ನಿವೃತ್ತ ವಾಯುಪಡೆ ಅಧಿಕಾರಿ ಮೇಲೆ ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳು – Kannada News | Sushant Golf City Shaken: Ex Air Force Officer Shot; Business Rivalry Suspected

ಉತ್ತರ ಪ್ರದೇಶ, ಜ.31: ಲಕ್ನೋದ ಸುಶಾಂತ್ ಗಾಲ್ಫ್ ಸಿಟಿ (Sushant Golf City) ಪ್ರದೇಶದಲ್ಲಿ ನಿನ್ನೆ ರಾತ್ರಿ (ಜನವರಿ 30, 2026) ನಡೆದ ಘಟನೆಯು ಉತ್ತರ ಪ್ರದೇಶದಾದ್ಯಂತ ಆತಂಕ ಮೂಡಿಸಿದೆ. ನಿವೃತ್ತ ವಾಯುಪಡೆ ಅಧಿಕಾರಿಯೊಬ್ಬರ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಅವಧೇಶ್ ಕುಮಾರ್ ಪಾಠಕ್ (60) ಎಂಬುವವರ ಮೇಲೆ ದಾಳಿಯನ್ನು ನಡೆಸಿದ್ದಾರೆ. ಇವರು ಭಾರತೀಯ ವಾಯುಪಡೆಯ ನಿವೃತ್ತ ಅಧಿಕಾರಿಯಾಗಿದ್ದು, ಪ್ರಸ್ತುತ ಲಕ್ನೋದ ಸೆಕ್ಟರ್-D ಶಾಪಿಂಗ್ ಸ್ಕ್ವೇರ್ ಬಳಿ ‘ಕ್ಲೌಡ್ ಕಿಚನ್’ ಮತ್ತು ರೆಸ್ಟೋರೆಂಟ್ ನಡೆಸುತ್ತಿದ್ದಾರೆ. ತಮ್ಮ ರೆಸ್ಟೋರೆಂಟ್ ಕೆಲಸ ಮುಗಿಸಿ ಪತ್ನಿಯೊಂದಿಗೆ ಕಾರಿನ ಕಡೆಗೆ ನಡೆಯುತ್ತಿದ್ದಾಗ, ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಏಕಾಏಕಿ ಗುಂಡು ಹಾರಿಸಿದ್ದಾರೆ. ಒಂದು ಗುಂಡು ಪಾಠಕ್ ಅವರ ಭುಜಕ್ಕೆ ಮತ್ತು ಇನ್ನೊಂದು ಬಲಗೈ ಮೇಲ್ಭಾಗಕ್ಕೆ ತಗುಲಿದೆ ಎನ್ನಲಾಗಿದೆ. ಘಟನೆಯ ನಂತರ ದಾಳಿಕೋರರು ಸ್ಥಳದಿಂದ ಪರಾರಿಯಾಗಿದ್ದಾರೆ.

ತಕ್ಷಣವೇ ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯರ ಪ್ರಕಾರ, ಅವರ ಸ್ಥಿತಿ ಪ್ರಸ್ತುತ ಸ್ಥಿರವಾಗಿದೆ ಮತ್ತು ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಪಾಠಕ್ ಅವರ ಪತ್ನಿ ಮಿಥ್ಲೇಶ್ ನೀಡಿದ ದೂರಿನ ಮೇರೆಗೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಡಿಸಿಪಿ ದಕ್ಷಿಣ ನಿಪುಣ್ ಅಗರ್ವಾಲ್ ನೇತೃತ್ವದಲ್ಲಿ ಒಂದು ತಂಡವನ್ನು ರಚನೆ ಮಾಡಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ವೈಯಕ್ತಿಕ ದ್ವೇಷ ಅಥವಾ ವ್ಯವಹಾರದ ಪೈಪೋಟಿಯ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆಯೇ ಎಂಬ ಆಯಾಮದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಲಕ್ನೋದ ಅತಿ ಶ್ರೀಮಂತ ಮತ್ತು ಸುರಕ್ಷಿತ ಎನ್ನಲಾಗುವ ಸುಶಾಂತ್ ಗಾಲ್ಫ್ ಸಿಟಿ ಏರಿಯಾದಲ್ಲೇ ಈ ಹತ್ಯೆಯತ್ನ ನಡೆದಿರುವುದು ಸ್ಥಳೀಯ ನಿವಾಸಿಗಳಲ್ಲಿ ಭೀತಿ ಉಂಟುಮಾಡಿದೆ.

ಪಾಠಕ್ ಅವರು ಸುಶಾಂತ್ ಗಾಲ್ಫ್ ಸಿಟಿಯ ಪ್ರಮುಖ ಸ್ಥಳದಲ್ಲಿ ‘ಕ್ಲೌಡ್ ಕಿಚನ್’ ಮತ್ತು ರೆಸ್ಟೋರೆಂಟ್ ನಡೆಸುತ್ತಿದ್ದರು. ಈ ಭಾಗದಲ್ಲಿ ರೆಸ್ಟೋರೆಂಟ್ ವ್ಯವಹಾರಕ್ಕೆ ಭಾರೀ ಬೇಡಿಕೆ ಇದೆ. ಈ ಕಾರಣಕ್ಕಾಗಿ ಕಿರಿಕ್​​​​​​​ ನಡೆದಿರಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ. ಇದರ ಜತೆಗೆ ಅಧಿಕಾರಿಗಳು ಕುಟುಂಬಕ್ಕೆ ಸಂಬಂಧಿಸಿದ ದ್ವೇಷದ ಬಗ್ಗೆಯೂ ಮಾಹಿತಿ ಕಲೆಹಾಕುತ್ತಿದ್ದಾರೆ. ದಾಳಿಕೋರರು ನೇರವಾಗಿ ಅವರನ್ನು ಗುರಿಯಾಗಿಸಿಕೊಂಡು ಬಂದಿರುವುದರಿಂದ, ಇದು ಪೂರ್ವನಿಯೋಜಿತ ಕೃತ್ಯ ಎಂಬುದು ಸ್ಪಷ್ಟವಾಗಿದೆ. ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ನಡೆದ ಇಂತಹ ಕೆಲವು ಪ್ರಕರಣಗಳಲ್ಲಿ ಆಸ್ತಿ ವಿವಾದವು ಪ್ರಮುಖ ಕಾರಣವಾಗಿರುವುದು ಕಂಡುಬಂದಿದೆ. ಆದ್ದರಿಂದ, ಪಾಠಕ್ ಅವರ ಮೂಲ ಊರು (ಸಂತ ಕಬೀರ್ ನಗರ) ಲಕ್ನೋದಲ್ಲಿನ ಆಸ್ತಿಗಳ ಬಗ್ಗೆ ಯಾವುದೇ ವಿವಾದಗಳಿವೆಯೇ ಎಂದು ತನಿಖೆ ನಡೆಸಲಾಗುತ್ತಿದೆ. ಆರಂಭದಲ್ಲಿ ಇದೊಂದು ಸುಲಿಗೆ ಪ್ರಯತ್ನವಿರಬಹುದು ಎಂದು ಭಾವಿಸಲಾಗಿತ್ತು. ಆದರೆ, ದಾಳಿಕೋರರು ಯಾವುದೇ ಹಣ ಅಥವಾ ವಸ್ತುಗಳನ್ನು ದೋಚದೆ ಕೇವಲ ಗುಂಡು ಹಾರಿಸಿ ಪರಾರಿಯಾಗಿರುವುದು ಇದು ಕೇವಲ ಹತ್ಯೆ ಯತ್ನ ಎಂದು ಹೇಳಲಾಗಿದೆ.

ಇದನ್ನೂ ಓದಿ: ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ, ನಡು ರಸ್ತೆಯಲ್ಲಿ ಹಿಗ್ಗಾಮುಗ್ಗಾ ಥಳಿಸಿದ ಪತಿ

ರೆಸ್ಟೋರೆಂಟ್‌ನ ಒಳಗೆ ಮತ್ತು ಹೊರಗೆ ಇರುವ ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಳಿಕೋರರ ಚಲನವಲನಗಳು ಸೆರೆಯಾಗಿವೆ. ಲಕ್ನೋ ಪೊಲೀಸರ ಐದು ವಿಶೇಷ ತಂಡಗಳು (SIT) ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲಸ ಮಾಡುತ್ತಿದೆ. ಸ್ಥಳದಲ್ಲಿ ಸಿಕ್ಕಿರುವ ಗುಂಡಿನ ಶೆಲ್‌ಗಳು ಮತ್ತು ಇತರ ಪುರಾವೆಗಳನ್ನು ಫೋರೆನ್ಸಿಕ್ ತಂಡವು ಪರಿಶೀಲಿಸುತ್ತಿದೆ.ಪೊಲೀಸ್ ಕಮಿಷನರ್ ಅವರ ಪ್ರಕಾರ, ಶೀಘ್ರದಲ್ಲೇ ಆರೋಪಿಗಳನ್ನು ಪತ್ತೆಹಚ್ಚಲಾಗುವುದು ಮತ್ತು ದಾಳಿಯ ಹಿಂದಿನ ನಿಖರವಾದ ಕಾರಣಗಳನ್ನು ಬಹಿರಂಗಪಡಿಸಲಾಗುವುದು ಎಂದು ಹೇಳಲಾಗಿದೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮೂವರ ಕೊಂದು ಬೆಂಗಳೂರಿಗೆ ಬಂದು ಫುಲ್​​ ಡ್ರಾಮಾ: ತನಿಖೆ ವೇಳೆ ಬಯಲಾಗಿದ್ದೇಗೆ ಕೊಲೆ ಸತ್ಯ? – Kannada News | Vijayanagara Murder Case: Chilling Mystery Behind the Killing of Three

ಬೆಂಗಳೂರು, ಜನವರಿ 31: ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದಲ್ಲಿ ತ್ರಿವಳಿ ಕೊಲೆ ಪ್ರಕರಣ ಸಂಬಂಧ ಒಂದೊಂದೇ ಶಾಕಿಂಗ್​​ ಮಾಹಿತಿಗಳು ಹೊರಬರುತ್ತಿವೆ. ತಂದೆ-ತಾಯಿ ಮತ್ತು ಸಹೋದರಿಯನ್ನ ತಾನೇ ಕೊಂದು ಬೆಂಗಳೂರಿಗೆ ಬಂದಿದ್ದ ಆರೋಪಿ ಅಕ್ಷಯ್​​ ಪೊಲೀಸರೇ ನಂಬುವ ರೀತಿ ಕತೆ ಕಟ್ಟಿದ್ದ. ಜ. 29ರ ರಾತ್ರಿ 11 ಗಂಟೆಗೆ ತಿಲಕನಗರ ಠಾಣೆಗೆ ಬಂದಿದ್ದ ಅಕ್ಷಯ್, ಬೆಂಗಳೂರಿಗೆ ಆಸ್ಪತ್ರೆಗೆಂದು ಬಂದಿದ್ದ ಕುಟುಂಬಸ್ಥರು ನಾಪತ್ತೆಯಾಗಿದ್ದಾರೆ ಎಂದು ಅಲವತ್ತುಕೊಂಡಿದ್ದ ಎಂಬುದು ಗೊತ್ತಾಗಿದೆ.

ತನ್ನ ತಂದೆ ಭೀಮರಾಜ್​​ ಗೆ ಆರೋಗ್ಯ ಸಮಸ್ಯೆ ಇದ್ದು, ಹೀಗಾಗಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಬರಬೇಕಿತ್ತು. ಜ.27ರ ಬೆಳಗ್ಗೆ 5 ಗಂಟೆಗೆ ಕೊಟ್ಟೂರಿನಿಂದ ಬೆಂಗಳೂರಿಗೆ ಮನೆಯವರೆಲ್ಲ ಹೊರಟಿದ್ದರು. ತಾಯಿ ಜಯಲಕ್ಷ್ಮೀ, ತಂಗಿ ಅಮೃತಾ ತಂದೆ ಜತೆ ಬೆಂಗಳೂರಿಗೆ ಬಂದಿದ್ದರು. ಸಂಬಂಧಿಗೆ ಕೊಡಲು 4 ಲಕ್ಷ ರೂ. ನಗದು ಕೂಡ ಜೊತೆಯಲ್ಲಿ ತಂದಿದ್ದರು. ಮಧ್ಯಾಹ್ನ ಸುಮಾರು 12:41ಕ್ಕೆ ನನಗೆ ವಾಟ್ಸ್ಯಾಪ್​​ ಮಾಡಿದ್ದು, ಜಯದೇವ ಆಸ್ಪತ್ರೆಗೆ ಬಂದಿದ್ದೀವಿ ಎಂದು ತಿಳಿಸಿದ್ದರು. ಜಯದೇವ ಆಸ್ಪತ್ರೆಯ ಹಾಗೂ ಮೇಟ್ರೋ ಪಿಲ್ಲರ್ ಫೋಟೋ ಕೂಡ ಕಳುಹಿಸಿದ್ದರು. ಆದರೆ ಸಂಜೆ 6 ಗಂಟೆಗೆ ಫೋನ್ ಮಾಡಿದಾಗ ತಂದೆ ಮತ್ತು ತಾಯಿ ಇಬ್ಬರ ಪೋನ್ ಕೂಡ ಸ್ವಿಚ್ ಆಫ್ ಆಗಿತ್ತು. ತಂಗಿಯ ಪೋನ್ ರಿಂಗ್ ಆದರೂ ರೀಸಿವ್ ಮಾಡಿಲ್ಲ ಎಂದು ಆರೋಪಿ ತಿಳಿಸಿದ್ದ.

ಇದನ್ನೂ ಓದಿ: ವಿಜಯನಗರ ತ್ರಿವಳಿ ಕೊಲೆಗೆ ಟ್ವಿಸ್ಟ್​​; ಮೂವರನ್ನ ಮನೆಯಲ್ಲೇ ಹೂತುಹಾಕಿದ್ದ, ಲವ್​​ ಮ್ಯಾಟರ್​ ಹತ್ಯೆಗೆ ಕಾರಣವಾಯ್ತಾ?

ಬಳಿಕ ಜ.28ರ ಮಧ್ಯಾಹ್ನ ಅಪರಿಚಿತ ನಂಬರ್​​ನಿಂದ ತನ್ನ ತಂಗಿ ಕರೆ ಮಾಡಿದ್ದು, ತನ್ನ ಫೋನನ್ನು ಜಯದೇವ ಆಸ್ಪತ್ರೆಯ ವಾರ್ಡನಲ್ಲಿ ಸಿಬ್ಬಂದಿ ತೆಗೆದುಕೊಂಡಿದ್ದಾರೆ. ನೀನು ಬೇಗ ಬಾ ಎಂದು ಹೇಳಿದ್ದಳು. ಆದರೆ ಮತ್ತೆ ಕಾಲ್ ಮಾಡಿದಾಗ ರೆಸ್ಪಾನ್ಸ್ ಇರಲಿಲ್ಲ ಎಂದಿದ್ದ. ಅಲ್ಲದೆ ಜ. 29ರ ಮಧ್ಯಾಹ್ನ 1:30ಕ್ಕೆ ತಾನು ಹಾಗೂ ಮಾವ ಜಯದೇವ ಆಸ್ಪತ್ರೆಗೆ ಬಂದು ಹುಡುಕಾಡಿದ್ದೇವೆ. ಆದರೆ ಆಸ್ಪತ್ರೆಯ ಯಾವ ವಿಭಾಗದಲ್ಲೂ ತಂದೆ ಇರಲಿಲ್ಲ. ಸಿಸಿಟಿವಿ ಕ್ಯಾಮರಾಗಳನ್ನು ಪರೀಶಿಲಿಸಿದರೂ ಯಾರೂ ಕಾಣಲಿಲ್ಲ. ಹೀಗಾಗಿ ಕಾಣೆಯಾದ ತನ್ನ ತಂದೆ, ತಾಯಿ ಮತ್ತು ತಂಗಿಯನ್ನು ಪತ್ತೆ ಮಾಡಿಕೊಡಿ ಎಂದು ಪೊಲೀಸರ ಬಳಿ ಮನವಿ ಮಾಡಿದ್ದ.

ಅಕ್ಷಯ್ ಮಾತು ನಂಬಿದ ತಿಲಕನಗರ ಪೊಲೀಸರು ಈ ಬಗ್ಗೆ ಕೇಸ್​​ ದಾಖಲಿಸಿಕೊಂಡು, ಜ.29ರ ರಾತ್ರಿ ಅನೇಕ ಆಸ್ಪತ್ರೆಗಳನ್ನ ಹುಡುಕಾಡಿದ್ದಾರೆ. ಆದರೆ ಯಾವ ಆಸ್ಪತ್ರೆಯಲ್ಲೂ ಅಕ್ಷಯ್ ಕುಟುಂಬಸ್ಥರು ಕಂಡಿಲ್ಲ. ಹೀಗಾಗಿ ಪೊಲೀಸರು ಅಕ್ಷಯ್​​ನ ಠಾಣೆಯಲ್ಲೇ ಕೂರಿಸಿಕೊಂಡಿದ್ದು, ಜ.30ರ ಬೆಳಗ್ಗೆ ಎಸಿಪಿ ವಾಸುದೇವ್ ನೇತೃತ್ವದಲ್ಲಿ ಆತನ ವಿಚಾರಣೆ ನಡೆಸಿದಾಗ ಮೂವರ ಕೊಲೆ ಸತ್ಯ ಬಯಲಾಗಿದೆ. ಅಕ್ಷಯ್ ಮಾತು ಕೇಳಿ ಅಕ್ಷರಶಃ ಪೊಲೀಸರೇ ಒಂದು ಕ್ಷಣ ಶಾಕ್​​ ಆಗಿದ್ದಾರೆ.

ಆರೋಪಿ ಅಕ್ಷಯ್​​, ಮೂವರನ್ನು ಮನೆಯಲ್ಲಿಯೇ ಪ್ರತ್ಯೇಕವಾಗಿ ಕೊಲೆಗೈದಿದ್ದ. ಮೊದಲು ಚಾಕುವಿನಿಂದ ಇರಿದು ತಾಯಿಯನ್ನು ಕೊಲೆ ಮಾಡಿರುವ ಪಾಪಿ ಪುತ್ರ, ಬಳಿಕ ತಂಗಿಗೆ ಕರೆ ಮಾಡಿ ನಿನಗೆ ಗಿಫ್ಟ್ ತಂದಿರುವೆ ಅಂತಾ ಮನೆಗೆ ಕರೆದು ಆಕೆಯನ್ನೂ ಸಾಯಿಸಿದ್ದ. ಇಬ್ಬರ ಮೃತದೇಹಗಳನ್ನು ಕೊಠಡಿಯಲ್ಲಿ ಇಟ್ಟಿದ್ದ. ಮನೆಗೆ ಬಂದ ತಂದೆ ಟಿವಿ ನೋಡುತ್ತಾ ಕುಳಿತಿದ್ದಾಗ ಅವರ ಕತೆಯನ್ನೂ ಮುಗಿಸಿ, ಮನೆಯ ಹಾಲ್​ನಲ್ಲೇ ಮೂರು ಮೃತದೇಹಗಳನ್ನು ಹೂತಿದ್ದ ಎಂಬ ವಿಷಯ ತನಿಖೆ ವೇಳೆ ಬಯಲಾಗಿದೆ.

ವರದಿ- ಪ್ರದೀಪ್​​ ಚಿಕ್ಕಾಟೆ, ಟಿವಿ9 ಕನ್ನಡ

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 4:30 pm, Sat, 31 January 26

Source link

ಕನ್ನಡದ ನಿರ್ಮಾಪಕನ ಬಗ್ಗೆ ಮರುಕ ವ್ಯಕ್ತಪಡಿಸಿದ ದಳಪತಿ ವಿಜಯ್ – Kannada News | Thalapathy Vijay Express Sadness over Jana Nayagan Producer

ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾ (Jana Nayagan Movie) ರಿಲೀಸ್ ವಿಳಂಬ ಆಗುತ್ತಲೇ ಇದೆ. ಸೆನ್ಸಾರ್ ಮಂಡಳಿಯವರು ಸಿನಿಮಾಗೆ ಪ್ರಮಾಣಪತ್ರ ನೀಡದೇ ಇರುವ ವಿಷಯಕ್ಕೆ ಸಂಬಂಧಿಸಿದ ಪ್ರಕರಣ ಕೆಳ ಹಂತದ ನ್ಯಾಯಾಯಲಯ, ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್​​ನಲ್ಲಿ ವಿಚಾರಣೆ ಆಗಿದೆ. ಆದರೆ, ಎಲ್ಲಿಯೂ ಸಿನಿಮಾ ತಂಡಕ್ಕೆ ಲಾಭ ಆಗುವ ಬೆಳವಣಿಗೆ ನಡೆದಿಲ್ಲ. ಈ ಚಿತ್ರವ್ನು ಕನ್ನಡದ ‘ಕೆವಿಎನ್ ಪ್ರೊಡಕ್ಷನ್ಸ್’ ನಿರ್ಮಾಣ ಮಾಡಿದೆ. ನಿರ್ಮಾಪಕರ ಸ್ಥಿತಿ ಕಂಡು ವಿಜಯ್ ಮರುಗಿದ್ದಾರೆ.

ಜನವರಿ 9ರಂದು ‘ಜನ ನಾಯಗನ್’ ಸಿನಿಮಾ ರಿಲೀಸ್ ಆಗಬೇಕಿತ್ತು. ತಿಂಗಳು ಕಳೆಯುತ್ತಾ ಬಂದರೂ ಸಿನಿಮಾ ರಿಲೀಸ್ ಮಾಡಲು ಸಾಧ್ಯವಾಗುತ್ತಿಲ್ಲ. ಇದರಿಂದ ನಿರ್ಮಾಪಕರು ದೊಡ್ಡ ನಷ್ಟ ಅನುಭವಿಸುತ್ತಿದ್ದಾರೆ. ಥಿಯೇಟರ್ ಸೆಟಪ್​​ ಮಾಡಿಕೊಳ್ಳಲು ಹಾಕಿದ ಶ್ರಮ ವ್ಯರ್ಥವಾಗಿದೆ. ಈ ಎಲ್ಲ ವಿಷಯದಲ್ಲಿ ವಿಜಯ್ ಮೌನ ಕಾಯ್ದುಕೊಂಡಿದ್ದರು. ಈಗ ಆ ಬಗ್ಗೆ ಮಾತನಾಡಿದ್ದಾರೆ.

‘ನನ್ನ ರಾಜಕೀಯ ಪ್ರವೇಶದ ಕಾರಣದಿಂದ ಜನ ನಾಯಗನ್ ಚಿತ್ರಕ್ಕೆ ತೊಂದರೆ ಆಗುತ್ತಿದೆ. ನನ್ನ ನಿರ್ಮಾಪಕರ ಬಗ್ಗೆ ನನಗೆ ಬೇಸರವಾಗುತ್ತಿದೆ. ನನ್ನ ರಾಜಕೀಯ ಪ್ರವೇಶದಿಂದಾಗಿ ನನ್ನ ಚಿತ್ರಕ್ಕೆ ತೊಂದರೆಯಾಗುತ್ತದೆ ಎಂದು ನನಗೆ ತಿಳಿದಿತ್ತು. ನಾನು ಇದಕ್ಕೆ ಮಾನಸಿಕವಾಗಿ ಸಿದ್ಧನಾಗಿದ್ದೆ’ ಎಂದು ಅವರು ಹೇಳಿದ್ದಾರೆ.

‘ಜನ ನಾಯಗನ್’ ಚಿತ್ರದ ಬಜೆಟ್ 500 ಕೋಟಿ ರೂಪಾಯಿಗೂ ಅಧಿಕವಾಗಿದೆ. ಈ ಸಿನಿಮಾದಲ್ಲಿ ಮಮಿತಾ ಬೈಜು, ಪೂಜಾ ಹೆಗ್ಡೆ ಮೊದಲಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ಬಾಲಿವುಡ್​​ನ ಬಾಬಿ ಡಿಯೋಲ್ ವಿಲನ್. ಈ ಸಿನಿಮಾಗೆ ವಿನೋದ್ ನಿರ್ದೇಶನ ಇದೆ.

ಇದನ್ನೂ ಓದಿ: ಸಿಬಿಎಫ್​​ಸಿ ಸಮಸ್ಯೆ, ಸಿಬಿಐ ವಿಚಾರಣೆ: ಅಭಿಮಾನಿಗಳಿಗೆ ವಿಜಯ್ ಹೇಳಿದ್ದೇನು?

ದಳಪತಿ ವಿಜಯ್ ಅವರು ರಾಜಕೀಯ ಪಕ್ಷ ಆರಂಭಿಸಿದ್ದಾರೆ. ಈ ವರ್ಷ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ಎಲ್ಲಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಹೀಗಾಗಿ, ಅವರ ಸಿನಿಮಾಗೆ ರಾಜಕೀಯ ಶಕ್ತಿಯಿಂದ ಅಡಚಣೆ ಉಂಟಾಗಿದೆಯೇ ಎನ್ನುವ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ರಾಯ್ ಮಾಡಿದ್ದ ಸಹಾಯ ನೆನೆದ ಹನುಮಂತ: ವ್ಯಕ್ತಿತ್ವದ ಬಗ್ಗೆ ಹೇಳಿದ್ದೇನು? – Kannada News | Bigg Boss Kannada 11 winner Hanumanthu talks about CJ Roy

ಖ್ಯಾತ ಉದ್ಯಮಿ ಸಿಜೆ ರಾಯ್ (CJ Roy) ನಿನ್ನೆ (ಜನವರಿ 30) ನಿಧನ ಹೊಂದಿದ್ದಾರೆ. ಟಿವಿ ಲೋಕದೊಂದಿಗೆ ನಿಕಟ ಸಂಪರ್ಕವನ್ನು ಜೆಸಿ ರಾಯ್ ಹೊಂದಿದ್ದರು. ಹಲವು ರಿಯಾಲಿಟಿ ಶೋಗಳಿಗೆ ಪ್ರಯೋಜಕತ್ವ ನೀಡುತ್ತಿದ್ದ ಜೆಸಿ ರಾಯ್ ಅವರು, ನಿಜವಾಗಿಯೂ ಪ್ರತಿಭೆ ಹೊಂದಿದವರಿಗೆ ಪ್ರೋತ್ಸಾಹ ನೀಡುತ್ತಿದ್ದರು. ಕರ್ನಾಟಕದ ಜನಪದ ಗಾಯಕ ಎನಿಸಿಕೊಂಡಿರುವ ಹನುಮಂತನಿಗೆ ಸಾಕಷ್ಟು ಬಾರಿ ಸಹಾಯ ಮಾಡಿದ್ದ ಜೆಸಿ ರಾಯ್ ಅವರು, ಹನುಮಂತನ ಬಗ್ಗೆ ವಿಶೇಷ ಪ್ರೀತಿ ಹೊಂದಿದ್ದರು. ಇದೀಗ ಟಿವಿ9 ಜೊತೆಗೆ ಮಾತನಾಡಿರುವ ಹನುಮಂತ ಜೆಸಿ ರಾಯ್ ಅವರ ವಿಶಾಲ ಹೃದಯದ ಬಗ್ಗೆ ಮಾತನಾಡಿದ್ದಾರೆ.

ರಾಯ್ ಅವರು ಹನುಮಂತನಿಗೆ ಮೊದಲು ಸಹಾಯ ಮಾಡಿದ್ದ ಸಿಂಗಿಂಗ್ ರಿಯಾಲಿಟಿ ಶೋನಲ್ಲಿ. ಗಾಯನ ರಿಯಾಲಿಟಿ ಶೋನಲ್ಲಿ ಹನುಮಂತ ದ್ವಿತೀಯ ಸ್ಥಾನ ಪಡೆದಿದ್ದಾಗ ರಾಯ್ ಅವರು ನಗದು ಬಹುಮಾನವನ್ನು ಹನುಮಂತನಿಗೆ ನೀಡಿದ್ದರು. ‘ದ್ವಿತೀಯ ಸ್ಥಾನ ಪಡೆದಿದ್ದರೂ ಸಹ ನಾನು ಬಡವ ಎಂಬ ಕಾರಣಕ್ಕೆ ನನಗೆ ಹೆಚ್ಚು ಹಣವನ್ನು ನನಗೆ ನೀಡಿದ್ದರು’ ಎಂದು ಹನುಮಂತ ನೆನಪು ಮಾಡಿಕೊಂಡಿದ್ದಾರೆ.

‘ನಾನು ಸಿಂಗಿಂಗ್ ಶೋನಲ್ಲಿ ದ್ವಿತೀಯ ಸ್ಥಾನ ಪಡೆದ ಬಳಿಕ ಅದೇ ಸಮಯದಲ್ಲಿ ಕೋವಿಡ್ ಸಹ ಬಂತು. ಆಗ ರಾಯ್ ಅವರು ಸೈಟು ಬೇಕಾ ಹಣ ಬೇಕಾ ಎಂದು ಕೇಳುತ್ತಿದ್ದಾರೆ ಎಂದು ಚಾನೆಲ್​​ನವರು ಹೇಳಿದ್ದರು. ನಾನು ಬೆಂಗಳೂರಿನಲ್ಲಿ ಇರುವವನಲ್ಲ, ಅಲ್ಲದೆ ಮೊದಲ ಸ್ಥಾನ ಪಡೆದಿದ್ದ ಹೊಳ್ಳ ಅವರು ಹಣ ತೆಗೆದುಕೊಳ್ಳೋಣ ಎಂದು ಸಲಹೆ ಕೊಟ್ಟರು. ಅದರಂತೆ ಹಣ ತೆಗೆದುಕೊಂಡೆವು. ನಾನು ಬಡವ ಎಂದು ನಿಗದಿತ ಹಣಕ್ಕಿಂತಲೂ ಸ್ವಲ್ಪ ಹೆಚ್ಚು ಹಣವನ್ನೇ ಆಗ ನನಗೆ ಅವರು ನೀಡಿದ್ದರು’ ಎಂದಿದ್ದಾರೆ ಹನುಮಂತ.

ಇದನ್ನೂ ಓದಿ:ರಾಯ್ ನಿಧನದಿಂದ ಶಾಕ್ ಆದ ಹರ್ಷಿಕಾ; ಮನೆ ಹೇಗಿತ್ತು ಎಂದು ವಿವರಿಸಿದ ನಟಿ

ಅದರ ಬಳಿಕ ಮತ್ತೊಮ್ಮೆ ಹನುಮಂತನ ತಂಗಿಯ ಓದಿಗೆ ಸಹ ಸಹಾಯ ಮಾಡಿದ್ದರು. ತಂಗಿಯ ಓದಿಗೆ 50 ಸಾವಿರ ರೂಪಾಯಿ ನಗದು ಹಣ ನೀಡಿದ್ದರು. ಅಲ್ಲದೆ, ತಂಗಿ ಪದವಿ ಓದಿದ ಬಳಿಕ ಕರೆದುಕೊಂಡು ಬಾ ನಾನೇ ಕೆಲಸ ಕೊಡುತ್ತೇನೆ ಎಂದಿದ್ದರು. ಹಣ ಪಡೆದುಕೊಂಡು ಬರಲು ಹೋದಾಗಲೂ ಸಹ ಬಹಳ ಚೆನ್ನಾಗಿ ಮಾತನಾಡಿಸಿದ್ದರು. ಅವರ ಕಚೇರಿಯಲ್ಲಿ ಪಕ್ಕದಲ್ಲಿ ಕೂರಿಸಿಕೊಂಡು ಬಹಳ ಹೊತ್ತು ಮಾತನಾಡಿದ್ದರು. ತಮಾಷೆ ಮಾಡಿದ್ದರು. ಮದುವೆ ಆಗುತ್ತೀಯ, ಹೆಣ್ಣು ಹುಡುಕಬೇಕ, ನಮ್ಮ ಕಚೇರಿಯಲ್ಲೇ ಸಾಕಷ್ಟು ಹಣ ಯುವತಿಯರು ಇದ್ದಾರೆ ಯಾರಾದರೂ ಒಬ್ಬರನ್ನು ಆಗಿಬಿಡು ಎಂದೆಲ್ಲ ತಮಾಷೆ ಮಾಡಿದ್ದರು’ ಎಂದಿದ್ದಾರೆ ಹನುಮಂತು.

‘ರಾಯ್ ಅವರದ್ದು ಬಹಳ ವಿಶಾಲವಾದ ಮನಸ್ಸು, ನಾನು ಮನೆ ಕಟ್ಟಿಸುತ್ತಿರುವದನ್ನು ಅವರ ಬಳಿ ಹೇಳಿಕೊಂಡಿದ್ದೆ. ಮನೆ ಗೃಹಪ್ರವೇಶಕ್ಕೆ ಕರಿ ಬರುತ್ತೇನೆ ಎಂದಿದ್ದರು. ತಂಗಿಯ ಓದಿನ ಬಗ್ಗೆಯೂ ವಿಚಾರಿಸಿದ್ದರು, ಅವರು ಅಗಲಿದ್ದನ್ನು ನಂಬಲೇ ಸಾಧ್ಯವಾಗಲಿಲ್ಲ. ನನಗೆ ವೈಯಕ್ತಿಕವಾಗಿ ಸಾಕಷ್ಟು ಸಹಾಯ ಮಾಡಿದ್ದರು’ ಎಂದಿದ್ದಾರೆ ಹನುಮಂತ. ಸಿಂಗರ್ ಹನುಮಂತ ಬಿಗ್​​ಬಾಸ್ ಗೆದ್ದಾಗಲೂ ಸಹ ರಾಯ್ ಅವರೇ ಮೊದಲ ಬಹುಮಾನದ ಸ್ಪಾನ್ಸರ್ ಮಾಡಿದ್ದರು. ಹನುಮಂತನಿಗೆ 50 ಲಕ್ಷ ರೂಪಾಯಿ ನಗದು ಕೊಟ್ಟಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 3:59 pm, Sat, 31 January 26

Source link

‘ಕನ್ನಡ ಚಿತ್ರವನ್ನು ಹೃದಯದಲ್ಲಿ ಹೊತ್ತು ನಡೆಯುತ್ತೇನೆ’; ವಿಶೇಷ ಪ್ರತಿಜ್ಞೆ ಮಾಡಿದ ಸುದೀಪ್ – Kannada News | Kiccha Sudeep Completes 30 Years in Cinema: A Journey of Gratitude and Success

ಕಿಚ್ಚ ಸುದೀಪ್ ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ನಟರಲ್ಲಿ ಒಬ್ಬರು. ಅವರು ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ‘ಮ್ಯಾಕ್ಸ್’ ಹಾಗೂ ‘ಮಾರ್ಕ್’ ಮೂಲಕ 2024 ಹಾಗೂ 2025ರಲ್ಲಿ ಅಭಿಮಾನಿಗಳನ್ನು ರಂಜಿಸಿದರು. ಸುದೀಪ್ ಅವರ ಸಿನಿ ಪಯಣಕ್ಕೆ ಇದೀಗ 30 ವರ್ಷ ವರ್ಷ. ಮೂರು ದಶಕಗಳ ಯಶಸ್ಸಿನ ಜರ್ನಿಯಲ್ಲಿ ಭಾಗಿಯಾದ ಎಲ್ಲರಿಗೂ ಅವರು ಧನ್ಯವಾದ ತಿಳಿಸಿದ್ದಾರೆ.

‘ಬ್ರಹ್ಮ’ ಸುದೀಪ್ ನಟನೆಯ ಮೊದಲ ಸಿನಿಮಾ. ಈ ಸಿನಿಮಾದಲ್ಲಿ ಅಂಬರೀಷ್ ಅವರು ನಟಿಸಿದ್ದರು. ಆದರೆ, ಈ ಚಿತ್ರ ರಿಲೀಸ್ ಆಗಲೇ ಇಲ್ಲ. ಸುದೀಪ್ ಈ ಚಿತ್ರಕ್ಕಾಗಿ ಕ್ಯಾಮೆರಾ ಎದುರುಸಿದ ದಿನವನ್ನು ಚಿತ್ರರಂಗದಲ್ಲಿ ಮೊದಲ ದಿನ ಎಂದು ಪರಿಗಣಿಸಿದ್ದಾರೆ. ಅವರು ಬಣ್ಣದ ಲೋಕಕ್ಕೆ ಕಾಲಿಟ್ಟು ಇಂದಿಗೆ (ಜನವರಿ 31) 30 ವರ್ಷಗಳು ಕಳೆದಿವೆ. ಹಲವು ಸೂಪರ್ ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ.

‘ಮೂವತ್ತು ವರ್ಷಗಳ ಸಾರ್ಥಕ ಪಯಣ’ ಎಂದು ಸುದೀಪ್ ಪತ್ರ ಆರಂಭಿಸಿದ್ದಾರೆ. ‘ಚಿತ್ರರಂಗದಲ್ಲಿ 3 ದಶಕಗಳನ್ನು ಪೂರೈಸಿ ನಿಂತಿರುವ ಈ ಕ್ಷಣದಲ್ಲಿ ನನ್ನ ಹೃದಯ ತುಂಬಿ ಬಂದಿದೆ. ಅಂದು ಕನಸುಗಳು, ಅನುಮಾನಗಳು ಮತ್ತು ಅಪಾರ ಭರವಸೆ ಹೊತ್ತಿದ್ದ ಒಬ್ಬ ಹುಡುಗ ನಾನು. ಅಂದಿನ ಸ್ಥಿತಿಗೂ, ಇಂದು ಬೆಳೆದಿರುವ ರೀತಿ ಊಹಿಸಿದ್ದಕ್ಕಿಂತ ದೊಡ್ಡದಾಗಿದೆ. ಇದಕ್ಕೆ ಕಾರಣ ನೀವು’ ಎಂದು ಸುದೀಪ್ ಧನ್ಯವಾದ ಹೇಳಿದ್ದಾರೆ. ಅದೇ ರೀತಿ ವೃತ್ತಿ ಜೀವನದಲ್ಲಿ ಯಾರ ಪಾತ್ರ ಯಾವ ರೀತಿ ಇದೆ ಎಂಬುದನ್ನು ವಿವರಿಸಿದ್ದಾರೆ ಸುದೀಪ್.

  1. ಅಭಿಮಾನಿಗಳು: ನನ್ನ ಶಕ್ತಿ, ನೀವೇ ನನ್ನ ಪ್ರೇರಣೆ. ನಾನು ಪ್ರತಿದಿನ ಕೆಲಸಕ್ಕೆ ಬರಲು ನೀವೇ ಕಾರಣ.
  2. ನಿರ್ದೇಶಕರು ಮತ್ತು ಬರಹಗಾರರು: ನಿಮ್ಮ ಕಥೆಗಳಿಗೆ ನಾನು ಸರಿ ಹೊಂದುತ್ತೇನೆ ಎಂದು ನಂಬಿ ಜವಾಬ್ದಾರಿ ನೀಡಿದ್ದಕ್ಕಾಗಿ, ನನ್ನನ್ನು ಹುರಿದುಂಬಿಸಿದ್ದಕ್ಕಾಗಿ ಎಲ್ಲಕ್ಕಿಂತ ಹೆಚ್ಚಾಗಿ ನನ್ನ ಮೇಲೆ ಭರವಸೆ ಇಟ್ಟಿದ್ದಕ್ಕಾಗಿ ಧನ್ಯವಾದಗಳು.
  3. ನಿರ್ಮಾಪಕರು: ನಿಮ್ಮ ಧೈರ್ಯ ಮತ್ತು ನಂಬಿಕೆ ನನ್ನ ಕನಸುಗಳನ್ನು ನನಸಾಗಿಸಿವೆ.
  4. ಸಹ ಕಲಾವಿದರು ಮತ್ತು ತಂತ್ರಜ್ಞರು: ಸಿನಿಮಾ ಎಂಬುದು ಸಂಘಟಿತ ಕೆಲಸ. ಲೈಟ್ ಬಾಯ್ ಇಂದ ಕ್ಯಾಮೆರಾಮನ್‌ಗಳವರೆಗೆ, ಕಲಾ ತಂಡದಿಂದ ಕಾಸ್ಟ್ಯೂಮ್ ಡಿಸೈನರ್​​ವರೆಗೆ, ಸ್ಪಾಟ್ ಬಾಯ್ಸ್‌ನಿಂದ ಹಿಡಿದು ಎಡಿಟರ್‌ಗಳವರೆಗೆ, ನಿಮ್ಮ ತೆರೆಯ ಹಿಂದಿನ ಶ್ರಮವೇ ಎಲ್ಲದಕ್ಕೂ ಕಾರಣ.
  5. ಮಾಧ್ಯಮ: ನೀವು ನನ್ನ ಧ್ವನಿಯನ್ನು ಜನರಿಗೆ ತಲುಪಿಸಿದ್ದೀರಿ. ನನ್ನನ್ನು ಪ್ರಶ್ನಿಸಿದ್ದೀರಿ, ನನ್ನ ಯಶಸ್ಸನ್ನು ಸಂಭ್ರಮಿಸಿದ್ದೀರಿ ಮತ್ತು ನಾನು ಬೆಳೆಯಲು ಸಹಾಯ ಮಾಡಿದ್ದೀರಿ.
  6. ಕನ್ನಡ ಚಿತ್ರರಂಗ: ನೀವು ನನಗೆ ಗುರುತು, ಹೆಮ್ಮೆ. ಚಿತ್ರರಂಗ ನನಗೆ ನೆಲೆ ನೀಡಿದೆ. ನಾನು ಸದಾ ಕನ್ನಡ ಚಿತ್ರವನ್ನು ನನ್ನ ಹೃದಯದಲ್ಲಿ ಹೊತ್ತು ನಡೆಯುತ್ತೇನೆ.
  7. ನನ್ನ ಕುಟುಂಬ ಹಾಗೂ ಸ್ನೇಹಿತರು: ಈ ಎಲ್ಲಾ ಏರಿಳಿತಗಳ ನಡುವೆ ನನ್ನನ್ನು ಸಾಮಾನ್ಯ ಮನುಷ್ಯನನ್ನಾಗಿ ನೀವು ನೋಡಿದ್ದೀರಿ. ನಾನು ಹೇಗಿದ್ದೇನೋ ಹಾಗೆ ಸ್ವೀಕರಿಸಿದ್ದಕ್ಕೆ ಧನ್ಯವಾದ.

‘ಈ 30 ವರ್ಷಗಳು ನನಗೆ ಒಂದು ಪಾಠ ಕಲಿಸಿದ್ದರೆ ಅದು ‘ಮಾನವೀಯತೆ’. ಪ್ರತಿಯೊಂದು ಗೆಲುವೂ ನಮಗೆ ದಕ್ಕಿದ ಪ್ರಸಾದ. ನಾನು ಇನ್ನೂ ಕಠಿಣವಾಗಿ ಶ್ರಮಿಸುತ್ತೇನೆ, ಕಲೆಯನ್ನು ಗೌರವಿಸುತ್ತೇನೆ ಮತ್ತು ಸಿನಿಮಾ ನನಗೆ ನೀಡಿದ್ದನ್ನು ಮರಳಿ ನೀಡುತ್ತೇನೆ ಎಂದು ಭರವಸೆ ನೀಡುತ್ತೇನೆ. ಕೈಮುಗಿದು, ಕೃತಜ್ಞತಾ ಭಾವದೊಂದಿಗೆ, ನಿಮ್ಮೆಲ್ಲರಿಗೂ ನನ್ನ ಹೃದಯಾಂತರಾಳದ ಧನ್ಯವಾದಗಳು’ ಎಂದು ಸುದೀಪ್ ಪತ್ರ ಪೂರ್ಣಗೊಳಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 3:11 pm, Sat, 31 January 26

Source link

ಪುರಸಭೆ ಮುಖ್ಯಾಧಿಕಾರಿ ವಿರುದ್ಧ ಸಂಸದ ಸುನೀಲ್​​ ಬೋಸ್​ ಫುಲ್​​ ಗರಂ: ಕಾರಣ ಏನು ಗೊತ್ತಾ? – Kannada News | MP Sunil Bose Confronts Bannur MCO for Disregarding MLA and Distributing Laptops

ಮೈಸೂರು, ಜನವರಿ 31: ಟಿ.ನರಸೀಪುರ ತಾಲೂಕಿನ ಬನ್ನೂರು ಪುರಸಭೆ ಮುಖ್ಯಾಧಿಕಾರಿಯನ್ನು ಸಂಸದ ಸುನೀಲ್​​ ಬೋಸ್​ ತರಾಟೆಗೆ ಪಡೆದ ಘಟನೆ ನಡೆದಿದೆ. ಶಾಸಕರ ಗಮನಕ್ಕೆ ತರದೆ ಲ್ಯಾಪ್​ಟಾಪ್​, ತಳ್ಳೋಗಾಡಿಯನ್ನು ಅಧಿಕಾರಿ ವಿತರಿಸಿರುವ ಕಾರಣ ಪುರಸಭೆ ಮುಖ್ಯಾಧಿಕಾರಿ ಹೇಮಂತ್​​ ವಿರುದ್ಧ ಸಂಸದ ಸುನೀಲ್ ಬೋಸ್ ಗರಂ ಆಗಿದ್ದಾರೆ. ನೀನು ಪುರಸಭೆ ಮುಖ್ಯಾಧಿಕಾರಿನಾ? ಗುಮಾಸ್ತನ​ ರೀತಿ ಮಾತಾಡ್ತೀಯಾ?ನೀನೇನು ದನ ಮೇಯಿಸ್ತೀಯಾ, ಎಷ್ಟು ಸಲ ಹೇಳೋದು ನಿನಗೆ? ನಮ್ಮ ಅನುಮತಿ ಇಲ್ಲದೆ ಲ್ಯಾಪ್​ಟಾಪ್​, ತಳ್ಳೋಗಾಡಿ ಹೇಗೆ ಕೊಟ್ಟೆ? ಶಾಸಕರ ಗಮನಕ್ಕೆ ತರಬೇಕು ತಾನೇ? ಯಾಕೆ ವಿತರಣೆ ಮಾಡಿದ್ದೀಯಾ ಎಂದು ಏರು ಧ್ವನಿಯಲ್ಲೇ ಅಧಿಕಾರಿಯನ್ನು ಸಂಸದರು ತರಾಟೆಗೆ ಪಡೆದಿದ್ದಾರೆ. ಘಟನೆಯ ವಿಡಿಯೋ ವೈರಲ್​​ ಆಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಶೂನಿಂದ ಬರುವ ಕೆಟ್ಟ ವಾಸನೆಯನ್ನು ತೊಡೆದು ಹಾಕಲು ಈ ಸಿಂಪಲ್‌ ಟಿಪ್ಸ್‌ ಪಾಲಿಸಿ – Kannada News | Follow these simple tips to get rid of bad shoe odor

ತುಂಬಾನೇ ಸ್ಟೈಲಿಶ್‌ ಲುಕ್‌ ನೀಡುತ್ತೆ ಎಂಬ ಕಾರಣದಿಂದಾಗಿ ಇತ್ತೀಚಿನ ದಿನಗಳಲ್ಲಿ ಬಹುತೇಕ ಹೆಚ್ಚಿನವರು ಶೂಗಳನ್ನು ಧರಿಸಲು ಇಷ್ಟಪಡುತ್ತಾರೆ. ಕೆಲವೊಮ್ಮೆ ಬೆವರಿನ ಕಾರಣದಿಂದಾಗಿ ಸಾಕ್ಸ್‌ ಮಾತ್ರವಲ್ಲ ಶೂಗಳಿಂದಲೂ ಸಹ ಕೆಟ್ಟ ವಾಸನೆ (bad odor) ಬರುತ್ತದೆ. ಈ ದುರ್ವಾಸನೆ ಖಂಡಿತವಾಗಿಯೂ ಮುಜುಗರವನ್ನು ಉಂಟುಮಾಡುತ್ತದೆ. ನೀವು ಕೂಡ ಇದೇ ರೀತಿಯ ಸಮಸ್ಯೆಯನ್ನು ಎದುರಿಸಿದ್ದೀರಾ, ಎಷ್ಟೇ ಕ್ಲೀನ್‌ ಆಗಿ ಇಟ್ಟರೂ ಸಹ ಶೂಗಳಿಂದ ಬರುವ ದುರ್ವಾಸನೆಯನ್ನು ಹೋಗಲಾಡಿಸಲು ಸಾಧ್ಯವಿಲ್ಲ ಎಂಬ ಚಿಂತೆಯಲ್ಲಿದ್ದೀರಾ? ಹಾಗಿದ್ರೆ ಈ ಸರಳ ಸಲಹೆಗಳನ್ನು ಪಾಲಿಸುವ ಮೂಲಕ ಶೂನಿಂದ ಬರುವ ಕೆಟ್ಟ ವಾಸನೆಯನ್ನು ತೊಡೆದುಹಾಕಿ. ಈ ಕುರಿತ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ಶೂನಿಂದ ಬರುವ ದುರ್ವಾಸನೆಯನ್ನು ಹೋಗಲಾಡಿಸುವುದೇಗೆ?

ಬಿಸಿಲಿನಲ್ಲಿ ಇರಿಸಿ: ಶೂಗಳ ವಾಸನೆಯನ್ನು ತೆಗೆದುಹಾಕಲು ಸುಲಭವಾದ ಮಾರ್ಗವೆಂದರೆ ಅವುಗಳನ್ನು ಸ್ವಲ್ಪ ಸಮಯದವರೆಗೆ ಬಿಸಿಲಿನಲ್ಲಿ ಇಡುವುದು. ಶೂಗಳಲ್ಲಿನ ತೇವಾಂಶ ಮತ್ತು ಬೆವರು ಬ್ಯಾಕ್ಟೀರಿಯಾ ಬೆಳೆಯಲು ಕಾರಣವಾಗುತ್ತದೆ, ಇದು ಕೆಟ್ಟ ವಾಸನೆ ಉಂಟಾಗಲು ಬಹು ಮುಖ್ಯ ಕಾರಣವಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ಶೂಗಳನ್ನು ಸ್ವಲ್ಪ ಹೊತ್ತು ಬಿಸಿಲಿನಲ್ಲಿ ಇಡಿ. ಇದು ತೇವಾಂಶವನ್ನು ತೆಗೆದುಹಾಕುತ್ತದೆ, ಶೂಗಳಲ್ಲಿ ಸಂಗ್ರಹವಾಗುವ ಬ್ಯಾಕ್ಟೀರಿಯಾವನ್ನು ಕೊಲ್ಲುತ್ತದೆ ಜೊತೆಗೆ ಇದು ವಾಸನೆಯನ್ನು ಕಡಿಮೆ ಮಾಡುತ್ತದೆ.

ಅಡಿಗೆ ಸೋಡಾ: ಅಡಿಗೆ ಸೋಡಾ ನೈಸರ್ಗಿಕ ವಾಸನೆ ನಿವಾರಕವಾಗಿದ್ದು, ಅದು ತೇವಾಂಶ ಮತ್ತು ವಾಸನೆಯನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ. ಹಾಗಾಗಿ ನೀವು ರಾತ್ರಿ ಮಲಗುವ ಮುನ್ನ ನಿಮ್ಮ ಶೂಗಳ ಒಳಗೆ ಒಂದು ಟೀಚಮಚ ಅಡಿಗೆ ಸೋಡಾವನ್ನು ಸಿಂಪಡಿಸಿ ಮರುದಿನ ಬೆಳಿಗ್ಗೆ ಅವುಗಳನ್ನು ಸ್ವಚ್ಛಗೊಳಿಸಿ. ಈ ಪ್ರಕ್ರಿಯೆಯು ಶೂಗಳ ವಾಸನೆಯನ್ನು ಬಲು ಸುಲಭವಾಗಿ  ತೆಗೆದುಹಾಕಲು ಸಹಾಯ ಮಾಡುತ್ತದೆ.

ಟೀ ಬ್ಯಾಗ್‌ಗಳು: ಟೀ ಬ್ಯಾಗ್‌ಗಳಲ್ಲಿರುವ ಟ್ಯಾನಿನ್‌ಗಳು ಬ್ಯಾಕ್ಟೀರಿಯಾವನ್ನು ತೊಡೆದುಹಾಕಲು ಸಹಾಯ ಮಾಡುತ್ತವೆ. ಟ್ಯಾನಿನ್‌ಗಳು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿರುವ ನೈಸರ್ಗಿಕ ಸಂಯುಕ್ತವಾಗಿದೆ. ಹಾಗಾಗಿರುವಾಗ ನೀವು ಶೂಗಳ ಒಳಗೆ ಈ ಟೀ ಬ್ಯಾಗ್‌ಗಳನ್ನು ಇಡಿ. ಇದು ಯಾವುದೇ ಕೆಟ್ಟ ವಾಸನೆಯನ್ನು ಹೋಗಲಾಡಿಸುತ್ತದೆ.

ಇದನ್ನೂ ಓದಿ: ಕೊಳೆಯಾದ ದಿಂಬುಗಳನ್ನು ತೊಳೆಯದೆ ಕ್ಷಣಾರ್ಧದಲ್ಲಿ ಸ್ವಚ್ಛಗೊಳಿಸಲು ಸರಳ ಸಲಹೆ ಪಾಲಿಸಿ

ವಿನೆಗರ್: ಬಿಳಿ ವಿನೆಗರ್ ಸಹಾಯದಿಂದ ನೀವು ಶೂಗಳ ವಾಸನೆಯನ್ನು ತೆಗೆದುಹಾಕಬಹುದು. ಇದಕ್ಕಾಗಿ, ಸ್ವಲ್ಪ ಬಿಳಿ ವಿನೆಗರ್ ಮತ್ತು ಸ್ವಲ್ಪ ನೀರನ್ನು ಸ್ಪ್ರೇ ಬಾಟಲಿಯಲ್ಲಿ ಬೆರೆಸಿ. ಶೂಗಳ ಒಳಭಾಗಕ್ಕೆ ಸಿಂಪಡಿಸಿ. ಬಿಳಿ ವಿನೆಗರ್ ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದ್ದು, ಇದು ವಾಸನೆಯನ್ನು ಉಂಟುಮಾಡುವ ಬ್ಯಾಕ್ಟೀರಿಯಾವನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ.

ನಿಂಬೆ ಅಥವಾ ಕಿತ್ತಳೆ ಸಿಪ್ಪೆ: ಶೂಗಳಿಂದ ವಾಸನೆಯನ್ನು ತೆಗೆದುಹಾಕಲು, ರಾತ್ರಿ ಮಲಗುವ ಮುನ್ನ ನಿಂಬೆ ಅಥವಾ ಕಿತ್ತಳೆ ಸಿಪ್ಪೆಗಳನ್ನು ಅವುಗಳ ಒಳಗೆ ಇರಿಸಿ. ಮರುದಿನ ಬೆಳಿಗ್ಗೆ ಸಿಪ್ಪೆಗಳನ್ನು ತೆಗೆಯಿರಿ.  ಈ ಸುಲಭ ತಂತ್ರ ನಿಮ್ಮ ಶೂಗಳಲ್ಲಿನ ವಾಸನೆಯು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 3:14 pm, Sat, 31 January 26

Source link

ಬೈಕ್​​ ಟ್ಯಾಕ್ಸಿ: ಹೈಕೋರ್ಟ್​​ ಆದೇಶದ ವಿರುದ್ಧ ಸುಪ್ರೀಂಗೆ SLP ಸಲ್ಲಿಸುತ್ತಾ ರಾಜ್ಯ ಸರ್ಕಾರ? – Kannada News | Karnataka Bike Taxi Battle: Private Transport Unions Urge Govt to Appeal Against HC Order in Supreme Court

ಬೈಕ್​​ ಟ್ಯಾಕ್ಸಿಗೆ ಮತ್ತೆ ಸಂಕಷ್ಟ?

ಬೆಂಗಳೂರು, ಜನವರಿ 31: ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ ಹಿನ್ನೆಲೆ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್​​ಗೆ SLP ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ರಾಜ್ಯ ಖಾಸಗಿ ಸಾರಿಗೆ ಒಕ್ಕೂಟ ಮನವಿ ಮಾಡಿದೆ. ಈ ಕುರಿತು ಮಾತನಾಡಿರುವ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಅಧ್ಯಕ್ಷ ನಟರಾಜ ಶರ್ಮಾ, ಬೈಕ್ ಟ್ಯಾಕ್ಸಿಯವರು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯನವರಿಗೆ ರಾಹುಲ್ ಪತ್ರ ಬರೆದು, ಬೈಕ್ ಟ್ಯಾಕ್ಸಿಯವರಿಗೆ ಅನುಕೂಲ ಮಾಡಿಕೊಡಿ ಎಂದು ಹೇಳಿದ್ದಾರೆ. ಹೀಗಾಗಿ ನಮಗೆ ಭಯ ಆಗುತ್ತಿದ್ದು, ಹೋರಾಟಕ್ಕೂ ಹಿನ್ನೆಡೆ ಆಗಬಹುದು. ನಮ್ಮ ಮನವಿ ಸ್ವೀಕರಿಸಿ SLP ಸಲ್ಲಿಸಲು ಸಿಎಂ ಮುಂದಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇನ್ನು ಬೈಕ್ ಟ್ಯಾಕ್ಸಿ ಸುರಕ್ಷತೆಯ ಬಗ್ಗೆ ನಿಮ್ಹಾನ್ಸ್ ವೈದ್ಯರು ಹಾಗೂ ಪೊಲೀಸ್ ಇಲಾಖೆ ಕೂಡ ಆತಂಕ ವ್ಯಕ್ತಪಡಿಸಿದೆ ಎನ್ನಲಾಗಿದ್ದು, ಬೈಕ್​​ ಟ್ಯಾಕ್ಸಿಗಳ ಕಾರ್ಯಾಚರಣೆಯಿಂದ ಸಾರ್ವಜನಿಕ ಸುರಕ್ಷಿತಗೆ ಅಪಾಯ ಆಗಬಹುದು. ಅಪಘಾತ ಪ್ರಮಾಣ ಹೆಚ್ಚಳದ ಸಾಧ್ಯತೆಯ ಜೊತೆಗೆ ಪ್ರಯಾಣಿಕರಿಗೆ ಜೀವ ಭದ್ರತೆ ಇರಲ್ಲ. ಇನ್ನು ಆಟೋ, ಟ್ಯಾಕ್ಸಿ ಮತ್ತು ಬಸ್​​ಗಳಿಗೂ ಇವು ಹೊಡೆತ ನೀಡಲಿವೆ ಎಂಬ ಅಭಿಪ್ರಾಯಗಳು ಕೇಳಿಬಂದಿವೆ. ಅಲ್ಲದೆ 2022ರಲ್ಲಿ ICRA ಅಂಕಿ ಅಂಶಗಳ ಪ್ರಕಾರವೂ ಬೈಕ್​​ ಅಪಘಾತಗಳೇ ಹೆಚ್ಚು ನಡೆದಿರೋದು ಸಾಭೀತಾಗಿದೆ.

ಇದನ್ನೂ ಓದಿ: ಕೊನೆಗೂ ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಗ್ರೀನ್ ಸಿಗ್ನಲ್ ನೀಡಿದ ಹೈಕೋರ್ಟ್

ಅಪಘಾತಗಳ ಅಂಕಿ-ಅಂಶ
ಬೈಕ್​​ ಶೇ.40
ಕಾರು, ಟ್ಯಾಕ್ಸಿ, ವ್ಯಾನ್ ಶೇ.17
ಪಾದಚಾರಿಗಳಿಂದ ಶೇ.17
ಆಟೋ ರಿಕ್ಷಾ ಶೇ.4
ಟ್ರಕ್, ಲಾರಿ ಶೇ.9
ಬಸ್ ಶೇ.3
ಸೈಕಲ್ ಶೇ.2
ಇತರೆ ಶೇ.7

ಬೈಕ್ ಟ್ಯಾಕ್ಸಿ ಸಂಸ್ಥೆಗಳು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ ಬೈಕ್ ಟ್ಯಾಕ್ಸಿಗಳಿಗೆ ಲೈಸೆನ್ಸ್ ನೀಡುವುದನ್ನು ಸರ್ಕಾರ ನಿರಾಕರಿಸುವಂತಿಲ್ಲ ಎಂದು ಸ್ಪಷ್ಟಪಡಿಸಿತ್ತು.ಬೈಕ್ ಟ್ಯಾಕ್ಸಿ ಅಗ್ರಿಗೇಟರ್‌ಗಳು ಅನುಮತಿ ಕೋರಿ ಅರ್ಜಿ ಸಲ್ಲಿಸಿದರೆ, ಆ ಅರ್ಜಿಗಳನ್ನು ಪರಿಗಣಿಸಿ ಪರವಾನಗಿ ನೀಡಬೇಕು ಎಂದು ಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಈ ಬಗ್ಗೆ ಆದೇಶಿಸಿದ್ದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರನ್ನೊಳಗೊಂಡ ವಿಭಾಗೀಯ ಪೀಠ , ಬೈಕ್ ಟ್ಯಾಕ್ಸಿ ಸೇವೆಗಳು ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಒಂದು ಭಾಗವಾಗಿದ್ದು, ಕಾನೂನು ಚೌಕಟ್ಟಿನೊಳಗೆ ಅವುಗಳನ್ನು ನಿರ್ಬಂಧಿಸುವಂತಿಲ್ಲ ಎಂದು ಅಭಿಪ್ರಾಯಪಟ್ಟಿತ್ತು.

ವರದಿ: ಅರುಣ್​​ ಕುಮಾರ್​​, ಟಿವಿ9 ಬೆಂಗಳೂರು

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 3:15 pm, Sat, 31 January 26

Source link

CJ Roy Death Case: ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್? – Kannada News | CJ Roy Death Case: Hawala Allegations and Political Ambitions Under Investigation

ಬೆಂಗಳೂರು, ಜನವರಿ 31: ಸಿ.ಜೆ. ರಾಯ್ ಅವರ ಸಾವಿನ ಸುತ್ತ ಹಲವು ಪ್ರಶ್ನೆಗಳು ಮೂಡಿವೆ. ವಿಶೇಷವಾಗಿ, ಅವರು ಅಂತರರಾಷ್ಟ್ರೀಯ ಹವಾಲಾ ಮಾಫಿಯಾದಲ್ಲಿ ಭಾಗಿಯಾಗಿದ್ದರೇ ಮತ್ತು ಮುಂಬರುವ ಕೇರಳ ಚುನಾವಣೆಗಳಿಗೆ ವಿದೇಶದಿಂದ ಹವಾಲಾ ಮೂಲಕ ಹಣವನ್ನು ರಾಜಕೀಯ ಪಕ್ಷಗಳಿಗೆ ವರ್ಗಾಯಿಸಿದ್ದರೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಕೇಂದ್ರ ತನಿಖಾ ಸಂಸ್ಥೆಗಳಾದ ಇಡಿ, ಐಟಿ ಮತ್ತು ರೆವೆನ್ಯೂ ಇಂಟೆಲಿಜೆನ್ಸ್ ಕಳೆದ ಆರು ತಿಂಗಳಿಂದ ರಾಯ್ ಅವರ ಹಣಕಾಸು ವ್ಯವಹಾರಗಳ ಮೇಲೆ ನಿರಂತರವಾಗಿ ಕಣ್ಗಾವಲು ಇರಿಸಿದ್ದವು.

ರಾಯ್ ಅವರು ರಾಜಕೀಯ ಪ್ರವೇಶ ಮಾಡುವ ಯೋಜನೆಯನ್ನು ಹೊಂದಿದ್ದರು ಮತ್ತು ಹವಾಲಾ ಹಣವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲು ಸಿದ್ಧತೆ ನಡೆಸಿದ್ದರು ಎಂಬ ಅನುಮಾನಗಳೂ ಕೇಳಿಬಂದಿವೆ. ಅಧಿಕಾರಿಗಳಿಗೆ ಲಭ್ಯವಾಗಿರುವ ದಾಖಲೆಗಳು ಮತ್ತು ರಾಯ್ ಅವರ ಮೊಬೈಲ್ ಚಾಟ್‌ಗಳು ಈ ಎಲ್ಲಾ ಅಂಶಗಳನ್ನು ಬಹಿರಂಗಪಡಿಸುವ ನಿರೀಕ್ಷೆಯಿದೆ. ಜೈಲು ಶಿಕ್ಷೆಯ ಭಯ ಅಥವಾ ಅವ್ಯವಹಾರಗಳು ಬಹಿರಂಗಗೊಳ್ಳುವ ಆತಂಕ ಅವರ ಸಾವಿಗೆ ಕಾರಣವಾಗಿರಬಹುದು ಎಂದು ಊಹಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Source link

ತುಮಕೂರು: ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್‌ಐ – Kannada News | Tumakuru Rural PSI Caught Red Handed by Lokayukta While Accepting Bribe Inside Police Station

ತುಮಕೂರು, ಜನವರಿ 31: ಭ್ರಷ್ಟಾಚಾರ ವಿರುದ್ಧ ಲೋಕಾಯುಕ್ತ ಅಧಿಕಾರಿಗಳ ಚುರುಕಿನ ಕಾರ್ಯಾಚರಣೆ ಮುಂದುವರಿದಿದ್ದು, ತುಮಕೂರು (Tumakur) ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಚೇತನ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಒಂದು ಪ್ರಕರಣದಲ್ಲಿ ವಶಪಡಿಸಿಕೊಂಡಿದ್ದ ಕಾರನ್ನು ವಾಪಸ್ ನೀಡುವ ನೆಪದಲ್ಲಿ ಪಿಎಸ್‌ಐ ಚೇತನ ಕುಮಾರ್ 1 ಲಕ್ಷ ರೂ. ಲಂಚದ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ಕೇಳಿಬಂದಿದೆ. ಮೊದಲ ಹಂತವಾಗಿ 40 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲೇ ಲೋಕಾಯುಕ್ತ ಅಧಿಕಾರಿಗಳು ರೆಡ್‌ಹ್ಯಾಂಡ್ ಆಗಿ ಅವರನ್ನು ಬಂಧಿಸಿದ್ದಾರೆ.

ಲಂಚ ಸ್ವೀಕರಿಸುತ್ತಿದ್ದ ಕ್ಷಣದಲ್ಲೇ ದಾಳಿ ನಡೆಸಿದ ಲೋಕಾಯುಕ್ತ ತಂಡ, ಪಿಎಸ್‌ಐ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ಮುಂದುವರಿಸಿದೆ. ಸರ್ಕಾರಿ ಕಚೇರಿಯಲ್ಲೇ ಲಂಚ ಸ್ವೀಕಾರ ನಡೆದಿರುವುದು ಸಾರ್ವಜನಿಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಬೆಂಗಳೂರಿನ ಕೆಪಿ ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು ಕೂಡ ಶುಕ್ರವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದರು. ಚೀಟಿ ವ್ಯವಹಾರ ಸಂಬಂಧಿತ ಪ್ರಕರಣದಲ್ಲಿ ವ್ಯಕ್ತಿಯನ್ನು ಕೇಸ್‌ನಲ್ಲಿ ಸಿಲುಕಿಸುವುದಾಗಿ ಬೆದರಿಸಿ ಒಟ್ಟು 5 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪ ಅವರ ಮೇಲಿದ್ದು, ಮೈಸೂರು ರಸ್ತೆಯ ಸಿಐಆರ್ ಗ್ರೌಂಡ್ ಬಳಿ 4 ಲಕ್ಷ ರೂ. ಲಂಚ ಪಡೆಯುವಾಗ ಅವರನ್ನು ಬಂಧಿಸಲಾಗಿತ್ತು.

ಪೊಲೀಸ್ ಇಲಾಖೆಯಲ್ಲೇ ಹೆಚ್ಚುತ್ತಿರುವ ಭ್ರಷ್ಟಾಚಾರ

ಸತತವಾಗಿ ಪೊಲೀಸ್ ಅಧಿಕಾರಿಗಳೇ ಲೋಕಾಯುಕ್ತ ಬಲೆಗೆ ಬೀಳುತ್ತಿರುವ ಘಟನೆಗಳು ಪೊಲೀಸ್ ಇಲಾಖೆಯ ಪಾರದರ್ಶಕತೆ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿವೆ. ಸಾರ್ವಜನಿಕರ ವಿಶ್ವಾಸ ಕಾಪಾಡಬೇಕಾದ ಅಧಿಕಾರಿಗಳೇ ಲಂಚದ ದಂಧೆಯಲ್ಲಿ ತೊಡಗಿರುವುದು ಆತಂಕಕಾರಿ ಬೆಳವಣಿಗೆ ಎಂಬ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆ ನಡೆಯುತ್ತಿದೆ.

ಇದನ್ನೂ ಓದಿ: ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!

ಲೋಕಾಯುಕ್ತ ಪೊಲೀಸರು ತುಮಕೂರು ಗ್ರಾಮಾಂತರ ಪಿಎಸ್‌ಐ ಚೇತನ ಕುಮಾರ್ ವಿರುದ್ಧ ಕಾನೂನು ಕ್ರಮ ಮುಂದುವರಿಸಿದ್ದು, ತನಿಖೆ ಬಳಿಕ ಹೆಚ್ಚಿನ ಮಾಹಿತಿ ದೊರೆಯಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version