Headlines

ಕಷ್ಟಕಾಲಕ್ಕೆ ಚಿನ್ನ ಎನ್ನುತ್ತಾರೆ; ಬಿಕ್ಕಟ್ಟಿನಲ್ಲಿ ಬಂಗಾರದ ದರ ಏರುವ ಬದಲು ಇಳಿಯುತ್ತಿರುವುದು ಯಾಕೆ? ಇಲ್ಲಿದೆ ಸಂಭಾವ್ಯ ಕಾರಣಗಳು – Kannada News | Gold Rates rise when chips are down, but why the prices of yellow metal going down during West Asia crisis

ನವದೆಹಲಿ, ಜುಲೈ 19: ಜಾಗತಿಕವಾಗಿ ಏನಾದರೂ ಬಿಕ್ಕಟ್ಟು (Crisis) ಅಥವಾ ಯುದ್ಧದ ಪರಿಸ್ಥಿತಿ ಎದುರಾದರೆ ಹೂಡಿಕೆದಾರರು ಸಾಮಾನ್ಯವಾಗಿ ಸುರಕ್ಷಿತ ಹೂಡಿಕೆಯಾಗಿ ಚಿನ್ನ ಮತ್ತು ಬೆಳ್ಳಿಯ ಕಡೆಗೆ ಮುಖ ಮಾಡುತ್ತಾರೆ. ಇದರಿಂದ ಚಿನ್ನದ ಬೆಲೆ (Gold Price) ಹೆಚ್ಚಾಗುತ್ತದೆ. ಆದರೆ, ಇತ್ತೀಚಿನ ಪಶ್ಚಿಮ ಏಷ್ಯಾ ಸಂಘರ್ಷದ ಅವಧಿಯಲ್ಲಿ ಚಿನ್ನದ ಬೆಲೆ ಸುಮಾರು 27% ರಷ್ಟು ಮತ್ತು ಬೆಳ್ಳಿಯ ಬೆಲೆ ಬರೋಬ್ಬರಿ 52% ರಷ್ಟು ಕುಸಿದಿದೆ. ಇಂತಹ ಬಿಕ್ಕಟ್ಟಿನ ಸಮಯದಲ್ಲೂ ಚಿನ್ನದ ಬೆಲೆ ಕುಸಿಯಲು ಕಾರಣವೇನು? ಹಣಕಾಸು ತಜ್ಞರ ಪ್ರಕಾರ,…

Read More

ನಾಗಾಲ್ಯಾಂಡ್‌ನಲ್ಲಿ ಭೀಕರ ಭೂಕುಸಿತ; 4 ಜನ ಸಾವು, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ – Kannada News | 4 Killed In Massive Landslide In Nagaland, More Feared Dead

ಗುವಾಹಟಿ, ಜುಲೈ 19: ನಾಗಾಲ್ಯಾಂಡ್‌ನ ಮೋನ್ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಭೀಕರ ಭೂಕುಸಿತ (Landlside) ಸಂಭವಿಸಿದ್ದು, ಮಕ್ಕಳು ಸೇರಿದಂತೆ 4 ಜನರು ಸಾವನ್ನಪ್ಪಿದ್ದಾರೆ. ಭಾರಿ ಮಳೆಯಿಂದಾಗಿ ಈ ಪ್ರದೇಶದಲ್ಲಿ ದಿಢೀರ್ ಪ್ರವಾಹವೂ ಉಂಟಾಗಿದೆ. ಭೂಕುಸಿತದ ಭೀಕರತೆಗೆ ಹಲವು ಮನೆಗಳು ಕೊಚ್ಚಿಹೋಗಿವೆ. ಮಣ್ಣಿನ ರಾಶಿಯ ಅಡಿಯಲ್ಲಿ ಸಿಲುಕಿಕೊಂಡಿರಬಹುದಾದ ಜನರಿಗಾಗಿ ರಕ್ಷಣಾ ಸಿಬ್ಬಂದಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಭೂಕುಸಿತದ ಬೆನ್ನಲ್ಲೇ ಈ ಪ್ರದೇಶಕ್ಕೆ ಭಾರಿ ಪ್ರಮಾಣದ ನೀರು ನುಗ್ಗುತ್ತಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ತೀವ್ರ ಅಡ್ಡಿಯಾಗಿದೆ ಎಂದು ಪೊಲೀಸ್ ಮೂಲಗಳು…

Read More

ಅಮ್ಮ-ತಂದೆಯ ಬಾಂಧ್ಯವ್ಯವನ್ನ ಬಿಚ್ಚಿಟ್ಟ ಪುತ್ರಿ ಅನುಸೂಯ – Kannada News | Daughter anasuya Talks about Her demise Mother Chennamma

ಬೆಂಗಳೂರು, (ಜುಲೈ 19): ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ (Chennamma Deve Gowda) ಅವರ ಅಂತ್ಯಕ್ರಿಯೆ ನಾಳೆ (ಜುಲೈ 20) ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ಗ್ರಾಮದ ಸಮೀಪವಿರುವ ಕ್ಯಾತನಹಳ್ಳಿ ಗ್ರಾಮದ ಜಮೀನಿನಲ್ಲಿ ನಡೆಯಲಿದೆ. ಬೆಂಗಳೂರಿನ ನಿವಾಸದಿಂದ ಚೆನ್ನಮ್ಮರ ಪಾರ್ಥಿವ ಶರೀರವನ್ನು ಕೊಂಡೊಯ್ಯುವ ವೇಳೆ ದೇವೇಗೌಡ್ರು ಬಿಕ್ಕಿ ಬಿಕ್ಕ ಅತ್ತರು. ಇನ್ನು ಪುತ್ರಿ ಅನುಸೂಯ ತಾಯಿ ಚೆನ್ನಮ್ಮ ಬಗ್ಗೆ ಟಿವಿ9ನ ಜೊತೆ ಹಂಚಿಕೊಂಡಿದ್ದು, ಅಮ್ಮ ಮುತ್ತೈದೆ ಸಾವನ್ನ ಬಯಸಿದ್ದರು. ಅದರಂತೆ ಮುತ್ತೈದೆಯಾಗಿ ಪ್ರಾಣ ಬಿಟ್ಟಿದ್ದಾರೆ. ಒಂದು ಕಡೆ…

Read More

IND vs ENG: ಲಾರ್ಡ್ಸ್‌ನಲ್ಲಿ ಆಂಗ್ಲರ ಆರ್ಭಟ; 36 ವರ್ಷಗಳ ದಾಖಲೆ ಉಡೀಸ್

ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಆತಿಥೇಯ ಇಂಗ್ಲೆಂಡ್​ಗೆ ಭರ್ಜರಿ ಆರಂಭ ಸಿಕ್ಕಿದೆ. ಆರಂಭಿಕರಾದ ಜಾಕೋಬ್ ಬೆಥೆಲ್ ಹಾಗೂ ಬೆನ್ ಡಕೆಟ್ ಈಗಾಗಲೇ ಅರ್ಧಶತಕ ಬಾರಿಸಿದ್ದು ಶತಕದ ಸನಿಹದಲ್ಲಿದ್ದಾರೆ. ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿಯಲ್ಲಿ ಭಾರತದ ಅನಾನುಭವಿ ಬೌಲಿಂಗ್ ವಿಭಾಗವನ್ನು ಸರಿಯಾಗಿ ದಂಡಿಸುತ್ತಿರುವ ಇಂಗ್ಲೆಂಡ್‌ನ ಆರಂಭಿಕರು ಮೈದಾನದಾದ್ಯಂತ ರನ್‌ಗಳ ಮಳೆ ಸುರಿಸುತ್ತಿದ್ದಾರೆ. ಇದರ ಪರಿಣಾಮವಾಗಿ ಇಂಗ್ಲೆಂಡ್‌ ತಂಡ 30 ಓವರ್​ಗಳ ಅಂತ್ಯಕ್ಕೆ ಯಾವುದೇ…

Read More

Parliament Monsoon Session 2026: ನಾಳೆಯಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ; ಎನ್​ಡಿಎ ಮುಂದಿದೆ ಹಲವು ಸವಾಲು – Kannada News | Parliament Monsoon Session 2026 to Be Held from July 20 to August 13

ನವದೆಹಲಿ, ಜುಲೈ 19: ಸಂಸತ್ತಿನ ಮುಂಗಾರು ಅಧಿವೇಶನವು (Monsoon Session 2026) ಜುಲೈ 20ರಿಂದ ಅಧಿಕೃತವಾಗಿ ಪ್ರಾರಂಭವಾಗಲಿದ್ದು, ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ಭಾರಿ ಸಂಘರ್ಷಕ್ಕೆ ವೇದಿಕೆ ಸಿದ್ಧವಾಗಿದೆ. ಕೇಂದ್ರ ಸರ್ಕಾರವು ಹಲವು ಪ್ರಮುಖ ಮಸೂದೆಗಳನ್ನು ಅಂಗೀಕರಿಸಲು ಸಜ್ಜಾಗಿದ್ದರೆ, ಇತ್ತ ವಿರೋಧ ಪಕ್ಷಗಳು ವಿವಿಧ ರಾಜಕೀಯ ಮತ್ತು ಆಡಳಿತಾತ್ಮಕ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಸಿದ್ಧತೆ ನಡೆಸಿವೆ. ಈ ಬಾರಿಯ ಮುಂಗಾರು ಅಧಿವೇಶನವು ಪೇಪರ್ ಲೀಕ್, ಭ್ರಷ್ಟಾಚಾರದ ಆರೋಪಗಳು ಮತ್ತು ಪಕ್ಷಾಂತರದ ವಿವಾದಗಳ ಹಿನ್ನೆಲೆಯಲ್ಲಿ…

Read More

‘ಜನ ನಾಯಗನ್’ ಬಿಡುಗಡೆ ಮುಂಚೆ ತಮಿಳುನಾಡು ಚಿತ್ರಮಂದಿರಗಳಿಗೆ ಎಚ್ಚರಿಕೆ – Kannada News | Jana Nayagan movie release, producer gave warnings to theater owners

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಈ ವರ್ಷದ ಮೊದಲ ತಿಂಗಳಲ್ಲೇ ಬಿಡುಗಡೆ ಆಗಬೇಕಿದ್ದ ಈ ಸಿನಿಮಾ ಹಲವಾರು ಅಡೆ-ತಡೆಗಳ ಬಳಿಕ ಕೊನೆಗೂ ಜುಲೈ 23 ರಂದು ರಿಲೀಸ್ ಆಗುತ್ತಿದೆ. ಸಿಎಂ ವಿಜಯ್ ಅವರ ಕೊನೆಯ ಸಿನಿಮಾ ಇದೆಂದು ಪ್ರಚಾರ ಮಾಡಲಾಗಿದ್ದ ಕಾರಣ, ಭಾರಿ ಸಂಖ್ಯೆಯ ಅಭಿಮಾನಿಗಳು ಸಿನಿಮಾ ನೋಡಲು ಮುಗಿಬೀಳುವ ಸಾಧ್ಯತೆ ಇದೆ. ಹೀಗಾಗಿ ಸಿನಿಮಾ ಬಿಡುಗಡೆಗೆ ಮುಂಚೆ ತಮಿಳುನಾಡಿನ ಚಿತ್ರಮಂದಿರಗಳಿಗೆ ಕೆಲವು ಶಿಸ್ತಿನ ಎಚ್ಚರಿಕೆಗಳನ್ನು…

Read More

IND vs ENG: ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿದ ಭಾರತ- ಇಂಗ್ಲೆಂಡ್‌ ಆಟಗಾರರು – Kannada News | IND vs ENG Lord’s: Black Armbands for Sir Garfield Sobers, Live Match Updates

ಭಾರತ ಮತ್ತು ಇಂಗ್ಲೆಂಡ್ (IND vs ENG) ನಡುವಿನ ಸರಣಿ ನಿರ್ಧಾರಕ ಪಂದ್ಯ ಲಾರ್ಡ್ಸ್‌ನಲ್ಲಿ (Lord’s) ಆರಂಭವಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್‌ ನಾಯಕ ಹ್ಯಾರಿ ಬ್ರೂಕ್ ಮೊದಲು ಬ್ಯಾಟಿಂಗ್‌ ಮಾಡಲು ನಿರ್ಧರಿಸಿದರು. ಇನ್ನು ಈ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಮೂರು ಬದಲಾವಣೆಗಳನ್ನು ಮಾಡಲಾಗಿದೆ. ಗಾಯದ ಸಮಸ್ಯೆಯಿಂದಾಗಿ ಈ ಪಂದ್ಯದಲ್ಲಿ ಬುಮ್ರಾ ಹಾಗೂ ಸುಂದರ್ ಆಡುತ್ತಿಲ್ಲ. ಹಾಗೆಯೇ ದುಬೆಯನ್ನು ತಂಡದಿಂದ ಕೈಬಿಡಲಾಗಿದೆ. ಅವರ ಜಾಗದಲ್ಲಿ ರಾಹುಲ್, ಅರ್ಷದೀಪ್ ಹಾಗೂ ಪ್ರಿನ್ಸ್ ಯಾದವ್ ಆಡುತ್ತಿದ್ದಾರೆ. ಪಂದ್ಯ ಆರಂಭಕ್ಕೂ…

Read More

ಗ್ರಾಹಕರಿಗೆ DND ಆಯ್ಕೆ ತೋರಿಸಿ, ಬ್ಲಾಕ್ಡ್ ಬ್ಯಾಡ್ಜ್ ಅಲ್ಲ; ಟ್ರೂಕಾಲರ್​ಗೆ ಸರ್ಕಾರ ನಿರ್ದೇಶನ – Kannada News | Trai directs Truecaller to Show DND Do Not Disturb choice, but not Frequently Blocked tag

ನವದೆಹಲಿ, ಜುಲೈ 19: ಟ್ರೂಕಾಲರ್ ಆಪ್‌ನಲ್ಲಿ ಇನ್‌ಕಮಿಂಗ್ ಕರೆಗಳಿಗೆ ತೋರಿಸುವ “Frequently Blocked” (ಅತಿಯಾಗಿ ಬ್ಲಾಕ್ ಮಾಡಲಾದ ನಂಬರ್) ಎಂಬ ಲೇಬಲ್ ಅಥವಾ ಟ್ಯಾಗ್‌ ಅನ್ನು ತೋರಿಸುವುದನ್ನು ನಿಲ್ಲಿಸುವಂತೆ ಟ್ರಾಯ್ (Trai) ಸೂಚಿಸಿದೆ. ಇಂತಹ ಟ್ಯಾಗ್‌ಗಳು ಬಳಕೆದಾರರಿಗೆ ಗೊಂದಲವನ್ನು ಉಂಟುಮಾಡಬಹುದು ಮತ್ತು ಕೆಲವು ಸಂದರ್ಭಗಳಲ್ಲಿ ನಿಜವಾದ (Genuine) ಕರೆಗಳನ್ನು ಸಹ ಬಳಕೆದಾರರು ಬ್ಲಾಕ್ ಮಾಡಲು ಕಾರಣವಾಗಬಹುದು ಎಂಬುದು ಟ್ರಾಯ್‌ನ ಆತಂಕ. ಈ ಟ್ಯಾಗ್‌ಗಳ ಬದಲಿಗೆ, ಬಳಕೆದಾರರಿಗೆ ಆ ಕರೆ ಅಥವಾ ನಂಬರ್ ಬಗ್ಗೆ ‘ಡೂ ನಾಟ್ ಡಿಸ್ಟರ್ಬ್’…

Read More

Karnataka Weather Forecast: ಬರಗಾಲ ಪರಿಸ್ಥಿತಿ ಮಧ್ಯೆ ಸಿಹಿ ಸುದ್ದಿ ನೀಡಿದ ಹವಾಮಾನ ಇಲಾಖೆ – Kannada News | IMD 5 Day Karnataka Weather Forecast: Heavy Rain Likely Till July 23; Coastal Area on High Alert

ಬೆಂಗಳೂರು, (ಜುಲೈ 19): ಕಳೆದ ಕೆಲ ದಿನಗಳಿಂದ ಕರ್ನಾಟಕದಲ್ಲಿ ಕೈಕೊಟ್ಟಿದ್ದ ವರುಣ ಶನಿವಾರ ಹಲವೆಡೆ ತಂಪೆರೆದಿದೆ. ಹೌದು.. ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣನ ಸಿಂಚನವಾಗಿದ್ದು, ಮುಂದಿನ ಐದು ದಿನಗಳ (ಜುಲೈ 19ದಿಂದ ಜು.23) ಕಾಲ ರಾಜ್ಯಾದ್ಯಂತ ಅಲ್ಲಲ್ಲಿ ಜೋರಾದ ಗಾಳಿ, ಗುಡುಗು, ಸಿಡಿಲು ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ. ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡಿನ ಹಲವು ಕಡೆಗಳಲ್ಲಿ ಮುಂದಿನ ಎರಡು ದಿನಗಳು ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ…

Read More

ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿಗೆ ಬಿಗ್ ರಿಲೀಫ್; ಆಫೀಸ್ ಧ್ವಂಸ ಕ್ರಮಕ್ಕೆ ಕೊಲ್ಕತ್ತಾ ಹೈಕೋರ್ಟ್ ತಡೆ – Kannada News | Big Relief for Abhishek Banerjee as High Court halts demolition of his office in Amtala

ಕೊಲ್ಕತ್ತಾ, ಜುಲೈ 19: ತೃಣಮೂಲ ಕಾಂಗ್ರೆಸ್ (TMC) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ (Abhishek Banerjee) ಅವರಿಗೆ ಕೊಲ್ಕತ್ತಾ ಹೈಕೋರ್ಟ್ ಇಂದು ದೊಡ್ಡ ರಿಲೀಫ್ ನೀಡಿದೆ. ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಅಮ್ತಾಲಾದಲ್ಲಿರುವ ಅಭಿಷೇಕ್ ಬ್ಯಾನರ್ಜಿ ಅವರ ಕಚೇರಿ ಕಟ್ಟಡದ ಧ್ವಂಸ ಕಾರ್ಯಕ್ಕೆ ನ್ಯಾಯಾಲಯ ತಡೆ ನೀಡಿದೆ. ಮುಂದಿನ ವಿಚಾರಣೆಯವರೆಗೆ ಅಥವಾ ಜುಲೈ ಅಂತ್ಯದವರೆಗೆ ಪ್ರಸ್ತುತ ಸ್ಥಿತಿಯನ್ನೇ ಕಾಯ್ದುಕೊಳ್ಳುವಂತೆ ನಿರ್ದೇಶಿಸಿದೆ. ಇದರಿಂದಾಗಿ ಅಭಿಷೇಕ್ ಬ್ಯಾನರ್ಜಿ ನಿಟ್ಟುಸಿರು ಬಿಡುವಂತಾಗಿದೆ. ಕೊಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿ ರಾಜಾ…

Read More