Headlines

ತುಮಕೂರು: ಸಾರ್ವಜನಿಕರಿಗೆ ಬಿತ್ತು ತೆರಿಗೆ ಬರೆ; ಪಾಲಿಕೆಯ ಹೊಸ ನೀತಿಗೆ ಜನ ಕಂಗಾಲು

ತುಮಕೂರು, ಏಪ್ರಿಲ್​ 06: ಸದ್ಯ ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದ ಹೊಡೆತ ಎಲ್ಲೆಡೆ ತಟ್ಟಿದೆ. ಅನಿಲ ಅಭಾವದಿಂದ ಜನ ತತ್ತರಿಸಿದ್ದಾರೆ. ಅತ್ತ ಅಡುಗೆ ಅನಿಲ ಕೊರತೆ ಉಂಟಾದರೆ, ಇತ್ತ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗಿದೆ. ಇದರ ಮಧ್ಯೆ ಮುಂದೇನಾಗುತ್ತೋ ಎಂಬ ಆತಂಕದಲ್ಲಿರುವ ತುಮಕೂರು (tumakuru) ನಗರದ ಜನರಿಗೆ ಪಾಲಿಕೆ ಈಗ ಶಾಕ್ ಕೊಟ್ಟಿದೆ. ತುಮಕೂರು ಮಹಾನಗರ ಪಾಲಿಕೆ ತೆರಿಗೆ ದರವನ್ನು (tax hike) ದಿಢೀರ್ ಏರಿಕೆ ಮಾಡಿದೆ. ಯುಜಿಡಿ, ನೀರಿನ ತೆರಿಗೆ ಸೇರಿದಂತೆ ಹಲವು…

Read More

ಈ ದೇವಸ್ಥಾನದಲ್ಲಿ ಪ್ರಸಾದವಾಗಿ ನೂಡಲ್ಸ್, ಪಿಜ್ಜಾ ಕೊಡ್ತಾರೆ!

ಕೊಲ್ಕತ್ತಾ, ಏಪ್ರಿಲ್ 6: ಭಾರತೀಯ ಭಕ್ತಿ, ಚೀನಾದ ಸಂಪ್ರದಾಯದ ಸಂಗಮವಾಗಿರುವ ಕೊಲ್ಕತ್ತಾದ ‘ಚೀನಾ ಕಾಳಿ ದೇವಸ್ಥಾನ’ದಲ್ಲಿ ಪಿಜ್ಜಾ ಮತ್ತು ನೂಡಲ್ಸ್​ ಅನ್ನೇ ಪ್ರಸಾದವಾಗಿ ನೀಡಲಾಗುತ್ತದೆ. ಹಲವು ದಶಕಗಳ ಹಿಂದೆ ಚೀನಾದಿಂದ ಇಲ್ಲಿ ನೆಲೆಸಿ ಬಂಗಾಳಿ ಸಂಸ್ಕೃತಿಯನ್ನು ಸ್ವೀಕರಿಸಿದವರು ಈ ದೇವಾಲಯವನ್ನು (Kali Temple) ನಿರ್ಮಿಸಿದರು. ಈ ಮಂದಿರ ವೈವಿಧ್ಯತೆಯಲ್ಲಿ ಏಕತೆಗೆ ಸಾಕ್ಷಿಯಾಗಿದೆ. ನೂಡಲ್ಸ್ ಮತ್ತು ಸೂಪ್ ಅನ್ನು ನೈವೇದ್ಯವಾಗಿ ನೀಡುವ ಈ ವಿಚಿತ್ರ ಪದ್ಧತಿಯ ಹಿಂದಿನ ವಿಷಯಗಳ ಕುರಿತಾದ ಮಾಹಿತಿ ಇಲ್ಲಿದೆ. ಸಾಮಾನ್ಯವಾಗಿ ನಾವು ದೇವಸ್ಥಾನಗಳಿಗೆ ಹೋದಾಗ…

Read More

‘ಭೂತ್ ಬಂಗ್ಲ’ ಟ್ರೇಲರ್: ಮತ್ತದೇ ಹಳೇ ಕಥೆ ಹೇಳುತ್ತಾರಾ ಅಕ್ಷಯ್ ಕುಮಾರ್?

ಬಾಲಿವುಡ್‌ನ ಯಶಸ್ವಿ ಜೋಡಿಗಳಲ್ಲೊಂದಾದ ನಟ ಅಕ್ಷಯ್ ಕುಮಾರ್ (Akshay Kumar) ಮತ್ತು ನಿರ್ದೇಶಕ ಪ್ರಿಯದರ್ಶನ್ ಅವರು ದೀರ್ಘಕಾಲದ ನಂತರ ಮತ್ತೆ ಒಂದಾಗಿದ್ದಾರೆ. ಅವರಿಬ್ಬರ ಕಾಂಬಿನೇಷನ್​ನಲ್ಲಿ ಬಹುನಿರೀಕ್ಷಿತ ಹಾರರ್ ಕಾಮಿಡಿ ಸಿನಿಮಾ ‘ಭೂತ್ ಬಂಗ್ಲ’ (Bhooth Bangla) ಸಿದ್ಧವಾಗಿದೆ. ಈಗ ಈ ಚಿತ್ರದ ಟ್ರೇಲರ್ (Bhooth Bangla Trailer) ಬಿಡುಗಡೆ ಆಗಿದ್ದು, ಸಿನಿರಸಿಕರಲ್ಲಿ ಹಳೆಯ ನೆನಪುಗಳನ್ನು ಮರುಕಳಿಸುವಂತೆ ಮಾಡಿದೆ. ಏಪ್ರಿಲ್ 16ರಂದು ಈ ಚಿತ್ರ ವಿಶ್ವಾದ್ಯಂತ ತೆರೆಕಾಣಲಿದೆ. ಹಾರರ್ ಕಾಮಿಡಿ ಕಥಾಹಂದರ ಇರುವ ಈ ಸಿನಿಮಾ ಹೇಗಿದೆ ಎಂಬುದರ…

Read More

ತಂದೆ-ಮಗನ ಲಾಕಪ್ ಡೆತ್ ಪ್ರಕರಣ; ತಮಿಳುನಾಡಿನ 9 ಪೊಲೀಸರಿಗೆ ಮರಣದಂಡನೆ

ಚೆನ್ನೈ, ಏಪ್ರಿಲ್ 6: 2020ರಲ್ಲಿ ಕೊರೊನಾ (Covid-19) ಅವಧಿಯಲ್ಲಿ ರಾತ್ರಿಯಿಡೀ ಅಂಗಡಿ ತೆರೆದಿದ್ದರು ಎಂಬ ಕಾರಣಕ್ಕೆ ತಮಿಳುನಾಡಿನ (Tamil Nadu) ತೂತುಕುಡಿ ಜಿಲ್ಲೆಯ ಸಾಥನ್‌ಕುಲಂನಲ್ಲಿ ಅಂಗಡಿ ಮಾಲೀಕ ಜಯರಾಜ್ ಮತ್ತು ಅವರ ಮಗ ಬೆನ್ನಿಕ್ಸ್ ಅವರನ್ನು ಸಾಥನ್‌ಕುಲಂ ಪೊಲೀಸರು ಕ್ರೂರವಾಗಿ ಥಳಿಸಿದ್ದರು. ಕಸ್ಟಡಿಯಲ್ಲಿದ್ದಾಗ ಅವರಿಗೆ ಚಿತ್ರಹಿಂಸೆ ನೀಡಿದ್ದರಿಂದ ಅವರಿಬ್ಬರೂ ಪೊಲೀಸ್ ಠಾಣೆಯಲ್ಲೇ ಮೃತಪಟ್ಟಿದ್ದರು. ಇದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಬಳಿಕ ಈ ಪ್ರಕರಣದ ತನಿಖೆಯನ್ನು ಸರ್ಕಾರ ಸಿಬಿಐಗೆ ವಹಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಮಗ್ರ ತನಿಖೆ…

Read More

ಬಂಡೀಪುರ ಸಫಾರಿ ವಿರುದ್ಧ ಮತ್ತೆ ಸಿಡಿದೆದ್ದ ರೈತರು: ನಾಳೆಯಿಂದ ಆಮರಣಾಂತ ಧರಣಿ, ಕಾರಣವೇನು?

ಚಾಮರಾಜನಗರ, ಏಪ್ರಿಲ್ 06: ಭಾರಿ ವಿರೋಧದ ನಡುವೆಯೂ ಬಂಡೀಪುರ ಸಫಾರಿಯನ್ನ (Bandipur Safari) ಸರ್ಕಾರ ರೀ ಓಪನ್ ಮಾಡಿತ್ತು. ಇದೀಗ ಸಫಾರಿ ಆರಂಭವಾದ ಬೆನ್ನಲ್ಲೇ ಮತ್ತೆ ಮಾನವ ಮತ್ತು ಕಾಡು ಪ್ರಾಣಿ ಸಂಘರ್ಷ ಹೆಚ್ಚಾಗಿದೆ. ಹೀಗಾಗಿ ಸರ್ಕಾರ ತೆಗೆದುಕೊಂಡಿರುವ ನಿರ್ಧಾರದ ವಿರುದ್ಧ ಸಿಡಿದೆದ್ದಿರುವ ರೈತರು ಸಫಾರಿ ಬಂದ್​​ಗೆ ಆಗ್ರಹಿಸಿ ನಾಳೆಯಿಂದ ಅಂದರೆ ಏಪ್ರಿಲ್​ 07ರಿಂದ ಆಮರಣಾಂತ ಧರಣಿಗೆ ಸಜ್ಜಾಗಿದ್ದಾರೆ. ಪ್ರತಿ ತಾಲೂಕಿನಲ್ಲಿ ಧರಣಿ ಕಳೆದೊಂದು ವರ್ಷದಿಂದ ಮಾನವ ಮತ್ತು ಕಾಡು ಪ್ರಾಣಿ ಸಂಘರ್ಷಕ್ಕೆ ಸುದ್ದಿ ಆಗುತ್ತಿರುವ ಚಾಮರಾಜನಗರ…

Read More

ಇರಾನ್‌ನಿಂದ ಬಂದಿದ್ದ ದಂಪತಿ ಕೊಡಗಿನಲ್ಲೇ ಲಾಕ್‌: ಅಲ್ಲಿ ಮಕ್ಕಳು, ಇಲ್ಲಿ ಪೋಷಕರು!

ಮಡಿಕೇರಿ, (ಏಪ್ರಿಲ್ 06):  ಯುದ್ಧ ಪರಿಸ್ಥಿತಿಯಿಂದಾಗಿ ದಂಪತಿ ಇರಾನ್‌ಗೆ (Iran) ಮರಳಲಾಗದೆ ಕೊಡಗು (Kodagu) ಜಿಲ್ಲೆಯ ಮೂರ್ನಾಡು ಸಮೀಪದ ಕಾಂತೂರಿನಲ್ಲಿ ಪರಿತಪಿಸುವಂತಾಗಿದೆ. ಕಾಂತೂರು ನಿವಾಸಿ ಪತ್ನಿ ನವೀನಾ ಹಾಗೂ ಇರಾನ್ ಮೂಲದ ಪತಿ ನಾದರ್ ಕೊಡಗಿನಲ್ಲಿಯೇ ಸಿಲುಕಿರುವ ದಂಪತಿ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಹಲವು ದೇಶಗಳ ವಾಯು ಪ್ರದೇಶ ಬಂದ್ ಆಗಿದ್ದು, ವಿಮಾನ ಸಂಚಾರವೂ ಅಸ್ತವ್ಯಸ್ತಗೊಂಡಿದೆ. ಹೀಗಾಗಿ ದಂಪತಿ ಕೊಡಗಿನಲ್ಲಿಯೇ ಉಳಿಯುವಂತಾಗಿದೆ. ಕೊಡಗು ಮೂಲದ ನವೀನಾ, 30 ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದರು. ಆ…

Read More

KKR vs PBKS IPL 2026 Live Score: ಟಾಸ್ ಗೆದ್ದ ಕೆಕೆಆರ್ ಬ್ಯಾಟಿಂಗ್ ಆಯ್ಕೆ – Kannada News | Kolkata Knight Riders vs Punjab Kings IPL 2026 Live Cricket Score KKR vs PBKS Match on 6th April latest news in Kannada

ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಐಪಿಎಲ್ 19 ನೇ ಸೀಸನ್​ನ ತನ್ನ ಮೂರನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಿದೆ. ಈ ಎರಡೂ ತಂಡಗಳ ನಡುವಿನ ಈ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯುತ್ತಿದೆ. ಅಜಿಂಕ್ಯ ರಹಾನೆ ನಾಯಕತ್ವದಲ್ಲಿ ಕೆಕೆಆರ್ ಮೊದಲ ಎರಡು ಪಂದ್ಯಗಳಲ್ಲಿ ಸೋತಿದ್ದರೆ, ಶ್ರೇಯಸ್ ಅಯ್ಯರ್ ಮೊದಲ ಎರಡು ಪಂದ್ಯಗಳಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಗೆಲುವಿನತ್ತ ಮುನ್ನಡೆಸಿದ್ದಾರೆ. ಆದ್ದರಿಂದ, ಪಂಜಾಬ್ ಸೋಮವಾರ ಮೈದಾನಕ್ಕಿಳಿದು ಸತತ ಮೂರನೇ ಪಂದ್ಯವನ್ನು ಗೆದ್ದು ಹ್ಯಾಟ್ರಿಕ್ ಗೆಲುವಿನ ಇರಾದೆಯಲ್ಲಿದ್ದರೆ, ಮತ್ತೊಂದೆಡೆ,…

Read More

ಕೊಲನ್‌ ಕ್ಯಾನ್ಸರ್ ಎಷ್ಟು ಅಪಾಯಕಾರಿ ಗೊತ್ತಾ? ಹೇಗಿರುತ್ತೆ ಇದರ ಲಕ್ಷಣಗಳು? ಡಾ ಅನುರಾಗ್‌ ಶೆಟ್ಟಿ ನೀಡಿರುವ ಮಾಹಿತಿ ಇಲ್ಲಿದೆ

ಕೊಲನ್‌ ಕ್ಯಾನ್ಸರ್ (Colon Cancer) ಅಥವಾ ದೊಡ್ಡ ಕರುಳಿನ ಕ್ಯಾನ್ಸರ್ ಬಗ್ಗೆ ನೀವು ಕೇಳಿರಬಹುದು. ಅತಿ ಹೆಚ್ಚು ಕಾಣಿಸಿಕೊಳ್ಳುವ ಕ್ಯಾನ್ಸರ್ ಗಳಲ್ಲಿ ಇದು ಒಂದಾಗಿದೆ. ಜಾಗತಿಕವಾಗಿ ಕ್ಯಾನ್ಸರ್ (Cancer) ನಿಂದ ಸಂಭವಿಸುವ ಸಾವುಗಳಿಗೆ ಎರಡನೇ ಪ್ರಮುಖ ಕಾರಣವಾಗಿದೆ. ಇದನ್ನು “ಸೈಲೆಂಟ್‌” ಕ್ಯಾನ್ಸರ್ ಎಂದು ಕೂಡ ಕರೆಯಲಾಗುತ್ತದೆ, ಏಕೆಂದರೆ ಇದರ ಆರಂಭಿಕ ಹಂತಗಳಲ್ಲಿ ಯಾವುದೇ ರೀತಿಯ ಲಕ್ಷಣಗಳು ಕೂಡ ಕಂಡುಬರುವುದಿಲ್ಲ. ಆದರೆ ಈ ರೀತಿ ಕಂಡು ಬರುವ ಕ್ಯಾನ್ಸರ್ ಗೆ ಕಾರಣವೇನು, ಲಕ್ಷಣಗಳನ್ನು ಗುರುತಿಸುವುದು ಹೇಗೆ, ಕೊಲನ್‌ ಕ್ಯಾನ್ಸರ್…

Read More

ಗಂಡನನ್ನು ಬಿಟ್ಟು ಪ್ರಿಯಕರನ ಜೊತೆ ಬದುಕಲು 19 ವರ್ಷದ ಯುವತಿಗೆ ಕೋರ್ಟ್ ಒಪ್ಪಿಗೆ

ನವದೆಹಲಿ, ಏಪ್ರಿಲ್ 6: 19 ವರ್ಷದ ಯುವತಿಗೆ ತನ್ನ ಗಂಡನ ಜೊತೆ ಬದುಕುವುದು ಇಷ್ಟವಿರಲಿಲ್ಲ. ಮನೆಯಿಂದ ಬರುವಾಗ ಆಕೆಯ ಗಂಡ ಆಕೆಯ ಮನವೊಲಿಸಿ ತನ್ನ ಜೊತೆಗೆ ಇರಲು ಒಪ್ಪಿಸಿ ಕರೆತಂದಿದ್ದ. ಆದರೆ, ಆಕೆಯ ಪತಿ, ಪೋಷಕರು ಮತ್ತು ಆಕೆಯ ಪ್ರೇಮಿ ನ್ಯಾಯಾಲಯದ ಹೊರಗೆ ಕಾಯುತ್ತಿದ್ದಾಗ ಆಕೆ ಕೋರ್ಟ್​ನೊಳಗೆ ನ್ಯಾಯಾಧೀಶರ ಮುಂದೆ ತಾನು ಪ್ರಿಯಕರನ ಜೊತೆಯೇ ಹೋಗುತ್ತೇನೆ ಎಂದು ನಿರ್ಧಾರ ತಿಳಿಸಿದಳು. “ನಾನು ವಯಸ್ಕಳು. ನಾನು ನನ್ನ ಸ್ವಂತ ಇಚ್ಛೆಯ ಮೇಲೆ ಬದುಕುತ್ತಿದ್ದೇನೆ. ನನ್ನ ಪತಿ ಅಥವಾ ನನ್ನ…

Read More

ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ: ದೇವಸ್ಥಾನದಿಂದ ಎತ್ತಿ ಹೊರಹಾಕಿದ ಟ್ರಸ್ಟಿಗಳು

ಕಲಬುರಗಿ, ಏಪ್ರಿಲ್​ 06: ದಲಿತ ಎಂಬ ಕಾರಣಕ್ಕೆ ಸ್ವಾಮೀಜಿ ಮೇಲೆ ಹಲ್ಲೆ ಮಾಡಿ, ದೇಗುಲದಿಂದ ಹೊರಗೆ ಹಾಕಿರುವಂತಹ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಯಾನಾಗುಂದಿಯಲ್ಲಿ ನಡೆದಿದೆ. ಮಾತಾ ಮಾಣಿಕೇಶ್ವರಿ ದೇವಸ್ಥಾನದಲ್ಲಿ ಟ್ರಸ್ಟಿಗಳಿಂದ ತೆಲಂಗಾಣ ಮೂಲದ ಬಂಡಿ ಬಾಲಕೃಷ್ಣ ಎಂಬುವರನ್ನು ಎಳೆದಾಡಿ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಸ್ವಾಮೀಜಿ ಕಳೆದ 7-8 ವರ್ಷಗಳಿಂದ ದೇವಸ್ಥಾನದಲ್ಲಿ ನೆಲೆಸಿ ಸೇವೆ ಸಲ್ಲಿಸುತ್ತಿದ್ದರು. ಕೆಳಜಾತಿಯವರು ದೇವಸ್ಥಾನ ಪ್ರವೇಶಿಸಬಾರದು ಎಂದು ನಿಂದಿಸಿ ಹಲವು ಬಾರಿ ಹಲ್ಲೆ ಮಾಡಿದ್ದಾರೆ. ಟ್ರಸ್ಟ್​ನ ಕಾರ್ಯದರ್ಶಿ ಶಿವಯ್ಯ ಮತ್ತು…

Read More