IND vs ENG: ಭಾರತ- ಇಂಗ್ಲೆಂಡ್‌ ಪಂದ್ಯಕ್ಕೆ ಮಳೆ ಅಡ್ಡಿ? ಹೇಗಿರಲಿದೆ ಹವಾಮಾನ? – Kannada News | India vs England ODI: Birmingham Weather, Pitch Report and Head to Head Preview

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಜುಲೈ 14, ಮಂಗಳವಾರ ಆರಂಭವಾಗಲಿದೆ. ಈ ಸರಣಿಯ ಮೊದಲ ಪಂದ್ಯ ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್ ( Edgbaston) ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಉಭಯ ತಂಡಗಳು ಕೂಡ ಈ ಸರಣಿಗಾಗಿ ಸಕಲ ತಯಾರಿ ಮಾಡಿಕೊಂಡಿವೆ. ಅಲ್ಲದೆ ಆತಿಥೇಯ ಇಂಗ್ಲೆಂಡ್‌ ಕೂಡ ಈ ಸರಣಿಯ ಮೊದಲ ಪಂದ್ಯಕ್ಕಾಗಿ ತನ್ನ ಆಡುವ ಹನ್ನೊಂದರ ಬಳಗವನ್ನು ಸಹ ಪ್ರಕಟಿಸಿದೆ. ಆದರೆ ಟಿ20 ಸರಣಿಯ ಮೊದಲ ಪಂದ್ಯದಂತೆ ಏಕದಿನ ಸರಣಿಯ ಮೊದಲ ಪಂದ್ಯಕ್ಕೂ ಮಳೆ ಅಡ್ಡಿಪಡಿಸುತ್ತಾ ಎಂಬ ಆತಂಕ ಅಭಿಮಾನಿಗಳಲ್ಲಿ ಮೂಡಿದೆ. ಆದರೆ ಹವಾಮಾನ ಇಲಾಖೆ ನೀಡಿರುವ ವರದಿ ಅಭಿಮಾನಿಗಳನ್ನು ನಿರಾಳರನ್ನಾಗಿಸಿದೆ.

ಬರ್ಮಿಂಗ್‌ಹ್ಯಾಮ್‌ ಹವಾಮಾನ ಹೇಗಿರಲಿದೆ?

ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುವ ಮೊದಲ ಏಕದಿನ ಪಂದ್ಯದಲ್ಲಿ ಮಳೆಯಾಗುವ ಸಾಧ್ಯತೆ ಕೇವಲ ಶೇ. 1 ರಷ್ಟು ಮಾತ್ರ. ಇದರರ್ಥ ಈ ಪಂದ್ಯಕ್ಕೆ ಮಳೆಯಾಗುವ ಸಾಧ್ಯತೆ ಇಲ್ಲ. ಈ ಪಂದ್ಯದ ಸಮಯದಲ್ಲಿ ಮೋಡ ಕವಿದ ವಾತಾವರಣವಿರುತ್ತದೆ. ಇದರಿಂದ ಆಟಗಾರರು ಮೈದಾನದಲ್ಲಿ ಬಿಸಿಲಿನ ಬೇಗೆಯಲ್ಲಿ ಬಳಲುವ ಅವಕಶ್ಯಕತೆ ಇಲ್ಲ.

ಪಿಚ್ ಯಾರಿಗೆ ಸಹಕಾರಿ?

ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನ ಪಿಚ್ ಸಾಮಾನ್ಯವಾಗಿ ಬ್ಯಾಟ್ಸ್‌ಮನ್‌ಗಳು ಸುಲಭವಾಗಿ ರನ್ ಗಳಿಸಲು ಅನುವು ಮಾಡಿಕೊಡುತ್ತದೆ. ಆದಾಗ್ಯೂ, ಆಟ ಮುಂದುವರೆದಂತೆ, ಇದು ನಿಧಾನಗೊಳ್ಳುತ್ತದೆ, ಸ್ಪಿನ್ನರ್‌ಗಳು ಮತ್ತು ಬೌಲರ್‌ಗಳಿಗೆ ಕೊಂಚ ನೆರವು ಸಿಗಲಿದೆ. ಆದಾಗ್ಯೂ, ಮೊದಲು ಬ್ಯಾಟಿಂಗ್ ಮಾಡುವ ತಂಡವು ದೊಡ್ಡ ಮೊತ್ತವನ್ನು ಗಳಿಸಬಹುದು. ಹೀಗಾಗಿ ಟಾಸ್ ಗೆದ್ದ ನಾಯಕ ಮೊದಲು ಬ್ಯಾಟಿಂಗ್‌ ಆಯ್ದುಕೊಳ್ಳುವ ಸಾಧ್ಯತೆಗಳಿವೆ.

IND vs ENG: ಏಕದಿನ ಸರಣಿಯಲ್ಲಿ 7 ದಾಖಲೆಗಳ ಮೇಲೆ ಕಣ್ಣಿಟ್ಟ ಕಿಂಗ್ ಕೊಹ್ಲಿ

ಉಭಯ ತಂಡಗಳ ಮುಖಾಮುಖಿ

ಭಾರತ ಮತ್ತು ಇಂಗ್ಲೆಂಡ್ ಇದುವರೆಗೆ 110 ಏಕದಿನ ಪಂದ್ಯಗಳನ್ನು ಆಡಿವೆ. ಈ ಪೈಕಿ ಭಾರತ 61 ಪಂದ್ಯಗಳನ್ನು ಗೆದ್ದಿದ್ದರೆ, ಇಂಗ್ಲೆಂಡ್ 44 ಪಂದ್ಯಗಳನ್ನು ಗೆದ್ದಿದೆ. ಎರಡು ಪಂದ್ಯಗಳು ಟೈ ಆಗಿದ್ದರೆ, ಮೂರು ಪಂದ್ಯಗಳು ಡ್ರಾದಲ್ಲಿ ಕೊನೆಗೊಂಡಿವೆ. ಇಂಗ್ಲೆಂಡ್‌ನಲ್ಲಿ ಭಾರತದ ಪ್ರದರ್ಶನಕ್ಕೆ ಸಂಬಂಧಿಸಿದಂತೆ, ಭಾರತ ಇದುವರೆಗೆ 86 ಏಕದಿನ ಪಂದ್ಯಗಳನ್ನು ಆಡಿದ್ದು, 45 ಗೆದ್ದಿದ್ದರೆ, 37 ಪಂದ್ಯಗಳಲ್ಲಿ ಸೋತಿದೆ. ಒಂದು ಪಂದ್ಯ ಟೈ ಆಗಿದೆ, ಮತ್ತು ಮೂರು ಡ್ರಾ ಆಗಿದೆ. ಭಾರತ ಇದುವರೆಗೆ ಬರ್ಮಿಂಗ್ಹ್ಯಾಮ್‌ನಲ್ಲಿ 12 ಏಕದಿನ ಪಂದ್ಯಗಳನ್ನು ಆಡಿದ್ದು, ಎಂಟು ಪಂದ್ಯಗಳಲ್ಲಿ ಗೆದ್ದಿದ್ದರೆ, ನಾಲ್ಕು ಪಂದ್ಯಗಳಲ್ಲಿ ಸೋತಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಜಪಾನ್‌ನಲ್ಲಿ ಮೋಡಿ ಮಾಡಲು ‘ಧುರಂಧರ್ 2’ ವಿಫಲ; ಮೊದಲ ದಿನವೇ ಮುಗ್ಗರಿಸಿದ ಚಿತ್ರ – Kannada News | Ranveer Singh Dhurandhar Movie Box Office Collection Day 1 in Japan flops

ಬಾಲಿವುಡ್ ಸ್ಟಾರ್ ನಟ ರಣವೀರ್ ಸಿಂಗ್ (Ranveer Singh) ಅಭಿನಯದ ಸೂಪರ್ ಹಿಟ್ ‘ಧುರಂಧರ್’ (Dhurandhar) ಸಿನಿಮಾ ವಿಶ್ವಾದ್ಯಂತ ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸವನ್ನೇ ಸೃಷ್ಟಿಸಿತ್ತು. ಈ ಫ್ರಾಂಚೈಸಿಯ ಎರಡೂ ಸಿನಿಮಾಗಳು ಸೇರಿ ಬರೋಬ್ಬರಿ 3,100 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿ ಧೂಳೆಬ್ಬಿಸಿದ್ದವು. ಆದರೆ, ಜುಲೈ 10ರಂದು ಜಪಾನ್‌ನಲ್ಲಿ ಬಿಡುಗಡೆಯಾಗಿರುವ ಈ ಆ್ಯಕ್ಷನ್ ಡ್ರಾಮಾ ಸಿನಿಮಾ ಅಲ್ಲಿನ ಬಾಕ್ಸ್ ಆಫೀಸ್‌ನಲ್ಲಿ ಅತ್ಯಂತ ನಿರಾಶಾದಾಯಕ ಪ್ರದರ್ಶನ ಕಾಣುವ ಮೂಲಕ ತನ್ನ ಜರ್ನಿಯನ್ನು ಆರಂಭಿಸಿದೆ.

25 ಸಿನಿಮಾಗಳ ಪಟ್ಟಿಯಲ್ಲೂ ಇಲ್ಲ:

ಭಾರೀ ಬಜೆಟ್‌ನ ಈ ಆ್ಯಕ್ಷನ್ ಚಿತ್ರವನ್ನು ಜಪಾನ್‌ನ ಸುಮಾರು 80 ಸ್ಕ್ರೀನ್‌ಗಳಲ್ಲಿ ಅದ್ಧೂರಿಯಾಗಿ ರಿಲೀಸ್ ಮಾಡಲಾಗಿತ್ತು. ಬಿಡುಗಡೆಗೂ ಮುನ್ನ ಜಪಾನ್‌ನಲ್ಲಿ ಚಿತ್ರದ ಪ್ರಚಾರವನ್ನು ಕೂಡ ಜೋರಾಗಿಯೇ ಮಾಡಲಾಗಿತ್ತು. ಆದರೆ, ವರದಿಗಳ ಪ್ರಕಾರ, ಶುಕ್ರವಾರ, ಶನಿವಾರ ಮತ್ತು ಭಾನುವಾರ ಮೂರೂ ದಿನಗಳಲ್ಲಿ ಜಪಾನ್‌ನ ಟಾಪ್ 25 ಸಿನಿಮಾಗಳ ಪಟ್ಟಿಯಲ್ಲಿ ಸ್ಥಾನ ಪಡೆಯಲು ಕೂಡ ಈ ಸಿನಿಮಾ ವಿಫಲವಾಗಿದೆ.

ಮೊದಲ ದಿನದ ಆಘಾತಕಾರಿ ಕಲೆಕ್ಷನ್:

ಚಿತ್ರ ಬಿಡುಗಡೆಯಾದ ಮೊದಲ ದಿನ ಮಧ್ಯಾಹ್ನ 2 ಗಂಟೆಯವರೆಗೆ 57 ಚಿತ್ರಮಂದಿರಗಳಲ್ಲಿ ಕೇವಲ 449 ಪ್ರೇಕ್ಷಕರು ಮಾತ್ರ ಸಿನಿಮಾ ನೋಡಿದ್ದರು. ಇನ್ನು ದಿನದ ದ್ವಿತೀಯಾರ್ಧದಲ್ಲೂ ಚಿತ್ರದ ಕಲೆಕ್ಷನ್‌ನಲ್ಲಿ ಯಾವುದೇ ದೊಡ್ಡ ಸುಧಾರಣೆ ಕಂಡುಬರಲಿಲ್ಲ. ಒಟ್ಟಾರೆಯಾಗಿ ಮೊದಲ ದಿನ ಜಪಾನ್‌ನ 80 ಸ್ಕ್ರೀನ್‌ಗಳಿಂದ ಚಿತ್ರಕ್ಕೆ ಸಿಕ್ಕಿದ್ದು ಕೇವಲ 900 ಪ್ರೇಕ್ಷಕರು ಮಾತ್ರ.

ಟಾಪ್ 10 ಲಿಸ್ಟ್‌ನಿಂದ ಹೊರಬಿದ್ದ ಧುರಂಧರ್:

ಜಪಾನ್‌ನಲ್ಲಿ ಅತಿ ಹೆಚ್ಚು ಪ್ರೇಕ್ಷಕರನ್ನು ಸೆಳೆದ ಭಾರತದ ಟಾಪ್ 10 ಸಿನಿಮಾಗಳ ಲಿಸ್ಟ್‌ಗೆ ಸೇರಲು ‘ಧುರಂಧರ್’ ಚಿತ್ರಕ್ಕೆ ಕನಿಷ್ಠ 1,300 ಪ್ರೇಕ್ಷಕರ ಅಗತ್ಯವಿತ್ತು. ಸದ್ಯ 1,300 ಪ್ರೇಕ್ಷಕರೊಂದಿಗೆ ಸಲ್ಮಾನ್ ಖಾನ್ ಅವರ ‘ಟೈಗರ್ 3’ ಸಿನಿಮಾ 10ನೇ ಸ್ಥಾನದಲ್ಲಿದೆ. ಆದರೆ ರಣವೀರ್ ಸಿಂಗ್ ಸಿನಿಮಾ ಇದನ್ನು ಮೀರಿಸಲು ಸಾಧ್ಯವಾಗದೇ ಮುಗ್ಗರಿಸಿದೆ. ಇದಕ್ಕೂ ಮುನ್ನ ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ಸಿನಿಮಾ ಕೂಡ ಈ ಟಾಪ್ 10 ಲಿಸ್ಟ್ ಸೇರುವಲ್ಲಿ ವಿಫಲವಾಗಿತ್ತು.

ಇದನ್ನೂ ಓದಿ: ಹೊಸ ಫೆರಾರಿ ಕಾರಲ್ಲಿ ಮುಂಬೈ ಸುತ್ತಿದ ರಣವೀರ್; ಇದರ ಬೆಲೆ 6 ಕೋಟಿ ರೂಪಾಯಿ

ಜಪಾನ್‌ನಲ್ಲಿ ಮೊದಲ ದಿನವೇ 8,230 ಪ್ರೇಕ್ಷಕರನ್ನು ಸೆಳೆಯುವ ಮೂಲಕ ‘ಆರ್‌ಆರ್‌ಆರ್’ ಸಿನಿಮಾ ಮೊದಲ ಸ್ಥಾನದಲ್ಲಿದೆ. ಇದರ ನಂತರದ ಸ್ಥಾನಗಳಲ್ಲಿ ‘ಸಾಹೋ’, ‘ಕಲ್ಕಿ 2898 ಎಡಿ’, ‘ಪಠಾಣ್’, ‘ಸಲಾರ್’, ‘ಜವಾನ್’, ‘ರಂಗಸ್ಥಲಂ’, ‘ದೇವರ’, ‘ಬಾಹುಬಲಿ 2’ ಮತ್ತು ‘ಟೈಗರ್ 3’ ಸಿನಿಮಾಗಳಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IND vs ENG: ಇಂಗ್ಲೆಂಡ್‌ ನೆಲದಲ್ಲಿ ಭಾರತದ 8 ಆಟಗಾರರಿಗೆ ಮೊದಲ ಏಕದಿನ ಪಂದ್ಯ – Kannada News | IND vs ENG ODI Series: 8 Indian Players Debut in England; Revenge on Mind

ಟಿ20 ಸರಣಿ ಬಳಿಕ ಇದೀಗ ಭಾರತ ಹಾಗೂ ಇಂಗ್ಲೆಂಡ್‌ (India vs England ODI) ತಂಡಗಳು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮುಖಾಮುಖಿಯಾಗುತ್ತಿವೆ. ಒಂದೆಡೆ ಟಿ20 ಸರಣಿ ಸೋಲಿಗೆ ಸೇಡು ತೀರಿಸಿಕೊಳ್ಳುವ ತವಕದಲ್ಲಿ ಟೀಂ ಇಂಡಿಯಾ ಇದ್ದರೆ, ಇನ್ನೊಂದೆಡೆ ಇಂಗ್ಲೆಂಡ್‌ ತನ್ನ ಅಜೇಯ ಓಟವನ್ನು ಮುಂದುವರೆಸಲು ಸಜ್ಜಾಗಿದೆ. ಉಭಯ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯಕ್ಕೆ ಇಂಗ್ಲೆಂಡ್‌ ತನ್ನ ಆಡುವ ಹನ್ನೊಂದರ ಬಳಗವನ್ನು ಘೋಷಿಸಿದೆ. ಇತ್ತ ಟೀಂ ಇಂಡಿಯಾ ಟಾಸ್​ವರೆಗೂ ತನ್ನ ಪ್ಲೇಯಿಂಗ್ 11 ಪ್ರಕಟಿಸದಿರಲು ನಿರ್ಧರಿಸಿದೆ. ಆದಾಗ್ಯೂ ಮೊದಲ ಏಕದಿನಕ್ಕೆ ಭಾರತದ ಪ್ಲೇಯಿಂಗ್ 11 ಹೇಗಿರಲಿದೆ ಎಂಬುದು ಖಚಿತವಾಗಿದೆ. ಆ ಪ್ಲೇಯಿಂಗ್​ನಲ್ಲಿ ಸ್ಥಾನ ಪಡೆಯಲಿರುವ ಬರೋಬ್ಬರಿ 8 ಆಟಗಾರರಿಗೆ ಇಂಗ್ಲೆಂಡ್‌ ನೆಲದಲ್ಲಿ ಇದು ಮೊದಲ ಏಕದಿನ ಪಂದ್ಯವಾಗಿದೆ.

ಇಂಗ್ಲೆಂಡ್‌ನಲ್ಲಿ ಆಡಿದವರಿವರು

ಈ ಏಕದಿನ ಸರಣಿಗೆ ಆಯ್ಕೆಯಾಗಿರುವ 15 ಸದಸ್ಯರ ಭಾರತ ತಂಡದಲ್ಲಿ ಕೆಲವೇ ಕೆಲವು ಆಟಗಾರರಿಗೆ ಇಂಗ್ಲೆಂಡ್‌ ನೆಲದಲ್ಲಿ ಏಕದಿನ ಸರಣಿಯನ್ನಾಡಿದ ಅನುಭವವಿದೆ. ಆ ಅನುಭವಿಗಳಲ್ಲಿ ವಿರಾಟ್ ಕೊಹ್ಲಿ (16 ಏಕದಿನ ಪಂದ್ಯ), ರೋಹಿತ್ ಶರ್ಮಾ 10 ಏಕದಿನ ಪಂದ್ಯ), ಜಸ್ಪ್ರೀತ್ ಬುಮ್ರಾ (3 ಏಕದಿನ ಪಂದ್ಯ), ಕೆಎಲ್ ರಾಹುಲ್ (3 ಏಕದಿನ ಪಂದ್ಯ), ಕುಲ್ದೀಪ್ ಯಾದವ್ (4 ಏಕದಿನ ಪಂದ್ಯ), ಪ್ರಸಿದ್ಧ್ ಕೃಷ್ಣ (3 ಏಕದಿನ ಪಂದ್ಯ) ಸೇರಿದ್ದಾರೆ.

ಇವರಿಗೆ ಇಂಗ್ಲೆಂಡ್​ನಲ್ಲಿ ಮೊದಲ ಏಕದಿನ ಸರಣಿ

ಉಳಿದಂತೆ ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಗುರ್ನೂರ್ ಬ್ರಾರ್, ಶಿವಂ ದುಬೆ, ಪ್ರಿನ್ಸ್ ಯಾದವ್ ಮೊದಲ ಬಾರಿಗೆ ಇಂಗ್ಲೆಂಡ್ ವಿರುದ್ಧ ಇಂಗ್ಲೆಂಡ್‌ ನೆಲದಲ್ಲಿ ಏಕದಿನ ಪಂದ್ಯಗಳನ್ನು ಆಡಲಿದ್ದಾರೆ. ಇದರಲ್ಲಿ ಕೆಲವು ಆಟಗಾರರಿ ಇಂಗ್ಲೆಂಡ್‌ ವಿರುದ್ಧ ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಆದರೆ ಇಂಗ್ಲೆಂಡ್‌ ನೆಲದಲ್ಲಿ ಆಡಿಲ್ಲ. ಇನ್ನು ಕೆಲವರು ಇಂಗ್ಲೆಂಡ್‌ ನೆಲದಲ್ಲಿ ಇಂಗ್ಲೆಂಡ್‌ ವಿರುದ್ಧ ಟಿ20 ಸರಣಿಯನ್ನಾಡಿದ್ದಾರೆ. ಆದರೆ ಏಕದಿನ ಸರಣಿಯನ್ನು ಆಡಿಲ್ಲ. ಹೀಗಾಗಿ ಈ ಎಲ್ಲಾ ಆಟಗಾರರಿಗೆ ಇಂಗ್ಲೆಂಡ್‌ ನೆಲದಲ್ಲಿ ಮೊದಲ ಏಕದಿನ ಸರಣಿ ಇದಾಗಲಿದೆ.

IND vs ENG: ಭಾರತ- ಇಂಗ್ಲೆಂಡ್‌ ನಡುವಿನ ಮೊದಲ ಏಕದಿನ ಪಂದ್ಯ ಎಷ್ಟು ಗಂಟೆಗೆ ಆರಂಭ?

ಏಕದಿನ ಸರಣಿಗೆ ಭಾರತ ತಂಡ: ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್, ಅರ್ಶ್ದೀಪ್ ಸಿಂಗ್, ಗುರ್ನೂರ್ ಬ್ರಾರ್, ಶಿವಂ ದುಬೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಸರಕುಗಳ ಮೇಲೆ ಅಮೆರಿಕದಿಂದ ಶೇ. 20ರಷ್ಟು ಶುಲ್ಕ; ಟ್ರಂಪ್ ಘೋಷಣೆ – Kannada News | Donald Trump says US taking control of Strait of Hormuz To Charge 20 percent fee on all cargo shipped

ವಾಷಿಂಗ್ಟನ್, ಜುಲೈ 13: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಂದು ಅತ್ಯಂತ ಮಹತ್ವದ ಘೋಷಣೆಯೊಂದನ್ನು ಮಾಡಿದ್ದು, ಜಾಗತಿಕವಾಗಿ ಅತ್ಯಂತ ಸೂಕ್ಷ್ಮ ಹಾಗೂ ಪ್ರಮುಖ ಜಲಮಾರ್ಗವಾಗಿರುವ ಹಾರ್ಮುಜ್ ಜಲಸಂಧಿಯ (Strait of Hormuz) ಮೂಲಕ ಸಾಗಣೆ ಮಾಡಲಾಗುವ ಎಲ್ಲಾ ಸರಕುಗಳ ಮೇಲೆ ಅಮೆರಿಕವು ಶೇ. 20ರಷ್ಟು ಶುಲ್ಕವನ್ನು ವಿಧಿಸಲಿದೆ ಎಂದು ತಿಳಿಸಿದ್ದಾರೆ. “ಇಂದಿನಿಂದ ಯುಎಸ್‌ಎ (USA) ಅನ್ನು ‘ದಿ ಗಾರ್ಡಿಯನ್ ಆಫ್ ದಿ ಹಾರ್ಮುಜ್ ಸ್ಟ್ರೈಟ್’ (ಹಾರ್ಮುಜ್ ಜಲಸಂಧಿಯ ರಕ್ಷಕ) ಎಂದು ಕರೆಯಲಾಗುವುದು. ಜಗತ್ತಿನ ಅತ್ಯಂತ ಅಸ್ಥಿರವಾಗಿರುವ ಈ ಜಲಮಾರ್ಗಕ್ಕೆ ಸಂಪೂರ್ಣ ರಕ್ಷಣೆ ಮತ್ತು ಭದ್ರತೆ ಒದಗಿಸುವ ಕೆಲಸಕ್ಕಾಗಿ, ನ್ಯಾಯದ ದೃಷ್ಟಿಯಿಂದ ಅಮೆರಿಕಕ್ಕೆ ಮರುಪಾವತಿ ಸಿಗಬೇಕಿದೆ. ಹೀಗಾಗಿ ಇಲ್ಲಿ ಸಾಗಣೆಯಾಗುವ ಎಲ್ಲಾ ಸರಕುಗಳ ಮೇಲೆ ಶೇ. 20ರಷ್ಟು ದರದಲ್ಲಿ ಶುಲ್ಕ ವಿಧಿಸಲಾಗುವುದು. ಈ ಪ್ರಕ್ರಿಯೆ ಮತ್ತು ವ್ಯವಸ್ಥೆ ತಕ್ಷಣವೇ ಜಾರಿಗೆ ಬರಲಿದೆ” ಎಂದು ಟ್ರಂಪ್ ಪೋಸ್ಟ್ ಮಾಡಿದ್ದಾರೆ.

ನಾವು ಹಾರ್ಮುಜ್ ಜಲಸಂಧಿಯ ರಕ್ಷಕರು ಎಂದ ಟ್ರಂಪ್:

ವಿಶ್ವದ ಒಟ್ಟು ತೈಲ ಮತ್ತು ನೈಸರ್ಗಿಕ ಅನಿಲದ ಪೂರೈಕೆಯಲ್ಲಿ ಸುಮಾರು 5ನೇ 1 ಭಾಗ (ಶೇ. 20ರಷ್ಟು) ಇದೇ ಜಲಸಂಧಿಯ ಮೂಲಕ ಸಾಗುವುದರಿಂದ ಇದು ಜಗತ್ತಿನ ಅತ್ಯಂತ ಪ್ರಮುಖ ಜಲಮಾರ್ಗವಾಗಿದೆ. ಈ ಕುರಿತು ಮಾತನಾಡಿದ ಟ್ರಂಪ್, “ನಾವು ಹಾರ್ಮುಜ್ ಜಲಸಂಧಿಯ ಸಂಪೂರ್ಣ ನಿಯಂತ್ರಣವನ್ನು ತೆಗೆದುಕೊಳ್ಳುತ್ತಿದ್ದೇವೆ. ಇರಾನ್ ಬಳಿ ಏನೂ ಇಲ್ಲ. ಇನ್ನು ಮುಂದೆ ನಾವೇ ಈ ಜಲಸಂಧಿಯ ರಕ್ಷಕರಾಗಲಿದ್ದೇವೆ” ಎಂದಿದ್ದಾರೆ.

ಇದನ್ನೂ ಓದಿ: ನಾನೇ ನಂಬರ್ 1 ಟಾರ್ಗೆಟ್, ಇರಾನ್‌ ನನ್ನ ಹತ್ಯೆಗೆ ಸಂಚು ರೂಪಿಸುತ್ತಿದೆ ಎಂದ ಡೊನಾಲ್ಡ್ ಟ್ರಂಪ್

ರಕ್ಷಣೆ ನೀಡಿದ್ದಕ್ಕಾಗಿ ಅಮೆರಿಕಕ್ಕೆ ಹಣ:

ಅಮೆರಿಕವು ಈ ಹಾರ್ಮುಜ್ ಜಲಮಾರ್ಗಕ್ಕೆ ಭದ್ರತೆ ಒದಗಿಸುತ್ತಿರುವುದಕ್ಕೆ ಪ್ರತಿಯಾಗಿ ಜಗತ್ತಿನ ಶ್ರೀಮಂತ ರಾಷ್ಟ್ರಗಳಿಂದ ತಮಗೆ ಹಣ ಸಿಗಬೇಕು ಎಂದು ಡೊನಾಲ್ಡ್ ಟ್ರಂಪ್ ಪ್ರತಿಪಾದಿಸಿದ್ದಾರೆ. “ಈ ಜಲಸಂಧಿಗೆ ಕಾವಲು ಕಾಯುತ್ತಿರುವುದಕ್ಕೆ ನಮಗೂ ಲಾಭ ಬೇಕಲ್ಲವೇ? ನಮ್ಮ ಸೈನಿಕರನ್ನು ಅಪಾಯಕ್ಕೆ ತಳ್ಳಿ ಇಷ್ಟೆಲ್ಲಾ ಭದ್ರತೆ ಒದಗಿಸುತ್ತಿರುವುದಕ್ಕೆ ನಮಗೆ ಮರುಪಾವತಿ ಸಿಗಬೇಕು ಎಂದು ನಾವು ಬಯಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಹಾರ್ಮುಜ್ ಜಲಸಂಧಿಯ ನಿಯಂತ್ರಣದ ವಿಷಯದಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ದೀರ್ಘಕಾಲದಿಂದ ಸಂಘರ್ಷ ನಡೆಯುತ್ತಿದೆ. ಈ ಜಲಸಂಧಿಯ ಮೇಲೆ ತನಗೆ ಸಂಪೂರ್ಣ ನಿಯಂತ್ರಣವಿದೆ ಎಂದು ಇರಾನ್ ಹೇಳಿಕೊಳ್ಳುತ್ತಿದೆ. ಆದರೆ, ಅಂತಾರಾಷ್ಟ್ರೀಯ ಕಾನೂನಿನ ಪ್ರಕಾರ ಇದು ಮುಕ್ತ ಜಲಮಾರ್ಗವಾಗಿದ್ದು, ಎಲ್ಲಾ ದೇಶಗಳ ಹಡಗುಗಳು ಇಲ್ಲಿ ಮುಕ್ತವಾಗಿ ಸಂಚರಿಸಬಹುದು ಎಂದು ಅಮೆರಿಕ ವಾದಿಸುತ್ತಿದೆ.

ಇರಾನ್ ಎಚ್ಚರಿಕೆ:

ಟ್ರಂಪ್ ಅವರ ಈ ಘೋಷಣೆಗೆ ಇರಾನ್‌ನ ‘ಖಾತಮ್ ಅಲ್-ಅನ್ಬಿಯಾ’ ಮಿಲಿಟರಿ ಕಮಾಂಡ್‌ನ ವಕ್ತಾರರು ವಿಡಿಯೋ ಸಂದೇಶದ ಮೂಲಕ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. “ಯಾವುದೇ ಪರಿಸ್ಥಿತಿಯಲ್ಲೂ ಜಲಸಂಧಿಯ ನಿರ್ವಹಣೆಯಲ್ಲಿ ಅಮೆರಿಕ ಹಸ್ತಕ್ಷೇಪ ಮಾಡಲು ನಾವು ಬಿಡುವುದಿಲ್ಲ” ಎಂದು ಅವರು ಹೇಳಿದ್ದಾರೆ. ಈ ಜಲಮಾರ್ಗದ ವಿಷಯದಲ್ಲಿ ಅಮೆರಿಕದೊಂದಿಗೆ ಸಹಕರಿಸುವ ಯಾವುದೇ ಗಲ್ಫ್ ದೇಶಗಳ ಕ್ರಮವನ್ನು “ಯುದ್ಧದ ಘೋಷಣೆ” ಎಂದೇ ಪರಿಗಣಿಸಲಾಗುವುದು ಎಂದು ಅವರು ಗಲ್ಫ್ ರಾಷ್ಟ್ರಗಳಿಗೆ ಇರಾನ್ ಕಠಿಣ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ಇರಾನ್‌ನಿಂದ ಹಾರ್ಮುಜ್ ಜಲಸಂಧಿ ಬಂದ್, ಹಡಗಿನ ಮೇಲೆ ದಾಳಿ ಬೆನ್ನಲ್ಲೇ ಅಮೆರಿಕದಿಂದ ಭೀಕರ ಪ್ರತೀಕಾರ

ಸಂಘರ್ಷಕ್ಕೆ ಕಾರಣವೇನು?:

ಇತ್ತೀಚೆಗೆ ಹಾರ್ಮುಜ್ ಜಲಸಂಧಿಯ ಮೂಲಕ ಸಾಗುತ್ತಿದ್ದ ಹಡಗೊಂದರ ಮೇಲೆ ಇರಾನ್ ದಾಳಿ ನಡೆಸಿತ್ತು. ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಅಮೆರಿಕ, ಇರಾನ್‌ನ ಮಿಲಿಟರಿ ನೆಲೆಗಳು ಮತ್ತು ಪ್ರಮುಖವಾಗಿ ಅದರ ಡ್ರೋನ್ ಉತ್ಪಾದನಾ ಕೇಂದ್ರಗಳ ಮೇಲೆ ಭಾರಿ ದಾಳಿ ನಡೆಸಿತ್ತು. ಇದಕ್ಕೆ ಪ್ರತಿಯಾಗಿ ಇರಾನ್ ಸಹ ಯುಎಇ (UAE) ಮತ್ತು ಕತಾರ್‌ನಲ್ಲಿರುವ ಅಮೆರಿಕದ ಮಿಲಿಟರಿ ನೆಲೆಗಳ ಮೇಲೆ ಕ್ಷಿಪಣಿ ದಾಳಿಗಳನ್ನು ನಡೆಸಿದೆ. ಈ ಸಂಘರ್ಷದ ಕಾರಣದಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಗಳು ಏಕಾಏಕಿ ಶೇ. 5ರಷ್ಟು ಏರಿಕೆಯಾಗಿವೆ.

ಕಳೆದ ತಿಂಗಳಷ್ಟೇ ಉಭಯ ದೇಶಗಳು ಡಿಜಿಟಲ್ ರೂಪದಲ್ಲಿ ತಾತ್ಕಾಲಿಕ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ್ದವು ಮತ್ತು ಮಾತುಕತೆಗೆ ಒಪ್ಪಿಕೊಂಡಿದ್ದವು. ಆದರೆ, ಕಳೆದ ವಾರ ಆ ಕದನ ವಿರಾಮ ಒಪ್ಪಂದವು ಮುಕ್ತಾಯಗೊಂಡಿದೆ ಎಂದು ಟ್ರಂಪ್ ಘೋಷಿಸಿದ್ದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಮಳೆ ಎಫೆಕ್ಟ್​​: ಮೈದುಂಬಿದ ದೂದ್‌ಸಾಗರ ಜಲಪಾತ – Kannada News | Monsoon Magic: Dudhsagar Falls Draws Tourists After Heavy Rains in Western Ghats

ಬೆಳಗಾವಿ, ಜುಲೈ 13: ದೇಶದ ಹಲವು ಭಾಗಗಳಲ್ಲಿ ಭೀಕರ ಬರಗಾಲ ತಾಂಡವವಾಡುತ್ತಿದ್ದರೆ, ಇತ್ತ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಇದರ ಪರಿಣಾಮವಾಗಿ ಬೆಳಗಾವಿ ಗಡಿಯಲ್ಲಿರುವ ವಿಶ್ವಪ್ರಸಿದ್ಧ ದೂದ್‌ಸಾಗರ ಜಲಪಾತವು ಧುಮ್ಮಿಕ್ಕಿ ಹರಿಯುತ್ತಿದೆ. ಹಾಲಿನ ಹೊಳೆಯಂತೆ ಕಾಣುವ 1017 ಅಡಿ ಎತ್ತರದಿಂದ ಭೋರ್ಗರೆಯುವ ಈ ಜಲಪಾತವು  ಪ್ರವಾಸಿಗರ ಕಣ್ಮನ ಸೆಳೆಯುತ್ತಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Chanakya Niti: ಜೀವನದಲ್ಲಿ ಮುಂದೆ ಬರಬೇಕು ಅಂದ್ರೆ ಈ ವಿಷಯಗಳನ್ನು ನಿಯಂತ್ರಿಸಲು ಕಲಿಯಿರಿ – Kannada News | Chanakya Niti: Chanakya says that these habits must be controlled to move forward in life

ನಮ್ಮಲ್ಲಿರುವ ಕೆಟ್ಟ ಅಭ್ಯಾಸಗಳು (bad habits) ನಮ್ಮನ್ನು ಮುಂದುವರೆಯಲು ಬಿಡುವುದಿಲ್ಲ, ಪ್ರಗತಿಗೆ ಅಡ್ಡಿಯನ್ನು ಉಂಟು ಮಾಡುತ್ತವೆ. ಆ ಅಭ್ಯಾಸವನ್ನು ನಿಯಂತ್ರಿಸಲು ಕಲಿತವರು ಮಾತ್ರ ಜೀವನದಲ್ಲಿ ಮುಂದುವರೆಯಲು ಸಾಧ್ಯ ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಅವರ ಪ್ರಕಾರ ಪ್ರತಿಯೊಬ್ಬರೂ ಸಹ ಈ ಕೆಲವೊಂದು ಅಭ್ಯಾಸಗಳನ್ನು ನಿಯಂತ್ರಿಸಲೇಬೇಕು, ಇದು ಜೀವನದಲ್ಲಿ ಪ್ರಗತಿಯನ್ನು ಸಾಧಿಸಲು ಸಾಕಷ್ಟು ಸಹಾಯವನ್ನು ಮಾಡುತ್ತದೆ. ಹಾಗಿದ್ರೆ ಜೀವನವನ್ನು ಸುಧಾರಿಸಲು, ಜೀವನದಲ್ಲಿ ಸಕಾರಾತ್ಮಕವಾಗಿ ಮುಂದುವರೆಯಲು ಯಾವೆಲ್ಲಾ ವಿಷಯಗಳನ್ನು ನಿಯಂತ್ರಿಸಬೇಕು ಎಂಬುದನ್ನು ನೋಡೋಣ ಬನ್ನಿ.

ಜೀವನದಲ್ಲಿ ಮುಂದುವರೆಯಲು ನಿಯಂತ್ರಿಸಬೇಕಾದ ಅಭ್ಯಾಸಗಳು:

ಕೋಪವನ್ನು ನಿಯಂತ್ರಣದಲ್ಲಿಡಿ: ಆಚಾರ್ಯ ಚಾಣಕ್ಯರ ಪ್ರಕಾರ, ವ್ಯಕ್ತಿಯ ದೊಡ್ಡ ಶತ್ರು ಆತನ ಕೋಪ. ನಾವು ಕೋಪಗೊಂಡಾಗ, ನಮ್ಮ ಮೆದುಳು ಸರಿಯಾಗಿ ಕಾರ್ಯನಿರ್ವಹಿಸುವುದನ್ನು ನಿಲ್ಲಿಸುತ್ತದೆ. ಕೋಪದ ಮನಸ್ಥಿತಿಯಲ್ಲಿಯೇ ಹೆಚ್ಚಾಗಿ ನಾವು ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ. ಇದು ಸಂಬಂಧವನ್ನು ಹಾಳು ಮಾಡುವುದಲ್ಲದೆ ಕೆಲಸದ ವಿಷಯದಲ್ಲೂ ಸಾಕಷ್ಟು ಅಡ್ಡಿಯನ್ನು ಉಂಟುಮಾಡುತ್ತವೆ. ಹಾಗಾಗಿ ಕೋಪಗೊಂಡಾಗ ತಕ್ಷಣ ಪ್ರತಿಕ್ರಿಯಿಸುವ ಬದಲು ಶಾಂತವಾಗಿರಿ, ಇದು ಮುಂದಾಗುವ ಅನೇಕ ಅನಾಹುತಗಳನ್ನು ತಪ್ಪಿಸುವುದು ಮಅತ್ರವಲ್ಲದೆ, ನಿಮಗೆ ಜೀವನದಲ್ಲಿ ಮುಂದುವರೆಯಲೂ ಸಹ ಸಹಾಯ ಮಾಡುತ್ತದೆ.

ಮಾತನ್ನು ನಿಯಂತ್ರಿಸಿ: ಮಾತನಾಡುವ ಮೊದಲು ನಾವು ಯಾವಾಗಲೂ ಎಚ್ಚರಿಕೆಯಿಂದ ಯೋಚಿಸಬೇಕು ಮತ್ತು ಯಾವಾಗಲೂ ಸಿಹಿ ಪದಗಳನ್ನು ಬಳಸಬೇಕು ಎಂದು ಆಚಾರ್ಯ ಚಾಣಕ್ಯ ಹೇಳುತ್ತಾರೆ. ಯೋಚಿಸದೆ ಏನೇನೋ ಮಾತನಾಡುವ ಅಭ್ಯಾಸ  ಒಳ್ಳೆಯ ಸಂಬಂಧಗಳನ್ನು ಹಾಳು ಮಾಡುವುದಲ್ಲದೆ, ನಿಮ್ಮ ಎಲ್ಲಾ ಯೋಜನೆಗಳನ್ನು ಇತರರ ಬಳಿ ಹಂಚಿಕೊಳ್ಳುವುದರಿಂದ ನಿಮ್ಮ ಪ್ರಗತಿಗೂ ಅಡ್ಡಿಯನ್ನು ಉಂಟು ಮಾಡುತ್ತದೆ. ಆದ್ದರಿಂದ ಮಾತಿನ ಮೇಲೆ ನಿಯಂತ್ರಣವಿರಲಿ, ಯಾವಾಗಲೂ ಹಿತಮಿತವಾಗಿ ಮಾತನಾಡಿ.

ಇದನ್ನೂ ಓದಿ: ಶ್ರೀಮಂತಿಕೆ ಗಳಿಸಲು ಚಾಣಕ್ಯರು ಹೇಳಿಕೊಟ್ಟಿರುವ ಸಲಹೆಗಳಿವು

ಆಸೆಗಳನ್ನು ನಿಯಂತ್ರಿಸಿ:  ಆಚಾರ್ಯ ಚಾಣಕ್ಯರ ಪ್ರಕಾರ, ನಾವು ನಮ್ಮ ಮನಸ್ಸನ್ನು ನಿಯಂತ್ರಿಸದಿದ್ದರೆ ಮತ್ತು ದುರಾಸೆಯನ್ನು ನಿಯಂತ್ರಿಸದಿದ್ದರೆ, ಜೀವನದಲ್ಲಿ ಸಂತೋಷವಾಗಿರಲು ಎಂದಿಗೂ ಸಾಧ್ಯವಿಲ್ಲ ಹಾಗಾಗಿ ಇರುವುದರಲ್ಲಿಯೇ ತೃಪ್ತಿಯನ್ನು ಪಟ್ಟು ಗುರಿಗಳ ಮೇಲೆ ಮನಸ್ಸನ್ನು ಕೇಂದ್ರೀಕರಿಸಿ. ಖಂಡಿತವಾಗಿಯೂ ಇದು ನಿಮ್ಮ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ಉಂಟುಮಾಡುತ್ತವೆ.

ಅನಗತ್ಯ ಖರ್ಚುಗಳನ್ನು ನಿಯಂತ್ರಿಸಿ:  ಆಚಾರ್ಯ ಚಾಣಕ್ಯರ ಪ್ರಕಾರ ಹಣ ಸಂಪಾದಿಸುವುದು ಎಷ್ಟು ಮುಖ್ಯವೋ ಅದನ್ನು ಬುದ್ಧಿವಂತಿಕೆಯಿಂದ ಬಳಸುವುದು ಸಹ ಅಷ್ಟೇ ಮುಖ್ಯ. ಹಣವನ್ನು ವ್ಯರ್ಥ ಖರ್ಚು ಮಾಡಿದರೆ ಕೈಯಲ್ಲಿ ಹಣ ಉಳಿಯುವುದು ಕೂಡ ಇಲ್ಲ, ಇದು ಶ್ರೀಮಂತಿಕೆ ಗಳಿಸುವ ನಿಮ್ಮ ಕನಸಿಗೂ ಅಡ್ಡಿಯನ್ನು ಉಂಟು ಮಾಡುತ್ತದೆ. ಹಾಗಾಗಿ ಎಂದಿಗೂ ವ್ಯರ್ಥ ಖರ್ಚು ಮಾಡಬೇಡಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಾಜ್ಯ ಕಾಂಗ್ರೆಸ್​​ನಲ್ಲಿ ಗರಿಗೆದರಿದ ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​? – Kannada News | Karnataka Cabinet Expansion: Will the Congress Finalise the Aspirants’ List by July 17

ಬೆಂಗಳೂರು, ಜುಲೈ 13: ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣ ಮಾಡಿ 40 ದಿನಗಳೇ ಕಳೆಯುತ್ತ ಬಂತು. ಆದರೆ ಸಂಪುಟ ವಿಸ್ತರಣೆಗೆ ಹಿಡಿದ ಗ್ರಹಣ ಮಾತ್ರ ಇನ್ನೂ ಬಿಟ್ಟಿಲ್ಲ. ಯಾವಾಗ ಗ್ರಹಣ ಬಿಡಬಹುದು ಎಂಬ ಬಗ್ಗೆ ಸ್ಪಷ್ಟತೆಯೂ ಸಿಕ್ತಿಲ್ಲ.‌ 15ಕ್ಕೂ ಹೆಚ್ಚು ಸಚಿವ ಸ್ಥಾನಗಳು ಖಾಲಿ ಇವೆ. ಸಿಎಂ ಡಿಕೆ ಶಿವಕುಮಾರ್ ಸಚಿವ ಸಂಪುಟ ವಿಸ್ತರಣಾ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಆರಂಭಿಸುವ ನಿರೀಕ್ಷೆಯಿದೆ. ಇದರ ಭಾಗವಾಗಿ ಅವರು ದೆಹಲಿಗೆ ಭೇಟಿ ನೀಡಲಿದ್ದಾರೆ. ಕಳೆದ ಹಲವು ದಿನಗಳ ವಿದೇಶ ಪ್ರವಾಸದಲ್ಲಿದ್ದ ರಾಹುಲ್ ಗಾಂಧಿ ದೆಹಲಿಗೆ ಮರಳಿದ್ದು, ಇದು ಸಂಪುಟ ವಿಸ್ತರಣೆಯ ಚರ್ಚೆಗೆ ವೇಗ ನೀಡುವ ಸಾಧ್ಯತೆ ಇದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆ.ಸಿ. ವೇಣುಗೋಪಾಲ್, ರಾಹುಲ್ ಗಾಂಧಿ ಜೊತೆ ಸಚಿವ ಸಂಪುಟ ವಿಸ್ತರಣೆ ಕುರಿತು ಮಹತ್ವದ ಚರ್ಚೆ ನಡೆಸುವ ನಿರೀಕ್ಷೆಯಿದೆ. ಸಂಪುಟ ವಿಸ್ತರಣೆಯ ನಿರ್ಧಾರವನ್ನು ಹೈಕಮಾಂಡ್ ತೆಗೆದುಕೊಳ್ಳಬೇಕಿದ್ದು, ಯಾರಿಗೆ ಸ್ಥಾನ ಕೊಡಬೇಕು, ಯಾರನ್ನು ಕೈಬಿಡಬೇಕು, ಯಾವ ಪ್ರದೇಶಕ್ಕೆ ಎಷ್ಟು ಪ್ರಾತಿನಿಧ್ಯ ಮತ್ತು ಯಾವ ಸಮುದಾಯಕ್ಕೆ ಆದ್ಯತೆ ನೀಡಬೇಕು ಎಂಬುವುದು ದೊಡ್ಡ ಸವಾಲಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರು ಸಂಪುಟ ವಿಸ್ತರಣೆ ಆದಷ್ಟು ಬೇಗ ಆಗಲಿದೆ ಎಂದು ಹೇಳಿಕೆ ನೀಡಿದ್ದು, ಆಕಾಂಕ್ಷಿಗಳಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ. ಹಲವು ಶಾಸಕರು ಸಚಿವ ಸ್ಥಾನಕ್ಕಾಗಿ ದೆಹಲಿ ಮತ್ತು ಬೆಂಗಳೂರಿನಲ್ಲಿ ಲಾಬಿ ನಡೆಸುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಜೈಪುರದಲ್ಲಿ ನಡೆಯಿತು ಶರ್ಮಿಳಾ ಮಾಂಡ್ರೆ ಮದುವೆ; ಇಲ್ಲಿದೆ ಫೋಟೋ ಗ್ಯಾಲರಿ

Source link

ಧಾರ್ಮಿಕ ಕ್ಷೇತ್ರದಲ್ಲಿ ಪ್ರವಾಸಿಗರ ಹುಚ್ಚಾಟ: ಸಕಲೇಶಪುರದ ಬೆಟ್ಟದ ಭೈರವೇಶ್ವರ ದೇಗುಲದಲ್ಲಿ ಕಠಿಣ ನಿಯಮ ಜಾರಿಗೆ ನಿರ್ಧಾರ – Kannada News | Tourist Misconduct at Betada Bhairaveshwara Temple: Strict Rules to Be Enforced in Sakaleshpur

ಪ್ರವಾಸಿಗರ ಹುಚ್ಚಾಟImage Credit source: tv9 kannada

ಹಾಸನ, ಜುಲೈ 13: ಪಶ್ಚಿಮಘಟ್ಟದ ತಪ್ಪಲಿನಲ್ಲಿರುವ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಹಾಗೂ ಸಹಸ್ರಾರು ಕುಟುಂಬಗಳ ಆರಾಧ್ಯ ದೈವವಾಗಿರುವ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದಲ್ಲಿ ಪ್ರವಾಸಿಗರ (Tourist) ಮೋಜು-ಮಸ್ತಿ ಮತ್ತು ಹುಚ್ಚಾಟ ಮಿತಿ ಮೀರಿದ್ದು, ಸ್ಥಳೀಯರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶ್ರದ್ಧಾ-ಭಕ್ತಿಯ ತಾಣದಲ್ಲಿ ಪ್ರವಾಸಿಗರು ಡಿಜೆ ಹಾಡುಗಳಿಗೆ ಕುಣಿದು, ರೀಲ್ಸ್ ಮಾಡುತ್ತಾ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿರುವ ಹಿನ್ನೆಲೆಯಲ್ಲಿ, ಕ್ಷೇತ್ರಕ್ಕೆ ಕಠಿಣ ನಿಯಮಗಳನ್ನು ಜಾರಿಗೊಳಿಸಲು ಅಧಿಕಾರಿಗಳು ಮತ್ತು ಶಾಸಕರ ನೇತೃತ್ವದ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಕೃತಿ ಸೊಬಗಿನ ತಾಣವೇ ಸ್ಥಳೀಯರಿಗೆ ಕಂಟಕ!

ಸಕಲೇಶಪುರ ತಾಲೂಕಿನ ಪಶ್ಚಿಮಘಟ್ಟದ ತಪ್ಪಲು ಮರಗುಂದ ಗ್ರಾಪಂ ಬಳಿಯ ಸಹಸ್ರಾರು ವರ್ಷಗಳ ಪುರಾತನ ಬೆಟ್ಟದ ಭೈರವೇಶ್ವರ ದೇಗುಲ ಈ ಭಾಗದ ಸಹಸ್ರಾರು ಕುಟುಂಬಗಳ ಮನೆದೇವರು. ಮರಗುಂದ ಗ್ರಾಪಂ ವ್ಯಾಪ್ತಿಯಲ್ಲಿ ಈ ಪುರಾತನ ದೇಗುಲ ನೆಲೆಸಿದೆ. ಒಂದು ಕಡೆ ಪಾಂಡವರ ಬೆಟ್ಟ, ಇನ್ನೊಂದೆಡೆ ಜೇನುಕಲ್ ಬೆಟ್ಟ, ದೀಪದ ಕಲ್ಲು ಹಾಗೂ ಮೂರ್ಕಣ್ಣು ಗುಡ್ಡಗಳ ವಿಶಾಲ ಹಸಿರ ರಾಶಿಯ ನಡುವೆ ಇರುವ ಈ ಕ್ಷೇತ್ರವನ್ನು ‘ಕರ್ನಾಟಕದ ಸ್ವಿಡ್ಜರ್ಲ್ಯಾಂಡ್’ ಎಂದೇ ಕರೆಯಲಾಗುತ್ತದೆ. ಇದೇ ಕಾರಣಕ್ಕೆ ಇಲ್ಲಿಗೆ ಹತ್ತಾರು ಸಿನೆಮಾ ಚಿತ್ರೀಕರಣ ತಂಡಗಳು ಬಂದು ಶೂಟಿಂಗ್ ಮಾಡಿದ್ದು, ಇದೀಗ ಪ್ರವಾಸಿಗರ ಪಾಲಿಗೆ ಹಾಟ್ ಸ್ಪಾಟ್ ಆಗಿದೆ. ಆದರೆ, ಇದೇ ಪ್ರಕೃತಿ ಸೊಬಗು ಸದ್ಯ ಸ್ಥಳೀಯರಿಗೆ ಕಂಟಕವಾಗಿ ಪರಿಣಮಿಸಿದೆ.

ಇದನ್ನೂ ಓದಿ: Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!

ನಿನ್ನೆ ಅಪಾರ ಸಂಖ್ಯೆಯಲ್ಲಿ ಬಂದಿದ್ದ ಪ್ರವಾಸಿಗರ ದಂಡು ದೇವಾಲಯ ಎನ್ನುವುದನ್ನು ಮರೆತು ತುಂಡುಡುಗೆಯಲ್ಲಿ ಓಡಾಡುತ್ತಾ, ಡಿಜೆ ಹಾಡು ಹಾಕಿಕೊಂಡು ಕುಣಿದು ಕುಪ್ಪಳಿಸಿರುವ ವಿಡಿಯೋ ವೈರಲ್ ಆಗಿದೆ. ಘಟನೆ ಬಗ್ಗೆ ಸ್ಥಳೀಯರು ಆಕ್ರೊಶ ಹೊರಹಾಕಿದ ಬೆನ್ನಲ್ಲೇ ಇಂದು ತಹಶೀಲ್ದಾರ್, ಅರಣ್ಯ ಇಲಾಖೆ, ಕಂದಾಯ ಇಲಾಖೆ ಅಧಿಕಾರಿಗಳ ಜೊತೆಗೆ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಸಿಮೆಂಟ್ ಮಂಜು ಸಭೆ ಮಾಡಿದ್ದಾರೆ.

ಪ್ರವಾಸಿಗರು ಬರಲಿ, ಆದರೆ ಧಾರ್ಮಿಕ ಭಾವನೆಗೆ ಧಕ್ಕೆ ತರುವುದು ಬೇಡ: ಶಾಸಕ ಸಿಮೆಂಟ್ ಮಂಜು

ಸಭೆ ಬಳಿಕ ಮಾತನಾಡಿದ ಶಾಸಕ ಸಿಮೆಂಟ್ ಮಂಜು, ‘‘ಪ್ರವಾಸಿಗರು ಬರಲಿ, ನಿಸರ್ಗ ನೋಡಿ ಖುಷಿ ಪಡಲಿ, ಆದರೆ ಇಲ್ಲಿನ ಜನರ ಧಾರ್ಮಿಕ ಭಾವನೆಗೆ ಧಕ್ಕೆ ತರುವುದು ಬೇಡ. ದೇಗುಲದ ಕಟ್ಟೆ ಮೇಲೆ ಹತ್ತಿ ಫೋಟೋ ತೆಗೆಯೋದು ಬೇಡ. ದಿನನಿತ್ಯ ಇಲ್ಲಿ ಪೊಲೀಸ್ ಕಾವಲು ಇರಬೇಕು, ಮೊಬೈಲ್ ಬಳಸದಂತೆ ಎಚ್ಚರಿಕೆ ವಹಿಸಬೇಕು ಎನ್ನುವ ಕಠಿಣ ನಿಯಮಗಳನ್ನ ಜಾರಿ ಮಾಡಲು ತೀರ್ಮಾನ ಮಾಡಿದ್ದು, ಜೊತೆಗೆ ದೇವಾಲಯದ ಆವರಣದಲ್ಲಿ ಅಗತ್ಯ ಮೂಲಸೌಲಭ್ಯ ನೀಡುವುದಾಗಿ’’ ಹೇಳಿದ್ದಾರೆ.

ಸ್ಥಳೀಯರ ನಿದ್ದೆಗೆಡಿಸಿದ ಪ್ರವಾಸಿಗರ ಹುಚ್ಚಾಟ

ಹಾಸನದಿಂದ ಸಕಲೇಶಪುರ ತಲುಪಿ ಅಲ್ಲಿಂದ ಹಾನುಬಾಳ್ ಮೂಲಕ ದೇವಾಲದ ಕೆರೆ ದಾಟಿ ಮುಂದೆ ಹೋದರೆ ಸಿಗುವುದು ಮರಗುಂದ ಗ್ರಾಮ. ಧಾರ್ಮಿಕ ಕ್ಷೇತ್ರದಲ್ಲಿ ಮನಸ್ಸಿಗೆ ನೆಮ್ಮದಿ ಅರಸುವುದು ಬಿಟ್ಟು ಪ್ರವಾಸಿಗರು ಮಾಡುತ್ತಿರುವ ಹುಚ್ಚಾಟ ಸ್ಥಳೀಯರನ್ನ ನಿದ್ದೆಗೆಡಿಸಿದೆ. ಯಾರಿಗೆ ದೂರು ನೀಡಿದರು ಕ್ರಮಕೈಗೊಳ್ಳ, ಕೆಲವರಂತೂ ಪ್ರಶ್ನೆ ಮಾಡಿದವರ ಮೇಲೆ ಹಲ್ಲೆ ಮಾಡಲು ಬರುತ್ತಾರೆ. ಬಂದ ಪ್ರವಾಸಿಗರು ದೇವರ ದರ್ಶನ ಮಾಡಿ ಹೋದರೆ ಏನೂ ಸಮಸ್ಯೆ ಇಲ್ಲ, ಆದರೆ ಬರುವುದೇ ರೀಲ್ಸ್, ಫೋಟೋಗಾಗಿ, ಅದಕ್ಕಾಗಿ ಕೆಲ ಪ್ರವಾಸಿಗರು ಮಾಡುವ ಹುಚ್ಚಾಟದ ವಿಡಿಯೋ ಆಗಾಗ ವೈರಲ್ ಆಗುತ್ತಿವೆ.

ಇದನ್ನೂ ಓದಿ: ಮಳೆ ಅಬ್ಬರಕ್ಕೆ ಅಂಬೋಲಿ ಫಾಲ್ಸ್​​ಗೆ ಜೀವ ಕಳೆ: ಜಲಪಾತ ನೋಡಲು ಮುಗಿಬಿದ್ದ ಪ್ರವಾಸಿಗರು

ಮುಜರಾಯಿ ಇಲಾಖೆಗೆ ಸೇರಿದ ಈ ದೇವಾಲಯದ ಬಳಿ ಯಾವುದೇ ಮೂಲಸೌಕರ್ಯಗಳಿಲ್ಲ. ಈ ವರ್ಷದ ಮಳೆಗಾಲದಲ್ಲಿ ತಡೆಗೋಡೆ ಕುಸಿದು ಬಿದ್ದಿರುವುದರಿಂದ ದೇಗುಲಕ್ಕೆ ಅಪಾಯ ಎದುರಾಗುವ ಆತಂಕವೂ ಇದೆ. ಪರಿಸ್ಥಿತಿ ಹೀಗಿದ್ದರೂ ಪ್ರವಾಸಿಗರು ಜವಾಬ್ದಾರಿಯಿಲ್ಲದೆ ವರ್ತಿಸುತ್ತಿರುವುದು ದುರದೃಷ್ಟಕರ ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ. ತಕ್ಷಣವೇ ಜಿಲ್ಲಾಡಳಿತ ಮಧ್ಯಪ್ರವೇಶಿಸಿ ಕ್ಷೇತ್ರದ ಪಾವಿತ್ರತೆ ಕಾಪಾಡಲು ಮುಂದಾಗಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 9:09 pm, Mon, 13 July 26

Source link

ರಾಮಮಂದಿರ ದೇಣಿಗೆ ಕಳ್ಳತನ: ಅನುಪಮ್ ಖೇರ್ ಬಗ್ಗೆ ನಾಸಿರುದ್ದೀನ್ ಶಾ ಮಾತನಾಡಿದ್ದ ವಿಡಿಯೋ ವೈರಲ್ – Kannada News | Naseeruddin Shah Old Video calling Anupam Kher a Clown resurfaces amid Ram Temple Row

ಅಯೋಧ್ಯೆ ರಾಮಮಂದಿರದ ದೇಣಿಗೆ ಕಳ್ಳತನದ ವರದಿಗಳ ಕುರಿತು ಬಾಲಿವುಡ್ ನಟ ಅನುಪಮ್ ಖೇರ್ (Anupam Kher) ಇತ್ತೀಚೆಗೆ ನೀಡಿದ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದರ ಬೆನ್ನಲ್ಲೇ, ಹಿರಿಯ ನಟ ನಾಸಿರುದ್ದೀನ್ ಶಾ (Naseeruddin Shah) ಅವರು ಅನುಪಮ್ ಖೇರ್ ಅವರನ್ನು ‘ಜೋಕರ್’ (Clown) ಎಂದು ಕರೆದಿದ್ದ 2020ರ ಹಳೆಯ ಸಂದರ್ಶನದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ವೈರಲ್ ಆಗಲು ಪ್ರಾರಂಭಿಸಿದೆ. ಅನುಪಮ್ ಖೇರ್ ಹೇಳಿಕೆಯನ್ನು ಟ್ರೋಲ್ ಮಾಡುತ್ತಿರುವ ನೆಟ್ಟಿಗರು, 2020ರಲ್ಲಿ ನಾಸಿರುದ್ದೀನ್ ಶಾ ಅವರು ಖೇರ್ ಅವರ ರಾಜಕೀಯ ನಿಲುವುಗಳನ್ನು ಟೀಕಿಸಿದ್ದ ವಿಡಿಯೋವನ್ನು ಮತ್ತೆ ಹಂಚಿಕೊಳ್ಳುತ್ತಿದ್ದಾರೆ.

‘ಇಂಡಿಯಾ ಟುಡೇ’ಗೆ ನೀಡಿದ ಸಂದರ್ಶನದಲ್ಲಿ ರಾಮಮಂದಿರದ ದೇಣಿಗೆ ಕಳ್ಳತನದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ್ದ ಅನುಪಮ್ ಖೇರ್, ‘ಇದು ತುಂಬಾ ಸಣ್ಣ ವಿಷಯ’ ಎಂದು ತಳ್ಳಿಹಾಕಿದ್ದರು. ಅಲ್ಲದೆ, ಇದನ್ನು ಮೊಘಲರ ಕಾಲದಲ್ಲಿ ನಡೆದ ದೇವಸ್ಥಾನಗಳ ಧ್ವಂಸ ಮತ್ತು ಲೂಟಿಗೆ ಹೋಲಿಸಿದ್ದರು. ಅವರ ಈ ಹೇಳಿಕೆ ಟ್ರೋಲ್ ಆಗುತ್ತಿದೆ. ಇದೇ ಸಂದರ್ಭದಲ್ಲಿ ನಾಸಿರುದ್ದೀನ್ ಶಾ ಅವರ ಹಳೇ ವಿಡಿಯೋ ವೈರಲ್ ಆಗುತ್ತಿದೆ.

ದೇಣಿಗೆ ಕಳ್ಳತನದ ಬಗ್ಗೆ ಅನುಪಮ್ ಖೇರ್ ಹೇಳಿದ್ದು ಏನು?

‘ಮೊಘಲರು ನಮ್ಮ ದೇವಸ್ಥಾನಗಳನ್ನು ಧ್ವಂಸಗೊಳಿಸಿ, ಬ್ರಾಹ್ಮಣರನ್ನು ಕೊಂದಾಗ, ದೇವಸ್ಥಾನದ ಸಂಪತ್ತನ್ನು ಲೂಟಿ ಮಾಡಿದಾಗ ಮತ್ತು ಆವರಣದೊಳಗೆ ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದಾಗ ನಿಜವಾದ ಲೂಟಿ ನಡೆದಿತ್ತು. ಅದು ಇದಕ್ಕಿಂತ ದೊಡ್ಡ ದುರಂತವಾಗಿತ್ತು. ಆ ನೋವನ್ನೇ ನಾವು ಮರೆತು ಮುನ್ನಡೆದಿರುವಾಗ, ಈ ಕಳ್ಳತನದ ವಿಷಯ ತುಂಬಾ ಸಣ್ಣದು. ಜನರು ಇದನ್ನು ದೊಡ್ಡ ಇಶ್ಯೂ ಮಾಡುತ್ತಿದ್ದಾರೆ’ ಎಂದು ಖೇರ್ ಹೇಳಿದ್ದರು. ಈ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಆಕ್ರೋಶ ಮತ್ತು ಚರ್ಚೆಗೆ ಕಾರಣವಾಯಿತು.

ನಾಸಿರುದ್ದೀನ್ ಶಾ ಅವರ ಹಳೇ ವಿಡಿಯೋ ರೀ-ಟ್ರೆಂಡ್:

ಹಳೇ ಸಂದರ್ಶನದಲ್ಲಿ ನಾಸಿರುದ್ದೀನ್ ಶಾ ಅವರು ಅನುಪಮ್ ಖೇರ್ ಬಗ್ಗೆ ಕಟು ಟೀಕೆ ಮಾಡಿದ್ದರು. ‘ಅನುಪಮ್ ಖೇರ್ ಅವರಂತಹ ವ್ಯಕ್ತಿಗಳು ಸರ್ಕಾರದ ಪರವಾಗಿ ಹೆಚ್ಚು ಮಾತನಾಡುತ್ತಾರೆ. ಆದರೆ ಅವರನ್ನು ಯಾರೂ ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ ಎಂದು ನಾನು ಭಾವಿಸುತ್ತೇನೆ. ಆತ ಒಬ್ಬ ಜೋಕರ್. ಎನ್‌ಎಸ್‌ಡಿ ಮತ್ತು ಎಫ್‌ಟಿಐಐನಲ್ಲಿ ಅವರ ಜೊತೆಗಿದ್ದ ಸಮಕಾಲೀನರು ಅವರ ಚಮಚಾಗಿರಿ ಮತ್ತು ಮುಖಸ್ತುತಿ ಮಾಡುವ ಗುಣದ ಬಗ್ಗೆ ಸಾಕ್ಷಿ ಹೇಳಬಲ್ಲರು. ಅದು ಅವರ ರಕ್ತದಲ್ಲೇ ಇದೆ. ಅದನ್ನು ಅವರು ಬದಲಾಯಿಸಿಕೊಳ್ಳಲು ಸಾಧ್ಯವಿಲ್ಲ’ ಎಂದು ಕಟುವಾಗಿ ಟೀಕಿಸಿದ್ದರು.

ಇದನ್ನೂ ಓದಿ: ‘ಧುರಂಧರ್ 2’ ಪ್ರೊಪಗಾಂಡ ಸಿನಿಮಾ ಎಂದವರಿಗೆ ತಿರುಗೇಟು ನೀಡಿದ ಅನುಪಮ್ ಖೇರ್

ಅಂದು ತಿರುಗೇಟು ನೀಡಿದ್ದ ಅನುಪಮ್ ಖೇರ್:

ನಾಸಿರುದ್ದೀನ್ ಶಾ ಅವರ ಈ ಆರೋಪಕ್ಕೆ ಅಂದೇ ‘ಎಕ್ಸ್’ (ಟ್ವಿಟರ್) ವಿಡಿಯೋ ಮೂಲಕ ಪ್ರತಿಕ್ರಿಯಿಸಿದ್ದ ಅನುಪಮ್ ಖೇರ್, ‘ನೀವು ಇಷ್ಟೊಂದು ಯಶಸ್ಸು ಗಳಿಸಿದ್ದರೂ ನಿಮ್ಮ ಇಡೀ ಜೀವನವನ್ನು ನಿರಾಶೆಯಲ್ಲೇ ಕಳೆದಿದ್ದೀರಿ. ನೀವು ದಿಲೀಪ್ ಕುಮಾರ್, ಅಮಿತಾಭ್ ಬಚ್ಚನ್, ರಾಜೇಶ್ ಖನ್ನಾ, ಶಾರುಖ್ ಖಾನ್ ಮತ್ತು ವಿರಾಟ್ ಕೊಹ್ಲಿಯವರನ್ನು ಕೂಡ ಟೀಕಿಸಿದ್ದೀರಿ. ಹಾಗಾಗಿ ನಿಮ್ಮ ಟೀಕೆಯ ಪಟ್ಟಿಯಲ್ಲಿ ನಾನಿರುವುದು ನನಗೆ ಹೆಮ್ಮೆಯ ವಿಷಯವೇ. ಅವರಲ್ಲಿ ಯಾರೂ ನಿಮ್ಮ ಮಾತುಗಳನ್ನು ಗಂಭೀರವಾಗಿ ಪರಿಗಣಿಸಿಲ್ಲ. ಏಕೆಂದರೆ ಇಷ್ಟು ವರ್ಷಗಳಿಂದ ನೀವು ತಿನ್ನುತ್ತಿರುವ ವಸ್ತುಗಳ ಪ್ರಭಾವದಿಂದಾಗಿ ನಿಮಗೆ ಯಾವುದು ಸರಿ, ಯಾವುದು ತಪ್ಪು ಎಂಬ ವ್ಯತ್ಯಾಸವೇ ತಿಳಿಯುತ್ತಿಲ್ಲ ಎಂಬುದು ನಮಗೆಲ್ಲರಿಗೂ ಗೊತ್ತು’ ಎಂದು ಖೇರ್ ತಿರುಗೇಟು ನೀಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version