Headlines

RCB ತಂಡದ ಅಮೋಘ ಗೆಲುವಿನ ಬೆನ್ನಲ್ಲೇ ಐಪಿಎಲ್ ಅಂಕ ಪಟ್ಟಿ ಪ್ರಕಟ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ 11 ಪಂದ್ಯಗಳು ಮುಗಿದಿವೆ. ಈ ಹನ್ನೊಂದು ಪಂದ್ಯಗಳಲ್ಲಿ ಎಲ್ಲಾ ತಂಡಗಳು 2 ಮ್ಯಾಚ್​ಗಳನ್ನು ಆಡಿದೆ. ಈ ಪಂದ್ಯಗಳ ಬಳಿಕ ಐಪಿಎಲ್ ಪಾಯಿಂಟ್ಸ್ ಟೇಬಲ್​ನಲ್ಲೂ ಮಹತ್ವದ ಬದಲಾವಣೆಯಾಗಿದ್ದು, ನೂತನ ಅಂಕ ಪಟ್ಟಿ ಈ ಕೆಳಗಿನಂತಿದೆ… ರಾಯಲ್ ಚಾಲೆಂಜರ್ಸ್ ಬೆಂಗಳೂರು: ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ 202 ರನ್​ಗಳ ಗುರಿಯನ್ನು 15.4 ಓವರ್​ಗಳಲ್ಲಿ ಚೇಸ್ ಮಾಡಿ 6 ವಿಕೆಟ್​ಗಳ ಜಯ ಸಾಧಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಇದೀಗ ಸಿಎಸ್​ಕೆ ವಿರುದ್ಧ 43 ರನ್​ಗಳ ಗೆಲುವು…

Read More

ಬಾರ್​​​ನಲ್ಲಿ ಕಿರಿಕ್; ನಟ ನಿರಂಜನ್​ ಮೇಲೆ ಬಿಯರ್ ಬಾಟಲ್​​ನಿಂದ ಹಲ್ಲೆ

ಕನ್ನಡ ಚಿತ್ರರಂಗದಲ್ಲಿ ಈಗತಾನೇ ಗುರುತಿಸಿಕೊಳ್ಳುತ್ತಿರುವ ನಟ ನಿರಂಜನ್ ಮೇಲೆ ಅಪರಿಚಿತ ವ್ಯಕ್ತಿಗಳು ಹಲ್ಲೆ ಮಾಡಿದ್ದಾರೆ. ಬೆಂಗಳೂರಿನ ಬಾರ್ ಒಂದರಲ್ಲಿ ನಡೆದ ಕಿರಿಕ್​ ಮಿತಿ ಮೀರಿದ್ದು, ಬಿಯರ್ ಬಾಟಲಿಯಿಂದ ನಟನ ಮೇಲೆ ಹಲ್ಲೆ ಮಾಡಲಾಗಿದೆ. ಘಟನೆ ಸಂಬಂಧ ಸುಬ್ರಹ್ಮಣ್ಯಪುರ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಮಾರ್ಚ್ 28ರಂದು ನಡೆದಿರುವ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ದರ್ಶನ್ ಅಭಿನಯದ ‘ಒಡೆಯ’ (2019) ಸಿನಿಮಾದಲ್ಲಿ ನಿರಂಜನ್ ನಟಿಸಿದ್ದರು. ಈ ಸಿನಿಮಾದಲ್ಲಿ ದರ್ಶನ್ ಸಹೋದರನ ಪಾತ್ರದಲ್ಲಿ ಅವರು ಕಾಣಿಸಿಕೊಂಡರು. ಈ ಪಾತ್ರ ಅವರ…

Read More

ಸಚಿವ ಕೆ. ಹೆಚ್ ಮುನಿಯಪ್ಪ ನಿವಾಸಕ್ಕೆ ಮುತ್ತಿಗೆ ಹಾಕಿದ ಆಟೋ ಚಾಲಕರು ! ಸಚಿವ ಹೇಳಿದ್ದೇನು?

ಬೆಂಗಳೂರು, ಏಪ್ರಿಲ್ 06: ನಗರದಲ್ಲಿ ಎಲ್​ಪಿಜಿ ಗ್ಯಾಸ್ ಸಮಸ್ಯೆ (LPG gas crisis) ಹೋಟೆಲ್ ಉದ್ಯಮಕ್ಕಷ್ಟೆ ಅಲ್ಲದೆ ಇದೀಗ ಆಟೋ ಚಾಲಕರ ದುಡಿಮೆ ಮೇಲೂ ಹೊಡೆತ ಕೊಟ್ಟಿದೆ. ಗಂಟೆಗಟ್ಟಲೆ ಆಟೋಗೆ ಗ್ಯಾಸ್ ತುಂಬಿಸಲು ಕಾದು ಕಾದು ಸುಸ್ತಾಗಿರುವ ಚಾಲಕರು ಇಂದು ಆಹಾರ ಸಚಿವ ಕೆ. ಹೆಚ್ ಮುನಿಯಪ್ಪ ಅವರ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಗ್ಯಾಸ್ ಕೊಡಿಸಲೇಬೇಕು ಎಂದ ಚಾಲಕರು ಹೆಬ್ಬಾಳದ ಸಂಜಯನಗರದಲ್ಲಿರುವ ಸಚಿವರ ಮನೆ ಎದುರು ಜಮಾಯಿಸಿದ ಆಟೋ ಚಾಲಕರು ಗ್ಯಾಸ್ ಕೊಡಬೇಕು ಎಂದು…

Read More

ಸ್ನೇಹಿತನ ಮದುವೆಗೆ ಬಂದಿದ್ದ ಬೆಂಗಳೂರಿನ ಐಟಿ ಉದ್ಯೋಗಿ ಭದ್ರಾ ನದಿಪಾಲು!

ಚಿಕ್ಕಮಗಳೂರು, ಏ.6: ಜಿಲ್ಲೆಯ ನರಸಿಂಹರಾಜಪುರ (ಎನ್.ಆರ್.ಪುರ) ತಾಲ್ಲೂಕಿನ ಬನ್ನೂರು ಗ್ರಾಮದ ಬಳಿ ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಐಟಿ ಉದ್ಯೋಗಿಯೊಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಗದಗ ಮೂಲದ, ಬೆಂಗಳೂರಿನ ಖಾಸಗಿ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ್ (27) ಎಂದು ಗುರುತಿಸಲಾಗಿದೆ. ಅಭಿಷೇಕ್ ಅವರು ತಮ್ಮ ಸ್ನೇಹಿತನ ಮದುವೆಯಲ್ಲಿ ಪಾಲ್ಗೊಳ್ಳಲು ಸ್ನೇಹಿತರ ಜತೆ ಸೇರಿ ಬಾಳೆಹೊನ್ನೂರು ಸಮೀಪದ ಬನ್ನೂರು ಗ್ರಾಮಕ್ಕೆ ಬಂದಿದ್ದರು. ಸ್ನೇಹಿತರೊಂದಿಗೆ ಸ್ಥಳೀಯ ಹೋಂ ಸ್ಟೇನಲ್ಲಿ ವಾಸ್ತವ್ಯ ಹೂಡಿದ್ದ ಇವರು,…

Read More

Rajat Patidar: ಒತ್ತಡಕ್ಕೆ ಒಳಗಾದ್ರೆ ನಾನು ಅವರತ್ತ ನೋಡುತ್ತೇನೆ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 11ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಭರ್ಜರಿ ಜಯ ಸಾಧಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 20 ಓವರ್​ಗಳಲ್ಲಿ 250 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ 19.4 ಓವರ್​ಗಳಲ್ಲಿ 207 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಆರ್​ಸಿಬಿ ತಂಡವು 43 ರನ್​ಗಳ ಜಯ ಸಾಧಿಸಿತು. ಈ ಗೆಲುವಿನ ಬಳಿಕ ಮಾತನಾಡಿದ…

Read More

ಬಸ್‌ ಸ್ಟ್ಯಾಂಡ್‌ನಲ್ಲಿ ಮಲಗುತ್ತಿದ್ದ ಬೆಳಗಾವಿ ಯುವಕ ಈಗ ರಾಜ್ಯದ ಅತ್ಯುತ್ತಮ ಶಿಕ್ಷಕ!

ಬೆಳಗಾವಿ, ಏ.6: ಬಡತನ ಎಂಬುದನ್ನು ಸಾಧನೆಗೆ ತೊಂದರೆಯನ್ನು ಉಂಟು ಮಾಡುವುದಿಲ್ಲ. ಇದೀಗ ಇಲ್ಲೊಂದು ಶಿಕ್ಷಕರ ಸಾಧನೆಗೆ ದೊಡ್ಡ ಮಟ್ಟದ ಪ್ರಶಸ್ತಿ ಲಭಿಸಿದೆ. ಅವರ ಸಾಧನೆ ಇದೀಗ ಬೆಳಗಾವಿಯ ಯುವಕರಲ್ಲಿ ಒಳ್ಳೆಯ ಕನಸುಗಳನ್ನು ಮೂಡಿಸಿದೆ. ಶಿಕ್ಷಕ ಯಾವಾಗಲೂ ವಿದ್ಯಾರ್ಥಿಯಾಗಿಯೇ ಇರಬೇಕು ಎಂಬ ಸರಳ ಮಂತ್ರವನ್ನು ನಂಬಿರುವ ರಾಜಶೇಖರ್ ರಗಟಿ (43) ಅವರು ಇಂದು ಕರ್ನಾಟಕದ ಮನೆಮಾತಾಗಿದ್ದಾರೆ. 2025-26ನೇ ಸಾಲಿನ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಸ್ವೀಕರಿಸಿರುವ ಇವರ ಯಶೋಗಾಥೆಯ ಹಿಂದೆ ಹಸಿವು, ಕಷ್ಟ…

Read More

Video: ತಾಂತ್ರಿಕ ದೋಷ, ನಿಂತಿದ್ದ ರೈಲಿನಿಂದ ಇಳಿದ ಪ್ರಯಾಣಿಕನ ಮೇಲೆ ಹರಿದ ಮತ್ತೊಂದು ರೈಲು

ಇಟಾವಾ, ಏಪ್ರಿಲ್ 06: ತಾಂತ್ರಿಕ ದೋಷದಿಂದಾಗಿ ನಿಂತಿದ್ದ ರೈಲಿನಿಂದ ಇಳಿದ ಯುವಕನೊಬ್ಬನಿಗೆ ಮತ್ತೊಂದು ರೈಲು ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಇಟಾವಾದಲ್ಲಿ ನಡೆದಿದೆ. ಅಪಘಾತದ ಬಗ್ಗೆ ರೈಲ್ವೆ ಪೊಲೀಸರು ಯುವಕನ ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ.ಓಖಾ-ಗುವಾಹಟಿ ಎಕ್ಸ್‌ಪ್ರೆಸ್ ಇಟಾವಾದಿಂದ ಕಾನ್ಪುರಕ್ಕೆ ಡೌನ್ ಲೈನ್‌ನಲ್ಲಿ ಪ್ರಯಾಣಿಸುತ್ತಿತ್ತು. ಪ್ರಯಾಣದ ಸಮಯದಲ್ಲಿ, 13 ನೇ ಕೋಚ್‌ನ ಚಕ್ರಗಳಿಂದ ಇದ್ದಕ್ಕಿದ್ದಂತೆ ಹೊಗೆ ಬರಲು ಪ್ರಾರಂಭಿಸಿತ್ತು. ಪ್ರಯಾಣಿಕರು ಹೊಗೆಯಿಂದ ಗಾಬರಿಗೊಂಡರು, ಮತ್ತು ಅನೇಕರು ಭಯದಿಂದ ತಮ್ಮ ಆಸನಗಳಿಂದ ಎದ್ದರು….

Read More

ಸಿಗರೇಟ್ ವಿಚಾರವಾಗಿ ಎರಡು ಗುಂಪಿನ ನಡುವೆ ಹೊಡೆದಾಟ! ಓರ್ವ ಸಾವು

ಮಂಡ್ಯ , ಏಪ್ರಿಲ್ 06: ಕ್ಷುಲ್ಲಕ ಕಾರಣಗಳು ಹಾಗೂ ಆಸ್ತಿ ವಿವಾದಗಳಿಂದ ಮಂಡ್ಯದಲ್ಲಿ (Mandya) ಎರಡು ಪ್ರತ್ಯೇಕ ಹಿಂಸಾತ್ಮಕ ಘಟನೆಗಳು ನಡೆದಿದ್ದು, ಒಬ್ಬ ಯುವಕ ಸಾವನ್ನಪ್ಪಿದ್ದಾನೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮದ್ದೂರು ಮತ್ತು ಕೆ.ಆರ್.ಪೇಟೆಯಲ್ಲಿ ಮಾರಾಮಾರಿ ನಡೆದಿದ್ದು, ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಎರಡೂ ಘಟನೆಗಳಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜಿ ಸಂಧಾನ ನಡೆಯುತ್ತಿರುವಾಗಲೇ ಮತ್ತೆ ಗಲಾಟೆ ಮದ್ದೂರು ಪಟ್ಟಣದ ಪಟೇಲ್ ಸಾಮಿಲ್ ಸಮೀಪ ಎರಡು ಯುವಕರ ಗುಂಪುಗಳ ನಡುವೆ ಗಲಾಟೆ ನಡೆದಿದೆ. ಪರಿಣಾಮವಾಗಿ ಮರಳಿಗ ಗ್ರಾಮದ ಯಶವಂತ್…

Read More

ಪೇರಳೆ ಹಣ್ಣು ಕದ್ದಿದ್ದಕ್ಕೆ ಬಾಲಕಿಗೆ ಇಂಥಾ ಶಿಕ್ಷೆಯೇ?

ಉನಾ, ಏಪ್ರಿಲ್ 06: ಪೇರಳೆ(Guava) ಹಣ್ಣು ಕದ್ದಿದ್ದಕ್ಕೆ ಬಾಲಕಿಗೆ ಶಿಕ್ಷೆ ನೀಡಿರುವ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯಲ್ಲಿ ನಡೆದಿದೆ. ಮನೆಯ ಹೊರಗಿರುವ ಮರದಲ್ಲಿ ಪೇರಳೆ ಹಣ್ಣು ಕದ್ದಿದ್ದಕ್ಕೆ ನಿವೃತ್ತ ಸೇನಾ ಅಧಿಕಾರಿಯೊಬ್ಬರು ಅಪ್ರಾಪ್ತ ಬಾಲಕಿಗೆ ಕಠಿಣ ಶಿಕ್ಷೆ ನೀಡಿದ್ದಾರೆ. ಆಕೆಯನ್ನು ಕಟ್ಟಿಹಾಕಿ ಥಳಿಸಿದ್ದಾರೆ. ಮಾಹಿತಿಯ ಪ್ರಕಾರ, ಬಾಲಕಿ ವಲಸೆ ಕುಟುಂಬದ ಮಗಳು, ಆರೋಪಿಯ ನಿವಾಸದ ಬಳಿಯ ಮರದಿಂದ ಪೇರಳೆ ಹಣ್ಣುಗಳನ್ನು ಕಿತ್ತುಕೊಂಡಿದ್ದು ಆಕೆಯ ಅಪರಾಧ ಎಂದು ಹೇಳಲಾಗಿದೆ. ಆರೋಪಿಯು ಬಾಲಕಿಯನ್ನು ತನ್ನ ಮನೆಯೊಳಗೆ ಕರೆದೊಯ್ದು, ಸರಪಳಿಯಿಂದ…

Read More

2 ಸಾವಿರ ರೂ. ಬರುತ್ತೇ ಎಂದು ಖುಷಿ ಪಡಬೇಡಿ: ಮಹಿಳೆಯರಿಗೆ ದೊಡ್ಡ ಎಚ್ಚರಿಕೆ ನೀಡಿದ ಕುಮಾರಸ್ವಾಮಿ

ಬಾಗಲಕೋಟೆ, ಏ.6: ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಭರ್ಜರಿ ಪ್ರಚಾರ ನಡೆಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸರ್ಕಾರದ ಗ್ಯಾರಂಟಿ ಯೋಜನೆಗಳು ಭವಿಷ್ಯದ ಪೀಳಿಗೆಗೆ ಸಾಲದ ಹೊರೆ ಹೆಚ್ಚಿಸುತ್ತವೆ ಎಂದು ಅವರು ಎಚ್ಚರಿಸಿದರು. ಪ್ರಸ್ತುತ ಸರ್ಕಾರವು 8.17 ಲಕ್ಷ ಕೋಟಿ ರೂಪಾಯಿ ಸಾಲ ಮಾಡಿದೆ ಎಂದು ಕುಮಾರಸ್ವಾಮಿ ಆರೋಪಿಸಿದರು. ಕುಟುಂಬ ರಾಜಕಾರಣದ ಬಗ್ಗೆ ಸಿದ್ದರಾಮಯ್ಯನವರನ್ನು ಟೀಕಿಸಿದ ಕುಮಾರಸ್ವಾಮಿ, ಅವರ ಪುತ್ರನನ್ನು ರಾಜಕೀಯಕ್ಕೆ ತಂದಿರುವುದನ್ನು ಪ್ರಶ್ನಿಸಿದರು….

Read More