ಉಳ್ಳಾಲ ಕಡಲತೀರಕ್ಕೆ ಅಪ್ಪಳಿಸಿದ ಲಕ್ಷಾಂತರ ಬೂತಾಯಿ ಮೀನಿನ ರಾಶಿ: ಬಕೆಟ್, ಚೀಲ ಹಿಡಿದು ಓಡಿಬಂದ ಸ್ಥಳೀಯರು – Kannada News | Unprecedented: Boothai Fish Swarm Ullal Shore After Fright, Locals Gather Bounty
ಮಂಗಳೂರು, ಜು.17: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಸಮುದ್ರ ತೀರದಲ್ಲಿ ಇಂದು ನಂಬಲಸಾಧ್ಯವಾದ ಘಟನೆಯೊಂದು ನಡೆದಿದೆ. ಸಾಮಾನ್ಯವಾಗಿ ಆಳ ಸಮುದ್ರದಲ್ಲಿ ದಂಡು ದಂಡಾಗಿ ಸಂಚರಿಸುವ ಬೂತಾಯಿ ಮೀನುಗಳು ಒಮ್ಮಿಂದೊಮ್ಮೆಗೆ ಕಡಲತೀರದ ಮರಳು ದಡಕ್ಕೆ ಬಂದು ಬಿದ್ದಿವೆ. ಕಣ್ಣು ಹಾಯಿಸಿದ ಕಡೆಯಲ್ಲೆಲ್ಲಾ ಬೆಳ್ಳಿ ಹೊಳೆಯುವಂತೆ ಬಿದ್ದಿದ್ದ ಮೀನುಗಳ ರಾಶಿಯನ್ನು ಕಂಡು ಸ್ಥಳೀಯರು ಹಾಗೂ ಪ್ರವಾಸಿಗರು ಆಶ್ಚರ್ಯಚಕಿತರಾಗಿದ್ದಾರೆ. ಬೂತಾಯಿ ಮೀನುಗಳು ಯಾವಾಗಲೂ ಸಮುದ್ರದಲ್ಲಿ ಲಕ್ಷಾಂತರ ಸಂಖ್ಯೆಯ ದೊಡ್ಡ ಗುಂಪುಗಳಲ್ಲಿ ಒಟ್ಟಾಗಿ ಸಂಚರಿಸುತ್ತವೆ. ಇಂದು ಕೂಡ ಇಂತಹದ್ದೇ ಒಂದು ಬೃಹತ್…