Headlines

ಮುರುಘಾಶ್ರೀಗೆ ಮತ್ತೊಮ್ಮೆ ಎದುರಾದ ಸಂಕಷ್ಟ; ಕೋರ್ಟ್ ನಿರ್ಬಂಧ ಮೀರಿ ಮಠದ ನಿವೇಶನ ಮಾರಾಟ – Kannada News | Murughashree Legal Trouble: Murugha Math Plot Sale Case in Hosadurga

ಮುರುಘಾಶ್ರೀಗೆ ಮತ್ತೊಮ್ಮೆ ಎದುರಾದ ಸಂಕಷ್ಟ ಚಿತ್ರದುರ್ಗ, ಜನವರಿ 31: ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿ ಮುರುಘಾಮಠದ ಮಾಜಿ ಪೀಠಾಧಿಪತಿ ಮುರುಘಾಶ್ರೀಗೆ (Murughashree) ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮುರುಘಾಮಠಕ್ಕೆ ಸೇರಿದ ನಾಲ್ಕು ನಿವೇಶನಗಳನ್ನು ಅಕ್ರಮವಾಗಿ ಮಾರಾಟ ಮಾಡಿದ ಆರೋಪದಡಿ ಮುರುಘಾಶ್ರೀ ವಿರುದ್ಧ ಹೊಸದುರ್ಗ ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದೆ. ಮುರುಘಾಮಠದ ಆಡಳಿತ ಸಮಿತಿ ಅಧ್ಯಕ್ಷ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಶಿವಯೋಗಿ ಕಳಸದ್ ಅವರು ಈ ಸಂಬಂಧ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದಾರೆ. ಸರ್ಕಾರದಿಂದ ನೇಮಕಗೊಂಡಿರುವ ಮಠದ ಆಡಳಿತ ಸಮಿತಿಗೆ…

Read More

Shani Transit 2026: ಮಾರ್ಚ್ 13ರಂದು ಮೀನ ರಾಶಿಗೆ ಶನಿ ಪ್ರವೇಶ; ಈಮೂರು ರಾಶಿಗೆ ಅದೃಷ್ಟವೋ ಅದೃಷ್ಟ – Kannada News | Shani Transit 2026: Saturn Enters Pisces! 3 Zodiacs to Gain Immense Fortune and Success

ಶನಿದೇವನನ್ನು ಕರ್ಮದ ಫಲವನ್ನು ನೀಡುವ ಹಾಗೂ ನ್ಯಾಯದ ದೇವರು ಎಂದು ಹೇಳಲಾಗುತ್ತದೆ. ಒಂಬತ್ತು ಗ್ರಹಗಳಲ್ಲಿಯೂ ಅತ್ಯಂತ ಶಕ್ತಿಶಾಲಿ ಮತ್ತು ಪ್ರಭಾವಶಾಲಿ ಗ್ರಹವೆಂದರೆ ಶನಿ. ಶಿಸ್ತು, ಸದಾಚಾರ, ಪರಿಶ್ರಮ, ಕರ್ಮ ಹಾಗೂ ಆಧ್ಯಾತ್ಮಿಕತೆಯ ಮೇಲೆ ಶನಿಯ ಪ್ರಭಾವ ಅತ್ಯಂತ ಗಾಢವಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಪ್ರತಿಯೊಂದು ಗ್ರಹವೂ ನಿರ್ದಿಷ್ಟ ಅವಧಿಯ ನಂತರ ತನ್ನ ರಾಶಿಚಕ್ರ ಸ್ಥಾನವನ್ನು ಬದಲಾಯಿಸುತ್ತದೆ. ಈ ಗ್ರಹ ಸಂಚಾರಗಳು ಮಾನವ ಜೀವನದ ಮೇಲೆ ಧನಾತ್ಮಕ ಹಾಗೂ ಋಣಾತ್ಮಕ ಪರಿಣಾಮಗಳನ್ನು ಬೀರುತ್ತವೆ. ಅದರಲ್ಲೂ ಶನಿಯ ಸಂಚಾರವು ದೀರ್ಘಕಾಲಿಕ…

Read More

Spiritual Greetings: ಹಿರಿಯರಿಗೆ ನಮಸ್ಕಾರ ಮಾಡುವಾಗ ಈ ತಪ್ಪು ಮಾಡಲೇಬೇಡಿ; ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | The Spiritual Significance of Namaskara: A Guide to Proper Devotional Greetings

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನಮಸ್ಕಾರ ಮಾಡುವ ಸರಿಯಾದ ವಿಧಾನದ ಬಗ್ಗೆ ವಿವರಿಸಿದ್ದಾರೆ. ನಮಸ್ಕಾರಗಳನ್ನು ಸರಿಯಾದ ವಿಧಾನದಲ್ಲಿ ಮಾಡಿದಾಗ ಮಾತ್ರ ಅವುಗಳ ಸಂಪೂರ್ಣ ಫಲ ನಮಗೆ ಲಭಿಸುತ್ತದೆ. ದೇವರುಗಳಿಗೆ, ಮನುಷ್ಯರಿಗೆ, ಹಿರಿಯರಿಗೆ ಹಾಗೂ ಗುರುಗಳಿಗೆ ನಾವು ಸಲ್ಲಿಸುವ ನಮಸ್ಕಾರವು ಯಾಂತ್ರಿಕವಾಗಿರದೆ, ಶ್ರದ್ಧೆ, ಭಕ್ತಿ ಮತ್ತು ಮನಸ್ಸಿನಿಂದ ಬಂದಂತಹ ವಿನಯದಿಂದ ಕೂಡಿರಬೇಕು. ಅಂತಹ ನಮಸ್ಕಾರಗಳು ನಿಜವಾದ ಫಲಗಳನ್ನು ನೀಡುತ್ತವೆ ಎಂದು ಅವರು ಹೇಳಿದ್ದಾರೆ. ನಿರ್ದಿಷ್ಟವಾಗಿ, ವಿಷ್ಣು ದೇವರಾಗಬಹುದು, ಸಮಸ್ತ…

Read More

ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ

ಅನುಶ್ರೀ ಅವರು ಆ್ಯಂಕರಿಂಗ್ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದಿದ್ದಾರೆ. ಅನುಶ್ರೀ ಅವರ ಮಿಮಿಕ್ರಿಯನ್ನು ‘ಡ್ಯಾನ್ಸ್ ಕರ್ನಾಟಕ Dance-2025 ಮತ್ತು ಕಿಲಾಡಿ ಜೂನಿಯರ್ಸ್ ಮಹಾಸಂಗಮದಲ್ಲಿ ಮಾಡಲಾಗಿದೆ. ಅನುಶ್ರೀ ಅವರನ್ನು ಮಿಮಿಕ್ರಿ ಮಾಡಿದ್ದು ನೋಡಿದರೆ ಹೊಟ್ಟೆ ಹುಣ್ಣಾಗುವಂತೆ ನಗೋದು ಫಿಕ್ಸ್ ಎಂದೇ ಹೇಳಬಹುದು. DKD ವೇದಿಕೆಯ ದಿಗ್ಗಜರೆಲ್ಲರನ್ನೂ ಸಖತ್ ಸ್ಪೂಫ್ ಮೂಲಕ ನಗುವಿನ ಸುನಾಮಿಯಲ್ಲಿ ತೇಲಿಸಿದ್ದಾರೆ. ಆ ವಿಡಿಯೋ ಗಮನ ಸೆಳೆದಿದೆ. ಅನುಶ್ರೀ ರೀತಿಯೇ ಇದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.   Source link

Read More

ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲ: ಮೈಸೂರಲ್ಲಿ ದಾಳಿ ಬೆನ್ನಲ್ಲೇ ಅಶೋಕ್ ವಾಗ್ದಾಳಿ – Kannada News | BJP and R Ashoka Slams Karnataka Congress Govt Over Drug Racket After Mysuru NCB Raid

ಬೆಂಗಳೂರು, ಜನವರಿ 31: ಮೈಸೂರಿನಲ್ಲಿ ಗುಪ್ತವಾಗಿ ಡ್ರಗ್ಸ್ ತಯಾರಿಸುತ್ತಿದ್ದ ಘಟಕವನ್ನು ದೆಹಲಿ ಎನ್​​ಸಿಬಿ ಪತ್ತೆ ಮಾಡಿರುವ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಆರ್ ಅಶೋಕ್ (R Ashoka) ವಾಗ್ದಾಳಿ ನಡೆಸಿದ್ದಾರೆ. ಗೃಹ ಸಚಿವ ಡಾ. ಜಿ ಪರಮೇಶ್ವರ ಮಾತ್ರ, ಮೈಸೂರಿನಲ್ಲಿ ಪತ್ತೆಯಾಗಿರುವುದು ಫಿನಾಯಿಲ್ ಫ್ಯಾಕ್ಟರಿ. ಅಲ್ಲಿ ಡ್ರಗ್ಸ್ ತಯಾರು ಮಾಡುವ ಯಾವುದೇ ವಸ್ತುಗಳು ಸಿಕ್ಕಿಲ್ಲ ಎಂದು ಸಮರ್ಥನೆ ಮಾಡಿಕೊಂಡಿದ್ದರು. ಈ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಾಮಾಜಕ ಮಾಧ್ಯಮ ಎಕ್ಸ್​ನಲ್ಲಿ ಆಕ್ರೋಶ…

Read More

ಐಸಿಸಿ ಸಾಕ್ಸ್​ ನಿಯಮ: ಬಣ್ಣ ಬದಲಿಸಿದ್ರೆ ಬ್ಯಾನ್ ಆಗ್ಬಹುದು..! – Kannada News | ICC Clothing and White Socks Rules in Test Cricket

ಕ್ರಿಕೆಟ್ ಅನ್ನು ಜಂಟಲ್‌ಮ್ಯಾನ್ಸ್ ಗೇಮ್ ಎಂದು ಕರೆಯಲಾಗುತ್ತದೆ. ಈ ಜಂಟಲ್​ಮ್ಯಾನ್ಸ್ ಗೇಮ್​ನಲ್ಲಿ ಜಂಟಲ್​ಮ್ಯಾನ್​ನಂತೆ ಕಾಣಿಸಿಕೊಳ್ಳುವುದು ಕೂಡ ಕಡ್ಡಾಯ. ಇದಕ್ಕಾಗಿಯೇ ಕೆಲ ಡ್ರೆಸ್ ಕೋಡ್​ಗಳನ್ನು ಸಹ ರೂಪಿಸಲಾಗಿದೆ. ಅದರಲ್ಲೂ ಟೆಸ್ಟ್ ಕ್ರಿಕೆಟ್​ನಲ್ಲಿ ಕಟ್ಟು ನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಐಸಿಸಿಯ ಉಡುಪು ಮತ್ತು ಸಲಕರಣೆ ನಿಯಮಗಳ ಅಡಿಯಲ್ಲಿ ಟೆಸ್ಟ್ ಕ್ರಿಕೆಟ್​ನಲ್ಲಿ ವೈಟ್ ಸಾಕ್ಸ್​ ಧರಿಸಿ ಕಣಕ್ಕಿಳಿಯಬೇಕು. ಈ ನಿಯಮವನ್ನು ಉಲ್ಲಂಘಿಸಿದರೆ ಆಟಗಾರನು ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ. ಐಸಿಸಿ ಸಾಕ್ಸ್ ನಿಯಮ: ಐಸಿಸಿ ನಿಯಮಗಳ 19.45 ನೇ ವಿಧಿಯ ಪ್ರಕಾರ, ಆಟಗಾರರು ಟೆಸ್ಟ್…

Read More

ರಾಯ್ ನಿಧನದಿಂದ ಶಾಕ್ ಆದ ಹರ್ಷಿಕಾ; ಮನೆ ಹೇಗಿತ್ತು ಎಂದು ವಿವರಿಸಿದ ನಟಿ – Kannada News | CJ Roy Death Shocks: Harshika Poonacha Reveals Real Estate Tycoon’s Life and IT Raid Link

ರಿಯಲ್ ಎಸ್ಟೇಟ್ ಉದ್ಯಮಿ ಸಿಜೆ ರಾಯ್ (CJ Roy) ಆತ್ಮಹತ್ಯೆ ಪ್ರಕರಣ ಸಾಕಷ್ಟು ಸಂಚಲನ ಸೃಷ್ಟಿಸಿದೆ. ಅವರ ಆಪ್ತರು ಎನಿಸಿಕೊಂಡವರಿಗೆ ಈ ಸುದ್ದಿಯನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನಟಿ ಹರ್ಷಿಕಾ ಅವರು ‘ಕಾನ್ಫಿಡೆಂಟ್ ಗ್ರೂಪ್​’ನ ಪ್ರಚಾರ ರಾಯಭಾರಿ ಆಗಿದ್ದರು. ಸಿಜೆ ರಾಯ್​​​ನ ಅವರು ಹತ್ತಿರದಿಂದ ಕಂಡಿದ್ದರು. ಅವರು ರಾಯ್ ಅವರ ಒಡನಾಟದ ಬಗ್ಗೆ, ಅವರ ವ್ಯಕ್ತಿತ್ವದ ಬಗ್ಗೆ, ಅವರ ಐಷಾರಾಮಿ ಜೀವನದ ಬಗ್ಗೆ ಮಾತನಾಡಿದ್ದಾರೆ. ‘ರಾಯ್ ಅವರು ಈ ರೀತಿಯ ನಿರ್ಧಾರವನ್ನು ಏಕೆ ತೆಗೆದುಕೊಂಡರೋ ಗೊತ್ತಿಲ್ಲ. ಇದು ನಿಜಕ್ಕೂ…

Read More

ಸಿ.ಜೆ ರಾಯ್ ಸಾವಿನ ಕೊನೆಯ ಕ್ಷಣ ಹೇಗಿತ್ತು; ಏನೆಲ್ಲಾ ಆಯ್ತು ಗೊತ್ತಾ? – Kannada News | Confident Group Chairman C.J. Roy Dies Amidst IT Raid: What happened during the raid?

ಸಿ.ಜೆ ರಾಯ್ ಸಾವಿನ ಕೊನೆಯ ಕ್ಷಣ ಹೇಗಿತ್ತು; ಏನೆಲ್ಲಾ ಆಯ್ತು ಗೊತ್ತಾ? ಬೆಂಗಳೂರು, ಜನವರಿ 31: ಸಾವಿರಾರು ಕೋಟಿ ಆಸ್ತಿಯ ಒಡೆಯ, ಕಾನ್‌ಫಿಡೆಂಟ್ ಗ್ರೂಪ್‌ನ ಸಂಸ್ಥಾಪಕ ಸಿ.ಜೆ. ರಾಯ್ (CJ Roy Death) ಲಾಂಗ್‌ಫೋರ್ಡ್ ಟೌನ್‌ನಲ್ಲಿರುವ ತಮ್ಮ ಕಚೇರಿಯಲ್ಲಿ ಶುಕ್ರವಾರ ಸಾವನ್ನಪ್ಪಿದ್ದಾರೆ. 57 ವರ್ಷದ ಈ ರಿಯಲ್ ಎಸ್ಟೇಟ್ ಉದ್ಯಮಿ ತಮ್ಮ ಪಿಸ್ತೂಲಿನಿಂದ ತಾವೇ ಗುಂಡುಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ಹಲವಾರು ಅನುಮಾನಗಳು ಕಾಡುತ್ತಿವೆ. ಅದರಲ್ಲದೆ ಅವರು ಬಳಸಿದ ಪಿಸ್ತೂಲಿಗೆ ಲೈಸೆನ್ಸ್ ಇರಲಿಲ್ಲವೆಂಬ ಶಂಕೆಯೂ ವ್ಯಕ್ತವಾಗಿದೆ….

Read More

“ಮಹಾ ರಾಜಕೀಯ”ದಲ್ಲಿ ಮಹತ್ವ ಬೆಳವಣಿಗೆ: ಫೆ.8ಕ್ಕೆ ಅಜಿತ್ ಪವಾರ್ ಕೊನೆಯ ಆಸೆ ಈಡೇರಲಿದೆ? – Kannada News | Maharashtra: NCP Merger Talks and Mahayuti Alliance Future Post Ajit Pawar

ಮಹಾರಾಷ್ಟ್ರ, ಜ.31: ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನದ ನಂತರ ಮಹಾರಾಷ್ಟ್ರ ರಾಜಕೀಯದಲ್ಲಿ ಮಹತ್ವದ ಬೆಳವಣಿಗಳು ನಡೆದಿದೆ. ಎನ್‌ಸಿಪಿ (NCP) ಎರಡೂ ಬಣಗಳ ವಿಲೀನ ಮತ್ತು ಹೊಸ ನಾಯಕತ್ವದ ಬಗ್ಗೆ ಮಾತುಕತೆ ನಡೆದಿದೆ ಎಂದು ಹೇಳಲಾಗಿದೆ. ಮೂಲಗಳ ಪ್ರಕಾರ, ಅಜಿತ್ ಪವಾರ್ ಮತ್ತು ಶರದ್ ಪವಾರ್ ನೇತೃತ್ವದ ಎರಡು ಬಣಗಳ ವಿಲೀನ ಪ್ರಕ್ರಿಯೆಯು ಅಜಿತ್ ಪವಾರ್ ಬದುಕಿದ್ದಾಗಲೇ ಅಂತಿಮ ಹಂತಕ್ಕೆ ತಲುಪಿತ್ತು. ಫೆಬ್ರವರಿ 8 ಅಥವಾ ಫೆಬ್ರವರಿ ಮಧ್ಯಭಾಗದಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆಯಿದೆ. ಫೆಬ್ರವರಿ…

Read More

ಕಾನ್ಫಿಡೆಂಟ್ ಗ್ರೂಪ್‌ನ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ಟಿಎ ಜೋಸೆಫ್ ದೂರು: ಕಂಪ್ಲೇಂಟ್​ನಲ್ಲಿದೆ ಅಚ್ಚರಿಯ ಅಂಶ – Kannada News | Twist in Confident Group Chairman CJ Roy Death: MD TA Joseph Files Complaint Seeking Probe

ಬೆಂಗಳೂರು, ಜನವರಿ 31: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಇತ್ತೀಚೆಗೆ ಐಟಿ ದಾಳಿ ನಡೆಯುತ್ತಿದ್ದ ಸಂದರ್ಭದಲ್ಲಿ ಆತ್ಮಹತ್ಯೆಗೆ ಶರಣಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಅಶೋಕ್ ನಗರ ಪೊಲೀಸರಿಗೆ ಕಾನ್ಫಿಡೆಂಟ್ ಗ್ರೂಪ್‌ನ ಎಂಡಿ ಟಿಎ ಜೋಸೆಫ್ ದೂರು ದಾಖಲಿಸಿದ್ದಾರೆ. ಜೋಸೆಫ್ ತಮ್ಮ ದೂರಿನಲ್ಲಿ, ರಾಯ್ ಆತ್ಮಹತ್ಯೆಗೆ ಕಾರಣವಾದ ಒತ್ತಡಗಳ ಕುರಿತು ಸಮಗ್ರ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ. ಆದರೆ, ಅವರು ಐಟಿ ಅಧಿಕಾರಿಗಳ ಮೇಲೆ ಯಾವುದೇ ನೇರ ಆರೋಪ ಮಾಡಿಲ್ಲ. ಸಮಗ್ರ…

Read More