ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆ ಶಿವಕುಮಾರ್​​ರಿಂದ ದೀರ್ಘದಂಡ ನಮಸ್ಕಾರ – Kannada News

ಬೆಂಗಳೂರು, ಜೂನ್​​ 03: ಮುಖ್ಯಮಂತ್ರಿ ಆದ ನಂತರ ಮೊದಲ ಬಾರಿಗೆ ವಿಧಾನಸೌಧಕ್ಕೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಂಬೇಡ್ಕರ್ ಪ್ರತಿಮೆಗೆ ನಮಿಸಿ ಪುಷ್ಪಾರ್ಚನೆ ಮಾಡಿದ್ದಾರೆ. ಬಸವಣ್ಣನ ಫೋಟೋಗೆ ನಮಿಸಿ ಪುಷ್ಪಾರ್ಚನೆ ಮಾಡಿದ ಡಿಕೆಶಿ, ಕೆಂಪೇಗೌಡರ ಮತ್ತು ಜವಾಹರ್ ಲಾಲ್ ನೆಹರು ಅವರು ಪ್ರತಿಮೆಗಳಿಗೂ ನಮಿಸಿ ಪುಷ್ಪಾರ್ಚನೆ ಮಾಡಿದ್ದಾರೆ. ಉತ್ತರ ಬಾಗಿಲಿನಿಂದ ವಿಧಾನಸೌಧ ಪ್ರವೇಶಿಸಿದ ಸಿಎಂ ಡಿಕೆಶಿ, ವಿಧಾನಸೌಧದ ಮೆಟ್ಟಿಲುಗಳಿಗೆ ದೀರ್ಘದಂಡ ನಮಸ್ಕಾರ ಮಾಡಿದ ಬಳಿಕ ಒಳಗೆ ಪ್ರವೆಶಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ರಾಜೀನಾಮೆ, ಜೈಲಿನಿಂದ ಬಂದು 6 ವರ್ಷ ಪಕ್ಷ ಸಂಘಟಿಸಿದ್ಹೇಗೆ? – Kannada News

ಬೆಂಗಳೂರು, (ಜೂನ್ 03): ಡಿಕೆ ಶಿವಕುಮಾರ್ (DK Shivakumar) ಅವರು ಕರ್ನಾಟಕ 25ನೇ ಮುಖ್ಯಮಂತ್ರಿಯಾಗಿ ಇಂದು (ಜೂನ್ 03) ಪ್ರಮಾಣವಚನ ಸ್ವೀಕರಿಸಿದ್ದು, ಇದರೊಂದಿಗೆ ರಾಜ್ಯದಲ್ಲಿ ಡಿಕೆಶಿ ಯುಗಾರಂಭವಾಗಿದೆ. ಸತತ ಆರು ವರ್ಷಗಳ ಕಾಲ ಕರ್ನಾಟಕ ಪ್ರದೇಶ ಕಾಂಗ್ರೆಸ್(ಕೆಪಿಸಿಸಿ) ಅಧ್ಯಕ್ಷರಾಗಿ ಕಾಲಿಚಕ್ರ ಕಟ್ಟಿಕೊಂಡವರಂತೆ ರಾಜ್ಯಾದ್ಯಂತ ಓಡಾಡಿ ಪಕ್ಷ ಸಂಘಟನೆ ಮಾಡಿದ್ದರು. ಅಲ್ಲದೇ 2023ರಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಅದರ ಪ್ರತಿಫಲ ಇದೀಗ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಹೀಗಾಗಿ ಡಿಕೆ ಶಿವಕುಮಾರ್ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್(ಕೆಪಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜೀನಾಮೆ ಪತ್ರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರಿಗೆ ರವಾನಿಸಿದ್ದಾರೆ.

ಮುಖ್ಯಾಂಶಗಳು

  • ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆ‌ ಶಿವಕುಮಾರ್ ರಾಜೀನಾಮೆ
  • ಕರ್ನಾಟಕದ ಮುಖ್ಯಮಂತ್ರಿಯಾಗಿದ್ದರಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೊರೆದ ಡಿಕೆಶಿ
  • 6 ವರ್ಷ ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಿಕೆ ಶಿವಕುಮಾರ್ ರಾಜೀನಾಮೆ ಪತ್ರ ಎಐಸಿಸಿಗೆ ರವಾನೆ

ಡಿಕೆಶಿಯ 6 ವರ್ಷಗಳ ಪಯಣ ಹೇಗಿತ್ತು?

2020ರ ಜುಲೈ 2ರಂದು ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದು, ಬರೋಬ್ಬರಿ 6 ವರ್ಷ ಪೂರೈಸಿದ್ದಾರೆ. ಆದ್ರೆ, ಕೆಪಿಸಿಸಿ ಅಧ್ಯಕ್ಷರಾದ ಆರಂಭದಲ್ಲಿ ಡಿಕೆಶಿ ಪಾಲಿಗೆ ಹೂವಿನ ಹಾಸಿಗೆ ಆಗಿರಲಿಲ್ಲ.ಕೆಪಿಸಿಸಿ ಚುಕ್ಕಾಣಿ ವಹಿಸಿಕೊಂಡ ಸಂದರ್ಭದಲ್ಲಿ ವಾತಾವರಣ ಸುಗಮವಾಗಿರಲಿಲ್ಲ. ಕೋವಿಡ್ ಸಂಕಷ್ಟದ ಸಮಯ ಅದಾಗಿತ್ತು. ಅದಕ್ಕೂ ಮೊದಲು ಅವರ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪವೂ ಇತ್ತು. ಸಿಬಿಐ, ಇಡಿ ತನಿಖೆಗಳು ನಡೆಯುತ್ತಿದ್ದವು. ತಿಹಾರ್ ಜೈಲು ವಾಸ ಮುಗಿಸಿ ಬಂದ ಅವರಿಗೆ ಎಐಸಿಸಿ ಸೂಚನೆಯಂತೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಲಾಗಿತ್ತು.

ಇದನ್ನೂ ಓದಿ: CM DK Shivakumar: ಡಿ.ಕೆ. ಶಿವಕುಮಾರ್​ ಎಂಬ ಹೆಸರಿನವನಾದ ನಾನು…, ಕರ್ನಾಟಕದ 25ನೇ ಸಿಎಂ ಆಗಿ ಡಿಕೆಶಿ ಪ್ರಮಾಣವಚನ

ರಾಜ್ಯದಲ್ಲಿ ಅಂದು ಕಾಂಗ್ರೆಸ್‌ನಲ್ಲಿ ಬಣ ರಾಜಕೀಯದ ಪರಿಣಾಮವನ್ನು ಡಿಕೆಶಿ ಎದುರಿಸಬೇಕಾಗಿತ್ತು. ಆರೋಪ ಹೊತ್ತವರಿಗೆ ಅಧ್ಯಕ್ಷ ಸ್ಥಾನ ಏಕೆ ಎಂಬ ಪ್ರಶ್ನೆಯೂ ಉದ್ಭವಿಸಿತ್ತು. ಈ ಸವಾಲಿನ ನಡುವೆಯೂ ಡಿಕೆಶಿ ಕೆಪಿಸಿಸಿಗೆ ಹೊಸ ಆಯಾಮ ನೀಡಿದರು. ಗಮನ ಸೆಳೆಯುವಂತಹ ಕಾರ್ಯಕ್ರಮಗನ್ನು ಹಮ್ಮಿಕೊಂಡರು. ಪಕ್ಷ ಸಂಘಟನೆ, ಕಾರ್ಯಕರ್ತರನನ್ನು ನಿಭಾಯಿಸುವಲ್ಲಿ , ಕಚೇರಿಗೆ ಕಾರ್ಯಕರ್ತರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೇ ವಿರೋಧ ಪಕ್ಷಗಳು ಆಡಳಿತದಲ್ಲಿದ್ದಾಗ ಸರ್ಕಾರದ ವೈಫಲ್ಯವನ್ನು ತಮ್ಮದೇ ಆದ ಶೈಲಿಯಲ್ಲಿ ಜನರ ಮುಂದೆ ಇಡುವಲ್ಲಿ ಇವರ ಪಾತ್ರ ಇತ್ತು.

ಪಕ್ಷ ಸಂಘಟನೆ, ಯುವ ಕಾಂಗ್ರೆಸ್​​​​​​​​ಗೆ ಹುರುಪು

ಡಿಕೆ ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಪ್ರಮಖ ಪಾತ್ರ ನಿರ್ವಹಣೆ ಮಾಡಿದ್ದಾರೆ. ಸಂಘಟನೆಯಲ್ಲಿ ಹಿನ್ನಡೆ ಅನುಭವಿಸಿದ್ದ ಪಕ್ಷಕ್ಕೆ ಹೊಸ ಹುರುಪು ನೀಡಿದ್ದಾರೆ. ಯುವಕರನ್ನು ಸೆಳೆಯುವಲ್ಲಿಯೂ ಯಶಸ್ವಿ ಆಗಿದ್ದಾರೆ. ಡಿಜಿಟಲ್ ಸದಸ್ಯತ್ವ ಅಭಿಯಾನದ ಮೂಲಕ ಪಕ್ಷದ ಇತಿಹಾಸದಲ್ಲೇ ಮೊದಲ ಬಾರಿಗೆ ದಾಖಲೆ ಡಿಜಿಟಲ್ ಸದಸ್ಯತ್ವವನ್ನು ನೋಂದಾಯಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಪಕ್ಷದ ಕಾರ್ಯಕರ್ತರನ್ನು ನೇರವಾಗಿ ಜನರ ಮನೆಬಾಗಿಲಿಗೆ ಕಳುಹಿಸುವ ಮೂಲಕ ಪಕ್ಷದ ತತ್ವಗಳನ್ನು ತಲುಪಿಸುವ ಪ್ರಯತ್ನ ನಡೆಸಿದ್ದಾರೆ. ಅಷ್ಟೇ ಅಲ್ಲದೆ, ಪಕ್ಷದ ಆರ್ಥಿಕ ಸ್ಥಿತಿಯನ್ನು ಉತ್ತಮಗೊಳಿಸಿದ್ದು ಮತ್ತು ಸ್ವಂತ ಕಟ್ಟಡಗಳ ಅಭಿವೃದ್ಧಿಯಲ್ಲೂ ಡಿಕೆಶಿ ಪಾತ್ರ ಇದೆ. ಹಾಗೇ ಯೂತ್​ ಕಾಂಗ್ರೆಸ್​​ ಅನ್ನು ಬಲಿಷ್ಠಗೊಳಿಸಿದ್ದಾರೆ.

ವ್ಯಕ್ತಿ ಪೂಜೆಗೆ ಅವಕಾಶ ಇಲ್ಲ ಎಂದಿದ್ದ ಡಿಕೆಶಿ

ಕಾಂಗ್ರೆಸ್‌ ನಲ್ಲಿ ಮುಖಂಡರಿಗೆ ಆದ್ಯತೆ ಹೊರತಾಗಿ ಕಾರ್ಯಕರ್ತರಿಗೆ ಇಲ್ಲ ಎಂಬ ಅಭಿಪ್ರಾಯ ಹಿಂದಿನಿಂದಲೂ ಇತ್ತು. ಆದ್ರೆ, ಡಿಕೆ ಶಿವಕುಮಾರ್ ಅವರು ಇದನ್ನು ತಕ್ಕ ಮಟ್ಟಿಗೆ ಬದಲಾವಣೆ ಮಾಡಿದ್ದಾರೆ. ಕಾಂಗ್ರೆಸ್‌ ನಲ್ಲಿ ವ್ಯಕ್ತಿ ಪೂಜೆಗೆ ಅವಕಾಶ ಇಲ್ಲ, ಬದಲಾಗಿ ಪಕ್ಷ ಪೂಜೆ ಮಾಡಬೇಕು ಎಂದು ಹಲವು ಕಾರ್ಯಕ್ರಮಗಳಲ್ಲಿ ಒತ್ತಿ ಒತ್ತಿ ಹೇಳುತ್ತಿದ್ದರು. ಅಲ್ಲದೆ, ಪಕ್ಷದ ಕಾರ್ಯಕರ್ತರಿಗೆ ಆದ್ಯತೆ ನೀಡಬೇಕು ಎಂಬುವುದನ್ನು ಪದೇ ಪದೇ ಹೇಳಿದ್ದರು.

ಪಕ್ಷದ ಕಚೇರಿಯಲ್ಲಿ ಶಿಸ್ತು

ಕಾಂಗ್ರೆಸ್ ಕಾರ್ಯಕ್ರಮಗಳು, ಪತ್ರಿಕಾಗೋಷ್ಠಿಗಳು ಅಶಿಸ್ತಿನಿಂದ ಕೂಡಿರುತ್ತವೆ ಎಂಬ ಅಭಿಪ್ರಾಯಗಳು ಇದ್ದವು. ಪಕ್ಷದ ಕಚೇರಿಯಲ್ಲಿ ಶಿಸ್ತು ಕಡಿಮೆ ಎಂಬ ಆರೋಪಗಳು ಸಹ ಇದ್ದವು. ಡಿಕೆ ಶಿವಕುಮಾರ್ ಅಧ್ಯಕ್ಷರಾದ ಬಳಿಕ ಇದು ತಕ್ಕಮಟ್ಟಿನಲ್ಲಿ ಬಲಾವಣೆ ಕಂಡಿದೆ. ಸಾಮಾನ್ಯವಾಗಿ ಕಾಂಗ್ರೆಸ್ ಕಾರ್ಯಕ್ರಮದ ವೇದಿಕೆಗಳಲ್ಲಿ ನಾಯಕರೇ ತುಂಬಿ ತುಳುಕುತ್ತಿದ್ದರು. ಇದನ್ನು ಬದಲಾವಣೆ ಮಾಡಿ ಭಾಷಣ ಮಾಡುವ ಸಂದರ್ಭದಲ್ಲಿ ಮಾತ್ರ ನಾಯಕರು ವೇದಿಕೆಗೆ ಹೋಗುವ ಸಂಪ್ರದಾಯ ತಂದರು. ಇಂತಹ ಕೆಲವೊಂದು ಭಿನ್ನ ಹಾಗೂ ಹೊಸ ಸಂಪ್ರದಾಯಗಳಿಗೆ ಡಿಕೆಶಿ ನಾಂದಿ ಹಾಡಿದ್ದಾರೆ.

ಪಾದಯಾತ್ರೆ, ಹೋರಾಟಗಳ ಮೂಲಕ ಪಕ್ಷಕ್ಕೆ ಬಲ

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಹಲವು ಹಗರಣಗಳನ್ನು ಬೆಳಕಿಗೆ ತಂದಿತ್ತು. ಬಿಟ್ ಕಾಯಿನ್, 40% ಕಮಿಷನ್, ಗುತ್ತಿಗೆದಾರರ ಪತ್ರ, ಕೋವಿಡ್ ಹಗರಣ ಹೀಗೆ ಸಂಗತಿಗಳನ್ನು ಮುಂದಿಟ್ಟುಕೊಂಡು ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಹಲವು ಹೋರಾಟ, ಪಾದಯಾತ್ರೆಗಳು ನಡೆದಿವೆ. ಮೇಕೆ ದಾಟು ಪಾದಯಾತ್ರೆ, ಸ್ವಾತಂತ್ರ ನಡಿಗೆ ಸೇರಿದಂತೆ ಕೆಲವು ಪಾದಯಾತ್ರೆಗಳು, ಹೋರಾಟಗಳು ಮಾಡುವ ಮೂಲಕ ಡಿಕೆಶಿ ಪಕ್ಷಕ್ಕೆ ಬಲ ತುಂಬಿದ್ದರು.

ಬೇರೆ-ಬೇರೆ ಪಕ್ಷಗಳ ನಾಯಕರನ್ನು ಸೆಳೆಯುವಲ್ಲಿ ಯಶಸ್ವಿ

ಚುನಾವಣಾ ಸಂದರ್ಭದಲ್ಲಿ ಹಲವು ಪ್ರಮುಖ ನಾಯಕರನ್ನು ಕಾಂಗ್ರೆಸ್ ಪಕ್ಷಕ್ಕೆ ಸೆಳೆಯುವಲ್ಲಿ ಡಿಕೆ ಶಿವಕುಮಾರ್ ಯಶಸ್ವಿಯಾಗಿದ್ದಾರೆ. ಇದು ಚುನಾವಣೆ ಸಂದರ್ಭದಲ್ಲಿ ಪಕ್ಷಕ್ಕೆ ಬಲ ತಂದುಕೊಟ್ಟಿದೆ ಎಂಬುವುದು ಸತ್ಯ. ಬಿಜೆಪಿಯ ಹಿರಿಯ ನಾಯಕರಾದ ಜಗದೀಶ್ ಶೆಟ್ಟರ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೆಳೆಯುವಲ್ಲಿ ಡಿಕೆಶಿ ಯಶಸ್ವಿಯಾಗಿದ್ದರು. ಆದರೆ ಅವರು ಬಳಿಕ ಕಾಂಗ್ರೆಸ್ ತೊರೆದರು. ಅಷ್ಟೇ ಅಲ್ಲದೆ, ಲಕ್ಷ್ಮಣ ಸವದಿ, ಬಿಎಂ ಸುಕುಮಾರ್ ಶೆಟ್ಟಿ, ಪುಟ್ಟಣ್ಣ, ಎಚ್ ಡಿ ತಮ್ಮಣ್ಣ, ಅಯನೂರು ಮಂಜುನಾಥ್, ಮರಿತಿಬ್ಬೇಗೌಡ ಹೀಗೆ ಪ್ರಮುಖ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೆಳೆಯುವಲ್ಲಿ ಡಿಕೆಶಿ ಪ್ರಮುಖ ಪಾತ್ರವಹಿಸಿದ್ದರು.

ಕೂಲಿ ಕೇಳಿ ಸಿಎಂ ಗಾದಿಗೇರಿದ ಡಿಕೆಶಿ

ಹೀಗೆ ಹತ್ತು ಹಲವು ಕಾರ್ಯಕ್ರಮಗಳ ಮೂಲಕ ಸಂದಿಗ್ಧ ಪರಿಸ್ಥಿತಿಯಲ್ಲಿದ್ದ ಕಾಂಗ್ರೆಸ್ ಪಕ್ಷಕ್ಕೆ ಹೊಸ ಸ್ಪರ್ಶ ನೀಡಿ ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ ಅವರು ಮನೆ-ಮಟ ಬಿಟ್ಟು ಪಕ್ಷ ಆರು ವರ್ಷಗಳ ಕಾಲ ಹಗಲು ರಾತ್ರಿ ಎನ್ನದೇ ದುಡಿದ್ದರು. ಹೀಗಾಗಿ ಅವರು 2023ರ ಚುನಾವಣೆಯಲ್ಲಿ ಪಕ್ಷ ಅಭೂತಪೂರ್ವ ಬಹುಮತ ಪಡೆದುಕೊಂಡಿತ್ತು.  ಇದರಿಂದ ಡಿಕೆಶಿ ಕೆಲಸಕ್ಕೆ ತಕ್ಕ ಕೂಲಿ ನೀಡಿ ಎಂದು ಪರೋಕ್ಷವಾಗಿ ಸಿಎಂ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದರು. ಆದ್ರೆ, ಹೈಕಮಾಂಡ್ 2ನೇ ಬಾರಿಗೆ ಸಿದ್ದರಾಮಯ್ಯನವರಿಗೆ ಸಿಎಂ ಪಟ್ಟ ಕಟ್ಟಿದ್ದರು.  ಬಳಿಕ ಸಿದ್ದರಾಮಯ್ಯ ಸರ್ಕಾರ ಎರಡು ವರ್ಷ ಪೂರೈಸುತ್ತಿದ್ದಂತೆಯೇ ನಾಯಕತ್ವ ಬದಲಾವಣೆ ಕೂಗೂ ಜೋರಾಗಿದ್ದು, ಸಿಎಂ ಸ್ಥಾನ ಬೇಕೆಂದು ಡಿಕೆಶಿ ತೆರೆಮರೆಯ ಕಸರತ್ತು ಮಾಡಿದ್ದರು. ಮುಸುಕಿನ ಗುದ್ದಾಟಗಳ ಮಧ್ಯೆ ಸಿದ್ದರಾಮಯ್ಯ ಸರ್ಕಾರಕ್ಕೆ ಮೂರು ವರ್ಷ ತುಂಬುತ್ತಿದ್ದಂತೆಯೇ ಹೈಕಮಾಂಡ್ ನಾಯಕತ್ವ ಬದಲಾವಣೆ ಮಾಡಿದ್ದು, ಎರಡು ವರ್ಷದ ಅವಧಿಗೆ ಸಿಎಂ ಪಟ್ಟವನ್ನು ಡಿಕೆ ಶಿವಕುಮಾರ್ ಕಟ್ಟಿದ್ದಾರೆ. ಇದರೊಂದಿಗೆ ಇನ್ಮುಂದೆ ಕರ್ನಾಟಕದಲ್ಲಿ ಸಿದ್ದರಾಮಯ್ಯನವರ ಆಡಳಿತ ಅಂತ್ಯವಾಗಿ ಡಿಕೆಶಿ ರಾಜ್ಯಭಾರ ಆರಂಭವಾಗಿದೆ.

ಮುಂದಿನ ಕೆಪಿಸಿಸಿ ಅಧ್ಯಕ್ಷ ಯಾರು?

ಡಿಕೆ ಶಿವಕುಮಾರ್ ಅವರು ತಮ್ಮ ಆರು ವರ್ಷದ ಅವಧಿಯಲ್ಲಿ ಪಕ್ಷಕ್ಕೆ ತಮ್ಮದೇಯಾದ ಕೊಡುಗೆ ನೀಡಿದ್ದಾರೆ. ಹಳ್ಳಿ-ಹಳ್ಳಿ ಸುತ್ತಾಡಿ ಪಕ್ಷ ಸಂಘಟಿಸಿ ಈ ಮಟ್ಟಕ್ಕೆ ಬೆಳೆಸಿ ನಿರ್ಗಮಿಸಿದ್ದು, ಮುಂದಿನ ಕೆಪಿಸಿಸಿ ಅಧ್ಯಕ್ಷ ಯಾರು ಎನ್ನುವ ಚರ್ಚೆಗಳ ನಡುವೆ ಮೊದಲ ಸತೀಶ್ ಜಾರಕಿಹೊಳಿ ಹೆಸರು ಕೇಳಿಬಂದಿತ್ತು. ಆದ್ರೆ, ಅವರು ಸಚಿವ ಸ್ಥಾನದ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬೇಕೆಂದು ಹೈಕಮಾಂಡ್​​ಗೆ ಹೇಳಿದ್ದರು. ಆದ್ರೆ, ಹೈಕಮಾಂಡ್ ಒಬ್ಬರಿಗೆ ಒಂದೇ ಹುದ್ದೆ ನಿಯಮವಮ್ಮು ಮುಂದಿಟ್ಟಿದ್ದು,  ಜಾರಕಿಹೊಳಿ ಬದಲು ವಿಧಾನಪರಿಷತ್ ಸದಸ್ಯ ಬಿಜೆ ಹರಿಪ್ರಸಾದ್​​​ಗೆ ಕೆಪಿಸಿಸಿ ಪಟ್ಟ ಕಟ್ಟಲು ಹೈಕಮಾಂಡ್ ಮುಂದಾಗಿದೆ ಎಂದು ತಿಳಿದುಬಂದಿದೆ.

ಹೌದು.. ಹಿರಿಯ ಕಾಂಗ್ರೆಸ್ ನಾಯಕ ಬಿಕೆ ಹರಿ ಪ್ರಸಾದ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಕಾಂಗ್ರೆಸ್ ಹೈಕಮಾಂಡ್ ಈ ಮಹತ್ವದ ನಿರ್ಧಾರ ಕೈಗೊಂಡಿದೆ.ಬಿಕೆ ಹರಿ ಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಲಾಗುತ್ತದೆ ಎಂಬ ನಿರೀಕ್ಷೆ ಇತ್ತು. ಆದರೆ ಹೈಕಮಾಂಡ್ ಇದೀಗ ಈ ನಿರ್ಧಾರ ಕೈಗೊಂಡಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಹಿಂದುಳಿದ ವರ್ಗಕ್ಕೆ ಸೂಕ್ತ ಸ್ಥಾನ ಮಾನ ನೀಡುವ ನಿಟ್ಟಿನಲ್ಲಿ ಹೈಕಮಾಂಡ್ ಈ ನಿರ್ಧಾರ ಕೈಗೊಂಡಿದೆ‌ ಎನ್ನಲಾಗಿದ್ದು, ಹರಿಪ್ರಾಸದ್ ಅವರು ಯಾವ ರೀತಿ ಪಕ್ಷವನ್ನು ಮುನ್ನಡೆಸುತ್ತಾರೆ ಎನ್ನುವುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಮೈದಾನದಲ್ಲಿ ಕಾಣಿಸಿಕೊಳ್ಳುವುದು ಯಾವಾಗ? – Kannada News

ಐಪಿಎಲ್ (IPL) ಮುಗಿದ ಬಳಿಕ ಇದೀಗ ಟೀಂ ಇಂಡಿಯಾ ಮತ್ತೆ ಅಂತರರಾಷ್ಟ್ರೀಯ ಕ್ರಿಕೆಟ್​ನತ್ತ ಮುಖ ಮಾಡಿದೆ. ಅದರಂತೆ ಟೆಸ್ಟ್ ಮತ್ತು ಏಕದಿನ ಸರಣಿಗಾಗಿ ಅಫ್ಘಾನಿಸ್ತಾನ ತಂಡ ಭಾರತಕ್ಕೆ ಬರುತ್ತಿದ್ದು, ಮೊದಲಿಗೆ ಟೆಸ್ಟ್ ಪಂದ್ಯ ನಡೆಯಲಿದೆ. ಆ ಬಳಿಕ ಏಕದಿನ ಸರಣಿ ಶುರುವಾಗಲಿದೆ. ಈ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ (Rohit Sharma) ಮತ್ತು ವಿರಾಟ್ ಕೊಹ್ಲಿ (Virat Kohli) ಆಡುವುದನ್ನು ಕಾಣಬಹುದಾಗಿದೆ. ಈ ಸರಣಿಗಹಾಗಿ ಇವರಿಬ್ಬರು ಜೂನ್ 9 ರಿಂದ ಮುಲ್ಲನ್‌ಪುರದಲ್ಲಿ ಅಭ್ಯಾಸವನ್ನು ಪ್ರಾರಂಭಿಸಲಿದ್ದಾರೆ. ಜೂನ್ 9 ರಿಂದ 11 ರವರೆಗೆ ಮೂರು ದಿನಗಳ ಕಾಲ ನೆಟ್ಸ್​ನಲ್ಲಿ ಇವರಿಬ್ಬರು ಬೆವರು ಸುರಿಸಲಿದ್ದು ಅದರ ನಂತರ, ಜೂನ್ 13 ರಂದು ಧರ್ಮಶಾಲಾದಲ್ಲಿ ನಡೆಯಲಿರುವ ಮೊದಲ ಏಕದಿನ ಪಂದ್ಯಕ್ಕಾಗಿ ಟೀಂ ಇಂಡಿಯಾವನ್ನು ಸೇರಿಕೊಳ್ಳಲಿದ್ದಾರೆ.

2027 ರ ಏಕದಿನ ವಿಶ್ವಕಪ್‌ಗೆ ತಯಾರಿ

ಈ ಏಕದಿನ ಸರಣಿಯು ಕೇವಲ ದ್ವಿಪಕ್ಷೀಯ ಸರಣಿಯಲ್ಲ, 2027 ರ ಏಕದಿನ ವಿಶ್ವಕಪ್‌ಗೆ ತಯಾರಿಯೂ ಆಗಿದೆ. 2023 ರ ವಿಶ್ವಕಪ್ ಫೈನಲ್‌ನಲ್ಲಿ ಎಡವಿದ್ದ ಟೀಂ ಇಂಡಿಯಾ ಮುಂಬರುವ ಏಕದಿನ ವಿಶ್ವಕಪ್​ನ ಗೆಲ್ಲಲೇಬೇಕೆಂದು ಪಣತೊಟ್ಟಿದೆ. ಇದು ಸಾಧ್ಯವಾಗಬೇಕಾದರೆ ರೋಹಿತ್ ಮತ್ತು ಕೊಹ್ಲಿ ಅದ್ಭುತ ಫಾರ್ಮ್​ನಲ್ಲಿರಬೇಕಾಗುತ್ತದೆ. ಅಲ್ಲದೆ ಇವರಿಬ್ಬರು ತಮ್ಮ ವೃತ್ತಿಜೀವನದ ಅಂತಿಮ ಹಂತದಲ್ಲಿರುವ ಕಾರಣ ತಮ್ಮ ಫಿಟ್‌ನೆಸ್ ಮತ್ತು ಫಾರ್ಮ್ ಅನ್ನು ಕಾಪಾಡಿಕೊಳ್ಳಲು ಈ ಸರಣಿಯನ್ನು ನಿರ್ಣಾಯಕವಾಗಿದೆ. ಇವರಿಬ್ಬರ ಅಭ್ಯಾಸಕ್ಕಾಗಿ ಬಿಸಿಸಿಐ, ಆರು ನೆಟ್ ಬೌಲರ್‌ಗಳನ್ನು ಆಯ್ಕೆ ಮಾಡಿದೆ. ಅವರಲ್ಲಿ ಮಯಾಂಕ್ ಯಾದವ್ ಕೂಡ ಒಬ್ಬರು. ಈಗಾಗಲೇ ಏಕದಿನ ತಂಡದಲ್ಲಿ ಆಯ್ಕೆಯಾಗಿರುವ ಪ್ರಿನ್ಸ್ ಯಾದವ್ ಕೂಡ ರೋಹಿತ್ ಮತ್ತು ಕೊಹ್ಲಿ ಜೊತೆಗೆ ಧರ್ಮಶಾಲಾಗೆ ಹೋಗಲಿದ್ದಾರೆ.

ಇಬ್ಬರ ಪ್ರಸ್ತುತ ಫಾರ್ಮ್​ ಹೇಗಿದೆ?

ವಿರಾಟ್ ಕೊಹ್ಲಿ ಪ್ರಸ್ತುತ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಐಪಿಎಲ್ 2026 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸತತ ಎರಡನೇ ಬಾರಿಗೆ ಪ್ರಶಸ್ತಿ ಗೆಲ್ಲುವಲ್ಲಿ ಕೊಹ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇಡೀ ಪಂದ್ಯಾವಳಿಯಲ್ಲಿ ಬ್ಯಾಟಿಂಗ್​ನಲ್ಲಿ ಅಬ್ಬರಿಸಿದ ಕೊಹ್ಲಿ 675 ರನ್ ಕಲೆಹಾಕಿದ್ದರು. ಮತ್ತೊಂದೆಡೆ, ರೋಹಿತ್ ಶರ್ಮಾಗೆ ಈ ಬಾರಿ ಐಪಿಎಲ್ ನಿರೀಕ್ಷೆಯಂತೆ ನಡೆಯಲಿಲ್ಲ. ರೋಹಿತ್ ಆಡಿದ 9 ಇನ್ನಿಂಗ್ಸ್‌ಗಳಲ್ಲಿ ಕೇವಲ 283 ರನ್ ಗಳಿಸಲಷ್ಟೇ ಶಕ್ತರಾದರು. ಕೆಕೆಆರ್ ಮತ್ತು ಲಕ್ನೋ ವಿರುದ್ಧ ಆಡಿದ ಎರಡು ಇನ್ನಿಂಗ್ಸ್‌ಗಳನ್ನು ಹೊರತುಪಡಿಸಿ, ಇತರ ಪಂದ್ಯಗಳಲ್ಲಿ ಅವರ ಪ್ರದರ್ಶನ ನಿರಾಶಾದಾಯಕವಾಗಿತ್ತು. ಹೀಗಾಗಿ ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಲ್ಲಿ ರೋಹಿತ್ ಯಾವ ರೀತಿಯ ಪ್ರದರ್ಶನ ನೀಡುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 7:11 pm, Wed, 3 June 26

Source link

Saving Tips: ಕಷ್ಟಪಟ್ಟು ಗಳಿಸಿದ ಹಣವನ್ನು ಉಳಿಸಬೇಕೇ? ಹಾಗಿದ್ರೆ ಈ ಸರಳ ಸಲಹೆ ಪಾಲಿಸಿ ಸಾಕು – Kannada News

ಹಣ ಸಂಪಾದಿಸುವುದು ಎಷ್ಟು ಮುಖ್ಯವೋ ಉಳಿತಾಯ (Saving) ಮಾಡುವುದು ಕೂಡ ಅಷ್ಟೇ ಮುಖ್ಯ. ಆದರೆ ಇಂದಿನ ಈ ದುಬಾರಿ ದುನಿಯಾದಲ್ಲಿ ಆದಾಯಕ್ಕಿಂತ  ಖರ್ಚೆ ಹೆಚ್ಚು. ಇದು ನಾವು ಆರ್ಥಿಕವಾಗಿ ಬಲಶಾಲಿಯಾಗುವುದನ್ನು ತಡೆಯುತ್ತದೆ. ಆರ್ಥಿಕವಾಗಿ ಬಲಶಾಲಿಯಾಗಲು ಬಯಸಿದರೆ, ಆದಾಯ ಮತ್ತು ಖರ್ಚುಗಳ ಜೊತೆಗೆ ಉಳಿತಾಯಕ್ಕೂ ಆದ್ಯತೆ ನೀಡಬೇಕು. ಇದು ಭವಿಷ್ಯದ ಆರ್ಥಿಕ ತೊಂದರೆಗಳಿಂದ ನಮ್ಮನ್ನು ರಕ್ಷಿಸುತ್ತದೆ. ನೀವು ಉಳಿತಾಯದ ಜೊತೆಗೆ ನಿಮ್ಮ ಕೆಲವು ಅಭ್ಯಾಸಗಳನ್ನು ಬದಲಾಯಿಸಿದರೆ ನೀವು ಶ್ರೀಮಂತಿಕೆಯನ್ನು ಗಳಿಸಲು ಸಹ ಸಾಧ್ಯವಾಗುತ್ತದೆ. ಹಾಗಿದ್ರೆ ಉಳಿತಾಯದ ಜೊತೆಗೆ ಶ್ರೀಮಂತಿಕೆಯನ್ನು ಗಳಿಸುವುದು ಹೇಗೆ ಎಂಬುದನ್ನು ನೋಡೋಣ ಬನ್ನಿ.

ಗಳಿಸಿದ ಹಣವನ್ನು ಉಳಿಸುವುದು ಹೇಗೆ?

ಉಳಿತಾಯ ಮತ್ತು ಹೂಡಿಕೆಗಳತ್ತ ಗಮನ ಹರಿಸಿ: ಮೊದಲು ನೀವು ಉಳಿತಾಯದ ಅಭ್ಯಾಸವನ್ನು  ಬೆಳೆಸಿಕೊಳ್ಳಬೇಕು. ಉಳಿತಾಯದಂತಹ ಉತ್ತಮ ಅಭ್ಯಾಸವನ್ನು ಅಳವಡಿಸಿಕೊಳ್ಳುವುದರಿಂದ ಬಹಳ ಕಡಿಮೆ ಸಮಯದಲ್ಲಿ ಗಣನೀಯ ಪ್ರಮಾಣದ ಹಣ ನಿಮ್ಮದಾಗುತ್ತದೆ. ಈ ಉಳಿತಾಯವನ್ನು ಸರಿಯಾದ ಸ್ಥಳದಲ್ಲಿ ಅಥವಾ ಉತ್ತಮ ಯೋಜನೆಯಲ್ಲಿ ಹೂಡಿಕೆ ಮಾಡುವುದರಿಂದ ಗಣನೀಯ ಲಾಭವನ್ನು ಸಹ ನೀವು  ಪಡೆಯಬಹುದು. ಈ ಮೂಲಕ ನೀವು ಶ್ರೀಮಂತಿಕೆಯನ್ನು ಗಳಿಸಲು ಸಾಧ್ಯವಾಗುತ್ತದೆ.

ಅನಗತ್ಯ ಖರ್ಚು ತಪ್ಪಿಸಿ: ನೀವು ಹಣ ಉಳಿಸಲು ಬಯಸಿದರೆ, ನೀವು ವ್ಯರ್ಥ ಖರ್ಚುಗಳನ್ನು ಆದಷ್ಟು ತಪ್ಪಿಸಬೇಕು. ಇದನ್ನು ಮಾಡಲು, ನಿಮ್ಮ ಖರ್ಚುಗಳಿಗೆ ಮಾಸಿಕ ಬಜೆಟ್ ಅನ್ನು ರಚಿಸುವುದು ಅತ್ಯಗತ್ಯ. ನಂತರ, ಈ ಬಜೆಟ್ ಅನ್ನು ಆಧರಿಸಿ ನಿಮ್ಮ ಆದಾಯವನ್ನು ಖರ್ಚು ಮಾಡಿ. ಈ ಸ್ಮಾರ್ಟ್‌ ನಡೆ ಅನಗತ್ಯ ಖರ್ಚುಗಳನ್ನು ತಡೆಯುತ್ತದೆ. ಈ ರೀತಿಯಲ್ಲಿ ನಿಮ್ಮ ಖರ್ಚುಗಳನ್ನು ನಿರ್ವಹಿಸುವ ಮೂಲಕ, ನೀವು ಸುಲಭವಾಗಿ ಹಣವನ್ನು ಉಳಿಸಬಹುದು.

ಹೊರಗೆ ತಿನ್ನುವುದನ್ನು ನಿಯಂತ್ರಿಸಿ: ಹೋಟೆಲ್, ಆನ್‌ಲೈನ್ ಆಹಾರ ಆರ್ಡರ್‌ಗಳು ಮತ್ತು ಕೆಫೆ ವೆಚ್ಚಗಳು ತಿಂಗಳಿಗೆ ಸಾವಿರಾರು ರೂಪಾಯಿ ವ್ಯಯವಾಗಲು ಕಾರಣವಾಗಬಹುದು. ಹಾಗಾಗಿ ಮನೆ ಊಟಕ್ಕೆ ಹೆಚ್ಚಿನ ಆದ್ಯತೆ ನೀಡಿ ಇದು ಖರ್ಚನ್ನು ಕಮ್ಮಿ ಮಾಡುವುದಲ್ಲದೆ ಆರೋಗ್ಯಕ್ಕೂ ಒಳ್ಳೆಯದು.

ಇದನ್ನೂ ಓದಿ: ಆರ್ಥಿಕ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಚಾಣಕ್ಯರ ಮಾತುಗಳನ್ನು ಪಾಲಿಸಿ

ಸ್ಮಾರ್ಟ್ ಶಾಪಿಂಗ್ ಮಾಡಿ: ನೀವು ಏನೇ ಶಾಪಿಂಗ್‌ ಮಾಡುತ್ತಿದ್ದರೂ, ಯಾವುದೇ ವಸ್ತುಗಳನ್ನು  ಆತುರದಿಂದ ಅಥವಾ ಯೋಚಿಸದೆ ಏನನ್ನೂ ಖರೀದಿಸಬೇಡಿ. ನಿಮ್ಮ ಆದಾಯವನ್ನು ಗಮನದಲ್ಲಿಟ್ಟುಕೊಂಡು ವಸ್ತುಗಳನ್ನು ಖರೀದಿಸಿ. ಶಾಪಿಂಗ್‌ ಮಾಡುವ ಮೊದಲು ಏನೆಲ್ಲಾ ಬೇಕು ಎಂಬುದನ್ನು ಪಟ್ಟಿ ಮಾಡಿ ಮತ್ತು ಈ ಪಟ್ಟಿಯಲ್ಲಿ ಇರುವಂತಹ ವಸ್ತುಗಳನ್ನು ಮಾತ್ರ ಖರೀದಿಸಿ. ನೀವು ಈ ವಸ್ತುಗಳ ಬೆಲೆಗಳನ್ನು ಆನ್‌ಲೈನ್‌ನಲ್ಲಿ ಪರಿಶೀಲಿಸಬೇಕು. ಆನ್‌ಲೈನ್‌ನಲ್ಲಿ ಆ ವಸ್ತುಗಳು ಅಗ್ಗವಾಗಿದ್ದರೆ ಅಲ್ಲಿಂದಲೇ ಖರೀದಿಸಿ. ಈ ಸ್ಮಾರ್ಟ್ ಶಾಪಿಂಗ್ ಮಾಡುವ ಮೂಲಕ ಹಣವನ್ನು ಉಳಿಸಬಹುದು.

ಈ ಅಭ್ಯಾಸಗಳನ್ನು ಪಾಲಿಸುವ ಮೂಲಕ, ನೀವು ಯಾವುದೇ ಒತ್ತಡವಿಲ್ಲದೆ ಹಣವನ್ನು ಉಳಿಸಬಹುದು. ಇಂದು ನೀವು ಉಳಿಸುವ ಸಣ್ಣ ಮೊತ್ತವೂ ಸಹ ಭವಿಷ್ಯದಲ್ಲಿ ಅದು ನಿಮ್ಮನ್ನು ಆರ್ಥಿಕವಾಗಿ ಸದೃಢಗೊಳಿಸಬಹುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 7:00 pm, Wed, 3 June 26

Source link

ವಿದೇಶಿ ಬಂಡವಾಳ ಸೆಳೆಯಲು ಭರ್ಜರಿ ಪ್ಲಾನ್: ಬಾಂಡ್ ತೆರಿಗೆ ಕಡಿತ ಮತ್ತು ಹೂಡಿಕೆ ನಿಯಮಗಳ ಸಡಿಲಿಕೆಗೆ ಕೇಂದ್ರ ಸರ್ಕಾರ ಮುಂದು – Kannada News

ನವದೆಹಲಿ, ಜೂನ್ 3: ಜಾಗತಿಕ ಮಾರುಕಟ್ಟೆಯಿಂದ ಭಾರತದತ್ತ ದೊಡ್ಡ ಪ್ರಮಾಣದಲ್ಲಿ ವಿದೇಶಿ ಬಂಡವಾಳವನ್ನು (Foreign Funds) ಆಕರ್ಷಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಆರ್ಥಿಕ ಸುಧಾರಣೆಗಳಿಗೆ ಮುಂದಾಗಿದೆ. ದೇಶದ ಬಾಂಡ್ ಮಾರುಕಟ್ಟೆಯಲ್ಲಿ (Bond Market) ಹೂಡಿಕೆ ಮಾಡುವ ವಿದೇಶಿ ಹೂಡಿಕೆದಾರರ ಮೇಲಿನ ತೆರಿಗೆಯನ್ನು ಕಡಿತಗೊಳಿಸಲು ಮತ್ತು ಹೂಡಿಕೆಗೆ ಸಂಬಂಧಿಸಿದ ಕಠಿಣ ನಿಯಮಗಳನ್ನು ಸಡಿಲಗೊಳಿಸಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ವರದಿಗಳು ತಿಳಿಸಿವೆ.

ಸರ್ಕಾರದ ಈ ಮಹತ್ವದ ನಿರ್ಧಾರದ ಹಿಂದಿರುವ ಕಾರಣಗಳೇನು?

ಭಾರತವು ಜಾಗತಿಕ ಬಾಂಡ್ ಸೂಚ್ಯಂಕಗಳಿಗೆ (Global Bond Indexes) ಸೇರ್ಪಡೆಯಾದ ನಂತರ, ವಿದೇಶಿ ಹೂಡಿಕೆದಾರರು ಭಾರತೀಯ ಸರ್ಕಾರಿ ಬಾಂಡ್‌ಗಳಲ್ಲಿ (G-Secs) ಹೂಡಿಕೆ ಮಾಡಲು ಭಾರಿ ಆಸಕ್ತಿ ತೋರಿಸುತ್ತಿದ್ದಾರೆ. ಈ ಅವಕಾಶವನ್ನು ಬಳಸಿಕೊಂಡು ದೇಶದ ಆರ್ಥಿಕತೆಗೆ ಮತ್ತಷ್ಟು ಬಲ ತುಂಬಲು ಸರ್ಕಾರ ಕ್ರಮಗಳನ್ನು ಕೈಗೊಳ್ಳಲು ಯೋಜಿಸಿದೆ.

ಪ್ರಸ್ತುತ ವಿದೇಶಿ ಪೋರ್ಟ್‌ಫೋಲಿಯೋ ಹೂಡಿಕೆದಾರರು (FPI) ಭಾರತೀಯ ಬಾಂಡ್‌ಗಳಿಂದ ಗಳಿಸುವ ಬಡ್ಡಿ ಆದಾಯದ ಮೇಲೆ ಹೆಚ್ಚಿನ ತೆರಿಗೆಯನ್ನು ವಿಧಿಸಲಾಗುತ್ತಿದೆ. ಈ ತೆರಿಗೆಯನ್ನು ಗಣನೀಯವಾಗಿ ಕಡಿತಗೊಳಿಸುವುದರಿಂದ ಜಾಗತಿಕ ಹೂಡಿಕೆದಾರರಿಗೆ ಭಾರತೀಯ ಮಾರುಕಟ್ಟೆ ಹೆಚ್ಚು ಲಾಭದಾಯಕವಾಗಿ ಕಾಣಿಸಲಿದೆ.

ಇದನ್ನೂ ಓದಿ: ಜೊಹೊ ಮುಖ್ಯ ವಿಜ್ಞಾನಿ ಶ್ರೀಧರ್ ವೆಂಬು ಅವರ ಕರುವಿಯಿಂದ ಚೀನೀ ಪವರ್ ಟೂಲ್ಸ್​ಗೆ ಪೈಪೋಟಿ

ವಿದೇಶಿ ಹೂಡಿಕೆದಾರರು ಭಾರತೀಯ ಬಾಂಡ್ ಮಾರುಕಟ್ಟೆಯನ್ನು ಪ್ರವೇಶಿಸಲು ಇರುವ ನೋಂದಣಿ, ಪರಿಶೀಲನೆ (KYC) ಮತ್ತು ಇತರ ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಸರಳಗೊಳಿಸಲು ಹಣಕಾಸು ಸಚಿವಾಲಯ ಹಾಗೂ ರಿಸರ್ವ್ ಬ್ಯಾಂಕ್ (RBI) ಜಂಟಿಯಾಗಿ ಕೆಲಸ ಮಾಡುತ್ತಿವೆ.

ಭಾರತದ ಆರ್ಥಿಕತೆಯ ಮೇಲಾಗುವ ಧನಾತ್ಮಕ ಪರಿಣಾಮಗಳು

ಕೇಂದ್ರ ಸರ್ಕಾರದ ಈ ಪ್ರಸ್ತಾಪಿತ ನಿರ್ಧಾರದಿಂದ ದೇಶದ ಹಣಕಾಸು ವಲಯಕ್ಕೆ ಹಲವು ಪ್ರಯೋಜನಗಳು ಸಿಗಲಿವೆ. ತೆರಿಗೆ ಕಡಿತದಿಂದಾಗಿ ಶತಕೋಟಿ ಡಾಲರ್ ಮೌಲ್ಯದ ವಿದೇಶಿ ಬಂಡವಾಳವು ಭಾರತದ ಮಾರುಕಟ್ಟೆಗೆ ಹರಿದು ಬರಲಿದೆ. ಇದು ದೇಶದ ವಿದೇಶಿ ವಿನಿಮಯ ಮೀಸಲು ನಿಧಿಯನ್ನು (Forex Reserves) ಮತ್ತಷ್ಟು ಬಲಿಷ್ಠಗೊಳಿಸಲಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಯುಎಸ್ ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯವು ಕುಸಿಯದಂತೆ ಸ್ಥಿರವಾಗಿಡಲು ಈ ವಿದೇಶಿ ಬಂಡವಾಳದ ಹರಿವು ನೆರವಾಗಲಿದೆ.

ಹೆಚ್ಚಿನ ವಿದೇಶಿ ಹೂಡಿಕೆದಾರರು ಭಾರತೀಯ ಸರ್ಕಾರಿ ಬಾಂಡ್‌ಗಳನ್ನು ಖರೀದಿಸಿದಾಗ, ಸರ್ಕಾರವು ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ಪಡೆಯಲು ಸಾಧ್ಯವಾಗುತ್ತದೆ. ಇದರಿಂದ ದೇಶದ ಮೂಲಸೌಕರ್ಯ (Infrastructure) ಅಭಿವೃದ್ಧಿ ಯೋಜನೆಗಳಿಗೆ ಹಣಕಾಸು ಒದಗಿಸುವುದು ಸುಲಭವಾಗುತ್ತದೆ.

ಇದನ್ನೂ ಓದಿ: ಚೀನಾ ಔಟ್, ಭಾರತ ಇನ್: ಜಾಗತಿಕ ಮಾರುಕಟ್ಟೆಯಲ್ಲಿ ಜಪಾನ್ ಹೂಡಿಕೆದಾರರ ಭರ್ಜರಿ ದಿಕ್ಕು ಬದಲಾವಣೆ

ಮುಂಬರುವ ಬಜೆಟ್‌ನಲ್ಲಿ ಅಧಿಕೃತ ಘೋಷಣೆ?

ಮೂಲಗಳ ಪ್ರಕಾರ, ಈ ತೆರಿಗೆ ಕಡಿತ ಮತ್ತು ನಿಯಮಗಳ ಸಡಿಲಿಕೆಗೆ ಸಂಬಂಧಿಸಿದ ಅಧಿಕೃತ ಪ್ರಕಟಣೆಯು ಮುಂಬರುವ ಕೇಂದ್ರ ಬಜೆಟ್‌ನಲ್ಲಿ ಹೊರಬೀಳುವ ಸಾಧ್ಯತೆಯಿದೆ. ಹಣಕಾಸು ಸಚಿವಾಲಯವು ಈಗಾಗಲೇ ವಿವಿಧ ಜಾಗತಿಕ ಫಂಡ್ ಮ್ಯಾನೇಜರ್​ಗಳು (Fund Managers) ಮತ್ತು ಬ್ಯಾಂಕುಗಳೊಂದಿಗೆ ಮಾತುಕತೆ ನಡೆಸಿದ್ದು, ಅವರ ಬೇಡಿಕೆಗಳಿಗೆ ಪೂರಕವಾಗಿ ಈ ನೀತಿಯನ್ನು ರೂಪಿಸುತ್ತಿದೆ.

ಜಾಗತಿಕ ಆರ್ಥಿಕ ಅನಿಶ್ಚಿತತೆಯ ನಡುವೆಯೂ ಭಾರತದ ಆರ್ಥಿಕತೆಯು ಅತ್ಯಂತ ವೇಗವಾಗಿ ಬೆಳೆಯುತ್ತಿರುವುದರಿಂದ, ಈ ಹೊಸ ಸುಧಾರಣೆಗಳು ಜಾಗತಿಕ ಬಂಡವಾಳ ಹೂಡಿಕೆಯಲ್ಲಿ ಭಾರತದ ಪಾಲನ್ನು ಮತ್ತಷ್ಟು ಹೆಚ್ಚಿಸಲಿವೆ ಎಂದು ಆರ್ಥಿಕ ತಜ್ಞರು ವಿಶ್ಲೇಷಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Karnataka Weather Forecast: 11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ – Kannada News

ಬೆಂಗಳೂರು, ಜೂನ್​​ 03: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಲಾಗಿದ್ದು, ಜೂ.9ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ವರುಣನ ಆಗಮನದ ನಿರೀಕ್ಷೆ ಇದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಶೇ.50ಕ್ಕಿಂತ ಕಡಿಮೆ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಕೆಲವೆಡೆ ಭಾರಿ ಮಳೆಯೊಂದಿಗೆ ಬಿರುಗಾಳಿ ಬೀಸಬಹುದೆಂಬ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಪ್ರತಿ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಕರಾವಳಿ, ಉತ್ತರ ಹಾಗೂ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚಿನ ಜೊತೆಗೆ ಕೆಲವೆಡೆ ಆಲಿಕಲ್ಲು ಮಳೆ ಅಂದಾಜಿಸಲಾಗಿದೆ.

ಚಿಕ್ಕಮಗಳೂರು, ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಹಾವೇರಿ, ಬೆಳಗಾವಿ, ಮೈಸೂರು, ಮಂಡ್ಯ, ರಾಯಚೂರು ಜಿಲ್ಲೆಯಲ್ಲಿ ಭಾರಿ ಮಳೆ ನಿರೀಕ್ಷೆಯಿದ್ದು, ಬೆಂಗಳೂರಿನಲ್ಲೂ ಮುಂದಿನ ವಾರದಿಂದ ಮಳೆ ಪ್ರಮಾಣ ಹೆಚ್ಚಾಗಲಿದೆ. ಹೀಗಾಗಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.

ಇದನ್ನೂ ಓದಿ: ಮುಂಗಾರು ಆಗಮನಕ್ಕೆ ದಿನಗಣನೆ; ಜೂನ್ 4 ರಂದು ಕೇರಳ ಪ್ರವೇಶ, ಕರ್ನಾಟಕ, ತಮಿಳುನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ

11 ಜಿಲ್ಲೆಗಳಲ್ಲಿ ನಾಳೆ ಆರೆಂಜ್​​ ಅಲರ್ಟ್​​

ಉತ್ತರ ಮತ್ತು ಕಲ್ಯಾಣ ಕರ್ನಾಟಕ ಭಾಗದ ಹಲವೆಡೆ ನಾಳೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು ಬರೋಬ್ಬರಿ 11 11 ಜಿಲ್ಲೆಗಳಲ್ಲಿ ಆರೆಂಜ್​​ ಅಲರ್ಟ್​​ ಘೋಷಿಸಲಾಗಿದೆ. ಬೀದರ್​​, ಕಲಬುರಗಿ, ವಿಜಯಪುರ, ಯಾದಗಿರಿ, ಬಾಗಲಕೋಟೆ, ಬೆಳಗಾವಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ ಮತ್ತು ಹಾವೇರಿಯಲ್ಲಿ ಭಾರಿ ಮಳೆ ನಿರೀಕ್ಷಿಸಲಾಗಿದೆ. ಉಳಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಬೊಜ್ಜು ಹೃದಯಕ್ಕಷ್ಟೇ ಅಲ್ಲ, ಕಿಡ್ನಿಗೂ ಅಪಾಯಕಾರಿಯಾಗಬಹುದು! ಈ ಲಕ್ಷಣ ಕಂಡು ಬಂದಾಗ ನಿರ್ಲಕ್ಷಿಸಬೇಡಿ – Kannada News

ಇತ್ತೀಚಿನ ದಿನಗಳಲ್ಲಿ ಸ್ಥೂಲಕಾಯತೆ (Obesity) ದೊಡ್ಡ ಆರೋಗ್ಯ ಸಮಸ್ಯೆಯಾಗುತ್ತಿದೆ. ಸಾಮಾನ್ಯವಾಗಿ ಜನರು ಬೊಜ್ಜು ಅಥವಾ ಸ್ಥೂಲಕಾಯತೆಯನ್ನು ಹೃದಯ ರೋಗ, ಹೈ ಬಿಪಿ ಮತ್ತು ಡಯಾಬಿಟಿಸ್‌ಗೆ ಸಂಬಂಧಿಸಿದ ಸಮಸ್ಯೆಯಾಗಿ ನೋಡುತ್ತಾರೆ. ಆದರೆ ತೂಕ ಹೆಚ್ಚಿದ್ದರೆ ಅದು ಕಿಡ್ನಿ ಆರೋಗ್ಯದ (Kidney Health) ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ನಮ್ಮ ಕಿಡ್ನಿಗೂ ಬೊಜ್ಜಿಗೂ ಏನು ಸಂಬಂಧ, ಯಾವ ರೀತಿಯ ಲಕ್ಷಣಗಳನ್ನು ಕಡೆಗಣಿಸಬಾರದು ಜೊತೆಗೆ ಕಿಡ್ನಿ ಆರೋಗ್ಯ ಕಾಪಾಡಿಕೊಳ್ಳಲು ಯಾವ ರೀತಿಯ ಸಲಹೆಗಳನ್ನು ಪಾಲಿಸಬೇಕು ಎಂಬುದನ್ನು ತಿಳಿದುಕೊಳ್ಳಿ. ಸಂಪೂರ್ಣ ಮಾಹಿತಿ ಸ್ಟೋರಿಯಲ್ಲಿದೆ.

ಕಿಡ್ನಿಯ ಆರೋಗ್ಯಕ್ಕೂ ಸ್ಥೂಲಕಾಯತೆಗೂ ಇರುವ ಸಂಬಂಧವೇನು?

ಸಾಮಾನ್ಯವಾಗಿ ಕಿಡ್ನಿ ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕುವುದು, ದೇಹದ ದ್ರವ ಸಮತೋಲನವನ್ನು ಕಾಪಾಡುವುದು ಮತ್ತು ರಕ್ತದ ಒತ್ತಡ ನಿಯಂತ್ರಿಸುವಂತಹ ಪ್ರಮುಖ ಕೆಲಸಗಳನ್ನು ಮಾಡುತ್ತವೆ. ಆದರೆ ದೇಹದ ತೂಕ ಹೆಚ್ಚಾದಾಗ ಕಿಡ್ನಿಗಳು ಸಾಮಾನ್ಯಕ್ಕಿಂತ ಹೆಚ್ಚು ಕೆಲಸ ಮಾಡಬೇಕಾಗುತ್ತದೆ. ಇದರಿಂದ ಅವುಗಳ ಮೇಲೆ ಹೆಚ್ಚುವರಿ ಒತ್ತಡ ಬೀಳಬಹುದು. ನ್ಯಾಷನಲ್ ಕಿಡ್ನಿ ಫೌಂಡೇಶನ್ ಮಾಹಿತಿ ಪ್ರಕಾರ, ಸ್ಥೂಲಕಾಯವು ಕ್ರೋನಿಕ್ ಕಿಡ್ನಿ ಡಿಸೀಸ್ (CKD) ಅಪಾಯವನ್ನು ಹೆಚ್ಚಿಸಬಹುದು. ಜೊತೆಗೆ ಹೈ ಬ್ಲಡ್ ಪ್ರೆಶರ್ ಮತ್ತು ಟೈಪ್-2 ಡಯಾಬಿಟಿಸ್ ಸಮಸ್ಯೆಗಳು ಕೂಡ ಕಿಡ್ನಿ ಹಾನಿಗೆ ಕಾರಣವಾಗುವ ಪ್ರಮುಖ ಅಂಶಗಳಾಗಿವೆ.

ಯಾವ ಲಕ್ಷಣಗಳನ್ನು ನಿರ್ಲಕ್ಷಿಸಬಾರದು?

ಕಿಡ್ನಿ ಸಮಸ್ಯೆಗಳಲ್ಲಿ ಆರಂಭಿಕ ಹಂತದಲ್ಲಿ ಸ್ಪಷ್ಟ ಲಕ್ಷಣಗಳು ಕಂಡುಬರದಿರಬಹುದು. ಆದರೆ ಕೆಲವರಲ್ಲಿ ಈ ರೀತಿಯ ಲಕ್ಷಣಗಳು ಕಾಣಿಸಬಹುದು;

  • ಕಾಲು, ಮುಖ ಅಥವಾ ಪಾದಗಳಲ್ಲಿ ಊತ
  • ಅತಿಯಾದ ದಣಿವು
  • ಪದೇಪದೇ ಮೂತ್ರ ವಿಸರ್ಜನೆ
  • ಮೂತ್ರದಲ್ಲಿ ಬದಲಾವಣೆ
  • ಹಸಿವು ಕಡಿಮೆಯಾಗುವುದು
  • ದೇಹದಲ್ಲಿ ದುರ್ಬಲತೆ

ಇದನ್ನೂ ಓದಿ: ಅಪ್ಪಿತಪ್ಪಿಯೂ ಈ ಆಹಾರಗಳ ಸೇವನೆ ಮಾಡಬೇಡಿ ಇದು ಕಿಡ್ನಿ ಸ್ಟೋನ್ ಆಗಲು ಕಾರಣವಾಗುತ್ತೆ ಎಚ್ಚರ!

ಕಿಡ್ನಿ ಆರೋಗ್ಯ ಕಾಪಾಡಲು ಏನು ಮಾಡಬೇಕು?

ಸಮತೋಲನಯುತ ಆಹಾರ ಸೇವನೆ: ಜಂಕ್ ಫುಡ್, ಹೆಚ್ಚು ಸಕ್ಕರೆ ಮತ್ತು ಪ್ರೊಸೆಸ್ಡ್ ಆಹಾರಗಳನ್ನು ಕಡಿಮೆ ಮಾಡುವುದು ಉತ್ತಮ.

ನಿಯಮಿತ ವ್ಯಾಯಾಮ: ಪ್ರತಿದಿನ ಶಾರೀರಿಕ ಚಟುವಟಿಕೆ ನಡೆಸುವುದರಿಂದ ತೂಕ ನಿಯಂತ್ರಣದಲ್ಲಿರುತ್ತದೆ.

ಸಾಕಷ್ಟು ನೀರು ಕುಡಿಯಿರಿ: ದೇಹದಲ್ಲಿ ನೀರಿನ ಕೊರತೆ ಆಗದಂತೆ ನೋಡಿಕೊಳ್ಳುವುದು ಕಿಡ್ನಿಗಳಿಗೆ ಸಹಾಯಕ.

ಬಿಪಿ ಮತ್ತು ಶುಗರ್ ನಿಯಂತ್ರಣ: ಹೈ ಬಿಪಿ ಹಾಗೂ ಡಯಾಬಿಟಿಸ್ ಇದ್ದರೆ ನಿಯಮಿತ ತಪಾಸಣೆ ಮಾಡಿಸಿಕೊಳ್ಳುವುದು ಮುಖ್ಯ.

ಧೂಮಪಾನ ಮತ್ತು ಮದ್ಯಪಾನದಿಂದ ದೂರವಿರಿ: ಇವು ಕಿಡ್ನಿ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವ ಸಾಧ್ಯತೆ ಇದೆ.

ಸ್ಥೂಲಕಾಯವು ಕೇವಲ ದೇಹದ ತೂಕ ಹೆಚ್ಚಳವಲ್ಲ, ಇದು ಕಿಡ್ನಿ ಸೇರಿದಂತೆ ಹಲವು ಅಂಗಗಳ ಆರೋಗ್ಯಕ್ಕೂ ಅಪಾಯಕಾರಿಯಾಗಿದೆ. ಆದ್ದರಿಂದ ಆರೋಗ್ಯಕರ ಜೀವನಶೈಲಿ, ಸರಿಯಾದ ಆಹಾರ ಮತ್ತು ನಿಯಮಿತ ಆರೋಗ್ಯ ತಪಾಸಣೆ ಮೂಲಕ ಕಿಡ್ನಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಯತೀಂದ್ರ – Kannada News

ಬೆಂಗಳೂರು, ಜೂನ್​ 03: ನೂತನ ಸಿಎಂ ಡಿ.ಕೆ. ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ ಡಾ. ಯತೀಂದ್ರ ಸಿದ್ದರಾಮಯ್ಯ ಸೇರ್ಪಡೆಯಾಗಿದ್ದಾರೆ. ರಾಜ್ಯಪಾಲರು ನೂತನ ಸಚಿವರಿಗೆ ಪ್ರಮಾಣವಚನ ಬೋಧಿಸಿದ್ದು, ಈ ವೇಳೆ ತದೇಕ ಚಿತ್ತದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಪುತ್ರನನ್ನು ನೋಡಿದ್ದಾರೆ. ಜೊತೆಗೆ ಪಕ್ಕದಲ್ಲಿದ್ದ ಹೈಕೋರ್ಟ್​​ ಸಿಜೆಗೆ ತಮ್ಮ ಪುತ್ರ ಎಂದು ಪರಿಚಯಿಸಿದ್ದಾರೆ. ಪ್ರಮಾಣವಚನ ಬಳಿಕ ತಂದೆಯ ಕಾಲುಮುಟ್ಟಿ ನಮಸ್ಕರಿಸಿ ಯತೀಂದ್ರ ಕೂಡ ಆಶೀರ್ವಾದ ಪಡೆದಿದ್ದಾರೆ. ಪುತ್ರ ಭುಜ ಮುಟ್ಟಿ ಮಾಜಿ ಸಿಎಂ ಸಿದ್ದರಾಮಯ್ಯ ಹಾರೈಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ

ಇಂದು (ಜೂನ್ 03) ಡಿಕೆ ಶಿವಕುಮಾರ್ (DK Shivakumar) ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಹಲವು ಕಾಂಗ್ರೆಸ್ ಮುಖಂಡರು, ಸ್ವಾಮೀಜಿಗಳು, ಕೆಲ ಸಾಹಿತಿಗಳು, ಜೊತೆಗೆ ಕನ್ನಡ ಚಿತ್ರರಂಗದ ಹಲವು ಸೆಲೆಬ್ರಿಟಿಗಳು ಸಹ ಭಾಗಿ ಆಗಿದ್ದರು. ನಟಿ ರಮ್ಯಾ, ನಟ ಪ್ರೇಮ್, ಶಿವರಾಜ್ ಕುಮಾರ್ ಇನ್ನೂ ಹಲವರು ಪದಗ್ರಹಣಕ್ಕೆ ಸಾಕ್ಷಿಯಾದರು. ಕಾರ್ಯಕ್ರಮದ ಬಳಿಕ ಟಿವಿ9 ಜೊತೆಗೆ ಮಾತನಾಡಿದ ನಟ ಶಿವರಾಜ್ ಕುಮಾರ್, ಡಿಕೆ ಶಿವಕುಮಾರ್ ಅವರು ಸಿಎಂ ಆಗಿರುವುದು ಸಂತಸ, ಹೊಸ ಸಿಎಂ ಅವರ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ. ಅವರಿಗೆ ಒಳಿತಾಗಲಿ ಎಂದರು. ಶಿವರಾಜ್ ಕುಮಾರ್ ಹೇಳಿದ್ದೇನು? ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

‘ಪೆದ್ದಿ’ ಪ್ರೀಮಿಯರ್ ಶೋಗೆ ಬೆಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ: ಕಾರಣ? – Kannada News

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ನಾಳೆ (ಜೂನ್ 4) ಅಧಿಕೃತವಾಗಿ ಬಿಡುಗಡೆ ಆಗುತ್ತಿದೆ. ಆದರೆ ಇಂದೇ (ಜೂನ್ 3) ಹಲವೆಡೆ ಸಿನಿಮಾದ ಪ್ರೀಮಿಯರ್ ಶೋ ಆಯೋಜಿಸಲಾಗಿದೆ. ಬೆಂಗಳೂರಿನ ಹಲವಾರು ಚಿತ್ರಮಂದಿರಗಳಲ್ಲಿ ಸಿನಿಮಾದ ಪೇಯ್ಡ್ ಪ್ರೀಮಿಯರ್ ಶೋ ಆಯೋಜಿಸಲಾಗಿದೆ. ಆದರೆ ಬೆಂಗಳೂರಿನ ಪ್ರೀಮಿಯರ್ ಶೋಗಳಿಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೊದಲ ಪ್ರೀಮಿಯರ್ ಶೋ ಆರಂಭಕ್ಕೆ ಕೆಲವೇ ಗಂಟೆಗಳು ಬಾಕಿ ಇದ್ದು, ಹಲವೆಡೆ ಟಿಕೆಟ್ ಬಿಕರಿ ಆಗಿಲ್ಲ.

‘ಪೆದ್ದಿ’ ಸಿನಿಮಾದ ಪ್ರೀಮಿಯರ್ ಶೋ ಇಂದು ರಾತ್ರಿ 8 ಗಂಟೆಗೆ ಆರಂಭವಾಗುತ್ತಿದೆ. ನಗರದ ಹಲವು ಮಲ್ಟಿಪ್ಲೆಕ್ಸ್ ಮತ್ತು ಸಿಂಗಲ್ ಸ್ಕ್ರೀನ್​​ಗಳಲ್ಲಿ ಪ್ರೀಮಿಯರ್ ಶೋ ಪ್ರದರ್ಶಿಸಲಾಗುತ್ತಿದೆ. ಆದರೆ ಬುಕ್ ಮೈ ಶೋ ಮಾಹಿತಿ ಪ್ರಕಾರ ಹಲವು ಚಿತ್ರಮಂದಿರಗಳಲ್ಲಿ ಟಿಕೆಟ್ ಸೂಕ್ತವಾಗಿ ಬಿಕರಿ ಆಗಿಲ್ಲ. ಬಹುತೇಕ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಪ್ರೀಮಿಯರ್ ಶೋನ ಬುಕಿಂಗ್ ಅನ್ನು ಬಹು ತಡವಾಗಿ ಆರಂಭಿಸಿದ್ದು, ಈ ನೀರಸ ಪ್ರತಿಕ್ರಿಯೆಗೆ ಮುಖ್ಯ ಕಾರಣ. ಮೊದಲಿಗೆ ಜೂನ್ 4 ರ ಶೋನ ಟಿಕೆಟ್​​ಗಳ ಅಡ್ವಾನ್ಸ್ ಬುಕಿಂಗ್ ಓಪನ್ ಮಾಡಲಾಗಿತ್ತು. ಹಾಗಾಗಿ ಹೆಚ್ಚಿನ ಅಭಿಮಾನಿಗಳು ಜೂನ್ 4 ರ ಮುಂಜಾನೆಯ ಶೋ ಅಂದರೆ 6:30 ಶೋಗೆ ಟಿಕೆಟ್ ಬುಕ್ ಮಾಡಿಕೊಂಡಿದ್ದರು. ಅದಾದ ಬಳಿಕ ಬಹಳ ತಡವಾಗಿ ಇಂದು (ಜೂನ್ 3) ರಾತ್ರಿಯ ಪ್ರೀಮಿಯರ್ ಶೋಗೆ ಅಡ್ವಾನ್ಸ್ ಬುಕಿಂಗ್ ತೆರೆಯಲಾಗಿದೆ. ಜೂನ್ 4 ರ ಶೋಗೆ ಹೆಚ್ಚಿನ ಜನ ಬುಕಿಂಗ್ ಮಾಡಿಕೊಂಡಿರುವ ಕಾರಣ ಇಂದು ರಾತ್ರಿಯ ಶೋಗಳಿಗೆ ಹೆಚ್ಚು ಬುಕಿಂಗ್ ಆಗಿಲ್ಲ.

ಇದನ್ನೂ ಓದಿ:ರಾಮ್ ಚರಣ್ ಬಾಡಿಗಾರ್ಡ್ ಸಾಮಾನ್ಯ ಮನುಷ್ಯ ಅಲ್ಲ

ಅದು ಮಾತ್ರವೇ ಅಲ್ಲದೆ, ಇಂದು ರಾತ್ರಿಯ ಶೋಗೆ ಭಾರಿ ಮೊತ್ತದ ಟಿಕೆಟ್ ದರವನ್ನು ನಿಗದಿಪಡಿಸಲಾಗಿದೆ. ಇಂದು ರಾತ್ರಿಯ ಶೋಗಳಿಗೆ ಸಿಂಗಲ್ ಸ್ಕ್ರೀನ್​​ನಲ್ಲಿ 500 ರಿಂದ 300 ಹಾಗೂ ಮಲ್ಟಿಪ್ಲೆಕ್ಸ್​​ನಗಳಲ್ಲಿ 600 ರಿಂದ 1200 ರೂ ವರೆಗೆ ಟಿಕೆಟ್ ನಿಗದಿಪಡಿಸಲಾಗಿದೆ. ಅದೇ ನಾಳೆಯ ಅಂದರೆ ಜೂನ್ 4 ರ ಬೆಳಿಗಿನ ಶೋಗಳಿಗೆ ಇದರ ಅರ್ಧದಷ್ಟು ಟಿಕೆಟ್ ಬೆಲೆ ಇದೆ. ಹಾಗಾಗಿ ಹೆಚ್ಚಿನ ಜನ ಜೂನ್ 4 ರಂದೇ ಸಿನಿಮಾಕ್ಕೆ ಟಿಕೆಟ್​​ಗಳನ್ನು ಮುಂಗಡವಾಗಿ ಬುಕ್ ಮಾಡಿಕೊಂಡಿದ್ದು, ಸಿನಿಮಾ ನೋಡಲು ಕಾತರರಾಗಿದ್ದಾರೆ. ಒಟ್ಟಾರೆಯಾಗಿ ಕೆಟ್ಟ ಪ್ಲಾನಿಂಗ್​​ ಇಂದಾಗಿ ಇಂದಿನ ಪ್ರೀಮಿಯರ್ ಶೋಗೆ ನಿರೀಕ್ಷಿತ ಮಟ್ಟದ ಪ್ರತಿಕ್ರಿಯೆ ಪಡೆಯಲು ‘ಪೆದ್ದಿ’ ವಿಫಲವಾಗಿದೆ.

‘ಪೆದ್ದಿ’ ಸಿನಿಮಾನಲ್ಲಿ ರಾಮ್ ಚರಣ್ ಜೊತೆಗೆ ಶಿವರಾಜ್ ಕುಮಾರ್ ಸಹ ನಟಿಸಿದ್ದು, ಕರ್ನಾಟಕದಲ್ಲಿಯೂ ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆಗಳಿವೆ. ಸಿನಿಮಾನಲ್ಲಿ ಜಾನ್ಹವಿ ಕಪೂರ್ ನಾಯಕಿಯಾಗಿ ನಟಿಸಿದ್ದಾರೆ. ಸಿನಿಮಾ ಅನ್ನು ಬುಚ್ಚಿಬಾಬು ಸನಾ ನಿರ್ದೇಶಿಸಿದ್ದಾರೆ. ಎಆರ್ ರೆಹಮಾನ್ ಸಂಗೀತವಿದೆ. ಸಿನಿಮಾ ನಿರ್ಮಾಣ ಮಾಡಿರುವುದು ಮೈತ್ರಿ ಮೂವಿ ಮೇಕರ್ಸ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Exit mobile version