Headlines

ಶುಕ್ರವಾರದ ಚಂದ್ರ ದರ್ಶನ ಹಾಗೂ ಮಹಾಲಕ್ಷ್ಮಿ ಯೋಗ: ಯಾರಿಗೆ ಧನಲಾಭ? – Kannada News | Zodiac Sign Effects: Dr. Basavaraj Guruji Presents Daily Horoscope for 14 08 2026

ಬೆಂಗಳೂರು, ಆ.14: ಪ್ರಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು ಆಗಸ್ಟ್ 14, 2026ರ ಶುಕ್ರವಾರದ ದ್ವಾದಶ ರಾಶಿಗಳ ದೈನಂದಿನ ಫಲಾಫಲಗಳ ಬಗ್ಗೆ ಹೇಳಿದ್ದಾರೆ. ಈ ದಿನವು ಶುಕ್ರವಾರವಾಗಿದ್ದು, ಸಾಕ್ಷಾತ್ ಮಹಾಲಕ್ಷ್ಮಿ ಮತ್ತು ಅಷ್ಟ ಮಹಾಲಕ್ಷ್ಮಿಯ ಕೃಪೆಗೆ ಪಾತ್ರರಾಗಲು ಸೂಕ್ತವಾದ ಶುಭ ದಿನವಾಗಿದೆ. ಚಂದ್ರ ದರ್ಶನವೂ ಸಹ ಬಹಳ ಶುಭಕರವಾದದ್ದು. ಇಂದು ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಸಿಂಹ ರಾಶಿಯ ಮಖಾ ನಕ್ಷತ್ರದಲ್ಲಿ ಸಂಚರಿಸುತ್ತಾನೆ. ಡಾ. ಗುರೂಜಿ ಅವರು ಪ್ರತಿ ರಾಶಿಯವರಿಗೂ ಆರ್ಥಿಕ,…

Read More

ಪರಪ್ಪನ ಅಗ್ರಹಾರದಲ್ಲಿ ಅಕ್ರಮ: ಕಾರಾಗೃಹ ಅಧಿಕಾರಿಗಳ ದೂರಿನಂತೆ ಮತ್ತೊಂದು ಎಫ್‌ಐಆರ್ ದಾಖಲು – Kannada News | Contraband Discovery in Bengaluru Prison: Second FIR Lodged Following CCB and Jail Authority Operations

ಬೆಂಗಳೂರು, ಆ.14: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಫೋನ್‌ಗಳು ಮತ್ತು ಪೆನ್ ಡ್ರೈವ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ಆಗಸ್ಟ್ 11ರ ರಾತ್ರಿ ಸಿಸಿಬಿ ಪೊಲೀಸರು ಜೈಲಿನ ಮೇಲೆ ದಾಳಿ ನಡೆಸಿದ್ದರು. ಸಿಸಿಬಿ ದಾಳಿಯ ನಂತರ ಜೈಲು ಅಧಿಕಾರಿಗಳು ಕೂಡ ಮತ್ತೊಂದು ದಾಳಿ ನಡೆಸಿದ್ದರು. ಈ ಎರಡು ದಾಳಿಗಳ ವೇಳೆ ಜೈಲಿನ ಆವರಣದಲ್ಲಿ ಎರಡು ಮೊಬೈಲ್ ಫೋನ್‌ಗಳು ಮತ್ತು 32 GB ಸಾಮರ್ಥ್ಯದ ಒಂದು ಪೆನ್ ಡ್ರೈವ್…

Read More

ದಿನಭವಿಷ್ಯ: ಇಂದು ಈ ರಾಶಿಯವರಿಹೆ ಸ್ವಯಂಕೃತ ಅಪರಾಧದಿಂದ ಶಿಕ್ಷೆ.‌‌.. – Kannada News | Daily Horoscope for August 14, 2026: Dakshinayana Greeshma season, Shravana Masa shukla Paksha Friday astrology

ಮೇಷ ರಾಶಿ: ಮನಸ್ಸಿನ ಚಾಂಚಲ್ಯವನ್ನು ಕಡಿಮೆ‌ಮಾಡಿಕೊಳ್ಳಲು ಪ್ರಯತ್ನಿಸುವಿರಿ. ಇಂದು ನೀವು ಕೆಲವು ಸಂದರ್ಭದಲ್ಲಿ ಮೌನ ವಹಿಸುವುದು ಉತ್ತಮ. ಬಳಕೆಯಲ್ಲಿ ಇಲ್ಲದೇ ನಿಮ್ಮ ಸಂಬಂಧಗಳು ಸಡಿಲಾಗಬಹುದು. ಎಷ್ಟೇ ಎಚ್ಚರಿಕೆಯಿಂದ ಇದ್ದರೂ ಯಾಮಾರುವ ಸನ್ನಿವೇಶ ಬರಬಹುದು. ತಾವಾಡಬೇಕಾದ ಮಾತನ್ನು ನಿಮ್ಮಿಂದ ಆಡಿಸುವರು. ನಿಮ್ಮ ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿ ಅನುಕೂಲತೆಯು ಕೆಲವು ಸಂದರ್ಭಗಳಲ್ಲಿ ಸಿಕ್ಕಿ ಸಂತೋಷವಾಗುವುದು. ವೃಷಭ ರಾಶಿ: ನೀವು ಸಮಸ್ಯೆಗೆ ಪರಿಹಾರ ಹುಡುಕಲು ಹೋಗಿ ಇನ್ನಷ್ಟು ಸಮಸ್ಯೆಯನ್ನು ಮಾಡಿಕೊಳ್ಳುವಿರಿ. ಆದರೆ ನಿಮ್ಮ ನಿರ್ಧಾರವು ಅಚಲವಾಗಿರಲಿ. ಎಂದೋ ಆರಂಭವಾದ ಕಾರ್ಯವು ಕುಂಟುತ್ತಾ ಸಾಗವುದು….

Read More

IND vs SL: ಟೆಸ್ಟ್ ಸರಣಿಯಲ್ಲಿ ಶುಭ್​ಮನ್ ಗಿಲ್ ನಿರ್ಮಿಸಲಿರುವ ದಾಖಲೆಗಳಿವು – Kannada News | Shubman Gill’s Historic Chance: First Indian Captain to Score 1000 WTC Runs and 3000 Overall

ಗಿಲ್ ಪ್ರಸ್ತುತ ಡಬ್ಲ್ಯೂಟಿಸಿಯಲ್ಲಿ (2025-2027) 950 ರನ್ ಗಳಿಸಿದ್ದಾರೆ. ಅವರು ಇನ್ನೂ 40 ರನ್ ಗಳಿಸಿದರೆ, ಒಂದೇ ಡಬ್ಲ್ಯೂಟಿಸಿ ಆವೃತ್ತಿಯಲ್ಲಿ ನಾಯಕನಾಗಿ 1,000 ರನ್ ಗಳಿಸಿದ ಮೊದಲ ಭಾರತೀಯ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗುತ್ತಾರೆ. ಕೊಹ್ಲಿ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದು, 2019-2021ರ ಮೊದಲ ಸೈಕಲ್‌ನಲ್ಲಿ ಕೊಹ್ಲಿ 934 ರನ್ ಕಲೆಹಾಕಿದ್ದರು. ಇದೀಗ ಗಿಲ್​ಗೆ 1000 ರನ್​ಗಳ ಗಡಿ ದಾಟುವ ಅವಕಾಶವಿದೆ(PC-PTI). Source link

Read More

ಶ್ರೀನಗರ-ಲೇಹ್ ಹೈವೇಯಲ್ಲಿ ಭಾರಿ ಮೇಘಸ್ಫೋಟ; ಭೂಕುಸಿತದ ಭೀಕರತೆ ಹೀಗಿತ್ತು – Kannada News | Massive cloudburst in Srinagar Leh highway landslide Video Viral

ಶ್ರೀನಗರ, ಆಗಸ್ಟ್ 13: ಜಮ್ಮು ಕಾಶ್ಮೀರದ ಸೋನಮಾರ್ಗ ಸಮೀಪದ ಝೋಜಿಲಾ ಪಾಸ್ ಬಳಿಯ ರಂಗಾ ಮೋಡ್ ಪ್ರದೇಶದಲ್ಲಿ ಇಂದು ಭಾರಿ ಮೇಘಸ್ಫೋಟ (Cloudburst) ಸಂಭವಿಸಿದ್ದು, ತಕ್ಷಣವೇ ಭೂಕುಸಿತ, ಪ್ರವಾಹ ಉಂಟಾಗಿ ಸ್ಥಳೀಯ ನದಿಗಳಲ್ಲಿ ನೀರಿನ ಮಟ್ಟ ದಿಢೀರ್ ಏರಿಕೆಯಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ನದಿ ತಟಗಳು ಹಾಗೂ ನೀರಿನ ಕಾಲುವೆಗಳ ಬಳಿ ತೆರಳದಂತೆ ಸ್ಥಳೀಯರಿಗೆ ಆಡಳಿತ ಸೂಚಿಸಿದೆ. ಈ ಮೇಘಸ್ಫೋಟದಿಂದಾಗಿ ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿಯ ಝೋಜಿಲಾ ಪಾಸ್‌ನ ರಂಗಾ ಮೋರ್ ವಿಭಾಗದ ಬಳಿ ಭಾರಿ ಪ್ರಮಾಣದ ಭೂಕುಸಿತ ಸಂಭವಿಸಿದ್ದು,…

Read More

ಭುಜದ ಶಸ್ತ್ರಚಿಕಿತ್ಸೆ ಮುಕ್ತಾಯ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಟ ಜೂನಿಯರ್ ಎನ್‌ಟಿಆರ್ – Kannada News | Jr NTR Discharged from KIMS Hospital after Successful Shoulder Surgery

ಪ್ರಶಾಂತ್ ನೀಲ್ ನಿರ್ದೇಶನದ ‘ಡ್ರ್ಯಾಗನ್’ ಸಿನಿಮಾದ ಶೂಟಿಂಗ್ ವೇಳೆ ಭುಜಕ್ಕೆ ಗಾಯ ಮಾಡಿಕೊಂಡಿದ್ದ ಟಾಲಿವುಡ್ ನಟ ಜೂನಿಯರ್ ಎನ್‌ಟಿಆರ್ (Jr NTR) ಅವರಿಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಗುರುವಾರ (ಆಗಸ್ಟ್ 13) ಆಸ್ಪತ್ರೆಯಿಂದ ಅವರು ಡಿಸ್ಚಾರ್ಜ್ ಆಗಿದ್ದಾರೆ. ವೇಗವಾಗಿ ಚೇತರಿಸಿಕೊಳ್ಳಲು ಅವರು ಇನ್ನು ಕೆಲವು ದಿನಗಳ ಕಾಲ ಪುನಶ್ಚೇತನ (Rehabilitation) ಪ್ರಕ್ರಿಯೆಗೆ ಒಳಗಾಗಲಿದ್ದಾರೆ. ಆಸ್ಪತ್ರೆಯಿಂದ ಹೊರ ಬರುವ ವೇಳೆ ಅವರು ನಗುತ್ತಾ ಫೋಟೋಗೆ ಪೋಸ್ ನೀಡಿದ್ದಾರೆ. ಈ ಫೋಟೋ ವೈರಲ್ ಆಗಿದೆ. ಕಿಮ್ಸ್ ಆಸ್ಪತ್ರೆಯಲ್ಲಿ ಜೂನಿಯರ್ ಎನ್‌ಟಿಆರ್…

Read More

ಕರ್ನಾಟಕದಲ್ಲಿ ಗುಟ್ಕಾ ಬ್ಯಾನ್ ಬಗ್ಗೆ ಸಚಿವ ಯುಟಿ ಖಾದರ್ ಹೇಳಿದ್ದಿಷ್ಟು – Kannada News | Minister UT Khader Reacts On areca growers Opposed to Gutka Ban In Karnataka

ಬೆಂಗಳೂರು, (ಆಗಸ್ಟ್ 13): ಕರ್ನಾಟಕ ಸರ್ಕಾರವು ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯಾದ್ಯಂತ ಗುಟ್ಕಾ ಮತ್ತು ಪಾನ್ ಮಸಾಲಾ ಸೇರಿದಂತೆ ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಉತ್ಪನ್ನಗಳ ಮಾರಾಟ ಹಾಗೂ ಬಳಕೆಯನ್ನು ಒಂದು ವರ್ಷದ ಅವಧಿಗೆ ಸಂಪೂರ್ಣವಾಗಿ ನಿಷೇಧಿಸಿದೆ. ಗುಟ್ಕಾ ಸೇವನೆಯು ಜೀವಕ್ಕೆ ಅಪಾಯಕಾರಿ. ಹೀಗಾಗಿ ತಂಬಾಕು ಮತ್ತು ನಿಕೋಟಿನ್ ಮಿಶ್ರಿತ ಗುಟ್ಕಾ ಹಾಗೂ ಪಾನ್ ಮಸಾಲಾಗಳ ತಯಾರಿಕೆ, ಸಂಗ್ರಹಣೆ, ಸಾಗಾಟ ಮತ್ತು ಮಾರಾಟವನ್ನು ಸಂಪೂರ್ಣವಾಗಿ ತಡೆಹಿಡಿಯಲಾಗಿದೆ. ಆದ್ರೆ, ಇದಕ್ಕೆ ಅಡಿಕೆ ಬೆಳೆಗಾರರು ಆಕ್ಷೇಪ ವ್ಯಕ್ತಪಡಿಸಿದ್ದು, ಈ ಸಂಬಂಧ…

Read More

ಸಾರ್ವಜನಿಕ ಸ್ಥಳದಲ್ಲಿ ಅನುಮತಿ ಪಡೆದೇ ಕಾರ್ಯಕ್ರಮ ಮಾಡ್ಬೇಕು: ಕಾಯ್ದೆ ಬಗ್ಗೆ ಸಿಎಂ ಸ್ಪಷ್ಟನೆ – Kannada News | Events in Public Places Require Prior Permission, CM DK Shivakumar Clarifies

ಬೆಂಗಳೂರು, ಆಗಸ್ಟ್​​ 13: ‘ಯಾವುದೇ ರಸ್ತೆಯಲ್ಲಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಬೇಕಾದರೆ ಕಡ್ಡಾಯವಾಗಿ ಪೂರ್ವಾನುಮತಿ ಮತ್ತು ಸೂಕ್ತ ದಾಖಲೆಗಳನ್ನು ಹೊಂದಿರಬೇಕು’ ಎಂದು ಸಿಎಂ ಡಿಕೆ ಶಿವಕುಮಾರ್​ ಹೇಳಿದ್ದಾರೆ. ಸಾರ್ವಜನಿಕ ಪ್ರದೇಶ, ಪ್ರವೇಶ ನಿಯಂತ್ರಣ ವಿಧೇಯಕ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಯಾರೇ ಆಗಲಿ ಅನುಮತಿ ತೆಗೆದುಕೊಂಡು ಕಾರ್ಯಕ್ರಮ ಮಾಡಬೇಕು. ಬೆಂಗಳೂರು ಅಥವಾ ಎಲ್ಲೇ ಆಗಲಿ, ಎಲ್ಲಾದರೂ ಕಾರ್ಯಕ್ರಮ ಮಾಡಬೇಕಾದರೆ ಅನುಮತಿ ತೆಗೆದುಕೊಳ್ಳಬೇಕು. ವಿಧಾನಸೌಧದಲ್ಲೂ ಕೃಷ್ಣಬೈರೇಗೌಡರು ಕಾರ್ಯಕ್ರಮ ಮಾಡುತ್ತಿದ್ದಾರೆ, ಅವರೂ ಪರ್ಮಿಷನ್ ತೆಗೆದುಕೊಂಡೇ ಮಾಡುತ್ತಿದ್ದಾರೆ ಅಲ್ವಾ, ಹಾಗೆಯೇ…

Read More

ಉತ್ತರಾಖಂಡದ ಚಮೋಲಿಯಲ್ಲಿ ಟನಲ್ ಕುಸಿತ; 16 ಕಾರ್ಮಿಕರ ರಕ್ಷಣೆ, ನಾಲ್ವರಿಗಾಗಿ ಶೋಧ ಕಾರ್ಯಾಚರಣೆ – Kannada News | 4 workers trapped 16 rescued as tunnel collapses in Uttarakhand’s Chamoli

ಚಮೋಲಿ, ಆಗಸ್ಟ್ 13: ಉತ್ತರಾಖಂಡದ ಚಮೋಲಿ (Chamoli) ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗ ಮಾರ್ಗವೊಂದರೊಳಗೆ ಇಂದು ಇದ್ದಕ್ಕಿದ್ದಂತೆ ಹೂಳು ಮತ್ತು ನೀರು ನುಗ್ಗಿದ ಪರಿಣಾಮವಾಗಿ ಭಾರಿ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ 20ಕ್ಕೂ ಹೆಚ್ಚು ಕಾರ್ಮಿಕರು ಸುರಂಗದೊಳಗೆ ಸಿಲುಕಿಕೊಂಡಿದ್ದಾರೆ. ‘ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್ ಕಾರ್ಪೊರೇಷನ್ ಲಿಮಿಟೆಡ್’ (THDC)ನ ಅಂಗಸಂಸ್ಥೆಯಾದ ‘ಹಿಂದೂಸ್ಥಾನ್ ಕನ್‌ಸ್ಟ್ರಕ್ಷನ್ ಕಂಪನಿ’ (HCC) ಕಾಮಗಾರಿ ನಡೆಸುತ್ತಿದ್ದ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ರಕ್ಷಣಾ ತಂಡಗಳು ಇದುವರೆಗೆ ಸುರಂಗದಿಂದ 16 ಮಂದಿ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರತೆಗೆದಿದ್ದು, ಒಳಗೆ…

Read More

ರಾಜ್ಯ ಸರ್ಕಾರಿ ಪಿಂಚಣಿದಾರರಿಗೆ ಸಿಹಿ ಸುದ್ದಿ:‘ಸಂಧ್ಯಾ ಕಿರಣ’ ಯೋಜನೆಗೆ ಸಂಪುಟ ಒಪ್ಪಿಗೆ, ಏನಿದು ಸ್ಕೀಮ್? – Kannada News | Karnataka Cabinet approves Karnataka government retired employees sandhya kiran health scheme, here Is scheme Details

ಬೆಂಗಳೂರು, (ಆಗಸ್ಟ್ 13): “ಸಂಧ್ಯಾ ಕಿರಣ” ವಂತಿಕೆ ಆಧಾರಿತ ನಗದುರಹಿತ ಆರೋಗ್ಯ ಯೋಜನೆಗೆ (sandhya kiran health scheme) ಕರ್ನಾಟಕ ಸಚಿವ ಸಂಪುಟ (karnataka Cabinet) ಅನುಮೋದನೆ. ರಾಜ್ಯ ಸರ್ಕಾರಿ ಪಿಂಚಣಿದಾರರು ಹಾಗೂ ಅವರ ಅರ್ಹ ಅವಲಂಬಿತರಿಗೆ (Retired Government Worker) ಸಮಗ್ರ ಆರೋಗ್ಯ ಭದ್ರತೆ ಒದಗಿಸುವ ಉದ್ದೇಶದಿಂದ, AB-ArK ಯೋಜನೆಯ ನಿಯಮಾವಳಿಗಳನ್ವಯ “ಸಂಧ್ಯಾ ಕಿರಣ” ವಂತಿಕೆ ನಗದುರಹಿತ ಆರೋಗ್ಯ ಯೋಜನೆಯನ್ನು ಜಾರಿಗೊಳಿಸಲು ಡಿಕೆ ಶಿವಕುಮಾರ್ (DK Shivakumar) ಸಂಪುಟ ಇಂದು (ಆಗಸ್ಟ್ 13) ಒಪ್ಪಿಗೆ ನೀಡಿದೆ….

Read More