ಭಾರೀ ವಿರೋಧ ಬೆನ್ನಲ್ಲೇ ಎಚ್ಚೆತ್ತ ಸಚಿವರು: ಸರ್ಕಾರಿ ಬಸ್​ಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತು ತೆರವಿಗೆ ಸೂಚನೆ – Kannada News | Tobacco Advertisements ongovernment Buses and Stations: Minister RamalingaReddy Orders Removal

ತಂಬಾಕು ಉತ್ಪನ್ನಗಳ ಜಾಹೀರಾತುImage Credit source: newindianexpress.com

ಬೆಂಗಳೂರು, ಜನವರಿ 30: ಸರ್ಕಾರಿ ಬಸ್​ಗಳ ಮೇಲೆ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು (Tobacco Advertisements) ಮುದ್ರಿಸುವ ಮೂಲಕ ಸಾರಿಗೆ ಸಂಸ್ಥೆಗಳು ಆದಾಯದ ವ್ಯಾಮೋಹಕ್ಕೆ ಒಳಗಾಗಿವೆ ಎಂಬ ಮಾತುಗಳು ಕೇಳಿಬಂದಿದ್ದವು. ಪ್ರತಿಯೊಂದು ಸರ್ಕಾರಿ ಬಸ್​​ಗಳ ಮೇಲೆ ತಂಬಾಕು ಉತ್ಪನ್ನಗಳ ಜಾಹೀರಾತುಗಳು ರಾರಾಜಿಸುತ್ತಿದ್ದವು. ಈ ಬಗ್ಗೆ ಕನ್ನಡ ಸಂಘಟನೆಗಳು ಸೇರಿದಂತೆ ಜನರು ಕೂಡ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದರು. ಅದರ ಬೆನ್ನಲ್ಲೇ ಇದೀಗ ಸರ್ಕಾರಿ ಬಸ್​ಗಳ ಮೇಲಿನ ಜಾಹೀರಾತು ತೆಗೆಯಲು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ನಾಲ್ಕು ನಿಗಮಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಆದಾಯ ಹೆಚ್ಚಿಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಸಾರಿಗೆ ಬಸ್‌ಗಳ ಮೇಲೂ ಜಾಹೀರಾತುಗಳನ್ನು ಅಳವಡಿಸಲಾಗಿತ್ತು. ಅವುಗಳಲ್ಲಿ ಕೆಲವು ತಂಬಾಕು ಉತ್ಪನ್ನಗಳಿಗೆ ಸಂಬಂಧಿಸಿದ ಜಾಹೀರಾತುಗಳಾಗಿದ್ದವು. ಇದಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಪರಿಣಾಮವಾಗಿ, ಹಲವು ಕಡೆಗಳಲ್ಲಿ ಬಸ್‌ಗಳ ಮೇಲಿದ್ದ ಜಾಹೀರಾತುಗಳನ್ನು ಜನರು ಕಿತ್ತು ಹಾಕಿದ್ದ ಘಟನೆಗಳು ನಡೆದಿದ್ದವು.

ಟಿವಿ9 ವರದಿ ಬೆನ್ನಲ್ಲೇ ಅಧಿಕಾರಿಗಳಿಗೆ ರಾಮಲಿಂಗಾರೆಡ್ಡಿ ಸೂಚನೆ

ಈ ಬಗ್ಗೆ ಟಿವಿ9 ಕೂಡ ಸುದ್ದಿ ಬಿತ್ತರಿಸಿತ್ತು. ವರದಿ ಬೆನ್ನಲ್ಲೇ ಎಚ್ಚೆತ್ತ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ 4 ನಿಗಮದ ಎಂಡಿಗಳಿಗೆ ತಂಬಾಕು ಉತ್ಪನ್ನಗಳ ಜಾಹೀರಾತು ಪ್ರಚಾರ ಮಾಡದಂತೆ ಸೂಚನೆ ನೀಡಿದ್ದಾರೆ. ಜೊತೆಗೆ ಸಾರಿಗೆ ನಿಗಮದ ಬಸ್​ಗಳಲ್ಲಿ ಹಾಗೂ ಬಸ್​ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತು ಕೂಡಲೇ ತೆಗೆದುಹಾಕುವಂತೆ ಸೂಚಿಸಿದ್ದಾರೆ.

ಆದೇಶದಲ್ಲೇನಿದೆ?

ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ ಸಂಸ್ಥೆಯ ಬಸ್​​ಗಳಲ್ಲಿ ಮತ್ತು ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ ಪರೋಕ್ಷವಾದ ಯಾವುದೇ ಜಾಹೀರಾತುಗಳನ್ನು ಇನ್ನು ಮುಂದೆ ಪ್ರಚಾರ ಮಾಡದಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚಿಸಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಸಾರಿಗೆ ಸಂಸ್ಥೆಗೂ ಆದಾಯದ ವ್ಯಾಮೋಹ: ಕೆಟ್ಟಿತು ಸರ್ಕಾರಿ ಬಸ್​​ಗಳ ಅಂದ

ಈಗಾಗಲೇ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವಂತಹ ಜಾಹೀರಾತುಗಳನ್ನು ಬಸ್​​​ಗಳಲ್ಲಿ, ಬಸ್ ನಿಲ್ದಾಣಗಳಲ್ಲಿ ಅಳವಡಿಸಿದ್ದರೆ ಅದನ್ನು ತೆಗೆಯಲು ಒಂದು ನಿರ್ದಿಷ್ಟ ಸಮಯವನ್ನು ನಿಗದಿಪಡಿಸಿ, ಆ ನಿಗದಿತ ಸಮಯದೊಳಗೆ ಸದರಿ ಜಾಹೀರಾತುಗಳನ್ನು ತೆಗೆದು ಹಾಕುವಂತೆ ಸಂಬಂಧಪಟ್ಟವರಿಗೆ ಕಟ್ಟುನಿಟ್ಟಾಗಿ ನಿರ್ದೇಶನ ನೀಡುವಂತೆ ಸೂಚಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಸಿನಿಮಾ, ಟಿವಿ ಕ್ಷೇತ್ರದೊಟ್ಟಿಗೆ ಜೆಸಿ ರಾಯ್​ ಅವರಿಗಿದ್ದ ಬಂಧ ಎಂಥದ್ದು? – Kannada News | JC Roy has close connection with Tv and Movie industry

ಕಾನ್ಫಿಡೆಂಟ್ ಗ್ರೂಪ್​​ ರಿಯಲ್ ಎಸ್ಟೇಟ್ ಸಂಸ್ಥೆಯ ಮಾಲೀಕ ಜೆಸಿ ರಾಯ್ (JC Roy) ಇಂದು (ಜನವರಿ 30) ನಿಧನ ಹೊಂದಿದ್ದಾರೆ. ರಾಯ್ ಅವರು, ಪದೇ ಪದೇ ಆಗುತ್ತಿದ್ದ ಐಟಿ ದಾಳಿಗಳಿಂದ ಬೇಸತ್ತು ಅಧಿಕಾರಿಗಳ ಎದುರೇ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಬೆಂಗಳೂರಿನ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದ ಜೆಸಿ ರಾಯ್ ಅವರಿಗೆ ಸಿನಿಮಾ ಮತ್ತು ಟಿವಿ ಜಗತ್ತಿನೊಂದಿಗೆ ಹತ್ತಿರದ ಬಂಧ ಇತ್ತು.

ರಾಯ್ ಅವರು ಉದ್ಯಮಿ ಮಾತ್ರವೇ ಅಲ್ಲದೆ ಸಿನಿಮಾ ನಿರ್ಮಾಪಕರೂ ಆಗಿದ್ದರು. ಮಲಯಾಳಂನಲ್ಲಿ ಮೋಹನ್​ನಾಲ್ ನಟನೆಯ ಸೂಪರ್ ಹಿಟ್ ಸಿನಿಮಾ ‘ಕ್ಯಾಸನೋವ’ ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು. ಅವರೇ ಸಂದರ್ಶನವೊಂದರಲ್ಲಿ ಹೇಳಿಕೊಂಡಿರುವಂತೆ ರಾಯ್ ಅವರು 12 ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರಂತೆ.

ಇನ್ನು ಟಿವಿ ಜಗತ್ತಿನೊಂದಿಗೆ ಅವರದ್ದು ಹತ್ತಿರದ ಬಂಧ. ಹಲವಾರು ರಿಯಾಲಿಟಿ ಶೋಗಳಿಗೆ ಅವರು ಪ್ರಮುಖ ಸ್ಪಾನ್ಸರ್ ಆಗಿದ್ದರು. ಬಿಗ್​​ಬಾಸ್ ಕನ್ನಡ 11ನೇ ಸೀಸನ್​​ಗೆ ಮೊದಲ ಬಹುಮಾನವಾದ 50 ಲಕ್ಷ ರೂಪಾಯಿಗಳನ್ನು ರಾಯ್ ಅವರೇ ನೀಡಿದ್ದರು. ಅದಕ್ಕೂ ಮುಂಚೆ ಕಾನ್ಫಿಡೆಂಟ್ ಸ್ಟಾರ್ ಸಿಂಗರ್ ಸಿಂಗಿಂಗ್ ರಿಯಾಲಿಟಿ ಶೋಗೆ ಒಂದು ಕೋಟಿ ರೂಪಾಯಿ ಬಹುಮಾನ ನೀಡಿದ್ದರು. ಮಲಯಾಳಂ ಬಿಗ್​​ಬಾಸ್​​ಗೂ ಸಹ ಸ್ಪಾನ್ಸರ್ ಆಗಿದ್ದರು ರಾಯ್. ದಕ್ಷಿಣ ಭಾರತದ ಸಿನಿಮಾಗಳಿಗೆ ನೀಡುವ ಪ್ರತಿಷ್ಠಿತ ಪ್ರಶಸ್ತಿಯಾದ ಸೈಮಾಕ್ಕೆ ಎಂಟು ವರ್ಷಗಳ ಕಾಲ ಮುಖ್ಯ ಸ್ಪಾನ್ಸರ್ ಆಗಿದ್ದಿದ್ದು ರಾಯ್ ಅವರ ಕಾನ್ಫಿಡೆಂಟ್ ಗ್ರೂಪ್.

ಇದನ್ನೂ ಓದಿ:ಸಾವಿರಾರು ಕೋಟಿ ಒಡೆಯ ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಜೀವನದಲ್ಲಿ ಕಾನ್ಫಿಡೆಂಟ್ ಕಳೆದುಕೊಂಡಿದ್ಯಾಕೆ?

ರಾಯ್ ಅವರು ರಿಯಾಲಿಟಿ ಶೋಗಳಿಗಷ್ಟೆ ಸ್ಪಾನ್ಸರ್ ಮಾಡುತ್ತಿದ್ದಿದ್ದಕ್ಕೂ ಕಾರಣವಿತ್ತು. ಅವರೇ ಹೇಳಿಕೊಂಡಿರುವಂತೆ, ‘ಧಾರಾವಾಹಿಗೆ ನಾನು ಪ್ರಾಯೋಜಕತ್ವ ನೀಡುತ್ತಿರಲಿಲ್ಲ, ಧಾರಾವಾಹಿಗಳು ಒಳ್ಳೆಯವೇ ಆದರೆ ನಮ್ಮದು ರಿಯಾಲಿಟಿ (ರಿಯಲ್ ಎಸ್ಟೇಟ್) ಕಂಪೆನಿ, ನನ್ನದು ರಿಯಲ್ ಕಂಪೆನಿ ಹಾಗಾಗಿ ನಾನು ರಿಯಾಲಿಟಿ ಶೋಗಳಿಗೆ ಸ್ಪಾನ್ಸರ್ ಮಾಡುತ್ತಿದ್ದೆ. ಅದರಿಂದ ನಿಜವಾದ ಪ್ರತಿಭೆ ಇದ್ದವರಿಗೆ ಸಹಾಯ ಮಾಡಿದ ತೃಪ್ತಿ ನನಗೆ ಸಿಗುತ್ತಿತ್ತು, ಪ್ರತಿಭಾವಂತರಿಗೆ ಬೆಂಬಲ ನೀಡುವುದು ನನ್ನ ಉದ್ದೇಶವಾಗಿತ್ತು’ ಎಂದಿದ್ದರು ರಾಯ್.

‘ಹಲವಾರು ರಿಯಾಲಿಟಿ ಶೋಗಳಿಗೆ ಸ್ಪಾನ್ಸರ್ ನೀಡಿದ್ದೇನೆ. ಆದರೆ ಒಮ್ಮೆ ಕೂಡ ಬಹುಮಾನದ ಮೊತ್ತ ನೀಡುವುದನ್ನು ನಾನು ತಡ ಮಾಡಿಲ್ಲ. ಹೇಳಿದ ಹಣವನ್ನು, ಹೇಳಿದ ದಿನದಂದು ನೀಡಿದ್ದೇನೆ. ಒಂದೇ ಒಂದು ಕಪ್ಪು ಚುಕ್ಕೆಯೂ ನನ್ನ ಮೇಲೆ ಇಲ್ಲ’ ಎಂದು ರಾಯ್ ಹೇಳಿಕೊಂಡಿದ್ದರು. ಸಿನಿಮಾಗಳ ಬಗ್ಗೆ, ಕಲೆಯ ಬಗ್ಗೆ ಆಸಕ್ತಿ ಹೊಂದಿದ್ದ ರಾಯ್ ಅವರು ಮ್ಯಾಜಿಕ್ ಟ್ರಿಕ್​​ಗಳನ್ನು ಸಹ ಮಾಡುತ್ತಿದ್ದರಂತೆ. ಕೆಲವು ಶೋಗಳನ್ನು ಸಹ ಬಹಳ ಮುಂಚೆ ನೀಡಿದ್ದರಂತೆ. ಆದರೆ ಮದುವೆಯ ಬಳಿಕ ಅದೆಲ್ಲವನ್ನೂ ಬಿಟ್ಟೆ ಎಂದಿದ್ದರು ರಾಯ್.

ರಾಯ್ ಅವರು ಕನ್ನಡ ಹಾಗೂ ಮಲಯಾಳಂ ಚಿತ್ರರಂಗದ ಹಲವರೊಟ್ಟಿಗೆ ಆತ್ಮೀಯ ಬಂಧ ಹೊಂದಿದ್ದರು. ಕನ್ನಡದ ಸ್ಟಾರ್ ನಟ ದಿವಂಗತ ಪುನೀತ್ ರಾಜ್​​ಕುಮಾರ್ ಅವರ ಒಳ್ಳೆಯ ಸ್ನೇಹಿತರಾಗಿದ್ದರು. ಕಿಚ್ಚ ಸುದೀಪ್ ಅವರ ಆಪ್ತರೂ ಸಹ ಆಗಿದ್ದರು ರಾಯ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಎನ್​ಸಿಪಿ ಮತ್ತೆ ವಿಲೀನವಾಗುತ್ತಾ? ಅಜಿತ್ ಪವಾರ್ ಕೊನೆಯ ಆಸೆಯ ಬಗ್ಗೆ ಶುರುವಾಯ್ತು ಚರ್ಚೆ – Kannada News | NCP Reunion Announcement Buzz Grows louder after Ajit Pawar Death

ಮುಂಬೈ, ಜನವರಿ 30: ಬುಧವಾರ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಅವರ ದಿಢೀರ್ ಮರಣದ ನಂತರ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) 2 ಬಣಗಳ ವಿಲೀನದ ಬಗ್ಗೆ ಬಿಸಿಬಿಸಿ ಚರ್ಚೆ ಶುರುವಾಗಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಎರಡೂ ಬಣಗಳು ಮತ್ತೆ ಒಂದಾಗಲಿವೆ ಮತ್ತು ಸ್ಥಳೀಯ ಸಂಸ್ಥೆ ಚುನಾವಣೆಯ ನಂತರ ಫೆಬ್ರವರಿ ಎರಡನೇ ವಾರದಲ್ಲಿ ಅಧಿಕೃತ ಘೋಷಣೆ ಮಾಡುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

ಎರಡೂ ಬಣಗಳ ಹಿರಿಯ ನಾಯಕರ ಪ್ರಕಾರ, ಬುಧವಾರ ವಿಮಾನ ಅಪಘಾತದಲ್ಲಿ ನಿಧನರಾದ ಅಜಿತ್ ಪವಾರ್ ವಿಲೀನಕ್ಕೆ ದಾರಿ ಮಾಡಿಕೊಟ್ಟರು ಮತ್ತು ಡಿಸೆಂಬರ್ ಮತ್ತು ಜನವರಿಯಲ್ಲಿ ಚಿಕ್ಕಪ್ಪ ಶರದ್ ಪವಾರ್ ಅವರೊಂದಿಗೆ ಹಲವಾರು ಸಭೆಗಳನ್ನು ನಡೆಸಿದ್ದರು. ಸ್ಥಳೀಯ ಸಂಸ್ಥೆ ಚುನಾವಣೆಯ ನಂತರ ಜಂಟಿ ಪತ್ರಿಕಾಗೋಷ್ಠಿಯ ಮೂಲಕ ಇಬ್ಬರು ನಾಯಕರು ವಿಲೀನವನ್ನು ಅಧಿಕೃತವಾಗಿ ಘೋಷಿಸಲು ನಿರ್ಧರಿಸಲಾಗಿತ್ತು.

ಅಜಿತ್ ಪವಾರ್ ಅವರ ಎನ್‌ಸಿಪಿ, ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೇತೃತ್ವದ ಬಿಜೆಪಿ ಮತ್ತು ಮಹಾರಾಷ್ಟ್ರ ಸರ್ಕಾರದಲ್ಲಿ ಏಕನಾಥ್ ಶಿಂಧೆ ಅವರ ಶಿವಸೇನಾ ಜೊತೆ ಮೈತ್ರಿ ಮಾಡಿಕೊಂಡಿದೆ. ಅವರ ಚಿಕ್ಕಪ್ಪ ಶರದ್ ಪವಾರ್ ಅವರ ಎನ್‌ಸಿಪಿ ಕಾಂಗ್ರೆಸ್ ಮತ್ತು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣವು ವಿರೋಧ ಪಕ್ಷದಲ್ಲಿದೆ.

ಇದನ್ನೂ ಓದಿ: ಅಜಿತ್ ಪವಾರ್ ಇದ್ದ ವಿಮಾನ ಅಪಘಾತ: ಕೊನೇ ಸಮಯದಲ್ಲಿ ಪೈಲಟ್ ಬದಲಾವಣೆ ಮಾಡಲಾಗಿತ್ತೇ?

ಇತ್ತೀಚಿನ ನಾಗರಿಕ ಚುನಾವಣೆಯ ಸಮಯದಲ್ಲಿ ಎರಡೂ ಬಣಗಳು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದಾಗ, ಅಜಿತ್ ಪವಾರ್ ತಮ್ಮ ಪಕ್ಷವನ್ನು ಎನ್‌ಸಿಪಿ (ಎಸ್‌ಪಿ) ಯೊಂದಿಗೆ ವಿಲೀನಗೊಳಿಸಲು ಉದ್ದೇಶಿಸಿರುವುದಾಗಿ ತಿಳಿಸಿದ್ದರು ಎಂದು ಮೂಲಗಳು ತಿಳಿಸಿವೆ. ಜನವರಿ 15ರಂದು ಪುಣೆ ಮತ್ತು ಪಿಂಪ್ರಿ ಚಿಂಚ್‌ವಾಡ್‌ನಲ್ಲಿ ನಡೆದ ನಾಗರಿಕ ಚುನಾವಣೆಗಳಲ್ಲಿ ಒಟ್ಟಾಗಿ ಸ್ಪರ್ಧಿಸಿದ ನಂತರ, ಮುಂದಿನ ತಿಂಗಳು ನಡೆಯಲಿರುವ ಜಿಲ್ಲಾ ಪರಿಷತ್ ಚುನಾವಣೆಯಲ್ಲೂ ಮೈತ್ರಿ ಮುಂದುವರಿಸಲು ಎರಡೂ ಬಣಗಳು ನಿರ್ಧರಿಸಿದವು.

ಇದನ್ನೂ ಓದಿ: ಅಜಿತ್ ಪವಾರ್ ಸಾವಿನಲ್ಲಿ ಷಡ್ಯಂತ್ರವಿಲ್ಲ, ಅದೊಂದು ಅಪಘಾತ; ಶರದ್ ಪವಾರ್ ಮೊದಲ ಪ್ರತಿಕ್ರಿಯೆ

“ಎನ್‌ಸಿಪಿ ಬಣಗಳ ವಿಲೀನದ ಬಗ್ಗೆ ನಾವು ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳುತ್ತೇವೆ. ನಾವು ಸಿಎಂ ಅವರನ್ನು ಭೇಟಿಯಾದೆವು. ಅಜಿತ್ ಪವಾರ್ ಅವರ ಕುಟುಂಬದೊಂದಿಗೆ ಚರ್ಚಿಸುತ್ತೇವೆ” ಎಂದು ಈ ಪ್ರಫುಲ್ ಪಟೇಲ್ ಹೇಳಿದ್ದಾರೆ. ಹಾಗೇ, ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ನಾಳೆ ಎಲ್ಲಾ ಎನ್‌ಸಿಪಿ ಶಾಸಕರ ಸಭೆ ಕರೆಯಲಾಗಿದೆ. ಬಹುತೇಕ ಎಲ್ಲರೂ ಸುನೇತ್ರಾ ಪವಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆ ಮಾಡಬೇಕೆಂದು ಬಯಸಿದ್ದಾರೆ ಎನ್ನಲಾಗಿದೆ. ಉಪ ಮುಖ್ಯಮಂತ್ರಿ ಹುದ್ದೆಗೂ ಸುನೇತ್ರಾ ಪವಾರ್ ಅವರ ಹೆಸರು ದೃಢೀಕರಿಸಲ್ಪಡುವ ಸಾಧ್ಯತೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

WPL 2026: ಮುಂಬೈ ವಿರುದ್ಧ ಟಾಸ್ ಗೆದ್ದು ಅಚ್ಚರಿಯ ನಿರ್ಧಾರ ತೆಗೆದುಕೊಂಡ ಗುಜರಾತ್ – Kannada News | WPL: MI vs GG Do or Die! Mumbai Indians, Gujarat Giants Battle for Eliminator Spot

ಮಹಿಳಾ ಪ್ರೀಮಿಯರ್ ಲೀಗ್‌ನ (Women’s Premier League) 19 ನೇ ಲೀಗ್ ಪಂದ್ಯವು ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಜೈಂಟ್ಸ್ (MI vs GG) ನಡುವೆ ವಡೋದರಾದ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಗುಜರಾತ್ ತಂಡ ಗೆದ್ದರೆ, ಅದು ಎಲಿಮಿನೇಟರ್ ಪಂದ್ಯದಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳುತ್ತದೆ. ಇತ್ತ ಮುಂಬೈ ಇಂಡಿಯನ್ಸ್‌ಗೂ ಸಹ, ಈ ಪಂದ್ಯವು ಮಾಡು ಇಲ್ಲವೇ ಮಡಿ ಪರಿಸ್ಥಿತಿಯಾಗಿದೆ. ಹೀಗಾಗಿ ಈ ಪಂದ್ಯದಲ್ಲಿ ಮುಂಬೈ ಸೋಲನ್ನು ಎದುರಿಸಿದರೆ, ಟೂರ್ನಮೆಂಟ್‌ನಲ್ಲಿ ಅವರ ಪ್ರಯಾಣವು ಲೀಗ್ ಹಂತದಲ್ಲಿ ಕೊನೆಗೊಳ್ಳಬಹುದು.

ಟಾಸ್ ಗೆದ್ದ ಗುಜರಾತ್

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಜೈಂಟ್ಸ್ ನಾಯಕಿ ಆಶ್ಲೇ ಗಾರ್ಡ್ನರ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಈ ಆವೃತ್ತಿಯಲ್ಲಿ ಟಾಸ್ ಗೆದ್ದ ನಾಯಕಿಯೊಬ್ಬರು ಮೊದಲು ಬ್ಯಾಟಿಂಗ್ ಆಯ್ದುಕೊಂಡಿರುವುದು ಇದೇ ಮೊದಲು. ಹೀಗಾಗಿ ವಿಭಿನ್ನ ನಿರ್ಧಾರ ತೆಗೆದುಕೊಂಡಿರುವ ಗುಜರಾತ್ ಯಾವ ರೀತಿಯ ಪ್ರದರ್ಶನ ನೀಡುತ್ತದೆ ಎಂಬುದನ್ನು ಕಾದುನೋಡಬೇಕಿದೆ. ಟಾಸ್ ಜೊತೆಗೆ ಎರಡೂ ತಂಡಗಳ ಆಡುವ ಹನ್ನೊಂದರ ಬಳಗ ಹೊರಬಿದಿದ್ದು, ಎರಡೂ ತಂಡಗಳಲ್ಲೂ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ.

ಉಭಯ ತಂಡಗಳ ಪ್ರದರ್ಶನ

ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತನ್ನ ಆರಂಭಿಕ ಪಂದ್ಯದಲ್ಲಿ ಸೋತ ನಂತರ ಸತತ ಎರಡು ಗೆಲುವುಗಳೊಂದಿಗೆ ಗಮನಾರ್ಹ ಪುನರಾಗಮನ ಮಾಡಿದರು. ಇದರ ನಂತರ, ಮುಂದಿನ ಮೂರು ಪಂದ್ಯಗಳಲ್ಲಿ ಸತತ ಸೋಲುಗಳನ್ನು ಅನುಭವಿಸಿತು. ಹಿಂದಿನ ಪಂದ್ಯದಲ್ಲಿ ಆರ್‌ಸಿಬಿ ಮಹಿಳಾ ತಂಡವನ್ನು 15 ರನ್‌ಗಳಿಂದ ಸೋಲಿಸಿದ ಮುಂಬೈ ಎಲಿಮಿನೇಟರ್‌ನಲ್ಲಿ ತನ್ನ ಸ್ಥಾನ ಪಡೆಯುವ ಭರವಸೆಯನ್ನು ಜೀವಂತವಾಗಿರಿಸಿಕೊಂಡಿದೆ.

ಇತ್ತ ಆಶ್ಲೇ ಗಾರ್ಡ್ನರ್ ನಾಯಕತ್ವದಲ್ಲಿ, ಮಹಿಳಾ ಪ್ರೀಮಿಯರ್ ಲೀಗ್‌ನ ನಾಲ್ಕನೇ ಸೀಸನ್‌ನಲ್ಲಿ ಆಡುತ್ತಿರುವ ಗುಜರಾತ್ ಜೈಂಟ್ಸ್, ಇಲ್ಲಿಯವರೆಗೆ ಮೈದಾನದಲ್ಲಿ ಉತ್ತಮ ಪ್ರದರ್ಶನ ನೀಡಿದೆ. ಆಡಿರುವ ಏಳು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆದ್ದು ಮೂರರಲ್ಲಿ ಮಾತ್ರ ಸೋತಿದೆ. ಈ ಪಂದ್ಯದಲ್ಲಿ ಗೆಲುವು ಎಲಿಮಿನೇಟರ್‌ನಲ್ಲಿ ಗುಜರಾತ್ ಜೈಂಟ್ಸ್‌ನ ಸ್ಥಾನವನ್ನು ಖಚಿತಪಡಿಸುತ್ತದೆ.

ಉಭಯ ತಂಡಗಳು

ಗುಜರಾತ್ ಜೈಂಟ್ಸ್: ಬೆತ್ ಮೂನಿ (ವಿಕೆಟ್ ಕೀಪರ್), ಸೋಫಿ ಡಿವೈನ್, ಅನುಷ್ಕಾ ಶರ್ಮಾ, ಆಶ್ಲೀಗ್ ಗಾರ್ಡನರ್ (ನಾಯಕಿ), ಜಾರ್ಜಿಯಾ ವಾರೆಹಮ್, ಭಾರ್ತಿ ಫುಲ್ಮಾಲಿ, ಕನಿಕಾ ಅಹುಜಾ, ಕಶ್ವಿ ಗೌತಮ್, ತನುಜಾ ಕನ್ವರ್, ರೇಣುಕಾ ಸಿಂಗ್ ಠಾಕೂರ್, ರಾಜೇಶ್ವರಿ ಗಾಯಕ್ವಾಡ್.

ಮುಂಬೈ ಇಂಡಿಯನ್ಸ್: ಹೇಲಿ ಮ್ಯಾಥ್ಯೂಸ್, ಸಜೀವನಾ ಸಜ್ನಾ, ನ್ಯಾಟ್ ಶೀವರ್ ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಅಮನ್‌ಜೋತ್ ಕೌರ್, ಅಮೆಲಿಯಾ ಕೆರ್, ರಾಹಿಲಾ ಫಿರ್ದೌಸ್ (ವಿಕೆಟ್ ಕೀಪರ್), ಸಂಸ್ಕೃತಿ ಗುಪ್ತಾ, ವೈಷ್ಣವಿ ಶರ್ಮಾ, ಶಬ್ನಿಮ್ ಇಸ್ಮಾಯಿಲ್, ಪೂನಂ ಖೆಮ್ನಾರ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Weekly Love Horoscope: 2026ರ ಫೆಬ್ರವರಿ ಮೊದಲ ವಾರದ ಪ್ರೇಮ ಭವಿಷ್ಯ ಯಾವ ರಾಶಿಗೆ ಹೇಗಿದೆ? – Kannada News | Weekly Love Horoscope From 2026 February 1st to 7th: Relationship Forecast for All Zodiac Signs in Kannada

ಫೆಬ್ರವರಿ ಮೊದಲ ವಾರದ ಪ್ರೇಮ ಜಾತಕ – ಸಾಂದರ್ಭಿಕ ಚಿತ್ರ

ಫೆಬ್ರವರಿ 01ರಿಂದ ಫೆಬ್ರವರಿ 07ರ ವರೆಗೆ ಮೊದಲ ವಾರವಾಗಿದೆ. ಶುಕ್ರನು ಉಚ್ಚಗಾಮಿಯಾದ ಕಾರಣ ಶುಭ ಫಲವನ್ನು ನಿರೀಕ್ಷಿಸಬಹುದು. ಜನ್ಮದಲ್ಲಿ ಉತ್ತಮ ಸ್ಥಾನದಲ್ಲಿ ಶುಕ್ರನಿದ್ದರೆ, ಶುಕ್ರದಶೆ ಶುಭದಾಯಕ. ಪ್ರೇಮದಿಂದ ಶುಭವಾಗಲಿ.

ಮೇಷ:
ಈ ವಾರ ಸಂಗಾತಿಯೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಉಂಟಾಗಬಹುದು. ತಾಳ್ಮೆಯಿಂದ ವರ್ತಿಸುವುದು ಒಳಿತು. ಪ್ರೇಮಿಗಳಿಗೆ ಮನೆಯವರಿಂದ ಬೆಂಬಲ ಸಿಗುವ ಸಾಧ್ಯತೆಯಿದೆ. ಹೊಸ ಸಂಬಂಧ ಬೆಳೆಸುವ ಮುನ್ನ ಯೋಚಿಸಿ ನಿರ್ಧಾರ ತೆಗೆದುಕೊಳ್ಳಿ.


ವೃಷಭ:
ಪ್ರೇಮ ಜೀವನದಲ್ಲಿ ಮಧುರತೆ ಇರಲಿದೆ. ಸಂಗಾತಿಯೊಂದಿಗೆ ದೂರದ ಪ್ರಯಾಣ ಕೈಗೊಳ್ಳುವ ಸಾಧ್ಯತೆಯಿದೆ. ಪರಸ್ಪರ ಗೌರವ ನೀಡುವುದರಿಂದ ನಿಮ್ಮ ಬಾಂಧವ್ಯ ಮತ್ತಷ್ಟು ಗಟ್ಟಿಯಾಗಲಿದೆ. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿ ಬರಲಿದೆ.


ಮಿಥುನ:
ಹಳೆಯ ಪ್ರೇಮ ಪ್ರಕರಣಗಳು ಮತ್ತೆ ಮುನ್ನೆಲೆಗೆ ಬರಬಹುದು. ಹಿಂದಿನ ಕಹಿ ನೆನಪುಗಳನ್ನು ಮರೆತು ಹೊಸ ಆರಂಭಕ್ಕೆ ಇದು ಸೂಕ್ತ ಸಮಯ. ಸಂಗಾತಿಯ ಅಗತ್ಯತೆಗಳಿಗೆ ಸ್ಪಂದಿಸಿ, ಅವರ ಭಾವನೆಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ.


ಕರ್ಕಾಟಕ:
ಕುಟುಂಬದ ಸದಸ್ಯರ ಸಮ್ಮತಿಯೊಂದಿಗೆ ನಿಮ್ಮ ಪ್ರೇಮ ವಿವಾಹಕ್ಕೆ ಮುದ್ರೆ ಬೀಳುವ ಸಂಭವವಿದೆ. ನಿಮ್ಮ ಸಂಗಾತಿಯು ನಿಮಗೆ ಆರ್ಥಿಕವಾಗಿ ಅಥವಾ ವೃತ್ತಿಪರವಾಗಿ ಸಹಾಯ ಮಾಡಲಿದ್ದಾರೆ. ಪ್ರೀತಿಯಲ್ಲಿ ಪ್ರಾಮಾಣಿಕತೆ ಇರಲಿ.


ಸಿಂಹ:
ನಿಮ್ಮ ಅಹಂಕಾರ ಪ್ರೇಮ ಸಂಬಂಧದಲ್ಲಿ ಬಿರುಕು ಮೂಡಿಸಬಹುದು, ಎಚ್ಚರಿಕೆ ಇರಲಿ. ಪ್ರೀತಿಯ ವಿಷಯದಲ್ಲಿ ಹಠ ಮಾಡಬೇಡಿ. ಸಂಗಾತಿಗೆ ಅನಿರೀಕ್ಷಿತ ಉಡುಗೊರೆ ನೀಡುವ ಮೂಲಕ ಅವರ ಮನಸ್ಸನ್ನು ಗೆಲ್ಲಲು ಪ್ರಯತ್ನಿಸಿ.


ಕನ್ಯಾ:
ಈ ವಾರ ನೀವು ಪ್ರೇಮ ಜೀವನದಲ್ಲಿ ತುಂಬಾ ಸಂತೋಷವಾಗಿರುವಿರಿ. ಸಂಗಾತಿಯೊಂದಿಗೆ ಗುಣಮಟ್ಟದ ಸಮಯ ಕಳೆಯುವಿರಿ. ಪರಸ್ಪರರ ಮೇಲಿನ ನಂಬಿಕೆ ಹೆಚ್ಚಾಗಲಿದೆ. ಒಂಟಿಯಾಗಿರುವವರಿಗೆ ಹೊಸ ವ್ಯಕ್ತಿಯ ಪರಿಚಯವಾಗುವ ಸಾಧ್ಯತೆಯಿದೆ.


ತುಲಾ:
ಪ್ರೀತಿಪಾತ್ರರಿಂದ ವಿಶೇಷ ಉಡುಗೊರೆ ಪಡೆಯುವಿರಿ. ಸಂವಹನದಲ್ಲಿ ಸ್ಪಷ್ಟತೆ ಇರಲಿ, ಇಲ್ಲದಿದ್ದರೆ ತಪ್ಪು ತಿಳುವಳಿಕೆ ಉಂಟಾಗಬಹುದು. ವಾರಾಂತ್ಯದಲ್ಲಿ ಸಂಗಾತಿಯೊಂದಿಗೆ ಸುಂದರವಾದ ಹೋಟೆಲ್‌ಗೆ ಭೇಟಿ ನೀಡುವ ಯೋಜನೆ ರೂಪಿಸುವಿರಿ.


ವೃಶ್ಚಿಕ:
ಮಾತಿನ ಮೇಲೆ ಹತೋಟಿ ಇರಲಿ. ನಿಮ್ಮ ಕಟು ಮಾತುಗಳು ಸಂಗಾತಿಗೆ ನೋವುಂಟು ಮಾಡಬಹುದು. ಸಂಬಂಧವನ್ನು ಉಳಿಸಿಕೊಳ್ಳಲು ಮೌನವೇ ಕೆಲವೊಮ್ಮೆ ಪರಿಹಾರ. ಪ್ರೀತಿಯಲ್ಲಿ ತಾಳ್ಮೆ ಮತ್ತು ಸಹನೆ ಈ ವಾರ ಬಹಳ ಮುಖ್ಯ.

​ಧನು:
ಹೊಸ ಪ್ರೇಮ ಪ್ರಸ್ತಾಪಗಳು ಬರಬಹುದು. ಈಗಾಗಲೇ ಪ್ರೀತಿಸುತ್ತಿರುವವರಿಗೆ ಈ ವಾರ ರೋಮ್ಯಾಂಟಿಕ್ ಆಗಿರಲಿದೆ. ನಿಮ್ಮ ಸಂಗಾತಿಯ ಯಶಸ್ಸನ್ನು ಸಂಭ್ರಮಿಸುವಿರಿ. ಸಂಬಂಧದಲ್ಲಿ ಹೆಚ್ಚಿನ ಪಾರದರ್ಶಕತೆ ಕಾಯ್ದುಕೊಳ್ಳುವುದು ಈ ವಾರ ಒಳ್ಳೆಯದು.

ಮಕರ:
ವೃತ್ತಿಜೀವನದ ಒತ್ತಡದ ನಡುವೆಯೂ ಸಂಗಾತಿಗಾಗಿ ಸಮಯ ಮೀಸಲಿಡುವಿರಿ. ನಿಮ್ಮ ಬದ್ಧತೆಯು ಸಂಗಾತಿಗೆ ನಿಮ್ಮ ಮೇಲಿನ ಗೌರವವನ್ನು ಹೆಚ್ಚಿಸುತ್ತದೆ. ಪ್ರೇಮಿಗಳ ನಡುವೆ ಇದ್ದ ಗೊಂದಲಗಳು ಬಗೆಹರಿದು ಮನಸ್ಸು ನಿರಾಳವಾಗಲಿದೆ.


ಕುಂಭ:
ದೂರದೂರಿನಲ್ಲಿರುವ ಸಂಗಾತಿಯಿಂದ ಶುಭ ಸುದ್ದಿ ಕೇಳುವಿರಿ. ನಿಮ್ಮ ಪ್ರೇಮ ಜೀವನಕ್ಕೆ ಸಂಬಂಧಿಕರ ಬೆಂಬಲ ಸಿಗಲಿದೆ. ಪ್ರೀತಿಯ ವಿಷಯದಲ್ಲಿ ಯಾವುದೇ ಅವಸರದ ನಿರ್ಧಾರ ಬೇಡ. ಪರಸ್ಪರರ ಆಸೆಗಳನ್ನು ಗೌರವಿಸಿ ಮುನ್ನಡೆಯಿರಿ.

​ಮೀನ:
ಭಾವನಾತ್ಮಕವಾಗಿ ನೀವು ಸಂಗಾತಿಗೆ ತುಂಬಾ ಹತ್ತಿರವಾಗುವಿರಿ. ಕಷ್ಟದ ಸಮಯದಲ್ಲಿ ಸಂಗಾತಿಯ ಬೆಂಬಲ ನಿಮಗೆ ಧೈರ್ಯ ನೀಡಲಿದೆ. ಪ್ರೇಮ ಸಂಬಂಧವು ಮದುವೆಯ ಹಂತಕ್ಕೆ ತಲುಪಲು ಈ ವಾರ ಪೂರಕವಾದ ವಾತಾವರಣವಿದೆ.

– ಲೋಹಿತ ಹೆಬ್ಬಾರ್

Published On – 4:44 pm, Fri, 30 January 26

Source link

ಪತಂಜಲಿ ಬ್ಯುಸಿನೆಸ್​ನ ಭಾಗವಾಗಬೇಕಾ? ಪತಂಜಲಿ ಸ್ಟೋರ್ ತೆರೆಯಿರಿ; ಇಲ್ಲಿದೆ ಅರ್ಜಿ ಸಲ್ಲಿಕೆ, ಬಂಡವಾಳ ಇತ್ಯಾದಿ ಮಾಹಿತಿ – Kannada News | How to open Patanjali Stores, here is the step by step guide

ಪತಂಜಲಿ FMCG ಸೆಕ್ಟರ್ ಪ್ರವೇಶಿಸಿದಾಗಿನಿಂದ ಅದರ ಉತ್ಪನ್ನಗಳು ಜನರ ದೈನಂದಿನ ಜೀವನದ ಭಾಗವಾಗಿವೆ. ಇದರ ಪರಿಣಾಮವಾಗಿ ಕಂಪನಿಯ ಮಾರುಕಟ್ಟೆ ವಿಸ್ತಾರಗೊಂಡಿದೆ. ಅದರ ಉತ್ಪನ್ನಗಳು ಹೆಚ್ಚೆಚ್ಚು ಮನೆಗಳನ್ನು ಮುಟ್ಟುವಲ್ಲಿ ಯಶಸ್ವಿಯಾಗಿವೆ. ನೀವೂ ಕೂಡ ಈ ಬೆಳವಣಿಗೆಯ ಭಾಗವಾಗಲು ಅವಕಾಶ ಇದೆ. ಗ್ರಾಹಕರಾಗಿ ಪತಂಜಲಿ ಬ್ಯುಸಿನೆಸ್ ಅನ್ನು ಬೆಳೆಸುವುದು ಮಾತ್ರವಲ್ಲ, ಮಾರಾಟಗಾರರಾಗಿಯೂ ಲಾಭ ಮಾಡಬಹುದು. ದೇಶಾದ್ಯಂತ ಹಲವೆಡೆ ಪತಂಜಲಿ ಸ್ಟೋರ್​ಗಳಿವೆ. ಒಂದು ಸ್ಟೋರ್ (Patanjali Store) ಅನ್ನು ನೀವು ಬೇಕಾದರೂ ತೆರೆಯಲು ಸಾಧ್ಯ. ಪತಂಜಲಿ ಸ್ಟೋರ್ ತೆರೆಯಲು ಪ್ರಕ್ರಿಯೆಗಳೇನು ಎನ್ನುವ ವಿವರ ಇಲ್ಲಿದೆ.

ಪತಂಜಲಿ ಸ್ಟೋರ್ ಆರಂಭಿಸಬೇಕೆಂದರೆ ಮೊದಲಿಗೆ 5 ಲಕ್ಷ ರೂ ಆರಂಭಿಕ ಹೂಡಿಕೆ ಬೇಕು. 200-2,000+ ಚದರ ಅಡಿ ಜಾಗದ ಅಗತ್ಯವಿದೆ. ಅಧಿಕೃತ ಪತಂಜಲಿ ವೆಬ್‌ಸೈಟ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ₹300 ಶುಲ್ಕ, ಪ್ಯಾನ್ ಕಾರ್ಡ್, ಆಧಾರ್ ಕಾರ್ಡ್, ಸ್ಟೋರ್​ನ ಫೋಟೋ ಮತ್ತು ₹5 ಲಕ್ಷ ಭದ್ರತಾ ಠೇವಣಿ ಪಾವತಿಸಬೇಕಾಗುತ್ತದೆ.

ಇದನ್ನೂ ಓದಿ: ಈ ಪತಂಜಲಿ ಪ್ಲಾಟ್​ಫಾರ್ಮ್​ಗಳಲ್ಲಿ ರಿಯಾಯಿತಿ ದರದಲ್ಲಿ ಉತ್ಪನ್ನಗಳನ್ನು ಖರೀದಿಸುವ ಅವಕಾಶ

ಪತಂಜಲಿ ಸ್ಟೋರ್ ತೆರೆಯುವ ಪ್ರಕ್ರಿಯೆ

ಪತಂಜಲಿ ಸ್ಟೋರ್ ಅನ್ನು ಹೇಗೆ ಪಡೆಯುವುದು? ಮೊದಲು, ಪತಂಜಲಿ ವ್ಯವಹಾರಗಳ ವಿವಿಧ ಪ್ರಕಾರಗಳನ್ನು ಅರ್ಥಮಾಡಿಕೊಳ್ಳುವುದು ಮುಖ್ಯ. ಪತಂಜಲಿ ಬ್ಯುಸಿನೆಸ್​ಗಳಲ್ಲಿ ಮೂರು ವಿಧಗಳಿವೆ: ಗ್ರಾಮೀಣ ಆರೋಗ್ಯ ಕೇಂದ್ರಗಳು, ಪತಂಜಲಿ ಚಿಕಿತ್ಸಾಲಯಗಳು ಮತ್ತು ಮೆಗಾ ಸ್ಟೋರ್​ಗಳು. ಪ್ರತಿಯೊಂದು ಸ್ಟೋರ್​ಗೆ ವಿಭಿನ್ನ ಪ್ರಮಾಣದ ಸ್ಥಳಾವಕಾಶ ಬೇಕಾಗುತ್ತದೆ. ಉದಾಹರಣೆಗೆ, ಗ್ರಾಮೀಣ ಆರೋಗ್ಯ ಕೇಂದ್ರಕ್ಕೆ ಸರಿಸುಮಾರು 200 ಚದರ ಅಡಿಗಳು ಮಾತ್ರ ಬೇಕಾಗುತ್ತವೆ, ಆದರೆ ಮೆಗಾ ಸ್ಟೋರ್​ಗೆ ಕನಿಷ್ಠ 2,000 ಚದರ ಅಡಿ ಜಾಗ ಬೇಕಾಗುತ್ತವೆ.

ಎಷ್ಟು ಹೂಡಿಕೆ ಮಾಡಬೇಕಾಗುತ್ತದೆ?

ಸಣ್ಣ ಸ್ಟೋರ್ ತೆರೆಯಲು ಸರಿಸುಮಾರು ₹5 ರಿಂದ ₹10 ಲಕ್ಷ (ಸುಮಾರು $10 ಮಿಲಿಯನ್) ಹೂಡಿಕೆಯ ಅಗತ್ಯವಿರುತ್ತದೆ. ಆದರೆ ಒಂದು ಮೆಗಾ ಸ್ಟೋರ್​ಗೆ ₹1 ಕೋಟಿ (ಸುಮಾರು $10 ಮಿಲಿಯನ್) ವೆಚ್ಚವಾಗಬಹುದು. ₹5 ಲಕ್ಷ (ಸುಮಾರು $500,000) ರೀಫಂಡಬಲ್ ಸೆಕ್ಯೂರಿಟಿ ಡೆಪಾಸಿಟ್ ಅಗತ್ಯ ಇದೆ. ಇದರಲ್ಲಿ ₹2.5 ಲಕ್ಷ (ಸುಮಾರು $250,000) ದಿವ್ಯ ಫಾರ್ಮಸಿಗೆ, ಮತ್ತು ₹2.5 ಲಕ್ಷ (ಸುಮಾರು $250,000) ಪತಂಜಲಿ ಆಯುರ್ವೇದ ಲಿಮಿಟೆಡ್​ಗೆ ಡಿಡಿ ಮೂಲಕ ನೀಡಬೇಕಾಗುತ್ತದೆ. ಅರ್ಜಿದಾರರು ಗುರುತಿನ ಪುರಾವೆ (ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್), ವಿಳಾಸ ಪುರಾವೆ, ಮಾಲೀಕತ್ವದ ದಾಖಲೆಗಳು ಅಥವಾ ಸ್ಟೋರ್ ಅಥವಾ ಆವರಣದ ಬಾಡಿಗೆ ಕರಾರು ಮತ್ತು ಸ್ಟೋರ್​ನ ಫೋಟೋವನ್ನು ಸಲ್ಲಿಸುವ ಅಗತ್ಯವಿದೆ.

ಇದನ್ನೂ ಓದಿ: Patanjali Model: ಜಾಗತಿಕ ಬ್ರ್ಯಾಂಡ್​ಗಳಿಗೆ ಪೈಪೋಟಿ ನೀಡುತ್ತಿರುವ ಪತಂಜಲಿಯ ಯಶಸ್ಸಿನ ಗುಟ್ಟೇನು?

ಪತಂಜಲಿ ಸ್ಟೋರ್​ಗೆ ಅರ್ಜಿ ಪ್ರಕ್ರಿಯೆ

  • ಪತಂಜಲಿಯ ವೆಬ್‌ಸೈಟ್‌ನಿಂದ ಫಾರ್ಮ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳಿ. ಆನ್‌ಲೈನ್‌ನಲ್ಲೇ ಅರ್ಜಿಯನ್ನು ಭರ್ತಿ ಮಾಡಬಹುದು.
  • ಅರ್ಜಿ ಶುಲ್ಕ 300 ರೂ. ಮತ್ತು ಅಗತ್ಯ ದಾಖಲೆಗಳನ್ನು ಫಾರ್ಮ್​ನೊಂದಿಗೆ ಸಲ್ಲಿಸಿ.
  • ಅರ್ಜಿ ಸಲ್ಲಿಕೆ ನಂತರ, ಕಂಪನಿಯು ನೀವು ತಿಳಿಸಿದ ಸ್ಥಳವನ್ನು ಪರಿಶೀಲಿಸುತ್ತದೆ.
  • ಸೂಕ್ತ ಎನಿಸಿದರೆ ಸ್ಟೋರ್​​ಗೆ ಅನುಮೋದನೆ ಕೊಡಲಾಗುತ್ತದೆ.
  • ಅನುಮೋದನೆ ಪಡೆದ ನಂತರ ಒಪ್ಪಂದ ಆಗುತ್ತದೆ. ಉತ್ಪನ್ನಗಳನ್ನು ಪಡೆದ ಬಳಿಕ ಸ್ಟೋರ್ ಅನ್ನು ಆರಂಭಿಸಬಹುದು.

ಗಮನಿಸಬೇಕಾದ ಸಂಗತಿ ಎಂದರೆ, ನೀವು ಪತಂಜಲಿ ಸ್ಟೋರ್​ಗೆ ಅರ್ಜಿ ಸಲ್ಲಿಸಿದ ನಂತರ, ಪ್ರಕ್ರಿಯೆಯನ್ನು ವೇಗವಾಗಿ ಪೂರ್ಣಗೊಳಿಸಲು ಕಂಪನಿಯ ಮಾರಾಟ ವ್ಯವಸ್ಥಾಪಕರನ್ನು ಸಂಪರ್ಕಿಸುವುದು ಉತ್ತಮ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಸಮುದಾಯಗಳ ನಡುವೆ ಬೆಂಕಿ ಹಚ್ಚುವ ಯತ್ನಿಸಿದವರ ಹೆಡೆಮುರಿ ಕಟ್ಟಿದ ಪೊಲೀಸರು – Kannada News | Udupi: Manager and Businessman Arrested for Spreading Communal Hate Video via WhatsApp

ಉಡುಪಿ, ಜನವರಿ 30: ಸೋಶಿಯಲ್​ ಮೀಡಿಯಾದಲ್ಲಿ ಮನಸ್ಸಿಗೆ ಬಂದದನ್ನು ಪೋಸ್ಟ್ ಮಾಡುವವರು ಅಥವಾ ಬೇರೆಯವರಿಗೆ ಶೇರ್​ ಮಾಡುವವರು ಈ ಸ್ಟೋರಿಯನ್ನ ಒಮ್ಮೆ ಓದಿ. ಸಾಮಾಜಿಕ ಜಾಲತಾಣದ ಮೂಲಕ ದ್ವೇಷ ಹರಡಿದ ಆರೋಪ ಹಿನ್ನೆಲೆ ಉಡುಪಿ (Udupi) ಜಿಲ್ಲೆಯ ಬ್ರಹ್ಮಾವರ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಶಿಕ್ಷಕರ ಸಹಕಾರ ಬ್ಯಾಂಕ್ ಮ್ಯಾನೇಜರ್ ಸಂತೋಷ್ ಕುಮಾರಶೆಟ್ಟಿ ಮತ್ತು ಉದ್ಯಮಿ ಕೆ.ನಾಗರಾಜ್ ಬಂಧಿತರು (Arrested). ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾಟ್ಸಾಪ್ ಗ್ರೂಪ್​ನಲ್ಲಿ ವಿಡಿಯೋ ಶೇರ್​​

ಬಂಧಿತರು ವಾಟ್ಸಾಪ್ ಗ್ರೂಪ್​ನಲ್ಲಿ ಸಮುದಾಯಗಳ ನಡುವೆ ದ್ವೇಷ ಹುಟ್ಟಿಸುವ ವಿಡಿಯೋ ಶೇರ್​​ ಮಾಡಿದ್ದರು. ಹಾಗಾಗಿ ಇಬ್ಬರನ್ನು ಬಂಧಿಸಿದ್ದ ಪೊಲೀಸರು ಕೋರ್ಟ್​ಗೆ ಹಾಜರುಪಡಿಸಿದ್ದರು. ಸದ್ಯ ಕೋರ್ಟ್ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಕಾಂಗ್ರೆಸ್ ಮುಖಂಡನ ಮನೆಯಲ್ಲಿ ಕಳ್ಳರ ಕರಾಮತ್ತು

ಕಾಪು ಪಡುಬಿದ್ರಿ ಪರಿಸರದಲ್ಲಿ ನಿರಂತರ ಕಳ್ಳತನ ನಡೆಯುತ್ತಿದ್ದು, ಕಳ್ಳರು ಇಂದು ಮತ್ತೊಂದು ಮನೆ ದೋಚಿದ್ದಾರೆ. ಹಿರಿಯ ಸಹಕಾರಿ ಧುರೀಣ, ಕಾಂಗ್ರೆಸ್ ಮುಖಂಡ ಕಾಪು ದಿವಾಕರ ಶೆಟ್ಟಿ ಮನೆಯಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಬುಧವಾರದಂದು ಪಡುಬಿದ್ರಿಯ ಮನೆ ಒಂದರಿಂದ ಚಿನ್ನ ದೋಚಿದ್ದ ಕಳ್ಳರು, ಕಾಪು ದಿವಾಕರ ಶೆಟ್ಟಿ ಮನೆಗೆ ಕನ್ನ ಹಾಕಿದ್ದಾರೆ.

ಇದನ್ನೂ ಓದಿ: ಉಡುಪಿ ಡಿಸಿ, ಉಸ್ತುವಾರಿ ಸಚಿವರಿಂದಲೇ ಜಿಲ್ಲಾಡಳಿತದ ಸೂಚನೆ ಉಲ್ಲಂಘನೆ? ಆಗಿದ್ದೇನು?

ಮನೆ ಮಾಲಕರು ಮುಂಬೈಗೆ ಹೋಗಿದ್ದ ವೇಳೆ ಕೃತ್ಯವೆಸಗಲಾಗಿದೆ. ಧಾರ್ಮಿಕ ಕಾರ್ಯ ಪೂರೈಸಿ ಬಂದಿದ್ದ ಕಾವಲುಗಾರ ಗಾಡ ನಿದ್ರೆಗೆ ಜಾರಿದ್ದ. ಆತನ ಅರಿವಿಗೆ ಬಾರದಂತೆ ಆತ ಮಲಗಿದ್ದಾಗಲೇ ಎದುರು ಬಾಗಿಲು ಒಡೆದು ಮನೆಗೆ ನುಗ್ಗಿದ್ದರು. ಜೊತೆಗೆ ಕಾವಲು ಕಾಯುತ್ತಿದ್ದ ವ್ಯಕ್ತಿಯ ಮೊಬೈಲ್ ದೋಚಿದ ಕಳ್ಳರು, ಕದ್ದ ಮೊಬೈಲ್​ನ್ನು ದೂರದ ಮಸೀದಿ ಬಳಿ ಎಸೆದು ಹೋಗಿದ್ದರು. ಇನ್ನು ಸಿಸಿಟಿವಿಯನ್ನ ಬೇರೆಡೆಗೆ ತಿರುಗಿಸಿ ಡಿವಿಆರ್ ಕದಿದ್ದಾರೆ.

ಇದನ್ನೂ ಓದಿ: ಉಡುಪಿ: ಅವಮಾನವಾದ ನಿವೃತ್ತ ಯೋಧನಿಗೆ ಕ್ಷಮೆ ಕೇಳಿದ ಟೋಲ್ ಸಿಬ್ಬಂದಿ, ಕೃತಜ್ಞತೆ ವ್ಯಕ್ತಪಡಿಸಿ ಯೋಧ

ಸ್ಥಳಕ್ಕೆ ಕಾಪು ಪೊಲೀಸರ ಆಗಮಿಸಿ ಶ್ವಾನದಳದ ಮೂಲಕ ಪರಿಶೀಲನೆ ಮಾಡಿದ್ದಾರೆ. ಸದ್ಯ ಮುಂಬೈನಿಂದ ಮನೆಮಾಲಕರು ವಾಪಸ್ ಆಗುವುದನ್ನು ಕಾಯುತ್ತಿರುವ ಪೊಲೀಸರು, ಅವರು ಬಂದ ಮೇಲೆ ಕಳ್ಳತನದ ಪ್ರಮಾಣ ತಿಳಿಯಲಿದ್ದಾರೆ. ವರ್ಷದ ಹಿಂದೆ ಉದ್ಯಾವರದಲ್ಲೂ ಕೋಟ್ಯಂತರ ರೂ ಮೌಲ್ಯದ ಸ್ವತ್ತು ಕಳ್ಳತನವಾಗಿತ್ತು. ಎರಡು ದಿನದ ಹಿಂದಷ್ಟೇ ಪಡುಬಿದ್ರಿಯಲ್ಲಿ ಕೋಟ್ಯಂತರ ರೂ ಮೌಲ್ಯದ ಚಿನ್ನಕಳ್ಳತನವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 4:49 pm, Fri, 30 January 26

Source link

ಟಿ20 ವಿಶ್ವಕಪ್‌ನಲ್ಲಿ ಒಂದೇ ತಂಡದ ಪರವಾಗಿ ಆಡಲಿದ್ದಾರೆ ಭಾರತ- ಪಾಕ್ ಮೂಲದ ಆಟಗಾರರು – Kannada News | T20 World Cup 2026: USA Squad Announced, Indian and Pakistani Players Included

2026 ರ ಟಿ20 ವಿಶ್ವಕಪ್‌ಗೆ (T20 World Cup) ಕ್ಷಣಗಣನೆ ಆರಂಭವಾಗಿದೆ. ಈ ಪಂದ್ಯಾವಳಿಯಲ್ಲಿ ಇಪ್ಪತ್ತು ತಂಡಗಳು ಆಡಲಿದ್ದು, ಈಗಾಗಲೇ ಭಾಗಶಃ ತಂಡಗಳನ್ನು ಘೋಷಿಸಲಾಗಿದೆ. ಇದೀಗ ಯುಎಸ್​ಎ (USA) ಕೂಡ ತನ್ನ 15 ಸದಸ್ಯರ ತಂಡವನ್ನು ಬಹಿರಂಗಪಡಿಸಿದೆ. ಅಚ್ಚರಿಯ ಸಂಗತಿಯೆಂದರೆ ಈ ತಂಡದಲ್ಲಿ ಭಾರತೀಯ ಮತ್ತು ಪಾಕಿಸ್ತಾನಿ ಮೂಲದ ಆಟಗಾರರು ಸೇರಿದ್ದು, ಒಟ್ಟಿಗೆ ಆಡಲಿದ್ದಾರೆ. ಟಿ20 ವಿಶ್ವಕಪ್​ನಲ್ಲಿ ಎ ಗುಂಪಿನಲ್ಲಿ ಸ್ಥಾನ ಪಡೆದಿರುವ ಅಮೆರಿಕ ತಂಡ, ಟೀಂ ಇಂಡಿಯಾ ವಿರುದ್ಧವೂ ಸ್ಪರ್ಧಿಸಲಿದೆ.

ಒಂದೇ ತಂಡದಲ್ಲಿ ಭಾರತ, ಪಾಕ್ ಮೂಲದ ಆಟಗಾರರು

2026 ರ ಟಿ20 ವಿಶ್ವಕಪ್‌ಗಾಗಿ ಅಮೆರಿಕ ತನ್ನ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಈ ಪಂದ್ಯಾವಳಿಯಲ್ಲಿ ಯುಎಸ್ಎ ಭಾಗವಹಿಸುತ್ತಿರುವುದು ಇದು ಎರಡನೇ ಬಾರಿ. 2024 ರ ಟಿ20 ವಿಶ್ವಕಪ್‌ನಲ್ಲಿ, ತಂಡವು ತನ್ನ ಚೊಚ್ಚಲ ಆವೃತ್ತಿಯಲ್ಲೇ ಸೂಪರ್ 8 ಹಂತವನ್ನು ತಲುಪುವ ಮೂಲಕ ಇತಿಹಾಸ ನಿರ್ಮಿಸಿತ್ತು. ಇದೀಗ ಮತ್ತೊಮ್ಮೆ ಅಂತಹದ್ದೇ ಪ್ರದರ್ಶನ ನೀಡುವ ಇರಾದೆಯಲ್ಲಿ ಅಮೆರಿಕ ತಂಡವಿದೆ. ಈ ಬಾರಿಯ ಯುಎಸ್​ಎ ಟಿ20 ವಿಶ್ವಕಪ್ ತಂಡದಲ್ಲಿ ಹಿಂದಿನ ಆವೃತ್ತಿಯಲ್ಲಿ ತಂಡದ ಭಾಗವಾಗಿದ್ದ 10 ಆಟಗಾರರು ಸೇರಿದ್ದಾರೆ. ಕೆಲವು ಹೊಸ ಮುಖಗಳು ಈ ಬಾರಿ ತಂಡದಲ್ಲಿ ಸ್ಥಾನ ಪಡೆದಿದ್ದು, ಮೋನಾಂಕ್ ಪಟೇಲ್ ತಂಡವನ್ನು ಮುನ್ನಡೆಸಲಿದ್ದಾರೆ.

ಅಮೆರಿಕ ತಂಡವು ಹೆಚ್ಚಾಗಿ ಭಾರತೀಯ ಮೂಲದ ಆಟಗಾರರನ್ನು ಒಳಗೊಂಡಿದ್ದು, ಪಾಕಿಸ್ತಾನ ಮೂಲದ ಇಬ್ಬರು ಆಟಗಾರರನ್ನು ಸಹ ಆಯ್ಕೆ ಮಾಡಲಾಗಿದೆ. ಅಲಿ ಖಾನ್ ಮತ್ತು ಮೊಹಮ್ಮದ್ ಮೊಹ್ಸಿನ್ ಪಾಕಿಸ್ತಾನದಲ್ಲಿ ಜನಿಸಿದ ಇಬ್ಬರು ಆಟಗಾರರಾಗಿದ್ದರೂ, ಅವರು ಅಮೆರಿಕ ತಂಡಕ್ಕಾಗಿ ಆಡಲಿದ್ದಾರೆ. ಅಲಿ ಖಾನ್ ದೀರ್ಘಕಾಲದವರೆಗೆ ತಂಡದ ಭಾಗವಾಗಿದ್ದಾರೆ, ಆದರೆ ಮೊಹಮ್ಮದ್ ಮೊಹ್ಸಿನ್ ಅವರನ್ನು ಮೊದಲ ಬಾರಿಗೆ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಶ್ರೀಲಂಕಾ ಮೂಲದ ಶೆಹನ್ ಜಯಸೂರ್ಯ ಅವರನ್ನು ಸಹ ಆಯ್ಕೆ ಮಾಡಲಾಗಿದೆ.

ಯುಎಸ್ಎ ಟಿ20 ವಿಶ್ವಕಪ್ ವೇಳಾಪಟ್ಟಿ

  • ಫೆಬ್ರವರಿ 7 -ಅಮೆರಿಕ vs ಭಾರತ, ಮುಂಬೈ
  • ಫೆಬ್ರವರಿ 10 -ಅಮೆರಿಕ vs ಪಾಕಿಸ್ತಾನ, ಕೊಲಂಬೊ
  • ಫೆಬ್ರವರಿ 13 -ಅಮೆರಿಕ vs ನೆದರ್ಲ್ಯಾಂಡ್ಸ್, ಚೆನ್ನೈ
  • ಫೆಬ್ರವರಿ 15 -ಅಮೆರಿಕ vs ನಮೀಬಿಯಾ, ಚೆನ್ನೈ

2026 ರ ಟಿ20 ವಿಶ್ವಕಪ್‌ಗಾಗಿ ಯುಎಸ್‌ಎ ತಂಡ: ಮೊನಾಂಕ್ ಪಟೇಲ್ (ನಾಯಕ), ಜೆಸಿ ಸಿಂಗ್, ಆಂಡ್ರೀಸ್ ಗೌಸ್, ಶೆಹನ್ ಜಯಸೂರ್ಯ, ಮಿಲಿಂದ್ ಕುಮಾರ್, ಶಯಾನ್ ಜಹಾಂಗೀರ್, ಸೈತೀಜ ಮುಕ್ಕಮಲ, ಸಂಜಯ್ ಕೃಷ್ಣಮೂರ್ತಿ, ಹರ್ಮೀತ್ ಸಿಂಗ್, ನೋಸ್ತೂಶ್ ಕೆಂಜಿಗೆ, ಶಾಡ್ಲಿ ವ್ಯಾನ್ ಶಾಲ್ಕ್‌ವಿಕ್, ಸೌರಭ್ ನೇತ್ರವಾಲ್ಕರ್, ಅಲಿ ಖಾನ್, ಮೊಹಮ್ಮದ್ ಮೊಹ್ಸಿನ್, ಶುಭಂ ರಂಜನೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರು ಚಲನಚಿತ್ರೋತ್ಸವ: ಜನವರಿ 31ರಂದು ಈ 10 ಸಿನಿಮಾ ಮಿಸ್ ಮಾಡಿಕೊಳ್ಳಬೇಡಿ – Kannada News | Best movies on Jan 31 in 17th Bengaluru International Film Festival

ವಾರ್ತಾ ಇಲಾಖೆ, ಚಲನಚಿತ್ರ ಅಕಾಡೆಮಿ ಹಾಗೂ ಚಲನ‌ಚಿತ್ರ ವಾಣಿಜ್ಯ ಮಂಡಳಿ ಸಹಯೋಗದೊಂದಿಗೆ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (BIFfes) ನಡೆಯುತ್ತಿದೆ. ಫೆಬ್ರವರಿ 6ರವರೆಗೂ ಸಿನಿಮಾಗಳು ಪ್ರದರ್ಶನ ಆಗಲಿವೆ. ರಾಜಾಜಿನಗರದ ಲುಲು ಮಾಲ್‍ನ ಸಿನಿಪೊಲಿಸ್‍ ಮಲ್ಟಿಪ್ಲೆಕ್ಸ್, ಬನಶಂಕರಿ 2ನೇ ಹಂತದಲ್ಲಿರುವ ಸುಚಿತ್ರಾ ಫಿಲಂ ಸೊಸೈಟಿ, ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ಸಿನಿಮಾಗಳ ಪ್ರದರ್ಶನ ಆಗುತ್ತಿದೆ. ಜನವರಿ 31ರಂದು ಲುಲು ಮಾಲ್​ನಲ್ಲಿ ಈ ಕೆಳಗಿನ 10 ಬೆಸ್ಟ್ ಸಿನಿಮಾಗಳನ್ನು ಸಿನಿಮಾಸಕ್ತರು ನೋಡಬಹುದು. ಅವುಗಳ ಬಗ್ಗೆ ಇಲ್ಲಿದೆ ಮಾಹಿತಿ..

1. ಕ್ಲಿಯೋ ಫ್ರಮ್ 5 ಟು 7: (ಸಮಯ: ಮಧ್ಯಾಹ್ನ 3:20, ಸ್ಕ್ರೀನ್ 1). ವಿವರ: ಅಗ್ನೆಸ್ ವಾರ್ದಾ ಅವರ ಈ ಅದ್ಭುತ ಚಿತ್ರವು ಕ್ಯಾನ್ಸರ್ ಪರೀಕ್ಷೆಯ ವರದಿಗಾಗಿ ಕಾಯುತ್ತಿರುವ ಗಾಯಕಿಯೊಬ್ಬಳ ಜೀವನದ ಎರಡು ಗಂಟೆಗಳ ಆತಂಕವನ್ನು ನೈಜ ಸಮಯದಲ್ಲಿ ಚಿತ್ರಿಸುತ್ತದೆ. ಇದು ಅಸ್ತಿತ್ವದ ಪ್ರಶ್ನೆಗಳನ್ನು ಸುಂದರವಾಗಿ ಕಟ್ಟಿಕೊಡುವ ಫ್ರೆಂಚ್ ನವವಿಕಾಸದ ಪ್ರಮುಖ ಚಿತ್ರ.

2. ಒಂದಾನೊಂದು ಕಾಲದಲ್ಲಿ : (ಸಮಯ: ರಾತ್ರಿ 7. ಓಪನ್ ಏರ್ ಸ್ಕ್ರೀನಿಂಗ್ -ಮುಖ್ಯ ದ್ವಾರ). ವಿವರ: ಗಿರೀಶ್ ಕಾರ್ನಾಡ್ ನಿರ್ದೇಶನದ ಈ ಚಿತ್ರವು ಸಮುರಾಯ್ ಮಾದರಿಯ ಕನ್ನಡದ ಆ್ಯಕ್ಷನ್ ಸಿನಿಮಾ. ಮಧ್ಯಕಾಲೀನ ಯೋಧರ ಜೀವನ ಮತ್ತು ಸಂಘರ್ಷವನ್ನು ಬಿಂಬಿಸುವ ಈ ಚಿತ್ರ ರಾಷ್ಟ್ರ ಪ್ರಶಸ್ತಿ ಗೆದ್ದಿದೆ.

3. ದಿ ಮೇಡ್ಸ್ ಆಫ್ ವಿಲ್ಕೊ: (ಸಮಯ: ಬೆಳಿಗ್ಗೆ 10. ಸ್ಕ್ರೀನ್ 1). ವಿವರ: ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದ ಆಂಡ್ರೆಜ್ ವಾಜ್ದಾ ಅವರ ಈ ಚಿತ್ರವು ಕಳೆದುಹೋದ ಯೌವನ ಮತ್ತು ಹಳೆಯ ಪ್ರೀತಿಯ ನೆನಪುಗಳ ಸುತ್ತ ಸಾಗುವ ಭಾವನಾತ್ಮಕ ಪಯಣ.

4. ತಾಯಿ ಸಾಹೇಬ: (ಸಮಯ: ಸಂಜೆ 4.50. ಸ್ಕ್ರೀನ್ ವಿಐಪಿ 2). ವಿವರ: ಗಿರೀಶ್ ಕಾಸರವಳ್ಳಿ ನಿರ್ದೇಶನದ ಈ ಚಿತ್ರವು ಭೂ ಸುಧಾರಣೆ ಮತ್ತು ಬದಲಾಗುತ್ತಿರುವ ಸಮಾಜದಲ್ಲಿ ಮಹಿಳೆಯೊಬ್ಬಳ ಜೀವನದ ಹೋರಾಟವನ್ನು ಅತ್ಯಂತ ಸೂಕ್ಷ್ಮವಾಗಿ ಚಿತ್ರಿಸುತ್ತದೆ. ಇದು ಹಲವು ರಾಷ್ಟ್ರ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ.

5. ಮದರ್‌ಟಂಗ್ (ಸಮಯ: ರಾತ್ರಿ 7.40. ಸ್ಕ್ರೀನ್ 1). ವಿವರ: ಹೆಸರಾಂತ ನಿರ್ದೇಶಕ ಜಾಂಗ್ ಲು ಅವರ ಈ ಚಿತ್ರವು ಭಾಷೆ ಮತ್ತು ಮನುಷ್ಯರ ನಡುವಿನ ಭಾವನಾತ್ಮಕ ಸಂಬಂಧಗಳನ್ನು ಪರಿಶೋಧಿಸುತ್ತದೆ. ಸ್ವಂತ ಊರಿಗೆ ಮರಳುವ ನಟಿಯೊಬ್ಬಳ ಅಸ್ತಿತ್ವದ ಹುಡುಕಾಟ ಇದರ ಕಥೆ.

ಇದನ್ನೂ ಓದಿ: ಪ್ಯಾಲೆಸ್ತೀನ್ ಸಿನಿಮಾ ಪ್ರದರ್ಶನಕ್ಕೆ ಕೇಂದ್ರ ಸರ್ಕಾರ ಬಿಡುತ್ತಿಲ್ಲ: ಪ್ರಕಾಶ್ ರಾಜ್ ಅಸಮಾಧಾನ

6. ಗಮನ್ (ಸಮಯ: ಮಧ್ಯಾಹ್ನ 12.30. ಸ್ಕ್ರೀನ್ 1) ವಿವರ: ಮುಜಾಫರ್ ಅಲಿ ನಿರ್ದೇಶನದ ಈ ಚಿತ್ರವು ಮುಂಬೈಗೆ ವಲಸೆ ಬಂದ ವ್ಯಕ್ತಿಯೊಬ್ಬನ ಏಕಾಂತ ಮತ್ತು ಹೋರಾಟವನ್ನು ಮಾರ್ಮಿಕವಾಗಿ ಚಿತ್ರಿಸುತ್ತದೆ. ಇದರ ಸಂಗೀತ ಮತ್ತು ನೈಜ ಚಿತ್ರಣಕ್ಕೆ ಇದು ಹೆಸರುವಾಸಿಯಾಗಿದೆ.

7. ಭವನಿ ಭವಾಯಿ (ಸಮಯ: ರಾತ್ರಿ 7.30. ಸ್ಕ್ರೀನ್ ವಿಐಪಿ 2). ವಿವರ: ಕೇತನ್ ಮೆಹ್ತಾ ಅವರ ಈ ಸಿನಿಮಾವು ಜಾನಪದ ನಾಟಕ ಶೈಲಿಯನ್ನು ಬಳಸಿಕೊಂಡು ಅಸ್ಪೃಶ್ಯತೆ ಮತ್ತು ಸಾಮಾಜಿಕ ಅಸಮಾನತೆಯನ್ನು ವಿಡಂಬನಾತ್ಮಕವಾಗಿ ಟೀಕಿಸುತ್ತದೆ.

8. ಆಕ್ಸಿಡೆಂಟ್ (ಸಮಯ: ರಾತ್ರಿ 8.30. ಸ್ಕ್ರೀನ್ 6). ವಿವರ: ಶಂಕರ್ ನಾಗ್ ನಿರ್ದೇಶನದ ಈ ಸಸ್ಪೆನ್ಸ್ ಡ್ರಾಮಾವು ರಾಜಕೀಯ ಭ್ರಷ್ಟಾಚಾರ ಮತ್ತು ಮಾಧ್ಯಮದ ಜವಾಬ್ದಾರಿಯನ್ನು ಎತ್ತಿ ತೋರಿಸುವ ಇಂದಿಗೂ ಪ್ರಸ್ತುತವಾಗಿರುವ ಚಿತ್ರ.

ಇದನ್ನೂ ಓದಿ: ಬೇರೆ ದೇಶಗಳ ಸಿನಿಮಾ ಯಾಕೆ ನೋಡಬೇಕು? ವಿವರಿಸಿದ ಸಿಎಂ ಸಿದ್ದರಾಮಯ್ಯ

9. ವಾಸ್ತುಹಾರ (ಸಮಯ: ಸಂಜೆ 5.30. ಸ್ಕ್ರೀನ್ ವಿಐಪಿ 3). ವಿವರ: ಜಿ. ಅರವಿಂದನ್ ಅವರ ಕೊನೆಯ ಚಿತ್ರಗಳಲ್ಲಿ ಒಂದಾದ ಇದು, ವಿಭಜನೆಯ ನಂತರ ನಿರಾಶ್ರಿತರಾದ ಜನರ ನೋವು ಮತ್ತು ಮಾನವ ಸಂಬಂಧಗಳ ಸಂಕೀರ್ಣತೆಯನ್ನು ಚಿತ್ರಿಸುತ್ತದೆ.

10. ಎಲ್ಫ್ರೀಡ್ ಜೆಲಿನೆಕ್ – ಲ್ಯಾಂಗ್ವೇಜ್ ಅನ್ಲೀಶ್ಡ್ (ಸಮಯ: ಸಂಜೆ 5.20. ಸ್ಕ್ರೀನ್ 1). ವಿವರ: ನೋಬೆಲ್ ಪ್ರಶಸ್ತಿ ವಿಜೇತ ಲೇಖಕಿಯ ಜೀವನವನ್ನು ಆಧರಿಸಿದ ಈ ಚಿತ್ರವು ಭಾಷೆಯ ಶಕ್ತಿ ಮತ್ತು ಸಾಮಾಜಿಕ ವಿಮರ್ಶೆಯ ಮೇಲೆ ಬೆಳಕು ಚೆಲ್ಲುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Budget 2026: ಟ್ಯಾಕ್ಸ್ ಡಿಡಕ್ಷನ್, ಡೆವಲಪರ್ಸ್​ಗೆ ಕಡಿಮೆ ದರದಲ್ಲಿ ಭೂಮಿ ಇತ್ಯಾದಿ ಕ್ರಮಗಳ ನಿರೀಕ್ಷೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮ – Kannada News | Tax breaks, incentives, affordable land for developers, here are few expectations of Real Estate sector from Budget

ನವದೆಹಲಿ, ಜನವರಿ 30: ಕಳೆದ ಕೆಲ ವರ್ಷಗಳಿಂದ ಸರ್ಕಾರ ಇನ್​ಫ್ರಾಸ್ಟ್ರಕ್ಚರ್ ಕ್ಷೇತ್ರಕ್ಕೆ ಮುತುವರ್ಜಿ ತೋರುತ್ತಾ ಬರುತ್ತಿದೆ. ವಸತಿ ಪ್ರಾಜೆಕ್ಟ್​ಗಳು, ಕೈಗಾರಿಕಾ ಕಾರಿಡಾರ್​ಗಳು ಸಾಕಷ್ಟು ನಿರ್ಮಾಣ ಆಗಿವೆ, ಆಗುತ್ತಿವೆ. ಇನ್​ಫ್ರಾಸ್ಟ್ರಕ್ಚರ್ ಉತ್ತಮಗೊಂಡಂತೆ ರಿಯಲ್ ಎಸ್ಟೇಟ್ (Real Estate  sector) ಉದ್ಯಮವೂ ಗರಿಗೆದರುತ್ತಾ ಬಂದಿದೆ. ಸರ್ಕಾರದ ಈ ಸುಧಾರಣಾ ಕ್ರಮಗಳು ಸ್ಥಗಿತಗೊಳ್ಳದೆ ಮುಂದುವರಿಯುತ್ತಾ ಹೋಗಲಿ ಎಂಬುದು ಈ ಉದ್ಯಮವು ಬಜೆಟ್​ನಿಂದ ಮಾಡುತ್ತಿರುವ ನಿರೀಕ್ಷೆ.

ಉದ್ಯೋಗ ಸೃಷ್ಟಿ, ಯೋಜಿತ ನಗರೀಕರಣ, ದೀರ್ಘಕಾಲೀನ ಆರ್ಥಿಕ ಕ್ಷಮತೆ ಇವುಗಳಿಗೆ ರಿಯಲ್ ಎಸ್ಟೇಟ್ ಸೆಕ್ಟರ್ ಶಕ್ತಿ ತುಂಬಬೇಕಾದರೆ, ಅಭಿವೃದ್ಧಿ ಪೂರಕವಾದ ಮತ್ತು ಸಮತೋಲಿತವಾದ ಬಜೆಟ್​ನಿಂದ ಸಾಧ್ಯ ಎಂದು ಬೆಂಗಳೂರಿನ ಮನ ಪ್ರಾಜೆಕ್ಟ್ಸ್​ನ (Mana Projects) ಸಿಎಂಡಿ ಡಿ. ಕಿಶೋರ್ ರೆಡ್ಡಿ ಹೇಳುತ್ತಾರೆ.

ಸರ್ಕಾರದ ನೀತಿಗಳು ಮುಂದುವರಿಯಬೇಕು. ವಿವಿಧ ಹೌಸಿಂಗ್ ಸೆಗ್ಮೆಂಟ್​ಗಳಲ್ಲಿ ಗ್ರಾಹಕರ ವಿಶ್ವಾಸ ಮೂಡಿಸುವಂತಹ ಮತ್ತು ಭವಿಷ್ಯದ ದೃಷ್ಟಿಯಿಂದ ಮಾಡಲಾಗುವ ಸುಧಾರಣೆಗಳೂ ಬರಬೇಕು. ನಿರ್ಮಾಣ ಹಂತದಲ್ಲಿರುವ ಪ್ರಾಪರ್ಟಿಗಳ ಮೇಲೆ ಜಿಎಸ್​ಟಿ ದರ ಇಳಿಸಬೇಕು. ಗೃಹ ಸಾಲದ ಬಡ್ಡಿ ಮೇಲೆ ಡಿಡಕ್ಷನ್ ಮಿತಿಯನ್ನು ಹೆಚ್ಚಿಸಬೇಕು ಎಂದು ಕಿಶೋರ್ ರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಈ ಬಾರಿಯ ಬಜೆಟ್​ನಿಂದ ಇನ್ನಷ್ಟು ಸೂಕ್ಷ್ಮ ಕ್ರಮ ಎದುರು ನೋಡುತ್ತಿರುವ ಇನ್ಷೂರೆನ್ಸ್ ಸೆಕ್ಟರ್

ಉದಯೋನ್ಮುಖವಾಗಿರುವ ಹಾಗೂ ಎರಡನೇ ಸ್ತರದ ನಗರಗಳಲ್ಲಿ (ಟಯರ್-2 ಸಿಟಿ) ಇನ್​ಫ್ರಾಸ್ಟ್ರಕ್ಚರ್ ಮತ್ತು ನಗರ ಸಂಪರ್ಕತೆಯಲ್ಲಿ ಸತತ ಹೂಡಿಕೆ ಮಾಡಬೇಕು. ಇದರಿಂದ ಹೊಸ ವಸತಿ ಕಾರಿಡಾರ್​ಗಳು ಹೊರಹೊಮ್ಮಲು ಸಾಧ್ಯ. ಸಮತೋಲಿತವಾದ ನಗರ ಬೆಳವಣಿಗೆ ಸಾಧ್ಯ. ಹಾಗೆಯೇ, ಏಕ ಗವಾಕ್ಷಿ ಸಿಸ್ಟಂ ಮೂಲಕ ವೇಗವಾಗಿ ಪ್ರಾಜೆಕ್ಟ್​ಗಳ ಅನುಮೋದನೆ ಆಗಬೇಕು. ಎಫ್​ಡಿಐ ನಿಯಮಗಳಲ್ಲಿ ಸ್ಪಷ್ಟತೆ ಬರಬೇಕು ಎಂದೂ ಮನ ಪ್ರಾಜೆಕ್ಟ್ಸ್​ನ ಸಿಎಂಡಿ ಸಲಹೆ ನೀಡಿದ್ದಾರೆ.

ರಿಯಲ್ ಎಸ್ಟೇಟ್ ಮಾರುಕಟ್ಟೆ ನಿಧಾನಗೊಳ್ಳುತ್ತಿದೆಯಾ?

ವಿಎಸ್ ರಿಯಾಲ್ಟರ್ಸ್ ಸಂಸ್ಥೆಯ ಸಿಇಒ ವಿಜಯ್ ಹರ್ಷ್ ಪ್ರಕಾರ ರಿಯಲ್ ಎಸ್ಟೇಟ್ ಮಾರುಕಟ್ಟೆ ಮಂದಗೊಳ್ಳುತ್ತಿರುವ ಆರಂಭಿಕ ಸುಳಿವು ಇದೆ. ಪ್ರಾಪರ್ಟಿಗಳು ಮಾರಾಟವಾಗುತ್ತಿರುವ ಪ್ರಮಾಣ ಕಡಿಮೆ ಆಗುತ್ತಿದೆ. ಅದರಲ್ಲೂ ಅಧಿಕ ಬೇಡಿಕೆ ಇರುವ 1 ಕೋಟಿ ರೂ ಒಳಗಿನ ಮನೆಗಳ ಮಾರಾಟ ಕುಂಠಿತಗೊಳ್ಳುತ್ತಿದೆ ಎನ್ನುತ್ತಾರೆ ವಿಜಯ್ ಹರ್ಷ್.

ಇದನ್ನೂ ಓದಿ: ಬಜೆಟ್​ನಲ್ಲಿ ವಿತ್ತೀಯ ಶಿಸ್ತು ಕಾಯ್ದುಕೊಂಡು ಬಂಡವಾಳ ವೆಚ್ಚ ಹೆಚ್ಚಿಸಬಹುದು: ಜೆಎಂ ಫೈನಾನ್ಷಿಯಲ್ ನಿರೀಕ್ಷೆ

ಲ್ಯಾಂಡ್ ಡೆಲವಪರ್​ಗಳಿಗೆ ಕಡಿಮೆ ದರದಲ್ಲಿ ಭೂಮಿ ಸಿಗುವಂತಹ ವ್ಯವಸ್ಥೆ ಮಾಡಬೇಕು. ಮನೆ ಖರೀದಿದಾರರಿಗೆ ಗೃಹ ಸಾಲಗಳಿಗೆ ಡಿಡಕ್ಷನ್ ಇತ್ಯಾದಿ ತೆರಿಗೆ ರಿಯಾಯಿತಿ ಸೌಲಭ್ಯ ಕೊಟ್ಟರೆ ಈ ರಿಯಲ್ ಎಸ್ಟೇಟ್ ಕ್ಷೇತ್ರಕ್ಕೆ ಚುರುಕು ಮುಟ್ಟಬಹುದು ಎನ್ನುತ್ತಾರೆ ವಿಎಸ್ ರಿಯಾಲ್ಟರ್ಸ್​ನ ಸಂಸ್ಥಾಪಕರು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Exit mobile version