Headlines

Numerology: ಸಂಖ್ಯಾಶಾಸ್ತ್ರದ ಪ್ರಕಾರ, ಈ 4 ತಾರೀಖುಗಳಲ್ಲಿ ಹುಟ್ಟಿದವರು ಸಾಕ್ಷಾತ್ ‘ಕುಬೇರನ ಸ್ವರೂಪ’! – Kannada News

ಸಾಕ್ಷಾತ್ ‘ಕುಬೇರನ ಸ್ವರೂಪ’Image Credit source: Pinterest ಸಂಖ್ಯಾಶಾಸ್ತ್ರದ ಪ್ರಕಾರ, ಒಬ್ಬ ವ್ಯಕ್ತಿ ಜನಿಸಿದ ದಿನಾಂಕವು ಆತನ ಸ್ವಭಾವ, ಭವಿಷ್ಯ ಮತ್ತು ಆತನ ಅದೃಷ್ಟದ ಮೇಲೆ ಅಪಾರ ಪ್ರಭಾವ ಬೀರುತ್ತದೆ. ಕೆಲವು ದಿನಾಂಕಗಳಲ್ಲಿ ಜನಿಸಿದವರು ಹುಟ್ಟುತ್ತಲೇ ತಮ್ಮೊಂದಿಗೆ ಅಪಾರ ಅದೃಷ್ಟವನ್ನು ಹೊತ್ತು ತರುತ್ತಾರೆ. ಸಂಖ್ಯಾಶಾಸ್ತ್ರದ ಪ್ರಕಾರ, ಯಾವುದೇ ತಿಂಗಳಿನ 3, 12, 21 ಅಥವಾ 30 ನೇ ತಾರೀಖಿನಂದು ಜನಿಸಿದ ಮಕ್ಕಳನ್ನು ಸಾಕ್ಷಾತ್ ‘ಕುಬೇರನ ಸ್ವರೂಪ’ ಅಥವಾ ಕುಬೇರನ ಅವತಾರ ಎಂದು ಪರಿಗಣಿಸಲಾಗುತ್ತದೆ. ಈ ದಿನಾಂಕಗಳ ಮೊತ್ತವನ್ನು…

Read More

ಅಮೆರಿಕ: ವಿಚ್ಛೇದನ ಕೊಡ್ತೀನಿ ಎಂದಿದ್ದಕ್ಕೆ ಹೆಂಡತಿ ಮಕ್ಕಳು ಮನೆಯಲ್ಲಿರುವಾಗಲೇ ಬುಲ್ಡೋಜರ್​ನಿಂದ ಮನೆ ಕೆಡವಲು ಯತ್ನಿಸಿದ ವ್ಯಕ್ತಿ – Kannada News

ಪೆನ್ಸಿಲ್ವೇನಿಯಾ, ಜೂನ್ 03: ಪತ್ನಿ ವಿಚ್ಛೇದನ(Divorce) ಕೊಡ್ತೀನಿ ಎಂದಿದ್ದಕ್ಕೆ ಕೋಪಗೊಂಡ ಪತಿ ಹೆಂಡತಿ ಮತ್ತು ಮಕ್ಕಳು ಮನೆಯಲ್ಲಿದ್ದಾಗಲೇ ಬುಲ್ಡೋಜರ್ ತಂದು ಕೆಡವಲು ಯತ್ನಿಸಿರುವ ಘಟನೆ ಅಮೆರಿಕದ ಪೆನ್ಸಿಲ್ವೇನಿಯಾದ ಬಟ್ಲರ್ ಕೌಂಟಿಯಲ್ಲಿ ನಡೆದಿದೆ. ಪತಿಯೊಬ್ಬ ಕೋಪ ಹಾಗೂ ಮದ್ಯದ ಅಮಲಿನಲ್ಲಿ ಅತಿರೇಕದ ವರ್ತನೆ ತೋರಿದ್ದು ಮಹಿಳೆಯ ಸಮಯಪ್ರಜ್ಞೆಯಿಂದಾಗಿ ದೊಡ್ಡದೊಂದು ಗಂಡಾಂತರ ತಪ್ಪಿದೆ. 48 ವರ್ಷದ ಎರಿಕ್ ಪಿಯರ್ವ್ಸ್ಜಾ ಎಂಬಾತ ಬುಲ್ಡೋಜರ್ ಬಳಸಿ ತನ್ನದೇ ಮನೆಯನ್ನು ಕೆಡವಲು ಯತ್ನಿಸಿದಾಗ, ಮನೆಯೊಳಗಿದ್ದ ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳು ಯಾವುದೇ ಗಾಯಗಳಿಲ್ಲದೆ ಪವಾಡಸದೃಶವಾಗಿ…

Read More

ಡಿಕೆ ಶಿವಕುಮಾರ್ ಜತೆ 14 ಮಂದಿ ಪ್ರಮಾಣವಚನ ಸಾಧ್ಯತೆ: ಸಂಭಾವ್ಯ ಸಚಿವರ ಫೈನಲ್ ಲಿಸ್ಟ್ ಲಭ್ಯ – Kannada News

ಬೆಂಗಳೂರಿನಲ್ಲಿ ರಾರಾಜಿಸುತ್ತಿರುವ ಡಿಕೆ ಶಿವಕುಮಾರ್ ಫ್ಲೆಕ್ಸ್Image Credit source: tv9 ಬೆಂಗಳೂರು, ಜೂನ್ 3: ರಾಜ್ಯದಲ್ಲಿ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಇಂದು ಅಧಿಕಾರ ವಹಿಸಿಕೊಳ್ಳುತ್ತಿದ್ದು, ಅವರ ಸಂಪುಟ ಸೇರಲಿರುವ ಸಂಭಾವ್ಯ ಸಚಿವರ ಕೊನೆ ಹಂತದ ಫೈನಲ್ ಲಿಸ್ಟ್ ‘ಟಿವಿ9’ಗೆ ಲಭ್ಯವಾಗಿದೆ. ಇಂದು ಮುಖ್ಯಮಂತ್ರಿಗಳ ಜೊತೆಗೆ ಒಟ್ಟು 14 ಮಂದಿ ಶಾಸಕರು ಸಚಿವರಾಗಿ ಪದಗ್ರಹಣ ಮಾಡುವ ಸಾಧ್ಯತೆಯಿದೆ. ದೆಹಲಿಯಲ್ಲಿ ನಡೆದ ಹಲವು ದಿನಗಳ ಮ್ಯಾರಥಾನ್ ಸಭೆಗಳ ಬಳಿಕ ಹೈಕಮಾಂಡ್ ಈ ಪಟ್ಟಿಯನ್ನು ಸಿದ್ಧಪಡಿಸಿದ್ದು, ಕೆಲವೇ…

Read More

2 ಪಂದ್ಯಗಳು ಎಕ್ಸ್​ಟ್ರಾ… ನ್ಯೂಝಿಲೆಂಡ್ vs ಭಾರತ ವೇಳಾಪಟ್ಟಿ ಪ್ರಕಟ – Kannada News

ನ್ಯೂಝಿಲೆಂಡ್ vs ಭಾರತ ಸರಣಿಯ ವೇಳಾಪಟ್ಟಿ ಪ್ರಕಟವಾಗಿದೆ. ಈ ವೇಳಾಪಟ್ಟಿಯಂತೆ ಟೀಮ್ ಇಂಡಿಯಾ ಅಕ್ಟೋಬರ್​ನಲ್ಲಿ ನ್ಯೂಝಿಲೆಂಡ್ ಪ್ರವಾಸ ಕೈಗೊಳ್ಳಲಿದೆ. ಅಲ್ಲದೆ ಅಲ್ಲಿ ಒಟ್ಟು 12 ಪಂದ್ಯಗಳನ್ನಾಡಲಿದೆ. ಇದಕ್ಕೂ ಮುನ್ನ ಈ ಸರಣಿಯಲ್ಲಿ 10 ಪಂದ್ಯಗಳನ್ನು ನಿಗದಿ ಮಾಡಲಾಗಿತ್ತು. ಇದೀಗ ಹೆಚ್ಚುವರಿ 2 ಏಕದಿನ ಪಂದ್ಯಗಳನ್ನು ಸೇರಿಸಲಾಗಿದೆ. ಅದರಂತೆ 5 ಏಕದಿನ ಮತ್ತು 5 ಟಿ20 ಪಂದ್ಯಗಳು ನಡೆಯಲಿದೆ. ಇದಾದ ಬಳಿಕ 2 ಮ್ಯಾಚ್​ಗಳ ಟೆಸ್ಟ್ ಸರಣಿಯನ್ನು ಆಡಲಾಗುತ್ತದೆ. ಸಾಮಾನ್ಯವಾಗಿ ದ್ವಿಪಕ್ಷೀಯ ಸರಣಿಗಳಲ್ಲಿ 3 ಏಕದಿನ ಪಂದ್ಯಗಳನ್ನು ಆಡಲಾಗುತ್ತದೆ….

Read More

ಮದುವೆ ಮಂಟಪದಲ್ಲಿ ಡ್ಯಾನ್ಸ್​ ಬಿಟ್ಟು ಪಂಜ ಕುಸ್ತಿಗಿಳಿದ ವಧು-ವರ – Kannada News

ನವದೆಹಲಿ, ಜೂನ್ 03: ಸಾಮಾನ್ಯವಾಗಿ ಮದುವೆ(Marriage)ಮಂಟಪದಲ್ಲಿ ವಧು-ವರರು ನಾಚಿಕೆಯಿಂದ ನಿಂತಿರುವುದನ್ನು ಅಥವಾ ರೋಮ್ಯಾಂಟಿಕ್ ಆಗಿ ನೃತ್ಯ ಮಾಡುವುದನ್ನು ನಾವು ನೋಡಿರುತ್ತೇವೆ. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ಸದ್ಯ ವೈರಲ್ ಆಗುತ್ತಿರುವ ವಿಡಿಯೋವೊಂದರಲ್ಲಿ ವಧು ಇವೆಲ್ಲವನ್ನೂ ಬದಿಗಿಟ್ಟು, ವರನಿಗೆ ನೇರವಾಗಿ ಪಂಜ ಕುಸ್ತಿ ಸವಾಲು ಹಾಕಿ ಸಖತ್ ಮನರಂಜನೆ ನೀಡಿದ್ದಾಳೆ. ಗುಲಾಬಿ ಬಣ್ಣದ ಮದುವೆಯ ಲೆಹೆಂಗಾ ಧರಿಸಿದ್ದ ವಧು, ಮಂಟಪದ ಮಧ್ಯದಲ್ಲಿದ್ದ ಟೇಬಲ್ ಮೇಲಿಟ್ಟು ವರನಿಗೆ ಸವಾಲು ಹಾಕಿದಳು. ನನ್ನೊಂದಿಗೆ ಸ್ಪರ್ಧಿಸಲು ಹುಡುಗಿಯರನ್ನಲ್ಲ, ಹುಡುಗರನ್ನು ಕರೆತನ್ನಿ”ಎಂದು ಆತ್ಮವಿಶ್ವಾಸದಿಂದ ಕೂಗಿದ ವಧುವಿನ…

Read More

World Bicycle Day 2026: ಸೈಕಲ್‌ ಸವಾರಿ ಪರಿಸರ, ನಮ್ಮ ಆರೋಗ್ಯ ಎರಡಕ್ಕೂ ಒಳ್ಳೆಯದು – Kannada News

ಸೈಕಲ್‌ (Bicycle) ಕೈಗೆಟಕುವ, ಆರೋಗ್ಯದಾಯಕ  ಹಾಗೂ ಪರಿಸರ ಸ್ನೇಹಿ ಸಾರಿಗೆ ವಿಧಾನವಾಗಿದ್ದು, ಹಿಂದೆಲ್ಲಾ ಜನ ಓಡಾಟಕ್ಕೆ ಸೈಕಲ್‌ಗಳನ್ನೇ ಬಳಸುತ್ತಿದ್ದರು. ಆದರೆ ಇಂದಿನ ಈ ಆಧುನಿಕ ಜಗತ್ತಿನಲ್ಲಿ ಸೈಕಲ್‌ ಬಳಕೆ ತೀರಾ ಕಡಿಮೆಯಾಗಿದೆ. ಪ್ರತಿಷ್ಠೆಯ ದೃಷ್ಟಿಯಿಂದ ಹಾಗೂ ಸಮಯ ಉಳಿಸಲು ಜನರು ಸೈಕಲ್ ಬಳಸುವುದನ್ನು ಬಿಟ್ಟು ಸ್ಕೂಟರ್, ಬೈಕ್ ಮತ್ತು ಕಾರುಗಳನ್ನು ಬಳಸಲು ಪ್ರಾರಂಭಿಸಿದ್ದಾರೆ.‌ ಹೀಗೆ ವಾಹನಗಳ ಬಳಕೆ ಹೆಚ್ಚಾದಂತೆ ಪರಿಸರ ಕೂಡ ಮಾಲಿನ್ಯವಾಗುತ್ತಿದೆ. ಈ ನಿಟ್ಟಿನಲ್ಲಿ ಪರಿಸರ ಸಂರಕ್ಷಣೆಗಾಗಿ ಸೈಕಲ್‌ ಸವಾರಿ ಮಾಡಲು ಜನರನ್ನು ಪ್ರೋತ್ಸಾಹಿಸಲು, ಸೈಕ್ಲಿಂಗ್‌ನ…

Read More

‘ಪೆದ್ದಿ’ಗೆ ಹೆದರಿದ ವರುಣ್ ಧವನ್ ಸಿನಿಮಾ? ಮೊದಲ ದಿನವೇ ಟಿಕೆಟ್​ ಮೇಲೆ ಶೆ.50 ಆಫರ್ – Kannada News

ಬಾಲಿವುಡ್ ಅಂಗಳದಲ್ಲಿ ಈಗ ಹೊಸದೊಂದು ಆಸಕ್ತಿದಾಯಕ ಬೆಳವಣಿಗೆ ನಡೆದಿದೆ. ಈ ಶುಕ್ರವಾರ (ಜೂನ್ 5) ಬಿಡುಗಡೆಯಾಗಲಿರುವ ವರುಣ್ ಧವನ್ ನಟನೆಯ ‘ಹೈ ಜವಾನಿ ತೋ ಇಷ್ಕ್ ಹೋನಾ ಹೈ’ ಚಿತ್ರತಂಡ ಭರ್ಜರಿ ಆಫರ್ ಒಂದನ್ನು ಘೋಷಿಸಿದೆ. ಸಿನಿಮಾದ ಮೊದಲ ದಿನದಂದೇ ಟಿಕೆಟ್ ದರದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡುವುದಾಗಿ ಘೋಷಣೆ ಮಾಡಿದೆ. ಸಾಮಾನ್ಯವಾಗಿ ಸಿನಿಮಾ ರಿಲೀಸ್ ಆಗಿ ಒಂದು ತಿಂಗಳು ಕಳೆದ ಬಳಿಕ ಆಫರ್ ನೀಡುವುದು ಸಾಮಾನ್ಯ. ಆದರೆ, ವರುಣ್ ಧವನ್ ಸಿನಿಮಾ ಬೇರೆಯದೇ ರೀತಿಯ…

Read More

DK Shivakumar Oath Taking: ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!

ಬೆಂಗಳೂರು, ಜೂನ್ 3: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಇಂದು ಪ್ರಮಾಣವಚನ ಸ್ವೀಕರಿಸುತ್ತಿರುವುದರಿಂದ ಇಡೀ ಬೆಂಗಳೂರು ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ನಿಯೋಜಿತ ಸಿಎಂಗೆ ಶುಭ ಕೋರಲು ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಬೆಂಬಲಿಗರು ನಗರದ ಬಹುತೇಕ ಕಡೆಗಳಲ್ಲಿ ಬೃಹತ್ ಫ್ಲೆಕ್ಸ್, ಬ್ಯಾನರ್ ಹಾಗೂ ಕಟೌಟ್‌ಗಳನ್ನು ಅಳವಡಿಸಿದ್ದಾರೆ. ವಿಶೇಷವಾಗಿ ರಾಜರಾಜೇಶ್ವರಿ ನಗರ (ಆರ್ ಆರ್ ನಗರ) ವ್ಯಾಪ್ತಿಯ ಸುಮನಹಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಡಿ.ಕೆ.ಶಿವಕುಮಾರ್ ಅವರ ಬರೋಬ್ಬರಿ 100 ಅಡಿ ಎತ್ತರದ ಬೃಹತ್ ಕಟೌಟ್ ನಿರ್ಮಿಸಿ ಭರ್ಜರಿಯಾಗಿ…

Read More

Daily Devotional: ಮರಣ ಹೊಂದುವ ಮುನ್ನ ಅಂತಿಮ ಐದು ನಿಮಿಷ ಹೇಗಿರುತ್ತೆ? ಆಧ್ಯಾತ್ಮಿಕ ವಿಶ್ಲೇಷಣೆ ಇಲ್ಲಿದೆ – Kannada News

“ಜಾತಸ್ಯ ಮರಣಂ ಧ್ರುವಂ” ಎಂಬ ವೇದವಾಕ್ಯದಂತೆ, ಹುಟ್ಟಿದ ಪ್ರತಿಯೊಬ್ಬರಿಗೂ ಮರಣ ನಿಶ್ಚಿತ. ರೋಗರುಜಿನೆಗಳು, ಅಪಘಾತಗಳು ಅಥವಾ ಹೃದಯಾಘಾತದಂತಹ ಕಾರಣಗಳಿಂದ ಮರಣ ಸಂಭವಿಸಬಹುದಾದರೂ, ಈ ಅಂತಿಮ ಕ್ಷಣಗಳಲ್ಲಿ, ವಿಶೇಷವಾಗಿ ಆತ್ಮ ದೇಹವನ್ನು ತ್ಯಜಿಸುವ ಕೊನೆಯ ಐದು ನಿಮಿಷಗಳಲ್ಲಿ ಏನಾಗುತ್ತದೆ ಎಂಬುದು ಆಧ್ಯಾತ್ಮಿಕವಾಗಿ ಮಹತ್ವಪೂರ್ಣವಾಗಿದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಸಾವಿನ ಕೊನೆಯ ಐದು ನಿಮಿಷಗಳಲ್ಲಿ, ದೇಹವು ಹಲವಾರು ಪ್ರಕ್ರಿಯೆಗಳಿಗೆ…

Read More

ಡಿಕೆ ಶಿವಕುಮಾರ್ ಪ್ರಮಾಣವಚನ: ಖಾಕಿ ಭದ್ರಕೋಟೆಯಾದ ಲೋಕಭವನ! 2000ಕ್ಕೂ ಹೆಚ್ಚು ಪೊಲೀಸ್​ ಸಿಬ್ಬಂದಿ ನಿಯೋಜನೆ – Kannada News

ಲೋಕಭವನ ಸುತ್ತ ಬ್ಯಾರಿಕೇಡ್ ಹಾಕಿ ಭದ್ರತಾ ಸಿದ್ಧತೆ ಮಾಡಿರುವುದುImage Credit source: tv9 ಬೆಂಗಳೂರು, ಜೂನ್ 3: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಇಂದು ಅಧಿಕಾರ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ, ಸಮಾರಂಭ ನಡೆಯಲಿರುವ ಲೋಕಭವನ ಹಾಗೂ ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ನೇತೃತ್ವದಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಹಾಗೂ ಸಂಚಾರ ದಟ್ಟಣೆ ನಿಯಂತ್ರಿಸಲು ಇಡೀ…

Read More