ವಿಜಯಪುರ: ಅನ್ನದಾತರ ಪಾಲಿಗೆ ಕಂಟಕವಾದ ಕೂಡಗಿ ಉಷ್ಣ ವಿದ್ಯುತ್ ಸ್ಥಾವರ; ಏಕೆ?

ವಿಜಯಪುರ: ಅನ್ನದಾತರ ಪಾಲಿಗೆ ಕಂಟಕವಾದ ಕೂಡಗಿ ಉಷ್ಣ ವಿದ್ಯುತ್ ಸ್ಥಾವರ; ಏಕೆ?

ವಿಜಯಪುರ, ಏಪ್ರಿಲ್​ 05: ಕೂಡಗಿ ಉಷ್ಣ ವಿದ್ಯುತ್ ಸ್ಥಾವರ ಅನ್ನದಾತರ (Farmers) ಪಾಲಿಕೆ ಕಂಟಕವಾಗಿದೆ. ಎನ್​ಟಿ ಪಿಸಿ (NTPC) ಕಾರಣದಿಂದ ರೈತರು ಕಣ್ಣೀರು ಹಾಕುತ್ತಿದ್ದಾರೆ. ಸ್ಥಾವರದ ಸುತ್ತಮುತ್ತಲದ ಕೊಳವೆ ಬಾವಿಗಳನ್ನು ನಂಬಿ ಕೃಷಿ ಮಾಡುತ್ತಿದ್ದವರಿಗೆ ಬರೆ ಬಿದ್ದಂತಾಗಿದೆ. ಸಮಸ್ಯೆಗಳ ಬಗ್ಗೆ ಎನ್​​ಟಿಪಿಸಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ರೈತರ ಪಾಲಿನ ಜೀವ ಜಲ ವಿಷವಾಗುತ್ತಿದೆ.

ಎಸ್​ಟಿಪಿಸಿ ನಿರ್ಮಾಣಕ್ಕೆ ಮೊದಲಿನಿಂದಲೂ ವಿರೋಧ

ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಕೂಡಗಿ ಬಳಿ ಉಷ್ಣ ವಿದ್ಯುತ್ ಸ್ಥಾವರಕ್ಕೆ 2012 ಜೂನ್ 12ರಲ್ಲಿ ಶಿಲಾನ್ಯಾಸ ಮಾಡಲಾಗಿತ್ತು. 2017ರಲ್ಲಿ ಉಷ್ಣ ವಿದ್ಯುತ್ ಸ್ಥಾವರದಲ್ಲಿ ವಿದ್ಯುತ್ ಉತ್ಪಾದನೆ ಮಾಡಲು ಆರಂಭಿಸಲಾಗಿತ್ತು. ಎಸ್​ಟಿಪಿಸಿ ನಿರ್ಮಾಣಕ್ಕೆ ಮೊದಲಿನಿಂದಲೂ ವಿರೋಧ ವ್ಯಕ್ತವಾಗಿತ್ತು. ಸರ್ಕಾರ ಹಾಗೂ ಎನ್​ಟಿಪಿಸಿ ಅಧಿಕಾರಿಗಳು ಆಧುನಿಕ ತಂತ್ರಜ್ಞಾನದಿಂದ ಎಲ್ಲಾ ನಿರ್ವಹಣೆ ಮಾಡೋದಾಗಿ ಭರವಸೆ ನೀಡಿತ್ತು.

ಇದನ್ನೂ ಓದಿ: ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಬಿಸಿಲನಾಡು ಕಲಬುರಗಿ: ಧಾರವಾಡ, ವಿಜಯಪುರದಲ್ಲಿ ಅಪಾರ ಬೆಳೆ ನಾಶ

ವಿದ್ಯುತ್ ಉತ್ಪಾದನೆಯಿಂದ ಸ್ಥಾವರಗಳಿಂದ ಬರುವ ಹಾರು ಬೂದಿಯನ್ನು ನೀರಿನ ಮೂಲಕ ಅನತಿ ದೂರದಲ್ಲಿನ ಮಸೂತಿ ಗ್ರಾಮದ ಬಳಿ ಕೃತಕವಾಗಿ ನಿರ್ಮಾಣ ಮಾಡಿರುವ ಕೆರೆಗಳಲ್ಲಿ ಸಂಗ್ರಹ ಮಾಡಲಾಗುತ್ತದೆ. ಹಾರುಬೂದಿಯನ್ನು ನೀರಲ್ಲಿ ಮಿಶ್ರಣ ಮಾಡಿ ಉಷ್ಣ ವಿದ್ಯುತ್​ ಸ್ಥಾವರದಿಂದ ನಾಲ್ಕು ಕಿ.ಮೀ ದೂರದಲ್ಲಿನ ಮಸೂತಿ ಗ್ರಾಮದ ಬಳಿ 1400 ಎಕರೆ ಪ್ರದೇಶದಲ್ಲಿ ನಿರ್ಮಾಣ ಮಾಡಿರುವ ನಾಲ್ಕು ಕೆರೆಗಳಿಗೆ ಬಿಡಲಾಗುತ್ತಿದೆ. ಅಲ್ಲಿ ನೀರನ್ನು ಮತ್ತೆ ಫಿಲ್ಟರ್ ಮಾಡಿ ನೀರನ್ನು ಮರುಬಳಕೆ ಮಾಡಲಾಗುತ್ತದೆ.

ಹಾರುಬೂದಿ ಹೂಳಿನ ರೂಪದಲ್ಲಿ ಕೆರೆಯಲ್ಲಿ ಸಂಗ್ರಹವಾಗುತ್ತದೆ. ಅದನ್ನು ಸಿಮೆಂಟ್ ಫ್ಯಾಕ್ಟರಿಗೆ ಹಾಗೂ ಇಟ್ಟಿಗೆ ತಯಾರಿಕೆಗೆ ನೀಡಲಾಗುತ್ತದೆ. ಆದರೆ ಸಮಸ್ಯೆ ಇಲ್ಲಿಯೇ ಆರಂಭವಾಗಿದೆ. ಉಷ್ಣ ವಿದ್ಯುತ್ ಸ್ಥಾವರದ ಹಾರುಬೂದಿಯನ್ನು ಹೊತ್ತು ತಂದ ನೀರು ಕೆರೆಗಳಲ್ಲಿ ಸಂಗ್ರಹವಾಗುತ್ತಿದ್ದು, ಅದೇ ನೀರು ಕೆರೆಗಳ ಕೆಳಗಿನ ಭಾಗ ರೈತರ ಪಾಲಿಗೆ ವಿಷವಾಗುತ್ತಿದೆ.

ಶಾಕಿಂಗ್​ ವರದಿ 

ಹಾರುಬೂದಿಯನ್ನು ಸಂಗ್ರಹಿಸಿದ್ದ ಕೆರೆಗಳ ನೀರು ಸುತ್ತಮುತ್ತಲಿನ ಜಮೀನುಗಳಲ್ಲಿನ ತೆರೆದ ಬಾವಿ, ಕೊಳವೆ ಬಾವಿಗಳ ಅಂತರ್ಜಲದಲ್ಲಿ ಸೇರಿಕೊಂಡಿದೆ. ಜಮೀನುಗಳಲ್ಲಿ ತೇವಾಂಶ ಹೆಚ್ಚಾಗಿ ಜಮೀನಿನ ಮೇಲ್ಭಾಗದಲ್ಲಿ ಉಪ್ಪಿನಾಂಶ ಸಂಗ್ರಹವಾಗುತ್ತಾ ಹೋಗಿ ಸವಳು ಜವಳಾಗಿದೆ. ಇಲ್ಲಿ ಯಾವುದೇ ಬೆಳೆಯನ್ನು ಬೆಳೆಯಲು ಅಸಾಧ್ಯವಾಗಿದೆ. ಲಕ್ಷಾಂತರ ರೂ ಹಣ ಖರ್ಚು ಮಾಡಿದರೂ ಫಸಲು ಕುಂಠಿತಗೊಂಡಿದೆ. ಇದರಿಂದ ಬೇಸತ್ತ ರೈತರು ಇಲ್ಲಿನ ತೆರೆದ ಬಾವಿ ಹಾಗೂ ಕೊಳವೆ ಬಾವಿಯ ನೀರನ್ನು ಪ್ರಯೋಗಾಲಯದಲ್ಲಿ ಈ ಹಿಂದೆಯೇ ಪರೀಕ್ಷೆ ಮಾಡಿಸಿದಾಗ ಜನ, ಜಾನುವಾರುಗಳು ಸೇರಿದಂತೆ ಪ್ರಾಣಿ, ಪಕ್ಷಿಗಳಿಗೆ ಕುಡಿಯಲು ಯೋಗ್ಯವಿಲ್ಲವೆಂಬ ಶಾಕಿಂಗ್​ ವರದಿ ಬಂದಿದೆ.

ಒಂದೆಡೆ ಜಮೀನು ಹಾಳಾಗಿದೆ, ಮತ್ತೊಂದೆಡೆ ನಮ್ಮ ಭಾಗದ ಅಂತರ್ಜಲವೂ ವಿಷವಾಗುತ್ತಿದೆ ಎಂದು ರೈತರು ತೀವ್ರ ಆತಂಕವನ್ನು ವ್ಯಕ್ತಪಡಿಸಿದ್ದಾರೆ. ತಮ್ಮದೇ ಜಮೀನಿನ ಬಾವಿ, ಕೊಳವೆ ಬಾವಿಯ ನೀರನ್ನು ಕುಡಿಯುತ್ತಿದ್ದರು. ಆದರೆ ಇದೀಗ ಹಾರುಬೂದಿಯ ಕೆರೆಗಳ ನೀರು ಈ ಭಾಗದ ಅಂತರ್ಜಲವನ್ನು ಸೇರಿಕೊಂಡಿರುವ ಕಾರಣ ಇಲ್ಲಿಯ ನೀರಿನ ಸ್ವಾದನೇ ಬದಲಾಗಿದೆ. ಆರೋಗ್ಯ ಸಮಸ್ಯೆಗಳು ಬಾಧಿಸುತ್ತಿವೆ. ಹಾರುಬೂದಿಯ ಸಂಗ್ರಹ ಮಾಡುವ ಕೆರೆಗಳ ನೀರು ಇಡೀ ರೈತಕುಲಕ್ಕೆ ವಿಷವಾಗಿದೆ.

ಇದನ್ನೂ ಓದಿ: ವಿಶ್ವಗುರು ಬಸವಣ್ಣ-ಅಕ್ಕಮಹಾದೇವಿ ಬಗ್ಗೆ ಅಶ್ಲೀಲ ಮಾತು: ಸಿಡಿದೆದ್ದ ಅನುಯಾಯಿಗಳು

ಉಷ್ಣ ವಿದ್ಯುತ್ ಸ್ಥಾವರದ ಹಾರುಬೂದಿಯ ಜೊತೆಗಿರುವ ಕೆಮಿಕಲ್ಸ್ ಸುತ್ತಮುತ್ತಲ ಭಾಗದ ಅಂತರ್ಜಲ ಸೇರುತ್ತಿರುವುದು ಮಾತ್ರ ಮಹಾದುರಂತವೇ ಆಗಿದೆ. ಸಮಸ್ಯೆಗೀಡಾದ ರೈತರ ಜಮೀನುಗಳನ್ನು ಸ್ವಾಧೀನ ಮಾಡಿಕೊಂಡು ರೈತರಿಗೆ ಸೂಕ್ತ ಪರಿಹಾರ ನೀಡುವುದೇ ಇದಕ್ಕೆ ಪರಿಹಾರವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ, ಎನ್​​ಟಿಪಿಸಿ ಹಾಗೂ ಜಿಲ್ಲಾಡಳಿತ ಯಾವ ಕ್ರಮತೆಗೆದುಕೊಳ್ಳುತ್ತಾರೋ ಕಾಯ್ದು ನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

RCB vs CSK Record Alert: ಸಿಎಸ್​ಕೆ ವಿರುದ್ಧ ಅಬ್ಬರಿಸಿ ರೋಹಿತ್ ದಾಖಲೆ ಮುರಿದು ಅಗ್ರಸ್ಥಾನಕ್ಕೇರಿದ ಕೊಹ್ಲಿ

Source link

RCB vs CSK Record Alert: ಸಿಎಸ್​ಕೆ ವಿರುದ್ಧ ಅಬ್ಬರಿಸಿ ರೋಹಿತ್ ದಾಖಲೆ ಮುರಿದು ಅಗ್ರಸ್ಥಾನಕ್ಕೇರಿದ ಕೊಹ್ಲಿ

Source link

ಸಮುದ್ರದಾಳದಲ್ಲಿ ‘ಪಂಚರಂಗಿ’ ನಟಿ ನಿಧಿ ಸುಬ್ಬಯ್ಯ: ವಿಡಿಯೋ

ನಿಧಿ ಸುಬ್ಬಯ್ಯ (Nidhi Subbaiah) ಕನ್ನಡದ ಜನಪ್ರಿಯ ನಟಿಯರಲ್ಲಿ ಒಬ್ಬರು. ‘ಪಂಚರಂಗಿ’, ‘ಅಣ್ಣಬಾಂಡ್’ ಸೇರಿದಂತೆ ಹಲವು ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿದ್ದಾರೆ. ಒಂದು ಸಣ್ಣ ಬ್ರೇಕ್ ಬಳಿಕ ಚಿತ್ರರಂಗಕ್ಕೆ ಮರಳಿರುವ ನಿಧಿ ಸುಬ್ಬಯ್ಯ ಕೆಲವಾರು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಈ ಹಿಂದೆ ಬಿಗ್​​ಬಾಸ್ ಕನ್ನಡ ಶೋಗೂ ಸಹ ಹೋಗಿ ಬಂದರು ನಿಧಿ ಸುಬ್ಬಯ್ಯ. ನಟನೆಯ ಜೊತೆಗೆ ಪ್ರವಾಸ ನಿಧಿ ಸುಬ್ಬಯ್ಯ ಅವರ ಮೆಚ್ಚಿನ ಹವ್ಯಾಸ. ಇದೀಗ ಸಮುದ್ರದಾಳದಲ್ಲಿ ಈಜಾಟ ನಡೆಸಿ, ಸಮುದ್ರ ಜೀವಿಗಳೊಟ್ಟಿಗೆ ಮುಖಾ-ಮುಖಿ ಆಗಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

RCB vs CSK: ಕಿಂಗ್ ಕೊಹ್ಲಿಯ ನೋ ಲುಕ್ ಸಿಕ್ಸರ್​ಗೆ ಹುಚ್ಚೆದ್ದು ಕುಣಿದ ಫ್ಯಾನ್ಸ್; ವಿಡಿಯೋ

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್​ನ ಹೈವೋಲ್ಟೇಜ್ ಕದನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್​ಕೆ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಆರಂಭಿಸಿರುವ ಆರ್​ಸಿಬಿಗೆ ಸ್ಫೋಟಕವಲ್ಲದಿದ್ದರೂ ಅವಶ್ಯಕ ಆರಂಭ ಸಿಕ್ಕಿದೆ. ಅನುಭವಿ ಬ್ಯಾಟರ್ ವಿರಾಟ್ ಕೊಹ್ಲಿ ಉಪಯುಕ್ತ ಇನ್ನಿಂಗ್ಸ್ ಆಡುವ ಮೂಲಕ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಟ್ಟರು.

ಆರಂಭಿಕರಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಹಾಗೂ ಫಿಲ್ ಸಾಲ್ಟ್​ಗೆ ಮೊದಲ ಮೂರು ಓವರ್​ಗಳಲ್ಲಿ ಯಾವುದೇ ಬೌಂಡರಿ ಗಳಿಸಲು ಸಾಧ್ಯವಾಗಲಿಲ್ಲ. ಇವರಿಬ್ಬರು ಬೌಂಡರಿಗಳಿಗೆ ಪ್ರಯತ್ನಿಸಿದರಾದರೂ ಔಟ್​ಫಿಲ್ಡ್ ಸ್ಲೋ ಇದ್ದ ಕಾರಣ ಬಾಲ್ ನೆಲಕ್ಕೆ ಬಿದ್ದ ಕೂಡಲೇ ಅಲ್ಲಿಯೇ ಉಳಿಯುತ್ತಿತ್ತು. ಹೀಗಾಗಿ ಕೆಲವು ಬೌಂಡರಿ ಅವಕಾಶಗಳು ಕೈತಪ್ಪಿದವು. ಆದಾಗ್ಯೂ ಇನ್ನಿಂಗ್ಸ್​ನ 4ನೇ ಓವರ್​ನಲ್ಲಿ ಮೈಚಳಿ ಬಿಟ್ಟು ಬ್ಯಾಟ್ ಬೀಸಿದ ಕೊಹ್ಲಿ, ಮ್ಯಾಟ್ ಹೆನ್ರಿ ಬೌಲ್ ಮಾಡಿದ ಈ ಓವರ್​ನ ಎರಡನೇ ಎಸೆತವನ್ನು ಸಿಕ್ಸರ್​ಗಟ್ಟಿದರು.

ಕೊಹ್ಲಿಯ ಈ ನೋ ಲುಕ್ ಸಿಕ್ಸರ್​ಗೆ ಅಭಿಮಾನಿಗಳು ಹುಚ್ಚೆದ್ದು ಕುಣಿದರು. ಇದು ಆರ್​ಸಿಬಿ ಇನ್ನಿಂಗ್ಸ್​ನ ಮೊದಲ ಸಿಕ್ಸರ್ ಆಗಿತ್ತು. ಅದೇ ಓವರ್​ನ ಐದನೇ ಎಸೆತದಲ್ಲಿ ಕೊಹ್ಲಿ ಒಂದು ಬೌಂಡರಿ ಕೂಡ ಬಾರಿಸಿದರು. ಐದನೇ ಓವರ್​ನಲ್ಲೂ ಒಂದು ಬೌಂಡರಿ ಬಾರಿಸಿದ ಕೊಹ್ಲಿ ಅದೇ ಓವರ್​ನಲ್ಲಿ ಮತ್ತೊಂದು ದೊಡ್ಡ ಹೊಡೆತಕ್ಕೆ ಯತ್ನಿಸಿ ಔಟಾದರು. ಕೊಹ್ಲಿ ತಮ್ಮ ಇನ್ನಿಂಗ್ಸ್​ನಲ್ಲಿ 18 ಎಸೆತಗಳನ್ನು ಎದುರಿಸಿ 2 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 28 ರನ್ ಬಾರಿಸಿ ಔಟಾದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

SRH vs LSG: ಲಕ್ನೋಗೆ ಮೊದಲ ಗೆಲುವು; ಭಾವುಕರಾದ ಮಾಲೀಕ ಸಂಜೀವ್ ಗೋಯೆಂಕಾ

ಹೈದರಾಬಾದ್​ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 (IPL 2026) ರ 10ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ ತಂಡವನ್ನು ಮಣಸಿದ ಲಕ್ನೋ ಸೂಪರ್​ಜೈಂಟ್ಸ್ ಈ ಆವೃತ್ತಿಯಲ್ಲಿ ತನ್ನ ಮೊದಲ ಗೆಲುವು ದಾಖಲಿಸಿತು. ಸನ್‌ರೈಸರ್ಸ್ ನೀಡಿದ 157 ರನ್​ಗಳ ಗುರಿಯನ್ನು ಬೆನ್ನಟ್ಟಲು ಸಾಕಷ್ಟು ಕಷ್ಟಪಟ್ಟ ಲಕ್ನೋ, ನಾಯಕ ರಿಷಭ್ ಪಂತ್ ಅವರ ತಾಳ್ಮೆಯ ಆಟದಿಂದಾಗಿ ಕೊನೆಯ ಓವರ್​ನಲ್ಲಿ ಗೆಲುವು ದಾಖಲಿಸಿತು. ಕೊನೆಯ ಓವರ್​ವರೆಗೂ ರೋಚಕತೆಯಿಂದ ಕೂಡಿದ ಈ ಪಂದ್ಯವನ್ನು ಲಕ್ನೋ ತಂಡ ಗೆಲ್ಲುತ್ತಿದ್ದಂತೆ ತಂಡದ ಮಾಲೀಕ ಸಂಜೀವ್ ಗೋಯೆಂಕಾ ಅವರು ತುಂಬಾ ಭಾವುಕರಾಗಿ ಕಾಣಿಸಿಕೊಂಡರು. ತಂಡದ ಗೆಲುವನ್ನು ಚಪ್ಪಾಳೆ ತಟ್ಟುತ್ತ ಸಂಭ್ರಮಿಸಿದರು. ಇದೀಗ ಅದರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Source link

ಜನ ವಿಶ್ವಾಸ ವಿಧೇಯಕ 2026: ಸಣ್ಣ ತಪ್ಪುಗಳಿಗೆ ಶಿಕ್ಷೆಯಿಲ್ಲ, ದಂಡವಷ್ಟೇ

ಲೋಕಸಭೆಯಲ್ಲಿ 2026ರ ಮಾರ್ಚ್‌ 27ರಂದು ಮಂಡನೆಯಾದ ಮಹತ್ವದ ‘ಜನ ವಿಶ್ವಾಸ (ತಿದ್ದುಪಡಿ) ವಿಧೇಯಕ 2026’ (Jan Vishwas Amendment Bill) ಏಪ್ರಿಲ್‌ 1ರಂದು ಅಂಗೀಕಾರಗೊಂಡಿತು. ಮರುದಿನವೇ ರಾಜ್ಯಸಭೆಯಲ್ಲೂ ಇದಕ್ಕೆ ಅನುಮೋದನೆ ದೊರೆಯಿತು. ಸಣ್ಣಪುಟ್ಟ ತಾಂತ್ರಿಕ ತಪ್ಪುಗಳಿಗೆ ಜೈಲು ಶಿಕ್ಷೆಯ ಬದಲು ಕೇವಲ ದಂಡ ವಿಧಿಸುವ ಮೂಲಕ ಉದ್ಯಮಸ್ನೇಹಿ ವಾತಾವರಣ (Ease of Doing Business) ನಿರ್ಮಿಸುವುದು ಈ ಕಾಯ್ದೆಯ ಪ್ರಮುಖ ಉದ್ದೇಶವಾಗಿದೆ. ಇದು ಏಕರೂಪದ ಆಡಳಿತಾತ್ಮಕ ವ್ಯವಸ್ಥೆಯನ್ನು ಜಾರಿಗೊಳಿಸಲಿದೆ.

24 ಸದಸ್ಯರ ಆಯ್ಕೆ ಸಮಿತಿಯು 49 ಸಭೆಗಳನ್ನು ನಡೆಸಿ, ನಾನಾ ಸಚಿವಾಲಯಗಳು, ತಜ್ಞರು ಹಾಗೂ ಉದ್ಯಮ ವಲಯದೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಈ ವಿಧೇಯಕಕ್ಕೆ ಅಂತಿಮ ರೂಪ ನೀಡಲಾಗಿದೆ. ಈ ಸುಧಾರಣಾ ವಿಧೇಯಕವು 80 ಕೇಂದ್ರೀಯ ಕಾನೂನುಗಳ 784 ನಿಬಂಧನೆಗಳನ್ನು ಬದಲಾಯಿಸಿದೆ. 42 ಕೇಂದ್ರೀಯ ಕಾನೂನುಗಳಲ್ಲಿದ್ದ 183 ಕ್ರಿಮಿನಲ್‌ ದಂಡನೆಗಳನ್ನು ರದ್ದುಪಡಿಸಲಾಗಿದೆ. ಒಟ್ಟಾರೆ 717 ನಿಬಂಧನೆಗಳನ್ನು ಕ್ರಿಮಿನಲ್‌ ದಂಡನೆಯಿಂದ ಮುಕ್ತಗೊಳಿಸಲಾಗಿದ್ದು, ಉಳಿದ 67 ನಿಬಂಧನೆಗಳನ್ನು ಜನಜೀವನವನ್ನು ಸುಗಮಗೊಳಿಸುವ ಗುರಿಯೊಂದಿಗೆ ಮಾರ್ಪಡಿಸಲಾಗಿದೆ.

ವಿವಿಧ ವಲಯಗಳಲ್ಲಿನ ಪ್ರಮುಖ ಸುಧಾರಣೆಗಳು

ಔಷಧ ಮತ್ತು ಸೌಂದರ್ಯವರ್ಧಕ ಕಾಯಿದೆ (1940): ರಿಟರ್ನ್‌ ಸಲ್ಲಿಸದಿರುವುದು, ದಾಖಲೆಗಳನ್ನು ಇಟ್ಟುಕೊಳ್ಳದಿರುವುದು ಮುಂತಾದ ಸಣ್ಣಪುಟ್ಟ ಪ್ರಮಾದಗಳನ್ನು ಇನ್ನು ಮುಂದೆ ಕ್ರಿಮಿನಲ್‌ ಅಪರಾಧಗಳೆಂದು ಪರಿಗಣಿಸಲಾಗುವುದಿಲ್ಲ. ಇದರಿಂದ ಔಷಧ ತಯಾರಕ ಕಂಪನಿಗಳ ವಿರುದ್ಧದ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಲಿದೆ.

ಇದನ್ನೂ ಓದಿ: ಇರಾನ್​ನ ಅಣು ವಿದ್ಯುತ್ ಸ್ಥಾವರಕ್ಕೆ ಹಾನಿ; ವಿಕಿರಣ ಸೋರಿಕೆಯಿಂದ ಗಲ್ಫ್ ರಾಷ್ಟ್ರಗಳಲ್ಲಿ ಸರ್ವನಾಶ?

ಮೋಟಾರು ವಾಹನಗಳ ಕಾಯಿದೆ (1988): ಸಣ್ಣ ಉಲ್ಲಂಘನೆಗಳು ಮತ್ತು ಗಂಭೀರ ಅಪರಾಧಗಳನ್ನು ಸ್ಪಷ್ಟವಾಗಿ ಪ್ರತ್ಯೇಕಿಸಲಾಗಿದೆ. ಸಣ್ಣಪುಟ್ಟ ನಿಯಮ ಉಲ್ಲಂಘನೆಗಳಿಗೆ ಜೈಲು ಶಿಕ್ಷೆ ಬದಲು ಹಣಕಾಸಿನ ದಂಡ ವಿಧಿಸಲಾಗುತ್ತದೆ. ಆದರೆ, ರಸ್ತೆ ಸುರಕ್ಷತೆ ಮತ್ತು ಸಾರ್ವಜನಿಕರ ಕಲ್ಯಾಣಕ್ಕೆ ಧಕ್ಕೆಯಾಗಬಲ್ಲ ಅಪರಾಧಗಳಿಗೆ ಕ್ರಿಮಿನಲ್‌ ದಂಡನೆ ಮುಂದುವರಿಯಲಿದೆ. ಇದು ರಾಜ್ಯವ್ಯಾಪಿ ನೋಂದಣಿ (Registration) ಪ್ರಕ್ರಿಯೆಯನ್ನೂ ಸುಗಮಗೊಳಿಸಿದೆ.

ಕಾನೂನು ಮಾಪನ ಕಾಯಿದೆ: ಪ್ಯಾಕೇಜಿಂಗ್‌ ಅಥವಾ ಲೇಬಲಿಂಗ್‌ನಲ್ಲಿನ ಸಣ್ಣ ತಪ್ಪುಗಳನ್ನು ಕ್ರಿಮಿನಲ್‌ ಅಪರಾಧಗಳಿಂದ ಮುಕ್ತಗೊಳಿಸಲಾಗಿದೆ. ಈ ಹಿಂದೆ ಇಂತಹ ತಪ್ಪುಗಳಿಗೆ ಒಂದು ವರ್ಷದವರೆಗೆ ಜೈಲು ಶಿಕ್ಷೆ ಇರುತ್ತಿತ್ತು.

ಮೂಲಸೌಕರ್ಯ ಮತ್ತು ಇತರೆ ಕಾಯ್ದೆಗಳು: ದಿಲ್ಲಿ ಅಭಿವೃದ್ಧಿ ಕಾಯಿದೆ (1957), ದಿಲ್ಲಿ ಮುನಿಸಿಪಲ್‌ ಕೌನ್ಸಿಲ್‌ ಕಾಯಿದೆ (1994) ಅಡಿಯಲ್ಲಿನ ಸಣ್ಣಪುಟ್ಟ ನಾಗರಿಕ ಉಲ್ಲಂಘನೆಗಳಿಗೆ ಜೈಲು ಶಿಕ್ಷೆಯನ್ನು ರದ್ದುಪಡಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಕಾಯಿದೆ (1956)ಯನ್ನು ಸುಧಾರಿಸಲಾಗಿದ್ದು, ಲಾಜಿಸ್ಟಿಕ್ಸ್‌ ವಲಯದಲ್ಲಿ ದಂಡಗಳನ್ನು ಸರಳಗೊಳಿಸಲಾಗಿದೆ.

ಉದ್ಯಮಶೀಲತೆಗೆ ಉತ್ತೇಜನ ಮತ್ತು ನ್ಯಾಯಾಲಯಗಳಿಗೆ ರಿಲೀಫ್

ಜನ ವಿಶ್ವಾಸ ವಿಧೇಯಕವು ‘ಮೇಕ್‌ ಇನ್‌ ಇಂಡಿಯಾ’ ಮತ್ತು ‘ಸ್ಟಾರ್ಟಪ್‌ ಇಂಡಿಯಾ’ ಅಭಿಯಾನಗಳಿಗೆ ದೊಡ್ಡ ಮಟ್ಟದ ಬೆಂಬಲ ನೀಡಲಿದೆ. ಭಾರತದಲ್ಲಿರುವ 2.12 ಲಕ್ಷ ಡಿಪಿಐಐಟಿ ಮಾನ್ಯತೆ ಪಡೆದ ಸ್ಟಾರ್ಟಪ್‌ಗಳಿಗೆ ಮುಂದಿನ ಹಂತದ ಬೆಳವಣಿಗೆಗೆ ಇದು ವರದಾನವಾಗಲಿದೆ. ಸುದೀರ್ಘ ಕಾನೂನು ಹೋರಾಟಗಳನ್ನು ಎದುರಿಸುವ ಬದಲು, ಸಣ್ಣಪುಟ್ಟ ಪ್ರಮಾದಗಳನ್ನು ತಾವೇ ಸರಿಪಡಿಸಿಕೊಳ್ಳಲು ಉದ್ಯಮಿಗಳಿಗೆ ಅವಕಾಶ ಸಿಗಲಿದೆ.

ಇದನ್ನೂ ಓದಿ: ಡೊನಾಲ್ಡ್ ಟ್ರಂಪ್ ಸತ್ತರಾ? ಸೋಷಿಯಲ್ ಮೀಡಿಯಾದಲ್ಲಿ ಹರಿದಾಡ್ತಿದೆ ಸುದ್ದಿ; ನಿಜವಾ, ವದಂತಿಯಾ?

ಈ ಹಿಂದೆ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿದ್ದ ಸಂಕೀರ್ಣ ಲೈಸೆನ್ಸ್‌-ಕೋಟಾ ವ್ಯವಸ್ಥೆ ಹಾಗೂ 2012ರ ಪೂರ್ವಾನ್ವಯ ತೆರಿಗೆ (Retrospective tax) ತಿದ್ದುಪಡಿಯಿಂದಾಗಿ ಜಾಗತಿಕ ಹೂಡಿಕೆದಾರರಲ್ಲಿ ಭಾರತದ ವರ್ಚಸ್ಸಿಗೆ ಧಕ್ಕೆಯಾಗಿತ್ತು. ಆದರೆ, ಕಳೆದೊಂದು ದಶಕದಲ್ಲಿ ಮೋದಿ ಸರ್ಕಾರವು ಕಾನೂನುಗಳನ್ನು ಸರಳಗೊಳಿಸುವ ಮೂಲಕ ಹೂಡಿಕೆದಾರರ ವಿಶ್ವಾಸವನ್ನು ಮರಳಿ ಗಳಿಸಿದೆ. ಇದರ ಪರಿಣಾಮವಾಗಿ ಭಾರತವು ವಿಶ್ವಬ್ಯಾಂಕ್‌ನ “ಈಸ್‌ ಆಫ್‌ ಡೂಯಿಂಗ್‌ ಬಿಸಿನೆಸ್‌” ರ‍್ಯಾಂಕಿಂಗ್‌ನಲ್ಲಿ ತನ್ನ ಸ್ಥಾನವನ್ನು ಸುಧಾರಿಸಿಕೊಂಡಿದ್ದು, 2025-26ರಲ್ಲಿ $790.86 ಶತಕೋಟಿ ಡಾಲರ್‌ ರಫ್ತು ವಹಿವಾಟು ನಡೆಸಿದೆ.

ಈ ವಿಧೇಯಕವು 700ಕ್ಕೂ ಹೆಚ್ಚು ಸಣ್ಣಪುಟ್ಟ ಕ್ರಿಮಿನಲ್‌ ಅಪರಾಧಗಳನ್ನು ರದ್ದುಪಡಿಸಿರುವುದರಿಂದ, ನ್ಯಾಯಾಲಯಗಳ ಮೇಲಿನ ಒತ್ತಡ ಶೇ. 25-30ರಷ್ಟು ಕಡಿಮೆಯಾಗುವ ನಿರೀಕ್ಷೆಯಿದೆ. ಪ್ರಸ್ತುತ ನ್ಯಾಯಾಲಯಗಳಲ್ಲಿ 4.8 ಕೋಟಿ ಪ್ರಕರಣಗಳು ಬಾಕಿ ಇದ್ದು, ಇನ್ನು ಮುಂದೆ ಸಣ್ಣ ತಪ್ಪುಗಳಿಗೆ ಕೋರ್ಟ್ ಬದಲು ಸಂಬಂಧಪಟ್ಟ ಅಧಿಕಾರಿಗಳೇ ತೀರ್ಪು ನೀಡಲಿದ್ದಾರೆ.

ಒಟ್ಟಾರೆಯಾಗಿ, ಜನ ವಿಶ್ವಾಸ (ತಿದ್ದುಪಡಿ) ವಿಧೇಯಕ 2026ರ ಮೂಲಕ ಸರ್ಕಾರವು “ಕನಿಷ್ಠ ಸರ್ಕಾರ, ಗರಿಷ್ಠ ಆಡಳಿತ” (Minimum Government, Maximum Governance) ಎಂಬ ಆಶಯವನ್ನು ಸಾಕಾರಗೊಳಿಸಿದೆ. ದಂಡ ಆಧಾರಿತ ವ್ಯವಸ್ಥೆಯಿಂದ ವಿಶ್ವಾಸ ಆಧಾರಿತ ಆಡಳಿತ ಮಾದರಿಗೆ ಬದಲಾಗುವ ಮೂಲಕ ಇದು ಭಾರತದ ಉದ್ದಿಮೆಗಳ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವುದಲ್ಲದೆ, ನಾಗರಿಕ ಸ್ನೇಹಿ ವ್ಯವಸ್ಥೆಯನ್ನು ರೂಪಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಸ್ನೇಹಿತನ ಮನೆಗೆ ಊಟಕ್ಕೆ ಬಂದಿದ್ದ ಗೆಳೆಯರು ಸಾವು: ದೇವರಿಗೆ ಹರಕೆ ತೀರಿಸಲು ಹೋಗಿದ್ದ ಮತ್ತಿಬ್ಬರು ನದಿ ಪಾಲು

ಚಿಕ್ಕಬಳ್ಳಾಪುರ, ಏಪ್ರಿಲ್​ 05: ಸ್ನೇಹಿತನ ಮನೆಗೆ ಊಟಕ್ಕೆ ಬಂದಿದ್ದ 7 ಜನರ ಪೈಕಿ ಇಬ್ಬರು ಕೆರೆಯಲ್ಲಿ ಈಜಲು (swimming) ಹೋಗಿ ನೀರುಪಾಲು (death) ಆಗಿರುವಂತಹ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಗಡಿಮಿಂಚೇನಹಳ್ಳಿ ಗ್ರಾಮದ ಬಳಿಯ ರಾಮಸಮುದ್ರ ಕೆರೆಯಲ್ಲಿ ನಡೆದಿದೆ. ಬೆಂಗಳೂರಿನ ಜೆ.ಪಿ.ನಗರದ ಗಿರೀಶ್(35) ಮತ್ತು ಕಿಶೋರ್(28) ಮೃತರು. ದಿಬ್ಬೂರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದಿದ್ದೇನು? 

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಗಡಿಮಿಂಚೇನಹಳ್ಳಿ ಗ್ರಾಮಕ್ಕೆ ಭಾನುವಾರ ರಜೆ ಹಿನ್ನೆಲೆ ಸ್ನೇಹಿತ ಜಗದೀಶ್​ ಮನೆಗೆ ಒಟ್ಟು 7 ಸ್ನೇಹಿತರು ಆಗಮಿಸಿದ್ದರು. ಗ್ರಾಮಕ್ಕೆ ಹೋಗುವ ದಾರಿಯಲ್ಲಿ ಕೆರೆಯಲ್ಲಿ ಈಜಲು ನೀರಿಗೆ ಇಳಿದಿದ್ದಾರೆ. ಈ ವೇಳೆ 7 ಜನರ ಪೈಕಿ ಇಬ್ಬರು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತ ಗಿರೀಶ್ ಮತ್ತು ಕಿಶೋರ್ ಬೆಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು.

ಹರಕೆ ತಿರಿಸಲು ಬಂದಿದ್ದ ವಿದ್ಯಾರ್ಥಿಗಳಿಬ್ಬರು ಈಜಲು ಹೋಗಿ ಸಾವು

ಮತ್ತೊಂದು ಪ್ರಕರಣದಲ್ಲಿ ಭೀಮಾ ನದಿಗೆ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲಾಗಿರುವಂತಹ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರ್​ನಲ್ಲಿ ನಡೆದಿದೆ. ಪುಂಡಲಿಕ್ ಮೂಲಿಮನಿ(17) ಮತ್ತು ಮಹೇಶ್(16) ಮೃತ ದುರ್ದೈವಿಗಳು.

ಇದನ್ನೂ ಓದಿ: ಮಕ್ಕಳ ಪಾಲಿಗೆ ಮೃತ್ಯುಕೂಪವಾದ ಕೃಷಿಹೊಂಡ: ಈಜಲು ಹೋದ ನಾಲ್ವರು ಜಲಸಮಾಧಿ

ಹರಕೆ ತಿರಿಸಲು ಮಣ್ಣೂರ್ ಯಲ್ಲಮ್ಮನ ದೇಗುಲಕ್ಕೆ ವಿದ್ಯಾರ್ಥಿಗಳು ಬಂದಿದ್ದರು. ಈ ವೇಳೆ ನದಿಯಲ್ಲಿ ಈಜಲು ಹೋಗಿದ್ದಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ವಿದ್ಯಾರ್ಥಿಗಳ ಶವದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರವಾಗಲಿದೆ. ಸದ್ಯ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾರಿಗೆ ಬಸ್, ಖಾಸಗಿ ಬಸ್ ನಡುವೆ ಡಿಕ್ಕಿ: ಇಬ್ಬರ ಸಾವು

ಎನ್​​ಹೆಚ್​ 48ರಲ್ಲಿ ಸಾರಿಗೆ ಬಸ್ ಮತ್ತು ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದ ಹಿನ್ನೆಲೆ ಇಬ್ಬರು ಸಾವನ್ನಪ್ಪಿರುವಂತಹ ಘಟನೆ ತುಮಕೂರು ಜಿಲ್ಲೆಯ ಶಿರಾ ಮಿನಿ ವಿಧಾನಸೌಧದ ಬಳಿ ನಡೆದಿದೆ. ಖಾಸಗಿ ಬಸ್​ನ ಹಿಂದಿನ ಸೀಟ್​ನಲ್ಲಿ ಕುಳಿತಿದ್ದ ಹಾವೇರಿಯ ಪ್ರವೀಣ್ ಕೃಷ್ಣಪ್ಪ(28) ಮತ್ತು ಗದಗದ ಸಂಗೀತಾ(16) ಮೃತರು.

ಇದನ್ನೂ ಓದಿ: ಪ್ರತ್ಯೇಕ ಘಟನೆ: ರಜೆ ತಂದ ಆಪತ್ತು; ಈಜಲು ತೆರಳಿದ್ದ ಐವರು ಬಾಲಕರು ನೀರುಪಾಲು

35 ಪ್ರಯಾಣಿಕರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಮತ್ತು ಕೆಎಸ್ಆರ್​ಟಿಸಿ ಬಸ್. ಘಟನೆ ಸಂಬಂಧ ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಉಚಿತ ಟಿಕೆಟ್ ಚರ್ಚೆ ಮಧ್ಯೆ RCB-CSK ಪಂದ್ಯ ವೀಕ್ಷಣೆಗೆ ಆಗಮಿಸಿದ ಬಿಜೆಪಿ ಶಾಸಕರು, ಎಂಪಿಗಳು!

ಬೆಂಗಳೂರು, (ಏಪ್ರಿಲ್ 05): ಕರ್ನಾಟಕದ ಶಾಸಕರಿಗೆ ಐಪಿಎಲ್ ಟಿಕೆಟ್​ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅಧಿವೇಶದಲ್ಲೇ ಐಪಿಎಲ್ ಟಿಕೆಟ್​​ಗೆ ಬೇಡಿ ಕೊನೆಗೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಓರ್ವ ಶಾಸಕನಿಗೆ ಮೂರು ಐಪಿಎಲ್ ನೀಡಲು ಕೆಎಸ್​​ಸಿಎ ತೀರ್ಮಾನಿಸಿದ್ದು, ಅದರಂತೆ ಆರ್​​ಸಿಬಿ ಹಾಗೂ ಸಿಎಸ್​​ಕೆ ನಡುವೆ ಪಂದ್ಯದ ಟಿಕೆಟ್​ ಗಾಗಿ ಶಾಸಕರು ಪಿಎಗಳು ಕ್ಯೂ ನಿಂತುಕೊಂಡು ಟಿಕೆಟ್ ಪಡೆದುಕೊಂಡಿದ್ದು, ಇದೀಗ ಬಿಜೆಪಿ ಶಾಸಕರು ಹಾಗೂ ಸಂಸದರು ಆರ್​​ಸಿಬಿ ಹಾಗೂ ಸಿಎಸ್​​ಕೆ ಪಂದ್ಯ ವೀಕ್ಷಣೆಗೆ ಚಿನ್ನಸ್ವಾಮಿ ಸ್ಟೇಡಿಯಂಗೆ ಆಗಮಿಸಿದ್ದಾರೆ. ಬಿಜೆಪಿ ಸಂಸದರಾದ ಬಿವೈ ರಾಘವೇಂದ್ರ, ಡಾ ಸಿ.ಎನ್ ಮಂಜುನಾಥ್ ಹಾಗೂ ಬಿಜೆಪಿ ಶಾಸಕ ಡಾ ಅಶ್ವಥ್ ನಾರಾಯಣ ಮತ್ತು ಜೆಡಿಎಸ್ ಎಂಎಲ್​​ಸಿ ಶರವಣ ಅವರು ಕುಟುಂಬ ಸಮೇತ ಪಂದ್ಯ ವೀಕ್ಷಿಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

‘ಧುರಂಧರ್ 2’ ಸಿನಿಮಾ ನೋಡಿ ವಿಮರ್ಶೆ ನೀಡಿದ ಮಾಜಿ ಕೇಂದ್ರ ಭದ್ರತಾ ಸಲಹೆಗಾರ

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಸಿನಿಮಾನಲ್ಲಿ ಭಾರತದ ಕೇಂದ್ರ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ಪಾತ್ರವು ಭಾರತೀಯ ಸೈನಿಕನೊಬ್ಬನ ಪಾಕಿಸ್ತಾನಕ್ಕೆ ಗೂಢಚಾರಿಯಾಗಿ ಕಳಿಸಿ ಉಗ್ರರನ್ನು ಮಟ್ಟ ಹಾಕುವ ಕತೆಯನ್ನು ಒಳಗೊಂಡಿದೆ. ಸಿನಿಮಾನಲ್ಲಿ ಪಾಕಿಸ್ತಾನದ ನಿಜ ಉಗ್ರರ ಪಾತ್ರಗಳನ್ನು ತೋರಿಸಲಾಗಿದೆ. ಪ್ರಧಾನಿ ಮೋದಿ ಸೇರಿದಂತೆ ಭಾರತದ ಕೆಲ ರಾಜಕೀಯ ನಾಯಕರು, ಪಕ್ಷಗಳ ಉಲ್ಲೇಖ ಸಹ ಇದೆ. ಸಿನಿಮಾದ ನೈಜತೆಯ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಹಲವು ವಿಡಿಯೋಗಳು ಹರಿದಾಡುತ್ತಿವೆ. ಮಾಜಿ ಉಪ ರಾಷ್ಟ್ರೀಯ ಭದ್ರತಾ ಸಲಹೆಗಾರ ಪಂಕಜ್ ಸರನ್ ಅವರು ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾ ವೀಕ್ಷಿಸಿ ಸಿನಿಮಾದ ನೈಜತೆ ಇನ್ನಿತರೆ ವಿಷಯಗಳ ಬಗ್ಗೆ ಮಾತನಾಡಿದ್ದಾರೆ.

ಸಿನಿಮಾದ ಮೇಕಿಂಗ್, ಗುಣಮಟ್ಟ ಇನ್ನಿತರೆಗಳನ್ನು ಕೊಂಡಾಡಿರುವ ಮಾಜಿ ಉಪ ರಾಷ್ಟ್ರೀಯ ಭದ್ರತಾ ಸಲಹೆಗಾರ ಪಂಕಜ್ ಸರನ್, ‘ಈ ಸಿನಿಮಾ ಭಾರತೀಯ ಚಿತ್ರರಂಗಕ್ಕೆ ಒಂದು ಹೊಸ ಮಾನದಂಡವನ್ನು ನಿಗದಿಪಡಿಸಿದೆ. ಈ ಚಿತ್ರವನ್ನು ಹಾಲಿವುಡ್‌ನ ಯುದ್ಧ ಆಧಾರಿತ ಸಿನಿಮಾಗಳಿಗೆ ಹೋಲಿಸಿರುವ ಅವರು, ಚಿತ್ರದ ಮೇಕಿಂಗ್ ಮತ್ತು ಗುಣಮಟ್ಟವು ಅತ್ಯಂತ ವೃತ್ತಿಪರವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಿನಿಮಾದಲ್ಲಿ ತೋರಿಸಲಾದ ಘಟನೆಗಳು ಮತ್ತು ಪಾತ್ರಗಳು ನೈಜ ಘಟನೆಗಳಿಂದ ಪ್ರೇರಿತವಾಗಿದ್ದು, ಜಾಗತಿಕ ಮಟ್ಟದ ಚಿತ್ರನಿರ್ಮಾಣದ ಗುಣಮಟ್ಟಕ್ಕೆ ಸಿನಿಮಾ ಸರಿಸಾಟಿಯಾಗಿದೆ. ಚಿತ್ರದಲ್ಲಿನ ಹಿಂಸಾಚಾರ ಸ್ವಲ್ಪ ಮಟ್ಟಿಗೆ ಹೆಚ್ಚಾಗಿದೆ ಎನಿಸಿದರೂ, ಗುಣಮಟ್ಟದ ನಿರ್ಮಾಣ ಮತ್ತು ತಾಂತ್ರಿಕ ಕೌಶಲದ ದೃಷ್ಟಿಯಿಂದ ಈ ಸಿನಿಮಾವನ್ನು ಮೀರಿಸುವುದು ಇತರರಿಗೆ ಕಷ್ಟ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:‘ಧುರಂಧರ್’, ‘ಕೇರಳ ಸ್ಟೋರಿ’ ಸುಳ್ಳು ಎಂದವರ ವಿರುದ್ಧ ನರೇಂದ್ರ ಮೋದಿ ಗರಂ

ಸಿನಿಮಾನಲ್ಲಿ ನೈಜತೆಯ ಅಂಶದ ಬಗ್ಗೆ ಮಾತನಾಡಿರುವ ಅವರು, ‘ಹಾಲಿವುಡ್​​ನ ಹಲವು ಯುದ್ಧ ಸಿನಿಮಾಗಳು ನಾಜಿಗಳನ್ನು, ರಷ್ಯರನ್ನು ವಿಲನ್​​ಗಳಂತೆ ತೋರಿಸಿದ್ದಾರೆ. ಅದನ್ನ ನಾವು ಒಪ್ಪಿಕೊಂಡಿದ್ದೇವೆ. ನಿರ್ದೇಶಕರು ಕಲಾತ್ಮಕ ಸ್ವಾತಂತ್ರ್ಯವನ್ನು ಬಳಸಿದಾಗ ಉತ್ಪ್ರೇಕ್ಷಿತ ಕತೆಯನ್ನು ನಾವು ಪ್ರಶ್ನೆ ಮಾಡಲಾಗದು. ಸಿನಿಮಾ ನೈಕ ಘಟನೆಗಳನ್ನು ಆಧರಿಸಿದೆ, ಆದರೆ ಉತ್ಪ್ರೇಕ್ಷೆಗೆ ಯಾವುದೇ ಸಮರ್ಥನೆಯನ್ನು ನಿರ್ದೇಶಕರು ಅಥವಾ ಚಿತ್ರತಂಡ ನೀಡಬೇಕಿಲ್ಲ ಏಕೆಂದರೆ ಅದು ಅವರ ಕಲಾತ್ಮಕ ಸ್ವಾತಂತ್ರ್ಯ’ ಎಂದು ಅವರು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಸಹ ‘ಧುರಂಧರ್’ ಸಿನಿಮಾದ ಬಗ್ಗೆ ಇಂದು ಮಾತನಾಡಿದ್ದು, ಪ್ರತಿ ಪಕ್ಷಗಳು ಅಥವಾ ಬಿಜೆಪಿ ವಿರೋಧಿಗಳು ‘ಕೇರಳ ಸ್ಟೋರಿ’, ‘ಕಾಶ್ಮೀರ್ ಫೈಲ್ಸ್’ ಈಗ ಬಿಡುಗಡೆ ಆಗಿರುವ ‘ಧುರಂಧರ್’ ಸಿನಿಮಾವನ್ನ ಸುಳ್ಳು ಎಂದು ಹೇಳುತ್ತಿದ್ದಾರೆ ಎಂದಿದ್ದಾರೆ. ಆ ಮೂಲಕ ಆ ಸಿನಿಮಾಗಳು ಸತ್ಯದಿಂದ ಕೂಡಿವೆ ಎಂದು ಹೇಳಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Exit mobile version