‘ಉತ್ತರಕಾಂಡ’ ಸಿನಿಮಾ ನಿಂತಿದ್ದು ಏಕೆ? ಮುಂದೇನು? ಡಾಲಿ ಧನಂಜಯ್ ಉತ್ತರ – Kannada News | Is Uttarakaanda movie stopped Daali Dhanajay gave answer
ಡಾಲಿ ಧನಂಜಯ್ (Daali Dhananjay) ಸಿನಿಮಾ ವೃತ್ತಿ ಜೀವನದಲ್ಲಿ ‘ರತ್ನನ್ ಪ್ರಪಂಚ’ ಒಂದು ಅಪರೂಪದ ಮತ್ತು ಅತ್ಯುತ್ತಮ ಸಿನಿಮಾ ಸಹ ಹೌದು. ಆ ಸಿನಿಮಾವನ್ನು ರೋಹಿತ್ ಪದಕಿ ನಿರ್ದೇಶನ ಮಾಡಿದ್ದರು. ಆ ಸಿನಿಮಾದ ಅದ್ಭುತ ಯಶಸ್ಸಿನ ಬಳಿಕ ರೋಹಿತ್ ಪದಕಿ ಡಾಲಿ ಧನಂಜಯ್ ಕಾಂಬಿನೇಷನ್ನಲ್ಲಿ ‘ಉತ್ತರಕಾಂಡ’ ಸಿನಿಮಾ ಘೋಷಣೆಯಾಯ್ತು. ಸಿನಿಮಾದ ಟೀಸರ್ ಸಹ ಬಿಡುಗಡೆ ಆಗಿ ಸಖತ್ ನಿರೀಕ್ಷೆ ಹುಟ್ಟಿಸಿತ್ತು. ಅದೇ ಸಿನಿಮಾನಲ್ಲಿ ಶಿವರಾಜ್ ಕುಮಾರ್, ರಮ್ಯಾ ಅವರುಗಳು ಸಹ ನಟಿಸಲಿದ್ದಾರೆ ಎನ್ನಲಾಗಿತ್ತು. ಆದರೆ ಹಠಾತ್ತಾಗಿ ಸಿನಿಮಾದ…