ಜೈಲುಗಳ ಕಮಾಂಡ್ ಸೆಂಟರ್​​ಗೆ ಚಾಲನೆ: ಅನೈತಿಕ ಚಟುವಟಿಕೆಗಳಿಗೆ ಇನ್ನಾದ್ರೂ ಬೀಳುತ್ತಾ ಬ್ರೇಕ್​​? – Kannada News | Revolutionising Jail Security: Karnataka Launches Centralised Monitoring System for Prisons

ಬೆಂಗಳೂರು, ಜನವರಿ 31: ರಾಜ್ಯದ ಜೈಲುಗಳಲ್ಲಿ ನಡೆಯುತ್ತಿದ್ದ ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಗೃಹಸಚಿವ ಜಿ. ಪರಮೇಶ್ವರ್ ಅವರು ನೂತನ ಕಮಾಂಡ್ ಸೆಂಟರ್ ಉದ್ಘಾಟಿಸಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಸೇರಿದಂತೆ ರಾಜ್ಯದ ವಿವಿಧ ಜೈಲುಗಳಲ್ಲಿ ಡ್ರಗ್ಸ್ ಸಪ್ಲೈ, ಲಿಕ್ಕರ್ ತಯಾರಿಕೆ, ಅಕ್ರಮ ಬರ್ತಡೇ ಆಚರಣೆಗಳಂತಹ ಘಟನೆಗಳು ವರದಿಯಾಗಿದ್ದವು. ಇದು ಕಾರಾಗೃಹ ಇಲಾಖೆಗೆ ದೊಡ್ಡ ಸವಾಲಾಗಿತ್ತು. ಈ ಹಿನ್ನೆಲೆಯಲ್ಲಿ, ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಹಿತೇಂದ್ರ ಅವರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಲಾಗಿತ್ತು. ಈ ಸಮಿತಿಯು ಜೈಲುಗಳಲ್ಲಿನ ಸಮಸ್ಯೆಗಳನ್ನು ತಡೆಗಟ್ಟಲು ಮತ್ತು ಅವುಗಳನ್ನು ಪರಿಹರಿಸಲು ವರದಿಯನ್ನು ಸಲ್ಲಿಸಿತ್ತು. ವರದಿಯ ಶಿಫಾರಸುಗಳ ಆಧಾರದ ಮೇಲೆ ಮತ್ತು ತಂತ್ರಜ್ಞಾನವನ್ನು ಬಳಸಿ ಜೈಲುಗಳನ್ನು ಪರಿಣಾಮಕಾರಿಯಾಗಿ ಮೇಲ್ವಿಚಾರಣೆ ಮಾಡುವ ಸಲಹೆಯಂತೆ ಈ ಕೇಂದ್ರವನ್ನು ಸ್ಥಾಪಿಸಲಾಗಿದೆ.

ಸದ್ಯ 8 ಕೇಂದ್ರ ಜೈಲುಗಳು ಮತ್ತು 4 ಜಿಲ್ಲಾ ಜೈಲುಗಳನ್ನು ಈ ಕಮಾಂಡ್ ಸೆಂಟರ್‌ಗೆ ಸಂಪರ್ಕಿಸಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ತಾಲೂಕು ಮಟ್ಟದ ಜೈಲುಗಳನ್ನು ಸಹ ಇದೇ ರೀತಿಯಲ್ಲಿ ಸಂಪರ್ಕಿಸಲಾಗುವುದು. 24/7 ಕಣ್ಗಾವಲಿಗಾಗಿ 1076 ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನವನ್ನು ಬಳಸಿ ಸೂಕ್ಷ್ಮ ಘಟನೆಗಳನ್ನು ಸಹ ಪತ್ತೆ ಹಚ್ಚುವ ಸಾಮರ್ಥ್ಯ ಈ ಕೇಂದ್ರಕ್ಕಿದೆ. ಇದು ಜೈಲುಗಳಲ್ಲಿನ ಅನೈತಿಕ ಚಟುವಟಿಕೆಗಳನ್ನು ತಡೆಗಟ್ಟಲು ಮತ್ತು ಸಿಬ್ಬಂದಿಯಲ್ಲಿ ಜಾಗರೂಕತೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಈ ವರ್ಷದ ಬಜೆಟ್ ಭಾಷಣದಲ್ಲಿ ಹೊಸತನ; 75 ವರ್ಷದ ಸಂಪ್ರದಾಯ ಮುರಿಯುತ್ತಾರಾ ನಿರ್ಮಲಾ ಸೀತಾರಾಮನ್? – Kannada News | Nirmala sitharaman may break 75 year tradition in her 2026 budget speech say reports

ನವದೆಹಲಿ, ಜನವರಿ 31: ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ನಾಳೆ ಭಾನುವಾರ ಮಂಡಿಸಲಿರುವ ಬಜೆಟ್ ಹಾಗೂ ಅವರ ಬಜೆಟ್ ಭಾಷಣ (Budget Speech) ವಿಭಿನ್ನವಾಗಿರಲಿದೆ ಎಂದು ಹೇಳಲಾಗುತ್ತಿದೆ. ಬಜೆಟ್ ಅನ್ನು ಪ್ರಸ್ತುತಪಡಿಸುವ ರೀತಿ ಬೇರೆ ರೀತಿ ಇರಲಿದೆ. 75 ವರ್ಷಗಳಿಂದ ಇದ್ದ ಬಜೆಟ್ ಭಾಷಣದ ಸ್ವರೂಪ ಬದಲಾಗಲಿದೆ. ಬಜೆಟ್ ಭಾಷಣದ ಎರಡು ಭಾಗಗಳ ಪೈಕಿ ಎರಡನೇ ಭಾಗಕ್ಕೆ ನಿರ್ಮಲಾ ಸೀತಾರಾಮನ್ ಅವರು ಹೆಚ್ಚು ಒತ್ತು ಕೊಡಲಿದ್ದಾರೆ ಎಂದು ಸರ್ಕಾರಿ ಮೂಲಗಳು ಹೇಳಿದ್ದಾಗಿ ನ್ಯೂಸ್18 ವರದಿ ಮಾಡಿದೆ.

ಬಜೆಟ್ ಭಾಷಣದಲ್ಲಿ ಎರಡು ಭಾಗ ಇರುತ್ತವೆ. ಹಿಂದಿನ ಬಜೆಟ್​ಗಳಲ್ಲಿ ಸಚಿವರು ಮೊದಲ ಭಾಗದಲ್ಲಿ ಆರ್ಥಿಕ ಪರಿಸ್ಥಿತಿ, ಹಣಕಾಸು ಸ್ಥಿತಿ, ಪ್ರಮುಖ ನೀತಿ ಘೋಷಣೆ ಇತ್ಯಾದಿ ಬಗ್ಗೆ ವಿವರವಾಗಿ ಮಾಹಿತಿ ನೀಡಲಾಗುತ್ತಿತ್ತು. ಎರಡನೇ ಭಾಗದಲ್ಲಿ ತೆರಿಗೆ ಇತ್ಯಾದಿ ಅಂಕಿ ಅಂಶಗಳ ಪ್ರಸ್ತುತಿ ಹೆಚ್ಚಾಗಿ ಇರುತ್ತಿತ್ತು. 2026-27ರ ಬಜೆಟ್​ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಭಾಷಣದ ಎರಡನೇ ಭಾಗದಲ್ಲಿ ಸುದೀರ್ಘ ಮಾಹಿತಿ ಒದಗಿಸಲಿದ್ದಾರೆ.

ಇದನ್ನೂ ಓದಿ: ಆರ್ಥಿಕತೆಗೆ ಪುಷ್ಟಿ ಕೊಡಲು ಇನ್​ಫ್ರಾಸ್ಟ್ರಕ್ಚರ್ ಅಭಿವೃದ್ಧಿಗೆ ಹೆಚ್ಚು ಹಣ ವ್ಯಯಿಸಿ: ತಜ್ಞರ ಸಲಹೆ

ಎರಡನೇ ಭಾಗದ ಬಜೆಟ್ ಭಾಷಣದಲ್ಲಿ ತತ್​ಕ್ಷಣದ ಆರ್ಥಿಕ ಆದ್ಯತೆಗಳಿಗೆ ಒತ್ತು ಕೊಟ್ಟಂತೆ, ದೂರಗಾಮಿ ಅಭಿವೃದ್ಧಿ ಗುರಿಗಳಿಗೂ ಒತ್ತು ಕೊಡಲಾಗುತ್ತದೆ. ದೀರ್ಘಾವಧಿ ರಚನಾತ್ಮಕ ಸುಧಾರಣೆಗಳ ಮೂಲಕ ಸರ್ಕಾರ ಆರ್ಥಿಕ ಶಿಸ್ತು ಅಭಿವೃದ್ಧಿ, ಸಮಾಜ ಕಲ್ಯಾಣದ ಸಮತೋಲನ ಸಾಧಿಸಲು ಯಾವ ಕ್ರಮ ತೆಗೆದುಕೊಳ್ಳುತ್ತದೆ ಎಂಬುದರ ವಿವರ ಇದರಲ್ಲಿ ಇರುತ್ತದೆ ಎನ್ನಲಾಗಿದೆ.

ಜಾಗತಿಕ ಮತ್ತು ದೇಶೀಯ ಸವಾಲುಗಳ ಮಧ್ಯೆ ಭಾರತದ ಆರ್ಥಿಕ ದೃಷ್ಟಿಕೋನ ಹೇಗಿರುತ್ತದೆ ಎಂಬುದರ ಚಿತ್ರಣವನ್ನು ತೆರೆದಿಡಲಾಗುತ್ತದೆ. ದೇಶದ ಸದ್ಯದ ಆರ್ಥಿಕ ಸಾಮರ್ಥ್ಯಗಳೇನು, ವಿವಿಧ ವಲಯವಾರು ಅನುಕೂಲಗಳೇನು, ಭವಿಷ್ಯದ ಬೆಳವಣಿಗೆ ಅವಕಾಶಗಳೆಷ್ಟು ಎಂಬಿತ್ಯಾದಿಯನ್ನು ಅಂದಾಜಿಸುವ ಪ್ರಯತ್ನವಾಗಲಿದೆ.

ಇದನ್ನೂ ಓದಿ: ಬಲಿಷ್ಠ ಭಾರತಕ್ಕೆ ಬೇಕು ತಂತ್ರಜ್ಞಾನ ಪ್ರಾವೀಣ್ಯತೆ; ಬಜೆಟ್​ನಲ್ಲಿ ಟೆಕ್ ಸೆಕ್ಟರ್​ಗೆ ಏನು ಸಿಗುತ್ತೆ?

ಒಟ್ಟಾರೆ, ಬಜೆಟ್ ಭಾಷಣದ ದ್ವಿತೀಯಾರ್ಧದಲ್ಲಿ ಸರ್ಕಾರದ ಮಧ್ಯಮ ಮತ್ತು ದೂರಗಾಮಿ ಆರ್ಥಿಕ ಆದ್ಯತೆಗಳು ಹಾಗು ಸುಧಾರಣೆಗಳ ಝಲಕ್ ಹೇಗಿರುತ್ತೆ ಎಂಬುದರ ಸುಳಿವು ಕೊಡಲಾಗುತ್ತದೆ. ಇನ್ನುಳಿದಂತೆ ಹೊಸ ಯೋಜನೆಗಳ ಘೋಷಣೆ, ಬಂಡವಾಳ ವೆಚ್ಚ, ವಿವಿಧ ಇಲಾಖೆಗಳಿಗೆ ಅನುದಾನ ಹಂಚಿಕೆ, ಯೋಜನೆಗಳಿಗೆ ಅನುದಾನ ಹಂಚಿಕೆ ಇತ್ಯಾದಿ ಮೂಲಭೂತ ಬಜೆಟ್ ಅಂಶಗಳು ಇದ್ದೇ ಇರುತ್ತವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಸಿಎಂಗೆ ಅಂತಿಮ ವರದಿ ಸಲ್ಲಿಸಿದ ಪ್ರೊ.ಎಂ.ಗೋವಿಂದ ರಾವ್ ನೇತೃತ್ವದ ಪ್ರಾದೇಶಿಕ ಅಸಮತೋಲನ ನಿವಾರಣೆ ಸಮಿತಿ – Kannada News | Karnataka Regional Imbalance: Govinda Rao Committee Submits Final Report to CM Siddaramaiah

ಸಿಎಂಗೆ ಅಂತಿಮ ವರದಿ ಸಲ್ಲಿಕೆImage Credit source: Google

ಬೆಂಗಳೂರು, ಜನವರಿ 31: ಪ್ರೊ.ಎಂ.ಗೋವಿಂದ ರಾವ್‌ ಅಧ್ಯಕ್ಷತೆಯ ಪ್ರಾದೇಶಿಕ ಅಸಮತೋಲನ ನಿವಾರಣೆ ಸಮಿತಿ ಅಂತಿಮ ವರದಿಯನ್ನು ಸಿಎಂ ಸಿದ್ದರಾಮಯ್ಯನವರಿಗೆ ಸಲ್ಲಿಸಿದೆ. ಡಾ. ಡಿ.ಎಂ. ನಂಜುಂಡಪ್ಪನವರ ಪ್ರಾದೇಶಿಕ ಅಸಮತೋಲನ ನಿವಾರಣಾ ವರದಿ ಹಳೆಯದಾಗಿದ್ದ ಕಾರಣ, ರಾಜ್ಯ ಸರ್ಕಾರವು 233 ತಾಲ್ಲೂಕುಗಳಲ್ಲಿ ಪ್ರಸ್ತುತ ಲಭ್ಯವಿರುವ ಅಂಕಿಅಂಶಗಳ ಆಧಾರದ ಮೇಲೆ ಹಿಂದುಳಿದಿರುವಿಕೆಯನ್ನು ಅಧ್ಯಯನ ಮಾಡಿ ಸಮಗ್ರ ಸಂಯುಕ್ತ ಅಭಿವೃದ್ಧಿ ಸೂಚ್ಯಂಕ ಗುರುತಿಸಲು ಆರ್ಥಿಕ ತಜ್ಞ ಪ್ರೊ. ಗೋವಿಂದ ರಾವ್ ಅವರನ್ನು ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗದ ಅಧ್ಯಕ್ಷರಾಗಿ ನೇಮಕಗೊಳಿಸಿ 2024ರ ಮಾರ್ಚ್​​ನಲ್ಲಿ ಆದೇಶಿಸಿತ್ತು.

ಕರ್ನಾಟಕದಲ್ಲಿ ಪ್ರಾದೇಶಿಕ ಅಸಮತೋಲನವನ್ನು ಅಧ್ಯಯನ ಮಾಡಲು ಮತ್ತು ಅದನ್ನು ನಿವಾರಿಸುವ ನಿಟ್ಟಿನಲ್ಲಿ 2000ನೇ ಇಸವಿಯಲ್ಲಿ ಅಂದಿನ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಸರ್ಕಾರ ಡಾ. ಡಿ.ಎಂ. ನಂಜುಂಡಪ್ಪ ಸಮಿತಿ ರಚಿಸಿತ್ತು. ಈ ಸಮಿತಿಯು 2002 ರಲ್ಲಿ ತನ್ನ ಅಂತಿಮ ವರದಿಯನ್ನು ಸಲ್ಲಿಸಿ, ರಾಜ್ಯದ 175 ತಾಲ್ಲೂಕುಗಳಲ್ಲಿ 114 ತಾಲ್ಲೂಕುಗಳನ್ನು ಹಿಂದುಳಿದ ತಾಲ್ಲೂಕುಗಳು ಎಂದು ಗುರುತಿಸಿತ್ತು. ಅತಿ ಹೆಚ್ಚು ಹಿಂದುಳಿದ (39), ಹೆಚ್ಚು ಹಿಂದುಳಿದ (40) ಮತ್ತು ಹಿಂದುಳಿದ (35) ಎಂದು ಮೂರು ವರ್ಗಗಳಾಗಿ ವಿಂಗಡಿಸಿತ್ತು.

ದನ್ನೂ ಓದಿ: ಸರ್ಕಾರದಿಂದ ಮಹತ್ವದ ಆದೇಶ; ಕರ್ನಾಟಕ ನೌಕರರು ಈ ಬಟ್ಟೆ ಧರಿಸುವುದು ಕಡ್ಡಾಯ

ಆದರೆ ಈ ವರದಿ ಸುಮಾರು 22 ವರ್ಷಗಳಷ್ಟು ಹಳೆಯದ್ದಾಗಿದೆ ಎಂಬ ಕಾರಣಕ್ಕೆ ಈ ಬಗ್ಗೆ ಅಧ್ಯಯನಕ್ಕೆ 2024ರಲ್ಲಿ ಪ್ರೊ. ಎಂ. ಗೋವಿಂದ ರಾವ್ ಸಮಿತಿ ರಚನೆ ಮಾಡಲಾಗಿತ್ತು. ನಂಜುಂಡಪ್ಪ ಸಮಿತಿಯ ಶಿಫಾರಸುಗಳ ಅನುಷ್ಠಾನದ ಪ್ರಗತಿಯನ್ನು ಪರಿಶೀಲಿಸುವುದು ಮತ್ತು ಪ್ರಸ್ತುತ ಹಿಂದುಳಿದಿರುವ ತಾಲ್ಲೂಕುಗಳನ್ನು ಅಭಿವೃದ್ಧಿಪಡಿಸಲು ಹೊಸ ಮಾನದಂಡಗಳನ್ನು ರೂಪಿಸುವುದು ಹೊಸ ಸಮಿತಿಯ ಜವಾಬ್ದಾರಿಯಾಗಿತ್ತು. ಹೀಗಾಗಿ ಸಮಿತಿಯು ತನ್ನ ಅಂತಿಮ ವರದಿಯನ್ನು ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ. ಈ ವೇಳೆ ಸಚಿವರಾದ ಈಶ್ವರ ಖಂಡ್ರೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್‌, ಸಮಿತಿ ಸದಸ್ಯರಾದ ಎಸ್.ಟಿ.ಬಾಗಲಕೋಟೆ, ಸೂರ್ಯನಾರಾಯಣ ರಾವ್, ಸಂಗೀತ ಎನ್.ಕೆ., ಎಲ್.ಕೆ.ಅತೀಕ್, ಸದಸ್ಯ ಕಾರ್ಯದರ್ಶಿ ವಿಶಾಲ್ ಉಪಸ್ಥಿತರಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

94ರ ವಯಸ್ಸಿನಲ್ಲಿ ಸಿನಿಮಾ ನಿರ್ದೇಶಿಸುತ್ತಿದ್ದಾರೆ ಲಿಜೆಂಡರಿ ನಿರ್ದೇಶಕ, ರಾಜಮೌಳಿಗೂ ಕಾತರ – Kannada News | Singeetam Srinivasa Rao directing new movie in his age of 94

ಸಿಂಗೀತಂ ಶ್ರೀನಿವಾಸ್, ಭಾರತದ ಲಿಜೆಂಡರಿ ಸಿನಿಮಾ ನಿರ್ದೇಶಕರುಗಳಲ್ಲಿ (Director) ಒಬ್ಬರು. ಅವರು ನಿರ್ದೇಶಿಸಿರುವ ಅತ್ಯುತ್ತಮ ಸಿನಿಮಾಗಳ ಪಟ್ಟಿ ಬಹಳ ದೊಡ್ಡದಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಎಲ್ಲ ಭಾಷೆಗಳಲ್ಲಿಯೂ ಸಿನಿಮಾಗಳನ್ನು ನಿರ್ದೇಶಿಸಿರುವುದು ಮಾತ್ರವೇ ಅಲ್ಲ ಸುಮಾರು 20ಕ್ಕೂ ಹೆಚ್ಚು ಆಲ್​​ಟೈಂ ಕಲ್ಟ್ ಸಿನಿಮಾಗಳನ್ನು ಭಾರತ ಚಿತ್ರರಂಗಕ್ಕೆ ನೀಡಿದ ಅತ್ಯದ್ಭುತ ನಿರ್ದೇಶಕ ಅವರು. ಅಪ್ಪಟ ಸಿನಿಮಾ ಪ್ರೇಮಿ ಆಗಿರುವ ಸಿಂಗೀತಂ ಶ್ರೀನಿವಾಸ್ ವಯಸ್ಸು ಈಗ 94 ವರ್ಷ. ಈ ವಯಸ್ಸಿನಲ್ಲೂ ಅವರು ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಮುಂದಾಗಿರುವುದು ಮಾತ್ರವಲ್ಲ, ಹಲವು ಭಾಗಗಳ ಚಿತ್ರೀಕರಣವನ್ನೂ ಮುಗಿಸಿಬಿಟ್ಟಿದ್ದಾರೆ.

ಸಿಂಗೀತಂ ಶ್ರೀನಿವಾಸ್ ಅವರು ಈ ವಯಸ್ಸಿನಲ್ಲಿ ಸಿನಿಮಾ ನಿರ್ದೇಶನ ಮಾಡುತ್ತಿದ್ದು, ಸಿನಿಮಾಕ್ಕೆ ದಕ್ಷಿಣದ ಜನಪ್ರಿಯ ಮತ್ತು ಹಿರಿಯ ನಿರ್ಮಾಣ ಸಂಸ್ಥೆಯಾದ ವೈಜಯಂತಿ ಮೂವೀಸ್ ಬಂಡವಾಳ ಹೂಡಿದೆ. ಸಿಂಗೀತಂ ಅವರು ಈಗಾಗಲೇ ತಮ್ಮ ಹೊಸ ಸಿನಿಮಾದ ಹಲವು ಭಾಗಗಳ ಚಿತ್ರೀಕರಣವನ್ನು ಸಹ ಮುಗಿಸಿದ್ದಾರೆ. ಈ ಕುರಿತು ವಿಡಿಯೋ ಬಿಡುಗಡೆ ಮಾಡಿರುವ ವೈಜಯಂತಿ ಮೂವೀಸ್, ಸಿಂಗೀತಂ ಅವರು ಚಿತ್ರೀಕರಣ ಮಾಡುತ್ತಿರುವ ದೃಶ್ಯಗಳನ್ನು ಹಂಚಿಕೊಂಡಿದೆ. ಸಿನಿಮಾಕ್ಕೆ ದೇವಿ ಶ್ರೀ ಪ್ರಸಾದ್ ಅವರು ಸಂಗೀತ ನೀಡಿರುವುದು ಮತ್ತೊಂದು ವಿಶೇಷ.

ಸಿಂಗೀತಂ ಶ್ರೀನಿವಾಸ್ ಅವರ ಹೊಸ ಸಿನಿಮಾದ ನಟರುಗಳು ಯಾರು ಎಂಬುದು ಇನ್ನೂ ಬಹಿರಂಗಗೊಂಡಿಲ್ಲ. ಇತ್ತೀಚೆಗಷ್ಟೆ ಸಿನಿಮಾದ ಮುಹೂರ್ತ ನಡೆದಿದೆ. ಈ ಸಿನಿಮಾ ಸಿಂಗೀತಂ ಶ್ರೀನಿವಾಸ್ ಅವರ ಬಹು ಮೆಚ್ಚಿನ ಕತೆಯನ್ನು ಒಳಗೊಂಡಿರಲಿದ್ದು, ಇದು ಅವರ ಡ್ರೀಮ್ ಪ್ರಾಜೆಕ್ಟ್ ಆಗಿದೆಯಂತೆ. ಸಿನಿಮಾದ ಟೈಟಲ್ ಅನ್ನು ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡುವುದಾಗಿ ವೈಜಯಂತಿ ಮೂವೀಸ್ ಹೇಳಿಕೊಂಡಿದೆ.

ಇದನ್ನೂ ಓದಿ:ಈ ವಾರ ಒಟಿಟಿಗೆ ಬಂದಿವೆ ಭರ್ಜರಿ ಸಿನಿಮಾಗಳು: ನೀವೂ ನೋಡಿ

ಸಿಂಗೀತಂ ಶ್ರೀನಿವಾಸ್ ಅವರ 61ನೇ ಸಿನಿಮಾ ಇದಾಗಿದೆ. 2005 ರಲ್ಲಿ ಬಿಡುಗಡೆ ಆದ ಕಮಲ್ ಹಾಸನ್ ನಟನೆಯ ‘ಮುಂಬೈ ಎಕ್ಸ್​​ಪ್ರೆಸ್’ ಸಿಂಗೀತಂ ನಿರ್ದೇಶಿಸಿದ ಕೊನೆಯ ಸಿನಿಮಾ ಆಗಿತ್ತು. ಅದಾದ ಬಳಿಕ 2013 ರಲ್ಲಿ ‘ವೆಲ್​​ಕಮ್ ಒಬಾಮ’ ಹೆಸರಿನ ಮಕ್ಕಳ ಸಿನಿಮಾ ನಿರ್ದೇಶಿಸಿದರು. ಅದಾದ ಬಳಿಕ ಈಗ ಮತ್ತೆ ಡೈರೆಕ್ಟರ್ ಕುರ್ಚಿ ಏರಿದ್ದಾರೆ.

ಶಿವಣ್ಣನ ಮೊದಲ ಸಿನಿಮಾ ‘ಆನಂದ್’, ‘ಭಾಗ್ಯದ ಲಕ್ಷ್ಮಿ ಬಾರಮ್ಮ’, ‘ಹಾಲು-ಜೇನು’, ‘ಚಲಿಸುವ ಮೋಡಗಳು’, ‘ದೇವತಾ ಮನುಷ್ಯ’, ‘ಶ್ರುತಿ ಸೇರಿದಾಗ’, ‘ಟುವ್ವಿ ಟುವ್ವಿ ಟುವ್ವಿ’ ಇನ್ನೂ ಕೆಲವಾರು ಸೂಪರ್ ಹಿಟ್ ಸಿನಿಮಾಗಳನ್ನು ಸಿಂಗೀತಂ ಕನ್ನಡಕ್ಕೆ ನೀಡಿದ್ದಾರೆ. ಭಾರತದ ಅತ್ಯುತ್ತಮ ಸಿನಿಮಾಗಳಲ್ಲಿ ಒಂದಾದ ‘ಪುಷ್ಪಕ ವಿಮಾನ’ದ ನಿರ್ದೇಶಕರೂ ಇವರೇ. ತೆಲುಗಿನಲ್ಲಿ ‘ಭೈರವ ದ್ವೀಪಂ’, ‘ಆದಿತ್ಯ 369’ ತಮಿಳಿನ ‘ಅಪೂರ್ವ ಸೋದರಂಗಳ್’ ಸೇರಿದಂತೆ ಇನ್ನೂ ಹಲವು ಅತ್ಯುತ್ತಮ ಸಿನಿಮಾಗಳನ್ನು ಅವರು ನೀಡಿದ್ದಾರೆ. ಎಸ್​​ಎಸ್ ರಾಜಮೌಳಿ ಸಹ ಸಿಂಗೀತಂ ಅವರ ಹೊಸ ಸಿನಿಮಾದ ಬಗ್ಗೆ ಇನ್​​ಸ್ಟಾಗ್ರಾಂನಲ್ಲಿ ಸ್ಟೋರಿ ಹಂಚಿಕೊಂಡಿದ್ದು, ಸಿನಿಮಾಕ್ಕಾಗಿ ಕಾತರನಾಗಿ ಕಾಯುತ್ತಿರುವುದಾಗಿ ಹೇಳಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

PAK vs AUS: ತವರಿನಲ್ಲಿ ಆಸ್ಟ್ರೇಲಿಯಾವನ್ನು ಮಣಿಸಿ ಟಿ20 ಸರಣಿ ಗೆದ್ದ ಪಾಕಿಸ್ತಾನ – Kannada News | Pakistan Secures T20 Series Win vs Australia, Boosts World Cup Morale

ಟಿ20 ವಿಶ್ವಕಪ್​ ಆರಂಭಕ್ಕೂ ಮುನ್ನ ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡುತ್ತಿರುವ ಪಾಕಿಸ್ತಾನ ತಂಡ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಈ ಸರಣಿಯನ್ನು ತನ್ನ ಕೈವಶ ಮಾಡಿಕೊಂಡಿದೆ. ಪ್ರಮುಖ ಆಟಗಾರರಿಲ್ಲದೆ ಪಾಕಿಸ್ತಾನಕ್ಕೆ ತೆರಳಿದ್ದ ಆಸ್ಟ್ರೇಲಿಯಾ ಟಿ20 ವಿಶ್ವಕಪ್​ಗೂ ಮುನ್ನ ಟಿ20 ಸರಣಿ ಸೋಲಿನ ಆಘಾತಕ್ಕೀಡಾಗಿದೆ. ಸರಣಿಯ ಮೊದಲ ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದುಕೊಂಡಿದ್ದ ಪಾಕಿಸ್ತಾನ ಇದೀಗ ಸರಣಿಯ ಎರಡನೇ ಪಂದ್ಯವನ್ನು ಬರೋಬ್ಬರಿ 90 ರನ್​ಗಳಿಂದ ಗೆದ್ದುಕೊಂಡಿದೆ. ಟಿ20 ವಿಶ್ವಕಪ್​ಗೂ ಮುನ್ನ ಆಸ್ಟ್ರೇಲಿಯಾ ತಂಡವನ್ನು ಮಣಿಸಿರುವುದು ಪಾಕಿಸ್ತಾನ ತಂಡದ ಮನೋಬಲ ಹೆಚ್ಚಿಸಿದೆ ಎನ್ನಬಹುದು.

Source link

ಜಾಗತಿಕ ಜಿಡಿಪಿ ಹೆಚ್ಚಳಕ್ಕೆ ವಿವಿಧ ದೇಶಗಳ ಕೊಡುಗೆ; ಭಾರತ ಶೇ. 17, ಅಮೆರಿಕ ಶೇ. 9.9 – Kannada News | World GDP growth, India’s contribution higher than US, as per IMF projection

ನವದೆಹಲಿ, ಜನವರಿ 31: ಈ ಕ್ಯಾಲಂಡರ್ ವರ್ಷದಲ್ಲಿ ಜಾಗತಿಕವಾಗಿ ಆಗುವ ಜಿಡಿಪಿ ಹೆಚ್ಚಳದಲ್ಲಿ (GDP increase) ಚೀನಾದ ಕೊಡುಗೆ ಶೇ. 26.6ರಷ್ಟಾಗಬಹುದು ಎಂದು ಐಎಂಎಫ್ ಅಂದಾಜು ಮಾಡಿದೆ. ಈ ಕೊಡುಗೆಯಲ್ಲಿ ಭಾರತವು ಅಮೆರಿಕವನ್ನೂ ಮೀರಿಸಲಿದೆ. ವಿಶ್ವದ ಐದನೆ ಅತಿದೊಡ್ಡ ಆರ್ಥಿಕತೆಯಾದರೂ 2026ರಲ್ಲಿ ಜಿಡಿಪಿ ಹೆಚ್ಚಳಕ್ಕೆ ನೀಡುವ ಕೊಡುಗೆಯಲ್ಲಿ ಭಾರತ 2ನೇ ಸ್ಥಾನ ಪಡೆಯಲಿದೆ ಎನ್ನುವುದು ಗಮನಾರ್ಹ.

ಜಾಗತಿಕ ಜಿಡಿಪಿ ಹೆಚ್ಚಳಕ್ಕೆ ಭಾರತದ ಕೊಡುಗೆ ಶೇ. 17 ಇರುತ್ತದೆ. ಅಮೆರಿಕವು ವಿಶ್ವದಲ್ಲೇ ಅತಿದೊಡ್ಡ ಆರ್ಥಿಕತೆಯ ದೇಶವಾದರೂ ಅದರ ಜಿಡಿಪಿ ಹೆಚ್ಚಳದ ಕೊಡುಗೆ ಶೇ. 9.9 ಮಾತ್ರ. ಇದಕ್ಕೆ ಕಾರಣ ಜಿಡಿಪಿ ಬೆಳವಣಿಗೆಯಲ್ಲಿನ ವ್ಯತ್ಯಾಸ.

ಇದನ್ನೂ ಓದಿ: ಬಲಿಷ್ಠ ಭಾರತಕ್ಕೆ ಬೇಕು ತಂತ್ರಜ್ಞಾನ ಪ್ರಾವೀಣ್ಯತೆ; ಬಜೆಟ್​ನಲ್ಲಿ ಟೆಕ್ ಸೆಕ್ಟರ್​ಗೆ ಏನು ಸಿಗುತ್ತೆ?

ಐಎಂಎಫ್ ಅಂದಾಜು ಪ್ರಕಾರ 2026ರಲ್ಲಿ ಚೀನಾದ ಆರ್ಥಿಕತೆ ಶೇ. 4.5ರಷ್ಟು ಹೆಚ್ಚಬಹುದು. ಅಮೆರಿಕದ ಜಿಡಿಪಿ ಶೇ. 2.4ರಷ್ಟು ಮಾತ್ರ ಹೆಚ್ಚಬಹುದು. ಭಾರತದ ಆರ್ಥಿಕತೆ ಶೇ. 6.4ರಷ್ಟು ಬೆಳೆಯಬಹುದು ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ ಅಭಿಪ್ರಾಯಪಟ್ಟಿದೆ.

2026ರ ಜಿಡಿಪಿ ಹೆಚ್ಚಳದಲ್ಲಿ ವಿವಿಧ ದೇಶಗಳ ಕೊಡುಗೆ

  1. ಚೀನಾ: ಶೇ. 26.6
  2. ಭಾರತ: ಶೇ. 17
  3. ಅಮೆರಿಕ: ಶೇ. 9.9
  4. ಇಂಡೋನೇಷ್ಯಾ: ಶೇ. 3.8
  5. ಟರ್ಕಿ: ಶೇ. 2.2
  6. ನೈಜೀರಿಯಾ: ಶೇ. 1.5
  7. ಬ್ರೆಜಿಲ್: ಶೇ. 1.5
  8. ವಿಯೆಟ್ನಾಂ: ಶೇ. 1.6
  9. ಸೌದಿ ಅರೇಬಿಯಾ: ಶೇ. 1.7
  10. ಜರ್ಮನಿ: ಶೇ. 0.9

ಇದನ್ನೂ ಓದಿ: ಟ್ಯಾಕ್ಸ್ ಡಿಡಕ್ಷನ್, ಡೆವಲಪರ್ಸ್​ಗೆ ಕಡಿಮೆ ದರದಲ್ಲಿ ಭೂಮಿ ಇತ್ಯಾದಿ ಕ್ರಮಗಳ ನಿರೀಕ್ಷೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮ

ವಿಶ್ವದ ಜಿಡಿಪಿ ಹೆಚ್ಚಳದಲ್ಲಿ ಏಷ್ಯಾ ಪೆಸಿಫಿಕ್ ಪ್ರದೇಶದ ಕೊಡುಗೆಯೇ ಶೇ. 50ಕ್ಕಿಂತ ಹೆಚ್ಚಿದೆ. ಚೀನಾ ಮತ್ತು ಭಾರತ, ಈ ಎರಡು ದೇಶಗಳ ಕೊಡುಗೆ ಶೇ. 43.6ರಷ್ಟಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

IND vs NZ: ಅಭಿಷೇಕ್ ಅಬ್ಬರಕ್ಕೆ ಮೊದಲ ಓವರ್​ನಲ್ಲೇ ಆಕಾರ ಕಳೆದುಕೊಂಡ ಚೆಂಡು – Kannada News | Abhishek Sharma’s Power Six Forces Ball Change in IND vs NZ T20 Final

ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಕೊನೆಯ ಮತ್ತು ಐದನೇ ಪಂದ್ಯ ತಿರುವನಂತಪುರಂನ ಗ್ರೀನ್‌ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಅದರಂತೆ ಭಾರತದ ಪರ ಇನ್ನಿಂಗ್ಸ್ ಆರಂಭಿಸಿದ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ (Abhishek Sharma) ಆರಂಭದಿಂದಲೇ ಹೊಡಿಬಡಿ ಆಟಕ್ಕೆ ಮುಂದಾದರು. ಅದರಲ್ಲೂ ಮೊದಲ ಎಸೆತದಲ್ಲೇ ಸಿಕ್ಸರ್ ಬಾರಿಸಲು ಯತ್ನಿಸುವ ಅಭಿಷೇಕ್ ಈ ಪಂದ್ಯದ ಮೊದಲೆರಡು ಎಸೆತಗಳಲ್ಲಿ ರನ್ ಬಾರಿಸಲಿಲ್ಲ. ಆದರೆ ಮೂರನೇ ಎಸೆತದಲ್ಲಿ ಭರ್ಜರಿ ಸಿಕ್ಸರ್ ಬಾರಿಸುವಲ್ಲಿ ಯಶಸ್ವಿಯಾದರು. ಜಾಕೋಬ್ ಡಫಿ ಎಸೆದ ಈ ಎಸೆತವನ್ನು ಸಿಕ್ಸರ್​ಗಟ್ಟುವ ಮೂಲಕ ಅಭಿಷೇಕ್ ತಮ್ಮ ಖಾತೆ ತೆರೆದರು. ಆದರೆ ಅಭಿಯ ಈ ಪವರ್​ಫುಲ್​ ಶಾಟ್​ನಿಂದಾಗಿ ಅಂಪೈರ್​ಗಳು ಮೊದಲ ಓವರ್​ನಲ್ಲೇ ಚೆಂಡನ್ನು ಬದಲಿಸಬೇಕಾಯಿತು.

ಚೆಂಡಿನ ಆಕಾರವೇ ಬದಲಾಯ್ತು

ಅಭಿಷೇಕ್ ಶರ್ಮಾ ಈ ಸರಣಿಯಲ್ಲಿ ಮತ್ತೊಮ್ಮೆ ಸಿಕ್ಸರ್ ಬಾರಿಸುವ ಮೂಲಕ ತಮ್ಮ ಖಾತೆಯನ್ನು ತೆರೆದರು. ಜಾಕೋಬ್ ಡಫಿ ಮೂರನೇ ಎಸೆತವನ್ನು ಅಭಿಷೇಕ್ ಕವರ್ಸ್​ ದಿಕ್ಕಿನಲ್ಲಿ ಆಡುವ ಮೂಲಕ ಭರ್ಜರಿ ಸಿಕ್ಸರ್ ಬಾರಿಸಿದರು. ಇತ್ತ ಕ್ರೀಡಾಂಗಣದಲ್ಲಿ ನೆರೆದಿದ್ದ ಅಭಿಮಾನಿಗಳು ಕೂಡ ಹುಚ್ಚೆದು ಕುಣಿಯಲಾರಂಭಿಸಿದರು. ಆದರೆ ಈ ಅದ್ಭುತ ಸಿಕ್ಸರ್ ನಂತರ ಚೆಂಡನ್ನು ಬದಲಿಸಬೇಕಾಯಿತು. ಏಕೆಂದರೆ ಅಭಿಷೇಕ್ ತೋಳ್ಬಲಕ್ಕೆ ಸಿಲುಕಿದ ಚೆಂಡು ತನ್ನ ಆಕಾರವನ್ನು ಕಳೆದುಕೊಂಡಿತ್ತು. ವಾಸ್ತವವಾಗಿ ಅಭಿ ಬಾರಿಸಿದ ಚೆಂಡು ಬೌಂಡರಿಯಿಂದಾಚೆಗಿನ ಕಾಂಕ್ರೀಟ್ ಅಥವಾ ಗಟ್ಟಿಯಾದ ಮೇಲ್ಮೈಗೆ ಬಡಿದು ಅದರ ಆಕಾರವನ್ನು ಕಳೆದುಕೊಂಡಿತ್ತು. ಹೀಗಾಗಿ ಚೆಂಡನ್ನು ಪರೀಕ್ಷಿಸಿದ ಅಂಪೈರ್‌ಗಳು ಚೆಂಡನ್ನು ಬದಲಿಸುವ ನಿರ್ಧಾರಕ್ಕೆ ಬಂದರು.

IND vs NZ: ಗುರುವಿಗೆ ತಕ್ಕ ಶಿಷ್ಯ; 2ನೇ ಅತಿ ವೇಗದ ಅರ್ಧಶತಕ ಬಾರಿಸಿದ ಅಭಿಷೇಕ್

30 ರನ್​ಗಳಿಗೆ ಅಭಿ ಇನ್ನಿಂಗ್ಸ್ ಅಂತ್ಯ

ನಿಯಮಗಳ ಪ್ರಕಾರ, ಪಂದ್ಯದಲ್ಲಿ ಬಳಸುವ ಚೆಂಡಿನ ಆಕಾರ ಬದಲಾದರೆ, ಅದನ್ನು ಬದಲಾಯಿಸಬೇಕು. ಅದರಂತೆ ಅಂಪೈರ್‌ಗಳು ತಕ್ಷಣ ಹೊಸ ಚೆಂಡನ್ನು ತರಲು ನಿರ್ಧರಿಸಿದರು, ಇದರಿಂದಾಗಿ ಆಟವನ್ನು ಸ್ವಲ್ಪ ಸಮಯದವರೆಗೆ ನಿಲ್ಲಿಸಲಾಯಿತು. ಪಂದ್ಯದ ಆರಂಭಿಕ ಓವರ್‌ನಲ್ಲಿ ಈ ಘಟನೆ ಸಂಭವಿಸಿದರಿಂದ ಅಭಿಮಾನಿಗಳು ಅಚ್ಚರಿಗೊಂಡರು. ಆ ಬಳಿಕ ತಮ್ಮ ಸ್ಫೋಟಕ ಇನ್ನಿಂಗ್ಸ್ ಮುಂದುವರಿಸಿದ ಅಭಿಷೇಕ್ ಶರ್ಮಾ ಮೊದಲ ಓವರ್‌ನಲ್ಲಿ ಒಂದು ಸಿಕ್ಸ್ ಮತ್ತು ಎರಡು ಬೌಂಡರಿಗಳನ್ನು ಒಳಗೊಂಡಂತೆ 14 ರನ್ ಗಳಿಸಿದರು. ಆದಾಗ್ಯೂ ಅವರಿಗೆ ದೊಡ್ಡ ಇನ್ನಿಂಗ್ಸ್ ಆಡಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಅಭಿ 16 ಎಸೆತಗಳಲ್ಲಿ 14 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 30 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಐಪಿಎಸ್ ಅಧಿಕಾರಿಗಳಿಗೆ ಹೊಸ ನಿಯಮ; ಕೇಂದ್ರದಲ್ಲಿ ಐಜಿಯಾಗಲು ಎರಡು ವರ್ಷ ಕೇಂದ್ರೀಯ ಸೇವೆ ಕಡ್ಡಾಯ – Kannada News | MHA mandates two year Central stint as SP or DIG for IPS officers aiming IG rank

ನವದೆಹಲಿ, ಜನವರಿ 31: ಐಪಿಎಸ್ ಅಧಿಕಾರಿಗಳು ಕೇಂದ್ರದಲ್ಲಿ ಐಜಿ ಮಟ್ಟದ ಅಧಿಕಾರಿಯಾಗಲು ಕನಿಷ್ಠ ಎರಡು ವರ್ಷ ಎಸ್​ಪಿ ಅಥವಾ ಡಿಐಜಿ ಮಟ್ಟದಲ್ಲಿ ಕೇಂದ್ರೀಯ ಸೇವೆ ಪೂರ್ಣಗೊಳಿಸುವುದು (central deputation) ಕಡ್ಡಾಯ. ಹೀಗೊಂದು ಹೊಸ ನಿಯಮವನ್ನು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ (Ministry of Home Affairs) ಮಾಡಿದೆ. ಜನವರಿ 28ರಂದು ಹೊರಡಿಸಲಾದ ಈ ಮಾರ್ಗಸೂಚಿ ಪ್ರಕಾರ 2011, ಹಾಗೂ ನಂತರದ ಬ್ಯಾಚ್ ಅಧಿಕಾರಿಗಳಿಗೆ ಹೊಸ ನಿಯಮ ಅನ್ವಯ ಆಗುತ್ತದೆ.

ರಾಷ್ಟ್ರಮಟ್ಟದ ಜವಾಬ್ದಾರಿ ನಿಭಾಯಿಸಬಲ್ಲಂತಹ ಅಧಿಕಾರಿಗಳ ಸಮೂಹ ನಿರ್ಮಿಸುವುದು ಸರ್ಕಾರದ ಉದ್ದೇಶ ಎನ್ನಲಾಗಿದೆ. ಹೊಸ ನಿಯಮದಿಂದ ಅಧಿಕಾರಿಗಳು ಹಿರಿಯ ನಾಯಕತ್ವದ ಪಾತ್ರಕ್ಕೆ ಬೇಕಾದ ಕೇಂದ್ರೀಯ ಅನುಭವವನ್ನು ಪಡೆಯಲು ಸಾಧ್ಯವಾಗುತ್ತದೆ.

ಇದನ್ನೂ ಓದಿ: ರವಿದಾಸ್ ಜಯಂತಿ: ಬಾಂಬ್ ಬೆದರಿಕೆ ನಡುವೆ ಇಂದು ಪ್ರಧಾನಿ ಮೋದಿ ಪಂಜಾಬ್ ಭೇಟಿ; ಅದಂಪುರ್ ಏರ್ಪೋರ್ಟ್​ಗೆ ಗುರು ರವಿದಾಸ್ ಹೆಸರು

ಕೇಂದ್ರ ಮಟ್ಟದಲ್ಲಿ ಅನುಭವ ಇಲ್ಲದ ಐಪಿಎಸ್ ಅಧಿಕಾರಿಗಳು ಪೊಲೀಸ್ ಮಹಾನಿರ್ದೇಶಕ ಅಥವಾ ಐಜಿ ಮಟ್ಟದ ಹುದ್ದೆ ಏರುತ್ತಿದ್ದರು. ಇದರಿಂದ ಕೇಂದ್ರೀಯ ಮಟ್ಟದಲ್ಲಿ ಪೊಲೀಸ್ ವ್ಯವಸ್ಥೆ, ಗುಪ್ತಚರ ಮತ್ತು ಭದ್ರತೆಯನ್ನು ನಿಭಾಯಿಸಲು ಕಷ್ಟವಾಗುತ್ತಿರುವ ಕಾರಣ ಈ ಸುಧಾರಣಾ ಕ್ರಮ ಜಾರಿಗೆ ತರಲಾಗಿದೆ.

ಐಪಿಎಸ್ ಅಧಿಕಾರಿಗಳು ಸಿಎಪಿಎಫ್ ಮತ್ತಿತರ ಕೇಂದ್ರೀಯ ಹುದ್ದೆಗಳಲ್ಲಿ ಅನುಭವ ಹೊಂದಿದ ನಂತರ ಐಜಿಯಾಗಬೇಕಾಗುತ್ತದೆ.

ಇದನ್ನೂ ಓದಿ: ಸುನೇತ್ರಾ ಪವಾರ್ ಉಪಮುಖ್ಯಮಂತ್ರಿಯಾಗಿ ಅಧಿಕಾರ; ಮಹಾರಾಷ್ಟ್ರಕ್ಕೆ ಮೊತ್ತಮೊದಲ ಮಹಿಳಾ ಡಿಸಿಎಂ

ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಹೊರಡಿಸಿರುವ ಈ ಅಧಿಸೂಚನೆಯು ಎಲ್ಲಾ ರಾಜ್ಯ ಮುಖ್ಯ ಕಾರ್ಯದರ್ಶಿಗಳಿಗೆ ಕಳುಹಿಸಲಾಗಿದೆ. ಕೇಂದ್ರಾಡಳಿತ ಪ್ರದೇಶಗಳ ಅಧೀನ ಕಾರ್ಯದರ್ಶಿಗಳಿಗೂ ಕಳುಹಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಜಮೀನು ವಿಚಾರಕ್ಕೆ ದಾಯಾದಿ ಕಲಹ: ಹಿಂಬದಿಯಿಂದ ಚಾಕು ಇರಿದು ಬರ್ಬರವಾಗಿ ವ್ಯಕ್ತಿಯ ಕೊಲೆ – Kannada News | Kalaburagi Land Dispute: Family Feud Ends in Brutal Stabbing Murder

ಕಲಬುರಗಿ, ಜನವರಿ 31: ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ದಾಯಾದಿ ಕಲಹ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಹಂಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಬಸವರಾಜ್ ತಳವಾರ ಮೃತ ದುರ್ದೈವಿಯಾಗಿದ್ದು, ಮೃತನ ದೊಡ್ಡಪ್ಪನ ಮಗ ಗೂಳೇಶ್​​ ಎಂಬವನೇ ಕೊಲೆ ಆರೋಪಿಯಾಗಿದ್ದಾನೆ. ಘಟನೆ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದು, ಗೂಳೆಶ್​​ಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಸಿಮೆಂಟ್ ಫ್ಯಾಕ್ಟರಿಯಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಬಂದಿದ್ದ ಬಸವರಾಜ್ ಹೆಂಡತಿ ಜೊತೆ ಊಟ ಮಾಡಿ ಕೂತಿದ್ದರು. ಈ ವೇಳೆ ಸ್ನೇಹಿತರಿಂದ ಕರೆ ಬಂದ ಹಿನ್ನೆಲೆ ಮನೆಯಿಂದ ಆಚೆ ಬಂದು ಅಂಗಡಿಯ ಬಳಿ ಗೆಳೆಯರ ಜೊತೆ ಬಸವರಾಜ್​​ ಮಾತಾಡಿಕೊಂಡಿದ್ದರು. ಈ ವೇಳೆ ಅಲ್ಲಿಗೆ ಬಂದ ಗೂಳೇಶ್,​​​​ ಅನ್ನ ಇಲ್ಲದಿದ್ರು ದೊಡ್ಡ ದೊಡ್ಡ ಮಾತು ಹೇಳ್ತೀಯಾ? ಜಮೀನು ಮಾರಾಟ ವಿಚಾರದಲ್ಲಿ ಎಂಟ್ರಿ ಕೊಡ್ತೀಯಾ? ಅಂತಾ ಬೈಯೋದಕ್ಕೆ ಶುರು ಮಾಡಿದ್ದಾನೆ‌. ಬಸವರಾಜ್ ಮೇಲಿನ ಕೋಪಕ್ಕೆ ಆತನ ಸ್ನೇಹಿತನ ಜೊತೆಯೂ ಗಲಾಟೆ ತೆಗೆದು ಹಲ್ಲೆ ಮಾಡಿದ್ದಾನೆ. ಹೀಗಾಗಿ ತಕ್ಷಣ ಅಲ್ಲಿದ್ದವರು ಬಸವರಾಜ್​​ಗೆ ಮನೆಗ ಹೋಗುವಂತೆ ಹೇಳಿದ್ದಾರೆ. ಅವರು ಕೂಡ ಮನೆಯತ್ತ ಹೆಜ್ಜೆ ಹಾಕಿದ್ದು, ಈ ವೇಳೆ ಹಿಂದಿನಿಂದ ಬಂದ ಆರೋಪಿ ಚಾಕುವಿನಿಂದ ಎರಡ್ಮೂರು ಬಾರಿ ಬಸವರಾಜ್​​ಗೆ ಇರಿದಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಬಸವರಾಜ್ ತನ್ನ ಸಹೋದರ ಮತ್ತು ಚಿಕ್ಕಪ್ಪಂದಿರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ‌. ತಕ್ಷಣ ಸ್ಥಳಕ್ಕೆ ಬಂದವರೆ ಆತನನ್ನ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಯತ್ನಿಸಿದರೂ ಅಷ್ಟರಲ್ಲಾಗಲೇ ಬಸವರಾಜ್ ಉಸಿರು ಚೆಲ್ಲಿದ್ದರು.

ಇದನ್ನೂ ಓದಿ: ತನ್ನ ತಂದೆ-ತಾಯಿ, ಸಹೋದರಿಯನ್ನು ಕೊಂದ ಯುವಕ; ಮಿಸ್ಸಿಂಗ್ ಕೇಸ್ ಕೊಡಲು ಹೋಗಿ ಸತ್ಯ ಕಕ್ಕಿದ ಭೂಪ!

ಇನ್ನು ಕೊಲೆಯಾದ ಬಸವರಾಜ್ ಮತ್ತು ಗೂಳೇಶ್ ಚಿಕ್ಕಪ್ಪ-ದೊಡ್ಡಪ್ಪನ ಮಕ್ಕಳು. ಬಸವರಾಜ್ ತಂದೆ-ತಾಯಿ ಮೃತರಾದ ಬಳಿಕ ಬಸವರಾಜ್ ಸಹೋದರರನ್ನ ಗೂಳೇಶ್ ತಂದೆ-ತಾಯಿಯೇ ಸಾಕಿದ್ದು, ಮದುವೆಯನ್ನೂ ಮಾಡಿದ್ದರು. ಆದ್ರೆ ಮದುವೆ ಖರ್ಚು ಅದು ಇದು ಅಂತಾ ಸಾಕಷ್ಟು ಸಾಲ ಆಗಿದೆ. ಹೀಗಾಗಿ ಬಸವರಾಜ್ ಪಾಲಿನ ಜಮೀನು ನಾವೇ ಖರಿದಿ ಮಾಡಿ ಸಾಲ ತೀರಿಸುತ್ತೇವೆ ಎಂದು ಗೂಳೇಶ್​​ ಕುಟುಂಬ ಹೇಳಿತ್ತು. ಬಸವರಾಜ್ ಪತ್ನಿ ಸ್ವಲ್ಪ ಓದು ಬರಹ ಗೊತ್ತಿದ್ದವರಾಗಿದ್ದು, ಇವರು ಮೋಸ ಮಾಡಿ ನಮ್ಮ ಜಮೀನು ಲಪಟಾಯಿಸೋದಕ್ಕೆ ಮುಂದಾಗಿದ್ದಾರೆ ಅಂತಾ ಗಂಡನಿಗೆ ಹೇಳಿದ್ದರು. ಹೀಗಾಗಿ ಮನೆಯಿಂದ ಆಚೆ ಬಂದು ಇವರು ವಾಸ ಮಾಡುತ್ತಿದ್ದರು. ಇದ್ರಿಂದ ಕೆರಳಿ ಕೆಂಡವಾಗಿ ಬಸವರಾಜ್ ಮೇಲೆ ಹಲ್ಲೆ ಮಾಡಿ ಗೂಳೇಶ್​​ ಒಮ್ಮೆ ಪೊಲೀಸ್ ಠಾಣೆಯ ಮೆಟ್ಟಿಲೇರಿ ಬಂದಿದ್ದ. ಅದಾದ ಬಳಿಕವೂ ಪದೇ ಪದೇ ಬಸವರಾಜ್ ಜೊತೆ ಗಲಾಟೆ ಮಾಡ್ತಿದ್ದ. ಕೆಲ ತಿಂಗಳ ಹಿಂದೆ ಈ ಗೂಳೇಶ್​​ನ ಮತ್ತೊಬ್ಬ ಚಿಕ್ಕಪ್ಪ ಕೂಡ ಜಮೀನು ಮಾರಾಟ ಮಾಡೋದಕ್ಕೆ ಮುಂದಾಗಿದ್ದರು. ಆ ಜಮೀನನ್ನು ಕಡಿಮೆದರಲ್ಲಿ ಖರೀದಿಸಲು ಆರೋಪಿಯ ಕುಟುಂಬ ನಿರ್ಧರಿಸಿತ್ತು. ಆದರೆ ಅದಾಗಲೇ ಅವರು ಬೇರೆಯವರಿಗೆ ಜಮೀನು ಮಾರಲು ಒಪ್ಪಿ ಮುಂಗಡ ಹಣವನ್ನೂ ಪಡೆದಿದ್ದರು. ಚಿಕ್ಕಪ್ಪನ ಬೆಂಬಲಕ್ಕೆ ಬಸವರಾಜ್​​​​ ಕೂಡ ನಿಂತಿದ್ದರು. ಈ ವಿಚಾರವಾಗಿಯೂ  ಗೂಳೇಶ್​​ಗೆ ಸಿಟ್ಟಿತ್ತು ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಈ ವಾರ ಒಟಿಟಿಗೆ ಬಂದಿವೆ ಭರ್ಜರಿ ಸಿನಿಮಾಗಳು: ನೀವೂ ನೋಡಿ – Kannada News | OTT Release this week from January 25 to January 31

ಬಾಕ್ಸ್ ಆಫೀಸ್​​ನಲ್ಲಿ ಹಲವು ಹೊಸ ದಾಖಲೆಗಳನ್ನೇ ಬರೆದಿರುವ 2025ರ ಬ್ಲಾಕ್ ಬಸ್ಟರ್ ಸಿನಿಮಾ ‘ಧುರಂಧರ್’ ಈ ವಾರ ಒಟಿಟಿಗೆ ಬಂದಿದೆ. ನೆಟ್​​ಫ್ಲಿಕ್ಸ್​​ನಲ್ಲಿ ಸಿನಿಮಾ ಈಗಾಗಲೇ ಬಿಡುಗಡೆ ಆಗಿದ್ದು, ಚಿತ್ರಮಂದಿರಗಳ ರೀತಿಯೇ ಭರ್ಜರಿಯಾಗಿಯೇ ಸದ್ದು ಮಾಡುತ್ತಿದೆ.

Source link

Exit mobile version