ಆಸ್ಟ್ರೇಲಿಯನ್ ಓಪನ್‌ ಫೈನಲ್​ಗೇರಿದ ನೊವಾಕ್ ಜೊಕೊವಿಕ್ – Kannada News | Novak Djokovic vs Alcaraz: 2026 Australian Open Final Set for Historic 25th Slam

ಟೆನಿಸ್ ದಂತಕಥೆ ನೊವಾಕ್ ಜೊಕೊವಿಕ್ ವಿಶ್ವದ 2 ನೇ ಶ್ರೇಯಾಂಕಿತ ಆಟಗಾರ ಜಾನಿಕ್ ಸಿನ್ನರ್ ಅವರನ್ನು ಸೋಲಿಸುವ ಮೂಲಕ 2026 ರ ಆಸ್ಟ್ರೇಲಿಯನ್ ಓಪನ್‌ನ ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ. ತಮ್ಮ 25 ನೇ ಗ್ರ್ಯಾಂಡ್ ಸ್ಲ್ಯಾಮ್‌ಗೆ ಒಂದು ಹೆಜ್ಜೆ ದೂರದಲ್ಲಿರುವ ಜೊಕೊವಿಕ್ ಫೈನಲ್‌ನಲ್ಲಿ ವಿಶ್ವದ 1 ನೇ ಶ್ರೇಯಾಂಕಿತ ಕಾರ್ಲೋಸ್ ಅಲ್ಕರಾಜ್ ಅವರನ್ನು ಎದುರಿಸಲಿದ್ದಾರೆ. ಸುಮಾರು ನಾಲ್ಕು ಗಂಟೆ 10 ನಿಮಿಷಗಳ ಕಾಲ ನಡೆದ ಈ ಪಂದ್ಯವನ್ನು 3-6, 6-3, 4-6, 6-4, 6-4 ಸೆಟ್‌ಗಳಿಂದ ಗೆದ್ದ ಜೊಕೊವಿಕ್, ಸಿನ್ನರ್ ಅವರ ಸತತ ಐದು ಪಂದ್ಯಗಳ ಗೆಲುವಿನ ಸರಣಿಯನ್ನು ಮುರಿದರು.

38 ವರ್ಷದ ಸರ್ಬಿಯಾ ಸ್ಟಾರ್ ಜೊಕೊವಿಕ್ ಮೊದಲ ಸೆಟ್ ಸೋತ ನಂತರ ಬಲವಾದ ಪುನರಾಗಮನ ಮಾಡಿ, ಎರಡನೇ ಮತ್ತು ನಾಲ್ಕನೇ ಸೆಟ್‌ಗಳನ್ನು ಗೆದ್ದರು, ಆದರೆ ಸಿನ್ನರ್ ಮೊದಲ ಮತ್ತು ಮೂರನೇ ಸೆಟ್‌ ಗೆಲ್ಲುವಲ್ಲಿ ಯಶಸ್ವಿಯಾದರು. ಅಂತಿಮವಾಗಿ ಐದನೇ ಸೆಟ್‌ನಲ್ಲಿ ಗೆಲುವು ಸಾಧಿಸಿದ ಜೊಕೊವಿಕ್​ಗೆ ಆಸ್ಟ್ರೇಲಿಯನ್ ಓಪನ್‌ನಲ್ಲಿ ಇದು 11 ನೇ ಫೈನಲ್ ಆಗಿದ್ದು, ಒಮ್ಮೆಯೂ ಫೈನಲ್ ಸೋತಿಲ್ಲ. ಅಂದರೆ 10 ಬಾರಿ ಚಾಂಪಿಯನ್ ಆಗಿರುವ ಜೊಕೊವಿಕ್ 25 ನೇ ಗ್ರ್ಯಾಂಡ್ ಸ್ಲ್ಯಾಮ್ ಪ್ರಶಸ್ತಿ ಮೇಲೆ ಕಣ್ಣಿಟ್ಟಿದ್ದು ಹೊಸ ಇತಿಹಾಸ ಸೃಷ್ಟಿಸುವ ಇರಾದೆಯಲ್ಲಿದ್ದಾರೆ.

ಫೈನಲ್ ಪಂದ್ಯವು ಭಾನುವಾರ, ಫೆಬ್ರವರಿ 1, 2026 ರಂದು ನಡೆಯಲಿದೆ. ಜೊಕೊವಿಕ್ ಅವರ 25 ನೇ ಗ್ರ್ಯಾಂಡ್ ಸ್ಲ್ಯಾಮ್ ಪ್ರಶಸ್ತಿ ಮತ್ತು ಅಲ್ಕರಾಜ್ ಅವರ ಮೊದಲ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿಯನ್ನು ಪಣಕ್ಕಿಟ್ಟಿರುವ ಈ ಐತಿಹಾಸಿಕ ಫೈನಲ್ ಅನ್ನು ಟೆನಿಸ್ ಜಗತ್ತು ಕುತೂಹಲದಿಂದ ಕಾಯುತ್ತಿದೆ.

Source link

ಜನವರಿ 31ರಿಂದ ಗಿಚ್ಚಿ ಗಿಲಿ ಗಿಲಿ ಜೂನಿಯರ್ಸ್: ಈ ಬಾರಿ ಮಕ್ಕಳದ್ದೇ ಹವಾ – Kannada News | Gicchi Gili Gili Juniors to go on air from Jan 31 on Colors Kannada

ಕನ್ನಡ ಕಿರುತೆರೆಯ ಪ್ರೇಕ್ಷಕರಿಗೆ ನಗೆಹಬ್ಬ ಸೃಷ್ಟಿಸಿದ್ದ ಕಲರ್ಸ್‌ ಕನ್ನಡದ ‘ಗಿಚ್ಚಿ ಗಿಲಿಗಿಲಿ’ (Gicchi Gili Gili) ಮೂರು ಸೀಸನ್‌ಗಳನ್ನು ಯಶಸ್ವಿಯಾಗಿ ಈಗಾಗಲೇ ಪೂರ್ಣಗೊಳಿಡಿದೆ. ಈಗ ಮಕ್ಕಳ ಸೈನ್ಯದೊಂದಿಗೆ ವಿಶೇಷ ಆವೃತ್ತಿಯೊಂದಿಗೆ ಪ್ರೇಕ್ಷಕರನ್ನು ರಂಜಿಸಲು ಸಿದ್ಧವಾಗಿದೆ. ಇಡೀ ಫ್ಯಾಮಿಲಿ ಕುಳಿತು ನೋಡುವಂತಹ ಶೋ ಇದಾಗಿದೆ. ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ (Gicchi Gili Gili Juniors) ಕಾರ್ಯಕ್ರಮ ಇದೇ ಶನಿವಾರದಿಂದ (ಜನವರಿ 31) ಶುರುವಾಗಲಿದೆ. ಈಗಾಗಲೇ ಪ್ರೋಮೋಗಳು ಗಮನ ಸೆಳೆದಿದೆ. 5ರಿಂದ 10 ವರ್ಷದ ಒಳಗಿನ ಮಕ್ಕಳು ಹಾಗೂ ಹಿರಿಯ ಹಾಸ್ಯ ಕಲಾವಿದರು ಜೊತೆಗೂಡಿ ನಗಿಸಲಿದ್ದಾರೆ.

ಮಕ್ಕಳ ಮುಗ್ಧತೆ ಹಾಗೂ ಹಿರಿಯ ಕಲಾವಿದರ ಸಮ್ಮಿಲನ ಈ ಬಾರಿ ಆಗಲಿದೆ. ಈ ಪುಟ್ಟ ಮಕ್ಕಳು ಇಲ್ಲಿ ಕೇವಲ ಸ್ಪರ್ಧಿಗಳಲ್ಲ, ಇವರು ವೃತ್ತಿಪರ ನಟರಲ್ಲದಿದ್ದರೂ ಸಹಜವಾದ ಹಾಸ್ಯ ಪ್ರಜ್ಞೆಯೊಂದಿಗೆ ಸ್ಕಿಟ್‌ಗಳಲ್ಲಿ ಮಿಂಚಲಿದ್ದಾರೆ. ಅನುಭವಿ ಹಾಸ್ಯ ಕಲಾವಿದರು ಇವರಿಗೆ ಮಂಟರ್ಸ್‌ ಆಗಿ ಸಾಥ್ ನೀಡಲಿದ್ದಾರೆ. ಮಕ್ಕಳ ದೃಷ್ಟಿಕೋನದಲ್ಲಿ ಪ್ರಪಂಚ ಹೇಗಿರುತ್ತದೆ ಎಂಬ ಕಥೆಗಳು ಮತ್ತು ನಗೆಯ ಸನ್ನಿವೇಶಗಳು ಇಲ್ಲಿ ಅನಾವರಣಗೊಳ್ಳಲಿವೆ.

ಒಬ್ಬ ಸಾಮಾನ್ಯ ಮಗು ನಟನೆಯ ಜಗತ್ತಿನಲ್ಲಿ ಹಾಸ್ಯ ಕಲಾವಿದನಾಗಿ ಹೇಗೆ ವಿಕಸನಗೊಳ್ಳುತ್ತದೆ ಎಂಬುದನ್ನು ಈ ಶೋ ಪ್ರತಿಬಿಂಬಿಸಲಿದೆ. ವಿಭಿನ್ನ ರೀತಿಯ ಕಾರ್ಯಕ್ರಮಗಳನ್ನು ನೀಡುತ್ತ ಬರುತ್ತಿರುವ ಕಲರ್ಸ್‌ ಕನ್ನಡ ವಾಹಿನಿಯು ನನ್ನಮ್ಮ ಸೂಪರ್‌ ಸ್ಟಾರ್‌, ರಾಜ ರಾಣಿ, ಮಜಾ ಟಾಕೀಸ್‌ ರೀತಿಯ ಶೋಗಳನ್ನು ನೀಡಿದೆ. ಇದೀಗ ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್‌’ ಕೂಡ ಸೇರ್ಪಡೆ ಆಗುತ್ತಿದೆ.

ಜನವರಿ 31ರಿಂದ ಪ್ರತಿ ಶನಿವಾರ ಹಾಗೂ ಭಾನುವಾರ ರಾತ್ರಿ 9 ಗಂಟೆಗೆ ‘ಕಲರ್ಸ್‌ ಕನ್ನಡ’ ವಾಹಿನಿಯಲ್ಲಿ ಈ ಶೋ ಪ್ರಸಾರ ಆಗಲಿದೆ. ಈ ಬಾರಿ ಕೂಡ ಸಾಧುಕೋಕಿಲ, ಸೃಜನ್‌ ಲೋಕೇಶ್‌ ಹಾಗೂ ಹಿರಿಯ ನಟಿ ಶ್ರುತಿ ಅವರು ತೀರ್ಪುಗಾರರಾಗಿ ಮುಂದುವರಿಯಲಿದ್ದಾರೆ. ಈ ಬಾರಿ ಅನುಪಮಾ ಗೌಡ ಅವರು ಈ ಶೋನ ನಿರೂಪಣೆ ಮಾಡಲಿದ್ದಾರೆ.

ಇದನ್ನೂ ಓದಿ: ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ

ಆಡಿಷನ್ ಮೂಲಕ ಅತ್ಯಂತ ಚುರುಕಾದ ಮಕ್ಕಳನ್ನು ಶೋಗೆ ಆಯ್ಕೆ ಮಾಡಲಾಗಿದೆ. ‘ನಿನಗಾಗಿ’ ಸೀರಿಯಲ್​​ನಲ್ಲಿ ಕೃಷ್ಣನಾಗಿ ನಟಿಸಿ ಮನೆಮಾತಾಗಿದ್ದ 7 ವರ್ಷದ ಸಿರಿಸಿಂಚನ ಕೂಡ ಈ ತಂಡದಲ್ಲಿದ್ದಾರೆ. ಅಕ್ಷಯ್ ರವಿತೇಜ್ (ಚಿಕ್ಕಮಗಳೂರು), ಗೌಶಿಕ ಗೌಡ (ಶ್ರೀರಂಗಪಟ್ಟಣ), ಚಿರುಶ್ ಆದಿತ್ಯ (ಮಂಗಳೂರು), ಏಕಾoತ್ ಚಂದ್ರಪ್ಪ ಮಲಗುಂದ (ಹಾವೇರಿ), ಪಲ್ಲವಿ (ಅರಕಲಗೂಡು), ಸಿರಿಸಿಂಚನ (ಬೆಂಗಳೂರು), ಆತ್ಮಿ ಗೌಡ (ಪುತ್ತೂರು), ಪ್ರಗ್ಯಾ (ಮಂಗಳೂರು), ಪ್ರಗ್ಯ (ಮಂಗಳೂರು), ಅದ್ವಿಕಾ ಬಾಕಿಲ (ಪುತ್ತೂರು), ಮೋಹಕ್ ಗೌಡ (ಬೆಂಗಳೂರು), ವಿಹಾನ್ ಸೂರ್ಯ (ಮೈಸೂರು), ಮಾದೇಶ (ಹೊಳೆನರಸೀಪುರ) ಈ ಶೋನ ಹೈಲೈಟ್‌ ಆಗಿರುತ್ತಾರೆ.

ಜೂನಿಯರ್ ಹಾಸ್ಯ ಕಲಾವಿದರಿಗೆ ಸೂರ್ಯ ಕುಂದಾಪುರ, ರಾಘವೇಂದ್ರ, ಮಾನಸಾ, ಶಿವು, ಮಂಜು, ಚಂದ್ರಪ್ರಭ, ವಿನೋದ್ ಗೊಬ್ಬರಗಾಲ, ಬಸವರಾಜ್, ಸೂರಜ್, ಪ್ರಶಾಂತ್, ವಾಣಿ, ತುಕಾಲಿ ಸಂತೋಷ್ ಅವರಂತಹ ಹಾಸ್ಯಗಾರರು ಸಾಥ್ ನೀಡಲಿದ್ದಾರೆ. ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ ಶೋನಲ್ಲಿ ಮಕ್ಕಳ ತರಲೆ, ತುಂಟಾಟ, ಅತಿ ಮುಗ್ಧತೆಯ ಈ ಹಾಸ್ಯ ಇರಲಿದೆ ಎಂದು ವಾಹಿನಿ ತಿಳಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ನಾಳೆ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣವಚನ ಸ್ವೀಕಾರ – Kannada News | Ajit pawars Wife Sunetra Pawar Likely to take oath as Maharashtra Deputy Chief Minister Tomorrow

ಮುಂಬೈ, ಜನವರಿ 30: ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಮತ್ತು ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ (Sunetra Pawar) ಅವರು ಮಹಾರಾಷ್ಟ್ರದ ಹೊಸ ಉಪಮುಖ್ಯಮಂತ್ರಿಯಾಗಿ ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬುಧವಾರ ಬಾರಾಮತಿಯಲ್ಲಿ ಸಂಭವಿಸಿದ ಅಪಘಾತದಲ್ಲಿ 66 ವರ್ಷದ ಅಜಿತ್ ಪವಾರ್ ಸಾವನ್ನಪ್ಪಿದ್ದರು. ಅವರಿಂದ ತೆರವಾಗಿದ್ದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಸುನೇತ್ರಾ ಪವಾರ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದ್ದು, ನಾಳೆ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸುನೇತ್ರಾ ಪವಾರ್ ಹೆಸರನ್ನು ಅಂತಿಮಗೊಳಿಸಲು ಎನ್​ಸಿಪಿ ನಾಳೆ ಮಧ್ಯಾಹ್ನ 2 ಗಂಟೆಗೆ ಮುಂಬೈನ ವಿಧಾನ ಭವನದಲ್ಲಿ ಶಾಸಕಾಂಗ ಪಕ್ಷದ ಸಭೆಯನ್ನು ನಡೆಸಲಿದೆ. ಇದರ ನಂತರ ಸಂಜೆ ಸುನೇತ್ರಾ ಪವಾರ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಈ ಮೂಲಕ ಅವರು ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಲಿದ್ದಾರೆ.

ಸುನೇತ್ರಾ ಪವಾರ್ ಪ್ರಸ್ತುತ ರಾಜ್ಯಸಭಾ ಸದಸ್ಯೆಯಾಗಿದ್ದು, ಮಹಾರಾಷ್ಟ್ರ ವಿಧಾನಸಭೆಯ ಎರಡೂ ಸದನಗಳ ಸದಸ್ಯರಲ್ಲ. ಆದರೂ ಅವರ ಹೆಸರನ್ನು ಆಯ್ಕೆ ಮಾಡಲಾಗಿದೆ.

ಇದನ್ನೂ ಓದಿ: ಅಜಿತ್ ಪವಾರ್ ಪಕ್ಷದ ಚಿಹ್ನೆಯಾದ ಗಡಿಯಾರವೇ ಅವರ ಸಾವಿಗೆ ಸಾಕ್ಷಿಯಾಯ್ತು!

ಹಾಗೇ, ಪ್ರಫುಲ್ ಪಟೇಲ್ ಅವರನ್ನು ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ. ಅಜಿತ್ ಪವಾರ್ ಮಹಾರಾಷ್ಟ್ರದ ಅತ್ಯಂತ ದೀರ್ಘಾವಧಿಯ ಉಪಮುಖ್ಯಮಂತ್ರಿಯಾಗಿದ್ದರು ಮತ್ತು ದೇವೇಂದ್ರ ಫಡ್ನವೀಸ್ ಸರ್ಕಾರದಲ್ಲಿ ಹಣಕಾಸು, ಯೋಜನೆ ಮತ್ತು ಅಬಕಾರಿ ಇಲಾಖೆಗಳನ್ನು ಅವರು ನಿರ್ವಹಿಸಿದ್ದರು.

ಇದನ್ನೂ ಓದಿ: ಎನ್​ಸಿಪಿ ಮತ್ತೆ ವಿಲೀನವಾಗುತ್ತಾ? ಅಜಿತ್ ಪವಾರ್ ಕೊನೆಯ ಆಸೆಯ ಬಗ್ಗೆ ಶುರುವಾಯ್ತು ಚರ್ಚೆ

ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವನ್ನಪ್ಪಿದ್ದರು. ಅಜಿತ್ ಪವಾರ್ ಅವರ ವಿಷಯಕ್ಕೆ ಬಂದರೆ, ಅವರು ಮತ್ತು ಇತರ ನಾಲ್ವರು ಪ್ರಯಾಣಿಸುತ್ತಿದ್ದ ವಿಮಾನವು ಪುಣೆಯ ಬಾರಾಮತಿ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾಗಿತ್ತು. ಗುರುವಾರ ಬಾರಾಮತಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್, ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್, ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಮತ್ತು ಇತರರು ಸೇರಿದಂತೆ ಎಲ್ಲಾ ಉನ್ನತ ನಾಯಕರ ಸಮ್ಮುಖದಲ್ಲಿ ಅವರ ಅಂತ್ಯಕ್ರಿಯೆ ನಡೆಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 8:41 pm, Fri, 30 January 26

Source link

ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು – Kannada News | B Jayashree upset on government officials regarding her land issue

ಮಾಜಿ ರಾಜ್ಯಸಭಾ ಸದಸ್ಯೆ, ಹಿರಿಯ ನಟ, ರಂಗಕರ್ಮಿ ಬಿ ಜಯಶ್ರೀ (B Jayashree) ಅವರು ತಮ್ಮ ತಾಯಿ ಜಿವಿ ಮಾಲತಮ್ಮ ಆರ್ಟ್ ಟ್ರಸ್ಟ್ ಗೆ ತಮ್ಮೂರಾದ ಗುಬ್ಬಿಯಲ್ಲಿ ರಂಗ ಚಟುವಟಿಕೆ ನಡೆಸಲು ಅವರ ಹೆಸರಿನಲ್ಲಿದ್ದ 5 ಗುಂಟೆ ಜಾಗವನ್ನ ದಾನವಾಗಿ ಕೊಟ್ಟಿದ್ದರು, ಇದೇ ಜಾಗದ ಸರ್ವೇಗೆ ಮೂರು ಬಾರಿ ಅರ್ಜಿ ಸಹ ಸಲ್ಲಿಸಿದ್ದರು. ಸರ್ವೆಗೆ ಅರ್ಜಿ ಶುಲ್ಕ 3500ರೂ ಪಾವತಿ ಕೂಡಾ ಮಾಡಿದ್ದಾರೆ. ಆದರೆ ಅಧಿಕಾರಿಗಳು ಇದರ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ನಿನ್ನೆ ಜಾಗದ ಸರ್ವೆ ಮಾಡಲು ಬರೋದಾಗಿ ತಿಳಿಸಿದ್ದಾರೆ. ಹೀಗಾಗಿ ಬೆಂಗಳೂರಿಂದ ಗುಬ್ಬಿಗೆ ಜಯಶ್ರೀ ಅವರು ಬಂದಿದ್ದರು. ಜಾಗದ ಬಳಿ ಗಂಟೆಗಟ್ಟಲೆ ಕಾದರು ಅಧಿಕಾರಿಗಳು ಸರ್ವೆ ಮಾಡಲು ಬಂದಿಲ್ಲವಂತೆ. ಕೂಡಲೇ ಗುಬ್ಬಿ ಪಟ್ಟಣದಲ್ಲಿರುವ ಭೂ ಮಾಪನ ಇಲಾಖೆ ಕಚೇರಿಗೆ ಹೋಗಿ ನೇರವಾಗಿ ಅಧಿಕಾರಿಗಳ ಮುಂದೆ ಬೇಸರ ವ್ಯಕ್ತಪಡಿಸಿದ್ದಾರೆ. ಇಲ್ಲಿದೆ ನೋಡಿ ವಿಡಿಯೋ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

Source link

ಮುದ್ದಿನ ನಾಯಿಯನ್ನು ವಿಮಾನದಲ್ಲಿ ಕರೆದೊಯ್ಯಲು 15 ಲಕ್ಷ ರೂ. ಖರ್ಚು ಮಾಡಿದ ದಂಪತಿ! – Kannada News | Couple spends 15 lakh to take pet dog from Hyderabad to Australia

ಹೈದರಾಬಾದ್, ಜನವರಿ 30: ಹೈದರಾಬಾದ್‌ನ ದಂಪತಿ ತಮ್ಮ ಸಾಕು ನಾಯಿಯನ್ನು ಆಸ್ಟ್ರೇಲಿಯಾಕ್ಕೆ ಕರೆದುಕೊಂಡು ಹೋಗಲು 1.5 ಮಿಲಿಯನ್ (15 ಲಕ್ಷ ರೂ.) ಖರ್ಚು ಮಾಡಿದ್ದಾರೆ. ಆದರೂ ಆ ನಾಯಿ (Dog) ಆಸ್ಟ್ರೇಲಿಯಾಕ್ಕೆ ಬರುವ ಮೊದಲು 6 ತಿಂಗಳು ದುಬೈನಲ್ಲಿ ಇರಬೇಕಾಯಿತು. ಆ ದಂಪತಿಯ ಕುಟುಂಬಸ್ಥರು ಆ ನಾಯಿಯನ್ನು ವಿಮಾನದಲ್ಲಿ ಕರೆದೊಯ್ಯುವ ಬದಲು ಅಲ್ಲಿಯೇ ಹೊಸ ನಾಯಿಯನ್ನು ಖರೀದಿಸಲು ಸೂಚಿಸಿದರು. ಆದರೆ, ಅದಕ್ಕೆ ಅವರು ಒಪ್ಪಲಿಲ್ಲ.

ಆ ದಂಪತಿ ತಾವು ಸಾಕಿದ ನಾಯಿಯನ್ನೇ ಆಸ್ಟ್ರೇಲಿಯಾಕ್ಕೆ ತೆಗೆದುಕೊಂಡು ಹೋಗಲು ನಿರ್ಧರಿಸಿದ್ದರು. ಅವರು ತಮ್ಮ ಸಾಕು ನಾಯಿಯನ್ನು ತಮ್ಮೊಂದಿಗೆ ಕರೆದುಕೊಂಡು ಹೋಗಲು ಲಕ್ಷಾಂತರ ರೂ. ಬೇಕಾದರೂ ಖರ್ಚು ಮಾಡಲು ತಯಾರಿದ್ದರು. ಆ ನಾಯಿ ತಮ್ಮ ಮಗು, ಅದನ್ನು ಬಿಟ್ಟು ಹೋಗಲು ಸಾಧ್ಯವೇ ಇಲ್ಲ ಎಂದು ಅವರು ಹಠ ಹಿಡಿದರು.

ಇದನ್ನೂ ಓದಿ: ಹಿಮಪಾತದಿಂದ ಯಜಮಾನ ಸತ್ತರೂ 3 ದಿನ ಹೆಣದ ಬಳಿಯೇ ನಿಂತು ಕಾದ ಸಾಕುನಾಯಿ!

ಹೀಗಾಗಿ, ಹೈದರಾಬಾದ್ ಬಿಟ್ಟು ಆಸ್ಟ್ರೇಲಿಯಾಕ್ಕೆ ಹೋಗಲು ನಿರ್ಧರಿಸಿದಾಗ ಅವರು ತಮ್ಮ ನಾಯಿ ‘ಸ್ಕೈ’ ಅನ್ನು ತಮ್ಮೊಂದಿಗೆ ಕರೆದುಕೊಂಡು ಹೋಗಲು ನಿರ್ಧರಿಸಿದರು. ಆದರೆ ಆ ನಾಯಿಯನ್ನು ನೇರವಾಗಿ ಆಸ್ಟ್ರೇಲಿಯಾಕ್ಕೆ ಕರೆದೊಯ್ಯಲು ಸಾಧ್ಯವಿಲ್ಲ ಎಂದು ತಿಳಿದು ಅವರು ತುಂಬಾ ದುಃಖಿತರಾಗಿದ್ದರು. ಇದಲ್ಲದೆ, ತಮ್ಮ ನಾಯಿ 6 ತಿಂಗಳ ಕಾಲ ರೇಬೀಸ್ ಮುಕ್ತ ದೇಶದಲ್ಲಿ ಇರಬೇಕಾಗುತ್ತದೆ ಎಂಬ ಅಂಶದ ಬಗ್ಗೆ ದಂಪತಿ ಇನ್ನಷ್ಟು ಚಿಂತಿತರಾಗಿದ್ದರು. ಆ ನಾಯಿ 6 ತಿಂಗಳು ದುಬೈನಲ್ಲಿ ಇರಬೇಕಾಯಿತು. ಆ ದಂಪತಿ ಕೂಡ ಆ ನಾಯಿಗೆ ಸಹಾಯ ಮಾಡಲು ಒಂದು ತಿಂಗಳು ದುಬೈನಲ್ಲಿಯೇ ಇದ್ದರು. ಅದಾದ ನಂತರ ಅವರು ಆಸ್ಟ್ರೇಲಿಯಾಕ್ಕೆ ಮರಳಿದರು.

ಉಳಿದ 5 ತಿಂಗಳು ಅವರು ಫೋನ್ ಮತ್ತು ವೀಡಿಯೊ ಕರೆಗಳ ಮೂಲಕ ಆ ನಾಯಿಯನ್ನು ಪರಿಶೀಲಿಸುತ್ತಲೇ ಇದ್ದರು. “ಸ್ಕೈ ನಮ್ಮ ಸಾಕುಪ್ರಾಣಿ ಮಾತ್ರವಲ್ಲ, ಅದು ನಮ್ಮ ಮಗುವಿನಂತೆ” ಎಂದು ಅವರು ಹೇಳಿದ್ದಾರೆ. ಆರು ತಿಂಗಳ ನಂತರ ಸ್ಕೈ ಆಸ್ಟ್ರೇಲಿಯಾಕ್ಕೆ ಹೋದಾಗ ಅವರ ಸಂತೋಷಕ್ಕೆ ಮಿತಿಯೇ ಇರಲಿಲ್ಲ. ನಾಯಿಯ ಹೈದರಾಬಾದ್ ನಿಂದ ಆಸ್ಟ್ರೇಲಿಯಾ ಪ್ರಯಾಣಕ್ಕೆ ವಿಮಾನ ಪ್ರಯಾಣ ಸೇರಿದಂತೆ ಸುಮಾರು 1.5 ಮಿಲಿಯನ್ ರೂ. ಖರ್ಚಾಗಿದೆ. ಈ ಘಟನೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಾಗುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಒಟ್ಟಿಗೆ ಏಳು ವರ್ಷದ ರಾಜ್ಯ ಚಲನಚಿತ್ರ ಪ್ರಶಸ್ತಿ ಘೋಷಿಸಿದ ಸರ್ಕಾರ – Kannada News | Tamil Nadu government announce state film awards from 2026 to 2021

ರಾಜ್ಯ ಸರ್ಕಾರಗಳು, ಆಯಾ ರಾಜ್ಯದ ಚಿತ್ರರಂಗಕ್ಕೆ (Movie Industry) ಉತ್ತೇಜನ ನೀಡಲು ಆಯಾ ವರ್ಷದ ಅತ್ಯುತ್ತಮ ಸಿನಿಮಾಗಳನ್ನು ಗುರುತಿಸಿ ಪ್ರಶಸ್ತಿಗಳನ್ನು ಕೊಡುತ್ತಾ ಬಂದಿವೆ. ಆದರೆ ಬಹಳ ಕಡಿಮೆ ಸರ್ಕಾರಗಳು ಈ ಪ್ರಶಸ್ತಿಗಳನ್ನು ಚಾಚು ತಪ್ಪದೆ ಆಯಾ ವರ್ಷವೇ ಕೊಡುತ್ತವೆ, ಕರ್ನಾಟಕದಲ್ಲಿಯೂ ಸಹ ಸರ್ಕಾರಗಳು ಈ ವಿಷಯದಲ್ಲಿ ವಿಳಂಬ ನೀತಿಯನ್ನು ಅನುಸರಿಸುತ್ತಲೇ ಬಂದಿದೆ. ಇದೀಗ ನೆರೆಯ ತಮಿಳುನಾಡಿನಲ್ಲಿ ಒಂದೇ ಬಾರಿಗೆ ಏಳು ವರ್ಷಗಳ ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನು ಒಟ್ಟಿಗೆ ಘೋಷಿಸಲಾಗಿದೆ.

ತಮಿಳುನಾಡಿನಲ್ಲಿ 2016 ರಿಂದಲೂ ರಾಜ್ಯ ಚಲನಚಿತ್ರ ಪ್ರಶಸ್ತಿ ಘೋಷಣೆ ಬಾಕಿ ಉಳಿದಿತ್ತು. ಇದೀಗ ಒಂದೇ ಬಾರಿಗೆ 2016 ರಿಂದ 2021ರ ವರೆಗಿನ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ತಮಿಳುನಾಡು ಸರ್ಕಾರ ಘೋಷಣೆ ಮಾಡಿದೆ. ಕೆಲವೇ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ಘೋಷಣೆ ಆಗಲಿದ್ದು, ಇದೇ ಕಾರಣಕ್ಕೆ ಇದೀಗ ತರಾತುರಿಯಲ್ಲಿ ಈ ಪ್ರಶಸ್ತಿಗಳನ್ನು ಸರ್ಕಾರ ಘೋಷಿಸಿದಂತಿದೆ.

2016ರ ಸಾಲಿನ ಅತ್ಯುತ್ತಮ ಸಿನಿಮಾ ಪ್ರಶಸ್ತಿಯನ್ನು ‘ಮಾನಗರಂ’, ‘ಪುರಿಯಾತ್ತ ಪುತ್ತಿರ್’, ‘ಮಾವೀರನ್ ಕಿಟ್ಟು’ ಸಿನಿಮಾಗಳು ಅನುಕ್ರಮವಾಗಿ ಪಡೆದುಕೊಂಡಿವೆ. ಅದೇ ವರ್ಷದ ಅತ್ಯುತ್ತಮ ನಟ ಪ್ರಶಸ್ತಿ ವಿಜಯ್ ಸೇತುಪತಿ, ಅತ್ಯುತ್ತಮ ನಟಿ ಕೀರ್ತಿ ಸುರೇಶ್ ಮತ್ತು ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ಲೋಕೇಶ್ ಕನಗರಾಜ್ ಅವರಿಗೆ ಧಕ್ಕಿದೆ.

ಇದನ್ನೂ ಓದಿ:ಕಾಂತಾರ, ಕೆಜಿಎಫ್ ಸಿನಿಮಾಗಳಿಂದ ಮಾತ್ರ ಚಿತ್ರರಂಗ ಬೆಳೆಯಲ್ಲ: ಪ್ರಿಯಾ ಹಾಸನ್

2017ರ ಅತ್ಯುತ್ತಮ ಮೂರು ಸಿನಿಮಾಗಳು ಕ್ರಮವಾಗಿ ‘ಅರಂ’, ‘ವಿಕ್ರಂ ವೇದ’ ಮತ್ತು ‘ತರಮಣಿ’. ಅತ್ಯುತ್ತಮ ನಟ ಕಾರ್ತಿ, ಅತ್ಯುತ್ತಮ ನಟಿ ನಯನತಾರಾ. ಅತ್ಯುತ್ತಮ ನಿರ್ದೇಶಕ ಪುಷ್ಕರ್-ಗಾಯತ್ರಿ (ವಿಕ್ರಂ-ವೇದ). 2018ರ ಅತ್ಯುತ್ತಮ ಸಿನಿಮಾಗಳು ‘ಪರಿಯೇರುಮ್ ಪೆರುಮಾಳ್’, ‘ಕಡೈಕುಟ್ಟಿ ಸಿಂಗಂ’, ‘96’. ಅತ್ಯುತ್ತಮ ನಟ ಧನುಶ್ (ವಡ ಚೆನ್ನೈ), ಅತ್ಯುತ್ತಮ ನಟಿ ಜ್ಯೋತಿಕ (ಚಕ್ಕ ಚಿವಂತಿ ವಾನಂ). ಅತ್ಯುತ್ತಮ ನಿರ್ದೇಶಕ ಮಾರಿ ಸೆಲ್ವರಾಜ್ (ಪರಿಯೇರುಮ್ ಪೆರುಮಾಳ್).

2019ರ ಅತ್ಯುತ್ತಮ ಸಿನಿಮಾ ‘ಅಸುರನ್’, ‘ಒತ್ತ ಸೆರಪ್ಪು ಸೈಜ್ 7’, ‘ಕೋಮಲಿ’. ಅತ್ಯುತ್ತಮ ನಟ ಕಾರ್ತಿ (ಕೈದಿ), ಅತ್ಯುತ್ತಮ ನಟಿ ಮಂಜು ವಾರಿಯರ್ (ಅಸುರನ್). ಅತ್ಯುತ್ತಮ ನಿರ್ದೇಶಕ ಆರ್ ಪಾರ್ತಿಬನ್ (ಒತ್ತ ಸೆರಪ್ಪು ಸೈಜ್ 7) 2020ರ ಅತ್ಯುತ್ತಮ ಸಿನಿಮಾಗಳು ಕ್ರಮವಾಗಿ, ‘ಕೂಳಂಗಳ್’, ‘ಸೂರರೈ ಪೋಟ್ರು’, ‘ಸಂಡಕಾರಿ’. ಅತ್ಯುತ್ತಮ ನಟ ಸೂರ್ಯ (ಸೂರರೈ ಪೊಟ್ರು), ಅಪರ್ಣಾ ಬಾಲಮುರಳಿ (ಸೂರರೈ ಪೊಟ್ರು). ಅತ್ಯುತ್ತಮ ನಿರ್ದೇಶಕ ಸುಧಾ ಕೊಂಗರ (ಸೂರರೈ ಪೊಟ್ರು).

2021ರ ಸಾಲಿನ ಅತ್ಯುತ್ತಮ ಸಿನಿಮಾಗಳು ‘ಜೈ ಭೀಮ್’, ‘ಕಡೈಸಿ ವ್ಯವಸಾಯಿ’, ‘ಕರ್ಣನ್’. ಅತ್ಯುತ್ತಮ ನಟ ಆರ್ಯ (ಸರ್ಪಟ್ಟ ಪರಂಬರೈ), ಅತ್ಯುತ್ತಮ ನಟಿ ಲಿಜೊಮಲ್ ಜೋಸ್ (ಜೈ ಭೀಮ್). ಅತ್ಯುತ್ತಮ ನಿರ್ದೇಶಕ ಥಾ ಸೆ ಜ್ಞಾನವೇಲ್ (ಜೈ ಭೀಮ್).

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 4:43 pm, Fri, 30 January 26

Source link

ರಾಜ್‌ಕೋಟ್ ಬಳಿ ಸೇತುವೆಯಿಂದ ಬಿದ್ದು ಹೊತ್ತಿ ಉರಿದ ಕಾರು; ಮೂವರು ಸಾವು – Kannada News | 3 people killed after car catches fire and falling off bridge in Rajkot

ರಾಜ್‌ಕೋಟ್, ಜನವರಿ 30: ಗುಜರಾತ್‌ನ ರಾಜ್‌ಕೋಟ್ ಜಿಲ್ಲೆಯಲ್ಲಿ ಇಂದು ಮುಂಜಾನೆ ಕಾರು ಸೇತುವೆಯಿಂದ ಬಿದ್ದು ಬೆಂಕಿ ಹೊತ್ತಿಕೊಂಡ ಪರಿಣಾಮವಾಗಿ ಮೂವರು ಸುಟ್ಟು ಕರಕಲಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಲ್ಲಿನ ಗೊಂಡಾಲ್-ಅಟ್ಕೋಟ್ ಹೆದ್ದಾರಿಯಲ್ಲಿ ಬೆಳಿಗ್ಗೆ 5.30ರ ಸುಮಾರಿಗೆ ಕಾರು ಛೋಟಾ ಉದೇಪುರದಿಂದ ಗೊಂಡಾಲ್ ಕಡೆಗೆ ಹೋಗುತ್ತಿದ್ದಾಗ ಈ ಅಪಘಾತ (Accident) ಸಂಭವಿಸಿದೆ.

ಕಾರು ಸಣ್ಣ ಹೊಳೆಯೊಂದರ ಮೇಲಿನ 8 ಅಡಿ ಎತ್ತರದ ಸೇತುವೆಯ ಪಕ್ಕದ ಗೋಡೆಗೆ ಡಿಕ್ಕಿ ಹೊಡೆದು, ಕೆಳಗೆ ಉರುಳಿತು. ಕಾರು ಬಿದ್ದ ತಕ್ಷಣ ಅದಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಅದರಲ್ಲಿದ್ದವರು ಒಳಗೆ ಸಿಲುಕಿಕೊಂಡರು. ಇದರಿಂದ ಮೂವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: Video: ಟ್ರಕ್​ಗಳ ನಡುವೆ ಅಪಘಾತ, ಹೊತ್ತಿಕೊಂಡ ಬೆಂಕಿ, ಚಾಲಕ ಸಜೀವದಹನ

ಮೃತರ ಸುಟ್ಟ ಶವಗಳನ್ನು ಹೊರತೆಗೆದು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಘಟನೆಯ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 7:54 pm, Fri, 30 January 26

Source link

ಯಾರು ಈ CJ ರಾಯ್?ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಜೀವನದಲ್ಲಿ ಕಾನ್ಫಿಡೆಂಟ್ ಕಳೆದುಕೊಂಡಿದ್ಯಾಕೆ? – Kannada News | Confident Group Chairman CJ Roy dies In Bengaluru, Who Is He? Why Commits Suicide?

ಬೆಂಗಳೂರು, (ಜನವರಿ 30): ಪ್ರಸಿದ್ದ ರಿಯಲ್ ಎಸ್ಟೇಟ್ ಕಂಪನಿ ಕಾನ್ಪಿಡೆಂಟ್ ಗ್ರೂಪ್ ಮಾಲೀಕ ಸಿ.ಜೆ.ರಾಯ್ (Confident Group Chairman CJ Roy) ಇಂದು (ಜನವರಿ 30) ಬೆಂಗಳೂರಿನ ಹೊಸೂರು ರಸ್ತೆಯ ಲ್ಯಾಂಗ್ ಫರ್ಡ್ ಟೌನ್ ನಲ್ಲಿರುವ ಕಂಪನಿಯ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿಂದೆಯೂ ರಾಯ್ ಮನೆ, ಕಚೇರಿಗಳ ಮೇಲೆ ಐಟಿ ದಾಳಿಯಾಗಿದ್ದವು. ಅದರಂತೆ ಇಂದು ಸಹ ಕಂಪನಿಯ ಮೇಲೆ ಐಟಿ ದಾಳಿ ನಡೆದಿದ್ದು, ಇದರಿಂದ ಮನನೊಂದು ತಮ್ಮ ಪಿಸ್ತೂಲ್​​ನಿಂದಲೇ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾರೆ.  ಸಿಜೆ ರಾಯ್ ಅವರ ಈ ಸಾವು ಉದ್ಯಮ ವಲಯದಲ್ಲಿ ಆಘಾತ ಮುಡಿಸಿದೆ.

ಕೇರಳ ರಾಜ್ಯದಿಂದ ವಿದೇಶದವರೆಗೆ

ಮೂಲತಃ ಕೇರಳದವರಾಗಿದ್ದರೂ ಸಹ ಬೆಂಗಳೂರಿನಲ್ಲೇ ಬೆಳೆದಿದ್ದರು.  ಕೊಚ್ಚಿ ಕ್ರೈಸ್ತ ಧರ್ಮಕ್ಕೆ ಸೇರಿದರಾಗಿರುವ ರಾಯ್, ಫ್ರಾನ್ಸ್, ಸ್ವಿಜರ್ಲ್ಯಾಂಡ್ ಸೇರಿದಂತೆ ಬೇರೆ ಬೇರೆ ಕಡೆಗಳಲ್ಲಿ ವ್ಯಾಸಂಗ ಮಾಡಿದ್ದರು.   ರಾಯ್ ಅವರ ಪತ್ನಿ ಹೆಸರು ಲಿನಿ ರಾಯ್, ಮಗ ರೋಹಿತ್, ಮಗಳು ರಿಯಾ.  2006ರವರೆಗೆ ಹ್ಯಾವ್ಲೆಟ್ ಪ್ಯಾಕರ್ಡ್ ಕಂಪನಿಯಲ್ಲಿ ಕೆಲಸ ಮಾಡಿದ್ದು. ನಂತರ ಕಾನ್ಫಿಡೆಂಟ್ ಗ್ರೂಪ್​​ನ ರಿಯಲ್ ಎಸ್ಟೇಟ್ ಸಮೂಹವನ್ನು ವಿಸ್ತರಿಸಲು ಶುರು ಮಾಡಿದ್ದರು. ರಾಯ್ ಕಾನ್ಷಿಡೆಂಟ್ ಗ್ರೂಪ್ನ ಚೇರ್ಮನ್ ಆಗಿದ್ದು, ದೇಶದ ಶ್ರೀಮಂತ ಉದ್ಯಮಿಗಳಲ್ಲಿ ಒಬ್ಬರಾಗಿದ್ದರು. ಹಲವು ಕ್ಷೇತ್ರಗಳಲ್ಲಿ ತಮ್ಮ ವ್ಯಾಪಾರ ಸಾಮ್ರಾಜ್ಯವನ್ನು ವಿಸ್ತರಿಸಿದ್ದಲ್ಲದೇ ಗಲ್ಫ್ ಮತ್ತು ಕೇರಳ, ಕರ್ನಾಟಕದಲ್ಲಿ ರಿಯಲ್ ಎಸ್ಟೇಟ್ ನಡೆಸುತ್ತಿದ್ದರು.

ಇದನ್ನೂ ಓದಿ: ಐಟಿ ದಾಳಿ ವೇಳೆಯೇ ಶೂಟ್​ ಮಾಡಿಕೊಂಡು ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿಜೆ ರಾಯ್​ ಆತ್ಮಹತ್ಯೆ

ವಿವಿಧ ಕ್ಷೇತ್ರಗಳಲ್ಲಿ ಬಂಡವಾಳ ಹೂಡಿಕೆ

ಕಾನ್ಪಿಡೆಂಟ್ ಗ್ರೂಪ್ ರಿಯಲ್ ಎಸ್ಟೇಟ್ ಲೇಔಟ್, ಹೋಟೇಲ್, ರೆಸಾರ್ಟ್, ಶಿಕ್ಷಣ ಸಂಸ್ಥೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಿ.ಜೆ.ರಾಯ್ ಬಂಡವಾಳ ಹೂಡಿಕೆ ಮಾಡಿ ಯಶಸ್ವಿಯಾಗಿ ಉದ್ಯಮವನ್ನು ನಡೆಸುತ್ತ ಸಿ.ಜೆ.ರಾಯ್ ಸಾವಿರಾರು ಕೋಟಿ ಒಡೆಯರಾಗಿದ್ದರು. ಜೊತೆಗೆ ಬಡವರಿಗೆ ದಾನ- ಧರ್ಮ ಸಹ ಮಾಡುತ್ತಿದ್ದರು. ಇದಕ್ಕೆ ಪೂರಕವೆಂಬಂತೆ ಇತ್ತೀಚೆಗೆ 201 ವಿದ್ಯಾರ್ಥಿಗಳಿಗೆ ಎಜುಕೇಷನ್ ಸ್ಕಾಲರ್ ಶಿಪ್ ನೀಡಿದ್ದರು.

ಹತ್ತಾರು ದೊಡ್ಡ ದೊಡ್ಡ ಐಷರಾಮಿ ಕಾರುಗಳು

ರಾಯ್ ಅವರು ಕಾರುಗಳ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದ, ದುಬೈ ಮತ್ತು ಭಾರತದಲ್ಲಿ ದುಬಾರಿ ಐಷಾರಾಮಿ ಮತ್ತು ಸ್ಫೋರ್​ಟ್ಸ್​​​ ಕಾರುಗಳ ಕಲೆಕ್ಷನ್ ಇವರ ಬಳಿ ಇವೆ. ಬರೋಬ್ಬರಿ 12 ರೋಲ್ಸ್ ರಾಯ್ಸ್ ಕಾರ್ ಗಳನ್ನು ಹೊಂದಿದ್ದಾರೆ. ಇನ್ನು 10 ಕೋಟಿ ರೂಪಾಯಿ ಬೆಲೆಬಾಳುವ ಫ್ಯಾಂಟೋನ್-8 ಕಾರನ್ನು ಸಹ ಖರೀದಿಸಿದ್ದರು. ಅಲ್ಲದೇ ಕನ್ನಡ ಬಿಗ್ ಬಾಸ್ ವಿನ್ನರ್ ಗಳಿಗೆ 50 ಲಕ್ಷ ರೂಪಾಯಿ ಹಣವನ್ನು ಸಿ.ಜೆ.ರಾಯ್ ಪ್ರಾಯೋಕತ್ವ ಮಾಡುತ್ತಿದ್ದರು. ಇಂತಹ ಲಕ್ಷುರಿ, ಐಷಾರಾಮಿ ಜೀವನ ನಡೆಸುತ್ತಿದ್ದ ಉದ್ಯಮಿ ಸಿ.ಜೆ.ರಾಯ್ ಪದೇ ಪದೇ ಐಟಿ ದಾಳಿಯಿಂದ ನಲುಗಿ ಹೋಗಿದ್ದರು. ಇಂದು ಮತ್ತೆ ಐಟಿ ದಾಳಿ ನಡದದಿದ್ದರಿಂದ ಮನನೊಂದು ಈ ರೀತಿ ಮಾಡಿಕೊಂಡಿದ್ದಾರೆ.

43 ಲಕ್ಷ ಚದರ್ ಅಡಿಗಳಷ್ಟು ವ್ಯವಹಾರ

.ಇನ್ನು ಇವರು ರಿಯಲ್ ಎಸ್ಟೇಟ್​​ನಲ್ಲಿ ಬರೋಬ್ಬರಿ 43 ಲಕ್ಷ ಚದರ್ ಅಡಿಗಳಷ್ಟು ವ್ಯವಹಾರ ಮಾಡಿದ್ದಾರೆ. ಅಲ್ಲದೇ 150ಕ್ಕೂ ಹೆಚ್ಚು ದೊಡ್ಡ ದೊಡ್ಡ ಪ್ರಾಜೆಕ್ಟ್​ಗಳನ್ನು ಸಹ ಮಾಡಿದ್ದಾರೆ. ಆದ್ರೆ, ಇನ್ನೊಂದು ಗಮನಿಸಬೇಕಾದ ಅಂಶ ಇಲ್ಲಿಯವರೆಗೂ ಇವರ ನೆಟ್ವರ್ಕ್​ ಎಷ್ಟಿದೆ? ಎಲ್ಲಿಯವರೆಗೂ ಇದೆ ಎನ್ನುವುದನ್ನು ಎಲ್ಲೂ ತೋರಿಸಿಕೊಂಡಿಲ್ಲ. ದೇಶದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇವರ ನೆಟ್ವರ್ಕ್ ಇದೆ. ಆದರೂ ಇದನ್ನು ಎಲ್ಲೂ ಬಹಿರಂಗಪಡಿಸಿಕೊಂಡಿಲ್ಲ. ಹೀಗೆ ದೇಶ ವಿದೇಶಗಳಲ್ಲೂ ಚಿರಪರಿಚಿತರಾಗಿದ್ದು, ತಮ್ಮ ಕಾನ್ಷಿಡೆಂಟ್ ಗ್ರೂಪ್​​ಗೆ ಯಾರನ್ನೂ ಬ್ರ್ಯಾಂಡ್ ಅಂಬಾಸಿಡರ್, ಅಥವಾ ದೊಡ್ಡ ದೊಡ್ಡ ಮಾಡೆಲ್, ಸೆಲೆಬ್ರಿಟಿಗಳಿಂದ ಜಾಹಿರಾತು ಕೊಡಿಸಿಲ್ಲ. ಬದಲಿಗೆ ರಾಯ್ ಅವರೇ ತಮ್ಮ ಕಂಪನಿಯ ಬ್ರ್ಯಾಂಡ್ ಅಂಬಾಸಿಡರ್ ಆಗಿದ್ದರು. ಏನೇ ಜಾಹಿರಾತು ನೀಡಬೇಕಿದ್ದರೂ ತಾವೇ ಅಂಬಾಸಿಡರ್ ಆಗಿದ್ದರು.

ಯುವಕರಿಗೆ ಸ್ಫೂರ್ತಿಯಾಗಿದ್ದ ಒಡೆಯ

ದೊಡ್ಡ ಕೋಟ್ಯಾಧೀಶರಾಗಿದ್ದರೂ ಸಹ ವಿಡಿಯೋ ಮೂಲಕ ಯುವ ಜನತೆಗೆ ಹೇಗೆ ಬ್ಯುಸಿನೆಸ್ ಮಾಡಬೇಕು? ಹೇಗೆ ಸಂಪಾದನೆ ಮಾಡಬೇಕು? ಎನ್ನುವುದನ್ನು ತಿಳಿಸುತ್ತಿದ್ದರು. ಜೀವನದಲ್ಲಿ ಸೋತು ಜಿಗುಪ್ಸೆಗೊಂಡವರಿಗೂ ಸಹ ತಮ್ಮ ಮೋಟಿವೇಶನ್ ಮಾತುಗಳೊಂದಿಗೆ ಮನಪರಿವರ್ತನೆ ಮಾಡುತ್ತಿದ್ದರು

ಹೀಗೆ ಕೋಟ್ಯಾಧೀಶ ಒಡೆಯನಾಗಿರುವ ವ್ಯಕ್ತಿ ಐಟಿ ಅಧಿಕಾರಿಗಳ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಅಂದರೆ ಯಾವ ಮಟ್ಟಕ್ಕೆ ಅವರಿಗೆ ಸ್ಟೆಸ್ ಅಥವಾ ಒತ್ತಡ ಇತ್ತು ಎನ್ನುವ ವಿಚಾರ ಪ್ರಶ್ನೆಯಾಗಿ ಉಳಿದಿದೆ. ಕಾನ್ಫಿಡೆಂಟ್​​ ಗ್ರೂಪ್​ ಒಡೆಯ ಜೀವನದ ಕಾನ್ಫಿಡೆಂಟ್ ಕಳೆದುಕೊಂಡಿದ್ಯಾಕೆ ಎನ್ನುವುದೇ ಎಲ್ಲರನ್ನು ಕಾಡುತ್ತಿರುವ ಪ್ರಶ್ನೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 7:12 pm, Fri, 30 January 26

Source link

ಭಾರೀ ವಿರೋಧ ಬೆನ್ನಲ್ಲೇ ಎಚ್ಚೆತ್ತ ಸಚಿವರು: ಸರ್ಕಾರಿ ಬಸ್​ಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತು ತೆರವಿಗೆ ಸೂಚನೆ – Kannada News | Tobacco Advertisements ongovernment Buses and Stations: Minister RamalingaReddy Orders Removal

ತಂಬಾಕು ಉತ್ಪನ್ನಗಳ ಜಾಹೀರಾತುImage Credit source: newindianexpress.com

ಬೆಂಗಳೂರು, ಜನವರಿ 30: ಸರ್ಕಾರಿ ಬಸ್​ಗಳ ಮೇಲೆ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು (Tobacco Advertisements) ಮುದ್ರಿಸುವ ಮೂಲಕ ಸಾರಿಗೆ ಸಂಸ್ಥೆಗಳು ಆದಾಯದ ವ್ಯಾಮೋಹಕ್ಕೆ ಒಳಗಾಗಿವೆ ಎಂಬ ಮಾತುಗಳು ಕೇಳಿಬಂದಿದ್ದವು. ಪ್ರತಿಯೊಂದು ಸರ್ಕಾರಿ ಬಸ್​​ಗಳ ಮೇಲೆ ತಂಬಾಕು ಉತ್ಪನ್ನಗಳ ಜಾಹೀರಾತುಗಳು ರಾರಾಜಿಸುತ್ತಿದ್ದವು. ಈ ಬಗ್ಗೆ ಕನ್ನಡ ಸಂಘಟನೆಗಳು ಸೇರಿದಂತೆ ಜನರು ಕೂಡ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದರು. ಅದರ ಬೆನ್ನಲ್ಲೇ ಇದೀಗ ಸರ್ಕಾರಿ ಬಸ್​ಗಳ ಮೇಲಿನ ಜಾಹೀರಾತು ತೆಗೆಯಲು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ನಾಲ್ಕು ನಿಗಮಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಆದಾಯ ಹೆಚ್ಚಿಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಸಾರಿಗೆ ಬಸ್‌ಗಳ ಮೇಲೂ ಜಾಹೀರಾತುಗಳನ್ನು ಅಳವಡಿಸಲಾಗಿತ್ತು. ಅವುಗಳಲ್ಲಿ ಕೆಲವು ತಂಬಾಕು ಉತ್ಪನ್ನಗಳಿಗೆ ಸಂಬಂಧಿಸಿದ ಜಾಹೀರಾತುಗಳಾಗಿದ್ದವು. ಇದಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಪರಿಣಾಮವಾಗಿ, ಹಲವು ಕಡೆಗಳಲ್ಲಿ ಬಸ್‌ಗಳ ಮೇಲಿದ್ದ ಜಾಹೀರಾತುಗಳನ್ನು ಜನರು ಕಿತ್ತು ಹಾಕಿದ್ದ ಘಟನೆಗಳು ನಡೆದಿದ್ದವು.

ಟಿವಿ9 ವರದಿ ಬೆನ್ನಲ್ಲೇ ಅಧಿಕಾರಿಗಳಿಗೆ ರಾಮಲಿಂಗಾರೆಡ್ಡಿ ಸೂಚನೆ

ಈ ಬಗ್ಗೆ ಟಿವಿ9 ಕೂಡ ಸುದ್ದಿ ಬಿತ್ತರಿಸಿತ್ತು. ವರದಿ ಬೆನ್ನಲ್ಲೇ ಎಚ್ಚೆತ್ತ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ 4 ನಿಗಮದ ಎಂಡಿಗಳಿಗೆ ತಂಬಾಕು ಉತ್ಪನ್ನಗಳ ಜಾಹೀರಾತು ಪ್ರಚಾರ ಮಾಡದಂತೆ ಸೂಚನೆ ನೀಡಿದ್ದಾರೆ. ಜೊತೆಗೆ ಸಾರಿಗೆ ನಿಗಮದ ಬಸ್​ಗಳಲ್ಲಿ ಹಾಗೂ ಬಸ್​ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತು ಕೂಡಲೇ ತೆಗೆದುಹಾಕುವಂತೆ ಸೂಚಿಸಿದ್ದಾರೆ.

ಆದೇಶದಲ್ಲೇನಿದೆ?

ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ ಸಂಸ್ಥೆಯ ಬಸ್​​ಗಳಲ್ಲಿ ಮತ್ತು ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ ಪರೋಕ್ಷವಾದ ಯಾವುದೇ ಜಾಹೀರಾತುಗಳನ್ನು ಇನ್ನು ಮುಂದೆ ಪ್ರಚಾರ ಮಾಡದಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚಿಸಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಸಾರಿಗೆ ಸಂಸ್ಥೆಗೂ ಆದಾಯದ ವ್ಯಾಮೋಹ: ಕೆಟ್ಟಿತು ಸರ್ಕಾರಿ ಬಸ್​​ಗಳ ಅಂದ

ಈಗಾಗಲೇ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವಂತಹ ಜಾಹೀರಾತುಗಳನ್ನು ಬಸ್​​​ಗಳಲ್ಲಿ, ಬಸ್ ನಿಲ್ದಾಣಗಳಲ್ಲಿ ಅಳವಡಿಸಿದ್ದರೆ ಅದನ್ನು ತೆಗೆಯಲು ಒಂದು ನಿರ್ದಿಷ್ಟ ಸಮಯವನ್ನು ನಿಗದಿಪಡಿಸಿ, ಆ ನಿಗದಿತ ಸಮಯದೊಳಗೆ ಸದರಿ ಜಾಹೀರಾತುಗಳನ್ನು ತೆಗೆದು ಹಾಕುವಂತೆ ಸಂಬಂಧಪಟ್ಟವರಿಗೆ ಕಟ್ಟುನಿಟ್ಟಾಗಿ ನಿರ್ದೇಶನ ನೀಡುವಂತೆ ಸೂಚಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಸಿನಿಮಾ, ಟಿವಿ ಕ್ಷೇತ್ರದೊಟ್ಟಿಗೆ ಜೆಸಿ ರಾಯ್​ ಅವರಿಗಿದ್ದ ಬಂಧ ಎಂಥದ್ದು? – Kannada News | JC Roy has close connection with Tv and Movie industry

ಕಾನ್ಫಿಡೆಂಟ್ ಗ್ರೂಪ್​​ ರಿಯಲ್ ಎಸ್ಟೇಟ್ ಸಂಸ್ಥೆಯ ಮಾಲೀಕ ಜೆಸಿ ರಾಯ್ (JC Roy) ಇಂದು (ಜನವರಿ 30) ನಿಧನ ಹೊಂದಿದ್ದಾರೆ. ರಾಯ್ ಅವರು, ಪದೇ ಪದೇ ಆಗುತ್ತಿದ್ದ ಐಟಿ ದಾಳಿಗಳಿಂದ ಬೇಸತ್ತು ಅಧಿಕಾರಿಗಳ ಎದುರೇ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಬೆಂಗಳೂರಿನ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದ ಜೆಸಿ ರಾಯ್ ಅವರಿಗೆ ಸಿನಿಮಾ ಮತ್ತು ಟಿವಿ ಜಗತ್ತಿನೊಂದಿಗೆ ಹತ್ತಿರದ ಬಂಧ ಇತ್ತು.

ರಾಯ್ ಅವರು ಉದ್ಯಮಿ ಮಾತ್ರವೇ ಅಲ್ಲದೆ ಸಿನಿಮಾ ನಿರ್ಮಾಪಕರೂ ಆಗಿದ್ದರು. ಮಲಯಾಳಂನಲ್ಲಿ ಮೋಹನ್​ನಾಲ್ ನಟನೆಯ ಸೂಪರ್ ಹಿಟ್ ಸಿನಿಮಾ ‘ಕ್ಯಾಸನೋವ’ ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು. ಅವರೇ ಸಂದರ್ಶನವೊಂದರಲ್ಲಿ ಹೇಳಿಕೊಂಡಿರುವಂತೆ ರಾಯ್ ಅವರು 12 ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರಂತೆ.

ಇನ್ನು ಟಿವಿ ಜಗತ್ತಿನೊಂದಿಗೆ ಅವರದ್ದು ಹತ್ತಿರದ ಬಂಧ. ಹಲವಾರು ರಿಯಾಲಿಟಿ ಶೋಗಳಿಗೆ ಅವರು ಪ್ರಮುಖ ಸ್ಪಾನ್ಸರ್ ಆಗಿದ್ದರು. ಬಿಗ್​​ಬಾಸ್ ಕನ್ನಡ 11ನೇ ಸೀಸನ್​​ಗೆ ಮೊದಲ ಬಹುಮಾನವಾದ 50 ಲಕ್ಷ ರೂಪಾಯಿಗಳನ್ನು ರಾಯ್ ಅವರೇ ನೀಡಿದ್ದರು. ಅದಕ್ಕೂ ಮುಂಚೆ ಕಾನ್ಫಿಡೆಂಟ್ ಸ್ಟಾರ್ ಸಿಂಗರ್ ಸಿಂಗಿಂಗ್ ರಿಯಾಲಿಟಿ ಶೋಗೆ ಒಂದು ಕೋಟಿ ರೂಪಾಯಿ ಬಹುಮಾನ ನೀಡಿದ್ದರು. ಮಲಯಾಳಂ ಬಿಗ್​​ಬಾಸ್​​ಗೂ ಸಹ ಸ್ಪಾನ್ಸರ್ ಆಗಿದ್ದರು ರಾಯ್. ದಕ್ಷಿಣ ಭಾರತದ ಸಿನಿಮಾಗಳಿಗೆ ನೀಡುವ ಪ್ರತಿಷ್ಠಿತ ಪ್ರಶಸ್ತಿಯಾದ ಸೈಮಾಕ್ಕೆ ಎಂಟು ವರ್ಷಗಳ ಕಾಲ ಮುಖ್ಯ ಸ್ಪಾನ್ಸರ್ ಆಗಿದ್ದಿದ್ದು ರಾಯ್ ಅವರ ಕಾನ್ಫಿಡೆಂಟ್ ಗ್ರೂಪ್.

ಇದನ್ನೂ ಓದಿ:ಸಾವಿರಾರು ಕೋಟಿ ಒಡೆಯ ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಜೀವನದಲ್ಲಿ ಕಾನ್ಫಿಡೆಂಟ್ ಕಳೆದುಕೊಂಡಿದ್ಯಾಕೆ?

ರಾಯ್ ಅವರು ರಿಯಾಲಿಟಿ ಶೋಗಳಿಗಷ್ಟೆ ಸ್ಪಾನ್ಸರ್ ಮಾಡುತ್ತಿದ್ದಿದ್ದಕ್ಕೂ ಕಾರಣವಿತ್ತು. ಅವರೇ ಹೇಳಿಕೊಂಡಿರುವಂತೆ, ‘ಧಾರಾವಾಹಿಗೆ ನಾನು ಪ್ರಾಯೋಜಕತ್ವ ನೀಡುತ್ತಿರಲಿಲ್ಲ, ಧಾರಾವಾಹಿಗಳು ಒಳ್ಳೆಯವೇ ಆದರೆ ನಮ್ಮದು ರಿಯಾಲಿಟಿ (ರಿಯಲ್ ಎಸ್ಟೇಟ್) ಕಂಪೆನಿ, ನನ್ನದು ರಿಯಲ್ ಕಂಪೆನಿ ಹಾಗಾಗಿ ನಾನು ರಿಯಾಲಿಟಿ ಶೋಗಳಿಗೆ ಸ್ಪಾನ್ಸರ್ ಮಾಡುತ್ತಿದ್ದೆ. ಅದರಿಂದ ನಿಜವಾದ ಪ್ರತಿಭೆ ಇದ್ದವರಿಗೆ ಸಹಾಯ ಮಾಡಿದ ತೃಪ್ತಿ ನನಗೆ ಸಿಗುತ್ತಿತ್ತು, ಪ್ರತಿಭಾವಂತರಿಗೆ ಬೆಂಬಲ ನೀಡುವುದು ನನ್ನ ಉದ್ದೇಶವಾಗಿತ್ತು’ ಎಂದಿದ್ದರು ರಾಯ್.

‘ಹಲವಾರು ರಿಯಾಲಿಟಿ ಶೋಗಳಿಗೆ ಸ್ಪಾನ್ಸರ್ ನೀಡಿದ್ದೇನೆ. ಆದರೆ ಒಮ್ಮೆ ಕೂಡ ಬಹುಮಾನದ ಮೊತ್ತ ನೀಡುವುದನ್ನು ನಾನು ತಡ ಮಾಡಿಲ್ಲ. ಹೇಳಿದ ಹಣವನ್ನು, ಹೇಳಿದ ದಿನದಂದು ನೀಡಿದ್ದೇನೆ. ಒಂದೇ ಒಂದು ಕಪ್ಪು ಚುಕ್ಕೆಯೂ ನನ್ನ ಮೇಲೆ ಇಲ್ಲ’ ಎಂದು ರಾಯ್ ಹೇಳಿಕೊಂಡಿದ್ದರು. ಸಿನಿಮಾಗಳ ಬಗ್ಗೆ, ಕಲೆಯ ಬಗ್ಗೆ ಆಸಕ್ತಿ ಹೊಂದಿದ್ದ ರಾಯ್ ಅವರು ಮ್ಯಾಜಿಕ್ ಟ್ರಿಕ್​​ಗಳನ್ನು ಸಹ ಮಾಡುತ್ತಿದ್ದರಂತೆ. ಕೆಲವು ಶೋಗಳನ್ನು ಸಹ ಬಹಳ ಮುಂಚೆ ನೀಡಿದ್ದರಂತೆ. ಆದರೆ ಮದುವೆಯ ಬಳಿಕ ಅದೆಲ್ಲವನ್ನೂ ಬಿಟ್ಟೆ ಎಂದಿದ್ದರು ರಾಯ್.

ರಾಯ್ ಅವರು ಕನ್ನಡ ಹಾಗೂ ಮಲಯಾಳಂ ಚಿತ್ರರಂಗದ ಹಲವರೊಟ್ಟಿಗೆ ಆತ್ಮೀಯ ಬಂಧ ಹೊಂದಿದ್ದರು. ಕನ್ನಡದ ಸ್ಟಾರ್ ನಟ ದಿವಂಗತ ಪುನೀತ್ ರಾಜ್​​ಕುಮಾರ್ ಅವರ ಒಳ್ಳೆಯ ಸ್ನೇಹಿತರಾಗಿದ್ದರು. ಕಿಚ್ಚ ಸುದೀಪ್ ಅವರ ಆಪ್ತರೂ ಸಹ ಆಗಿದ್ದರು ರಾಯ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Exit mobile version