ಪತ್ನಿಯ ಪಾರ್ಥಿವ ಶರೀರವನ್ನ ಮನೆಯಿಂದ ಕೊಂಡೊಯ್ಯುವಾಗ ಬಿಕ್ಕಿ ಬಿಕ್ಕಿ ಅತ್ತ ದೇವೇಗೌಡ್ರು – Kannada News | H.D. Deve Gowda Grieves as Wife Chennamma Embarks on Final Journey

ಬೆಂಗಳೂರು, ಜುಲೈ 19: ಚೆನ್ನಮ್ಮ ಅವರ ಪಾರ್ಥಿವ ಶರೀರವನ್ನು ಮನೆಯಿಂದ ಅಂತಿಮ ಯಾತ್ರೆಗೆ ಕೊಂಡೊಯ್ಯುವ ಸಂದರ್ಭದಲ್ಲಿ ಹೆಚ್​.ಡಿ. ದೇವೇಗೌಡರು ತೀವ್ರವಾಗಿ ಭಾವುಕರಾದರು. ಪತ್ನಿ ಅಗಲಿಕೆಯ ನೋವು ತಾಳಲಾರದೆ ಅವರು ಬಿಕ್ಕಿ ಬಿಕ್ಕಿ ಅತ್ತ ದೃಶ್ಯಗಳು ಎಲ್ಲರ ಮನಸ್ಸನ್ನು ಕಲಕಿದವು. ಶೈತ್ಯಾಗಾರ ಪೆಟ್ಟಿಗೆಯ ಮೇಲೆ ಕೈಯಿಟ್ಟು ಕಣ್ಣೀರಿಟ್ಟ ದೇವೇಗೌಡರು, ತಮ್ಮ ಜೀವನ ಸಂಗಾತಿಯನ್ನು ಕಳೆದುಕೊಂಡ ದುಃಖವನ್ನು ವ್ಯಕ್ತಪಡಿಸಿದರು. ಅವರ ಪುತ್ರಿ ಹಾಗೂ ಇತರ ಕುಟುಂಬ ಸದಸ್ಯರು ಅವರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು.

ಈ ನೋವಿನ ಸಂದರ್ಭದಲ್ಲಿ, ಮಾಜಿ ಪ್ರಧಾನಮಂತ್ರಿಯವರ ಪತ್ನಿಯ ನಿಧನಕ್ಕೆ ಅನೇಕ ಗಣ್ಯರು ಮತ್ತು ಸಾರ್ವಜನಿಕರು ಸಂತಾಪ ಸೂಚಿಸಿದ್ದಾರೆ. ಚೆನ್ನಮ್ಮ ಅವರ ಅಂತಿಮ ಯಾತ್ರೆಯು ಕುಟುಂಬದ ಸದಸ್ಯರು, ಸ್ನೇಹಿತರು ಮತ್ತು ಬೆಂಬಲಿಗರ ಸಮ್ಮುಖದಲ್ಲಿ ನಡೆಯಿತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಟಿಎಂಸಿ ಬಂಡಾಯ ಸಂಸದರಿಗೂ ಆಹ್ವಾನ ವಿರೋಧಿಸಿ ಸರ್ವಪಕ್ಷ ಸಭೆಯಿಂದ ಹೊರನಡೆದ ವಿರೋಧ ಪಕ್ಷಗಳು – Kannada News | Opposition walks out of All Party Meet Over Invite To TMC Rebels to Meeting

ನವದೆಹಲಿ, ಜುಲೈ 19: ಸಂಸತ್ತಿನ ಮುಂಗಾರು ಅಧಿವೇಶನದ (Parliament Monsoon Session) ಮುನ್ನಾದಿನವಾದ ಇಂದು (ಭಾನುವಾರ) ಆಯೋಜಿಸಲಾಗಿದ್ದ ಸರ್ವಪಕ್ಷ ಸಭೆಯಿಂದ ವಿರೋಧ ಪಕ್ಷಗಳ ನಾಯಕರು ವಾಕ್‌ಔಟ್ ನಡೆಸಿದರು. ತೃಣಮೂಲ ಕಾಂಗ್ರೆಸ್ (TMC) ಪಕ್ಷದ ಹಲವು ಬಂಡಾಯ ಸಂಸದರನ್ನು ಒಳಗೊಂಡ ಹೊಸದಾಗಿ ರೂಪುಗೊಂಡಿರುವ ‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ (NCPI) ಪಕ್ಷವು ಸಭೆಯಲ್ಲಿ ಭಾಗವಹಿಸುವುದನ್ನು ವಿರೋಧಿಸಿ ಈ ಪ್ರತಿಭಟನೆ ನಡೆಸಲಾಯಿತು. ಆದರೆ, ಕೆಲವೇ ನಿಮಿಷಗಳಲ್ಲಿ ಪ್ರತಿಪಕ್ಷಗಳ ಸಂಸದರು ಸಭೆಗೆ ಮರಳಿದರು.

ಕಳೆದ ತಿಂಗಳು ಸುಮಾರು 20 ಬಂಡಾಯ ಟಿಎಂಸಿ ಸಂಸದರು ಎನ್‌ಸಿಪಿಐ (NCPI) ಪಕ್ಷದೊಂದಿಗೆ ವಿಲೀನಗೊಂಡಿದ್ದರು. ಆದರೆ ಈ ವಿಲೀನಕ್ಕೆ ಇನ್ನೂ ಅಧಿಕೃತವಾಗಿ ಅನುಮೋದನೆ ಸಿಗದ ಕಾರಣ, ಆ ಪಕ್ಷವನ್ನು ಸಭೆಗೆ ಸೇರಿಸಿಕೊಂಡಿರುವುದಕ್ಕೆ ವಿರೋಧ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದವು. ಸಂಸತ್ತಿನ ಅಧಿಕೃತ ವೆಬ್‌ಸೈಟ್‌ನಲ್ಲಿ ಈ 20 ಬಂಡಾಯ ಸಂಸದರನ್ನು ಇಂದಿಗೂ ತೃಣಮೂಲ ಕಾಂಗ್ರೆಸ್‌ನ ಸದಸ್ಯರು ಎಂದೇ ತೋರಿಸಲಾಗುತ್ತಿದೆ. ಹೀಗಾಗಿ ವಿರೋಧ ಪಕ್ಷಗಳ ಈ ವಾಕ್‌ಔಟ್ ಕೇವಲ ಸಾಂಕೇತಿಕ ಪ್ರತಿಭಟನೆಯಾಗಿತ್ತು.

ಇದನ್ನೂ ಓದಿ: Parliament Monsoon Session: ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

ಟಿಎಂಸಿ ನಾಯಕರ ಆಕ್ಷೇಪ:

ಈ ವೇಳೆ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಮಾತನಾಡಿ, “ಸಂಸತ್ತಿನಲ್ಲಿ ತೃಣಮೂಲ ಕಾಂಗ್ರೆಸ್‌ನ ಬಲ ಇನ್ನೂ 28 ಎಂದೇ ತೋರಿಸುತ್ತಿದೆ. ಹೀಗಿರುವಾಗ ಯಾವ ಆಧಾರದ ಮೇಲೆ ಸಂಸದೀಯ ವ್ಯವಹಾರಗಳ ಸಚಿವರು ಬಂಡಾಯಗಾರರ ಪಕ್ಷವನ್ನು ಸರ್ವಪಕ್ಷ ಸಭೆಗೆ ಆಹ್ವಾನಿಸಿದ್ದಾರೆ?” ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಬಂಗಾಳದಲ್ಲಿ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಕಚೇರಿ ನೆಲಸಮ

ಬಂಡಾಯ ನಾಯಕರ ಸ್ಪಷ್ಟನೆ:

ಇದೇ ವೇಳೆ, ಎನ್‌ಸಿಪಿಐ (ಬಂಡಾಯ ಬಣ) ಬಣದ ನಾಯಕಿಯಾಗಿರುವ ಕಾಕೊಲಿ ಘೋಷ್ ದಸ್ತಿದಾರ್ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಲು ಅವಕಾಶ ನೀಡಿದ್ದಕ್ಕಾಗಿ ಸಂಸದೀಯ ವ್ಯವಹಾರಗಳ ಸಚಿವರಿಗೆ ಧನ್ಯವಾದ ಅರ್ಪಿಸಿದರು. ಟಿಎಂಸಿ ಬಂಡಾಯ ಸಂಸದ ಸುದೀಪ್ ಬಂದೋಪಾಧ್ಯಾಯ ಮಾತನಾಡಿ, “20 ಸಂಸದರನ್ನು ಹೊಂದಿರುವ ನಮ್ಮ ಹೊಸ ಪಕ್ಷವನ್ನು ಆಹ್ವಾನಿಸಲಾಗಿತ್ತು. ನಾವು ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಿದ್ದೇವೆ. ಸದನವು ವಿರೋಧ ಪಕ್ಷಗಳಿಗೂ ಸೇರಿದ್ದು ಎಂಬುದನ್ನು ಒಪ್ಪಿಕೊಳ್ಳಬೇಕು. ಸದನ ಸುಗಮವಾಗಿ ನಡೆಯಲು ಸರ್ಕಾರವೇ ಜವಾಬ್ದಾರಿ ಹೊರಬೇಕು. ನಮ್ಮ ಪಕ್ಷವು ಜಾತ್ಯತೀತತೆ, ಕೋಮು ಸೌಹಾರ್ದತೆ ಮತ್ತು ರಾಷ್ಟ್ರೀಯ ಐಕ್ಯತೆಗೆ ಬದ್ಧವಾಗಿದೆ. ನಮ್ಮ ಪಕ್ಷದ 20 ಸಂಸದರಲ್ಲಿ ಮೂವರು ಮುಸ್ಲಿಂ ಸಂಸದರಿದ್ದಾರೆ” ಎಂದರು.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸಭೆ:

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯ ಮುನ್ನ ಮಾತನಾಡಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಮುಂಗಾರು ಅಧಿವೇಶನವನ್ನು ಸುಗಮವಾಗಿ ನಡೆಸಲು ಎಲ್ಲಾ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಿದರು. “ಸಂಸತ್ತಿನ ಮುಂಗಾರು ಅಧಿವೇಶನ ನಾಳೆಯಿಂದ ಆರಂಭವಾಗುತ್ತಿದ್ದು, ಇಂದು ಎಲ್ಲಾ ಪಕ್ಷಗಳ ನಾಯಕರ ಸಭೆ ಕರೆಯಲಾಗಿದೆ. ಸಂಸತ್ತು ಎಲ್ಲರಿಗೂ ಸೇರಿದ್ದಾಗಿದ್ದು, ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳು ಒಟ್ಟಾಗಿ ಶಾಸಕಾಂಗ ವ್ಯವಹಾರಗಳನ್ನು ಸುಗಮವಾಗಿ ನಡೆಸಲು ಸಹಕರಿಸುವ ನಿರೀಕ್ಷೆಯಿದೆ. ಸಂಸತ್ತು ಎಷ್ಟು ಚೆನ್ನಾಗಿ ಕಾರ್ಯನಿರ್ವಹಿಸುತ್ತದೆಯೋ, ದೇಶಕ್ಕೆ ಅಷ್ಟೇ ಹೆಚ್ವು ಪ್ರಯೋಜನವಾಗುತ್ತದೆ. ನಾವು ವಿರೋಧ ಪಕ್ಷಗಳ ಮಾತುಗಳನ್ನು ಕೇಳುತ್ತೇವೆ, ಅವರು ಕೂಡ ನಮ್ಮ ಮಾತನ್ನು ಕೇಳುತ್ತಾರೆ ಎಂಬ ಭರವಸೆ ನಮಗಿದೆ” ಎಂದು ಕಿರಣ್ ರಿಜಿಜು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs ENG: 3 ಪಂದ್ಯಗಳಲ್ಲೂ ಟಾಸ್ ಸೋತ ಗಿಲ್; ಭಾರತ ತಂಡದಲ್ಲಿ 3 ಬದಲಾವಣೆ – Kannada News | IND vs ENG 3rd ODI: Lords Series Decider Preview, Playing XI and India’s 22 Year Wait

ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಪ್ರಸ್ತುತ 1-1 ರಲ್ಲಿ ಸಮಬಲಗೊಂಡಿದೆ. ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಮೊದಲ ಪಂದ್ಯವನ್ನು ಭಾರತ 6 ವಿಕೆಟ್‌ಗಳಿಂದ ಗೆದ್ದುಕೊಂಡಿತು. ಏತನ್ಮಧ್ಯೆ, ಕಾರ್ಡಿಫ್‌ನಲ್ಲಿ ನಡೆದ ಪಂದ್ಯದಲ್ಲಿ ಇಂಗ್ಲೆಂಡ್ 4 ವಿಕೆಟ್‌ಗಳ ಜಯ ಸಾಧಿಸುವ ಮೂಲಕ ಸರಣಿಯನ್ನು ಜೀವಂತವಾಗಿರಿಸಿತು. ಇದೀಗ ಲಾರ್ಡ್ಸ್‌ನಲ್ಲಿ ಉಭಯ ತಂಡಗಳ ನಡುವಿನ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಗೆದ್ದ ತಂಡಕ್ಕೆ ಸರಣಿ ಕೈಸೇರಲಿದೆ. ಈಗಾಗಲೇ ಟಿ20 ಸರಣಿ ಸೋತಿರುವ ಟೀಂ ಇಂಡಿಯಾ ಏಕದಿನ ಸರಣಿ ಗೆಲುವಿನೊಂದಿಗೆ ಈ ಪ್ರವಾಸಕ್ಕೆ ಅಂತ್ಯ ಹಾಡಲು ನೋಡುತ್ತಿದೆ.

ಟಾಸ್ ಗೆದ್ದ ಇಂಗ್ಲೆಂಡ್‌ ಬ್ಯಾಟಿಂಗ್‌ ಆಯ್ಕೆ

ಈ ಸರಣಿ ನಿರ್ಧಾರಕ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್‌ ಮೊದಲು ಬ್ಯಾಟಿಂಗ್‌ ಮಾಡುತ್ತಿದೆ. ಇದರ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಅದರಂತೆ ಇಂಗ್ಲೆಂಡ್‌ ತಂಡದಲ್ಲಿ 1 ಬದಲಾವಣೆಯಾಗಿದ್ದರೆ, ಟೀಂ ಇಂಡಿಯಾದಲ್ಲಿ ಮೂರು ಬದಲಾವಣೆಗಳಾಗಿವೆ. ಜಸ್ಪ್ರೀತ್ ಬುಮ್ರಾ ಗಾಯದ ಕಾರಣದಿಂದಾಗಿ ಈ ಪಂದ್ಯದಿಂದ ಹೊರಗುಳಿದಿದ್ದಾರೆ. ಹಾಗೆಯೇ ವಾಷಿಂಗ್ಟನ್ ಸುಂದರ್ ಕೂಡ ಈ ಮೊದಲೇ ಗಾಯಗೊಂಡು ಪಂದ್ಯದಿಂದ ಹೊರಬಿದ್ದಿದ್ದರು. ಇವರಿಬ್ಬರ ಜೊತೆಗೆ ಶಿವಂ ದುಬೆ ಅವರನ್ನು ಈ ಪಂದ್ಯದಿಂದ ಕೈಬಿಡಲಾಗಿದೆ. ಈ ಮೂವರ ಬದಲಿಗೆ ಕೆಎಲ್ ರಾಹುಲ್, ಪ್ರಿನ್ಸ್ ಯಾದವ್ ಹಾಗೂ ಅರ್ಷದೀಪ್ ಸಿಂಗ್​ರನ್ನು ಆಡಿಸಲಾಗುತ್ತಿದೆ.

22 ವರ್ಷಗಳಿಂದ ಗೆಲುವಿನ ಬರ

ವಾಸ್ತವವಾಗಿ ಟೀಂ ಇಂಡಿಯಾಗೆ ಲಾರ್ಡ್ಸ್ ಮೈದಾನವು 1983 ರ ವಿಶ್ವಕಪ್ ಪ್ರಶಸ್ತಿ ಗೆಲುವು ಮತ್ತು 2002 ರ ನ್ಯಾಟ್‌ವೆಸ್ಟ್ ಟ್ರೋಫಿ ಫೈನಲ್‌ನಂತಹ ಸ್ಮರಣೀಯ ನೆನಪುಗಳಿಗೆ ಹೆಸರುವಾಸಿಯಾಗಿದೆ. ಆದರೆ ಕಟು ವಾಸ್ತವವೆಂದರೆ 2004 ರಿಂದ ಟೀಂ ಇಂಡಿಯಾ ಈ ಮೈದಾನದಲ್ಲಿ ಇಂಗ್ಲೆಂಡ್ ವಿರುದ್ಧ ಒಂದೇ ಒಂದು ಏಕದಿನ ಪಂದ್ಯವನ್ನು ಗೆದ್ದಿಲ್ಲ. ಲಾರ್ಡ್ಸ್‌ನಲ್ಲಿ ಭಾರತದ ಕೊನೆಯ ಏಕದಿನ ಗೆಲುವು ಸೆಪ್ಟೆಂಬರ್ 5, 2004 ರಂದು ಬಂದಿತು, ಆ ಪಂದ್ಯದಲ್ಲಿ ಸೌರವ್ ಗಂಗೂಲಿ ನಾಯಕತ್ವದಲ್ಲಿ ಭಾರತ ತಂಡವು ಇಂಗ್ಲೆಂಡ್ ತಂಡವನ್ನು 23 ರನ್‌ಗಳಿಂದ ಸೋಲಿಸಿತು. ಆ ಐತಿಹಾಸಿಕ ವಿಜಯದ ನಂತರ ಈಗ ಪೂರ್ಣ 22 ವರ್ಷಗಳು ಕಳೆದಿವೆ, ಆದರೆ ಟೀಂ ಇಂಡಿಯಾ ಇನ್ನೂ ಇಲ್ಲಿ ವಿಜಯವನ್ನು ಸವಿದಿಲ್ಲ.

ಉಭಯ ತಂಡಗಳ ಪ್ಲೇಯಿಂಗ್ 11

ಭಾರತ ತಂಡ: ಶುಭ್​ಮನ್ ಗಿಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಕೆಎಲ್ ರಾಹುಲ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್, ಗುರ್ನೂರ್ ಬ್ರಾರ್.

ಇಂಗ್ಲೆಂಡ್‌ ತಂಡ: ಜಾಕೋಬ್ ಬೆಥೆಲ್, ಬೆನ್ ಡಕೆಟ್, ಜೋ ರೂಟ್, ಹ್ಯಾರಿ ಬ್ರೂಕ್ (ನಾಯಕ), ಜೋಸ್ ಬಟ್ಲರ್ (ವಿಕೆಟ್ ಕೀಪರ್), ಸ್ಯಾಮ್ ಕರನ್, ವಿಲ್ ಜ್ಯಾಕ್ಸ್, ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜೋಶ್ ಟಂಗ್, ಆದಿಲ್ ರಶೀದ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Life Style: ನಿಮ್ಮ ಚಿನ್ನದ ಆಭರಣಗಳು ಕಪ್ಪಾಗಿವೆಯೇ?, ನಿಮಿಷಗಳಲ್ಲಿ ಹೊಳೆಯುವಂತೆ ಮಾಡಲು ಇಲ್ಲಿದೆ ಟಿಪ್ಸ್ – Kannada News | How to clean gold jewellery at home Here is the easy method tips

ಚಿನ್ನದ (Gold) ಆಭರಣಗಳು ಪ್ರತಿಯೊಬ್ಬರಿಗೂ ಅಮೂಲ್ಯವಾದ ಆಸ್ತಿ. ಮದುವೆ, ಹಬ್ಬ ಅಥವಾ ವಿಶೇಷ ಕಾರ್ಯಕ್ರಮಗಳಲ್ಲಿ ಧರಿಸುವ ಈ ಆಭರಣಗಳು ಪ್ರತಿದಿನದ ಬಳಕೆಯಿಂದ ನಿಧಾನವಾಗಿ ತಮ್ಮ ಹೊಳಪನ್ನು ಕಳೆದುಕೊಳ್ಳುತ್ತವೆ. ಬೆವರು, ಧೂಳು, ಮೇಕಪ್ ಉತ್ಪನ್ನಗಳು ಮತ್ತು ಪರಿಸರದ ಕಸ ಆಭರಣದ ಮೇಲೆ ಅಂಟಿಕೊಂಡು ಅದರ ಕಾಂತಿಯನ್ನು ಕಡಿಮೆ ಮಾಡಬಹುದು. ಆದರೆ ಇದಕ್ಕಾಗಿ ಪ್ರತಿ ಬಾರಿ ಜ್ಯುವೆಲ್ಲರ್ ಬಳಿ ಹೋಗಬೇಕೆಂದಿಲ್ಲ. ಮನೆಯಲ್ಲೇ ಸುಲಭವಾಗಿ ಸಿಗುವ ಕೆಲವು ವಸ್ತುಗಳ ಸಹಾಯದಿಂದ ಚಿನ್ನದ ಆಭರಣಗಳನ್ನು ಸುರಕ್ಷಿತವಾಗಿ ಸ್ವಚ್ಛಗೊಳಿಸಿ ಮತ್ತೆ ಹೊಸದಿನಂತೆ ಹೊಳೆಯುವಂತೆ ಮಾಡಬಹುದು.

ಚಿನ್ನದ ಆಭರಣಗಳನ್ನು ಸ್ವಚ್ಛಗೊಳಿಸಲು ಅತ್ಯಂತ ಸುರಕ್ಷಿತ ವಿಧಾನವೆಂದರೆ ಉಗುರುಬೆಚ್ಚಗಿನ ನೀರು ಮತ್ತು ಮೃದುವಾದ ಲಿಕ್ವಿಡ್ ಸೋಪ್ ಬಳಸುವುದು. ಒಂದು ಪಾತ್ರೆಯಲ್ಲಿ ಉಗುರುಬೆಚ್ಚಗಿನ ನೀರಿಗೆ ಕೆಲವು ಹನಿಗಳಷ್ಟು ಲಿಕ್ವಿಡ್ ಸೋಪ್ ಸೇರಿಸಿ, ಆಭರಣಗಳನ್ನು ಸುಮಾರು 15 ರಿಂದ 20 ನಿಮಿಷಗಳ ಕಾಲ ಅದರಲ್ಲಿ ನೆನೆಸಿಡಿ. ನಂತರ ಮೃದುವಾದ ಟೂತ್‌ಬ್ರಶ್‌ನಿಂದ ನಿಧಾನವಾಗಿ ಉಜ್ಜಿ, ಶುದ್ಧ ನೀರಿನಲ್ಲಿ ತೊಳೆದು ಮೃದುವಾದ ಬಟ್ಟೆಯಿಂದ ಒರೆಸಿದರೆ ಆಭರಣದ ಮೇಲಿನ ಕೊಳೆ ದೂರವಾಗಿ ಹೊಳಪು ಮರಳುತ್ತದೆ.

ಆಭರಣದ ಮೇಲೆ ಸ್ವಲ್ಪ ಹೆಚ್ಚು ಕಲೆ ಅಥವಾ ಕೊಳೆ ಇದ್ದರೆ ಬೇಕಿಂಗ್ ಸೋಡಾವನ್ನು ಬಳಸಬಹುದು. ಒಂದು ಚಮಚ ಬೇಕಿಂಗ್ ಸೋಡಾಕ್ಕೆ ಸ್ವಲ್ಪ ನೀರು ಸೇರಿಸಿ ಪೇಸ್ಟ್ ತಯಾರಿಸಿ, ಅದನ್ನು ಆಭರಣದ ಮೇಲೆ ನಿಧಾನವಾಗಿ ಹಚ್ಚಿ ಎರಡು-ಮೂರು ನಿಮಿಷಗಳ ನಂತರ ತೊಳೆದು ಒಣಗಿಸಬಹುದು. ಆದರೆ ಈ ವಿಧಾನವನ್ನು ಮುತ್ತು, ಪಚ್ಚೆ, ಓಪಲ್ ಅಥವಾ ಇತರ ಅಮೂಲ್ಯ ಕಲ್ಲುಗಳಿರುವ ಆಭರಣಗಳಿಗೆ ಬಳಸಬಾರದು. ಏಕೆಂದರೆ ಇದರಿಂದ ರತ್ನಗಳಿಗೆ ಹಾನಿಯಾಗುವ ಸಾಧ್ಯತೆ ಇರುತ್ತದೆ.

ಕೆಲವು ಸಂದರ್ಭಗಳಲ್ಲಿ ನಾನ್-ಜೆಲ್ ಟೂತ್‌ಪೇಸ್ಟ್ ಕೂಡ ಚಿನ್ನದ ಆಭರಣಗಳನ್ನು ಸ್ವಚ್ಛಗೊಳಿಸಲು ಸಹಕಾರಿ. ಅಲ್ಪ ಪ್ರಮಾಣದ ಟೂತ್‌ಪೇಸ್ಟ್ ಹಚ್ಚಿ ಮೃದುವಾದ ಬ್ರಶ್‌ನಿಂದ ನಿಧಾನವಾಗಿ ಸ್ವಚ್ಛಗೊಳಿಸಿ ನಂತರ ನೀರಿನಲ್ಲಿ ತೊಳೆದು ಒಣ ಬಟ್ಟೆಯಿಂದ ಒರೆಸಿದರೆ ಸಣ್ಣ ಕಲೆಗಳು ಮಾಯವಾಗುತ್ತವೆ. ಆದರೆ ಹೆಚ್ಚು ಒತ್ತಡದಿಂದ ಉಜ್ಜುವುದನ್ನು ತಪ್ಪಿಸಬೇಕು.

Hair Wash During Periods: ಪಿರಿಯಡ್ಸ್ ಸಮಯದಲ್ಲಿ ತಲೆಸ್ನಾನ ಮಾಡಿದರೆ ರಕ್ತಸ್ರಾವ ಹೆಚ್ಚಾಗುತ್ತದೆಯೇ?

ತುಂಬಾ ಹಳೆಯದಾಗಿರುವ ಅಥವಾ ಗಟ್ಟಿಯಾದ ಕಲೆ ಹಿಡಿದಿರುವ ಚಿನ್ನದ ಆಭರಣಗಳಿಗೆ ಅಮೋನಿಯಾ ದ್ರಾವಣವನ್ನು ಕೆಲವೊಮ್ಮೆ ಮಾತ್ರ ಬಳಸಬಹುದು. ಒಂದು ಭಾಗ ಅಮೋನಿಯಾಕ್ಕೆ ಆರು ಭಾಗ ನೀರು ಸೇರಿಸಿ ದ್ರಾವಣ ತಯಾರಿಸಿ, ಆಭರಣವನ್ನು ಅದರಲ್ಲಿ ಒಂದು ನಿಮಿಷಕ್ಕಿಂತ ಹೆಚ್ಚು ಸಮಯ ಇಡಬಾರದು. ಬಳಿಕ ತಕ್ಷಣ ಶುದ್ಧ ನೀರಿನಲ್ಲಿ ತೊಳೆದು ಒಣಗಿಸಬೇಕು. ಈ ವಿಧಾನವನ್ನು ಆಗಾಗ ಬಳಸುವುದರಿಂದ ಆಭರಣದ ಫಿನಿಷ್ ಹಾಳಾಗುವ ಸಾಧ್ಯತೆ ಇರುವುದರಿಂದ ಅಗತ್ಯವಿದ್ದಾಗ ಮಾತ್ರ ಬಳಸುವುದು ಉತ್ತಮ.

ಚಿನ್ನದ ಆಭರಣಗಳನ್ನು ಸ್ವಚ್ಛಗೊಳಿಸುವಾಗ ಕೆಲವು ಮುನ್ನೆಚ್ಚರಿಕೆಗಳನ್ನು ಪಾಲಿಸುವುದು ಮುಖ್ಯ. ಗಟ್ಟಿಯಾದ ಬ್ರಶ್ ಅಥವಾ ಸ್ಕ್ರಬ್ಬರ್ ಬಳಸಬಾರದು. ಬ್ಲೀಚ್, ಆಮ್ಲ ಅಥವಾ ತೀವ್ರ ರಾಸಾಯನಿಕ ಕ್ಲೀನರ್‌ಗಳನ್ನು ಬಳಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು. ವಜ್ರ ಅಥವಾ ಇತರ ಅಮೂಲ್ಯ ಕಲ್ಲುಗಳಿರುವ ಆಭರಣಗಳಿಗೆ ಮನೆಮದ್ದು ಪ್ರಯೋಗಿಸುವ ಮೊದಲು ಜ್ಯುವೆಲ್ಲರ್ ಸಲಹೆ ಪಡೆಯುವುದು ಉತ್ತಮ. ಸ್ವಚ್ಛಗೊಳಿಸಿದ ನಂತರ ಆಭರಣಗಳನ್ನು ಸಂಪೂರ್ಣವಾಗಿ ಒಣಗಿದ ಬಳಿಕವೇ ಬಾಕ್ಸ್ ಅಥವಾ ಪೌಚ್‌ನಲ್ಲಿ ಇಡಬೇಕು.

ಇದರ ಜೊತೆಗೆ ಚಿನ್ನದ ಆಭರಣಗಳ ಹೊಳಪು ಹೆಚ್ಚು ದಿನ ಉಳಿಯಬೇಕಾದರೆ ಕೆಲವು ಸರಳ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕು. ಮೇಕಪ್, ಸುಗಂಧ ದ್ರವ್ಯ ಅಥವಾ ಹೇರ್ ಸ್ಪ್ರೇ ಬಳಸಿದ ಬಳಿಕವೇ ಆಭರಣ ಧರಿಸುವುದು ಉತ್ತಮ. ಸ್ನಾನ ಮಾಡುವಾಗ ಅಥವಾ ಈಜುಕೊಳಕ್ಕೆ ಹೋಗುವ ಮೊದಲು ಆಭರಣಗಳನ್ನು ತೆಗೆದು ಇಡಬೇಕು. ಪ್ರತಿಯೊಂದು ಆಭರಣವನ್ನೂ ಪ್ರತ್ಯೇಕ ಮೃದುವಾದ ಬಟ್ಟೆ ಅಥವಾ ಪೌಚ್‌ನಲ್ಲಿ ಸಂಗ್ರಹಿಸಿದರೆ ಗೀರು ಬೀಳುವುದನ್ನು ತಪ್ಪಿಸಬಹುದು. ಕಾಲಕಾಲಕ್ಕೆ ಮೈಕ್ರೋಫೈಬರ್ ಬಟ್ಟೆಯಿಂದ ಒರೆಸುವುದರಿಂದ ಚಿನ್ನದ ಆಭರಣಗಳು ಹೆಚ್ಚು ದಿನ ಹೊಸದಿನಂತೆ ಹೊಳೆಯುತ್ತವೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 3:06 pm, Sun, 19 July 26

Source link

FIFA World Cup 2026: ಫಿಫಾ ಫೈನಲ್ ಹಿನ್ನೆಲೆಯಲ್ಲಿ ಜು. 20 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಕೇರಳ ಸರ್ಕಾರ! – Kannada News | Kerala Declares Holiday for FIFA World Cup 2026 Final: Schools and Colleges Off

ಕೇರಳಿಗರಲ್ಲಿ ಫುಟ್‌ಬಾಲ್ ಆಟದ ಮೇಲಿರುವ ಜಾಗತಿಕ ಮಟ್ಟದ ಕ್ರೇಜ್ ಮತ್ತೊಮ್ಮೆ ಸಾಬೀತಾಗಿದೆ. ಇಂದು ಮಧ್ಯರಾತ್ರಿ ನಡೆಯಲಿರುವ ಫಿಫಾ ವಿಶ್ವಕಪ್ 2026ರ (FIFA World Cup 2026) ಮಹಾ ಫೈನಲ್ ಪಂದ್ಯದ ಹಿನ್ನೆಲೆಯಲ್ಲಿ, ಕೇರಳ ಸರ್ಕಾರವು ಜುಲೈ 20 ರ ಸೋಮವಾರದಂದು ರಾಜ್ಯದ ಎಲ್ಲಾ ಶಾಲೆಗಳು ಹಾಗೂ ಕಾಲೇಜುಗಳು ಸೇರಿದಂತೆ ಶೈಕ್ಷಣಿಕ ಸಂಸ್ಥೆಗಳಿಗೆ ಅಧಿಕೃತ ರಜೆ ಘೋಷಿಸಿದೆ. ಅರ್ಜೆಂಟೀನಾ ಮತ್ತು ಸ್ಪೇನ್ ನಡುವಿನ ಈ ಹೈ-ವೋಲ್ಟೇಜ್ ಪಂದ್ಯವನ್ನು ವೀಕ್ಷಿಸಲು ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಈ ವಿಶಿಷ್ಟ ನಿರ್ಧಾರ ಕೈಗೊಳ್ಳಲಾಗಿದೆ.

ಮಕ್ಕಳ ನಿದ್ದೆಗೆಡಿಸಲಿರುವ ‘ಮೆಸ್ಸಿ ವರ್ಸಸ್ ಸ್ಪೇನ್’ ಕದನ:

ಹಾಲಿ ಚಾಂಪಿಯನ್ ಲಿಯೋನೆಲ್ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ಹಾಗೂ ಯುರೋಪ್ ಚಾಂಪಿಯನ್ ಸ್ಪೇನ್ ನಡುವಿನ ಪ್ರಶಸ್ತಿ ಸಮರವು ಭಾರತೀಯ ಕಾಲಮಾನ (IST) ಭಾನುವಾರ ಮಧ್ಯರಾತ್ರಿ 12:30 ಕ್ಕೆ ಆರಂಭವಾಗಲಿದೆ. ಈ ರೋಮಾಂಚಕ ಪಂದ್ಯ ಮುಕ್ತಾಯಗೊಳ್ಳಲು ಮುಂಜಾನೆವರೆಗೂ ಸಮಯ ಹಿಡಿಯಲಿದ್ದು, ಆ ಬಳಿಕ ವಿಜೇತ ತಂಡದ ಅಭಿಮಾನಿಗಳು ರಸ್ತೆಗಳಲ್ಲಿ ಸಂಭ್ರಮಾಚರಣೆ ನಡೆಸಲಿದ್ದಾರೆ. ಪಂದ್ಯದ ಪ್ರಸಾರದ ಸಮಯದಿಂದಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರು ತಡರಾತ್ರಿಯವರೆಗೆ ಎಚ್ಚರವಿರಬೇಕಾಗುತ್ತದೆ. ಇದರಿಂದ ಸೋಮವಾರದ ದಿನಚರಿಗೆ ತೊಂದರೆಯಾಗಲಿದೆ ಎಂಬುದನ್ನು ಮನಗಂಡು ಈ ರಜೆ ನೀಡಲಾಗಿದೆ.

“ಖುಷಿನಾ ಮಕ್ಕಳೇ?” – ಸೋಷಿಯಲ್ ಮೀಡಿಯಾದಲ್ಲಿ ಸಚಿವರ ಪೋಸ್ಟ್:

ಸಾರ್ವಜನಿಕ ಶಿಕ್ಷಣ ಇಲಾಖೆಯ ಸಚಿವ ಎನ್. ಶಂಶುದ್ದೀನ್ ಅವರು ಈ ನಿರ್ಧಾರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಾ, “ಈಗ ಖುಷಿನಾ ಮಕ್ಕಳೇ?” ಎಂದು ಪ್ರೀತಿಯಿಂದ ಪ್ರಶ್ನಿಸಿದ್ದಾರೆ. ಫುಟ್‌ಬಾಲ್ ಪ್ರೇಮಿಗಳಾದ ವಿದ್ಯಾರ್ಥಿಗಳು, ಪೋಷಕರು ಹಾಗೂ ವಿವಿಧ ಸಂಘಟನೆಗಳಿಂದ ಬಂದ ವ್ಯಾಪಕ ಮನವಿಗಳನ್ನು ಪುರಸ್ಕರಿಸಿ ಮುಖ್ಯಮಂತ್ರಿ ವಿ. ಡಿ. ಸತೀಶನ್ ಅವರ ಕಚೇರಿಯು ಈ ಆದೇಶ ಹೊರಡಿಸಿದೆ. ಮಾಜಿ ಶಿಕ್ಷಣ ಸಚಿವರಾದ ವಿ. ಶಿವನ್‌ಕುಟ್ಟಿ ಸೇರಿದಂತೆ ಹಲವು ರಾಜಕೀಯ ಮುಖಂಡರು ಸಹ ತಡರಾತ್ರಿಯ ಪಂದ್ಯದ ನಂತರ ಮಕ್ಕಳಿಗೆ ತರಗತಿಗಳಿಗೆ ಹಾಜರಾಗಲು ಕಷ್ಟವಾಗುತ್ತದೆ ಎಂಬ ಕಾರಣಕ್ಕೆ ರಜೆ ನೀಡುವಂತೆ ಸರ್ಕಾರವನ್ನು ಒತ್ತಾಯಿಸಿದ್ದರು.

ಇದನ್ನೂ ಓದಿ: ಫಿಫಾ ವಿಶ್ವಕಪ್ ಫೈನಲ್​ನ 21 ರೋಚಕ ಸಂಗತಿಗಳು ನಿಮಗೆ ಗೊತ್ತೇ?

ಪರೀಕ್ಷೆಗಳ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ:

ಸರ್ಕಾರವು ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಿಸಿದ್ದರೂ, ಸೋಮವಾರ (ಜುಲೈ 20) ಮೊದಲೇ ನಿಗದಿಯಾಗಿರುವ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳ ಪರೀಕ್ಷೆಗಳ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಮುಖ್ಯಮಂತ್ರಿ ಕಚೇರಿ (CMO) ಸ್ಪಷ್ಟಪಡಿಸಿದೆ. ಪರೀಕ್ಷೆಗಳು ಎಂದಿನಂತೆ ಜರುಗಲಿವೆ. ರಜೆಯಿಂದಾಗಿ ನಷ್ಟವಾಗುವ ಶೈಕ್ಷಣಿಕ ದಿನವನ್ನು ಸರಿದೂಗಿಸಲು ಮುಂದಿನ ಯಾವುದಾದರೊಂದು ಶನಿವಾರವನ್ನು ಕೆಲಸದ ದಿನವನ್ನಾಗಿ ಪರಿವರ್ತಿಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.

ಕೇರಳದಾದ್ಯಂತ ಹಬ್ಬದ ವಾತಾವರಣ:

ಕೇರಳದಲ್ಲಿ ಫುಟ್‌ಬಾಲ್ ಜ್ವರ ನೆತ್ತಿಗೇರಿದ್ದು, ಇಡೀ ರಾಜ್ಯದಲ್ಲಿ ಹಬ್ಬದ ಸಡಗರ ಮನೆಮಾಡಿದೆ. ವಿವಿಧ ಸ್ಪೋರ್ಟ್ಸ್ ಕ್ಲಬ್‌ಗಳು ಮತ್ತು ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು ಸಾರ್ವಜನಿಕ ಮೈದಾನಗಳು ಹಾಗೂ ಪಾರ್ಕ್‌ಗಳಲ್ಲಿ ಪಂದ್ಯದ ನೇರ ಪ್ರಸಾರ ವೀಕ್ಷಣೆಗಾಗಿ ಬೃಹತ್ ಗಾತ್ರದ ಎಲ್‌ಇಡಿ (LED) ಪರದೆಗಳನ್ನು ಅಳವಡಿಸಿವೆ. ತಿರುವನಂತಪುರಂ ಹಾಗೂ ಕೊಚ್ಚಿಯಂತಹ ನಗರಗಳಲ್ಲಿ ಅಭಿಮಾನಿಗಳ ಬೃಹತ್ ಕಟೌಟ್‌ಗಳು ರಾರಾಜಿಸುತ್ತಿವೆ. ಅಭಿಮಾನಿಗಳ ಸಾಗರವೇ ಹರಿದುಬರುವ ನಿರೀಕ್ಷೆ ಇರುವುದರಿಂದ ಮತ್ತು ಭದ್ರತೆಯ ದೃಷ್ಟಿಯಿಂದ ಕೇರಳ ಪೊಲೀಸರು ಕಟ್ಟುನಿಟ್ಟಿನ ಕಣ್ಗಾವಲು ಹಾಗೂ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ.

ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 2:50 pm, Sun, 19 July 26

Source link

ರಾಷ್ಟ್ರ ಪ್ರಶಸ್ತಿ ವಿಜೇತ ಸಿನಿಮಾಗಳನ್ನು ಎಲ್ಲಿ ವೀಕ್ಷಿಸಬಹುದು? – Kannada News | Where to watch 72 national award winning movies on OTT

ನಿನ್ನೆಯಷ್ಟೆ (ಜುಲೈ 18) 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದೆ. ಕನ್ನಡದ ‘ಮಿಥ್ಯ’ ಸಿನಿಮಾ ಸೇರಿದಂತೆ ಹಲವಾರು ಸಿನಿಮಾಗಳು ಬೇರೆ ಬೇರೆ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ಗೆದ್ದಿವೆ. ಕೆಲವು ಬಹಳ ಜನಪ್ರಿಯ, ಕಮರ್ಶಿಯಲ್ ಸಿನಿಮಾಗಳ ಜೊತೆಗೆ ಚಿತ್ರಮಂದಿರಗಳಲ್ಲಿ ಹೆಚ್ಚು ಗಮನ ಸೆಳೆದ ಆದರೆ ಒಳ್ಳೆಯ ಸಿನಿಮಾಗಳು ಎನಿಸಿಕೊಂಡಿರುವ ಸಿನಿಮಾಗಳಿಗೂ ಸಹ ಪ್ರಶಸ್ತಿ ಸಿಕ್ಕಿವೆ. ಇಂಥಹಾ ಸಿನಿಮಾಗಳನ್ನೆಲ್ಲ ಎಲ್ಲಿ ನೋಡಬಹುದು? ಇಲ್ಲಿದೆ ಮಾಹಿತಿ….

ಮಿಥ್ಯ

ಕನ್ನಡದ ಸಿನಿಮಾ ‘ಮಿಥ್ಯ’ಗೆ ಒಟ್ಟು ಮೂರು ಪ್ರಶಸ್ತಿಗಳು ದೊರಕಿದ್ದು, ಅವುಗಳಲ್ಲಿ ಒಂದು ಪ್ರಾದೇಶಿಕ ಭಾಷೆ ವಿಭಾಗದಲ್ಲಿ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಧಕ್ಕಿದೆ. ಅದಾದ ಬಳಿಕ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ರೂಪಾ ಅವರಿಗೆ ಹಾಗೂ ಅತ್ಯುತ್ತಮ ಬಾಲನಟ ಪ್ರಶಸ್ತಿ ಅತೀಶ್ ಶೆಟ್ಟಿಗೆ ಲಭಿಸಿದೆ. ಈ ಸಿನಿಮಾವನ್ನು ಅಮೆಜಾನ್ ಪ್ರೈಂನಲ್ಲಿ ವೀಕ್ಷಿಸಬಹುದಾಗಿದೆ.

ಪ್ರಶಸ್ತಿ ಪಡೆದ ಸಿನಿಮಾಗಳು ಮತ್ತು ಅವರು ಲಭ್ಯವಿರುವ ಒಟಿಟಿ

ತೀರ್ಪುಗಾರರ ವಿಶೇಷ ಆಯ್ಕೆ-ಮೇಯಳಗನ್- ನಟ್​​ಫ್ಲಿಕ್ಸ್

ಅತ್ಯುತ್ತಮ ನಟ ತೀರ್ಪುಗಾರರ ಆಯ್ಕೆ- ಕ್ಯಾಪ್ಟನ್ ಮಿಲ್ಲರ್ (ಧನುಶ್)

ಅತ್ಯುತ್ತಮ ಆಕ್ಷನ್ -ಮಹಾರಾಜ- ನೆಟ್​​ಫ್ಲಿಕ್ಸ್

ಅತ್ಯುತ್ತಮ ಕೊರಿಯೋಗ್ರಫಿ- ಸ್ತ್ರೀ 2- ಅಮೆಜಾನ್ ಪ್ರೈಂ ವಿಡಿಯೋ

ಅತ್ಯುತ್ತಮ ಸಂಗೀತ- ಅಮರನ್ (ತಮಿಳು)- ನೆಟ್​​ಫ್ಲಿಕ್ಸ್​​

ಅತ್ಯುತ್ತಮ ಹಾಡು- ಆರ್ಟಿಕಲ್ 370 (ಹಿಂದಿ)- ನೆಟ್​​ಫ್ಲಿಕ್ಸ್​​ ಮತ್ತು ಜಿ5

ಅತ್ಯುತ್ತಮ ಪ್ರಸಾಧನ- ಕಮಿಟಿ ಕುರ್ರೋಳ್ಳು – ಇಟಿವಿ ವಿನ್

ಅತ್ಯುತ್ತಮ ವಸ್ತ್ರವಿನ್ಯಾಸ- ಪುಷ್ಪ 2- ನೆಟ್​​ಫ್ಲಿಕ್ಸ್​

ಅತ್ಯುತ್ತಮ ಪ್ರೊಡಕ್ಷನ್ ಡಿಸೈನ್- ಕಲ್ಕಿ 2898 ಎಡಿ ( ತೆಲುಗು)- ಅಮೆಜಾನ್ ಪ್ರೈಂ ವಿಡಿಯೋ

ಅತ್ಯುತ್ತಮ ಸಂಕಲನ- ಅಮರನ್ (ತಮಿಳು)- ನೆಟ್​​ಫ್ಲಿಕ್ಸ್

ಅತ್ಯುತ್ತಮ ಧ್ವನಿ ವಿನ್ಯಾಸ- ಭೂಲ ಭುಲಯ್ಯ (ಹಿಂದಿ)- ನೆಟ್​​ಫ್ಲಿಕ್ಸ್​​

ಅತ್ಯುತ್ತಮ ಸಂಭಾಷಣೆ- ಲಕ್ಕಿ ಭಾಸ್ಕರ್ (ತೆಲುಗು)- ನೆಟ್​​ಫ್ಲಿಕ್ಸ್​​

ಅತ್ಯುತ್ತಮ ಅಡಾಪ್ಟೆಡ್ ಚಿತ್ರಕತೆ -ಸ್ವರಗಂಧರ್ವ (ಮರಾಠಿ)- ಅಮೆಜಾನ್ ಪ್ರೈಂ ವಿಡಿಯೋ

ಅತ್ಯುತ್ತಮ ಚಿತ್ರಕತೆ-ಪುಷ್ಪ 2 (ಸುಕುಮಾರ್)- ನೆಟ್​​ಫ್ಲಿಕ್ಸ್​​

ಅತ್ಯುತ್ತಮ ಸಿನಿಮಾಟೊಗ್ರಫಿ- ಬ್ರಮಯುಗಂ (ಮಲಯಾಳಂ)- ಸೋನಿ ಲಿವ್

ಅತ್ಯುತ್ತಮ ಗಾಯಕಿ- ಎಆರ್ಎಂ (ವೈಕೋಂ ವಿಜಯಲಕ್ಷ್ಮಿ)- ಜಿಯೋ ಹಾಟ್​​ಸ್ಟಾರ್​​

ಪೋಷಕ ನಟ- ಭಕ್ಷಕ್-ಸಂಜಯ್ ಮಿಶ್ರಾ- ನೆಟ್​​ಫ್ಲಿಕ್ಸ್​​

ಅತ್ಯುತ್ತಮ ನಟಿ- ಆರ್ಟಿಕಲ್ 370-ಯಾಮಿ ಗೌತಮ್- ನೆಟ್​​ಫ್ಲಿಕ್ಸ್​ ಮತ್ತು ಜೀ6

ಅತ್ಯುತ್ತಮ ನಟ- ಚಂದು ಚಾಂಪಿಯನ್ (ಕಾರ್ತಿಕ್ ಆರ್ಯನ್)- ಅಮೆಜಾನ್ ಪ್ರೈಂ ವಿಡಿಯೋ

ಅತ್ಯುತ್ತಮ ನಿರ್ದೇಶಕ- ಅಮರನ್ (ರಾಜಕುಮಾರ ಪೆರ್ರಿಸ್ವಾಮಿ)- ನೆಟ್​​ಫ್ಲಿಕ್ಸ್

ಅತ್ಯುತ್ತಮ ಮಕ್ಕಳ ಸಿನಿಮಾ- 35 ಚಿನ್ನ ಕದು ಕಾದು-ಅಮೆಜಾನ್ ಪ್ರೈಂ ಮತ್ತು ಆಹಾ

ಅತ್ಯುತ್ತಮ ಸಾಮಾಜಿಕ ಮೌಲ್ಯ ಸಿನಿಮಾ- ಕ್ಯಾಪ್ಟನ್ ಮಿಲ್ಲರ್- ಅಮೆಜಾನ್ ಪ್ರೈಂ

ಅತ್ಯುತ್ತಮ ಮನೊರಂಜನಾ ಸಿನಿಮಾ- ಕಲ್ಕಿ 2898 ಎಡಿ- ಪ್ರೈಂ ವಿಡಿಯೋ

ಅತ್ಯುತ್ತಮ ಡೆಬ್ಯೂ ಸಿನಿಮಾ- ಸ್ವಾತಂತ್ರ್ಯ ವೀರ ಸಾವರ್ಕರ್- ಜೀ5 ಮತ್ತು ಜಿಯೋ ಟಿವಿ

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 2:53 pm, Sun, 19 July 26

Source link

ಮೊಬೈಲ್ ವಾಪಸ್ ನೀಡಿಲ್ಲವೆಂದು ದೇವಸ್ಥಾನದಲ್ಲೇ ಗೆಳೆಯನ ಕೊಲೆ! ಆರೋಪಿ ಅರೆಸ್ಟ್ – Kannada News | Belagavi Crime News: Man unalived by Friend in Temple Over Mobile Phone Dispute

ಬೆಳಗಾವಿ, ಜುಲೈ 19: ಇತ್ತೀಚೆಗೆ ಸಮಾಜದಲ್ಲಿ ಕ್ಷುಲ್ಲಕ ಕಾರಣಕ್ಕೆ ಕೊಲೆ ಸುಲಿಗೆಗಳಂತಹ ಹೇಯ ಕೃತ್ಯಗಳೇ ನಡೆದು ಹೋಗುತ್ತವೆ. ಅಂತದ್ದೇ ಒಂದು ಅಮಾನವೀಯ ಕೃತ್ಯ ಬೆಳಗಾವಿ ಜಿಲ್ಲೆಯಲ್ಲಿ ಸಂಭವಿಸಿದ್ದು, ಕೇವಲ ಒಂದು ಮೊಬೈಲ್ ಫೋನ್‌ಗಾಗಿ ಸ್ನೇಹಿತರಿಬ್ಬರ ನಡುವೆ ನಡೆದ ಜಗಳವೊಂದು ಭೀಕರ ದುರಂತದಲ್ಲಿ ಅಂತ್ಯಗೊಂಡಿದೆ. ಮೊಬೈಲ್ ಮರಳಿ ಕೊಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ದೇವಸ್ಥಾನದ ಆವರಣದಲ್ಲೇ ಮಲಗಿದ್ದ ವ್ಯಕ್ತಿಯೊಬ್ಬರ ಜೀವ ತೆಗೆದಿರುವ ಘಟನೆ ಸವದತ್ತಿ ತಾಲೂಕಿನ ಚಿಕ್ಕಬೂದನೂರ ಗ್ರಾಮದಲ್ಲಿ ನಡೆದಿದೆ.

ಪ್ರಕರಣದ ಹಿನ್ನೆಲೆ

ಗ್ರಾಮದ ನಿವಾಸಿಯಾದ ಫಕ್ಕೀರಪ್ಪ ಪಿಡ್ಡೆನ್ನವರ್ (40) ಎಂಬುವವರೇ ಈ ದುರಂತದಲ್ಲಿ ಜೀವ ಕಳೆದುಕೊಂಡ ದುರ್ದೈವಿ. ಇವರ ಸ್ನೇಹಿತ ಮಲ್ಲಿಕಾರ್ಜುನ ಪೂಜೇರಿ ಎಂಬಾತನೇ ಈ ಕೃತ್ಯ ಎಸಗಿರುವ ಆರೋಪಿಯಾಗಿದ್ದಾನೆ. ಮೂಲಗಳ ಪ್ರಕಾರ, ಕಳೆದ ಎರಡು ದಿನಗಳ ಹಿಂದೆ ಮಲ್ಲಿಕಾರ್ಜುನನ ಮೊಬೈಲ್ ಫೋನ್ ಅನ್ನು ಫಕ್ಕೀರಪ್ಪ ಪಡೆದುಕೊಂಡಿದ್ದರು. ಆದರೆ, ಕೆಲಸ ಮುಗಿದ ನಂತರವೂ ಅದನ್ನು ಮರಳಿ ನೀಡದೆ ಎರಡು ದಿನಗಳಿಂದ ಸತಾಯಿಸುತ್ತಿದ್ದರು ಎನ್ನಲಾಗಿದೆ.

ತನ್ನ ಫೋನ್ ಪಡೆಯಲು ಮಲ್ಲಿಕಾರ್ಜುನ ಹಲವು ಬಾರಿ ಕೇಳಿದ್ದರೂ ಫಕ್ಕೀರಪ್ಪ ನಿರ್ಲಕ್ಷ್ಯ ವಹಿಸಿದ್ದ. ಕೊನೆಗೆ ಬೇಸತ್ತ ಮಲ್ಲಿಕಾರ್ಜುನ, ಫಕ್ಕೀರಪ್ಪನ ಮನೆವರೆಗೂ ಹೋಗಿ ಮೊಬೈಲ್ ನೀಡುವಂತೆ ಒತ್ತಾಯ ಮಾಡಿದ್ದ. ಈ ವೇಳೆ ಫಕ್ಕೀರಪ್ಪ, ಸಂಜೆ ವೇಳೆಗೆ ನಿನ್ನ ಮೊಬೈಲ್ ಮರಳಿ ಕೊಡುತ್ತೇನೆ ಎಂದು ಹೇಳಿ ಅಲ್ಲಿಂದ ಕಳುಹಿಸಿದ್ದ.

ದೇವಸ್ಥಾನದಲ್ಲಿ ನಡೆದ ಘೋರ ಕೃತ್ಯ

ಶನಿವಾರ ಸಂಜೆ ಫಕ್ಕೀರಪ್ಪ ಗ್ರಾಮದ ಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ ಮಲಗಿದ್ದ. ಇದನ್ನು ಗಮನಿಸಿದ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಬಂದು ಮತ್ತೊಮ್ಮೆ ತನ್ನ ಮೊಬೈಲ್ ನೀಡುವಂತೆ ಕೇಳಿದ್ದ. ಆದರೆ, ಫಕ್ಕೀರಪ್ಪ ಈ ಬಾರಿಯೂ ತಕ್ಷಣಕ್ಕೆ ಮೊಬೈಲ್ ನೀಡದೆ, ರಾತ್ರಿ ಕೊಡುತ್ತೇನೆ ಎಂದು ಮತ್ತೆ ಸಬೂಬು ಹೇಳಿದ್ದ. ಇದರಿಂದ ವಿಪರೀತ ಕೋಪಗೊಂಡ ಮಲ್ಲಿಕಾರ್ಜುನ, ದೇವಸ್ಥಾನದ ಆವರಣದಲ್ಲೇ ಇದ್ದ ಭಸ್ಮ (ವಿಭೂತಿ) ಅರೆಯುವ ದೊಡ್ಡ ಕಲ್ಲನ್ನು ಎತ್ತಿ, ಮಲಗಿದ್ದ ಫಕ್ಕೀರಪ್ಪನ ತಲೆಯ ಮೇಲೆ ಜೋರಾಗಿ ಹಾಕಿದ್ದಾನೆ. ಕಲ್ಲಿನ ಭಾರಿ ಏಟಿಗೆ ಫಕ್ಕೀರಪ್ಪ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕೃತ್ಯ ಎಸಗಿದ ತಕ್ಷಣ ಆರೋಪಿ ಮಲ್ಲಿಕಾರ್ಜುನ ಅಲ್ಲಿಂದ ಕಾಲ್ಕಿತ್ತಿದ್ದಾನೆ.

ಆರೋಪಿ ಬಂಧನ

ದೇವಸ್ಥಾನದಲ್ಲಿ ರಕ್ತದ ಮಡುವಿನಲ್ಲಿ ಶವ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಮುರಗೋಡ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆಯೇ ಮುರಗೋಡ ಠಾಣೆಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಮಹಜರು ನಡೆಸಿದ ಬಳಿಕ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಕಾರ್ಯಾಚರಣೆ ನಡೆಸಿದ ಮುರಗೋಡ ಪೊಲೀಸರು, ತಲೆಮರೆಸಿಕೊಳ್ಳಲು ಯತ್ನಿಸುತ್ತಿದ್ದ ಆರೋಪಿ ಮಲ್ಲಿಕಾರ್ಜುನನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Chennamma Passed Away: ಸಾವಿಗೂ ಮುನ್ನ ಚೆನ್ನಮ್ಮರ ಕೊನೆ ಕ್ಷಣಗಳ ವೀಡಿಯೋ ನೋಡಿ! – Kannada News | Last moments of Chennamma with Her husband HD Deve Gowda

ಬೆಂಗಳೂರು, ಜುಲೈ 19: ಮಾಜಿ ಪ್ರಧಾನ ಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಶನಿವಾರ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ವೇಳೆ ಅವರು ತಮ್ಮ ಪತಿ ದೇವೇಗೌಡ ಅವರೊಂದಿಗೆ ಕಳೆದ ಕೊನೆ ಕ್ಷಣಗಳ ವೀಡಿಯೋ ಇಲ್ಲಿದೆ. ಜೀವನದ ಕೊನೆ ಕ್ಷಣಗಳನ್ನು ಪತಿಯೊಂದಿಗೆ ಕಳೆದ ಚೆನ್ನಮ್ಮ, ಸಾವಿಗೂ ಮುನ್ನ ಗೌಡರ ಆಶೀರ್ವಾದವನ್ನು ಪಡೆದಿದ್ದಾರೆ. 72 ವರ್ಷಗಳ ಕಾಲ ಬೆನ್ನೆಲುಬಾಗಿದ್ದ ಪತ್ನಿಯನ್ನು ಕಳೆದುಕೊಂಡು ಹೆಚ್​ಡಿಡಿ ಇದೀಗ ದುಃಖದಲ್ಲಿ ಮುಳುಗಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬರ ನಿರ್ವಹಣೆ ಕುರಿತಂತೆ ಸಿಎಂ ಡಿಕೆಶಿ, ಡಿಸಿಎಂ ವಿಡಿಯೋ ಕಾನ್ಫರೆನ್ಸ್: ಅಧಿಕಾರಿಗಳಿಗೆ ಏನೆಲ್ಲ ಸೂಚನೆ? – Kannada News | Karnataka Drought Review: CM Shivakumar and DyCM Parameshwar Instruct Officials to Prioritize Fieldwork and Protect Drinking Water

ಬರ ನಿರ್ವಹಣೆ ಕುರಿತಂತೆ ಮಹತ್ವದ ಸಭೆImage Credit source: DK Shivakumar X Account

ಬೆಂಗಳೂರು, ಜುಲೈ 19: ಬರ ನಿರ್ವಹಣೆ ಕುರಿತಂತೆ ಸಿಎಂ ಡಿಕೆ ಶಿವಕುಮಾರ್​​ ಮತ್ತು ಡಿಸಿಎಂ ಡಾ. ಜಿ. ಪರಮೇಶ್ವರ್​​ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಡಿಸಿ, ಸಿಇಒಗಳ ಜತೆ ಸಭೆ ನಡೆಸಿದ್ದಾರೆ. ಬರ ಪರಿಹಾರ ಕಾರ್ಯಗಳು, ಜನ, ಜಾನುವಾರುಗಳಿಗೆ ಕುಡಿಯುವ ನೀರು ,ಕೃಷಿ ಚಟುವಟಿಕೆ, ರಸಗೊಬ್ಬರ, ಜನರು ಗುಳೆ ಹೋಗುತ್ತಿರುವುದು ಸೇರಿ ಹಲವು ವಿಚಾರಗಳ ಬಗ್ಗೆ ಸಭೆಯಲ್ಲಿ ಮಹತ್ವದ ಚರ್ಚೆ ನಡೆದಿದೆ. ವಿಡಿಯೋ ಕಾನ್ಫರೆನ್ಸ್‌ನಲ್ಲಿ ಸಚಿವರಾದ ಯತೀಂದ್ರ, ಈಶ್ವರ್ ಖಂಡ್ರೆ, ರಾಮಲಿಂಗಾರೆಡ್ಡಿ, ಸಿಎಸ್ ಶಾಲಿನಿ ಸೇರಿ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದಾರೆ.

ಅಧಿಕಾರಿಗಳಿಗೆ ಖಡಕ್​​ ಸೂಚನೆ ಕೊಟ್ಟ ಸಿಎಂ ಡಿಕೆಶಿ

ಎಲ್ಲಾ ಅಧಿಕಾರಿಗಳು ಒಂದು ತಂಡವಾಗಿ ಕೆಲಸ ಮಾಡಬೇಕು.ಕೇವಲ ಪೇಪರ್​ ವರದಿ ನೀಡಿದರೆ ನಾನು ಕೇಳುವುದಿಲ್ಲ. ನನಗೆ ಫೀಲ್ಡ್​ ರಿಪೋರ್ಟ್​ ಮುಖ್ಯ ಎಂದು ಸಿಎಂ ಡಿ.ಕೆ.ಶಿವಕುಮಾರ್​ ಸಭೆಯಲ್ಲಿ ಖಡಕ್​​ ಸೂಚನೆ ನೀಡಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುನ್ನ ನಿಮ್ಮ ಅನುಭವ ಮತ್ತು ಕಾರ್ಯಕ್ಷಮತೆ ತೋರಿಸಿ, ಆಡಳಿತಾತ್ಮಕವಾಗಿ ಟೀಮ್‌ ವರ್ಕ್‌ ಮಾಡಿ. ಈಗಾಗಲೇ ಬೆಳಗಾವಿ ಮತ್ತು ಕಲಬುರಗಿ ವಿಭಾಗ ಮಟ್ಟದಲ್ಲಿ ಸಭೆ ನಡೆಸಿ ಸಮಗ್ರ ಪರಿಶೀಲನೆ ನಡೆಸಿದ್ದೇನೆ. ಅಲ್ಲಿ ನಾನು ಕೊಟ್ಟಿರುವ ಸೂಚನೆಗಳು ಕಾಲ ಮಿತಿಯಲ್ಲಿ ಜಾರಿಯಾಗುತ್ತಿವೆ. ಟೀಮ್​ ಕರ್ನಾಟಕ ಮನಸ್ಥಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಗೂ
ಕಾರ್ಯಕ್ಷಮತೆ ತೋರಿಸುತ್ತಿರುವ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದವರು ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದಕ್ಕೆ? ಮುಂದಿನ ವಾರ ದೆಹಲಿಯಲ್ಲಿ ನಿರ್ಣಾಯಕ ಸಭೆ ಸಾಧ್ಯತೆ

ಪ್ರಮುಖ 2 ಸೂಚನೆ ನೀಡಿರುವ ಡಿಸಿಎಂ ಪರಮೇಶ್ವರ್​​

ಅಧಿಕಾರಿಗಳ ಸಭೆಯಲ್ಲಿ ಡಿಸಿಎಂ ಡಾ. ಜಿ. ಪರಮೇಶ್ವರ್​​ ಪ್ರಮುಖವಾಗಿ 2 ಸೂಚನೆಗಳನ್ನು ನೀಡಿದ್ದಾರೆ. 2023ರ ಬರದ ವೇಳೆ ಬೆಳೆಯೇನೊ ಬೆಳೆದಿತ್ತು ಆದರೆ ಸಕಾಲದಲ್ಲಿ ಮಳೆ ಕಾಣದೆ ರೈತನಿಗೇನೂ ಸಿಗಲಿಲ್ಲ. ಕೋವಿಡ್ ನಂತರದ ಅವಧಿಯಲ್ಲಿ ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಪ್ರಮಾಣ ಹೆಚ್ಚಾಗಿದೆ. ಅಡಿಕೆಯಂತಹ ಬೆಳೆಗಳು ತೋಟಗಾರಿಕಾ ಬೆಳೆಗಳಲ್ಲಿ ಮೊನೊಪೋಲಿ ಸಾಧಿಸುತ್ತಿವೆ. ಅಡಿಕೆಗೆ 15-20 ದಿನ ನೀರಿಲ್ಲದಿದ್ದರೆ ತೋಟಗಳು ಒಣಗಿ ಹೋಗುತ್ತವೆ. ರಾಜ್ಯದ ಬೆಳೆಗಳ ಚಿತ್ರಣವನ್ನ ಗಮನಿಸಿದರೆ, ಕಬ್ಬು, ಭತ್ತ, ಅಡಿಕೆ ಮತ್ತು ಮುಸುಕಿನ ಜೋಳಗಳು ಒಟ್ಟಾರೆ ಶೇ.50 ರಷ್ಟು ಪ್ರದೇಶವನ್ನು ಆಕ್ರಮಿಸಿಕೊಂಡಿವೆ. ಈ 4 ಬೆಳೆಗಳು ಅತಿ ಹೆಚ್ಚಿನ ನೀರನ್ನು ಬೇಡುತ್ತವೆ. ಈ ಕುರಿತು ನೀವು ಸೂಕ್ಷ್ಮವಾಗಿ ಗಮನಿಸುತ್ತಿರಬೇಕು ಮತ್ತು ಎಚ್ಚರ ವಹಿಸಬೇಕು. ಡ್ಯಾಂಗಳಿOದ ನೀರು ಹರಿಸಿ ಎಂದು ಒತ್ತಾಯಗಳು ಬರುತ್ತವೆ. ಆದರೆ ಮುಂದಿನ ಜೂನ್‌ವರೆಗೆ ಕುಡಿಯುವ ನೀರನ್ನು ಕಾಪಾಡಿಕೊಳ್ಳಬೇಕಾದ ಅನಿವಾರ್ಯತೆ ನಿಮ್ಮ ಮೇಲಿರುತ್ತದೆ ಎಂಬುದನ್ನು ಮರೆಯಬಾರದು ಎಂದವರು ಎಚ್ಚರಿಸಿದ್ದಾರೆ.

ಜನ ಗುಳೇ ಹೋಗುವ ಗ್ರಾಮಗಳನ್ನು ಗುರುತಿಸಿ ಅಲ್ಲಿ ವಿಬಿ ಜಿ ರಾಮ್ ಜಿ ಯೋಜನೆಯಡಿ ಉದ್ಯೋಗ ದೊರೆಯುವಂತೆ ಮಾಡುವ ಮೂಲಕ ವಲಸೆಯನ್ನು ತಪ್ಪಿಸಬಹುದಾಗಿದೆ. ಸಾವಿರಾರು ಮಕ್ಕಳು ಶಾಲೆಗೆ ಹೋಗದೆ ವಲಸೆ ಹೋಗುತ್ತಿದ್ದಾರೆಂದು ಪತ್ರಿಕೆಗಳು ವರದಿ ಮಾಡುತ್ತಿವೆ, ಈ ಕುರಿತು ನಿಗಾವಹಿಸಿ. ಬರಗಾಲದ ಸಂದರ್ಭಗಳಲ್ಲಿ ಸಾಂಕ್ರಾಮಿಕ ಕಾಯಿಲೆಗಳು ಹರಡುತ್ತವೆ. ಅವುಗಳ ಬಗ್ಗೆ ಗಮನವಿರಲಿ. ಎಲ್ಲಿಯೂ ಸಹ ಬೀಜ, ಗೊಬ್ಬರಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ. ಮಾಧ್ಯಮಗಳು ತಪ್ಪು ವರದಿ ಮಾಡಿದರೆ ಸತ್ಯಾಂಶವೇನೆಂದು ಕೂಡಲೇ ಸ್ಪಷ್ಟೀಕರಣ ನೀಡಬೇಕು ಎಂದವರು ತಿಳಿಸಿದ್ದಾರೆ.

ಸಭೆಯಲ್ಲಿ ಪೋನ್ ಬಳಕೆ: ಸಿಎಂ ಅಸಮಾಧಾನ

ಬರ ಪರಿಸ್ಥಿತಿ ಬಗ್ಗೆ ಡಿಸಿಎಂ ಪರಮೇಶ್ವರ್ ಸೂಚನೆ ನೀಡುತ್ತಿದ್ದ ವೇಳೆ ಕೆಲ ಅಧಿಕಾರಿಗಳು ಮೊಬೈಲ್​​ ಫೋನ್​​ ಬಳಕೆ ಮಾಡುತ್ತಿದ್ದ ಕಾರಣ ಸಿಎಂ ಡಿಕೆಶಿ ಗರಂ ಆದ ಪ್ರಸಂಗ ನಡೆದಿದೆ. ಸರ್ಕಾರದ ಆಲೋಚನೆ ತಿಳಿಸುವಾಗ ಗೌರವ ನೀಡುವುದು ನಿಮ್ಮ ಜವಬ್ದಾರಿ. ನಿಮಗೆ ಏನಾದರೂ ಅರ್ಜೆಂಟ್ ಇದ್ರೆ ಹೊರಗೆ ಹೋಗಿ‌ ಮಾತಾಡಿ ಎಂದವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವರದಿ: ಈರಣ್ಣಾ ಬಸವ, ಟಿವಿ9 ಬೆಂಗಳೂರು

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 2:21 pm, Sun, 19 July 26

Source link

ಸಲ್ಮಾನ್ ಖಾನ್ ವಿಡಿಯೋ ನೋಡಿ ಅಭಿಮಾನಿಗಳಲ್ಲಿ ಆತಂಕ: ಸಲ್ಲುಗೆ ಕಾಡುತ್ತಿದೆಯೇ ಅನಾರೋಗ್ಯ? – Kannada News | Salman Khan latest Video Mumbai Appearance fans worried about weight loss health issues

ಬಾಲಿವುಡ್‌ನ ‘ಸುಲ್ತಾನ್’ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ (Salman Khan) ಅವರ ಲೇಟೆಸ್ಟ್ ವಿಡಿಯೋ ಮತ್ತು ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇದನ್ನು ನೋಡಿ ಅಭಿಮಾನಿಗಳು ಭಾರಿ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಮುಂಬೈನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡ ನಟನ ದೈಹಿಕ ಬದಲಾವಣೆ ಮತ್ತು ವಿಪರೀತ ತೂಕ ಇಳಿಕೆ ಈಗ ಇಂಟರ್ನೆಟ್‌ನಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ.

ಇತ್ತೀಚೆಗೆ ಸಲ್ಮಾನ್ ಖಾನ್ ಅವರು ಮುಂಬೈನ ಸ್ಲಮ್ ಪುನರ್ವಸತಿ ಪ್ರಾಧಿಕಾರ (SRA) ಕಚೇರಿಗೆ ಭೇಟಿ ನೀಡಿದ್ದರು. ಅಲ್ಲಿ ಅವರು ಅತ್ಯಾಧುನಿಕ ಡೇಟಾ ಕಲೆಕ್ಷನ್ ಮತ್ತು ವೆರಿಫಿಕೇಶನ್ ಸಪೋರ್ಟ್ ಸೆಂಟರ್ (ಐಟಿ ಸರ್ವರ್ ರೂಮ್) ಉದ್ಘಾಟಿಸಿದರು. ಇದೇ ವೇಳೆ ಅರ್ಹ ಫಲಾನುಭವಿಗಳಿಗೆ ಮನೆಯ ಕೀಲಿಗಳನ್ನು ಹಸ್ತಾಂತರಿಸಿದರು. ಆದರೆ, ಈ ಕಾರ್ಯಕ್ರಮದ ವಿಡಿಯೋಗಳು ಹೊರಬೀಳುತ್ತಿದ್ದಂತೆ ಎಲ್ಲರ ಗಮನ ಸಲ್ಲು ಅವರ ಆರೋಗ್ಯದ ಕಡೆ ನೆಟ್ಟಿದೆ.

ಸಲ್ಮಾನ್ ಕಂಡ ಕಂಗಾಲಾದ ಫ್ಯಾನ್ಸ್:

ವಿಡಿಯೋಗೆ ಕಮೆಂಟ್ ಮಾಡಿರುವ ಅಭಿಮಾನಿಯೊಬ್ಬರು, ‘ಅವರನ್ನು ನೋಡಿದರೆ ಅನಾರೋಗ್ಯದಿಂದ ಬಳಲುತ್ತಿರುವಂತೆ ಕಾಣುತ್ತಿದೆ, ದೇವರು ಅವರಿಗೆ ಒಳ್ಳೆಯದು ಮಾಡಲಿ’ ಎಂದು ಬರೆದಿದ್ದಾರೆ. ಮತ್ತೊಬ್ಬರು, ‘ಮೊದಲ ನೋಟಕ್ಕೆ ಇವರು ಸಲ್ಮಾನ್ ಖಾನ್ ಎಂದು ನಂಬಲು ಸಾಧ್ಯವಾಗಲಿಲ್ಲ. ಪಕ್ಕದಲ್ಲಿ ಬಾಡಿಗಾರ್ಡ್ ಶೇರಾ ಇದ್ದಿದ್ದರಿಂದ ಗುರುತಿಸಿದೆ. ಇವರಿಗೆ ಏನಾಗಿದೆ?’ ಎಂದು ಪ್ರಶ್ನಿಸಿದ್ದಾರೆ. ಇನ್ನು ಕೆಲವು ಅಭಿಮಾನಿಗಳು, ‘ಸಿನಿಮಾದಲ್ಲಿ ಒಬ್ಬಂಟಿಯಾಗಿ 50 ಜನರನ್ನು ಬಡಿಯುವ ನಮ್ಮ ಭಾಯ್ ಕಣ್ಣುಗಳಲ್ಲಿ ಇಂದು ಸುಸ್ತು ಎದ್ದು ಕಾಣುತ್ತಿದೆ. ಅವರ ಹವಾ ಕಮ್ಮಿಯಾದಂತೆ ಭಾಸವಾಗುತ್ತಿದೆ’ ಎಂದು ಭಾವುಕರಾಗಿದ್ದಾರೆ.

ಬೆಂಬಲಕ್ಕೆ ನಿಂತ ನೆಟ್ಟಿಗರು:

ಒಂದೆಡೆ ಸಲ್ಮಾನ್ ಖಾನ್ ಅವರ ಆರೋಗ್ಯದ ಬಗ್ಗೆ ಚರ್ಚೆ ನಡೆಯುತ್ತಿದ್ದರೆ, ಮತ್ತೊಂದೆಡೆ ಹಲವು ನೆಟ್ಟಿಗರು ಸಲ್ಲು ಅವರ ಪರವಾಗಿ ಮಾತನಾಡಿದ್ದಾರೆ. ‘ಭಾರತೀಯ ಚಿತ್ರರಂಗದ ಸೂಪರ್‌ಸ್ಟಾರ್ ಒಬ್ಬರು ಕ್ಯಾಮೆರಾ ಮುಂದೆ ತಮಗೆ ವಯಸ್ಸಾಗುತ್ತಿರುವುದನ್ನು ಒಪ್ಪಿಕೊಂಡು ಯಾವುದೇ ಮೇಕಪ್ ಇಲ್ಲದೆ ಬರುವುದು ಸಾಮಾನ್ಯದ ಮಾತಲ್ಲ. ಈ ಹಿಂದೆ ರಜನಿಕಾಂತ್ ಇದನ್ನು ಮಾಡಿದ್ದರು. ಈಗ ಸಲ್ಮಾನ್ ಖಾನ್ ಅವರು 60 ವರ್ಷ ಪ್ರಾಯದ ಲುಕ್ ಅನ್ನು ಗೌರವಯುತವಾಗಿ ಒಪ್ಪಿಕೊಂಡಿದ್ದಾರೆ. ಅವರಿಗೆ ಗೌರವ ನೀಡಬೇಕು’ ಎಂದು ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: ಸಲ್ಮಾನ್ ಖಾನ್‌ ‘ಮಾತೃಭೂಮಿ’ ಚಿತ್ರಕ್ಕೆ ಸೆನ್ಸಾರ್ ಸಮಸ್ಯೆ? ಬಿಡುಗಡೆ ಬಗ್ಗೆ ಹೆಚ್ಚಿದ ಆತಂಕ

ಇನ್ನು ಕೆಲವರು, ಬಾಲಿವುಡ್ ತಾರೆಯರು ತಮ್ಮ ವಯಸ್ಸನ್ನು ಮುಚ್ಚಿಡಲು ಏನೆಲ್ಲಾ ಕಸರತ್ತು ಮಾಡುತ್ತಾರೆ, ಆದರೆ ಸಲ್ಮಾನ್ ಪಿಆರ್ ತಂಡದ ಮಾತನ್ನೂ ಕೇಳದೆ ಹೀಗೆ ನೈಜವಾಗಿ ಬಂದಿರುವುದು ಅವರ ಸರಳತೆಯನ್ನು ತೋರಿಸುತ್ತದೆ ಎಂದಿದ್ದಾರೆ. ಸದ್ಯಕ್ಕೆ ಸಲ್ಮಾನ್ ಖಾನ್ ಅವರ ಈ ವಿಡಿಯೋಗಳು ಇಂಟರ್ನೆಟ್‌ನಲ್ಲಿ ಭಾರಿ ಸೌಂಡ್ ಮಾಡುತ್ತಿದ್ದು, ಅವರ ಆರೋಗ್ಯದ ಬಗ್ಗೆ ಅಧಿಕೃತ ಮಾಹಿತಿ ಇನ್ನು ಹೊರಬಿದ್ದಿಲ್ಲ. ಸದ್ಯದಲ್ಲೇ ಅವರು ‘ಮಾತೃಭೂಮಿ’ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version