ಕಾಂಗ್ರೆಸ್​​ಗೆ ಕುಟುಂಬ ಮೊದಲು, ನಮಗೆ ದೇಶ ಮೊದಲು; ಅಸ್ಸಾಂನಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ಕಾಂಗ್ರೆಸ್​​ಗೆ ಕುಟುಂಬ ಮೊದಲು, ನಮಗೆ ದೇಶ ಮೊದಲು; ಅಸ್ಸಾಂನಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ನವದೆಹಲಿ, ಏಪ್ರಿಲ್ 6: ಪ್ರಧಾನಿ ನರೇಂದ್ರ ಮೋದಿ (PM Modi) ಇಂದು ಕಾಂಗ್ರೆಸ್ ಪಕ್ಷದ ವಿರುದ್ಧ ಅಸ್ಸಾಂನ ಚುನಾವಣಾ ರ್ಯಾಲಿಯಲ್ಲಿ ವಾಗ್ದಾಳಿ ನಡೆಸಿದರು. ನಮಗೆ ದೇಶ ಮೊದಲಾದರೆ ಕಾಂಗ್ರೆಸ್​ಗೆ “ಕುಟುಂಬ-ಮೊದಲು” ಎಂದು ಅವರು ಟೀಕಿಸಿದ್ದಾರೆ. ಹೊಜೈನಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅಸ್ಸಾಂನಲ್ಲಿ ಈ ಬಾರಿ ಬಿಜೆಪಿ ಹ್ಯಾಟಿಕ್ ಬಾರಿಸಲಿದೆ ಎಂದಿದ್ದಾರೆ.

ಬಿಜೆಪಿಯ ಆಡಳಿತ ಮಾದರಿಯನ್ನು ಎತ್ತಿ ತೋರಿಸಿದ ಪ್ರಧಾನಿ ಮೋದಿ, ತಮ್ಮ ಪಕ್ಷವು ನಿರಂತರ ಅಭಿವೃದ್ಧಿ ಪ್ರಯತ್ನಗಳ ಮೂಲಕ ಅಸ್ಸಾಂ ಜನರ ಜೀವನವನ್ನು ಸುಧಾರಿಸಲು ಬದ್ಧವಾಗಿದೆ ಎಂದು ಹೇಳಿದರು. ಬಿಜೆಪಿಯ ಅಭಿವೃದ್ಧಿ ಕಾರ್ಯಸೂಚಿಯನ್ನು ಪುನರುಚ್ಚರಿಸಿದ ಪ್ರಧಾನಿ ಮೋದಿ, ಅಸ್ಸಾಂನ ಜನರಿಗೆ ಪ್ರಗತಿ, ಸ್ಥಿರತೆ ಮತ್ತು ಉತ್ತಮ ಜೀವನ ಮಟ್ಟವನ್ನು ನೀಡಲು ಪಕ್ಷವು ಅವಿಶ್ರಾಂತವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು ಹೇಳಿದ್ದಿಷ್ಟು..

‘ಕೆಡಿ’ ಸಿನಿಮಾದ ‘ಸರ್ಸೆ ನಿನ್ನ ಸೆರಗ’ ಹಾಡು ತುಂಬಾ ವಿವಾದಕ್ಕೆ ಕಾರಣ ಆಯಿತು. ಕಡೆಗೂ ಆ ಹಾಡು ಡಿಲೀಟ್ ಮಾಡಬೇಕಾಯಿತು. ಆ ರೀತಿ ಆಗಿದ್ದರ ಬಗ್ಗೆ ಗಾಯಕ ನವೀನ್ ಸಜ್ಜು (Naveen Sajju) ಅವರು ತಮ್ಮ ಅನಿಸಿಕೆ ತಿಳಿಸಿದ್ದಾರೆ. ‘ಸಂಗೀತಗಾರರು ನಾವು ಟ್ರೆಂಡ್ ಹಿಂದೆ ಹೋಗುವುದಲ್ಲ. ನಾವೇ ಟ್ರೆಂಡ್ ಸೆಟ್ ಮಾಡುವುದು. ನನಗೆ ಮೊದಲು ಆರ್ಕೆಸ್ಟ್ರಾಗಳಲ್ಲಿ ಜನಪದ ಗೀತೆಗಳನ್ನು ಹಾಡಲು ನನಗೆ ಅವಕಾಶ ಕೊಡುತ್ತಿರಲಿಲ್ಲ. ಆದರೆ ನಾನು ಆಗ ಅವರಿಗೆ ಸವಾಲು ಹಾಕಿದ್ದೆ. ಈಗ ನನ್ನ ಬ್ಯಾಂಡ್ ಮೂಲಕ ಜನರು ಜನಪದ ಹಾಡಿಗೆ ಕುಣಿಯುವಂತೆ ಮಾಡಿದ್ದೇನೆ’ ಎಂದು ನವೀನ್ ಅವರು ಹೇಳಿದ್ದಾರೆ. ‘ಲೋ ನವೀನ’ ಸಿನಿಮಾದಲ್ಲಿ ಅವರು ಹೀರೋ ಆಗಿ ನಟಿಸಿದ್ದಾರೆ. ಈ ಚಿತ್ರವೀಗ ಬಿಡುಗಡೆಗೆ ಸಜ್ಜಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IPL 2026: ರಾಜಸ್ಥಾನ್ ವಿರುದ್ಧ ಆಡ್ತಾರಾ ಹಾರ್ದಿಕ್ ಪಾಂಡ್ಯ?

ಹಾರ್ದಿಕ್ ಪಾಂಡ್ಯ (Hardik Pandya) ನಾಯಕತ್ವದ ಮುಂಬೈ ಇಂಡಿಯನ್ಸ್, 2012 ರ ನಂತರ ಮೊದಲ ಬಾರಿಗೆ 19 ನೇ ಐಪಿಎಲ್ (IPL) ಸೀಸನ್‌ನಲ್ಲಿ ತಮ್ಮ ಅಭಿಯಾನವನ್ನು ಗೆಲುವಿನ ಆರಂಭವನ್ನು ಮಾಡಿತು. ಮಾರ್ಚ್ 29 ರಂದು ವಾಂಖೆಡೆ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಸೋಲಿಸುವ ಮೂಲಕ ಮುಂಬೈ ತನ್ನ ಅಭಿಯಾನವನ್ನು ಗೆಲುವಿನೊಂದಿಗೆ ಪ್ರಾರಂಭಿಸಿತು. ಆದರೆ, ಆ ನಂತರ ಮುಂಬೈ ತನ್ನ ಗೆಲುವಿನ ಓಟವನ್ನು ಕಾಯ್ದುಕೊಳ್ಳಲು ವಿಫಲವಾಯಿತು. ಶನಿವಾರ ನಡೆದ ತನ್ನ ಎರಡನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 6 ವಿಕೆಟ್‌ಗಳಿಂದ ಸೋಲನುಭವಿಸಿತು. ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಮುಂಬೈ ನಾಯಕ ಹಾರ್ದಿಕ್ ಪಾಂಡ್ಯ ಆಡಿರಲಿಲ್ಲ. ಇದು ತಂಡಕ್ಕೆ ದೊಡ್ಡ ಹೊಡೆತ ನೀಡಿತು.

ಡೆಲ್ಲಿ ಪಂದ್ಯದಿಂದ ಹೊರಬಿದ್ದಿದ್ದ ಹಾರ್ದಿಕ್

ಹಾರ್ದಿಕ್ ಅನಾರೋಗ್ಯದ ಕಾರಣದಿಂದಾಗಿ ದೆಹಲಿ ವಿರುದ್ಧದ ಪಂದ್ಯವನ್ನು ಆಡಿರಲಿಲ್ಲ. ಹೀಗಾಗಿ ಹಾರ್ದಿಕ್ ಅನುಪಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್ ತಂಡವನ್ನು ಮುನ್ನಡೆಸಿದ್ದರು. ತನ್ನ ನಾಯಕತ್ವದಲ್ಲಿ ಮುಂಬೈ ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಸೂರ್ಯ ವಿಫಲರಾದರು. ಈಗ ಮುಂಬೈ ತನ್ನ ಅಭಿಯಾನದ ಮೂರನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯ ಮಂಗಳವಾರ, ಏಪ್ರಿಲ್ 7 ರಂದು ನಡೆಯಲಿದೆ. ಹಾರ್ದಿಕ್ ಈ ಪಂದ್ಯದಲ್ಲಿ ಆಡುತ್ತಾರೋ ಇಲ್ಲವೋ? ಎಂಬುದು ಅಭಿಮಾನಿಗಳಲ್ಲಿ ಕಾಡುತ್ತಿರುವ ಪ್ರಶ್ನೆಯಾಗಿದೆ.

ರಾಜಸ್ಥಾನ್ ವಿರುದ್ಧ ಆಡ್ತಾರೆ

ಮುಂದಿನ ಪಂದ್ಯಕ್ಕೆ ಹಾರ್ದಿಕ್ ಲಭ್ಯತೆಯ ಬಗ್ಗೆ ಮುಂಬೈ ತಂಡ ಬೌಲಿಂಗ್ ಕೋಚ್ ಪಾರಸ್ ಮಾಂಬ್ರೆ ಮಾಹಿತಿ ನೀಡಿದ್ದು, ‘ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಆಡಲಿದ್ದಾರೆ. ಹಾರ್ದಿಕ್ ಗಾಯಗೊಂಡಿಲ್ಲ, ಅವರು ಅಸ್ವಸ್ಥರಾಗಿದ್ದರು. ಈಗ ಹಾರ್ದಿಕ್ ಚೆನ್ನಾಗಿದ್ದಾರೆ. ಹಾರ್ದಿಕ್ ನೆಟ್ಸ್‌ನಲ್ಲಿಯೂ ಅಭ್ಯಾಸ ಮಾಡುತ್ತಿದ್ದಾರೆ’ ಎಂದು ಪಂದ್ಯದ ಮುನ್ನಾದಿನದಂದು ಮಾಂಬ್ರೆ ಮಾಹಿತಿ ನೀಡಿದ್ದಾರೆ. ಮಾಂಬ್ರೆ ನೀಡಿದ ಮಾಹಿತಿಯ ಪ್ರಕಾರ, ಹಾರ್ದಿಕ್ ತಂಡದಲ್ಲಿ ಆಡುವುದು ಖಚಿತವಾಗಿರುವುದರಿಂದ ಅವರೇ ತಂಡವನ್ನು ಮುನ್ನಡೆಸುವುದು ಖಚಿತ.

IPL 2026: ಮುಂಬೈ- ರಾಜಸ್ಥಾನ್ ಪಂದ್ಯ ಯಾವಾಗ ಎಷ್ಟು ಗಂಟೆಗೆ ಆರಂಭ? ಉಚಿತವಾಗಿ ವೀಕ್ಷಿಸುವುದು ಹೇಗೆ?

ಹಾರ್ದಿಕ್ ಐಪಿಎಲ್ ವೃತ್ತಿಜೀವನ

ಹಾರ್ದಿಕ್ ಐಪಿಎಲ್ ಪಂದ್ಯಾವಳಿಯಲ್ಲಿ ಪ್ರಮುಖ ಆಲ್ರೌಂಡರ್‌ಗಳಲ್ಲಿ ಒಬ್ಬರಾಗಿದ್ದಾರೆ. ಹಾರ್ದಿಕ್ 2022 ರಲ್ಲಿ ನಾಯಕನಾಗಿ ಗುಜರಾತ್ ಟೈಟನ್ಸ್ ತಂಡವನ್ನು ಐಪಿಎಲ್ ಟ್ರೋಫಿಗೆ ಮುನ್ನಡೆಸಿದ್ದರು. ಹಾರ್ದಿಕ್ ಈ ಪಂದ್ಯಾವಳಿಯಲ್ಲಿ ಒಟ್ಟು 153 ಪಂದ್ಯಗಳಲ್ಲಿ 2,767 ರನ್ ಗಳಿಸಿದ್ದಾರೆ. ಹಾಗೆಯೇ 79 ವಿಕೆಟ್‌ಗಳನ್ನು ಸಹ ಪಡೆದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಶವವಾಗಿ ಪತ್ತೆಯಾದ ಕಿರುತೆರೆ ನಟಿ ಸುಭಾಷಿಣಿ; ಗಂಡನಿಗೆ ಕೊನೆಯ ವಿಡಿಯೋ ಕಾಲ್

‘ಸನ್ ಟಿವಿ’ಯ ಅತ್ಯಂತ ಜನಪ್ರಿಯ ಧಾರಾವಾಹಿಗಳಲ್ಲಿ ಒಂದಾದ ‘ಕಯಲ್’ (Kayal) ಮೂಲಕ ಮನೆಮಾತಾಗಿದ್ದ ನಟಿ ಸುಭಾಷಿಣಿ ಬಾಲಸುಬ್ರಮಣಿಯಂ ಇಂದು (ಏಪ್ರಿಲ್ 6) ಚೆನ್ನೈನಲ್ಲಿ ನಿಧನರಾಗಿದ್ದಾರೆ. ಉದಯೋನ್ಮುಖ ನಟಿಯ ಹಠಾತ್ ಸಾವು (Subashini Death) ತಮಿಳು ಕಿರುತೆರೆ ಲೋಕಕ್ಕೆ ಮತ್ತು ಅವರ ಅಭಿಮಾನಿಗಳಿಗೆ ತೀವ್ರ ಆಘಾತವನ್ನುಂಟು ಮಾಡಿದೆ. ವರದಿಗಳ ಪ್ರಕಾರ, ಚೆನ್ನೈನ ತಮ್ಮ ನಿವಾಸದಲ್ಲಿ ಸುಭಾಷಿಣಿ (Subashini Balasubramaniyam) ಶವವಾಗಿ ಪತ್ತೆಯಾಗಿದ್ದಾರೆ. ಪ್ರಾಥಮಿಕ ಪೊಲೀಸ್ ತನಿಖೆಯ ಪ್ರಕಾರ ಇದು ಆತ್ಮಹತ್ಯೆ ಎಂದು ಶಂಕಿಸಲಾಗಿದೆ.

ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದಾಗ ನಡೆದ ವೈಯಕ್ತಿಕ ಜಗಳ ಮತ್ತು ಅದರಿಂದ ಉಂಟಾದ ಮಾನಸಿಕ ಸಂಕಟವೇ ಸುಭಾಷಿಣಿ ಅವರ ಈ ದುಡುಕಿನ ನಿರ್ಧಾರಕ್ಕೆ ಕಾರಣವಿರಬಹುದು ಎಂದು ಹೇಳಲಾಗುತ್ತಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ನಟಿಯ ಸಾವಿನಿಂದ ತಮಿಳು ಕಿರುತೆರೆ ಲೋಕದಲ್ಲಿ ಶೋಕ ಮನೆ ಮಾಡಿದೆ.

ಮೂಲತಃ ಶ್ರೀಲಂಕಾದವರಾದ ಸುಭಾಷಿಣಿ, ನಟನೆಯಲ್ಲಿ ಏನಾದರೂ ಸಾಧಿಸಬೇಕೆಂಬ ದೊಡ್ಡ ಕನಸಿನೊಂದಿಗೆ ಚೆನ್ನೈಗೆ ಬಂದಿದ್ದರು. ಆರಂಭದಲ್ಲಿ ಅನೇಕ ಆಡಿಷನ್‌ಗಳು ಮತ್ತು ಸಣ್ಣಪುಟ್ಟ ಪಾತ್ರಗಳಿಗಾಗಿ ಸಾಕಷ್ಟು ಕಷ್ಟಪಟ್ಟಿದ್ದರು. ಸತತ ಪ್ರಯತ್ನದ ಫಲವಾಗಿ ಅವರಿಗೆ ಸನ್ ಟಿವಿಯ ‘ಕಯಲ್’ ಧಾರಾವಾಹಿಯಲ್ಲಿ ನಟಿಸುವ ಅವಕಾಶ ಸಿಕ್ಕಿತು.

‘ಕಯಲ್’ ಧಾರಾವಾಹಿಯ ಪಾತ್ರ ಸುಭಾಷಿಣಿ ಅವರಿಗೆ ದೊಡ್ಡ ಬ್ರೇಕ್ ನೀಡಿತ್ತು. ತಮ್ಮ ಗಮನಾರ್ಹ ನಟನೆಯ ಮೂಲಕ ತಮಿಳು ಕಿರುತೆರೆ ಪ್ರೇಕ್ಷಕರ ಮನೆಮನೆಯಲ್ಲೂ ಗುರುತಿಸಿಕೊಂಡಿದ್ದ ಅವರು, ಭವಿಷ್ಯದಲ್ಲಿ ಸಿನಿಮಾಗಳಲ್ಲೂ ನಟಿಸುವ ಆಶಯ ಹೊಂದಿದ್ದರು. ಅವರ ಅಭಿನಯವು ಪ್ರೇಕ್ಷಕರಿಗೆ ತುಂಬಾ ಇಷ್ಟವಾಗಿತ್ತು. ಆದರೆ ಅವರ ಜೀವನ ದುರಂತ ಅಂತ್ಯ ಕಂಡಿದೆ.

ಇದನ್ನೂ ಓದಿ: ಧಾರಾವಾಹಿ ಶೂಟಿಂಗ್ ವೇಳೆ ಸಮುದ್ರದಲ್ಲಿ ಮುಳುಗಿ ನಟನ ಸಾವು

ಸುಭಾಷಿಣಿ ಬಾಲಸುಬ್ರಮಣಿಯಂ ಅವರ ನಿಧನಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಮತ್ತು ಸಹನಟರು ಕಂಬನಿ ಮಿಡಿದಿದ್ದಾರೆ. ಇದೇ ವೇಳೆ, ಮನರಂಜನಾ ಕ್ಷೇತ್ರದಲ್ಲಿ ಕಲಾವಿದರು ಅನುಭವಿಸುವ ಒತ್ತಡ, ವೈಯಕ್ತಿಕ ಜೀವನದ ಸಮಸ್ಯೆಗಳು ಮತ್ತು ಮಾನಸಿಕ ಆರೋಗ್ಯದ ಕುರಿತು ಮತ್ತೊಮ್ಮೆ ಗಂಭೀರ ಚರ್ಚೆಗಳು ಆರಂಭವಾಗಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ನೋಡನೋಡುತ್ತಲೇ ಬೈಕ್ ಮೇಲೆ ಪಲ್ಟಿಯಾಯ್ತು ಹುಲ್ಲು ತುಂಬಿದ ಟ್ರಾಕ್ಟರ್

ಹೈದರಾಬಾದ್, ಏಪ್ರಿಲ್ 6: ರಸ್ತೆಯಲ್ಲಿ ಓಡಾಡುವಾಗ ಎಷ್ಟು ಎಚ್ಚರ ವಹಿಸಿದರೂ ಕಡಿಮೆಯೇ. ತೆಲಂಗಾಣದ (Telangana) ರಸ್ತೆಯ ಸಿಸಿಟಿವಿಯಲ್ಲಿ ವಿಡಿಯೋವೊಂದು ಸೆರೆಯಾಗಿದ್ದು, ಒಣಗಿದ ಹುಲ್ಲು ತುಂಬಿಸಿಕೊಂಡಿದ್ದ ಟ್ರ್ಯಾಕ್ಟರ್ ಒಂದು ರಸ್ತೆಯ ತಿರುವಿನಲ್ಲಿ ಆಕಸ್ಮಿಕವಾಗಿ ಮಗುಚಿ ಬಿದ್ದಿದೆ. ಈ ವೇಳೆ ಎದುರಿನಿಂದ ಬರುತ್ತಿದ್ದ ಬೈಕ್ ಸವಾರ ಆ ಟ್ರ್ಯಾಕ್ಟರ್ ಅಡಿ ಸಿಲುಕಿಕೊಂಡಿದ್ದಾರೆ. ಓವರ್‌ಲೋಡ್ ಆಗಿದ್ದ ಟ್ರ್ಯಾಕ್ಟರ್ ಉರುಳಿ ಬಿದ್ದಿದ್ದರಿಂದ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿವೆ. ಈ ವಿಡಿಯೋ ರಸ್ತೆ ಸುರಕ್ಷತೆಯ ಬಗ್ಗೆ ಆತಂಕವನ್ನು ಮೂಡಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಮೊಳಗಿದ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ

ಬಾಗಲಕೋಟೆ, (ಏಪ್ರಿಲ್ 06): ಬಾಗಲಕೋಟೆ ಉಪಚುನಾವಣೆ (Bagalkot By Election) ಕದನ ರಂಗೇರಿದ್ದು, ಇಂದು (ಏಪ್ರಿಲ್ 06) ಸಿಎಂ ಸಿದ್ದರಾಮಯ್ಯ ಅವರು ಅಭ್ಯರ್ಥಿ ಉಮೇಶ್ ಮೇಟಿ ಪರ ಭರ್ಜರಿ ಮತಯಾಚನೆ ನಡೆಸಿದರು. ಬಸವೇಶ್ವರ ವೃತ್ತದಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್ ಕೂಗುತ್ತಿದ್ದಂತೆಯೇ ಅಭ್ಯರ್ಥಿ ಉಮೇಶ್ ಮೇಟಿ ತಮ್ಮ ಭಾಷಣವನ್ನು ನಿಲಿಸಿರುವ ಪ್ರಸಂಗ ನಡೆದಿದೆ. ಸಮೀಪದ‌ ಮಸೀದಿ‌ ಒಂದರಿಂದ ಅಝಾನ್ ಆರಂಭವಾಗ್ತಿದ್ದಂತೆ ಉಮೇಶ ಮೇಟಿ ಭಾಷಣ ನಿಲ್ಲಿಸಿದ್ದು, ಬಳಿಕ ಅಝಾನ್ ಮುಗಿಯುತ್ತಿದ್ದಂತೆಯೇ ಮಾತು ಮುಂದುವರೆಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಇಪಿಎಫ್, ಎನ್​ಪಿಎಸ್ ಮತ್ತು ಮ್ಯೂಚುವಲ್ ಫಂಡ್; ರಿಟೈರ್ಮೆಂಟ್ ಪ್ಲಾನಿಂಗ್​ಗೆ ಯಾವುದು ಉತ್ತಮ?

ಭಾರತದಲ್ಲಿ ರಿಟೈರ್ಮೆಂಟ್​ಗೆ ಪ್ಲಾನಿಂಗ್ (Retirement Planning) ಮಾಡುವವರ ಸಂಖ್ಯೆ ಬಹಳ ಕಡಿಮೆ. ಮಧ್ಯ ಮಧ್ಯದಲ್ಲಿ ಬರುವ ಖರ್ಚು ವೆಚ್ಚಗಳಿಗೇ ಎಲ್ಲಾ ಸಂಪಾದನೆ ಸರಿ ಮಾಡಿಕೊಳ್ಳುವುದುಂಟು. ಆಫೀಸ್​ನಲ್ಲಿ ಸಿಗುವ ಇಪಿಎಫ್, ಗ್ರಾಚುಟಿ ಹಣ ನಿವೃತ್ತಿ ನಂತರ ಸಾಕಾಗಬಹುದು ಎಂಬುದು ಬಹಳ ಜನರ ಎಣಿಕೆ. ಆದರೆ, ಇದು ತಪ್ಪು ಎಣಿಕೆ. ಸದ್ಯ ರಿಟೈರ್ಮೆಂಟ್ ಪ್ಲಾನಿಂಗ್​ಗೆ ಮೂರು ರೀತಿಯ ಆಯ್ಕೆಗಳಿವೆ. ಒಂದು, ಇಪಿಎಫ್ ಹಣ. ಎರಡನೆಯದು ಎನ್​ಪಿಎಸ್. ಮೂರನೆಯದು ಮ್ಯೂಚುವಲ್ ಫಂಡ್. ಮೂರನ್ನೂ ಬಳಸಿ ಪ್ಲಾನಿಂಗ್ ಮಾಡಿಕೊಳ್ಳಬಹುದು.

ಇಪಿಎಫ್, ಎನ್​ಪಿಎಸ್ ಮತ್ತು ಮ್ಯೂಚುವಲ್ ಫಂಡ್ ಈ ಮೂರು ಕೂಡ ಬೇರೆ ಬೇರೆ ಪಾತ್ರ, ಸ್ವಭಾವ ಹೊಂದಿವೆ. ಇಪಿಎಫ್​ನಲ್ಲಿ ಸಾಮಾನ್ಯವಾಗಿ ಶೇ. 8ಕ್ಕಿಂತಲೂ ಹೆಚ್ಚು ವಾರ್ಷಿಕ ಬಡ್ಡಿ ಸಿಗುತ್ತದೆ. ಆದರೆ, ಶೇ. 9ರ ಒಳಗೆ ಅದು ಇರುತ್ತದೆ. ಸಂಬಳದ ಜೀವನದಲ್ಲಿರುವವರಿಗೆ ಅದು ಮೂಲಭೂತವಾದ ರಿಟೈರ್ಮೆಂಟ್ ಸ್ಕೀಮ್.

ಇದನ್ನೂ ಓದಿ: ಗೋಲ್ಡ್ ಒಡಿ, ಇದು ಒಡವೆ ಸಾಲಕ್ಕಿಂತ ಎಷ್ಟು ಭಿನ್ನ, ಎಷ್ಟು ಉಪಯುಕ್ತ? ಇಲ್ಲಿದೆ ಮಾಹಿತಿ

ಎನ್​ಪಿಎಸ್ ಅಥವಾ ನ್ಯಾಷನಲ್ ಪೆನ್ಷನ್ ಸ್ಕೀಮ್ ಸ್ವಲ್ಪ ಈಕ್ವಿಟಿ ಕಡೆ ಮುಖ ಮಾಡಿರುವ ಯೋಜನೆ. ಈಕ್ವಿಟಿ, ಬಾಂಡ್, ಗವರ್ನ್ಮೆಂಟ್ ಸೆಕ್ಯೂರಿಟೀಸ್​ಗಳಿಗೆ ಜೋಡಿತವಾಗಿದೆ. ಹೂಡಿಕೆದಾರರಿಗೆ ಆಯ್ಕೆಯಲ್ಲಿ ಫ್ಲೆಕ್ಸಿಬಿಲಿಟಿ ಸ್ವಲ್ಪ ಇರುತ್ತದೆ. ಹೆಚ್ಚು ರಿಸ್ಕ್ ತೆಗೆದುಕೊಳ್ಳುವವರು ಪೂರ್ಣ ಈಕ್ವಿಟಿ ಸ್ಕೀಮ್ ಆಯ್ದುಕೊಳ್ಳಬಹುದು.

ಎನ್​ಪಿಎಸ್​ನಲ್ಲಿರುವ ಹೂಡಿಕೆ ಶೇ. 10ರಿಂದ 14ರಷ್ಟು ಬೆಳೆಯಬಹುದು ಎಂದು ನಿರೀಕ್ಷಿಸಬಹುದು. ಗಮನಿಸಬೇಕಾದ ಸಂಗತಿ ಎಂದರೆ, ರಿಟೈರ್ ಆದಾಗ ಒಟ್ಟಾರೆ ಕಾರ್ಪಸ್​ನಿಂದ ಶೇ. 80ರಷ್ಟನ್ನು ವಿತ್​ಡ್ರಾಯಲ್ ಮಾಡಬಹುದು. ಉಳಿದ ಶೇ. 20ರಷ್ಟನ್ನು ಆ್ಯನುಟಿ ಪ್ಲಾನ್ ಖರೀದಿಗೆ ಬಳಸಬೇಕಾಗುತ್ತದೆ.

ಇದನ್ನೂ ಓದಿ: ಕಮರ್ಷಿಯಲ್ ಬ್ಯಾಂಕ್​ಗಳ ಎಫ್​ಡಿಗಿಂತಲೂ ಹೆಚ್ಚು ರಿಟರ್ನ್ಸ್ ಕೊಡುತ್ತೆ ಈ ಪೋಸ್ಟ್ ಆಫೀಸ್ ಡೆಪಾಸಿಟ್

ಮ್ಯೂಚುವಲ್ ಫಂಡ್​ನಲ್ಲಿ ಸ್ವಾತಂತ್ರ್ಯ

ಮ್ಯೂಚುವಲ್ ಫಂಡ್​ಗಳು ದೀರ್ಘಾವಧಿ ಹೂಡಿಕೆಗೆ ಹೇಳಿ ಮಾಡಿಸಿರುವಂಥವು. ಅದರಲ್ಲೂ ಹೆಚ್ಚಿನ ಈಕ್ವಿಟಿ ಫಂಡ್​ಗಳು ದೀರ್ಘಾವಧಿಯಲ್ಲಿ ಉತ್ತಮ ರಿಟರ್ನ್ಸ್ ಕೊಟ್ಟಿವೆ. ರಿಟೈರ್ಮೆಂಟ್ ಪ್ಲಾನಿಂಗ್​​ಗೆ ಈ ಫಂಡ್​ಗಳು ಬಹಳ ಉಪಯುಕ್ತ ಎನಿಸುತ್ತವೆ. ದೀರ್ಘಾವಧಿಯಲ್ಲಿ ಇವುಗಳು ಸಾಮಾನ್ಯವಾಗಿ ಶೇ. 12ರಿಂದ ಶೇ. 15ರಷ್ಟು ರಿಟರ್ನ್ ಕೊಡಬಲ್ಲುವು. ಅಂತಿಮ ಹಣಕ್ಕೆ ಶೇ. 12.5ರಷ್ಟು ಕ್ಯಾಪಿಟಲ್ ಗೇನ್ ಟ್ಯಾಕ್ಸ್ ಅನ್ವಯ ಆಗುತ್ತದೆ ಎನ್ನುವುದು ಬಿಟ್ಟರೆ ಹೆಚ್ಚಿನ ರಿಟರ್ನ್ಸ್ ನಿಮ್ಮ ಕೈ ಸೇರುತ್ತದೆ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

IPL 2026: ಮುಂಬೈ- ರಾಜಸ್ಥಾನ್ ಪಂದ್ಯ ಯಾವಾಗ ಎಷ್ಟು ಗಂಟೆಗೆ ಆರಂಭ? ಉಚಿತವಾಗಿ ವೀಕ್ಷಿಸುವುದು ಹೇಗೆ?

ಐಪಿಎಲ್ 2026 (IPL 2026) ರ 13 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ (MI vs RR) ತಂಡಗಳು ಪರಸ್ಪರ ಮುಖಾಮುಖಿಯಾಗಲಿವೆ. ಈ ಟೂರ್ನಿಯಲ್ಲಿ ಎರಡೂ ತಂಡಗಳ ಮೂರನೇ ಪಂದ್ಯ ಇದಾಗಿದೆ. ರಾಜಸ್ಥಾನ್ ರಾಯಲ್ಸ್ ತಂಡ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳನ್ನು ಸೋಲಿಸಿ ಸತತ ಎರಡು ಪಂದ್ಯಗಳನ್ನು ಗೆದ್ದು ಬೀಗಿದೆ. ಇತ್ತ ಮುಂಬೈ ಇಂಡಿಯನ್ಸ್ ತನ್ನ ಮೊದಲ ಪಂದ್ಯದಲ್ಲಿ ಕೋಲ್ಕತ್ತಾವನ್ನು ಸೋಲಿಸಿದರೆ, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋಲನ್ನು ಎದುರಿಸಿದೆ. ಹೀಗಾಗಿ ಈ ಪಂದ್ಯ ಉಭಯ ತಂಡಗಳಿಗೂ ಬಹುಮುಖ್ಯವಾಗಿದೆ. ಅದರಲ್ಲೂ ಈ ಸೀಸನ್​ನಲ್ಲಿ ಎರಡೂ ತಂಡಗಳು ಸಾಕಷ್ಟು ಬಲಿಷ್ಠವಾಗಿ ಕಾಣುತ್ತಿರುವುದರಿಂದ ಈ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿದೆ.

ಹೆಡ್ ಟು ಹೆಡ್ ದಾಖಲೆ

ಐಪಿಎಲ್ ಇತಿಹಾಸದಲ್ಲಿ, ಮುಂಬೈ ಇಂಡಿಯನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಐಪಿಎಲ್‌ನ ಮೊದಲ ಸೀಸನ್‌ನಿಂದ ಆಡುತ್ತಿವೆ. ಈ ಎರಡೂ ತಂಡಗಳು 31 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಎರಡೂ ತಂಡಗಳು ಸಮತೋಲಿತ ಪ್ರದರ್ಶನ ನೀಡಿವೆ. ಮುಂಬೈ ಇಂಡಿಯನ್ಸ್ 16 ಬಾರಿ ಗೆದ್ದಿದ್ದರೆ, ರಾಜಸ್ಥಾನ್ ರಾಯಲ್ಸ್ 14 ಬಾರಿ ಗೆದ್ದಿದೆ. ಒಂದು ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಹೀಗಾಗಿ ಈ ಪಂದ್ಯವನ್ನು ಗೆದ್ದು ಮುನ್ನಡೆ ಕಾಯ್ದುಕೊಳ್ಳಲು ಮುಂಬೈ ಪ್ರಯತ್ನಿಸಿದರೆ, ಇತ್ತ ರಾಜಸ್ಥಾನ್ ಈ ಪಂದ್ಯವನ್ನು ಗೆದ್ದು ಅಂತರವನ್ನು ಕಡಿಮೆ ಮಾಡುವ ಇರಾದೆಯಲ್ಲಿದೆ.

ಐಪಿಎಲ್ 2026 ರಲ್ಲಿ ಮುಂಬೈ ಹಾಗೂ ರಾಜಸ್ಥಾನ್ ನಡುವಿನ ಪಂದ್ಯ ಯಾವಾಗ ನಡೆಯಲಿದೆ?

ಐಪಿಎಲ್ 2026 ರಲ್ಲಿ ಮುಂಬೈ ಹಾಗೂ ರಾಜಸ್ಥಾನ್ ನಡುವಿನ ಪಂದ್ಯ ಏಪ್ರಿಲ್ 7 ರಂದು ನಡೆಯಲಿದೆ.

ಐಪಿಎಲ್ 2026 ರಲ್ಲಿ ಮುಂಬೈ ಹಾಗೂ ರಾಜಸ್ಥಾನ್ ನಡುವಿನ ಪಂದ್ಯ ಎಲ್ಲಿ ನಡೆಯಲಿದೆ?

ಐಪಿಎಲ್ 2026 ರಲ್ಲಿ ಮುಂಬೈ ಹಾಗೂ ರಾಜಸ್ಥಾನ್ ನಡುವಿನ ಪಂದ್ಯ ರಾಜಸ್ಥಾನ್ ರಾಯಲ್ಸ್‌ನ ತವರು ಮೈದಾನವಾದ ಗುವಾಹಟಿಯ ಬರ್ಸಪರ ಕ್ರೀಡಾಂಗಣದಲ್ಲಿ ನಡೆಯಲಿದೆ.

ಐಪಿಎಲ್ 2026 ರಲ್ಲಿ ಮುಂಬೈ ಹಾಗೂ ರಾಜಸ್ಥಾನ್ ನಡುವಿನ ಪಂದ್ಯ ಎಷ್ಟು ಗಂಟೆಗೆ ಆರಂಭ?

ಐಪಿಎಲ್ 2026 ರಲ್ಲಿ ಮುಂಬೈ ಹಾಗೂ ರಾಜಸ್ಥಾನ್ ನಡುವಿನ ಪಂದ್ಯ ಭಾರತೀಯ ಕಾಲಮಾನ ಸಂಜೆ 7:30 ಕ್ಕೆ ಪ್ರಾರಂಭವಾಗಲಿದ್ದು, ಟಾಸ್ ಸಂಜೆ 7 ಗಂಟೆಗೆ ನಡೆಯಲಿದೆ.

ಐಪಿಎಲ್ 2026 ರಲ್ಲಿ ಮುಂಬೈ ಹಾಗೂ ರಾಜಸ್ಥಾನ್ ನಡುವಿನ ಪಂದ್ಯವನ್ನು ವೀಕ್ಷಿಸುವುದು ಹೇಗೆ?

ನೀವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಹಾಗೂ ಜಿಯೋ ಹಾಟ್‌ಸ್ಟಾರ್​ನಲ್ಲಿ ಮುಂಬೈ ಹಾಗೂ ರಾಜಸ್ಥಾನ್ ನಡುವಿನ ಪಂದ್ಯವನ್ನು ವೀಕ್ಷಿಸಬಹುದು.

IPL 2026: ಲೀಗ್ ಹಂತದಲ್ಲಿ ಮತ್ತೆ ಮುಖಾಮುಖಿಯಾಗಲ್ಲ ಆರ್​ಸಿಬಿ- ಸಿಎಸ್​ಕೆ..!

ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ 11

ರಾಜಸ್ಥಾನ್ ರಾಯಲ್ಸ್ ಸಂಭಾವ್ಯ ಪ್ಲೇಯಿಂಗ್ XI: ಯಶಸ್ವಿ ಜೈಸ್ವಾಲ್, ವೈಭವ್ ಸೂರ್ಯವಂಶಿ, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರಿಯಾನ್ ಪರಾಗ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ರವೀಂದ್ರ ಜಡೇಜಾ, ಜೋಫ್ರಾ ಆರ್ಚರ್, ನಾಂದ್ರೆ ಬರ್ಗರ್, ತುಮರ್ ದೇಶಪಾಂಡೆ, ಸಂದೀಪ್ ಶರ್ಮಾ, ರವಿ ಬಿಷ್ಣೋಯಿ. ಇಂಪ್ಯಾಕ್ಟ್ ಪ್ಲೇಯರ್: ಡೊನೊವನ್ ಫೆರೇರಾ.

ಮುಂಬೈ ಇಂಡಿಯನ್ಸ್ ಸಂಭಾವ್ಯ ಪ್ಲೇಯಿಂಗ್ XI: ರಿಯಾನ್ ರಿಕೆಲ್ಟನ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಹಾರ್ದಿಕ್ ಪಾಂಡ್ಯ, ನಮನ್ ಧೀರ್, ಶೆರ್ಫೇನ್ ರುದರ್‌ಫೋರ್ಡ್, ಮಿಚೆಲ್ ಸ್ಯಾಂಟ್ನರ್, ಕಾರ್ಬಿನ್ ಬಾಷ್, ದೀಪಕ್ ಚಹಾರ್, ಜಸ್ಪ್ರೀತ್ ಬುಮ್ರಾ. ಇಂಪ್ಯಾಕ್ಟ್ ಪ್ಲೇಯರ್: ಶಾರ್ದೂಲ್ ಠಾಕೂರ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮತ್ತೆ ಸರ್ಕಾರಕ್ಕೆ ಸೆಡ್ಡು ಹೊಡೆಯಲು ಮುಂದಾದ ಸಾರಿಗೆ ನೌಕರರು: ಏ 8ರಂದು ಬಸ್ ಸಂಚಾರ ಡೌಟ್

ಬೆಂಗಳೂರು, ಏಪ್ರಿಲ್ 06: 38 ತಿಂಗಳ ವೇತನ ಹಿಂಬಾಕಿ ‌ಮತ್ತು ಹೊಸ ವೇತನ (Salary Arrears) ಪರಿಷ್ಕರಣೆಗಾಗಿ ಆಗ್ರಹಿಸಿ ಈಗಾಗಲೇ ಸಾರಿಗೆ ನೌಕರರು ಹೋರಾಟಕ್ಕೆ ಮುಂದಾಗಿದ್ದರು. ಆದರೆ ‌ಸರ್ಕಾರ 26 ತಿಂಗಳ ವೇತನ ಹಿಂಬಾಕಿ 2025 ಏಪ್ರಿಲ್​ನಿಂದ ವೇತನ ಪರಿಷ್ಕರಣೆಗೆ ಒಪ್ಪಿಗೆ ನೀಡಿತ್ತು. ಸದ್ಯ ಇದಕ್ಕೆ ಒಪ್ಪದ ಸಾರಿಗೆ ನೌಕರರ ಕೂಟ ಮತ್ತೆ ಹೋರಾಟಕ್ಕೆ ಮುಂದಾಗಿದೆ.

ಚಿತ್ರದುರ್ಗದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್​ವರೆಗೆ ಪಾದಯಾತ್ರೆ

ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ನೀಡಬೇಕಿದ್ದ 38 ವೇತನ ಹಿಂಬಾಕಿ 2024ರಿಂದ ಆಗಬೇಕಿದ್ದ, ಹೊಸ ವೇತನ ಒಪ್ಪಂದಕ್ಕಾಗಿ ಆಗ್ರಹಿಸಿ ಹೋರಾಟಕ್ಕೆ ಮುಂದಾಗಿದ್ದರು. ಆದರೆ ‌ರಾಜ್ಯ ಸರ್ಕಾರ 38 ತಿಂಗಳು ವೇತನ ಹಿಂಬಾಕಿ ಬದಲಿಗೆ 26 ತಿಂಗಳು ವೇತನ ಹಿಂಬಾಕಿ, 2024 ಜನವರಿ ಬದಲಿಗೆ 2025ರ ಏಪ್ರಿಲ್​ನಿಂದ ಹೊಸ ವೇತನ ಒಪ್ಪಂದ ಮಾಡುವುದಾಗಿ ಈಗಾಗಲೇ ಆದೇಶ ಮಾಡಿದೆ. ಆದರೆ ಇದಕ್ಕೆ ಒಪ್ಪದ ಸಾರಿಗೆ ನೌಕರರ ಒಕ್ಕೂಟ ಇಂದು ಸುದ್ದಿಗೋಷ್ಠಿ ನಡೆಸಿ ಯಾವುದೇ ‌ಕಾರಣಕ್ಕೂ ಸರ್ಕಾರದ ಆದೇಶವನ್ನು ನಾವು ಒಪ್ಪುವುದಿಲ್ಲ. ಏಪ್ರಿಲ್​ 8ರಿಂದ ಚಿತ್ರದುರ್ಗದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್​ವರೆಗೆ ಪಾದಯಾತ್ರೆ ಮಾಡುತ್ತೇವೆ ಎಂದು ಸಾರಿಗೆ ನೌಕರರ ಒಕ್ಕೂಟ ಅಧ್ಯಕ್ಷ ಚಂದ್ರಶೇಖರ್ ಹೇಳಿದ್ದಾರೆ.

ಇದನ್ನೂ ಓದಿ: ವೇತನ ಹಿಂಬಾಕಿಗೆ ಡಿಮ್ಯಾಂಡ್​​: ಜ.29ರಂದು ಸಾರಿಗೆ ನೌಕರರ ಪ್ರತಿಭಟನೆ

ಇನ್ನು ಸಾರಿಗೆ ನೌಕರರ ಒಕ್ಕೂಟ 38 ತಿಂಗಳ ವೇತನ ಹಿಂಬಾಕಿ ಮತ್ತು 2024 ಜನವರಿಯಿಂದಲೇ ವೇತನ ಹೆಚ್ಚಳ ಮಾಡಬೇಕೆಂದು ಪಟ್ಟುಹಿಡಿದಿದ್ದಾರೆ. ಈಗಾಗಲೇ ರಾಜ್ಯ ಸರ್ಕಾರ 38 ತಿಂಗಳ ವೇತನ ಹಿಂಬಾಕಿಯಲ್ಲಿ 26 ತಿಂಗಳ ವೇತನ ಹಿ‌ಂಬಾಕಿ 1272 ಕೋಟಿ ರೂ ನೀಡುತ್ತಿದೆ. 2024 ಜನವರಿಯಿಂದ ಆಗಬೇಕಿದ್ದ ಹೊಸ ವೇತನ ಒಪ್ಪಂದವನ್ನು 2025 ಏಪ್ರಿಲ್​ನಿಂದ ಮಾಡಲು ಮುಂದಾಗಿದೆ.

1970 ಕೋಟಿ ರೂ ಹಿಂಬಾಕಿ ಬಿಡುಗಡೆಗೆ ಪಟ್ಟು

ಸರ್ಕಾರದ ಈ ನಿರ್ಧಾರಕ್ಕೆ ಒಪ್ಪದ ಕೆಎಸ್ಆರ್​ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮದ ನೌಕರರು 38 ತಿಂಗಳ ವೇತನ ಹಿಂಬಾಕಿ 1970 ಕೋಟಿ ರೂ ಬಿಡುಗಡೆ ಮಾಡಲೇಬೇಕು ಮತ್ತು 2024 ಜನವರಿಯಿಂದಲೇ ಹೊಸ ವೇತನ ಒಪ್ಪಂದ ಮಾಡಬೇಕೆಂದು ಪಟ್ಟುಹಿಡಿದಿದ್ದಾರೆ. ಈ ನಿಟ್ಟಿನಲ್ಲಿ ಫ್ರೀಡಂ ಪಾರ್ಕ್​ಗೆ ಬಂದು, ಅಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಂತರ ಮುಷ್ಕರಕ್ಕೆ ಹೋಗಬೇಕೆಂದು ಸಾರಿಗೆ ನೌಕರರ ಮುಖಂಡರು ಸಿದ್ಧತೆ ಮಾಡಿಕೊಂಡಿದ್ದಾರೆ. ಅಂದು ಬಸ್​​ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಪ್ರಯಾಣಿಕರು ತಮ್ಮ ಪ್ರಯಾಣವನ್ನು ಮುಂದೂಡುವುದು ಉತ್ತಮ.

ಇದನ್ನೂ ಓದಿ: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ಸಾರಿಗೆ ನೌಕರರ ಹೋರಾಟ: ನಾಳೆಯಿಂದಲೇ ರಾಜ್ಯಾದ್ಯಂತ ಬಸ್ ಸಂಚಾರ ಸ್ಥಗಿತ?

ಒಟ್ಟಿನಲ್ಲಿ ರಾಜ್ಯ ಸರ್ಕಾರ ನೀಡಬೇಕಿದ್ದ 38 ತಿಂಗಳ ಬದಲಿಗೆ 26 ತಿಂಗಳಿನ ವೇತನ ಮತ್ತು 2024 ಜನವರಿ ಬದಲಿಗೆ ‌25 ಏಪ್ರಿಲ್​ನಿಂದ ಹೊಸ ವೇತನ ಪರಿಷ್ಕರಣೆ ಮಾಡುತ್ತೇವೆ ಅಂತಿದ್ದಾರೆ. ಆದರೆ ಇದಕ್ಕೆ ಸಾರಿಗೆ ನೌಕರರು ಒಪ್ಪದೆ ಮತ್ತೆ ಹೋರಾಟಕ್ಕೆ ಮುಂದಾಗಿದ್ದು, ಸರ್ಕಾರ ಯಾವ ನಿರ್ಧಾರ ಕೈಗೊಳ್ಳಲಿದೆ ಎಂದು ‌ಕಾದು ನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಅಮೆರಿಕದ ಕದನವಿರಾಮದ ಪ್ರಸ್ತಾಪಕ್ಕೆ ಒಪ್ಪದ ಇರಾನ್ ಹಾಕಿದ ಷರತ್ತುಗಳಿವು

ಟೆಹ್ರಾನ್, ಏಪ್ರಿಲ್ 6: ಅಮೆರಿಕದ ಕದನ ವಿರಾಮ ಪ್ರಸ್ತಾವನೆಯನ್ನು ಇರಾನ್ (Iran War) ತಿರಸ್ಕರಿಸಿದೆ. ಪಾಕಿಸ್ತಾನದ ಮೂಲಕ ತನ್ನ ಪ್ರತಿಕ್ರಿಯೆಯನ್ನು ಟ್ರಂಪ್​ಗೆ ತಲುಪಿಸಿದೆ. ನಾವು ತಾತ್ಕಾಲಿಕ ಕದನ ವಿರಾಮಕ್ಕೆ ಒಪ್ಪುವುದಿಲ್ಲ. ಈ ಯುದ್ಧಕ್ಕೆ ಶಾಶ್ವತ ಅಂತ್ಯ ಹಾಡಬೇಕಾಗಿದೆ ಎಂದು ಇರಾನ್ ಹೇಳಿದೆ. ಇರಾನ್‌ನ ಉತ್ತರದ ಜೊತೆಗೆ ಅಮೆರಿಕಕ್ಕೆ 10 ಷರತ್ತುಗಳನ್ನು ಕೂಡ ವಿಧಿಸಿದೆ. ಇದು ಮಧ್ಯಪ್ರಾಚ್ಯ ಪ್ರದೇಶದಾದ್ಯಂತದ ಘರ್ಷಣೆಗಳನ್ನು ಕೊನೆಗೊಳಿಸುವ ಬೇಡಿಕೆಗಳು, ಹಾರ್ಮುಜ್ ಜಲಸಂಧಿಯ ಮೂಲಕ ಸುರಕ್ಷಿತ ಮಾರ್ಗವನ್ನು ಖಚಿತಪಡಿಸಿಕೊಳ್ಳಲು ಪ್ರೋಟೋಕಾಲ್‌ಗಳು, ನಿರ್ಬಂಧಗಳನ್ನು ತೆಗೆದುಹಾಕುವುದು ಮತ್ತು ಪುನರ್ ನಿರ್ಮಾಣಕ್ಕಾಗಿ ಷರತ್ತುಗಳನ್ನು ಒಳಗೊಂಡಿದೆ.

ಮಧ್ಯವರ್ತಿಗಳ ಮೂಲಕ ರಾಜತಾಂತ್ರಿಕ ಪ್ರಯತ್ನಗಳು ಮುಂದುವರಿದಂತೆ ಈ ಬೆಳವಣಿಗೆ ನಡೆದಿದೆ. ಪಾಕಿಸ್ತಾನವು ಇರಾನ್ ಮತ್ತು ಅಮೆರಿಕದ ನಡುವೆ ಸಂದೇಶಗಳನ್ನು ರವಾನಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಇಸ್ಲಾಮಿಕ್ ರಿಪಬ್ಲಿಕ್ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.

ಇದನ್ನೂ ಓದಿ: ಇರಾನ್ ಮತ್ತು ಅಮೆರಿಕ ನಡುವೆ 45 ದಿನಗಳ ಕದನ ವಿರಾಮಕ್ಕೆ ಪಾಕ್ ಯತ್ನ

ಇರಾನ್ ಜೊತೆ 45 ದಿನಗಳ ಕದನ ವಿರಾಮದ ಪ್ರಸ್ತಾವನೆಯು ಪರಿಗಣನೆಯಲ್ಲಿದೆ ಎಂದು ಅಮೆರಿಕ ದೃಢಪಡಿಸಿದ ಸ್ವಲ್ಪ ಸಮಯದ ನಂತರ ಈ ಬೆಳವಣಿಗೆ ಸಂಭವಿಸಿದೆ. ಆದರೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅದನ್ನು ಅನುಮೋದಿಸಿಲ್ಲ, ಮಿಲಿಟರಿ ಕಾರ್ಯಾಚರಣೆಗಳು ಕೂಡ ಮುಂದುವರೆದಿವೆ.

ಫೆಬ್ರವರಿ 28ರಂದು ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ ನಡೆಸಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರನ್ನು ಕೊಂದ ನಂತರ ಪ್ರಾರಂಭವಾದ ಈ ಯುದ್ಧವು ಮಧ್ಯಪ್ರಾಚ್ಯವನ್ನು ಆವರಿಸಿದೆ. ಈ ಯುದ್ಧ ಜಾಗತಿಕ ಆರ್ಥಿಕತೆಯ ಮೇಲೆ ಪರಿಣಾಮ ಬೀರಿದೆ. ಹಾರ್ಮುಜ್ ಜಲಸಂಧಿಯ ಮೇಲಿನ ಇರಾನ್‌ನ ವಾಸ್ತವ ದಿಗ್ಬಂಧನವು ತೈಲ ಮತ್ತು ಅನಿಲ ಬೆಲೆಗಳನ್ನು ಗಗನಕ್ಕೇರಿಸಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

Exit mobile version