ಮೂವರ ಕೊಂದು ಬೆಂಗಳೂರಿಗೆ ಬಂದು ಫುಲ್ ಡ್ರಾಮಾ: ತನಿಖೆ ವೇಳೆ ಬಯಲಾಗಿದ್ದೇಗೆ ಕೊಲೆ ಸತ್ಯ? – Kannada News | Vijayanagara Murder Case: Chilling Mystery Behind the Killing of Three
ಬೆಂಗಳೂರು, ಜನವರಿ 31: ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದಲ್ಲಿ ತ್ರಿವಳಿ ಕೊಲೆ ಪ್ರಕರಣ ಸಂಬಂಧ ಒಂದೊಂದೇ ಶಾಕಿಂಗ್ ಮಾಹಿತಿಗಳು ಹೊರಬರುತ್ತಿವೆ. ತಂದೆ-ತಾಯಿ ಮತ್ತು ಸಹೋದರಿಯನ್ನ ತಾನೇ ಕೊಂದು ಬೆಂಗಳೂರಿಗೆ ಬಂದಿದ್ದ ಆರೋಪಿ ಅಕ್ಷಯ್ ಪೊಲೀಸರೇ ನಂಬುವ ರೀತಿ ಕತೆ ಕಟ್ಟಿದ್ದ. ಜ. 29ರ ರಾತ್ರಿ 11 ಗಂಟೆಗೆ ತಿಲಕನಗರ ಠಾಣೆಗೆ ಬಂದಿದ್ದ ಅಕ್ಷಯ್, ಬೆಂಗಳೂರಿಗೆ ಆಸ್ಪತ್ರೆಗೆಂದು ಬಂದಿದ್ದ ಕುಟುಂಬಸ್ಥರು ನಾಪತ್ತೆಯಾಗಿದ್ದಾರೆ ಎಂದು ಅಲವತ್ತುಕೊಂಡಿದ್ದ ಎಂಬುದು ಗೊತ್ತಾಗಿದೆ. ತನ್ನ ತಂದೆ ಭೀಮರಾಜ್ ಗೆ ಆರೋಗ್ಯ ಸಮಸ್ಯೆ ಇದ್ದು, ಹೀಗಾಗಿ…