Headlines

ಸಿದ್ದರಾಮಯ್ಯ ಪದತ್ಯಾಗದ ಬೆನ್ನಲ್ಲೇ ಒಬಿಸಿಗೆ ಕಾಂಗ್ರೆಸ್​​ ಬಂಪರ್​​: ಕಾರಣ ಇಲ್ಲಿದೆ – Kannada News

ಬೆಂಗಳೂರು, ಜೂನ್​​ 04: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ರಾಜೀನಾಮೆ ನೀಡಿದ ಬಳಿಕ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್​​ ನಿನ್ನೆಯಷ್ಟೇ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರ ಜೊತೆಗೆ 13 ಜನ ಸಚಿವರಾಗಿಯೂ ಪ್ರತಿಜ್ಞಾವಿಧಿ ಪಡೆದಿದ್ದಾರೆ. ಹೀಗಿದ್ದರೂ ಸಿಎಂ ಕುಚಿರ್ಯಿಂದ ಸಿದ್ದರಾಮಯ್ಯರನ್ನು ಇಳಿಸಿರುವುದು ಪಕ್ಷಕ್ಕೆ ಯಾವುದಾದರೂ ರೀತಿಯಲ್ಲಿ ಹೊಡೆತ ನೀಡಬಹುದೆಂಬ ಆತಂಕ ಕಾಂಗ್ರೆಸ್​​ ಹೈಕಮಾಂಡ್​​ಗಿದೆ. ಹೀಗಾಗಿಯೇ ಭಾರಿ ಲೆಕ್ಕಾಚಾರ ಹಾಕಿರುವ ವರಿಷ್ಠರು ಒಬಿಸಿಗಳಿಗೆ ಬಂಪರ್​​ ನೀಡಿದ್ದಾರೆ. ಹೌದು, ಒಬಿಸಿಗೆ ಸೇರಿರುವ ಸಿದ್ದರಾಮಯ್ಯ ಅವರ ಪದತ್ಯಾಗದ ಬೆನ್ನಲ್ಲೇ ಕಾಂಗ್ರೆಸ್​​ ಹೈಕಮಾಂಡ್​​ ಮಹತ್ವದ…

Read More

K Annamalai Birthday: ಕೆ ಅಣ್ಣಾಮಲೈ ಹುಟ್ಟುಹಬ್ಬ: ಕರ್ನಾಟಕದಲ್ಲಿ ವೃತ್ತಿಜೀವನ, ರಾಜೀನಾಮೆ ಮತ್ತು ಬಿಜೆಪಿ ಪಯಣದ ಸಮಗ್ರ ನೋಟ – Kannada News

ಚೆನ್ನೈ, ಜೂನ್ -4: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ, ಇತ್ತೀಚೆಗಷ್ಟೇ ಬಿಜೆಪಿಗೆ ರಾಜೀನಾಮೆ ನೀಡಿ ಬಹಳ ಸುದ್ದಿಯಲ್ಲಿರುವ ಜನಪ್ರಿಯ ನಾಯಕ ಕೆ. ಅಣ್ಣಾಮಲೈ(K Annamalai) ಅವರು ತಮ್ಮ 42ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಕರ್ನಾಟಕದಲ್ಲಿ ದಕ್ಷ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿ ‘ಸಿಂಗಂ’ ಎಂದೇ ಖ್ಯಾತಿ ಗಳಿಸಿದ್ದ ಅಣ್ಣಾಮಲೈ, ನಂತರ ರಾಜಕೀಯಕ್ಕೆ ಧುಮುಕಿ ದೇಶದ ಗಮನ ಸೆಳೆದ ಯುವ ಮುಖಂಡರಾಗಿದ್ದಾರೆ. ಅವರ ಜನ್ಮದಿನದ ಈ ಸಂದರ್ಭದಲ್ಲಿ ಅವರ ಕರ್ನಾಟಕದ ಕೆರಿಯರ್, ಪೊಲೀಸ್ ಹುದ್ದೆಗೆ ನೀಡಿದ ರಾಜೀನಾಮೆ, ಬಿಜೆಪಿ…

Read More

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್ – Kannada News

ಕನ್ನಡ ಚಿತ್ರರಂಗದ ಖ್ಯಾತ ನಟಿ, ‘ಬಿಗ್ ಬಾಸ್’ (Bigg Boss) ಖ್ಯಾತಿಯ ಶುಭಾ ಪೂಂಜಾ ಅವರ ವೈವಾಹಿಕ ಬದುಕು ಮದುವೆಯಾದ ನಾಲ್ಕೇ ವರ್ಷಕ್ಕೆ ಮುರಿದು ಬೀಳುವ ಸೂಚನೆ ಸಿಕ್ಕಿದೆ. ಶುಭಾ ಪೂಂಜಾ ಹಾಗೂ ಅವರ ಪತಿ ಸುಮಂತ್ ಬಿಲ್ಲವ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಕೋರಿ ಫ್ಯಾಮಿಲಿ ಕೋರ್ಟ್‌ ಮೆಟ್ಟಿಲೇರಿದ್ದಾರೆ. ಖುಷಿ ಖುಷಿಯಿಂದ ಸಂಸಾರ ನಡೆಸುತ್ತಿದ್ದ ಇವರ ಬಾಳಲ್ಲಿ ಯಾವ ಬಿರುಗಾಳಿ ಬೀಸಿತು ಎಂಬ ಪ್ರಶ್ನೆ ಅಭಿಮಾನಿಗಳನ್ನು ಕಾಡುತ್ತಿದೆ. ಕನ್ನಡದ ‘ಮೊಗ್ಗಿನ ಮನಸು’ ಸೇರಿದಂತೆ ಹಲವು ಸಿನಿಮಾಗಳ…

Read More

Vastu Guide: ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ? ಸರಳ ವಾಸ್ತು ಪರಿಹಾರ ಇಲ್ಲಿದೆ – Kannada News

ಮನೆಯಲ್ಲಿ ನಕಾರಾತ್ಮಕ ಶಕ್ತಿImage Credit source: Pinterest ಕೆಲವೊಮ್ಮೆ ಎಷ್ಟೇ ಪ್ರಯತ್ನಪಟ್ಟರೂ ಜೀವನದಲ್ಲಿ ಎಲ್ಲವೂ ಸುಗಮವಾಗಿ ಸಾಗುವುದಿಲ್ಲ. ಮನೆಯಲ್ಲಿ ಶಾಂತಿ ಕಳೆದುಹೋಗುವುದು, ಸಣ್ಣ ವಿಷಯಗಳಿಗೂ ಜಗಳಗಳು ಉಂಟಾಗುವುದು, ಆರ್ಥಿಕ ಸಮಸ್ಯೆಗಳು ಎದುರಾಗುವುದು ಮುಂತಾದ ಸಂದರ್ಭಗಳು ಹಲವರನ್ನು ಕಾಡುತ್ತವೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿರುವ ನಕಾರಾತ್ಮಕ ವಾತಾವರಣವೂ ಇದಕ್ಕೆ ಒಂದು ಕಾರಣವಾಗಿರಬಹುದು. ನಕಾರಾತ್ಮಕ ಶಕ್ತಿಯ ಲಕ್ಷಣಗಳು ಯಾವುವು? ವಾಸ್ತು ತಜ್ಞರ ಪ್ರಕಾರ, ಮನೆಯಲ್ಲಿನ ನಕಾರಾತ್ಮಕ ಶಕ್ತಿಯನ್ನು ಸೂಚಿಸುವ ಕೆಲವು ಸಾಮಾನ್ಯ ಲಕ್ಷಣಗಳಿವೆ. ಕಾರಣವಿಲ್ಲದೆ ಕುಟುಂಬ ಸದಸ್ಯರ ನಡುವೆ ಆಗಾಗ್ಗೆ…

Read More

Spiritual and Mental Peace: ಸ್ನಾನದ ನೀರಿಗೆ ಒಂದು ಚಿಟಿಕೆ ಕರ್ಪೂರ ಸೇರಿಸಿ; ಪ್ರಯೋಜನ ಸಾಕಷ್ಟಿವೆ! – Kannada News

ಭಾರತೀಯ ಸಂಪ್ರದಾಯಗಳಲ್ಲಿ ಕರ್ಪೂರImage Credit source: Pinterest ಭಾರತೀಯ ಸಂಪ್ರದಾಯಗಳಲ್ಲಿ ಕರ್ಪೂರಕ್ಕೆ ವಿಶೇಷ ಸ್ಥಾನವಿದೆ. ಪೂಜೆ-ಪುನಸ್ಕಾರಗಳಲ್ಲಿ ಮಾತ್ರವಲ್ಲದೆ, ಸ್ನಾನದ ನೀರಿಗೆ ಒಂದು ಚಿಟಿಕೆ ಕರ್ಪೂರವನ್ನು ಸೇರಿಸಿ ಸ್ನಾನ ಮಾಡುವ ಪದ್ಧತಿಯೂ ಅನೇಕ ಮನೆಗಳಲ್ಲಿ ಕಂಡುಬರುತ್ತದೆ. ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕ ನಂಬಿಕೆಗಳ ಪ್ರಕಾರ, ಕರ್ಪೂರವು ನಕಾರಾತ್ಮಕ ಶಕ್ತಿಗಳನ್ನು ದೂರ ಮಾಡಿ ಮನಸ್ಸಿಗೆ ಶಾಂತಿ ಹಾಗೂ ಸಕಾರಾತ್ಮಕತೆಯನ್ನು ನೀಡುತ್ತದೆ ಎಂದು ಹೇಳಲಾಗುತ್ತದೆ. ಅದರ ಸುವಾಸನೆಯು ವಾತಾವರಣವನ್ನು ಶುದ್ಧೀಕರಿಸುವುದರ ಜೊತೆಗೆ ಮಾನಸಿಕ ಚೈತನ್ಯವನ್ನು ಹೆಚ್ಚಿಸುತ್ತದೆ ಎಂಬ ನಂಬಿಕೆಯೂ ಇದೆ. ದುಷ್ಟ ಕಣ್ಣಿನ…

Read More

ಲಿಫ್ಟ್​ ಕೇಳುವ ನೆಪದಲ್ಲಿ ಯುವಕರ ಮೊಬೈಲ್ ದೋಚುತ್ತಿದ್ದ ಯುವತಿ ಸಿಕ್ಕಿಬಿದ್ಲು – Kannada News

ಕಳ್ಳಿಯ ಹಿಡಿದ ವ್ಯಕ್ತಿImage Credit source: ABP LIVE ಜೈಪುರ, ಜೂನ್ 04: ಲಿಫ್ಟ್​ ಕೇಳುವ ನೆಪದಲ್ಲಿ ಯುವಕರ (Mobile) ದೋಚುತ್ತಿದ್ದ ಯುವತಿ ಸಿಕ್ಕಿಬಿದ್ದಿರುವ ಘಟನೆ ಜೈಪುರದಲ್ಲಿ ನಡೆದಿದೆ. ಯುವಕನೊಬ್ಬನ ಜಾಣ್ಮೆಯಿಂದಾಗಿ ಮೊಬೈಲ್ ಫೋನ್ ಕಳ್ಳತನದ ಯತ್ನವೊಂದು ಯಶಸ್ವಿಯಾಗಿ ವಿಫಲಗೊಂಡಿದೆ. ಅಪರಿಚಿತರಿಗೆ ಸಹಾಯ ಮಾಡುವಾಗ ವಹಿಸಬೇಕಾದ ಮುನ್ನೆಚ್ಚರಿಕೆಗಳ ಕುರಿತು ಜಾಗೃತಿ ಮೂಡಿಸುವ ಈ ಘಟನೆಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ನಾಂದಿ ಹಾಡಿದೆ. ವೈರಲ್ ಆಗಿರುವ ವೀಡಿಯೊದ ಪ್ರಕಾರ, ರಸ್ತೆಯಲ್ಲಿ ನಡೆದುಹೋಗುತ್ತಿದ್ದ ಯುವಕನೊಬ್ಬನಿಗೆ ಹುಡುಗಿಯೊಬ್ಬಳು…

Read More

ಅಲ್ಲು ಅರ್ಜುನ್-ಲೋಕೇಶ್ ಸಿನಿಮಾ ನಿಂತು ಹೋಯ್ತೆ? ಸತ್ಯಾಂಶವೇನು? – Kannada News

‘ಪುಷ್ಪ’ (Pushpa) ಮತ್ತು ‘ಪುಷ್ಪ 2’ ಸಿನಿಮಾಗಳ ಅಲ್ಲು ಅರ್ಜುನ್ (Allu Arjun) ಇದೀಗ ‘ರಾಕಾ’ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿ ಆಗಿದ್ದಾರೆ. ಆದರೆ ಇಡೀ ಭಾರತೀಯ ಚಿತ್ರರಂಗದಲ್ಲಿ ಅಲ್ಲು ಅರ್ಜುನ್ ಅವರಿಗೆ ಇರುವಷ್ಟು ಒಳ್ಳೆಯ ಸಿನಿಮಾ ಲೈನಪ್ ಬಹುಷಃ ಇನ್ಯಾವ ಸ್ಟಾರ್ ನಟರಿಗೂ ಇಲ್ಲವೇನೋ. ಅಷ್ಟು ಒಳ್ಳೆಯ, ಸೂಪರ್ ಹಿಟ್ ಡೈರೆಕ್ಟರ್​​ಗಳು ಕತೆ ಹಿಡಿದುಕೊಂಡು ಅಲ್ಲು ಅರ್ಜುನ್ ಅವರಿಗಾಗಿ ಕಾಯುತ್ತಿದ್ದಾರೆ. ಆದರೆ ಇತ್ತೀಚೆಗೆ ಸುದ್ದಿಯೊಂದು ಹರಿದಾಡುತ್ತಿದ್ದು, ಅಲ್ಲು ಅರ್ಜುನ್ ಜೊತೆ ಸಿನಿಮಾ ಮಾಡಬೇಕಿದ್ದ ಲೋಕೇಶ್ ಕನಗರಾಜ್ ಅವರು…

Read More

ಜಾಗತಿಕ ವೇದಿಕೆಯಲ್ಲಿ ಮೋದಿ-ಟ್ರಂಪ್ ಐತಿಹಾಸಿಕ ಭೇಟಿಗೆ ಸಿದ್ಧತೆ: ಫ್ರಾನ್ಸ್ ಜಿ7 ಶೃಂಗಸಭೆಯಿಂದ ಭಾರತ-ಅಮೆರಿಕ ಬಾಂಧವ್ಯಕ್ಕೆ ಹೊಸ ಚೈತನ್ಯ – Kannada News

ನರೇಂದ್ರ ಮೋದಿ-ಟ್ರಂಪ್ Image Credit source: India Shipping News ನವದೆಹಲಿ, ಜೂನ್ 04: ಭಾರತ ಮತ್ತು ಅಮೆರಿಕ ನಡುವಿನ ಆರ್ಥಿಕ ಹಾಗೂ ರಾಜತಾಂತ್ರಿಕ ಸಂಬಂಧಗಳನ್ನು ಮತ್ತಷ್ಟು ಉನ್ನತ ಮಟ್ಟಕ್ಕೇರಿಸುವ ಅತ್ಯಂತ ಆಶಾದಾಯಕ ಬೆಳವಣಿಗೆಯೊಂದು ಸಂಭವಿಸಿದೆ. ಈ ತಿಂಗಳು ಫ್ರಾನ್ಸ್​​ನಲ್ಲಿ ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಭಾಗವಹಿಸುವುದು ಖಚಿತವಾಗಿದೆ. ಉಭಯ ನಾಯಕರ ನಡುವೆ ಜಾಗತಿಕ ಮಟ್ಟದ ದ್ವಿಪಕ್ಷೀಯ ಮಾತುಕತೆಗಳು ನಡೆಯಲಿವೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ತಮ್ಮ…

Read More

ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ: ತಪ್ಪಿದ ಭಾರಿ ಅನಾಹುತ – Kannada News

ನೆಲಮಂಗಲ, ಜೂನ್​​ 04: ತಾಲೂಕಿನ ಕುಣಿಗಲ್ ಬೈಪಾಸ್ ಬಳಿ ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಹಾಸನ ಕಡೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಈ ಆ್ಯಂಬುಲೆನ್ಸ್ ಮಾರ್ಗಮಧ್ಯೆ ಕ್ಯಾಂಟರ್ಗೆ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಅದೃಷ್ಟವಶಾತ್​​ ಆ್ಯಂಬುಲೆನ್ಸ್ನಲ್ಲಿದ್ದ ರೋಗಿ ಹಾಗೂ ಚಾಲಕ ಸೇರಿ ಯಾರಿಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆಯ ತೀವ್ರತೆ ಗಮನಿಸಿದರೆ, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಇನ್ನು ಅಪಘಾತದ ನಡೆದ ಕ್ಷಣಮಾತ್ರದಲ್ಲಿ ಸ್ಥಳೀಯರು ನೆರವಿಗೆ ಧಾವಿಸಿದ್ದು, ಆ್ಯಂಬುಲೆನ್ಸ್‌ನಲ್ಲಿದ್ದ ರೋಗಿಯನ್ನು ಸುರಕ್ಷಿತವಾಗಿ ಬೇರೆ ವಾಹನಕ್ಕೆ ಸ್ಥಳಾಂತರಿಸಿ…

Read More

ತುಮಕೂರು ವಿವಿ ಘಟಿಕೋತ್ಸವದಲ್ಲಿ ದೊಡ್ಡ ಎಡವಟ್ಟು: ರ್ಯಾಂಕ್ ವಿದ್ಯಾರ್ಥಿಗಳಿಗೆ ಚಿನ್ನದ ಪದಕದ ಬದಲು ನಗದು ಚೆಕ್; ಧರಣಿ ಕುಳಿತ ವಿದ್ಯಾರ್ಥಿಗಳು – Kannada News

ತುಮಕೂರು ವಿವಿ ಘಟಿಕೋತ್ಸವದಲ್ಲಿ ದೊಡ್ಡ ಎಡವಟ್ಟುImage Credit source: Tv9 kannada ತುಮಕೂರು, ಜೂ.4: ತುಮಕೂರು ವಿಶ್ವವಿದ್ಯಾಲಯದ 19ನೇ ಘಟಿಕೋತ್ಸವ ಸಮಾರಂಭದಲ್ಲಿ ಭಾರಿ ಎಡವಟ್ಟು ನಡೆದಿದೆ. ವರ್ಷಗಟ್ಟಲೆ ಕಷ್ಟಪಟ್ಟು ಓದಿ ಪ್ರಥಮ ಸ್ಥಾನ ಗಳಿಸಿ, ಚಿನ್ನದ ಪದಕ (Gold Medal) ಪಡೆಯುವ ಕನಸು ಹೊತ್ತು ಬಂದಿದ್ದ ನೂರಾರು ರ್ಯಾಂಕ್ ವಿದ್ಯಾರ್ಥಿಗಳ ಆಸೆಗೆ ವಿಶ್ವವಿದ್ಯಾಲಯವು ತಣ್ಣೀರೆರಚಿದೆ. ಚಿನ್ನದ ಪದಕ ನೀಡುವ ಬದಲು ಕೇವಲ ಪ್ರಮಾಣ ಪತ್ರ ಮತ್ತು ನಗದು ಹಣದ ಚೆಕ್ ನೀಡಿ ಕೈತೊಳೆದುಕೊಳ್ಳಲು ಮುಂದಾದ ವಿವಿಯ ನಡೆಗೆ…

Read More