ಇಂಡಿಯನ್ ಪ್ರೀಮಿಯರ್ ಲೀಗ್ನ 10ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ವೇಗಿ ಮೊಹಮ್ಮದ್ ಶಮಿ ಮಾರಕ ದಾಳಿ ಸಂಘಟಿಸಿದ್ದಾರೆ. ಬಲಿಷ್ಠ ಬ್ಯಾಟಿಂಗ್ ಲೈನಲ್ ಹೊಂದಿರುವ ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ 4 ಓವರ್ ಎಸೆದ ಶಮಿ ನೀಡಿದ್ದು ಕೇವಲ 9 ರನ್ಗಳು ಮಾತ್ರ. ಇದರ ನಡುವೆ 2 ವಿಕೆಟ್ಗಳನ್ನು ಸಹ ಕಬಳಿಸಿದ್ದಾರೆ.
ವಿಶೇಷ ಎಂದರೆ ಮೊಹಮ್ಮದ್ ಶಮಿ ತಮ್ಮ 24 ಎಸೆತಗಳಲ್ಲಿ ಒಂದೇ ಒಂದು ಬೌಂಡರಿ ಹೊಡೆಸಿಕೊಂಡಿಲ್ಲ. ಅಂದರೆ ಶಮಿ ಓವರ್ನಲ್ಲಿ ಫೋರ್ ಅಥವಾ ಸಿಕ್ಸ್ ಬಾರಿಸಲು ಎಸ್ಆರ್ಹೆಚ್ ತಂಡದ ಯಾವುದೇ ಬ್ಯಾಟರ್ಗೆ ಸಾಧ್ಯವಾಗಿಲ್ಲ.
ಇನ್ನು ಇಪ್ಪತ್ತನಾಲ್ಕು ಎಸೆತಗಳಲ್ಲಿ ಶಮಿ ಬರೋಬ್ಬರಿ 18 ಎಸೆತಗಳನ್ನು ಡಾಟ್ ಮಾಡಿದ್ದರು ಎಂಬುದು ಮತ್ತೊಂದು ವಿಶೇಷ. ಈ ಮೂಲಕ ಕರಾರುವಾಕ್ ದಾಳಿ ಸಂಘಟಿಸುವ ಮೂಲಕ ಮೊಹಮ್ಮದ್ ಶಮಿ ಎಲ್ಲರನ್ನು ಚಕಿತಗೊಳಿಸಿದ್ದಾರೆ.
ಮೊಹಮ್ಮದ್ ಶಮಿಯ ಈ ಮಾರಕ ದಾಳಿಗೆ ಕಂಗೆಟ್ಟ ಸನ್ರೈಸರ್ಸ್ ಹೈದರಾಬಾದ್ ತಂಡವು ಈ ಪಂದ್ಯದಲ್ಲಿ 20 ಓವರ್ಗಳಲ್ಲಿ ಕಲೆಹಾಕಿದ್ದು ಕೇವಲ 156 ರನ್ಗಳು ಮಾತ್ರ. ಈ ಗುರಿಯನ್ನು 19.5 ಓವರ್ಗಳಲ್ಲಿ ಚೇಸ್ ಮಾಡುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ತಂಡ 5 ವಿಕೆಟ್ಗಳ ಜಯ ಸಾಧಿಸಿದೆ.
ರಿಷಬ್ ಶೆಟ್ಟಿ ಅವರು ‘ಕಾಂತಾರ’ ಸಿನಿಮಾ ಬಳಿಕ, ‘ಕಾಂತಾರ: ಚಾಪ್ಟರ್ 1’ ಮಾಡಿದರು. ಈ ಎರಡೂ ಸಿನಿಮಾಗಳು ಅವರನ್ನು ಪ್ಯಾನ್ ಇಂಡಿಯಾ ಮಟ್ಟಕ್ಕೆ ಕರೆದುಕೊಂಡು ಹೋಗಿದೆ. ಈ ಸಿನಿಮಾಗಳಲ್ಲಿ ನಟಿಸೋದು ಮಾತ್ರವಲ್ಲ, ನಿರ್ದೇಶನ ಕೂಡ ಅವರದ್ದೇ. ಸದ್ಯ ರಿಷಬ್ ಅವರು ನಿರ್ದೇಶನದಿಂದ ಬ್ರೇಕ್ ಪಡೆದಿದ್ದು, ‘ಜೈ ಹನುಮಾನ್’ (Jai Hanuman) ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರ ಸೆಟ್ಟೇರಿ ಹಲವು ದಿನ ಕಳೆದ ಬಳಿಕ ಸಿನಿಮಾದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ.
‘ಜೈ ಹನುಮಾನ್’ ಚಿತ್ರಕ್ಕೆ ಫೆಬ್ರವರಿಯಲ್ಲಿ ಮುಹೂರ್ತ ನೆರವೇರಿದೆ. ಈ ಚಿತ್ರದಲ್ಲಿ ರಿಷಬ್ ಹನುಮಾನ್ ಪಾತ್ರ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ನಿಮಿಷ್ ರವಿ ಛಾಯಾಗ್ರಾಹಣ ಮಾಡಬೇಕಿತ್ತು. ಅವರು ‘ಲಕ್ಕಿ ಭಾಸ್ಕರ್’ ರೀತಿಯ ಸಿನಿಮಾಗಳಿಗೆ ಛಾಯಾಗ್ರಹಣ ಮಾಡಿದ್ದರು. ಈಗ ಇವರನ್ನು ‘ಜೈ ಹನುಮಾನ್’ ಸಿನಿಮಾದಿಂದ ಹೊರಗಿಡಲಾಗಿದ್ದು, ಎಸ್ ತಿರುನವುಕ್ಕರಸು ಅವರ ಎಂಟ್ರಿ ಆಗಿದೆ.
‘ಜೈ ಹನುಮಾನ್’ ಸಿನಿಮಾದಲ್ಲಿ ಪಾತ್ರವರ್ಗದ ಜೊತೆಗೆ ತಾಂತ್ರಿಕ ವರ್ಗಕ್ಕೂ ಹೆಚ್ಚು ಪ್ರಾಮುಖ್ಯತೆ ನೀಡಲಾಗುತ್ತಿದೆ. ಆಸ್ಕರ್ ವಿಜೇತ ಎಂಎಂ ಕೀರವಾಣಿ ಅವರು ಸಿನಿಮಾಗೆ ಸಂಗೀತ ಮಾಡುತ್ತಿದ್ದಾರೆ. ನಿಮಿಷ್ ಅವರನ್ನು ಹೊರಕ್ಕೆ ಇಡಲು ಕಾರಣ ಏನು ಎಂಬ ವಿಷಯ ಇನ್ನೂ ಬಹಿರಂಗವಾಗಿಲ್ಲ. ಮೈತ್ರಿ ಮೂವೀ ಮೇಕರ್ಸ್ ‘ಜೈ ಹನುಮಾನ್’ ಸಿನಿಮಾನ ನಿರ್ಮಾಣ ಮಾಡುತ್ತಿದೆ. ‘ಹನುಮಾನ್’ ಸಿನಿಮಾ ದೊಡ್ಡ ಯಶಸ್ಸು ಕಂಡ ಬಳಿಕ, ಮೈತ್ರಿ ಈ ಚಿತ್ರಕ್ಕೆ ಕೈ ಹಾಕಿದೆ.
‘ಹನುಮಾನ್’ ಚಿತ್ರದಲ್ಲಿ ಮಾಡರ್ನ್ ಕಥೆ ಹಾಗೂ ದೈವಿಕ ಶಕ್ತಿ ವಿಷಯವನ್ನು ಒಂದುಗೂಡಿಸಲಾಗಿತ್ತು. ಈಗ ‘ಜೈ ಹನುಮಾನ್’ ಚಿತ್ರವನ್ನು ಯಾವ ರೀತಿಯಲ್ಲಿ ಮಾಡುತ್ತಾರೆ ಎಂಬ ಕುತೂಹಲ ಮೂಡಿದೆ. ರಿಷಬ್ ಶೆಟ್ಟಿ ಅವರು ಭಕ್ತಿ ಪ್ರಧಾನ ಸಿನಿಮಾಗಳನ್ನು ಮಾಡುವ ಮೂಲಕ ಭೇಷ್ ಎನಿಸಿಕೊಳ್ಳುತ್ತಿದ್ದಾರೆ. ಅವರ ಬತ್ತಳಿಕೆಗೆ ಹೊಸ ಸಿನಿಮಾ ಸೇರ್ಪಡೆ ಆಗುತ್ತಿದೆ.
ಮೊರಾದಾಬಾದ್, ಏಪ್ರಿಲ್ 06: ಅಂದು ಮನೆಯಲ್ಲಿ ಎರಡೆರಡು ಮದುವೆ(Marriage), ಮನೆಯ ತುಂಬಾ ನೆಂಟರಿಷ್ಟರು ತುಂಬಿದ್ದರು. ಎಲ್ಲಾ ವಿಧಿ ವಿಧಾನಗಳು ಚೆನ್ನಾಗಿಯೇ ನಡೆಯುತ್ತಿತ್ತು. ಆದರೆ ಮದುವೆಯಲ್ಲಾ ಮುಗಿದ ಬಳಿಕ ತಂದೆ ಮಗಳನ್ನು ವರನ ಜತೆ ಕಳುಹಿಸಲು ನಿರಾಕರಿಸಿದ್ದಷ್ಟೇ ಅಲ್ಲದೆ ಈ ಮದುವೆ ಮುರಿದಿದ್ದಾರೆ. ಈ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್ನಲ್ಲಿ ನಡೆದಿದೆ. ಅಂದು ಎರಡು ವಿವಾಹಗಳು ನೆರವೇರಿದ್ದವು. ಮದುವೆಯ ವಿಧಿ ವಿಧಾನಗಳು ಮುಗಿದಿದ್ದವು. ಆದರೆ ತಂದೆ ವಧುವನ್ನು ಬೀಳ್ಕೊಡಲು ನಿರಾಕರಿಸಿದ್ದಾರೆ. ವರನ ತಪ್ಪಿನಿಂದಾಗಿ ಮದುವೆ ಮೆರವಣಿಗೆ ವಧು ಇಲ್ಲದೆ ಹಿಂದಿರುಗಬೇಕಾಯಿತು.
ಮೊರಾದಾಬಾದ್ನ ಸುರ್ಜನ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ, ಶನಿವಾರ ಒಂದೇ ಮನೆಯಿಂದ ಎರಡು ವಿವಾಹ ಮೆರವಣಿಗೆಗಳು ಹೊರಡಬೇಕಿತ್ತು. ಒಬ್ಬ ಮಗಳನ್ನು ಸಂತಸದಿಂದ ಬೀಳ್ಕೊಟ್ಟರು ಆದರೆ ಮತ್ತೊಬ್ಬ ಮಗಳ ಸರದಿ ಬಂದಾಗ, ತಂದೆ ಮಗಳನ್ನು ಕಳುಹಿಸುವುದಿಲ್ಲ ಎಂದಾಗ ಗೊಂದಲ ಸೃಷ್ಟಿಯಾಗಿತ್ತು.
ಎಷ್ಟು ಮನವೊಲಿಸಿದರೂ ಕೂಡ, ತಂದೆಯ ನಿರ್ಧಾರ ಬದಲಾಗಲಿಲ್ಲ.ಈ ವಿಚಾರ ಪಂಚಾಯಿತಿವರೆಗೂ ಹೋಯಿತು. ವಧುವಿನ ಕುಟುಂಬವು ವರ ಇನ್ನೊಬ್ಬ ಮಹಿಳೆಯೊಂದಿಗೆ ವಿವಾಹ ಸ್ಥಳದಲ್ಲಿ ಅಲೆದಾಡುತ್ತಿರುವುದನ್ನು ಗಮನಿಸಿದ್ದರು. ಯುವತಿಯ ಬಗ್ಗೆ ವರನನ್ನು ಪ್ರಶ್ನಿಸಿದಾಗ, ಆತ ತೃಪ್ತಿದಾಯಕ ಉತ್ತರವನ್ನು ನೀಡಲು ಸಾಧ್ಯವಾಗಲಿಲ್ಲ.
ಪರಿಸ್ಥಿತಿ ಬೇಗನೆ ಉಲ್ಬಣಗೊಂಡಿತು ಮತ್ತು ವಧುವಿನ ಕುಟುಂಬವು ಮದುವೆಯನ್ನು ರದ್ದುಗೊಳಿಸಿತು. ಈ ಘಟನೆ ಸಾಮಾಜಿಕ ಮಾಧ್ಯಮ ಮತ್ತು ಸ್ಥಳೀಯ ಪ್ರದೇಶಗಳಲ್ಲಿ ಚರ್ಚೆಯ ವಿಷಯವಾಗಿದೆ. ತಂದೆಯ ನಿರ್ಧಾರವು ಕೆಲವರನ್ನು ಆಘಾತಗೊಳಿಸಿತ್ತು.
ಈಗಿನ ಮಕ್ಕಳಿಗೆ (children) ಮೊಬೈಲ್ ಬಿಟ್ಟರೆ ಬೇರೆ ಪ್ರಪಂಚವೇ ಇಲ್ಲ ಎನ್ನುವಂತಾಗಿದೆ. ಆದರೆ ನಾವು ಸಣ್ಣವರು ಇದ್ದಾಗ ಆಡುತ್ತಿದ್ದ ಅದೆಷ್ಟೋ ಆಟಗಳ ಬಗ್ಗೆ ಈಗಿನ ಮಕ್ಕಳಿಗೆ ತಿಳಿದೇ ಇಲ್ಲ. ಅಂದು ಶಾಲೆ ಬಿಟ್ಟ ಕೂಡಲೇ ಮನೆಗೆ ಬಂದು ನಾನಾ ರೀತಿಯ ಆಟವನ್ನು ಆಡುತ್ತಿದ್ದ ಕಾಲವೊಂದಿತ್ತು. ಸೊಪ್ಪಾಟ, ಚೊಂಕಾಟ, ಕೆರೆದಡ, ಹುಲಿದನ ಹಾಗೂ ಅಡುಗೆಯಾಟ ಹೀಗೆ ನಾನಾ ರೀತಿಯ ಆಟವಾಡಿ ಖುಷಿ ಪಡುತ್ತಿದ್ದೆವು. ಹೆಣ್ಣು ಮಕ್ಕಳಿಗೆ ಅಡುಗೆಯಾಟವೇ ಮೆಚ್ಚಿನ ಆಟವಾಗಿತ್ತು. ಎಲೆ, ಸೊಪ್ಪು, ಮಣ್ಣು ಹೀಗೆ ಸಿಕ್ಕ ಸಿಕ್ಕ ವಸ್ತುಗಳನ್ನು ಬಳಸಿ ಅಡುಗೆ ಮನೆ ಮನೆ ಮಂದಿಯಂತೆ ಕುಳಿತು ಊಟ ಸವಿದು ಸಂಭ್ರಮಿಸುತ್ತಿದ್ದ ಆಟವದು. ಇದೀಗ ಈ ವಿಡಿಯೋ ನೋಡಿದ್ರೆ ನಿಮಗೆ ಖಂಡಿತ ನಿಮ್ಮ ಬಾಲ್ಯ ನೆನಪಾಗುತ್ತದೆ. ಪುಟಾಣಿಗಳೆಲ್ಲಾ ಜತೆ ಸೇರಿ ಅಡುಗೆ ಆಟ ಆಡುವ ವಿಡಿಯೋ ವೈರಲ್ ಆಗಿದ್ದು, ಈ ದೃಶ್ಯ ನೆಟ್ಟಿಗರ ಗಮನ ಸೆಳೆದಿದೆ.
deepasakshi8217 ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಪುಟಾಣಿಗಳು ರಸ್ತೆ ಪಕ್ಕದಲ್ಲಿರುವ ಸಣ್ಣದಾದ ಜಾಗದಲ್ಲಿ ಕುಳಿತು ಅಡುಗೆಯಾಟ ಆಡುತ್ತಿದ್ದಾರೆ. ಸಾಲಾಗಿ ಕುಳಿತು ತಾವೇ ಮಾಡಿದ ಅಡುಗೆಯನ್ನು ಸವಿಯುತ್ತಿದ್ದರೆ, ಮನೆಯ ಮುಖ್ಯ ಗೃಹಿಣಿಯಂತಿರುವ ಪುಟ್ಟ ಹುಡುಗಿಯೂ ಎಲ್ಲರಿಗೂ ಊಟ ಬಡಿಸುವುದರಲ್ಲಿ ಬ್ಯುಸಿಯಾಗಿರುವುದನ್ನು ಕಾಣಬಹುದು.
ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ಹಳೆ ದಿನಗಳು ಮತ್ತೆ ಮರಳಿ ಬಾರದು ಎಂದು ಹೇಳಿದರೆ, ಇನ್ನೊಬ್ಬರು ಆ ಬಾಲ್ಯದ ದಿನಗಳೇ ಸುಂದರ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಚಿಂತೆಗಳಿಲ್ಲದೇ ಆಟವನ್ನು ಸಂಭ್ರಮಿಸುತ್ತಿದ್ದ ಬಾಲ್ಯದ ದಿನಗಳು ಎಂದು ಹೇಳಿದ್ದಾರೆ.
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರು, ಏ.6: ಭಾರೀ ಕಾತುರದಿಂದ ಕಾಯುತ್ತಿದ್ದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುವ ದಿನ ಬಂದಿದೆ, ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಬಂದಿಲ್ಲ. ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಏಪ್ರಿಲ್ 7, 2026 ರಂದು ಅಂದರೆ ನಾಳೆ ಫಲಿತಾಂಶಗಳನ್ನು ಪ್ರಕಟಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿದೆ.
ಇನ್ನು ಪ್ರಕಟ ಆಗುವ ಫಲಿತಾಂಶವನ್ನು ನೋಡುವುದು ಹೇಗೆ ಎಂಬ ಗೊಂದಲಗಳು ವಿದ್ಯಾರ್ಥಿಗಳಿಗೆ ಇರಬಹುದು. ಅದಕ್ಕೆ ಭಯಬೇಡ, ಇಲ್ಲಿ ನೀಡಿರುವ ಲಿಂಕ್ಗಳನ್ನು ಓಪನ್ ಮಾಡಿ ನೋಡಿದ್ರೆ ಸಾಕು. karresults.nic.in ಮತ್ತು kseab.karnataka.gov.in ಅನ್ನು ಶಿಕ್ಷಣ ಇಲಾಖೆ ನೀಡಿದೆ. ಒಂದು ವೇಳೆ ಈ ಲಿಂಕ್ಗಳಲ್ಲಿ ದೋಷ ಬಂದರೆ, ಇನ್ನು ಆಯ್ಕೆಯನ್ನು ಕೂಡ ನೀಡಲಾಗಿದೆ. PUC ಫಲಿತಾಂಶಗಳನ್ನು ಡಿಜಿಲಾಕರ್ ವೆಬ್ಸೈಟ್ – digilocker.gov.in ನಲ್ಲಿಯೂ ಪರಿಶೀಲಿಸಲು ಅವಕಾಶವನ್ನು ನೀಡಲಾಗಿದೆ.
ಕಳೆದ ವರ್ಷ ಏಪ್ರಿಲ್ 8 ರಂದು ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಘೋಷಿಸಲಾಯಿತು, ಪರೀಕ್ಷೆಗಳು ಮಾರ್ಚ್ 1 ರಿಂದ ಮಾರ್ಚ್ 20 ರವರೆಗೆ ನಡೆದಿತ್ತು. ಈ ಬಾರಿಯೂ ಅದೇ ಸಮಯದಲ್ಲಿ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಪಿಯುಸಿ ಫಲಿತಾಂಶ 2026: ಪರಿಶೀಲಿಸುವುದು ಹೇಗೆ?
ವಿದ್ಯಾರ್ಥಿಗಳು ತಮ್ಮ ಫಲಿತಾಂಶ ಅನ್ನು ಡೌನ್ಲೋಡ್ ಮಾಡಲು ಈ ಹಂತಗಳನ್ನು ಅನುಸರಿಸಬಹುದು :
ಅಧಿಕೃತ ವೆಬ್ಸೈಟ್ karresults.nic.in ಗೆ ಭೇಟಿ ನೀಡಿ.
ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2026 ಲಿಂಕ್ ಮೇಲೆ ಕ್ಲಿಕ್ ಮಾಡಿ.
ನಿಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ
ಸಲ್ಲಿಸು ಮೇಲೆ ಕ್ಲಿಕ್ ಮಾಡಿ
ಒಂದು ವೇಳೆ ನಿಮಗೆ ಫಲಿತಾಂಶ ಕಾಪಿ ಬೇಕಂದರೆ ಡೌನ್ಲೋಡ್ ಮಾಡಿ ಮತ್ತು ಪ್ರಿಂಟ್ಔಟ್ ತೆಗೆದುಕೊಳ್ಳಿ.
ಡಿಜಿಲಾಕರ್ ವೆಬ್ಸೈಟ್ – digilocker.gov.in ನಲ್ಲಿ 12 ನೇ ತರಗತಿ ಕರ್ನಾಟಕ ಪಿಯುಸಿ ಫಲಿತಾಂಶಗಳು ಲಭ್ಯವಾಗಲಿದೆ.
ಏಪ್ರಿಲ್ 3 ರಂದು ಡಿಜಿಲಾಕರ್ ಪೋಸ್ಟ್ನಲ್ಲಿ ಹೀಗೆ ಹೇಳಲಾಗಿದೆ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ, 2026ನೇ ತರಗತಿಯ ದ್ವಿತೀಯ ಪಿಯುಸಿ ಫಲಿತಾಂಶಗಳು ಶೀಘ್ರದಲ್ಲೇ ಡಿಜಿಲಾಕರ್ನಲ್ಲಿ ಲಭ್ಯವಿರುತ್ತವೆ.
ಇಲ್ಲಿ ಯಾವುದಕ್ಕೂ ಕಾಯುವುದು ಬೇಡ ಹಾಗೂ ಇದಕ್ಕೆ ಹೆಚ್ಚಿನ ದಾಖಲೆಗಳು ಕೂಡ ಬೇಡ. ಸುಲಭವಾಗಿ ಹಾಗೂ ಸುರಕ್ಷಿತವಾಗಿ ಫಲಿತಾಂಶವನ್ನು ನೀಡಬಹುದು. ನಿಮ್ಮ ಫಲಿತಾಂಶಗಳನ್ನು digilocker.gov.in ನಲ್ಲಿ ತಕ್ಷಣವೇ ಪರಿಶೀಲಿಸಲು ಸಿದ್ಧರಾಗಿರಿ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಹೇಳಿದೆ.
ಇದರಲ್ಲಿ ಬರುವ ಫಲಿತಾಂಶವು ಅಭ್ಯರ್ಥಿಯ ಹೆಸರು, ನೋಂದಣಿ ಸಂಖ್ಯೆ, ವಿಷಯಗಳ ಹೆಸರುಗಳು ಮತ್ತು ಪ್ರತಿ ವಿಷಯದಲ್ಲಿ ಪಡೆದ ಅಂಕಗಳಂತಹ ಪ್ರಮುಖ ವಿವರಗಳನ್ನು ಒಳಗೊಂಡಿರುತ್ತದೆ. ಇದು ಒಟ್ಟು ಅಂಕಗಳು ಮತ್ತು ಒಟ್ಟಾರೆ ಫಲಿತಾಂಶದ ಸ್ಥಿತಿಯನ್ನು ಸಹ ತೋರಿಸುತ್ತದೆ, ಪರೀಕ್ಷೆಯಲ್ಲಿ ಅಭ್ಯರ್ಥಿಯ ಕಾರ್ಯಕ್ಷಮತೆಯ ಸಂಪೂರ್ಣ ಅವಲೋಕನವನ್ನು ಒದಗಿಸುತ್ತದೆ.
ಗುವಾಹಟಿ, ಏಪ್ರಿಲ್ 06: ತಮ್ಮ ಪತ್ನಿ ಮೇಲೆ ಕಾಂಗ್ರೆಸ್ ಹೊರಿಸಿರುವ ಆರೋಪಗಳ ಕುರಿತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ(Himanta Biswa Sarma) ಪ್ರತಿಕ್ರಿಯಿಸಿದ್ದಾರೆ. ಸಿಎಂ ಪತ್ನಿ ರಿನಿಕಿ ಭೂನ್ಯಾ ಶರ್ಮಾ ಮೂರು ವಿದೇಶಿ ಪಾಸ್ಪೋರ್ಟ್ಗಳನ್ನು ಹೊಂದಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಅದಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಕಾಂಗ್ರೆಸ್ ಪಾಕ್ನಿಂದ ಸಹಾಯ ಪಡೆಯುತ್ತಿದೆ, ತನ್ನ ಪತ್ನಿ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಿದೆ. ಕಳೆದ 10 ದಿನಗಳಲ್ಲಿ, ಪಾಕಿಸ್ತಾನಿ ಚಾನೆಲ್ಗಳು ಅಸ್ಸಾಂ ಚುನಾವಣೆಯ ಬಗ್ಗೆ ಕನಿಷ್ಠ 11 ಟಾಕ್ ಶೋಗಳನ್ನು ನಡೆಸಿವೆ, ಪ್ರತಿಯೊಂದೂ ಕಾಂಗ್ರೆಸ್ ಗೆಲ್ಲುವುದಾಗಿಯೇ ಪ್ರತಿಪಾದಿಸಿವೆ ಇದರರ್ಥ ಕಾಂಗ್ರೆಸ್ ಪಾಕಿಸ್ತಾನದ ಜತೆ ಸಂಬಂಧ ಹೊಂದಿದೆ ಎಂದು ದೂರಿದ್ದಾರೆ.
ಚುನಾವಣಾ ಪ್ರಚಾರ ಮಂಗಳವಾರ ಕೊನೆಗೊಳ್ಳಲಿದೆ, ಪಾಸ್ಪೋರ್ಟ್ ವಿವಾದದ ಬಗ್ಗೆ ರಾಜಕೀಯ ಬಿಸಿ ಏರಿದೆ. ಅಸ್ಸಾಂನಲ್ಲಿ ಏಪ್ರಿಲ್ 9 ರಂದು ಮತದಾನ ನಡೆಯಲಿದೆ. ಇದಕ್ಕೂ ಮುನ್ನ ಆರೋಪ ಪ್ರತ್ಯಾರೋಪಗಳ ಅಲೆಯೇ ನಡೆಯುತ್ತಿದೆ. ಕಾಂಗ್ರೆಸ್ ನಾಯಕರಾದ ಪವನ್ ಖೇರಾ ಮತ್ತು ಗೌರವ್ ಗೊಗೊಯ್ ಅವರು ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿದ್ದಾರೆ.
#WATCH | Guwahati: Assam CM Himanta Biswa Sarma says, “Yesterday, Pawan Khera and Gaurav Gogoi did two press conferences, one in Delhi, one in Guwahati…During our research, we found that the entire material of the press conference, which took place yesterday, was supplied by a… pic.twitter.com/X0JOVJzVCG
ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಯುಎಇ, ಆಂಟಿಗುವಾ-ಬಾರ್ಬುಡಾ ಮತ್ತು ಈಜಿಪ್ಟ್ನ ಪಾಸ್ಪೋರ್ಟ್ಗಳನ್ನು ಹೊಂದಿದ್ದಾರೆ ಎಂದು ಅವರು ಹೇಳಿದ್ದಾರೆ. ಹಿಮಂತ ಬಿಸ್ವಾ ಶರ್ಮಾ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ಪಕ್ಷವು ನಕಲಿ ದಾಖಲೆಗಳ ಮೂಲಕ ಗೊಂದಲವನ್ನು ಹರಡಲು ಪ್ರಯತ್ನಿಸಿದೆ ಎಂದು ಹೇಳಿಕೊಂಡಿದ್ದಾರೆ.
ಪವನ್ ಖೇರಾ ಅವರ ಪತ್ರಿಕಾಗೋಷ್ಠಿಗೆ ಬೇಕಾದ ಎಲ್ಲಾ ಮಾಹಿತಿಗಳನ್ನು ಪಾಕಿಸ್ತಾನದ ಸಾಮಾಜಿಕ ಮಾಧ್ಯಮ ಗುಂಪು ಒದಗಿಸಿದೆ ಎಂಬುದು ನಮಗೆ ತಿಳಿದುಬಂದಿದೆ. ಕಳೆದ 10 ದಿನಗಳಲ್ಲಿ, ಪಾಕಿಸ್ತಾನಿ ಚಾನೆಲ್ಗಳು ಅಸ್ಸಾಂ ಚುನಾವಣೆಯ ಬಗ್ಗೆ ಕನಿಷ್ಠ 11 ಟಾಕ್ ಶೋಗಳನ್ನು ನಡೆಸಿವೆ , ಇದು ಹಿಂದೆಂದೂ ಕಂಡಿರದ ಸಾಧನೆಯಾಗಿದೆ. ಪ್ರತಿಯೊಂದು ಟಾಕ್ ಶೋನಲ್ಲಿಯೂ, ಕಾಂಗ್ರೆಸ್ ಗೆಲ್ಲಬೇಕು ಎಂಬ ತೀರ್ಮಾನವಿತ್ತು. ನಿನ್ನೆಯ ಪತ್ರಿಕಾಗೋಷ್ಠಿಗೂ ಪಾಕಿಸ್ತಾನಿ ಸಂಪರ್ಕ ಈಗ ಸ್ಪಷ್ಟವಾಗಿದೆ. ಕಾನೂನು ಜಾರಿ ಸಂಸ್ಥೆಗಳು ಇದನ್ನು ಪರಿಶೀಲಿಸುತ್ತವೆ ಎಂಬ ವಿಶ್ವಾಸ ನನಗಿದೆ ಎಂದರು.
ತಮ್ಮ ಪತ್ನಿಯ ಹೆಸರಿನಲ್ಲಿ ನೋಂದಾಯಿಸಲಾದ ಕಂಪನಿಗಳ ಬಗ್ಗೆ ಸ್ಪಷ್ಟನೆ ನೀಡಿದ ಅವರು, ಯಾರಾದರೂ 199 ಅಮೆರಿಕನ್ ಡಾಲರ್ ಪಾವತಿಸುವ ಮೂಲಕ ಕಂಪನಿಯನ್ನು ನೋಂದಾಯಿಸಬಹುದು ಎಂದು ಹೇಳಿದರು . ಎಲ್ಲರ ಕಣ್ಣೆದುರೇ ಮತ್ತೊಂದು ಕಂಪನಿಯನ್ನು ನೋಂದಾಯಿಸಿ ತೋರಿಸಿದ್ದಾರೆ.
ಬೆಂಗಳೂರು, ಏಪ್ರಿಲ್ 6: ಚಿನ್ನದ ಬೆಲೆಯ ಏರಿಳಿತದ ಆಟ ಮುಂದುವರಿದಿದೆ. ಕಳೆದ ವಾರ 260 ರೂಗಳಷ್ಟು ಏರಿದ್ದ ಚಿನ್ನದ ಬೆಲೆ ಇವತ್ತು ಸೋಮವಾರ ಒಂದೇ ದಿನ 165 ರೂ ಕಡಿಮೆಗೊಂಡಿದೆ. ಅಪರಂಜಿ ಚಿನ್ನದ ಬೆಲೆ (Gold Rates) 15,000 ರೂ ಗಡಿಯೊಳಗೆ ಬಂದಿದೆ. ವಿದೇಶಗಳಲ್ಲಿ ಕೆಲವೆಡೆ ಏರಿಳಿತಗಳಾಗಿವೆ. ಹಲವು ಕಡೆ ಬೆಲೆ ಯಥಾಸ್ಥಿತಿಯಲ್ಲಿದೆ. ಬೆಳ್ಳಿ ಬೆಲೆ ಹೆಚ್ಚು ಸ್ಥಿರವಾಗಿದೆ. ಸೋಮವಾರ ಇದರ ಬೆಲೆಯಲ್ಲಿ ವ್ಯತ್ಯಯ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,36,700 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,49,130 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,36,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 25,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 25,500 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಏಪ್ರಿಲ್ 6ಕ್ಕೆ)
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,913 ರೂ
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,670 ರೂ
18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,185 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,913 ರೂ
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,670 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಬೆಂಗಳೂರು, ಏಪ್ರಿಲ್ 06: ಕರ್ನಾಟಕದಲ್ಲಿ ಆಟೋ ಎಲ್ಪಿಜಿ (LPG)ಕೊರತೆ ಸಮಸ್ಯೆ ದಿನೇದಿನೇ ಗಂಭೀರವಾಗುತ್ತಿದ್ದು, ಇದರ ಪರಿಣಾಮವಾಗಿ ಆಟೋ ಚಾಲಕರ ಜೀವನಸಂಕಷ್ಟಕ್ಕೆ ಸಿಲುಕಿದೆ. ಇಂಡಿಯನ್ ಆಯ್ಲ್ ಕಾರ್ಪೋರೇಶನ್ ಲಿಮಿಟೆಡ್ (ಐಒಸಿಎಲ್) ಸಂಸ್ಥೆ ಕರ್ನಾಟಕದಾದ್ಯಂತ ಆಟೋ ಎಲ್ಪಿಜಿ ಪೂರೈಕೆಯನ್ನು ಹೆಚ್ಚಿಸಿರುವುದಾಗಿ ಭಾನುವಾರ ತಿಳಿಸಿದೆ.
ತಾತ್ಕಾಲಿಕವಾಗಿ ಪೆಟ್ರೋಲ್ ಬಳಸುವಂತೆ ಸಲಹೆ
ರಾಜ್ಯದಲ್ಲಿ ಒಟ್ಟು 72 ಆಟೋ ಎಲ್ಪಿಜಿ ಡಿಸ್ಪೆನ್ಸಿಂಗ್ ಸ್ಟೇಷನ್ಗಳು ಕಾರ್ಯನಿರ್ವಹಿಸುತ್ತಿದ್ದು, ಅದರಲ್ಲಿ 55 ಅನ್ನು ಐಒಸಿಎಲ್ ನಿರ್ವಹಿಸುತ್ತದೆ. 300ಕ್ಕೂ ಹೆಚ್ಚು ಖಾಸಗಿ ಡಿಸ್ಪೆನ್ಸಿಂಗ್ ಕೇಂದ್ರಗಳಿದ್ದರೂ, ಸುಮಾರು 80 ಪ್ರತಿಶತ ಸ್ಥಗಿತಗೊಂಡಿರುವುದರಿಂದ ಪೂರೈಕೆಗೆ ಸಮಸ್ಯೆ ಉಂಟಾಗಿದೆ. ಮೂಲಸೌಕರ್ಯ ಕೊರತೆ ಮತ್ತು ಪೂರೈಕೆ ಸಾಮರ್ಥ್ಯದ ಅಭಾವದಿಂದ ಪರಿಸ್ಥಿತಿ ಇನ್ನಷ್ಟು ಹದಗೆಟ್ಟಿದೆ.
ಬೆಂಗಳೂರಿನಲ್ಲಿ ಸರ್ಕಾರಿ ಪಂಪ್ಗಳಲ್ಲಿ ಲೀಟರ್ಗೆ 89.52 ರೂ. ದರದಲ್ಲಿ LPG ಲಭ್ಯವಿದ್ದರೆ, ಖಾಸಗಿ ಪಂಪ್ಗಳಲ್ಲಿ ಬೆಲೆ 99ರಿಂದ 105 ರೂಪಾಯಿವರೆಗೆ ಇರುವುದರಿಂದ ಜನರು ಹೆಚ್ಚಾಗಿ ಸರ್ಕಾರಿ ಪಂಪ್ಗಳಿಗೆ ಮೊರೆ ಹೋಗುತ್ತಿದ್ದಾರೆ. ಪಂಪ್ಗಳ ಮುಂದೆ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ರಾಜ್ಯದಲ್ಲಿನ ಸುಮಾರು 70 ಪ್ರತಿಶತ ಆಟೋಗಳು ಡ್ಯುಯಲ್ ಫ್ಯೂಯಲ್ ವ್ಯವಸ್ಥೆ ಹೊಂದಿರುವುದರಿಂದ ತಾತ್ಕಾಲಿಕವಾಗಿ ಪೆಟ್ರೋಲ್ ಬಳಸುವಂತೆ ಐಒಸಿಎಲ್ ಸಲಹೆ ನೀಡಿದೆ.
ಸರ್ಕಾರದ ನಿರ್ಲಕ್ಷ್ಯಕ್ಕೆ ಆಕ್ರೋಶ
ಇದರ ನಡುವೆ, ಆದರ್ಶ ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘ ಸೇರಿದಂತೆ ಹಲವು ಆಟೋ ಚಾಲಕರ ಸಂಘಟನೆಗಳು ಸರ್ಕಾರದ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗೆ ಮುಂದಾಗಿವೆ. ಸಂಘಟನೆಯ ಅಧ್ಯಕ್ಷ ಎಂ. ಮಂಜುನಾಥ್ ಹೇಳುವಂತೆ, ಆದಾಯ ಕುಸಿತ ಮತ್ತು ಇಂಧನ ಕೊರತೆಯಿಂದ ಚಾಲಕರು ಇಎಮ್ಐ, ಮನೆ ಬಾಡಿಗೆ ಹಾಗೂ ಮಕ್ಕಳ ಶಾಲಾ ಶುಲ್ಕಗಳನ್ನು ಪಾವತಿಸಲು ಸಂಕಷ್ಟ ಅನುಭವಿಸುತ್ತಿದ್ದಾರೆ.
ಪ್ರತಿ ಆಟೋಗೆ ದಿನಕ್ಕೆ ಕನಿಷ್ಠ 6 ಲೀಟರ್ ಎಲ್ಪಿಜಿ ಪೂರೈಕೆ ಖಚಿತಪಡಿಸಬೇಕು ಎಂದು ಸಂಘಟನೆಗಳು ಆಗ್ರಹಿಸಿವೆ. ಬೆಂಗಳೂರಿನಲ್ಲಿ ದಿನನಿತ್ಯ ಸುಮಾರು 300 ಟನ್ ಎಲ್ಪಿಜಿ ಅವಶ್ಯಕವಿದ್ದು, ಈ ಸಮಸ್ಯೆ ತಕ್ಷಣ ಪರಿಹಾರವಾಗಬೇಕೆಂದು ಒತ್ತಾಯಿಸಲಾಗಿದೆ. ಜೊತೆಗೆ, ಸಿಎನ್ಜಿ ಪರಿವರ್ತನೆಗೆ ಸರ್ಕಾರ ನೆರವು ನೀಡಬೇಕೆಂದು ಸಂಘಟನೆಗಳು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಲು ತೀರ್ಮಾನಿಸಿವೆ.
ಬೆಂಗಳೂರು, ಏ. 6: ಸಿಲಿಕಾನ್ ಸಿಟಿಯ ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತ್ಯಂತ ಭೀಕರ ಘಟನೆಯೊಂದು ನಡೆದಿದೆ. ಮನೆಯಲ್ಲಿ ಯುವಕನ ಜೊತೆಗಿದ್ದಾಳೆ ಎಂಬ ಕಾರಣಕ್ಕೆ ಪಶ್ಚಿಮ ಬಂಗಾಳ ಮೂಲದ ಮಹಿಳೆಯೊಬ್ಬರನ್ನು ಮನೆಯಿಂದ ಹೊರಗೆ ಎಳೆದು ತಂದು ಅಮಾನವೀಯವಾಗಿ ಹಲ್ಲೆ ನಡೆಸಲಾಗಿದೆ. ಏಪ್ರಿಲ್ 4ರಂದು ಶನಿವಾರ ರಾತ್ರಿ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಪಶ್ಚಿಮ ಬಂಗಾಳ ಮೂಲದ ಮಹಿಳೆಯು ವರ್ತೂರು ವ್ಯಾಪ್ತಿಯಲ್ಲಿ ವಾಸವಿದ್ದರು. ಏಪ್ರಿಲ್ 4ರಂದು ಆಕೆ ತನ್ನ ಮನೆಯಲ್ಲಿ ಯುವಕನೋರ್ವನ ಜೊತೆ ಇದ್ದಾಗ, ಕೆಲವು ವ್ಯಕ್ತಿಗಳು “ನಮ್ಮ ಊರಿಗೆ ಬಂದು ವೇಶ್ಯಾವಾಟಿಕೆ ನಡೆಸುತ್ತೀರಾ?” ಎಂದು ಕಿರುಚುತ್ತಾ ದಾಳಿ ಮಾಡಿದ್ದಾರೆ. ಯುವತಿಯನ್ನು ಮನೆಯಿಂದ ಹೊರಕ್ಕೆ ಎಳೆದು ತಂದು ಮನಬಂದಂತೆ ಥಳಿಸಿದ್ದಾರೆ. ಗಲಾಟೆ ಆರಂಭವಾಗುತ್ತಿದ್ದಂತೆಯೇ ಆಕೆಯ ಜೊತೆಗಿದ್ದ ಯುವಕ ಸ್ಥಳದಿಂದ ಓಡಿ ಹೋಗಿದ್ದಾನೆ.
ಹಲ್ಲೆಗೊಳಗಾದ ಮಹಿಳೆ ತೀವ್ರವಾಗಿ ಗಾಯಗೊಂಡಿದ್ದು, ಘಟನೆಗೆ ಸಂಬಂಧಿಸಿದಂತೆ ವರ್ತೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಈಗಾಗಲೇ ಓರ್ವ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಹಿಳೆಯ ಖಾಸಗಿತನಕ್ಕೆ ಧಕ್ಕೆ ತಂದಿರುವ ಮತ್ತು ಹಲ್ಲೆ ನಡೆಸಿರುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.
ಬೆಣಗಳೂರು (ಏ. 06): ನಿಮಗೆ ತಿಳಿದಿರುವ ಯಾರಾದರೂ ನಿಮ್ಮನ್ನು ವಾಟ್ಸ್ಆ್ಯಪ್ನಲ್ಲಿ (WhatsApp) ಬ್ಲಾಕ್ ಮಾಡಿದ್ದಾರಾ ಮತ್ತು ನಿಮಗೆ ಅದನ್ನು ಕಂಡುಹಿಡಿಯಲು ಸಾಧ್ಯವಾಗುತ್ತಿಲ್ಲವೇ?. ವಾಟ್ಸ್ಆ್ಯಪ್ನಲ್ಲಿ ನಿರ್ಬಂಧಿಸಿದ ನಂತರ, ಅವರು ತಮ್ಮ ಮೆಸೇಜ್ ಪಕ್ಕದಲ್ಲಿ ಒಂದೇ ಒಂದು ಟಿಕ್ ಅನ್ನು ಮಾತ್ರ ನೋಡುತ್ತಾರೆ. ನೀವು ಸಂದೇಶವನ್ನು ಕಳುಹಿಸಿದ ವ್ಯಕ್ತಿಗೆ ಇಂಟರ್ನೆಟ್ ಸಂಪರ್ಕವಿಲ್ಲದಿದ್ದಾಗ ಅಥವಾ ಡೌನ್ ಆಗಿರುವಾಗಲೂ ಇದೇ ರೀತಿ ಸಂಭವಿಸುತ್ತದೆ. ನೀವು ಸಂದೇಶವನ್ನು ಕಳುಹಿಸಿದಾಗ ಒಂದೇ ಒಂದು ಟಿಕ್ ಅನ್ನು ನೋಡಿದರೆ, ಸ್ವೀಕರಿಸುವವರು ನಿಮ್ಮನ್ನು ಬ್ಲಾಕ್ ಮಾಡಿದ್ದಾರಾ ಅಥವಾ ಅವರ ಇಂಟರ್ನೆಟ್ ಸಂಪರ್ಕ ಕಡಿತಗೊಂಡಿದೆಯೇ ಎಂಬ ಬಗ್ಗೆ ಗೊಂದಲಕ್ಕೊಳಗಾಗಬಹುದು. ಆದ್ದರಿಂದ, ಆ ವ್ಯಕ್ತಿಯು ನಿಮ್ಮನ್ನು ಬ್ಲಾಕ್ ಮಾಡಿದ್ದಾರೆಯೇ ಅಥವಾ ಇಲ್ಲವೇ ಎಂಬುದನ್ನು ಕಂಡುಹಿಡಿಯಲು ಹೊಸದಾದ ಸುಲಭ ವಿಧಾನ ನಾವು ಹೇಳುತ್ತೇವೆ.
ಯಾರಾದರೂ ನಿಮ್ಮನ್ನು ವಾಟ್ಸ್ಆ್ಯಪ್ನಲ್ಲಿ ನಿರ್ಬಂಧಿಸಿದ್ದರೆ, ನೀವು ಮಾಡಬೇಕಾಗಿರುವುದು ಅವರ ಚಾಟ್ ಬಾಕ್ಸ್ಗೆ ಹೋಗಿ, Meta AI ಅನ್ನು ಟ್ಯಾಗ್ ಮಾಡಿ ಮತ್ತು “Hi” ಸಂದೇಶವನ್ನು ಕಳುಹಿಸಿ. ಇದನ್ನು ಮಾಡಲು, ಸ್ವೀಕರಿಸುವವರ ಚಾಟ್ ಬಾಕ್ಸ್ ಅನ್ನು ತೆರೆಯಿರಿ, @Meta AI ಎಂದು ಟೈಪ್ ಮಾಡಿ ಮತ್ತು Meta ಅನ್ನು ಟ್ಯಾಗ್ ಮಾಡಿ, ನಂತರ “Hi” ಎಂಬ ಸಂದೇಶವನ್ನು ಕಳುಹಿಸಿ.
ಆ ವ್ಯಕ್ತಿಯು ನಿಮ್ಮನ್ನು ಬ್ಲಾಕ್ ಮಾಡಿದ್ದರೆ, ಸಂದೇಶದಲ್ಲಿ ಟ್ಯಾಗ್ ಮಾಡಲಾದ ಯಾವುದೇ ಪ್ರತ್ಯುತ್ತರ ಸಂದೇಶಗಳನ್ನು ನಿಮ್ಮ ಮೆಟಾ AI ಸ್ವೀಕರಿಸುವುದಿಲ್ಲ. ಈ ಸಂದರ್ಭದಲ್ಲಿ, ಸ್ವೀಕರಿಸುವವರು ನಿಮ್ಮನ್ನು ಬ್ಲಾಕ್ ಮಾಡಿದ್ದಾರೆ ಎಂದು ನೀವು ಅರ್ಥಮಾಡಿಕೊಳ್ಳಬೇಕು.
ನಿಮ್ಮನ್ನು ಬ್ಲಾಕ್ ಮಾಡಿಲ್ಲದಿದ್ದರೆ ಏನು?
ಸಂದೇಶ ಸ್ವೀಕರಿಸುವವರು ನಿಮ್ಮನ್ನು ನಿರ್ಬಂಧಿಸದಿದ್ದರೆ, ನಿಮ್ಮ ಸಂದೇಶಕ್ಕೆ ಮೆಟಾ AI ನಿಂದ ನೀವು ಪ್ರತ್ಯುತ್ತರವನ್ನು ಸ್ವೀಕರಿಸುತ್ತೀರಿ. ಮತ್ತೊಂದು ವಿಚಾರ ಎಂದರೆ, ಆ ವ್ಯಕ್ತಿಯು ಇಂಟರ್ನೆಟ್ ಅನ್ನು ಆಫ್ ಮಾಡಿದ್ದರೂ ಸಹ ಈ ಸಂದೇಶ ಅಥವಾ ಪ್ರತ್ಯುತ್ತರವು ಬರುತ್ತದೆ. ಮೆಟಾ AI ಗೆ ನಿಮ್ಮ ಸಂದೇಶಕ್ಕೆ ಪ್ರತಿಕ್ರಿಯೆಯಾಗಿ ನೀವು ಸಂದೇಶವನ್ನು ಸ್ವೀಕರಿಸಿದರೆ, ನಿಮ್ಮನ್ನು ನಿರ್ಬಂಧಿಸಲಾಗಿಲ್ಲ ಎಂದರ್ಥ.
ಕೆಲವೊಮ್ಮೆ, ಆ ವ್ಯಕ್ತಿಯ ವಾಟ್ಸ್ಆ್ಯಪ್ DP ಸಹ ಹೊಂದಿರುವುದಿಲ್ಲ, ಆದ್ದರಿಂದ ಕಳುಹಿಸುವವರಿಗೆ ಅವರನ್ನು ನಿರ್ಬಂಧಿಸಲಾಗಿದೆ ಅಥವಾ ಅವರ ಇಂಟರ್ನೆಟ್ ಸಂಪರ್ಕವು ಕಡಿತಗೊಂಡಿದೆ ಎಂದು ತಿಳಿದಿರುವುದಿಲ್ಲ. ಅಂತಹ ಸಂದರ್ಭಗಳಲ್ಲಿಯೂ ಸಹ, ಈ ಮೆಟಾ AI ವೈಶಿಷ್ಟ್ಯವು ಅತ್ಯಂತ ಉಪಯುಕ್ತವಾಗಿದೆ, ಕಳುಹಿಸುವವರಿಗೆ ಅವರನ್ನು ನಿರ್ಬಂಧಿಸಲಾಗಿದೆಯೇ ಎಂದು ನಿರ್ಧರಿಸಲು ಸಹಾಯ ಮಾಡಿಕೊಡುತ್ತದೆ.