Cylinder Price Hike: ಕೇಂದ್ರ ಬಜೆಟ್ ದಿನವೇ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 50 ರೂ. ಹೆಚ್ಚಳ – Kannada News | Commercial LPG Cylinder Prices Hiked by Rs 50 Ahead of Union Budget

ನವದೆಹಲಿ, ಫೆಬ್ರವರಿ 01: ಇಂದು ಕೇಂದ್ರ ಬಜೆಟ್ ಮಂಡನೆಗೂ ಮುನ್ನ, ತೈಲ ಮಾರುಕಟ್ಟೆ ಕಂಪನಿಗಳು ಭಾನುವಾರ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌(LPG Cylinder)ಗಳ ಬೆಲೆಯನ್ನು 50 ರೂ. ಹೆಚ್ಚಿಸುವ ಮೂಲಕ ಎಲ್‌ಪಿಜಿ ಗ್ರಾಹಕರಿಗೆ ಹೊಡೆತ ನೀಡಿವೆ. ವಾಣಿಜ್ಯ ಮತ್ತು ದೇಶೀಯ ಎಲ್‌ಪಿಜಿ (ದ್ರವೀಕೃತ ಪೆಟ್ರೋಲಿಯಂ ಅನಿಲ) ಸಿಲಿಂಡರ್‌ಗಳ ದರಗಳನ್ನು ಫೆಬ್ರವರಿ 1, 2026 ರಿಂದ ಜಾರಿಗೆ ತರಲಾಗಿದೆ. ಇದರ ಪರಿಣಾಮವಾಗಿ, ಜನರು ಈಗ ವಾಣಿಜ್ಯ ಸಿಲಿಂಡರ್‌ಗಳಿಗೆ 50 ರೂಪಾಯಿ ಹೆಚ್ಚು ಪಾವತಿಸಬೇಕಾಗುತ್ತದೆ.

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳನ್ನು ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ರಸ್ತೆಬದಿಯ ತಿನಿಸುಗಳು (ಧಾಬಾಗಳು) ಮತ್ತು ಇತರ ವಾಣಿಜ್ಯ ಸಂಸ್ಥೆಗಳಲ್ಲಿ ಬಳಸಲಾಗುತ್ತದೆ. ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿ ತಿಂಗಳ ಮೊದಲ ದಿನದಂದು ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಪರಿಷ್ಕರಿಸುತ್ತವೆ. ಜನವರಿಯಲ್ಲಿ, 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 111 ರೂ. ಹೆಚ್ಚಿಸಲಾಗಿತ್ತು.

ಇಂದಿನಿಂದ ವಾಣಿಜ್ಯ ಸಿಲಿಂಡರ್ ಬೆಲೆಗಳು ಏರಿಕೆಯಾಗಿವೆ. ದೆಹಲಿಯಲ್ಲಿ, ಈ ಹಿಂದೆ 1691.50 ರೂ. ಬೆಲೆಯಿದ್ದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಈಗ 50 ರೂ. ಏರಿಕೆಯಾಗಿದ್ದು, ಬೆಲೆ 1740.50 ರೂ.ಗೆ ತಲುಪಿದೆ. ಕೋಲ್ಕತ್ತಾದಲ್ಲಿ, ಬೆಲೆ 1844.50 ರೂ. ಆಗಿದ್ದು, ಮುಂಬೈನಲ್ಲಿ, ವಾಣಿಜ್ಯ ಸಿಲಿಂಡರ್ ಬೆಲೆ ಈಗ 1642.50 ರೂ.ನ ಬದಲು 1692 ರೂ. ಆಗಲಿದೆ.

ಮತ್ತಷ್ಟು ಓದಿ: ಕಮರ್ಷಿಯಲ್ ಗ್ಯಾಸ್ ಬೆಲೆ ಭರ್ಜರಿ ಹೆಚ್ಚಳ; 19 ಕಿಲೋ ಸಿಲಿಂಡರ್ ದರ 110.50 ರೂ ಏರಿಕೆ

ಈ ವರ್ಷದ ಜನವರಿ ಮತ್ತು ಫೆಬ್ರವರಿಯಲ್ಲಿ ಬೆಲೆಗಳನ್ನು ಹೆಚ್ಚಿಸಲಾಗಿದ್ದರೂ, ನವೆಂಬರ್ ಮತ್ತು ಡಿಸೆಂಬರ್‌ನಲ್ಲಿ ಬೆಲೆಗಳು ಕಡಿಮೆಯಾಗಿದ್ದವು. ಕಳೆದ ವರ್ಷ ನವೆಂಬರ್ ಮತ್ತು ಡಿಸೆಂಬರ್‌ನಲ್ಲಿ, ಬೆಲೆಗಳನ್ನು ಕ್ರಮವಾಗಿ 5 ಮತ್ತು 10 ರೂ.ಗಳಷ್ಟು ಕಡಿಮೆ ಮಾಡಲಾಗಿತ್ತು. ಅದಕ್ಕೂ ಮೊದಲು, ಅಕ್ಟೋಬರ್ 1 ರಂದು ಬೆಲೆಯಲ್ಲಿ ಕೇವಲ 15.50 ರೂ.ಗಳಷ್ಟು ಅಲ್ಪ ಏರಿಕೆ ಕಂಡುಬಂದಿತ್ತು. ಅಕ್ಟೋಬರ್‌ಗೂ ಮೊದಲು, ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಗಳು ಸತತ ಆರು ತಿಂಗಳುಗಳ ಕಾಲ ಕುಸಿದಿದ್ದವು.

ಇಂಡಿಯನ್ ಆಯಿಲ್ ಮಾಹಿತಿಯ ಪ್ರಕಾರ, ದೇಶೀಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಪ್ರಸ್ತುತ, ದೆಹಲಿಯಲ್ಲಿ 14.2 ಕೆಜಿ ದೇಶೀಯ ಸಿಲಿಂಡರ್ ಬೆಲೆ 853 ರೂ. ಉತ್ತರ ಪ್ರದೇಶದಲ್ಲಿ ಇದು 850.50 ರೂ.ಗೆ ಲಭ್ಯವಿದೆ. ಪಾಟ್ನಾದಲ್ಲಿ, ದೇಶೀಯ ಎಲ್‌ಪಿಜಿ ಸಿಲಿಂಡರ್ ಬೆಲೆ 951 ರೂ., ಮುಂಬೈನಲ್ಲಿ ಇದರ ಬೆಲೆ 852.50 ರೂ. ಮತ್ತು ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಇದರ ಬೆಲೆ 890.50 ರೂ. ಇದೆ.

ಕಳೆದ ಬಜೆಟ್ ದಿನವಾದ ಫೆಬ್ರವರಿ 1, 2025 ರಂದು, ಜನರು ಎಲ್‌ಪಿಜಿ ವಾಣಿಜ್ಯ ಅನಿಲ ಸಿಲಿಂಡರ್‌ಗಳ ಬೆಲೆಯಲ್ಲಿ ಸ್ವಲ್ಪ ಪರಿಹಾರವನ್ನು ಪಡೆದಿದ್ದರು. ವಾಣಿಜ್ಯ ಅನಿಲ ಸಿಲಿಂಡರ್‌ಗಳ ಬೆಲೆಯನ್ನು 6.50 ಪೈಸೆ ಕಡಿಮೆ ಮಾಡಲಾಗಿತ್ತು. ಆದಾಗ್ಯೂ, ಗೃಹಬಳಕೆಯ ಅನಿಲ ಸಿಲಿಂಡರ್‌ಗಳ ಬೆಲೆ ಬದಲಾಗದೆ ಉಳಿದಿತ್ತು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 8:54 am, Sun, 1 February 26

Source link

ಜಪಾನ್ ರಾಯಭಾರಿಗೂ ಇಷ್ಟ ಬೆಂಗಳೂರಿನ ಪಿಜ್ಜಾ! ಓನೋ ಕೈಇಚಿ ಪೋಸ್ಟ್​ಗೆ ತೇಜಸ್ವಿ ಸೂರ್ಯ ರಿಯಾಕ್ಷನ್ – Kannada News | Japanese Ambassador Ono Keiichi Loves Bengaluru Pizza! Tejasvi Surya Reacts to Viral X post

ಜಪಾನ್ ಎಂಬಾಸಿಡರ್​ಗೂ ಇಷ್ಟ ಬೆಂಗಳೂರಿನ ಪಿಜ್ಜಾ! ಓನೋ ಕೈಇಚಿ ಪೋಸ್ಟ್​ಗೆ ತೇಜಸ್ವಿ ಸೂರ್ಯ ರಿಯಾಕ್ಷನ್

ಬೆಂಗಳೂರು, ಫೆಬ್ರುವರಿ 01: ಭಾರತದಲ್ಲಿನ ಜಪಾನ್ ರಾಯಭಾರಿ (Japanese Ambassador) ಓನೋ ಕೈಇಚಿ ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ನಗರದ ಪ್ರಸಿದ್ಧ ಪಿಜ್ಜಾ ರೆಸ್ಟೋರೆಂಟ್‌ನಲ್ಲಿ ಊಟ ಮಾಡಿದ ಅನುಭವವನ್ನು ಸಾಮಾಜಿಕ ಜಾಲತಾಣ ಎಕ್ಸ್ (X) ನಲ್ಲಿ ಹಂಚಿಕೊಂಡಿದ್ದು, ಇದು ವ್ಯಾಪಕ ಗಮನ ಸೆಳೆದಿದೆ. ಅವರ ಪೋಸ್ಟ್ಗೆ ಸಂಸದ ತೇಜಸ್ವಿ ಸೂರ್ಯ (Tejaswi Surya) ಸಹ ಪ್ರತಿಕ್ರಿಯಿಸಿದ್ದು, ಇದು ಜಪಾನ್–ಬೆಂಗಳೂರು ಸ್ನೇಹದ ಪ್ರತೀಕ ಎಂದಿದ್ದಾರೆ.

ಬೆಂಗಳೂರಿನ ಜನಪ್ರಿಯ ‘ಪಿಜ್ಜಾ 4ಪಿ’ಸ್ ರೆಸ್ಟೋರೆಂಟ್‌ನಲ್ಲಿ ಪಿಜ್ಜಾ ಆಸ್ವಾದಿಸುತ್ತಿರುವ ತಮ್ಮ ಫೋಟೋವನ್ನು ಹಂಚಿಕೊಂಡಿರುವ ಕೈಇಚಿ, ಹೋ ಚಿ ಮಿನ್ ಸಿಟಿಯಲ್ಲಿ ಜಪಾನೀ ಉದ್ಯಮಿಗಳು ಆರಂಭಿಸಿದ ಪಿಜ್ಜಾ 4ಪಿ’ಸ್ ಇಂದು ಏಷ್ಯಾದಾದ್ಯಂತ ಜನಪ್ರಿಯವಾಗಿದೆ. ಜಪಾನ್ ಹಾಗೂ ಭಾರತದಲ್ಲಿಯೂ ಶಾಖೆಗಳಿವೆ. ಭಾರತದಲ್ಲಿ ನಾನು ಸೇವಿಸಿದ ಅತ್ಯುತ್ತಮ ಪಿಜ್ಜಾ ಇದು ಎಂದು ಬರೆದುಕೊಂಡಿದ್ದಾರೆ.

ಓನೋ ಕೈಇಚಿ ಎಕ್ಸ್ ಪೋಸ್ಟ್ ಇಲ್ಲಿದೆ

ರಾಯಭಾರಿಯ ಈ ಪೋಸ್ಟ್‌ಗೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಪ್ರತಿಕ್ರಿಯಿಸಿದ್ದು, ನಿಮಗೆ ಪಿಜ್ಜಾ ಇಷ್ಟವಾದುದಕ್ಕೆ ಸಂತೋಷ. ನನಗೂ ಅಲ್ಲಿನ ಪೀಜ್ಜಾ ಇಷ್ಟ. ಅದು ಜಪಾನ್–ಬೆಂಗಳೂರು ಸ್ನೇಹದ ಪ್ರತೀಕವಾಗಿದೆ. ನಿಮ್ಮ ಬೆಂಗಳೂರು ಭೇಟಿ ಚನ್ನಾಗಿರಲಿ ಎಂದು ತಿಳಿಸಿದ್ದಾರೆ.

ತೇಜಸ್ವಿ ಎಕ್ಸ್ ಪೋಸ್ಟ್ ಇಲ್ಲಿದೆ

ನೆಟ್ಟಿಗರ ಭರ್ಜರಿ ಪ್ರತಿಕ್ರಿಯೆ

ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕಡಿಮೆ ಸಮಯದಲ್ಲೇ 70 ಸಾವಿರಕ್ಕೂ ಹೆಚ್ಚು ವೀಕ್ಷಣೆ ಪಡೆದಿದೆ. ಅನೇಕ ಬಳಕೆದಾರರು ತಮ್ಮ ಪ್ರತಿಕ್ರಿಯೆಗಳನ್ನು ಹಂಚಿಕೊಂಡಿದ್ದಾರೆ.

ಇಲ್ಲಿ ಟೇಬಲ್ ಸಿಗುವುದು ತುಂಬಾ ಕಷ್ಟ ಎಂದು ಒಬ್ಬರು ಬರೆದಿದ್ದರೆ, ಮತ್ತೊಬ್ಬರು ಜಪಾನ್ ರಾಯಭಾರಿಗೂ ಬೆಂಗಳೂರು ಪಿಜ್ಜಾ ಇಷ್ಟವಾಗಿದೆ ಎಂದರೆ ಅದೊಂದು ವಿಶೇಷ ಎಂದು ಹೇಳಿದ್ದಾರೆ. ಇನ್ನೂ ಕೆಲವರು ನೀವು ದೆಹಲಿಯನ್ನು ಕಡೆಗಣಿಸುತ್ತಿದ್ದೀರಾ ಎಂದರೆ, ಇನ್ನೂ ಕೆಲವರು ಬೆಂಗಳೂರಿಗೆ ಬಂದಾಗ ನಾನೂ ಆ ಜಾಗಗ್ಗೆ ಹೋಗುತ್ತೇನೆಂದು ಬರೆದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಬೆಂಗಳೂರು: ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ಆರೋಪಿ – Kannada News | Bengaluru Horror: Elderly Woman Found Dead After Brutal Assault, Domestic Help Ends Life

ಬೆಂಗಳೂರು, ಫೆಬ್ರವರಿ 1: ಬೆಂಗಳೂರಿನ (Bangalore) ಸಿಲ್ಕ್ ಬೋರ್ಡ್ (Silk Board) ಸಮೀಪದ ಕೆಎಎಸ್ ಕಾಲೋನಿಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದ್ದು, 65 ವರ್ಷದ ಮಹಿಳೆಯೊಬ್ಬರ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಈ ಪೈಶಾಚಿಕ ಕೃತ್ಯ ಎಸಗಿದ ಬಳಿಕ ಆರೋಪಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಮಹಿಳೆಯನ್ನು ಸರಿತಾ ಎಂದು ಗುರುತಿಸಲಾಗಿದ್ದು, ಮನೆಗೆಲಸ ಮಾಡುತ್ತಿದ್ದ ದೇವರಾಜು (50) ಎಂಬಾತ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಘಟನೆ ಶನಿವಾರ ಮಧ್ಯರಾತ್ರಿ ನಡೆದಿದ್ದು, ಬೆಳಗಿನ ಜಾವ ಸುಮಾರು 4.30ರ ವೇಳೆಗೆ ವಿಚಾರ ಬಹಿರಂಗವಾಗಿದೆ.

ಸರಿತಾ ಅವರ ಪತಿ ಉದ್ಯೋಗ ನಿಮಿತ್ತ ದುಬೈಗೆ ತೆರಳಿದ್ದು, ಮುಂಜಾವ 4.30ರ ಸುಮಾರಿಗೆ ಬೆಂಗಳೂರಿಗೆ ಆಗಮಿಸಿದ್ದರು. ಮನೆಗೆ ಬಂದು ಬೆಲ್ ಹೊಡೆದಾಗ, ಮೊದಲ ಮಹಡಿಯಲ್ಲಿ ಇದ್ದ 27 ವರ್ಷದ ಮಗಳು ಬಾಗಿಲು ತೆರೆದು ತನ್ನ ಕೋಣೆಗೆ ತೆರಳಿದ್ದಾಳೆ. ಬಳಿಕ ಪತಿ ಕೆಳ ಮಹಡಿಯಲ್ಲಿ ಇದ್ದ ಸರಿತಾ ಅವರ ಕೋಣೆಗೆ ತೆರಳಿದಾಗ ಭೀಕರ ಘಟನೆ ಬೆಳಕಿಗೆ ಬಂದಿದೆ.

ಘಟನೆ ನಡೆದ ಸಮಯದಲ್ಲೇ ಮನೆಯ ಮೊದಲ ಮಹಡಿಯಲ್ಲಿ ಮಗಳು ಇದ್ದರೂ, ಕೆಳ ಮಹಡಿಯಲ್ಲಿ ನಡೆದ ದುಷ್ಕೃತ್ಯದ ಬಗ್ಗೆ ಆಕೆಗೆ ಅರಿವಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ದೇವರಾಜು ಕೃತ್ಯ ಎಸಗಿ ಬಳಿಕ ಅದೇ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಮಾಹಿತಿ ಪಡೆದ ಮೈಕೋ ಲೇಔಟ್ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ವಿಜಯನಗರ: ತ್ರಿವಳಿ ಕೊಲೆಯ ಕಾರಣ ಬಯಲು, ಲವ್ವಿಡವ್ವಿಯಿಂದ ತಂಗಿ ಗರ್ಭಿಣಿಯಾದ್ದು ತಿಳಿದು ಕುಟುಂಬವನ್ನೇ ಮುಗಿಸಿದ ಅಣ್ಣ!

ನಗರದಲ್ಲಿ ವೃದ್ಧ ಮಹಿಳೆಯರ ಮೇಲೂ ಇಂತಹ ಕ್ರೂರ ಕೃತ್ಯಗಳು ನಡೆಯುತ್ತಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಘಾತ ಮೂಡಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕಿಸ್ತಾನಿ ಸೈನಿಕರು ಸಾವು – Kannada News | Dozens of Pakistani Soldiers Killed in Attack Claimed by Baloch Rebels

ಇಸ್ಲಾಮಾಬಾದ್, ಫೆಬ್ರವರಿ 01: ಆಪರೇಷನ್ ಹೆರೋಫ್ II ಅಡಿಯಲ್ಲಿ ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಅಧಿಕ ಪಾಕಿಸ್ತಾನಿ ಸೈನಿಕರು ಸಾವನಪ್ಪಿರುವುದಾಗಿ ಬಲೂಚ್ ಲಿಬರೇಶನ್ ಆರ್ಮಿ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದೆ. ಆ ಘಟನೆಯಲ್ಲಿ 80 ಕ್ಕೂ ಹೆಚ್ಚು ಪಾಕಿಸ್ತಾನಿ ಉಗ್ರರು, ಪೊಲೀಸ್ ಸಿಬ್ಬಂದಿ ಮತ್ತು ಗುಪ್ತಚರ ಸಂಸ್ಥೆಗಳು ಮತ್ತು ಭಯೋತ್ಪಾದನಾ ನಿಗ್ರಹ ಘಟಕಗಳ ಸದಸ್ಯರು ಸಾವನ್ನಪ್ಪಿದ್ದಾರೆ.

ಬಲೂಚಿಸ್ತಾನದ ಹಲವು ಜಿಲ್ಲೆಗಳಲ್ಲಿ ತನ್ನ ಹೋರಾಟಗಾರರು ಸಂಘಟಿತ ದಾಳಿಗಳ ಸರಣಿಯನ್ನು ನಡೆಸಿದ್ದಾರೆ. ಈ ಕಾರ್ಯಾಚರಣೆಗೆ ಆಪರೇಷನ್ ಹೆರೋಫ್ ಫೇಸ್ II ಎಂದು ಕರೆಯಲಾಗಿದೆ. ಹತ್ತು ಗಂಟೆಗಳ ಅವಧಿಯಲ್ಲಿ ದಾಳಿಗಳು ನಡೆದಿವೆ ಮತ್ತು ಪ್ರಾಂತ್ಯದಾದ್ಯಂತ ಹಲವಾರು ಪಟ್ಟಣಗಳು ​​ಮತ್ತು ನಗರಗಳಲ್ಲಿನ ಭದ್ರತೆ, ಮಿಲಿಟರಿ ಮತ್ತು ಆಡಳಿತಾತ್ಮಕ ಸ್ಥಾಪನೆಗಳನ್ನು ಗುರಿಯಾಗಿಸಿಕೊಂಡಿವೆ. ಸಾಮಾಜಿಕ ಮಾಧ್ಯಮದಲ್ಲಿ ಪ್ರಕಟವಾದ ಹಲವಾರು ವೀಡಿಯೊಗಳು ಈ ಹೇಳಿಕೆಗಳನ್ನು ದೃಢಪಡಿಸುತ್ತವೆ.

ಬಿಎಲ್‌ಎ ವಕ್ತಾರ ಜೀಯಾಂಡ್ ಬಲೋಚ್ ಅವರ ಹೇಳಿಕೆಯ ಪ್ರಕಾರ, ಕ್ವೆಟ್ಟಾ, ನೋಶ್ಕಿ, ಮಸ್ತುಂಗ್, ದಲ್ಬಂದಿನ್, ಕಲಾತ್, ಖರನ್, ಪಂಜ್‌ಗುರ್, ಗ್ವಾದರ್, ಪಾಸ್ನಿ, ಟರ್ಬತ್, ಟಂಪ್, ಬುಲೇಡಾ, ಮಂಗೋಚಾರ್, ಲಾಸ್ಬೆಲಾ, ಕೆಚ್ ಮತ್ತು ಅವರನ್ ಮತ್ತು ಸುತ್ತಮುತ್ತಲಿನ ಡಜನ್‌ಗಟ್ಟಲೆ ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Source link

ಅತೀ ಕಡಿಮೆ ಎಸೆತಗಳೊಂದಿಗೆ ಇತಿಹಾಸ ನಿರ್ಮಿಸಿದ ಸೂರ್ಯಕುಮಾರ್ ಯಾದವ್ – Kannada News | Suryakumar Yadav Creates History in T20I Cricket

ನ್ಯೂಝಿಲೆಂಡ್ ವಿರುದ್ಧದ ಐದನೇ ಟಿ20 ಪಂದ್ಯದ ಮೂಲಕ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav) ಹೊಸ ಇತಿಹಾಸ ನಿರ್ಮಿಸಿದ್ದಾರೆ. ತಿರುವನಂತಪುರದ ಗ್ರೀನ್​ಫೀಲ್ಡ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಸೂರ್ಯಕುಮಾರ್ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು.

Source link

Bengaluru Air Quality: ಬೆಂಗಳೂರಿನ ಜೊತೆಗೆ ಮಂಗಳೂರು, ಬಳ್ಳಾರಿಯಲ್ಲೂ ಕಳಪೆ ಏರ್ ಕ್ವಾಲಿಟಿ – Kannada News | Bangalore Air Pollution Crisis: Ballary and mangalore’s Air quality is worse than Bengaluru’s AQI

ಬೆಂಗಳೂರಿನ ಜೊತೆಗೆ ಮಂಗಳೂರು, ಬಳ್ಳಾರಿಯಲ್ಲೂ ಕಳಪೆ ಏರ್ ಕ್ವಾಲಿಟಿ

ಬೆಂಗಳೂರು, ಫೆಬ್ರುವರಿ 01: ರಾಜ್ಯದೆಲ್ಲೆಡೆ ವಾಯು ಗುಣಮಟ್ಟ ಸಾಕಷ್ಟು ಹದಗೆಟ್ಟಿರುವಾಗ, ಬೆಂಗಳೂರಿನಲ್ಲಿ AQI  (Bengaluru Air Quality) ನಿರಂತರ ಏರುಪೇರು ಕಾಣುತ್ತಿದೆ. ಅದರ ನಡುವೆ ಮಂಗಳೂರು ಹಾಗೂ ಬಳ್ಳಾರಿ ಬೆಂಗಳೂರನ್ನೂ ಮೀರಿಸುವಂತಿದೆ. ಇದರಿಂದಾಗಿ ನಗರಗಳಲ್ಲಿ ಆತಂಕ ಸೃಷ್ಟಿಯಾಗಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ.

ಬೆಂಗಳೂರಿಗಿಂತ ಮಂಗಳೂರಿನಲ್ಲಿ ಕಳಪೆ ಗಾಳಿ

ಕೆಲ ದಿನಗಳಿಂದಲೂ ಏರಿಕೆ ಕಾಣುತ್ತಿದ್ದ ಬಳ್ಳಾರಿಯ ಏರ್ ಕ್ವಾಲಿಟಿ, ಇಂದು 170ಕ್ಕೆ ಹೋಗಿ ತಲುಪಿದೆ. ಮಂಗಳೂರಿನ AQI 177 ಆಗಿದೆ. ಈ ಹದಗೆಟ್ಟ ವಾತಾವರಣ ಹೀಗೆ ಮುಂದುವರೆದರೆ ದೆಹಲಿಯಂತೆಯೇ ಆಗಬಹುದೆಂದು ತಜ್ಞರು ಎಚ್ಚರಿಸಿದ್ದಾರೆ. ಈ ಕಲುಷಿತ ಗಾಳಿಯಿಂದ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಿದೆ. ಬೆಂಗಳೂರಿನಲ್ಲೂ ಕಡಿಮೆ ಆಗದ AQI, ಇಂದು 157ಕ್ಕೆ ತಲುಪಿದೆ.ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ಸೂಕ್ಷ್ಮಾಣುಗಳಿಂದಲೂ ಜೀವಕ್ಕೆ ಹಾನಿ

PM2.5 ಮಾನವನ ಕೂದಲಿನ ಶೇ. 3ರಷ್ಟು ಮಾತ್ರ ದಪ್ಪವಿರುವ ಅತಿ ಸೂಕ್ಷ್ಮ ಕಣಗಳು. ಈ ಕಣಗಳು ಉಸಿರಾಟದ ಮೂಲಕ ನೇರವಾಗಿ ಶ್ವಾಸಕೋಶದ ಒಳಗೆ ಹೋಗಿ ರಕ್ತವನ್ನು ಸೇರುತ್ತವೆ. ಇಂದಿನ ಅಂಕಿಅಂಶಗಳ ಪ್ರಕಾರ PM2.5 ಪ್ರಮಾಣ 84 ಆಗಿದ್ದು, PM10 109ಕ್ಕೆ ಏರಿಕೆಯಾಗಿದೆ. ಈ ಕಣಗಳು ನೇರವಾಗಿ ಉಸಿರಾಟ ವ್ಯವಸ್ಥೆಗೆ ಹೊಡೆತ ನೀಡುತ್ತವೆ.

PM10 ಎನ್ನುವುದು ನಮಗಿಂತ 7 ಪಟ್ಟು ತೆಳುವಾದ ಧೂಳಿನ ಕಣಗಳಾದರೆ, PM2.5 ಮಾನವನ ಕೂದಲಿನ ಶೇ. 3ರಷ್ಟು ಮಾತ್ರ ದಪ್ಪವಿರುವ ಅತಿ ಸೂಕ್ಷ್ಮ ಕಣಗಳು. ಈ ಕಣಗಳು ಉಸಿರಾಟದ ಮೂಲಕ ನೇರವಾಗಿ ಶ್ವಾಸಕೋಶದ ಒಳಗೆ ಹೋಗಿ ರಕ್ತವನ್ನು ಸೇರುತ್ತವೆ. ಇದರಿಂದ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಿದೆ. ಆರೋಗ್ಯ ತಜ್ಞರು ಮಕ್ಕಳು, ವೃದ್ಧರು ಹಾಗೂ ಶ್ವಾಸಕೋಶ ಸಮಸ್ಯೆ ಇರುವವರು ಹೊರಗೆ ಹೋಗುವಾಗ ಎಚ್ಚರಿಕೆ ವಹಿಸಲು ಸಲಹೆ ನೀಡಿದ್ದಾರೆ. ಮಾಸ್ಕ್ ಬಳಕೆ, ವಾಹನ ಬಳಕೆಯನ್ನು ಕಡಿಮೆ ಮಾಡುವುದು ಮತ್ತು ಹಸಿರು ಪ್ರದೇಶಗಳನ್ನು ಹೆಚ್ಚಿಸುವುದು ಈಗ ನಗರಕ್ಕೆ ಅನಿವಾರ್ಯವಾಗಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –157
  • ಮಂಗಳೂರು-177
  • ಮೈಸೂರು –145
  • ಬೆಳಗಾವಿ – 129
  • ಕಲಬುರ್ಗಿ-152
  • ಶಿವಮೊಗ್ಗ – 157
  • ಬಳ್ಳಾರಿ – 170
  • ಹುಬ್ಬಳ್ಳಿ- 144
  • ಉಡುಪಿ –164
  • ವಿಜಯಪುರ –134

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಸಿಎಂ ಸಿದ್ದರಾಮಯ್ಯ – Kannada News | CM Siddaramaiah watches Cult Kannada movie ft Zaid Khan Rachita Ram

ರಚಿತಾ ರಾಮ್, ಝೈದ್ ಖಾನ್ (Zaid Khan), ಮಲೈಕಾ ವಸುಪಾಲ್ ಮುಂತಾದವರು ನಟಿಸಿರುವ ‘ಕಲ್ಟ್’ ಸಿನಿಮಾ ಇತ್ತೀಚೆಗೆ ಬಿಡುಗಡೆ ಆಯಿತು. ಹೊಸ ತಲೆಮಾರಿನ ಯುವಕ-ಯುವತಿಯರ ಪ್ರೇಮ್ ಕಹಾನಿ ಈ ಸಿನಿಮಾದಲ್ಲಿ ಇದೆ. ಈಗ ಈ ಚಿತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ವೀಕ್ಷಿಸಿದ್ದಾರೆ. ಅವರಿಗಾಗಿ ಬೆಂಗಳೂರಿನಲ್ಲಿ ವಿಶೇಷ ಪ್ರದರ್ಶನ ಏರ್ಪಡಿಸಲಾಗಿತ್ತು. ‘ಕಲ್ಟ್’ ಸಿನಿಮಾ (Cult Kannada Movie) ನೋಡಿದ ಬಳಿಕ ಅವರು ತಮ್ಮ ವಿಮರ್ಶೆ ತಿಳಿಸಿದರು. ಸಿನಿಮಾ ಹೇಗಿದೆ ಎಂಬುದನ್ನು ಸಿದ್ದರಾಮಯ್ಯ ಅವರು ಮಾಧ್ಯಮಗಳ ಎದುರು ವಿವರಿಸಿದರು.

‘ಕಲ್ಟ್ ಎಂಬುದು ಕನ್ನಡ ಚಿತ್ರರಂಗದಲ್ಲಿ ಹೊಸ ಮಾದರಿಯ ಸಿನಿಮಾ. ಝೈದ್ ಖಾನ್ ಅವರು ತುಂಬಾ ಚೆನ್ನಾಗಿ ತಮ್ಮ ಪಾತ್ರವನ್ನು ನಿರ್ವಹಿಸಿದ್ದಾರೆ. ರಚಿತಾ ರಾಮ್ ಮತ್ತು ಹೊಸ ಹುಡುಗಿ ಮಲೈಕಾ ಅವರು ನಟಿಸಿದ್ದಾರೆ. ರಚಿತಾ ರಾಮ್ ಅವರ ಇತ್ತೀಚಿನ ಸಿನಿಮಾವನ್ನು ನಾನು ನೋಡಿದ್ದೇನೆ. ಈ ಹಿಂದೆ ವಿದ್ಯಾರ್ಥಿ ಆಗಿದ್ದಾಗ, ಲಾಯರ್ ಆಗಿದ್ದಾಗ ನಾನು ಬಹಳ ಸಿನಿಮಾಗಳನ್ನು ನೋಡುತ್ತಿದ್ದೆ’ ಎಂದು ಸಿದ್ದರಾಮಯ್ಯ ಹೇಳಿದರು.

‘ಕಲ್ಟ್ ಸಿನಿಮಾ ಹೊಸ ಥರ ಇದೆ. ಲವ್​ನಲ್ಲಿ ಸಿಕ್ಕಿಹಾಕಿಕೊಳ್ಳಬಾರದು. ಒಂದು ವೇಳೆ ಸಿಕ್ಕಿಹಾಕಿಕೊಂಡರೆ ಅದರಿಂದ ಹೊರಗೆ ಬರೋದು ಬಾರಿ ಕಷ್ಟ ಆಗುತ್ತದೆ ಎಂಬುದು ಈ ಸಿನಿಮಾ ನೋಡಿದರೆ ಬಹಳ ಸ್ಪಷ್ಟವಾಗಿ ಗೊತ್ತಾಗುತ್ತದೆ. ಪ್ರೀತಿಸಿದ ಹುಡುಗಿ ತನ್ನ ಖುಷಿ, ಶೋಕಿಗಾಗಿ ನಿಜವಾದ ಪ್ರೀತಿಯನ್ನು ಅಲ್ಲಗಳೆಯುತ್ತಾಳೆ. ಅದು ಇತ್ತೀಚಿನ ದಿನಗಳಲ್ಲಿ ಯುವಕ-ಯುವತಿಯರಲ್ಲಿ ನಡೆಯುತ್ತದೆ’ ಎಂದಿದ್ದಾರೆ ಸಿದ್ದರಾಮಯ್ಯ.

ಇದನ್ನೂ ಓದಿ: ಹೌಸ್​ಫುಲ್ ಪ್ರದರ್ಶನ ಕಂಡ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ

‘ಲವ್ ಶಾಶ್ವತ ಎಂಬ ಕೆಲಸವನ್ನು ಭಗ್ನಪ್ರೇಮಿ ಮಾಡುತ್ತಾನೆ. ಝೈದ್ ಖಾನ್ ಅವರ ನಟನೆ ಬಹಳ ಚೆನ್ನಾಗಿದೆ. ಇದು ಇಡೀ ಕುಟುಂಬ ನೋಡಬೇಕಾದ ಸಿನಿಮಾ. ಆದರೆ ಇದಕ್ಕೆ ಎ ಸರ್ಟಿಫಿಕೇಟ್ ಕೊಟ್ಟಿದ್ದಾರೆ ಅಂತ ನನಗೆ ಝೈದ್ ಖಾನ್ ಹೇಳಿದರು. ಎ ಸರ್ಟಿಫಿಕೇಟ್ ಕೊಡುವಂತಹ ಸಿನಿಮಾ ಅಲ್ಲ ಇದು. ಅಂತಹ ಸಿನಿಮಾಗಳು ಬೇರೆ ಇರುತ್ತವೆ. ಇದಕ್ಕೆ ಎ ಸರ್ಟಿಫಿಕೇಟ್ ಯಾಕೆ ಕೊಟ್ಟರೋ ನನಗೆ ಗೊತ್ತಿಲ್ಲ. ಕೊಡಬಾರದಾಗಿತ್ತು ಎಂಬುದು ನನ್ನ ಅಭಿಪ್ರಾಯ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಜನವರಿ 23ರಂದು ‘ಕಲ್ಟ್’ ಸಿನಿಮಾ ಬಿಡುಗಡೆ ಆಯಿತು. ಈ ಚಿತ್ರಕ್ಕೆ ಅನಿಲ್ ಕುಮಾರ್ ಅವರು ನಿರ್ದೇಶನ ಮಾಡಿದ್ದಾರೆ. ರಂಗಾಯಣ ರಘು, ಅಚ್ಯುತ್ ಕುಮಾರ್, ಕಿಶನ್ ಬಿಳಗಲಿ ಮುಂತಾದವರು ಕೂಡ ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದು ಒಣಹವೆ, ಚಳಿಯ ವಾತಾವರಣ – Kannada News | Bengaluru temperature: cold weather in Bengaluru, Dry weather elsewhere

ರಾಜ್ಯದಲ್ಲಿ ಇಂದು ಒಣಹವೆ, ಚಳಿಯ ವಾತಾವರಣ

ಬೆಂಗಳೂರು, ಫೆಬ್ರುವರಿ 01: ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ (Weather Forecast) ಜೊತೆಗೆ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನವಿರುವುದರಿಂದ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಎಲ್ಲೆಲ್ಲಿ ಒಣಹವೆ?

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಮೈಸೂರು , ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ , ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಮತ್ತು, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಬೆಂಗಳೂರಿನಲ್ಲಿ ಚಳಿಯ ವಾತಾವರಣ

ಇಂದು ನಗರದಲ್ಲಿ ಎಂದಿನಂತೆ ಚಳಿಯ ವಾತಾವರಣವಿರುವುದರಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ. ಇಂದು ಬೆಂಗಳೂರಿನ ತಾಪಮಾನ ಕನಿಷ್ಠ 15°C ಇದ್ದು, ಗರಿಷ್ಠ 27°C ಇರಲಿದ್ದು, ಬೆಳಗ್ಗೆ ಮೋಡ ಕವಿದ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Budget 2026 LIVE: ಕೇಂದ್ರ ಬಜೆಟ್​​ಗೆ ಕೌಂಟ್ ಡೌನ್ ಶುರು, ಜನಸಾಮಾನ್ಯರ ಕನಸುಗಳು ಈಡೇರುತ್ತಾ, ಭಗ್ನವಾಗುತ್ತಾ? – Kannada News | Union Budget 2026 27 session live updates in Parliament today budget announcements Nirmala Sitharaman speech latest news in Kannada

ನವದೆಹಲಿ, ಫೆಬ್ರವರಿ 01: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಇಂದು 2026-27ರ ಹಣಕಾಸು ವರ್ಷದ ಬಜೆಟ್ ಅನ್ನು ಮಂಡಿಸಲಿದ್ದಾರೆ. ಈ ಬಾರಿ ಬಜೆಟ್ ಮೇಲೆ ಎಲ್ಲರ ಕುತೂಹಲ ನಿಂತಿರುವುದು ಆದಾಯ ತೆರಿಗೆ ಮೇಲಾಗಲಿ, ಪೆಟ್ರೋಲ್ ಡೀಸೆಲ್ ಮೇಲಾಗಲಿ ಅಲ್ಲ ಬದಲಾಗಿ ಚಿನ್ನ, ಬೆಳ್ಳಿ ಮೇಲೆ. ಯಾಕೆಂದರೆ ಸತತ ಒಂದು ವರ್ಷದಿಂದ ಚಿನ್ನ ಹಾಗೂ ಬೆಳ್ಳಿ ದರ ಗಗನಕ್ಕೇರಿದೆ.

ಸುಮಾರು ಒಂದು ದಶಕದಲ್ಲಿ ಭಾನುವಾರದಂದು ಬಜೆಟ್ ಅನ್ನು ಸಂಸತ್ತಿನಲ್ಲಿ ಮಂಡಿಸುತ್ತಿರುವುದು ಇದೇ ಮೊದಲು. ಸೀತಾರಾಮನ್ ಸತತ ಒಂಬತ್ತು ಬಾರಿ ಬಜೆಟ್ ಮಂಡಿಸುವ ದಾಖಲೆಯನ್ನು ನಿರ್ಮಿಸಲಿದ್ದಾರೆ. ಈ ಬಾರಿ ರಕ್ಷಣೆ, ಹಸಿರು ಇಂಧನ ಮತ್ತು ಆರೋಗ್ಯ ರಕ್ಷಣೆಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಹೇಳಲಾಗುತ್ತಿದೆ. ಉದ್ಯಮದ ಜೊತೆಗೆ, ಮಹಿಳೆಯರು, ರೈತರು, ಯುವಕರು ಮತ್ತು ತೆರಿಗೆದಾರರು ಸಹ ಈ ಬಜೆಟ್‌ನಿಂದ ಹೆಚ್ಚಿನ ನಿರೀಕ್ಷೆಗಳನ್ನು ಹೊಂದಿದ್ದಾರೆ.

2026-27ನೇ ಸಾಲಿನ ಸಾಮಾನ್ಯ ಬಜೆಟ್ ಅನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಪ್ರಸ್ತುತ ಅಧಿಕಾರಾವಧಿಯಲ್ಲಿ ಪ್ರಮುಖ ಬಜೆಟ್ ಎಂದು ಪರಿಗಣಿಸಲಾಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1, 2026 ರಂದು ಬೆಳಗ್ಗೆ 11 ಗಂಟೆಗೆ ಸಂಸತ್ತಿನಲ್ಲಿ ಈ ಬಜೆಟ್ ಅನ್ನು ಮಂಡಿಸಲಿದ್ದಾರೆ. ಕಳೆದ ವರ್ಷದ ಬಜೆಟ್ ಅನ್ನು ಜನಪ್ರಿಯ ಬಜೆಟ್ ಎಂದು ಪರಿಗಣಿಸಲಾಗಿದ್ದು, ಇದರಲ್ಲಿ ಮಧ್ಯಮ ವರ್ಗಕ್ಕೆ ದೊಡ್ಡ ಪರಿಹಾರ ಸಿಕ್ಕಿತ್ತು.

ಮತ್ತಷ್ಟು ಓದಿ: ಬಜೆಟ್ ಭಾಷಣ ಸಮಯ, ಲೈವ್ ಸ್ಟ್ರೀಮಿಂಗ್, ಪಿಡಿಎಫ್ ಕಾಪಿ ಡೌನ್​ಲೋಡ್ ಇತ್ಯಾದಿ ಮಾಹಿತಿ

ಆ ಬಜೆಟ್‌ನಲ್ಲಿ, ಆದಾಯ ತೆರಿಗೆ ವಿನಾಯಿತಿ, ಸಂಬಳ ಪಡೆಯುವ ವರ್ಗಕ್ಕೆ ಪ್ರಮಾಣಿತ ಕಡಿತ, ಕಿಸಾನ್ ಕ್ರೆಡಿಟ್ ಕಾರ್ಡ್ ಮಿತಿಯನ್ನು ಹೆಚ್ಚಿಸುವುದು, ಅಗ್ಗದ ಔಷಧಿಗಳು ಮತ್ತು ವಿಮಾ ವಲಯದಲ್ಲಿನ ಸುಧಾರಣೆಗಳಂತಹ ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಈ ವರ್ಷ ಸರ್ಕಾರದ ಗಮನ ಆರ್ಥಿಕತೆಯ ಮೇಲೆ.

ಭಾರತೀಯ ಷೇರು ಮಾರುಕಟ್ಟೆ ಇಂದು ಎಂದಿನಂತೆ ವಹಿವಾಟು ನಡೆಸಲಿದೆ ಎಂಬುದು ಗಮನಿಸಬೇಕಾದ ಸಂಗತಿ. ಬಜೆಟ್ ಕಾರಣ, ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ (NSE) ಮತ್ತು ಬಾಂಬೆ ಷೇರು ವಿನಿಮಯ ಕೇಂದ್ರ (BSE) ಭಾನುವಾರ, ಫೆಬ್ರವರಿ 1, 2026 ರಂದು ತೆರೆದಿರುತ್ತವೆ. ವಿವಿಧ ಉದ್ಯಮ ಪಾಲುದಾರರು ಸರ್ಕಾರದೊಂದಿಗೆ ತಮ್ಮ ನಿರೀಕ್ಷೆಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಜನವರಿ 27ರಂದು ನಾರ್ತ್​ ಬ್ಲಾಕ್​​ನಲ್ಲಿರುವ ಬಜೆಟ್ ಪ್ರೆಸ್​​ನಲ್ಲಿ ಹಲ್ವಾ ಸಮಾರಂಭ ನಡೆಸಲಾಯಿತು. ಈ ಸಮಾರಂಭವು 2026-2ರ ಕೇಂದ್ರ ಬಜೆಟ್​ನ ತಯಾರಿ ಪ್ರಕ್ರಿಯೆಯ ಅಂತಿಮ ಹಂತವೆಂದು ಗುರುತಿಸಲಾಗುತ್ತದೆ. ಕೇಂದ್ರ ಹಣಕಾಸು ಸಚಿವರೊಂದಿಗೆ ಹಣಕಾಸು ಸಚಿವಾಲಯದ ಅಡಿಯಲ್ಲಿ ಬರುವ ಎಲ್ಲಾ ಇಲಾಖೆಗಳ ಕಾರ್ಯದರ್ಶಿಗಳು ಮತ್ತು ಬಜೆಟ್ ತಯಾರಿಕೆಯಲ್ಲಿ ತೊಡಗಿರುವ ಇತರ ಹಿರಿಯ ಅಧಿಕಾರಿಗಳು ಇದ್ದರು.  ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸುವ ಬಜೆಟ್​ನ ಕ್ಷಣ ಕ್ಷಣದ ಅಪ್​ಡೇಟ್​ಗಳಿಗಾಗಿ ಟಿವಿ9 ಕನ್ನಡ ವೆಬ್​ಸೈಟ್ ಫಾಲೋ ಮಾಡಿ.

ಬಜೆಟ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಭಾರತೀಯ ಬ್ಯಾಟರ್​ಗಳ ಸಿಡಿಲಬ್ಬರಕ್ಕೆ ಹೊಸ ವಿಶ್ವ ದಾಖಲೆ ನಿರ್ಮಾಣ

Source link

Exit mobile version