Headlines

ಸತೀಶ್​​ ಜಾರಕಿಹೊಳಿ ಕೈತಪ್ಪಿತಾ ಕೆಪಿಸಿಸಿ ಅಧ್ಯಕ್ಷ ಸ್ಥಾನ? ಬಿ.ಕೆ. ಹರಿಪ್ರಸಾದ್​​ಗೆ ಒಲಿದ ಅದೃಷ್ಟ? – Kannada News

ಶಾಸಕ ಸತೀಶ್​​ ಜಾರಕಿಹೊಳಿ ಕೈತಪ್ಪಿತಾ ಕೆಪಿಸಿಸಿ ಅಧ್ಯಕ್ಷ ಸ್ಥಾನ?Image Credit source: deccanherald ಬೆಂಗಳೂರು, ಜೂನ್​​ 03: ಡಿಸಿಎಂ, ಮಂತ್ರಿ ಸ್ಥಾನ ಸೇರಿ ಕೆಪಿಸಿಸಿ (KPCC) ಅಧ್ಯಕ್ಷಗಿರಿಗೂ ರಾಜ್ಯ ಕಾಂಗ್ರೆಸ್ (Congress)​​ ಪಾಳಯದಲ್ಲಿ ತೀವ್ರ ವೈಪೋಟಿ ನಡೆದಿತ್ತು. ಆದರೆ ಅದಕ್ಕೀಗ ತೆರೆಬಿದ್ದಿದೆ. ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್‌ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಫಿಕ್ಸ್​​ ಎನ್ನಲಾಗಿದ್ದು, ಮಂತ್ರಿ ಸ್ಥಾನದ ಜೊತೆ ಪಕ್ಷದ ಜವಾಬ್ದಾರಿ ಕೇಳಿದ್ದ ಸತೀಶ್ ಜಾರಕಿಹೊಳಿಗೆ ಭಾರಿ ನಿರಾಸೆಯಾಗಿದೆ. ಕೆಪಿಸಿಸಿ ಅಧ್ಯಕ್ಷರ ಹುದ್ದೆ ವಹಿಸಿಕೊಳ್ಳುವಂತೆ ಹೈಕಮಾಂಡ್ ನಾಯಕರಿಂದಲೇ ಬಿ.ಕೆ….

Read More

FIFA World cup 2026: ಫುಟ್‌ಬಾಲ್ ಆಟವನ್ನೇ ಬದಲಿಸಲಿದೆ ಹೊಸ ನಿಯಮಗಳು! – Kannada News

ಫುಟ್‌ಬಾಲ್ ಜಗತ್ತಿನ ಮಹಾಸಮರಕ್ಕೆ ಕ್ಷಣಗಣನೆ ಆರಂಭವಾಗಿದೆ! ಈ ಬಾರಿಯ ಫಿಫಾ ವಿಶ್ವಕಪ್ (FIFA World cup 2026)​ ಕೇವಲ ತಂಡಗಳ ಸಂಖ್ಯೆಯಿಂದ ಮಾತ್ರವಲ್ಲ, ಆಟದ ನಿಯಮಗಳಿಂದಲೂ ಜಾಗತಿಕ ಗಮನ ಸೆಳೆಯುತ್ತಿದೆ. ಇಂಟರ್ನ್ಯಾಷನಲ್ ಫುಟ್‌ಬಾಲ್ ಅಸೋಸಿಯೇಷನ್ ಬೋರ್ಡ್ (IFAB) ಈ ಹೊಸ ನಿಯಮಗಳಿಗೆ ಅನುಮೋದನೆ ನೀಡಿದ್ದು, ಪಂದ್ಯಗಳ ವೇಗವನ್ನು ಹೆಚ್ಚಿಸಲು ಮತ್ತು ಸಮಯ ವ್ಯರ್ಥ ಮಾಡುವುದನ್ನು ತಡೆಯಲು ಈ ಬಾರಿ ಕಠಿಣ ನಿಯಮಗಳನ್ನು ಪರಿಚಯಿಸಲಾಗಿದೆ. ಆ ನಿಯಮಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ… ವಿಎಆರ್ (VAR) ವ್ಯಾಪ್ತಿ ವಿಸ್ತರಣೆ:…

Read More

Video: ಗುರಗಾಂವ್‌ನಿಂದ ಬೆಂಗಳೂರಿಗೆ ಸ್ಥಳಾಂತರ; ಹೊಸ ಬಾಡಿಗೆ ಮನೆಯ ಬಗ್ಗೆ ಮಹಿಳೆ ಹೇಳಿದ್ದೇನು ಗೊತ್ತಾ? – Kannada News

ಬದುಕು ನಿಂತ ನೀರಲ್ಲ, ಸದಾ ಹರಿಯುತ್ತಿರಬೇಕು. ಶಿಕ್ಷಣ, ಉದ್ಯೋಗ ಹುಟ್ಟೂರಿನಿಂದ ಅಪರಿಚಿತ ಊರಿಗೆ ತೆರಳುವುದು ಅನಿರ್ವಾಯವಾಗುತ್ತದೆ. ಆದರೆ ದಿನ ಕಳೆದಂತೆ ಅಪರಿಚಿತ ಊರು, ಅಲ್ಲಿನ ಜನರು ನಮ್ಮವರಾಗಿ ಬಿಡುತ್ತಾರೆ. ಇದೀಗ ಮಹಿಳೆಯೊಬ್ಬರು ಗುರಗಾಂವ್‌ನಿಂದ (Gurgaon) ಬೆಂಗಳೂರಿಗೆ (Bengaluru) ಸ್ಥಳಾಂತರಗೊಂಡಿದ್ದಾರೆ. ಬೆಂಗಳೂರಿನಲ್ಲಿರುವ ತನ್ನ ಹೊಸ ಅಪಾರ್ಟ್‌ಮೆಂಟ್‌ನನ್ನು ಆರಾಮದಾಯಕ ಸ್ಥಳವನ್ನಾಗಿ ಹೇಗೆ ಪರಿವರ್ತಿಸಿಕೊಂಡಿದ್ದಾರೆ ಎಂದು ರಿವೀಲ್ ಮಾಡಿದ್ದಾರೆ. ಈ ಕ್ಲಿಪಿಂಗ್ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. karishma.koul.kakroo ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಕರಿಷ್ಮಾ ಕೌಲ್ ಎಂಬ ಮಹಿಳೆ ವಿಡಿಯೋವನ್ನು…

Read More

ಟಿಎಂಸಿಯಲ್ಲಿ ಒಡಕು: 59 ಶಾಸಕರ ಸಹಿಯೊಂದಿಗೆ ವಿಧಾನಸಭೆಗೆ ಆಗಮಿಸಿದ ಉಚ್ಚಾಟಿತ ಶಾಸಕ ರಿತಬ್ರತ ಬ್ಯಾನರ್ಜಿ – Kannada News

ಕೋಲ್ಕತಾ, ಜೂನ್ 03: ಪಶ್ಚಿಮ ಬಂಗಾಳ(West Bengal) ವಿಧಾನಸಭೆಯ ವಿರೋಧ ಪಕ್ಷದ ನಾಯಕರ ನೇಮಕಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ವಲಯದಲ್ಲಿ ಬುಧವಾರ ಭಾರಿ ರಾಜಕೀಯ ಚಟುವಟಿಕೆಗಳು ಕಂಡುಬಂದಿವೆ. ಸೋಭಾಂದೇಬ್ ಚಟ್ಟೋಪಾಧ್ಯಾಯ ಅವರನ್ನು ವಿರೋಧ ಪಕ್ಷದ ನಾಯಕನನ್ನಾಗಿ ಗುರುತಿಸುವಂತೆ ಟಿಎಂಸಿ ಹೈಕಮಾಂಡ್ ಸ್ಪೀಕರ್ ರತೀಂದ್ರ ಬೋಸ್ ಅವರಿಗೆ ಪತ್ರ ಬರೆದ ಬೆನ್ನಲ್ಲೇ, ಪಕ್ಷದಿಂದ ಉಚ್ಚಾಟಿತಗೊಂಡಿರುವ ಶಾಸಕ ರಿತಬ್ರತ ಬ್ಯಾನರ್ಜಿ ಅವರು 59 ಶಾಸಕರ ಸಹಿಯೊಂದಿಗೆ ವಿಧಾನಸಭೆಗೆ ಭೇಟಿ ನೀಡಿರುವುದು ತೀವ್ರ ಕುತೂಹಲ ಮೂಡಿಸಿದೆ. ಮಮತಾ ಬ್ಯಾನರ್ಜಿ…

Read More

Ravi Gochar June: ಮಿಥುನ ರಾಶಿಗೆ ಸೂರ್ಯ ಸಂಚಾರ; 12ರಾಶಿಗಳ ಮೇಲೆ ಹೇಗೆ ಪ್ರಭಾವ ಬೀರಲಿದೆ? – Kannada News

ಮಿಥುನ ರಾಶಿಗೆ ಸೂರ್ಯ ಸಂಚಾರImage Credit source: Pinterest ಜ್ಯೋತಿಷ್ಯ ಶಾಸ್ತ್ರದಲ್ಲಿ ಸೂರ್ಯನು ಆತ್ಮಕಾರಕ, ಅಧಿಕಾರ ಮತ್ತು ಆರೋಗ್ಯದ ಸಂಕೇತ. ರವಿಯು ಬುಧನ ಮನೆಯಾದ ಮಿಥುನ ರಾಶಿಗೆ ಪ್ರವೇಶಿಸುವಾಗ ಅತ್ಯಂತ ವಿಶಿಷ್ಟ ಹಾಗೂ ಪ್ರಭಾವಶಾಲಿಯಾಗುವನು. ಜೂನ್ ತಿಂಗಳಲ್ಲಿ ರವಿಯು ಮಿಥುನ ರಾಶಿಯಲ್ಲಿದ್ದು, ಶುಕ್ರನ ದ್ರೇಕ್ಕಾಣದಲ್ಲಿ ಕಲಾತ್ಮಕತೆ, ಆಕರ್ಷಣೆ ಮತ್ತು ಸಂಬಂಧಗಳ ಮೇಲೆ ಪ್ರಭಾವವನ್ನೂ, ರವಿಯ ಹೋರೆಯಲ್ಲಿ ಆತ್ಮವಿಶ್ವಾಸ, ತೇಜಸ್ಸು ಮತ್ತು ನಾಯಕತ್ವದ ವೃದ್ಧಿಯನ್ನೂ ಶನಿಯ ನವಾಂಶದಲ್ಲಿ ಶಿಸ್ತು, ತಾಳ್ಮೆ ಮತ್ತು ಕಠಿಣ ಪರಿಶ್ರಮದ ಅಗತ್ಯತೆಯನ್ನೂ ಗುರುವಿನ ತ್ರಿಂಶಾಂಶದಲ್ಲಿ…

Read More

ತೆಲಂಗಾಣದಲ್ಲಿ ‘ಪೆದ್ದಿ’ ಟಿಕೆಟ್ ಬೆಲೆ ಹೆಚ್ಚಳಕ್ಕೆ ಸಿಕ್ತು ಅನುಮತಿ: ಆದರೆ ಷರತ್ತು ಅನ್ವಯ

ರಾಮ್ ಚರಣ್ (Ram Charan) ನಟನೆಯ ದೊಡ್ಡ ಬಜೆಟ್ ಸಿನಿಮಾ ‘ಪೆದ್ದಿ’ ನಾಳೆ (ಜೂನ್ 4) ಬಿಡುಗಡೆ ಆಗುತ್ತಿದೆ. ಸಿನಿಮಾದ ಬಗ್ಗೆ ರಾಮ್ ಚರಣ್ ಅವರಿಗೆ ಭಾರಿ ನಿರೀಕ್ಷೆ ಇದೆ. ಸಿನಿಮಾ ಸಹ ಚೆನ್ನಾಗಿ ಮೂಡಿ ಬಂದಿದೆ ಎನ್ನಲಾಗುತ್ತಿದ್ದು, ಸಿನಿಮಾವನ್ನು ದೊಡ್ಡ ಮಟ್ಟದಲ್ಲಿ ಬಿಡುಗಡೆ ಮಾಡಲು ಹಾಗೂ ಸಿನಿಮಾದಿಂದ ಒಳ್ಳೆಯ ಲಾಭ ಪಡೆದುಕೊಳ್ಳಲು ನಿರ್ಮಾಪಕರು ಮುಂದಾಗಿದ್ದಾರೆ. ಆಂಧ್ರ, ಕರ್ನಾಟಕ, ಮಹಾರಾಷ್ಟ್ರ, ಅಮೆರಿಕ ಇನ್ನೂ ಹಲವೆಡೆ ಭರ್ಜರಿಯಾಗಿ ಪ್ರೀಮಿಯರ್ ಶೋ ಆಯೋಜಿಸಿದ್ದಾರೆ. ಆದರೆ ತೆಲುಗು ರಾಜ್ಯವಾದ ತೆಲಂಗಾಣದಲ್ಲಿ ‘ಪೆದ್ದಿ‘…

Read More

‘ಧುರಂಧರ್’ ಚಿತ್ರಕ್ಕೆ ಕಡಿಮೆ ಸಂಭಾವನೆ ಪಡೆದಿದ್ದ ರಣವೀರ್ ಸಿಂಗ್; ಆದ್ರೂ ಹರಿದುಬಂತು ಕೋಟಿ ಕೋಟಿ ಹಣ! – Kannada News

ಇತ್ತೀಚಿನ ವರ್ಷಗಳಲ್ಲಿ ಬಾಲಿವುಡ್‌ನ ಅತಿ ದೊಡ್ಡ ಬ್ಲಾಕ್‌ಬಸ್ಟರ್ ಸಿನಿಮಾಗಳಲ್ಲಿ ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್’ ಚಿತ್ರವೂ ಒಂದು. ಈ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸೃಷ್ಟಿಸಿದ ದಾಖಲೆ ಅಷ್ಟಿಷ್ಟಲ್ಲ. ಆದರೆ, ಈ ಚಿತ್ರಕ್ಕಾಗಿ ನಟ ರಣವೀರ್ ಸಿಂಗ್ ಅವರು ಆರಂಭದಲ್ಲಿ ತೀರಾ ಕಡಿಮೆ ಸಂಭಾವನೆಯನ್ನು ಪಡೆದಿದ್ದರು ಎಂಬ ಆಸಕ್ತಿದಾಯಕ ವಿಷಯವನ್ನು ಚಿತ್ರದ ಸಹ-ನಿರ್ಮಾಪಕಿ ಜ್ಯೋತಿ ದೇಶಪಾಂಡೆ ಬಿಚ್ಚಿಟ್ಟಿದ್ದಾರೆ. ಅತಿ ದೊಡ್ಡ ಬಜೆಟ್‌ನ ಈ ಚಿತ್ರದ ನಿರ್ಮಾಣ ವೆಚ್ಚವನ್ನು ಸರಿದೂಗಿಸಲು ಮತ್ತು ನಷ್ಟದ ಅಪಾಯವನ್ನು ಹಂಚಿಕೊಳ್ಳಲು ಚಿತ್ರತಂಡ ಒಂದು…

Read More

ಮುಂಗಾರು ಆಗಮನಕ್ಕೆ ದಿನಗಣನೆ: ಜೂನ್ 4 ರಂದು ಕೇರಳ ಪ್ರವೇಶ, ಕರ್ನಾಟಕ, ತಮಿಳುನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ – Kannada News

ನವದೆಹಲಿ, ಜೂನ್ 03: ದೇಶಾದ್ಯಂತ ಮಳೆ(Rain)ಯ ಕಣ್ಣಾ ಮುಚ್ಚಾಲೆ ಶುರುವಾಗಿದೆ. ಕೆಲವೆಡೆ ಮಳೆ ವಿಪರೀತವಾಗಿದ್ದರೆ ಇನ್ನೂ ಕೆಲವೆಡೆ ಒಮ್ಮೆಯೂ ಮಳೆಯೇ ಆಗಿಲ್ಲ.ಬಿಸಿಲ ಬೇಗೆಯಿಂದ ಕಂಗಾಲಾಗಿರುವ ದೇಶದ ಜನತೆಗೆ ಭಾರತೀಯ ಹವಾಮಾನ ಇಲಾಖೆ (IMD) ತಂಪು ಸುದ್ದಿ ನೀಡಿದೆ. ನೈಋತ್ಯ  ಮುಂಗಾರು ಜೂನ್ 4 ರಂದು ಕೇರಳವನ್ನು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಮುಂಗಾರು ಆರಂಭದ ಬೆನ್ನಲ್ಲೇ ಕೇರಳ, ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಮುಂದಿನ 6 ರಿಂದ 7 ದಿನಗಳ ಕಾಲ…

Read More

Gold Rate: ಯಥಾಸ್ಥಿತಿಯಲ್ಲಿ ಚಿನ್ನ, ಬೆಳ್ಳಿ ಬೆಲೆ; ಇಲ್ಲಿದೆ ದರಪಟ್ಟಿ – Kannada News

ನವದೆಹಲಿ, ಜೂನ್ 3: ನಿನ್ನೆಯಂತೆ ಇಂದು ಬುಧವಾರವೂ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಬದಲಾವಣೆ ಹೊಂದಿಲ್ಲ. ಭಾರತದಲ್ಲಿ ಅಪರಂಜಿ ಚಿನ್ನದ ಬೆಲೆ (Gold price) 15,622 ರೂನಲ್ಲಿ ಮುಂದುವರಿದಿದೆ. ಬೆಳ್ಳಿ ಬೆಲೆಯಲ್ಲೂ ವ್ಯತ್ಯಯ ಆಗಿಲ್ಲ. ಆದರೆ, ವಿದೇಶಗಳಲ್ಲಿ ಚಿನ್ನದ ಬೆಲೆ ಅಲ್ಪಸ್ವಲ್ಪ ಏರಿಳಿತ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,43,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,56,220 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ…

Read More

IPL 2027: RCB ರಿಲೀಸ್ ಮಾಡಲಿರುವ ಸಂಭಾವ್ಯ ಆಟಗಾರರ ಪಟ್ಟಿ ಇಲ್ಲಿದೆ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಸತತವಾಗಿ ಟ್ರೋಫಿ ಗೆದ್ದು, ಐಪಿಎಲ್ ಇತಿಹಾಸದಲ್ಲೇ ಅತ್ಯಂತ ಯಶಸ್ವಿ ತಂಡವಾಗಿ ಹೊರಹೊಮ್ಮಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಈಗ ಇರುವ ದೊಡ್ಡ ಸವಾಲೆಂದರೆ ಮಿನಿ ಹರಾಜು. ಏಕೆಂದರೆ ಮಿನಿ ಹರಾಜಿಗೂ ಮುನ್ನ ಆರ್​ಸಿಬಿ ಕೆಲ ಆಟಗಾರರನ್ನು ಬಿಡುಗಡೆ ಮಾಡಬೇಕಾಗುತ್ತದೆ. (PC: IPL) ಆದರೆ ಪ್ರಸ್ತುತ ತಂಡದಲ್ಲಿರುವ ಬಹುತೇಕ ಆಟಗಾರರು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಅಷ್ಟೇ ಅಲ್ಲದೆ ತನ್ನ ಗೆಲುವಿನ ಕಾಂಬಿನೇಷನ್ ಹಾಗೂ ಕೋರ್ ತಂಡವನ್ನು ಬದಲಿಸಲು ಆರ್​ಸಿಬಿ ಮುಂದಾಗುವುದಿಲ್ಲ….

Read More