Headlines

ಬೆಂಗಳೂರಿನಲ್ಲಿ ದೇಶದ ಮೊದಲ ‘ಡಬಲ್ ಡೆಕ್ಕರ್’ ಸಾರಿಗೆ: ಒಂದೇ ಮಾರ್ಗದಲ್ಲಿ ಮೆಟ್ರೋ ಮತ್ತು ಸಬರ್ಬನ್ ರೈಲು; 169 ಕೋಟಿ ರೂ. ಉಳಿತಾಯ! – Kannada News

ಬೆಂಗಳೂರು, ಜೂ.3: ಸಿಲಿಕಾನ್ ಸಿಟಿ ಬೆಂಗಳೂರಿನ ಸಂಚಾರ ದಟ್ಟಣೆಗೆ ಮುಕ್ತಿ ನೀಡಲು ಜಾರಿಯಾಗುತ್ತಿರುವ ಎರಡು ಪ್ರಮುಖ ಸಾರಿಗೆ ಯೋಜನೆಗಳಾದ ‘ನಮ್ಮ ಮೆಟ್ರೋ’ (Namma Metro) ಮತ್ತು ‘ಬೆಂಗಳೂರು ಉಪನಗರ ರೈಲು’ (Suburban Rail) ಪೂರ್ವ ಬೆಂಗಳೂರಿನ ಬೆನ್ನಿಗಾನಹಳ್ಳಿಯಲ್ಲಿ ಸಂಪರ್ಕ ಸಾಧಿಸಲಿದೆ. ನಗರದ ಸಾರಿಗೆ ಇತಿಹಾಸದಲ್ಲೇ ಮೊದಲ ಬಾರಿಗೆ, ಈ ಎರಡು ಬೃಹತ್ ಸಾರಿಗೆ ವ್ಯವಸ್ಥೆಗಳು ಒಂದೇ ಮಾರ್ಗದಲ್ಲಿ (Shared Alignment), ಒಂದರ ಕೆಳಗೆ ಮತ್ತೊಂದರಂತೆ ಸಂಚರಿಸುವ ಅತ್ಯಂತ ಸುಧಾರಿತ ತಂತ್ರಜ್ಞಾನವನ್ನು ಅಳವಡಿಸಿಕೊಂಡಿವೆ. ಇದು ಭೂಸ್ವಾಧೀನದ ವೆಚ್ಚ ಮತ್ತು…

Read More

‘ಧುರಂಧರ್’ ಬಳಿಕ ಬುದ್ಧಿ ಕಲಿತ ಯಶ್ ರಾಜ್ ಫಿಲಮ್ಸ್, ಚಿತ್ರಕತೆ ಬದಲು – Kannada News

ಬಾಲಿವುಡ್ (Bollywood) ಸ್ಪೈ ಸಿನಿಮಾಗಳೆಂದರೆ ಅವುಗಳಲ್ಲಿ ಮಾಸ್ ಸೀನ್​​ಗಳು, ಎಲಿವೇಷನ್​​ ಸೀನ್​​ಗಳು, ಓವರ್ ದಿ ಟಾಪ್ ಆಕ್ಷನ್, ಕಾಮಿಡಿ, ಐಟಂ ಹಾಡುಗಳು, ನಾಯಕನ ಥರಹೇವಾರಿ ಡ್ರೆಸ್ಸುಗಳು, ನಾಯಕಿಯ ಬಿಕಿನಿ ಸೀನ್ ಇರಲೇ ಬೇಕು ಎಂಬ ಸಂಪ್ರದಾಯ ಇತ್ತು. ಇವುಗಳ ಜೊತೆಗೆ ಭಾರತ ಮತ್ತು ಪಾಕಿಸ್ತಾನದ ಸ್ಪೈಗಳು ಒಟ್ಟಾಗಿ ಮತ್ತೊಬ್ಬ ವಿದೇಶಿ ವಿಲನ್ ವಿರುದ್ಧ ಹೊಡೆದಾಡುವ ಕತೆ ಇರುತ್ತಿತ್ತು. ಈ ಹಿಂದೆ ಬಂದಿದ್ದ ಸ್ಪೈ ಆಕ್ಷನ್ ಸಿನಿಮಾಗಳಾದ ‘ಟೈಗರ್’, ‘ಪಠಾಣ್’, ‘ವಾರ್’, ‘ಬ್ಯಾಂಗ್ ಬ್ಯಾಂಗ್’ ಇವೆಲ್ಲ ಸಿನಿಮಾಗಳಲ್ಲಿ ಮೇಲೆ…

Read More

ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್​​ಡೇಟ್? ಆ ದಿನಕ್ಕಿರುವ ವಿಶೇಷತೆ ಏನು? – Kannada News

ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ, ಜಾಗತಿಕ ಮಟ್ಟದಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ‘ಟಾಕ್ಸಿಕ್’ ಸಿನಿಮಾದ ಅಪ್‌ಡೇಟ್‌ಗಾಗಿ ಇಡೀ ಭಾರತೀಯ ಚಿತ್ರರಂಗ ಕಾದು ಕುಳಿತಿದೆ. ‘ಕೆಜಿಎಫ್’ ಸರಣಿಯ ಅದ್ದೂರಿ ಸಕ್ಸಸ್ ನಂತರ ಯಶ್ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಹೀಗಾಗಿ, ಕನ್ನಡ ಚಿತ್ರರಂಗವನ್ನು ವಿಶ್ವಮಟ್ಟಕ್ಕೆ ಕೊಂಡೊಯ್ಯುವ ದೊಡ್ಡ ಯೋಜನೆಯೊಂದಿಗೆ ‘ಟಾಕ್ಸಿಕ್’ ಚಿತ್ರವನ್ನು ಸಿದ್ಧಪಡಿಸಲಾಗುತ್ತಿದೆ. ಈಗ ಎಲ್ಲರ ಗಮನ ಜೂನ್ 8ರ ಮೇಲಿದೆ. ಸದ್ಯ ‘ಟಾಕ್ಸಿಕ್’ ಚಿತ್ರದ ಕೆಲಸಗಳು ಬಿರುಸಿನಿಂದ ಸಾಗುತ್ತಿದೆ. ಮತ್ತೊಂದೆಡೆ ಸಿನಿಮಾದ ರಿಲೀಸ್ ದಿನಾಂಕ ಪದೇ ಪದೇ…

Read More

ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ – Kannada News

R. PraggnanandhaaImage Credit source: Rediff ನಾರ್ವೆ ಚೆಸ್ 2026 ಟೂರ್ನಮೆಂಟ್‌ನಲ್ಲಿ ಭಾರತದ ಯುವ ಚೆಸ್ ತಾರೆ, 20 ವರ್ಷದ ಆರ್. ಪ್ರಜ್ಞಾನಂದ (R Praggnanandhaa) ಇತಿಹಾಸ ಸೃಷ್ಟಿಸಿದ್ದಾರೆ. ವಿಶ್ವದ ನಂಬರ್ 1 ಆಟಗಾರ ಮ್ಯಾಗ್ನಸ್ ಕಾರ್ಲ್‌ಸನ್ (Magnus Carlsen) ಅವರನ್ನೇ ಅವರ ತವರಿನಲ್ಲಿ ಎರಡು ಬಾರಿ ಸೋಲಿಸುವ ಮೂಲಕ, ಭಾರತದ ಚೆಸ್ ದಂತಕಥೆ ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ಐತಿಹಾಸಿಕ ದಾಖಲೆಯನ್ನು ಪ್ರಜ್ಞಾನಂದ ಸರಿಗಟ್ಟಿದ್ದಾರೆ. ಈ ಮೂಲಕ ಒಂದೇ ಕ್ಲಾಸಿಕಲ್ ಟೂರ್ನಮೆಂಟ್‌ನಲ್ಲಿ ಮ್ಯಾಗ್ನಸ್…

Read More

Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ – Kannada News

ಈಗಿನ ಕಾಲದಲ್ಲಿ ಗುರುತು ಪರಿಚಯವಿಲ್ಲದ ವ್ಯಕ್ತಿಗಳ ಜತೆಗೆ ಮಾತನಾಡಲು ಹಿಂದೇಟು ಹಾಕುತ್ತಾರೆ. ಅಂತಹದರಲ್ಲಿ ಈ ಜಪಾನಿನ ವೃದ್ಧ ದಂಪತಿ ಭಾರತೀಯ ವ್ಯಕ್ತಿಯನ್ನು ಊಟಕ್ಕೆ ಆಹ್ವಾನಿಸಿದ್ದಾರಂತೆ. ಹೌದು, ಜಪಾನ್‌ನಲ್ಲಿ(Japan) ಟ್ರಕ್ಕಿಂಗ್ ಮಾಡುತ್ತಿದ್ದ ವೇಳೆ ಬಾಟಲಿಯಲ್ಲಿದ್ದ ನೀರು ಖಾಲಿಯಾಗಿದೆ. ಈ ವೇಳೆ ಅಲ್ಲೇ ಇದ್ದ ಸ್ಥಳೀಯ ವೃದ್ಧ ದಂಪತಿ (Elderly couple) ಭಾರತೀಯನಿಗೆ ನೀರಿನ ಬದಲು ಜ್ಯೂಸ್ ನೀಡಿದಲ್ಲದೇ, ತಮ್ಮ ಮನೆಗೆ ಊಟಕ್ಕೂ ಕರೆದಿದ್ದಾರಂತೆ. ಈ ವೃದ್ಧ ದಂಪತಿಯ ಒಳ್ಳೆಯ ಮನಸ್ಸನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಆದಿತ್ಯ ಪಾರ್ಖಿ ಎಂಬ ಭಾರತೀಯ…

Read More

ಹಾಲಿವುಡ್​ಗೆ ರೀಮೇಕ್ ಆದ ಭಾರತೀಯ ಸಿನಿಮಾಗಳಿವು

1993 ರಲ್ಲಿ ಬಿಡುಗಡೆ ಆದ ಶಾರುಖ್ ಖಾನ್ ನಟನೆಯ ‘ಡರ್’ (ಕನ್ನಡದಲ್ಲಿ ಪ್ರೀತ್ಸೆ) ಸಿನಿಮಾವನ್ನು ಹಾಲಿವುಡ್ ರೀಮೇಕ್ ಮಾಡಿತ್ತು. ಕತೆ ಮಾತ್ರವಲ್ಲ ಹೆಸರನ್ನೂ ಬದಲಾಯಿಸಲಿಲ್ಲ. ಹಿಂದಿಯಲ್ಲಿ ‘ಡರ್’ ಎಂದಿದ್ದ ಹೆಸರನ್ನು ಇಂಗ್ಲೀಷ್​​ನಲ್ಲಿ ‘ಫಿಯರ್’ ಎಂದು ಮಾಡಲಾಯ್ತು. ಈ ಸಿನಿಮಾ 1996 ರಲ್ಲಿ ಬಿಡುಗಡೆ ಆಯ್ತು. 1995 ರಲ್ಲಿ ಬಿಡುಗಡೆ ಆದ ರಾಮ್ ಗೋಪಾಲ್ ವರ್ಮಾ ನಿರ್ದೇಶಿಸಿ ಆಮಿರ್ ಖಾನ್, ಜಾಕಿ ಶ್ರಾಫ್, ಊರ್ಮಿಳಾ ಮತೋಡ್ಕರ್ ನಟಿಸಿದ್ದ ‘ರಂಗೀಲಾ’ ಸಿನಿಮಾ ಹಾಲಿವುಡ್​​ನಲ್ಲಿ ‘ವಿನ್ ಎ ಡೇಟ್ ವಿತ್ ಹ್ಯಾಮಿಲ್ಟನ್’…

Read More

ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂಗಳನ್ನು ಆಹ್ವಾನಿಸಿದ ಡಿಕೆಶಿ: ದೇವೇಗೌಡರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ನಿಯೋಜಿತ ಮುಖ್ಯಮಂತ್ರಿ – Kannada News

ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂಗಳಿಗೆ ಡಿಕೆಶಿ ಆಹ್ವಾನImage Credit source: Tv9 Kannada ಬೆಂಗಳೂರು, ಜೂನ್​​, 03: ಕರ್ನಾಟಕದ ನೂತನ ಸಿಎಂ ಆಗಿ ಇಂದು ಸಂಜೆ ಪ್ರಮಾಣವಚನ ಹಿನ್ನೆಲೆ ರಾಜ್ಯದ ಮಾಜಿ ಮುಖ್ಯಮಂತ್ರಿಗಳ ಮನೆಗಳಿಗೆ ಖುದ್ದಾಗಿ ತೆರಳಿ ಡಿ.ಕೆ. ಶಿವಕುಮಾರ್ (DK Shivakumar)​​ ಆಹ್ವಾನ ನೀಡಿದ್ದಾರೆ. ಸಂಜೆ 4 ಗಂಟೆ 05 ನಿಮಿಷಕ್ಕೆ ನಡೆಯಲಿರುವ ಪದಗ್ರಹಣಕ್ಕೆ ಆಗಮಿಸುವಂತೆ ಸಿದ್ದರಾಮಯ್ಯ, ಬಿ.ಎಸ್​​. ಯಡಿಯೂರಪ್ಪ ಮತ್ತು ಮಾಜಿ ಪ್ರಧಾನಿ ದೇವೇಗೌಡರನ್ನು ಡಿಕೆಶಿ ಆಮಂತ್ರಿಸಿದ್ದಾರೆ. ಮೊದಲು ಸಿದ್ದರಾಮಯ್ಯ ನಿವಾಸಕ್ಕೆ ನಿಯೋಜಿತ ಸಿಎಂ…

Read More

8 ವರ್ಷಗಳ ಬಳಿಕ ಟೀಮ್ ಇಂಡಿಯಾಗೆ ಎದುರಾಳಿ! – Kannada News

ಇಂಡಿಯನ್ ಪ್ರೀಮಿಯರ್ ಲೀಗ್ ಮುಗಿಸಿರುವ ಟೀಮ್ ಇಂಡಿಯಾ ಆಟಗಾರರು ಇದೀಗ ತವರಿನಲ್ಲಿ ಅಫ್ಘಾನಿಸ್ತಾನ್ ವಿರುದ್ಧ ಟೆಸ್ಟ್ ಪಂದ್ಯವನ್ನಾಡಲು ಸಜ್ಜಾಗಿದ್ದಾರೆ. ಅದು ಕೂಡ 8 ಸುದೀರ್ಘ 8 ವರ್ಷಗಳ ಬಳಿಕ. ಅಂದರೆ ಉಭಯ ತಂಡಗಳು ಟೆಸ್ಟ್ ಪಂದ್ಯದಲ್ಲಿ ಮುಖಾಮುಖಿಯಾಗಿ ಬರೋಬ್ಬರಿ 8 ವರ್ಷಗಳು ಕಳೆದಿವೆ. ಭಾರತ ಮತ್ತು ಅಫ್ಘಾನಿಸ್ತಾನ್ ತಂಡ ಈವರೆಗೆ ಏಕೈಕ ಟೆಸ್ಟ್ ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಅದು ಸಹ 2018 ರಲ್ಲಿ. ಈ ಪಂದ್ಯವನ್ನು ಟೀಮ್ ಇಂಡಿಯಾ ಇನಿಂಗ್ಸ್ ಹಾಗೂ 262 ರನ್​ಗಳ ಜಯ ಸಾಧಿಸಿತ್ತು. ಬೆಂಗಳೂರಿನ…

Read More

ಅಮೆರಿಕ ಹೊಸ ‘ವರಸೆ’; ಫೋರ್ಸ್ಡ್ ಲೇಬರ್ ಹೆಸರಲ್ಲಿ ಭಾರತ ಸೇರಿ 60 ದೇಶಗಳ ಮೇಲೆ ಶೇ. 12.5 ಹೆಚ್ಚುವರಿ ಸುಂಕಕ್ಕೆ ಯೋಜನೆ – Kannada News

ವಾಷಿಂಗ್ಟನ್, ಜೂನ್ 3: ಭಾರತ ಮತ್ತು ಅಮೆರಿಕ ನಡುವೆ ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಮಾತುಕತೆಗಳು ಪುನರಾರಂಭಗೊಂಡ ಬೆನ್ನಲ್ಲೇ, ಭಾರತಕ್ಕೆ ಅಮೆರಿಕ ಹೊಸದೊಂದು ಆಘಾತ ನೀಡಿದೆ. ಬಲವಂತದ ಕಾರ್ಮಿಕ ಕ್ರಮ ಮೂಲಕ ತಯಾರಾದ ಸರಕುಗಳಿಗೆ ನಿರ್ಬಂಧ ಹಾಕಿಲ್ಲ ಎನ್ನುವ ಕಾರಣವೊಡ್ಡಿ 60 ದೇಶಗಳಿಗೆ ಅಮೆರಿಕ ಶೇ. 12.5ರಷ್ಟು ಹೆಚ್ಚುವರಿ ಸುಂಕವನ್ನು (Tariff) ವಿಧಿಸಲು ಯೋಜಿಸಿದೆ. ಅಮೆರಿಕದ ವ್ಯಾಪಾರ ಪ್ರತಿನಿಧಿ (ಯುಎಸ್ ಟ್ರೇಡ್ ರೆಪ್ರೆಸೆಂಟೇಟಿವ್) ಇಂಥದ್ದೊಂದು ಪ್ರಸ್ತಾಪ ಮಾಡಿದ್ದಾರೆ. ಈ 60 ದೇಶಗಳ ಪಟ್ಟಿಯಲ್ಲಿ ಭಾರತ, ಚೀನಾ, ರಷ್ಯಾ ಮೊದಲಾದವು…

Read More

ಐಪಿಎಲ್ ಮುಗಿಯುತ್ತಿದ್ದಂತೆ ಸಿನಿ ಹಬ್ಬ ಶುರು; ಈ ವಾರ ಥಿಯೇಟರ್​ನಲ್ಲಿ ಬಿಗ್ ಫೈಟ್ – Kannada News

ಕ್ರಿಕೆಟ್ ಜಗತ್ತಿನ ಅತಿ ದೊಡ್ಡ ಹಬ್ಬ ಐಪಿಎಲ್ ಮುಕ್ತಾಯಗೊಳ್ಳುತ್ತಿದ್ದಂತೆ, ಪ್ರೇಕ್ಷಕರು ಮತ್ತೆ ಸಿನಿಮಾ ಥಿಯೇಟರ್‌ಗಳತ್ತ ಮುಖ ಮಾಡುತ್ತಿದ್ದಾರೆ. ಐಪಿಎಲ್ ಕ್ರೇಜ್‌ನಿಂದಾಗಿ ಇಷ್ಟು ದಿನ ದೊಡ್ಡ ಸಿನಿಮಾಗಳ ಬಿಡುಗಡೆ ಕೊಂಚ ಕಮ್ಮಿಯಾಗಿತ್ತು. ಆದರೆ ಈಗ ಕ್ರಿಕೆಟ್ ಜ್ವರ ಇಳಿಯುತ್ತಿದ್ದಂತೆ ಬಾಕ್ಸ್ ಆಫೀಸ್‌ನಲ್ಲಿ ಅಸಲಿ ಜಟಾಪಟಿ ಆರಂಭವಾಗಿದೆ. ಈ ವಾರ ಚಿತ್ರಮಂದಿರಗಳಲ್ಲಿ ಪ್ರೇಕ್ಷಕರನ್ನು ರಂಜಿಸಲು ಸೌತ್ ಮತ್ತು ಬಾಲಿವುಡ್‌ನ ಬಹುನಿರೀಕ್ಷಿತ ಸಿನಿಮಾಗಳು ಏಕಕಾಲಕ್ಕೆ ತೆರೆಗೆ ಅಪ್ಪಳಿಸುತ್ತಿದ್ದು, ಸಿನಿಮಾ ಪ್ರೇಮಿಗಳಿಗೆ ಜೂನ್ ತಿಂಗಳ ಆರಂಭದಲ್ಲೇ ಭರಪೂರ ಮನರಂಜನೆಯ ಹಬ್ಬ ಸಿಗಲಿದೆ. ‘ಮ್ಯಾಂಗೋ…

Read More