ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ – Kannada News | Valmiki Development Corporation Scam: CBI Raids in Ballari Close Aide of Former Karnataka Minister B Nagendra
ಬಳ್ಳಾರಿ, ಡಿಸೆಂಬರ್ 31: ಮಾಜಿ ಸಚಿವ ಬಿ. ನಾಗೇಂದ್ರ ಅವರ ಆಪ್ತ ವಿಶ್ವನಾಥ ಮನೆ ಮೇಲೆ ಬಳ್ಳಾರಿಯಲ್ಲಿ ಸಿಬಿಐ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ. ಬಳ್ಳಾರಿ ನಗರದ ಬೆಂಗಳೂರು ರಸ್ತೆಯಲ್ಲಿರುವ ವಿಶ್ವನಾಥ ನಿವಾಸಕ್ಕೆ ನಾಲ್ಕು ಜನ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಮನೆ ಪರಿಶೀಲನೆ ನಡೆಸಲಾಗಿದೆ. ಈ ವೇಳೆ ವಿಶ್ವನಾಥ ಮನೆಯಲ್ಲಿಲ್ಲದ ಕಾರಣ, ಅವರ ಸಹೋದರ ಮಹೇಶ್ರನ್ನು ಸಿಬಿಐ ಅಧಿಕಾರಿಗಳು ಬ್ರೂಸ್ ಪೇಟೆ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ.ಠಾಣೆಯಲ್ಲಿಯೇ ಸಿಬಿಐ ಅಧಿಕಾರಿಗಳು ವಿಶ್ವನಾಥ ಸಂಬಂಧಿತ ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದಾರೆ. ಈ…