‘ಬಾಸ್’ ಸಿನಿಮಾಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್, ವಿಜಯಲಕ್ಷ್ಮಿ – Kannada News | Darshan Vijayalakshmi move High Court against Boss movie release ft Tanush Shivnna V Lava

ವಿ. ಲವ ನಿರ್ದೇಶನದ ‘ಬಾಸ್’ ಸಿನಿಮಾ (Boss Movie) ಈಗಾಗಲೇ ಸಾಕಷ್ಟು ಸುದ್ದಿ ಆಗಿದೆ. ತನಿಷ್ ಶಿವಣ್ಣ ನಟನೆಯ ಈ ಚಿತ್ರದ ಟೀಸರ್ ಬಿಡುಗಡೆ ಆದ ದಿನದಿಂದಲೂ ವಿವಾದ ಶುರು ಆಗಿದೆ. ನೈಜ ಘಟನೆಗಳನ್ನು ಆಧರಿಸಿ ಈ ಸಿನಿಮಾ ಸಿದ್ಧವಾಗಿದೆ ಎಂಬುದನ್ನು ಟೀಸರ್​ನಲ್ಲಿ ಉಲ್ಲೇಖಿಸಲಾಗಿತ್ತು. ಟೀಸರ್ ನೋಡಿದರೆ ನಟ ದರ್ಶನ್ (Darshan) ಕೇಸ್ ರೀತಿಯೇ ಈ ಸಿನಿಮಾದ ಕಥೆ ಇದೆ ಎಂಬ ಅನುಮಾನ ಮೂಡುತ್ತದೆ. ಆ ಕಾರಣದಿಂದ ದರ್ಶನ್ ಹಾಗೂ ವಿಜಯಲಕ್ಷ್ಮಿ ದರ್ಶನ್ (Vijayalakshmi Darshan) ಅವರು ‘ಬಾಸ್’ ಸಿನಿಮಾದ ಬಿಡುಗಡೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಈ ಮೊದಲು ಸೆಷನ್ಸ್ ಕೋರ್ಟ್​​ನಲ್ಲಿ ವಿಜಯಲಕ್ಷ್ಮಿ ದರ್ಶನ್ ಅವರು ‘ಬಾಸ್’ ಸಿನಿಮಾಗೆ ತಡೆ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, ಅಲ್ಲಿ ಅವರ ಅರ್ಜಿ ವಜಾಗೊಂಡಿತು. ಅದರಿಂದ ಚಿತ್ರತಂಡಕ್ಕೆ ಬಲ ಸಿಕ್ಕಂತೆ ಆಗಿತ್ತು. ಸುದ್ದಿಗೋಷ್ಠಿ ನಡೆಸಿದ ಚಿತ್ರತಂಡದವರು ಆ ಬಗ್ಗೆ ಮಾಹಿತಿ ನೀಡಿದ್ದರು. ಆದರೆ ಈಗ ‘ಬಾಸ್’ ಚಿತ್ರತಂಡಕ್ಕೆ ಮತ್ತೆ ವಿಘ್ನ ಎದುರಾಗುವ ಸಾಧ್ಯತೆ ಇದೆ.

ಎಲ್ಲವೂ ಅಂದುಕೊಂಡಂತೆ ನಡೆದರೆ ಜೂನ್ 19ರಂದು ‘ಬಾಸ್’ ಸಿನಿಮಾ ಬಿಡುಗಡೆ ಆಗಬೇಕು. ಈಗಾಗಲೇ ಚಿತ್ರತಂಡದವರು ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಜೂನ್ 19ರಂದು ಸಿನಿಮಾ ರಿಲೀಸ್ ಎಂದು ಮಾಧ್ಯಮಗಳಲ್ಲಿ ಜಾಹೀರಾತು ಕೂಡ ನೀಡಲಾಗಿದೆ. ಆದರೆ ಚಿತ್ರದ ಬಿಡುಗಡೆಗೆ ಕೆಲವೇ ದಿನ ಬಾಕಿ ಇರುವಾಗ ದರ್ಶನ್ ಮತ್ತು ವಿಜಯಲಕ್ಷ್ಮಿ ಅವರು ಹೈಕೋರ್ಟ್​ ಮೊರೆ ಹೋಗಿದ್ದಾರೆ.

‘ಬಾಸ್’ ಸಿನಿಮಾದ ಟೀಸರ್:

‘ಬಾಸ್’ ಸಿನಿಮಾದ ಬಿಡುಗಡೆಗೆ ತಡೆ ನೀಡಬೇಕು ಎಂದು ಹೈಕೋರ್ಟ್​ಗೆ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿದೆ. ಅದರ ವಿಚಾರಣೆ ಜೂನ್ 17ರಂದು ನಡೆಯಲಿದೆ. ನ್ಯಾಯಾಲಯ ನೀಡುವ ತೀರ್ಪಿನ ಆಧಾರದ ಮೇಲೆ ಸಿನಿಮಾದ ಭವಿಷ್ಯ ನಿರ್ಧಾರ ಆಗಲಿದೆ. ಇದು ದರ್ಶನ್ ಜೀವನದ ಕಥೆ ಅಲ್ಲ ಎಂದು ‘ಬಾಸ್’ ಚಿತ್ರತಂಡ ಹೇಳುತ್ತಲೇ ಬಂದಿದೆ. ಆದರೆ ಟೀಸರ್​ನಲ್ಲಿ ಹೋಲಿಕೆಗಳು ಕಾಣಿಸುತ್ತಿವೆ.

ಇದನ್ನೂ ಓದಿ: ರೇಣುಕಾಸ್ವಾಮಿ ಕೇಸ್: ಪ್ರತಿ ದಿನ ವಿಚಾರಣೆಗೆ ಕೋರ್ಟ್ ಸೂಚನೆ; ದರ್ಶನ್ ಪರ ವಕೀಲರ ಮನವಿ ತಿರಸ್ಕಾರ

ಸೆನ್ಸಾರ್ ಮಂಡಳಿಯಿಂದ ಈ ಸಿನಿಮಾಗೆ ಪ್ರಮಾಣಪತ್ರ ಸಿಕ್ಕಿದೆ. ಯು/ಎ ಪ್ರಮಾಣಪತ್ರವನ್ನು ನೀಡಲಾಗಿದೆ. ‘ಬಾಸ್’ ಸಿನಿಮಾದ ಬಿಡುಗಡೆಗೆ ಈ ಮೊದಲು ಸೆಷನ್ಸ್ ಕೋರ್ಟ್ ನೀಡಿದ್ದ ಅನುಮತಿಯನ್ನು ಈಗ ಹೈಕೋರ್ಟ್ ಎತ್ತಿ ಹಿಡಿಯುತ್ತಾ ಅಥವಾ ಚಿತ್ರಕ್ಕೆ ತಡೆ ನೀಡುತ್ತಾ ಎಂಬುದನ್ನು ತಿಳಿಯಲು ಸಿನಿಪ್ರಿಯರು ಮತ್ತು ದರ್ಶನ್ ಅವರ ಅಭಿಮಾನಿಗಳು ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಮಗನ ಸಿನಿಮಾಕ್ಕೆ ಕರೆತರಲು ಸಜ್ಜಾದ ಧನುಶ್, ಅವರದ್ದೇ ನಿರ್ದೇಶನ – Kannada News | Dhanush planning to direct movie for his son Yatra

ಧನುಶ್ (Dhanush) ಭಾರತೀಯ ಚಿತ್ರರಂಗದ ಸೂಪರ್‌ಸ್ಟಾರ್‌ಗಳಲ್ಲಿ ಒಬ್ಬರು, ಈಗಲೂ ಹಲವಾರು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ತಮಿಳು ಮಾತ್ರವಲ್ಲದೇ ಹಿಂದಿ, ತೆಲುಗು ಹಾಲಿವುಡ್ ಸಿನಿಮಾಗಳಲ್ಲಿಯೂ ಸಹ ಧನುಶ್ ಅವರು ನಟಿಸಿದ್ದಾರೆ. ಧನುಶ್ ಕೇವಲ ನಟರು ಮಾತ್ರವಲ್ಲ ಅವರು ನಿರ್ದೇಶಕರೂ ಸಹ ಹೌದು. ಈ ವರೆಗೆ ನಾಲ್ಕು ಸಿನಿಮಾಗಳನ್ನು ಅವರು ನಿರ್ದೇಶಿಸಿದ್ದಾರೆ. ಧನುಷ್ ಅವರು 2024 ರಲ್ಲಿ ಪತ್ನಿ ಐಶ್ವರ್ಯ ರಜನೀಕಾಂತ್ ಅವರಿಂದ ವಿಚ್ಛೇದನ ಪಡೆದಿದ್ದಾರೆ. ಅವರಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಇದೀಗ ಧನುಶ್ ಅವರು ತಮ್ಮ ಮಕ್ಕಳನ್ನು ಚಿತ್ರರಂಗಕ್ಕೆ ಕರೆತರಲು ಸಜ್ಜಾಗಿದ್ದು, ಮಕ್ಕಳ ಮೊದಲ ಸಿನಿಮಾವನ್ನು ಖುದ್ದು ಅವರೇ ನಿರ್ದೇಶನ ಮಾಡಲಿದ್ದಾರೆ.

ಧನುಶ್ ಅವರ ಮೊದಲ ಪುತ್ರ ಯಾತ್ರಾ ಇದೀಗ ಚಿತ್ರರಂಗಕ್ಕೆ ಬರಲು ಸಜ್ಜಾಗಿದ್ದಾರೆ. ಅವರಿಗೆ ಇನ್ನೂ 20 ವರ್ಷ ವಯಸ್ಸು. ಧನುಶ್ ಈ ಹಿಂದೆ, ತಮ್ಮ ಮಕ್ಕಳು ಸಿನಿಮಾಕ್ಕೆ ಬರಲು ಇನ್ನೂ ಸಮಯವಿದೆ ಎಂದಿದ್ದರು. ಆದರೆ ಈಗ ಖುದ್ದು ಅವರೇ ತಮ್ಮ ಮಗನಿಗಾಗಿ ಸಿನಿಮಾ ನಿರ್ದೇಶಿಸಲು ಮುಂದಾಗಿದ್ದಾರೆ. ಧನುಶ್ ನಿರ್ದೇಶನ ಮಾಡಲಿರುವ ಮುಂದಿನ ಸಿನಿಮಾನಲ್ಲಿ ಯಾತ್ರಾ ಮುಖ್ಯ ಪಾತ್ರದಲ್ಲಿ ನಟಿಸಲಿದ್ದಾರೆ. ಜಿವಿ ಪ್ರಕಾಶ್ ಈ ಚಿತ್ರಕ್ಕೆ ಸಂಗೀತ ನಿರ್ದೇಶಕರಾಗುವ ಸಾಧ್ಯತೆಯಿದೆ.

ಧನುಶ್ ಅವರ ಈ ಸಿನಿಮಾ ಶಾಲೆ-ಕಾಲೇಜಿನ ಕತೆಯನ್ನು ಹೊಂದಿರಲಿದ್ದು, ಜೊತೆಗೆ ಕ್ರೀಡಾ ವಿಷಯವನ್ನೂ ಸಹ ಒಳಗೊಂಡಿರಲಿದೆಯಂತೆ. ಹಾಗಾಗಿ ಮಗನನ್ನೇ ಸಿನಿಮಾಕ್ಕೆ ನಾಯಕನನ್ನಾಗಿ ಧನುಶ್ ಆಯ್ಕೆ ಮಾಡಿಕೊಂಡಿದ್ದಾರೆ. ಅಂದಹಾಗೆ ಧನುಷ್ ಇತ್ತೀಚೆಗೆ ತಮ್ಮ ಸೋದರಳಿಯ ಪವಿಶ್ ಅವರನ್ನು ‘ನಿಲವುಕ್ಕು ಎನ್ಮೆಲ್ ಎನ್ನದಿ ಕೋಪಂ’ ಚಿತ್ರದ ಮೂಲಕ ಪರಿಚಯಿಸಿದ್ದಾರೆ. ಈಗ ಮಗನನ್ನೂ ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದಾರೆ.

ಇದನ್ನೂ ಓದಿ:ಮತ್ತೆ ಮುನ್ನೆಲೆಗೆ ಬಂತು ಮೃಣಾಲ್-ಧನುಶ್ ಡೇಟಿಂಗ್ ಸುದ್ದಿ: ಕಾರಣವೇನು?

ಧನುಶ್ ಪ್ರಸ್ತುತ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಹಿಂದಿಯಲ್ಲಿ ಐತಿಹಾಸಿಕ ಕತೆಯುಳ್ಳ ಸಿನಿಮಾನಲ್ಲಿ ನಟಿಸಲು ಒಪ್ಪಿಗೆ ನೀಡಿದ್ದಾರೆ. ಸದ್ಯಕ್ಕೆ ತಮ್ಮ 55ನೇ ಸಿನಿಮಾನಲ್ಲಿ ಧನುಶ್ ನಟಿಸುತ್ತಿದ್ದು, ಅದೇ ಸಿನಿಮಾನಲ್ಲಿ ಧನುಶ್ ಜೊತೆಗೆ ಮಮ್ಮುಟಿ ಸಹ ನಟಿಸುತ್ತಿದ್ದಾರೆ. ಇದರ ಬಳಿಕ ತೆಲುಗಿನ ಸಿನಿಮಾ ಒಂದರಲ್ಲಿ ಧನುಶ್ ನಟಿಸಲಿದ್ದಾರೆ ಎನ್ನಲಾಗಿದೆ. ಬಳಿಕ ಅವರ ಸಹೋದರ ಸೆಲ್ವರಾಘವನ್ ನಿರ್ದೇಶನದ ‘ಆಯರತ್ತಿಲ್ ಒರುವನ್ 2’ ಸಿನಿಮಾನಲ್ಲಿಯೂ ನಟಿಸಲಿದ್ದಾರೆ. ಇದೆಲ್ಲದರ ನಡುವೆ ತಮ್ಮ ಮಗನಿಗಾಗಿ ಸಿನಿಮಾ ಸಹ ನಿರ್ದೇಶನ ಮಾಡಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ – Kannada News | Dharmasthala Mass Burial Case SIT SP’s Car overturns Near Charmadi Ghat at Mangaluru

ಮಂಗಳೂರು,(ಜೂನ್,16): ಧರ್ಮಸ್ಥಳದ ಬುರುಡೆ ಪ್ರಕರಣದ (Dharmasthala Mass Burial Case )ತನಿಖೆ ನಡೆಸುತ್ತಿದ್ದ ಎಸ್ ಐಟಿ ಪೊಲೀಸ್ ವರಿಷ್ಠಾಧಿಕಾರಿ ಸೈಮನ್ ಪ್ರಯಾಣಿಸುತ್ತಿದ್ದ ಕಾರು ಪಲ್ಟಿಯಾಗಿದೆ. ದಕ್ಷಿಣ ಕನ್ನಡ ( ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ (Charmadi Ghat) ರಸ್ತೆಯ ತಿರುವಿನಲ್ಲಿ ಈ ಘಟನೆ ನಡೆದಿದೆ. ದೇಶಾದ್ಯಂತ ಭಾರೀ ಸಂಚಲನ ಮೂಡಿಸಿರುವ ಧರ್ಮಸ್ಥಳದ ಬುರುಡೆ ಪ್ರಕರಣದ ತನಿಖೆಯನ್ನು ಎಸ್‌ಐಟಿ ಎಸ್ ಪಿ ಸೈಮನ್ ಅವರು ನಡೆಸುತ್ತಿದ್ದು, ಇದೇ ಪ್ರಕರಣ ಸಂಬಂಧ ಚರ್ಚಿಸಲು ಚಿಕ್ಕಮಗಳೂರು ಎಸ್ಪಿ ಹಾಗೂ ಎಸ್ ಐಟಿ ತನಿಖಾಧಿಖಾರಿಯಾಗಿರುವ ಜೀತೇಂದ್ರ ಕುಮಾರ್ ದಯಾಮ ಅವರನ್ನ ಭೇಟಿಯಾಗಿ ತೆರಳುತ್ತಿದ್ದರು. ಈ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಎಸ್ ಐಟಿ ಎಸ್.ಪಿ ಸೈಮನ್ ಇನ್ಸ್‌ಪೆಕ್ಟರ್ ಕುಸುಮಾಧರ್ , ಮತ್ತೊಬ್ಬ ಪೊಲೀಸ್ ಸಿಬ್ಬಂದಿ ಹಾಗೂ ವಾಹನದ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು,  ಅದೃಷ್ಟವಾಶತ್ ಸದ್ಯ ಅಪಾಯದಿಂದ ಪಾರಾಗಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ನಿಯತ್ತಿಲ್ಲದವರು ಪಕ್ಷ ಬಿಟ್ಟು ಹೋಗಬಹುದು; ‘ಆಪರೇಷನ್ ಟೈಗರ್’ ಬೆನ್ನಲ್ಲೇ ಸಂಸದರಿಗೆ ಉದ್ಧವ್ ಠಾಕ್ರೆ ಎಚ್ಚರಿಕೆ – Kannada News | Those Who Want To Leave Can free to Go; Uddhav Thackeray’s big statement To Shiv Sena MPs Amid Operation Tiger row

ಮುಂಬೈ, ಜೂನ್ 16: ಮಹಾರಾಷ್ಟ್ರದಲ್ಲಿ ಶಿವಸೇನೆ (UBT) ಸಂಸದರ ಪಕ್ಷಾಂತರದ ಕುರಿತು ಹರಡುತ್ತಿರುವ ವದಂತಿಗಳಿಗೆ ಸ್ವತಃ ಉದ್ಧವ್ ಠಾಕ್ರೆ (Uddhav Thackeray) ಅವರೇ ಅಂತಿಮ ತೆರೆ ಎಳೆಯಲು ಮುಂದಾಗಿದ್ದಾರೆ. ಶಿಂಧೆ ಬಣವು ತಮ್ಮ ಸಂಸದರನ್ನು ಸೆಳೆಯಲು ನಡೆಸುತ್ತಿದೆ ಎನ್ನಲಾದ ‘ಆಪರೇಷನ್ ಟೈಗರ್’ ಚರ್ಚೆಗಳ ಮಧ್ಯೆ, ಉದ್ಧವ್ ಠಾಕ್ರೆ ತಮ್ಮ ಸಂಸದರು ಮತ್ತು ಹಿರಿಯ ನಾಯಕರ ತುರ್ತು ಸಭೆ ನಡೆಸಿ ಗಟ್ಟಿಯಾದ ನಿಲುವು ಪ್ರಕಟಿಸಿದ್ದಾರೆ. ವಿರೋಧ ಪಕ್ಷಗಳ ಆಮಿಷ ಅಥವಾ ಒತ್ತಡಕ್ಕೆ ಮಣಿಯುವವರಿಗೆ ಶಿವಸೇನೆಯಲ್ಲಿ ಜಾಗವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ತಮ್ಮ ಅಧಿಕೃತ ನಿವಾಸ ‘ಮಾತೋಶ್ರೀ’ಯಲ್ಲಿ ನಡೆದ ಪಕ್ಷದ ಸಂಸದರು ಮತ್ತು ಪದಾಧಿಕಾರಿಗಳ ಹೈ-ವೋಲ್ಟೇಜ್ ಸಭೆಯಲ್ಲಿ ಮಾತನಾಡಿದ ಉದ್ಧವ್ ಠಾಕ್ರೆ, ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಶಕ್ತಿಯೇ ತಮಗೆ ಮುಖ್ಯ ಎಂದರು. “ಶಿವಸೇನೆ ಎಂದಿಗೂ ದ್ರೋಹಿಗಳಿಗೆ ಮಣಿದಿಲ್ಲ, ಮುಂದೆಯೂ ಮಣಿಯುವುದಿಲ್ಲ. ನಮ್ಮ ಪಕ್ಷದ ಚಿಹ್ನೆ ಮತ್ತು ಹೆಸರನ್ನು ಕದ್ದವರು ಈಗ ನಮ್ಮ ಸಂಸದರನ್ನು ಕದಿಯಲು ‘ಆಪರೇಷನ್ ಟೈಗರ್’ ಎಂಬ ನಾಟಕವಾಡುತ್ತಿದ್ದಾರೆ. ನಾನು ಯಾರನ್ನೂ ಕಟ್ಟಿ ಹಾಕುವುದಿಲ್ಲ. ಯಾರಿಗೆ ಪಕ್ಷ ಬಿಟ್ಟು ಹೋಗಬೇಕೋ, ಅವರು ಧೈರ್ಯವಾಗಿ ಹೋಗಬಹುದು. ನಾವು ಯಾರನ್ನೂ ಹಿಡಿದಿಟ್ಟುಕೊಂಡಿಲ್ಲ. ಆದರೆ ನೆನಪಿರಲಿ, ಹೋದವರಿಗೆ ಮಹಾರಾಷ್ಟ್ರದ ಜನತೆ ಮುಂಬರುವ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ. ನಿಜವಾದ ಹುಲಿಗಳು ನನ್ನೊಂದಿಗಿವೆ” ಎಂದು ಉದ್ಧವ್ ಠಾಕ್ರೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಆಪರೇಷನ್ ಟೈಗರ್ ಅಂತಿಮ ಹಂತಕ್ಕೆ; ಶಿಂಧೆ ಬಣ ಸೇರಲಿದ್ದಾರಾ ಉದ್ಧವ್ ಠಾಕ್ರೆ ಬಣದ 7 ಸಂಸದರು?

ಈ ಹಿಂದೆ ನಡೆದ ಸಭೆಗೆ ಒಟ್ಟು 9 ಸಂಸದರಲ್ಲಿ 5 ಸಂಸದರು ಖುದ್ದಾಗಿ ಹಾಜರಾಗದೆ ವೀಡಿಯೊ ಕಾನ್ಫರೆನ್ಸ್ ಮೂಲಕ ಭಾಗವಹಿಸಿದ್ದು ಪಕ್ಷಾಂತರದ ಅನುಮಾನ ಹೆಚ್ಚಿಸಿತ್ತು. ಈ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದ್ದು, ಉದ್ಧವ್ ಬಣದ ಪ್ರಮುಖ ನಾಯಕರು ವದಂತಿಗಳನ್ನು ತಳ್ಳಿಹಾಕಿದ್ದಾರೆ. “ನಮ್ಮ ಎಲ್ಲಾ 9 ಲೋಕಸಭಾ ಸಂಸದರು ಉದ್ಧವ್ ಠಾಕ್ರೆ ಅವರ ನಾಯಕತ್ವಕ್ಕೆ ಸಂಪೂರ್ಣ ಬದ್ಧರಾಗಿದ್ದಾರೆ. ಕೆಲವರು ತಮ್ಮ ಕ್ಷೇತ್ರಗಳ ಅನಿವಾರ್ಯ ಕೆಲಸಗಳ ಕಾರಣದಿಂದಾಗಿ ವೀಡಿಯೊ ಮೂಲಕ ಸಭೆಗೆ ಬಂದಿದ್ದರೇ ಹೊರತು, ಯಾರೂ ಪಕ್ಷ ಬಿಡುತ್ತಿಲ್ಲ. ‘ಆಪರೇಷನ್ ಟೈಗರ್’ ಎನ್ನುವುದು ಮಾಧ್ಯಮಗಳು ಮತ್ತು ಶಿಂಧೆ ಬಣ ಸೃಷ್ಟಿಸಿರುವ ಸುಳ್ಳು ಸುದ್ದಿ,” ಎಂದು ಸಂಜಯ್ ರಾವತ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಉದ್ಧವ್ ಠಾಕ್ರೆಯವರ ಶಿವಸೇನೆಯಲ್ಲಿ ಬಿರುಕು; ಪ್ರತ್ಯೇಕ ಗುಂಪು ರಚಿಸುತ್ತಾರಾ ಯುಟಿಬಿ ಸಂಸದರು?

ಸಂಸತ್ತಿನ ಮುಂಗಾರು ಅಧಿವೇಶನ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವುದರಿಂದ, ಪಕ್ಷದಲ್ಲಿ ಯಾರಿಗೆ ನಿಷ್ಠೆ ಇಲ್ಲವೋ ಅವರು ಈಗಲೇ ಹೊರನಡೆದರೆ ಚುನಾವಣಾ ತಂತ್ರ ರೂಪಿಸಲು ಸುಲಭವಾಗುತ್ತದೆ ಎಂಬುದು ಉದ್ಧವ್ ಠಾಕ್ರೆ ಲೆಕ್ಕಾಚಾರ. ಪಕ್ಷವನ್ನು ತೊರೆದು ಹೋಗುವವರನ್ನು ಸಾರ್ವಜನಿಕವಾಗಿ ಮತ್ತೊಮ್ಮೆ ‘ದ್ರೋಹಿಗಳು’ ಎಂದು ಬಿಂಬಿಸಿ, ಮರಾಠಿ ಮತದಾರರಲ್ಲಿ ತಮಗಾಗಿ ಸಹಾನುಭೂತಿಯ ಅಲೆ ಸೃಷ್ಟಿಸಲು ಉದ್ಧವ್ ಈ ರೀತಿಯ ಆಯ್ಕೆ ನೀಡಿದ್ದಾರೆ ಎಂದು ಕೂಡ ಹೇಳಲಾಗುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ – Kannada News | Vijay Raghavendra son Shourya pays last respect to grandmother Jayamma

ಕನ್ನಡ ಚಿತ್ರರಂಗದ ಜನಪ್ರಿಯ ನಟರಾದ ವಿಜಯ್ ರಾಘವೇಂದ್ರ ಹಾಗೂ ಶ್ರೀಮುರಳಿ ಅವರ ತಾಯಿ, ಹಿರಿಯ ನಿರ್ಮಾಪಕ ಎಸ್.ಎ. ಚಿನ್ನೇಗೌಡ ಅವರ ಪತ್ನಿ ಜಯಮ್ಮ (Jayamma) ಇಂದು (ಜೂನ್ 16) ಬೆಂಗಳೂರಿನಲ್ಲಿ ನಿಧನರಾದರು. ಕುಟುಂಬದ ಸದಸ್ಯರು ಮತ್ತು ಅನೇಕ ಸೆಲೆಬ್ರಿಟಿಗಳು ಬಂದು ಅಂತಿಮ ದರ್ಶನ ಪಡೆದಿದ್ದಾರೆ. ವಿಜಯ್ ರಾಘವೇಂದ್ರ ಪುತ್ರ ಶೌರ್ಯ ಅವರು ಅಜ್ಜಿಯ ಪಾರ್ಥಿವ ಶರೀರದ ಮುಂದೆ ಭಾವುಕವಾಗಿ ನಿಂತರು. ಕಳೆದ ಕೆಲವು ದಿನಗಳಿಂದ ಜಯಮ್ಮ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಅವರ ಅಗಲಿಕೆಗೆ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ. ಈಡಿಗ ಸಂಪ್ರದಾಯದಂತೆ ಜಯಮ್ಮ ಅವರ ಅಂತ್ಯಕ್ರಿಯೆ ನಡೆಯುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ: ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ ಶಿಫ್ಟ್ – Kannada News | Resort Politics returns In Karnataka Over Assembly Council Elections, Congress MLAs Shift

ಬೆಂಗಳೂರು, (ಜೂನ್ 16)​​: ಚುನಾವಣೆ ನಡೆದ ಸಂದರ್ಭಗಳಲ್ಲಿ ಯಾವುದೇ ಒಂದು ಪಕ್ಷಕ್ಕೆ ಬಹುಮತ ಬರದೇ ಹೋದಾಗ ಅಥವಾ ದಿಢೀರ್​ ರಾಜಕೀಯ ಅರಾಜಕತೆ ಉಂಟಾದಾಗ ವಿವಿಧ ಪಕ್ಷಗಳು ಸರ್ಕಾರ ರಚನೆ ಮಾಡಲು ಮುಂದಾಗಿ ಶಾಸಕರನ್ನು ಸೆಳೆಯಲು ಮುಂದಾಗುವುದು ಸಾಮಾನ್ಯ​. ಈ ವೇಳೆ ತಮ್ಮ ಪಕ್ಷದ ಸದಸ್ಯರನ್ನ ಸೇಫ್​ ಆಗಿ ಉಳಿಸಿಕೊಳ್ಳುವ ಉದ್ದೇಶದಿಂದ ವಿವಿಧ ಪಕ್ಷಗಳು ರೆಸಾರ್ಟ್​ ರಾಜಕೀಯದ (Resort Politics) ಮೊರೆ ಹೋಗುತ್ತವೆ. ಇದಕ್ಕೆ ಪೂರಕವೆಂಬಂತೆ ಈ ಹಿಂದೆ ಕರ್ನಾಟಕದಲ್ಲಿ (karnataka) ರೆಸಾರ್ಟ್ ರಾಜಕಾರಣ ನಡೆದಿತ್ತು. ಇದೀಗ ಮತ್ತೆ ರೆಸಾರ್ಟ್​ ಆರಂಭವಾಗಿದೆ. ಹೌದು….ವಿಧಾನ ಪರಿಷತ್ ಚುನಾವಣೆಯಲ್ಲಿ ಕ್ರಾಸ್ ವೋಟಿಂಗ್ ಆತಂಕ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಮತಗಳ ರಕ್ಷಣೆಗಾಗಿ ರೆಸಾರ್ಟ್ ಮೊರೆಹೋಗಿದೆ.

ಕಾಂಗ್ರೆಸ್ ತನ್ನ ಎಲ್ಲಾ ಶಾಸಕರಿಗಾಗಿ ಬಿಡದಿಯ ವಂಡರ್ ಲಾ ರೆಸಾರ್ಟ್ ನಲ್ಲಿ 140 ರೂಮ್ ಬುಕ್ ಆಗಿದ್ದು,
ಎರಡು ದಿನ ಅಂದರೆ ಇಂದು ಜೂನ್ 16) ಮತ್ತು ನಾಳೆ (ಜೂನ್ 17) ರೆಸಾರ್ಟ್​​ನಲ್ಲಿ ತಂಗಲಿದ್ದಾರೆ. ಬಳಿಕ ಜೂನ್ 18ರಂದು ಬೆಳಗ್ಗೆ ನೇರವಾಗಿ ರೆಸಾರ್ಟ್​​​​ನಿಂದಲೇ ವಿಧಾನಸೌಧಕ್ಕೆ ಆಗಮಿಸಿ ಮತದಾನ ಮಾಡಲಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Car Vastu Tips: ಸುರಕ್ಷಿತ ಪ್ರಯಾಣಕ್ಕಾಗಿ ಕಾರಿನಲ್ಲಿ ಯಾವ ದೇವರ ವಿಗ್ರಹ ಇಡಬೇಕು? ಇಲ್ಲಿದೆ ವಾಸ್ತು ಸಲಹೆಗಳು! – Kannada News | Car Vastu Tips: Best God Idols for Safety and Positive Energy in Your Vehicle

ಕಾರಿನಲ್ಲಿ ದೇವರ ಮೂರ್ತಿ ಇಡಬಹುದೇ?Image Credit source: Pinterest

ವಾಸ್ತು ಶಾಸ್ತ್ರವು ದೈನಂದಿನ ಜೀವನದೊಂದಿಗೆ ಆಳವಾದ ಸಂಬಂಧವನ್ನು ಹೊಂದಿದೆ. ಮನೆ, ಕಚೇರಿ ಅಥವಾ ವ್ಯಾಪಾರ ಸ್ಥಳ ಮಾತ್ರವಲ್ಲದೆ, ನಾವು ದಿನನಿತ್ಯ ಪ್ರಯಾಣಿಸುವ ಕಾರಿನಲ್ಲಿಯೂ ವಾಸ್ತು ನಿಯಮಗಳು ಅನ್ವಯಿಸುತ್ತವೆ ಎಂಬುದು ನಿಮಗೆ ತಿಳಿದಿದೆಯೇ? ಕಾರು ನಮ್ಮ ಎರಡನೇ ಮನೆಯಂತಿದ್ದಾಗ, ಅಲ್ಲಿ ಸಕಾರಾತ್ಮಕ ಶಕ್ತಿ ನೆಲೆಸುವಂತೆ ಮಾಡುವುದು ಮುಖ್ಯ. ಹಿಂದೂ ಧರ್ಮದ ಪ್ರಕಾರ ದೇವರು ಸರ್ವವ್ಯಾಪಿಯಾಗಿದ್ದಾನೆ, ಆದ್ದರಿಂದ ಕಾರಿನಲ್ಲಿ ದೇವರ ವಿಗ್ರಹವನ್ನು ಇಡುವುದು ತಪ್ಪಲ್ಲ. ಮನಸ್ಸಿನಲ್ಲಿ ಭಕ್ತಿ ಇದ್ದರೆ, ಆ ವಿಗ್ರಹವು ಪ್ರಯಾಣದ ಸಮಯದಲ್ಲಿ ರಕ್ಷಣೆ, ಧೈರ್ಯ ಮತ್ತು ಶಾಂತಿಯ ಸಾಧನವಾಗುತ್ತದೆ.

ಕಾರಿನಲ್ಲಿ ಯಾವ ದೇವರ ವಿಗ್ರಹವನ್ನು ಇಡಬೇಕು?

ವಾಸ್ತು ತಜ್ಞರ ಪ್ರಕಾರ, ಕಾರಿನ ಡ್ಯಾಶ್‌ಬೋರ್ಡ್ (Dashboard) ವಿಗ್ರಹವನ್ನು ಇರಿಸಲು ಅತ್ಯಂತ ಸರಿಯಾದ ಸ್ಥಳವಾಗಿದೆ. ಆಧುನಿಕ ಕಾಲದಲ್ಲಿ ಗಣೇಶ, ವೆಂಕಟೇಶ್ವರ, ಆಂಜನೇಯ, ಶಿವ-ಪಾರ್ವತಿಯರ ವಿಗ್ರಹಗಳನ್ನು ಇಡುವುದು ಸಾಮಾನ್ಯವಾಗಿದೆ. ಆದರೆ ನಿರ್ದಿಷ್ಟವಾಗಿ ಕೆಳಗಿನ ವಿಗ್ರಹಗಳನ್ನು ಇಡುವುದು ಹೆಚ್ಚು ಶುಭ ಎನ್ನಲಾಗುತ್ತದೆ:

ವಿಘ್ನವಿನಾಶಕ ಗಣೇಶ:

ಅಡೆತಡೆಗಳನ್ನು ನಿವಾರಿಸುವ ಗಣೇಶನ ಸಣ್ಣ ವಿಗ್ರಹವನ್ನು ವಾಹನದಲ್ಲಿ ಸ್ಥಾಪಿಸಬೇಕು. ಆತ ಪ್ರಯಾಣದಲ್ಲಿ ಎದುರಾಗುವ ಎಲ್ಲಾ ಕಷ್ಟಗಳು ಮತ್ತು ಸಮಸ್ಯೆಗಳನ್ನು ದೂರ ಮಾಡುತ್ತಾನೆ. ಗಣೇಶನ ವಿಗ್ರಹವನ್ನು ಇಡುವಾಗ ದೇವರ ಬೆನ್ನಿನ ಭಾಗ ನಮಗೆ ಕಾಣಿಸಬಾರದು (ಏಕೆಂದರೆ ಗಣೇಶನ ಬೆನ್ನಿನಲ್ಲಿ ದಾರಿದ್ರ್ಯ ಇರುತ್ತದೆ ಎಂಬ ನಂಬಿಕೆಯಿದೆ). ಆದ್ದರಿಂದ ಎರಡು ಕಡೆ ಮುಖವಿರುವ (ಡಬಲ್ ಸೈಡ್) ಗಣೇಶನ ವಿಗ್ರಹವನ್ನು ಇಡುವುದು ಶ್ರೇಷ್ಠ.

ವಾಯುಪುತ್ರ ಹನುಮಂತ:

ನಿಮ್ಮ ಕಾರಿನಲ್ಲಿ ಯಾವಾಗಲೂ ಗಾಳಿಯಲ್ಲಿ ಹಾರುತ್ತಿರುವಂತೆ ಅಥವಾ ತೂಗಾಡುತ್ತಿರುವಂತೆ ಇರುವ ಹನುಮನ ವಿಗ್ರಹವನ್ನು ಇಟ್ಟುಕೊಳ್ಳುವುದು ಅತ್ಯಂತ ಶುಭ. ಹನುಮಂತನನ್ನು ವಾಯುವಿನ ಮೊದಲ ಅವತಾರವೆಂದು ಪರಿಗಣಿಸಲಾಗುತ್ತದೆ. ವಾಹನಗಳು ನಮ್ಮನ್ನು ಗಾಳಿಯ ವೇಗದಲ್ಲಿ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಕರೆದೊಯ್ಯುವುದರಿಂದ, ಹನುಮಂತನ ಚಿತ್ರ ಪ್ರಯಾಣಕ್ಕೆ ರಕ್ಷಣೆ ನೀಡುತ್ತದೆ.

ಇದನ್ನೂ ಓದಿ: ಫ್ಯಾಶನ್​​ಗಾಗಿ ವಜ್ರ ಧರಿಸುವ ಮುನ್ನ ಎಚ್ಚರ! ಈ ರಾಶಿಯವರು ವಜ್ರ ಧರಿಸಿದರೆ ಕಷ್ಟ ತಪ್ಪಿದ್ದಲ್ಲ!

ಕಾರಿನ ಇತರ ಭಾಗಗಳಲ್ಲಿ ಮೂರ್ತಿ ಇಡುವಾಗ ಗಮನಿಸಿ:

  • ಹಿಂಬದಿಯ ಕನ್ನಡಿ: ಕನ್ನಡಿಗೆ ದೇವರ ಸಣ್ಣ ಲಾಕೆಟ್ ಅಥವಾ ಫೋಟೋವನ್ನು ನೇತುಹಾಕುವುದರಿಂದ, ಅದು ಹಿಂದಿನಿಂದ ಬರುವ ನಕಾರಾತ್ಮಕ ಶಕ್ತಿಗಳಿಂದ ರಕ್ಷಣೆ ನೀಡುತ್ತದೆ ಎಂದು ನಂಬಲಾಗಿದೆ.
  • ಸೀಟಿನ ಹಿಂಭಾಗ: ಒಂದು ವೇಳೆ ನಿಮ್ಮ ಬಳಿ ದೊಡ್ಡ ಪ್ರತಿಮೆಗಳಿದ್ದರೆ, ಅವುಗಳನ್ನು ಡ್ಯಾಶ್‌ಬೋರ್ಡ್‌ನಲ್ಲಿ ಇಡಬೇಡಿ. ಬದಲಿಗೆ ಕಾರಿನ ಹಿಂಭಾಗದಲ್ಲಿ ಇಡಬಹುದು. ಆದರೆ, ಅವುಗಳು ಚಾಲನೆ ಮಾಡುವಾಗ ಚಾಲಕನಿಗೆ ಯಾವುದೇ ರೀತಿಯಲ್ಲಿ ಅಡ್ಡಿಯಾಗದಂತೆ ನೋಡಿಕೊಳ್ಳಿ.

ಕಾರಿನಲ್ಲಿ ದೇವರ ವಿಗ್ರಹ ಇಡುವಾಗ ಪಾಲಿಸಬೇಕಾದ ಕಟ್ಟುನಿಟ್ಟಿನ ನಿಯಮಗಳು:

ಕಾರಿನಲ್ಲಿ ದೇವರ ಮೂರ್ತಿಯನ್ನು ಇಟ್ಟರೆ ಸಾಲದು, ಅದಕ್ಕೊಂದು ಶಿಸ್ತು ಮತ್ತು ನಿಯಮವಿರಬೇಕು ಎಂದು ಹಿರಿಯರು ಹೇಳುತ್ತಾರೆ. ನೀವು ಕಾರಿನಲ್ಲಿ ಸಿಗರೇಟ್, ಮದ್ಯ ಅಥವಾ ಮಾಂಸಾಹಾರವನ್ನು ಬಳಸುವ ಅಭ್ಯಾಸ ಹೊಂದಿದ್ದರೆ, ದಯವಿಟ್ಟು ಕಾರಿನಲ್ಲಿ ಯಾವುದೇ ದೇವರ ವಿಗ್ರಹವನ್ನು ಇಡಬೇಡಿ. ಚಾಲನೆ ಮಾಡುವಾಗ ಪ್ರತಿಮೆ ಅಥವಾ ವಿಗ್ರಹವು ಎಂದಿಗೂ ಕೆಳಗೆ ಬೀಳದಂತೆ ಗಟ್ಟಿಯಾಗಿ ಅಂಟಿಸಿರಬೇಕು. ಇದಲ್ಲದೇ ವಿಗ್ರಹವು ಚಾಲಕನಿಗೆ ರಸ್ತೆ ಕಾಣಿಸದಂತೆ ತಡೆಯುವಷ್ಟು ತೀರಾ ದೊಡ್ಡದಾಗಿರಬಾರದು ಅಥವಾ ಕಣ್ಣಿಗೇ ಕಾಣಿಸದಷ್ಟು ತೀರಾ ಚಿಕ್ಕದಾಗಿರಬಾರದು. ವಾರಕ್ಕೊಮ್ಮೆಯಾದರೂ ಕಾರಿನ ಒಳಗಿನ ಮೂರ್ತಿಯನ್ನು ಸ್ವಚ್ಛಗೊಳಿಸಿ, ಹೂವು ಅಥವಾ ಕಾಣಿಕೆಯನ್ನು ಅರ್ಪಿಸಿ ನಮಸ್ಕರಿಸಬೇಕು. ಪ್ರತಿದಿನ ಕಾರನ್ನು ಸ್ಟಾರ್ಟ್ ಮಾಡುವಾಗ ‘ಓಂ’ ಅಥವಾ ನಿಮ್ಮ ಇಷ್ಟದೇವತೆಯ ಮಂತ್ರವನ್ನು ಜಪಿಸಿ ಚಾಲನೆ ಮಾಡುವುದನ್ನು ರೂಢಿಸಿಕೊಳ್ಳಿ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕೆಲವೇ ಎಐ ಮಾಡಲ್​ಗಳು ಇಡೀ ಉದ್ಯಮವನ್ನೇ ನುಂಗಿ ನೀರು ಕುಡಿಯಲು ಬಿಡಬಾರದು: ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ – Kannada News | Satya Nadella warns AI could leave entire industries struggling if control stays with few companies

ವಾಷಿಂಗ್ಟನ್, ಜೂನ್ 16: ಮೈಕ್ರೋಸಾಫ್ಟ್ (Microsoft) ಕಂಪನಿಯ ಸಿಇಒ ಸತ್ಯ ನಾಡೆಳ್ಳ (Satya Nadella) ಅವರು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಭವಿಷ್ಯದ ಕುರಿತು ಜಾಗತಿಕ ಉದ್ಯಮ ರಂಗಕ್ಕೆ ದೊಡ್ಡ ಎಚ್ಚರಿಕೆಯೊಂದನ್ನು ನೀಡಿದ್ದಾರೆ. “ಎಐ ತಂತ್ರಜ್ಞಾನದ ಸಂಪೂರ್ಣ ಲಾಭ ಮತ್ತು ಮೌಲ್ಯವು ಕೇವಲ ಕೆಲವು ದೈತ್ಯ ಕಂಪನಿಗಳ ಕೈಯಲ್ಲೇ ಉಳಿದುಬಿಟ್ಟರೆ, ಇಡೀ ಉದ್ಯಮ ರಂಗವೇ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಬಹುದು ಮತ್ತು ನಾಶವಾಗಬಹುದು” ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಜಾಗತೀಕರಣದ ಸಂದರ್ಭದಲ್ಲಾಗಿದ್ದ ತಪ್ಪು ಮರುಕಳಿಸದಿರಲಿ

ಹಿಂದೆ ಜಾಗತೀಕರಣದ (Globalization) ಆರಂಭಿಕ ದಿನಗಳಲ್ಲಿ ಕೈಗಾರಿಕಾ ಮತ್ತು ಉತ್ಪಾದನಾ ವಲಯದ ಉದ್ಯೋಗಗಳು ಒಂದೆಡೆಯಿಂದ ಮತ್ತೊಂದೆಡೆಗೆ ವಲಸೆ ಹೋದವು. ಕಾಗದದ ಮೇಲೆ ಆರ್ಥಿಕ ಬೆಳವಣಿಗೆ ಕಂಡರೂ, ಸ್ಥಳೀಯ ಮಟ್ಟದಲ್ಲಿ ಹಲವು ಕೈಗಾರಿಕೆಗಳು ಮತ್ತು ಸಮುದಾಯಗಳು ಸಂಪೂರ್ಣವಾಗಿ ಹಾನಿಗೊಳಗಾದವು. ಇಂತಹ ತಪ್ಪು ಈಗ ಎಐ ಬೆಳವಣಿಗೆ ವೇಳೆ ಆಗದಂತೆ ಎಚ್ಚರವಹಿಸಬೇಕು ಎಂದು ಮೈಕ್ರೋಸಾಫ್ಟ್ ಸಿಇಒ ಸಲಹೆ ನೀಡಿದ್ದಾರೆ.

“ಕೆಲವೇ ಕೆಲವು ಎಐ ಮಾದರಿಗಳು (AI Models) ಇಡೀ ಮಾರುಕಟ್ಟೆಯನ್ನು ನುಂಗಿ ನೀರು ಕುಡಿಯುವ ಮತ್ತು ಎಲ್ಲಾ ಆರ್ಥಿಕ ಲಾಭಗಳನ್ನು ತಾವೇ ಬಾಚಿಕೊಳ್ಳುವ ಪರಿಸ್ಥಿತಿಯನ್ನು ಸಮಾಜ ಮತ್ತು ಜಾಗತಿಕ ಆರ್ಥಿಕತೆ ಎಂದಿಗೂ ಸಹಿಸುವುದಿಲ್ಲ. ಇಂತಹ ಅಪಾಯಕಾರಿ ಪರಿಸ್ಥಿತಿಯನ್ನು ನಾವು ತಡೆಯಬೇಕಿದೆ” ಎಂದು ಸತ್ಯ ನಾಡೆಲ್ಲಾ ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಸರ್ವಂ ಎಐ ಈಗ ಯುನಿಕಾರ್ನ್ ಕಂಪನಿಗಳ ಸಾಲಿನಲ್ಲಿ; ಹೂಡಿಕೆ ಮಾಡಿದ ಎಚ್​ಸಿಎಲ್​ಗೂ ಷೇರುಪೇಟೆಯಲ್ಲಿ ಸುಗ್ಗಿ

ಕಂಪನಿಗಳಿಗೆ ಹೊಸ ಸೂತ್ರ: ಎರಡು ರೀತಿಯ ಬಂಡವಾಳ

ಭವಿಷ್ಯದಲ್ಲಿ ಉದ್ಯಮಗಳು ಬದುಕುಳಿಯಲು ಕೇವಲ ಬೇರೆ ಕಂಪನಿಗಳ AI ಮಾದರಿಗಳನ್ನು ನಂಬಿ ಕೂರಬಾರದು. ಬದಲಿಗೆ ತಮ್ಮದೇ ಆದ ಎರಡು ಪ್ರಮುಖ ಬಂಡವಾಳಗಳನ್ನು (Capital) ವೃದ್ಧಿಸಿಕೊಳ್ಳಬೇಕು ಎಂದಿದ್ದಾರೆ ಆಂಧ್ರ ಸಂಜಾತ ಮೈಕ್ರೋಸಾಫ್ಟ್ ಸಿಇಒ. ಅವರು ಹೆಸರಿಸಿದ ಎರಡು ಬಂಡವಾಳವೆಂದರೆ ಅವು ಮಾನವ ಬಂಡವಾಳ ಮತ್ತು ಟೋಕನ್ ಬಂಡವಾಳ.

ಮಾನವ ಬಂಡವಾಳವೆಂದರೆ ನೌಕರರ ಜ್ಞಾನ, ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ, ಪರಸ್ಪರ ಸಂಬಂಧಗಳು ಮತ್ತು ಸೃಜನಶೀಲತೆ. AI ಬಂದ ತಕ್ಷಣ ಮಾನವನ ಅಗತ್ಯ ಕಡಿಮೆ ಆಗುವುದಿಲ್ಲ, ಬದಲಿಗೆ ಅವರ ಮೌಲ್ಯ ಮತ್ತಷ್ಟು ಹೆಚ್ಚುತ್ತದೆ.

ಇನ್ನು ಟೋಕನ್ ಬಂಡವಾಳ (Token Capital) ಎಂದರೆ ಒಂದು ಕಂಪನಿಯು ಸ್ವತಃ ಅಭಿವೃದ್ಧಿಪಡಿಸುವ ಮತ್ತು ತನ್ನ ಸ್ವಂತ ಸ್ವಾಮ್ಯದಲ್ಲಿ ಇಟ್ಟುಕೊಳ್ಳುವ AI ಸಾಮರ್ಥ್ಯಗಳು.

ಇದನ್ನೂ ಓದಿ: ಎನ್​ಆರ್​ಐಗಳ ಡೆಪಾಸಿಟ್​ಗಳನ್ನು ಕೈಬೀಸಿ ಕರೆಯುತ್ತಿವೆ ಭಾರತದ ಹೊಸ FCNR(B) ದರಗಳು; ಅನಿವಾಸಿ ಭಾರತೀಯರಿಗೆ ಹೇಗೆ ಲಾಭ?

ಕಂಪನಿ ಹಿರಿಯರ ಬೌದ್ಧಿಕ ಜ್ಞಾನ ಉಳಿಯಬಲ್ಲುದಾ?

“ಕಂಪನಿಗಳು ತಮ್ಮ ಆಂತರಿಕ ಜ್ಞಾನ ಮತ್ತು ಬೌದ್ಧಿಕ ಆಸ್ತಿಯನ್ನು (IP) ರಕ್ಷಿಸಿಕೊಳ್ಳಲು ತಮ್ಮದೇ ಆದ ಕಲಿಕಾ ವ್ಯವಸ್ಥೆಯನ್ನು ರೂಪಿಸಿಕೊಳ್ಳಬೇಕು. ಒಂದು ವೇಳೆ ನಿಮ್ಮ ಕಂಪನಿಯು ಬಳಸುತ್ತಿರುವ ಪ್ರಮುಖ ‘AI ಮಾಡೆಲ್’ ಅನ್ನು ಬದಲಾಯಿಸಿದರೂ ಸಹ, ನಿಮ್ಮ ಕಂಪನಿಯ ಹಿರಿಯ ನೌಕರನಿಗಿರುವಂತಹ (Company Veteran) ರಹಸ್ಯ ಜ್ಞಾನ ಮತ್ತು ಕಾರ್ಯಕ್ಷಮತೆ ನಿಮ್ಮ ಸಿಸ್ಟಮ್‌ನಲ್ಲಿ ಹಾಗೇ ಉಳಿಯಬೇಕು. ಆ ಮಟ್ಟಿಗೆ ಕಂಪನಿಗಳು ಸ್ವಾವಲಂಬನೆ ಸಾಧಿಸಬೇಕು” ಎಂದು ಭಾರತ ಮೂಲದ ಮೈಕ್ರೋಸಾಫ್ಟ್ ಸಿಇಒ ಹೇಳುತ್ತಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಮೈದಾನದಲ್ಲೇ ಹೊಡೆದಾಡಿಕೊಂಡ್ರಾ ಭಾರತ- ಪಾಕ್ ಆಟಗಾರ್ತಿಯರು? ವೈರಲ್ ವಿಡಿಯೋದ ಅಸಲಿಯತ್ತೇನು? – Kannada News | Fake AI Video Debunked: India Women Thrash Pakistan in T20 WC 2026 Clash

ಜೂನ್ 14 ರಂದು 2026 ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ( Women’s T20 World Cup) ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ (India vs Pakistan) ಮಹಿಳಾ ತಂಡಗಳ ನಡುವೆ ಪಂದ್ಯ ನಡೆದಿತ್ತು. ಆ ಪಂದ್ಯವನ್ನು ಭಾರತ ಮಹಿಳಾ ತಂಡ ಏಕಪಕ್ಷೀಯವಾಗಿ ಗೆದ್ದುಕೊಂಡಿತ್ತು. ಆದಾಗ್ಯೂ ಪಂದ್ಯ ಆರಂಭಕ್ಕೂ ಮುನ್ನ ಅಂದರೆ ಟಾಸ್ ಸಮಯದಲ್ಲಿ ಹಾಗೂ ಪಂದ್ಯ ಮುಗಿದ ಬಳಿಕ ಉಭಯ ತಂಡಗಳ ಆಟಗಾರ್ತಿಯರು ಶೇಕ್​ಹ್ಯಾಂಡ್ ಮಾಡದಿರುವುದು ವಿವಾದಕ್ಕೆ ಕಾರಣವಾಗಿತ್ತು. ಇದನ್ನು ಹೊರತುಪಡಿಸಿದರೆ ಬೇರೆ ಯಾವ ದುರ್ಘಟನೆಯೂ ಪಂದ್ಯದ ವೇಳೆ ನಡೆದಿರಲಿಲ್ಲ. ಆದರೆ ಪಂದ್ಯ ಮುಗಿದ ಕೆಲವೇ ನಿಮಿಷಗಳಲ್ಲಿ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋವೊಂದು ವೈರಲ್ ಆಗಿತ್ತು. ಆ ವಿಡಿಯೋದಲ್ಲಿ ಉಭಯ ತಂಡಗಳ ಆಟಗಾರ್ತಿಯರು ಪರಸ್ಪರ ಕೈಕೈ ಮಿಲಾಯಿಸುತ್ತಿರುವಂತೆ ಚಿತ್ರಿತವಾಗಿತ್ತು.

ಭಾರತ- ಪಾಕ್ ಆಟಗಾರ್ತಿಯರ ನಡುವೆ ಜಗಳ?

ವಿಡಿಯೋದಲ್ಲಿ ಇರುವುದೇನು ಎಂಬುದನ್ನು ನೋಡುವುದಾದರೆ… ಭಾರತ ತಂಡ ಬ್ಯಾಟಿಂಗ್‌ ಮಾಡುವ ವೇಳೆ ಸ್ಟ್ರೈಕ್​ನಲ್ಲಿದ್ದ ಬ್ಯಾಟರ್ ಬಳಿ ಬಂದ ಪಾಕಿಸ್ತಾನ ತಂಡದ ಬೌಲರ್ ಆಕ್ರಮಣಕಾರಿಯಾಗಿ ಏನನ್ನೋ ಹೇಳಿದ್ದು ಮಾತ್ರವಲ್ಲದೆ ಅವರನ್ನು ತಳ್ಳುತ್ತಾರೆ. ಇದರಿಂದ ಕೋಪಗೊಂಡ ಭಾರತ ಬ್ಯಾಟರ್, ಪಾಕ್ ಬೌಲರ್​ನ ಕುತ್ತಿಗೆ ಕೈಹಾಕಿ ದೂರಕ್ಕೆ ತಳ್ಳುತ್ತಾರೆ. ಇದ್ದಕ್ಕಿದ್ದಂತೆ ಉಭಯ ತಂಡಗಳ ಆಟಗಾರ್ತಿಯರ ನಡುವೆ ಜಗಳ ಶುರುವಾಗುತ್ತದೆ. ಇದನ್ನು ಗಮನಿಸಿದ ಅಂಪೈರ್‌ಗಳು ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸುತ್ತಾರೆ.

AI ವಿಡಿಯೋ ವೈರಲ್

ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯ ಮುಗಿದ ಬೆನ್ನಲ್ಲೇ ಈ ಹೊಡೆದಾಟದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ವಿಡಿಯೋ ಎರಡೂ ದೇಶಗಳ ಕ್ರಿಕೆಟ್ ಅಭಿಮಾನಿಗಳಲ್ಲಿ ಭಾರಿ ಚರ್ಚೆಗೆ ಕಾರಣವಾಯಿತು. ಪಂದ್ಯದಲ್ಲಿ ನಿಜವಾಗಿಯೂ ಇಂತಹ ಭಯಾನಕ ಘಟನೆ ನಡೆದಿದೆಯೇ ಎಂದು ಹಲವರು ಆಶ್ಚರ್ಯಪಟ್ಟರು. ಏಕೆಂದರೆ ಇಡೀ ಪಂದ್ಯದಲ್ಲಿ ಆ ರೀತಿಯ ಘಟನೆ ನಡೆದಿರಲಿಲ್ಲ. ಇದಾದ ಬಳಿಕ ಈ ವಿಡಿಯೋ ಹಿಂದಿರುವ ಸತ್ಯಾಸತ್ಯತೆಯನ್ನು ಪರಿಶೀಲಿಸಿದ ಬಳಿಕ ಈ ವಿಡಿಯೋ ನಕಲಿಯಾಗಿದ್ದು, ಕೃತಕ ಬುದ್ಧಿಮತ್ತೆಯನ್ನು ಬಳಸಿ ರಚಿಸಿದ ಕ್ಲಿಪ್ ಎಂಬುದು ದೃಢಪಟ್ಟಿದೆ.

ಪಂದ್ಯ ಹೀಗಿತ್ತು

ಇನ್ನು ಪಂದ್ಯದ ವಿಚಾರಕ್ಕೆ ಬರುವುದಾದರೆ.. ಬರ್ಮಿಂಗ್ಹ್ಯಾಮ್​ನಲ್ಲಿ ನಡೆದ ಈ ಹೈ-ವೋಲ್ಟೇಜ್ ಪಂದ್ಯದಲ್ಲಿ ಭಾರತೀಯ ಮಹಿಳಾ ತಂಡವು ಪಾಕಿಸ್ತಾನವನ್ನು ಹೀನಾಯವಾಗಿ ಸೋಲಿಸಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 170 ರನ್‌ಗಳ ಬೃಹತ್ ಸ್ಕೋರ್ ಗಳಿಸಿತು. ಆ ಬಳಿಕ 171 ರನ್‌ಗಳ ಬೃಹತ್ ಗುರಿ ಬೆನ್ನಟ್ಟಲು ಮೈದಾನಕ್ಕೆ ಇಳಿದ ಪಾಕಿಸ್ತಾನ, ಭಾರತದ ಸ್ಟಾರ್ ಸ್ಪಿನ್ನರ್ ದೀಪ್ತಿ ಶರ್ಮಾ ದಾಳಿಗೆ ನಲುಗಿ ಕೇವಲ 106 ರನ್‌ಗಳಿಸಲಷ್ಟೇ ಶಕ್ತವಾಗಿ 64 ರನ್‌ಗಳ ಅಂತರದಿಂದ ಭಾರಿ ಸೋಲನ್ನು ಅನುಭವಿಸಿತು. ಈ ಪಂದ್ಯದಲ್ಲಿ ದೀಪ್ತಿ 5 ವಿಕೆಟ್​ಗಳ ಗೊಂಚಲು ಪಡೆದು ಪಂದ್ಯಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಐಎಎಫ್ ಅಧಿಕಾರಿಯ ಪತ್ನಿ ಮೇಲೆ ಲೈಂಗಿಕ ದೌರ್ಜನ್ಯ, ಬಲವಂತದ ಮತಾಂತರ – Kannada News | IAF officer;s wife drugged, raped, forced to convert religion in Nagpur

ನಾಗ್ಪುರ, ಜೂನ್ 16: ಮಹಾರಾಷ್ಟ್ರದ ನಾಗ್ಪುರದಲ್ಲಿ ಭಾರತೀಯ ವಾಯುಪಡೆಯ (ಐಎಎಫ್) ಅಧಿಕಾರಿಯ ಪತ್ನಿ ಅತ್ಯಾಚಾರ, ಬ್ಲ್ಯಾಕ್‌ಮೇಲ್ ಮತ್ತು ಬಲವಂತದ ಮತಾಂತರದ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ನನ್ನನ್ನು ಬಿಟ್ಟುಬಿಡಿ ಎಂದು 24 ವರ್ಷದ ಯುವತಿಯೊಬ್ಬಳು ಅಳುತ್ತಾ ಕೈಬಿಡಿಸಿಕೊಳ್ಳಲು ಹೆಣಗಾಡುತ್ತಿರುವ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ (Viral Video) ಆಗಿದೆ. ಈ ಆಘಾತಕಾರಿ ವೀಡಿಯೊ ಭಾರತೀಯ ವಾಯುಪಡೆ (IAF) ಅಧಿಕಾರಿಯೊಬ್ಬರ ಪತ್ನಿಯ ಮೇಲೆ ನಡೆದಿರುವ ಭೀಕರ ದೌರ್ಜನ್ಯದ ಪ್ರಮುಖ ಸಾಕ್ಷಿಯಾಗಿದೆ. ನಾಗ್ಪುರದಲ್ಲಿ ಯುವತಿಗೆ ಡ್ರಗ್ಸ್ ನೀಡಿ ಅತ್ಯಾಚಾರ ಎಸಗಲಾಗಿದ್ದು, ಆ ದೃಶ್ಯಗಳನ್ನು ವೀಡಿಯೊ ಮಾಡಿ ಬ್ಲ್ಯಾಕ್‌ಮೇಲ್ ಮೂಲಕ ಲಕ್ಷಾಂತರ ರೂ. ಸುಲಿಗೆ ಮಾಡಲಾಗಿದೆ. ಜೊತೆಗೆ ಆಕೆಯನ್ನು ಬಲವಂತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಳಿಸಲು ಯತ್ನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಾರಾಷ್ಟ್ರದ ನಾಗ್ಪುರದಲ್ಲಿ ಮಾನವೀಯತೆಯನ್ನೇ ತಲೆತಗ್ಗಿಸುವಂತಹ ಘಟನೆಯೊಂದು ಬೆಳಕಿಗೆ ಬಂದಿದೆ. ವಾಯುಪಡೆ ಅಧಿಕಾರಿಯ ಪತ್ನಿಯಾಗಿರುವ 24 ವರ್ಷದ ಯುವತಿಯನ್ನು ಆಕೆಯ ಹಳೆಯ ಸಹಪಾಠಿಯೇ ಅತ್ಯಾಚಾರ ನಡೆಸಿ, ಬ್ಲ್ಯಾಕ್‌ಮೇಲ್ ಮಾಡಿ, ಬಲವಂತವಾಗಿ ಮತಾಂತರಗೊಳಿಸಲು ಯತ್ನಿಸಿರುವ ಘಟನೆ ವರದಿಯಾಗಿದೆ. ಈ ಘಟನೆ ನಡೆದು ಒಂದು ವರ್ಷ ಕಳೆದಿದ್ದರೂ, ಇತ್ತೀಚೆಗೆ ಮಹಿಳೆ ಧೈರ್ಯ ಮಾಡಿ ತನ್ನ ಪತಿಗೆ ವಿಷಯ ತಿಳಿಸಿದ ನಂತರ ಜೂನ್ 13 ರಂದು ನಾಗ್ಪುರದ ಸೋನೆಗಾಂವ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಂತ್ರಸ್ತೆಯ ದೂರಿನ ಆಧಾರದ ಮೇಲೆ, ಪೊಲೀಸರು ಪ್ರಮುಖ ಆರೋಪಿ ಅಯಾಜ್ ಮದಾರೆ ಮತ್ತು ಅವರ ಸಹಚರ ಅಮೀನ್ ಶೇಖ್ ಎಂಬುವವರನ್ನು ಬಂಧಿಸಿದ್ದಾರೆ. ಮತಾಂತರದಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ಮೌಲಾನಾ ಅವರನ್ನು ವಿಶೇಷ ತಂಡಗಳು ಹುಡುಕುತ್ತಿವೆ. ಎಫ್‌ಐಆರ್ ಪ್ರಕಾರ, 2025ರ ಫೆಬ್ರವರಿ 8ರಂದು ಅಯಾಜ್ ಮದಾರೆ ಹೋಟೆಲ್‌ನಲ್ಲಿ ಐಎಎಫ್ ಅಧಿಕಾರಿಯ ಪತ್ನಿಗೆ ಪಾನೀಯವನ್ನು ಕುಡಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ವೃದ್ಧೆಗೂ ಇಲ್ಲ ಭದ್ರತೆ; ಕಣ್ಣು ಕಾಣದ 70 ವರ್ಷದ ದೆಹಲಿಯ ಮಹಿಳೆ ಮೇಲೆ ಹಲ್ಲೆ, ಲೈಂಗಿಕ ದೌರ್ಜನ್ಯಕ್ಕೆ ಯತ್ನ

ಆಕೆ ಪ್ರಜ್ಞಾಹೀನಳಾಗಿದ್ದಾಗ ಆಕ್ಷೇಪಾರ್ಹ ಫೋಟೋಗಳು ಮತ್ತು ವಿಡಿಯೋಗಳನ್ನು ತೆಗೆದುಕೊಂಡು, ಆಕೆಯ ಪತಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿ, ಸಾಮಾಜಿಕ ಮಾಧ್ಯಮದಲ್ಲಿ ಹರಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬೆದರಿಕೆಗಳ ಮೂಲಕ ಆತ ತನ್ನ ಮೇಲೆ ಹಲವಾರು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ, ಸುಮಾರು 4 ಲಕ್ಷ ರೂ.ಗಳನ್ನು ಸುಲಿಗೆ ಮಾಡಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ವೈರಲ್ ಆದ ವಿಡಿಯೋದಲ್ಲಿ ಸಂತ್ರಸ್ತೆ ಅಳುತ್ತಾ ಬೇಡಿಕೊಳ್ಳುತ್ತಿರುವುದು ಕಂಡುಬರುತ್ತದೆ. ನಂತರ ಆತ ತನ್ನನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರಿಸಿ, ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಆಕೆ ಆರೋಪಿಸಿದ್ದಾರೆ.

ಸಂತ್ರಸ್ತೆ ಪೊಲೀಸರಿಗೆ ನೀಡಿರುವ ಸಾಕ್ಷ್ಯಚಿತ್ರದಲ್ಲಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಅದರಲ್ಲಿ ಆರೋಪಿ ಅಯಾಜ್ ಮದಾರೆ ಯುವತಿಯ ಕೈಗಳನ್ನು ಬಲವಂತವಾಗಿ ಹಿಡಿದುಕೊಂಡು ಧಾರ್ಮಿಕ ಶ್ಲೋಕಗಳನ್ನು ಪಠಿಸುತ್ತಾ ಆಕೆಯ ಮುಖದ ಮೇಲೆ ನಿರಂತರವಾಗಿ ಊದುತ್ತಿರುವುದು ಕಂಡುಬಂದಿದೆ. ಈ ವೇಳೆ ಯುವತಿ “ನನ್ನನ್ನು ಬಿಟ್ಟುಬಿಡಿ” ಎಂದು ಚೀರಾಡುತ್ತಾ ಆತನ ಹಿಡಿತದಿಂದ ತಪ್ಪಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾಳೆ. ಈ ಕೃತ್ಯದ ನಂತರ ಆಕೆ ಮತಾಂತರಗೊಂಡಿದ್ದಾಳೆ ಎಂದು ಆರೋಪಿಗಳು ಘೋಷಿಸಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಮಾಜಿ ಸೈನಿಕನ ಮರ್ಡರ್ ಮಿಸ್ಟ್ರಿ: FSL​​ ವರದಿಯನ್ನೇ ತಿರುಚಿದ್ರು, ಸುಪನಾತಿ ಸುಮಾಳ ಅಸಲಿಯತ್ತು ಬಯಲು

ಆರೋಪಿ ಅಯಾಜ್ ಪ್ಲಾಟ್ ಖರೀದಿಸುವ ನೆಪದಲ್ಲಿ ಯುವತಿಯನ್ನು ವರ್ಧಾ ರಸ್ತೆಯಲ್ಲಿರುವ ಹೋಟೆಲ್‌ಗೆ ಕರೆಸಿದ್ದನು. ಅಲ್ಲಿ ಆಕೆಗೆ ನೀಡಿದ ಜ್ಯೂಸ್‌ನಲ್ಲಿ ಮಾದಕ ದ್ರವ್ಯ ಬೆರೆಸಿ, ಆಕೆ ಪ್ರಜ್ಞೆ ತಪ್ಪಿದಾಗ ಅತ್ಯಾಚಾರ ಎಸಗಿದ್ದನು. ಅಲ್ಲದೆ ಆ ಕೃತ್ಯದ ಅಶ್ಲೀಲ ವೀಡಿಯೊ ಮತ್ತು ಫೋಟೋಗಳನ್ನು ತೆಗೆದುಕೊಂಡಿದ್ದನು. ಆ ವೀಡಿಯೊಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪಿ, ಯುವತಿಯಿಂದ ಸುಮಾರು 3.09 ಲಕ್ಷ ರೂಪಾಯಿ ಹಣವನ್ನು ಸುಲಿಗೆ ಮಾಡಿದ್ದಲ್ಲದೆ ನಿರಂತರವಾಗಿ ಲೈಂಗಿಕ ಶೋಷಣೆ ನಡೆಸಿದ್ದನು.

ಕಳೆದ ಮೇ ತಿಂಗಳಲ್ಲಿ ಆರೋಪಿ ಅಯಾಜ್ ಆ ಸಂತ್ರಸ್ತೆಯನ್ನು ನಾಗ್ಪುರದ ಕಲ್ಮೇಶ್ವರ್ ಎಂಬ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದನು. ಅಲ್ಲಿ ಆಕೆಯನ್ನು ಅಮೀನ್ ಶೇಖ್ ಮತ್ತು ಮಧ್ಯಪ್ರದೇಶದ ಮೌಲಾನಾಗೆ ಪರಿಚಯಿಸಲಾಗಿತ್ತು. ಮೂವರೂ ಸೇರಿ ಯುವತಿಯ ಇಷ್ಟಕ್ಕೆ ವಿರುದ್ಧವಾಗಿ ಕೆಲವು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿ, ಆಕೆಯ ಮತಾಂತರ ಪ್ರಕ್ರಿಯೆ ಪೂರ್ಣಗೊಂಡಿದೆ ಮತ್ತು ಆಕೆಗೆ ಅಯಾಜ್ ಜೊತೆ ಮದುವೆಯಾಗಿದೆ ಎಂದು ಘೋಷಿಸಿದ್ದರು. ಅದರ ನಂತರವೂ ಆಕೆಯ ಮೇಲೆ ಮತ್ತೊಮ್ಮೆ ಅತ್ಯಾಚಾರಕ್ಕೆ ಯತ್ನಿಸಲಾಗಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪೊಲೀಸರು ಅತ್ಯಾಚಾರ, ಲೈಂಗಿಕ ಕಿರುಕುಳ, ಬ್ಲ್ಯಾಕ್‌ಮೇಲ್, ದರೋಡೆ, ಬಲವಂತದ ಮತಾಂತರ ತಡೆ ಕಾಯ್ದೆಯಡಿ ಪ್ರಕರಣಗಳನ್ನು ದಾಖಲಿಸಿದ್ದಾರೆ. ವಶಪಡಿಸಿಕೊಂಡ ಮೊಬೈಲ್ ಫೋನ್‌ಗಳು ಮತ್ತು ಎಲೆಕ್ಟ್ರಾನಿಕ್ ಸಾಧನಗಳನ್ನು ವಿಧಿವಿಜ್ಞಾನ ಪರೀಕ್ಷೆಗಳಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಯುತ್ತಿದ್ದು, ಎಲ್ಲಾ ಕೋನಗಳಿಂದಲೂ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version