Headlines

ಸೇವಾಶುಲ್ಕ ಗ್ರಾಹಕರ ಪ್ರೀತಿ, ಕಡ್ಡಾಯವಲ್ಲ: ಹೋಟೆಲ್‌, ಬಾರ್‌-ರೆಸ್ಟೋರೆಂಟ್‌ ಬಿಸಿ ಮುಟ್ಟಿಸಿದ CCPA – Kannada News | CCPA Penalises 41 Restaurants after pralhad joshi instructions For Levying Service Charges By Default

ನವದೆಹಲಿ, (ಜುಲೈ 19): ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ (pralhad joshi) ಅವರ ಸೂಚನೆ ಮೇರೆಗೆ CCPA 41 ರೆಸ್ಟೋರೆಂಟ್‌ಗಳ ವಿರುದ್ಧ ಸ್ವಯಂ ದೂರು ದಾಖಲಿಸಿಕೊಂಡು ಕ್ರಮ ಕೈಗೊಂಡಿದೆ. ಗ್ರಾಹಕರಿಗೆ ಪೂರ್ವನಿಯೋಜಿತವಾಗಿ ʼಸೇವಾ ಶುಲ್ಕʼ ವಿಧಿಸುತ್ತಿದ್ದ ಹಿನ್ನೆಲೆಯಲ್ಲಿ Chaayos, Barbeque Nation, L’Opera French Bakery Private Limited ಮತ್ತಿತರರಿಗೆ ದಂಡ ವಿಧಿಸಿದೆ. ರಾಷ್ಟ್ರೀಯ ಗ್ರಾಹಕ ಸಹಾಯವಾಣಿ (NCH)ಗೆ ಬಂದ ದೂರುಗಳ ಆಧಾರದ ಮೇಲೆ ಗ್ರಾಹಕರಿಗೆ ಬಿಲ್‌ನಲ್ಲಿ ಪೂರ್ವನಿಯೋಜಿತವಾಗಿ ʼಸೇವಾ ಶುಲ್ಕ (service charge)ʼ…

Read More

ಹೊಟ್ಟೆ ಸರಿಯಾಗಿ ಕ್ಲೀನ್ ಆಗದಿದ್ದರೆ ರಾತ್ರಿ ಮಲಗುವ ಮುನ್ನ ಈ ಒಂದು ಅಭ್ಯಾಸ ರೂಢಿಸಿಕೊಂಡು ಮಲಬದ್ಧತೆಗೆ ಗುಡ್‌ಬೈ ಹೇಳಿ! – Kannada News | Constipation Relief: Natural Ways To Improve Your Morning Bowel Movement

ಇತ್ತೀಚಿನ ದಿನಗಳಲ್ಲಿ ಮಲಬದ್ಧತೆ (Constipation) ಸಾಮಾನ್ಯ ಆರೋಗ್ಯ ಸಮಸ್ಯೆಯಾಗಿ ಪರಿಣಮಿಸಿದೆ. ಅನಿಯಮಿತ ಆಹಾರ ಪದ್ಧತಿ, ಕಡಿಮೆ ನೀರು ಕುಡಿಯುವುದು, ಫೈಬರ್ ಕೊರತೆ, ದೈಹಿಕ ಚಟುವಟಿಕೆ ಇಲ್ಲದಿರುವುದು ಹಾಗೂ ಒತ್ತಡದ ಜೀವನಶೈಲಿ ಇದಕ್ಕೆ ಪ್ರಮುಖ ಕಾರಣಗಳಾಗಿವೆ. ಬೆಳಗ್ಗೆ ಹೊಟ್ಟೆ ಸಂಪೂರ್ಣ ಖಾಲಿಯಾಗದಿದ್ದರೆ ದಿನವಿಡೀ ಹೊಟ್ಟೆ ಉಬ್ಬರ, ಅಸಹನೆ, ಗ್ಯಾಸ್ಟ್ರಿಕ್‌, ಆಯಾಸ ಮತ್ತು ಹಸಿವು ಕಡಿಮೆಯಾಗುವಂತಹ ಸಮಸ್ಯೆಗಳು ಕಾಣಿಸಬಹುದು. ಇದಕ್ಕೆ ಕೆಲವು ಔಷಧಿಗಳನ್ನು ಸೇವಿಸುವ ಬದಲು, ಕೆಲವು ನೈಸರ್ಗಿಕ ವಿಧಾನಗಳನ್ನು ಅನುಸರಿಸುವುದರಿಂದ ಜೀರ್ಣಾಂಗದ ಆರೋಗ್ಯವನ್ನು ಉತ್ತಮವಾಗಿಡಬಹುದು. ತಜ್ಞರ ಪ್ರಕಾರ, ಜೀವನಶೈಲಿಯಲ್ಲಿ…

Read More

ಗೃಹಲಕ್ಷ್ಮಿ ಯೋಜನೆ ಬಗ್ಗೆ ಡಿಕೆಶಿ ಬಿಗ್ ಅಪ್ಡೇಟ್: 2000 ರೂ.ಬೇಕು ಅಂದ್ರೆ ಈ ನಿಯಮಗಳನ್ನ ಪಾಲಿಸಲೇಬೇಕು – Kannada News | Biometric, Mobile Number And Bank Account mandatory for gruhalakshmi scheme Says DK Shivakumar

ಬೆಂಗಳೂರು, (ಜುಲೈ 19): ಗೃಹಲಕ್ಷ್ಮೀ ಯೋಜನಯನ್ನು (gruhalakshmi scheme) ಪರಿಷ್ಕರಣೆ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಇಂದು (ಜುಲೈ 19) ನಡೆದ ಸಚಿವ ಸಂಪುಟದಲ್ಲಿ ಈ ಬಗ್ಗೆ ಮಹತ್ವದ ಚರ್ಚೆ ಆಗಿದೆ. ಹೌದು…ಗೃಹಲಕ್ಷ್ಮಿ ಫಲಾನುಭವಿಗಳ ಮರುಪರಿಶೀಲನೆ ನಡೆಸಲು ಸರ್ಕಾರ ಸಜ್ಜಾಗಿದ್ದು, ಗೃಹಲಕ್ಷ್ಮೀ ಹಣಕ್ಕೆ ಬಯೋಮೆಟ್ರಿಕ್ ಕಡ್ಡಾಯಗೊಳಿಸಲು ಸಚಿವ ಸಂಪುಟ  ಸಭೆಯಲ್ಲಿ (Cabinet Meeting) ತೀರ್ಮಾನ ಕೈಗೊಳ್ಳಲಾಗಿದೆ. ಪ್ರತಿ ಒಂದು ಕುಟುಂಬದ ಯಜಮಾನಿಗೆ 2000 ರೂ. ಆರ್ಥಿಕ ನೆರವು ನೀಡುವ ಯೋಜನೆಯೇ ಗೃಹಲಕ್ಷ್ಮಿ. ಆದ್ರೆ ಅನರ್ಹರು ಕೂಡ ಯೋಜನೆಯ…

Read More

IND vs ENG: ಇಂಗ್ಲೆಂಡ್‌ ಬ್ಯಾಟರ್​ಗಳ ಅಬ್ಬರ; ಭಾರತಕ್ಕೆ ದಾಖಲೆಯ ಗುರಿ – Kannada News | Lord’s Record: England’s 387/3 Against India in Final ODI – Duckett, Bethell Shine

ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ (England vs India) ನಡುವಿನ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಆತಿಥೇಯ ಇಂಗ್ಲೆಂಡ್ ಲಾರ್ಡ್ಸ್‌ ಅಂಗಳದಲ್ಲಿ ಹಿಂದೆಂದೂ ದಾಖಲಾಗದ ಮೊತ್ತವನ್ನು ದಾಖಲಿಸಿದೆ. ಭಾರತದ ದುರ್ಬಲ ಬೌಲಿಂಗ್ ವಿಭಾಗದ ಮೇಲೆ ಆರಂಭದಿಂದಲೂ ಸವಾರಿ ಮಾಡಿದ ಇಂಗ್ಲೆಂಡ್‌ ಬ್ಯಾಟರ್​ಗಳು ನಿಗದಿತ 50 ಓವರ್‌ಗಳಲ್ಲಿ ದಾಖಲೆಯ 387 ರನ್​ ಕಲೆಹಾಕಿದ್ದಾರೆ. ಅದು ಕೇವಲ 3 ವಿಕೆಟ್‌ಗಳನ್ನು ಕಳೆದುಕೊಂಡು. ಇಂಗ್ಲೆಂಡ್‌ ಪರ ಡಕೆಟ್ ಸ್ಫೋಟಕ ಶತಕ ಬಾರಿಸಿದರೆ….

Read More

ಬೆಟ್ಟದ ರಂಗನಾಥನ ತಪ್ಪಲಿನಲ್ಲೇ ಚೆನ್ನಮ್ಮನ ಅಂತ್ಯಕ್ರಿಯೆ ಏಕೆ? ಕಾರಣ ಬಿಚ್ಚಿಟ್ಟ ಅಳಿಯ – Kannada News | Dr Manjunath Gives Reasons about Why Chennamma Funeral Nearr Bettada Ranganath Temple

ಹಾಸನ, (ಜುಲೈ 19): ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ (Chennamma Deve Gowda) ಅವರ ಅಂತ್ಯಕ್ರಿಯೆ ನಾಳೆ (ಜುಲೈ 20) ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ಗ್ರಾಮದ ಸಮೀಪವಿರುವ ಕ್ಯಾತನಹಳ್ಳಿ ಗ್ರಾಮದ ಬೆಟ್ಟದ ರಂಗನಾಥ ಸ್ವಾಮಿ ತಪ್ಪಲಿನಲ್ಲಿ ನಡೆಯಲಿದೆ. ಸಕಲ ಸರ್ಕಾರಿ ಗೌರವಗೊಂದಿಗೆ ಅಂತ್ಯಕ್ರಿಯೆ ನಡೆಯಲಿದ್ದು, ಈಗಾಗಲೇ ಹಾಸನ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಇನ್ನು ಅಂತ್ಯಕ್ರಿಯೆ ಸ್ಥಳಕ್ಕೆ ಖುದ್ದು ದೇವೇಗೌಡ, ಅಳಿಯ ಡಾ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ಮಾಡಿದರು. ಇನ್ನು ಇದೇ…

Read More

ಬಲೂಚಿಸ್ತಾನ ಸ್ವಾತಂತ್ರ್ಯ ಘೋಷಣೆ; ಈ ಪ್ರಾಂತ್ಯ ಕೈತಪ್ಪಿದರೆ ಪಾಕಿಸ್ತಾನದ ಅರ್ಧಶಕ್ತಿ ಕುಂದಿದಂತಾಗುತ್ತಾ? – Kannada News | Balochistan declares independence, know why this matter worries Pakistan more

ಬಲೂಚಿಸ್ತಾನದ ಬುಗ್ತಿ ಹೋರಾಟಗಾರರುImage Credit source: Getty Images ಇಸ್ಲಾಮಾಬಾದ್, ಜುಲೈ 19: ಭಾರತವನ್ನು ನೂರು ಹೋಳುಗಳಾಗಿ ಮಾಡುತ್ತೇವೆ ಎಂದು ಹೇಳಿಕೊಳ್ಳುತ್ತಿದ್ದ ಪಾಕಿಸ್ತಾನ ಈಗ ಆಂತರಿಕ ಸಮಸ್ಯೆಗಳಿಂದ ಜರ್ಝರಿತವಾಗಿದೆ. ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಮತ್ತು ಬಲೂಚಿಸ್ತಾನದಲ್ಲಿ ಪ್ರತ್ಯೇಕತೆಯ ಕೂಗು ಪ್ರತಿಧ್ವನಿಸುತ್ತಲೇ ಇರುತ್ತದೆ. ಇದೇ ವೇಳೆ, ಬಲೂಚಿಸ್ತಾನ (Balochistan) ಮೂರು ದಿನಗಳ ಹಿಂದೆ ಸ್ವಾತಂತ್ರ್ಯ ಘೋಷಿಸಿಕೊಂಡಿದೆ. ದಶಕಗಳಿಂದ ನಡೆಯುತ್ತಿರುವ ಸಶಸ್ತ್ರ ಹೋರಾಟದ ಮುಂದುವರಿದ ಭಾಗವಾಗಿ ಈ ಘೋಷಣೆ ನಡೆದಿದೆ. ಈ ಬಲೂಚಿಸ್ತಾನದ ಸ್ವಾತಂತ್ರ್ಯದ ವಿಷಯವು ಪಾಕಿಸ್ತಾನದ ಆಂತರಿಕ…

Read More

ಬೆಂಗಳೂರಿಗರ ಲೂಟಿ ಮಾಡುತ್ತಿರುವ ತಮಿಳು ಸಿನಿಮಾ ‘ಜನ ನಾಯಗನ್’ – Kannada News | Jana Naayagan Bengaluru Ticket Price Loot: Vijay Movie Premier Shows Shock Fans

ತಮಿಳುನಾಡು ಸಿಎಂ ವಿಜಯ್ (Vijay) ನಟನೆಯ ‘ಜನ ನಾಯಗನ್’ ಸಿನಿಮಾ ಬಿಡುಗಡೆ ಆಗಲಿದೆ. ಜುಲೈ 23ಕ್ಕೆ ಸಿನಿಮಾ ಬಿಡುಗಡೆ ಆಗುತ್ತಿದ್ದು, ಇದು ವಿಜಯ್ ಅವರ ಕೊನೆಯ ಸಿನಿಮಾ ಎಂದು ಚಿತ್ರತಂಡ ಮೊದಲೇ ಪ್ರಚಾರ ಮಾಡಿತ್ತು. ಸಹಜವಾಗಿಯೇ ಸಿನಿಮಾ ಅಭಿಮಾನಿಗಳು, ವಿಜಯ್ ಅವರ ಅಭಿಮಾನಿಗಳು ಸಿನಿಮಾ ವೀಕ್ಷಣೆಗೆ ಮುಗಿ ಬೀಳುತ್ತಿದ್ದಾರೆ. ಈಗಾಗಲೇ ಸಿನಿಮಾದ ಅಡ್ವಾನ್ಸ್ ಬುಕಿಂಗ್ ಓಪನ್ ಆಗಿದೆ. ಬೇರೆ ನಗರಗಳಲ್ಲಿ ಸಾಧಾರಣವಾಗಿರುವ ಟಿಕೆಟ್ ದರ, ಬೆಂಗಳೂರಿನಲ್ಲಿ ಮಾತ್ರ ಗಗನಕ್ಕೇರಿದೆ. ಆ ಮೂಲಕ ಬೆಂಗಳೂರಿಗರ ಲೂಟಿ ಮಾಡುತ್ತಿದ್ದಾನೆ, ‘ಜನ…

Read More

‘ಟಾಕ್ಸಿಕ್’ ಟ್ರೈಲರ್ ಬಿಡುಗಡೆಗೆ ನಿಗದಿಯಾಯ್ತು ದಿನಾಂಕ, ಸ್ಥಳ ಎಲ್ಲಿ? – Kannada News | Toxic movie trailer may release on August 28

‘ಟಾಕ್ಸಿಕ್’ (Toxic) ಪ್ರಸ್ತುತ ಭಾರತದ ಬಹು ನಿರೀಕ್ಷಿತ ಸಿನಿಮಾ. ಯಶ್ ನಟಿಸಿ, ಸಹ ನಿರ್ಮಾಣ ಸಹ ಮಾಡಿರುವ ಈ ಸಿನಿಮಾಕ್ಕಾಗಿ ದೇಶ, ವಿದೇಶಗಳ ಸಿನಿಮಾ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಸಿನಿಮಾದ ಟೀಸರ್, ಪೋಸ್ಟರ್, ಹಾಡುಗಳು ಸಿನಿಮಾದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿವೆ. ಜೊತೆಗೆ ಸಿನಿಮಾದ ಕತೆ ಏನಿರಬಹುದೆಂಬ ಕುತೂಹಲವನ್ನೂ ಹುಟ್ಟು ಹಾಕಿವೆ. ಈಗಾಗಲೇ ಪೋಸ್ಟರ್ ಇನ್ನಿತರೆ ಪ್ರಚಾರ ಸಾಮಗ್ರಿಗಳನ್ನು ಬಿಡುಗಡೆ ಮಾಡಿರುವ ಚಿತ್ರತಂಡ, ಟ್ರೈಲರ್ ಬಿಡುಗಡೆಗೂ ಮುಹೂರ್ತ ನಿಗದಿ ಪಡಿಸಿದ್ದಾರೆ. ಕೆಲ ಮೂಲಗಳ…

Read More

ದೈಹಿಕ ಕಿರುಕುಳ ಆರೋಪ; ಅಭಿಷೇಕ್ ಪೊರೆಲ್ ಬಂಧನಕ್ಕೆ ಹೈಕೋರ್ಟ್ ಆದೇಶ – Kannada News | Abhishek Porel Arrest: Kolkata HC Orders Custody in physical attack, Threat Case

ಕಳೆದ ತಿಂಗಳಷ್ಟೇ, ಮಹಿಳೆಯೊಬ್ಬರು, ಅಭಿಷೇಕ್ ಪೊರೆಲ್ ಅವರ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದು, ಮದುವೆಯ ಸುಳ್ಳು ಭರವಸೆ ನೀಡಿ ಅಭಿಷೇಕ್ ತನ್ನೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದರು. ಇದೀಗ ಮದುವೆಯಾಗುವಂತೆ ಕೇಳಲು ಹೋದರೆ ಅಭಿಷೇಕ್ ನನ್ನ ಮೇಲೆ ಹಲ್ಲೆ ಮಾಡಿದ್ದು, ಬೆದರಿಕೆಯನ್ನು ಹಾಕಿದ್ದಾರೆ ಎಂಬ ಗಂಭೀರ ಆರೋಪಗಳನ್ನು ಹೊರಿಸಿದ್ದಾರೆ(PC-PTI). Source link

Read More

ಕಷ್ಟಕಾಲಕ್ಕೆ ಚಿನ್ನ ಎನ್ನುತ್ತಾರೆ; ಬಿಕ್ಕಟ್ಟಿನಲ್ಲಿ ಬಂಗಾರದ ದರ ಏರುವ ಬದಲು ಇಳಿಯುತ್ತಿರುವುದು ಯಾಕೆ? ಇಲ್ಲಿದೆ ಸಂಭಾವ್ಯ ಕಾರಣಗಳು – Kannada News | Gold Rates rise when chips are down, but why the prices of yellow metal going down during West Asia crisis

ನವದೆಹಲಿ, ಜುಲೈ 19: ಜಾಗತಿಕವಾಗಿ ಏನಾದರೂ ಬಿಕ್ಕಟ್ಟು (Crisis) ಅಥವಾ ಯುದ್ಧದ ಪರಿಸ್ಥಿತಿ ಎದುರಾದರೆ ಹೂಡಿಕೆದಾರರು ಸಾಮಾನ್ಯವಾಗಿ ಸುರಕ್ಷಿತ ಹೂಡಿಕೆಯಾಗಿ ಚಿನ್ನ ಮತ್ತು ಬೆಳ್ಳಿಯ ಕಡೆಗೆ ಮುಖ ಮಾಡುತ್ತಾರೆ. ಇದರಿಂದ ಚಿನ್ನದ ಬೆಲೆ (Gold Price) ಹೆಚ್ಚಾಗುತ್ತದೆ. ಆದರೆ, ಇತ್ತೀಚಿನ ಪಶ್ಚಿಮ ಏಷ್ಯಾ ಸಂಘರ್ಷದ ಅವಧಿಯಲ್ಲಿ ಚಿನ್ನದ ಬೆಲೆ ಸುಮಾರು 27% ರಷ್ಟು ಮತ್ತು ಬೆಳ್ಳಿಯ ಬೆಲೆ ಬರೋಬ್ಬರಿ 52% ರಷ್ಟು ಕುಸಿದಿದೆ. ಇಂತಹ ಬಿಕ್ಕಟ್ಟಿನ ಸಮಯದಲ್ಲೂ ಚಿನ್ನದ ಬೆಲೆ ಕುಸಿಯಲು ಕಾರಣವೇನು? ಹಣಕಾಸು ತಜ್ಞರ ಪ್ರಕಾರ,…

Read More