ಮಾಘ ಮಾಸ ಹುಣ್ಣಿಮೆ: ಟಿ ನರಸೀಪುರದ ಕಾವೇರಿ ನದಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತರ ದಂಡು – Kannada News | Magha Purnima: Devotees Throng Triveni Sangama at T Narsipur for Holy Dip
ಮೈಸೂರು, ಫೆಬ್ರವರಿ 1: ಟಿ. ನರಸೀಪುರದಲ್ಲಿರುವ ಪವಿತ್ರ ತ್ರಿವೇಣಿ ಸಂಗಮದಲ್ಲಿ ಮಾಘ ಮಾಸ ಹುಣ್ಣಿಮೆಯ ಪುಣ್ಯಸ್ನಾನಕ್ಕೆ ಅಪಾರ ಸಂಖ್ಯೆಯ ಭಕ್ತರು ಆಗಮಿಸಿದ್ದಾರೆ. ಕಾವೇರಿ, ಕಬಿನಿ ಮತ್ತು ಕಪಿಲಾ ನದಿಗಳು ಸೇರುವ ಈ ಸಂಗಮ ಸ್ಥಳದಲ್ಲಿ ಸ್ನಾನ ಮಾಡಿದರೆ ಪಾಪಗಳು ಕಳೆಯುತ್ತವೆ ಎಂಬ ನಂಬಿಕೆ ಭಕ್ತರಲ್ಲಿದೆ. ಪ್ರತಿ ವರ್ಷದಂತೆ ಈ ಬಾರಿಯೂ, ಮಧ್ಯರಾತ್ರಿಯಿಂದಲೇ ಸಹಸ್ರಾರು ಭಕ್ತರು ಸಂಗಮ ಸ್ಥಳದಲ್ಲಿ ಪವಿತ್ರ ಸ್ನಾನ ಕೈಗೊಂಡರು. ಪುಣ್ಯಸ್ನಾನದ ನಂತರ, ಭಕ್ತರು ಸಮೀಪದಲ್ಲಿರುವ ಐತಿಹಾಸಿಕ ಗುಂಜಾ ನರಸಿಂಹಸ್ವಾಮಿ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ…