ಹೊಂಚುಹಾಕಿ ನಿಂತು ರೈಲು ಬರುತ್ತಿದ್ದಂತೆ ಪ್ರಯಾಣಿಕನನ್ನು ತಳ್ಳಿದ ಅಪರಿಚಿತ ವ್ಯಕ್ತಿ

ಹೊಂಚುಹಾಕಿ ನಿಂತು ರೈಲು ಬರುತ್ತಿದ್ದಂತೆ ಪ್ರಯಾಣಿಕನನ್ನು ತಳ್ಳಿದ ಅಪರಿಚಿತ ವ್ಯಕ್ತಿ

ಎಲೆಕ್ಟ್ರಿಕ್ ರೈಲಾಗಿರಬಹುದು ಅಥವಾ ಸಾಮಾನ್ಯ ರೈಲಾಗಿರಬಹುದು ರೈಲು ಬರುವ ಮುನ್ನ ಹಳಿಯಿಂದ ಅಂತರ ಕಾಯ್ದುಕೊಳ್ಳಲಾಗುತ್ತದೆ. ರೈಲಿಗಾಗಿ ಕಾಯುತ್ತಿದ್ದ ಪ್ರಯಾಣಿಕನನ್ನು ರೈಲು ಬಂದಾಕ್ಷಣ ಅಪರಿಚಿತ ವ್ಯಕ್ತಿಯೊಬ್ಬ ತಳ್ಳಿರುವ ವಿಡಿಯೋ ವೈರಲ್ ಆಗಿದೆ.ಅಮೆರಿಕದ ಸಿಯಾಟಲ್‌ನಲ್ಲಿರುವ ನಾರ್ತ್‌ಗೇಟ್ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಈ ಘಟನೆ ಮಾರ್ಚ್ 19 ರಂದು ನಡೆದಿರುವುದಾಗಿ ವರದಿಯಾಗಿದೆ. ಆರೋಪಿ ಅಲ್ಲಿಂದ ಓಡುವ ಮೊದಲು ಎರಡು ಬಾರಿ ಪ್ರಯಾಣಿಕನನ್ನು ತಳ್ಳಲು ಯತ್ನಿಸಿದ್ದಾನೆ. ಅದೃಷ್ಟವಶಾತ್ ಪ್ರಯಾಣಿಕ ತಪ್ಪಿಸಿಕೊಂಡಿದ್ದಾರೆ. ಪೊಲೀಸರು ಅಂತಿಮವಾಗಿ ಆರೋಪಿ 26 ವರ್ಷದ ಎಲಿಸಿಯೊ ಮೆಲೆಂಡೆಜ್‌ನನ್ನು ಬಂಧಿಸುವಲ್ಲಿ ಯಶಸ್ವಿಯಾದರು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Karnataka By Elections 2026: ಬೈ ಎಲೆಕ್ಷನ್ ಅಖಾಡದಲ್ಲಿಂದು ಸಿಎಂ ಮತಬೇಟೆ! ದಾವಣಗೆರೆ, ಬಾಗಲಕೋಟೆಯಲ್ಲಿ ಪ್ರಚಾರ

ದಾವಣಗೆರೆ, ಏಪ್ರಿಲ್ 06: ಕರ್ನಾಟಕದಲ್ಲಿ ಏಪ್ರಿಲ್ 1ರಂದು ಮತದಾನ ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ದಾವಣಗೆರೆ ದಕ್ಷಿಣವು ಹೈ ವೋಲ್ಟೇಜ್ ಕದನಕ್ಷೇತ್ರವಾಗಿ ಮಾರ್ಪಟ್ಟಿದೆ. ಇಂದು ಜಿಲ್ಲೆಗೆ ಆಗಮಿಸಲಿರುವ ಸಿಎಂ, ಕಾಂಗ್ರೆಸ್ ಅಭ್ಯರ್ಥಿ ಪರ ಬಿರುಸಿನ ಪ್ರಚಾರ ನಡೆಸಿ ಸಭೆ ಹಾಗೂ ರೋಡ್ ಶೋ ನಡೆಸಲಿದ್ದಾರೆ.

ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡದ ಕಾರಣಕ್ಕೆ ಸಚಿವ ಜಮೀರ್ ಅಹಮದ್ ಖಾನ್ ಪ್ರಚಾರದಿಂದ ದೂರ ಉಳಿದಿದ್ದಾರೆ ಎನ್ನಲಾಗಿತ್ತು. ಆದರೆ, ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ದಾವಣಗೆರೆಗೆ ಆಗಮಿಸಿದ ಜಮೀರ್, ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ನಿವಾಸಕ್ಕೆ ಭೇಟಿ ನೀಡಿದರು. ಜಂಟಿ ಸುದ್ದಿಗೋಷ್ಠಿ ನಡೆಸಿ, ತಮ್ಮಿಬ್ಬರ ನಡುವೆ ಯಾವುದೇ ಮುನಿಸು ಇಲ್ಲ ಎಂದು ಸ್ಪಷ್ಟಪಡಿಸಿದರು. 2028ರಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡುವ ಭರವಸೆ ನೀಡಲಾಗಿದೆ ಎಂದು ಜಮೀರ್ ತಿಳಿಸಿದರು. ಆದಾಗ್ಯೂ, ಅವರು ಮುಸ್ಲಿಂ ಬಹುಸಂಖ್ಯಾತ ಪ್ರದೇಶಗಳಲ್ಲಿ ಪ್ರಚಾರ ಮಾಡದೆ ವಾಪಸಾಗಿದ್ದು ಹಲವು ಚರ್ಚೆಗಳಿಗೆ ಕಾರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Source link

VIDEO: ಓಯೇ ಸರ್ಫರಾಝ್… ವಿರಾಟ್ ಕೊಹ್ಲಿ ನಡೆಗೆ ಭಾರೀ ಮೆಚ್ಚುಗೆ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಬದ್ಧ ವೈರಿಗಳ ಕದನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಭರ್ಜರಿ ಜಯ ಸಾಧಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್​ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 250 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ 207 ರನ್​ಗಳಿಸಿ 43 ರನ್​ಗಳಿಂದ ಸೋಲೊಪ್ಪಿಕೊಂಡಿತು. ಈ ಸೋಲು-ಗೆಲುವುಗಳ ನಡುವೆ ಕ್ರಿಕೆಟ್ ಅಭಿಮಾನಿಗಳ ಮನಗೆದ್ದಿದ್ದು ವಿರಾಟ್ ಕೊಹ್ಲಿ ಅವರ ಕ್ರೀಡಾ ಸ್ಫೂರ್ತಿ!

ಆರ್‌ಸಿಬಿ ನೀಡಿದ್ದ 251 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಸಿಎಸ್‌ಕೆ ತಂಡದ ಪರ ಸರ್ಫರಾಝ್ ಖಾನ್ ಏಕಾಂಗಿ ಹೋರಾಟ ನಡೆಸಿದ್ದರು. ಕೇವಲ 24 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಆರ್‌ಸಿಬಿ ಬೌಲರ್‌ಗಳಿಗೆ ನಡುಕ ಹುಟ್ಟಿಸಿದ್ದ ಸರ್ಫರಾಝ್  ಕೃನಾಲ್ ಪಾಂಡ್ಯ ಮುನ್ನುಗ್ಗಿ ಬಂದು ಹೊಡೆಯುವ ಯತ್ನದಲ್ಲಿ ಸ್ಟಂಪ್ ಔಟ್ ಆದರು.

ಹೀಗೆ ಔಟಾಗಿ ನಿರಾಸೆಯಿಂದ ಪೆವಿಲಿಯನ್ ಕಡೆಗೆ ಹೆಜ್ಜೆ ಹಾಕುತ್ತಿದ್ದ ಸರ್ಫರಾಝ್ ಖಾನ್ ಅವರನ್ನು ವಿರಾಟ್ ಕೊಹ್ಲಿ ಕೂಗಿ ಕರೆದಿದ್ದಾರೆ. ಸರ್ಫರಾಝ್ ತಿರುಗಿ ನೋಡಿದಾಗ, ಕೊಹ್ಲಿ ಚಪ್ಪಾಳೆ ತಟ್ಟುತ್ತಾ ‘ಥಮ್ಸ್ ಅಪ್’ (Thumbs-up) ತೋರಿಸಿ ಅವರ ಅಮೋಘ ಬ್ಯಾಟಿಂಗ್ ಅನ್ನು ಶ್ಲಾಘಿಸಿದ್ದಾರೆ.

ಎದುರಾಳಿ ತಂಡದ ಆಟಗಾರನಾಗಿದ್ದರೂ, ಒಬ್ಬ ಯುವ ಪ್ರತಿಭೆಯ ಹೋರಾಟವನ್ನು ವಿರಾಟ್ ಕೊಹ್ಲಿ ಗೌರವಿಸಿದ ರೀತಿ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಕೊಹ್ಲಿಯ ನಡೆಗೆ ಅಭಿಮಾನಿಗಳು ಬಹುಪರಾಕ್ ಅನ್ನುತ್ತಿದ್ದಾರೆ.

 

Source link

ಬಿಸಿಲಿನ ಬೇಗೆಗೆ ಕಬಿನಿ ನೀರಿನಲ್ಲಿ ‘ಯಂಗ್ ಟೈಗರ್’ ಕೂಲ್ ಕೂಲ್!

ಮೈಸೂರು, ಏ.6: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಏರುತ್ತಿದ್ದು, ಕೇವಲ ಮನುಷ್ಯರಿಗಷ್ಟೇ ಅಲ್ಲದೆ ಪ್ರಾಣಿಗಳಿಗೂ ಬಿಸಿಲ ಬೇಗೆ ತಟ್ಟಿದೆ. ಇದಕ್ಕೆ ಸಾಕ್ಷಿ ಎಂಬಂತೆ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲ್ಲೂಕಿನ ಪ್ರಸಿದ್ಧ ಕಬಿನಿ ಹಿನ್ನೀರಿನಲ್ಲಿ ಯಂಗ್ ಟೈಗರ್ (Young Tiger) ಒಂದು ನೀರಿನಲ್ಲಿ ಮುಳುಗಿ ವಿಶ್ರಮಿಸುತ್ತಿರುವ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಕಬಿನಿ ಹಿನ್ನೀರಿನಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಈ ಅದ್ಭುತ ದೃಶ್ಯ ಕಂಡುಬಂದಿದೆ. ಕೆಂಡದಂತಹ ಬಿಸಿಲಿನಿಂದ ಪಾರಾಗಲು ಈ ಯುವ ಹುಲಿಯು ನೀರಿನೊಳಗೆ ಮುಳುಗಿ ಅತ್ಯಂತ ತಂಪಾಗಿ ವಿಶ್ರಮಿಸುತ್ತಿತ್ತು. ಪ್ರವಾಸಿಗರು ಈ ದೃಶ್ಯವನ್ನು ತಮ್ಮ ಕ್ಯಾಮೆರಾಗಳಲ್ಲಿ ಸೆರೆಹಿಡಿದಿದ್ದು, ಪ್ರಕೃತಿ ಪ್ರೇಮಿಗಳ ಮನ ಗೆದ್ದಿದೆ. ಸಾಮಾನ್ಯವಾಗಿ ಹುಲಿಗಳು ನೀರಿನಲ್ಲಿ ಈಜುವುದು ಅಥವಾ ನೀರು ಕುಡಿಯುವುದು ಸಹಜ. ಆದರೆ, ಬಿಸಿಲಿನ ತಾಪಕ್ಕೆ ಈ ರೀತಿ ಆರಾಮವಾಗಿ ನೀರಿನಲ್ಲಿ ಕುಳಿತು ವಿಶ್ರಮಿಸುತ್ತಿರುವ ದೃಶ್ಯ ಅಪರೂಪದ್ದಾಗಿದೆ. ಕಬಿನಿಯ ನೈಸರ್ಗಿಕ ಸೌಂದರ್ಯದ ನಡುವೆ ಹುಲಿಯ ಈ ‘ಕೂಲ್’ ಅವತಾರ ಈಗ ಸೋಷಿಯಲ್ ಮೀಡಿಯಾದಲ್ಲಿ ಎಲ್ಲೆಡೆ ಹರಿದಾಡುತ್ತಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಗಳನ್ನು ಖುಷಿಯಾಗಿಡೋದು ನನ್ನ ಕರ್ತವ್ಯ, ವಿಚ್ಛೇದನ ಪಡೆದ ಮಗಳನ್ನು ವಾದ್ಯಗಳೊಂದಿಗೆ ಸ್ವಾಗತಿಸಿದ ನಿವೃತ್ತ ನ್ಯಾಯಾಧೀಶ

ಮೀರತ್, ಏಪ್ರಿಲ್ 06: ಮಗಳನ್ನು ಖುಷಿಯಾಗಿಡುವುದಕ್ಕಿಂತ ದೊಡ್ಡ ಕರ್ತವ್ಯ ಮತ್ತೊಂದಿಲ್ಲ ಎಂದು ಹೇಳುತ್ತಾ ವಿಚ್ಛೇದನ ಪಡೆದು ಮನೆಗೆ ಬಂದ ಮಗಳನ್ನು ನಿವೃತ್ತ ನ್ಯಾಯಾಧೀಶರೊಬ್ಬರು ವಾದ್ಯಗಳೊಂದಿಗೆ ಸ್ವಾಗತಿಸಿರುವ ಘಟನೆ ಉತ್ತರ ಪ್ರದೇಶದ ಮೀರತ್​ನಲ್ಲಿ ನಡೆದಿದೆ. ತಂದೆ ಮಗಳು ಮನೆಗೆ ಬಂದಿದ್ದನ್ನು ಕಳಂಕ ಎಂದು ಪರಿಗಣಿಸಿಲ್ಲ. ಬದಲಾಗಿ ಆಕೆಯ ನಿರ್ಧಾರಕ್ಕೆ ಬೆಂಬಲ ನೀಡಿದ್ದಾರೆ.

ಮೀರತ್ ಕೌಟುಂಬಿಕ ನ್ಯಾಯಾಲಯದ ಹೊರಗೆ, ಸಂಬಂಧಿಕರು ನೃತ್ಯ ಮಾಡಿ ಸಿಹಿತಿಂಡಿಗಳನ್ನು ವಿತರಿಸಿ ಡೋಲು ಬಾರಿಸುತ್ತಾ ಮನೆಗೆ ಕರೆದೊಯ್ಯಲಾಯಿತು.ಐ ಲವ್ ಮೈ ಡಾಟರ್ ಎನ್ನುವ ಚಿತ್ರವನ್ನು ಕಪ್ಪು ಟಿ ಶರ್ಟ್​ನಲ್ಲಿ ಮುದ್ರಿಸಲಾಗಿತ್ತು. ಏಪ್ರಿಲ್ 4 ರಂದು ನ್ಯಾಯಾಲಯವು ಅಧಿಕೃತವಾಗಿ ವಿಚ್ಛೇದನವನ್ನು ನೀಡಿದ ನಂತರ ಅವರು ಮನೆಗೆ ಹಿಂದಿರುಗಿದಾಗ ಅವರ ತಂದೆ ಆಕೆಯನ್ನು ಸಂತಸದಿಂದ ಬರಮಾಡಿಕೊಂಡರು.

ಪ್ರಣೀತಾ ಡಿಸೆಂಬರ್ 2018 ರಲ್ಲಿ ಸೇನಾ ಮೇಜರ್ ಗೌರವ್ ಅಗ್ನಿಹೋತ್ರಿ ಅವರನ್ನು ವಿವಾಹವಾಗಿದ್ದರು. ಮಾನಸಿಕ, ಭಾವನಾತ್ಮಕ ಮತ್ತು ದೈಹಿಕ ಕಿರುಕುಳವನ್ನು ಎದುರಿಸುತ್ತಿದ್ದರು ಎನ್ನಲಾಗಿದೆ. ಮಗ ಹುಟ್ಟಿದ ಮೇಲೂ ಪರಿಸ್ಥಿತಿ ಸುಧಾರಿಸಿರಲಿಲ್ಲ. ಅಂತಿಮವಾಗಿ ಗಂಡನನ್ನು ಬಿಡುವ ನಿರ್ಧಾರ ಮಾಡಿದ್ದರು. ಅದಕ್ಕೆ ತವರು ಮನೆಯಿಂದ ಬೆಂಬಲವೂ ಸಿಕ್ಕಿತ್ತು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

RCB ತಂಡದ ಅಮೋಘ ಗೆಲುವಿನ ಬೆನ್ನಲ್ಲೇ ಐಪಿಎಲ್ ಅಂಕ ಪಟ್ಟಿ ಪ್ರಕಟ

Source link

ಬಾರ್​​​ನಲ್ಲಿ ಕಿರಿಕ್; ನಟ ನಿರಂಜನ್​ ಮೇಲೆ ಬಿಯರ್ ಬಾಟಲ್​​ನಿಂದ ಹಲ್ಲೆ

ಕನ್ನಡ ಚಿತ್ರರಂಗದಲ್ಲಿ ಈಗತಾನೇ ಗುರುತಿಸಿಕೊಳ್ಳುತ್ತಿರುವ ನಟ ನಿರಂಜನ್ ಮೇಲೆ ಅಪರಿಚಿತ ವ್ಯಕ್ತಿಗಳು ಹಲ್ಲೆ ಮಾಡಿದ್ದಾರೆ. ಬೆಂಗಳೂರಿನ ಬಾರ್ ಒಂದರಲ್ಲಿ ನಡೆದ ಕಿರಿಕ್​ ಮಿತಿ ಮೀರಿದ್ದು, ಬಿಯರ್ ಬಾಟಲಿಯಿಂದ ನಟನ ಮೇಲೆ ಹಲ್ಲೆ ಮಾಡಲಾಗಿದೆ. ಘಟನೆ ಸಂಬಂಧ ಸುಬ್ರಹ್ಮಣ್ಯಪುರ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಮಾರ್ಚ್ 28ರಂದು ನಡೆದಿರುವ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ದರ್ಶನ್ ಅಭಿನಯದ ‘ಒಡೆಯ’ (2019) ಸಿನಿಮಾದಲ್ಲಿ ನಿರಂಜನ್ ನಟಿಸಿದ್ದರು. ಈ ಸಿನಿಮಾದಲ್ಲಿ ದರ್ಶನ್ ಸಹೋದರನ ಪಾತ್ರದಲ್ಲಿ ಅವರು ಕಾಣಿಸಿಕೊಂಡರು. ಈ ಪಾತ್ರ ಅವರ ವೃತ್ತಿ ಜೀವನಕ್ಕೆ ಸಾಕಷ್ಟು ಮೈಲೇಜ್ ನೀಡಿತು. ಈಗ ಅವರು ವಿವಾದದ ಮೂಲಕ ಸುದ್ದಿ ಆಗಿದ್ದಾರೆ.

ಕೆಲಸದ ನಿಮಿತ್ತ ನಟ ಯಶಸ್ ಸೂರ್ಯ ನಿವಾಸಕ್ಕೆ ನಿರಂಜನ್ ತೆರಳಿದ್ದರು. ಭೇಟಿ ಬಳಿಕ ಮಂತ್ರಿ ಅಲೈಯನ್ಸ್ ಬಳಿಯ ಬಾರ್​ಗೆ ನಿರಂಜನ್ ಬಂದಿದ್ದರು. ನೀರು‌ ಕುಡಿಯಲೆಂದು ಬಾರ್​ಗೆ ಬಂದಿದ್ದಾಗಿ ನಿರಂಜನ್ ಹೇಳಿಕೊಂಡಿದ್ದಾರೆ. ಈ ವೇಳೆ ಬಾರ್​ ಅಲ್ಲಿ ಇದ್ದ ವ್ಯಕ್ತಿಯೋರ್ವ ನಿರಂಜನ್​ ತಳ್ಳಿದ್ದಕ್ಕೆ ಗಲಾಟೆ ಶುರುವಾಗಿದೆ.

ಇದನ್ನೂ ಓದಿ: ಇದು ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ನಿರ್ದೇಶಕರ ಸ್ಪಷ್ಟನೆ

ಈ ವೇಳೆ ನಿರಂಜನ್ ನಟ ಎಂಬ ವಿಷಯ ಅಪರಿಚಿತ ವ್ಯಕ್ತಿಗೆ ಗೊತ್ತಾಗಿದೆ. ‘ನೀನು ನಟನಾದರೆ ನನಗೇನು’ ಎಂದು ಅಪರಿಚಿತ ವ್ಯಕ್ತಿ ಬೈದಿದ್ದ. ಈ ವಿಷಯದ ಬಗ್ಗೆ ಬಾರ್ ಮಾಲೀಕರ ಜೊತೆ ಮಾತನಾಡುವಾಗ ಬಂದ ನಾಲ್ವರು ನಿರಂಜನ್​ ಜೊತೆ ಮತ್ತೆ ಕಿರಿಕ್ ಮಾಡಿಕೊಂಡಿದ್ದಾರೆ. ಈ ವೇಳೆ ದುಷ್ಕರ್ಮಿಗಳು ಬಿಯರ್​ ಬಾಟಲಿಯಿಂದ ನಟನ ತಲೆಗೆ ಹೊಡೆದು ಹಲ್ಲೆ ಮಾಡಿದ್ದಾರೆ. ಘಟನೆ ಸಂಬಂಧ ಸುಬ್ರಹ್ಮಣ್ಯಪುರ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.
2017ರ ‘ಜಲ್ಸಾ’ (2017) ಚಿತ್ರದ ಮೂಲಕ ನಿರಂಜನ್ ಬಣ್ಣದ ಲೋಕಕ್ಕೆ ಕಾಲಿಟ್ಟರು. ನಂತರ ಕೆಲ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ‘ಒಡೆಯ’ ಚಿತ್ರದ ಪಾತ್ರಕ್ಕೆ ಮೆಚ್ಚುಗೆ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಸಚಿವ ಕೆ. ಹೆಚ್ ಮುನಿಯಪ್ಪ ನಿವಾಸಕ್ಕೆ ಮುತ್ತಿಗೆ ಹಾಕಿದ ಆಟೋ ಚಾಲಕರು ! ಸಚಿವ ಹೇಳಿದ್ದೇನು?

ಬೆಂಗಳೂರು, ಏಪ್ರಿಲ್ 06: ನಗರದಲ್ಲಿ ಎಲ್​ಪಿಜಿ ಗ್ಯಾಸ್ ಸಮಸ್ಯೆ (LPG gas crisis) ಹೋಟೆಲ್ ಉದ್ಯಮಕ್ಕಷ್ಟೆ ಅಲ್ಲದೆ ಇದೀಗ ಆಟೋ ಚಾಲಕರ ದುಡಿಮೆ ಮೇಲೂ ಹೊಡೆತ ಕೊಟ್ಟಿದೆ. ಗಂಟೆಗಟ್ಟಲೆ ಆಟೋಗೆ ಗ್ಯಾಸ್ ತುಂಬಿಸಲು ಕಾದು ಕಾದು ಸುಸ್ತಾಗಿರುವ ಚಾಲಕರು ಇಂದು ಆಹಾರ ಸಚಿವ ಕೆ. ಹೆಚ್ ಮುನಿಯಪ್ಪ ಅವರ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.

ಗ್ಯಾಸ್ ಕೊಡಿಸಲೇಬೇಕು ಎಂದ ಚಾಲಕರು

ಹೆಬ್ಬಾಳದ ಸಂಜಯನಗರದಲ್ಲಿರುವ ಸಚಿವರ ಮನೆ ಎದುರು ಜಮಾಯಿಸಿದ ಆಟೋ ಚಾಲಕರು ಗ್ಯಾಸ್ ಕೊಡಬೇಕು ಎಂದು ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಹಲವೆಡೆ ಆಟೋಗಳಿಗೆ ಅಗತ್ಯವಾದ LPG ಗ್ಯಾಸ್ ಲಭ್ಯವಾಗದೇ ಇರುವುದರಿಂದ ಜೀವನೋಪಾಯಕ್ಕೆ ತೊಂದರೆ ಉಂಟಾಗಿದೆ ಎಂದು ಚಾಲಕರು ಅಳಲು ತೋಡಿಕೊಂಡಿದ್ದಾರೆ.

ಗ್ಯಾಸ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ ಎಂದ ಸಚಿವ

ಪ್ರತಿಭಟನಾಕಾರರ ಜೊತೆ ಮಾತನಾಡಿದ ಸಚಿವ ಮುನಿಯಪ್ಪ, ಕೇಂದ್ರ ಸರ್ಕಾರದಿಂದ ಪ್ರತಿದಿನ ಸುಮಾರು 3 ಸಾವಿರ ಸಿಲಿಂಡರ್‌ಗಳನ್ನು ಒದಗಿಸಲಾಗುತ್ತಿದ್ದು, ಪೂರೈಕೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ ಖಾಸಗಿ ಗ್ಯಾಸ್ ಬಂಕ್‌ಗಳಲ್ಲಿ ಹೆಚ್ಚುವರಿ ದರ ವಸೂಲಿ ನಡೆಯುತ್ತಿರುವ ಬಗ್ಗೆ ಮಾಹಿತಿ ದೊರೆತಿದ್ದು, ಸಂಬಂಧಪಟ್ಟ ಬಂಕ್ ಮಾಲೀಕರನ್ನು ಕರೆದು ಚರ್ಚೆ ನಡೆಸುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ ಕಿಲೋಮೀಟರ್‌ಗೆ ಕೇವಲ 50 ಪೈಸೆ ಖರ್ಚು! ಎಲ್‌ಪಿಜಿ ಬೆಲೆ ಏರಿಕೆ ನಡುವೆ ಗಮನ ಸೆಳೆಯುತ್ತಿದೆ ಎಲೆಕ್ಟ್ರಿಕ್ ಆಟೋಗಳ ಮ್ಯಾಜಿಕ್

ಆಟೋ ಚಾಲಕರಿಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದ ಸಚಿವರು, ಏಪ್ರಿಲ್ 10ರಂದು ಅಧಿಕಾರಿಗಳು ಮತ್ತು ಪೊಲೀಸರ ಜೊತೆ ಸಭೆ ನಡೆಸಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವುದಾಗಿ ಹೇಳಿದರು. ಇದೇ ವೇಳೆ, ಇಂದು ಮಧ್ಯಾಹ್ನದ ನಂತರವೂ ಅಧಿಕಾರಿಗಳ ಜೊತೆ ಚರ್ಚೆ ನಡೆಸುವುದಾಗಿ ಅವರು ತಿಳಿಸಿದರು. ಪ್ರತಿಭಟನೆ ವೇಳೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಟ್ಟಿದ್ದಾರೆ. ವಿವಿಧ ಆಟೋ ಚಾಲಕರ ಸಂಘಟನೆಗಳು ಈ ಸಮಸ್ಯೆ ಪರಿಹಾರವಾಗದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಎಚ್ಚರಿಕೆ ನೀಡಿವೆ.

ಸಚಿವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಪೀಸ್ ಆಟೋ ಸಂಘಟನೆಯ ಅಧ್ಯಕ್ಷ ರಘು, ಸರ್ಕಾರ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಸಚಿವರು ತೆರಳುವ ಎಲ್ಲೆಡೆ ಕಪ್ಪು ಬಾವುಟ ಪ್ರದರ್ಶನ ಮಾಡುವುದಾಗಿ ಹಾಗೂ ತೇಜಸ್ವಿ ಸೂರ್ಯ ಸೇರಿದಂತೆ ಸಂಸದರ ಮನೆಗಳಿಗೂ ಮುತ್ತಿಗೆ ಹಾಕುವುದಾಗಿ ಎಚ್ಚರಿಸಿದ್ದಾರೆ.

ವರದಿ: ಲಕ್ಷ್ಮಿ ನರಸಿಂಹ, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಸ್ನೇಹಿತನ ಮದುವೆಗೆ ಬಂದಿದ್ದ ಬೆಂಗಳೂರಿನ ಐಟಿ ಉದ್ಯೋಗಿ ಭದ್ರಾ ನದಿಪಾಲು!

ಚಿಕ್ಕಮಗಳೂರು, ಏ.6: ಜಿಲ್ಲೆಯ ನರಸಿಂಹರಾಜಪುರ (ಎನ್.ಆರ್.ಪುರ) ತಾಲ್ಲೂಕಿನ ಬನ್ನೂರು ಗ್ರಾಮದ ಬಳಿ ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಐಟಿ ಉದ್ಯೋಗಿಯೊಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಗದಗ ಮೂಲದ, ಬೆಂಗಳೂರಿನ ಖಾಸಗಿ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ್ (27) ಎಂದು ಗುರುತಿಸಲಾಗಿದೆ.

ಅಭಿಷೇಕ್ ಅವರು ತಮ್ಮ ಸ್ನೇಹಿತನ ಮದುವೆಯಲ್ಲಿ ಪಾಲ್ಗೊಳ್ಳಲು ಸ್ನೇಹಿತರ ಜತೆ ಸೇರಿ ಬಾಳೆಹೊನ್ನೂರು ಸಮೀಪದ ಬನ್ನೂರು ಗ್ರಾಮಕ್ಕೆ ಬಂದಿದ್ದರು. ಸ್ನೇಹಿತರೊಂದಿಗೆ ಸ್ಥಳೀಯ ಹೋಂ ಸ್ಟೇನಲ್ಲಿ ವಾಸ್ತವ್ಯ ಹೂಡಿದ್ದ ಇವರು, ಇಂದು ಬೆಳಿಗ್ಗೆ ಭದ್ರಾ ನದಿಗೆ ಈಜಲು ತೆರಳಿದ್ದರು. ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಅಭಿಷೇಕ್ ನಾಪತ್ತೆಯಾಗಿದ್ದರು.

ಇದನ್ನೂ ಓದಿ: ಸಿಗರೇಟ್ ವಿಚಾರವಾಗಿ ಎರಡು ಗುಂಪಿನ ನಡುವೆ ಹೊಡೆದಾಟ! ಓರ್ವ ಸಾವು

ಯುವಕ ನಾಪತ್ತೆಯಾದ ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಸ್ಥಳೀಯರು ಹುಡುಕಾಟ ನಡೆಸಿದ್ದರು. ಗಂಟೆಗಳ ಕಾಲ ನಡೆಸಿದ ಕಾರ್ಯಾಚರಣೆಯ ನಂತರ, ಬನ್ನೂರು ಗ್ರಾಮದ ಸಮೀಪದ ನದಿಯಲ್ಲೇ ಅಭಿಷೇಕ್ ಅವರ ಮೃತದೇಹ ಪತ್ತೆಯಾಗಿದೆ. ಮದುವೆ ಸಂಭ್ರಮದಲ್ಲಿದ್ದ ಸ್ನೇಹಿತರು ಮತ್ತು ಕುಟುಂಬದವರಲ್ಲಿ ಈ ಘಟನೆ ತೀವ್ರ ಶೋಕವನ್ನುಂಟು ಮಾಡಿದೆ. ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Rajat Patidar: ಒತ್ತಡಕ್ಕೆ ಒಳಗಾದ್ರೆ ನಾನು ಅವರತ್ತ ನೋಡುತ್ತೇನೆ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 11ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಭರ್ಜರಿ ಜಯ ಸಾಧಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 20 ಓವರ್​ಗಳಲ್ಲಿ 250 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ 19.4 ಓವರ್​ಗಳಲ್ಲಿ 207 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಆರ್​ಸಿಬಿ ತಂಡವು 43 ರನ್​ಗಳ ಜಯ ಸಾಧಿಸಿತು.

ಈ ಗೆಲುವಿನ ಬಳಿಕ ಮಾತನಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದಾರ್, ತಂಡ ಸಾಂಘಿಕ ಪ್ರದರ್ಶನದ ಬಗ್ಗೆ ಮೆಚ್ಚುಗೆಗಳನ್ನು ವ್ಯಕ್ತಪಡಿಸಿದ್ದಾರೆ.

“ಆರಂಭದಲ್ಲಿ ಪಿಚ್ ಸ್ವಲ್ಪ ನಿಧಾನಗತಿಯಲ್ಲಿತ್ತು. ಆದರೆ ವಿರಾಟ್ ಭಾಯ್ ಮತ್ತು ಫಿಲ್ ಸಾಲ್ಟ್ ಉತ್ತಮ ಆರಂಭ ನೀಡಿದರು. ಅವರ ಬ್ಯಾಟಿಂಗ್ ಅದ್ಭುತವಾಗಿತ್ತು,” ಎಂದು ರಜತ್ ಶ್ಲಾಘಿಸಿದರು.

ಇನ್ನು 13ನೇ ಓವರ್ ನಂತರ ಪಂದ್ಯದ ವೇಗವನ್ನು ಹೆಚ್ಚಿಸಿದ ಬಗ್ಗೆ ಕೇಳಿದಾಗ, ಬೌಲರ್‌ಗಳ ಮೇಲೆ ಒತ್ತಡ ಹೇರುವುದು ತಮ್ಮ ಗುರಿಯಾಗಿತ್ತು. ಅದರಂತೆ ನಾನು ಹಾಗೂ ಟಿಮ್ ಡೇವಿಡ್ ಬಿರುಸಿನ ಬ್ಯಾಟಿಂಗ್ ಮಾಡಿದೆವು ಎಂದರು.

ವಿಶೇಷವಾಗಿ ಟಿಮ್ ಡೇವಿಡ್ ಅವರ ಬ್ಯಾಟಿಂಗ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಪಾಟಿದಾರ್, “ಟಿಮ್ ಡೇವಿಡ್ ವಿಶ್ವದ ಅತ್ಯುತ್ತಮ ಫಿನಿಶರ್‌ಗಳಲ್ಲಿ ಒಬ್ಬರು. ಅವರು ಹೊಡೆದ 106 ಮೀಟರ್‌ಗಳ ಬೃಹತ್ ಸಿಕ್ಸರ್ ಅನ್ನು ನಾನು ನಾನ್-ಸ್ಟ್ರೈಕರ್ ತುದಿಯಿಂದ ಎಂಜಾಯ್ ಮಾಡಿದೆ. ಅವರು ಕಳೆದ ವರ್ಷವೂ ಉತ್ತಮವಾಗಿ ಆಡಿದ್ದರು, ಅವರ ಸ್ಥಿರತೆ ತಂಡಕ್ಕೆ ದೊಡ್ಡ ಬಲ,” ಎಂದರು.

ಬೌಲರ್‌ಗಳ ಶಿಸ್ತುಬದ್ಧ ಪ್ರದರ್ಶನ:

ತಂಡದ ಬೌಲಿಂಗ್ ವಿಭಾಗದ ಬಗ್ಗೆ ಮಾತನಾಡುತ್ತಾ, ಜೇಕಬ್ ಡಫಿ ಅವರ ಔಟ್‌ಸ್ವಿಂಗರ್‌ಗಳು ಮತ್ತು ಅವರು ಪಡೆದ 3 ವಿಕೆಟ್‌ಗಳು ತಂಡವನ್ನು ಗೆಲುವಿನ ಹತ್ತಿರ ತಂದವು.

ಡೆತ್ ಓವರ್‌ಗಳಲ್ಲಿ ಭುವಿ (ಭುವನೇಶ್ವರ್ ಕುಮಾರ್) ಮತ್ತು ಅಭಿನಂದನ್ ಎಸೆದ ಯಾರ್ಕರ್ಸ್‌ಗಳು ನೋಡಲು ಅದ್ಭುತವಾಗಿದ್ದವು.

ಅದರಲ್ಲೂ ನಾನು ಒತ್ತಡಕ್ಕೆ ಒಳಗಾದರೆ ಯಾವಾಗಲೂ ಕೃನಾಲ್ ಪಾಂಡ್ಯರತ್ತ ನೋಡುತ್ತೇನೆ.  ತಂಡಕ್ಕೆ ವಿಕೆಟ್ ಅಗತ್ಯವಿದ್ದಾಗ ಯಾವಾಗಲೂ ನಾನು ಕೆ.ಪಿ (ಕೃನಾಲ್ ಪಾಂಡ್ಯ) ಕಡೆ ಮುಖ ಮಾಡುತ್ತೇನೆ. ಏಕೆಂದರೆ ಅವರ ಮೇಲೆ ನನಗೆ ಅತೀವ ನಂಬಿಕೆಯಿದೆ ಎಂದು ರಜತ್ ಪಾಟೀದಾರ್ ತಿಳಿಸಿದರು.

ಇನ್ನು ಸುಯಶ್ ಶರ್ಮಾ ಅವರ ನಾಲ್ಕು ಓವರ್‌ಗಳ ಶಿಸ್ತುಬದ್ಧ ಬೌಲಿಂಗ್ ಮತ್ತು ರೊಮಾರಿಯೋ ಶೆಫರ್ಡ್ ಅವರ ಒಂದು ಓವರ್‌ನ ಸಾಂಘಿಕ ಪ್ರಯತ್ನ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿತು ಎಂದು ಇದೇ ವೇಳೆ ರಜತ್ ಪಾಟಿದಾರ್ ಸ್ಮರಿಸಿದರು.

ಮುಂದಿನ ಪಂದ್ಯಗಳತ್ತ ಚಿತ್ತ:

ಬ್ಯಾಕ್ ಟು ಬ್ಯಾಕ್ ಗೆಲುವುಗಳೊಂದಿಗೆ ಆರ್​ಸಿಬಿ ತಂಡದ ಎಲ್ಲಾ ಆಟಗಾರರು ಈಗ ಉತ್ತಮ ಮಾನಸಿಕ ಸ್ಥಿತಿಯಲ್ಲಿದ್ದಾರೆ ಮತ್ತು ಫಾರ್ಮ್‌ನಲ್ಲಿದ್ದಾರೆ. ಮುಂದಿನ ಪಂದ್ಯಗಳಲ್ಲೂ ಇದೇ ಉತ್ಸಾಹದೊಂದಿಗೆ ಕಣಕ್ಕಿಳಿಯಲಿದ್ದೇವೆ ಎಂದು ನಾಯಕ ರಜತ್ ಪಾಟಿದಾರ್ ಇದೇ ವೇಳೆ ತಿಳಿಸಿದ್ದಾರೆ.

ಇದನ್ನೂ ಓದಿ: ಐಪಿಎಲ್​ನಲ್ಲಿ ಯಾರಿಂದಲೂ ಸಾಧ್ಯವಾಗದ ದಾಖಲೆ ಬರೆದ ಸರ್ಫರಾಝ್ ಖಾನ್

ಅಂದಹಾಗೆ ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಏಪ್ರಿಲ್ 10 ರಂದು ಆಡಲಿದೆ. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಎದುರಾಳಿ ರಾಜಸ್ಥಾನ್ ರಾಯಲ್ಸ್. ಈ ಪಂದ್ಯದಲ್ಲೂ ಗೆಲ್ಲುವ ಮೂಲಕ ಆರ್​ಸಿಬಿ ಹ್ಯಾಟ್ರಿಕ್ ಗೆಲುವು ತನ್ನದಾಗಿಸಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

 

Source link

Exit mobile version