Headlines

ಮಾವನ ಮಗನ ಜೊತೆ ನಿಶ್ಚಿತಾರ್ಥ, ಚಾಲಕನ ಜೊತೆ ಓಡಿಹೋಗಿ ಮದುವೆಯಾದ ಯುವತಿ: ಆಮೇಲಾಯ್ತು ಸಿನಿಮೀಯ ಟ್ವಿಸ್ಟ್! – Kannada News | Tumakuru Love Twist: Engaged to Cousin, Woman Elopes With Family Driver, Police Mediation Ends Case

ತುಮಕೂರು, ಫೆಬ್ರವರಿ 2: ಅದೊಂದು ರೀತಿಯ ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ. ಆಕೆ ಶ್ರೀಮಂತರ ಮಗಳು. ಆರ್ಥಿಕವಾಗಿ ಚೆನ್ನಾಗಿದ್ದ ಕುಟುಂಬದಲ್ಲಿ ಎಲ್ಲವೂ ಚೆನ್ನಾಗಿತ್ತು. ಮಗಳು ಚೆನ್ನಾಗಿ ಓದದಿದ್ದರೂ ಸಹ ಮಾವನ ಮಗನ ಜೊತೆ ಮದುವೆ ಮಾಡುವ ಯೋಚನೆಯಲ್ಲಿ ಮನೆಯವರಿದ್ದರು. ಅದರಂತೆ ಸಂಬಂಧಿಕರಿಗೆಲ್ಲಾ ಕಾರ್ಡ್ ಹಂಚಿ ಚೌಲ್ಟ್ರಿ, ಊಟ, ಡೆಕೊರೇಷನ್ ಎಂದು ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದರು. ಆದರೆ, ಹೀಗೆ ಮದುವೆ ತಯಾರಿಯಲ್ಲಿದ್ದ ಕುಟುಂಬಕ್ಕೆ ಯುವತಿ ಶಾಕ್ ನೀಡಿದ್ದು, ಮನೆಯ ವಾಹನ ಚಾಲಕನ ಜೊತೆ ಓಡಿ…

Read More

ಭಾರತದ ಪಾಲಿಗೆ ಇಂದು ಯಾರು ಗೆಲ್ಲಬೇಕು? ಹೀಗಿದೆ ಲೆಕ್ಕಾಚಾರ – Kannada News | Why a South Africa Win Benefits India

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನಲ್ಲಿ ಇಂದು (ಫೆ.26) ಎರಡು ಪಂದ್ಯಗಳು ನಡೆಯಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಸೌತ್ ಆಫ್ರಿಕಾ ಹಾಗೂ ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಮಧ್ಯಾಹ್ನ 3 ಗಂಟೆಯಿಂದ ಶುರುವಾಗಲಿದೆ. ಇನ್ನು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ದ್ವಿತೀಯ ಪಂದ್ಯದಲ್ಲಿ ಭಾರತ ಮತ್ತು ಝಿಂಬಾಬ್ವೆ ತಂಡಗಳು ಕಣಕ್ಕಿಳಿಯಲಿವೆ. ಈ ಮ್ಯಾಚ್ ರಾತ್ರಿ 7 ಗಂಟೆಯಿಂದ ಆರಂಭವಾಗಲಿದೆ. ಈ ಎರಡು ಪಂದ್ಯಗಳು…

Read More

ಚೀಪ್ ಚಿನ್ನದ ಆಸೆಗೆ ಬಿದ್ದ ವ್ಯಕ್ತಿ ಕಳೆದುಕೊಂಡಿದ್ದು 20 ಲಕ್ಷ ರೂ! – Kannada News | Devanahalli Gold Scam: Man got robbed in the name of Cheap gold; looses Rs.20 lakhs

ಚೀಪ್ ಚಿನ್ನದ ಆಸೆಗೆ ಬಿದ್ದ ವ್ಯಕ್ತಿ ಕಳೆದುಕೊಂಡಿದ್ದು 20 ಲಕ್ಷ ರೂ! ದೇವನಹಳ್ಳಿ, ಮಾರ್ಚ್​ 05: ಕಡಿಮೆ ಬೆಲೆಗೆ ಚಿನ್ನ ನೀಡುವುದಾಗಿ ನಂಬಿಸಿ ವ್ಯಕ್ತಿಯನ್ನು ಕರೆಸಿಕೊಂಡು 20 ಲಕ್ಷ ರೂ. ಹಣ ದೋಚಿದ (Robbery) ಘಟನೆ ದೇವನಹಳ್ಳಿ ತಾಲೂಕಿನ ವೆಂಕಟಗಿರಿಕೋಟೆ ಬಳಿ ನಡೆದಿದೆ. ಆಂಧ್ರಪ್ರದೇಶ ಮೂಲದ ವಿಶ್ವಪ್ರಸಾದ್ ರೆಡ್ಡಿ ಎಂಬಾತನನ್ನು ಗುರಿಯಾಗಿಸಿಕೊಂಡು ದುಷ್ಕರ್ಮಿಗಳು ಸಿನಿಮೀಯ ರೀತಿಯಲ್ಲಿ ದಾಳಿ ನಡೆಸಿ ಹಣ ಕಿತ್ತುಕೊಂಡು ಪರಾರಿಯಾಗಿದ್ದಾರೆ. ದೊಣ್ಣೆಯಿಂದ ಹೊಡೆದು, ಬ್ಯಾಗ್ ಕಸಿದು ಪರಾರಿ ವಿಶ್ವಪ್ರಸಾದ್ ರೆಡ್ಡಿಗೆ ಕುಮಾರ್ ಎಂಬಾತ ಪರಿಚಯವಾಗಿ,…

Read More

ಸರ್ಕಾರದ ವಿರುದ್ಧ ಉದ್ಯೋಗಾಂಕ್ಷಿಗಳ ಕಿಚ್ಚು: ಅನುಮತಿ ಇಲ್ಲದಿದ್ರೂ ಪ್ರೊಟೆಸ್ಟ್​​ – Kannada News | Massive Protest by Job Aspirants in Dharwad Held Without Police Permission

ಧಾರವಾಡ, ಫೆಬ್ರವರಿ 24: ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡ ಶ್ರೀನಗರ ವೃತ್ತದಲ್ಲಿ ಉದ್ಯೋಗಾಕಾಂಕ್ಷಿಗಳಿಂದ ಬೃಹತ್ ಪ್ರತಿಭಟನೆ ನಡೆದಿದೆ. ಖಾಲಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವಂತೆ ಘೋಷಣೆ ಕೂಗಿರುವ ಪ್ರತಿಭಟನಾಕಾರರು, ಕಾಂಗ್ರೆಸ್ ನಾಯಕರ ಫೋಟೋ ಹಿಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಧಾರವಾಡ ಪೊಲೀಸರ ಹರಸಾಹಸ ಪಟ್ಟ ಪ್ರಸಂಗವೂ ನಡೆದದೆ. ಇನ್ನು ಇಂದು ಪ್ರತಿಭಟನೆಗೆ ಅಖಿಲ ಕರ್ನಾಟಕ ವಿದ್ಯಾರ್ಥಿ ಸಂಘಟನೆ(AKSA) ಅನುಮತಿ ಕೇಳಿದ್ದು, ಪೊಲೀಸರು ನಿರಾಕರಿಸಿದ್ದರು. ಆದರೆ ಸಂಘಟನೆ ಹೈಕೋರ್ಟ್​​ ಮೊರೆ ಹೋಗಿದ್ದು, ಕೋರ್ಟ್​​ ಪೊಲೀಸರೊಂದಿಗೇ…

Read More

ರಾತ್ರಿ ಕಲ್ಲಂಗಡಿ ಹಣ್ಣು ತಿಂದವರು ಬೆಳಗ್ಗೆ ಹೆಣವಾದರು; ಮುಂಬೈನಲ್ಲಿ ಇಡೀ ಕುಟುಂಬದ ದುರಂತ ಅಂತ್ಯ – Kannada News | Mumbai Family 4 members Died After Eating Biryani and Watermelon at Night

ಮುಂಬೈ, ಏಪ್ರಿಲ್ 27: ಅದು ಗಂಡ, ಹೆಂಡತಿ, ಇಬ್ಬರು ಹೆಣ್ಣುಮಕ್ಕಳ ಕುಟುಂಬ. ಶನಿವಾರ ರಾತ್ರಿ ವೀಕೆಂಡ್ ನೆಪದಲ್ಲಿ ಅವರು ತಮ್ಮ ಸ್ನೇಹಿತರಿಗೆ ಮನೆಯಲ್ಲೇ ಡಿನ್ನರ್ ಪಾರ್ಟಿ ಏರ್ಪಡಿಸಿದ್ದರು. ಅದಕ್ಕಾಗಿ ಬಿರಿಯಾನಿ ಮಾಡಿಸಿದ್ದರು. ರಾತ್ರಿ ಬಂದ ಅತಿಥಿಗಳು ಊಟ ಮಾಡಿ ಮನೆಗೆ ತೆರಳಿದ್ದರು. ಊಟ ಜಾಸ್ತಿಯಾಗಿದ್ದರಿಂದ ಅಪ್ಪ-ಅಮ್ಮ-ಮಕ್ಕಳು ರಾತ್ರಿ ಕಲ್ಲಂಗಡಿ ಹಣ್ಣು (Watermelon) ಕಟ್ ಮಾಡಿ ತಿಂದು ಮಲಗಿದ್ದರು. ಆದರೆ, ಅದಾದ ಸ್ವಲ್ಪ ಹೊತ್ತಿನಲ್ಲೇ ನಾಲ್ವರಿಗೂ ವಾಂತಿ, ಭೇದಿ ಶುರುವಾಗಿತ್ತು. ಬೆಳಗಿನ ಜಾವವಾಗುವಷ್ಟರಲ್ಲಿ ಎದ್ದು ನಿಲ್ಲಲೂ ಆಗದಂತಹ ಸುಸ್ತು…

Read More

ರಶ್ಮಿಕಾ-ವಿಜಯ್ ದೇವರಕೊಂಡ ಮದುವೆಗೆ ವಿದೇಶಿ ಸಂಸ್ಥೆಯ ಭದ್ರತೆ – Kannada News | Vijay Deverakonda and Rashmika Mandanna hires foreign security company for security

ದಕ್ಷಿಣ ಭಾರತದ ಚಿತ್ರರಂಗದ ಕ್ಯೂಟ್ ಜೋಡಿ ಎಂದೇ ಖ್ಯಾತಿ ಪಡೆದಿರುವ ವಿಜಯ್ ದೇವರಕೊಂಡ (Vijay Deverakonda) ಮತ್ತು ರಶ್ಮಿಕಾ ಮಂದಣ್ಣ ಅವರುಗಳು ಮದುವೆ ಆಗುತ್ತಿದ್ದಾರೆ. ಫೆಬ್ರವರಿ 26ರಂದು ನಡೆಯಲಿದೆ. ಮದುವೆಯನ್ನು ಬಹಳ ಗುಟ್ಟಾಗಿ ಮಾಡಿಕೊಳ್ಳಲು ಈ ಜೋಡಿ ಇಚ್ಛಿಸಿತ್ತು. ಹಾಗಾಗಿ ಮದುವೆಯ ಸ್ಥಳ, ದಿನಾಂಕಗಳನ್ನು ಗುಟ್ಟಾಗಿ ಇರಿಸಿತ್ತು. ಆದರೆ ಇವರ ಮದುವೆಯ ಬಗ್ಗೆ ದಿನಕ್ಕೊಂದು ವಿಷಯಗಳು ಲೀಕ್ ಆಗುತ್ತಲೇ ಇವೆ. ಇದೀಗ ಮದುವೆ ದಿನ ಭದ್ರತೆ ಸಮಸ್ಯೆ ಆಗಬಹುದೆಂಬ ಭೀತಿಯಲ್ಲಿ ರಶ್ಮಿಕಾ ಮತ್ತು ವಿಜಯ್ ಇದ್ದು, ಇದೇ…

Read More

Daily Devotional: ಅಳಿಲು ಮನೆಯೊಳೆಗೆ ಬಂದರೆ ಅದರ ವಿಶೇಷತೆ ಏನು ಗೊತ್ತಾ? – Kannada News | Daily Devotional: What It Means When a Squirrel Enters Your Home

ಬೆಂಗಳೂರು, ಫೆಬ್ರವರಿ​ 16: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಅಳಿಲು ಮನೆಯೊಳೆಗೆ ಬಂದರೆ ಅದರ ವಿಶೇಷತೆ ಏನು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಹಿಂದೂ ನಂಬಿಕೆಗಳ ಪ್ರಕಾರ, ಅಳಿಲು ಶ್ರೀರಾಮಚಂದ್ರನಿಗೆ ಸಹಾಯ ಮಾಡಿದ ಪವಿತ್ರ ಪ್ರಾಣಿ ಮತ್ತು ಲಕ್ಷ್ಮಿಯ ಸಂಕೇತ ಕೂಡ ಹೌದು. ಅಳಿಲನ್ನು ನೋಡುವುದೇ ಶುಭ. ಆದರೆ ಅದನ್ನು ಸ್ಪರ್ಶಿಸಲು ಹೋಗಬಾರದು. ಅಳಿಲು ಮನೆ ಒಳಕ್ಕೆ ಬಂದರೆ ಶುಭ. ಇದರಿಂದ ಸಂಪತ್ತು ವೃದ್ಧಿಯಾಗುತ್ತದೆ, ದುಷ್ಟ ಜನರ ಸಹವಾಸದಿಂದ ದೂರಾಗಬಹುದು, ಆರ್ಥಿಕವಾಗಿ ಸುಧಾರಣೆಯಾಗುತ್ತದೆ ಮತ್ತು ಕೆಲಸ ಕಾರ್ಯಗಳಲ್ಲಿ…

Read More

ಟಿ20 ವಿಶ್ವಕಪ್ ಗೆದ್ದು ನಿವೃತ್ತಿಯ ಬಗ್ಗೆ ಮೌನ ಮುರಿದ ಸೂರ್ಯಕುಮಾರ್ ಯಾದವ್

2024 ರ ಟಿ20 ವಿಶ್ವಕಪ್ (T20 World Cup) ಮುಗಿದ ಬಳಿಕ ಭಾರತ ಟಿ20 ತಂಡದ ನಾಯಕತ್ವವಹಿಸಿಕೊಂಡ ಸೂರ್ಯಕುಮಾರ್ ಯಾದವ್ (Suryakumar Yadav) ನಾಯಕನಾಗಿ ತಂಡವನ್ನು ದಾಖಲೆಯ ಗೆಲುವುಗಳತ್ತ ಮುನ್ನಡೆಸಿದ್ದಾರೆ. ಆದಾಗ್ಯೂ ಆಟಗಾರನಾಗಿ ಸೂರ್ಯಕುಮಾರ್ ಸಾಕಷ್ಟು ಏರಿಳಿತಗಳನ್ನು ಕಂಡಿದ್ದಾರೆ. ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಸೂರ್ಯಕುಮಾರ್ ಬರೋಬ್ಬರಿ 1 ವರ್ಷದಿಂದ ರನ್ ಬರ ಎದುರಿಸಿದ್ದರು. ಆದರೆ ವಿಶ್ವಕಪ್ ಸಮೀಪವಾಗುತ್ತಿದ್ದಂತೆ ಫಾರ್ಮ್​ ಕಂಡುಕೊಂಡಿದ್ದ ಸೂರ್ಯ, ಇದೀಗ ತಂಡವನ್ನು ದಾಖಲೆಯ ಗೆಲುವಿನತ್ತ ಮುನ್ನಡೆಸಿದ್ದಾರೆ. ಸೂರ್ಯ ನಾಯಕತ್ವದಲ್ಲಿ ಉತ್ತಮ ಪ್ರದರ್ಶನ ನೀಡಿದ…

Read More

ತೆಲಂಗಾಣದ ದೇವಸ್ಥಾನದ ಜಾತ್ರೆಯಲ್ಲಿ ಜಾತಿ ಸಂಘರ್ಷ; ಕೂದಲೆಳೆದು ಮಹಿಳೆಯರಿಗೆ ಥಳಿತ, ಮಗು ಸಾವು – Kannada News | Women Attacked in Caste Clash at Telangana Temple Fair 2 month old baby died

ಹೈದರಾಬಾದ್, ಫೆಬ್ರವರಿ 23: ತೆಲಂಗಾಣದ ನಾಗರ್ಕರ್ನೂಲ್‌ನಲ್ಲಿ ನಡೆದ ಕುಮ್ಮೇರ ಜಾತ್ರೆಯ ಸಂದರ್ಭದಲ್ಲಿ ಜಾತಿ ಘರ್ಷಣೆಯಲ್ಲಿ ಒಂದು ಕುಟುಂಬದ ಮೇಲೆ ಪುರುಷರ ಗುಂಪೊಂದು ದಾಳಿ ನಡೆಸಿದೆ. ಈ ಗಲಾಟೆಯಲ್ಲಿ 2 ತಿಂಗಳ ಮಗುವೂ ಸಾವನ್ನಪ್ಪಿದೆ. ಕೆಳ ಜಾತಿಯ ಮಹಿಳೆಯರ ಕೂದಲನ್ನು ಎಳೆದು ರಾಡ್‌ಗಳಿಂದ ಹೊಡೆಯಲಾಗಿದೆ. ಜಾತ್ರೆಗೆ ದೇವಾಲಯದೊಳಕ್ಕೆ ಪ್ರವೇಶಿಸಲು ಕೆಳ ಜಾತಿಯ ಕುಟುಂಬಸ್ಥರು 100 ರೂ. ನೀಡಲು ನಿರಾಕರಿಸಿದಾಗ ವಾಗ್ವಾದ ಪ್ರಾರಂಭವಾಯಿತು. ಇದೇ ದೊಡ್ಡ ಗಲಾಟೆಯಾಗಿ ಮಾರ್ಪಟ್ಟಿತು. ಇದಾದ ನಂತರ ಆ ಕುಟುಂಬದ ಸದಸ್ಯರು ಪೊಲೀಸ್ ದೂರು ದಾಖಲಿಸಿದರು….

Read More

‘ಬಾರ್ಡರ್ 2’ ಸಿನಿಮಾ ಯಶಸ್ಸು: ‘ಬಾರ್ಡರ್ 3’ ಬರೋದು ಖಚಿತ – Kannada News | Border 2 makers ready to do another sequel after box office success

‘ಬಾರ್ಡರ್’ ಸಿನಿಮಾ 1997ರಲ್ಲಿ ಬಿಡುಗಡೆ ಆಗಿತ್ತು. ಸುಮಾರು 3 ದಶಕದ ಬಳಿಕ ಆ ಸಿನಿಮಾಗೆ ಸೀಕ್ವೆಲ್ ಬಂತು. ‘ಬಾರ್ಡರ್ 2’ (Border 2) ಸಿನಿಮಾ ಬಿಡುಗಡೆ ಆಗಿ ಉತ್ತಮ ಕಲೆಕ್ಷನ್ ಮಾಡುತ್ತಿದೆ. ಈ ಸಿನಿಮಾದಲ್ಲಿ ಸನ್ನಿ ಡಿಯೋಲ್, ವರುಣ್ ಧವನ್, ಅಹಾನ್ ಶೆಟ್ಟಿ ಮುಂತಾದವರು ನಟಿಸಿದ್ದಾರೆ. ಈ ಸಿನಿಮಾದ ಯಶಸ್ಸಿನಿಂದ ನಿರ್ಮಾಪಕರಿಗೆ ಖುಷಿ ಆಗಿದೆ. ಹಾಗಾಗಿ ‘ಬಾರ್ಡರ್ 3’ ಮಾಡಲು ನಿರ್ಧರಿಸಲಾಗಿದೆ. ಈ ಸುದ್ದಿ ಕೇಳಿ ಪ್ರೇಕ್ಷಕರಿಗೆ ಖುಷಿ ಆಗಿದೆ. ನಿರ್ಮಾಪಕ ಭೂಷಣ್ ಕುಮಾರ್ ಅವರು ‘ಬಾರ್ಡರ್…

Read More