Headlines

Tirumala Laddus: ದಾಖಲೆ ಬರೆದ ಶ್ರೀವಾರಿ ಪ್ರಸಾದ; ಮೇ ತಿಂಗಳಲ್ಲಿ 1.21 ಕೋಟಿಗೂ ಅಧಿಕ ತಿರುಪತಿ ಲಡ್ಡು ಮಾರಾಟ! – Kannada News

ದಾಖಲೆ ಬರೆದ ಶ್ರೀವಾರಿ ಪ್ರಸಾದImage Credit source: Pinterest ತಿರುಮಲ: ಕಲಿಯುಗದ ಪ್ರತ್ಯಕ್ಷ ದೈವ, ವೆಂಕಟೇಶ್ವರ ಸ್ವಾಮಿಯ ಪರಮ ಪವಿತ್ರ ಪ್ರಸಾದವಾದ ‘ತಿರುಮಲ ತಿರುಪತಿ ಲಡ್ಡು’ ಇದೀಗ ಹೊಸ ಇತಿಹಾಸ ಸೃಷ್ಟಿಸಿದೆ. ಪ್ರಪಂಚದಾದ್ಯಂತದ ಕೋಟ್ಯಂತರ ಭಕ್ತರ ಪಾಲಿಗೆ ಕೇವಲ ಪ್ರಸಾದವಾಗಿರದೆ, ಮಹಾ ದೈವಿಕ ಶಕ್ತಿಯ ಸಂಕೇತವಾಗಿರುವ ಶ್ರೀವಾರಿ ಲಡ್ಡು ಮಾರಾಟವು ಈ ವರ್ಷದ (2026) ಮೇ ತಿಂಗಳಲ್ಲಿ ಗರಿಷ್ಠ ಮಟ್ಟವನ್ನು ತಲುಪಿದೆ ಎಂದು ತಿರುಮಲ ತಿರುಪತಿ ದೇವಸ್ಥಾನಂ (TTD) ಅಧಿಕೃತವಾಗಿ ಘೋಷಿಸಿದೆ. ದಾಖಲೆ ಬರೆದ ಮೇ ತಿಂಗಳ…

Read More

ತಂತ್ರಜ್ಞಾನದ ಸವಾಲಿಗೆ ಕಾರ್ಮಿಕನ ‘ವಿಗ್’ ಎಂಬ ಜಾಣ್ಮೆಯ ಉತ್ತರ: ಸಾಫ್ಟ್‌ವೇರ್ ಅಪ್‌ಡೇಟ್‌ಗೆ ದಾರೀದೀಪವಾದ ಘಟನೆ – Kannada News

ತೆಲಂಗಾಣ, ಜೂನ್ 04: ಗ್ರಾಮೀಣ ಭಾಗದ ಆರ್ಥಿಕತೆಗೆ ಬೆನ್ನೆಲುಬಾಗಿರುವ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಪಾರದರ್ಶಕತೆ ತರಲು ಜಾರಿಗೆಗೊಳಿಸಲಾದ ಮುಖ ಗುರುತಿಸುವಿಕೆ (Face Recognition) ತಂತ್ರಜ್ಞಾನವು, ಇತ್ತೀಚೆಗೆ ಕಾರ್ಮಿಕರೊಬ್ಬರ ಅದ್ಭುತ ಸಮಯಪ್ರಜ್ಞೆ ಮತ್ತು ಜಾಣ್ಮೆಗೆ ಸಾಕ್ಷಿಯಾಗಿದೆ. ತಾಂತ್ರಿಕ ಸವಾಲೊಂದನ್ನು ತಮ್ಮದೇ ಆದ ವಿಶಿಷ್ಟ ಶೈಲಿಯಲ್ಲಿ ಯಶಸ್ವಿಯಾಗಿ ಎದುರಿಸಿದ ಕಾರ್ಮಿಕರ ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಕಾರಾತ್ಮಕ ಚರ್ಚೆ ಮತ್ತು ಮೆಚ್ಚುಗೆಗೆ ಪಾತ್ರವಾಗಿದೆ. ಭಕ್ತಿ ಮತ್ತು ತಂತ್ರಜ್ಞಾನದ ಜುಗಲ್ಬಂದಿ ವೀರ್ಣಪಲ್ಲಿ ಮಂಡಲದ…

Read More

ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಅರ್ಜಿ ಸಲ್ಲಿಕೆ ಹೇಗೆ? ಏನೇನು ದಾಖಲೆಗಳು ಬೇಕು? ಇಲ್ಲಿದೆ ವಿವರ – Kannada News

ಬಿಎಂಟಿಸಿ ಬಸ್ (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಜೂನ್ 4: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಡಿಕೆ ಶಿವಕುಮಾರ್ (DK Shivakumar) ವಿದ್ಯಾರ್ಥಿ ಸಮೂಹಕ್ಕೆ ಭರ್ಜರಿ ಕೊಡುಗೆ ನೀಡಿದ್ದಾರೆ. ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ‘ಉಚಿತ ಬಸ್ ಪಾಸ್’ ನೀಡುವುದಾಗಿ ಮುಖ್ಯಮಂತ್ರಿಗಳು ಮಹತ್ತರ ಘೋಷಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ವ್ಯಾಪ್ತಿಯಲ್ಲಿ ಸದ್ಯ ಪಾಸ್ ಪಡೆಯಲು ಇರುವ ನಿಯಮಗಳು, ಪ್ರಸ್ತುತ ಇರುವ ದರ ಪಟ್ಟಿ ಹಾಗೂ ಇನ್ನು…

Read More

ಅಮೆರಿಕನ್ನರ ಮನಗೆದ್ದ ನಮ್ಮ ಹೆಮ್ಮೆಯ ಬೆಂಗಳೂರು!: ಊರಿಗೆ ಹೋಗಲ್ಲ ಎಂದು ಹಠ ಹಿಡಿದ ವಿದೇಶಿ ಮಕ್ಕಳು – Kannada News

ಬೆಂಗಳೂರು, ಜೂ.4: ಟ್ರಾಫಿಕ್, ಕಸದ ಸಮಸ್ಯೆ ಎಂದು ಬೆಂಗಳೂರನ್ನು ಸದಾ ಟೀಕಿಸುವವರ ನಡುವೆ, ಅಮೆರಿಕದ ಪ್ರವಾಸಿಯೊಬ್ಬರು ನಮ್ಮ ಸಿಲಿಕಾನ್ ಸಿಟಿಯ ಜನತೆ, ಸಂಸ್ಕೃತಿ ಮತ್ತು ಆತಿಥ್ಯವನ್ನು ಕೊಂಡಾಡಿ ಬರೆದಿರುವ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡಿಗರ ಹೃದಯ ಗೆದ್ದಿದೆ. 5 ತಿಂಗಳ ಕಾಲ ಬೆಂಗಳೂರಿನಲ್ಲಿ ವಾಸವಿದ್ದ ಅಮೆರಿಕದ ಕುಟುಂಬವೊಂದು, “ನಮ್ಮ ಮಕ್ಕಳಿಗೆ ಇಲ್ಲಿಂದ ವಾಪಸ್ ಸ್ವದೇಶಕ್ಕೆ ಹೋಗಲು ಮನಸ್ಸಿಲ್ಲ, ಬೆಂಗಳೂರಿಗೆ ನಮ್ಮ ಕಡೆಯಿಂದ 5 ಸ್ಟಾರ್ ರೇಟಿಂಗ್!” ಎಂದು ಹೆಮ್ಮೆಯಿಂದ ಹೇಳಿಕೊಂಡಿದೆ. ರೆಡ್ಡಿಟ್​​ನಲ್ಲಿ ‘ಥ್ಯಾಂಕ್ಸ್ ಬೆಂಗಳೂರು’ (Thanks Bangalore)…

Read More

Video: ಬೆಳಗ್ಗೆಯಿಂದ ರಾತ್ರಿ ತನಕ ಬ್ಯುಸಿ, ಆದ್ರೂ ಲೈಫ್‌ನಲ್ಲಿ ಫುಲ್‌ ಹ್ಯಾಪಿ; ಈ ಯುವಕನ ಬ್ಯುಸಿ ಶೆಡ್ಯೂಲ್ ಹೇಗಿದೆ ನೋಡಿ – Kannada News

ನಮ್ಮಲ್ಲಿ ಯಾರನ್ನಾದ್ರೂ ಕೇಳಿದ್ರೆ ಕೆಲಸಕ್ಕೆ (Office) ಹೋಗಿ ಬಂದು ಸುಸ್ತು ಆಗುತ್ತದೆ. ಆಫೀಸ್‌ಗೆ ಹೋಗಿ ಬರುವಷ್ಟರಲ್ಲಿ ಟೈಮ್ ಆಗಿ ಬಿಡುತ್ತದೆ. ಮನೆಗೆ ಬಂದು ಮಲಗಿದ್ರೆ ಸಾಕು ಎಂದು ಹೇಳುವವರೇ ಹೆಚ್ಚು. ಇದೆಲ್ಲದರ ನಡುವೆ ಈ ಯುವಕನ ಬಿಡುವಿಲ್ಲದ ಕೆಲಸ ನೋಡಿದ್ರೆ ನೀವು ಶಾಕ್ ಆಗ್ತೀರಾ. ಈ ಎನರ್ಜಿಟಿಕ್ ಯುವಕನ ಹೆಸರು ದೀಪಕ್ ಪಾಂಡೆ (Deepak Pandey). ಬೆಳಗ್ಗೆ 9 ರಿಂದ 5 ಗಂಟೆ ತನಕ ಆಫೀಸ್ ಕೆಲಸ. ಸಂಜೆ ಆಫೀಸ್‌ ಮುಗಿಸಿ ಬಂದು ರಾತ್ರಿ 11 ಗಂಟೆವರೆಗೆ…

Read More

ಜಮೀರ್ ಅಹ್ಮದ್​ಗೆ ಡಿಕೆ ಶಿವಕುಮಾರ್ ಸಂಪುಟದಲ್ಲಿ ಮುಂದೆಯೂ ಸ್ಥಾನ ಸಿಗೋದು ಅನುಮಾನ! – Kannada News

ಬೆಂಗಳೂರು, ಜೂನ್ 4: ಸಿದ್ದರಾಮಯ್ಯ ಸರ್ಕಾರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಪ್ರಭಾವಿ ಮುಖವಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ ಜಮೀರ್ ಅಹ್ಮದ್ ಖಾನ್​ಗೆ (Zameer Ahmed Khan) ಡಿಕೆ ಶಿವಕುಮಾರ್ (DK Shivakumar) ನೂತನ ಸಂಪುಟದಲ್ಲಿ ಮೊದಲ ಅವಕಾಶ ಕೈತಪ್ಪಿದೆ. ಸಚಿವ ಸಂಪುಟ ವಿಸ್ತರಣೆ ವೇಳೆಯೂ ಸ್ಥಾನ ತಪ್ಪುವ ಸಾಧ್ಯತೆ ದಟ್ಟವಾಗಿದೆ. ಮುಂದಿನ ದಿನಗಳಲ್ಲೂ ಕಾಂಗ್ರೆಸ್ 2.0 ಸರ್ಕಾರದಲ್ಲಿ ಜಮೀರ್​​ಗೆ ಸಚಿವ ಸ್ಥಾನ ಸಿಗುವ ಸಾಧ್ಯತೆಗಳು ಕ್ಷೀಣಿಸಿವೆ ಎಂದು ಉನ್ನತ ಮೂಲಗಳು ತಿಳಿಸಿವೆ. ದಾವಣಗೆರೆ ದಕ್ಷಿಣ ಉಪಚುನಾವಣೆಯ ವೇಳೆ ಉಂಟಾದ…

Read More

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ – Kannada News

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸಂಸ್ಥಾಪಕ ಮತ್ತು ಮೊದಲ ಅಧ್ಯಕ್ಷ ಲಲಿತ್ ಮೋದಿ ಅವರು 2010ರ ಕೊಚ್ಚಿ ಟಸ್ಕರ್ಸ್ ಕೇರಳ ಫ್ರಾಂಚೈಸಿ ವಿವಾದಕ್ಕೆ ಸಂಬಂಧಿಸಿದಂತೆ ದಶಕದ ಬಳಿಕ ಸ್ಫೋಟಕ ಆರೋಪಗಳನ್ನು ಮಾಡಿದ್ದಾರೆ. ಅಂದಿನ ಯುಪಿಎ ಸರ್ಕಾರದ ಪ್ರಮುಖ ನಾಯಕರು ಮತ್ತು ಬಿಸಿಸಿಐ ಉನ್ನತ ಅಧಿಕಾರಿಗಳು ತಮ್ಮ ಮೇಲೆ ಒತ್ತಡ ಹೇರಿದ್ದರು ಎಂದು ಲಲಿತ್ ಮೋದಿ ಬಹಿರಂಗಪಡಿಸಿದ್ದಾರೆ. ಸೋನಿಯಾ ಗಾಂಧಿ ಬೆಂಬಲ, ನಾಯಕರಿಂದ ಕರೆಗಳು ಸಂದರ್ಶನವೊಂದರಲ್ಲಿ ಅಂದಿನ ಘಟನಾವಳಿಗಳನ್ನು ನೆನಪಿಸಿಕೊಂಡಿರುವ ಲಲಿತ್ ಮೋದಿ, ‘ಅಂದು ಶಶಿ ತರೂರ್ ಅವರಿಗೆ…

Read More

ಭಾರತದ ವಾಯುಸೇನಾ ಬಲದ ಕೊರತೆ ನೀಗಿಸಲಿರುವ 114 ರಫೇಲ್ ಯುದ್ಧವಿಮಾನಗಳು – Kannada News

ನವದೆಹಲಿ, ಜೂನ್ 4: ಭಾರತವು ಫ್ರಾನ್ಸ್‌ನಿಂದ ಸುಮಾರು ₹3.25 ಲಕ್ಷ ಕೋಟಿ ಮೌಲ್ಯದ ಒಪ್ಪಂದದಲ್ಲಿ 114 ದಸ್ಸಾಲ್ಟ್ ರಫೇಲ್ (Dassault Rafale) ಯುದ್ಧವಿಮಾನಗಳನ್ನು ಖರೀದಿಸುವ ವಿನಂತಿಯನ್ನು ಅಂತಿಮಗೊಳಿಸಿದೆ. ಈ ಕುರಿತ ಅಧಿಕೃತ ವಿನಂತಿ ಪತ್ರವನ್ನು (Letter of Request – LoR) ಶೀಘ್ರದಲ್ಲೇ ಕಳುಹಿಸಲಾಗುವುದು. ಇದು ಉಭಯ ದೇಶಗಳ ನಡುವೆ ಅಧಿಕೃತ ಮಾತುಕತೆಗೆ ನಾಂದಿ ಹಾಡಲಿದೆ. ಇದು ಭಾರತದ ಇತಿಹಾಸದಲ್ಲೇ ಅತಿ ದೊಡ್ಡ ಯುದ್ಧವಿಮಾನ ಖರೀದಿ ಒಪ್ಪಂದವಾಗುವ ಸಾಧ್ಯತೆಯಿದೆ. ಭಾರತೀಯ ವಾಯುಸೇನೆಯ ಮುಖ್ಯಸ್ಥರಾದ (Air Chief Marshal)…

Read More

ಅಬುಧಾಬಿಯ ಬಿಎಪಿಎಸ್ ಹಿಂದೂ ಮಂದಿರಕ್ಕೆ ಪ್ರತಿಷ್ಠಿತ ‘ಟಾಲರೆನ್ಸ್​ ಪ್ರಶಸ್ತಿ’ಯ ಗರಿ – Kannada News

ಅಬುಧಾಬಿ, ಜೂನ್ 04: ಯುಎಇ (UAE) ರಾಜಧಾನಿ ಅಬುಧಾಬಿಯಲ್ಲಿರುವ ಪ್ರಸಿದ್ಧ ಬಿಎಪಿಎಸ್ (BAPS) ಹಿಂದೂ ಮಂದಿರಕ್ಕೆ ಅಂತಾರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ “ ಟಾಲರೆನ್ಸ್​ ಪ್ರಶಸ್ತಿ 2026” (Tolerance Award 2026) ಒಲಿದು ಬಂದಿದೆ. ಜಾಗತಿಕವಾಗಿ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಶಾಂತಿಯುತ ಸಹಬಾಳ್ವೆಯನ್ನು ಉತ್ತೇಜಿಸುವಲ್ಲಿ ಮಂದಿರ ನೀಡುತ್ತಿರುವ ಮಹತ್ತರ ಕೊಡುಗೆಯನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ. ಇತ್ತೀಚೆಗೆ ನಡೆದ ‘ಥರ್ಡ್​ ಇಂಟರ್​ನ್ಯಾಷನಲ್ ಡೈಲಾಗ್ ಆಫ್ ಸಿಲಿಲೈಸೇಷನ್ ಆ್ಯಂಡ್ ಟಾಲರೆನ್ಸ್​ ಕಾನ್ಫರೆನ್ಸ್​(IDCT 2026)ನಲ್ಲಿ ಈ ಪ್ರಶಸ್ತಿಯನ್ನು ಅಧಿಕೃತವಾಗಿ ಪ್ರಕಟಿಸಲಾಯಿತು….

Read More

ಕೆಪಿಸಿಸಿ ಅಧ್ಯಕ್ಷ ಸ್ಥಾನ ಸತೀಶ್​​ ಕೈತಪ್ಪಿದ್ಯಾಕೆ? ಜಾರಕಿಹೊಳಿ ಲೆಕ್ಕಾಚಾರ ತಪ್ಪಿದ್ದೇಗೆ?: ಇಲ್ಲಿದೆ ಮಾಹಿತಿ – Kannada News

ಕೆಪಿಸಿಸಿ ಅಧ್ಯಕ್ಷ ಸ್ಥಾನ ಸತೀಶ್​​ ಕೈತಪ್ಪಿದ್ಯಾಕೆ?Image Credit source: Tv9 Kannada ಬೆಂಗಳೂರು, ಜೂನ್​​ 04: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ (DK Shivakumar)​​ ರಾಜೀನಾಮೆ ಬೆನ್ನಲ್ಲೇ ಪಕ್ಷದ ನೂತನ ಸಾರಥಿಯಾಗಿ ಪರಿಷತ್​​ ಸದಸ್ಯ ಬಿ.ಕೆ. ಹರಿಪ್ರಸಾದ್​ ಅವರನ್ನು ಎಐಸಿಸಿ ಘೋಷಣೆ ಮಾಡಿದೆ. ಅಷ್ಟಕ್ಕೂ ಹರಿಪ್ರಸಾದ್​​ ಹೆಸರು ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್​​ಗೆ ಆದ ಸರ್ಪ್ರೈಸ್​​ ಎಂಟ್ರಿಯಾಗಿತ್ತು. ಅಲ್ಲಿಯವರೆಗೂ ಸತೀಶ್​​ ಜಾರಕಿಹೊಳಿ ಹೆಸರೇ ಮುಂಚೂಣಿಯಲ್ಲಿತ್ತು, ಅವರಿಗೇ ಪಟ್ಟ ಎಂಬದೂ ಬಹುತೇಕ ಫೈನಲ್​​ ಆಗಿತ್ತು. ಆದರೆ ಕೊನೇ…

Read More