Video: ಕೆಚಪ್ ಬದಲು ಕೆಪಚ್ ಎಂದು ವಾದಿಸಿದ ಪುಟಾಣಿ, ವೈರಲ್ ಆಯ್ತು ದೃಶ್ಯ

ಮನೆಯಲ್ಲಿ ಪುಟ್ಟ ಮಕ್ಕಳಿದ್ದು (little kids) ಬಿಟ್ಟರೆ ಎಲ್ಲಾ ನೋವುಗಳನ್ನು ಈ ಕಂದಮ್ಮಗಳ ಆಟ ತುಂಟಾಟವನ್ನು ನೋಡಿ ಮರೆಯುತ್ತಾರೆ. ಈ ಪುಟಾಣಿಗಳ ತೊದಲು ನುಡಿಯನ್ನು ಆಲಿಸುವುದು ಇನ್ನು ಚೆನ್ನ. ಹೀಗಾಗಿ ಮಕ್ಕಳ ತೊದಲು ನುಡಿಗಳನ್ನು ಕೇಳಲು ಎಲ್ಲರೂ ಇಷ್ಟ ಪಡ್ತಾರೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಪುಟಾಣಿಯೊಂದು ಕೆಚಪ್ ಎನ್ನುವ ಬದಲು ಕೆಪಚ್ ಎಂದು ಮುದ್ದಾಗಿ ಹೇಳಿದೆ. ಈ ಪುಟಾಣಿ ಕ್ಯೂಟ್ ರಿಯಾಕ್ಷನ್ ನೋಡಿ ನೆಟ್ಟಿಗರು ಫಿದಾ ಆಗಿದ್ದಾರೆ.

myrumoments ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಕ್ಲಿಪಿಂಗ್‌ನಲ್ಲಿ ಪುಟಾಣಿಯ ತೊದಲು ನುಡಿಯನ್ನು ನೋಡಬಹುದು. ಈ ವಿಡಿಯೋದಲ್ಲಿ ತಾಯಿಯೂ ಕೈಯಲ್ಲಿ ಕೆಚಪ್ ಪ್ಯಾಕೆಟ್‌ ತೋರಿಸಿ ಇದೇನು ಎಂದು ಕೇಳಿದ್ದಾಳೆ. ಪುಟಾಣಿಯೂ ಕೆಪಚ್ ಎಂದು ಮುದ್ದಾಗಿ ಹೇಳಿರುವುದನ್ನು ನೋಡಬಹುದು. ತಾಯಿ ಪುಟ್ಟ ಕಂದಮ್ಮನ ತಪ್ಪನ್ನು ತಿದ್ದುತ್ತಾ ಕೆಪಚ್ ಅಲ್ಲ, ಕೆಚಪ್ ಎಂದಿದ್ದಾಳೆ. ಆದರೆ ಪುಟ್ಟ ಹುಡುಗಿ ಮತ್ತೆ ಕೆಪಚ್ ಎಂದು ಪುನರ್ವತಿಸಿದೆ. ಮುದ್ದು ಕಂದಮ್ಮನ ಮಾತನ್ನು ಕೇಳಿ ತಾಯಿ ಜೋರಾಗಿ ನಕ್ಕಿರುವುದನ್ನು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ತನ್ನ ಕಾಲನ್ನು ತಾನೇ ಸ್ಪರ್ಶಿಸಿ ನಮಸ್ಕರಿಸಿಕೊಂಡ ಪುಟಾಣಿ

ಈ ವಿಡಿಯೋ ಒಂದು ಮಿಲಿಯನ್ ಗೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ, ಅವಳು ಹೇಳುವುದು ಸರಿಯೇ ಇದೆ. ನಿಮಗೆ ಏನು ಗೊತ್ತಿಲ್ಲ ಎಂದಿದ್ದಾರೆ. ಇನ್ನೊಬ್ಬರು, ಎಷ್ಟು ಮುದ್ದಾಗಿ ಕೆಪಚ್ ಎಂದು ಹೇಳುತ್ತಿದೆ ಎಂದು ಕಾಮೆಂಟ್ ನಲ್ಲಿ ಹೇಳಿದ್ದಾರೆ. ಮತ್ತೊಬ್ಬರು, ನಾನು ಆ ಪುಟಾಣಿ ಹೇಳುವುದನ್ನು ಒಪ್ಪುತ್ತೇನೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ಕೌಶಲ್ಯದ ಆಟವಾದರೂ ಬೆಟ್ಟಿಂಗ್ ಇದ್ದರೆ ಸಾಂವಿಧಾನಿಕ ರಕ್ಷಣೆ ಇಲ್ಲ; ಕರ್ನಾಟಕದ ಕಾನೂನು ಎತ್ತಿಹಿಡಿದ ಸುಪ್ರೀಂಕೋರ್ಟ್ – Kannada News

ನವದೆಹಲಿ, ಜೂನ್ 3: ಆನ್‌ಲೈನ್ ಗೇಮಿಂಗ್ ಮತ್ತು ಜೂಜಾಟದ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್‌ನಿಂದ ಭಾರಿ ಜಯ ಸಿಕ್ಕಿದೆ. ಹಣ ಅಥವಾ ಪಣವನ್ನು ಒಡ್ಡಿ ಆಡುವ (with stakes) ಆನ್‌ಲೈನ್ ಕೌಶಲ್ಯದ ಆಟಗಳ (Games of Skill) ಮೇಲಿನ ಬೆಟ್ಟಿಂಗ್‌ಗೆ ಯಾವುದೇ ಸಾಂವಿಧಾನಿಕ ರಕ್ಷಣೆ ಇಲ್ಲ ಎಂದು ಸುಪ್ರೀಂ ಕೋರ್ಟ್ (Supreme Court) ಐತಿಹಾಸಿಕ ತೀರ್ಪು ನೀಡಿದೆ. ಇದರೊಂದಿಗೆ, ಆನ್‌ಲೈನ್ ಜೂಜಾಟ ಮತ್ತು ಬೆಟ್ಟಿಂಗ್ ಅನ್ನು ನಿಷೇಧಿಸುವ ಕರ್ನಾಟಕ ಮತ್ತು ತಮಿಳುನಾಡು ರಾಜ್ಯ ಸರ್ಕಾರಗಳ ಕಾನೂನುಗಳ ಸಿಂಧುತ್ವವನ್ನು ದೇಶದ ಅತ್ಯುನ್ನತ ನ್ಯಾಯಾಲಯವು ಎತ್ತಿಹಿಡಿದಿದೆ.

ಸುಪ್ರೀಂ ಕೋರ್ಟ್ ತೀರ್ಪಿನ ಪ್ರಮುಖ ಅಂಶಗಳು

ಹೈಕೋರ್ಟ್‌ಗಳ ಈ ಹಿಂದಿನ ಆದೇಶಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈ ಮಹತ್ವದ ತೀರ್ಪನ್ನು ಪ್ರಕಟಿಸಿದೆ:

  • ಟ್ರೇಡ್ ರೈಟ್ಸ್ ಅನ್ವಯಿಸುವುದಿಲ್ಲ: ಸಂವಿಧಾನದ ವಿಧಿ 19(1)(g) ಅಡಿಯಲ್ಲಿ ಪ್ರತಿಯೊಬ್ಬ ನಾಗರಿಕನಿಗೂ ತನಗಿಷ್ಟ ಬಂದ ವ್ಯಾಪಾರ ಅಥವಾ ವೃತ್ತಿ ಮಾಡುವ ಸ್ವಾತಂತ್ರ್ಯವಿದೆ. ಆದರೆ, ಹಣವನ್ನು ಪಣಕ್ಕಿಟ್ಟು ಆಡುವ ಜೂಜಾಟ ಅಥವಾ ಬೆಟ್ಟಿಂಗ್ ಪ್ರಕ್ರಿಯೆಯು ಈ ‘ಮೂಲಭೂತ ವ್ಯಾಪಾರದ ಹಕ್ಕಿನ’ ಅಡಿಯಲ್ಲಿ ಬರುವುದಿಲ್ಲ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.
  • ಕೌಶಲ್ಯದ ಆಟಗಳಿಗೂ ನಿಯಮ ಅನ್ವಯ: ಆಟವು ಕೌಶಲ್ಯ ಆಧಾರಿತವಾಗಿದ್ದರೂ (ಉದಾಹರಣೆಗೆ ರಮ್ಮಿ, ಪೋಕರ್ ಅಥವಾ ಫ್ಯಾಂಟಸಿ ಗೇಮ್ಸ್), ಅದರಲ್ಲಿ ಹಣವನ್ನು ಪಣಕ್ಕಿಟ್ಟು ಬಾಜಿ ಕಟ್ಟಿದಾಗ ಅದು ಜೂಜಿನ ಸ್ವರೂಪ ಪಡೆದುಕೊಳ್ಳುತ್ತದೆ. ಅಂತಹ ವ್ಯವಹಾರಗಳಿಗೆ ಕಾನೂನಿನ ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಾಧೀಶರು ಹೇಳಿದ್ದಾರೆ.
  • ರಾಜ್ಯ ಸರ್ಕಾರಗಳಿಗೆ ಸಂಪೂರ್ಣ ಅಧಿಕಾರ: ಸಾರ್ವಜನಿಕ ಸುವ್ಯವಸ್ಥೆ, ಯುವಜನರ ಹಿತರಕ್ಷಣೆ ಮತ್ತು ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಆನ್‌ಲೈನ್ ಬೆಟ್ಟಿಂಗ್ ಆಟಗಳನ್ನು ನಿಷೇಧಿಸುವ ಅಥವಾ ನಿಯಂತ್ರಿಸುವ ಸಂಪೂರ್ಣ ಕಾನೂನು ಅಧಿಕಾರ ರಾಜ್ಯ ಸರ್ಕಾರಗಳಿಗೆ ಇದೆ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಭಾರತದ ಸೇವಾ ಕ್ಷೇತ್ರದಲ್ಲಿ ಹೊಸ ಹುರುಪು; ಮೇ ತಿಂಗಳ ಸರ್ವಿಸ್ ಸೆಕ್ಟರ್ ಪಿಎಂಐ 6 ತಿಂಗಳ ಗರಿಷ್ಠ ಮಟ್ಟಕ್ಕೆ

ಏನಿದು ‘ಗೇಮ್ ಆಫ್ ಸ್ಕಿಲ್’ (Game of Skill)?

ಯಾವ ಆಟಗಳಲ್ಲಿ ಗೆಲುವು ಅಥವಾ ಸೋಲು ಕೇವಲ ಅದೃಷ್ಟದ ಮೇಲೆ ನಿರ್ಧಾರವಾಗದೆ, ಆಟಗಾರನ ವೈಯಕ್ತಿಕ ಸಾಮರ್ಥ್ಯದ ಮೇಲೆ ನಿರ್ಧಾರವಾಗುತ್ತದೆಯೋ ಅದನ್ನು ‘ಗೇಮ್ ಆಫ್ ಸ್ಕಿಲ್’ (ಕೌಶಲ್ಯದ ಆಟ) ಎನ್ನಲಾಗುತ್ತದೆ.

ಇದರಲ್ಲಿ ಆಟಗಾರನ ಬೌದ್ಧಿಕ ಶಕ್ತಿ, ತರಬೇತಿ, ಅನುಭವ, ಆಟದ ತಂತ್ರ, ಗಮನ ಮತ್ತು ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಅತ್ಯಂತ ಮುಖ್ಯವಾಗಿರುತ್ತದೆ. ಉದಾಹರಣೆಗೆ, ರಮ್ಮಿ, ಪೋಕರ್, ಚೆಸ್ ಅಥವಾ ಕೆಲವು ಮಾದರಿಯ ಫ್ಯಾಂಟಸಿ ಸ್ಪೋರ್ಟ್ಸ್ ಆಟಗಳು.

ಲಾಟರಿ ಅಥವಾ ಕಾಯಿನ್ ಟಾಸ್‌ನಂತಹ ಆಟಗಳು ಕೇವಲ ಅದೃಷ್ಟವನ್ನು ನಂಬಿರುತ್ತವೆ (Game of Chance). ಆದರೆ ಕೌಶಲ್ಯದ ಆಟಗಳಲ್ಲಿ ಅದೃಷ್ಟಕ್ಕಿಂತ ಆಟಗಾರನ ಬುದ್ಧಿವಂತಿಕೆಗೆ ಹೆಚ್ಚಿನ ಪ್ರಾಮುಖ್ಯತೆ ಇರುತ್ತದೆ.

ಕರ್ನಾಟಕ ಈ ಕಾನೂನನ್ನು ಪಾಸ್ ಮಾಡಿದ್ದು ಯಾವಾಗ?

ಆನ್‌ಲೈನ್ ಜೂಜಾಟದ ದಾಸರಾಗಿ ರಾಜ್ಯದ ಯುವ ಪೀಳಿಗೆ ಹಾದಿ ತಪ್ಪುತ್ತಿರುವುದನ್ನು ಮನಗಂಡಿದ್ದ ಕರ್ನಾಟಕ ಸರ್ಕಾರ, 2021ರ ಸೆಪ್ಟೆಂಬರ್ ತಿಂಗಳಲ್ಲಿ ವಿಧಾನಮಂಡಲದಲ್ಲಿ ‘ಕರ್ನಾಟಕ ಪೊಲೀಸ್ (ತಿದ್ದುಪಡಿ) ಕಾಯ್ದೆ, 2021’ ಅನ್ನು ಅಂಗೀಕರಿಸಿತ್ತು.

ಈ ಕಾನೂನಿನ ಪ್ರಕಾರ, ಕರ್ನಾಟಕದಲ್ಲಿ ಹಣ ಅಥವಾ ಯಾವುದೇ ಮೌಲ್ಯಯುತ ವಸ್ತುವನ್ನು ಪಣಕ್ಕಿಟ್ಟು ಆಡುವ ಎಲ್ಲಾ ರೀತಿಯ ಆನ್‌ಲೈನ್ ಗೇಮ್‌ಗಳು, ಜೂಜಾಟಗಳು ಮತ್ತು ಬೆಟ್ಟಿಂಗ್‌ಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿತ್ತು. ತಪ್ಪು ಮಾಡಿದವರಿಗೆ ದಂಡ ಮತ್ತು ಜೈಲು ಶಿಕ್ಷೆಯ ಪ್ರಾವಿಧಾನವನ್ನೂ ಮಾಡಲಾಗಿತ್ತು.

ಇದನ್ನೂ ಓದಿ: ಫಾರೆಕ್ಸ್​ನ ಚಿನ್ನ ಮಾರಿರುವ ಸುದ್ದಿ ಸುಳ್ಳು ಎಂದ ಸರ್ಕಾರ; ದೇಶದ ಬಂಗಾರದ ದಾಸ್ತಾನು 880.52 ಟನ್‌ಗಳಷ್ಟು ಸುರಕ್ಷಿತವಂತೆ

ಹೈಕೋರ್ಟ್ ನೀಡಿದ್ದ ಆಘಾತ: ಆದರೆ, ಈ ಕಾನೂನನ್ನು ಪ್ರಶ್ನಿಸಿ ‘ಆನ್‌ಲೈನ್ ಗೇಮಿಂಗ್ ಫೆಡರೇಶನ್’ ಮತ್ತು ವಿವಿಧ ಗೇಮಿಂಗ್ ಕಂಪನಿಗಳು ಕೋರ್ಟ್ ಮೆಟ್ಟಿಲೇರಿದ್ದವು. ಅರ್ಜಿ ವಿಚಾರಣೆ ನಡೆಸಿದ್ದ ಧಾರವಾಡ ಮತ್ತು ಬೆಂಗಳೂರು ಪೀಠಗಳನ್ನೊಳಗೊಂಡ ಕರ್ನಾಟಕ ಹೈಕೋರ್ಟ್, 2022ರ ಫೆಬ್ರವರಿಯಲ್ಲಿ ಸರ್ಕಾರದ ಈ ತಿದ್ದುಪಡಿ ಕಾಯ್ದೆಯ ಪ್ರಮುಖ ನಿಯಮಗಳನ್ನು ರದ್ದುಗೊಳಿಸಿ ಆದೇಶ ಹೊರಡಿಸಿತ್ತು. “ಕೌಶಲ್ಯದ ಆಟಗಳನ್ನು ಜೂಜಿನ ವ್ಯಾಪ್ತಿಗೆ ತಂದು ಸಂಪೂರ್ಣ ನಿಷೇಧಿಸುವುದು ಸಂವಿಧಾನ ಬಾಹಿರ” ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು.

ಈಗ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಬದಿಗೆ ಸರಿಸಿ, ರಾಜ್ಯಗಳ ಕಟ್ಟುನಿಟ್ಟಿನ ನಿಷೇಧದ ಕಾನೂನುಗಳನ್ನು ಎತ್ತಿಹಿಡಿದಿರುವುದರಿಂದ ಆನ್‌ಲೈನ್ ಗೇಮಿಂಗ್ ಕಂಪನಿಗಳಿಗೆ ಭಾರಿ ಆಘಾತ ಎದುರಾಗಿದೆ.

ಸಮಾಜದ ಮೇಲಾಗುವ ಪರಿಣಾಮಗಳೇನು?

ಇತ್ತೀಚಿನ ವರ್ಷಗಳಲ್ಲಿ ಆನ್‌ಲೈನ್ ಗೇಮಿಂಗ್ ಆ್ಯಪ್‌ಗಳಲ್ಲಿ ಹಣ ಕಳೆದುಕೊಂಡು ಯುವಕರು ಮತ್ತು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ದೇಶಾದ್ಯಂತ ತೀವ್ರವಾಗಿ ಹೆಚ್ಚಾಗಿದ್ದವು. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಈ ತೀರ್ಪು ಅತ್ಯಂತ ಮಹತ್ವದ್ದಾಗಿದೆ. ಇದು ರಾಜ್ಯ ಸರ್ಕಾರಗಳಿಗೆ ತಮ್ಮ ರಾಜ್ಯದ ಗಡಿಯೊಳಗೆ ಸಾರ್ವಜನಿಕ ಹಿತದೃಷ್ಟಿಯಿಂದ ಇಂತಹ ಆ್ಯಪ್‌ಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಮತ್ತು ಯುವ ಪೀಳಿಗೆಯನ್ನು ಆನ್‌ಲೈನ್ ಜೂಜಿನ ದಾಸರಾಗದಂತೆ ತಡೆಯಲು ಕಾನೂನಾತ್ಮಕವಾಗಿ ದೊಡ್ಡ ಶಕ್ತಿಯನ್ನು ನೀಡಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಭಾರತ-ಬಾಂಗ್ಲಾ ಗಡಿ ಬೇಲಿ ನಿರ್ಮಾಣಕ್ಕೆ ಪಶ್ಚಿಮ ಬಂಗಾಳದಿಂದ ಬಿಎಸ್‌ಎಫ್‌ಗೆ 31 ಎಕರೆ ಹಸ್ತಾಂತರ – Kannada News

ಕೊಲ್ಕತ್ತಾ, ಜೂನ್ 3: ಭಾರತ ಮತ್ತು ಬಾಂಗ್ಲಾದೇಶದ ಗಡಿಯಲ್ಲಿ (Bangladesh Border) ಅಕ್ರಮ ನುಸುಳುವಿಕೆ ಮತ್ತು ಕಳ್ಳಸಾಗಣೆಗೆ ಶಾಶ್ವತವಾಗಿ ಬ್ರೇಕ್ ಹಾಕಲು ಕೇಂದ್ರ ಸರ್ಕಾರ ಹಾಗೂ ಪಶ್ಚಿಮ ಬಂಗಾಳ ಸರ್ಕಾರಗಳು ಮಹತ್ವದ ಹೆಜ್ಜೆ ಇಟ್ಟಿವೆ. ಗಡಿ ಭಾಗದಲ್ಲಿ ಬಾಕಿ ಉಳಿದಿರುವ ಬೇಲಿ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲು ಪಶ್ಚಿಮ ಬಂಗಾಳ ಸರ್ಕಾರವು ಬರೋಬ್ಬರಿ 31 ಎಕರೆ ಭೂಮಿಯನ್ನು ಗಡಿ ಭದ್ರತಾ ಪಡೆಗೆ (BSF) ಹಸ್ತಾಂತರಿಸಿದೆ.

ದಾಖಲೆಗಳಿಲ್ಲದ ಬಾಂಗ್ಲಾದೇಶಿ ವಲಸಿಗರ ವಿರುದ್ಧ ದೇಶಾದ್ಯಂತ ಕಠಿಣ ಕ್ರಮ ಕೈಗೊಳ್ಳಲಾಗುತ್ತಿರುವ ಬೆನ್ನಲ್ಲೇ ಅಂತಾರಾಷ್ಟ್ರೀಯ ಗಡಿಯನ್ನು ಮತ್ತಷ್ಟು ಭದ್ರಪಡಿಸಲು ಈ ಭೂಮಿಯನ್ನು ನೀಡಲಾಗಿದೆ.

ಇದನ್ನೂ ಓದಿ: ಅಹಮದಾಬಾದ್‌ನಲ್ಲಿ ಅಕ್ರಮವಾಗಿ ನೆಲೆಸಿದ್ದ 166 ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧನ

ಅಂತಾರಾಷ್ಟ್ರೀಯ ಗಡಿಯಲ್ಲಿ ಕಾವಲು ಬಲಪಡಿಸುವ ಮತ್ತು ನುಸುಳುವಿಕೆಯನ್ನು ಸಂಪೂರ್ಣವಾಗಿ ತಡೆಯುವ ಉದ್ದೇಶದಿಂದ, ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಮತ್ತು ನದಿಯಾ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ 31 ಎಕರೆ ಭೂಮಿಯನ್ನು ಗಡಿ ಬೇಲಿ ಯೋಜನೆಗಾಗಿ ಬಿಎಸ್‌ಎಫ್‌ಗೆ ಅಧಿಕೃತವಾಗಿ ಹಸ್ತಾಂತರಿಸಲಾಗಿದೆ. ಭೂಸ್ವಾಧೀನ ಪ್ರಕ್ರಿಯೆಯಲ್ಲಿದ್ದ ದೀರ್ಘಕಾಲದ ಗೊಂದಲಗಳನ್ನು ಬಗೆಹರಿಸಿ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಭಾರತ ಮತ್ತು ಬಾಂಗ್ಲಾದೇಶದ ನಡುವೆ ಪಶ್ಚಿಮ ಬಂಗಾಳವು ಅತಿ ಉದ್ದದ ಗಡಿಯನ್ನು ಹಂಚಿಕೊಂಡಿದೆ. ಆದರೆ, ಕೆಲವು ಕಡೆಗಳಲ್ಲಿ ಭೂಮಿ ಲಭ್ಯವಿಲ್ಲದ ಕಾರಣ ಗಡಿ ಬೇಲಿ ನಿರ್ಮಾಣ ಕಾರ್ಯ ಅಪೂರ್ಣವಾಗಿ ಉಳಿದಿತ್ತು. ಬೇಲಿ ಇಲ್ಲದ ಮುಕ್ತ ಗಡಿ ಪ್ರದೇಶಗಳನ್ನು ಬಳಸಿಕೊಂಡು ಬಾಂಗ್ಲಾದೇಶದ ಪ್ರಜೆಗಳು ಅಕ್ರಮವಾಗಿ ಭಾರತದೊಳಗೆ ನುಸುಳುತ್ತಿದ್ದರು. ಅಲ್ಲದೆ ಜಾನುವಾರು ಮತ್ತು ಮಾದಕ ದ್ರವ್ಯಗಳ ಕಳ್ಳಸಾಗಣೆ ದೊಡ್ಡ ಸವಾಲಾಗಿತ್ತು. ಈಗ ಬೇಲಿ ನಿರ್ಮಾಣದಿಂದ ಇದಕ್ಕೆ ಮುಕ್ತಿ ಸಿಗಲಿದೆ.

ಇದನ್ನೂ ಓದಿ: ಭಾರತ-ನೇಪಾಳ ಗಡಿ ವಿಷಯದಲ್ಲಿ ಮೂರನೇ ದೇಶದ ಹಸ್ತಕ್ಷೇಪಕ್ಕೆ ಅವಕಾಶವಿಲ್ಲ; ಭಾರತದ ಖಡಕ್ ಸಂದೇಶ

ಸಾಮಾನ್ಯವಾಗಿ ಗಡಿ ವಿಚಾರಗಳಲ್ಲಿ ಕೇಂದ್ರ ಸರ್ಕಾರ ಮತ್ತು ಪಶ್ಚಿಮ ಬಂಗಾಳ ಸರ್ಕಾರದ ನಡುವೆ ಭಿನ್ನಾಭಿಪ್ರಾಯಗಳು ಕೇಳಿಬರುತ್ತಿದ್ದವು. ಆದರೆ, ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದ ಸುವೇಂದು ಅಧಿಕಾರಿ ನೇತೃತ್ವದ ಸರ್ಕಾರವು ಈ ಬಾರಿ ಬಿಎಸ್‌ಎಫ್‌ಗೆ ಭೂಮಿ ನೀಡಲು ಸಮ್ಮತಿಸಿದೆ. ಈ ಭೂಮಿ ಕೈಸೇರುತ್ತಿದ್ದಂತೆ ಬಿಎಸ್‌ಎಫ್ ಮತ್ತು ಕೇಂದ್ರ ಲೋಕೋಪಯೋಗಿ ಇಲಾಖೆಯು ಬೇಲಿ ನಿರ್ಮಾಣ ಕಾರ್ಯವನ್ನು ಆರಂಭಿಸಲಿವೆ. ಆಧುನಿಕ ತಂತ್ರಜ್ಞಾನದ ಫ್ಲಡ್‌ಲೈಟ್‌ಗಳು ಮತ್ತು ಕಣ್ಗಾವಲು ಕ್ಯಾಮೆರಾಗಳನ್ನು ಈ ಗಡಿ ಭಾಗದಲ್ಲಿ ಅಳವಡಿಸಲಾಗುವುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರಿನಲ್ಲಿ ಹಳೇ ಕಾಲದ ‘ಬಾಯ್ಲರ್ ಚಹಾ’ ಕುಡಿಯಬೇಕೇ?: ಹಾಗಾದ್ರೆ ವಸಂತನಗರದ ಈ ಸ್ಪಾಟ್‌ಗೆ ಒಮ್ಮೆ ವಿಸಿಟ್ ಕೊಡಿ! – Kannada News

ಬೆಂಗಳೂರು, ಜೂ.3: ಆಧುನಿಕ ಕೆಫೆಗಳು ಮತ್ತು ಕೃತಕ ಟೀ ಮೇಕರ್‌ಗಳ ಹಾವಳಿಯ ನಡುವೆ, ಬೆಂಗಳೂರಿನಲ್ಲಿ ಸಾಂಪ್ರದಾಯಿಕ ಟೀ ಬಾಯ್ಲರ್‌ನಲ್ಲಿ (Traditional Tea Boiler) ಹದವಾಗಿ ಕುದಿಸಿದ ಚಹಾದ ಅಪ್ಪಟ ರುಚಿಯನ್ನು ಹುಡುಕುವುದು ಈಗ ನಿಜಕ್ಕೂ ಅಪರೂಪದ ಸಂಗತಿಯಾಗಿದೆ. ಆದರೆ, ಹಳೇ ಕಾಲದ ಆ ಅದ್ಭುತ ರುಚಿ ಮತ್ತು ಫೀಲ್ ಅನ್ನು ಇಂದಿಗೂ ಯಥಾವತ್ತಾಗಿ ಉಳಿಸಿಕೊಂಡು ಬಂದಿದೆ ಬೆಂಗಳೂರಿನ ವಸಂತನಗರದಲ್ಲಿರುವ ಪ್ರಸಿದ್ಧ ‘ಮುರುಗನ್ ಟೀ ಸ್ಟಾಲ್’.

ಚಹಾ ಪ್ರಿಯರ ಪ್ರಕಾರ, ನಾರ್ಮಲ್ ಪಾತ್ರೆಯಲ್ಲಿ ಮಾಡುವ ಚಹಾಕ್ಕಿಂತಲೂ, ತಾಮ್ರ ಅಥವಾ ಹಿತ್ತಾಳೆಯ ಸಾಂಪ್ರದಾಯಿಕ ದೊಡ್ಡ ಬಾಯ್ಲರ್‌ಗಳಲ್ಲಿ ನಿರಂತರವಾಗಿ ಕುದಿಯುವ ನೀರಿನಲ್ಲಿ ತಯಾರಾಗುವ ಚಹಾದ ರುಚಿಯೇ ಬೇರೆ. ವಸಂತನಗರದ ಈ ಸಣ್ಣ ಟೀ ಅಂಗಡಿಯಲ್ಲಿ ಇಂದಿಗೂ ಅದೇ ಸಾಂಪ್ರದಾಯಿಕ ಶೈಲಿಯನ್ನು ಬಳಸಲಾಗುತ್ತಿದ್ದು, ಇಲ್ಲಿನ ಒಂದು ಬಿಸಿ ಬಿಸಿ ಕಪ್ ಚಹಾ ಕುಡಿಯಲು ನಗರದ ಮೂಲೆ ಮೂಲೆಗಳಿಂದ ಜನ ಆಗಮಿಸುತ್ತಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ದೇಶದ ಮೊದಲ ‘ಡಬಲ್ ಡೆಕ್ಕರ್’ ಸಾರಿಗೆ: ಒಂದೇ ಮಾರ್ಗದಲ್ಲಿ ಮೆಟ್ರೋ ಮತ್ತು ಸಬರ್ಬನ್ ರೈಲು; 169 ಕೋಟಿ ರೂ. ಉಳಿತಾಯ!

ಇಲ್ಲಿದೆ ನೋಡಿ ಪೋಸ್ಟ್​​;

ಇಂದು ರಾಜಧಾನಿಯ ಹೃದಯಭಾಗವಾದ ‘ವಿಧಾನ ಸೌಧ’ದ ಸುತ್ತಮುತ್ತಲಿನ ಅದ್ಭುತ ವಾತಾವರಣ, ಹಸಿರು ಮತ್ತು ಸಾಂಸ್ಕೃತಿಕ ವೈಬ್ಸ್ ಅನ್ನು ಆನಂದಿಸಲು ಹೊರಡುವ ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ಈ ಮುರುಗನ್ ಸ್ಟಾಲ್‌ನ ಬಿಸಿ ಚಹಾ ಒಂದು ಪರ್ಫೆಕ್ಟ್ ಎನರ್ಜಿ ಬೂಸ್ಟರ್ ಆಗಿದೆ. ಕಾವೇರಿ ಕಾಂಪ್ಲೆಕ್ಸ್ ಅಥವಾ ವಸಂತನಗರದ ಕಡೆಯಿಂದ ಬರುವವರು ಇಲ್ಲಿ ಒಂದು ಕಪ್ ಬಾಯ್ಲರ್ ಟೀ ಸವಿದು, ನಂತರ ಅಲ್ಲಿಂದಲೇ ಹತ್ತಿರವಿರುವ ವಿಧಾನ ಸೌಧದ ಸೌಂದರ್ಯವನ್ನು ಕಣ್ಣುಂಬಿಕೊಳ್ಳಲು ಸಾಗುವುದು ಚಹಾ ಪ್ರಿಯರ ಇಂದಿನ ನೆಚ್ಚಿನ ದಿನಚರಿಯಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ

ಡಿಕೆ ಶಿವಕುಮಾರ್ (DK Shivakumar) ಅವರು ಇಂದು (ಜೂನ್ 3) ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ರಾಜ್ಯ ಮತ್ತು ಕೆಲ ನೆರೆ ರಾಜ್ಯಗಳ ರಾಜಕೀಯ ಮುಖಂಡರು, ಗಣ್ಯರನ್ನು ಆಹ್ವಾನಿಸಲಾಗಿದೆ. ಕನ್ನಡ ಚಿತ್ರರಂಗದ ಕೆಲವು ಸೆಲೆಬ್ರಿಟಿಗಳಿಗೂ ಸಹ ಆಹ್ವಾನವಿದೆ. ನಟಿ ರಮ್ಯಾ ಅವರು ಈ ಹಿಂದೆ ಕಾಂಗ್ರೆಸ್ ಸಂಸದೆ ಆಗಿದ್ದವರು, ಈಗ ಸಕ್ರಿಯ ರಾಜಕೀಯದಿಂದ ದೂರ ಇದ್ದರೂ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿದ್ದಾರೆ. ಡಿಕೆ ಶಿವಕುಮಾರ್ ಅವರಿಗೆ ಆಪ್ತರೂ ಆಗಿರುವ ನಟಿ ರಮ್ಯಾ ಅವರು ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನದಲ್ಲಿ ಭಾಗವಹಿಸಲು ಖುಷಿಯಿಂದ ಆಗಮಿಸಿದರು. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

IND vs AFG: ಟೀಂ ಇಂಡಿಯಾಗೆ ಆಘಾತ; ಟೆಸ್ಟ್ ಪಂದ್ಯಕ್ಕೆ ಸ್ಟಾರ್ ವೇಗಿ ಅಲಭ್ಯ – Kannada News

2026 ರ ಐಪಿಎಲ್ (IPL 2026) ಆಡಿ ಮುಗಿಸಿರುವ ಟೀಂ ಇಂಡಿಯಾ  (Team India) ಆಟಗಾರರು ಇದೀಗ ರಾಷ್ಟ್ರೀಯ ಕರ್ತವ್ಯದತ್ತ ಗಮನಹರಿಸಲಿದ್ದಾರೆ. ಬಹಳ ದಿನಗಳ ಬಳಿಕ ಟೀಂ ಇಂಡಿಯಾ ಅಂತರರಾಷ್ಟ್ರೀಯ ಸರಣಿಯನ್ನು ಆಡಲು ಸಜ್ಜಾಗಿದೆ. ಅದರಂತೆ ಭಾರತ ಹಾಗೂ ಅಫ್ಘಾನಿಸ್ತಾನದ ನಡುವೆ ಇದೇ ಜೂನ್ 6 ರಿಂದ ಟೆಸ್ಟ್ ಪಂದ್ಯ ಶುರುವಾಗಬೇಕಿದೆ. ಆದಾಗ್ಯೂ ಈ ಪಂದ್ಯ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾಕ್ಕೆ ಹಿನ್ನಡೆಯುಂಟಾಗಿದೆ. ತಂಡದ ಅನುಭವಿ ಬೌಲರ್ ಮೊಹಮ್ಮದ್ ಸಿರಾಜ್ (Mohammed Siraj) ಈ ಟೆಸ್ಟ್ ಪಂದ್ಯದಲ್ಲಿ ಆಡುವ ಸಾಧ್ಯತೆ ಕಡಿಮೆ ಎಂದು ವರದಿಯಾಗಿದೆ. ಸಿರಾಜ್ ಪ್ರಸ್ತುತ ಗಾಯದಿಂದ ಬಳಲುತ್ತಿದ್ದು, ಚೇತರಿಕೆಗೆ ಸಮಯಬೇಕಾಗಿರುವುದರಿಂದ ಅವರು ಟೆಸ್ಟ್ ಪಂದ್ಯದಿಂದ ಹೊರಗುಳಿಯಬಹುದು.

ಐಪಿಎಲ್ 2026 ರ ಫೈನಲ್ ಸಮಯದಲ್ಲಿ ಸಿರಾಜ್ ಗಾಯಗೊಂಡಿದ್ದರು. ಆದರೆ ಇದರ ಹೊರತಾಗಿಯೂ ಸಿರಾಜ್ ಫೈನಲ್ ಪಂದ್ಯದಲ್ಲಿ ಬೌಲಿಂಗ್ ಮಾಡಿದ್ದರಯ. ಸಿರಾಜ್ ಬಲ ಭುಜದ ಗಾಯದಿಂದ ಬಳಲುತ್ತಿದ್ದು, ಬೌಲಿಂಗ್ ಮಾಡುವಾಗ ನೋವು ಅನುಭವಿಸುತ್ತಿದ್ದರು. ಈಗ, ನ್ಯೂ ಚಂಡೀಗಢ ಟೆಸ್ಟ್‌ನಲ್ಲಿ ಸಿರಾಜ್ ಭಾಗವಹಿಸುವುದು ಅನುಮಾನ ಎಂಬ ವರದಿಯಾಗಿದೆ. ಆದಾಗ್ಯೂ ಟೆಸ್ಟ್ ಪಂದ್ಯ ಆರಂಭಕ್ಕೂ ಮುನ್ನ ಸಿರಾಜ್ ಫಿಟ್ನೆಸ್ ಪರೀಕ್ಷೆಗೆ ಒಳಗಾಗಲಿದ್ದಾರೆ. ಆ ಪರೀಕ್ಷೆಯಲ್ಲಿ ಸಿರಾಜ್ ಪಾಸಾದರೆ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಪಂಜಾಬ್‌ ಬೌಲರ್​ಗೆ ಜಾಕ್​ಪಾಟ್

ಒಂದು ವೇಳೆ ಸಿರಾಜ್ ಆಡಲು ಅನರ್ಹ ಎಂಬ ಫಲಿತಾಂಶ ಬಂದರೆ, ಅವರ ಬದಲಿಗೆ ವೇಗದ ಬೌಲರ್ ಗುರ್ನೂರ್ ಬ್ರಾರ್ ತಂಡದಲ್ಲಿ ಆಡಬಹುದು ಎಂಬ ವರದಿಗಳಿವೆ. ಪಂಜಾಬ್‌ನ ಗುರ್ನೂರ್ ಬ್ರಾರ್ ದೇಶೀಯ ಕ್ರಿಕೆಟ್‌ನಲ್ಲಿ ಸರಾಸರಿ ಪ್ರದರ್ಶನ ನೀಡಿದ ಹೊರತಾಗಿಯೂ ಅವರನ್ನು ಟೀಂ ಇಂಡಿಯಾಕ್ಕೆ ಆಯ್ಕೆ ಮಾಡಲಾಗಿದೆ. ಬ್ರಾರ್ ಪಂಜಾಬ್ ಪರ ಇದುವರೆಗೆ 18 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 52 ವಿಕೆಟ್‌ಗಳನ್ನು ಪಡೆದಿದ್ದಾರೆ. ಅವರು ಒಂದು ಇನ್ನಿಂಗ್ಸ್‌ನಲ್ಲಿ ಒಮ್ಮೆ ಐದು ವಿಕೆಟ್‌ಗಳನ್ನು ಮತ್ತು ಮೂರು ಬಾರಿ ನಾಲ್ಕು ವಿಕೆಟ್‌ಗಳನ್ನು ಪಡೆದಿದ್ದಾರೆ. ಬ್ರಾರ್ 2025-26 ರ ರಣಜಿ ಟ್ರೋಫಿಯಲ್ಲಿ ಎರಡು ಟೆಸ್ಟ್ ಪಂದ್ಯಗಳನ್ನು ಆಡಿದ್ದು, ನಾಲ್ಕು ವಿಕೆಟ್‌ಗಳನ್ನು ಪಡೆದಿದ್ದಾರೆ.

ಆಕಿಬ್ ನಬಿಗೂ ಇದೇ ಅವಕಾಶ

ಗಾಯದ ಕಾರಣದಿಂದಾಗಿ ಮೊಹಮ್ಮದ್ ಸಿರಾಜ್ ಅಫ್ಘಾನಿಸ್ತಾನ ಟೆಸ್ಟ್ ಪಂದ್ಯದಿಂದ ಹೊರಗುಳಿದರೆ, ಅವರ ಸ್ಥಾನವನ್ನು ತುಂಬುವ ಅವಕಾಶ ಜಮ್ಮು ಮತ್ತು ಕಾಶ್ಮೀರದ ವೇಗದ ಬೌಲರ್ ಆಕಿಬ್ ನಬಿಗೂ ಇದೆ. ಕಳೆದ ರಣಜಿ ಟ್ರೋಫಿಯಲ್ಲಿ 60 ವಿಕೆಟ್‌ ಉರುಳಿಸಿದ್ದ ನಬಿ, ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದರು. ಇದರ ಹೊರತಾಗಿಯೂ, ಅವರನ್ನು ತಂಡಕ್ಕೆ ಆಯ್ಕೆ ಮಾಡಿರಲಿಲ್ಲ. ಆದರೆ ಮಂಗಳವಾರ ಅವರನ್ನು ಮೀಸಲು ಆಟಗಾರನಾಗಿ ತಂಡಕ್ಕೆ ಆಯ್ಕೆ ಮಾಡಲಾಗಿದ್ದು, ಅವರಿಗೂ ತಂಡದಲ್ಲಿ ಸ್ಥಾನ ಸಿಗುವ ಸಾಧ್ಯತೆಗಳಿವೆ.

IND vs AFG: ಭಾರತ ವಿರುದ್ಧದ ಟೆಸ್ಟ್ ಹಾಗೂ ಏಕದಿನ ಸರಣಿಗೆ ಅಫ್ಘಾನಿಸ್ತಾನ ತಂಡ ಪ್ರಕಟ

ಭಾರತ-ಅಫ್ಘಾನಿಸ್ತಾನ ಸರಣಿ

  • ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಏಕೈಕ ಟೆಸ್ಟ್ ಪಂದ್ಯ ಜೂನ್ 6 ರಿಂದ ನ್ಯೂ ಚಂಡೀಗಢದಲ್ಲಿ ನಡೆಯಲಿದೆ.
  • ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಜೂನ್ 13 ರಂದು ಧರ್ಮಶಾಲಾದಲ್ಲಿ ನಡೆಯಲಿದೆ.
  • ಎರಡನೇ ಏಕದಿನ ಪಂದ್ಯ ಜೂನ್ 17 ರಂದು ಲಕ್ನೋದಲ್ಲಿ ನಡೆಯಲಿದೆ.
  • ಮೂರನೇ ಏಕದಿನ ಪಂದ್ಯ ಜೂನ್ 20 ರಂದು ಚೆನ್ನೈನಲ್ಲಿ ನಡೆಯಲಿದೆ. ಎಲ್ಲಾ ಪಂದ್ಯಗಳು ಹಗಲು-ರಾತ್ರಿ ಪಂದ್ಯಗಳಾಗಿರುತ್ತವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

PSB Apprentice Jobs 2026: ಬ್ಯಾಂಕಿಂಗ್ ಉದ್ಯೋಗ ಪಡೆಯಲು ಇಲ್ಲಿದೆ ಸುವರ್ಣಾವಕಾಶ; 635 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ! – Kannada News

ಬ್ಯಾಂಕಿಂಗ್ ಉದ್ಯೋಗದ ಸುವರ್ಣಾವಕಾಶImage Credit source: Pinterest

ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗದ ಹುಡುಕಾಟದಲ್ಲಿರುವ ಭಾರತೀಯ ಯುವಜನತೆಗೆ ಪಂಜಾಬ್ ಮತ್ತು ಸಿಂಧ್​​ ಬ್ಯಾಂಕ್ (Punjab & Sind Bank) ಭರ್ಜರಿ ಕೊಡುಗೆಯೊಂದನ್ನು ನೀಡಿದೆ. ಬ್ಯಾಂಕು ಪ್ರಸ್ತುತ ದೇಶಾದ್ಯಂತ ಇರುವ ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಒಟ್ಟು 635 ಅಪ್ರೆಂಟಿಸ್ (Apprentice) ಹುದ್ದೆಗಳ ಭರ್ತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಬ್ಯಾಂಕಿಂಗ್ ರಂಗದಲ್ಲಿ ತಮ್ಮ ವೃತ್ತಿಜೀವನವನ್ನು ಆರಂಭಿಸಲು ಬಯಸುವ ಪದವೀಧರರಿಗೆ ಇದೊಂದು ಅತ್ಯುತ್ತಮ ವೇದಿಕೆಯಾಗಿದೆ.

ಯಾರೆಲ್ಲಾ ಅರ್ಜಿ ಸಲ್ಲಿಸಬಹುದು?

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಶಿಕ್ಷಣ ಸಂಸ್ಥೆಯಿಂದ ಯಾವುದೇ ವಿಷಯದಲ್ಲಿ ಕಡ್ಡಾಯವಾಗಿ ಪದವಿ (Graduate) ಶಿಕ್ಷಣವನ್ನು ಪೂರ್ಣಗೊಳಿಸಿರಬೇಕು. ಯಾವುದೇ ಮಾನ್ಯತೆ ಪಡೆದ ಡಿಗ್ರಿಯನ್ನು ಹೊಂದಿರುವ ಯುವಕ-ಯುವತಿಯರು ಈ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.

ವಯೋಮಿತಿಯ ನಿಯಮಗಳು ಏನು?

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ ವಯಸ್ಸಾಗಿರಬೇಕು ಮತ್ತು ಗರಿಷ್ಠ ವಯಸ್ಸು 28 ವರ್ಷಗಳ ಒಳಗಿರಬೇಕು. ಇನ್ನುಳಿದಂತೆ, ಸರ್ಕಾರದ ನಿಯಮಾವಳಿಗಳ ಪ್ರಕಾರ ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST) ಹಾಗೂ ಇತರ ಹಿಂದುಳಿದ ವರ್ಗಗಳ (OBC) ಅಭ್ಯರ್ಥಿಗಳಿಗೆ ನಿಯಮಾನುಸಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗುತ್ತದೆ.

ಇದನ್ನೂ ಓದಿ: Kerala: ನಿವೃತ್ತಿಯಾಗುವ ವಯಸ್ಸಲ್ಲಿ ಸಿಕ್ತು ಸರ್ಕಾರಿ ಕೆಲಸ; ಪರೀಕ್ಷೆ ಬರೆದ 20 ವರ್ಷಗಳ ನಂತರ ಬಂದ ನೇಮಕಾತಿ ಪತ್ರ!

ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ?

ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳದೆ ವ್ಯವಸ್ಥಿತವಾದ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ. ಮೊದಲ ಹಂತದಲ್ಲಿ ಅಭ್ಯರ್ಥಿಗಳಿಗೆ ಆನ್‌ಲೈನ್ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಇದರಲ್ಲಿ ಉತ್ತೀರ್ಣರಾದವರಿಗೆ ಆಯಾ ರಾಜ್ಯದ ಸ್ಥಳೀಯ ಭಾಷಾ ಪರೀಕ್ಷೆಯನ್ನು (Local Language Test) ನಡೆಸಲಾಗುತ್ತದೆ. ಅಭ್ಯರ್ಥಿಗಳು ತಾವು ಅರ್ಜಿ ಸಲ್ಲಿಸುವ ರಾಜ್ಯದ ಪ್ರಾದೇಶಿಕ ಭಾಷೆಯನ್ನು ಓದಲು, ಬರೆಯಲು ಮತ್ತು ಮಾತನಾಡಲು ಕಡ್ಡಾಯವಾಗಿ ತಿಳಿದಿರಬೇಕಾಗುತ್ತದೆ. ಕೊನೆಯ ಹಂತದಲ್ಲಿ ದಾಖಲೆಗಳ ಪರಿಶೀಲನೆ ಇರಲಿದೆ.

ಅರ್ಜಿ ಸಲ್ಲಿಸುವ ವಿಧಾನ:

ಅರ್ಹ ಅಭ್ಯರ್ಥಿಗಳು ಪಂಜಾಬ್ ಮತ್ತು ಸಿಂಧ್ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಆನ್‌ಲೈನ್ ಮಾದರಿಯಲ್ಲಿಯೇ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕಾಗುತ್ತದೆ. ಆನ್‌ಲೈನ್ ಲಿಂಕ್ ಈಗಾಗಲೇ ಲಭ್ಯವಿದ್ದು, ನಿಗದಿಪಡಿಸಿದ ಕೊನೆಯ ದಿನಾಂಕ ಜೂನ್ 06ರ ಒಳಗಾಗಿ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ, ಅರ್ಜಿ ಶುಲ್ಕವನ್ನು ಪಾವತಿಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಾಗಿ ಬ್ಯಾಂಕ್ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಭಾರತದ ಸೇವಾ ಕ್ಷೇತ್ರದಲ್ಲಿ ಹೊಸ ಹುರುಪು; ಮೇ ತಿಂಗಳ ಸರ್ವಿಸ್ ಸೆಕ್ಟರ್ ಪಿಎಂಐ 6 ತಿಂಗಳ ಗರಿಷ್ಠ ಮಟ್ಟಕ್ಕೆ – Kannada News

ನವದೆಹಲಿ, ಜೂನ್ 3: ಭಾರತದ ಆರ್ಥಿಕತೆಗೆ ಸೇವಾ ವಲಯದಿಂದ (Services Sector) ಮತ್ತೊಂದು ಅತ್ಯಂತ ಆಶಾದಾಯಕ ಸುದ್ದಿ ಹೊರಬಿದ್ದಿದೆ. ಬಲವಾದ ದೇಶೀಯ ಬೇಡಿಕೆ ಮತ್ತು ಹೊಸ ಉದ್ಯೋಗಾವಕಾಶಗಳ ಸೃಷ್ಟಿಯಿಂದಾಗಿ ಭಾರತದ ಸೇವಾ ವಲಯದ ಬೆಳವಣಿಗೆಯು ಮೇ ತಿಂಗಳಲ್ಲಿ ಕಳೆದ 6 ತಿಂಗಳಲ್ಲೇ ಅತ್ಯಂತ ಗರಿಷ್ಠ ಮಟ್ಟವನ್ನು ತಲುಪಿದೆ. ಎಚ್‌ಎಸ್‌ಬಿಸಿ (HSBC) ಸಂಸ್ಥೆಯು ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶಗಳ ಪ್ರಕಾರ, ಭಾರತದ ಸೇವಾ ವಲಯದ ‘ಖರೀದಿ ವ್ಯವಸ್ಥಾಪಕರ ಸೂಚ್ಯಂಕ’ (Purchasing Managers’ Index – PMI) ಏಪ್ರಿಲ್ ತಿಂಗಳಲ್ಲಿದ್ದ 60.8 ಅಂಕಗಳಿಂದ ಮೇ ತಿಂಗಳಲ್ಲಿ ಗರಿಷ್ಠ ಮಟ್ಟಕ್ಕೆ ಜಿಗಿದಿದೆ.

ಏನಿದು ಪಿಎಂಐ (PMI) ಸೂಚ್ಯಂಕ?

ಪಿಎಂಐ (PMI) ಎಂಬುದು ಆರ್ಥಿಕತೆಯ ಆರೋಗ್ಯವನ್ನು ಅಳೆಯುವ ಒಂದು ಪ್ರಮುಖ ಸೂಚ್ಯಂಕವಾಗಿದೆ. ಸರಕುಗಳ ಓಡಾಟವಾಗುವ ಸಪ್ಲೈ ಚೈನ್​ನ ಮ್ಯಾನೇಜರ್​ಗಳ ಮಾಸಿಕ ಸಮೀಕ್ಷೆ ನಡೆಸಿ ಈ ಇಂಡೆಕ್ಸ್ ಅಪ್​ಡೇಟ್ ಮಾಡಲಾಗುತ್ತದೆ. ಹೊಸ ವರ್ಕ್ ಆರ್ಡರ್​ಗಳು, ಉತ್ಪಾದನೆ, ಉದ್ಯೋಗ, ಸರಬರಾಜು ಅವಧಿ ಮತ್ತು ಸರಕುಗಳ ಸಂಗ್ರಹ, ಈ ಅಂಶಗಳನ್ನು ಪರಿಗಣಿಸಲಾಗುತ್ತದೆ.

ಆರ್ಥಿಕ ತಜ್ಞರ ಪ್ರಕಾರ, ಪಿಎಂಐ ಸೂಚ್ಯಂಕವು 50 ಕ್ಕಿಂತ ಹೆಚ್ಚಿದ್ದರೆ ಅದು ಆ ವಲಯದ ಬೆಳವಣಿಗೆ ಅಥವಾ ವಿಸ್ತರಣೆಯನ್ನು (Expansion) ತೋರಿಸುತ್ತದೆ. ಪಿಎಂಐ ಇಂಡೆಕ್ಸ್ 50 ಕ್ಕಿಂತ ಕಡಿಮೆ ಇದ್ದರೆ ಅದು ಆರ್ಥಿಕ ಕುಸಿತವನ್ನು (Contraction) ಸೂಚಿಸುತ್ತದೆ.

ಭಾರತದ ಸರ್ವಿಸ್ ಸೆಕ್ಟರ್ ಪಿಎಂಐ ಸತತವಾಗಿ 50 ರ ಮಟ್ಟಕ್ಕಿಂತ ಮೇಲೆಯೇ ಉಳಿದುಕೊಂಡು ಬಂದಿದ್ದು, ದೇಶದ ಸೇವಾ ವಲಯವು ಬಲಿಷ್ಠವಾದ ಹಾದಿಯಲ್ಲಿ ಸಾಗುತ್ತಿರುವುದನ್ನು ಇದು ಸಾಬೀತುಪಡಿಸಿದೆ.

ಇದನ್ನೂ ಓದಿ: ಫಾರೆಕ್ಸ್​ನ ಚಿನ್ನ ಮಾರಿರುವ ಸುದ್ದಿ ಸುಳ್ಳು ಎಂದ ಸರ್ಕಾರ; ದೇಶದ ಬಂಗಾರದ ದಾಸ್ತಾನು 880.52 ಟನ್‌ಗಳಷ್ಟು ಸುರಕ್ಷಿತವಂತೆ

ಬೆಳವಣಿಗೆಗೆ ಪ್ರಮುಖ ಕಾರಣಗಳೇನು?

  • ಬಲವಾದ ದೇಶೀಯ ಬೇಡಿಕೆ: ದೇಶದ ಒಳಗಡೆ ಹಣಕಾಸು, ವಿಮೆ, ರಿಯಲ್ ಎಸ್ಟೇಟ್, ಮಾಹಿತಿ ತಂತ್ರಜ್ಞಾನ (IT) ಮತ್ತು ಪ್ರವಾಸೋದ್ಯಮದಂತಹ ಪ್ರಮುಖ ಸೇವೆಗಳಿಗೆ ಗ್ರಾಹಕರಿಂದ ಭಾರಿ ಬೇಡಿಕೆ ವ್ಯಕ್ತವಾಗಿದೆ.
  • ಹೊಸ ಉದ್ಯಮಗಳ ಸೃಷ್ಟಿ: ಮೇ ತಿಂಗಳಲ್ಲಿ ಹೊಸ ಆರ್ಡರ್‌ಗಳ ಪ್ರಮಾಣವು ತೀವ್ರ ಗತಿಯಲ್ಲಿ ಹೆಚ್ಚಾಗಿದ್ದು, ಕಂಪನಿಗಳು ತಮ್ಮ ಉದ್ಯಮ ವ್ಯಾಪ್ತಿಯನ್ನು ವಿಸ್ತರಿಸಲು ಮುಂದಾಗಿವೆ.
  • ಉದ್ಯೋಗಾವಕಾಶಗಳ ಹೆಚ್ಚಳ: ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಮತ್ತು ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ಸೇವಾ ವಲಯದ ಕಂಪನಿಗಳು ಹೊಸ ಸಿಬ್ಬಂದಿಗಳನ್ನು ದೊಡ್ಡ ಪ್ರಮಾಣದಲ್ಲಿ ನೇಮಕ ಮಾಡಿಕೊಂಡಿವೆ. ಇದು ಉದ್ಯೋಗ ಮಾರುಕಟ್ಟೆಗೆ ಸಕಾರಾತ್ಮಕ ಶಕ್ತಿ ನೀಡಿದೆ.
  • ವಿದೇಶಿ ಬೇಡಿಕೆಯೂ ಉತ್ತಮ: ದೇಶೀಯ ಮಾರುಕಟ್ಟೆಯ ಜೊತೆಗೆ, ಏಷ್ಯಾ, ಯುರೋಪ್ ಮತ್ತು ಅಮೆರಿಕದ ಮಾರುಕಟ್ಟೆಗಳಿಂದಲೂ ಭಾರತೀಯ ಸೇವೆಗಳಿಗೆ ಉತ್ತಮ ಜಾಗತಿಕ ಬೇಡಿಕೆ (International Demand) ಮುಂದುವರಿದಿದೆ.

ಇದನ್ನೂ ಓದಿ: ಅಮೆರಿಕ ಹೊಸ ‘ವರಸೆ’; ಫೋರ್ಸ್ಡ್ ಲೇಬರ್ ಹೆಸರಲ್ಲಿ ಭಾರತ ಸೇರಿ 60 ದೇಶಗಳ ಮೇಲೆ ಶೇ. 12.5 ಹೆಚ್ಚುವರಿ ಸುಂಕಕ್ಕೆ ಯೋಜನೆ

ಉದ್ಯಮ ವಲಯದ ವಿಶ್ವಾಸ ಮತ್ತು ಭವಿಷ್ಯ

ಬೆಲೆ ಏರಿಕೆಯ (ಹಣದುಬ್ಬರ) ಒತ್ತಡಗಳ ನಡುವೆಯೂ ಕಂಪನಿಗಳ ವೆಚ್ಚ ನಿರ್ವಹಣೆ ಉತ್ತಮವಾಗಿದೆ ಎಂದು ವರದಿ ಹೇಳಿದೆ. ಮುಂಬರುವ ದಿನಗಳಲ್ಲಿ ಉದ್ಯಮದ ಸ್ಥಿತಿಗತಿಗಳು ಇನ್ನಷ್ಟು ಉತ್ತಮಗೊಳ್ಳಲಿವೆ ಎಂಬ ದೃಢವಾದ ವಿಶ್ವಾಸವನ್ನು ಸೇವಾ ವಲಯದ ಉದ್ಯಮಿಗಳು ವ್ಯಕ್ತಪಡಿಸಿದ್ದಾರೆ.

ಭಾರತದ ಒಟ್ಟು ದೇಶೀಯ ಉತ್ಪನ್ನಕ್ಕೆ (GDP) ಶೇಕಡಾ 50 ಕ್ಕಿಂತ ಹೆಚ್ಚು ಕೊಡುಗೆ ನೀಡುವ ಸೇವಾ ವಲಯದ ಈ ಭರ್ಜರಿ ಪ್ರಗತಿಯು, ಇಡೀ ದೇಶದ ಆರ್ಥಿಕತೆಯು ಮುಂಬರುವ ತ್ರೈಮಾಸಿಕಗಳಲ್ಲಿ ವೇಗವಾಗಿ ಮುನ್ನಡೆಯಲು ಬಲವಾದ ಅಡಿಪಾಯ ಹಾಕಿಕೊಟ್ಟಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಅಹಮದಾಬಾದ್‌ನಲ್ಲಿ ಅಕ್ರಮವಾಗಿ ನೆಲೆಸಿದ್ದ 166 ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧನ – Kannada News

ಅಹಮದಾಬಾದ್, ಜೂನ್ 3: ಗುಜರಾತ್‌ನ ಅಹಮದಾಬಾದ್‌ನಲ್ಲಿ ಭದ್ರತಾ ಸಂಸ್ಥೆಗಳು ಮತ್ತು ಸ್ಥಳೀಯ ಪೊಲೀಸರು ಜಂಟಿಯಾಗಿ ನಡೆಸಿದ ಬೃಹತ್ ಕಾರ್ಯಾಚರಣೆಯಲ್ಲಿ ಭಾರತದಲ್ಲಿ ಯಾವುದೇ ದಾಖಲೆಗಳಿಲ್ಲದೆ ಅಕ್ರಮವಾಗಿ ವಾಸಿಸುತ್ತಿದ್ದ ಬರೋಬ್ಬರಿ 166 ಬಾಂಗ್ಲಾದೇಶಿ (Bangladesh) ಪ್ರಜೆಗಳನ್ನು ಬಂಧಿಸಲಾಗಿದೆ. ಅಹಮದಾಬಾದ್​​ನ ವಿವಿಧ ಭಾಗಗಳಲ್ಲಿ ಇವರು ಅಕ್ರಮವಾಗಿ ನೆಲೆಸಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿ ಈ ಜಾಲವನ್ನು ಪತ್ತೆಹಚ್ಚಿದ್ದಾರೆ.

ಅಹಮದಾಬಾದ್ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿ ವಿದೇಶಿ ಪ್ರಜೆಗಳ ಚಟುವಟಿಕೆಗಳ ಮೇಲೆ ತೀವ್ರ ನಿಗಾ ಇಡಲಾಗಿತ್ತು. ನಗರದ ನಿರ್ಮಾಣ ಪ್ರದೇಶಗಳು, ಕೈಗಾರಿಕಾ ವಲಯಗಳು ಮತ್ತು ಬಾಡಿಗೆ ಮನೆಗಳಲ್ಲಿ ಹಲವು ಬಾಂಗ್ಲಾದೇಶಿ ಪ್ರಜೆಗಳು ನಕಲಿ ಗುರುತಿನ ಚೀಟಿಗಳನ್ನು ಬಳಸಿಕೊಂಡು ವಾಸಿಸುತ್ತಿದ್ದಾರೆ ಎಂಬ ರಹಸ್ಯ ಮಾಹಿತಿ ಪೊಲೀಸರಿಗೆ ಲಭಿಸಿತ್ತು.

ಇದನ್ನೂ ಓದಿ: Kerala: ನಿವೃತ್ತಿಯಾಗುವ ವಯಸ್ಸಲ್ಲಿ ಸಿಕ್ತು ಸರ್ಕಾರಿ ಕೆಲಸ; ಪರೀಕ್ಷೆ ಬರೆದ 20 ವರ್ಷಗಳ ನಂತರ ಬಂದ ನೇಮಕಾತಿ ಪತ್ರ!

ಈ ಮಾಹಿತಿಯ ಆಧಾರದ ಮೇಲೆ ವಿಶೇಷ ಪೊಲೀಸ್ ತಂಡಗಳು ಹಾಗೂ ಅಪರಾಧ ವಿಭಾಗದ ಅಧಿಕಾರಿಗಳು ನಗರದ ಪ್ರಮುಖ ಪ್ರದೇಶಗಳಲ್ಲಿ ಹಠಾತ್ ಜಂಟಿ ತಪಾಸಣೆ ನಡೆಸಿದರು. ಈ ವೇಳೆ ಸಿಕ್ಕಿಬಿದ್ದವರ ಪಾಸ್‌ಪೋರ್ಟ್ ಹಾಗೂ ವೀಸಾ ದಾಖಲೆಗಳನ್ನು ಪರಿಶೀಲಿಸಿದಾಗ, ಅವೆಲ್ಲವೂ ನಕಲಿ ಅಥವಾ ಯಾವುದೇ ದಾಖಲೆಗಳೇ ಇಲ್ಲದಿರುವುದು ಬೆಳಕಿಗೆ ಬಂದಿದೆ.

ನಕಲಿ ದಾಖಲೆಗಳ ಸೃಷ್ಟಿ:

ಪ್ರಾಥಮಿಕ ತನಿಖೆಯ ಪ್ರಕಾರ, ಬಂಧಿತ ಬಾಂಗ್ಲಾದೇಶಿ ಪ್ರಜೆಗಳು ಗಡಿ ದಾಟಿ ಭಾರತದೊಳಗೆ ನುಸುಳಲು ಮತ್ತು ಇಲ್ಲಿ ನೆಲೆಸಲು ದಲ್ಲಾಳಿಗಳ ಸಹಾಯ ಪಡೆದಿದ್ದರು ಎನ್ನಲಾಗಿದೆ. ಭಾರತದಲ್ಲಿ ಸಣ್ಣಪುಟ್ಟ ಕೆಲಸ ಗಿಟ್ಟಿಸಿಕೊಳ್ಳಲು ಇವರು ನಕಲಿ ಆಧಾರ್ ಕಾರ್ಡ್, ವೋಟರ್ ಐಡಿ ಹಾಗೂ ಪ್ಯಾನ್ ಕಾರ್ಡ್‌ಗಳನ್ನು ಸೃಷ್ಟಿಸಿಕೊಂಡಿದ್ದರು. ಈ ನಕಲಿ ದಾಖಲೆಗಳನ್ನು ಒದಗಿಸಿ ಇವರು ಸ್ಥಳೀಯವಾಗಿ ಮನೆಗಳನ್ನು ಬಾಡಿಗೆಗೆ ಪಡೆದುಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ 166 ವಿದೇಶಿ ಪ್ರಜೆಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ. ಇವರಿಗೆ ಭಾರತದ ಗಡಿ ದಾಟಲು ನೆರವು ನೀಡಿದ ಅಂತಾರಾಷ್ಟ್ರೀಯ ದಲ್ಲಾಳಿಗಳು ಮತ್ತು ಸ್ಥಳೀಯವಾಗಿ ನಕಲಿ ದಾಖಲೆಗಳ ವ್ಯವಸ್ಥೆ ಮಾಡಿಕೊಟ್ಟ ಜಾಲದ ಪತ್ತೆಗೆ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

ಇದನ್ನೂ ಓದಿ: ಸಿಬಿಎಸ್‌ಇ ನೂತನ ಅಧ್ಯಕ್ಷರಾಗಿ ಐಎಎಸ್​ ಅಧಿಕಾರಿ ಲೋಖಂಡೆ ಸೀತಾರಾಮ್ ನೇಮಕ

ಕಾನೂನು ಪ್ರಕ್ರಿಯೆಗಳು ಮುಗಿದ ನಂತರ, ವಿದೇಶಾಂಗ ಸಚಿವಾಲಯದ ನಿಯಮಾವಳಿಗಳ ಪ್ರಕಾರ ಇವರನ್ನು ಮರಳಿ ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದ ಅಹಮದಾಬಾದ್ ಪೊಲೀಸರು ನಡೆಸಿರುವ ಈ ಕಾರ್ಯಾಚರಣೆ ಅತ್ಯಂತ ಮಹತ್ವದ್ದಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಒಂದೇ ನೋಟೀಸ್​​ಗೆ ರಣ್ವೀರ್ ಮೇಲಿನ ನಿಷೇಧ ಹಿಂಪಡೆದ ಒಕ್ಕೂಟ: ಹೇಳಿದ್ದೇನು? – Kannada News

ಫೆಡರೇಶನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲಾಯೀಸ್ (FWICE), ನಟ ರಣವೀರ್ ಸಿಂಗ್ (Ranveer Singh) ನಿಷೇಧ ಹೇರಿತ್ತು. ಆದರೆ ಇಂದು (ಜೂನ್ 03) ಆ ನಿಷೇಧವನ್ನು ಹಿಂಪಡೆದಿದೆ. ಫರ್ಹಾನ್ ಅಖ್ತರ್ ನಿರ್ಮಾಣದ ‘ಡಾನ್ 3’ ಚಿತ್ರದಿಂದ ಹೊರನಡೆದು ಒಪ್ಪಂದ ಮುರಿದ ರಣ್ವೀರ್ ವಿರುದ್ಧ ‘ಅಸಹಕಾರ’ವನ್ನು ಸಿನಿ ನೌಕರರ ಒಕ್ಕೂಟ ಘೋಷಿಸಿತ್ತು. ಈ ಬಗ್ಗೆ ಸಾಕಷ್ಟು ಚರ್ಚೆಗಳು ಚಿತ್ರರಂಗದಲ್ಲಿ ಉಂಟಾಗಿದ್ದು, ಕೆಲವರು ರಣ್ವೀರ್ ಸಿಂಗ್ ಅವರಿಗೆ ಬೆಂಬಲ ಸೂಚಿಸಿದ್ದರು. ನಿನ್ನೆಯಷ್ಟೆ ನಟ ರಣ್ವೀರ್ ಸಿಂಗ್ ಅವರು ತಮ್ಮ ವಿರುದ್ಧ ನಿಷೇಧ ಹೇರಿದ್ದ ಒಕ್ಕೂಟಕ್ಕೆ ಕಾನೂನಾತ್ಮಕವಾಗಿ ನೊಟೀಸ್ ಸಹ ನೀಡಿದ್ದರು. ಅದರ ಬೆನ್ನಲ್ಲೇ ಇದೀಗ ಒಕ್ಕೂಟವು ನಿಷೇಧವನ್ನು ಹಿಂಪಡೆದಿದೆ.

ಹಠಾತ್ತನೆ ನಿಷೇಧ ಹಿಂಪಡೆದ ಬಳಿಕ ಈ ಬಗ್ಗೆ ಮಾಹಿತಿ ನೀಡಿರುವ ಒಕ್ಕೂಟವು, ತಾವು ರಣ್ವೀರ್ ಅವರು ನೀಡಿರುವ ನೊಟೀಸ್​​ನ ಕಾರಣಕ್ಕ ನಿಷೇಧ ಹಿಂಪಡೆದಿಲ್ಲ ಬದಲಿಗೆ ಸಹವರ್ತಿ ಚಲನಚಿತ್ರ ಮಂಡಳಿಗಳಾದ ಇಂಡಿಯನ್ ಮೋಷನ್ ಪಿಕ್ಚರ್ ಪ್ರೊಡ್ಯೂಸರ್ಸ್ ಅಸೋಸಿಯೇಷನ್ (IMPPA) ಮತ್ತು ಸಿನಿ ಅಂಡ್ ಟಿವಿ ಆರ್ಟಿಸ್ಟ್ಸ್ ಅಸೋಸಿಯೇಷನ್ (CINTAA) ಮನವಿಯ ಮೇರೆಗೆ ಈ ನಿರ್ಧಾರವನ್ನು ತೆಗೆದುಕೊಳ್ಳುತ್ತಿರುವುದಾಗಿ ಅದು ಹೇಳಿದೆ. ರಣ್ವೀರ್ ಸಿಂಗ್ ನೀಡಿರುವ ಕಾನೂನು ನೋಟಿಸ್‌ಗೆ ತಮ್ಮ ಕಾನೂನು ತಂಡವು ಉತ್ತರಿಸಲಿದೆ ಎಂದು ಒಕ್ಕೂಟ ಹೇಳಿದೆ.

ರಣ್ವೀರ್ ಸಿಂಗ್ ವಿರುದ್ಧ ನಾವು ಅಸಹಕಾರ (ಅನಧಿಕೃತ ನಿಷೇಧ) ಘೋಷಿಸಿದ ಬಳಿಕ ನಾವು ಇತರ ಚಲನಚಿತ್ರ ಮಂಡಳಿಗಳನ್ನು ಸಂಪರ್ಕಿಸಿ ಅವರ ಬೆಂಬಲವನ್ನು ಕೋರಿದ್ದೆವು. ನಮಗೆ ಇಂಡಿಯನ್ ಮೋಷನ್ ಪಿಕ್ಚರ್ ಪ್ರೊಡ್ಯೂಸರ್ಸ್ ಅಸೋಸಿಯೇಷನ್ ಮತ್ತು ಪ್ರೊಡ್ಯೂಸರ್ಸ್ ಗಿಲ್ಡ್ ಆಫ್ ಇಂಡಿಯಾದಿಂದ ಪ್ರತಿಕ್ರಿಯೆಗಳು ಬಂದಿವೆ. ಕೊನೆಯ ಕ್ಷಣದಲ್ಲಿ ರಣವೀರ್, ‘ಡಾನ್ 3’ ಚಿತ್ರದಿಂದ ಹಿಂದೆ ಸರಿದಿರುವುದು ಎಕ್ಸೆಲ್ ಎಂಟರ್‌ಟೈನ್‌ಮೆಂಟ್ ನಿರ್ಮಾಣ ಸಂಸ್ಥೆಗೆ ನಷ್ಟ ಉಂಟುಮಾಡಿರುವುದನ್ನು ಪ್ರೊಡ್ಯೂಸರ್ಸ್ ಗಿಲ್ಡ್ ಆಫ್ ಇಂಡಿಯಾ ಖಂಡಿಸಿದ್ದರೆ, ಚಲನಚಿತ್ರೋದ್ಯಮದ ಹಿತದೃಷ್ಟಿಯಿಂದ ಅಸಹಕಾರ ನಿರ್ದೇಶನವನ್ನು ಹಿಂಪಡೆಯುವಂತೆ ಇಂಪಾ (IMPPA) ವಿನಂತಿಸಿದೆ ಎಂದು ಫೆಡರೇಶನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲಾಯೀಸ್​​ನ ಪಂಡಿತ್ ಹೇಳಿದ್ದಾರೆ.

ಇದನ್ನೂ ಓದಿ:ರಣವೀರ್ ಸಿಂಗ್ ಪರ ಬ್ಯಾಟ್ ಬೀಸಿದ ಕಂಗನಾ ರಣಾವತ್; ‘ನನಗೂ ಹೀಗೇ ಆಗಿತ್ತು’ ಎಂದ ನಟಿ

‘ನಾವು ಯಾವುದೇ ಒತ್ತಡಕ್ಕೆ ಮಣಿದಿಲ್ಲ. ನಾವು 70 ವರ್ಷ ಹಳೆಯ ಸಂಸ್ಥೆಯಾಗಿದ್ದು, ಇಂತಹ ಅಸಂಖ್ಯಾತ ಕಾನೂನು ನೋಟಿಸ್‌ಗಳನ್ನು ಸ್ವೀಕರಿಸಿದ್ದೇವೆ. ಎಲ್ಲಾ ಸೌಹಾರ್ದಯುತವಾಗಿ ಮತ್ತು ಶೀಘ್ರವಾಗಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕೆಂದು ನಾವು ಬಯಸುತ್ತೇವೆ’ ಎಂದು FWICE ಅಧ್ಯಕ್ಷ ಬಿ.ಎನ್. ತಿವಾರಿ ತಿಳಿಸಿದ್ದಾರೆ. ‘ನಾವು ನಿರ್ದೇಶನವನ್ನು ಹೊರಡಿಸಿದ ನಂತರ ರಣವೀರ್ ಬರುತ್ತಾರೆ ಎಂದು ನಿರೀಕ್ಷಿಸಿದ್ದೆವು. ಆದರೆ ಅವರ ತಂಡ ಅವರಿಗೆ ತಪ್ಪು ದಾರಿ ತೋರಿಸಿದೆ’ ಎಂದು ಅವರು ಹೇಳಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Exit mobile version