ಬ್ರಹ್ಮಕಲಶ: 1 ಮಿಲಿಯನ್ ಇನ್‌ಸ್ಟಾಗ್ರಾಮ್ ರೀಲ್ಸ್ ಮೈಲಿಗಲ್ಲು ತಲುಪಿದ ಮೊದಲ ಕನ್ನಡ ಹಾಡು – Kannada News | Rishab Shetty Kantara Chapter 1 Brahmakalasha Song creates Record 1 Million Instagram reels

ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರ ಈವರೆಗಿನ ವೃತ್ತಿಜೀವನದಲ್ಲೇ ಅತಿ ದೊಡ್ಡ ಸಕ್ಸಸ್ ಎನಿಸಿಕೊಂಡ ‘ಕಾಂತಾರ: ಚಾಪ್ಟರ್ 1’ (Kantara: Chapter 1) ಸಿನಿಮಾದ ಬಗ್ಗೆ ಹೊಸದಾಗಿ ಹೇಳಬೇಕಾಗಿದ್ದಿಲ್ಲ. ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸಿ, ಬಾಕ್ಸ್ ಆಫೀಸ್ ಉಡೀಸ್ ಮಾಡಿದ ಬೆನ್ನಲ್ಲೇ ಈಗ ಮತ್ತೊಂದು ಅಪರೂಪದ ಸಾಧನೆಯನ್ನು ಈ ಸಿನಿಮಾ ಮಾಡಿದೆ. ಚಿತ್ರ ಬಿಡುಗಡೆಯಾಗಿ ಒಂದು ವರ್ಷ ಕಳೆಯುತ್ತಿದ್ದರೂ ಇದರ ಕ್ರೇಜ್ ಮಾತ್ರ ಕಮ್ಮಿಯಾಗಿಲ್ಲ ಎಂಬುದಕ್ಕೆ ಈ ಹೊಸ ದಾಖಲೆಯೇ ಸಾಕ್ಷಿ. ಖ್ಯಾತ ಸಂಗೀತ ನಿರ್ದೇಶಕ ಬಿ. ಅಜನೀಶ್ ಲೋಕನಾಥ್ ಸಂಯೋಜನೆಯ, ಚಿತ್ರದ ಅತ್ಯಂತ ಜನಪ್ರಿಯ ಭಕ್ತಿಗೀತೆ ‘ಬ್ರಹ್ಮಕಲಶ’ (Brahmakalasha) ಈಗ ಇನ್‌ಸ್ಟಾಗ್ರಾಮ್‌ನಲ್ಲಿ 1 ಮಿಲಿಯನ್ (10 ಲಕ್ಷಕ್ಕೂ ಹೆಚ್ಚು) ರೀಲ್ಸ್ ದಾಟಿದ ಮೊದಲ ಕನ್ನಡ ಚಲನಚಿತ್ರ ಗೀತೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಸೋಶಿಯಲ್ ಮೀಡಿಯಾದಲ್ಲಿ ‘ಬ್ರಹ್ಮಕಲಶ’ ಹವಾ:

ಚಿತ್ರದ ಬಿಡುಗಡೆಯ ದಿನದಿಂದಲೇ ‘ಬ್ರಹ್ಮಕಲಶ’ ಹಾಡು ಪ್ರೇಕ್ಷಕರನ್ನು ಮಂತ್ರಮುಗ್ಧರನ್ನಾಗಿಸಿತ್ತು. ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ, ನಟಿ ರುಕ್ಮಿಣಿ ವಸಂತ್ ಅವರ ನಟನೆ, ಅಜನೀಶ್ ಸಂಗೀತ, ಅಭಿ ವಿ. ಗಾಯನದಿಂದ ಈ ಹಾಡು ಪ್ರತಿಯೊಬ್ಬರನ್ನು ರೋಮಾಂಚನಗೊಳಿಸಿತ್ತು. ಕೇವಲ ಸಾಮಾನ್ಯ ಜನರು ಮಾತ್ರವಲ್ಲದೇ ಹಲವು ಸೆಲೆಬ್ರಿಟಿಗಳು ಈ ಹಾಡಿಗೆ ರೀಲ್ಸ್ ಮಾಡಿದ್ದಾರೆ.

‘ಬ್ರಹ್ಮಕಲಶ’ ಟ್ರ್ಯಾಕ್ ಬಳಸಿ ಈಗಲೂ ಹಲವಾರು ಮಂದಿ ರೀಲ್ಸ್ ಮಾಡುತ್ತಿದ್ದಾರೆ. ಸದ್ಯಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಈ ಹಾಡಿನದ್ದೇ ಕಾರುಬಾರು ಜೋರಾಗಿದ್ದು, ಸದ್ಯದಲ್ಲೇ ಈ ದಾಖಲೆಯನ್ನು ಮುರಿಯುವುದು ಬೇರೆ ಯಾವುದೇ ಚಿತ್ರಕ್ಕೂ ಸುಲಭವಲ್ಲ ಎನ್ನಲಾಗುತ್ತಿದೆ. ಚಿತ್ರದಲ್ಲಿ ಕರಾವಳಿಯ ಸಂಸ್ಕೃತಿ ಮತ್ತು ದೈವಾರಾಧನೆಯ ಹಿನ್ನೆಲೆಯನ್ನು ಆಳವಾಗಿ ತೋರಿಸಲಾಗಿದೆ.

ಇದನ್ನೂ ಓದಿ: ಬಿಗ್ ಅಪ್​ಡೇಟ್​; ಕಾಂತಾರ: ಚಾಪ್ಟರ್ 2 ಸ್ಕ್ರಿಪ್ಟ್ ಆರಂಭಿಸಿದ ರಿಷಬ್ ಶೆಟ್ಟಿ

ಚಿತ್ರದ ಭರ್ಜರಿ ಯಶಸ್ಸು ಮತ್ತು ಮ್ಯೂಸಿಕ್ ಹಿಟ್

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಈ ಡಿವೋಶನಲ್ ಚಿತ್ರವು ‘ಹೊಂಬಾಳೆ ಫಿಲ್ಮ್ಸ್’ ಸಂಸ್ಥೆಯ ಹೆಮ್ಮೆಯ ಪ್ರಾಜೆಕ್ಟ್ ಆಗಿದೆ. ಕಥೆ, ಮೇಕಿಂಗ್, ವಿಶುವಲ್ಸ್ ಮಾತ್ರವಲ್ಲದೆ ಸಿನಿಮಾದ ಪ್ರತಿಯೊಂದು ಹಾಡುಗಳು ಮತ್ತು ಹಿನ್ನೆಲೆ ಸಂಗೀತವು ಚಿತ್ರದ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿವೆ. ಕಾಂತಾರ ಮೊದಲ ಭಾಗದ ‘ಸಿಂಗಾರ ಸಿರಿಯೇ’ ಹಾಡು ಹೇಗೆ ಮನೆಮಾತಾಗಿತ್ತೋ, ಅದೇ ರೀತಿ ‘ಕಾಂತಾರ: ಚಾಪ್ಟರ್ 1’ ಚಿತ್ರದ ಹಾಡುಗಳು ಕೂಡ ದೊಡ್ಡ ಮಟ್ಟದಲ್ಲಿ ಸೌಂಡ್ ಮಾಡಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ, ಅವರ ದಾಂಪತ್ಯ ಆದರ್ಶ: ಬ್ರಹ್ಮಾಂಡ ಗುರೂಜಿ – Kannada News | Brahmanda Guruji Reflects on Late Chennamma’s Devotion, Highlights Spiritual Influence on Deve Gowda’s Life

ಬೆಂಗಳೂರು, ಜುಲೈ 19:  ಚೆನ್ನಮ್ಮನವರು ದೇವೇಗೌಡರ ಮನೆಯ ಮಹಾಲಕ್ಷ್ಮೀ. ಮನೆಯ ಮಕ್ಕಳು, ಮೊಮ್ಮಕ್ಕಳ ಯಶಸ್ಸು ಕೀರ್ತಿ ಪಡೆಯಲು ಮತ್ತು ದೇವೇಗೌಡರನ್ನು ಮೂರು ಬಾರಿ ಬದುಕಿಸಿದ್ದು ಕೂಡ ಪರಮ ದೈವ ಭಕ್ತೆ ಚೆನ್ನಮ್ಮನವರು. ಗಂಡ ಹೊರಗೆ ಹೋಗಿ ಬಂದರೆ ದೃಷ್ಟಿ ತೆಗೆಯುತ್ತಿದ್ದ ಅವರ ದಾಂಪತ್ಯ ನೋಡಿ ಇಂದಿನವರು ಕಲಿಯಬೇಕು ಎಂದು ಬ್ರಹ್ಮಾಂಡ ಗುರೂಜಿ ಹೇಳಿದ್ದಾರೆ. ದೇವೇಗೌಡರ ಪತ್ನಿ ಅವರಿಗೆ 89 ವರ್ಷ ವಯಸ್ಸಾಗಿತ್ತು. ಈ ಒಂಭತ್ತು ಎನ್ನುವುದು ಗಂಡಾಂತರ. ಗಂಡು ಅಥವಾ ಹೆಣ್ಣು ಯಾರಿಗೇ ಆದರೂ 9ರ ಘಟ್ಟ ತುಂಬಿದಾಗ ಗಂಡಾಂತರ ಇರುತ್ತೆ ಎಂದು ಅವರು ಇದೇ ವೇಳೆ ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ದೇಸಿ ಶ್ವಾನ ದತ್ತು ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ: ಅನಾಥ ನಾಯಿಗಳನ್ನು ಎತ್ತಿ ಮುದ್ದಾಡಿದ ಸಾರ್ವಜನಿಕರು – Kannada News | ‘Adopt Me Second Innings’ Drive Connects Stray Dogs with Forever Homes in Bengaluru

ಸಮಾಜದಲ್ಲಿ ಮನುಷ್ಯರ ರೀತಿ ಪ್ರಾಣಿಗಳಿಗೂ ಬದುಕುವ ಹಕ್ಕಿದೆ. ಆದರೆ ಅವುಗಳ ನಿಯಂತ್ರಣ ಕೂಡ ಮುಖ್ಯ. ಬೀದಿ ನಾಯಿಗಳ ನಿಯಂತ್ರಣ ಕೇವಲ ಜಿಬಿಎ ಜವಾಬ್ದಾರಿ ಮಾತ್ರವಲ್ಲ. ಜನಸಾಮಾನ್ಯರೂ ಕೂಡ ಪ್ರಾಣಿಗಳ ಪೋಷಣೆಗೆ ಕೈಜೋಡಿಸಬೇಕು ಎಂಬ ನಿಟ್ಟಿನಲ್ಲಿ ಬೆಂಗಳೂರು ಪೂರ್ವ ನಗರ ಪಾಲಿಕೆ ಅನಾಥ ನಾಯಿಗಳಿಗಾಗಿ ವಿಶೇಷ ಕಾರ್ಯಕ್ರಮವೊಂದನ್ನ ಹಮ್ಮಿಕೊಂಡಿತ್ತು.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಬೆಂಗಳೂರು ಪೂರ್ವ ನಗರ ಪಾಲಿಕೆ ವತಿಯಿಂದ ಪ್ರಾಣಿ ಕಲ್ಯಾಣವನ್ನು ಉತ್ತೇಜಿಸುವ ಉದ್ದೇಶದಿಂದ “ಅಡಾಪ್ಟ್ ಮೀ ಸೆಕೆಂಡ್ ಇನ್ನಿಂಗ್ಸ್” ಅಭಿಯಾನದಡಿ ದೇಸಿ ಶ್ವಾನ ದತ್ತು ಕಾರ್ಯಕ್ರಮವನ್ನು ವೈಟ್‌ಫೀಲ್ಡ್‌ನ ನೆಕ್ಸಸ್ ಶಾಂತಿನಿಕೇತನ ಮಾಲ್‌ನಲ್ಲಿ ಆಯೋಜಿಸಲಾಗಿತ್ತು.

ಅಪಘಾತಕ್ಕೊಳಗಾದ, ಮಾಲೀಕರಿಂದ ತ್ಯಜಿಸಲ್ಪಟ್ಟ ಹಾಗೂ ಚಿಕಿತ್ಸೆ ಪಡೆದು ಚೇತರಿಸಿಕೊಂಡ 30ಕ್ಕೂ ಹೆಚ್ಚು ದೇಶಿ ಶ್ವಾನಗಳನ್ನು ದತ್ತು ಸ್ವೀಕಾರಕ್ಕೆ ಲಭ್ಯವಾಗುವಂತೆ ಮಾಡಲಾಗಿತ್ತು. ಸಾರ್ವಜನಿಕರು ಕೂಡ ದೇಸಿ ಶ್ವಾನಗಳನ್ನು ತಮ್ಮ ಕುಟುಂಬದ ಸದಸ್ಯರನ್ನಾಗಿ ದತ್ತು ಪಡೆಯುವ ಅವಕಾಶವನ್ನು ಬಳಸಿಕೊಂಡರು. ಬೆಂಗಳೂರು ಪೂರ್ವ ನಗರ ಪಾಲಿಕೆ ಆಯುಕ್ತ ಡಿ ಎಸ್ ರಮೇಶ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಶ್ವಾನಗಳನ್ನು ದತ್ತು ಪಡೆಯಲು ಸಾಧ್ಯವಾಗದವರಿಗೆ ಅವುಗಳ ಆಹಾರ, ಚಿಕಿತ್ಸೆ ಹಾಗೂ ಪಾಲನೆ-ಪೋಷಣೆಯ ಜವಾಬ್ದಾರಿಯನ್ನು ವಹಿಸುವ ಮೂಲಕ ಪರೋಕ್ಷವಾಗಿ ಬೆಂಬಲ ನೀಡುವ ಅವಕಾಶವನ್ನೂ ಕಲ್ಪಿಸಲಾಗಿತ್ತು. ದತ್ತು ನೀಡಲಾದ ಎಲ್ಲ ಶ್ವಾನಗಳಿಗೆ ರೇಬೀಸ್, 7-ಇನ್-1 (ಡಿ.ಎಚ್.ಪಿ.ಪಿ.ಐ.ಎಲ್.) ಲಸಿಕೆ ಹಾಗೂ ಟಿಕ್-ಚಿಗಟೆ ನಿಯಂತ್ರಣ ಚಿಕಿತ್ಸೆ ಸೇರಿದಂತೆ ಅಗತ್ಯ ಆರೋಗ್ಯ ಸೇವೆಗಳನ್ನು ಉಚಿತವಾಗಿ ಒದಗಿಸಲಾಗಿತ್ತು.

ಸಾರ್ವಜನಿಕರು ದೇಸಿ ಶ್ವಾನಗಳನ್ನು ತಮ್ಮ ಕುಟುಂಬದ ಸದಸ್ಯರನ್ನಾಗಿ ದತ್ತು ಪಡೆಯುವ ಅವಕಾಶವನ್ನು ಬಳಸಿಕೊಂಡಿದ್ದು ವಿಶೇಷವಾಗಿತ್ತು. ಒಟ್ಟಾರೆ ಬೆಂಗಳೂರಿನಲ್ಲಿ ಬೀದಿ ನಾಯಿಗಳ ಸಮಸ್ಯೆ ಹೆಚ್ಚಾಗುತ್ತಿದೆ ಎಂಬ ಆರೋಪದ ಮಧ್ಯೆ ಅವುಗಳ ನಿಯಂತ್ರಣ ಹಾಗೂ ಪೋಷಣೆಗೆ ಸಾರ್ವಜನಿಕರು ಕೈಜೋಡಿಸಿರುವುದಕ್ಕೆ ಕಾರ್ಯಕ್ರಮ ಸಾಕ್ಷಿಯಾಗಿದೆ.

Published On – 11:44 am, Sun, 19 July 26

Source link

ಬಟ್ಟೆ ಬಿಚ್ಚಿ ದೇವಸ್ಥಾನಕ್ಕೆ ನುಗ್ಗಿ, ದೇವಿಯ ವಿಗ್ರಹದ ಜೊತೆ ಕೆರೆಗೆ ಹಾರಿದ ಸಾಫ್ಟ್​ವೇರ್ ಇಂಜಿನಿಯರ್! – Kannada News | Hyderabad Software Engineer Enters Temple without Cloth, Takes Goddess Idol, Jumps Into Pond, dies

ಹೈದರಾಬಾದ್, ಜುಲೈ 19: ಆಕೆಯ ಹೆಸರು ತೇಜಸ್ವಿನಿ. ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯ ದೇವಪಲ್ಲಿ ಮೂಲದ ವಕ್ಕುಲಗಡ್ಡಿ ಈಶ್ವರ್ ರಾವ್ ಮತ್ತು ಅರುಣಾ ದಂಪತಿಯ ಪುತ್ರಿಯಾದ 25 ವರ್ಷದ ತೇಜಸ್ವಿನಿ ಬೆಂಗಳೂರಿನಲ್ಲಿ (Bengaluru) ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಕೆಲಸದಲ್ಲಿ ತೀವ್ರ ಒತ್ತಡವನ್ನು ಎದುರಿಸಿದ ಅವರು 6 ತಿಂಗಳ ಹಿಂದೆ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿ ವಿಶಾಖಪಟ್ಟಣಕ್ಕೆ ತೆರಳಿದ್ದರು. ಇದಾದ ನಂತರ, 2 ತಿಂಗಳ ಹಿಂದೆ ಅವರು ತಮ್ಮ ತಾಯಿ ಅರುಣಾ ಅವರೊಂದಿಗೆ ಹೈದರಾಬಾದ್‌ಗೆ (Hyderabad) ಬಂದು ಪೀರ್ಜಾದಿಗುಡದ ಶಂಕರ್‌ನಗರ ಕಾಲೋನಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಆದರೆ, ಶುಕ್ರವಾರ ಮಧ್ಯರಾತ್ರಿ 2.30ರ ಸುಮಾರಿಗೆ ತೇಜಸ್ವಿನಿ ಎಚ್ಚರಗೊಂಡು ತನ್ನ ತಾಯಿಯ ರೂಮನ್ನು ಹೊರಗಿನಿಂದ ಲಾಕ್ ಮಾಡಿ ಮನೆಯಿಂದ ಹೊರಗೆ ಹೋಗಿದ್ದರು. ಮನೆಯಿಂದ ಹೊರಟ ಆಕೆ ಬೆತ್ತಲೆಯಾಗಿ ನಡೆದುಕೊಂಡು ಹೋಗಿ ದೇವಸ್ಥಾನದೊಳಗೆ ಹೊಕ್ಕು, ಅಲ್ಲಿದ್ದ ದೇವರ ವಿಗ್ರಹವನ್ನು ಹಿಡಿದುಕೊಂಡು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ!.

ಹೈದರಾಬಾದ್‌ನ ಈ ಯುವತಿಯ ನಿಗೂಢ ಸಾವು ಭಾರಿ ತಲ್ಲಣ ಸೃಷ್ಟಿಸಿದೆ. ಮೃತ ಯುವತಿ ಕೆರೆಗೆ ಜಿಗಿಯುವ ಮುನ್ನ ನಗ್ನ ಸ್ಥಿತಿಯಲ್ಲಿ ದೇವಸ್ಥಾನ ಪ್ರವೇಶಿಸಿ, ದೇವಿಯ ವಿಗ್ರಹವನ್ನು ಹೊತ್ತೊಯ್ದು ಕೆರೆಗೆ ಜಿಗಿದಿದ್ದಾರೆ ಎಂಬ ಆಘಾತಕಾರಿ ಮಾಹಿತಿ ತನಿಖೆಯಿಂದ ಬೆಳಕಿಗೆ ಬಂದಿದೆ. ಪೊಲೀಸರು ಕೆರೆಯಲ್ಲಿ ನಾಪತ್ತೆಯಾಗಿರುವ ದೇವಿಯ ವಿಗ್ರಹಕ್ಕಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದರೂ ಅದಕ್ಕಾಗಿ ಆಕೆ ಆಯ್ದುಕೊಂಡ ಮಾರ್ಗದ ಬಗ್ಗೆ ತೀವ್ರ ಅನುಮಾನ, ನಿಗೂಢ ಪ್ರಶ್ನೆಗಳು ಎದ್ದಿರುವುದರಿಂದ ಪೊಲೀಸರು ಆಕೆಯ ಮಾನಸಿಕ ಸ್ಥಿತಿ ಬಗ್ಗೆ ತೀವ್ರ ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ: ‘ಡಾಕ್ಟರ್ ಆಗಲು ನಾಲಾಯಕ್’; 4 ವರ್ಷದ ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ಆಸ್ಪತ್ರೆಗೆ ಸುಪ್ರೀಂ ಕೋರ್ಟ್ ಛೀಮಾರಿ

ದೇವಸ್ಥಾನದೊಳಗೆ ಬೆತ್ತಲೆಯಾಗಿ ಹೋಗಿ ಕೆರೆಗೆ ಜಿಗಿದ ಯುವತಿ:

ಪೊಲೀಸ್ ತನಿಖೆಯ ಪ್ರಕಾರ, ತೇಜಸ್ವಿನಿ ತನ್ನ ಬಟ್ಟೆಗಳನ್ನೆಲ್ಲ ಮನೆಯಲ್ಲಿಯೇ ಬಿಚ್ಚಿಟ್ಟು ನಗ್ನ ಸ್ಥಿತಿಯಲ್ಲಿ ಸಮೀಪದ ದೇವಸ್ಥಾನಕ್ಕೆ ನುಗ್ಗಿದ್ದಾರೆ. ಅಲ್ಲಿ ಪೂಜಿಸಲ್ಪಡುತ್ತಿದ್ದ ಅಮ್ಮಾವರ ವಿಗ್ರಹವನ್ನು ಕೈಗೆತ್ತಿಕೊಂಡು ನೇರವಾಗಿ ಹತ್ತಿರದ ಕೆರೆಯತ್ತ ಹೆಜ್ಜೆ ಹಾಕಿದ್ದಾರೆ. ನಂತರ ಆ ವಿಗ್ರಹದೊಂದಿಗೇ ಕೆರೆಯ ನೀರಿಗೆ ಜಿಗಿದಿದ್ದಾರೆ. ಪೊಲೀಸರು ಆಕೆಯ ಮೃತದೇಹವನ್ನು ಹೊರತೆಗೆದಿದ್ದಾರೆಯಾದರೂ, ಆಕೆ ಹಿಡಿದುಕೊಂಡಿದ್ದ ದೇವಿಯ ವಿಗ್ರಹ ಇನ್ನು ಪತ್ತೆಯಾಗಿಲ್ಲ. ಆಕೆ ದೇವಸ್ಥಾನದೊಳಗೆ ಬಂದಿರುವ, ಹೋಗಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.

ಕೆರೆಯಲ್ಲಿ ವಿಗ್ರಹಕ್ಕಾಗಿ ತೀವ್ರ ಶೋಧ ಕಾರ್ಯ:

ವಿಪತ್ತು ನಿರ್ವಹಣಾ ಪಡೆ (DRF) ಸಿಬ್ಬಂದಿ ದೋಣಿಗಳು ಹಾಗೂ ಅತ್ಯಾಧುನಿಕ ಉಪಕರಣಗಳೊಂದಿಗೆ ಕೆರೆಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ತನಿಖೆಯ ದೃಷ್ಟಿಯಿಂದ ಈ ವಿಗ್ರಹ ಅತ್ಯಂತ ಪ್ರಮುಖ ಸಾಕ್ಷ್ಯವಾಗಿರುವುದರಿಂದ, ಇಡೀ ಕೆರೆಯನ್ನು ಜಾಲಾಡಲಾಗುತ್ತಿದೆ. ಪೊಲೀಸರು ತೇಜಸ್ವಿನಿಯ ತಾಯಿ ಅರುಣಾ ಅವರನ್ನು ವಿಚಾರಣೆಗೆ ಒಳಪಡಿಸಿದ್ದು, ತೇಜಸ್ವಿನಿ ಬರೆದಿಟ್ಟಿದ್ದಾರೆ ಎನ್ನಲಾದ ಡೆತ್ ನೋಟ್ ವಶಪಡಿಸಿಕೊಂಡು ಪರಿಶೀಲಿಸುತ್ತಿದ್ದಾರೆ. ಇದರೊಂದಿಗೆ ಆಕೆಯ ಆರ್ಥಿಕ ವಹಿವಾಟುಗಳು ಮತ್ತು ಮೊಬೈಲ್ ಕರೆಗಳ ವಿವರಗಳನ್ನು ಕಲೆಹಾಕಲಾಗುತ್ತಿದೆ.

ಇದನ್ನೂ ಓದಿ: ಅಣ್ಣನ ಜೊತೆ ಮದುವೆ ನಿರಾಕರಿಸಿದ್ದಕ್ಕೆ ತಮ್ಮನಿಂದ ಯುವತಿ ಕೊಲೆ ಕೇಸ್​​ಗೆ ಬಿಗ್​​ ಟ್ವಿಸ್ಟ್​​: ಯುವತಿ ಪಾಲಿಗೆ ಮುಳುವಾದ ತಾಯಿಯ ಚೀಟಿ ವ್ಯವಹಾರ!

ಅಂದಹಾಗೆ, ತೇಜಸ್ವಿನಿ ಬಾಡಿಗೆಗೆ ಇದ್ದ ಫ್ಲ್ಯಾಟ್‌ಗೆ ದಿನಕ್ಕೆ ಸುಮಾರು 3,500 ರೂ. ಬಾಡಿಗೆ ಪಾವತಿಸುತ್ತಿದ್ದರು. ಅಂದರೆ ತಿಂಗಳಿಗೆ ಬರೋಬ್ಬರಿ 1 ಲಕ್ಷ ರೂಪಾಯಿ ಬಾಡಿಗೆ ಕಟ್ಟುತ್ತಿದ್ದರು. ಆಕೆ ಇದ್ದ ಕಟ್ಟಡದ ಮೇಲಿನ ಎರಡು ಮಹಡಿಗಳನ್ನು ಲಾಡ್ಜ್ ಮಾದರಿಯಲ್ಲಿ ಕಾನೂನುಬಾಹಿರವಾಗಿ ನಡೆಸಲಾಗುತ್ತಿತ್ತು. ಈ ಕಟ್ಟಡದ ಮಾಲೀಕರಿಗೂ ಅಥವಾ ಅಲ್ಲಿ ತಂಗಿದ್ದವರಿಗೂ ಈ ಸಾವಿಗೂ ಏನಾದರೂ ಸಂಬಂಧವಿದೆಯೇ ಎಂಬ ಆಯಾಮದಲ್ಲಿಯೂ ತನಿಖೆ ನಡೆಯುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!

ಬಾಗಲಕೋಟೆ, ಜುಲೈ 19: ಜಿಲ್ಲೆಯ ಇಳಕಲ್ ನಗರದಲ್ಲಿ ನಿನ್ನೆ ರಾತ್ರಿ ಸತತ 6 ರಿಂದ 7 ಗಂಟೆಗಳ ಕಾಲ ಸುರಿದ ಭರ್ಜರಿ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಗರದ ಪ್ರಮುಖ ರಸ್ತೆಗಳು ಜಲಾವೃತಗೊಂಡಿದ್ದು, ಸುಮಾರು ಎರಡು ಅಡಿಯಷ್ಟು ನೀರು ನಿಂತಿದ್ದರಿಂದ ಕಾರು ಮತ್ತು ಬೈಕ್ ಸವಾರರು ತೀವ್ರ ಸಂಕಷ್ಟ ಎದುರಿಸಿದರು. ಮಳೆ ನೀರು ಸರಾಗವಾಗಿ ಹರಿದು ಹೋಗದ ಕಾರಣ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಇನ್ನು ಹಲವು ವಸತಿ ಪ್ರದೇಶಗಳಲ್ಲಿ ಮಳೆ ನೀರು ಮನೆಗಳ ಬಾಗಿಲಿಗೆ ಬಂದು ನಿಂತಿದ್ದು, ಸಾರ್ವಜನಿಕರು ಆತಂಕಗೊಂಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಸಾವರ್ಕರ್’ ಕುರಿತು ಸಿನಿಮಾ ಮಾಡಿ ‘ಅತ್ಯುತ್ತಮ ಚೊಚ್ಚಲ ನಿರ್ದೇಶಕ’ ರಾಷ್ಟ್ರ ಪ್ರಶಸ್ತಿ ಗೆದ್ದ ರಣದೀಪ್ ಹೂಡಾ – Kannada News | Randeep Hooda wins National Film Award Best Debut Director for Swatantryaveer Savarkar

ಪ್ರತಿಷ್ಠಿತ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟಗೊಂಡಿದ್ದು, ಬಾಲಿವುಡ್‌ನ ಬಹುಮುಖ ಪ್ರತಿಭೆ ರಣದೀಪ್ ಹೂಡಾ (Randeep Hooda) ಅವರು ತಮ್ಮ ಚೊಚ್ಚಲ ನಿರ್ದೇಶನದ ‘ಸ್ವಾತಂತ್ರ್ಯ ವೀರ್ ಸಾವರ್ಕರ್’ (Swatantryaveer Savarkar) ಸಿನಿಮಾಗಾಗಿ ಅತ್ಯುತ್ತಮ ಚೊಚ್ಚಲ ನಿರ್ದೇಶಕ (Best Debut Director) ರಾಷ್ಟ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ಅವರು ಕೇವಲ ನಿರ್ದೇಶನ ಮಾತ್ರವಲ್ಲದೆ, ಮುಖ್ಯ ಭೂಮಿಕೆಯಲ್ಲಿ ನಟಿಸಿ, ಸಹ-ಬರಹಗಾರರಾಗಿಯೂ ಜವಾಬ್ದಾರಿ ನಿಭಾಯಿಸಿದ್ದರು. ಈ ಗೌರವಕ್ಕೆ ಪಾತ್ರರಾದ ಬೆನ್ನಲ್ಲೇ ರಣದೀಪ್ ಹೂಡಾ ಅವರು ಚಿತ್ರದ ಜರ್ನಿ ಮತ್ತು ತಾವು ಎದುರಿಸಿದ ಸವಾಲುಗಳ ಕುರಿತು ಅತ್ಯಂತ ಭಾವುಕರಾಗಿ ಮಾತನಾಡಿದ್ದಾರೆ.

ನನ್ನ ಶಕ್ತಿ ಮೀರಿದ ಸಿನಿಮಾ ಇದಾಗಿತ್ತು:

ಪ್ರಶಸ್ತಿ ಘೋಷಣೆಯಾದ ನಂತರ ಸಂತಸ ಹಂಚಿಕೊಂಡ ರಣದೀಪ್, ‘ಸ್ವಾತಂತ್ರ್ಯ ವೀರ್ ಸಾವರ್ಕರ್ ಚಿತ್ರಕ್ಕಾಗಿ ಅತ್ಯುತ್ತಮ ಚೊಚ್ಚಲ ನಿರ್ದೇಶಕ ರಾಷ್ಟ್ರ ಪ್ರಶಸ್ತಿ ಒಲಿದಿರುವುದನ್ನು ನನಗೆ ಇನ್ನೂ ನಂಬಲು ಸಾಧ್ಯವಾಗುತ್ತಿಲ್ಲ. ಈ ಸಿನಿಮಾ ನನ್ನ ಜೀವನದಲ್ಲಿ ನಾನು ಮಾಡಿರುವ ಇತರ ಎಲ್ಲಾ ಕೆಲಸಗಳಿಗಿಂತಲೂ ಹೆಚ್ಚಿನ ಶ್ರಮ ಮತ್ತು ಬದ್ಧತೆಯನ್ನು ಕೇಳಿತ್ತು. ನನ್ನಲ್ಲಿದ್ದ ಶಕ್ತಿಯನ್ನೆಲ್ಲಾ ನಾನು ಈ ಚಿತ್ರಕ್ಕಾಗಿ ಧಾರೆ ಎರೆದಿದ್ದೇನೆ’ ಎಂದಿದ್ದಾರೆ.

ಚಿತ್ರೀಕರಣದ ಸವಾಲುಗಳ ಬಗ್ಗೆ ನೆನೆದ ಅವರು, ‘ಈ ಸಿನಿಮಾದ ಪಯಣದ ಪ್ರತಿಯೊಂದು ಹಂತದಲ್ಲೂ ನಮಗೆ ಅಡೆತಡೆಗಳು ಎದುರಾದವು. ಆದರೆ, ಆ ಎಲ್ಲಾ ಸವಾಲುಗಳನ್ನು ಜಯಿಸಿ ನಾವು ಮುನ್ನಡೆದಿದ್ದಕ್ಕೆ ನನಗೆ ಹೆಮ್ಮೆಯಿದೆ. ಎಷ್ಟೇ ಕಷ್ಟಗಳು ಬಂದರೂ, ಯಾವುದೋ ಒಂದು ಅದೃಶ್ಯ ಶಕ್ತಿ ನಮಗೆ ಧೃತಿಗೆಡದೆ ಮುನ್ನಡೆಯಲು ಧೈರ್ಯ ನೀಡುತ್ತಿತ್ತು’ ಎಂದು ಹೇಳಿದ್ದಾರೆ.

ಸಾವರ್ಕರ್ ತ್ಯಾಗದ ಮುಂದೆ ನಮ್ಮ ಕಷ್ಟ ಶೂನ್ಯ:

ಚಿತ್ರದಲ್ಲಿ ನಟನಾಗಿ, ಬರಹಗಾರನಾಗಿ ಹಾಗೂ ಮೊದಲ ಬಾರಿಗೆ ನಿರ್ದೇಶಕನಾಗಿ ಮೂರು ಪ್ರಮುಖ ಜವಾಬ್ದಾರಿಗಳನ್ನು ನಿಭಾಯಿಸಿದ ಅನುಭವ ಹಂಚಿಕೊಂಡ ಹೂಡಾ, ‘ವೀರ್ ಸಾವರ್ಕರ್ ಅವರ ಕಥೆಯನ್ನು ಅತ್ಯಂತ ಪ್ರಾಮಾಣಿಕತೆಯಿಂದ ಪ್ರೇಕ್ಷಕರಿಗೆ ತಲುಪಿಸಬೇಕೆಂಬ ದೊಡ್ಡ ಜವಾಬ್ದಾರಿ ನನ್ನ ಮೇಲಿತ್ತು. ಹಾಗಾಗಿ ನಾನು ನನ್ನ ಸರ್ವಸ್ವವನ್ನೂ ಈ ಚಿತ್ರಕ್ಕೆ ನೀಡಿದ್ದೇನೆ. ಈ ಸಿನಿಮಾ ಮಾಡುವಾಗ ನಾವು ಅನುಭವಿಸಿದ ಕಷ್ಟಗಳು, ವೀರ್ ಸಾವರ್ಕರ್ ಅವರು ದೇಶಕ್ಕಾಗಿ ಸವೆಸಿದ ಜೀವನ ಮತ್ತು ಮಾಡಿದ ತ್ಯಾಗಕ್ಕೆ ಹೋಲಿಸಿದರೆ ತೀರಾ ಶೂನ್ಯ’ ಎಂದು ಗೌರವ ಸಲ್ಲಿಸಿದರು.

ಇದನ್ನೂ ಓದಿ: ಸಾವರ್ಕರ್​​ ಮೇಲಿನ ಗೌರವಕ್ಕೆ ಈ ರೀತಿ ಬದಲಾದ ನಟ ರಣದೀಪ್​ ಹೂಡಾ

ಯುವ ಪೀಳಿಗೆಗೆ ಪ್ರೇರಣೆಯಾಗಲಿ:

ತಮ್ಮ ಇಡೀ ಚಿತ್ರತಂಡಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ‘ಪ್ರತಿಯೊಂದು ಕಷ್ಟ-ಸುಖದಲ್ಲೂ ನನ್ನ ಬೆನ್ನಿಗೆ ನಿಂತು, ಈ ಕನಸನ್ನು ನನಸು ಮಾಡಿದ ಇಡೀ ತಂಡಕ್ಕೆ ನಾನು ಚಿರಋಣಿ. ಈ ಗೌರವ ಕೇವಲ ನನಗೊಬ್ಬನಿಗೆ ಸಂದಿದ್ದಲ್ಲ, ನಮ್ಮ ಇಡೀ ತಂಡಕ್ಕೆ ಸೇರಿದ್ದು. ಈ ಪ್ರಶಸ್ತಿಯು ಮುಂಬರುವ ಯುವ ಪೀಳಿಗೆಗೆ ವೀರ್ ಸಾವರ್ಕರ್ ಅವರ ದೇಶಭಕ್ತಿಯ ಪರಂಪರೆಯನ್ನು ಅರಿಯಲು ಮತ್ತು ಅದರ ಬಗ್ಗೆ ಯೋಚಿಸಲು ಪ್ರೇರಣೆ ನೀಡುತ್ತದೆ ಎಂದು ನಾನು ಭಾವಿಸುತ್ತೇನೆ’ ಎಂದು ಮಾತು ಮುಗಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಜಪಾನ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಪಿ.ವಿ ಸಿಂಧು! – Kannada News | PV Sindhu Scripts History: Wins Maiden Japan Open Title

ಭಾರತದ ಹೆಮ್ಮೆಯ ಶಟ್ಲರ್ ಪಿ.ವಿ ಸಿಂಧು ಜಪಾನ್ ಓಪನ್ ಸೂಪರ್ 750 ಟೂರ್ನಿಯ ಫೈನಲ್ ಪಂದ್ಯದಲ್ಲಿ ಜಪಾನ್‌ನ ಅಕಾನೆ ಯಮಗುಚಿ ಅವರನ್ನು ಮಣಿಸಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಈ ಮೂಲಕ ಜಪಾನ್ ಓಪನ್ ಇತಿಹಾಸದಲ್ಲೇ ಪ್ರಶಸ್ತಿ ಮುಡಿಗೇರಿಸಿಕೊಂಡ ಮೊದಲ ಭಾರತೀಯ ಬ್ಯಾಡ್ಮಿಂಟನ್ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಟೋಕಿಯೊd ಮೆಟ್ರೋಪಾಲಿಟನ್ ಜಿಮ್ನಾಷಿಯಂ ಕೋರ್ಟ್​ನಲ್ಲಿ ನಡೆದ ರೋಚಕ ಹಣಾಹಣಿಯಲ್ಲಿ ಸಿಂಧು ಹಾಗೂ ಜಪಾನ್​ನ ಅಕಾನೆ ಯಮಗುಚಿ ಮುಖಾಮುಖಿಯಾಗಿದ್ದರು. ಇಡೀ ಪಂದ್ಯದುದ್ದಕ್ಕೂ ತಮ್ಮ ಎಂದಿನ ಆಕ್ರಮಣಕಾರಿ ಆಟ ಹಾಗೂ ಅತ್ಯುತ್ತಮ ರಕ್ಷಣಾತ್ಮಕ ಕೌಶಲ್ಯಗಳನ್ನು ಪ್ರದರ್ಶಿಸಿದ ಸಿಂಧು ವಿಶ್ವದ ನಂ.3 ಆಟಗಾರ್ತಿಯ ವಿರುದ್ಧ ಸಂಪೂರ್ಣ ಪ್ರಾಬಲ್ಯ ಮರೆದರು.

ಈ ಪ್ರಾಬಲ್ಯದೊಂದಿಗೆ ಪಿ.ವಿ ಸಿಂಧು 21-17, 21-17 ನೇರ ಗೇಮ್‌ಗಳಿಂದ ಯಮಗುಚಿಯನ್ನು ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.

19 ತಿಂಗಳ ಪ್ರಶಸ್ತಿ ಬರಕ್ಕೆ ಬ್ರೇಕ್!

ಈ ಗೆಲುವಿನೊಂದಿಗೆ 31 ವರ್ಷದ ಪಿ.ವಿ ಸಿಂಧು ಅವರ ದೀರ್ಘಕಾಲದ ಪ್ರಶಸ್ತಿ ಬರ ಕೊನೆಗೊಂಡಿದೆ. ಡಿಸೆಂಬರ್ 2024 ರ ಸೈಯದ್ ಮೋದಿ ಇಂಡಿಯಾ ಇಂಟರ್ನ್ಯಾಷನಲ್ ಟೂರ್ನಿಯ ಬಳಿಕ ಗೆದ್ದ ಮೊದಲ ಬಿಡಬ್ಲ್ಯೂಎಫ್ (BWF) ಟೂರ್ನಿ ಇದಾಗಿದೆ.

ಮೊದಲ ಸೂಪರ್ 750 ಕಿರೀಟ:

ಪಿ.ವಿ ಸಿಂಧು ಅವರ ವೃತ್ತಿಜೀವನದ ಚೊಚ್ಚಲ ಬಿಡಬ್ಲ್ಯೂಎಫ್ ವರ್ಲ್ಡ್ ಟೂರ್ ಸೂಪರ್ 750 ಪ್ರಶಸ್ತಿ ಇದಾಗಿದ್ದು, 2019 ರ ವಿಶ್ವ ಚಾಂಪಿಯನ್‌ಶಿಪ್ ಗೆಲುವಿನ ನಂತರದ ಅತ್ಯಂತ ದೊಡ್ಡ ಗೆಲುವಾಗಿದೆ.

ಟಾಪ್-8 ಗೆ ಪುನರಾಗಮನ:

ಈ ಅದ್ಭುತ ಪ್ರದರ್ಶನದಿಂದಾಗಿ ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತೆ ಸಿಂಧು ಅವರು ವಿಶ್ವ ಬ್ಯಾಡ್ಮಿಂಟನ್ ರ‍್ಯಾಂಕಿಂಗ್‌ನಲ್ಲಿ ಮತ್ತೆ ಟಾಪ್-8 ರೊಳಗೆ ಸ್ಥಾನ ಪಡೆಯುವುದು ಖಚಿತವಾಗಿದೆ.

ಚಾಂಪಿಯನ್ ಹಾದಿ:

ಪಿ.ವಿ ಸಿಂಧು ಅವರ ಈ ಐತಿಹಾಸಿಕ ಜಪಾನ್ ಓಪನ್ ಗೆಲುವಿನ ಹಾದಿ ಸುಲಭದ್ದಾಗಿರಲಿಲ್ಲ. ಟೂರ್ನಿಯುದ್ದಕ್ಕೂ ಸಿಂಧು ವಿಶ್ವದ ದಿಗ್ಗಜ ಆಟಗಾರ್ತಿಯರನ್ನು ಮಣಿಸಿ ಫೈನಲ್ ತಲುಪಿದ್ದರು.

  •  ರೌಂಡ್ ಆಫ್ 32: ವಾಂಗ್ ಲಿಂಗ್ ಚಿಂಗ್ (ಮಲೇಷ್ಯಾ) ವಿರುದ್ಧ ಗೆಲುವು (21-14, 21-11)
  •  ಪ್ರಿ-ಕ್ವಾರ್ಟರ್ ಫೈನಲ್: ಹಾನ್ ಯುಯೆ (ಚೀನಾ – ವಿಶ್ವ ನಂ. 5) ವಿರುದ್ಧ ಗೆಲುವು (21-16, 21-14)
  •  ಕ್ವಾರ್ಟರ್ ಫೈನಲ್: ನೊಜೊಮಿ ಒಕುಹರಾ (ಜಪಾನ್) ಗಾಯದ ಕಾರಣ ಪಂದ್ಯದಿಂದ ಹಿಂದೆ ಸರಿದಿದ್ದರಿಂದ ವಾಕ್ ಓವರ್.
  •  ಸೆಮಿಫೈನಲ್: ಚೆನ್ ಯುಫೀ (ಚೀನಾ – ಒಲಿಂಪಿಕ್ ಚಾಂಪಿಯನ್) ವಿರುದ್ಧ ಗೆಲುವು (21-19, 15-10 ರ ಬಳಿಕ ಚೀನಾ ಆಟಗಾರ್ತಿ ರಿಟೈರ್ಡ್).
  •  ಫೈನಲ್: ಅಕಾನೆ ಯಮಗುಚಿ (ಜಪಾನ್) ವಿರುದ್ಧ ಐತಿಹಾಸಿಕ ಜಯ (21-17, 21-17).

ಇದನ್ನೂ ಓದಿ: ಕೇವಲ 1 ರನ್‌ನಿಂದ ಚಾಂಪಿಯನ್ ಪಟ್ಟಕ್ಕೇರಿದ ನೈಟ್ ರೈಡರ್ಸ್!

ಒಟ್ಟಾರೆಯಾಗಿ ಹೇಳುವುದಾದರೆ, ಪಿ.ವಿ ಸಿಂಧು ಅವರ ಈ ಜಪಾನ್ ಓಪನ್ ಐತಿಹಾಸಿಕ ಜಯವು ಕೇವಲ ಒಂದು ಪ್ರಶಸ್ತಿಯಷ್ಟೇ ಅಲ್ಲ. ಅದು ಅವರ ಅದ್ಭುತ ಪುನರಾಗಮನದ ಸಂಕೇತ. ದೀರ್ಘಕಾಲದ ಪ್ರಶಸ್ತಿ ಬರ ಹಾಗೂ ಸವಾಲುಗಳ ನಡುವೆಯೂ ಕಠಿಣ ಪರಿಶ್ರಮದಿಂದ ಮತ್ತೆ ವಿಶ್ವಮಟ್ಟದಲ್ಲಿ ಭಾರತದ ಧ್ವಜವನ್ನು ಎತ್ತಿ ಹಿಡಿಯಬಹುದು ಎಂಬುದನ್ನು ಅವರು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

Source link

Weekly Horoscope: ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ – Kannada News | Weekly Horoscope: Astrological Predictions for July 20 26, 2026 by Dr. Basavaraj Guruji

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿ ಜುಲೈ 20 ರಿಂದ 26ರ ವರೆಗಿನ ವಾರ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಈ ವಿಶೇಷ ಕಾರ್ಯಕ್ರಮದಲ್ಲಿ ಅವರು ಪರಾಭವನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸದ ವೈಶಿಷ್ಟ್ಯಗಳ ಬಗ್ಗೆ ವಿವರಿಸಿದ್ದಾರೆ. ಈ ವಾರದಲ್ಲಿ ಶನಿ ಗ್ರಹ ಮೀನ ರಾಶಿಯಲ್ಲಿ, ಕುಜ ಗ್ರಹ ವೃಷಭ ರಾಶಿಯಲ್ಲಿ, ಬುಧ ಗ್ರಹ ಮಿಥುನ ರಾಶಿಯಲ್ಲಿ, ಗುರು ಮತ್ತು ರವಿ ಗ್ರಹ ಕರ್ಕಾಟಕ ರಾಶಿಯಲ್ಲಿ, ಹಾಗೆಯೇ ಕೇತು ಮತ್ತು ಶುಕ್ರ ಗ್ರಹ ಸಿಂಹ ರಾಶಿಯಲ್ಲಿ ಸಂಚರಿಸಲಿವೆ. ರಾಹು ಗ್ರಹ ಕುಂಭ ರಾಶಿಯಲ್ಲಿ ಸಂಚಾರ ಮಾಡುತ್ತದೆ. ಈ ಗ್ರಹಗಳ ಸ್ಥಾನಪಲ್ಲಟಗಳು ದ್ವಾದಶ ರಾಶಿಗಳ ಮೇಲೆ ಹೇಗೆ ಪರಿಣಾಮ ಬೀರುತ್ತವೆ ಎಂಬುದನ್ನು ಗುರೂಜಿ ಅವರು ಸವಿಸ್ತಾರವಾಗಿ ವಿವರಿಸಿದ್ದಾರೆ. ಪ್ರತಿಯೊಂದು ರಾಶಿಯವರಿಗೂ ಆರ್ಥಿಕ, ವೃತ್ತಿ, ಕೌಟುಂಬಿಕ, ಆರೋಗ್ಯ ಮತ್ತು ಸಂಬಂಧಗಳ ಕುರಿತು ನಿರ್ದಿಷ್ಟ ಸಲಹೆಗಳು, ಅದೃಷ್ಟ ಸಂಖ್ಯೆಗಳು, ಬಣ್ಣಗಳು ಮತ್ತು ಪರಿಹಾರೋಪಾಯಗಳನ್ನು ನೀಡಲಾಗಿದೆ. ಸ್ಕಂದ ಷಷ್ಠಿ, ವೈವಸ್ವತ ಸಪ್ತಮಿ, ದೇವಶಯನ ಏಕಾದಶಿಯಂತಹ ಪ್ರಮುಖ ತಿಥಿಗಳು ಸಹ ಇದೇ ವಾರದಲ್ಲಿ ಬರಲಿವೆ.

ಮತ್ತಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

Amarnath Yatra 2026: ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ; ಭಕ್ತರ ಪ್ರವೇಶ ಬಂದ್ ಮಾಡಿದ ಆಡಳಿತ ಮಂಡಳಿ! – Kannada News | Amarnath Yatra Suspended: IMD Weather Warnings, Landslide Threat in Jambu and Kashmir from July 19

ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತImage Credit source: Getty Images

ಭಾರತ ಹವಾಮಾನ ಇಲಾಖೆ (IMD) ನೀಡಿರುವ ತೀವ್ರ ಹವಾಮಾನ ವೈಪರೀತ್ಯದ ಮುನ್ನೆಚ್ಚರಿಕೆಗಳ ಹಿನ್ನೆಲೆಯಲ್ಲಿ, ಪ್ರಸಕ್ತ ಸಾಲಿನ ಪವಿತ್ರ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಯಾತ್ರಾರ್ಥಿಗಳ ಜೀವ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಪಹಲ್ಗಾಮ್ ಮತ್ತು ಬಾಲ್ಟಾಲ್ ಎರಡೂ ಮಾರ್ಗಗಳ ಮೂಲಕ ಪವಿತ್ರ ಗುಹಾ ದೇಗುಲಕ್ಕೆ ತೆರಳುವ ಯಾತ್ರೆಯನ್ನು ಜುಲೈ 19 ರಿಂದ ತಡೆಹಿಡಿಯಲಾಗಿದೆ ಎಂದು ಜಮ್ಮು-ಕಾಶ್ಮೀರ ಆಡಳಿತದ ಹಿರಿಯ ಅಧಿಕಾರಿಗಳು ಅಧಿಕೃತವಾಗಿ ಘೋಷಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಹಲವೆಡೆ ಭಾರೀ ಮಳೆ, ಭೂಕುಸಿತ ಹಾಗೂ ಹಠಾತ್ ಪ್ರವಾಹ ಉಂಟಾಗುವ ಭೀತಿ ಇರುವುದರಿಂದ ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.

ಬೇಸ್ ಕ್ಯಾಂಪ್‌ಗಳಲ್ಲೇ ಉಳಿಯಲಿರುವ ಯಾತ್ರಿಕರು:

ಅಧಿಕಾರಿಗಳ ನಿರ್ಧಾರದ ಪ್ರಕಾರ, ಜುಲೈ 19 ರಿಂದ ಬಾಲ್ಟಾಲ್ ಬೇಸ್ ಕ್ಯಾಂಪ್ ಮತ್ತು ನುನ್ವಾನ್-ಚಂದನ್ವರಿ ಬೇಸ್ ಕ್ಯಾಂಪ್‌ಗಳಿಂದ ಯಾವುದೇ ಯಾತ್ರಿಕರಿಗೆ ಗುಹೆಯ ಕಡೆಗೆ ಮುಂದುವರಿಯಲು ಅನುಮತಿ ನೀಡುವುದಿಲ್ಲ. ಪ್ರಸ್ತುತ ವಿವಿಧ ಬೇಸ್ ಕ್ಯಾಂಪ್‌ಗಳನ್ನು ತಲುಪಿರುವ ಭಕ್ತರು ಆಯಾ ಸ್ಥಳಗಳಲ್ಲೇ ಸುರಕ್ಷಿತವಾಗಿ ಉಳಿಯಬೇಕು ಮತ್ತು ಸ್ಥಳೀಯ ಅಧಿಕಾರಿಗಳು ನೀಡುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ವಿನಂತಿಸಲಾಗಿದೆ. ಹವಾಮಾನ ಪರಿಸ್ಥಿತಿಗಳು ಸುಧಾರಿಸಿದ ನಂತರ, ಯಾತ್ರಾ ಮಾರ್ಗಗಳ ಸುರಕ್ಷತೆಯನ್ನು ಕೂಲಂಕಷವಾಗಿ ಪರಿಶೀಲಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಯಾತ್ರಾ ನಿರ್ವಹಣಾ ಸಮಿತಿ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಚಿಕ್ಕ ಮಕ್ಕಳಿಗೆ ಕನ್ನಡಿ ತೋರಿಸಬಾರದು ಏಕೆ? ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಕಾರಣ ಇಲ್ಲಿದೆ

ಭೂಕುಸಿತ ಹಾಗೂ ಹಠಾತ್ ಪ್ರವಾಹದ ಭೀತಿ:

ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ, ಜಮ್ಮು ಮತ್ತು ಕಾಶ್ಮೀರದ ಪರ್ವತ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಮತ್ತು ಬಂಡೆಗಳು ಕುಸಿಯುವ ಅಪಾಯ ಗಣನೀಯವಾಗಿ ಹೆಚ್ಚಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಡಿದಾದ ಯಾತ್ರಾ ಮಾರ್ಗದಲ್ಲಿ ಪ್ರಯಾಣಿಸುವ ಭಕ್ತರ ಜೀವಕ್ಕೆ ಯಾವುದೇ ರೀತಿಯ ತೊಂದರೆಯಾಗಬಾರದು ಎಂಬ ಮುನ್ನೆಚ್ಚರಿಕೆ ಕ್ರಮವಾಗಿ ಈ ಕಠಿಣ ನಿರ್ಧಾರ ತೆಗೆದುಕೊಳ್ಳಲಾಗಿದೆ. ಆದಾಗ್ಯೂ, ಬೇಸ್ ಕ್ಯಾಂಪ್‌ಗಳಲ್ಲಿರುವ ಯಾತ್ರಿಕರು ಆತಂಕಪಡುವ ಅಗತ್ಯವಿಲ್ಲ. ಆಡಳಿತ ಮಂಡಳಿಯು ಹವಾಮಾನ ಪರಿಸ್ಥಿತಿಗಳನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದು, ವಾತಾವರಣ ತಿಳಿಯಾದ ತಕ್ಷಣ ಯಾತ್ರೆ ಪುನರಾರಂಭದ ದಿನಾಂಕವನ್ನು ಅಧಿಕೃತವಾಗಿ ಪ್ರಕಟಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಭಕ್ತರಲ್ಲಿ ಅಧಿಕಾರಿಗಳ ವಿಶೇಷ ಮನವಿ:

ಈ ತುರ್ತು ಸಂದರ್ಭದಲ್ಲಿ, ಅಮರನಾಥ ಯಾತ್ರೆಗೆ ಹೊರಟಿರುವ ಹಾಗೂ ಈಗಾಗಲೇ ಕಾಶ್ಮೀರ ತಲುಪಿರುವ ಭಕ್ತರು ಕೇವಲ ಅಧಿಕೃತ ಪ್ರಕಟಣೆಗಳು, ಸ್ಥಳೀಯ ಆಡಳಿತ ಮತ್ತು ಯಾತ್ರಾ ನಿರ್ವಹಣಾ ಸಮಿತಿಯ (SASB) ನಿರ್ದೇಶನಗಳನ್ನು ಮಾತ್ರ ನಂಬಬೇಕು ಹಾಗೂ ಅವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಮನವಿ ಮಾಡಲಾಗಿದೆ. ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಸುರಕ್ಷತೆಗೆ ಮೊದಲ ಆದ್ಯತೆ ನೀಡಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಭಕ್ತಾದಿಗಳು ಆಡಳಿತ ಮಂಡಳಿಯೊಂದಿಗೆ ಸಂಪೂರ್ಣವಾಗಿ ಸಹಕರಿಸಬೇಕೆಂದು ಕೋರಲಾಗಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಎಸ್​​ಐಆರ್​​ ಕಾರ್ಯಕ್ಕೆ ಶೇ.30ರಷ್ಟು ಶಿಕ್ಷಕರ ಬಳಕೆ: ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮಾಡೋರಿಲ್ಲ ಪಾಠ ಪ್ರವಚನ! – Kannada News | Karnataka Schools Grapple with Teacher Shortage Amid Voter Roll Revision Drive

ಬೆಂಗಳೂರು, ಜುಲೈ 19: ಕರ್ನಾಟಕದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (Special Intensive Revision – SIR) ಕಾರ್ಯಕ್ಕೆ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಅಂದಾಜು ಶೇ.30ರಷ್ಟು ಶಿಕ್ಷಕರನ್ನು ನಿಯೋಜಿಸಿರುವುದರಿಂದ, ಸಾವಿರಾರು ಶಾಲೆಗಳಲ್ಲಿ ಬೋಧನಾ ಚಟುವಟಿಕೆಗಳು ಬಹುತೇಕ ಸ್ಥಗಿತಗೊಂಡಿವೆ. ಇದು ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ಪರಿಣಾಮ ಬೀರುವ ಬಗ್ಗೆ ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.

ಅನೇಕ ಶಾಲೆಗಳಲ್ಲಿ ಒಂದೇ ಕೊಠಡಿಯಲ್ಲಿ ಮಕ್ಕಳಿಗೆ ಪಾಠ

ಜೂನ್ 30ರಿಂದ ಆಗಸ್ಟ್ 8ರವರೆಗೆ ಬೂತ್ ಮಟ್ಟದ ಅಧಿಕಾರಿಗಳಾಗಿ (BLO) ಮನೆ ಮನೆಗೆ ತೆರಳಿ ಮತದಾರರ ಮಾಹಿತಿ ಸಂಗ್ರಹಿಸುವ ಕಾರ್ಯ ನಡೆಯುತ್ತಿದ್ದು, ಇದಕ್ಕೂ ಮುನ್ನವೇ ಜೂನ್ 20ರಿಂದ ಶಿಕ್ಷಕರಿಗೆ ಎಸ್‌ಐಆರ್ ತರಬೇತಿ ನೀಡಲಾಗಿತ್ತು. ಪರಿಣಾಮವಾಗಿ, ಹೊಸ ಶೈಕ್ಷಣಿಕ ವರ್ಷದ ಮೂರನೇ ವಾರದಿಂದಲೇ ಮಕ್ಕಳಿಗೆ ಪಾಠ ಪ್ರವಚನ ಮಾಡಬೇಕಿದ್ದ ಬಹುತೇಕ ಶಿಕ್ಷಕರು ಅಲಭ್ಯರಾಗಿದ್ದಾರೆ. ಶಿಕ್ಷಕರ ಕೊರತೆಯಿಂದ ಅನೇಕ ಶಾಲೆಗಳಲ್ಲಿ ವಿವಿಧ ತರಗತಿಗಳ ವಿದ್ಯಾರ್ಥಿಗಳನ್ನು ಒಂದೇ ಕೊಠಡಿಯಲ್ಲಿ ಕುಳ್ಳಿರಿಸಿ, ಒಬ್ಬ ಅಥವಾ ಇಬ್ಬರು ಶಿಕ್ಷಕರಿಂದ ಮಾತ್ರ ಮೇಲ್ವಿಚಾರಣೆ ಮಾಡಲಾಗುತ್ತಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಎಸ್​ಐಆರ್ ಪ್ರಕ್ರಿಯೆ​ಯಲ್ಲಿ ಲೋಪ ಆರೋಪ; ಮುಖ್ಯ ಚುನಾವಣಾ ಆಯುಕ್ತರಿಗೆ ಮೈತ್ರಿ ನಾಯಕರಿಂದ ದೂರು

ಶಾಲೆಗಳಲ್ಲಿ ಶೈಕ್ಷಣಿಕ ವಾತಾವರಣವೇ ಮಾಯ

ಬೆಂಗಳೂರು ಉತ್ತರ ಶಿಕ್ಷಣ ಜಿಲ್ಲೆಯಲ್ಲಿ ಒಟ್ಟು 3,735 ಶಿಕ್ಷಕರ ಪೈಕಿ 1,304 ಮಂದಿ 535 ಸರ್ಕಾರಿ ಹಾಗೂ 220 ಅನುದಾನಿತ ಶಾಲೆಗಳಿಂದ ಎಸ್‌ಐಆರ್ ಕರ್ತವ್ಯಕ್ಕೆ ನಿಯೋಜನೆಯಾಗಿದ್ದಾರೆ. ಬೆಂಗಳೂರು ದಕ್ಷಿಣ ಶಿಕ್ಷಣ ಜಿಲ್ಲೆಯಲ್ಲಿ ಈ ಸಂಖ್ಯೆ 2,344ಕ್ಕೆ ಏರಿಕೆಯಾಗಿದೆ. ಮತ್ತೊಂದೆಡೆ ಕೆಲ ಶಾಲೆಗಳು ಎಸ್‌ಐಆರ್ ಕಾರ್ಯದ ಕೇಂದ್ರಗಳಾಗಿದ್ದು, ಶಾಲೆಗಳಲ್ಲಿ ಶೈಕ್ಷಣಿಕ ವಾತಾವರಣವೇ ಇಲ್ಲದಂತಾಗಿದೆ ಎಂದು ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (SDMC) ಸದಸ್ಯರು ಆರೋಪಿಸಿದ್ದಾರೆ. ಮಕ್ಕಳು ಶಾಲೆಗೆ ಬಂದು ಮಧ್ಯಾಹ್ನದ ಊಟ ಮಾಡಿ ಮನೆಗೆ ಹೋಗುತ್ತಿದ್ದಾರೆ ಎಂಬ ಮಾತುಗಳೂ ಕೇಳಿಬಂದಿವೆ

ಪೋಷಕರಲ್ಲಿ ತಪ್ಪು ಕಲ್ಪನೆ ಮೂಡುವ ಬಗ್ಗೆ ತಜ್ಞರ ಎಚ್ಚರ

ಶಿಕ್ಷಣ ತಜ್ಞ ನಿರಂಜನಾರಾಧ್ಯ ವಿ.ಪಿ. ಮಾತನಾಡಿ, ಕೋವಿಡ್ ಸಂದರ್ಭದಲ್ಲಿ ಉಂಟಾದ ಕಲಿಕಾ ನಷ್ಟ ಅನಿವಾರ್ಯವಾಗಿತ್ತು. ಆದರೆ ಇದು ಸರ್ಕಾರವೇ ಸೃಷ್ಟಿಸಿದ ಪರಿಸ್ಥಿತಿ. ಈಗ ಸಂಪೂರ್ಣ ಶೈಕ್ಷಣಿಕ ವರ್ಷವನ್ನು ಮರುನಿಗದಿ ಮಾಡುವ ಅಗತ್ಯವಿದೆ, ಎಂದು ಅಭಿಪ್ರಾಯಪಟ್ಟಿದ್ದಾರೆ. ಇದರಿಂದ ಸರ್ಕಾರಿ ಶಾಲೆಗಳ ಬಗ್ಗೆ ಪೋಷಕರಲ್ಲಿ ತಪ್ಪು ಕಲ್ಪನೆ ಮೂಡಿ, ಕಡಿಮೆ ಶುಲ್ಕದ ಖಾಸಗಿ ಶಾಲೆಗಳತ್ತ ಮುಖ ಮಾಡುವ ಸಾಧ್ಯತೆಯೂ ಇದೆ ಎಂದು ಅವರು ಎಚ್ಚರಿಸಿದ್ದಾರೆ ಎಂದು ದಿ ಟೈಮ್ಸ್​​ ಆಫ್​​ ಇಂಡಿಯಾ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 11:02 am, Sun, 19 July 26

Source link

Exit mobile version