Headlines

SRH vs LSG: ನಂಬಲಸಾಧ್ಯ..! ಪವರ್‌ಪ್ಲೇನಲ್ಲಿ ಅತಿ ಕಡಿಮೆ ಮೊತ್ತ ದಾಖಲಿಸಿದ ಸನ್‌ರೈಸರ್ಸ್

ಹೈದರಾಬಾದ್​ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 (IPL 2026) ರ 10ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ ಹಾಗೂ ಲಕ್ನೋ ಸೂಪರ್​ಜೈಂಟ್ಸ್ (SRH vs LSG) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ರೈಸರ್ಸ್ ತಂಡ ತವರಿನ ಲಾಭ ಪಡೆದು ಬೃಹತ್ ಮೊತ್ತವನ್ನು ಕಲೆಹಾಕಲಿದೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಲಕ್ನೋ ಬೌಲರ್​ಗಳ ಮಾರಕ ದಾಳಿ ಇದಕ್ಕೆ ಅವಕಾಶ ಮಾಡಿಕೊಡಲಿಲ್ಲ. ಆದಾಗ್ಯೂ ಲೋಕಲ್ ಬಾಯ್ ನಿತೀಶ್ ರೆಡ್ಡಿ ಹಾಗೂ…

Read More

ಬೆಂಗಳೂರು ಪೊಲೀಸರ ಡ್ರಿಂಕ್ & ಡ್ರೈವ್‌ ತಪಾಸಣೆಯಲ್ಲಿ ಸಿಕ್ಕಿಬಿದ್ದ ಡ್ರೈವರ್ ಲಾರಿಯಲ್ಲೇ ನೇಣಿಗೆ ಶರಣು!

ಬೆಂಗಳೂರು, (ಏಪ್ರಿಲ್ 05): ಚಾಲಕನೋರ್ವ ಲಾರಿಯೊಳಗೆ (Lorry Driver) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ಜೆ.ಪಿ.ನಗರದಲ್ಲಿ ನಡೆದಿದೆ. ಷಣ್ಮುಗ ಮೃತ ಲಾರಿ ಚಾಲಕ. ಪೊಲೀಸರು ಡ್ರಿಂಗ್ ಆ್ಯಂಡ್ ಡ್ರೈವ (Drink And Drive )ತಪಾಸಣೆ ವೇಳೆ ಷಣ್ಮುಗ ಮದ್ಯಪಾನ ಮಾಡಿರುವುದು ಪತ್ತೆಯಾಗಿದೆ. ಹೀಗಾಗಿ ಪೊಲೀಸರು, ಚಾಲಕ ಷಣ್ಮುಗಗೆ ದಂಡ ವಿಧಿಸಿ ಬಳಿಕ ಲಾರಿಯನ್ನು ಜೆ.ಪಿ.ನಗರ ಠಾಣೆಗೆ ಎಳೆದೊಯ್ದಿದ್ದಾರೆ. ಆದ್ರೆ, ಷಣ್ಮುಗ ಠಾಣೆಯ ಬಳಿ ನಿಲ್ಲಿಸಿದ್ದ ಲಾರಿಯಲ್ಲೇ ನೇಣು ಬಿಗಿದುಕೊಂಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ…

Read More

ಮೆಟ್ಟಿಲೇರಿಯೇ ತಿಮ್ಮಪ್ಪನ ದರ್ಶನ ಮಾಡುವುದೇಕೆ ಜಾನ್ಹವಿ: ಅದ್ಭುತ ಕಾರಣ ಕೊಟ್ಟ ನಟಿ

ಜಾನ್ಹವಿ ಕಪೂರ್ (Janhvi Kapoor), ಬಾಲಿವುಡ್​​ನ ಬಲು ಜನಪ್ರಿಯ ಮತ್ತು ಬೇಡಿಕೆಯ ಯುವನಟಿ. ಇತ್ತೀಚೆಗೆ ದಕ್ಷಿಣ ಭಾರತ ಚಿತ್ರರಂಗದಲ್ಲಿಯೂ ಸಹ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಜಾನ್ಹವಿ ಕಪೂರ್, ಬಾಲಿವುಡ್​​ನ ಗ್ಲಾಮರಸ್ ನಟಿಯರಲ್ಲಿ ಒಬ್ಬರು. ಸಿನಿಮಾಗಳಲ್ಲಿ ಮಾಡರ್ನ್ ಯುವತಿಯಾಗಿ ಕಾಣಿಸಿಕೊಳ್ಳುವ ಜಾನ್ಹವಿ, ಅಪ್ಪಟ ದೈವ ಭಕ್ತೆ. ಅದರಲ್ಲೂ ತಿರುಪತಿ ತಿಮ್ಮಪ್ಪನ ಪರಮ ಭಕ್ತೆ. ವರ್ಷದಲ್ಲಿ ಹಲವು ಭಾರಿ ಅವರು ತಿರುಪತಿ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಹೀಗೆ ಭೇಟಿ ನೀಡಿದ ಪ್ರತಿಬಾರಿ ಅವರು ಮೆಟ್ಟಿಲುಗಳ ಮೂಲಕ ಬೆಟ್ಟವನ್ನೇರಿಯೇ ದರ್ಶನ ಪಡೆಯುತ್ತಾರೆ. ತಾವು…

Read More

ಸಿದ್ಧಗಂಗಾ ಮಠದಲ್ಲಿ ವಿಶಿಷ್ಟವಾಗಿ ಶಿವಕುಮಾರ ಶ್ರೀಗಳ ಜನ್ಮೋತ್ಸವ: 119 ಮಕ್ಕಳಿಗೆ ನಾಮಕರಣೋತ್ಸವ

ತುಮಕೂರು, ಏಪ್ರಿಲ್​ 05: ತ್ರಿವಿಧ ದಾಸೋಹಕ್ಕೆ ಹೊಸ ಭಾಷೆ ಕೊಟ್ಟವರು ಸಿದ್ದಗಂಗಾ ಮಠದ (Siddaganga Math) ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮಿಜಿಗಳು. ಹಸಿವಿನಿಂದ ಬಂದವರಿಗೆ ಅನ್ನ ಹಾಗೂ ಆಶ್ರಯ ಕೊಟ್ಟು, ಬಡ ಮಕ್ಕಳಿಗೆ ಶಿಕ್ಷಣ ಸೇವೆ ಮುಖಾಂತರ ಲಕ್ಷಾಂತರ ಯುವ ಜನತೆಗೆ ಭವಿಷ್ಯದ ದಾರಿ ದೀಪವಾದ ಅವರು ನಡೆದಾಡುವ ದೇವರು. ಅವರ 119ನೇ ವರ್ಷದ ಜನ್ಮದಿನೋತ್ಸವ ಹಿನ್ನಲೆ ಸಿದ್ಧಗಂಗಾ ಮಠದಲ್ಲಿ ಇಂದು 119 ಮಕ್ಕಳಿಗೆ ನಾಮಕರಣೋತ್ಸವ ಎಂಬ ವಿಶೇಷ ಕಾರ್ಯಕ್ರಮ ಮಾಡಲಾಗಿದೆ. ಅವರ ನೆನಪು, ಮಾರ್ಗದರ್ಶನದ ದಾರಿ…

Read More

ಗೌರವ ಡಾಕ್ಟರೇಟ್ ನಿರಾಕರಿಸಿದ ಬಸವರಾಜ ಬೊಮ್ಮಾಯಿ, ಹಾವೇರಿ ವಿವಿಗೆ ಹೇಳಿದಿಷ್ಟು

ಹಾವೇರಿ, (ಏಪ್ರಿಲ್ 05): ಹಾವೇರಿ ವಿಶ್ವವಿದ್ಯಾಲಯವು (haveri university) ತಮಗೆ ನೀಡಲು ನಿರ್ಧರಿಸಿದ್ದ ಗೌರವ ಡಾಕ್ಟರೇಟ್ (honorary doctorate) ಅನ್ನು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಅವರು ವಿನಮ್ರವಾಗಿ ನಿರಾಕರಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಸಾರ್ವಜನಿಕ ಸೇವೆಯಲ್ಲಿರುವ ತಮಗೆ ಜನರ ಪ್ರೀತಿ ಮತ್ತು ವಿಶ್ವಾಸವೇ ಅತಿ ದೊಡ್ಡ ಪ್ರಶಸ್ತಿ ಎಂದು ಹೇಳಿಕೊಂಡಿದ್ದಾರೆ. ತಮ್ಮ ಸಿಂಡಿಕೇಟ್ ಸಭೆಯಲ್ಲಿ ತಮಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿದ ಹಾವೇರಿ ವಿಶ್ವವಿದ್ಯಾಲಯದ ಕುಲಪತಿಗಳು, ಉಪಕುಲಪತಿಗಳು,…

Read More

ಹುಬ್ಬಳ್ಳಿ ಲವ್ ಜಿಹಾದ್ ಕೇಸ್​ಗೆ ಟ್ವಿಸ್ಟ್: ಯುವಕನ ವಿರುದ್ಧ ದೂರು ಬೆನ್ನಲ್ಲೇ ಯುವತಿಯ ವಿಡಿಯೋಗಳು ವೈರಲ್

ಹುಬ್ಬಳ್ಳಿ, ಏಪ್ರಿಲ್​ 05: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಎರಡು ದಿನದ ಹಿಂದಷ್ಟೇ ನಡೆದ ಲವ್ ಜಿಹಾದ್ (Love Jihad) ಆರೋಪ ಪ್ರಕರಣ ರಾಜ್ಯಾದ್ಯಂತ ದೊಡ್ಡ ಸುದ್ದಿಯಾಗಿತ್ತು. ಈ ಬೆನ್ನಲ್ಲೇ ನಗರದಲ್ಲಿ ಮತ್ತೊಂದು ಲವ್ ಜಿಹಾದ್ ಆರೋಪ ಕೇಳಿ ಬಂದಿದೆ. ಮುಸ್ಲಿಂ ಯುವಕನೋರ್ವ ಪ್ರೀತಿಯ ಹೆಸರಲ್ಲಿ ನಾಟಕವಾಡಿ ಹಿಂದೂ ಯುವತಿಯ ಮೇಲೆ ಅತ್ಯಾಚಾರ ಎಸಗಿ, ವಿಡಿಯೋ ಮಾಡಿಕೊಂಡು ಬ್ಲ್ಯಾಕ್‌ಮೇಲ್ ಮಾಡಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಮುಫಿಜ್ ಮಿಯಾನ್ನವರ್ ವಿರುದ್ಧ ದೂರು ದಾಖಲಾಗಿತ್ತು. ಇದೀಗ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದ್ದು,…

Read More

SRH vs LSG: W,W,W,W.. ಸನ್‌ರೈಸರ್ಸ್​ಗೆ ಆರಂಭದಲ್ಲೇ ಮರ್ಮಾಘಾತ

ತವರಿನಲ್ಲಿ ತನ್ನ ಮೊದಲ ಪಂದ್ಯವನ್ನಾಡುತ್ತಿರುವ ಸನ್‌ರೈಸರ್ಸ್ ಹೈದರಾಬಾದ್‌ ತಂಡ, ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಹೀಗಾಗಿ ಮೊದಲು ಬ್ಯಾಟಿಂಗ್‌ ಆರಂಭಿಸಿದ ಸನ್‌ರೈಸರ್ಸ್ ತಂಡಕ್ಕೆ ಆರಂಭದಲ್ಲೇ 4 ಆಘಾತಗಳು ಎದುರಾಗಿವೆ. ಲೀಗ್​ನಲ್ಲಿ ಮೂರನೇ ಪಂದ್ಯವನ್ನಾಡುತ್ತಿರುವಸನ್‌ರೈಸರ್ಸ್ ತಂಡಕ್ಕೆ ಮೊದಲ ಪಂದ್ಯಸಲ್ಲಿ ಸಾಧಾರಣ ಆರಂಭ ಸಿಕ್ಕಿತ್ತು. ಆದರೆ ಎರಡನೇ ಪಂದ್ಯದಲ್ಲಿ ಆರಂಭಿಕರಿಬ್ಬರು ಅಬ್ಬರಿಸಿದ್ದರು. ಹೀಗಾಗಿ ಮೂರನೇ ಪಂದ್ಯದಲ್ಲೂ ಅದನ್ನೇ ನಿರೀಕ್ಷಿಸಲಾಗಿತ್ತು. ಆದರೆ ಮೂರನೇ ಪಂದ್ಯದಲ್ಲಿ…

Read More

ಏಕವಚನದಲ್ಲಿ ಬೈದಿದ್ದ ಸಚಿವ ಎಸ್​​ಎಸ್​ ಮಲ್ಲಿಕಾರ್ಜುರನ್ನು ಕ್ಷಮಿಸಿ ಪ್ರಚಾರಕ್ಕೆ ಬಂದ ಜಮೀರ್

ದಾವಣಗೆರೆ, (ಏಪ್ರಿಲ್ 05): ದಾವಣಗೆರೆ ದಕ್ಷಿಣದಲ್ಲಿ ಉಪ ಚುನಾವಣೆ (Davanagere South By Elction) ಪ್ರಚಾರದ ಕಾವು ಜೋರಾಗುತ್ತಿದೆ. ಈ ನಡುವೆ ಸಮರ್ಥ್ ಪರವಾಗಿ ಜನಾಭಿಪ್ರಾಯ ರೂಪಿಸುವ ನಿಟ್ಟಿನಲ್ಲಿ ಮುಸ್ಲಿಂ ಸಮುದಾಯದ ಕಾಂಗ್ರೆಸ್ ನಾಯಕರ ಮೇಲೆ ಒತ್ತಡವೂ ಹೆಚ್ಚಾಗುತ್ತಿದೆ. ಟಿಕೆಟ್​​ ಸಂಬಂಧ ಸಚಿವ ಜಮೀರ್ ಅಹಮ್ಮದ್ ಖಾನ್ ಹಾಗೂ ಎಸ್​​ಎಸ್​ ಮಲ್ಲಿಕಾರ್ಜುನ ನಡುವೆ ಮುಸುಕಿನ ಗುದ್ದಾಟ ನಡೆದಿತ್ತು. ಕ್ಷೇತ್ರಕ್ಕೆ ಬರುವುದೇ ಬೇಡ ಎಂದು ಸ್ವತಃ ಮಲ್ಲಿಕಾರ್ಜುನ, ಜಮೀರ್ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದರು. ಇದು ಮುಸ್ಲಿಂ ಸಮುದಾಯದ…

Read More

ಚಿತ್ರಮಂದಿರದಲ್ಲಿ ಪ್ರೇಕ್ಷಕರಿಗೆ ಸಾಷ್ಟಾಂಗ ನಮಸ್ಕಾರ ಹಾಕಿದ ಪ್ರಭಾಸ್ ಆಪ್ತ ಗೆಳೆಯ

ಸಿನಿಮಾ (Cinema) ಪ್ರಚಾರದ ವೇಳೆ ನಟರು ನಾನಾ ಅವತಾರಗಳೆತ್ತುತ್ತಾರೆ. ಇದ್ದಕ್ಕಿದ್ದಂತೆ ಪ್ರೇಕ್ಷಕರು ಭಗವಂತರಂತೆ ಕಾಣುತ್ತಾರೆ, ಪ್ರೇಕ್ಷಕರನ್ನು ತಮ್ಮ ಸಿನಿಮಾಗಳತ್ತ ಸೆಳೆಯಲು ಏನೇನೋ ಮಾಡುತ್ತಾರೆ. ಕೆಲವು ಕಣ್ಣೀರು ಸಹ ಹಾಕಿದ್ದುಂಟು. ಇದೀಗ ತೆಲುಗಿನ ಖ್ಯಾತ ನಟರೊಬ್ಬರು ಚಿತ್ರಮಂದಿರದಲ್ಲಿ ಪ್ರೇಕ್ಷಕರಿಗೆ ಸಾಷ್ಟಾಂಗ ನಮಸ್ಕಾರ ಹಾಕಿದ್ದಾರೆ. ನಟನ ಈ ವರ್ತನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದು, ನಾನಾ ರೀತಿಯ ಕಮೆಂಟ್​​ಗಳು ಹರಿದು ಬರುತ್ತಿವೆ. ಪ್ರಭಾಸ್ ಅವರ ಆಪ್ತ ಗೆಳೆಯರೂ ಆಗಿರುವ ನಟ ಶರವಾನಂದ ಅವರು ‘ಬೈಕರ್’ ಹೆಸರಿನ…

Read More

KSOU VC Recruitment 2026: ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು (KSOU) 2026ನೇ ಸಾಲಿನ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಪ್ರತಿಷ್ಠಿತ ಕುಲಪತಿ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಮೈಸೂರಿನಲ್ಲಿ ಕಾರ್ಯನಿರ್ವಹಿಸಲು ಆಸಕ್ತಿ ಹೊಂದಿರುವ ಮತ್ತು ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಅನುಭವವಿರುವ ಶಿಕ್ಷಣ ತಜ್ಞರಿಗೆ ಇದೊಂದು ಅತ್ಯುತ್ತಮ ಅವಕಾಶವಾಗಿದೆ. ಈ ನೇಮಕಾತಿಯು ಕರ್ನಾಟಕ ಸರ್ಕಾರದ ಮಾನದಂಡಗಳ ಅನ್ವಯ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ಮತ್ತು ಸೌಲಭ್ಯಗಳನ್ನು ನೀಡಲಾಗುತ್ತದೆ. ಅರ್ಹತೆ ಮತ್ತು ಅರ್ಜಿ ಸಲ್ಲಿಕೆಯ ಪ್ರಕ್ರಿಯೆ: ಈ ಉನ್ನತ…

Read More