ಶಾಲೆಗೆ ಹೋಗು ಎಂದಿದ್ದಕ್ಕೆ ಮಹಿಳೆಗೆ ಚಾಕುವಿನಿಂದ ಇರಿದ 11ನೇ ತರಗತಿ ವಿದ್ಯಾರ್ಥಿ
ರಾಣಿಪೇಟೆ, ಮಾರ್ಚ್ 25: ಶಾಲೆಗೆ ಹೋಗದೆ ಗೆಳೆಯರ ಜೊತೆ ಓಡಾಡಿಕೊಂಡಿದ್ದಕ್ಕಾಗಿ ಮಹಿಳೆಯೊಬ್ಬರು 11ನೇ ತರಗತಿ ವಿದ್ಯಾರ್ಥಿಗೆ ಗದರಿದ್ದರು. ಇದೇ ಕಾರಣದಿಂದ ಆತ ಆ ಮಹಿಳೆಯ ಮೇಲೆ ಚಾಕುವಿನಿಂದ ಹಿಂಸಾತ್ಮಕವಾಗಿ ಹಲ್ಲೆ ಮಾಡಿದ್ದಾನೆ. 16 ವರ್ಷದ ಆ ವಿದ್ಯಾರ್ಥಿಯನ್ನು ಅರಕ್ಕೋಣಂ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಘಟನೆ ಊರಿನಲ್ಲಿ ಆಘಾತ ಸೃಷ್ಟಿಸಿದೆ. ರಾಣಿಪೇಟೆ ಜಿಲ್ಲೆಯ ಅರಕ್ಕೋಣಂನ ಓಥವಡೈ ಬೀದಿಯಲ್ಲಿ ವಾಸಿಸುವ ಸರವಣನ್ ಮತ್ತು ಸತ್ಯ ದಂಪತಿಗೂ ಆ ಬಾಲಕನ ಕುಟುಂಬಕ್ಕೂ ಬಹಳ ಪರಿಚಯವಿತ್ತು. ಸರವಣನ್ ವಿಮಾ ಏಜೆಂಟ್…