Headlines

‘ಕೊರಗಜ್ಜ’ ಸಿನಿಮಾದಲ್ಲಿ ಡ್ಯುಯೆಟ್ ಸಾಂಗ್? ಕುತೂಹಲ ಮೂಡಿಸಿದ ಚಿತ್ರತಂಡ – Kannada News | Koragajja movie team to release 2nd song by Shreya Ghoshal and Armaan Malik

ಈಗಾಗಲೇ ‘ಕೊರಗಜ್ಜ’ ಸಿನಿಮಾದ ಬಗ್ಗೆ ಸಾಕಷ್ಟು ಕುತೂಹಲ ಸೃಷ್ಟಿ ಆಗಿದೆ. ಸುಧೀರ್ ಅತ್ತಾವರ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಿಂದ 2ನೇ ಹಾಡಿನ ಬಿಡುಗಡೆಗೆ ತಯಾರಿ ನಡೆದಿದೆ. ಈ ಹಾಡನ್ನು ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಶ್ರೇಯಾ ಘೋಷಾಲ್ (Shreya Ghoshal) ಅವರು ಹಾಡಿದ್ದಾರೆ. ಇತ್ತೀಚೆಗೆ ಹಾಡಿನ ಸಾಹಿತ್ಯವನ್ನು ರಿಲೀಸ್ ಮಾಡಿದ್ದ ಚಿತ್ರತಂಡ ಈಗ ಈ ಹಾಡಿನ‌ಲ್ಲಿ ಬರುವ ಮುಗ್ಧ ಪ್ರೇಮಿಗಳ ಪೋಸ್ಟರ್​ಗಳನ್ನು ಬಿಡುಗಡೆಗೊಳಿಸಿದೆ. ಆ ಮೂಲಕ ‘ಕೊರಗಜ್ಜ’ (Koragajja) ಚಿತ್ರಕ್ಕೆ ಹೊಸ ಆಯಾಮ‌‌…

Read More

‘ಅಪ್ಪನೇ ಗರ್ಭಿಣಿ ಮಗಳನ್ನು ಕುರಿ ಕಡಿದಂಗೆ ಕಡಿದವ್ನೆ’: ಮರ್ಯಾದಾ ಹತ್ಯೆಯ ಭೀಕರತೆ ಬಿಚ್ಚಿಟ್ಟ ಯುವಕನ ದೊಡ್ಡಮ್ಮ – Kannada News | Dharwad Honour Killing Case: Victim’s Relative Reveals crime Details, Sparks Outrage

ಹುಬ್ಬಳ್ಳಿ, ಡಿಸೆಂಬರ್ 22: ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ನಡೆದ ಮರ್ಯಾದಾ ಹತ್ಯೆ ಇಡೀ ಧಾರವಾಡ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದೆ. ದಲಿತ ಯುವಕನನ್ನು ಮದುವೆಯಾಗಿದ್ದಕ್ಕೆ 7 ತಿಂಗಳ ಗರ್ಭಿಣಿಯಾಗಿದ್ದ ಮಗಳನ್ನು ತಂದೆಯೇ ಕೊಲೆ ಮಾಡಿದ ಘಟನೆ ನಡೆದಿದೆ. ಘಟನೆಯ ಭೀಕರತೆಯನ್ನು ಯುವಕ ವಿವೇಕಾನಂದನ ದೊಡ್ಡಮ್ಮ ಜಯಶ್ರೀ ಬಹಿರಂಗಪಡಿಸಿದ್ದು, ಆ ಹುಡುಗಿಯನ್ನು ನಮ್ಮ ಹುಡುಗ ಮದುವೆಯಾಗಿದ್ದು ತಪ್ಪೇ? ನಮ್ಮ ಮಕ್ಕಳನ್ನು ಹೊಡೆದುಹಾಕಿದ್ದಾರೆ. ಮದುವೆಯಾಗಿ ತಿಂಗಳುಗಳೇ ಆಗಿದ್ದವು. ಹುಡುಗಿ ಏಳು ತಿಂಗಳ ಗರ್ಭಿಣಿಯಾಗಿದ್ದಳು ಎಂದು ಕಣ್ಣೀರು ಹಾಕಿದ್ದಾರೆ. ಅವರು ‘‘ದೊಡ್ಡ…

Read More

WPL 2026: 8 ವಿಕೆಟ್​ಗಳಿಂದ ಗೆದ್ದು ನೇರವಾಗಿ ಫೈನಲ್​ಗೆ ಎಂಟ್ರಿಕೊಟ್ಟ ಆರ್​ಸಿಬಿ

ಮಹಿಳಾ ಪ್ರೀಮಿಯರ್ ಲೀಗ್ 2026 ರ 18 ನೇ ಪಂದ್ಯ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಯುಪಿ ವಾರಿಯರ್ಸ್ ನಡುವೆ ನಡೆಯಿತು. ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಆರ್​ಸಿಬಿ ತಂಡ ಏಕಪಕ್ಷೀಯ ಗೆಲುವು ದಾಖಲಿಸಿ ನೇರವಾಗಿ ಫೈನಲ್​ಗೆ ಟಿಕೆಟ್ ಪಡೆದುಕೊಂಡಿದೆ. ಇತ್ತ ಆರ್​ಸಿಬಿ ವಿರುದ್ಧ ಸೋತ ಯುಪಿ ವಾರಿಯರ್ಸ್​ ಮೊದಲ ತಂಡವಾಗಿ ಅಧಿಕೃತವಾಗಿ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ. ಯುಪಿ ತಂಡ ಪ್ಲೇಆಫ್‌ ರೇಸ್​ನಲ್ಲಿ ಜೀವಂತವಾಗಿರಬೇಕೆಂದರೆ ಈ ಪಂದ್ಯವನ್ನು ಗೆಲ್ಲಲೇಬೇಕಿತ್ತು. ಆದರೆ ಅದು ಆಗಲಿಲ್ಲ….

Read More

ಬೆಂಗಳೂರು ರೈಲು ಪ್ರಯಾಣಿಕರು ಗಮನಿಸಿ: KSR ಟರ್ಮಿನಲ್ ಬದಲಾವಣೆ, ಹೊಸ ನಿಲ್ದಾಣಗಳು ಇಲ್ಲಿವೆ

ಬೆಂಗಳೂರಿನಿಂದ ವಿವಿಧ ಊರುಗಳಿಗೆ ರೈಲಿನಲ್ಲಿ ಹೋಗುವ ಜನರು ಈ ಬದಲಾವಣೆಗಳನ್ನು ಗಮನಿಸಲೇಬೇಕು. ಕೆಎಸ್‌ಆರ್ ಬೆಂಗಳೂರು ನಿಲ್ದಾಣದಲ್ಲಿ ಪಿಟ್ ಲೈನ್ ಪುನರ್ನಿರ್ಮಾಣ ಕಾಮಗಾರಿ ನಡೆಯುತ್ತಿರುವ ಕಾರಣ ರೈಲುಗಳ ಟರ್ಮಿನಲ್ ನಿಲ್ದಾಣಗಳಲ್ಲಿ ಬದಲಾವಣೆಯನ್ನು ಮಾಡಲಾಗಿದೆ. ಜ.16ರಿಂದ ಮಾರ್ಚ್​​​ 10ರವರೆಗೆ ಹೊರಡುವ ರೈಲು ಸಂಖ್ಯೆ 12678 ಎರ್ನಾಕುಲಂ ಜಂಕ್ಷನ್ – ಕೆಎಸ್ಆರ್ ಬೆಂಗಳೂರು ಎಕ್ಸ್‌ಪ್ರೆಸ್ ರೈಲುಬೆಂಗಳೂರು ಕಂಟೋನ್ಮೆಂಟ್ ಮತ್ತು ಕೆಎಸ್ಆರ್ ಬೆಂಗಳೂರು ನಡುವೆ ಭಾಗಶಃ ರದ್ದು ಮಾಡಲಾಗಿದೆ. ಈ ರೈಲು ಕೆಎಸ್ಆರ್ ಬೆಂಗಳೂರಿಗೆ ಬದಲಾಗಿ ಬೆಂಗಳೂರು ಕಂಟೋನ್ಮೆಂಟ್‌ ನಿಲ್ದಾಣದವರೆಗೆ ಮಾತ್ರ ಹೋಗಲಿದೆ….

Read More

ಎಟಿಎಂಗಳಲ್ಲಿ ಮಾರ್ಚ್ ನಂತರ 500 ರೂ ನೋಟು ಸಿಗಲ್ವಾ? ಸರ್ಕಾರದ ಸ್ಪಷ್ಟನೆ ಇದು – Kannada News | Viral news of Rs 500 notes stopping in 2026, govt clarifies again

ನವದೆಹಲಿ, ಜನವರಿ 4: ಭಾರತೀಯ ರಿಸರ್ವ್ ಬ್ಯಾಂಕ್ (RBI) 500 ರೂ ನೋಟುಗಳ ಚಲಾವಣೆ ಕಡಿಮೆ ಮಾಡುತ್ತದೆ. ಮುಂಬರುವ ದಿನಗಳಲ್ಲಿ ಎಟಿಎಂಗಳಲ್ಲಿ 500 ರೂ ನೋಟುಗಳು ಸಿಕ್ಕೋದಿಲ್ಲ ಎಂದು ತಿಳಿಸುತ್ತಿರುವ ಕೆಲ ಪೋಸ್ಟ್​ಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಸರ್ಕಾರ 500 ರೂ ನೋಟುಗಳ ಮುದ್ರಣ ನಿಲ್ಲಿಸಿ, 100 ರೂ ನೋಟುಗಳ ಚಲಾವಣೆ ಮಾತ್ರ ಮುಂದುವರಿಸಬಹುದು ಎನ್ನುವಂತಹ ಸುದ್ದಿಗಳು ಕೆಲ ತಿಂಗಳ ಹಿಂದೆ ಹರಿದಾಡುತ್ತಿದ್ದವು. ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿರುವ ಈ ಸುದ್ದಿಗಳನ್ನು ಸರ್ಕಾರ ಅಲ್ಲಗಳೆದಿದೆ. ಇವು ಸುಳ್ಳು…

Read More

ಸಿಸಿಎಲ್​ ಗೆದ್ದ ಬಳಿಕ ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್ – Kannada News | Kichcha Sudeep Celebrate CCL victory with Co players in his own style

ಫೆಬ್ರವರಿ 1ರಂದು ನಡೆದ ಬೆಂಗಾಲ್ ಟೈಗರ್ಸ್ vs ಕರ್ನಾಟಕ ಬುಲ್ಡೋಜರ್ಸ್ ನಡುವಿನ ಪಂದ್ಯದಲ್ಲಿ ಸುದೀಪ್ ಅವರ ತಂಡ ಗೆಲುವು ಕಂಡಿದೆ. ಎಲ್ಲರ ಸಂಘಟಿತ ಪ್ರದರ್ಶನದಿಂದ ಗೆಲುವು ನಮ್ಮದಾಗಿದೆ. ಗೆಲುವಿನ ಬಳಿಕ ಕಿಚ್ಚ ಸುದೀಪ್ ಅವರು ಕಪ್ ಎತ್ತಲು ತಮ್ಮದೇ ಸ್ಟೈಲ್​​ನಲ್ಲಿ ಬಂದರು. ಆ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಕರ್ನಾಟಕ ಬುಲ್ಡೋಜರ್ಸ್ ತಂಡ ಸಿಸಿಎಲ್ ಇತಿಹಾಸದಲ್ಲಿ ಮೂರನೇ ಬಾರಿಗೆ ಕಪ್ ಎತ್ತಿದೆ. ಕಳೆದ ವರ್ಷ ಫಿನಾಲೆಗೆ ಏರಿದ್ದರೂ ಗೆಲುವು ಸಿಕ್ಕಿರಲಿಲ್ಲ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 16ರ ದಿನಭವಿಷ್ಯ

ಚಂದ್ರಮೌಳೀಶ್ವರ ದೇವಸ್ಥಾನಕ್ಕೆ ತೆರಳಿ ದರ್ಶನ ಮಾಡಿ. ತೆಂಗಿನಕಾಯಿ, ಬಾಳೇಹಣ್ಣು, ಊದಿನಕಡ್ಡಿ, ಕರ್ಪೂರ ಇತ್ಯಾದಿಗಳನ್ನು ತೆಗೆದುಕೊಂಡು ಹೋಗಿ ಅರ್ಪಣೆ ಮಾಡಿ. ಅಥವಾ ಮನೆಯಲ್ಲಿಯೇ ಚಂದ್ರಮೌಳೀಶ್ವರ ಸ್ವರೂಪದಲ್ಲಿ ನೆನಪಿಸಿಕೊಂಡು ಇವೆಲ್ಲವನ್ನೂ ಅರ್ಪಿಸಿ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಪರ್ಸನಾಲಿಟಿ ಡೆವಲಪ್ ಮೆಂಟ್ ಸೆಷನ್ ಗಳಲ್ಲಿ ಭಾಗವಹಿಸುವ ನಿರ್ಧಾರ ಮಾಡುತ್ತೀರಿ. ನಿಮ್ಮ ಉದ್ಯೋಗ- ವೃತ್ತಿ ಜೀವನದಲ್ಲಿನ ಬದಲಾವಣೆಗಳು ನಿಧಾನವಾದರೂ ಸ್ಥಿರವಾಗಿ ಆಗಲಿದೆ. ಮನಸ್ಸಿನಲ್ಲಿ ನಡೆಯುತ್ತಿರುವ ಗೊಂದಲಕ್ಕೆ ಸ್ಪಷ್ಟತೆ ಸಿಗುವ ಸಾಧ್ಯತೆ ಇದೆ….

Read More

ಟಿ20 ಪಂದ್ಯದಲ್ಲಿ 8 ವಿಕೆಟ್; ವಿಶ್ವ ದಾಖಲೆ ಸೃಷ್ಟಿಸಿದ ಭೂತಾನ್ ಸ್ಪಿನ್ನರ್ – Kannada News | Sonam Yeshey Sets New T20 World Record: First Bowler with 8 Wickets for Bhutan

ಟಿ20 ಪಂದ್ಯವೊಂದರಲ್ಲಿ ಬೌಲರ್ 5 ವಿಕೆಟ್ ಪಡೆದರೆ ಅದು ದೊಡ್ಡ ವಿಷಯ. ಆದರೆ ಅದೇ ಟಿ20 ಪಂದ್ಯದಲ್ಲಿ ಬೌಲರ್ 8 ವಿಕೆಟ್ ಪಡೆದರೆ ಅದೊಂದು ವಿಶ್ವ ದಾಖಲೆ. ಇದೀಗ ಅಂತಹದ್ದೇ ವಿಶ್ವ ದಾಖಲೆಯನ್ನು ಕ್ರಿಕೆಟ್ ಶಿಶು ಭೂತಾನ್‌ ತಂಡದ ಸ್ಪಿನ್ನರ್ ಒಬ್ಬ ಮಾಡಿದ್ದಾನೆ. ಭೂತಾನ್ ತಂಡದ ಸ್ಪಿನ್ನರ್ ಸೋನಮ್ ಯೆಶೆ (Sonam Yeshey) ಬರೋಬ್ಬರಿ 8 ವಿಕೆಟ್​ಗಳನ್ನು ಪಡೆದು ಅಂತರರಾಷ್ಟ್ರೀಯ ಟಿ20 ಪಂದ್ಯವೊಂದರಲ್ಲಿ ಅತ್ಯಧಿಕ ವಿಕೆಟ್ ಉರುಳಿಸಿದ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಇಲ್ಲಿಯವರೆಗೆ ಅಂತರರಾಷ್ಟ್ರೀಯ ಟಿ20 ಪಂದ್ಯದಲ್ಲಿ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಮಂಜು ಕವಿದ ವಾತಾರಣ; ರಾಜ್ಯದೆಲ್ಲೆಡೆ ಮುಂದುವರೆದ ಒಣ ಹವೆ – Kannada News | Bengaluru temperature: Fog and misty weather in Bengaluru, Dry weather elsewhere

ಬೆಂಗಳೂರಿನಲ್ಲಿ ಮಂಜು ಕವಿದ ವಾತಾರಣ; ರಾಜ್ಯದೆಲ್ಲೆಡೆ ಮುಂದುವರೆದ ಒಣ ಹವೆ ಬೆಂಗಳೂರು, ಜನವರಿ 30: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಎರಡು ದಿನಗಳ ಹಿಂದೆ ಮೋಡ ಕವಿದು, ಸಾಧಾರಣ ಪ್ರಮಾಣದ ಮಳೆಯಾಗಿತ್ತು. ಆದರೆ ಇಂದು ರಾಜ್ಯದ ಹವಾಮಾನ (Weather Forecast) ಯಥಾಸ್ಥಿತಿ ತಲುಪಿದೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ…

Read More

ಕೊನೆಗೂ ಗೆದ್ದ ಚಿರಂಜೀವಿ: ‘ಶಂಕರ ವರ ಪ್ರಸಾದ್’ ಗಳಿಸಿದ್ದೆಷ್ಟು? – Kannada News | Megastar Chiranjeevi starrer Mana Shankara Vara Prasad Garu movie first day collection

ಮೆಗಾಸ್ಟಾರ್ ಚಿರಂಜೀವಿ (Megastar Chiranjeevi), ತೆಲುಗು ಚಿತ್ರರಂಗದ ಸೂಪರ್ ಸ್ಟಾರ್ ನಟ. ತೆಲುಗು ಚಿತ್ರರಂಗದ ಲಿಜೆಂಡ್​ಗಳಲ್ಲಿ ಒಬ್ಬರು. ರಾಜಕೀಯಕ್ಕೆ ಹೋಗಿ ಚಿತ್ರರಂಗದಿಂದ ದೂರಾಗಿದ್ದ ಚಿರಂಜೀವಿ ಬಳಿಕ ರಾಜಕೀಯ ತೊರೆದು ಸಂಪೂರ್ಣವಾಗಿ ಮತ್ತೆ ಚಿತ್ರರಂಗಕ್ಕೆ ತೊಡಗಿಸಿಕೊಂಡರು. ಆದರೆ ಅವರಿಗೆ ದೊಡ್ಡ ಯಶಸ್ಸು ಸಿಕ್ಕಿರಲಿಲ್ಲ. 2019ರ ಬಳಿಕ ಚಿರಂಜೀವಿ ನಟಿಸಿದ ನಾಲ್ಕು ಸಿನಿಮಾಗಳಲ್ಲಿ ನಟಿಸಿದ್ದರು. ನಾಲ್ಕೂ ಸಿನಿಮಾಗಳು ಸೋತಿದ್ದವು. ಇದೀಗ ಕೊನೆಗೂ ‘ಮನ ಶಂಕರ ವರ ಪ್ರಸಾದ್ ಗಾರು’ ಸಿನಿಮಾ ಮೂಲಕ ಗೆಲುವು ಸಾಧಿಸಿದ್ದಾರೆ ನಟ ಚಿರಂಜೀವಿ. ಅನಿಲ್ ರವಿಪುಡಿ…

Read More