ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣವು ಐಪಿಎಲ್ 2026 ರ ಇದುವರೆಗಿನ ಅತಿದೊಡ್ಡ ಪಂದ್ಯಕ್ಕೆ ಸಾಕ್ಷಿಯಾಗಿದೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಈ ಸೀಸನ್ನ 11 ನೇ ಪಂದ್ಯದಲ್ಲಿ ಮುಖಾಮುಖಿಯಾಗಿವೆ. ಆವೃತ್ತಿಯ ಆರಂಭಿಕ ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸಿದ ರಜತ್ ಪಟಿದಾರ್ ತಂಡವು ಸತತ ಎರಡನೇ ಗೆಲುವಿನ ನಿರೀಕ್ಷೆಯಲ್ಲಿದೆ. ಏತನ್ಮಧ್ಯೆ, ತನ್ನ ಎರಡೂ ಪಂದ್ಯಗಳಲ್ಲಿ ಸೋತಿರುವ ರುತುರಾಜ್ ಗಾಯಕ್ವಾಡ್ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತನ್ನ ಮೊದಲ ಗೆಲುವನ್ನು ಎದುರು ನೋಡುತ್ತಿದೆ.
ಕೊಡಗು, ಏಪ್ರಿಲ್ 05: ಮಡಿಕೇರಿಯ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಕೊನೆಗೂ ಪತ್ತೆ ಆಗಿದ್ದಾರೆ. ಆ ಮೂಲಕ ನಾಲ್ಕು ದಿನಗಳ ಕಾರ್ಯಾಚರಣೆ ಯಶಸ್ವಿ ಆಗಿದ್ದು, ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ನಿಟ್ಟುಸಿರು ಬಿಟ್ಟಿದ್ದಾರೆ. ರಸ್ತೆ ಅರಿವಾಗದೆ ಪಾಳು ಬಿದ್ದ ಬಂಗಲೆಯೊಂದರಲ್ಲೇ ಶರಣ್ಯ ಉಳಿದುಕೊಂಡಿದ್ದರು. ಸ್ಥಳೀಯ ಜನಾಂಗದವರ ಸಹಾಯ ಬೆನ್ನಲ್ಲೇ ಇದೀಗ ಯುವತಿ ಪತ್ತೆ ಆಗಿದ್ದಾರೆ.
ರಣ್ಬೀರ್ ಕಪೂರ್ (Ranbir Kapoor), ಯಶ್ ಮತ್ತು ಸಾಯಿ ಪಲ್ಲವಿ ನಟಿಸಿರುವ ‘ರಾಮಾಯಣ’ ಸಿನಿಮಾದ ಟೀಸರ್ ಇತ್ತೀಚೆಗಷ್ಟೆ ಬಿಡುಗಡೆ ಆಗಿದೆ. ಭಾರಿ ಅದ್ಧೂರಿ ವಿಎಫ್ಎಕ್ಸ್, ಅದ್ಧೂರಿ ಸೆಟ್ಗಳಲ್ಲಿ ಸಿನಿಮಾವನ್ನು ಚಿತ್ರೀಕರಿಸಲಾಗಿದೆ. ಪೌರಾಣಿಕ ಕತೆಗೆ ಭವ್ಯತೆಯನ್ನು ಸೇರಿಸಿ ಪ್ರೇಕ್ಷಕರಿಗೆ ನೀಡಲಾಗುತ್ತಿದೆ ‘ರಾಮಾಯಣ’ ಸಿನಿಮಾನಲ್ಲಿ. ಹಲವು ಆಸ್ಕರ್ಗಳನ್ನು ಗೆದ್ದಿರುವ ಡಿಎನ್ಇಜಿ ಸಂಸ್ಥೆ ಈ ಸಿನಿಮಾಕ್ಕೆ ವಿಎಫ್ಎಕ್ಸ್ ಮಾಡಿದೆ. ಸಿನಿಮಾಕ್ಕೆ ಇಬ್ಬರು ಆಸ್ಕರ್ ವಿಜೇತ ಸಂಗೀತ ನಿರ್ದೇಶಕರು ಸಂಗೀತ ನೀಡಲಿದ್ದಾರೆ. ರಣ್ಬೀರ್, ಯಶ್ ಇನ್ನೂ ಹಲವು ಸ್ಟಾರ್ಗಳು ಸಿನಿಮಾನಲ್ಲಿ ನಟಿಸಲಿದ್ದಾರೆ. ಇಷ್ಟೆಲ್ಲ ಇದ್ದರೂ, ಸಿನಿಮಾದ ಮುಖ್ಯ ಹೈಲೆಟ್ ಪಾಯಿಂಟ್ ಬೇರೆ ಏನೋ ಇದೆಯಂತೆ. ಖುದ್ದು ಸಿನಿಮಾದ ನಿರ್ದೇಶಕ ನಿತೇಶ್ ತಿವಾರಿ ಈ ಬಗ್ಗೆ ಮಾತನಾಡಿದ್ದಾರೆ.
ನಿರ್ದೇಶಕ ನಿತೇಶ್ ತಿವಾರಿ ಅವರು ಹೇಳಿರುವಂತೆ ಅವರ ಪ್ರಕಾರ ಈ ವರ್ಷ ಬಿಡುಗಡೆ ಆಗಲಿರುವ ‘ರಾಮಾಯಣ’ ಸಿನಿಮಾದ ಮೊದಲ ಭಾಗದಲ್ಲಿ ಹೈಲೆಟ್ ದೃಶ್ಯವೆಂದರೆ ಅದು ರಾಮ ಅಯೋಧ್ಯೆ ಬಿಟ್ಟು ಹೋಗುವ ದೃಶ್ಯವಂತೆ. ನಿತೇಶ್ ತಿವಾರಿ ಅವರು ಹೇಳಿರುವಂತೆ ‘ಸಿನಿಮಾ ಬಿಡುಗಡೆ ಆದಾಗ ಜನ ಆ ದೃಶ್ಯಕ್ಕೆ ಹೇಗೆ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ನೋಡಲು ಕಾತರನಾಗಿ ಕಾಯುತ್ತಿದ್ದೇನೆ. ಆ ಇಡೀ ಸನ್ನಿವೇಶ ನಮ್ಮ ಸಿನಿಮಾನಲ್ಲಿ ಅದ್ಭುತವಾಗಿ ಮೂಡಿ ಬಂದಿದೆ. ನಾನಂತೂ ಪ್ರತಿ ಬಾರಿ ಆ ದೃಶ್ಯವನ್ನು ನೋಡಿದಾಗಲೂ ಕಣ್ಣೀರಾಗುತ್ತೇನೆ. ಆ ದೃಶ್ಯ ನಮ್ಮ ಸಿನಿಮಾದ ಬಹಳ ಮುಖ್ಯವಾದ ದೃಶ್ಯ’ ಎಂದಿದ್ದಾರೆ ನಿತೇಶ್ ತಿವಾರಿ.
ಇದೀಗ ಬಿಡುಗಡೆ ಆಗಿರುವ ‘ರಾಮಾಯಣ’ ಟೀಸರ್ನಲ್ಲಿ ಆ ಸನ್ನಿವೇಶದ ಎರಡು ಸಣ್ಣ ದೃಶ್ಯಗಳನ್ನು ಸೇರಿಸಲಾಗಿದೆ. ಆದರೆ ಸಿನಿಮಾದ ವೈಭವದ ದೃಶ್ಯಗಳು, ಕೆಲ ಆಕ್ಷನ್ ದೃಶ್ಯಗಳು, ಪುಷ್ಪಕ ವಿಮಾನ ಮತ್ತು ರಣ್ಬೀರ್ ಕಪೂರ್ ಅವರ ರಾಮನ ಪಾತ್ರದ ಮೇಲೆ ಟೀಸರ್ ಹೆಚ್ಚು ಪೋಕಸ್ ಆಗಿತ್ತು. ಸಿನಿಮಾದ ಟೀಸರ್ ಬಿಡುಗಡೆ ಆದ ಬಳಿಕ ಸಹಜವಾಗಿಯೇ ಕೆಲವರು ಮೆಚ್ಚಿಕೊಂಡರೆ ಇನ್ನು ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ.
‘ರಾಮಾಯಣ’ ಸಿನಿಮಾನಲ್ಲಿ ರಣ್ಬೀರ್ ಕಪೂರ್ ರಾಮನ ಪಾತ್ರದಲ್ಲಿ, ಯಶ್ ರಾವಣನ ಪಾತ್ರದಲ್ಲಿ ನಟಿಸಿದ್ದಾರೆ. ಸಾಯಿ ಪಲ್ಲವಿ ಸೀತೆ ಹಾಗೂ ಸನ್ನಿ ಡಿಯೋಲ್ ಹನುಮಂತನ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾಕ್ಕೆ ಆಸ್ಕರ್ ವಿಜೇತ ಎಆರ್ ರೆಹಮಾನ್ ಮತ್ತು ಹಾನ್ಸ್ ಜೀಮರ್ ಅವರು ಸಂಗೀತ ನೀಡಿದ್ದಾರೆ. ರಾಮಾಯಣ ಸಿನಿಮಾದ ಎರಡೂ ಭಾಗಗಳಿಗೆ 4000 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆಯಂತೆ. ಸಿನಿಮಾದ ಮೊದಲ ಭಾಗ ಇದೇ ದೀಪಾವಳಿ ಹಬ್ಬಕ್ಕೆ ಬಿಡುಗಡೆ ಆಗಲಿದೆ.
ಬೆಂಗಳೂರು, ಏಪ್ರಿಲ್ 5: ಭಾರತದ ಅತ್ಯಂತ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಐಐಎಂ ಬೆಂಗಳೂರು (IIM Bangalore) ಈ ಬಾರಿ ದೊಡ್ಡ ಪ್ರತಿಭೆಯೊಂದನ್ನು ಲೋಕಕ್ಕೆ ಕೊಡುಗೆಯಾಗಿ ನೀಡಿದೆ. ಅದ್ಭುತ ಶೈಕ್ಷಣಿಕ ಸಾಧನೆಗಾಗಿ ಧ್ವಿತ್ ಮೆಹತಾ (Dhvit Mehta) ಐಐಎಂ ಬೆಂಗಳೂರಿನಲ್ಲಿ ಗೋಲ್ಡ್ ಮೆಡಲ್ ಪಡೆದಿದ್ದಾರೆ. ಅವರ ಹೆಸರನ್ನು ವಾಲ್ ಆಫ್ ಫೇಮ್ಗೆ ಸೇರಿಸಲಾಗಿದೆ. ಐಐಟಿ ಮತ್ತಿತರ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಿಂದ ಬಂದಿದ್ದ ಘಟಾನುಘಟಿ ಅಭ್ಯರ್ಥಿಗಳು ಆ ಬ್ಯಾಚ್ನಲ್ಲಿ ಇದ್ದರು. ಇವರ ತೀವ್ರ ಪೈಪೋಟಿ ನಡುವೆ 27 ವರ್ಷದ ಧ್ವಿತ್ ಮೆಹತಾ ಅತ್ಯುತ್ತಮ ಎನಿಸಿದ್ದ ಅಸಾಧಾರಣ ಸಂಗತಿ.
ಗುಜರಾತ್ ಮೂಲದ ಧ್ವಿತ್ ಮೆಹತಾ ಗುಜರಾತ್ನ ಆನಂದ್ ನಗರದ ಆನಂದಾಲಯ ಸ್ಕೂಲ್ನಲ್ಲಿ ಓದಿ, ಐಐಟಿ ಅಲಹಾಬಾದ್ನಲ್ಲಿ ಬಿಟೆಕ್ ಮತ್ತು ಎಂಟೆಕ್ ಎಂಜಿನಿಯರ್ ಪೂರೈಸಿದ್ದಾರೆ. ಚಿಕ್ಕಂದಿನಲ್ಲಿ ಕೋಡಿಂಗ್ ಕಡೆಗೆ ಆಸಕ್ತಿ ಹೊಂದಿದ್ದರಿಂದ ತಂತ್ರಜ್ಞಾನ ಕ್ಷೇತ್ರವು ಅವರನ್ನು ಸಳೆಯಿತು.
2021ರಿಂದ ಅವರು ಅಮೆರಿಕ ಮತ್ತು ಯೂರೋಪ್ನಲ್ಲಿ ಮೈಕ್ರೋಸಾಫ್ಟ್ ಇತ್ಯಾದಿ ಕಂಪನಿಗಳಲ್ಲಿ ಕೆಲಸ ಕೂಡ ಮಾಡಿದರು. ಸ್ಥಿರವಾದ ವೃತ್ತಿ ಸಿಕ್ಕಿತಾದರೂ ಧ್ವಿತ್ ಅವರಿಗೆ ಎಲ್ಲೋ ಒಂದು ಕಡೆ ಫಿನಾನ್ಸ್ ವಿಷಯ ಬಹಳ ಆಸಕ್ತಿ ಕೆರಳಿಸತೊಡಗಿತು.
ಆಸಕ್ತಿಯನ್ನು ಮನಸ್ಸಿನಲ್ಲಿಟ್ಟುಕೊಳ್ಳದ ಧ್ವಿತ್, ಬಹಳ ಕಠಿಣವಾದ ಸಿಎಫ್ಎ ಪ್ರೋಗ್ರಾಮ್ ಸೇರಿದರು. ಕೋಚಿಂಗ್ ಇಲ್ಲದೇ ಲೆವೆಲ್ 1 ಮತ್ತು 2 ಅನ್ನು ಪಾಸ್ ಮಾಡಿದರು. ಮೈಕ್ರೋಸಾಫ್ಟ್ನಲ್ಲಿ ಕೆಲಸ ಮಾಡುತ್ತಿದ್ದಾಗಲೇ ಈ ಸಾಧನೆ ಮಾಡಿದ್ದರು.
ಧ್ವಿತ್ ಮೆಹತಾ ಅವರು ಐಐಎಂ ಬೆಂಗಳೂರಲ್ಲಿ ಮಾತನಾಡಿರುವುದು
2024ರಲ್ಲಿ ಮೈಕ್ರೋಸಾಫ್ಟ್ ಕಂಪನಿ ತೊರೆದು ನಾರ್ವೆಯಿಂದ ಭಾರತಕ್ಕೆ ಬಂದು ಐಐಎಂ ಬೆಂಗಳೂರಿನಲ್ಲಿ ಎಂಬಿಎಗೆ ಸೇರಿದರು. ಎಂಬಿಎಗೆ ಸೇರುವ ಅವರ ಪ್ರಯತ್ನ 2021ರಿಂದಲೂ ನಡೆದಿತ್ತು. ಬಹಳ ಸುಲಭವಾಗಿ ಟಾಪ್ ಸ್ಕೋರ್ ಮಾಡುತ್ತಿದ್ದ ಅವರಿಗೆ ಐಐಎಂ ಬೆಂಗಳೂರು ಸೇರುವುದು ಬೇಕಾಗಿತ್ತು. ಬಹಳ ಪೈಪೋಟಿ ಇದ್ದ ಬ್ಯಾಚ್ನಲ್ಲಿ ಅವರು ಸರ್ವೋಚ್ಚ ಎನಿಸಿದ್ದಾರೆ. 2026ರ ಮಾರ್ಚ್ 27ರಂದು ನಡೆದ ಘಟಿಕೋತ್ಸವದಲ್ಲಿ ಧ್ವಿತ್ಗೆ ಗೋಲ್ಡ್ ಮೆಡಲ್ ಕೊಡಲಾಯಿತು.
ಐಪಿಎಲ್ನಲ್ಲಿ ಲಕ್ನೋ ತಂಡ ತನ್ನ ಪ್ರದರ್ಶನದಿಂದ ಸದ್ದು ಮಾಡಿದ್ದಕ್ಕಿಂತ ಹೆಚ್ಚಾಗಿ ಆ ತಂಡದ ಮಾಲೀಕ ಸಂಜೀವ್ ಗೋಯೆಂಕಾ ತಮ್ಮ ನಡವಳಿಕೆಗಳಿಂದ ಸುದ್ದಿಯಾಗಿದ್ದಾರೆ. ಈ ಹಿಂದಿನ ಸೀಸನ್ಗಳಲ್ಲಿ ತಂಡದ ನಾಯಕರನ್ನು ಕ್ರೀಡಾಂಗಣದಲ್ಲೇ ಬಹಿರಂಗವಾಗಿ ನಿಂಧಿಸಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದ ಗೋಯೆಂಕಾ, ಈ ಆವೃತ್ತಿಯಲ್ಲೂ ಅದೇ ಪ್ರವೃತ್ತಿಯನ್ನು ಮುಂದುವರೆಸಿದ್ದರು. ಲಕ್ನೋ ತಂಡ ಡೆಲ್ಲಿ ವಿರುದ್ಧ ಸೋತಾಗ ತಂಡದ ನಾಯಕ ರಿಷಭ್ ಪಂತ್ಗೆ ಗೋಯೆಂಕಾ ಮೈದಾನದಲ್ಲೇ ಕ್ಲಾಸ್ ತೆಗೆದುಕೊಂಡಿದ್ದರು. ಇದನ್ನು ಗಮನಿಸಿದ್ದ ಬಿಸಿಸಿಐ, ಬಹಿರಂಗವಾಗಿ ಆಟಗಾರರನ್ನು ಅಥವಾ ನಾಯಕರನ್ನು ನಿಂಧಿಸಿದಂತೆ ಎಲ್ಲಾ ತಂಡಗಳ ಮಾಲೀಕರಿಗೆ ಖಡಕ್ ಸಂದೇಶ ರವಾನಿಸಿತ್ತು. ಇದೀಗ ಇದೆಲ್ಲದರ ನಡುವೆ ಇದೀಗ ಸಂಜೀವ್ ಗೋಯೆಂಕಾ ಅವರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿವೆ.
ವಾಸ್ತವವಾಗಿ ಇಂದಿನ ಪಂದ್ಯದಲ್ಲಿ ಲಕ್ನೋ ಸೂಪರ್ಜೈಂಟ್ಸ್ ತಂಡ, ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಅವರ ತವರು ನೆಲದಲ್ಲಿ ಎದುರಿಸಿತ್ತು. ಸನ್ರೈಸರ್ಸ್ ತಂಡಕ್ಕೆ ಇದು ತವರು ಪಂದ್ಯವಾಗಿದ್ದರಿಂದ ತಂಡದಿಂದ ಸ್ಫೋಟಕ ಬ್ಯಾಟಿಂಗ್ನ ನಿರೀಕ್ಷೆ ಇತ್ತು. ಆದರೆ ಇದಕ್ಕೆ ಲಕ್ನೋ ವೇಗಿಗಳು ಅವಕಾಶ ಮಾಡಿಕೊಡಲಿಲ್ಲ. ತಂಡದ ಪ್ರಮುಖ 4 ವಿಕೆಟ್ಗಳು ಬಹುಬೇಗನೇ ಉದುರಿದವು. ಇದರಿಂದ ಸನ್ರೈಸರ್ಸ್ ತಂಡದ ರನ್ ವೇಗ ಪಾತಳಕ್ಕೆ ಕುಸಿಯಿತು. ಇದೆಲ್ಲದರ ನಡುವೆ ಸನ್ರೈಸರ್ಸ್ ತಂಡದ ನಾಯಕ ಇಶಾನ್ ಕಿಶನ್ ಅವರ ವಿಕೆಟ್ ಬಿದ್ದಾಗ, ಲಕ್ನೋ ತಂಡದ ಮಾಲೀಕ ಸಂಜೀವ್ ಗೋಯೆಂಕಾ ನೀಡಿದ ಪ್ರತಿಕ್ರಿಯೆ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಸನ್ರೈಸರ್ಸ್ ತಂಡ ಪವರ್ಪ್ಲೇನಲ್ಲಿಯೇ ಪ್ರಮುಖ 3 ವಿಕೆಟ್ಗಳನ್ನು ಕಳೆದುಕೊಂಡಿತು. ಅದರಲ್ಲೂ ಆರಂಭಿಕರಾದ ಅಭಿಷೇಕ್ ಶರ್ಮಾ ಖಾತೆ ತೆರೆಯದೆ ಔಟಾದರೆ, ಟ್ರಾವಿಸ್ ಹೆಡ್ ಕೂಡ 7 ರನ್ಗಳಿಗೆ ವಿಕೆಟ್ ಒಪ್ಪಿಸಿದರು. ಈ ಎರಡು ವಿಕೆಟ್ಗಳು ಬಿದ್ದಾಗಲೇ ಸಾಕಷ್ಟು ಖುಷಿಯಲ್ಲಿದ್ದ ಗೋಯೆಂಕಾ ಅವರಿಗೆ ಅವರ ಖುಷಿಯನ್ನು ಇಮ್ಮಡಿಗೊಳಿಸುವ ಮತ್ತೊಂದು ಘಟನೆ ನಡೆಯಿತು. ಆರಂಭಿಕ ಆಘಾತದಿಂದ ತಂಡವನ್ನು ಮೇಲೇತ್ತುವ ಕೆಲಸ ಮಾಡುವ ಜವಾಬ್ದಾರಿ ಹೊತ್ತಿದ್ದ ತಂಡದ ನಾಯಕ ಇಶಾನ್ ಕಿಶನ್ ಕೂಡ ಇನ್ನಿಂಗ್ಸ್ನ 4ನೇ ಓವರ್ನಲ್ಲಿ ಕೇವಲ 1 ರನ್ ಗಳಿಸಿ ಔಟಾದರು. ಕಿಶನ್ ಔಟಾದ ಕೂಡಲೇ ಸಂಜೀವ ಗೋಯೆಂಕಾ ತಮ್ಮ ಆಸನದಿಂದ ಮೇಲೆದ್ದು, ತಮ್ಮ ಕಿಸೆಯಲ್ಲಿದ್ದ ದೇವರ ಫೋಟೋವನ್ನು ಹೊರತೆಗೆದು ಅದನ್ನು ತಮ್ಮ ಹಣೆಗೆ ಒತ್ತಿಕೊಂಡರು. ನಂತರ ತಮ್ಮ ಎರಡು ಕೈಗಳನ್ನು ಜೋಡಿಸಿ ದೇವರಿಗೆ ನಮಸ್ಕರಿಸಿದರು. ಈ ವೇಳೆ ಅವರ ಮೊಗದಲ್ಲಿ ಸಂತಸ ತುಂಬಿ ತುಳುಕುತ್ತಿತ್ತು. ಇದೀಗ ಇದರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ನಟ ಪೃಥ್ವಿ ಅಂಬರ್ (Prithvi Ambar) ಮತ್ತು ಬಿಗ್ಬಾಸ್ 10 ವಿಜೇತ ಕಾರ್ತಿಕ್ ಮಹೇಶ್ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಇಬ್ಬರೂ ಒಟ್ಟಿಗೆ ಒಂದೇ ಸಿನಿಮಾನಲ್ಲಿ ನಟಿಸಲಿದ್ದು, ಸಿನಿಮಾ ಘೋಷಣೆಗೆಂದು ವಿಶೇಷ ಪ್ರೋಮೊ ಮಾಡಲಾಗಿದೆ. ಹಾಸ್ಯಮಯವಾದ ಈ ಪ್ರೋಮೊನಲ್ಲಿ ಪೃಥ್ವಿ ಅಂಬರ್ಗೆ ‘ಗ್ಯಾಸ್ ಟ್ರಬಲ್’ ಕಾರ್ತಿಕ್ಗೂ ‘ಗ್ಯಾಸ್ ಟ್ರಬಲ್’ ನಿರ್ಮಾಪಕರಿಗೆ ಡೊನಾಲ್ಡ್ ಟ್ರಂಪ್, ಇನ್ನೂ ಯಾರ್ಯಾರಿಂದಲೋ ಕರೆ ಬರುತ್ತಿವೆ. ಒಟ್ಟಾರೆ ಚಿತ್ರ ವಿಚಿತ್ರವಾದ ಈ ವಿಡಿಯೋದ ಉದ್ದೇಶವೇನು? ಇಬ್ಬರೂ ನಟಿಸುತ್ತಿರುವ ಸಿನಿಮಾ ಯಾವುದು? ಇಬ್ಬರಲ್ಲಿ ಯಾರು ಹೀರೋ? ವಿಡಿಯೋ ನೋಡಿ…
ಯಾವುದೇ ಶುಭ ಕಾರ್ಯಅಥವಾ ಸಂತೋಷದ ಕಾರ್ಯಕ್ರಮಗಳಲ್ಲಿ ಉತ್ತಮ ಭೋಜನದ ನಂತರ ತಾಂಬೂಲವನ್ನು ಸೇವಿಸುವುದು ಭಾರತೀಯ ಸಂಪ್ರದಾಯದಲ್ಲಿ ಮಹತ್ವ ಪಡೆದಿದೆ. ವೈಜ್ಞಾನಿಕವಾಗಿ ತಾಂಬೂಲ ಸೇವನೆಯು ಆರೋಗ್ಯ ವೃದ್ಧಿಗೆ, ಜೀರ್ಣಕ್ರಿಯೆಯನ್ನು ಸುಧಾರಿಸಲು ಮತ್ತು ಪಚನ ಕ್ರಿಯೆಯನ್ನು ಪೂರ್ಣಗೊಳಿಸಲು ಸಹಕಾರಿಯಾಗಿದೆ. ಅಧ್ಯಾತ್ಮಿಕವಾಗಿ ಮತ್ತು ಸಾಮಾಜಿಕವಾಗಿ ನೋಡಿದಾಗ, ತಾಂಬೂಲವು ಮಹಾಲಕ್ಷ್ಮಿಯ ಸಂಕೇತ, ಐಶ್ವರ್ಯ, ಸಮೃದ್ಧಿ ಮತ್ತು ಸಂತೋಷದ ಪ್ರತೀಕವಾಗಿದೆ. ವಿವಾಹ, ಗೃಹ ಪ್ರವೇಶ, ಉಪನಯನ, ಗೃಹಾರಂಭದಂತಹ ಯಾವುದೇ ಶುಭ ಸಂದರ್ಭಗಳಲ್ಲಿ ಸಂತೋಷದಿಂದ ಊಟ ಮಾಡಿದ ನಂತರ ತಾಂಬೂಲವನ್ನು ಸ್ವೀಕರಿಸಲಾಗುತ್ತದೆ.
ಆದರೆ, ಎಲ್ಲರಿಗೂ ಶುಭವೆನಿಸುವ ಈ ತಾಂಬೂಲವನ್ನು ವಿದ್ಯಾರ್ಥಿಗಳು ಸೇವಿಸಬಾರದು ಎಂದು ಶಾಸ್ತ್ರಗಳು ತಿಳಿಸುತ್ತವೆ. ಈ ಬಗ್ಗೆಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ವಿದ್ಯೆಯನ್ನು ಅರ್ಜಿಸುತ್ತಿರುವ ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರು ಮತ್ತು ಬ್ರಹ್ಮಚಾರಿಗಳು ತಾಂಬೂಲವನ್ನು ಸೇವಿಸುವುದು ಅಥವಾ ಭಕ್ಷಿಸುವುದು ಶುಭವಲ್ಲ. ಕೇವಲ ಗೃಹಸ್ಥರು ಮತ್ತು ವಯಸ್ಸಾದವರಿಗೆ ಮಾತ್ರ ಇದು ಶುಭಕರ ಎಂದು ಹೇಳಲಾಗುತ್ತದೆ. ತಾಂಬೂಲದಲ್ಲಿ ವೀಳ್ಯದೆಲೆ, ಅಡಿಕೆ, ಸುಣ್ಣ, ಏಲಕ್ಕಿ, ಕಸ್ತೂರಿ, ಜಾಜಿ, ಜಾಪತ್ರೆ ಮುಂತಾದ ಪದಾರ್ಥಗಳು ಸೇರಿರುತ್ತವೆ.
ವಿದ್ಯಾರ್ಥಿಗಳು ತಾಂಬೂಲ ಸೇವನೆ ಮಾಡಿದರೆ ಮಾನಸಿಕವಾಗಿ ಹಲವಾರು ಬದಲಾವಣೆಗಳು ಉಂಟಾಗುತ್ತವೆ. ಇದು ದೇಹ ಮತ್ತು ಮನಸ್ಸಿನ ಮೇಲೆ ಪರಿಣಾಮ ಬೀರಿ, ಅವರ ಅಧ್ಯಯನಕ್ಕೆ ಅಡ್ಡಿಯಾಗುವ ಸಾಧ್ಯತೆ ಇದೆ. ತಾಂಬೂಲ ಸೇವನೆಯಿಂದ ನಾಲಿಗೆ ದಪ್ಪವಾಗಬಹುದು. ಮನಸ್ಸಿನ ಭಾವನೆಗಳು ವಿಕೃತಗೊಳ್ಳಬಹುದು. ಅಹಂಕಾರವೂ ಹೆಚ್ಚಾಗಬಹುದು. ಇವೆಲ್ಲವೂ ವಿದ್ಯಾರ್ಥಿಗಳ ಏಕಾಗ್ರತೆ ಮತ್ತು ಜ್ಞಾನಾರ್ಜನೆಗೆ ಮಾರಕವಾಗಿ ಪರಿಣಮಿಸಬಹುದು.
ಹಿಂದೆ ಗುರುಕುಲಗಳಲ್ಲಿ ವಿದ್ಯಾರ್ಥಿಗಳನ್ನು ಶ್ರೀಮಂತರು, ಬಡವರು, ರಾಜನ ಮಕ್ಕಳೇ ಆಗಲಿ ಸಮಾನವಾಗಿ ಕಾಣಲಾಗುತ್ತಿತ್ತು. ಅಲ್ಲಿ ಸಮಾನ ವಸ್ತ್ರ ಸಂಹಿತೆ, ಸಮಾನ ಆಸನ ಮತ್ತು ಸಮಾನ ಆಹಾರವನ್ನು ನೀಡಲಾಗುತ್ತಿತ್ತು. ಅಧ್ಯಯನಕ್ಕೆ ಪೂರಕ ವಾತಾವರಣವನ್ನು ನಿರ್ಮಿಸಲು, ಗುರುಕುಲಗಳಲ್ಲಿ ವಿದ್ಯಾರ್ಥಿಗಳಿಗೆ ಕೆಲವು ಆಹಾರ ಪದಾರ್ಥಗಳನ್ನು ನೀಡುವುದನ್ನು ನಿಷೇಧಿಸಲಾಗಿತ್ತು. ಈರುಳ್ಳಿ, ಬೆಳ್ಳುಳ್ಳಿ, ಬದನೆಕಾಯಿ, ಗಿಣ್ಣ, ಮೂಲಂಗಿ, ಹುಳಿ ಮೊಸರಿನಂತಹ ಆಹಾರ ಪದಾರ್ಥಗಳನ್ನು ನೀಡುವುದಿಲ್ಲ. ಈ ನಿಯಮಗಳು ವಿದ್ಯಾರ್ಥಿಗಳು ತಮ್ಮ ಅಧ್ಯಯನವನ್ನು ಶೀಘ್ರವಾಗಿ ಪೂರ್ಣಗೊಳಿಸಲು ಮತ್ತು ಕಲಿತ ವಿದ್ಯೆಯನ್ನು ಶಾಶ್ವತವಾಗಿ ನೆನಪಿನಲ್ಲಿಟ್ಟುಕೊಳ್ಳಲು ಸಹಕಾರಿಯಾಗಿದ್ದವು.
ತಾಂಬೂಲ ಮಾತ್ರವಲ್ಲದೆ, ವಿದ್ಯಾರ್ಥಿಗಳಿಗೆ ಕೆಲವು ಇತರ ನಿಯಮಗಳನ್ನೂ ಸಹ ಹಿಂದಿನ ಕಾಲದಲ್ಲಿ ವಿಧಿಸಲಾಗುತ್ತಿತ್ತು. ವಿದ್ಯಾರ್ಥಿಗಳು ಕನ್ನಡಿಯಲ್ಲಿ ತಮ್ಮನ್ನು ನೋಡಿಕೊಳ್ಳಬಾರದು, ತಲೆ ಬಾಚಿಕೊಳ್ಳಬಾರದು, ಸುಗಂಧ ದ್ರವ್ಯಗಳನ್ನು ಬಳಸಬಾರದು ಎಂದು ಹೇಳಲಾಗುತ್ತಿತ್ತು. ನೈಸರ್ಗಿಕವಾಗಿ ಇರಬೇಕು ಎಂಬುದು ಇದರ ಹಿಂದಿನ ಉದ್ದೇಶ. ಚಾಪೆ ಮೇಲೆ ಮಲಗುವುದು ಶುದ್ಧವೆಂದು ಪರಿಗಣಿಸಲಾಗಿತ್ತು. ಬಿಸಿನೀರನ್ನು ಬಳಸದೆ ಬೆಚ್ಚಗಿನ ಅಥವಾ ಸಾಮಾನ್ಯ ನೀರನ್ನು ಬಳಸಬೇಕು, ಗಟ್ಟಿಯಾದ ಅಥವಾ ವಿಚಿತ್ರವಾದ ಪಾದರಕ್ಷೆಗಳನ್ನು ಧರಿಸಬಾರದು ಎಂಬ ನಿಯಮಗಳಿದ್ದವು. ಹಾಗೆಯೇ, ಅಧ್ಯಯನ ಮಾಡುವ ವಿದ್ಯಾರ್ಥಿಗಳು ಅತಿಯಾಗಿ ಹಾಸ್ಯ ಮಾಡಬಾರದು. ಹಾಸ್ಯವೇ ಅಭ್ಯಾಸವಾದರೆ ಜೀವನವೂ ಹಾಸ್ಯಮಯವಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿತ್ತು. ಮಧ್ಯಾಹ್ನದ ನಿದ್ದೆಯು ಕೂಡ ವಿದ್ಯಾರ್ಥಿಗಳಿಗೆ ಶುಭವಲ್ಲ.
ಸಂಕ್ಷಿಪ್ತವಾಗಿ ಹೇಳುವುದಾದರೆ, ಯಾವುದೇ ವಿದ್ಯಾರ್ಥಿ, ಅದು ಎಲ್.ಕೆ.ಜಿ.ಯಿಂದ ಪಿ.ಎಚ್.ಡಿ.ವರೆಗಿನವರಾಗಿರಲಿ, ತಮ್ಮ ವಿದ್ಯಾರ್ಜನೆಯ ಕಾಲ ಪೂರ್ಣಗೊಳ್ಳುವವರೆಗೆ ತಾಂಬೂಲವನ್ನು ಸೇವಿಸಬಾರದು. ಪೋಷಕರು ಕೂಡ ಇದನ್ನು ಪ್ರೋತ್ಸಾಹಿಸಬಾರದು. ಶುಭ ಕಾರ್ಯಗಳಲ್ಲಿ ನೀಡುವ ಪಾನ್ ಬೀಡಾವನ್ನು ಸಹ ತಾಂಬೂಲದ ಲೆಕ್ಕಕ್ಕೆ ಸೇರಿಸಿ ವಿದ್ಯಾರ್ಥಿಗಳು ತ್ಯಜಿಸಬೇಕು ಎಂದು ಗುರೂಜಿ ಸಲಹೆ ನೀಡಿದ್ದಾರೆ.
ಡಾ.ಬಸವರಾಜ್ ಗುರೂಜಿ, ವೈದಿಕ ಜ್ಯೋತಿಷಿ (9972848937)
ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರು, ಏಪ್ರಿಲ್ 05: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ಸಂಜೆ 7.30ಕ್ಕೆ ಆರ್ಸಿಬಿ (RCB) ಹಾಗೂ ಚೆನ್ನೈ ತಂಡದ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಪಂದ್ಯ ಕಣ್ತುಂಬಿಕೊಳ್ಳಲು ಫ್ಯಾನ್ಸ್ ಕಾತರರಾಗಿದ್ದು, ಕ್ರೀಡಾಂಗಣದತ್ತ ಆಗಮಿಸುತ್ತಿದ್ದಾರೆ. ಕ್ರೀಡಾಂಗಣದ ಬಳಿ ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದ್ದು, ಪ್ರತಿಯೊಬ್ಬರನ್ನು ಪರಿಶೀಲನೆ ನಡೆಸಿ ಒಳ ಬಿಡುತ್ತಿದ್ದಾರೆ. ಈ ಮಧ್ಯೆ ಅನುಮಾನಸ್ಪದವಾಗಿ ಓಡಾಡುತ್ತಿದ್ದ ಜಾರ್ಖಂಡ್ ಮೂಲದ ನಾಲ್ವರು ಸೇರಿ ಒಟ್ಟು 8 ಜನರನ್ನು ಪೊಲೀಸರು ವಶಕ್ಕೆ ಪಡಿದಿದ್ದಾರೆ.
ಕಳ್ಳತನ ಮಾಡಿದರೆ ಕಟ್ಟುನಿಟ್ಟಿನ ಕ್ರಮ ಎಂದ ಸೀಮಂತ್ ಕುಮಾರ್ ಸಿಂಗ್
ಇತ್ತೀಚೆಗೆ ಮೊಬೈಲ್ ಕಳ್ಳತನ ಹಿನ್ನೆಲೆ ಉತ್ತರ ಭಾರತದಿಂದ ಬಂದಿದ್ದ ಕೆಲವರನ್ನು ಪೊಲೀಸರು ಬಂಧಿಸಿದ್ದರು. ಇದೀಗ ಅನುಮಾನಸ್ಪದವಾಗಿ ಓಡಾಡುತ್ತಿದ್ದವರನ್ನು ವಶಕ್ಕೆ ಪಡೆದಿರುವ ಪೊಲೀಸರು ದಾಖಲೆ ಪತ್ರ ಮತ್ತು ಟಿಕೆಟ್ ಎಲ್ಲವನ್ನೂ ಪರಿಶೀಲಿಸುತ್ತಿದ್ದಾರೆ. ಇನ್ನು ಪಿಕ್ ಪಾಕೆಟ್ ಮಾಡಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್, ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.
72 ಮೊಬೈಲ್ ಕದ್ದಿದ್ದ 13 ಮಂದಿ ಅರೆಸ್ಟ್
ಇತ್ತೀಚೆಗೆ ಅಂದರೆ ಮಾರ್ಚ್ 28ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸನ್ರೈಸರ್ಸ್ ಹೈದರಾಬಾದ್ ಮತ್ತು ಆರ್ಸಿಬಿ ಮಧ್ಯೆ ಐಪಿಎಲ್ ಉದ್ಘಾಟನಾ ಪಂದ್ಯ ನಡೆದಿತ್ತು. ಪಂದ್ಯ ನೋಡ್ತಾ ಫ್ಯಾನ್ಸ್ ಕುಣಿದು ಕುಪ್ಪಳಿಸುತ್ತಿದ್ದರೆ, ಅಪ್ರಾಪ್ತ ಹುಡುಗರ ಗ್ಯಾಂಗ್ ಮೊಬೈಲ್ಗಳನ್ನ ಸದ್ದಿಲ್ಲದೆ ಕದಿಯುತ್ತಿದ್ದರು. ಒಂದಲ್ಲ, ಎರಡಲ್ಲ, ಬರೋಬ್ಬರಿ 72 ಮೊಬೈಲ್ಗಳನ್ನ ಸೈಲೆಂಟಾಗಿ ದೋಚಿದ್ದರು.
ಹೀಗೆ 72 ಮೊಬೈಲ್ ಕದ್ದ 9 ಅಪ್ರಾಪ್ತರು ಸೇರಿ 13 ಮಂದಿಯನ್ನ ಅರೆಸ್ಟ್ ಮಾಡಲಾಗಿತ್ತು. ಜಾರ್ಖಂಡ್ನಿಂದ ಅಪ್ರಾಪ್ತರ ಗ್ಯಾಂಗ್ ಕಟ್ಕೊಂಡು ಬಂದಿದ್ದ ಸೋಹನ್ ಕುಮಾರ್, ಸಂಜೀತ್ ಕುಮಾರ್, ಇಶಾಲ್ಕುಮಾರ್ ಮತ್ತು ಶುಭಮನ್ನ ಗ್ಯಾಂಗ್ ಅಂದರ್ ಆಗಿತ್ತು.
ಇನ್ನು ಮೈದಾನದ ಸುತ್ತಮುತ್ತ ಭದ್ರತೆಗೆ 2,300 ಪೊಲೀಸರ ನಿಯೋಜನೆ ಮಾಡಲಾಗಿದೆ. ಜನಸಂದಣಿ ನಿಯಂತ್ರಣಕ್ಕೆ ಬಿಎಂಟಿಸಿಯಿಂದ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ಪಾರ್ಕಿಂಗ್, ಮೆಟ್ರೋ ಸೇವೆ ಈ ಹಿಂದಿನ ಪಂದ್ಯದಂತೆಯೇ ಇರಲಿದೆ. ತಡರಾತ್ರಿ 2 ಗಂಟೆಯವರೆಗೂ ನಮ್ಮ ಮೆಟ್ರೋ ರೈಲು ಸಂಚಾರವಿರುತ್ತೆ. ಸುರಕ್ಷತೆಗಾಗಿ ಸ್ಟೇಡಿಯಂ ಸಮೀಪದ ರಸ್ತೆಗೆ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿದ್ದು, ಟಿಕೆಟ್ ಇಲ್ಲದವರು ಸ್ಟೇಡಿಯಂ ಸುತ್ತಮುತ್ತ ಬಾರದಂತೆ ಸೂಚನೆ ನೀಡಲಾಗಿದೆ. ನಕಲಿ ಟಿಕೆಟ್ ಮಾರಾಟ, ಬೆಟ್ಟಿಂಗ್ ಚಟುವಟಿಕೆ ಮೇಲೆ ಸಿಸಿಬಿ ನಿಗಾ ಇಟ್ಟಿದೆ.
ಸನಾತನ ಧರ್ಮದಲ್ಲಿ ವೈಶಾಖ ಮಾಸದ ಶುಕ್ಲ ಪಕ್ಷದ ತೃತೀಯಾ ತಿಥಿಗೆ ವಿಶೇಷವಾದ ಧಾರ್ಮಿಕ ಮಹತ್ವವಿದೆ. ಈ ಪವಿತ್ರ ದಿನವನ್ನೇ ‘ಅಕ್ಷಯ ತೃತೀಯ’ ಎಂದು ಆಚರಿಸುತ್ತೇವೆ. ಹಿಂದೂ ಪಂಚಾಂಗದ ಪ್ರಕಾರ, ಈ ವರ್ಷ ಈ ಶುಭ ಹಬ್ಬವು ಏಪ್ರಿಲ್ 19 ರಂದು ಬಂದಿದೆ. ಶಾಸ್ತ್ರಗಳ ಪ್ರಕಾರ, ಅಕ್ಷಯ ತೃತೀಯದಂದು ಮದುವೆ, ಗೃಹಪ್ರವೇಶ ಅಥವಾ ಯಾವುದೇ ಶುಭ ಕಾರ್ಯಗಳನ್ನು ಮಾಡಲು ಪ್ರತ್ಯೇಕವಾಗಿ ಪಂಚಾಂಗ ನೋಡುವ ಅವಶ್ಯಕತೆಯಿಲ್ಲ, ಇಡೀ ದಿನವು ಅತ್ಯಂತ ಮಂಗಳಕರವಾಗಿರುತ್ತದೆ.
ಸಂಪತ್ತಿನ ಅಧಿದೇವತೆಯ ಆರಾಧನೆ:
ಅಕ್ಷಯ ತೃತೀಯದಂದು ಐಶ್ವರ್ಯದ ದೇವತೆಯಾದ ಮಹಾಲಕ್ಷ್ಮಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಈ ದಿನ ಮಾಡಿದ ದಾನ, ಧರ್ಮ ಮತ್ತು ಪುಣ್ಯ ಕಾರ್ಯಗಳ ಫಲವು ಎಂದಿಗೂ ಕ್ಷಯಿಸುವುದಿಲ್ಲ (ಅಳಿಯುವುದಿಲ್ಲ) ಎಂಬ ನಂಬಿಕೆಯಿದೆ. ಈ ಕಾರಣಕ್ಕಾಗಿಯೇ ಜನರು ಅಂದು ಚಿನ್ನ, ಬೆಳ್ಳಿ ಅಥವಾ ಬೆಲೆಬಾಳುವ ಆಭರಣಗಳನ್ನು ಖರೀದಿಸಿ ಮನೆಗೆ ತರುತ್ತಾರೆ. ಆದರೆ, ಸಂಪತ್ತು ಮತ್ತು ಸಮೃದ್ಧಿಯನ್ನು ತರುವ ಈ ದಿನದಂದು ಕೆಲವು ವಸ್ತುಗಳನ್ನು ಖರೀದಿಸುವುದು ಅಶುಭವೆಂದು ಪರಿಗಣಿಸಲಾಗಿದೆ. ಆ ವಸ್ತುಗಳು ಯಾವುವು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.
ಚೂಪಾದ ಮತ್ತು ಮೊನಚಾದ ಆಯುಧಗಳು:
ಅಕ್ಷಯ ತೃತೀಯದಂದು ಚಾಕು, ಕತ್ತರಿ, ಬ್ಲೇಡ್, ಸೂಜಿ ಅಥವಾ ಕೊಡಲಿಯಂತಹ ಕತ್ತರಿಸುವ ಸಾಧನಗಳನ್ನು ಖರೀದಿಸಬಾರದು. ಇವುಗಳನ್ನು ಮನೆಗೆ ತರುವುದರಿಂದ ಕುಟುಂಬದಲ್ಲಿ ಕಲಹ ಉಂಟಾಗುತ್ತದೆ ಮತ್ತು ಸುಖ-ಶಾಂತಿ ಹದಗೆಡುತ್ತದೆ ಎಂಬ ನಂಬಿಕೆಯಿದೆ.
ಕಪ್ಪು ಬಣ್ಣದ ವಸ್ತುಗಳು:
ಶಾಸ್ತ್ರಗಳಲ್ಲಿ ಕಪ್ಪು ಬಣ್ಣವನ್ನು ಶನಿ ಮತ್ತು ರಾಹುವಿಗೆ ಸಂಬಂಧಿಸಿದ್ದೆಂದು ಪರಿಗಣಿಸಲಾಗುತ್ತದೆ. ಆದ್ದರಿಂದ, ಈ ಶುಭ ದಿನದಂದು ಕಪ್ಪು ಬಟ್ಟೆ, ಬೂಟುಗಳು ಅಥವಾ ಕಪ್ಪು ಪೀಠೋಪಕರಣಗಳನ್ನು ಖರೀದಿಸುವುದನ್ನು ತಪ್ಪಿಸಬೇಕು. ಮಂಗಳಕರ ಕಾರ್ಯಗಳಲ್ಲಿ ಕಪ್ಪು ಬಣ್ಣದ ಬಳಕೆ ಅಶುಭವೆಂದು ನಂಬಲಾಗಿದೆ.
ಅಕ್ಷಯ ತೃತೀಯದಂದು ಲೋಹವನ್ನು ಖರೀದಿಸುವುದು ಶ್ರೇಷ್ಠವಾದರೂ, ಲೋಹದ ಆಯ್ಕೆ ಸರಿಯಾಗಿರಲಿ. ಅಲ್ಯೂಮಿನಿಯಂ ಮತ್ತು ಸ್ಟೀಲ್ ಪಾತ್ರೆಗಳು ರಾಹುವಿನ ಸಂಕೇತವೆಂದು ಹೇಳಲಾಗುತ್ತದೆ. ಇವುಗಳ ಖರೀದಿಯು ಮನೆಯ ಸಮೃದ್ಧಿಯನ್ನು ಕುಂಠಿತಗೊಳಿಸಬಹುದು. ಬದಲಿಗೆ ತಾಮ್ರ, ಹಿತ್ತಾಳೆ ಅಥವಾ ಬೆಳ್ಳಿಯ ವಸ್ತುಗಳನ್ನು ಆರಿಸಿಕೊಳ್ಳುವುದು ಉತ್ತಮ.
ಮುಳ್ಳಿನ ಗಿಡಗಳು:
ವಾಸ್ತು ಶಾಸ್ತ್ರದ ಪ್ರಕಾರ, ಈ ಪವಿತ್ರ ದಿನದಂದು ಕಳ್ಳಿ ಅಥವಾ ಯಾವುದೇ ಮುಳ್ಳಿನ ಗಿಡಗಳನ್ನು ಮನೆಗೆ ತರಬೇಡಿ. ಇವು ಜೀವನದಲ್ಲಿ ಅಡೆತಡೆಗಳನ್ನು ತರಬಹುದು ಮತ್ತು ಧನಾಗಮನಕ್ಕೆ ಅಡ್ಡಿಯಾಗಬಹುದು ಎಂದು ನಂಬಲಾಗಿದೆ.
ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ದಾವಣಗೆರೆ, (ಏಪ್ರಿಲ್ 05): ಹಲವು ಅಂತೆ ಕಂತೆಗಳ ಬಗ್ಗೆ ಚರ್ಚೆ ಜೋರಾಗುತ್ತಿದ್ದಂತೆಯೇ ಸಚಿವ ಜಮೀರ್ ಅಹ್ಮದ್ ಖಾನ್ (zameer ahmed khan) ಅವರು ದಾವಣಗೆರೆ ದಕ್ಷಿಣ ಉಪಚುನಾವಣೆ (Davanagere South By Election) ಪ್ರಚಾರಕ್ಕೆ ಬಂದಿದ್ದಾರೆ. ಎಸ್ಎಸ್ ಮಲ್ಲಿಕಾರ್ಜುನ್ (Minister SS Mallikarjun) ಪಕ್ಕದಲ್ಲಿಯೇ ಕುಳಿತು ಸುದ್ದಿಗೋಷ್ಠಿ ನಡೆಸಿ ತಮ್ಮ ನಡುವೆ ಯಾವುದೇ ವೈಮನಸ್ಸಿಲ್ಲ ಎಂಬುವುದನ್ನು ಸಾರಿದರು. ಅಲ್ಲದೇ ಚಾಮರಾಜಪೇಟೆಗೆ ಬಂದು ಯಾರಾದರೂ ಮಾತನಾಡಿದರೆ ನಾನೂ ಕೂಡ ಸುಮ್ಮನೆ ಇರಲ್ಲ ಎಂದು ಪರೋಕ್ಷವಾಗಿ ಟಾಂಗ್ ಕೂಡ ಕೊಟ್ಟಿದ್ದಾರೆ. ಯಾಕಂದ್ರೆ, ಈ ಹಿಂದೆ ಟಿಕೆಟ್ ವಿಚಾರವಾಗಿ ಸಚಿವ ಮಲ್ಲಿಕಾರ್ಜುನ ಅವರೂ ಸಹ ದಾವಣಗೆರೆಗೆ ಬಂದು ಏನೇನೋ ಮಾತನಾಡಿದ ಸರಿ ಇರಲ್ಲ ಎಂದು ಜಮೀರ್ ವಿರುದ್ಧ ಗುಡುಗಿದ್ದರು. ಇದೀಗ ಮಲ್ಲಿಕಾರ್ಜುನ ಅವರಿಗೆ ಮಾತಿಗೆ ಸ್ಪಷ್ಟನೆ ನೀಡುವಾಗ ಜಮೀರ್ ಸಹ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.
ಟಿಕೆಟ್ ವಿಚಾರದ ಗಲಾಟೆ ವೇಳೆ ಎಸ್ಎಸ್ ಮಲ್ಲಿಕಾರ್ಜುನ್ “ಯಾರ್ರಿ ಜಮೀರ್ ದಾವಣಗೆರೆ ಬಗ್ಗೆ ಮಾತನಾಡಲು” ಎಂಬ ಹೇಳಿಕೆ ಕೊಟ್ಟಿದ್ದರು. ಈ ಹೇಳಿಕೆ ಜತೆಗೆ ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್ ಸಿಕ್ಕಿಲ್ಲ ಎಂಬ ಕಾರಣಕ್ಕೂ ಸಚಿವ ಜಮೀರ್ ಮುನಿಸಿಕೊಂಡಿದ್ದರು. ಅಲ್ಲದೇ ಮಲ್ಲಿಕಾರ್ಜುನ ಹೇಳಿಕೆಯಿಂದಾಗಿ ಜಮೀರ್ ಅವರ ಅಭಿಮಾನಿಗಳು ಹಾಗೂ ಮುಸ್ಲಿಮರ ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲದೇ ಜಮೀರ್ ಅವರನ್ನ ಕಡೆಗಣಿಸಿದ್ದಕ್ಕೆ ಈ ಬಾರಿ ತಕ್ಕ ಪಾಠ ಕಲಿಸುವ ಬಗ್ಗೆಯೂ ಅಲ್ಪಸಂಖ್ಯಾತ ಮುಖಂಡರು ಹೇಳಿಕೆಗಳ ನೀಡುತ್ತಿದ್ದು, ಇದು ಮಲ್ಲಿಕಾರ್ಜುನ ಅವರ ಆತಂಕಕ್ಕೆ ಕಾರಣವಾಗಿತ್ತು. ಹೀಗಾಗಿ ದಾವಣಗೆರೆಯಲ್ಲಿ ಜಮೀರ್ ಅವರಿಗೆ ಬೇಡಿಕೆ ಹೆಚ್ಚಾದ ಹಿನ್ನೆಲೆ ಸ್ವತಃ ಎಸ್ಎಸ್ ಮಲ್ಲಿಕಾರ್ಜುನ್ ಅವರು ಸಿಎಂ ಬಳಿ ಒತ್ತಡ ಹಾಕಿ ಪ್ರಚಾರಕ್ಕೆ ಕರೆಸಿಕೊಂಡಿದ್ದಾರೆ. ಇನ್ನು ಸಿಎಂ ಮಾತಿಗೆ ಬೆಲೆಕೊಟ್ಟು ದಾವಣಗೆರೆಗೆ ಬಂದಿರುವ ಜಮೀರ್ ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ಕೇಳಿ.