Headlines

IPL 2026: ಈ ಐಪಿಎಲ್​ನಲ್ಲೂ ಈ 5 ದಾಖಲೆಗಳನ್ನು ಮುರಿಯಲಾಗಲಿಲ್ಲ..!

ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದೊಂದಿಗೆ 2026 ರ ಐಪಿಎಲ್​ಗೂ ತೆರೆ ಬಿದ್ದಿತು. ಫೈನಲ್​ನಲ್ಲಿ ರಜತ್ ಪಟಿದಾರ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಗುಜರಾತ್ ಟೈಟಾನ್ಸ್ ತಂಡವನ್ನು ಸೋಲಿಸುವ ಮೂಲಕ ಎರಡನೇ ಬಾರಿಗೆ ಟ್ರೋಫಿಯನ್ನು ಗೆದ್ದುಕೊಂಡಿತು. ಪ್ರತಿ ಬಾರಿಯಂತೆ ಈ ಬಾರಿಯೂ ಹಲವು ದಾಖಲೆಗಳು ಸೃಷ್ಟಿಯಾದವು. ಆದಾಗ್ಯೂ ಈ 5 ದಾಖಲೆಗಳನ್ನು ಮಾತ್ರ ಯಾರಿಗೂ ಮುರಿಯಲು ಸಾಧ್ಯವಾಗಲಿಲ್ಲ (PC- PTI). ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ವೈಯಕ್ತಿಕ ಸ್ಕೋರ್ ಗಳಿಸಿದ ದಾಖಲೆ ಕ್ರಿಸ್ ಗೇಲ್ ಅವರ…

Read More

ಕರ್ನಾಟಕದಲ್ಲಿ ಶುರುವಾಯ್ತು ಡಿಕೆ ಶಿವಕುಮಾರ್​​ ರಾಜ್ಯಭಾರ: ಡಿಕೆ ಸೈನ್ಯ ಹೀಗಿದೆ

ಕಾಂಗ್ರೆಸ್​ನ ಟ್ರಬಲ್ ಶೂಟರ್​, ರಾಜ್ಯದ ಪ್ರಮುಖ ಒಕ್ಕಲಿಗ ನಾಯಕ, ಡಿಕೆ ಶಿವಕುಮಾರ್​​ ಇದೀಗ ಕರುನಾಡಿನ 25ನೇ ಮುಖ್ಯಮಂತ್ರಿಯಾಗಿ ಅಧಿಕಾರದ ಗದ್ದುಗೆಗೇರಿದ್ದಾರೆ. ಲೋಕಭವನದಲ್ಲಿ ನೂತನ ಸಿಎಂ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದ್ದು, ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಡಿಕೆ ಶಿವಕುಮಾರ್​ ಪ್ರಮಾಣವಚನ ಸ್ವೀಕರಿಸಿದರು. ಡಾ. ಪರಮೇಶ್ವರ್ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಪ್ರತಿಜ್ಞಾವಿಧಿ ಬೋಧಿಸಿದರು. ಈ ವೇಳೆ ಡಾ. ಪರಮೇಶ್ವರ್​​ ಡಾ. ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣವಚನ…

Read More

ಡಿಕೆಶಿ ಸಂಪುಟದಲ್ಲಿ ಅನುಭವಿ ನಾಯಕರು: ಸಚಿವರಾಗಿ ಮುನಿಯಪ್ಪ, ಎಂ.ಬಿ. ಪಾಟೀಲ್​​, ಜಾರ್ಜ್​​ ಪ್ರಮಾಣ – Kannada News

ಸಚಿವರಾಗಿ ಪ್ರಮಾಣವಚನImage Credit source: Tv9 Kannada ಬೆಂಗಳೂರು, ಜೂನ್​​ 03: ನೂತನ ಸಿಎಂ ಡಿ.ಕೆ. ಶಿವಕುಮಾರ್ (DK Shivakumar)​​ ಜೊತೆಗೆ ಡಿಸಿಎಂ ಪರಮೇಶ್ವರ್​​ ಸೇರಿ 12 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಸಂಪುಟ ದರ್ಜೆ ಸಚಿವರಾಗಿ ಕೆ.ಎಚ್. ಮುನಿಯಪ್ಪ, ಕೆ.ಜೆ. ಜಾರ್ಜ್ ಮತ್ತುಎಂ.ಬಿ. ಪಾಟೀಲ್​​ರಿ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ರಾಜ್ಯಪಾಲರು ಉಪಸ್ಥಿತರಿದ್ದು, ಪ್ರಮಾಣ ವಚನ ಸ್ವೀಕರಿಸಿದ ಸಚಿವರಿಗೆ ಹೂಗುಚ್ಚ ನೀಡಿ ಅಭಿನಂದನೆ ಸಲ್ಲಿಸಿದರು. 7 ಬಾರಿ ಸಂಸದ,…

Read More

ಜೊಹೊ ಮುಖ್ಯ ವಿಜ್ಞಾನಿ ಶ್ರೀಧರ್ ವೆಂಬು ಅವರ ಕರುವಿಯಿಂದ ಚೀನೀ ಪವರ್ ಟೂಲ್ಸ್​ಗೆ ಪೈಪೋಟಿ – Kannada News

ಚೆನ್ನೈ, ಜೂನ್ 3: ಸಾಫ್ಟ್‌ವೇರ್ ಕ್ಷೇತ್ರದಲ್ಲಿ ಜಾಗತಿಕ ಮಟ್ಟದಲ್ಲಿ ಕ್ರಾಂತಿ ಮಾಡಿರುವ ಭಾರತದ ಪ್ರಮುಖ ಸಾಸ್ (SaaS) ಯೂನಿಕಾರ್ನ್ ಸಂಸ್ಥೆ ‘ಜೊಹೊ’ನ (Zoho) ಸಹ-ಸಂಸ್ಥಾಪಕ ಮತ್ತು ಮುಖ್ಯ ವಿಜ್ಞಾನಿ ಹಾಗು ಮಾಜಿ ಸಿಇಒ ಶ್ರೀಧರ್ ವೆಂಬು, ಈಗ ಉತ್ಪಾದನಾ (Manufacturing) ಕ್ಷೇತ್ರದಲ್ಲೂ ಭಾರತದ ಹೆಜ್ಜೆಯನ್ನು ಗಟ್ಟಿಗೊಳಿಸಲು ಮುಂದಾಗಿದ್ದಾರೆ. ಇವರ ಕರುವಿ ಎನ್ನುವ ಪವರ್ ಟೂಲ್ಸ್ ಉತ್ಪಾದನಾ ಸಂಸ್ಥೆ ಸದ್ದು ಮಾಡತೊಡಗಿದೆ. ಚೀನೀ ಕಂಪನಿಗಳ ಪ್ರಾಬಲ್ಯ ಇರುವ ಪವರ್ ಟೂಲ್ಸ್ ಕ್ಷೇತ್ರದಲ್ಲಿ ಕರುವಿ (Karuvi) ಗಟ್ಟಿ ಹೆಜ್ಜೆ ಊರಲು…

Read More

ಕುವೈತ್ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾಳಿ; ಭಾರತೀಯ ಪ್ರಜೆಯ ದುರಂತ ಸಾವು – Kannada News

ಕುವೈತ್, ಜೂನ್ 3: ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಿಚ್ಚು ಮತ್ತಷ್ಟು ತಾರಕಕ್ಕೇರಿದೆ. ಕುವೈತ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್ (Iran Attack) ನಡೆಸಿರುವ ಭೀಕರ ಡ್ರೋನ್ ದಾಳಿಯಲ್ಲಿ ಅಲ್ಲಿ ಕೆಲಸ ಮಾಡುತ್ತಿದ್ದ ಭಾರತೀಯ ಪ್ರಜೆಯೊಬ್ಬರು ಮೃತಪಟ್ಟಿದ್ದಾರೆ. ಈ ಘಟನೆಯು ಗಲ್ಫ್ ರಾಷ್ಟ್ರಗಳಲ್ಲಿ ನೆಲೆಸಿರುವ ಲಕ್ಷಾಂತರ ಭಾರತೀಯರಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ. ಕುವೈತ್ ವಿಮಾನ ನಿಲ್ದಾಣದ ಆವರಣದ ಮೇಲೆ ಏಕಕಾಲದಲ್ಲಿ ಹಲವು ಡ್ರೋನ್‌ಗಳು ಅಪ್ಪಳಿಸಿದ್ದು, ಭಾರಿ ಪ್ರಮಾಣದ ಆಸ್ತಿಪಾಸ್ತಿ ನಷ್ಟ ಸಂಭವಿಸಿದೆ ಎಂದು ವರದಿಯಾಗಿದೆ. ಸ್ಥಳೀಯ ಮಾಧ್ಯಮಗಳ ವರದಿ…

Read More

ಡಿಕೆಶಿಗೆ ಪ್ರಧಾನಿ ಮೋದಿ ವಿಶೇಷ ಅಭಿನಂದನೆ!: ಕರ್ನಾಟಕದ ಜನರ ಕಲ್ಯಾಣಕ್ಕಾಗಿ ಕೈಜೋಡಿಸಲಿದೆ ಕೇಂದ್ರ ಸರ್ಕಾರ! – Kannada News

ದೆಹಲಿ, ಜೂ.3: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿಪ್ರಮಾಣವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ (DK Shivakumar) ಅವರಿಗೆ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರು ಆತ್ಮೀಯ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಟ್ವಿಟರ್ ಮೂಲಕ ನೂತನ ಮುಖ್ಯಮಂತ್ರಿಗಳಿಗೆ ಶುಭ ಹಾರೈಸಿರುವ ಪ್ರಧಾನಿ ಮೋದಿ ಅವರು, “ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು. ಅವರ ಅಧಿಕಾರಾವಧಿ ಯಶಸ್ವಿಯಾಗಲಿ ಎಂದು ಶುಭ ಹಾರೈಸುತ್ತೇನೆ” ಎಂದು ಬರೆದಿದ್ದಾರೆ. ತಮ್ಮ ಶುಭಾಶಯ ಸಂದೇಶದಲ್ಲಿ ಒಕ್ಕೂಟ ವ್ಯವಸ್ಥೆಯ ಗೌರವವನ್ನು ಎತ್ತಿಹಿಡಿದಿರುವ ಪ್ರಧಾನಿ…

Read More

ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಪ್ರಿಯಾಂಕ್ ಖರ್ಗೆ, UT ಖಾದರ್, ಈಶ್ವರ್ ಖಂಡ್ರೆ ಪರಿಚಯ – Kannada News

ಬೆಂಗಳೂರು, ಜೂನ್ 03): ಕರ್ನಾಟಕದ (karnataka) 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಪ್ರಮಾಣವಚನವನ್ನು ಸ್ವೀಕರಿಸಿದರು. ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರು ಸಿಎಂ ಪ್ರತಿಜ್ಞಾವಿಧಿ ಬೋಧಿಸಿದರು. ಡಿ.ಕೆ. ಶಿವಕುಮಾರ್ ಅವರೊಂದಿಗೆ ಉಪಮುಖ್ಯಮಂತ್ರಿಯಾಗಿ ಡಾ.ಜಿ. ಪರಮೇಶ್ವರ ಸ್ವೀಕರಿಸಿದರೆ, ಯುಟಿ ಖಾದರ್, ಈಶ್ವರ್ ಖಂಡ್ರೆ ಹಾಗೂ ಪ್ರಿಯಾಂಕ್ ಖರ್ಗೆ ಅವರು ಸಂಪುಟ ದರ್ಜೆ ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಿದರು. ವಿಶೇಷ ಅಂದ್ರೆ ಖಂಡ್ರೆ ಹಾಗೂ ಖರ್ಗೆ ಮೂರನೇ ಬಾರಿಗೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಮುಖ್ಯಾಂಶಗಳು ಮೂರನೇ ಬಾರಿಗೆ…

Read More

ಒಟಿಟಿಗಳ ಮೇಲೆ ಆಸೆ ಬಿಟ್ಟು ಬಿಡಿ: ಅಲ್ಲು ಅರ್ಜುನ್ ತಂದೆ ಸಲಹೆ – Kannada News

ಕೋವಿಡ್ (Covid) ಬಳಿಕ ಚಿತ್ರರಂಗದಲ್ಲಿ ಭಾರಿ ದೊಡ್ಡ ಬದಲಾವಣೆಗಳನ್ನು ಈ ಒಟಿಟಿಗಳು (OTT) ತಂದಿವೆ. ಸಿನಿಮಾ ನಿರ್ಮಾಪಕರಿಗೆ ಭಾರಿ ದೊಡ್ಡ ನಿರಾಳತೆಯನ್ನು ಒಟಿಟಿಗಳು ನೀಡಿದ್ದು, ಕೇವಲ ಬಾಕ್ಸ್ ಆಫೀಸ್, ಆಡಿಯೋ ರೈಟ್ಸ್ ಮತ್ತು ಟಿವಿ ರೈಟ್ಸ್ ಮೇಲೆ ನಿರ್ಭರವಾಗಿದ್ದ ನಿರ್ಮಾಪಕರಿಗೆ ಮತ್ತೊಂದು ದೊಡ್ಡ ಆದಾಯದ ದಾರಿಯನ್ನು ಈ ಒಟಿಟಿಗಳು ತೆರೆದು ಕೊಟ್ಟಿವೆ. ಈಗಂತೂ ಹಲವು ಸಿನಿಮಾಗಳು ಒಟಿಟಿ ಆದಾಯವೊಂದನ್ನೇ ನಂಬಿಕೊಂಡು ನಿರ್ಮಾಣ ಆಗುತ್ತಿವೆ. ಆದರೆ ಇದೀಗ ತೆಲುಗು ಚಿತ್ರರಂಗದ ಬಲು ಹಿರಿಯ ಮತ್ತು ಯಶಸ್ವಿ ನಿರ್ಮಾಪಕರಾಗಿರುವ ಅಲ್ಲು…

Read More

ಈ ರೀತಿ ವಾಶ್‌ ಮಾಡಿದ್ರೆ ಜೀನ್ಸ್‌ ಬಣ್ಣ ಮಾಸೋದೇ ಇಲ್ಲ – Kannada News

ಡೆನಿಮ್‌ ಜೀನ್ಸ್‌ (jeans) ಅಂದ್ರೆ ಪ್ರತಿಯೊಬ್ಬರಿಗೂ ಇಷ್ಟ. ಇದು ಕಂಫರ್ಟ್‌ ಮಾತ್ರವಲ್ಲದೆ ಸ್ಟೈಲಿಶ್‌ ಲುಕ್‌ ಅನ್ನು ಸಹ ನೀಡುತ್ತದೆ. ಹಾಗಾಗಿ ಹೆಚ್ಚಿನವರು ಜೀನ್ಸ್‌ ಧರಿಸಲು ಇಷ್ಟಪಡುತ್ತಾರೆ. ಆದರೆ ಡೆನಿಮ್‌ ಜೀನ್ಸ್‌ಗಳ ಬಣ್ಣ ಬಹುಬೇಗನೆ ಮಾಸಿ ಹೋಗಿ ಹಳೆಯದರಂತೆ ಕಾಣಿಸುತ್ತದೆ. ಈ ರೀತಿ ಡೆನಿಮ್‌ ಬಣ್ಣ ಮಸುಕಾಗಲು ಅವುಗಳ ಗುಣಮಟ್ಟ ಮಾತ್ರವಲ್ಲ, ಅವುಗಳನ್ನು ತೊಳೆಯುವ ವಿಧಾನವೂ ಕಾರಣವಾಗುತ್ತದೆ. ಜೀನ್ಸ್‌ ಮಸುಕಾಗದೆ ದೀರ್ಘಕಾಲ ಹೊಸದರಂತೆ ಕಾಣಲು ಸರಿಯಾದ ಆರೈಕೆ ಅತ್ಯಗತ್ಯ. ಸಣ್ಣ ತಪ್ಪು ಸಹ ಅವುಗಳ ಗುಣಮಟ್ಟವನ್ನು ಹಾಳುಮಾಡಬಹುದು. ಹಾಗಾಗಿ…

Read More

ಮಕ್ಕಳ ಎತ್ತರ ಹೆಚ್ಚಾಗುತ್ತಿಲ್ಲ ಎಂಬ ಚಿಂತೆ ಕಾಡುತ್ತಿದೆಯೇ? ಈ ಪೋಷಕಾಂಶಗಳ ಕೊರತೆ ಕಾರಣವಾಗಿರಬಹುದು – Kannada News

ಇತ್ತೀಚಿನ ದಿನಗಳಲ್ಲಿ ಹಲವಾರು ಪೋಷಕರು ಮಕ್ಕಳ ಎತ್ತರ (Childs Height) ಸರಿಯಾಗಿ ಹೆಚ್ಚಳವಾಗದಿರುವ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿರುವುದು ಕಂಡುಬರುತ್ತಿದೆ. ನಿಮ್ಮ ಮನೆಯಲ್ಲಿ ಮಕ್ಕಳಿದ್ದೂ ನೀವು ಕೂಡ ಈ ಸಮಸ್ಯೆಯನ್ನು ಎದುರಿಸುತ್ತಿರಬಹುದು. ಸಾಮಾನ್ಯವಾಗಿ ಮಕ್ಕಳ ದೈಹಿಕ ಬೆಳವಣಿಗೆಗೆ ಕೇವಲ ಜನ್ಯಗುಣಗಳೇ ಅಲ್ಲ, ಸರಿಯಾದ ಪೋಷಣೆಯೂ ಬಹಳ ಮುಖ್ಯವಾಗುತ್ತದೆ ಎಂಬುದನ್ನು ಮರೆಯಬಾರದು. ಕೆಲವು ಅಗತ್ಯ ಪೋಷಕಾಂಶಗಳ ಕೊರತೆಯಿಂದ ಮಕ್ಕಳ ಬೆಳವಣಿಗೆಯ ಮೇಲೆ ಪರಿಣಾಮ ಬೀಳಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಮಕ್ಕಳ ಬೆಳವಣಿಗೆಗೆ ಪೋಷಕಾಂಶಗಳು ಯಾಕೆ ಮುಖ್ಯವಾಗುತ್ತದೆ, ಎತ್ತರ…

Read More