World Bicycle Day 2026: ಸೈಕಲ್‌ ಸವಾರಿ ಪರಿಸರ, ನಮ್ಮ ಆರೋಗ್ಯ ಎರಡಕ್ಕೂ ಒಳ್ಳೆಯದು – Kannada News

ಸೈಕಲ್‌ (Bicycle) ಕೈಗೆಟಕುವ, ಆರೋಗ್ಯದಾಯಕ  ಹಾಗೂ ಪರಿಸರ ಸ್ನೇಹಿ ಸಾರಿಗೆ ವಿಧಾನವಾಗಿದ್ದು, ಹಿಂದೆಲ್ಲಾ ಜನ ಓಡಾಟಕ್ಕೆ ಸೈಕಲ್‌ಗಳನ್ನೇ ಬಳಸುತ್ತಿದ್ದರು. ಆದರೆ ಇಂದಿನ ಈ ಆಧುನಿಕ ಜಗತ್ತಿನಲ್ಲಿ ಸೈಕಲ್‌ ಬಳಕೆ ತೀರಾ ಕಡಿಮೆಯಾಗಿದೆ. ಪ್ರತಿಷ್ಠೆಯ ದೃಷ್ಟಿಯಿಂದ ಹಾಗೂ ಸಮಯ ಉಳಿಸಲು ಜನರು ಸೈಕಲ್ ಬಳಸುವುದನ್ನು ಬಿಟ್ಟು ಸ್ಕೂಟರ್, ಬೈಕ್ ಮತ್ತು ಕಾರುಗಳನ್ನು ಬಳಸಲು ಪ್ರಾರಂಭಿಸಿದ್ದಾರೆ.‌ ಹೀಗೆ ವಾಹನಗಳ ಬಳಕೆ ಹೆಚ್ಚಾದಂತೆ ಪರಿಸರ ಕೂಡ ಮಾಲಿನ್ಯವಾಗುತ್ತಿದೆ. ಈ ನಿಟ್ಟಿನಲ್ಲಿ ಪರಿಸರ ಸಂರಕ್ಷಣೆಗಾಗಿ ಸೈಕಲ್‌ ಸವಾರಿ ಮಾಡಲು ಜನರನ್ನು ಪ್ರೋತ್ಸಾಹಿಸಲು, ಸೈಕ್ಲಿಂಗ್‌ನ ಆರೋಗ್ಯ ಪ್ರಯೋಜನಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಪ್ರತಿವರ್ಷ ಜೂನ್‌ 3 ರಂದು ವಿಶ್ವ ಬೈಸಿಕಲ್‌ ದಿನವನ್ನು ಆಚರಿಸಲಾಗುತ್ತದೆ. ಈ ವಿಶೇಷ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿಯೋಣ ಬನ್ನಿ.

ವಿಶ್ವ ಬೈಸಿಕಲ್ ದಿನದ ಇತಿಹಾಸವೇನು?

ದ್ವಿಚಕ್ರ ವಾಹನ ಹಾಗೂ ಕಾರುಗಳ ಬಳಕೆಯಿಂದಾಗಿ, ಸೈಕಲ್‌ಗಳ ಬಳಕೆ ವೇಗವಾಗಿ ಕಡಿಮೆಯಾಗಲು ಪ್ರಾರಂಭಿಸಿತು. ಅಂತಹ ಪರಿಸ್ಥಿತಿಯಲ್ಲಿ, ಬೈಸಿಕಲ್ ಬಗ್ಗೆ ಜನರಿಗೆ ಅರಿವು ಮೂಡಿಸಲು, ಅಮೆರಿಕದ ಪ್ರಾಧ್ಯಾಪಕರೊಬ್ಬರು ವಿಶ್ವ ಬೈಸಿಕಲ್ ದಿನವನ್ನು ಆಚರಿಸುವ ಪರಿಕಲ್ಪನೆಯನ್ನು ಮುಂದಿಟ್ಟರು. ಅಮೆರಿಕದ ಮಾಂಟ್ಗೊಮೆರಿ ಕಾಲೇಜಿನ ಪ್ರಾಧ್ಯಾಪಕ ಲೆಸ್ಜೆಕ್ ಸಿಬಿಲ್ಸ್ ಅವರು ಒಂದು  ಅರ್ಜಿಯನ್ನು ಸಲ್ಲಿಸುವ ಮೂಲಕ ವಿಶ್ವ ಬೈಸಿಕಲ್ ದಿನವನ್ನು ಆಚರಿಸಲು ಪ್ರಸ್ತಾಪಿಸಿದ್ದರು. ನಂತರ ವಿಶ್ವ ಸಂಸ್ಥೆಯ  ಸಾಮಾನ್ಯ ಸಭೆಯು ಈ ದಿನದ ಆಚರಣೆಗೆ ಗ್ರೀನ್‌ ಸಿಗ್ನಲ್‌ ನೀಡಿತು. ಬಳಿಕ ಜೂನ್ 3, 2018 ರಂದು ಮೊದಲ ಬಾರಿಗೆ ವಿಶ್ವ ಸೈಕಲ್ ದಿನವನ್ನು ಆಚರಿಸಲಾಯಿತು. ಅಂದಿನಿಂದ ಪ್ರತಿವರ್ಷ ವಿಶ್ವ ಬೈಸಿಕಲ್‌ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.

ವಿಶ್ವ ಬೈಸಿಕಲ್ ದಿನದ ಮಹತ್ವವೇನು?

  • ಸೈಕಲ್‌ನ ಆರೋಗ್ಯ ಪ್ರಯೋಜನಗಳು ಹಾಗೂ ಸೈಕಲ್‌ ಬಳಕೆಯಿಂದ ಪರಿಸರಕ್ಕಾಗುವ ಲಾಭಗಳ ಬಗ್ಗೆ ತಿಳಿಸಲೆಂದೇ ಜಗತ್ತಿನಾದ್ಯಂತ ವಿಶ್ವ ಬೈಸಿಕಲ್‌ ದಿನವನ್ನು ಆಚರಿಸಲಾಗುತ್ತದೆ.
  • ಉತ್ತಮ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಜನರು ಹೆಚ್ಚು ಹೆಚ್ಚು ಸೈಕಲ್‌ ಬಳಸಲು ಪ್ರೋತ್ಸಾಹಿಸುವುದು ವಿಶ್ವ ಬೈಸಿಕಲ್ ದಿನದ ಉದ್ದೇಶವಾಗಿದೆ.
  • ಸೈಕ್ಲಿಂಗ್ ಆರೋಗ್ಯಕರ, ಸುಸ್ಥಿರ ಮತ್ತು ಕೈಗೆಟುಕುವ ಸಾರಿಗೆ ವಿಧಾನವಾಗಿದೆ. ಇದು ದೈಹಿಕ ಸದೃಢತೆಯನ್ನು ಸುಧಾರಿಸುತ್ತದೆ, ವಾಯು ಮಾಲಿನ್ಯ ಮತ್ತು ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುತ್ತದೆ. ಸೈಕ್ಲಿಂಗ್‌ನ ಈ ಮಹತ್ವದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಈ ದಿನದ ಮುಖ್ಯ ಉದ್ದೇಶವಾಗಿದೆ.

ಇದನ್ನೂ ಓದಿ:  ಪೋಷಕರೇ ಮಕ್ಕಳ ಪಾಲಿನ ನಿಜವಾದ ಸೂಪರ್‌ ಹೀರೋ

ಸೈಕ್ಲಿಂಗ್‌ನ ಆರೋಗ್ಯ ಪ್ರಯೋಜನಗಳೇನು?

  • ಸೈಕ್ಲಿಂಗ್ ಹೃದಯ ಮತ್ತು ಶ್ವಾಸಕೋಶಗಳನ್ನು ಬಲಪಡಿಸುತ್ತದೆ ಮತ್ತು ಹೃದ್ರೋಗಗಳ ಅಪಾಯವನ್ನು ಕಡಿಮೆ ಮಾಡುತ್ತದೆ.
  • ಸೈಕ್ಲಿಂಗ್ ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಸೈಕ್ಲಿಂಗ್ ಕ್ಯಾಲೊರಿಗಳನ್ನು ಸುಡಲು ಉತ್ತಮ ಮಾರ್ಗವಾಗಿದೆ.
  • ಸೈಕ್ಲಿಂಗ್ ಎಂಡಾರ್ಫಿನ್ ಎಂಬ ಹಾರ್ಮೋನುಗಳನ್ನು ಬಿಡುಗಡೆ ಮಾಡುತ್ತದೆ, ಇದು ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
  • ಸೈಕ್ಲಿಂಗ್ ನಿಮ್ಮ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ, ಇದು ನಿಮ್ಮ ಚಯಾಪಚಯ ಕ್ರಿಯೆಯನ್ನು ಸುಧಾರಿಸುತ್ತದೆ.
  • ಸೈಕ್ಲಿಂಗ್ ದೈಹಿಕ ಆರೋಗ್ಯಕ್ಕೆ ಮಾತ್ರವಲ್ಲದೆ ಮಾನಸಿಕ ಆರೋಗ್ಯಕ್ಕೂ ಪ್ರಯೋಜನಕಾರಿ. ಇದು ಉತ್ತಮ ವ್ಯಾಯಾಮವಾಗಿದ್ದು, ಇದು ಹೃದಯ, ರಕ್ತನಾಳಗಳು ಮತ್ತು ಶ್ವಾಸಕೋಶಗಳನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ.
  • ಇದು ದೇಹದ ಸ್ನಾಯುಗಳನ್ನು ಆರೋಗ್ಯಕರ ಮತ್ತು ಬಲಶಾಲಿಯನ್ನಾಗಿ ಮಾಡುತ್ತದೆ. ಸೈಕ್ಲಿಂಗ್ ರೋಗನಿರೋಧಕ ವ್ಯವಸ್ಥೆಯು ಸರಿಯಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಪೆದ್ದಿ’ಗೆ ಹೆದರಿದ ವರುಣ್ ಧವನ್ ಸಿನಿಮಾ? ಮೊದಲ ದಿನವೇ ಟಿಕೆಟ್​ ಮೇಲೆ ಶೆ.50 ಆಫರ್ – Kannada News

ಬಾಲಿವುಡ್ ಅಂಗಳದಲ್ಲಿ ಈಗ ಹೊಸದೊಂದು ಆಸಕ್ತಿದಾಯಕ ಬೆಳವಣಿಗೆ ನಡೆದಿದೆ. ಈ ಶುಕ್ರವಾರ (ಜೂನ್ 5) ಬಿಡುಗಡೆಯಾಗಲಿರುವ ವರುಣ್ ಧವನ್ ನಟನೆಯ ‘ಹೈ ಜವಾನಿ ತೋ ಇಷ್ಕ್ ಹೋನಾ ಹೈ’ ಚಿತ್ರತಂಡ ಭರ್ಜರಿ ಆಫರ್ ಒಂದನ್ನು ಘೋಷಿಸಿದೆ. ಸಿನಿಮಾದ ಮೊದಲ ದಿನದಂದೇ ಟಿಕೆಟ್ ದರದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡುವುದಾಗಿ ಘೋಷಣೆ ಮಾಡಿದೆ. ಸಾಮಾನ್ಯವಾಗಿ ಸಿನಿಮಾ ರಿಲೀಸ್ ಆಗಿ ಒಂದು ತಿಂಗಳು ಕಳೆದ ಬಳಿಕ ಆಫರ್ ನೀಡುವುದು ಸಾಮಾನ್ಯ. ಆದರೆ, ವರುಣ್ ಧವನ್ ಸಿನಿಮಾ ಬೇರೆಯದೇ ರೀತಿಯ ತಂತ್ರ ಹೂಡಿದೆ

ಈ ಆಫರ್ ಅಡಿಯಲ್ಲಿ ಜೂನ್ 5ರಂದು ‘ಹೈ ಜವಾನಿ ತೋ ಇಷ್ಕ್ ಹೋನಾ ಹೈ’ ಸಿನಿಮಾದ ಕನಿಷ್ಠ ಎರಡು ಟಿಕೆಟ್ ಬುಕ್ ಮಾಡುವವರಿಗೆ, 200 ರೂಪಾಯಿವರೆಗಿನ ಟಿಕೆಟ್‌ಗಳ ಮೇಲೆ 50% ಡಿಸ್ಕೌಂಟ್ ಸಿಗಲಿದೆ. ಇತ್ತೀಚೆಗಷ್ಟೇ ಕರಣ್ ಜೋಹರ್ ಅವರ ‘ಚಾಂದ್ ಮೇರಾ ದಿಲ್’ ಚಿತ್ರಕ್ಕೂ ಇಂತಹುದೇ ಆಫರ್ ನೀಡಲಾಗಿತ್ತು.

‘ಪೆದ್ದಿ’ ಕ್ರೇಜ್‌ಗೆ ಬಾಲಿವುಡ್ ಬೆದರಿತಾ?

ಚಿತ್ರರಂಗದ ವಿಶ್ಲೇಷಕರ ಪ್ರಕಾರ, ಬಾಲಿವುಡ್ ಮೇಕರ್ಸ್ ಈ ರೀತಿ ಮೊದಲ ದಿನವೇ ಭಾರಿ ರಿಯಾಯಿತಿ ನೀಡುತ್ತಿರುವುದರ ಹಿಂದೆ ಗ್ಲೋಬಲ್ ಸ್ಟಾರ್ ರಾಮ್ ಚರಣ್ ಅಭಿನಯದ ‘ಪೆದ್ದಿ’ ಸಿನಿಮಾದ ಅಲೆ ಎದ್ದುಕಾಣುತ್ತಿದೆ. ‘ಪೆದ್ದಿ’ ಸಿನಿಮಾ ಪ್ಯಾನ್-ಇಂಡಿಯಾ ಮಟ್ಟದಲ್ಲಿ ಸಿದ್ಧವಾಗಿದ್ದು, ಹಿಂದಿಯಲ್ಲೂ ಭರ್ಜರಿಯಾಗಿ ರಿಲೀಸ್ ಆಗುತ್ತಿದೆ. ‘ಆರ್​​ಆರ್​​ಆರ್​’ ಚಿತ್ರದ ಸಕ್ಸಸ್ ನಂತರ ಉತ್ತರ ಭಾರತದ ಮಾರ್ಕೆಟ್‌ನಲ್ಲಿ ರಾಮ್ ಚರಣ್ ಅವರಿಗೆ ಇರುವ ಕ್ರೇಜ್ ಮತ್ತು ಖ್ಯಾತಿ ಅಗಾಧವಾಗಿದೆ. ಬಾಲಿವುಡ್‌ನ ಜನಪ್ರಿಯ ನಟಿ ಜಾನ್ವಿ ಕಪೂರ್ ‘ಪೆದ್ದಿ’ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿರುವುದು ಹಿಂದಿ ಬೆಲ್ಟ್‌ನಲ್ಲಿ ಚಿತ್ರಕ್ಕೆ ಮತ್ತಷ್ಟು ಪ್ಲಸ್ ಪಾಯಿಂಟ್ ತಂದುಕೊಟ್ಟಿದೆ.

ಇದನ್ನೂ ಓದಿ: ಡೈಪರ್ ಚೇಂಜ್ ಮಾಡೋದು ಅಂದ್ರೆ ಆಗಲ್ಲ, ಅಲ್ಲಿಂದ ಜಾರಿಕೊಳ್ತೀನಿ; ರಾಮ್ ಚರಣ್

ರಾಮ್ ಚರಣ್ ಹಾಗೂ ಜಾನ್ವಿ ಕಪೂರ್ ಕಾಂಬಿನೇಷನ್‌ನ ‘ಪೆದ್ದಿ’ ಚಿತ್ರವು ಹಿಂದಿ ಮಾರುಕಟ್ಟೆಯಲ್ಲಿ ದೊಡ್ಡ ಮಟ್ಟದ ಕಲೆಕ್ಷನ್ ಮಾಡುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ. ಹೀಗಾಗಿ, ಸೌತ್ ಸಿನಿಮಾದ ಈ ಬಿರುಗಾಳಿಗೆ ಮುನ್ನವೇ ತಮ್ಮ ಚಿತ್ರಕ್ಕೆ ಗರಿಷ್ಠ ಮಟ್ಟದ ಓಪನಿಂಗ್ ಕಲೆಕ್ಷನ್ ಹಾಗೂ ಪ್ರೇಕ್ಷಕರನ್ನು ಸೆಳೆಯಲು ವರುಣ್ ಧವನ್ ಚಿತ್ರತಂಡ ಇಂತಹ ಆಫರ್ ಮೊರೆ ಹೋಗಿದೆ ಎನ್ನಲಾಗುತ್ತಿದೆ. ‘ಟಿಪ್ಸ್ ಫಿಲ್ಮ್ಸ್’ ನಿರ್ಮಿಸಿರುವ ‘ಹೈ ಜವಾನಿ ತೋ ಇಷ್ಕ್ ಹೋನಾ ಹೈ’ ಚಿತ್ರದಲ್ಲಿ ಮೃಣಾಲ್ ಠಾಕೂರ್ ಮತ್ತು ಪೂಜಾ ಹೆಗ್ಡೆ ಕೂಡ ನಟಿಸಿದ್ದಾರೆ. ಡೇವಿಡ್ ಧವನ್ ನಿರ್ದೇಶಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

DK Shivakumar Oath Taking: ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!

ಬೆಂಗಳೂರು, ಜೂನ್ 3: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಇಂದು ಪ್ರಮಾಣವಚನ ಸ್ವೀಕರಿಸುತ್ತಿರುವುದರಿಂದ ಇಡೀ ಬೆಂಗಳೂರು ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ನಿಯೋಜಿತ ಸಿಎಂಗೆ ಶುಭ ಕೋರಲು ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಬೆಂಬಲಿಗರು ನಗರದ ಬಹುತೇಕ ಕಡೆಗಳಲ್ಲಿ ಬೃಹತ್ ಫ್ಲೆಕ್ಸ್, ಬ್ಯಾನರ್ ಹಾಗೂ ಕಟೌಟ್‌ಗಳನ್ನು ಅಳವಡಿಸಿದ್ದಾರೆ. ವಿಶೇಷವಾಗಿ ರಾಜರಾಜೇಶ್ವರಿ ನಗರ (ಆರ್ ಆರ್ ನಗರ) ವ್ಯಾಪ್ತಿಯ ಸುಮನಹಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಡಿ.ಕೆ.ಶಿವಕುಮಾರ್ ಅವರ ಬರೋಬ್ಬರಿ 100 ಅಡಿ ಎತ್ತರದ ಬೃಹತ್ ಕಟೌಟ್ ನಿರ್ಮಿಸಿ ಭರ್ಜರಿಯಾಗಿ ಸಂಭ್ರಮಾಚರಣೆ ನಡೆಸುತ್ತಿದ್ದಾರೆ.

ಇನ್ನೊಂದೆಡೆ, ಪ್ರಮಾಣವಚನ ಸಮಾರಂಭಕ್ಕೆ ಆಗಮಿಸುವ ಹೈಕಮಾಂಡ್ ಹಾಗೂ ವಿವಿಧ ರಾಜ್ಯಗಳ ಗಣ್ಯ ನಾಯಕರನ್ನು ಸ್ವಾಗತಿಸಲು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಹೆದ್ದಾರಿಯುದ್ದಕ್ಕೂ ಸ್ವಾಗತ ಕೋರುವ ಪ್ಲೆಕ್ಸ್‌ಗಳನ್ನು ಅಳವಡಿಸಲಾಗಿದೆ. ಏರ್‌ಪೋರ್ಟ್ ಟೋಲ್ ಪ್ಲಾಜಾದಿಂದ ಹಿಡಿದು ಸಿಟಿಯವರೆಗಿನ ಹೆದ್ದಾರಿ ಬದಿಯ ಸಂಚಾರ ದಟ್ಟಣೆ ಪ್ರದೇಶಗಳಲ್ಲಿ ವಿವಿಧ ನಾಯಕರ ಫೋಟೋಗಳಿರುವ ಪ್ಲೆಕ್ಸ್‌ಗಳು ರಾರಾಜಿಸುತ್ತಿವೆ. ಆದರೆ, ಬಿಗಿ ನಿಯಮಗಳ ನಡುವೆಯೂ ಏರ್‌ಪೋರ್ಟ್ ಹೆದ್ದಾರಿಯಾದ್ಯಂತ ಈ ರೀತಿ ರಾಜಾರೋಷವಾಗಿ ಪ್ಲೆಕ್ಸ್ ಅಳವಡಿಸಿರುವುದಕ್ಕೆ ಸಾರ್ವಜನಿಕ ವಲಯ ಹಾಗೂ ವಾಹನ ಸವಾರರಿಂದ ತೀವ್ರ ಆಕ್ರೋಶವೂ ವ್ಯಕ್ತವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Daily Devotional: ಮರಣ ಹೊಂದುವ ಮುನ್ನ ಅಂತಿಮ ಐದು ನಿಮಿಷ ಹೇಗಿರುತ್ತೆ? ಆಧ್ಯಾತ್ಮಿಕ ವಿಶ್ಲೇಷಣೆ ಇಲ್ಲಿದೆ – Kannada News

“ಜಾತಸ್ಯ ಮರಣಂ ಧ್ರುವಂ” ಎಂಬ ವೇದವಾಕ್ಯದಂತೆ, ಹುಟ್ಟಿದ ಪ್ರತಿಯೊಬ್ಬರಿಗೂ ಮರಣ ನಿಶ್ಚಿತ. ರೋಗರುಜಿನೆಗಳು, ಅಪಘಾತಗಳು ಅಥವಾ ಹೃದಯಾಘಾತದಂತಹ ಕಾರಣಗಳಿಂದ ಮರಣ ಸಂಭವಿಸಬಹುದಾದರೂ, ಈ ಅಂತಿಮ ಕ್ಷಣಗಳಲ್ಲಿ, ವಿಶೇಷವಾಗಿ ಆತ್ಮ ದೇಹವನ್ನು ತ್ಯಜಿಸುವ ಕೊನೆಯ ಐದು ನಿಮಿಷಗಳಲ್ಲಿ ಏನಾಗುತ್ತದೆ ಎಂಬುದು ಆಧ್ಯಾತ್ಮಿಕವಾಗಿ ಮಹತ್ವಪೂರ್ಣವಾಗಿದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ.

ಗುರೂಜಿಯವರು ಹೇಳುವಂತೆ, ಸಾವಿನ ಕೊನೆಯ ಐದು ನಿಮಿಷಗಳಲ್ಲಿ, ದೇಹವು ಹಲವಾರು ಪ್ರಕ್ರಿಯೆಗಳಿಗೆ ಒಳಗಾಗುತ್ತದೆ. ಮೊದಲನೆಯದಾಗಿ, ವ್ಯಕ್ತಿಗೆ ತನ್ನ ಪೂರ್ವಜರು ನೆನಪಾಗುತ್ತಾರೆ. ಈ ದೇಹ ಎಲ್ಲಿಂದ ಬಂತು, ಹಿಂದಿನವರು ಯಾರು ಎಂಬ ಪ್ರಶ್ನೆಗಳು ಮನಸ್ಸಿನಲ್ಲಿ ಮೂಡುತ್ತವೆ. ಇದರ ಜೊತೆಗೆ, ನಮ್ಮ ಪಂಚೇಂದ್ರಿಯಗಳು – ಕಣ್ಣು, ಮೂಗು, ಕಿವಿ, ಬಾಯಿ – ಒಂದೊಂದಾಗಿ ಸ್ಥಗಿತಗೊಳ್ಳಲು ಪ್ರಾರಂಭಿಸುತ್ತವೆ. ಕಣ್ಣುಗಳು ಮಂಪರಾಗುತ್ತವೆ, ಯಾರು ಕಾಣಿಸುವುದಿಲ್ಲ. ಕಿವಿಗಳು ಧ್ವನಿಗಳನ್ನು ಗ್ರಹಿಸುವುದಿಲ್ಲ, ಮತ್ತು ವ್ಯಕ್ತಿಯು ಮಾತನಾಡಲು ಅಥವಾ ಉಸಿರಾಡಲು ಕಷ್ಟಪಡುತ್ತಾನೆ. ಇದು ಮೃತ್ಯು ಸಮೀಪಿಸುತ್ತಿದೆ ಎಂಬುದರ ಸೂಚನೆಯಾಗಿದೆ.

ಗರುಡ ಪುರಾಣವು ಸಾವಿನ ಪಯಣವನ್ನು  ಆತ್ಮದ ವರ್ಗಾವಣೆ ಎಂದು ವಿವರಿಸುತ್ತದೆ. ಅಂದರೆ, ಒಂದು ದೇಹದಿಂದ ಆತ್ಮ ಇನ್ನೊಂದು ದೇಹಕ್ಕೆ ಸಾಗಲು ಸಿದ್ಧವಾಗುತ್ತದೆ. ಈ ಪ್ರಕ್ರಿಯೆಯು ಕೊನೆಯ ಐದು ನಿಮಿಷಗಳಲ್ಲಿ ತೀವ್ರಗೊಳ್ಳುತ್ತದೆ. ದೇಹವು ಆ ಕ್ಷಣದಲ್ಲಿ ಒದ್ದಾಡಬಹುದು, ಆದರೆ ಪುಣ್ಯವಂತರಿಗೆ ಮತ್ತು ಸದಾ ಒಳ್ಳೆಯ ಕಾರ್ಯಗಳನ್ನು ಮಾಡಿದವರಿಗೆ ಈ ತೊಂದರೆಗಳು ಇರುವುದಿಲ್ಲ. ಅಂತಹವರು ನಗುನಗುತ್ತಲೇ, ಶಾಂತಿಯುತವಾಗಿ ಜೀವವನ್ನು ತ್ಯಜಿಸುತ್ತಾರೆ. ಅವರ ಮುಖದಲ್ಲಿ ಒಂದು ವಿಶೇಷವಾದ ಕಾಂತಿ ಮೂಡುತ್ತದೆ, ಇದು ಅವರ ಆತ್ಮದ ಶಾಂತಿಯುತ ನಿರ್ಗಮನದ ಸಂಕೇತವಾಗಿದೆ.

ಇದನ್ನೂ ಓದಿ: ಮದುವೆ ಆಮಂತ್ರಣ ಪತ್ರಿಕೆಯಲ್ಲಿ ವಧು-ವರರ ಫೋಟೋ ಹಾಕಬಾರದು ಯಾಕೆ?

ಈ ಅಂತಿಮ ಕ್ಷಣಗಳಲ್ಲಿ ವ್ಯಕ್ತಿ ಅನುಭವಿಸುವ ಭಾವನೆಗಳು ಅವರ ಜೀವನದಲ್ಲಿ ಮಾಡಿದ ಕರ್ಮಗಳನ್ನು ಅವಲಂಬಿಸಿವೆ. ದುಷ್ಟ ವ್ಯಕ್ತಿಗಳಿಗೆ, ತಪ್ಪು ಕಾರ್ಯಗಳನ್ನು ಮಾಡಿದವರಿಗೆ ಭಯ ಮತ್ತು ಆತಂಕ ಆವರಿಸಿಕೊಳ್ಳುತ್ತದೆ. ಆದರೆ, ಸದ್ಗುಣ ಸಂಪನ್ನರಿಗೆ, ಒಳ್ಳೆಯ ಕೆಲಸ ಮಾಡಿದವರಿಗೆ ಸಂತೋಷ, ತೃಪ್ತಿ ಮತ್ತು ಶಾಂತಿ ಇರುತ್ತದೆ. ಲೌಕಿಕ ಆಸ್ತಿ, ಹಣಕಾಸು ಅಥವಾ ಸಂಬಂಧಗಳ ಮೇಲಿನ ಹಿಡಿತ ಈ ಸಮಯದಲ್ಲಿ ಅರ್ಥ ಕಳೆದುಕೊಳ್ಳುತ್ತದೆ. ಆತ್ಮವು ಕೇವಲ ಮೂಗು ಅಥವಾ ಬಾಯಿಯಿಂದ ಹೊರಹೋಗದೆ, ದೇಹದಲ್ಲಿರುವ ನವದ್ವಾರಗಳ ಮೂಲಕ ಹೊರಡುತ್ತದೆ ಎಂದು ಗರುಡ ಪುರಾಣ ಹೇಳುತ್ತದೆ.

ಇಂತಹ ಕಠಿಣ ಕ್ಷಣಗಳಲ್ಲಿ ಉತ್ತಮ ಅನುಭವವನ್ನು ಪಡೆಯಲು, ಜೀವನದಲ್ಲಿ ಧರ್ಮದ ಹಾದಿಯಲ್ಲಿ ನಡೆಯುವುದು ಅತಿ ಮುಖ್ಯ. ದಾನ-ಧರ್ಮ ಮಾಡುವುದು, ವೃದ್ಧರಿಗೆ, ಮಕ್ಕಳನ್ನು ಹಾಗೂ ಅಶಕ್ತರಿಗೆ ಸಹಾಯ ಮಾಡುವುದು, ಮತ್ತು ಸದಾ ಸಕಾರಾತ್ಮಕ ಆಲೋಚನೆಗಳನ್ನು ಹೊಂದಿರುವುದು ಭಗವಂತನ ಕೃಪೆಗೆ ಪಾತ್ರರಾಗುವಂತೆ ಮಾಡುತ್ತದೆ. ಅಧರ್ಮದ ಜೀವನ ನಡೆಸಿದಾಗ, ಕೊನೆಯ ಐದು ನಿಮಿಷಗಳು ತುಂಬಾ ಕಷ್ಟಕರವಾಗುತ್ತವೆ. ನಮ್ಮ ಇಷ್ಟದೇವತೆ ಅಥವಾ ಕುಲದೇವತೆಯನ್ನು ಆ ಕ್ಷಣದಲ್ಲಿ ಸ್ಮರಿಸುವುದರಿಂದ ಮನಸ್ಸಿಗೆ ಶಾಂತಿ ಲಭಿಸುತ್ತದೆ. ದಾಸರು ಹೇಳಿದಂತೆ, “ಇನ್ನೂ ಕಾಲ ಕೂಡಿ ಬಂದಿಲ್ಲ, ಈಗಲಾದರೂ ಎಚ್ಚರಿಕೆಯಿಂದಿರು” ಎಂಬುದು ಮರಣದ ಅಂತಿಮ ಕ್ಷಣಗಳಿಗಾಗಿ ಸಿದ್ಧತೆ ಮಾಡಿಕೊಳ್ಳಲು ನಮಗೆ ನೀಡುವ ಸಂದೇಶ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಡಾ.ಬಸವರಾಜ್ ಗುರೂಜಿ, ವೈದಿಕ ಜ್ಯೋತಿಷಿ (9972848937)

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಡಿಕೆ ಶಿವಕುಮಾರ್ ಪ್ರಮಾಣವಚನ: ಖಾಕಿ ಭದ್ರಕೋಟೆಯಾದ ಲೋಕಭವನ! 2000ಕ್ಕೂ ಹೆಚ್ಚು ಪೊಲೀಸ್​ ಸಿಬ್ಬಂದಿ ನಿಯೋಜನೆ – Kannada News

ಲೋಕಭವನ ಸುತ್ತ ಬ್ಯಾರಿಕೇಡ್ ಹಾಕಿ ಭದ್ರತಾ ಸಿದ್ಧತೆ ಮಾಡಿರುವುದುImage Credit source: tv9

ಬೆಂಗಳೂರು, ಜೂನ್ 3: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಇಂದು ಅಧಿಕಾರ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ, ಸಮಾರಂಭ ನಡೆಯಲಿರುವ ಲೋಕಭವನ ಹಾಗೂ ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ನೇತೃತ್ವದಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಹಾಗೂ ಸಂಚಾರ ದಟ್ಟಣೆ ನಿಯಂತ್ರಿಸಲು ಇಡೀ ಜಾಗವನ್ನು ವಿವಿಧ ಸೆಕ್ಟರ್‌ಗಳಾಗಿ ವಿಂಗಡಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಮುಖ್ಯಾಂಶಗಳು

  • ಕಮಿಷನರ್ ಸೀಮಂತ್ ಕುಮಾರ್ ನೇತೃತ್ವದಲ್ಲಿ ಭದ್ರತೆ.
  • ಭದ್ರತೆಗೆ 3 ಜಂಟಿ ಆಯುಕ್ತರು, 20 ಡಿಸಿಪಿಗಳು ಸೇರಿದಂತೆ 2,000ಕ್ಕೂ ಹೆಚ್ಚು ಸಿಬ್ಬಂದಿ ನಿಯೋಜನೆ.
  • ಲೋಕಭವನದ ಆವರಣಕ್ಕೆ ವೆಹಿಕಲ್ ಪಾಸ್ ಇದ್ದ ಗಣ್ಯರಿಗೆ ಮಾತ್ರ ಪ್ರವೇಶ.

ಡಿಕೆ ಶಿವಕುಮಾರ್ ಪ್ರಮಾಣವಚನಕ್ಕೆ ಭದ್ರತೆ ಹೇಗಿದೆ?

ಈ ಐತಿಹಾಸಿಕ ಸಮಾರಂಭದ ಯಶಸ್ವಿ ನಿರ್ವಹಣೆಗಾಗಿ ಬೆಂಗಳೂರು ನಗರದ ಪೊಲೀಸರ ಜೊತೆಗೆ ಬೇರೆ ಜಿಲ್ಲೆಗಳಿಂದಲೂ ಕೆಲವು ದಕ್ಷ ಅಧಿಕಾರಿಗಳನ್ನು ಕಮಿಷನರ್ ಕರೆಸಿಕೊಳ್ಳಲಾಗಿದೆ. ಬಂದೋಬಸ್ತ್‌ಗಾಗಿ 3 ಮಂದಿ ಜಂಟಿ ಪೊಲೀಸ್ ಆಯುಕ್ತರು, 20ಕ್ಕೂ ಹೆಚ್ಚು ಡಿಸಿಪಿಗಳು (DCP), 50ಕ್ಕೂ ಹೆಚ್ಚು ಎಸಿಪಿಗಳು (ACP), 100ಕ್ಕೂ ಹೆಚ್ಚು ಇನ್ಸ್‌ಪೆಕ್ಟರ್‌ಗಳು, 300ಕ್ಕೂ ಹೆಚ್ಚು ಪಿಎಸ್‌ಐಗಳು (PSI), 700ಕ್ಕೂ ಹೆಚ್ಚು ಕಾನ್ಸ್‌ಟೇಬಲ್‌ಗಳು ಹಾಗೂ ಕೆಎಸ್‌ಆರ್‌ಪಿ (KSRP) ತುಕಡಿಗಳು ಸೇರಿದಂತೆ ಒಟ್ಟು ಎರಡು ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಭದ್ರತೆಯ ಉಸ್ತುವಾರಿಗಾಗಿ ಪ್ರತಿ ಸೆಕ್ಟರ್‌ಗೂ ಓರ್ವ ಡಿಸಿಪಿ ದರ್ಜೆಯ ಅಧಿಕಾರಿಗೆ ನೇತೃತ್ವದ ಜವಾಬ್ದಾರಿ ನೀಡಲಾಗಿದೆ.

ವಿವಿಐಪಿಗಳ ವಾಹನ ಸಂಚಾರಕ್ಕೆ ಕಠಿಣ ನಿಯಮ

ಲೋಕಭವನದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಕೇವಲ ವೆಹಿಕಲ್ ಪಾಸ್ (ವಾಹನ ಪಾಸ್) ಹೊಂದಿರುವ ವಿಐಪಿ ಹಾಗೂ ವಿವಿಐಪಿಗಳಿಗೆ ಮಾತ್ರವೇ ನೇರವಾಗಿ ಆವರಣದ ಒಳಗಡೆ ವಾಹನ ಚಾಲನೆ ಮಾಡಲು ಅನುಮತಿ ನೀಡಲಾಗಿದೆ. ಗಣ್ಯರೆಲ್ಲರೂ ಕಾರ್ಯಕ್ರಮ ಆರಂಭವಾಗುವ ಕನಿಷ್ಠ ಒಂದು ಗಂಟೆ ಮುಂಚಿತವಾಗಿಯೇ ಆಸನಗಳನ್ನು ಅಲಂಕರಿಸುವಂತೆ ಸೂಚಿಸಲಾಗಿದೆ. ಇನ್ನು ವಾಹನ ಪಾಸ್ ಇಲ್ಲದೆ ಆಗಮಿಸುವ ಗಣ್ಯರ ವಾಹನಗಳಿಗೆ ತಿಮ್ಮಯ್ಯ ಸರ್ಕಲ್ ಬಳಿಯೇ ನಿರ್ಬಂಧ ವಿಧಿಸಲಾಗಿದ್ದು, ಅಲ್ಲಿಂದ ಮುಂದೆ ಯಾವುದೇ ಖಾಸಗಿ ವಾಹನಗಳ ಪ್ರವೇಶ ಇರುವುದಿಲ್ಲ.

ಇದನ್ನೂ ಓದಿ: ಇಂದಿನಿಂದ ಡಿಕೆ ಶಿವಕುಮಾರ್ ಸಿಎಂ: ಬೆಂಗಳೂರು ಟನಲ್ ರೋಡ್ ಯೋಜನೆಗೆ ಸಿಗುತ್ತಾ ಗ್ರೀನ್ ಸಿಗ್ನಲ್? ಹೆಚ್ಚಿದ ಕುತೂಹಲ

ಪಾಸ್ ಇಲ್ಲದ ಗಣ್ಯರನ್ನು ತಿಮ್ಮಯ್ಯ ಸರ್ಕಲ್‌ನಿಂದ ಲೋಕಭವನದ ಮುಖ್ಯ ವೇದಿಕೆಯವರೆಗೆ ಸುರಕ್ಷಿತವಾಗಿ ಕರೆತರಲು ವಿಶೇಷವಾಗಿ 6 ಸೀಟುಗಳ ಸಾಮರ್ಥ್ಯವಿರುವ ಎಲೆಕ್ಟ್ರಿಕ್ ಗಾಲ್ಫ್ ಕಾರ್ಟ್ (Golf Cart) ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಪಾಸ್ ಪಡೆದ ಗಣ್ಯರ ಅಧಿಕೃತ ಪಟ್ಟಿಯನ್ನು ಪೊಲೀಸರು ಪಡೆದುಕೊಂಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ವರದಿ: ವಿಕಾಸ್, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕುವೈತ್, ಬಹ್ರೇನ್‌ನಲ್ಲಿರುವ ಅಮೆರಿಕ ನೆಲೆಗಳ ಮೇಲೆ ಇರಾನ್ ದಾಳಿ – Kannada News

ಕುವೈತ್, ಜೂನ್ 03: ಕೆಶ್ಮ್​ ದ್ವೀಪದ ಮೇಲಿನ ದಾಳಿಗೆ ಪ್ರತೀಕಾರವಾಗಿ ಇರಾನ್(Iran) ಕುವೈತ್ ಹಾಗೂ ಬಹ್ರೇನ್​ನಲ್ಲಿರುವ ಅಮೆರಿಕ ನೆಲೆಗಳ ಮೇಲೆ ದಾಳಿ ನಡೆಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪರ್ಷಿಯನ್ ಕೊಲ್ಲಿ ವಲಯದಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಮಿಲಿಟರಿ ಉದ್ವಿಗ್ನತೆಯ ನಡುವೆಯೇ, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಹಾಗೂ ನಾಗರಿಕರ ಸುರಕ್ಷತೆಯನ್ನು ಕಾಯ್ದುಕೊಳ್ಳಲು ಕುವೈತ್ ಮತ್ತು ಬಹ್ರೇನ್ ಸರ್ಕಾರಗಳು ಅತ್ಯಂತ ವ್ಯವಸ್ಥಿತ ಹಾಗೂ ಯಶಸ್ವಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿವೆ.

ಬುಧವಾರ ಮುಂಜಾನೆ ಇರಾನ್‌ನ ಕೆಶ್ಮ್ ದ್ವೀಪದ ಘಟನೆಗೆ ಪ್ರತೀಕಾರವಾಗಿ ಕುವೈತ್ ಮತ್ತು ಬಹ್ರೇನ್‌ನಲ್ಲಿರುವ ಅಮೆರಿಕದ ಮಿಲಿಟರಿ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ಹಾಗೂ ಡ್ರೋನ್ ದಾಳಿ ನಡೆಸಿರುವುದಾಗಿ ಇರಾನ್‌ನ ಸಶಸ್ತ್ರ ಪಡೆಗಳು (IRIB) ಹೇಳಿಕೊಂಡ ಬೆನ್ನಲ್ಲೇ, ಅಮೆರಿಕ ಸೇನೆಯು ಈ ಎಲ್ಲ ವರದಿಗಳನ್ನು ತಳ್ಳಿ ಹಾಕಿದೆ.

ಅಮೆರಿಕವು ವಾರಾಂತ್ಯದಲ್ಲಿ ಇರಾನ್‌ನ ಸೇನಾ ನೆಲೆಗಳ ಮೇಲೆ ದಾಳಿ ನಡೆಸಿದೆ ಎಂದು ಹೇಳಿದ್ದು, ಅದಕ್ಕೆ ಪ್ರತಿಯಾಗಿ ಅಮೆರಿಕದ ನೆಲೆಯೊಂದನ್ನು ಗುರಿಯಾಗಿಸಿಕೊಂಡಿರುವುದಾಗಿ ತೆಹ್ರಾನ್ ಹೇಳಿದೆ. ಇದರಿಂದ ಹೋರ್ಮುಜ್ ಜಲಸಂಧಿಯ ಸುತ್ತ ಒಂದು ವಾರದೊಳಗೆ ಮೂರನೇ ಬಾರಿ ಉದ್ವಿಗ್ನತೆ ಹೆಚ್ಚಾಗಿದೆ. ಅಮೆರಿಕದ ಕೇಂದ್ರ ಕಮಾಂಡ್, ಅಂತಾರಾಷ್ಟ್ರೀಯ ಜಲಪ್ರದೇಶದ ಮೇಲೆ ಅಮೆರಿಕದ ಡ್ರೋನ್ ಅನ್ನು ಹೊಡೆದುರುಳಿಸುವುದನ್ನು ಒಳಗೊಂಡ ಇರಾನ್‌ನ ಕ್ರಮಗಳ ನಂತರ “ಸ್ವಯಂರಕ್ಷಣಾತ್ಮಕ ದಾಳಿಗಳನ್ನು” ನಡೆಸಿರುವುದಾಗಿ ತಿಳಿಸಿದೆ.

ಬುಧವಾರ ಮುಂಜಾನೆ ಕುವೈತ್‌ನಾದ್ಯಂತ ಜೋರಾದ ಸ್ಫೋಟದ ಶಬ್ದಗಳು ಕೇಳಿಬಂದಾಗ ಕುವೈತ್ ಸೇನೆಯು ತಕ್ಷಣವೇ ಕಾರ್ಯಪ್ರವೃತ್ತವಾಯಿತು. ಕುವೈತ್ ಸೇನೆಯ ಜನರಲ್ ಸ್ಟಾಫ್ ನೀಡಿರುವ ಮಾಹಿತಿ ಪ್ರಕಾರ, ದೇಶದ ಅತ್ಯಾಧುನಿಕ ವಾಯು ರಕ್ಷಣಾ ವ್ಯವಸ್ಥೆಗಳು (Air Defence Systems) ಅತ್ಯಂತ ಯಶಸ್ವಿಯಾಗಿ ವಾಯುಗಡಿಗೆ ನುಗ್ಗಿದ ಪ್ರತಿಕೂಲ ಕ್ಷಿಪಣಿ ಮತ್ತು ಡ್ರೋನ್‌ಗಳನ್ನು ತಡೆದು ಹೊಡೆದುರುಳಿಸಿವೆ ಎಂದು ಅಮೆರಿಕ ಹೇಳಿದೆ.

ಮತ್ತಷ್ಟು ಓದಿ: ಇರಾನ್ ಮೇಲೆ ಮತ್ತೆ ಅಮೆರಿಕದ ‘ಆತ್ಮರಕ್ಷಣಾ ದಾಳಿ’: ಸೈನಿಕರು ಸುರಕ್ಷಿತ

ರಕ್ಷಣಾ ಸಚಿವಾಲಯದ ಅಧಿಕೃತ ವಕ್ತಾರ ಕರ್ನಲ್ ಸೌದ್ ಅಬ್ದುಲಜೀಜ್ ಅಲ್-ಒತೈಬಿ ಅವರು ಸಾರ್ವಜನಿಕರಿಗೆ ಧೈರ್ಯ ತುಂಬಿದ್ದು, ವಾಯು ರಕ್ಷಣಾ ಪಡೆಗಳು ಪರಿಸ್ಥಿತಿಯನ್ನು ಸಂಪೂರ್ಣ ನಿಯಂತ್ರಣದಲ್ಲಿಟ್ಟುಕೊಂಡಿವೆ ಎಂದು ತಿಳಿಸಿದ್ದಾರೆ.

ವಿಡಿಯೋ

ಆಕಾಶದಲ್ಲಿ ಕ್ಷಿಪಣಿಗಳನ್ನು ಯಶಸ್ವಿಯಾಗಿ ಧ್ವಂಸಗೊಳಿಸಿದಾಗ ಬಿದ್ದಿರಬಹುದಾದ ಭಗ್ನಾವಶೇಷಗಳು ಅಥವಾ ಚೂರುಗಳನ್ನು ನಾಗರಿಕರು ಮುಟ್ಟಬಾರದು ಮತ್ತು ಯಾವುದೇ ಅನುಮಾನಾಸ್ಪದ ವಸ್ತು ಕಂಡರೆ ತಕ್ಷಣವೇ ತುರ್ತು ಸೇವೆಗಳ ‘112’ ಹಾಟ್‌ಲೈನ್‌ಗೆ ತಿಳಿಸಬೇಕು ಎಂದು ಸೇನೆ ವಿನಂತಿಸಿದೆ. ಸರ್ಕಾರದ ಈ ತ್ವರಿತ ಸಂವಹನದಿಂದಾಗಿ ಸಾರ್ವಜನಿಕ ವಲಯದಲ್ಲಿ ಯಾವುದೇ ಗೊಂದಲ ಸೃಷ್ಟಿಯಾಗದೆ ಶಾಂತಿ ನೆಲೆಸಿದೆ.

ಇರಾನ್‌ನ ಇಸ್ಲಾಮಿಕ್ ಕ್ರಾಂತಿಕಾರಿ ಗಾರ್ಡ್ ಪಡೆ (IRGC), ದಕ್ಷಿಣ ಇರಾನ್ ಮೇಲಿನ ಹಿಂದಿನ ದಾಳಿಗೆ ಪ್ರತೀಕಾರವಾಗಿ ಅಮೆರಿಕದ ಪಡೆಗಳು ಬಳಸುತ್ತಿದ್ದ ವಾಯುನೆಲೆಯನ್ನು ಗುರಿಯಾಗಿಸಿಕೊಂಡಿರುವುದಾಗಿ ಹೇಳಿದೆ. ಇದೇ ವೇಳೆ, ಈ ಸಂಘರ್ಷದ ಸಂದರ್ಭದಲ್ಲಿ ತನ್ನ ವಾಯು ರಕ್ಷಣಾ ವ್ಯವಸ್ಥೆಗಳು ಶತ್ರು ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ತಡೆದಿರುವುದಾಗಿ ಕುವೈತ್ ತಿಳಿಸಿದೆ. ಹಲವು ತಿಂಗಳುಗಳಿಂದ ನಡೆಯುತ್ತಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿದ್ದ ಮಾತುಕತೆಗಳು ವಾರಾಂತ್ಯದಲ್ಲಿ ಸ್ಥಗಿತಗೊಂಡ ಸಂದರ್ಭದಲ್ಲೇ ಈ ಇತ್ತೀಚಿನ ದಾಳಿಗಳು ನಡೆದಿವೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಟೀಕೆಗಳ ಬೆನ್ನಲ್ಲೇ ಟೀಮ್ ಇಂಡಿಯಾಗೆ ನಬಿ ಎಂಟ್ರಿ..! – Kannada News

ದೇಶಿಯ ಕ್ರಿಕೆಟ್‌ನಲ್ಲಿ ಭರ್ಜರಿ ಪ್ರದರ್ಶನ ನೀಡಿದರೂ ಭಾರತ ತಂಡಕ್ಕೆ ಆಯ್ಕೆಯಾಗದ ಜಮ್ಮು ಮತ್ತು ಕಾಶ್ಮೀರದ ಸ್ಟಾರ್ ವೇಗಿ ಆಖಿಬ್ ನಬಿ ಅವರಿಗೆ ಕೊನೆಗೂ ಟೀಮ್ ಇಂಡಿಯಾದಿಂದ ಬುಲಾವ್ ಬಂದಿದೆ. ಆದರೆ ಆಟಗಾರನಾಗಿ ಅಲ್ಲ. ಬದಲಾಗಿ ಟೀಮ್ ಇಂಡಿಯಾದ ನೆಟ್​ ಬೌಲರ್ ಆಗಿ ಎಂಬುದು ವಿಶೇಷ.

ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯದ ಸಿದ್ಧತೆಗಾಗಿ ಬಿಸಿಸಿಐ ಆಖಿಬ್ ನಬಿ ಅವರನ್ನು ಅಧಿಕೃತ ನೆಟ್ ಬೌಲರ್ ಹಾಗೂ ಸ್ಟ್ಯಾಂಡ್‌ಬೈ ಆಟಗಾರನಾಗಿ ಆಯ್ಕೆ ಮಾಡಿದೆ. ಅದರಂತೆ ಇದೀಗ ಅವರು ಮುಲ್ಲನ್‌ಪುರದಲ್ಲಿ ಟೀಮ್ ಇಂಡಿಯಾ ಆಟಗಾರರಿಗೆ ಬೌಲಿಂಗ್ ಅಭ್ಯಾಸ ನಡೆಸಿಕೊಡುತ್ತಿದ್ದಾರೆ.

‘ಬಾರಾಮುಲ್ಲಾ ಎಕ್ಸ್‌ಪ್ರೆಸ್’ ಸಾಧನೆ:

ಬಾರಾಮುಲ್ಲಾ ಎಕ್ಸ್‌ಪ್ರೆಸ್ ಎಂದೇ ಖ್ಯಾತರಾಗಿರುವ ಆಖಿಬ್ ನಬಿ, ಕಳೆದ ಎರಡು ರಣಜಿ ಸೀಸನ್‌ಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು.

  •  2025-26ರ ರಣಜಿ ಟ್ರೋಫಿ ಸೀಸನ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ತಂಡ ಚಾಂಪಿಯನ್ ಪಟ್ಟಕ್ಕೇರಲು ಅಖಿಬ್ ಪ್ರಮುಖ ಪಾತ್ರವಹಿಸಿದ್ದರು.
  • ಆ ಸೀಸನ್‌ನಲ್ಲಿ ಆಖಿಬ್ ನಬಿ ಪಡೆದ ವಿಕೆಟ್​ಗಳ ಸಂಖ್ಯೆ ಬರೋಬ್ಬರಿ 60
  • 2024-25 ಹಾಗೂ 2025-26ರ ರಣಜಿ ಸೀಸನ್​ಗಳ ಮೂಲ ಆಖಿಬ್ ನಬಿ ಒಟ್ಟು  104 ವಿಕೆಟ್‌ಗಳನ್ನು ಕಬಳಿಸಿದ್ದರು.

ಇದಾಗ್ಯೂ ಅಫ್ಘಾನಿಸ್ತಾನ್ ವಿರುದ್ಧದ ಟೆಸ್ಟ್ ಪಂದ್ಯಕ್ಕೆ ಆಖಿಬ್ ನಬಿ ಅವರನ್ನು ಆಯ್ಕೆ ಮಾಡಿರಲಿಲ್ಲ. ಈ ಬಗ್ಗೆ ಮಾಜಿ ಕ್ರಿಕೆಟರುಗಳಿಂದ ವ್ಯಾಪಕ ಟೀಕೆಗಳು ವ್ಯಕ್ತವಾಗಿದ್ದವು.

ಅದರಲ್ಲೂ ದಿಲೀಪ್ ವೆಂಗ್​ಸರ್ಕಾರ್ ಆಯ್ಕೆ ಸಮಿತಿಯ ನಡೆಯನ್ನು ವ್ಯಂಗ್ಯವಾಡಿ, ರಣಜಿ ಟೂರ್ನಿಯನ್ನೇ ಕ್ಯಾನ್ಸಲ್ ಮಾಡುವಂತೆ ಸೂಚಿಸಿದ್ದರು. ಮತ್ತೊಂದೆಡೆ ಸಂಜಯ್ ಮಂಜ್ರೇಕರ್ ಕೂಡ ಇದು ಅನ್ಯಾಯದ ನಡೆ ಎಂದು ಟೀಕಿಸಿದ್ದರು.

ಹೀಗೆ ಎಲ್ಲಾ ಕಡೆಯಿಂದ ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ ವಿರುದ್ಧ ಟೀಕೆಗಳು ವ್ಯಕ್ತವಾಗುತ್ತಿದ್ದಂತೆ, ಇದೀಗ ಆಖಿಬ್ ನಬಿ ಅವರನ್ನು ಟೀಮ್ ಇಂಡಿಯಾಗೆ ಹೆಚ್ಚುವರಿ ಆಟಗಾರನಾಗಿ ಆಯ್ಕೆ ಮಾಡಿದ್ದಾರೆ.

ಸದ್ಯಕ್ಕೆ ಟೀಮ್ ಇಂಡಿಯಾಗೆ ಎಂಟ್ರಿ ಕೊಟ್ಟಿರುವ ಆಖಿಬ್ ನಬಿಗೆ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಲು ಅವಕಾಶ ಸಿಗುವುದಿಲ್ಲ. ಏಕೆಂದರೆ ಅವರನ್ನು 15 ಸದಸ್ಯರ ತಂಡದಲ್ಲಿ ಪರಿಗಣಿಸಲಾಗಿಲ್ಲ. ಬದಲಾಗಿ ಸ್ಟ್ಯಾಂಡ್ ಬೈ ಪ್ಲೇಯರ್​ಗಳ ಪಟ್ಟಿಯಲ್ಲಿರಿಸಲಾಗಿದೆ.

ಒಂದು ವೇಳೆ ಯಾವುದಾದರೂ ಬೌಲರ್​ ಗಾಯಗೊಂಡರೆ ಆಖಿಬ್ ನಬಿ ಅವರನ್ನು 15 ಸದಸ್ಯರುಗಳ ಬಳಗಕ್ಕೆ ಆಯ್ಕೆ ಮಾಡಲಾಗುತ್ತದೆ. ಹೀಗಾಗಿ ಅಫ್ಘಾನಿಸ್ತಾನ್ ವಿರುದ್ಧದ ಟೆಸ್ಟ್ ಪಂದ್ಯಕ್ಕೂ ಮುನ್ನ ನಬಿ ಟೀಮ್ ಇಂಡಿಯಾದ ನೆಟ್ ಬೌಲರ್​ ಆಗಿ ಮುಂದುವರೆಯಲಿದ್ದಾರೆ.

ಭಾರತ ಟೆಸ್ಟ್ ತಂಡ: ಶುಭ್​ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್ (ಉಪ ನಾಯಕ), ಸಾಯಿ ಸುದರ್ಶನ್, ರಿಷಭ್ ಪಂತ್, ದೇವದತ್ ಪಡಿಕ್ಕಲ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಮಾನವ್ ಸುತಾರ್, ಗುರ್ನೂರ್ ಬ್ರಾರ್, ಧ್ರುವ್ ಜುರೆಲ್, ಹರ್ಷ್ ದುಬೆ.

ಇದನ್ನೂ ಓದಿ: ವೈಭವ್ ಸೂರ್ಯವಂಶಿಯಿಂದ ರಾಜಸ್ಥಾನ್ ರಾಯಲ್ಸ್​ಗೆ 33.87 ಕೋಟಿ ರೂ. ಲಾಭ!

ಟೀಮ್ ಇಂಡಿಯಾ ನೆಟ್ ಬೌಲರ್‌ಗಳ ಪಟ್ಟಿ:

  • ವೇಗದ ಬೌಲರ್‌ಗಳು: ಆಖಿಬ್ ನಬಿ, ಪ್ರಿನ್ಸ್ ಯಾದವ್, ಗುರ್ಜಪ್ನೀತ್ ಸಿಂಗ್.
  • ಸ್ಪಿನ್ನರ್‌ಗಳು: ಸಾರಂಶ್ ಜೈನ್ (ಆಫ್-ಸ್ಪಿನ್), ಜೀಶನ್ ಅನ್ಸಾರಿ (ಲೆಗ್-ಸ್ಪಿನ್), ಶಿವಾಂಗ್ ಕುಮಾರ್ (ಚೈನಾಮನ್).

Published On – 9:04 am, Wed, 3 June 26

Source link

Garuda Purana: ಅಂತ್ಯಸಂಸ್ಕಾರದ ನಂತರ ಹಿಂತಿರುಗಿ ನೋಡಬಾರದು ಯಾಕೆ? ಶಾಸ್ತ್ರಗಳು ಹೇಳುವುದೇನು? – Kannada News

ಅಂತ್ಯಸಂಸ್ಕಾರದ ನಂತರ ಹಿಂತಿರುಗಿ ನೋಡಬಾರದು ಯಾಕೆ?Image Credit source: Pinterest

ಹಿಂದೂ ಧರ್ಮದಲ್ಲಿ ಮನುಷ್ಯನ ಜನನದಿಂದ ಮರಣದವರೆಗೆ ಒಟ್ಟು 16 ಸಂಸ್ಕಾರಗಳನ್ನು ಹೇಳಲಾಗಿದೆ. ಇವುಗಳಲ್ಲಿ 16ನೇ ಹಾಗೂ ಕೊನೆಯ ಸಂಸ್ಕಾರವೇ ‘ಅಂತ್ಯಸಂಸ್ಕಾರ’. ಗರುಡ ಪುರಾಣದ ಪ್ರಕಾರ “ಯಾವುದೇ ವ್ಯಕ್ತಿಯ ಅಂತ್ಯಸಂಸ್ಕಾರ ಮುಗಿದ ನಂತರ, ಅವರ ಕುಟುಂಬದವರು ಅಥವಾ ಸಂಬಂಧಿಕರು ಸ್ಮಶಾನದಿಂದ ವಾಪಸ್ ಬರುವಾಗ ಎಂದಿಗೂ ಹಿಂತಿರುಗಿ (ತಿರುಗಿ) ನೋಡಬಾರದು.” ಇದರ ಹಿಂದೆ ಒಂದು ದೊಡ್ಡ ಧಾರ್ಮಿಕ ಮತ್ತು ಆಧ್ಯಾತ್ಮಿಕ ಕಾರಣವಿದೆ.

ಮರಣ ಎಂಬುದು ಶಾಶ್ವತ ಸತ್ಯ:

“ಈ ಜೀವನ ಎಂಬುದು ಒಂದು ಬಾಡಿಗೆ ಮನೆ, ಒಂದು ದಿನ ಇದನ್ನು ಖಾಲಿ ಮಾಡಲೇಬೇಕು” ಎಂಬ ಮಾತನ್ನು ನಾವು ಕೇಳುತ್ತಲೇ ಇರುತ್ತೇವೆ. ಅಂದರೆ ಹುಟ್ಟಿದ ಪ್ರತಿಯೊಬ್ಬರಿಗೂ ಸಾವು ನಿಶ್ಚಿತ. ಆದರೂ ಮನುಷ್ಯ ಸಾವಿನ ಬಗ್ಗೆ ಮಾತನಾಡಲು ಹಿಂಜರಿಯುತ್ತಾನೆ, ಅದಕ್ಕೆ ಹೆದರುತ್ತಾನೆ. ನಮ್ಮ ದೇಹವು ಪಂಚಭೂತಗಳಿಂದ (ಪೃಥ್ವಿ, ಜಲ, ವಾಯು, ಅಗ್ನಿ, ಆಕಾಶ) ಮಾಡಲ್ಪಟ್ಟಿದೆ ಮತ್ತು ಒಂದು ದಿನ ಇದೇ ತತ್ವಗಳಲ್ಲಿ ಲೀನವಾಗುತ್ತದೆ. ಮನುಷ್ಯ ಎಷ್ಟೇ ಆಸ್ತಿ-ಅಂತಸ್ತು ಗಳಿಸಿದರೂ ಕೊನೆಗೆ ಎಲ್ಲವನ್ನೂ ಇಲ್ಲೇ ಬಿಟ್ಟು ಹೋಗಬೇಕು. ಭಗವದ್ಗೀತೆಯಲ್ಲಿ ಶ್ರೀಕೃಷ್ಣನು ಹೇಳಿರುವಂತೆ: ‘ಜಾತಸ್ಯ ಹಿ ಧ್ರುವೋ ಮೃತ್ಯುಃ ಧ್ರುವಂ ಜನ್ಮ ಮೃತಸ್ಯ ಚ’ — ಅಂದರೆ, ಹುಟ್ಟಿದವನಿಗೆ ಸಾವು ಖಚಿತ ಮತ್ತು ಸತ್ತವನಿಗೆ ಮರುಜನ್ಮವೂ ಖಚಿತ. ಇದು ಎಂದಿಗೂ ಮುಗಿಯದ ನಿರಂತರ ಚಕ್ರ.

ಅಂತ್ಯಸಂಸ್ಕಾರದ ನಂತರ ಹಿಂತಿರುಗಿ ಯಾಕೆ ನೋಡಬಾರದು?

ಗರುಡ ಪುರಾಣದ ಪ್ರಕಾರ, ಚಿತೆಗೆ ಅಗ್ನಿಸ್ಪರ್ಶ ಮಾಡಿದ ನಂತರ ದೇಹವು ಬೂದಿಯಾಗಬಹುದು, ಆದರೆ ಆತ್ಮಕ್ಕೆ ಅಳಿವಿಲ್ಲ. ಭಗವದ್ಗೀತೆಯಲ್ಲಿ ಹೇಳಿರುವಂತೆ ಆತ್ಮವನ್ನು ಶಸ್ತ್ರಗಳು ಕತ್ತರಿಸಲಾರವು, ಅಗ್ನಿಯು ಸುಡಲಾರದು. ದೇಹ ನಶಿಸಿದರೂ, ಆತ್ಮಕ್ಕೆ ತನ್ನ ಕುಟುಂಬದವರ ಮೇಲಿನ ಮೋಹ (ಮಮಕಾರ) ತಕ್ಷಣವೇ ಕರಗುವುದಿಲ್ಲ. ಅದು ತನ್ನವರ ಸುತ್ತಮುತ್ತಲೇ ಸುಳಿದಾಡುತ್ತಿರುತ್ತದೆ. ಈ ಮೋಹದ ಬಂಧನದಿಂದಾಗಿ ಆತ್ಮಕ್ಕೆ ಮುಂದಿನ ಲೋಕದ ಪ್ರಯಾಣ ಬೆಳೆಸಲು ಅಥವಾ ಮುಕ್ತಿ ಪಡೆಯಲು ಕಷ್ಟವಾಗುತ್ತದೆ. ಈ ಮೋಹದ ಪಾಸವನ್ನು ಮುರಿಯಲು ‘ಹಿಂತಿರುಗಿ ನೋಡಬಾರದು’ ಎಂಬ ನಿಯಮವನ್ನು ಮಾಡಲಾಗಿದೆ.

ಇದನ್ನೂ ಓದಿ: ಮದುವೆ ಆಮಂತ್ರಣ ಪತ್ರಿಕೆಯಲ್ಲಿ ವಧು-ವರರ ಫೋಟೋ ಹಾಕಬಾರದು ಯಾಕೆ?

ಆತ್ಮದ ಮೋಹ ಹೆಚ್ಚಾಗುತ್ತದೆ:

ಸ್ಮಶಾನದಿಂದ ವಾಪಸ್ ಬರುವಾಗ ಯಾರಾದರೂ ತಿರುಗಿ ನೋಡಿದರೆ, “ನನ್ನವರು ಇನ್ನು ಕೂಡ ನನ್ನ ಮೇಲಿನ ಆಸೆಯನ್ನು ಬಿಟ್ಟಿಲ್ಲ, ನನ್ನನ್ನು ನೆನೆಯುತ್ತಿದ್ದಾರೆ” ಎಂದು ಆತ್ಮ ಭಾವಿಸುತ್ತದೆ. ಇದರಿಂದ ಅದರ ಮೋಹ ಮತ್ತಷ್ಟು ಹೆಚ್ಚಾಗಿ, ಅದು ಮುಂದಿನ ಲೋಕಕ್ಕೆ ಹೋಗದೆ ಇದೇ ಲೋಕದಲ್ಲಿ ಅಲೆಯತೊಡಗುತ್ತದೆ ಎಂದು ನಂಬಲಾಗಿದೆ.

ನಕಾರಾತ್ಮಕ ಶಕ್ತಿಗಳ ಪ್ರಭಾವ:

ಇನ್ನೊಂದು ನಂಬಿಕೆಯ ಪ್ರಕಾರ, ಸ್ಮಶಾನದಲ್ಲಿ ತಿರುಗಿ ನೋಡುವುದರಿಂದ ಅಲ್ಲಿನ ನಕಾರಾತ್ಮಕ ಶಕ್ತಿಗಳು ಅಥವಾ ಚಡಪಡಿಸುತ್ತಿರುವ ಆತ್ಮಗಳು ಜೀವಂತ ವ್ಯಕ್ತಿಯ ಮೇಲೆ ಪ್ರಭಾವ ಬೀರಬಹುದು. ವಿಶೇಷವಾಗಿ ಮಕ್ಕಳು ಈ ಪ್ರಭಾವಕ್ಕೆ ಬೇಗ ಒಳಗಾಗುವುದರಿಂದ, ಅವರನ್ನು ಎಂದಿಗೂ ತಿರುಗಿ ನೋಡದಂತೆ ಎಚ್ಚರಿಸಿ ಮುಂದೆ ಕರೆದುಕೊಂಡು ಹೋಗಲಾಗುತ್ತದೆ.

ಅಂತ್ಯಸಂಸ್ಕಾರದ ನಂತರ ಹಿಂತಿರುಗಿ ನೋಡದಿರುವುದು ಕೇವಲ ಒಂದು ಆಚರಣೆಯಲ್ಲ; ಅದು ಬದುಕಿರುವವರಿಗೆ “ಹೋದವರನ್ನು ನೆನೆದು ಮೋಹಕ್ಕೆ ಒಳಗಾಗಬೇಡಿ, ಜೀವನದಲ್ಲಿ ಮುಂದೆ ಸಾಗಿ” ಎಂಬ ಸಂದೇಶ ನೀಡಿದರೆ, ಅಗಲಿದ ಆತ್ಮಕ್ಕೆ “ನಿಮ್ಮ ಲೌಕಿಕ ಬಂಧನಗಳು ಮುಗಿದಿವೆ, ಮುಕ್ತಿಯ ಕಡೆಗೆ ಸಾಗಿ” ಎಂದು ಹೇಳುವ ಅತ್ಯುನ್ನತ ಆಧ್ಯಾತ್ಮಿಕ ಸಂಕೇತವಾಗಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

DK Shivakumar Oath Taking Live: ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣವಚನ – Kannada News

ಬೆಂಗಳೂರು, ಜೂನ್ 03: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಇಂದು ಪ್ರಮಾಣವಚನ ಸ್ವೀಕರಿಸಲಿದ್ದು, ಅವರೊಂದಿಗೆ ಸಿದ್ದರಾಮಯ್ಯ ಮತ್ತು 10 ರಿಂದ 12 ಮಂದಿ ಶಾಸಕರೂ ಸಹ ಸಚಿವರಾಗಿ ಪದಗ್ರಹಣ ಮಾಡಲಿದ್ದಾರೆ. ಈ ಸಮಾರಂಭಕ್ಕೆ 10,000ಕ್ಕೂ ಹೆಚ್ಚು ವಿವಿಐಪಿ ಆಸನಗಳ ವ್ಯವಸ್ಥೆ ಮಾಡಲಾಗಿದ್ದು, ಭದ್ರತೆಗಾಗಿ 1,500ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಧರ್ಮಗುರುಗಳೂ ಸಹ ಈ ಕಾರ್ಯಕ್ರಮದಲ್ಲಿದ್ದು, ಸಂಜೆ 4:05ಕ್ಕೆ ಸರಿಯಾಗಿ ಪದಗ್ರಹಣ ನೆರವೇರಲಿದೆ.

ಕರ್ನಾಟಕ ರಾಜಕಾರಣದಲ್ಲಿ ಅಧಿಕಾರ ಹಂಚಿಕೆಯ ವಿಚಾರದಲ್ಲಿ ಸಾಕಷ್ಟು ಜಟಾಪಟಿ ನಡೆದಿತ್ತು. ಇತ್ತೀಚೆಗೆ ಸಿದ್ದರಾಮಯ್ಯನವರ ದೆಹಲಿ ಭೇಟಿ, ಹೈಕಮಾಂಡ್ ಜೊತೆಗಿನ ಚರ್ಚೆಯ ಬಳಿಕ ಈ ಜಟಾಪಟಿಗೆ ತೆರೆ ಬಿದ್ದಿದೆ. ಸಿದ್ದರಾಮಯ್ಯ ಅಧಿಕಾರ ಬಿಟ್ಟುಕೊಟ್ಟು ರಾಜೀನಾಮೆ ಕೊಡುವುದರ ಜೊತೆಗೆ ಡಿಕೆ ಶಿವಕುಮಾರ್ ಮುಂದಿನ ಸಿಎಂ ಆಗಲಿದ್ದಾರೆಂದು ಘೋಷಿಸಿದ್ದರು. ಅಂತೆಯೇ ಇಂದು ಸಿಎಂ ಆಗಿ ಡಿಕೆಶಿ ಕುರ್ಚಿ ಏರಲು ಸಿದ್ಧರಾಗಿದ್ದಾರೆ. ಡಿ ಕೆ ಶಿವಕುಮಾರ್ ಜೊತೆಗೆ 10-12 ಮಂದಿ ಶಾಸಕರ ಪ್ರಮಾಣವಚನದ ಕ್ಷಣ ಕ್ಷಣದ ಮಾಹಿತಿ ಇಲ್ಲಿ ಅಪ್ಡೇಟ್ ಆಗಲಿದ್ದು, ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.

Source link

ಈ ರೀತಿ ಪ್ರೇಮ ನಿವೇದನೆ ಎಲ್ಲಾದ್ರೂ ನೋಡಿದ್ದೀರಾ, ಸೇನಾ ಹೆಲಿಕಾಪ್ಟರ್ ಎದುರು ತನ್ನ ಗೆಳತಿಯ ಬೆರಳಿಗೆ ಉಂಗುರ ತೊಡಿಸಿದ ಪೈಲಟ್ – Kannada News

ನಾಸಿಕ್, ಜೂನ್ 03: ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಯುದ್ಧ ಸೇನಾ ವಾಯುಯಾನ ತರಬೇತಿ ಶಾಲೆಯ (CAATS) ರನ್‌ವೇ ಇತ್ತೀಚೆಗೆ ಕೇವಲ ಮಿಲಿಟರಿ ಶಿಸ್ತಿಗಷ್ಟೇ ಅಲ್ಲ, ಹೃದಯಸ್ಪರ್ಶಿ ಪ್ರೇಮ ನಿವೇದನೆಯೊಂದಕ್ಕೂ ಸಾಕ್ಷಿಯಾಯಿತು. ದೀರ್ಘ ಹಾಗೂ ಕಠಿಣ ತರಬೇತಿಯನ್ನು ಮುಗಿಸಿ ಭಾರತೀಯ ಸೇನೆಯ ವಾಯುಯಾನ ವಿಭಾಗದ ಪೈಲಟ್(Pilot) ಆಗಿ ಹೊರಹೊಮ್ಮಿದ ಕ್ಯಾಪ್ಟನ್ ಭರತ್ ಭಾರದ್ವಾಜ್, ತಮ್ಮ ವೃತ್ತಿಜೀವನದ ಅತ್ಯುನ್ನತ ಯಶಸ್ಸಿನ ದಿನವನ್ನೇ ತಮ್ಮ ಜೀವನದ ಅತ್ಯಂತ ಸುಂದರ ಕ್ಷಣವನ್ನಾಗಿಯೂ ಬದಲಾಯಿಸಿಕೊಂಡರು.

ಪಾಸಿಂಗ್-ಔಟ್ ಪೆರೇಡ್ ಮತ್ತು ರೋಮಾಂಚಕ ವಾಯುಯಾನ ಪ್ರದರ್ಶನ ಮುಗಿದ ತಕ್ಷಣ, ಕ್ಯಾಪ್ಟನ್ ಭಾರದ್ವಾಜ್ ಎಲ್ಲರ ಸಮ್ಮುಖದಲ್ಲೇ ತಮ್ಮ ಗೆಳತಿ ಆರುಷಿಗೆ ವಿಶಿಷ್ಟವಾಗಿ ಪ್ರೊಪೋಸ್ ಮಾಡಿ ಇಡೀ ಆವರಣದಲ್ಲಿ ಸಂಭ್ರಮದ ಅಲೆ ಎಬ್ಬಿಸಿದರು.

ರನ್‌ವೇ ಮೇಲೊಂದು ಸಿನಿಮೀಯ ಕ್ಷಣ
ತಮ್ಮ ಮಿಲಿಟರಿ ಸಮವಸ್ತ್ರವನ್ನು ಧರಿಸಿದ್ದ ಕ್ಯಾಪ್ಟನ್ ಭರತ್, ರನ್‌ವೇ ಮೇಲೆ ನಿಲ್ಲಿಸಲಾಗಿದ್ದ ಬೃಹತ್ ಸೇನಾ ಹೆಲಿಕಾಪ್ಟರ್‌ನ ಮುಂಭಾಗಕ್ಕೆ ಆರುಷಿಯನ್ನು ಕರೆತಂದರು. ಅಲ್ಲಿದ್ದ ಅಧಿಕಾರಿಗಳು ಹಾಗೂ ಕುಟುಂಬಸ್ಥರು ಕುತೂಹಲದಿಂದ ನೋಡುತ್ತಿರುವಾಗಲೇ, ಆರುಷಿಯ ಎದುರು ಮೊಣಕಾಲೂರಿ ಕುಳಿತು ನಿಶ್ಚಿತಾರ್ಥದ ಉಂಗುರವನ್ನು ನೀಡಿ ಪ್ರೇಮ ನಿವೇದನೆ ಮಾಡಿದರು.

ಈ ಅನಿರೀಕ್ಷಿತ ಸರ್ಪ್ರೈಸ್‌ನಿಂದ ಆರುಷಿ ಭಾವುಕರಾದರು. ಅವರು ಸಂತಸದಿಂದ ಒಪ್ಪಿಗೆ ಸೂಚಿಸುತ್ತಿದ್ದಂತೆ, ಸುತ್ತಲೂ ಸೇರಿದ್ದ ಸಹೋದ್ಯೋಗಿಗಳು ಮತ್ತು ಹಿರಿಯ ಅಧಿಕಾರಿಗಳು ಚಪ್ಪಾಳೆ ಹಾಗೂ ಹರ್ಷೋದ್ಗಾರಗಳ ಮೂಲಕ ಈ ಜೋಡಿಯನ್ನು ಹರಸಿದರು.

ಮತ್ತಷ್ಟು ಓದಿ: ಅಜಿತ್ ಪವಾರ್ ವಿಮಾನ ಅಪಘಾತ ಆಕಸ್ಮಿಕವಲ್ಲ, ವ್ಯವಸ್ಥಿತ ಕೊಲೆ? ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಐದು ವರ್ಷಗಳ ಪ್ರೀತಿ, ಕಠಿಣ ಪರಿಶ್ರಮಕ್ಕೆ ಸಿಕ್ಕ ಫಲ
ತಮ್ಮ ಜೀವನದ ಈ ಅಪೂರ್ವ ಕ್ಷಣದ ಕುರಿತು ಕ್ಯಾಪ್ಟನ್ ಭರತ್ ಭಾರದ್ವಾಜ್ ಅವರು ಸುದ್ದಿ ಸಂಸ್ಥೆ ಎಎನ್​ಐಯೊಂದಿಗೆ ಸಂತಸ ಹಂಚಿಕೊಂಡಿದ್ದಾರೆ. ನಾವು ಇಂದು ಕಠಿಣ ತರಬೇತಿ ಮುಗಿಸಿ ಪೈಲಟ್‌ಗಳಾಗಿದ್ದೇವೆ. ನಮ್ಮ ಕಠಿಣ ಪರಿಶ್ರಮಕ್ಕೆ ಇಂದು ದೊಡ್ಡ ಗೌರವ ಸಿಕ್ಕಿದೆ. ನಾನು ಮತ್ತು ಆರುಷಿ ಕಳೆದ ಐದು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದೇವೆ. ನನ್ನ ವೃತ್ತಿಜೀವನ ಹಾಗೂ ನನ್ನ ಕುಟುಂಬಕ್ಕೆ ಇದು ಎಷ್ಟು ಮಹತ್ವದ ದಿನವೋ, ಅಷ್ಟೇ ಮೌಲ್ಯಯುತವಾಗಿ ಈ ದಿನವನ್ನು ನನ್ನ ಪ್ರೇಯಸಿಗೂ ಜೀವಮಾನದ ನೆನಪಾಗಿಸಬೇಕು ಎಂಬುದು ನನ್ನ ಆಲೋಚನೆಯಾಗಿತ್ತು ಎಂದಿದ್ದಾರೆ.

ವಿಡಿಯೋ

ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಮತ್ತು ಮೆಚ್ಚುಗೆ
ಈ ಅಪರೂಪದ ಪ್ರಸ್ತಾವನೆಯ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಲಕ್ಷಾಂತರ ಜನರ ಹೃದಯ ಗೆದ್ದಿದೆ. ಬಹುತೇಕ ನೆಟ್ಟಿಗರು ಇದನ್ನು ನಿಜ ಜೀವನದ ಸಿನಿಮೀಯ ಕ್ಷಣ ಎಂದು ಶ್ಲಾಘಿಸಿದ್ದು, ದೇಶ ಕಾಯುವ ಸೈನಿಕನೊಬ್ಬ ತನ್ನ ಯಶಸ್ಸಿನ ಉತ್ತುಂಗದಲ್ಲಿ ಪ್ರೀತಿಪಾತ್ರರನ್ನು ಗೌರವಿಸಿದ ರೀತಿಗೆ ಮನಸೋತಿದ್ದಾರೆ.

ಇದೇ ವೇಳೆ, ಸೇನೆಯ ಕಟ್ಟುನಿಟ್ಟಾದ ಶಿಸ್ತಿನ ಚೌಕಟ್ಟಿನೊಳಗೆ ಇಂತಹ ವೈಯಕ್ತಿಕ ಆಚರಣೆಗಳು ಎಷ್ಟು ಸೂಕ್ತ ಎಂಬ ಬಗ್ಗೆ ಅಂತರ್ಜಾಲದಲ್ಲಿ ಸಣ್ಣ ಮಟ್ಟದ ಚರ್ಚೆಗಳೂ ನಡೆದಿವೆ. ಆದಾಗ್ಯೂ, ತರಬೇತಿ ಮುಗಿಸಿದ ಯುವ ಅಧಿಕಾರಿಗಳ ಸಂಭ್ರಮದ ನಡುವೆ ಮೂಡಿಬಂದ ಈ ಸುಂದರ ಮಾನವೀಯ ಸಂಬಂಧದ ಕಥೆ ಪ್ರಸ್ತುತ ಎಲ್ಲೆಡೆ ಭಾರಿ ಸೌಂಡ್ ಮಾಡುತ್ತಿದ್ದು, ನವಜೋಡಿಗೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Exit mobile version