Headlines

‘ರಾಮಾಯಣ’ ಟ್ರೇಲರ್‌ ನೋಡಿ ಪಾಕಿಸ್ತಾನಿ ಮಂದಿ ಫಿದಾ: ರಣಬೀರ್, ಯಶ್ ನಟನೆಗೆ ಮೆಚ್ಚುಗೆ – Kannada News | Pakistani Youtubers impressed by Ramayana Trailer ft Ranbir Kapoor Yash Sai Pallavi

ಬಾಲಿವುಡ್ ನಿರ್ದೇಶಕ ನಿತೇಶ್ ತಿವಾರಿ ಆ್ಯಕ್ಷನ್-ಕಟ್ ಹೇಳಿರುವ ‘ರಾಮಾಯಣ’ ಚಿತ್ರದ ಟ್ರೇಲರ್ (Ramayana Trailer) ಬಿಡುಗಡೆಯಾಗಿದೆ. ಭಾರತದಲ್ಲಿ ಮಾತ್ರವಲ್ಲದೆ ಗಡಿ ದಾಟಿ ಪಾಕಿಸ್ತಾನದಲ್ಲೂ ಈ ಟ್ರೇಲರ್ ಭಾರಿ ಸದ್ದು ಮಾಡುತ್ತಿದೆ. ಜುಲೈ 30ರಂದು ಬಿಡುಗಡೆಯಾದ ಈ ಟ್ರೇಲರ್ ವೀಕ್ಷಿಸಿದ ಪಾಕಿಸ್ತಾನದ ಪ್ರಸಿದ್ಧ ಯೂಟ್ಯೂಬರ್‌ಗಳು ಮತ್ತು ಕಂಟೆಂಟ್ ಕ್ರಿಯೇಟರ್‌ಗಳು ದೃಶ್ಯ ವೈಭವಕ್ಕೆ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಬಿಗ್ ಬಜೆಟ್​ನಲ್ಲಿ ನಿರ್ಮಾಣ ಆಗಿರುವ ರಾಮಾಯಣ (Ramayana) ಸಿನಿಮಾದಲ್ಲಿ ಯಶ್, ರಣಬೀರ್ ಕಪೂರ್ ಅವರ ಲುಕ್ ಮತ್ತು ನಟನೆಯನ್ನು ಕಂಡು ಪಾಕ್ ಮಂದಿ ಬೆರಗಾಗಿದ್ದಾರೆ….

Read More

ಯಾದಗಿರಿ: ಗಣರಾಜ್ಯೋತ್ಸವ ಅಂಗವಾಗಿ ಲುಂಬಿಣಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ; ಇಲ್ಲಿವೆ ಫೋಟೋಸ್​

ಗಣರಾಜ್ಯೋತ್ಸವ ದಿನಾಚರಣೆ ಹಿನ್ನಲೆ ಯಾದಗಿರಿ ನಗರದ ಲುಂಬಿನಿ ಉದ್ಯಾನವನದಲ್ಲಿ ತೋಟಗಾರಿಕೆ ಇಲಾಖೆಯಿಂದ ಮೂರು ದಿನದ ಫಲಪುಷ್ಪ ಪ್ರದರ್ಶನ ನಡೆಯುತ್ತಿದೆ. ನಿನ್ನೆ ಆರಂಭವಾದ ಫಲಪುಷ್ಪ ದರ್ಶನಕ್ಕೆ ನೋಡಲು ಇಂದು ಜನಸಾಗರವೇ ಹರಿದುಬಂದಿತ್ತು. ಯಾದಗಿರಿ ಜಿಲ್ಲೆಯ ರೈತರು ಬೆಳೆದಿರುವ ಹೂವು ಮತ್ತು ಹಣ್ಣುಗಳನ್ನ ಪ್ರದರ್ಶನಕ್ಕೆ ಇಡಲಾಗಿತ್ತು. ಜಿಲ್ಲೆಯ ನಾನಾ ಭಾಗದಲ್ಲಿ ರೈತರು ಬೆಳೆದಿರುವ ವಿವಿಧ ಹಣ್ಣುಗಳು ಹಾಗೂ ಹೂವುಗಳನ್ನ ಪ್ರದರ್ಶನಕ್ಕೆ ಇಡಲಾಗಿತ್ತು. ಕಲ್ಲಂಗಡಿ ಹಣ್ಣಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರ ಭಾವಚಿತ್ರಗಳನ್ನ ಬಿಡಿಸಲಾಗಿದೆ. ಅಷ್ಟೇ ಅಲ್ಲದೆ ಜಿಲ್ಲೆಯ ಪ್ರಮುಖ ಅಧಿಕಾರಿಗಳಾದ…

Read More

ಇಂಡಿಗೋ ವಿಮಾನದೊಳಗೆ 25 ನಿಮಿಷ ಎಸಿ, ಕರೆಂಟ್ ಇಲ್ಲದೆ ಕತ್ತಲಲ್ಲಿ ಒದ್ದಾಡಿದ ಪ್ರಯಾಣಿಕರು

ನವದೆಹಲಿ, ಮೇ 18: ಇಂಡಿಗೋ ವಿಮಾನದಲ್ಲಿ (IndiGo Flight) ಎಸಿ ಮತ್ತು ಕ್ಯಾಬಿನ್ ಲೈಟ್ ಸುಮಾರು 25 ನಿಮಿಷಗಳ ಕಾಲ ಆಫ್ ಆಗಿದ್ದರಿಂದ ವಿಮಾನದ ಪ್ರಯಾಣಿಕರು ಪರದಾಡುವಂತಾಯಿತು. ಇದರಿಂದ ವಿಮಾನದೊಳಗೆ ಪ್ರಯಾಣಿಕರಲ್ಲಿ ಭಾರಿ ಗದ್ದಲ ಉಂಟಾಯಿತು. ಸುಮಾರು 25 ನಿಮಿಷಗಳ ಕಾಲ ಕ್ಯಾಬಿನ್ ದೀಪಗಳು ಸ್ಥಗಿತಗೊಂಡಿದ್ದರಿಂದ, ವಿಮಾನವು ಸಂಪೂರ್ಣ ಕತ್ತಲೆಯಲ್ಲಿತ್ತು. ವಿಮಾನದೊಳಗಿನ ಬಿಸಿಗೆ ಪ್ರಯಾಣಿಕರಿಗೆ ಉಸಿರುಗಟ್ಟಿಸುವಂತಹ ಪರಿಸ್ಥಿತಿ ಉಂಟಾಯಿತು. ವಿಮಾನದೊಳಗಿದ್ದ ಪ್ರಯಾಣಿಕರೊಬ್ಬರು ಈ ದೃಶ್ಯವನ್ನು ಮೊಬೈಲ್​ನಲ್ಲಿ ರೆಕಾರ್ಡ್ ಮಾಡಿದ್ದಾರೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್…

Read More

ಐಷಾರಾಮಿ ಡಿಫೆಂಡರ್ ಖರೀದಿಸಿದ ಆ್ಯಕ್ಷನ್ ನಿರ್ದೇಶಕ ರವಿ ವರ್ಮ; ವಿಶೇಷ ವ್ಯಕ್ತಿಯಿಂದ ಹಸ್ತಾಕ್ಷರ – Kannada News | Action Director Ravi Varma Buys Land Rover Defender; Sunny Deol Signs Luxury SUV

ಆ್ಯಕ್ಷನ್ ಡೈರೆಕ್ಟರ್ ರವಿ ವರ್ಮ (Ravi Varma) ಅವರು ಕನ್ನಡ ಮಾತ್ರವಲ್ಲದೆ ತೆಲುಗು, ಹಿಂದಿ ಮೊದಲಾದ ಭಾಷೆಗಳಲ್ಲಿ ಕೆಲಸ ಮಾಡಿದ್ದಾರೆ. ಸಾಕಷ್ಟು ಚಾಲೆಂಜ್​​ಗಳನ್ನು ಎದುರಿಸಿ ಅವರು ಈ ಹಂತಕ್ಕೆ ಬಂದು ನಿಂತಿದ್ದಾರೆ. ತಮ್ಮ ಕೆಲಸ ಮಾತನಾಡುವಂತೆ ಅವರು ಮಾಡಿದ್ದಾರೆ. ಸನ್ನಿ ಯಶ್, ಸಲ್ಮಾನ್ ಖಾನ್, ಸನ್ನಿ ಡಿಯೋಲ್ ಸೇರಿದಂತೆ ಅನೇಕ ಸ್ಟಾರ್​​ಗಳ ಜೊತೆ ಕೆಲಸ ಮಾಡಿದ್ದಾರೆ. ಈ ಮಧ್ಯೆ ರವಿ ವರ್ಮ ಅವರು ದುಬಾರಿ ಕಾರನ್ನು ಖರೀದಿ ಮಾಡಿದ್ದಾರೆ. ಇದು ಇನ್ನೂ ಕನಸಿನ ರೀತಿ ಕಾಣುತ್ತಿದೆ ಎಂದು…

Read More

ಬಾಂಗ್ಲಾದೇಶ ಚುನಾವಣೆಯಲ್ಲಿ ಬಿಎನ್​ಪಿ ಐತಿಹಾಸಿಕ ಗೆಲುವು ಸಾಧಿಸಿದರೂ ಖುಷಿಯ ಮೆರವಣಿಗೆಯೇ ಇಲ್ಲ – Kannada News | Bangladesh Election, BNP’s Historic Win, But No Grand Celebrations

ಢಾಕಾ, ಫೆಬ್ರವರಿ 13: ಸಾಮಾನ್ಯವಾಗಿ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಸಿಹಿ ಹಂಚಿ, ಮೆರವಣಿಗೆ ನಡೆಸಿ ಖುಷಿ ಪಡುವುದು ಸಾಮಾನ್ಯ. ಆದರೆ ಬಾಂಗ್ಲಾದೇಶ(Bangladesh)ದಲ್ಲಿ ನಡೆದ ಸಂಸತ್ ಚುನಾವಣೆಯಲ್ಲಿ ಬಿಎನ್​ಪಿ ಐತಿಹಾಸಿಕ ಗೆಲುವು ಸಾಧಿಸಿದರೂ ಯಾವುದೇ ಮೆರವಣಿಗೆ ನಡೆಸುವುದಿಲ್ಲ ಎಂದು ಪಕ್ಷ ಹೇಳಿಕೆ ನೀಡಿದೆ. ಗುರುವಾರ ರಾತ್ರಿ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, ಪಕ್ಷವು ದೇಶದ ಜನರಿಗೆ ತನ್ನ ಕೃತಜ್ಞತೆ ಮತ್ತು ಶುಭಾಶಯವನ್ನು ತಿಳಿಸಿದೆ. ಶುಕ್ರವಾರ ಪ್ರಾರ್ಥನೆಯ ನಂತರ ದೇಶಾದ್ಯಂತ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನಾ ಸಭೆಗಳನ್ನು ನಡೆಸಲಾಗುವುದು ಎಂದು ಬಿಎನ್​ಪಿ…

Read More

‘ಹಿಂದೂ ಧರ್ಮಕ್ಕೆ ಮತಾಂತರಗೊಳ್ಳಿ, ಕೆಲಸ ಸಿಗುತ್ತೆ’; ರೆಹಮಾನ್​​ಗೆ ಕಿವಿಮಾತು ಹೇಳಿದ ಗಾಯಕ – Kannada News | AR Rahman Bollywood Communalism Claim: Anup Jalota Suggests Reconversion

ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ಸಂಯೋಜಕ ಮತ್ತು ಗಾಯಕ ಎ.ಆರ್. ರೆಹಮಾನ್ (Ar Rahman) ಇತ್ತೀಚಿನ ಸಂದರ್ಶನವೊಂದರಲ್ಲಿ ಕಳೆದ 8 ವರ್ಷಗಳಿಂದ ಬಾಲಿವುಡ್‌ನಲ್ಲಿ ಕೆಲಸ ಸಿಗುತ್ತಿಲ್ಲ ಎಂದು ಒಪ್ಪಿಕೊಂಡರು. ಬಾಲಿವುಡ್ ಉದ್ಯಮವು ಈಗ ಹೆಚ್ಚು ಕೋಮುವಾದಿಯಾಗಿದೆ ಎಂದು ಅವರು ಹೇಳಿದ್ದಾರೆ. ಅವರ ಹೇಳಿಕೆಗೆ ವಿವಿಧ ಪ್ರತಿಕ್ರಿಯೆಗಳು ಹೊರಬರಲು ಪ್ರಾರಂಭಿಸಿವೆ. ಧರ್ಮದ ಕಾರಣದಿಂದ ಕೆಲಸ ಸಿಗುತ್ತಿಲ್ಲ ಎಂಬ ದೂರನ್ನು ಹಲವರು ವಿರೋಧಿಸಿದ್ದಾರೆ. ಈಗ, ಭಜನೆಯ ಸಾಮ್ರಾಟ ಎಂಬ ಖ್ಯಾತಿ ಇರೋ ಗಾಯಕ ಅನುಪ್ ಜಲೋಟಾ ನೀಡಿದ ಹೇಳಿಕೆ ಈ…

Read More

ಮೆಟ್ರೋದಲ್ಲಿ ಹಾಡು ಹಾಡಿದವರ ವಿರುದ್ಧ ಪ್ರಕರಣ ದಾಖಲು!

ಬೆಂಗಳೂರು, ಮಾರ್ಚ್ 19: ನಮ್ಮ ಮೆಟ್ರೋ ರೈಲಿನಲ್ಲಿ ಹಾಡು ಹಾಡಿ ಸಾರ್ವಜನಿಕರಿಗೆ ತೊಂದರೆ ನೀಡಿದ ಘಟನೆಗೆ ಸಂಬಂಧಿಸಿದಂತೆ ಮೆಟ್ರೋ ಅಧಿಕಾರಿಗಳು ದೂರು ದಾಖಲಿಸಿದ್ದಾರೆ. ಭಾನುವಾರ ರಾತ್ರಿ ನಮ್ಮ ಮೆಟ್ರೋದಲ್ಲಿ ಈ ಘಟನೆ ನಡೆದಿತ್ತು. ಸಂಗೀತ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮರಳುತ್ತಿದ್ದ ಯುವತಿಯರ ಗುಂಪೊಂದು ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದಾಗ, ಜೋರಾಗಿ ಹಾಡು ಹಾಡಿ ನೃತ್ಯ ಮಾಡಿತ್ತು. ಇದರಿಂದ ಮೆಟ್ರೋದಲ್ಲಿದ್ದ ಇತರೆ ಪ್ರಯಾಣಿಕರಿಗೆ ಅಸೌಕರ್ಯ ಮತ್ತು ತೊಂದರೆ ಉಂಟಾಗಿದೆ. ನಿರ್ದಿಷ್ಟವಾಗಿ, ಕೆಲವು ಯುವತಿಯರು ಮೆಟ್ರೋ ಬೋಗಿಯ ನೆಲದ ಮೇಲೆ ಕುಳಿತು ಹಾಡು ಹಾಡಿದ್ದರು…

Read More

ರಣಮಳೆಗೆ ಬೆಂಗಳೂರಿನ ಜನ ಹೈರಾಣು: ಒಂದೇ ದಿನ ಮೆಟ್ರೋ ಮೊರೆ ಹೋದ 12 ಲಕ್ಷ ಜನ! – Kannada News | Namma Metro Record: Over 12.85 Lakh Passengers Travel in a Single Day Due to Bengaluru Rains

ಒಂದೇ ದಿನ ಮೆಟ್ರೋ ಮೊರೆ ಹೋದ 12 ಲಕ್ಷ ಜನ! Image Credit source: google Gemini ಬೆಂಗಳೂರು, ಮೇ 01: ಸಿಲಿಕಾನ್ ಸಿಟಿಯಲ್ಲಿ ಕಳೆದ ಬುಧವಾರ ಸುರಿದ ಭಾರೀ ಮಳೆ ಮತ್ತು ರಸ್ತೆಗಳಲ್ಲಾದ ಟ್ರಾಫಿಕ್ ಜಾಮ್‌ನಿಂದಾಗಿ ಹೈರಾಣಾದ ಜನರು ಅಕ್ಷರಶಃ ಮೆಟ್ರೋ (Namma Metro) ಮೊರೆ ಹೋಗಿದ್ದಾರೆ. ರಸ್ತೆಗಳೆಲ್ಲಾ ತುಂಬಿ ಮೊಣಕಾಲು ತನಕ ನೀರು ಬಂದಿತ್ತು. ಏಕಾಏಕಿ ಸುರಿದ ಮಳೆಗೆ ಅದೆಷ್ಟೋ ವಾಹನಗಳು ಕೈ ಕೊಟ್ಟ ಕಾರಣಕ್ಕೆ ಜನ ಓಲಾ, ಊಬರ್ ಕಡೆ ಮುಖ ಮಾಡಿದರೆ,…

Read More

ಬೆಂಗಳೂರಿನ ಜನರಿಗೆ ಗುಡ್​​ ನ್ಯೂಸ್​: ಇಂದು ಗಾಳಿಯ ಗುಣಮಟ್ಟ ಉತ್ತಮ, ಕಾರಣ ಏನು ಗೊತ್ತಾ?

ಬೆಂಗಳೂರು, ಮಾ.18: ಇಂದು ಬೆಂಗಳೂರಿನ ಜನರಿಗೆ ಸಂತೋಷದ ಸುದ್ದಿಯನ್ನು ಗಾಳಿ ಗುಣಮಟ್ಟ ನೀಡಿದೆ. ಪ್ರತಿದಿನ ಕಳಪೆ ಮಟ್ಟದ ವರದಿಯನ್ನು ನೋಡಿ ಇದೀಗ ಉತ್ತಮ ಮಟ್ಟದ ಗಾಳಿಯನ್ನು ಹೊಂದಿದೆ ಎಂಬ ವರದಿಯನ್ನು ನೀಡಲಾಗಿದೆ. ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ (AQI) ಸಾಧಾರಣದಿಂದ ಉತ್ತಮ ಮಟ್ಟದಲ್ಲಿದೆ. ಬೇಸಿಗೆಯ ಬಿಸಿಲಿನ ನಡುವೆಯೂ ಕೆಲವು ಭಾಗಗಳಲ್ಲಿ ಕಂಡುಬಂದ ಹಗುರ ಮಳೆಯು ಗಾಳಿಯಲ್ಲಿನ ಧೂಳಿನ ಕಣಗಳನ್ನು ಕಡಿಮೆ ಮಾಡಲು ಸಹಾಯ ಮಾಡಿದೆ. ಬೆಂಗಳೂರಿನಲ್ಲಿ ಇಂದು ಗಾಳಿಯ ಗುಣಮಟ್ಟವು ‘ಸಾಧಾರಣ’ ಮಟ್ಟದಲ್ಲಿದೆ. ವಾಹನ…

Read More

ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ! – Kannada News | Man sets his own bike afire with cigarette lighter at petrol pump in Raipur

ರಾಯ್​ಪುರ, ಫೆಬ್ರವರಿ 20: ಛತ್ತೀಸ್‌ಗಢದ ರಾಯ್‌ಪುರದ ಪೆಟ್ರೋಲ್ ಬಂಕ್ ಒಂದಕ್ಕೆ ಪೆಟ್ರೋಲ್ ಹಾಕಿಸಲು ಬಂದ ಬೈಕ್​ನಲ್ಲಿದ್ದ ಯುವಕರಲ್ಲಿ ಒಬ್ಬ ಸಿಗರೇಟ್ ಸೇದುತ್ತಿದ್ದ. ಇಲ್ಲಿ ಸಿಗರೇಟ್ ಹಚ್ಚಬೇಡಿ ಎಂದು ಪೆಟ್ರೋಲ್ ಬಂಕ್​ ಸಿಬ್ಬಂದಿ ಹೇಳುತ್ತಿದ್ದಂತೆ ಆತ ತನ್ನ ಬೈಕ್​ನ ಪೆಟ್ರೋಲ್ ಟ್ಯಾಂಕ್​ಗೆ ಲೈಟರ್​​ನಿಂದ ಬೆಂಕಿ ಹಚ್ಚಿದ್ದಾನೆ. ತಕ್ಷಣ ಆ ಬೈಕ್ ಹೊತ್ತಿ ಉರಿದು, ಪೆಟ್ರೋಲ್ ಬಂಕ್​ಗೂ ಬೆಂಕಿ (Fire Accident) ಆವರಿಸಿಕೊಂಡಿದೆ. ಕೂಡಲೆ ಅಲ್ಲಿದ್ದ ಸಿಬ್ಬಂದಿ ಬೆಂಕಿ ಆರಿಸಿದ್ದರಿಂದ ಭಾರೀ ಅನಾಹುತ ತಪ್ಪಿದಂತಾಗಿದೆ. ಇಲ್ಲದಿದ್ದರೆ ಇಡೀ ಪೆಟ್ರೋಲ್ ಬಂಕ್…

Read More