ್ ಮೊದಲ ವಾರದ ಅಂತ್ಯದೊಳಗೆ) ಮುಂಗಾರು ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳನ್ನು ಪ್ರವೇಶಿಸುತ್ತದೆ. ಜೂನ್ ಎರಡನೇ ವಾರದ ಆರಂಭದ ವೇಳೆಗೆ ಮುಂಗಾರು ಮಾರುತಗಳು ಇಡೀ ಕರ್ನಾಟಕವನ್ನು ಆವರಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ.

ಇದನ್ನೂ ಓದಿ: Monsoon 2026: ಕೇರಳದಿಂದಲೇ ಮಾನ್ಸೂನ್ ಭಾರತವನ್ನು ಪ್ರವೇಶಿಸುವುದೇಕೆ?

ಮುಂಗಾರು ಮಾರುತಗಳು ಕರ್ನಾಟಕದ ಕರಾವಳಿ ಭಾಗವಾದ ಮಂಗಳೂರನ್ನು ಈಗಾಗಲೇ ಸ್ಪರ್ಶಿಸಿರುವುದರಿಂದ, ರಾಜ್ಯದ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಮಳೆಯ ಪ್ರಮಾಣ ಮತ್ತಷ್ಟು ತೀವ್ರಗೊಳ್ಳಲಿದೆ. ಮುಂಗಾರು ಮಾರುತಗಳು ಕರ್ನಾಟಕದ ಕರಾವಳಿ ಭಾಗವಾದ ಮಂಗಳೂರನ್ನು ಈಗಾಗಲೇ ಸ್ಪರ್ಶಿಸಿರುವುದರಿಂದ, ರಾಜ್ಯದ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಮಳೆಯ ಪ್ರಮಾಣ ಮತ್ತಷ್ಟು ತೀವ್ರಗೊಳ್ಳಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

DRDO Recruitment 2026: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಉದ್ಯೋಗವಕಾಶ; ಪದವೀಧರರು ಅರ್ಹರು! – Kannada News

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರದಲ್ಲಿ ವೃತ್ತಿಜೀವನImage Credit source: Pinterest

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ ದೊರೆತಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಯ ನೇಮಕಾತಿ ಮತ್ತು ಮೌಲ್ಯಮಾಪನ ಕೇಂದ್ರ (RAC) 2026ನೇ ಸಾಲಿನ ವಿಜ್ಞಾನಿ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 33 ವಿಜ್ಞಾನಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಯಾವೆಲ್ಲ ಹುದ್ದೆಗಳಿಗೆ ನೇಮಕಾತಿ?

DRDO RAC ಪ್ರಕಟಿಸಿರುವ ಅಧಿಸೂಚನೆಯ ಪ್ರಕಾರ, Scientist C, Scientist D ಮತ್ತು Scientist E ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಒಟ್ಟು 33 ಹುದ್ದೆಗಳಲ್ಲಿ 20 Scientist-C, 11 Scientist-D ಮತ್ತು 2 Scientist-E ಹುದ್ದೆಗಳು ಸೇರಿವೆ. ಈ ಹುದ್ದೆಗಳು ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್, ಮೆಕ್ಯಾನಿಕಲ್, ಏರೋಸ್ಪೇಸ್, ಕೆಮಿಕಲ್ ಇಂಜಿನಿಯರಿಂಗ್ ಹಾಗೂ ಇತರೆ ತಾಂತ್ರಿಕ ವಿಭಾಗಗಳಿಗೆ ಸಂಬಂಧಿಸಿವೆ.

ಶೈಕ್ಷಣಿಕ ಅರ್ಹತೆ ಏನು?

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಂಬಂಧಿತ ವಿಷಯದಲ್ಲಿ BE/B.Tech ಅಥವಾ ಪ್ರಥಮ ದರ್ಜೆಯ M.Sc. ಪದವಿ ಪಡೆದಿರಬೇಕು. ಜೊತೆಗೆ ಕನಿಷ್ಠ 60 ಪ್ರತಿಶತ ಅಂಕಗಳು ಅಥವಾ ಸಮಾನ ಸಿಜಿಪಿಎ ಹೊಂದಿರಬೇಕು.

ಅನುಭವದ ಮಾನದಂಡ:

ಈ ಹುದ್ದೆಗಳಿಗೆ ಅನುಭವವೂ ಕಡ್ಡಾಯವಾಗಿದೆ. Scientist-C ಹುದ್ದೆಗೆ ಕನಿಷ್ಠ 3 ವರ್ಷ, Scientist-D ಹುದ್ದೆಗೆ 7 ವರ್ಷ ಮತ್ತು Scientist-E ಹುದ್ದೆಗೆ 11 ವರ್ಷಗಳ ವೃತ್ತಿಪರ ಅನುಭವ ಅಗತ್ಯವಿದೆ. ಅನುಭವವು ಸಂಬಂಧಿತ ಕ್ಷೇತ್ರದಲ್ಲಿ ಪಡೆದಿರಬೇಕು.

ವಯೋಮಿತಿ ಎಷ್ಟು?

Scientist-C ಹುದ್ದೆಗೆ ಗರಿಷ್ಠ 35 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. Scientist-D ಮತ್ತು Scientist-E ಹುದ್ದೆಗಳಿಗೆ ಗರಿಷ್ಠ 45 ವರ್ಷ ವಯೋಮಿತಿ ಇದೆ. ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾನುಸಾರ ವಯೋಮಿತಿ ಸಡಿಲಿಕೆ ಲಭ್ಯವಿದೆ.

ಅರ್ಜಿ ಶುಲ್ಕ ವಿವರ:

ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯುಎಸ್ ವರ್ಗದ ಪುರುಷ ಅಭ್ಯರ್ಥಿಗಳು ₹100 ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ. ಮಹಿಳಾ ಅಭ್ಯರ್ಥಿಗಳು, ಎಸ್‌ಸಿ, ಎಸ್‌ಟಿ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ಪ್ರಕ್ರಿಯೆ ಹೇಗಿರಲಿದೆ?

ಅಭ್ಯರ್ಥಿಗಳ ಅರ್ಜಿಗಳನ್ನು ಮೊದಲು ಪರಿಶೀಲಿಸಲಾಗುತ್ತದೆ. ನಂತರ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ, ಅನುಭವ ಮತ್ತು ಸಂದರ್ಶನದಲ್ಲಿನ ಪ್ರದರ್ಶನದ ಆಧಾರದ ಮೇಲೆ ಅಂತಿಮ ಆಯ್ಕೆ ನಡೆಯಲಿದೆ.

ಇದನ್ನೂ ಓದಿ: Kerala: ನಿವೃತ್ತಿಯಾಗುವ ವಯಸ್ಸಲ್ಲಿ ಸಿಕ್ತು ಸರ್ಕಾರಿ ಕೆಲಸ; ಪರೀಕ್ಷೆ ಬರೆದ 20 ವರ್ಷಗಳ ನಂತರ ಬಂದ ನೇಮಕಾತಿ ಪತ್ರ!

ಅರ್ಜಿ ಸಲ್ಲಿಸುವ ವಿಧಾನ:

ಅಭ್ಯರ್ಥಿಗಳು DRDO RACನ ಅಧಿಕೃತ ವೆಬ್‌ಸೈಟ್ rac.gov.in ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿದ ಬಳಿಕ ಅರ್ಜಿಯನ್ನು ಅಂತಿಮವಾಗಿ ಸಲ್ಲಿಸಬಹುದು.

ಪ್ರಮುಖ ದಿನಾಂಕ:

ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಗೊಂಡಿದ್ದು, 2026ರ ಜೂನ್ 19 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ಕ್ಷಣದವರೆಗೆ ಕಾಯದೆ ಶೀಘ್ರವೇ ಅರ್ಜಿ ಸಲ್ಲಿಸುವುದು ಒಳಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಅಧಿಕಾರಿಗಳ ಜತೆ ಸಿಎಂ ಡಿಕೆ ಶಿವಕುಮಾರ್ ಸಭೆ: ಯೋಜನೆಗಳ ಜಾರಿ, ಭ್ರಷ್ಟಾಚಾರಕ್ಕೆ ಕಡಿವಾಣಕ್ಕೆ ಖಡಕ್ ಸೂಚನೆ – Kannada News

ಬೆಂಗಳೂರು, ಜೂನ್ 4: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಡಿಕೆ ಶಿವಕುಮಾರ್ (DK Shivakumar) ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದಾರೆ. ವಿಧಾನಸೌಧದಲ್ಲಿ ಗುರುವಾರ ರಾಜ್ಯದ ಹಿರಿಯ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಮಹತ್ವದ ಜಂಟಿ ಸಭೆ ನಡೆಸಿದ ಅವರು, ಮೊದಲ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದಿರುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೇರಿದಂತೆ ಎಲ್ಲಾ 6 ಪ್ರಮುಖ ಯೋಜನೆಗಳನ್ನು ತಕ್ಷಣವೇ ಜಾರಿಗೆ ತರುವಂತೆ ಖಡಕ್ ಸೂಚನೆ ನೀಡಿದ್ದಾರೆ. ಸರ್ಕಾರದ ಸುಗಮ ಆಡಳಿತಕ್ಕೆ ಅಧಿಕಾರಿಗಳೇ ಬೆನ್ನೆಲುಬು ಎಂದಿರುವ ಸಿಎಂ, ಯಾವುದೇ ಕಾರಣಕ್ಕೂ ಆಡಳಿತ ಹಾದಿ ತಪ್ಪಲು ಬಿಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಮುಖ್ಯಾಂಶಗಳು

  • 6 ಪ್ರಮುಖ ಯೋಜನೆಗಳನ್ನು ತಕ್ಷಣ ಜಾರಿಗೆ ತರಲು ಸಿಎಂ ಆದೇಶ.
  • ಸಿಎಸ್ಆರ್ (CSR) ಫಂಡ್ ದುರ್ಬಳಕೆ ಮತ್ತು ಭ್ರಷ್ಟಾಚಾರಕ್ಕೆ ತಕ್ಷಣವೇ ಕಡಿವಾಣ ಹಾಕಲು ಸೂಚನೆ.
  • ರೌಡಿಗಳ ಹೆಡೆಮುರಿ ಕಟ್ಟಿ, ಜೂಜು, ಡ್ರಗ್ಸ್ ಹಾಗೂ ಕಾನೂನುಬಾಹಿರ ಚಟುವಟಿಕೆಗಳಿಗೆ ತಡೆಯೊಡ್ಡಲು ಪೊಲೀಸರಿಗೆ ಸೂಚನೆ.

ಭ್ರಷ್ಟಾಚಾರಕ್ಕೆ ಕಡಿವಾಣ, ಅಧಿಕಾರಿಗಳಿಗೆ ಸಿಎಂ ಕಿವಿಮಾತು

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ‘ರಾಜ್ಯದಲ್ಲಿ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿ ದುರ್ಬಳಕೆಯಾಗುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಇದಕ್ಕೆ ತಕ್ಷಣವೇ ಬ್ರೇಕ್ ಹಾಕಿ, ಆಡಳಿತದಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು’ ಎಂದು ಗುಡುಗಿದ್ದಾರೆ. ಪ್ರತಿಯೊಬ್ಬ ಅಧಿಕಾರಿಯೂ ನಿಮ್ಮ ಆತ್ಮಸಾಕ್ಷಿ ಒಪ್ಪುವ ಹಾಗೆ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಸಾರ್ವಜನಿಕರ ಕಷ್ಟಗಳಿಗೆ ತಕ್ಷಣ ಸ್ಪಂದಿಸಿ, ಸರ್ಕಾರದ ಯೋಜನೆಗಳನ್ನು ಸಮರ್ಥವಾಗಿ ಜನರಿಗೆ ತಲುಪಿಸಬೇಕು. ಅಭಿವೃದ್ಧಿಯ ಹಾದಿಗೆ ಮೆಟ್ಟಿಲಾಗಿ ಜನ ಮೆಚ್ಚುವಂತೆ ಕೆಲಸ ಮಾಡುವ ಮೂಲಕ ಸರ್ಕಾರಕ್ಕೂ ಒಳ್ಳೆಯ ಹೆಸರು ತನ್ನಿ, ನೀವೂ ಉತ್ತಮ ಹೆಸರು ಗಳಿಸಿ ಎಂದು ಕರೆ ನೀಡಿದ್ದಾರೆ.

ರೌಡಿಗಳ ಹೆಡೆಮುರಿ ಕಟ್ಟಲು ಐಪಿಎಸ್ ಅಧಿಕಾರಿಗಳಿಗೆ ಸೂಚನೆ

ಇದೇ ವೇಳೆ, ಕಾನೂನು ಸುವ್ಯವಸ್ಥೆ ಕಾಪಾಡುವ ಕುರಿತು ಪೊಲೀಸ್ ಅಧಿಕಾರಿಗಳಿಗೆ ಕಠಿಣ ಸೂಚನೆ ನೀಡಿದ ಸಿಎಂ, ‘ರಾಜ್ಯದಲ್ಲಿ ಯಾವುದೇ ರೀತಿಯ ಕಾನೂನುಬಾಹಿರ ಚಟುವಟಿಕೆಗಳಿಗೆ ಆಸ್ಪದ ಕೊಡಬಾರದು’ ಎಂದಿದ್ದಾರೆ. ರೌಡಿಗಳ ಹೆಡೆಮುರಿ ಕಟ್ಟಿ, ಜೂಜು ಮತ್ತು ಡ್ರಗ್ಸ್ ದಂಧೆಯನ್ನು ಬೇರುಸಹಿತ ಕಿತ್ತೊಗೆಯಬೇಕು. ಸಾರ್ವಜನಿಕರ ಶಾಂತಿ ಮತ್ತು ನೆಮ್ಮದಿಗೆ ಭಂಗ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ. ಯಾವುದೇ ರಾಜಕೀಯ ಅಥವಾ ಬಾಹ್ಯ ಒತ್ತಡಗಳಿಗೆ ಮಣಿಯದೆ ಮುಕ್ತವಾಗಿ ಕೆಲಸ ಮಾಡಿ ಎಂದು ಐಪಿಎಸ್ ಅಧಿಕಾರಿಗಳಿಗೆ ಮುಕ್ತ ಸ್ವಾತಂತ್ರ್ಯ ನೀಡಿದ್ದಾರೆ.

ಇದನ್ನೂ ಓದಿ: ವಿಶೇಷ ಪೂಜೆ ಸಲ್ಲಿಸಿ ಸಿಎಂ ಕುರ್ಚಿಯಲ್ಲಿ ಕೂತ ಸಿಎಂ ಡಿಕೆ ಶಿವಕುಮಾರ್​

ಸಿಎಂ ಅವರ ಈ ಮೊದಲ ಸಭೆಯು ಇಡೀ ಆಡಳಿತ ಮತ್ತು ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿಸಿದೆ.

ವರದಿ: ಈರಣ್ಣ ಬಸವ, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 2:42 pm, Thu, 4 June 26

Source link

ವಿದೇಶಿ ಹೂಡಿಕೆದಾರರನ್ನು ಮರಳಿ ಆಕರ್ಷಿಸಲು ಸರ್ಕಾರದ ಯತ್ನ; ಆದಾಯ ತೆರಿಗೆ ಕಾಯ್ದೆಗೆ ತಿದ್ದುಪಡಿ ತರುವ ಸುಗ್ರೀವಾಜ್ಞೆಗೆ ಅನುಮೋದನೆ – Kannada News

ನವದೆಹಲಿ, ಜೂನ್ 4: ಭಾರತದಿಂದ ವಿದೇಶಿ ಹೂಡಿಕೆದಾರರು (FPI) ಹೊರಹೋಗುತ್ತಿರುವುದನ್ನು ತಡೆಯಲು ಮತ್ತು ಅವರನ್ನು ಮತ್ತೆ ಭಾರತದ ಮಾರುಕಟ್ಟೆಗೆ ಆಕರ್ಷಿಸಲು ಕೇಂದ್ರ ಸರ್ಕಾರವು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಆದಾಯ ತೆರಿಗೆ ಕಾಯ್ದೆಗೆ ತಿದ್ದುಪಡಿ ತರುವ ಸುಗ್ರೀವಾಜ್ಞೆಗೆ (Ordinance) ಸರ್ಕಾರ ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ (union cabinet meeting) ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಸರ್ಕಾರದ ಭದ್ರತಾ ಪತ್ರಗಳಲ್ಲಿ (Government Securities) ವಿದೇಶಿ ಪೋರ್ಟ್‌ಫೋಲಿಯೋ ಹೂಡಿಕೆದಾರರು ಮಾಡುವ ಹೂಡಿಕೆಯ ಮೇಲೆ ‘ಬಂಡವಾಳ ಲಾಭದ ತೆರಿಗೆಯನ್ನು’ (Capital Gains Tax) ತೆಗೆದುಹಾಕಲು ಸರ್ಕಾರ ಚಿಂತನೆ ನಡೆಸಿದೆ. 2026ರ ಮೊದಲ ಐದು ತಿಂಗಳಲ್ಲಿ ವಿದೇಶಿ ಹೂಡಿಕೆದಾರರು ಸುಮಾರು 3.08 ಲಕ್ಷ ಕೋಟಿ ರೂಪಾಯಿ ಮೌಲ್ಯದ ಭಾರತೀಯ ಷೇರುಗಳನ್ನು ಮಾರಾಟ ಮಾಡಿದ್ದಾರೆ. ಇದು 2025ರ ಸಂಪೂರ್ಣ ವರ್ಷದ ಹೊರಹರಿವಿಗಿಂತ (3.06 ಲಕ್ಷ ಕೋಟಿ ರೂ.) ಹೆಚ್ಚಾಗಿದೆ.

ಇದನ್ನೂ ಓದಿ: ಭಾರತದ ವಾಯುಸೇನಾ ಬಲದ ಕೊರತೆ ನೀಗಿಸಲಿರುವ 114 ರಫೇಲ್ ಯುದ್ಧವಿಮಾನಗಳು

ಪ್ರಸ್ತುತ, ವಿದೇಶಿ ಹೂಡಿಕೆದಾರರು 12 ತಿಂಗಳಿಗಿಂತ ಹೆಚ್ಚು ಕಾಲ ಹೊಂದಿರುವ ಷೇರುಗಳು ಮತ್ತು ಬಾಂಡ್‌ಗಳ ಮೇಲೆ 12.5% ಲಾಂಗ್-ಟರ್ಮ್ ಕ್ಯಾಪಿಟಲ್ ಗೇನ್ಸ್ (LTCG) ತೆರಿಗೆಯನ್ನು ಪಾವತಿಸುತ್ತಿದ್ದಾರೆ. ಅಲ್ಲದೆ, ಸರ್ಕಾರಿ ಬಾಂಡ್‌ಗಳ ಮೇಲಿನ ಬಡ್ಡಿಯ ಮೇಲೆ 20% ‘ವಿತ್‌ಹೋಲ್ಡಿಂಗ್ ಟ್ಯಾಕ್ಸ್’ (Withholding Tax) ವಿಧಿಸಲಾಗುತ್ತಿದೆ.

ಸರ್ಕಾರದಿಂದ ಏಕೆ ಈ ಹೆಜ್ಜೆ?

ಸಿಂಗಾಪುರ ಮತ್ತು ಹಾಂಗ್‌ಕಾಂಗ್‌ನಂತಹ ಹಣಕಾಸು ಕೇಂದ್ರಗಳಿಗೆ ಹೋಲಿಸಿದರೆ ಭಾರತದ ಮಾರುಕಟ್ಟೆ ಕಡಿಮೆ ಆಕರ್ಷಕವಾಗಿ ಕಾಣುತ್ತಿದೆ. ಆ ದೇಶಗಳಲ್ಲಿ ಸಾಮಾನ್ಯವಾಗಿ ವಿದೇಶಿ ಹೂಡಿಕೆದಾರರ ಮೇಲೆ ಬಂಡವಾಳ ಲಾಭದ ತೆರಿಗೆ ಇರುವುದಿಲ್ಲ ಎನ್ನುವುದು ಒಂದು ಕಾರಣ ಇರಬಹುದು. ಹಾಗೆಯೇ, ರೂಪಾಯಿ ಮೌಲ್ಯ ಕುಸಿಯುತ್ತಿರುವುದು, ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷ ಮತ್ತು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರದ ಏರಿಳಿತಗಳು ವಿದೇಶಿ ಹೂಡಿಕೆದಾರರು ಭಾರತದ ಮಾರುಕಟ್ಟೆಯಿಂದ ಹಿಂದೆ ಸರಿಯಲು ಪ್ರಮುಖ ಕಾರಣಗಳಾಗಿವೆ.

ಇದನ್ನೂ ಓದಿ: ಜೊಹೊ ಮುಖ್ಯ ವಿಜ್ಞಾನಿ ಶ್ರೀಧರ್ ವೆಂಬು ಅವರ ಕರುವಿಯಿಂದ ಚೀನೀ ಪವರ್ ಟೂಲ್ಸ್​ಗೆ ಪೈಪೋಟಿ

ತಜ್ಞರ ಪ್ರಕಾರ, ಕೇವಲ ತೆರಿಗೆ ವಿನಾಯಿತಿಯಿಂದ ಮಾತ್ರ ಹೂಡಿಕೆದಾರರು ಮರಳುವುದಿಲ್ಲ. ಭಾರತೀಯ ಕಂಪನಿಗಳ ಲಾಭಾಂಶ ಹೆಚ್ಚಾಗಬೇಕು ಮತ್ತು ದೇಶೀಯ ಮಾರುಕಟ್ಟೆ ಹೂಡಿಕೆದಾರರಿಗೆ ಲಾಭದಾಯಕವಾಗಿ ಕಾಣಿಸಬೇಕು. ಜೊತೆಗೆ, ತೈಲ ಬೆಲೆಗಳು ಸ್ಥಿರವಾದರೆ ಮತ್ತು ರೂಪಾಯಿಯ ಮೌಲ್ಯವು ಬಲಗೊಂಡರೆ ಮಾತ್ರ ವಿದೇಶಿ ಹೂಡಿಕೆಯು ಸುಸ್ಥಿರವಾಗಿ ಮರಳಿ ಬರಲು ಸಾಧ್ಯ ಎಂದು ವಿಶ್ಲೇಷಿಸಲಾಗಿದೆ.

ಸಂಕ್ಷಿಪ್ತವಾಗಿ ಹೇಳುವುದಾದರೆ, ಸರ್ಕಾರವು ಈ ಸುಗ್ರೀವಾಜ್ಞೆಯ ಮೂಲಕ ಹೂಡಿಕೆದಾರರಿಗೆ ತೆರಿಗೆಯ ಹೊರೆಯಿಂದ ಸ್ವಲ್ಪ ರಿಲ್ಯಾಕ್ಸ್ ನೀಡುವ ಮೂಲಕ ಭಾರತೀಯ ಮಾರುಕಟ್ಟೆಯಲ್ಲಿನ ಅವರ ವಿಶ್ವಾಸವನ್ನು ಮರಳಿ ಗಳಿಸಲು ಪ್ರಯತ್ನಿಸುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On – 2:15 pm, Thu, 4 June 26

Source link

ಮಂಗಳೂರು, ಕಾರವಾರ, ಗೋವಾ ಮತ್ತು ಮುಂಬೈ ಪ್ರಯಾಣಿಕರ ಗಮನಕ್ಕೆ: ಈ ರೈಲ್ವೆ ಮಾರ್ಗಕ್ಕೆ ಜೂ.15 ರಿಂದ ಹೊಸ ಮುಂಗಾರು ವೇಳಾಪಟ್ಟಿ – Kannada News

ಮಂಗಳೂರು, ಜೂ.4 : ಕೊಂಕಣ ರೈಲ್ವೆ ಮಾರ್ಗದಲ್ಲಿ ಮುಂಗಾರು ಮಳೆಯ (Monsoon) ಅವಧಿಯಲ್ಲಿ ರೈಲುಗಳ ಸುರಕ್ಷಿತ ಕಾರ್ಯಾಚರಣೆಯನ್ನು ಖಚಿತಪಡಿಸಿಕೊಳ್ಳಲು ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL) ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಮಾರ್ಗದಲ್ಲಿ ಚಲಿಸುವ ರೈಲುಗಳಿಗಾಗಿ ವಿಶೇಷ ಮುಂಗಾರು ವೇಳಾಪಟ್ಟಿಯನ್ನು (Monsoon Time Table) ಪ್ರಕಟಿಸಲಾಗಿದೆ. ಈ ಹೊಸ ವೇಳಾಪಟ್ಟಿಯು ಜೂನ್ 15, 2026 ರಿಂದ ಜಾರಿಗೆ ಬರಲಿದ್ದು, ಅಕ್ಟೋಬರ್ 20, 2026 ರವರೆಗೆ ಜಾರಿಯಲ್ಲಿರಲಿದೆ.

ಪಶ್ಚಿಮ ಕರಾವಳಿ ಮತ್ತು ಕೊಂಕಣ ಭಾಗದಲ್ಲಿ ಮುಂಗಾರು ಮಳೆಯು ಅತ್ಯಂತ ಭೀಕರವಾಗಿರುತ್ತದೆ. ಈ ಅವಧಿಯಲ್ಲಿ ಗುಡ್ಡ ಕುಸಿತ, ಹಳಿಗಳ ಮೇಲೆ ನೀರು ನಿಲ್ಲುವುದು ಮತ್ತು ಮರಗಳು ಉರುಳುವಂತಹ ಘಟನೆಗಳು ಹೆಚ್ಚಾಗಿ ಸಂಭವಿಸುತ್ತವೆ. ಹೀಗಾಗಿ, ಯಾವುದೇ ರೀತಿಯ ಅಪಘಾತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲು ಮತ್ತು ಪ್ರಯಾಣಿಕರ ಸುರಕ್ಷತೆಯನ್ನು ಕಾಪಾಡಲು ರೈಲುಗಳ ವೇಗವನ್ನು ನಿಯಂತ್ರಿಸಲಾಗುತ್ತದೆ. ಇದರ ಪರಿಣಾಮವಾಗಿ ರೈಲುಗಳ ಸಂಚಾರದ ಸಮಯದಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗುತ್ತದೆ.

ಇದನ್ನೂ ಓದಿ: ಪ್ರಯಾಣಿಕರೇ ಗಮನಿಸಿ: ಬೆಂಗಳೂರಿನ ಈ ಮಾರ್ಗದಲ್ಲಿ 2 ರೈಲುಗಳು ರದ್ದು, 6 ರೈಲುಗಳ ಸಂಚಾರ ಭಾಗಶಃ ರದ್ದು

ಇಲ್ಲಿದೆ ನೋಡಿ ಪೋಸ್ಟ್​​:

ಮಂಗಳೂರು, ಕಾರವಾರ, ಗೋವಾ ಮತ್ತು ಮುಂಬೈ ಮಾರ್ಗವಾಗಿ ಸಂಚರಿಸುವ ಸಾವಿರಾರು ಪ್ರಯಾಣಿಕರ ಮೇಲೆ ಈ ವೇಳಾಪಟ್ಟಿ ಪ್ರಭಾವ ಬೀರಲಿದೆ. ಆದ್ದರಿಂದ ಜೂನ್ 15 ರ ನಂತರ ಕೊಂಕಣ ರೈಲ್ವೆ ಮಾರ್ಗದಲ್ಲಿ ಪ್ರಯಾಣಿಸಲು ಟಿಕೆಟ್ ಕಾಯ್ದಿರಿಸಿರುವ ಅಥವಾ ಪ್ರಯಾಣ ಯೋಜಿಸುತ್ತಿರುವ ನಾಗರಿಕರು, ರೈಲು ನಿಲ್ದಾಣಕ್ಕೆ ಹೊರಡುವ ಮುನ್ನ ತಮ್ಮ ರೈಲಿನ ನವೀಕೃತ ಸಮಯವನ್ನು ಅಧಿಕೃತ ವೆಬ್‌ಸೈಟ್ ಅಥವಾ ಹೆಲ್ಪ್‌ಲೈನ್ ಮೂಲಕ ಪರಿಶೀಲಿಸಿಕೊಳ್ಳುವಂತೆ ಕೊಂಕಣ ರೈಲ್ವೆ ಇಲಾಖೆ ವಿನಂತಿಸಿದೆ.

ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಳಗಾವಿಯಲ್ಲಿ ಮತ್ತೊಂದು ಬಹುಕೋಟಿ ವಂಚನೆ ಪ್ರಕರಣ: ದಾಳಿ ವೇಳೆ ಕಂಪನಿಯ ಸರ್ವರ್​​ ಡೌನ್​​ ಮಾಡಿ ಕಳ್ಳಾಟ? – Kannada News

ಬೆಳಗಾವಿ, ಜೂನ್​ 04: ಶಿವಂ ಅಸೋಸಿಯೇಟ್ಸ್ ಸಂಸ್ಥೆಯಿಂದ ಸಾವಿರಾರು ಕೋಟಿ ಅಕ್ರಮ ಸಂಬಂಧ ತನಿಖೆ ನಡೆಯುತ್ತಿರುವ ನಡುವೆಯೇ ಬೆಳಗಾವಿಯಲ್ಲಿ ಮತ್ತೊಂದು ನೂರಾರು ಕೋಟಿ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಭಾಗ್ಯ ನಗರದಲ್ಲಿರುವ ಆದಿತ್ಯರಾಜ ಕ್ಯಾಪಿಟಲ್ ಪ್ರೈವೇಟ್​​ ಲಿಮಿಟೆಡ್​​ ಕಂಪನಿ ಮೇಲೆ ಎಸಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ರೇಡ್​​ ಕುರಿತು ಮಾಹಿತಿ ಸಿಗುತ್ತಿದ್ದಂತೆ ಆನ್ ಲೈನ್ ಮೂಲಕ ವ್ಯವಹಾರ ನಡೆಸುತ್ತಿದ್ದ ಕಂಪನಿಯ ವೆಬ್​​ಸೈಟ್​​ ಸ್ಥಗಿತವಾಗಿದೆ. ಹೀಗಾಗಿ ಕಂಪನಿ ಮಾಲಿಕ ಅಧಿಕಾರಿಗಳಿಗೇ ಚಳ್ಳೆಹಣ್ಣು ತಿನ್ನಿಸಲು ಮುಂದಾದರಾ ಎಂಬ ಅನುಮಾನವೂ ವ್ಯಕ್ತವಾಗಿದೆ.

ಮುಖ್ಯಾಂಶಗಳು

  • ಬೆಳಗಾವಿಯಲ್ಲಿ ಮತ್ತೊಂದು ನೂರಾರು ಕೋಟಿ ವಂಚನೆ ಪ್ರಕರಣ
  • ಆದಿತ್ಯರಾಜ ಕ್ಯಾಪಿಟಲ್ ಪ್ರೈ.​​ ಲಿಮಿಟೆಡ್​​ ಕಂಪನಿ ಮೇಲೆ ದಾಳಿ
  • ರೇಡಿ ಮಾಹಿತಿ ಸಿಗುತ್ತಿದ್ದಂತೆಯೇ ಕಂಪನಿಯ ಸರ್ವರ್​​ ಡೌನ್​!

ಆದಿತ್ಯರಾಜ ಕ್ಯಾಪಿಟಲ್ ಪ್ರೈವೇಟ್​​ ಲಿಮಿಟೆಡ್​​ ಕಂಪನಿಯನ್ನು ಮಹಾರಾಷ್ಟ್ರ ಮೂಲದ ಬಲರಾಮ್ ಮಾನೆ ಎಂಬಾತ ನಡೆಸುತ್ತಿದ್ದು, ಒಟ್ಟು 7 ಶಾಖೆಗಳನ್ನು ಇದು ಹೊಂದಿದೆ ಎನ್ನಲಾಗಿದೆ. ಕಳೆದ 8 ವರ್ಷಗಳಿಂದ ಬೆಳಗಾವಿಯಲ್ಲಿ ಕಂಪನಿ ಕಾರ್ಯನಿರ್ವಹಿಸುತ್ತಿದ್ದು, ಅಧಿಕಾರಿಗಳ ದಾಳಿಗೂ ಮುನ್ನ ಮೆಂಟೆನನ್ಸ್ ನೆಪ ಹೇಳಿ ಸರ್ವರ್ ಡೌನ್ ಮಾಡಿರುವ ಬಗ್ಗೆ ಆರೋಪ ಕೇಳಿಬಂದಿದೆ. ಉಪ ವಿಭಾಗಾಧಿಕಾರಿ ಶ್ರವಣ ಕುಮಾರ್ ನೇತೃತ್ವದಲ್ಲಿ ದಾಳಿ ವೇಳೆ ನೂರಾರು ಕೋಟಿ ಹಣ ವರ್ಗಾವಣೆ ಆಗಿರುವುದು ಬೆಳಕಿಗೆ ಬಂದಿದ್ದು, ಆನ್ ಲೈನ್ ಮೂಲಕ ಹಣ ವರ್ಗಾವಣೆ ಆಗಿರುವುದು ಪತ್ತೆಯಾಗಿದೆ. ಒಂದು ಲಕ್ಷಕ್ಕೆ ತಿಂಗಳಿಗೆ 3ಸಾವಿರ ಹಣ ಬಡ್ಡಿ ಕೊಡುವುದಾಗಿ ಆಮಿಷವೊಡ್ಡಿ ಸಾವಿರಾರು ಜನರಿಂದ ಹಣ ಠೇವಣಿ ಇರಿಸಿಕೊಂಡು ವಂಚನೆ ಆರೋಪ ಕೇಳಿಬಂದಿದೆ. ಹೀಗಾಗಿ ದಾಖಲೆ ಸೇರಿದಂತೆ ಹಣದ ಮೂಲದ ಪರಿಶೀಲನೆಗೆ ಅಧಿಕಾರಿಗಳು ಮುಂದಾಗಿದ್ದಾರೆ.

ಇದನ್ನೂ ಓದಿ: ಬೆಳಗಾವಿಯಲ್ಲಿ 4,500 ಕೋಟಿ ರೂ. ವಂಚನೆ ಪ್ರಕರಣ, ಹೂಡಿಕೆಗಿಂತ ಹೆಚ್ಚಿನ ಲಾಭ ಪಡೆದವರಿಗೂ ಶುರುವಾಯ್ತು ನಡುಕ

ಈ ಹಿಂದೆ ಸದ್ದು ಮಾಡಿದ್ದ ಶಿವಂ ಅಸೋಸಿಯೇಟ್ಸ್ ಪ್ರಕರಣ

ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಮಾಲೀಕ ಶಿವಾನಂದ ನೀಲಣ್ಣವರ್​​ ಎಂಬಾತ ಯಾವುದೇ ನಿಯಮಗಳನ್ನು ಪಾಲಿಸದೆ, ಸಾರ್ವಜನಿಕರಿಗೆ ಹೆಚ್ಚಿನ ಬಡ್ಡಿಯ ಆಮಿಷವೊಡ್ಡಿ ಬರೋಬ್ಬರಿ 40 ರಿಂದ 45 ಸಾವಿರ ಜನರಿಂದ ಅಂದಾಜು 4,500 ಕೋಟಿ ರೂ ಹೂಡಿಕೆ ಮಾಡಿಸಿಕೊಂಡಿರುವುದು ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿತ್ತು. ಸದ್ಯ ಶಿವಾನಂದ ನೀಲಣ್ಣವರ್​​ ಮನೆ ಸೇರಿದಂತೆ ಕಚೇರಿ ಕೂಡ ಸೀಜ್​ ಮಾಡಲಾಗಿದ್ದು, ಆ ಸಂಬಂಧ ವಿಚಾರಣೆ ಮುಂದುವರಿದೆ. ಈ ನಡುವೆಯೇ ಈಗ ಮತ್ತೊಂದು ಅಂತಹುದ್ದೇ ಪ್ರಕರಣ ವರದಿಯಾಗಿರೋದು ಪೊಲೀಸರಿಗೂ ತಲೆನೋವಾಗಿ ಮಾರ್ಪಟ್ಟಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Exit mobile version