Headlines

IPL 2026: ಅತ್ಯಧಿಕ ವೀಕ್ಷಣೆ ಕಂಡ 7 ಪಂದ್ಯಗಳಲ್ಲಿ ಆರ್​ಸಿಬಿಯದ್ದೇ 6 ಪಂದ್ಯಗಳು ..! – Kannada News

2026ರ ಐಪಿಎಲ್​ಗೆ (IPL 2026) ಅದ್ಧೂರಿ ತೆರೆಬಿದ್ದಿದೆ. ಕಳೆದ ಆವೃತ್ತಿಯಂತೆಯೇ ಈ ಆವೃತ್ತಿಯಲ್ಲೂ ಆರ್​ಸಿಬಿ (RCB) ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇದರಲ್ಲಿ ಒಂದು ವ್ಯತ್ಯಾಸವೆಂದರೆ ಕಳೆದ ಆವೃತ್ತಿಯಲ್ಲಿ ಪಂಜಾಬ್ ತಂಡ ಆರ್​ಸಿಬಿಗೆ ಎದುರಾಳಿಯಾಗಿದ್ದರೆ, ಈ ಆವೃತ್ತಿಯಲ್ಲಿ ಆರ್​ಸಿಬಿಗೆ ಗುಜರಾತ್ ಎದುರಾಳಿಯಾಗಿತ್ತು. ಎದುರಾಳಿ ಬದಲಾದರೂ ಆರ್​ಸಿಬಿಯ ಪ್ರದರ್ಶನ ಮಾತ್ರ ಒಂದೇ ಆಗಿತ್ತು. ಫೈನಲ್ ಪಂದ್ಯದಲ್ಲಿ ಮಾತ್ರವಲ್ಲದೆ ಇಡೀ ಆವೃತ್ತಿಯಲ್ಲಿ ಆರ್​ಸಿಬಿ ಚಾಂಪಿಯನ್ ತಂಡದಂತೆಯೇ ಪ್ರದರ್ಶನ ನೀಡಿತ್ತು. ಹೀಗಾಗಿ ಆರ್​ಸಿಬಿ ತಂಡದ ಪಂದ್ಯಗಳಿಗೆ ಹೆಚ್ಚಿನ ಮನ್ನಣೆ ಇತ್ತು. ಇದಕ್ಕೆ ಪೂರಕವಾಗಿ…

Read More

ಸಿಎಂ ಆಕಾಂಕ್ಷಿಯಾಗಿದ್ದ ಪರಮೇಶ್ವರ್ ಡಿಸಿಎಂ ಆಗಿ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ – Kannada News

ಬೆಂಗಳೂರು, (ಜೂನ್ 03): ಡಿಕೆ ಶಿವಕುಮಾರ್ (DK Shivakumar) ಅವರು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು ಬಳಿಕ ಸಿದ್ದರಾಮಯ್ಯನವರ ಸಂಪುಟದಲ್ಲಿ ಗೃಹ ಸಚಿವರಾಗಿದ್ದ ಡಾ ಜಿ ಪರಮೇಶ್ವರ್ (Dr G Parameshwar) ಅವರು ಇದೀಗ ಡಿಕೆ ಶಿವಕುಮಾರ್ ಕ್ಯಾಬಿನೆಟ್​​​ನಲ್ಲಿ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಲೋಕಭವನದಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಪರಮೇಶ್ವರ್ ಅವರು ಡಾ, ಬಿಆರ್ ಅಂಬೇಡ್ಕರ್ ಅವರ ಹೆಸರಿನಲ್ಲಿ ಪ್ರಮಾಣವನಚ ಸ್ವೀಕರಿಸಿದರು. ಇನ್ನು ಒಟ್ಟು 5ಬಾರಿ ಶಾಸಕರಾಗಿ ಆಯ್ಕೆ ಆಗಿರುವ ಡಾ.ಜಿ.ಪರಮೇಶ್ವರ್, 1989ರಲ್ಲಿ ಮಧುಗಿರಿಯಿಂದ ಸ್ಪರ್ಧಿಸಿ ವಿಧಾನಸಭೆ…

Read More

ಧುರಂಧರ್ ಸೋತಿದ್ದರೆ ‘ಡಾನ್ 3’ ಸಿನಿಮಾ ಬಿಡುತ್ತಿರಲಿಲ್ಲ: ಕಡೆಗೂ ಒಪ್ಪಿಕೊಂಡ ರಣವೀರ್ ಸಿಂಗ್ – Kannada News

ಬಾಲಿವುಡ್‌ನ ಬಹುನಿರೀಕ್ಷಿತ ‘ಡಾನ್ 3’ (Don 3) ಚಿತ್ರದಿಂದ ನಟ ರಣವೀರ್ ಸಿಂಗ್ ದಿಢೀರ್ ಹೊರಬಂದಿರುವುದು ಮತ್ತು ನಿರ್ಮಾಪಕ ಫರ್ಹಾನ್ ಅಖ್ತರ್ ಅವರೊಂದಿಗಿನ ವಿವಾದ ಸದ್ಯ ಚಿತ್ರರಂಗದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚೆಗೆ ನಡೆದ ಸರಣಿ ಸಂಧಾನ ಸಭೆಗಳಲ್ಲಿ ರಣವೀರ್ ಸಿಂಗ್ (Ranveer Singh) ಈ ಪ್ರಾಜೆಕ್ಟ್‌ನಿಂದ ಹೊರಬರಲು ತಮಗಿದ್ದ ಅಸಮಾಧಾನಗಳನ್ನು ಬಿಚ್ಚಿಟ್ಟಿದ್ದಾರೆ ಎಂದು ‘ವೆರೈಟಿ’ ವರದಿ ಮಾಡಿದೆ. ಚಿತ್ರರಂಗದ ಹಿರಿಯರ ಸಮ್ಮುಖದಲ್ಲಿ ನಡೆದ ಈ ರಹಸ್ಯ ಸಭೆ ಹಲವು ವಿಷಯಗಳು ಹೊರಬಂದಿವೆ. ‘ಡಾನ್ 3’ ಚಿತ್ರದ…

Read More

ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್!

ಬೆಂಗಳೂರು, ಜೂನ್ 03):  ಡಿ ಕೆ. ಶಿವಕುಮಾರ್ (DK Shivakumar) ಅವರು ಕೈಯಲ್ಲಿ ಸಂವಿಧಾನ ಹಿಡಿದುಕೊಂಡು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಲೋಕಭವನದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಡಿಕೆ ಶಿವಕುಮಾರ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಇನ್ನು ಡಿಕೆ ಶಿವಕುಮಾರ್ ಅವರು ವೀರ ಗಂಗಾಧರ ಅಜ್ಜಯ್ಯ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು. ವಿಶೇಷ ಅಂದ್ರೆ ಡಿಕೆಶಿ ರೇಷ್ಮೆ ಪಂಚೆ, ಜುಬ್ಬ, ಶಲ್ಯ ಧರಿಸಿ ಸಾಂಪ್ರದಾಯಿಕ ಉಡುಗೆ ತೊಟ್ಟು ಗಮನಸೆಳೆದ ಡಿಕೆಶಿ, ಪ್ರಮಾಣ ವಚನ…

Read More

Vastu for Tulsi Plant: ಮನೆಯ ಈ ದಿಕ್ಕಿನಲ್ಲಿ ತಪ್ಪಿಯೂ ತುಳಸಿ ಇಡಬೇಡಿ! – Kannada News

ಮನೆಯ ಈ ದಿಕ್ಕಿನಲ್ಲಿ ತಪ್ಪಿಯೂ ತುಳಸಿ ಇಡಬೇಡಿ! Image Credit source: Pinterest ವಾಸ್ತು ಶಾಸ್ತ್ರದ ಪ್ರಕಾರ, ತುಳಸಿ ಗಿಡವನ್ನು ಇರಿಸಲು ಈಶಾನ್ಯ (North-East) ಅಥವಾ ಪೂರ್ವ (East) ದಿಕ್ಕನ್ನು ಅತ್ಯಂತ ಮಂಗಳಕರ ಎಂದು ಪರಿಗಣಿಸಲಾಗುತ್ತದೆ. ಈಶಾನ್ಯವನ್ನು ದೇವ ಮೂಲೆ ಎಂದು ಕರೆಯಲಾಗುವುದರಿಂದ, ಇಲ್ಲಿ ತುಳಸಿ ಇಡುವುದರಿಂದ ಮನೆಯಲ್ಲಿ ಧನಾತ್ಮಕ ಶಕ್ತಿ ಹೆಚ್ಚುತ್ತದೆ. ಜೊತೆಗೆ, ವೈಜ್ಞಾನಿಕವಾಗಿಯೂ ಈ ದಿಕ್ಕುಗಳಲ್ಲಿ ಸಸ್ಯಕ್ಕೆ ಅಗತ್ಯವಿರುವ ಸಮೃದ್ಧ ಸೂರ್ಯನ ಬೆಳಕು ಸಿಗುವುದರಿಂದ ಗಿಡವು ಆರೋಗ್ಯಕರವಾಗಿ ಬೆಳೆಯುತ್ತದೆ. ಇದು ಕುಟುಂಬಕ್ಕೆ ಆರೋಗ್ಯ ಮತ್ತು…

Read More

Video: ಕೆಚಪ್ ಬದಲು ಕೆಪಚ್ ಎಂದು ವಾದಿಸಿದ ಪುಟಾಣಿ, ವೈರಲ್ ಆಯ್ತು ದೃಶ್ಯ

ಮನೆಯಲ್ಲಿ ಪುಟ್ಟ ಮಕ್ಕಳಿದ್ದು (little kids) ಬಿಟ್ಟರೆ ಎಲ್ಲಾ ನೋವುಗಳನ್ನು ಈ ಕಂದಮ್ಮಗಳ ಆಟ ತುಂಟಾಟವನ್ನು ನೋಡಿ ಮರೆಯುತ್ತಾರೆ. ಈ ಪುಟಾಣಿಗಳ ತೊದಲು ನುಡಿಯನ್ನು ಆಲಿಸುವುದು ಇನ್ನು ಚೆನ್ನ. ಹೀಗಾಗಿ ಮಕ್ಕಳ ತೊದಲು ನುಡಿಗಳನ್ನು ಕೇಳಲು ಎಲ್ಲರೂ ಇಷ್ಟ ಪಡ್ತಾರೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಪುಟಾಣಿಯೊಂದು ಕೆಚಪ್ ಎನ್ನುವ ಬದಲು ಕೆಪಚ್ ಎಂದು ಮುದ್ದಾಗಿ ಹೇಳಿದೆ. ಈ ಪುಟಾಣಿ ಕ್ಯೂಟ್ ರಿಯಾಕ್ಷನ್ ನೋಡಿ ನೆಟ್ಟಿಗರು ಫಿದಾ ಆಗಿದ್ದಾರೆ. myrumoments ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಕ್ಲಿಪಿಂಗ್‌ನಲ್ಲಿ…

Read More

ಕೌಶಲ್ಯದ ಆಟವಾದರೂ ಬೆಟ್ಟಿಂಗ್ ಇದ್ದರೆ ಸಾಂವಿಧಾನಿಕ ರಕ್ಷಣೆ ಇಲ್ಲ; ಕರ್ನಾಟಕದ ಕಾನೂನು ಎತ್ತಿಹಿಡಿದ ಸುಪ್ರೀಂಕೋರ್ಟ್ – Kannada News

ನವದೆಹಲಿ, ಜೂನ್ 3: ಆನ್‌ಲೈನ್ ಗೇಮಿಂಗ್ ಮತ್ತು ಜೂಜಾಟದ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್‌ನಿಂದ ಭಾರಿ ಜಯ ಸಿಕ್ಕಿದೆ. ಹಣ ಅಥವಾ ಪಣವನ್ನು ಒಡ್ಡಿ ಆಡುವ (with stakes) ಆನ್‌ಲೈನ್ ಕೌಶಲ್ಯದ ಆಟಗಳ (Games of Skill) ಮೇಲಿನ ಬೆಟ್ಟಿಂಗ್‌ಗೆ ಯಾವುದೇ ಸಾಂವಿಧಾನಿಕ ರಕ್ಷಣೆ ಇಲ್ಲ ಎಂದು ಸುಪ್ರೀಂ ಕೋರ್ಟ್ (Supreme Court) ಐತಿಹಾಸಿಕ ತೀರ್ಪು ನೀಡಿದೆ. ಇದರೊಂದಿಗೆ, ಆನ್‌ಲೈನ್ ಜೂಜಾಟ ಮತ್ತು ಬೆಟ್ಟಿಂಗ್ ಅನ್ನು ನಿಷೇಧಿಸುವ ಕರ್ನಾಟಕ ಮತ್ತು ತಮಿಳುನಾಡು…

Read More

ಭಾರತ-ಬಾಂಗ್ಲಾ ಗಡಿ ಬೇಲಿ ನಿರ್ಮಾಣಕ್ಕೆ ಪಶ್ಚಿಮ ಬಂಗಾಳದಿಂದ ಬಿಎಸ್‌ಎಫ್‌ಗೆ 31 ಎಕರೆ ಹಸ್ತಾಂತರ – Kannada News

ಕೊಲ್ಕತ್ತಾ, ಜೂನ್ 3: ಭಾರತ ಮತ್ತು ಬಾಂಗ್ಲಾದೇಶದ ಗಡಿಯಲ್ಲಿ (Bangladesh Border) ಅಕ್ರಮ ನುಸುಳುವಿಕೆ ಮತ್ತು ಕಳ್ಳಸಾಗಣೆಗೆ ಶಾಶ್ವತವಾಗಿ ಬ್ರೇಕ್ ಹಾಕಲು ಕೇಂದ್ರ ಸರ್ಕಾರ ಹಾಗೂ ಪಶ್ಚಿಮ ಬಂಗಾಳ ಸರ್ಕಾರಗಳು ಮಹತ್ವದ ಹೆಜ್ಜೆ ಇಟ್ಟಿವೆ. ಗಡಿ ಭಾಗದಲ್ಲಿ ಬಾಕಿ ಉಳಿದಿರುವ ಬೇಲಿ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲು ಪಶ್ಚಿಮ ಬಂಗಾಳ ಸರ್ಕಾರವು ಬರೋಬ್ಬರಿ 31 ಎಕರೆ ಭೂಮಿಯನ್ನು ಗಡಿ ಭದ್ರತಾ ಪಡೆಗೆ (BSF) ಹಸ್ತಾಂತರಿಸಿದೆ. ದಾಖಲೆಗಳಿಲ್ಲದ ಬಾಂಗ್ಲಾದೇಶಿ ವಲಸಿಗರ ವಿರುದ್ಧ ದೇಶಾದ್ಯಂತ ಕಠಿಣ ಕ್ರಮ ಕೈಗೊಳ್ಳಲಾಗುತ್ತಿರುವ ಬೆನ್ನಲ್ಲೇ ಅಂತಾರಾಷ್ಟ್ರೀಯ…

Read More

ಬೆಂಗಳೂರಿನಲ್ಲಿ ಹಳೇ ಕಾಲದ ‘ಬಾಯ್ಲರ್ ಚಹಾ’ ಕುಡಿಯಬೇಕೇ?: ಹಾಗಾದ್ರೆ ವಸಂತನಗರದ ಈ ಸ್ಪಾಟ್‌ಗೆ ಒಮ್ಮೆ ವಿಸಿಟ್ ಕೊಡಿ! – Kannada News

ಬೆಂಗಳೂರು, ಜೂ.3: ಆಧುನಿಕ ಕೆಫೆಗಳು ಮತ್ತು ಕೃತಕ ಟೀ ಮೇಕರ್‌ಗಳ ಹಾವಳಿಯ ನಡುವೆ, ಬೆಂಗಳೂರಿನಲ್ಲಿ ಸಾಂಪ್ರದಾಯಿಕ ಟೀ ಬಾಯ್ಲರ್‌ನಲ್ಲಿ (Traditional Tea Boiler) ಹದವಾಗಿ ಕುದಿಸಿದ ಚಹಾದ ಅಪ್ಪಟ ರುಚಿಯನ್ನು ಹುಡುಕುವುದು ಈಗ ನಿಜಕ್ಕೂ ಅಪರೂಪದ ಸಂಗತಿಯಾಗಿದೆ. ಆದರೆ, ಹಳೇ ಕಾಲದ ಆ ಅದ್ಭುತ ರುಚಿ ಮತ್ತು ಫೀಲ್ ಅನ್ನು ಇಂದಿಗೂ ಯಥಾವತ್ತಾಗಿ ಉಳಿಸಿಕೊಂಡು ಬಂದಿದೆ ಬೆಂಗಳೂರಿನ ವಸಂತನಗರದಲ್ಲಿರುವ ಪ್ರಸಿದ್ಧ ‘ಮುರುಗನ್ ಟೀ ಸ್ಟಾಲ್’. ಚಹಾ ಪ್ರಿಯರ ಪ್ರಕಾರ, ನಾರ್ಮಲ್ ಪಾತ್ರೆಯಲ್ಲಿ ಮಾಡುವ ಚಹಾಕ್ಕಿಂತಲೂ, ತಾಮ್ರ ಅಥವಾ…

Read More

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ

ಡಿಕೆ ಶಿವಕುಮಾರ್ (DK Shivakumar) ಅವರು ಇಂದು (ಜೂನ್ 3) ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ರಾಜ್ಯ ಮತ್ತು ಕೆಲ ನೆರೆ ರಾಜ್ಯಗಳ ರಾಜಕೀಯ ಮುಖಂಡರು, ಗಣ್ಯರನ್ನು ಆಹ್ವಾನಿಸಲಾಗಿದೆ. ಕನ್ನಡ ಚಿತ್ರರಂಗದ ಕೆಲವು ಸೆಲೆಬ್ರಿಟಿಗಳಿಗೂ ಸಹ ಆಹ್ವಾನವಿದೆ. ನಟಿ ರಮ್ಯಾ ಅವರು ಈ ಹಿಂದೆ ಕಾಂಗ್ರೆಸ್ ಸಂಸದೆ ಆಗಿದ್ದವರು, ಈಗ ಸಕ್ರಿಯ ರಾಜಕೀಯದಿಂದ ದೂರ ಇದ್ದರೂ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿದ್ದಾರೆ. ಡಿಕೆ ಶಿವಕುಮಾರ್ ಅವರಿಗೆ ಆಪ್ತರೂ ಆಗಿರುವ ನಟಿ ರಮ್ಯಾ…

Read More