ಮೊಬೈಲ್ ಅತಿಯಾಗಿ ಬಳಸಿದ್ರೆ ಮಣಿಕಟ್ಟು ನೋವು ಬರುತ್ತಾ? ಹಾಗಿದ್ರೆ ನೀವು ಈ ಸಿಂಡ್ರೋಮ್ ಬಗ್ಗೆ ತಿಳಿಯಲೇಬೇಕು – Kannada News | How Excessive Screen Time Is Damaging Your Wrist Health

ಇಂದಿನ ಡಿಜಿಟಲ್ ಯುಗದಲ್ಲಿ ಸ್ಮಾರ್ಟ್‌ಫೋನ್, ಲ್ಯಾಪ್‌ಟಾಪ್ ಹಾಗೂ ಗೇಮಿಂಗ್ ಸಾಧನಗಳ ಬಳಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಆದರೆ ಇವುಗಳ ಅತಿಯಾದ ಬಳಕೆ ಮಣಿಕಟ್ಟಿನ (Wrist) ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ವಿಶೇಷವಾಗಿ ವಿದ್ಯಾರ್ಥಿಗಳು, ಐಟಿ ಉದ್ಯೋಗಿಗಳು ಮತ್ತು ಮೊಬೈಲ್‌ ಹೆಚ್ಚು ಬಳಸುವವರಲ್ಲಿ ‘ಕಾರ್ಪಲ್ ಟನಲ್ ಸಿಂಡ್ರೋಮ್’ (CTS) ಸಮಸ್ಯೆ ಹೆಚ್ಚುತ್ತಿದೆ. ಹೆಸರು ಕೇಳಿದಾಗ ವಿಚಿತ್ರ ಎನಿಸಬಹುದು ಆದರೆ ಇದರ ಬಗ್ಗೆ ನೀವು ತಿಳಿದುಕೊಳ್ಳಲೇಬೇಕು. ಹಾಗಾದರೆ ಕಾರ್ಪಲ್ ಟನಲ್ ಸಿಂಡ್ರೋಮ್ ಎಂದರೇನು, ಲಕ್ಷಣಗಳು ಹೇಗಿರುತ್ತವೆ ಮತ್ತು ಈ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಲು ಏನು ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಕಾರ್ಪಲ್ ಟನಲ್ ಸಿಂಡ್ರೋಮ್ ಎಂದರೇನು?

ನಮ್ಮ ಮಣಿಕಟ್ಟಿನೊಳಗೆ ‘ಕಾರ್ಪಲ್ ಟನಲ್’ ಎಂಬ ಸಣ್ಣ ದಾರಿ ಇರುತ್ತದೆ. ಇದರ ಮೂಲಕ ‘ಮೀಡಿಯನ್ ನರ್ವ್’ ಎಂಬ ಪ್ರಮುಖ ನರ ಸಾಗುತ್ತದೆ. ಗಂಟೆಗಳ ಕಾಲ ಟೈಪಿಂಗ್ ಮಾಡುವುದು, ಫೋನ್ ಸ್ಕ್ರೋಲ್ ಮಾಡುವುದು ಅಥವಾ ಗೇಮಿಂಗ್ ನಲ್ಲಿ ಮುಳುಗಿರುವುದರಿಂದ ಮಣಿಕಟ್ಟಿನ ಮೇಲೆ ಹೆಚ್ಚು ಒತ್ತಡ ಬೀಳುತ್ತದೆ. ಇದರಿಂದ ನರ ಒತ್ತಡಕ್ಕೆ ಒಳಗಾಗಿ ಕಾರ್ಪಲ್ ಟನಲ್ ಸಿಂಡ್ರೋಮ್ (CTS) ಉಂಟಾಗುತ್ತದೆ. ಇದು ಮಣಿಕಟ್ಟು, ಕೈ ಮತ್ತು ಬೆರಳುಗಳಲ್ಲಿ ನೋವು, ಮರಗಟ್ಟುವಿಕೆ ಮತ್ತು ಜುಮ್ಮೆನಿಸುವಿಕೆಯನ್ನು ಉಂಟುಮಾಡುತ್ತದೆ.

ಮುಖ್ಯ ಲಕ್ಷಣಗಳು:

  • ಬೆರಳುಗಳಲ್ಲಿ ಸುಡುವ ಭಾವನೆ
  • ಮಣಿಕಟ್ಟಿನಲ್ಲಿ ನಿರಂತರ ನೋವು ಕಾಣಿಸಿಕೊಳ್ಳುವುದು
  • ವಸ್ತುಗಳನ್ನು ಗಟ್ಟಿಯಾಗಿ ಹಿಡಿಯಲು ಕಷ್ಟವಾಗುವುದು
  • ಕೈ ಬಲ ಕುಂಠಿತವಾಗುವುದು
  • ವಿಶೇಷವಾಗಿ ರಾತ್ರಿ ಸಮಯದಲ್ಲಿ ನೋವು ಹೆಚ್ಚಾಗುವುದು

ಈ ಲಕ್ಷಣಗಳನ್ನು ನಿರ್ಲಕ್ಷಿಸಿದರೆ ನರಗಳಿಗೆ ಶಾಶ್ವತ ಹಾನಿಯಾಗುವ ಅಪಾಯವಿದೆ. ಮಧುಮೇಹ, ಥೈರಾಯ್ಡ್ ಸಮಸ್ಯೆ ಅಥವಾ ಅತಿಯಾದ ತೂಕ ಇರುವವರಲ್ಲಿ ಈ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಊಟ ಮಾಡುವಾಗ ಫೋನ್ ಬಳಸುವ ಅಭ್ಯಾಸ ನಿಮಗಿದ್ಯಾ? ಇದರಿಂದ ಕರುಳಿನ ಆರೋಗ್ಯ ಹಾಳಾಗುತ್ತೆ ಹುಷಾರ್!

ಸಮಸ್ಯೆ ತಡೆಯಲು ಏನು ಮಾಡಬೇಕು?

ಪ್ರತಿ 45 ರಿಂದ 60 ನಿಮಿಷಕ್ಕೊಮ್ಮೆ ಕೆಲಸದಿಂದ ಸಣ್ಣ ವಿರಾಮ ತೆಗೆದುಕೊಳ್ಳಬೇಕು. ಟೈಪಿಂಗ್ ಮಾಡುವಾಗ ಮಣಿಕಟ್ಟನ್ನು ಸಹಜ ಸ್ಥಿತಿಯಲ್ಲಿ ಇರಿಸಬೇಕು. ಎರ್ಗೋನಾಮಿಕ್ ಕೀಬೋರ್ಡ್ ಮತ್ತು ಮೌಸ್ ಬಳಸುವುದು ಉತ್ತಮ. ಮಣಿಕಟ್ಟು ಹಾಗೂ ಬೆರಳಿನ ಸ್ಟ್ರೆಚಿಂಗ್ ವ್ಯಾಯಾಮಗಳನ್ನು ನಿಯಮಿತವಾಗಿ ಮಾಡಬೇಕು. ಸಾಧ್ಯವಾದಷ್ಟು ವಾಯ್ಸ್ ಟೈಪಿಂಗ್ ಬಳಸುವುದರಿಂದ ಒತ್ತಡ ಕಡಿಮೆಯಾಗುತ್ತದೆ. ಮಣಿಕಟ್ಟು ನೋವು ಅಥವಾ ಬೆರಳುಗಳಲ್ಲಿ ಜುಮ್ ಎನಿಸುವ ಸಮಸ್ಯೆ ಮುಂದುವರಿದರೆ ಅದನ್ನು ಸಾಮಾನ್ಯ ದಣಿವು ಎಂದು ನಿರ್ಲಕ್ಷ್ಯ ಮಾಡಬೇಡಿ. ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಸದ ರಾಶಿಯಲ್ಲಿ 59 ಜೀವಂತ ಗುಂಡುಗಳು ಪತ್ತೆ:ಪೊಲೀಸರೇ ಶಾಕ್, ಬೆಚ್ಚಿಬಿದ್ದ ಜನ – Kannada News | 59 Live Bullets Found In Garbage At Belagavi, Police investigation underway

ಬೆಳಗಾವಿ, (ಜೂನ್ 16): ಬೆಳಗಾವಿ (Belagavi) ನಗರದ ಉದ್ಯಮಬಾಗ ಕೈಗಾರಿಕಾ ಪ್ರದೇಶದಲ್ಲಿ ಬರೋಬ್ಬರಿ 59 ಜೀವಂತ ಗುಂಡುಗಳು (Live Bullets) ಪತ್ತೆಯಾಗಿವೆ. ಪೌರ ಕಾರ್ಮಿಕರು ಕಸ ವಿಂಗಡಣೆ ಮಾಡುವ ವೇಳೆಯಲ್ಲಿ ಗುಂಡುಗಳು ಪತ್ತೆಯಾಗಿದ್ದು, ಜನ ಬೆಚ್ಚಿಬಿದ್ದಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಬೆಳಗಾವಿಯ ಉದ್ಯಮಭಾಗ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದಾಗ ಗುಂಡುಗಳನ್ನು ಕಂಡು ಶಾಕ್ ಆಗಿದ್ದಾರೆ.ಇಷ್ಟು ಗುಂಡುಗಳು ಎಲ್ಲಿಂದ ಬಂದವು ಎಂದು ಒಂದು ಕ್ಷಣ ಪೊಲೀಸರಿಗೂ ಟೆನ್ಷನ್ ಆಗಿದೆ. ಸದ್ಯ ಗುಂಡುಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ದಕ್ಷಿಣಕ್ಕೆ ಕಾಲಿಟ್ಟ ಬಾಲಿವುಡ್​​ನ ದೊಡ್ಡ ನಿರ್ಮಾಣ ಸಂಸ್ಥೆ – Kannada News | Dharma Productions entered south movie industry

ದಶಕಗಳಿಂದಲೂ ಹಿಂದಿ ಸಿನಿಮಾ (Cinema) ನಿರ್ಮಾಣದಲ್ಲಿ ತೊಡಗಿಕೊಂಡಿರುವ ದೊಡ್ಡ ನಿರ್ಮಾಣ ಸಂಸ್ಥೆ ಇದೇ ಮೊದಲ ಬಾರಿಗೆ ದಕ್ಷಿಣದ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದೆ. ಕರಣ್ ಜೋಹರ್ ಅವರ ತಂದೆ ಸ್ಥಾಪಿಸಿದ್ದ ಧರ್ಮಾ ಪ್ರೊಡಕ್ಷನ್ಸ್ ಬಾಲಿವುಡ್​ನ ಬಲು ದೊಡ್ಡ ನಿರ್ಮಾಣ ಸಂಸ್ಥೆ, ನೂರಾರು ಹಿಂದಿ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಈ ನಿರ್ಮಾಣ ಸಂಸ್ಥೆ ಇದೇ ಮೊದಲ ಬಾರಿಗೆ ದಕ್ಷಿಣದ ಸಿನಿಮಾ ಮೇಲೆ ನೇರವಾಗಿ ಬಂಡವಾಳ ತೊಡಗಿಸಿದೆ. ಕಳೆದ ಕೆಲ ವರ್ಷಗಳಿಂದ ದಕ್ಷಿಣದ ಸಿನಿಮಾಗಳನ್ನು ಉತ್ತರ ಭಾರತದಲ್ಲಿ ವಿತರಣೆ ಮಾತ್ರ ಮಾಡುತ್ತಿದ್ದ ಧರ್ಮಾ, ಈಗ ನೇರವಾಗಿ ಚಿತ್ರ ನಿರ್ಮಾಣಕ್ಕೆ ಇಳಿದಿದೆ.

ಧರ್ಮ ಪ್ರೊಡಕ್ಷನ್ಸ್ ಇದೀಗ ಮಲಯಾಳಂ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದೆ. ಪೃಥ್ವಿರಾಜ್ ಸುಕುಮಾರನ್ ಮತ್ತು ಮಂಜು ವಾರಿಯರ್ ನಟಿಸುತ್ತಿರುವ ‘ಒಡಿಯನ್ – ದಿ ಏಜ್ ಆಫ್ ಇಲ್ಯೂಷನ್’ ಹೆಸರಿನ ಹಾರರ್ ಸಿನಿಮಾಕ್ಕೆ ಧರ್ಮಾ ಪ್ರೊಡಕ್ಷನ್ ಬಂಡವಾಳ ಹೂಡುತ್ತಿದೆ. 19ನೇ ಶತಮಾನದ ಜನಪದ ಹಾರರ್ ಥ್ರಿಲ್ಲರ್ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಬಾಲಿವುಡ್‌ನ ಅತ್ಯಂತ ಪ್ರಭಾವಶಾಲಿ ಬ್ಯಾನರ್‌ಗಳಲ್ಲಿ ಒಂದಾದ ಧರ್ಮ ಪ್ರೊಡಕ್ಷನ್ಸ್ ಮತ್ತು ಮಲಯಾಳಂ ಚಿತ್ರರಂಗದ ಸ್ಟಾರ್ ನಟ ಪೃಥ್ವಿರಾಜ್ ಪ್ರೊಡಕ್ಷನ್ಸ್ ನಡುವಿನ ಈ ಸಹಯೋಗ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ.

‘ಭೂತಕಾಲಂ’ ಮತ್ತು ‘ಬ್ರಮಯುಗಂ’ನಂತಹ ಸೂಪರ್ ಹಿಟ್ ಮತ್ತು ವಿಮರ್ಶಕರಿಂದಲೂ ಸಾಕಷ್ಟು ಮೆಚ್ಚುಗೆ ಪಡೆದ ಹಾರರ್ ಚಿತ್ರಗಳನ್ನು ನಿರ್ದೇಶಿಸಿರುವ ರಾಹುಲ್ ಸದಾಶಿವನ್ ‘ಒಡಿಯನ್’ ಚಿತ್ರಕ್ಕೆ ಆಕ್ಷನ್-ಕಟ್ ಹೇಳುತ್ತಿದ್ದಾರೆ. ಚಿತ್ರದ ಪೋಸ್ಟರ್ ಬಹಳ ನಿಗೂಢವಾಗಿದ್ದು, ಪುರಾತನ ಕನ್ನಡಿಯೊಂದರ ಒಳಗೆ ಅಸ್ಥಿಪಂಜರದಂತಹ ಆಕೃತಿ ಕಾಣುವ ದೃಶ್ಯ ಪೋಸ್ಟರ್​​ನಲ್ಲಿದೆ. ಈ ಚಿತ್ರವು ಮಾಟ-ಮಂತ್ರ, ರೂಪ ಬದಲಿಸುವ ಶಕ್ತಿ ಮತ್ತು ಪ್ರಾಚೀನ ಜಾನಪದ ಕಥೆಗಳನ್ನು ಆಧರಿಸಿದೆ.

ಇದನ್ನೂ ಓದಿ:ಚಿತ್ರರಂಗಕ್ಕೆ ಮರಳುತ್ತಿದ್ದಾರೆ ಬಾಲಿವುಡ್ ಸ್ಟಾರ್ ನಟಿ ಕತ್ರಿನಾ ಕೈಫ್

ಕೇರಳದ ಸುಪ್ರಸಿದ್ಧ ‘ಒಡಿಯನ್’ ಜನಪದ ಕಥೆಗಳನ್ನು ಆಧರಿಸಿದ ಈ ಚಿತ್ರವು, ಕತ್ತಲಲ್ಲಿ ಪ್ರಾಣಿಗಳಾಗಿ ರೂಪಾಂತರಗೊಳ್ಳುವ ಮತ್ತು ಮಾಟ-ಮಂತ್ರಗಳನ್ನು ಬಲ್ಲವರೆಂದು ನಂಬಲಾದ ಭಯಾನಕ ವ್ಯಕ್ತಿಗಳ ಕಥೆಯನ್ನು ಹೇಳಲಿದೆ. ತನ್ನ ವಿಶಿಷ್ಟ ಶೈಲಿಯ ನಿರೂಪಣೆಗೆ ಹೆಸರಾದ ರಾಹುಲ್ ಸದಾಶಿವನ್, ಈ ದಂತಕಥೆಯನ್ನು ಹಾರರ್ ಮೂಲಕ ಮತ್ತಷ್ಟು ರೋಚಕವಾಗಿ ತೆರೆಮೇಲೆ ತರಲು ಸಿದ್ಧರಾಗಿದ್ದಾರೆ.

ಕರಣ್ ಜೋಹರ್, ಅದಾರ್ ಪೂನಾವಾಲಾ, ಅಪೂರ್ವ ಮೆಹ್ತಾ ಮತ್ತು ಸುಪ್ರಿಯಾ ಮೆನನ್ ಅವರುಗಳು ಧರ್ಮಾ ಪ್ರೊಡಕ್ಷನ್ಸ್ ಮೂಲಕ ಈ ಸಿನಿಮಾ ನಿರ್ಮಿಸುತ್ತಿದ್ದಾರೆ. ಭಾರಿ ಬಜೆಟ್​​ನಲ್ಲಿ ಸಿನಿಮಾವನ್ನು ನಿರ್ಮಾಣ ಮಾಡಲಾಗುತ್ತಿದ್ದು, ಈ ಚಿತ್ರವು ಮಲಯಾಳಂ, ತಮಿಳು, ತೆಲುಗು, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಪುಸ್ತಕ ತೆರೆದ ತಕ್ಷಣವೇ ನಿದ್ದೆ ಬರೋದೇಕೆ? ಅಧ್ಯಯನದ ವೇಳೆ ಬರುವ ಈ ಸೋಮಾರಿತನದ ಹಿಂದಿನ ಕಾರಣವೇನು? – Kannada News | Why do we feel sleepy when sit down to studying

ಅದೇನೋ  ಗೊತ್ತಿಲ್ಲ ನಿದ್ದೆ (Sleep) ಮಾಡ್ಬೇಕು ಅಂತ ಮಲಗಿದ್ರೆ ನಿದ್ದೆಯೇ  ಬರೋದಿಲ್ಲ, ಅದೇ  ಪುಸ್ತಕ ತೆರೆದು ಓದಲು ಕುಳಿತ ತಕ್ಷಣ ಹೆಚ್ಚಿನವರಿಗೆ ಆಕಳಿಕೆ, ನಿದ್ದೆ ಬಂದು ಬಿಡುತ್ತದೆ. ಅದರಲ್ಲೂ ಈ ಪರೀಕ್ಷೆ ಸಮಯದಲ್ಲಿ ಚೆನ್ನಾಗಿ ಓದಬೇಕು ಎಂದುಕೊಳ್ಳುವ ವಿದ್ಯಾರ್ಥಿಗಳು ಪುಸ್ತಕ ತೆರೆಯುತ್ತಿದ್ದಂತೆಯೇ ನಿದ್ರೆಗೆ ಜಾರಿ ಬಿಡುತ್ತಾರೆ. ಅಧ್ಯಯನದ ಸಮಯದಲ್ಲಿ ನಿದ್ದೆ ಬಂದಂತಹ ಅನುಭವ ನಿಮಗೂ ಆಗಿರುತ್ತಲ್ವಾ, ಅಷ್ಟಕ್ಕೂ ಓದುವ ವೇಳೆ ನಿದ್ದೆ ಬರೋದೇಕೆ, ಸೋಮಾರಿತನ ಆವರಿಸೋದೇಕೆ, ಅದರ ಹಿಂದಿನ ಕಾರಣವೇನು ಎಂಬುದನ್ನು ತಿಳಿದುಕೊಳ್ಳಿ.

ಓದುವಾಗ ನಿದ್ದೆ ಬರಲು ಕಾರಣವೇನು?

ಅಧ್ಯಯನ ಮಾಡುವಾಗ ನಮ್ಮ ಕಣ್ಣುಗಳು ನಿರಂತರವಾಗಿ ಒಂದೇ ಸ್ಥಳದಲ್ಲಿ ಕೇಂದ್ರೀಕೃತವಾಗಿರುತ್ತವೆ, ಇದು ಕಣ್ಣಿನ ಸ್ನಾಯುಗಳ ಮೇಲೆ ಹೆಚ್ಚಿನ ಒತ್ತಡವನ್ನುಂಟು ಮಾಡುತ್ತದೆ ಮತ್ತು ಆಯಾಸಕ್ಕೆ ಕಾರಣವಾಗುತ್ತದೆ. ಇದಲ್ಲದೆ, ಮೆದುಳು ನಿರಂತರವಾಗಿ ಹೊಸ ಮಾಹಿತಿಯನ್ನು ಪ್ರಕ್ರಿಯೆಗೊಳಿಸಲು ಮತ್ತು ಸಂಗ್ರಹಿಸಲು ಪ್ರಯತ್ನಿಸುತ್ತಿರುತ್ತದೆ, ಇದು ಆಯಾಸಕ್ಕೆ ಕಾರಣವಾಗುತ್ತದೆ. ಆದ್ದರಿಂದ, ಓದಲು ಶುರು ಮಾಡಿದ ಸ್ವಲ್ಪ ಸಮಯದ ನಂತರ, ನಮಗೆ ನಿದ್ರೆ ಬರಲು ಪ್ರಾರಂಭಿಸುತ್ತದೆ ಮತ್ತು ಓದಿನ ಕಡೆ ಗಮನಹರಿಸಲು ಸಾಧ್ಯವಾಗುವುದಿಲ್ಲ.

ಅಧ್ಯಯನ ಮಾಡುವಾಗ ಕಣ್ಣುಗಳು ನಿರಂತರವಾಗಿ ಒಂದು ಹಂತದ ಮೇಲೆ ಕೇಂದ್ರೀಕರಿಸುತ್ತವೆ. ಇದು ಕಣ್ಣಿನ ಸ್ನಾಯುಗಳ ಮೇಲೆ ಒತ್ತಡವನ್ನುಂಟು ಮಾಡುತ್ತದೆ ಮತ್ತು ಆಯಾಸಕ್ಕೆ ಕಾರಣವಾಗುತ್ತದೆ. ಕಣ್ಣುಗಳು ದಣಿದಾಗ, ಮೆದುಳಿಗೆ ವಿಶ್ರಾಂತಿಯೂ ಬೇಕಾಗುತ್ತದೆ. ಇದು ಅಧ್ಯಯನ ಮಾಡುವಾಗ ನಿದ್ರೆಯ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಅಲ್ಲದೆ, ಅಧ್ಯಯನ ಮಾಡುವಾಗ, ಮೆದುಳು ಹೊಸ ಮಾಹಿತಿಯನ್ನು ಅರ್ಥಮಾಡಿಕೊಳ್ಳಲು ಮತ್ತು ನೆನಪಿಟ್ಟುಕೊಳ್ಳಲು ಕೆಲಸ ಮಾಡುತ್ತದೆ. ಈ ಪ್ರಕ್ರಿಯೆಯು ಶಕ್ತಿಯನ್ನು ಬಳಸುತ್ತದೆ. ದೀರ್ಘಕಾಲದವರೆಗೆ ನಿರಂತರ ಅಧ್ಯಯನವು ಮೆದುಳನ್ನು ಆಯಾಸಗೊಳಿಸುತ್ತದೆ ಮತ್ತು ದೇಹವು ನಿದ್ರೆಗೆ ಸಂಕೇತ ನೀಡಲು ಪ್ರಾರಂಭಿಸುತ್ತದೆ. ಅಧ್ಯಯನ ಮಾಡಲು ಪ್ರಾರಂಭಿಸಿದಾಗ, ಮೆದುಳು ಹೆಚ್ಚು ಯೋಚಿಸಬೇಕು ಮತ್ತು ಗಮನಹರಿಸಬೇಕು. ಇದು ಮೆದುಳಿನ ಮೇಲಿನ ಒತ್ತಡವು ಇನ್ನಷ್ಟು ಹೆಚ್ಚಾಗುತ್ತದೆ.

ಅಂತಹ ಪರಿಸ್ಥಿತಿಯಲ್ಲಿ, ಮೆದುಳು ದೇಹಕ್ಕೆ ವಿಶ್ರಾಂತಿ ನೀಡುವಂತೆ ಸಂಕೇತ ನೀಡುತ್ತದೆ. ಕೆಲವೊಮ್ಮೆ ಈ ಸಂಕೇತವು ನಿದ್ರೆಯ ರೂಪದಲ್ಲಿ ಪ್ರಕಟವಾಗುತ್ತದೆ, ಇದರಿಂದಾಗಿ  ಅಧ್ಯಯನ ಮಾಡುವಾಗ ಇದ್ದಕ್ಕಿದ್ದಂತೆ ನಿದ್ರೆಗೆ ಜಾರುವುದು. ಅದರಲ್ಲೂ ಶಾಂತ ವಾತಾವರಣದಲ್ಲಿ ಅಧ್ಯಯನ ಮಾಡುವುದರಿಂದ ದೇಹಕ್ಕೆ ವಿಶ್ರಾಂತಿ ಪಡೆಯಲು ಅವಕಾಶ ಸಿಗುತ್ತದೆ. ಇದರಿಂದ ನಿದ್ರೆ ಬೇಗನೆ ಬರುತ್ತದೆ.

ಇದನ್ನೂ ಓದಿ: ವಿಶ್ವದ ಅತ್ಯಂತ ಬಡ ರಾಷ್ಟ್ರ ಯಾವುದು ಗೊತ್ತಾ? ದೇಶದ ಸ್ಥಿತಿಯನ್ನು ತಿಳಿದರೆ ನೀವು ಆಘಾತಕ್ಕೊಳಗಾಗುತ್ತೀರಿ

ವಿಶ್ರಾಂತಿ ಭಂಗಿ ಮತ್ತು ನಿದ್ರೆಯ ನಡುವಿನ ಸಂಬಂಧ:

ಅಧ್ಯಯನ ಮಾಡುವಾಗ ನಾವು ನಿದ್ರಿಸಲು ಒಂದು ಮುಖ್ಯ ಕಾರಣವೆಂದರೆ ನಮ್ಮ ದೇಹದ ವಿಶ್ರಾಂತಿ ಸ್ಥಿತಿ. ನಾವು ಅಧ್ಯಯನ ಮಾಡುವಾಗ, ನಮ್ಮ ದೇಹದ ಹೆಚ್ಚಿನ ಭಾಗವು ವಿಶ್ರಾಂತಿಯಲ್ಲಿರುತ್ತದೆ, ನಮ್ಮ ಕಣ್ಣುಗಳು ಮತ್ತು ಮೆದುಳು ಮಾತ್ರ ಸಕ್ರಿಯವಾಗಿರುತ್ತದೆ. ಈ ಸ್ಥಿತಿಯಲ್ಲಿ, ನಮ್ಮ ದೇಹವು ವಿಶ್ರಾಂತಿ ಪಡೆಯಲು ಸಂಕೇತಗಳನ್ನು ಕಳುಹಿಸುತ್ತದೆ, ಇದರಿಂದಾಗಿ ನಮ್ಮ ಸ್ನಾಯುಗಳು ವಿಶ್ರಾಂತಿ ಪಡೆಯುತ್ತವೆ ಮತ್ತು ನಾವು ನಿದ್ರಿಸಲು ಪ್ರಾರಂಭಿಸುತ್ತೇವೆ. ನಮ್ಮ ದೇಹವು ವಿಶ್ರಾಂತಿ ಪಡೆದಾಗ, ಅವು ಸ್ವಾಭಾವಿಕವಾಗಿ ನಿದ್ರೆಗೆ ಜಾರಿಕೊಳ್ಳುತ್ತವೆ.

ಅಧ್ಯಯನ ಮಾಡುವಾಗ ನಿದ್ರೆ ಬಾರದಂತೆ ಮಾಡಲು ಏನು ಮಾಡಬೇಕು?

ಉತ್ತಮ ಬೆಳಕಿನಲ್ಲಿ ಅಧ್ಯಯನ ಮಾಡಿ: ಮಂದ ಬೆಳಕಿನಲ್ಲಿ ಅಧ್ಯಯನ ಮಾಡುವುದರಿಂದ ಕಣ್ಣಿನ ಒತ್ತಡ ಹೆಚ್ಚಾಗುತ್ತದೆ ಮತ್ತು ನಿದ್ರಿಸುವ ಸಾಧ್ಯತೆ ಹೆಚ್ಚಾಗುತ್ತದೆ. ಆದ್ದರಿಂದ, ಯಾವಾಗಲೂ ಸಾಕಷ್ಟು ಬೆಳಕಿರುವ ಸ್ಥಳದಲ್ಲಿ ಅಧ್ಯಯನ ಮಾಡಿ.

ತೆರೆದ ಸ್ಥಳದಲ್ಲಿ ಅಧ್ಯಯನ ಮಾಡಿ: ಸಾಕಷ್ಟು ತಾಜಾ ಗಾಳಿ ಮತ್ತು ಸಾಕಷ್ಟು ಬೆಳಕು ಇರುವ ಸ್ಥಳವನ್ನು ಆರಿಸಿ. ಇದು ನಿಮ್ಮ ಮನಸ್ಸು ಮತ್ತು ದೇಹ ಎರಡನ್ನೂ ಉಲ್ಲಾಸಗೊಳಿಸುತ್ತದೆ.

ವಿರಾಮ ತೆಗೆದುಕೊಳ್ಳಿ: ಗಂಟೆಗಟ್ಟಲೆ ಸತತವಾಗಿ ಅಧ್ಯಯನ ಮಾಡುವುದರಿಂದ ಆಯಾಸ ಉಂಟಾಗುತ್ತದೆ ಮತ್ತು ನಿದ್ರೆ ಬರುತ್ತದೆ. ಆದ್ದರಿಂದ, ಪ್ರತಿ 30-45 ನಿಮಿಷಗಳಿಗೊಮ್ಮೆ ಕೆಲವು ನಿಮಿಷಗಳ ವಿರಾಮ ತೆಗೆದುಕೊಳ್ಳಿ.

ಆರೋಗ್ಯಕರ ಆಹಾರ: ಅಧ್ಯಯನದ ಸಂದರ್ಭದಲ್ಲಿ ಭಾರವಾದ ಆಹಾರ ಸೇವನೆಯನ್ನು ತಪ್ಪಿಸಿ. ಸಮತೋಲಿತ ಆಹಾರವನ್ನು ಸೇವಿಸಿ. ಇದು ನಿಮ್ಮ ಮನಸ್ಸು ಮತ್ತು ದೇಹವು ಆರೋಗ್ಯವಾಗಿರುತ್ತದೆ ಮತ್ತು ನೀವು ನಿಮ್ಮ ಅಧ್ಯಯನದ ಮೇಲೆ ಹೆಚ್ಚು ಗಮನಹರಿಸಲು ಸಾಧ್ಯವಾಗುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಜಮ್ಮು ಕಾಶ್ಮೀರದ ಎಲ್​ಒಸಿ ಬಳಿ ಆಕಸ್ಮಿಕ ಗ್ರೆನೇಡ್ ಸ್ಫೋಟ; ನಾಲ್ವರು ಭಾರತೀಯ ಯೋಧರಿಗೆ ಗಾಯ – Kannada News | 4 Soldiers Injured In Blast Near LoC in Jammu and Kashmir Rajouri

ಶ್ರೀನಗರ, ಜೂನ್ 16: ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ (LoC) ಮುಂಚೂಣಿ ಪ್ರದೇಶದಲ್ಲಿ ಆಕಸ್ಮಿಕವಾಗಿ ಗ್ರೆನೇಡ್ ಸ್ಫೋಟಗೊಂಡು ಭಾರತೀಯ ಸೇನೆಯ ನಾಲ್ವರು ಸೈನಿಕರು ಗಾಯಗೊಂಡಿರುವ ಘಟನೆ ನಡೆದಿದೆ. ರಕ್ಷಣಾ ಇಲಾಖೆಯ ಪ್ರಕಟಣೆಯ ಪ್ರಕಾರ, ಯೋಧರು ಗಡಿ ಭಾಗದಲ್ಲಿ ನಿಯಮಿತ ಗಸ್ತು ಕಾರ್ಯದಲ್ಲಿ ತೊಡಗಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್‌ನ ಗಡಿ ಭಾಗದಲ್ಲಿ ಯೋಧರ ತಂಡವೊಂದು ಕರ್ತವ್ಯದಲ್ಲಿದ್ದಾಗ, ಅವರ ಬಳಿಯಿದ್ದ ಗ್ರೆನೇಡ್‌ವೊಂದು ಆಕಸ್ಮಿಕವಾಗಿ ಸ್ಫೋಟಗೊಂಡಿದೆ. ಈ ಸ್ಫೋಟದ ತೀವ್ರತೆಗೆ ಸ್ಥಳದಲ್ಲಿದ್ದ ನಾಲ್ವರು ಸೈನಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಓರ್ವ ಉನ್ನತ ಶ್ರೇಣಿಯ ಅಧಿಕಾರಿ ಅಂದರೆ ಜೂನಿಯರ್ ಕಮಿಷನ್ಡ್ ಆಫೀಸರ್ (JCO) ಕೂಡ ಸೇರಿದ್ದಾರೆ.

ಇದನ್ನೂ ಓದಿ: ವೀರ ಯೋಧರಿಗೆ ರಾಷ್ಟ್ರಪತಿಯಿಂದ ಕೀರ್ತಿ ಚಕ್ರ, ವೀರ ಚಕ್ರ, ಶೌರ್ಯ ಚಕ್ರ ಪ್ರಶಸ್ತಿ ಪ್ರದಾನ

ಸ್ಫೋಟದ ಸದ್ದು ಕೇಳಿಸುತ್ತಿದ್ದಂತೆ ಹತ್ತಿರದ ಪೋಸ್ಟ್‌ಗಳಲ್ಲಿದ್ದ ಇತರೆ ಸೈನಿಕರು ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಗಾಯಾಳು ಸೈನಿಕರಿಗೆ ಮೊದಲು ಸ್ಥಳೀಯ ಸೇನಾ ವೈದ್ಯಕೀಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಇದಾದ ನಂತರ ಗಾಯಗಳ ತೀವ್ರತೆಯನ್ನು ಪರಿಗಣಿಸಿ, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಾಯುಪಡೆಯ ವಿಶೇಷ ಹೆಲಿಕಾಪ್ಟರ್ ಮೂಲಕ ಉಧಂಪುರದಲ್ಲಿರುವ ಸೇನೆಯ ಪ್ರಮುಖ ಕಮಾಂಡ್ ಆಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ನಾಲ್ಕೂ ಜನ ಯೋಧರು ವೈದ್ಯರ ನಿಗಾದಲ್ಲಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಸೇನಾ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಗಡಿ ನಿಯಂತ್ರಣ ರೇಖೆಯಂತಹ ಸೂಕ್ಷ್ಮ ಪ್ರದೇಶದಲ್ಲಿ ಗ್ರೆನೇಡ್ ಸ್ಫೋಟಗೊಂಡಿರುವುದರಿಂದ ಸೇನೆಯು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದೆ. ಇದು ತಾಂತ್ರಿಕ ದೋಷದಿಂದ ಸಂಭವಿಸಿದೆಯೇ ಅಥವಾ ಗ್ರೆನೇಡ್ ನಿರ್ವಹಣೆಯ ವೇಳೆ ಆದ ಆಕಸ್ಮಿಕ ತಪ್ಪೇ ಎಂಬುದನ್ನು ಪತ್ತೆಹಚ್ಚಲು ಉನ್ನತ ಮಟ್ಟದ ಆಂತರಿಕ ತನಿಖೆಗೆ ಆದೇಶಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಗಡಿ ಭಾಗದಲ್ಲಿ ಭದ್ರತೆಯನ್ನು ತೀವ್ರಗೊಳಿಸಲಾಗಿದ್ದು, ಈ ಘಟನೆಯ ನಂತರ ಮುಂಚೂಣಿ ಪೋಸ್ಟ್‌ಗಳಲ್ಲಿ ಮತ್ತಷ್ಟು ಜಾಗರೂಕತೆ ವಹಿಸಲು ಸೂಚಿಸಲಾಗಿದೆ.

ಇದನ್ನೂ ಓದಿ: ಜಮ್ಮು ಮತ್ತು ಕಾಶ್ಮೀರ: ಉಗ್ರ ವಿರೋಧಿ ಕಾರ್ಯಾಚರಣೆ ವೇಳೆ ಕಂದಕಕ್ಕೆ ಬಿದ್ದು ಯೋಧ ಹುತಾತ್ಮ

ಕಳೆದ 10 ದಿನಗಳಲ್ಲಿ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ನಡೆದಿರುವ ಮೂರನೇ ಸ್ಫೋಟದ ಘಟನೆ ಇದಾಗಿದೆ. ಈ ಮೂರೂ ಘಟನೆಗಳಲ್ಲಿ ಒಟ್ಟು ಇಬ್ಬರು ಯೋಧರು ಹುತಾತ್ಮರಾಗಿದ್ದು, ಆರು ಸೈನಿಕರು ಗಾಯಗೊಂಡಿದ್ದಾರೆ. ಒಂದೆಡೆ ಗಡಿ ಭಾಗದಲ್ಲಿ ಆಕಸ್ಮಿಕ ಸ್ಫೋಟಗಳು ಆತಂಕ ಸೃಷ್ಟಿಸುತ್ತಿದ್ದರೆ, ಮತ್ತೊಂದೆಡೆ ರಾಜೌರಿ ಜಿಲ್ಲೆಯಲ್ಲಿ ಅಡಗಿರುವ ಉಗ್ರರ ಗುಂಪನ್ನು ಪತ್ತೆಹಚ್ಚಲು ಭಾರತೀಯ ಸೇನೆಯು ಕಳೆದ 3 ವಾರಗಳಿಂದ ಬೃಹತ್ ಕಾರ್ಯಾಚರಣೆಯನ್ನು ನಡೆಸುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

80ನೇ ವಯಸ್ಸಿನಲ್ಲಿ 161 ಕಿ.ಮೀ ಪ್ರಯಾಣ ಮಾಡಿ ವೈಭವ್​ನನ್ನು ಭೇಟಿಯಾದ ದಿಗ್ಗಜ ಕ್ರಿಕೆಟಿಗ – Kannada News | 15 Year Old Vaibhav Sooryavanshi’s Viral Moment with Sri Lankan Legend Anura Tennekoon

ಭಾರತ ಎ ತಂಡ ತ್ರಿಕೋನ ಏಕದಿನ ಸರಣಿಗಾಗಿ ಶ್ರೀಲಂಕಾ ಪ್ರವಾಸ ಮಾಡಿದೆ. ಈ ಪ್ರವಾಸಕ್ಕೆ ಭಾರತ ಎ (India A) ತಂಡದಲ್ಲಿ 15 ವರ್ಷದ ವೈಭವ್ ಸೂರ್ಯವಂಶಿ (Vaibhav Sooryavanshi) ಅವರನ್ನು ಸಹ ಆಯ್ಕೆ ಮಾಡಲಾಗಿದೆ. ಇದುವರೆಗೆ ಈ ಪ್ರವಾಸದಲ್ಲಿ ವೈಭವ್ ಅವರ ಬ್ಯಾಟಿಂಗ್‌ ಹೆಚ್ಚು ಪರಿಣಾಮಕಾರಿಯಾಗಿರದಿದ್ದರೂ ಅವರ ಆಟವನ್ನು ನೋಡಲು ಕ್ರೀಡಾಂಗಣಕ್ಕೆ ಬರುವ ಅಭಿಮಾನಿಗಳ ಬಳಗ ಹೆಚ್ಚಾಗಿದೆ. ವೈಭವ್​ಗೆ ಭಾರತದಲ್ಲಿ ಮಾತ್ರವಲ್ಲ, ವಿದೇಶದಲ್ಲೂ ಅಭಿಮಾನಿಗಳ ಸಂಖ್ಯೆ ಹೆಚ್ಚಿದೆ. ಈ ಅಭಿಮಾನಿಗಳ ಬಳಗದಲ್ಲಿ ಮಾಜಿ ಕ್ರಿಕೆಟಿಗರು, ದಿಗ್ಗಜ ಕ್ರಿಕೆಟಿಗರು ಸೇರಿದ್ದಾರೆ. ಅದರಂತೆ ಶ್ರೀಲಂಕಾದ ಮಾಜಿ ದಿಗ್ಜಜ ನಾಯಕ ಅನುರ ತೆನ್ನೆಕುನ್, ವೈಭವ್ ಸೂರ್ಯವಂಶಿಯನ್ನು ಭೇಟಿಯಾಗಲು ಕ್ರೀಡಾಂಗಣಕ್ಕೆ ಬಂದಿದ್ದು, ಇವರಿಬ್ಬರ ಸಮಾಗಮದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಲಂಕಾದ ದಿಗ್ಗಜ ಕ್ರಿಕೆಟಿಗನನ್ನು ಭೇಟಿಯಾದ ವೈಭವ್

ವಾಸ್ತವವಾಗಿ ಜೂನ್ 15 ರಂದು ಡಂಬುಲ್ಲಾದಲ್ಲಿ ಭಾರತ ಎ ಹಾಗೂ ಶ್ರೀಲಂಕಾ ಎ ತಂಡಗಳ ನಡುವೆ ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಭಾರತ ಸೋತಿತು. ಇದೇ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ, ಶ್ರೀಲಂಕಾ ಎ ತಂಡದ ಆಟಗಾರರ ಜೊತೆಗೆ ಮೈದಾನದಲ್ಲಿ ಜಗಳ ಮಾಡಿಕೊಂಡ ವಿಡಿಯೋ ಕೂಡ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಡಿಯೋ ಜೊತೆಗೆ ಇನ್ನೊಂದು ವಿಡಿಯೋ ಕೂಡ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಆ ವಿಡಿಯೋದಲ್ಲಿ ವೈಭವ್ ಸೂರ್ಯವಂಶಿ, ಶ್ರೀಲಂಕಾ ಏಕದಿನ ಕ್ರಿಕೆಟ್ ತಂಡದ ಮೊದಲ ನಾಯಕ ಅನುರ ತೆನ್ನೆಕುನ್ ಅವರನ್ನು ಭೇಟಿಯಾಗಿ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಅವರ ಕಾಲು ಮುಟ್ಟಿ ಆರ್ಶೀವಾದ ಪಡೆದಿರುವುದನ್ನು ಕಾಣಬಹುದಾಗಿದೆ.

ಇಲ್ಲಿ ಇನ್ನೊಂದು ಗಮನಿಸಬೇಕಾದ ಅಂಶವೆಂದರೆ, 80 ವರ್ಷ ವಯಸ್ಸಿನ ಅನುರ ತೆನ್ನೆಕುನ್ ಅವರು ವೈಭವ್ ಸೂರ್ಯವಂಶಿಯನ್ನು ಭೇಟಿಯಾಗಲು ಕೊಲಂಬೊದಿಂದ ಡಂಬುಲ್ಲಾಗೆ 161 ಕಿಲೋಮೀಟರ್ ಪ್ರಯಾಣಿಸಿದ್ದಾರೆ ಎಂಬುದು. ಪಂದ್ಯದ ನಂತರ ವೈಭವ್ ಡ್ರೆಸ್ಸಿಂಗ್ ಕೋಣೆಯಿಂದ ಹೊರಬಂದು, ಅನುರ ತೆನ್ನೆಕುನ್ ಅವರನ್ನು ಭೇಟಿ ಮಾಡಿದ್ದಾರೆ. ಅನುರ ಅವರೊಂದಿಗೆ ಕೆಲ ಸಮಯ ಮಾತನಾಡಿದ ವೈಭವ್, ಆ ಬಳಿಕ ಅವರ ಪಾದಗಳನ್ನು ಮುಟ್ಟಿ ಆರ್ಶೀವಾದ ಪಡೆದಿದ್ದಾರೆ.

ನಾನು ತುಂಬಾ ಪ್ರಭಾವಿತನಾಗಿದ್ದೆ

ಇದೇ ವೇಳೆ ವೈಭವ್​ಗೆ ಕಿವಿ ಮಾತು ಹೇಳಿದ ಅನುರ ತೆನ್ನೆಕೂನ್, ನಿನ್ನ ಆಟದ ಮೇಲೆ ಗಮನಹರಿಸು ಮತ್ತು ಹೊರಗಿನ ಅಂಶಗಳನ್ನು ನಿರ್ಲಕ್ಷಿಸು. ದುರದೃಷ್ಟವಶಾತ್, ಇಂದಿನ ಪಂದ್ಯದಲ್ಲಿ ನೀವು ನಿಮ್ಮ ಲಯವನ್ನು ಕಂಡುಕೊಳ್ಳಲಾಗಲಿಲ್ಲ. ಆದರೆ ಇದು ಆಟದ ಭಾಗವಾಗಿದ್ದು, ಪ್ರತಿದಿನ ಲಯದಲ್ಲಿರಲು ಸಾಧ್ಯವಿಲ್ಲ ಎಂದಿದ್ದಾರೆ. ಇದನ್ನು ಕೇಳಿದ ವೈಭವ್ ಸೂರ್ಯವಂಶಿ ಮೌನವಾಗಿ ತಲೆಯಾಡಿಸಿದ್ದಾರೆ. ಆ ಬಳಿಕ ಮಾತನಾಡಿರುವ ಅನುರ, ‘ಐಪಿಎಲ್‌ನಲ್ಲಿ ವೈಭವ್ ಅವರ ಬ್ಯಾಟಿಂಗ್‌ ನೋಡಿ ನಾನು ತುಂಬಾ ಪ್ರಭಾವಿತನಾಗಿದ್ದೆ. ಅವರು ಸಿಕ್ಸರ್ ಮತ್ತು ಬೌಂಡರಿಗಳನ್ನು ಬಾರಿಸುವ ರೀತಿ ನಿಜಕ್ಕೂ ಅದ್ಭುತವಾಗಿದೆ. ಅವರು ಇದೇ ರೀತಿ ಆಡುವುದನ್ನು ಮುಂದುವರಿಸುತ್ತಾರೆ ಎಂದು ನಾನು ಭಾವಿಸುತ್ತೇನೆ’ ಎಂದಿದ್ದಾರೆ.

ವೈಭವ್ ಮಾತ್ರ ಅಲ್ಲ, ನಮ್ ಹುಡುಗ್ರು ಆಡ್ತಾರೆ; ಯೂನಿವರ್ಸಲ್ ಬೇಬಿ ಬಾಸ್ ಬಗ್ಗೆ ದ್ರಾವಿಡ್ ಮಾತು

ಪಂದ್ಯ ಹೀಗಿತ್ತು

ಇನ್ನು ಪಂದ್ಯದ ವಿಚಾರಕ್ಕೆ ಬರುವುದಾದರೆ.. ಜೂನ್ 15 ರಂದು ಶ್ರೀಲಂಕಾ ಎ ವಿರುದ್ಧ ನಡೆದ ಈ ಪಂದ್ಯದಲ್ಲಿ, ವೈಭವ್ ಸೂರ್ಯವಂಶಿ 14 ಎಸೆತಗಳಲ್ಲಿ ಒಂದು ಸಿಕ್ಸರ್ ಮತ್ತು ಮೂರು ಬೌಂಡರಿಗಳೊಂದಿಗೆ 21 ರನ್ ಗಳಿಸಿ ಔಟಾದರು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಎ 265 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ, ಶ್ರೀಲಂಕಾ ಎ ಕೂಡ 50 ಓವರ್‌ಗಳಲ್ಲಿ 265 ರನ್ ಗಳಿಸಿತು. ಹೀಗಾಗಿ ಪಂದ್ಯ ಟೈನಲ್ಲಿ ಕೊನೆಗೊಂಡ ನಂತರ, ಸೂಪರ್ ಓವರ್ ಆಡಲಾಯಿತು, ಅದರಲ್ಲಿ ಭಾರತ ಎ ತಂಡ ಸೋತಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 5:48 pm, Tue, 16 June 26

Source link

ಈ 3 ಟೆಸ್ಟ್‌ ಮಾಡಿಸಿ ನಿಮ್ಮ ಹೃದಯ ಆರೋಗ್ಯವಾಗಿದೆಯೋ, ಇಲ್ಲವೋ ಎಂಬುದನ್ನು ತಿಳಿದುಕೊಳ್ಳಿ – Kannada News | Best Heart Health Tests To Detect Heart Problems Early

Best Heart Health Tests To Detect Heart Problems EarlyImage Credit source: Getty Images

ಇಂದಿನ ವೇಗದ ಜೀವನಶೈಲಿ, ಅಸ್ವಸ್ಥ ಆಹಾರ ಪದ್ಧತಿ, ಒತ್ತಡ ಮತ್ತು ವ್ಯಾಯಾಮದ ಕೊರತೆಯಿಂದ ಹೃದಯ ಸಂಬಂಧಿ ಕಾಯಿಲೆಗಳು ವೇಗವಾಗಿ ಹೆಚ್ಚುತ್ತಿವೆ. ಹಿಂದೆ ವಯಸ್ಸಾದವರಲ್ಲಿ ಮಾತ್ರ ಕಂಡುಬರುತ್ತಿದ್ದ ಈ ಹೃದಯ ಸಮಸ್ಯೆಗಳು ಈಗ ಯುವಕರಲ್ಲೂ ಸಾಮಾನ್ಯವಾಗುತ್ತಿವೆ. ಹಾಗಾಗಿ ನಮ್ಮ ಹೃದಯದ ಆರೋಗ್ಯವನ್ನು ಸರಿಯಾಗಿ ಕಾಪಾಡಿಕೊಳ್ಳಲು ಮತ್ತು ಹೃದಯಾಘಾತದಂತಹ (Heart Attack) ಅಪಾಯವನ್ನು ಮುಂಚಿತವಾಗಿ ತಿಳಿದುಕೊಳ್ಳಲು ಕೆಲವು ಪ್ರಮುಖ ಪರೀಕ್ಷೆಗಳು ಬಹಳ ಸಹಾಯಕವಾಗಿವೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಆ ಟೆಸ್ಟ್‌ಗಳು ಯಾವುದು, ಯಾವ ಸಮಯಕ್ಕೆ ಮಾಡಿಸಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಹೃದಯ ಸಂಬಂಧಿ ಕಾಯಿಲೆಗೆ ಮುಖ್ಯ ಕಾರಣವೇನು?

ಸಾಮಾನ್ಯವಾಗಿ ಹೃದಯ ಸಂಬಂಧಿ ಕಾಯಿಲೆಗಳು ಕಂಡುಬರುವುದಕ್ಕೆ ಪ್ರಮುಖ ಕಾರಣ ಧಮನಿಗಳಲ್ಲಿ ಕೊಬ್ಬು ಜಮೆಯಾಗುವುದು. ಇದನ್ನು ಕೊಲೆಸ್ಟ್ರಾಲ್ ಮತ್ತು ಟ್ರೈಗ್ಲಿಸರೈಡ್ಸ್ ಎಂದು ಕರೆಯಲಾಗುತ್ತದೆ. ಈ ಕೊಬ್ಬು ಧಮನಿಗಳಲ್ಲಿ ನಿಧಾನವಾಗಿ ಸೇರಿ ರಕ್ತಪ್ರವಾಹವನ್ನು ತಡೆದು ಹೃದಯಾಘಾತದ ಅಪಾಯವನ್ನು ಹೆಚ್ಚಿಸುತ್ತದೆ.

ಲಿಪಿಡ್ ಪ್ರೊಫೈಲ್ ಟೆಸ್ಟ್

ಇದು ಸಾಮಾನ್ಯ ರಕ್ತ ಪರೀಕ್ಷೆಯಾಗಿದ್ದು, ದೇಹದಲ್ಲಿರುವ ಒಟ್ಟು ಕೊಲೆಸ್ಟ್ರಾಲ್, ಟ್ರೈಗ್ಲಿಸರೈಡ್ಸ್, ಕೆಟ್ಟ ಕೊಬ್ಬು ( LDL ) ಮತ್ತು ಒಳ್ಳೆಯ ಕೊಬ್ಬು (HDL) ಮಟ್ಟವನ್ನು ತಿಳಿಸುತ್ತದೆ. ಕೊಲೆಸ್ಟ್ರಾಲ್ ಮಟ್ಟ ಹೆಚ್ಚು ಇದ್ದರೆ ಹೃದಯ ಸಂಬಂಧಿ ಕಾಯಿಲೆಗಳ ಅಪಾಯವೂ ಹೆಚ್ಚಾಗುತ್ತದೆ. ನಿಯಮಿತವಾಗಿ ಈ ಪರೀಕ್ಷೆ ಮಾಡಿಸಿಕೊಳ್ಳುವುದರಿಂದ ಅಪಾಯವನ್ನು ಮುಂಚಿತವಾಗಿ ಪತ್ತೆಹಚ್ಚಬಹುದು.

ಸಿಟಿ ಕೊರೊನರಿ ಆಂಜಿಯೋಗ್ರಫಿ

ಈ ಪರೀಕ್ಷೆಯ ಮೂಲಕ ಹೃದಯದ ಧಮನಿಗಳಲ್ಲಿ ಎಷ್ಟು ಪ್ರಮಾಣದಲ್ಲಿ ಬ್ಲಾಕೇಜ್ ಇದೆ ಎಂಬುದು ಸ್ಪಷ್ಟವಾಗಿ ತಿಳಿಯುತ್ತದೆ. ಇದರಲ್ಲಿ ಶಸ್ತ್ರಚಿಕಿತ್ಸೆ ಅಥವಾ ದೊಡ್ಡ ನೋವು ಇರುವುದಿಲ್ಲ. ಕೆಲವೇ ನಿಮಿಷಗಳಲ್ಲಿ ವರದಿ ಸಿಗುತ್ತದೆ. ಹೃದಯದ ಸ್ಥಿತಿಯನ್ನು ನಿಖರವಾಗಿ ಅರ್ಥಮಾಡಿಕೊಳ್ಳಲು ಇದು ಅತ್ಯಂತ ವಿಶ್ವಾಸಾರ್ಹ ಪರೀಕ್ಷೆ ಎಂದು ಪರಿಗಣಿಸಲಾಗಿದೆ.

ಇದನ್ನೂ ಓದಿ: ಪದೇಪದೇ ಮೈಗ್ರೇನ್ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಹಾಗಿದ್ರೆ ಹೃದಯದ ಆರೋಗ್ಯ ಸರಿಯಾಗಿದ್ಯಾ ಪರೀಕ್ಷೆ ಮಾಡಿಸಿಕೊಳ್ಳಿ

ಇಕೋಕಾರ್ಡಿಯೋಗ್ರಫಿ

ಈ ಪರೀಕ್ಷೆ ಹೃದಯದ ರಚನೆ ಮತ್ತು ಅದರ ಪಂಪಿಂಗ್ ಸಾಮರ್ಥ್ಯವನ್ನು ಪರೀಕ್ಷಿಸುತ್ತದೆ. ಹೃದಯದ ವಾಲ್ವ್‌ಗಳು ಸರಿಯಾಗಿ ಕೆಲಸ ಮಾಡುತ್ತಿವೆಯೇ, ಹೃದಯ ದುರ್ಬಲವಾಗಿದೆಯೇ ಎಂಬುದನ್ನು ಇದರಿಂದ ತಿಳಿಯಬಹುದು. ಕೆಲವೊಮ್ಮೆ ಬ್ಲಾಕೇಜ್ ಇಲ್ಲದಿದ್ದರೂ ಹೃದಯ ದುರ್ಬಲವಾಗಿರಬಹುದು. ಅಂತಹ ಸಮಸ್ಯೆಗಳನ್ನು ಪತ್ತೆಹಚ್ಚಲು ಇಕೋ ಟೆಸ್ಟ್ ಉಪಯುಕ್ತ.

ಯಾವಾಗ ಪರೀಕ್ಷೆ ಮಾಡಿಸಿಕೊಳ್ಳಬೇಕು?

ಕುಟುಂಬದಲ್ಲಿ ಹೃದಯ ಸಂಬಂಧಿ ಕಾಯಿಲೆಗಳ ಇತಿಹಾಸ ಇದ್ದರೆ, ಹೈ ಬಿಪಿ, ಮಧುಮೇಹ, ಧೂಮಪಾನ ಅಥವಾ ಅಧಿಕ ತೂಕ ಇದ್ದರೆ ನಿಯಮಿತ ಹೃದಯ ಪರೀಕ್ಷೆ ಮಾಡಿಸಿಕೊಳ್ಳುವುದು ಅಗತ್ಯ. ಆರಂಭದಲ್ಲೇ ಸಮಸ್ಯೆ ಪತ್ತೆಯಾದರೆ ಜೀವನಶೈಲಿ ಬದಲಾವಣೆ ಮತ್ತು ಸರಿಯಾದ ಚಿಕಿತ್ಸೆಯಿಂದ ದೊಡ್ಡ ಅಪಾಯವನ್ನು ತಪ್ಪಿಸಬಹುದು. ಆರೋಗ್ಯಕರ ಆಹಾರ, ನಿಯಮಿತ ವ್ಯಾಯಾಮ ಮತ್ತು ಸಮಯಕ್ಕೆ ಸರಿಯಾದ ಪರೀಕ್ಷೆಗಳು ನಿಮ್ಮ ಹೃದಯವನ್ನು ದೀರ್ಘಕಾಲ ಆರೋಗ್ಯವಾಗಿಡಲು ಸಹಾಯ ಮಾಡುತ್ತವೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ಭಾರತದ ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಶ್ಲಾಘಿಸಿದ ವಿದೇಶಿ ಮಹಿಳೆ – Kannada News | Foreign woman praises digital payment system,

ನಾವಿಂದು ಡಿಜಿಟಲ್ ಯುಗದಲ್ಲಿದ್ದೇವೆ.  ಹೀಗಾಗಿ ನಗದು ವ್ಯವಹಾರ ಮಾಡುವುದಕ್ಕಿಂತ ಡಿಜಿಟಲ್ ಪಾವತಿಗಳೇ (online transaction) ಹೆಚ್ಚಾಗಿದೆ. ಸಣ್ಣ ಪುಟ್ಟ ಅಂಗಡಿಗಳಿಂದ ಹಿಡಿದು ದೊಡ್ಡ ದೊಡ್ಡ ಅಂಗಡಿಗಳಲ್ಲಿಯೂ ಸ್ಕ್ಯಾನರ್ ಗಳೇ ತುಂಬಿ ಹೋಗಿವೆ. ಇದೀಗ ವಿದೇಶಿ ಮಹಿಳೆಯೊಬ್ಬರು ಭಾರತದಲ್ಲಿ ಪ್ರಯಾಣದ ಸಮಯದಲ್ಲಿ ನಗದು ಹಣವನ್ನು ಅವಲಂಬಿಸದೆ ಎಷ್ಟು ಸುಲಭವಾಗಿ ಪಾವತಿಗಳನ್ನು ಮಾಡಬಹುದೆಂದು ಅಚ್ಚರಿ ಪಟ್ಟುಕೊಂಡಿದ್ದಾರೆ. ಭಾರತದ ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಶ್ಲಾಘಿಸಿದ್ದಾರೆ. ಡಿಜಿಟಲ್ ಪಾವತಿ ಮಾಡುವ ಕುರಿತಾದ ತನ್ನ ಅನುಭವದ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಜೂಲಿಜಾ (voye.travels) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಭಾರತದ ಪಾವತಿ ವ್ಯವಸ್ಥೆಯು ಉಳಿದ ದೇಶಗಳಿಗೆ ಹೋಲಿಸಿದರೆ ವರ್ಷಗಳಷ್ಟು ಮುಂದಿದೆ ಎಂದು ಕ್ಲಿಪ್‌ನಲ್ಲಿ ಬರೆಯಲಾಗಿದೆ. ಈ ವೀಡಿಯೊದ ಶೀರ್ಷಿಕೆಯಲ್ಲಿ ಭಾರತದಲ್ಲಿ ನನಗೆ ತುಂಬಾ ಆಶ್ಚರ್ಯ ತಂದ ವಿಷಯವೆಂದರೆ ನನಗೆ ನಿಜವಾಗಿಯೂ ಎಷ್ಟು ಕಡಿಮೆ ನಗದು ಬೇಕಿತ್ತು. ನಾನು ಹೋದಲ್ಲೆಲ್ಲಾ, ಅದು ಸಣ್ಣ ಚಾಯ್ ಸ್ಟ್ಯಾಂಡ್ ಆಗಿರಲಿ, ಸ್ಥಳೀಯ ರೆಸ್ಟೋರೆಂಟ್ ಆಗಿರಲಿ ಅಥವಾ ರಸ್ತೆಯ ಪಕ್ಕದಲ್ಲಿರುವ  ಅಂಗಡಿಯಾಗಿರಲಿ, ಜನರು ಕೇವಲ ಕ್ಯೂ ಆರ್ ಕೋಡ್ ಅನ್ನು ತೋರಿಸುತ್ತಿದ್ದರು ಎಂದು ಬರೆದುಕೊಂಡಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ

ಭಾರತದ ತ್ವರಿತ ಪಾವತಿ ವ್ಯವಸ್ಥೆಯಾದ ಯುಪಿಐ ಇದಕ್ಕೆ ಕಾರಣ. ಅತ್ಯಂತ ಅನುಕೂಲಕರ ಪಾವತಿ ವ್ಯವಸ್ಥೆಗಳಲ್ಲಿ ಒಂದಾಗಿದೆ. ಬ್ಯಾಂಕ್ ವಿವರಗಳನ್ನು ಟೈಪ್ ಮಾಡುವ ಬದಲು, ಜನರು ಕೇವಲ ಕ್ಯೂ ಆರ್ ಕೋಡ್ ಅನ್ನು ಸ್ಕ್ಯಾನ್ ಮಾಡುತ್ತಾರೆ, ಹಣವನ್ನು ಸೆಕೆಂಡುಗಳಲ್ಲಿ ವರ್ಗಾಯಿಸಲಾಗುತ್ತದೆ. ಇದು ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಪ್ರಯಾಣ ಮಾಡುವಾಗ ನಾನು ನೋಡಿದ ಅತ್ಯಂತ ಅನುಕೂಲಕರ ಪಾವತಿ ವ್ಯವಸ್ಥೆಗಳಲ್ಲಿ ಒಂದಾಗಿದೆ ಎಂದು ಹೇಳಿದ್ದಾರೆ.

ವಿದೇಶಿ ಪ್ರಯಾಣಿಕರಾಗಿ, ಯುಪಿಐ ಯಾವಾಗಲೂ ಎಲ್ಲರೂ ಬಳಸಲು ಸಾಧ್ಯವಾಗುವುದಿಲ್ಲ. ಇದು ನಿಮ್ಮ ಬ್ಯಾಂಕ್, ಕಾರ್ಡ್ ಒದಗಿಸುವವರು ಮತ್ತು ನಿಮಗೆ ಯಾವ ಸೇವೆಗಳು ಲಭ್ಯವಿದೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ. ಫೋನ್‌ಪೇ, ಗೂಗಲ್ ಪೇ, ಪೇಟಿಎಂ ಮತ್ತು ಭೀಮ್‌ನಂತಹ ಅಪ್ಲಿಕೇಶನ್‌ಗಳು ಕೆಲವೊಮ್ಮೆ ಭಾರತದಲ್ಲಿ ಸಂದರ್ಶಕರಿಗೆ ಡಿಜಿಟಲ್ ಪಾವತಿಗಳನ್ನು ಮಾಡಲು ಸಹಾಯ ಮಾಡುತ್ತದೆ. ವಿಶೇಷವಾಗಿ ಸಣ್ಣ ಪಟ್ಟಣಗಳು, ದೂರದ ಪ್ರದೇಶಗಳು ಅಥವಾ ಕಳಪೆ ಇಂಟರ್ನೆಟ್ ಸಂಪರ್ಕವಿರುವ ಸ್ಥಳಗಳಿಗೆ ಭೇಟಿ ನೀಡುವಾಗ ಪ್ರಯಾಣಿಕರು ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್ ಜತೆಗೆ ಕೈಯಲ್ಲಿ ಸ್ವಲ್ಪ ಹಣವನ್ನು ಇಟ್ಟುಕೊಳ್ಳುವುದು ಒಳ್ಳೆಯದು ಎಂದು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಆಟೋ ಬಾಡಿಗೆ 150ರೂ., ಖಾತೆಗೆ ಬಂದಿದ್ದು 15 ಸಾವಿರ; ಪ್ರಯಾಣಿಕನ ಹಣವನ್ನು ಮರಳಿಸಿ ಮಾದರಿಯಾದ ಚಾಲಕ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಕಂಡಿದ್ದು, ನೆಟ್ಟಿಗರು ಮಿಶ್ರ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ. ಒಬ್ಬ ಬಳಕೆದಾರ, ಯುಪಿಐ ನಿಜವಾಗಿಯೂ ಭಾರತದ ಅತಿದೊಡ್ಡ ಡಿಜಿಟಲ್ ಸಾಧನೆಗಳಲ್ಲಿ ಒಂದಾಗಿದೆ ಎಂದಿದ್ದಾರೆ. ಇನ್ನೊಬ್ಬರು, ಕ್ಯೂಆರ್ ಪಾವತಿಗಳು ಬಹುತೇಕ ಕಾರ್ಯನಿರ್ವಹಿಸುವುದರಿಂದ ನಾನು ಈಗ ಹಣವನ್ನು ಕೊಂಡೊಯ್ಯುವುದಿಲ್ಲ ಎಂದು ಹೇಳಿದ್ದಾರೆ. ಮತ್ತೊಬ್ಬರು, ಇದು ಭಾರತವು ಅನೇಕ ಅಭಿವೃದ್ಧಿ ಹೊಂದಿದ ದೇಶಗಳಿಗಿಂತ ಉತ್ತಮವಾಗಿರುವ ವಿಷಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಭಾರತದಲ್ಲಿ ರಾತ್ರೋರಾತ್ರಿ ಮಣ್ಣುಪಾಲಾಯ್ತು 17 ವರ್ಷಗಳ ಶ್ರಮ: ಟರ್ಕಿ ಕಂಪನಿಯ ಅಳಲಿಗೆ ಏನು ಕಾರಣ? ತಪ್ಪು ಯಾರದು? – Kannada News | Turkey’s Celebi Aviation chairperson Celebioglu speaks of losing business in India after Operation Sindoor

ಬೆಂಗಳೂರು ಏರ್​ಪೋರ್ಟ್ ಚಿತ್ರImage Credit source: PTI

ನವದೆಹಲಿ, ಜೂನ್ 16: ಭಾರತದ ವಿಮಾನಯಾನ ವಲಯದಲ್ಲಿ ಅತ್ಯಂತ ಪ್ರಮುಖ ಗ್ರೌಂಡ್ ಹ್ಯಾಂಡ್ಲಿಂಗ್ (ವಿಮಾನ ನಿಲ್ದಾಣದಲ್ಲಿನ ಸೇವೆಗಳು) ಕಂಪನಿಯಾಗಿದ್ದ ಟರ್ಕಿ ಮೂಲದ ‘ಚೆಲೆಬಿ ಏವಿಯೇಷನ್’ (Çelebi Aviation) ಸಂಸ್ಥೆಯ ಸುರಕ್ಷತಾ ಕ್ಲಿಯರೆನ್ಸ್ ಅನ್ನು ಕೇಂದ್ರ ಸರ್ಕಾರವು ರದ್ದುಗೊಳಿಸಿ ವರ್ಷದ ಮೇಲಾಯಿತು. ಇದೀಗ ಸಂಸ್ಥೆಯ ಮುಖ್ಯಸ್ಥೆ ಕಾನನ್ ಚೆಲೆಬಿಯೋಗ್ಲು (Canan Celebioglu) ಅವರು ಮಾತನಾಡಿದ್ದಾರೆ. ಹಲವು ವರ್ಷಗಳಿಂದ ಶ್ರಮ ಪಟ್ಟು ಕಟ್ಟಿದ್ದ ಬ್ಯುಸಿನೆಸ್ ರಾತ್ರೋರಾತ್ರಿ ನಿಂತುಹೋದಂತಾಯಿತು ಎಂದು ಅವರು ಹೇಳಿದ್ದಾರೆ. ಆಪರೇಷನ್ ಸಿಂದೂರ್ (Operation Sindoor) ವೇಳೆ ಪಾಕಿಸ್ತಾನಕ್ಕೆ ಟರ್ಕಿ ದೇಶದಿಂದ ಡ್ರೋನ್ ಸರಬರಾಜು ಆದ ಹಿನ್ನೆಲೆಯಲ್ಲಿ ಭಾರತವು ಈ ಟರ್ಕಿ ಕಂಪನಿಯ ಸೇವೆಯನ್ನು ನಿಲ್ಲಿಸುವ ನಿರ್ಧಾರ ತೆಗೆದುಕೊಂಡಿತ್ತು. ಸರ್ಕಾರದ ಈ ಕ್ರಮವನ್ನು ಸೋಷಿಯಲ್ ಮೀಡಿಯಾದಲ್ಲಿ ಬಹಳ ಜನರು ಸ್ವಾಗತಿಸಿದ್ದಾರೆ.

ಉದ್ಯಮದ ದೈತ್ಯ ಸಂಸ್ಥೆಗೆ ಭದ್ರತೆಯ ಪೆಟ್ಟು

ಚೆಲೆಬಿಯೋಗ್ಲು (Çelebioğlu) ನೇತೃತ್ವದ ಚೆಲೆಬಿ ಏವಿಯೇಷನ್, ಭಾರತದ ನಾಗರಿಕ ವಿಮಾನಯಾನ ವಲಯದಲ್ಲಿ ಅತ್ಯಂತ ದೊಡ್ಡ ಖಾಸಗಿ ಗ್ರೌಂಡ್ ಹ್ಯಾಂಡ್ಲರ್ ಆಗಿ ಬೆಳೆದಿತ್ತು. ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ 9 ಪ್ರಮುಖ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಗ್ರೌಂಡ್ ಆಪರೇಷನ್ಸ್​ನಲ್ಲಿ ಈ ಕಂಪನಿಯೇ ಮುಂಚೂಣಿಯಲ್ಲಿತ್ತು. ಸುಮಾರು 400 ರಿಂದ 500 ಮಿಲಿಯನ್ ಡಾಲರ್ ಮೌಲ್ಯದ ವಹಿವಾಟು ನಡೆಸುವ ಬ್ಯುಸಿನೆಸ್ ಮಟ್ಟಕ್ಕೆ ಬೆಳೆದಿತ್ತು. ಭಾರತದಲ್ಲಿ 10,000ಕ್ಕೂ ಅಧಿಕ ಮಂದಿಗೆ ಉದ್ಯೊಗಗಳನ್ನು ಕೊಟ್ಟಿತ್ತು.

ಇದನ್ನೂ ಓದಿ: ಕೆಲವೇ ಎಐ ಮಾಡಲ್​ಗಳು ಇಡೀ ಉದ್ಯಮವನ್ನೇ ನುಂಗಿ ನೀರು ಕುಡಿಯಲು ಬಿಡಬಾರದು: ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ

ಆದರೆ, ಪಾಕಿಸ್ತಾನಕ್ಕೆ ಟರ್ಕಿ ದೇಶವು ಅತ್ಯಾಧುನಿಕ ಡ್ರೋನ್‌ಗಳನ್ನು ಪೂರೈಸುತ್ತಿದ್ದ ಹಿನ್ನೆಲೆಯಲ್ಲಿ ಮತ್ತು ಭಾರತದ ಭದ್ರತೆಗೆ ಇದರಿಂದ ಧಕ್ಕೆ ಬರಬಹುದು ಎಂಬ ಗುಪ್ತಚರ ವರದಿಗಳ ಆಧಾರದ ಮೇಲೆ ಕೇಂದ್ರ ಸರ್ಕಾರ ಈ ಸಂಸ್ಥೆಯ ಪರವಾನಗಿಯನ್ನು ದಿಢೀರ್ ರದ್ದುಗೊಳಿಸಿತ್ತು. ಇದರ ಬೆನ್ನಲ್ಲೇ ವಿಮಾನ ನಿಲ್ದಾಣಗಳಲ್ಲಿದ್ದ ಕಂಪನಿಯ ಉಪಕರಣಗಳನ್ನು ಜಪ್ತಿ ಮಾಡಲಾಗಿತ್ತು. ಅಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಗಳನ್ನು ಇತರ ಪ್ರತಿಸ್ಪರ್ಧಿ ಕಂಪನಿಗಳಿಗೆ ವರ್ಗಾಯಿಸಲಾಯಿತು.

ನ್ಯಾಯಾಲಯದಲ್ಲಿ ಕಾನೂನು ಹೋರಾಟ ಮತ್ತು ತೀರ್ಪು

ಕೇಂದ್ರ ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಚೆಲೆಬಿಯೋಗ್ಲು ಅವರು ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ 2025ರ ಜುಲೈನಲ್ಲಿ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯವು ಕಂಪನಿಯ ಅರ್ಜಿಯನ್ನು ವಜಾಗೊಳಿಸಿತು.

ತನಿಖಾ ಸಂಸ್ಥೆಗಳು ಮುಚ್ಚಿದ ಲಕೋಟೆಯಲ್ಲಿ (Sealed Cover) ಸಲ್ಲಿಸಿದ ರಹಸ್ಯ ಸಾಕ್ಷ್ಯಗಳನ್ನು ಪರಿಶೀಲಿಸಿದ ನ್ಯಾಯಾಧೀಶರು, “ಯಾವುದೇ ಆಡಳಿತಾತ್ಮಕ ನಿಯಮಾವಳಿಗಳು ಅಥವಾ ಪ್ರಕ್ರಿಯೆಗಳಿಗಿಂತ ದೇಶದ ಆಂತರಿಕ ಭದ್ರತೆ ಮತ್ತು ಸಾರ್ವಭೌಮತ್ವವೇ ಮೊದಲ ಆದ್ಯತೆಯಾಗಿದೆ” ಎಂದು ಸ್ಪಷ್ಟಪಡಿಸಿ ಸರ್ಕಾರದ ಕ್ರಮವನ್ನು ಎತ್ತಿಹಿಡಿದರು.

ಇದನ್ನೂ ಓದಿ: ಬೆಂಗಳೂರಿನ ಸರ್ವಂ ಎಐ ಈಗ ಯುನಿಕಾರ್ನ್ ಕಂಪನಿಗಳ ಸಾಲಿನಲ್ಲಿ; ಹೂಡಿಕೆ ಮಾಡಿದ ಎಚ್​ಸಿಎಲ್​ಗೂ ಷೇರುಪೇಟೆಯಲ್ಲಿ ಸುಗ್ಗಿ

ರಾಜಕೀಯ ನಂಟಿನ ನಿರಾಕರಣೆ ಮತ್ತು ಸಾರ್ವಜನಿಕ ಪ್ರತಿಕ್ರಿಯೆ

ಚೆಲೆಬಿ ಸಂಸ್ಥೆಯ ಬಹುಪಾಲು ಷೇರುಗಳು ಜಾಗತಿಕ ಹೂಡಿಕೆ ನಿಧಿಗಳ (Global Funds) ಅಧೀನದಲ್ಲಿದ್ದು, ತಮಗೆ ಯಾವುದೇ ರೀತಿಯ ರಾಜಕೀಯ ನಂಟು ಅಥವಾ ವಿದೇಶಿ ಸರ್ಕಾರದ ಪ್ರೇರೇಪಿತ ಉದ್ದೇಶಗಳಿಲ್ಲ ಎಂದು ಕಂಪನಿ ವಾದಿಸಿತ್ತು. ಈ ಬೆಳವಣಿಗೆಗಳಾಗಿ ಒಂದು ವರ್ಷದ ನಂತರ ಚೆಲೆಬಿ ಏವಿಯೇಶನ್​ನ ಮುಖ್ಯಸ್ಥೆ ಮೊದಲ ಬಾರಿಗೆ ಬಹಿರಂಗವಾಗಿ ಮಾತನಾಡಿದ್ದಾರೆ. ಬ್ಲೂಮ್​ಬರ್ಗ್ ನ್ಯೂಸ್ ಏಜೆನ್ಸಿಗೆ ನೀಡಿದ ಸಂದರ್ಶನದಲ್ಲಿ ಅವರು, ‘ನಾವು ಭಾರತವನ್ನು ಇಷ್ಟಪಟ್ಟಿದ್ದೆ. ಹೀಗಾಗಿ, ಅದು ಬಹಳ ಆಘಾತಕಾರಿ ಎನಿಸಿತ್ತು’ ಎಂದಿದ್ದಾರೆ.

ಎಕ್ಸ್​ನಲ್ಲಿ ಬಂದ ಕೆಲ ಟ್ವೀಟ್​ಗಳು

ಸರ್ಕಾರದ ಕ್ರಮಕ್ಕೆ ನೆಟ್ಟಿಗರಿಂದ ಬೆಂಬಲ

ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ಭಾರತೀಯ ನೆಟ್ಟಿಗರು ಸರ್ಕಾರದ ಈ ಕಠಿಣ ನಿಲುವಿಗೆ ವ್ಯಾಪಕ ಬೆಂಬಲ ವ್ಯಕ್ತಪಡಿಸಿದ್ದಾರೆ. ಕಾಶ್ಮೀರ ವಿಷಯದಲ್ಲಿ ಟರ್ಕಿ ದೇಶವು ಸತತವಾಗಿ ಪಾಕಿಸ್ತಾನಕ್ಕೆ ನೀಡುತ್ತಿರುವ ರಾಜತಾಂತ್ರಿಕ ಮತ್ತು ಮಿಲಿಟರಿ ಬೆಂಬಲವನ್ನು ಉಲ್ಲೇಖಿಸಿರುವ ಸಾರ್ವಜನಿಕರು, ಸೂಕ್ಷ್ಮವಾಗಿರುವ ವಿಮಾನ ನಿಲ್ದಾಣಗಳ ಭದ್ರತೆಯನ್ನು ಇಂತಹ ಸಂಸ್ಥೆಗಳಿಗೆ ವಹಿಸುವುದು ಅಪಾಯಕಾರಿ ಎಂದು ಸರ್ಕಾರದ ಕ್ರಮವನ್ನು ಶ್ಲಾಘಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ – Kannada News | Belagavi tahasildar office Power Cuts over unpaid electric bill fast Three Months

ಬೆಳಗಾವಿ, (ಜೂನ್ 16): ಸರ್ಕಾರದ ನಿಯಮಗಳನ್ನು ಜನರಿಗೆ ತಿಳಿಸುವ ಹಾಗೂ ಜನರಿಗೆ ಸರ್ಕಾರಿ ಆದೇಶಗಳನ್ನು ಪಾಲಿಸುವಂತೆ ಸೂಚಿಸುವ ತಹಶಿಲ್ದಾರ್ ಕಚೇರಿಯೇ ಈಗ ನಿಯಮ ಉಲ್ಲಂಘಿಸಿ ಕತ್ತಲಲ್ಲಿ ಕೂರುವಂತಾಗಿದೆ. ಹೌದು….ಸಾವಿರಾರೂ ರೂಪಾಯಿ ಬಾಕಿ ಬಿಲ್ ಪಾವತಿಸದ ಕಾರಣ ಬೆಳಗಾವಿ (Belagavi) ತಹಶಿಲ್ದಾರ್ ಕಚೇರಿಯ ವಿದ್ಯುತ್ ಸಂಪರ್ಕವನ್ನು (Power Cut) ಕಡಿತಗೊಳಿಸಲಾಗಿದೆ. ಬೆಳಗಾವಿ ತಹಶಿಲ್ದಾರ್ ಕಚೇರಿಯು ಕಳೆದ ಮೂರು ತಿಂಗಳ ಒಟ್ಟು  58,936 ರೂಪಾಯಿ ವಿದ್ಯುತ್ ಬಿಲ್ ಪಾವತಿ ಮಾಡದೇ ಬಾಕಿ ಉಳಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ವಿದ್ಯುತ್ ಸರಬರಾಜು ಕಂಪನಿಯು ಕರೆಂಟ್ ಕಟ್ ಮಾಡಿದೆ. ಇದರಿಂದಾಗಿ ಕಚೇರಿಯು ಕತ್ತಲಲ್ಲಿ ಮುಳುಗಿದ್ದು, ಸಾರ್ವಜನಿಕರು, ವಿಶೇಷವಾಗಿ ಹಿರಿಯ ನಾಗರಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Exit mobile version