ಒಪ್ಪಂದ, ಶರಣಾಗತಿ ಅಥವಾ ಅತ್ಯಂತ ಮಾರಕ ದಾಳಿ? ಇರಾನ್​ಗೆ ಟ್ರಂಪ್ ಗಡುವು, ವಿನಾಶಕ್ಕೆ ಕ್ಷಣಗಣನೆ

ಒಪ್ಪಂದ, ಶರಣಾಗತಿ ಅಥವಾ ಅತ್ಯಂತ ಮಾರಕ ದಾಳಿ? ಇರಾನ್​ಗೆ ಟ್ರಂಪ್ ಗಡುವು, ವಿನಾಶಕ್ಕೆ ಕ್ಷಣಗಣನೆ

ವಾಷಿಂಗ್ಟನ್, ಏಪ್ರಿಲ್ 6: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಇರಾನ್​ಗೆ ಹೊಸ ಬೆದರಿಕೆ ಹಾಕಿದ್ದಾರೆ. ಒಪ್ಪಂದಕ್ಕೆ ಬನ್ನಿ ಅಥವಾ ಶರಣಾಗಿ ಇಲ್ಲವಾದಲ್ಲಿ ಮಂಗಳವಾರ ರಾತ್ರಿ 8 ಗಂಟೆಗೆ ಮಾರಕ ದಾಳಿ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಅಮೆರಿಕವು ಇರಾನ್‌ನ ಇಂಧನ ಸೌಲಭ್ಯಗಳ ಮೇಲೆ ಪ್ರಮುಖ ದಾಳಿಯನ್ನು ನಡೆಸಬಹುದು, ಇದರಿಂದಾಗಿ ಇಡೀ ದೇಶದ ವಿದ್ಯುತ್ ಸರಬರಾಜಿನಲ್ಲಿ ಅಡ್ಡಿ ಉಂಟಾಗಬಹುದು ಎನ್ನುವ ಭಯ ಉಂಟಾಗಿದೆ. ಇರಾನ್ ಹಿಂದೆ ಸರಿಯಲು ಸಿದ್ಧವಿಲ್ಲ.

ಮಾರ್ಚ್ 26 ರಂದು ಟ್ರಂಪ್ 10 ದಿನಗಳ ಅಂತಿಮ ಎಚ್ಚರಿಕೆ ನೀಡಿದ್ದರು. ನಂತರ, ಭಾನುವಾರ ಏಪ್ರಿಲ್ 4 ರಂದು, ಅವರು ಅಂತಿಮ 48 ಗಂಟೆಗಳ ಎಚ್ಚರಿಕೆಯನ್ನು ನೀಡಿದ್ದಾರೆ.

ಹಾರ್ಮುಜ್ ಚೋಕ್ ಪಾಯಿಂಟ್, ಬುಶೆಹರ್ ಪರಮಾಣು ಸ್ಥಾವರ, ದಕ್ಷಿಣ ಪಾರ್ಸ್ ಅನಿಲ ಕ್ಷೇತ್ರ, ಖಾರ್ಕ್ ದ್ವೀಪದ ತೈಲ ಕೇಂದ್ರ, ಅಬದಾನ್ ಸಂಸ್ಕರಣಾಗಾರ, ಬಂದರ್ ಅಬ್ಬಾಸ್ ಸಂಸ್ಕರಣಾಗಾರ, ಇರಾನ್‌ನ ಬ್ಯಾಲಿಸ್ಟಿಕ್ ಕ್ಷಿಪಣಿ ನೆಲೆಗಳ ಮೇಲೆ ದಾಳಿ ಮಾಡುವುದಾಗಿ ಅಮೆರಿಕ ಹೇಳಿದೆ.

ರಿಯಾದ್ ನಲ್ಲಿರುವ ಸಿಐಎ ಸ್ಟೇಷನ್ ಮೇಲೆ ಇರಾನ್ ದಾಳಿ ನಡೆಸಿದೆ. ಪ್ರಪಂಚದಾದ್ಯಂತದ ಹೆಚ್ಚಿನ ಅಮೇರಿಕನ್ ರಾಜತಾಂತ್ರಿಕ ಪೋಸ್ಟ್ ಗಳಂತೆ ರಿಯಾದ್‌ನಲ್ಲಿರುವ ಅಮೇರಿಕನ್ ರಾಯಭಾರ ಕಚೇರಿಯು ತನ್ನದೇ ಆದ ವಾಯು ರಕ್ಷಣಾ ವ್ಯವಸ್ಥೆಯನ್ನು ನಿರ್ವಹಿಸುವುದಿಲ್ಲ.

ಮತ್ತಷ್ಟು ಓದಿ:

ಡೊನಾಲ್ಡ್ ಟ್ರಂಪ್ ಸತ್ತರಾ? ಸೋಷಿಯಲ್ ಮೀಡಿಯಾದಲ್ಲಿ ಹರಿದಾಡ್ತಿದೆ ಸುದ್ದಿ; ನಿಜವಾ, ವದಂತಿಯಾ?

ಒಂದೇ ನಿಮಿಷದ ಅಂತರದಲ್ಲಿ 2 ಡ್ರೋನ್ ದಾಳಿ ನಡೆಸಲಾಗಿದೆ. ಎರಡನೇ ಡ್ರೋನ್ ಮೊದಲ ದಾಳಿಯಿಂದ ಉಂಟಾದ ರಂಧ್ರದೊಳಗೆ ನೇರವಾಗಿ ನುಗ್ಗಿ ಸ್ಫೋಟಿಸಿತು. ದಾಳಿ ಮುಗಿಯುವಷ್ಟರಲ್ಲಿ ರಿಯಾದ್‌ನಲ್ಲಿರುವ ಅಮೆರಿಕದ ರಾಯಭಾರ ಕಚೇರಿಯ ಮೂರು ಮಹಡಿಗಳು ಗಂಭೀರವಾಗಿ ಹಾನಿಗೊಳಗಾಗಿದ್ದವು ಮತ್ತು ಅದರೊಳಗಿನ ಸಿಐಎ ಕಚೇರಿಗೂ ಹೊಡೆತ ಬಿದ್ದಿತ್ತು.

ಫೆಬ್ರವರಿ 28ರಂದು ಯುದ್ಧ ಆರಂಭವಾದ ನಂತರ, ಇರಾನ್ ಮಧ್ಯಪ್ರಾಚ್ಯದಲ್ಲಿನ ಅಮೆರಿಕದ ನೆಲೆಗಳು ಮತ್ತು ರಾಯಭಾರ ಕಚೇರಿಗಳ ಮೇಲೆ ತನ್ನ ಅತಿ ವ್ಯಾಪಕ ದಾಳಿಗಳನ್ನು ನಡೆಸಿದೆ. ರಿಯಾದ್ ಮಾತ್ರವಲ್ಲ, ಬಾಗ್ದಾದ್, ದುಬೈ, ಕುವೈತ್ ಮತ್ತು ಇರಾಕ್ ಕುರ್ಡಿಸ್ತಾನದ ಎರ್ಬಿಲ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿಗಳನ್ನೂ ಇರಾನಿಯನ್ ಕ್ಷಿಪಣಿಗಳು ಮತ್ತು ಡ್ರೋನ್‌ಗಳು ಗುರಿಯಾಗಿಸಿವೆ.

ಆ ದಾಳಿಗಳಲ್ಲಿ ಯಾವುದೂ ಅಮೆರಿಕನ್ ಸಾವುಗಳಿಗೆ ಕಾರಣವಾಗದಿದ್ದರೂ, ಈ ಪ್ರದೇಶದ ಅಮೆರಿಕ ನೆಲೆಗಳ ಮೇಲೆ ತೆಹ್ರಾನ್ ನಡೆಸಿದ ದಾಳಿಗಳು ಏಳು ಅಮೆರಿಕ ಸೈನಿಕರ ಸಾವಿಗೆ, ನೂರಾರು ಮಂದಿಯ ಗಾಯಗಳಿಗೆ ಕಾರಣವಾಗಿದ್ದು, ವಿಮಾನಗಳು ಮತ್ತು ರಕ್ಷಣಾ ಸಾಧನಗಳಿಗೆ ಕೋಟ್ಯಂತರ ಡಾಲರ್ ಮೌಲ್ಯದ ಹಾನಿಯನ್ನುಂಟುಮಾಡಿವೆ.

ಇನ್ನೊಂದೆಡೆ ಹಾರ್ಮುಜ್ ಜಲಸಂಧಿಯನ್ನು ಓಪನ್​ ಮಾಡಲು ಇರಾನ್​ಗೆ ನೀಡಿರುವ 48 ಗಂಟೆಗಳ ಗಡುವು ಸೋಮವಾರ ಅಂತ್ಯವಾಗುತ್ತಿದೆ. ಇದರ ಬೆನ್ನಲ್ಲೇ, ಇರಾನ್​ಗೆ ಕಠಿಣ ಪದಗಳಲ್ಲಿ ಎಚ್ಚರಿಕೆ ನೀಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಪುನಃ ಇರಾನ್‌ಗೆ ಹೊಸ ಬೆದರಿಕೆ ಹಾಕಿ, ವಿದ್ಯುತ್​ ಘಟಕಗಳು, ಪವರ್ ಪ್ಲಾಂಟ್‌ಗಳು ಮತ್ತು ದೇಶದ ಪ್ರಮುಖ ಸೇತುವೆಗಳನ್ನು ಏಕಕಾಲದಲ್ಲಿ ಧ್ವಂಸಗೊಳಿಸುವುದಾಗಿ ಬೆದರಿಕೆ ಹಾಕಿದ್ದಾರೆ.

ಎಬಿಸಿ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ, ಒಪ್ಪಂದ ಮಾಡಿಕೊಳ್ಳದಿದ್ದರೆ, ಅಮೆರಿಕ ಇಡೀ ದೇಶವನ್ನೇ ನಾಶಮಾಡಬಹುದು ಎಂದು ಟ್ರಂಪ್ ಹೇಳಿದ್ದಾರೆ. ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳಂತಹ ಪ್ರಮುಖ ಮೂಲಸೌಕರ್ಯಗಳನ್ನು ಗುರಿಯಾಗಿಸಬಹುದು ಎಂದು ಅವರು ಸುಳಿವು ನೀಡಿದ್ದಾರೆ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Source link

ಡೊನಾಲ್ಡ್​ ಟ್ರಂಪ್ ಇರುವಾಗಲೇ ಶ್ವೇತಭವನದ ಸಮೀಪ ಗುಂಡಿನ ದಾಳಿ

ವಾಷಿಂಗ್ಟನ್, ಏಪ್ರಿಲ್ 06: ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿಸಿಯಲ್ಲಿರುವ ಶ್ವೇತಭವನ(White House)ದ ಬಳಿ ಗುಂಡಿನ ಚಕಮಕಿ ನಡೆದಿದೆ. ಆ ಸಮಯದಲ್ಲಿ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಶ್ವೇತಭವನದೊಳಗೆ ಇದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಘಟನೆಯ ಬಳಿಕ ಭದ್ರತಾ ಸಂಸ್ಥೆಗಳನ್ನು ಹೆಚ್ಚಿನ ಎಚ್ಚರಿಕೆ ನೀಡಲಾಗಿದೆ. ಭಾನುವಾರ ಮುಂಜಾನೆ ಶ್ವೇತಭವನದ ಎದುರಿನ ಲಫಯೆಟ್ಟೆ ಪಾರ್ಕ್ ಬಳಿ ಗುಂಡಿನ ದಾಳಿ ನಡೆದಿದೆ. ಗುಂಡಿನ ದಾಳಿಯಲ್ಲಿ ಯಾರೂ ಗಾಯಗೊಂಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆದರೆ ಬಂದೂಕುಧಾರಿ ತಲೆಮರೆಸಿಕೊಂಡಿದ್ದಾನೆ ಮತ್ತು ಪ್ರಸ್ತುತ ಆತನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಶ್ವೇತಭವನದಲ್ಲಿ ಕಾರ್ಯಾಚರಣೆಗಳು ಎಂದಿನಂತೆ ಮುಂದುವರಿದಿದ್ದರೂ, ಭದ್ರತಾ ಕ್ರಮಗಳನ್ನು ಗಮನಾರ್ಹವಾಗಿ ಬಿಗಿಗೊಳಿಸಲಾಗಿದೆ.

ಮೆಟ್ರೋಪಾಲಿಟನ್ ಪೊಲೀಸ್ ಇಲಾಖೆ ಮತ್ತು ಯುಎಸ್ ಪಾರ್ಕ್ ಪೊಲೀಸರೊಂದಿಗೆ ಕೆಲಸ ಮಾಡುತ್ತಿರುವ ತನ್ನ ತಂಡವು ಶಂಕಿತ ವ್ಯಕ್ತಿ ಮತ್ತು ವಾಹನಕ್ಕಾಗಿ ಹುಡುಕಾಟ ನಡೆಸುತ್ತಿದೆ ಎಂದು ಸೀಕ್ರೆಟ್ ಸರ್ವಿಸ್ ವರದಿ ಮಾಡಿದೆ.

ಗುಂಡಿನ ದಾಳಿಯ ಹಿಂದಿನ ಉದ್ದೇಶವೂ ಸ್ಪಷ್ಟವಾಗಿಲ್ಲ. ಕಳೆದ ಕೆಲವು ವಾರಗಳಿಂದ ನವೀಕರಣಕ್ಕಾಗಿ ಲಫಯೆಟ್ಟೆ ಪಾರ್ಕ್ ಮುಚ್ಚಲ್ಪಟ್ಟಿದೆ ಮತ್ತು ಪ್ರಸ್ತುತ ಬ್ಯಾರಿಕೇಡ್‌ಗಳಿಂದ ಆವೃತವಾಗಿದೆ. ಇನ್ನೊಂದೆಡೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸಾಮಾಜಿಕ ಮಾಧ್ಯಮದಲ್ಲಿ ಹರಡುತ್ತಿರುವ ಊಹಾಪೋಹಗಳನ್ನು ಶ್ವೇತಭವನ ತಳ್ಳಿಹಾಕಿದೆ.

ಮತ್ತಷ್ಟು ಓದಿ: ಇರಾನ್​ನಲ್ಲಿ ನಾಪತ್ತೆಯಾಗಿದ್ದ ಅಮೆರಿಕ ಯುದ್ಧ ವಿಮಾನದ ಪೈಲಟ್ ಸಿಕ್ಕಿದ್ದಾರೆ: ಡೊನಾಲ್ಡ್​ ಟ್ರಂಪ್

ಕೆಲವು ಎಕ್ಸ್​ ಪೋಸ್ಟ್​ಗಳಲ್ಲಿ ಟ್ರಂಪ್ ಅವರನ್ನು ವಾಲ್ಟರ್ ರೀಡ್ ರಾಷ್ಟ್ರೀಯ ಮಿಲಿಟರಿ ವೈದ್ಯಕೀಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ ಎಂದು ಹೇಳಿಕೊಂಡಿದ್ದವು. ಈ ವೀಡಿಯೊ 2024 ರಲ್ಲಿ ಟ್ರಂಪ್ ಗುಂಡಿನ ದಾಳಿಯಲ್ಲಿ ಗಾಯಗೊಂಡ ನಂತರ ಪೆನ್ಸಿಲ್ವೇನಿಯಾದ ಬಟ್ಲರ್‌ನಲ್ಲಿರುವ ಆಸ್ಪತ್ರೆಯಿಂದ ಬಿಡುಗಡೆಯಾದಾಗ ತೆಗೆದ ವಿಡಿಯೋ ಎಂದು ಹೇಳಲಾಗುತ್ತಿದೆ.

ಶ್ವೇತಭವನವು ಎಂದಿನಂತೆ ಕಾರ್ಯನಿರ್ವಹಿಸುತ್ತಿದೆ, ಆದರೆ ಪೊಲೀಸರು ಭದ್ರತೆಯನ್ನು ಬಿಗಿಗೊಳಿಸಿದ್ದಾರೆ. ಜುಲೈ 13, 2024 ರಂದು, ಒಂದು ರ್ಯಾಲಿಯಲ್ಲಿ ಗುಂಡು ಅವರ ಹತ್ತಿರ ಹಾದುಹೋಗಿತ್ತು ಕಿವಿ ಭಾಗಕ್ಕೆ ಪೆಟ್ಟಾಗಿತ್ತು. ರಯಾನ್ ರೋತ್ ಎಂಬ ವ್ಯಕ್ತಿಯನ್ನು ಅವರ ಗಾಲ್ಫ್ ಕ್ಲಬ್ ಬಳಿ ದಾಳಿ ನಡೆಸಲು ಯೋಜಿಸಿದ್ದಕ್ಕಾಗಿ ಬಂಧಿಸಲಾಗಿತ್ತು.

ಕಳೆದ ಎರಡು ತಿಂಗಳುಗಳಿಂದ ಇಸ್ರೇಲ್-ಅಮೆರಿಕ ಸೇರಿ ಇರಾನ್ ಮೇಲೆ ದಾಳಿ ನಡೆಸುತ್ತಿದೆ, ಇರಾನ್ ಕೂಡ ಪ್ರತೀಕಾರ ತೀರಿಸಿಕೊಳ್ಳಲು ಸರಿಯಾದ ಸಮಯಕ್ಕಾಗಿ ಕಾಯುತ್ತಿದೆ. ಈ ಸಂದರ್ಭದಲ್ಲಿ ಶ್ವೇತಭವನದ ಬಳಿ ನಡೆದ ದಾಳಿಯು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

RCB vs CSK: ಸಂಜು ಬಗ್ಗೆ ಒಂದೂ ಮಾತನಾಡದ ರುತುರಾಜ್: ಆರ್​​ಸಿಬಿ ವಿರುದ್ಧದ ಸೋಲಿಗೆ ದೂರಿದ್ದು ಯಾರನ್ನು?

ಬೆಂಗಳೂರು (ಏ. 06): ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಭಾನುವಾರದ ಪಂದ್ಯ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದು, ಇದರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 43 ರನ್‌ಗಳಿಂದ ಸೋಲಿಸಿತು. ಈ ಮೂಲಕ ಆರ್​​ಸಿಬಿ ಟೂರ್ನಿಯಲ್ಲಿ ಸತತ ಎರಡನೇ ಜಯ ಕಂಡು ಪಾಯಿಂಟ್ಸ್ ಟೇಬಲ್​ನಲ್ಲಿ ಅಗ್ರಸ್ಥಾನಕ್ಕೇರಿದೆ. ಅತ್ತ ಸಿಎಸ್​​ಕೆ ಈ ಋತುವಿನಲ್ಲಿ ಸತತ ಮೂರನೇ ಸೋಲನ್ನು ಅನುಭವಿಸಿತು. 251 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಚೆನ್ನೈ 19.4 ಓವರ್‌ಗಳಲ್ಲಿ 207 ರನ್‌ಗಳಿಗೆ ಆಲೌಟ್ ಆಯಿತು. ಚೆನ್ನೈ ನಾಯಕ ರುತುರಾಜ್ ಗಾಯಕ್ವಾಡ್ ಸೋಲಿನ ನಂತರ ನಿರಾಶೆಗೊಂಡರು.

ಆರ್​ಸಿಬಿ ವಿರುದ್ಧದ ಸೋಲಿನ ಬಳಿಕ ರುತುರಾಜ್ ಗಾಯಕ್ವಾಡ್ ಹೇಳಿದ್ದೇನು?

ತಮ್ಮ ಬ್ಯಾಟಿಂಗ್ ಮತ್ತು ತಂಡದ ಹೋರಾಟದ ಬಗ್ಗೆ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮಾತನಾಡಿದ ರುತುರಾಜ್, “ಪ್ರಾಮಾಣಿಕವಾಗಿ ಹೇಳಬೇಕೆಂದರೆ, ನನಗೂ ಆಶ್ಚರ್ಯವಾಯಿತು. ಸರ್ಫರಾಜ್ ಖಾನ್, ಪ್ರಶಾಂತ್ ವೀರ್, ಜೇಮಿ ಓವರ್ಟನ್ ಮತ್ತು ಸ್ವಲ್ಪ ಮಟ್ಟಿಗೆ ಶಿವಂ ದುಬೆ ಉತ್ತಮ ಹೋರಾಟ ತೋರಿಸಿದರು ಮತ್ತು ಕೊನೆಯವರೆಗೂ ಪ್ರಯತ್ನಪಟ್ಟರು. ನಾನು ಮೇಲಿನ ಕ್ರಮಾಂಕದಲ್ಲಿ ಸ್ವಲ್ಪ ಉತ್ತಮ ಕೊಡುಗೆ ನೀಡಿದ್ದರೆ, ಯಾರಿಗೆ ಗೊತ್ತು, ಬಹುಶಃ ನಾವು ಈ ಗುರಿಯನ್ನು ಸಾಧಿಸಬಹುದಿತ್ತು. ಆದ್ದರಿಂದ, ಇಂದಿನ ಸೋಲಿನ ಜವಾಬ್ದಾರಿ ಖಂಡಿತವಾಗಿಯೂ ನನ್ನ ಮೇಲಿದೆ.” ಎಂದು ಹೇಳಿದ್ದಾರೆ.

ಪಂದ್ಯದ ತಿರುವು ಆರ್‌ಸಿಬಿ ಬ್ಯಾಟ್ಸ್‌ಮನ್ ಟಿಮ್ ಡೇವಿಡ್ ಅವರ ಪ್ರದರ್ಶನ ಎಂದು ರುತುರಾಜ್ ಹೇಳಿದರು. “ಅನ್ಶುಲ್ ಕಾಂಬೋಜ್ ತಮ್ಮ (ಡೇವಿಡ್) ವಿಕೆಟ್ ಅನ್ನು ಬಹುತೇಕ ತೆಗೆದುಕೊಂಡರು. ಅದು ನೋ-ಬಾಲ್ ಆಗಿ ಬದಲಾಯಿತು ಎಂಬುದು ದುರದೃಷ್ಟಕರ. ಆದರೆ ಆ ಜೀವದಾನದ ನಂತರ, ಅವರು ಮೈದಾನದ ಪ್ರತಿಯೊಂದು ಮೂಲೆಗೂ ಹೊಡೆತಗಳನ್ನು ಹೊಡೆದರು. ಅವರು ಬ್ಯಾಟಿಂಗ್ ಮಾಡಿದ ರೀತಿ ಅದ್ಭುತವಾಗಿತ್ತು.”

RCB vs CSK: ಚಿನ್ನಸ್ವಾಮಿಯಲ್ಲಿ ಚೆನ್ನೈ ತಂಡವನ್ನು ಚೆಂಡಾಡಿದ ಆರ್​ಸಿಬಿ

ಫೀಲ್ಡಿಂಗ್ ದೋಷಗಳು ಮತ್ತು ವಿರಾಟ್ ಕೊಹ್ಲಿಗೆ ನೀಡಿದ ಜೀವದಾನ ಸೋಲಿಗೆ ಪ್ರಮುಖ ಕಾರಣ ಎಂದು ರುತುರಾಜ್ ಉಲ್ಲೇಖಿಸಿದರು. “ನಾವು ವಿರಾಟ್ ಕೊಹ್ಲಿಯನ್ನು ಇನ್ನಿಂಗ್ಸ್‌ನ ಆರಂಭದಲ್ಲಿಯೇ ಕ್ಯಾಚ್ ಹಿಡಿದಿದ್ದರೆ, ನಮಗೆ ಆವೇಗ ಸಿಗುತ್ತಿತ್ತು. ಇದರ ಹೊರತಾಗಿಯೂ, 13-14ನೇ ಓವರ್‌ವರೆಗೆ ಪಂದ್ಯ ನಮ್ಮ ಕೈಯಲ್ಲಿತ್ತು ಎಂದು ನಾನು ಭಾವಿಸುತ್ತೇನೆ, ಆದರೆ ಅಲ್ಲಿಂದ ಆವೇಗ ಸಂಪೂರ್ಣವಾಗಿ ಆರ್‌ಸಿಬಿ ಪರವಾಗಿ ಬದಲಾಯಿತು, ನಾವು ಹಿಂದೆ ಬಿದ್ದೆವು” ಎಂದು ಅವರು ಹೇಳಿದರು.

ಆರ್‌ಸಿಬಿ ನೀಡಿದ್ದ 251 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಉತ್ತಮ ಆರಂಭ ದೊರೆಯಲಿಲ್ಲ. ನಾಯಕ ರುತುರಾಜ್ ಗಾಯಕ್ವಾಡ್ ಕೇವಲ 7 ರನ್‌ಗಳಿಗೆ ಔಟಾದರು. ಮತ್ತೊಂದೆಡೆ, ಸಂಜು ಸ್ಯಾಮ್ಸನ್ 5 ಎಸೆತಗಳಲ್ಲಿ 9 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರು. ಆಯುಷ್ ಮ್ಹಾತ್ರೆ ಕೂಡ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾದರು. ಕಾರ್ತಿಕ್ ಶರ್ಮಾ ಸತತ ಮೂರನೇ ಪಂದ್ಯದಲ್ಲೂ ನಿರಾಸೆ ಮೂಡಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

18 ವರ್ಷಗಳ ಇತಿಹಾಸವನ್ನೇ ಬದಲಿಸಿದ RCB ದಾಂಡಿಗರು

Source link

Horoscope Today: ಇಂದು ಈ ರಾಶಿಯವರು ಇನ್ನೊಬ್ಬರಿಗೆ ಸಾಲ ಕೊಡುವಾಗ ಎಚ್ಚರ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 6, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಚೌತಿ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ.

 

 

 

 

Source link

Daily Devotional: ಯಾವ ಹುತ್ತಕ್ಕೆ ಹಾಲೆರೆಯಬೇಕು, ಯಾವ ಹುತ್ತಕ್ಕೆ ಪೂಜೆ ಮಾಡಬೇಕು?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಯಾವ ಹುತ್ತಕ್ಕೆ ಹಾಲೆರೆಯಬೇಕು, ಯಾವ ಹುತ್ತಕ್ಕೆ ಪೂಜೆ ಮಾಡಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ.ಹುತ್ತಕ್ಕೆ ಹಾಲೆರೆಯುವುದು, ನೈವೇದ್ಯ ಅರ್ಪಿಸುವುದು ಸಾಮಾನ್ಯ ಆಚರಣೆಗಳು. ಹುತ್ತಗಳಲ್ಲಿ ಎರಡು ಮುಖ್ಯ ವಿಧಗಳಿವೆ: ದೊಡ್ಡ ಕಿಂಡಿಗಳನ್ನು ಹೊಂದಿರುವ ಹುತ್ತಗಳನ್ನು ಹೆಣ್ಣು ಹುತ್ತ ಎಂದೂ, ಗೋಪುರದ ಆಕಾರದಲ್ಲಿ ಬೆಳೆಯುವ ಹುತ್ತಗಳನ್ನು ಗಂಡು ಹುತ್ತ ಎಂದೂ ಪರಿಗಣಿಸಲಾಗುತ್ತದೆ. ವಾಲ್ಮೀಕಿ ಮಹರ್ಷಿಗಳು ಹುತ್ತದಲ್ಲಿ ತಪಸ್ಸು ಮಾಡಿದ ಕಾರಣ ಅವರಿಗೆ ವಾಲ್ಮೀಕಿ ಎಂಬ ಹೆಸರು ಬಂತು ಎಂಬ ನಂಬಿಕೆಯಿದೆ.

ನಾಗದೋಷ ನಿವಾರಣೆ, ಸಂತಾನ ಪ್ರಾಪ್ತಿ, ಚರ್ಮ ಮತ್ತು ಕಣ್ಣಿನ ತೊಂದರೆಗಳು, ಕುಜದೋಷ ನಿವಾರಣೆ ಹಾಗೂ ಸುಖ ಶಾಂತಿ ನೆಮ್ಮದಿಗಾಗಿ ಹುತ್ತ ಪೂಜೆ ಮಾಡಲಾಗುತ್ತದೆ. ಪೂರ್ವಜರು ಹುತ್ತಗಳನ್ನು ಶಕ್ತಿ ಕೇಂದ್ರಗಳೆಂದು ಕರೆದಿದ್ದಾರೆ. ಇವುಗಳಲ್ಲಿ ತ್ರಿಶಕ್ತಿಗಳ ಸಂಗಮವಿರುತ್ತದೆ ಎಂದು ನಂಬಲಾಗಿದೆ. ಅರಳಿ ಮರದ ಬಳಿ, ದೇವಾಲಯದ ಸನಿಹ, ನವಗ್ರಹಗಳ ಪಕ್ಕ, ಮತ್ತು ನಾಗರ ಕಲ್ಲುಗಳ ಹತ್ತಿರ ಇರುವ ಹುತ್ತಗಳು ಅತ್ಯಂತ ಪವಿತ್ರ ಮತ್ತು ಶ್ರೇಷ್ಠವೆಂದು ಪರಿಗಣಿಸಲಾಗುತ್ತದೆ. ಈ ಜಾಗಗಳಲ್ಲಿ ಸುಬ್ರಹ್ಮಣ್ಯ ಮತ್ತು ಆದಿಶಕ್ತಿಯ ಆವಾಸ ಇರುತ್ತದೆ ಎಂಬ ನಂಬಿಕೆಯಿದೆ. ಮಂಗಳವಾರ, ಶುಕ್ರವಾರ, ನಾಗರ ಪಂಚಮಿ, ಷಷ್ಠಿ, ಸುಬ್ರಹ್ಮಣ್ಯ ಷಷ್ಠಿ, ಸಂಕಷ್ಟಹರ ಚತುರ್ಥಿ ದಿನಗಳಂದು ಹುತ್ತ ಪೂಜೆ ಮಾಡಲಾಗುತ್ತದೆ. ಎಂದು ಗುರೂಜಿ ಹೇಳಿದ್ದಾರೆ.

 

 

 

Source link

ರಿಷಿಕೇಷದ ಗಂಗಾ ತಟದಲ್ಲಿ ವಿವಾಹ ಆದ ‘ಮನದ ಕಡಲು’ ಹೀರೋ; ಇಲ್ಲಿವೆ ಸುಂದರ ಫೋಟೋಗಳು

Source link

ಕಿಲೋಮೀಟರ್‌ಗೆ ಕೇವಲ 50 ಪೈಸೆ ಖರ್ಚು! ಎಲ್‌ಪಿಜಿ ಬೆಲೆ ಏರಿಕೆ ನಡುವೆ ಗಮನ ಸೆಳೆಯುತ್ತಿದೆ ಎಲೆಕ್ಟ್ರಿಕ್ ಆಟೋಗಳ ಮ್ಯಾಜಿಕ್

ಬೆಂಗಳೂರು, ಏ.6: ದೇಶದಲ್ಲಿ ಗ್ಯಾಸ್​​ ಕೊರತೆಗಳು ಹೆಚ್ಚಾಗಿದೆ. ಇರಾನ್, ಇಸ್ರೇಲ್​​​, ಅಮೆರಿಕ ಯುದ್ದದಿಂದ ಜಗತ್ತು ಸಂಕಷ್ಟಕ್ಕೆ ಸಿಲುಕಿದೆ. ಇದರ ಪರಿಣಾಮ ಭಾರತದಲ್ಲೂ ಕಂಡು ಬಂದಿದೆ. ಇನ್ನು ಬೆಂಗಳೂರಿನಲ್ಲಿ ಈ ಸಮಸ್ಯೆಯ ಬಗ್ಗೆ ಕೇಳುವುದೇ ಬೇಡ. ಅದರಲ್ಲೂ ಆಟೋ ಚಾಲಕರು ಇದರಿಂದ ಭಾರೀ ಸಂಕಷ್ಟಕ್ಕೆ ಒಳಗಾಗಿದ್ದಾರೆ. ದಿನ ಪೂರ್ತಿ, ಆಟೋಗೆ ಗ್ಯಾಸ್​​ ಹಾಕಲು ಕ್ಯೂ ನಿಲ್ಲಬೇಕು. ಅದು ಕೂಡ ಸಿಗುತ್ತದೆ ಎಂಬ ಗ್ಯಾರಂಟಿ ಇಲ್ಲ. ಬೆಂಗಳೂರಿನ ಜೀವನನಾಡಿ ಎನಿಸಿರುವ ಆಟೋ ರಿಕ್ಷಾ ಚಾಲಕರು ಇದೀಗ ಭೀಕರ ಎಲ್‌ಪಿಜಿ ಅಭಾವದಿಂದ ಕಂಗಾಲಾಗಿದ್ದಾರೆ. ಇಂಧನ ಕೇಂದ್ರಗಳಲ್ಲಿ ಕಿಲೋಮೀಟರ್‌ಗಟ್ಟಲೆ ಉದ್ದದ ಸಾಲು ಮತ್ತು ಅನಿಶ್ಚಿತ ಪೂರೈಕೆಯಿಂದಾಗಿ ದೈನಂದಿನ ಜೀವನ ನಡೆಸುವುದು ಕಷ್ಟವಾಗಿದೆ.

ಈ ಬಿಕ್ಕಟ್ಟು ಈಗ ಅನೇಕ ಚಾಲಕರು ಎಲೆಕ್ಟ್ರಿಕ್ ಆಟೋಗಳ ಬಗ್ಗೆ ಗಂಭೀರವಾಗಿ ಆಲೋಚಿಸುವಂತೆ ಮಾಡಿದೆ. ಬನಶಂಕರಿಯ ಇಕ್ಬಾಲ್ ಸಾಬ್ ಎಂಬ ಎಲೆಕ್ಟ್ರಿಕ್ ಆಟೋ ಚಾಲಕನ ಪ್ರಕಾರ, ಪ್ರತಿದಿನ ಅನೇಕ ಎಲ್‌ಪಿಜಿ ಆಟೋ ಚಾಲಕರು ಬಂದು ಇವಿ ಆಟೋದ ಬೆಲೆ, ಚಾರ್ಜಿಂಗ್ ಸಮಯ ಮತ್ತು ಮೈಲೇಜ್ ಬಗ್ಗೆ ವಿಚಾರಿಸುತ್ತಿದ್ದಾರೆ. ಒಮ್ಮೆ ಚಾರ್ಜ್ ಮಾಡಿದರೆ 5 ಗಂಟೆಗಳಿಗೂ ಹೆಚ್ಚು ಕಾಲ ಓಡಿಸಬಹುದು ಮತ್ತು ಕಿಲೋಮೀಟರ್‌ಗೆ ಕೇವಲ 50 ಪೈಸೆ ಖರ್ಚಾಗುತ್ತದೆ ಎಂದು ಅವರಿಗೆ ಮಾಹಿತಿ ನೀಡಿದ್ದಾರೆ.

ಇನ್ನು ಈ ಎಲೆಕ್ಟ್ರಿಕ್ ಆಟೋಗಳು ತಿಂಗಳಿಗೆ ಕೇವಲ 500 ರೂಪಾಯಿಗಿಂತ ಕಡಿಮೆ ಮೇಂಟೆನೆನ್ಸ್ ಖರ್ಚು. ಪಶ್ಚಿಮ ಏಷ್ಯಾದ ಸಂಘರ್ಷದಿಂದಾಗಿ ಏರುತ್ತಿರುವ ಇಂಧನ ಬೆಲೆಗಳಿಂದ ಇದು ಮುಕ್ತಿ ನೀಡುತ್ತದೆ ಎಂಬುದು ಅನೇಕರ ಯೋಚನೆ ಆಗಿದೆ. ಶಬ್ದರಹಿತ, ಹೆಚ್ಚು ಸ್ಥಳಾವಕಾಶ ಮತ್ತು ಉತ್ತಮ ಸಸ್ಪೆನ್ಷನ್ ಇರುವುದರಿಂದ ಪ್ರಯಾಣಿಕರಿಗೂ ಇದು ಇಷ್ಟವಾಗುತ್ತಿದೆ. ಎಲೆಕ್ಟ್ರಿಕ್ ಆಟೋಗಳ ಬಗ್ಗೆ ಆಸಕ್ತಿ ಹೆಚ್ಚಿದ್ದರೂ, ಅದರ ಬೆಲೆ ದೊಡ್ಡ ಹೊರೆಯಾಗಿದೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಲವ್​​​ ಜಿಹಾದ್​ ಪ್ರಕರಣ: ಸಮೀರ್ ಲೀಲೆಗಳು ಒಂದೊಂದಾಗಿ ಬಯಲು: ಮತ್ತೊಂದು ವಿಡಿಯೋ ವೈರಲ್

ಎಲೆಕ್ಟ್ರಿಕ್ ಆಟೋ ಬೆಲೆಯೂ 3.33 ಲಕ್ಷ ರೂ.ಯಿಂದ 3.47 ಲಕ್ಷ ರೂ ವರೆಗೆ ಇದೆ. ಎಲ್‌ಪಿಜಿ ಆಟೋ ಬೆಲೆ 2.22 ಲಕ್ಷದಿಂದ, 2.53 ಲಕ್ಷ ರೂ. ವರೆಗೆ ಇದೆ. ಸುಮಾರು 80 ಸಾವಿರದಿಂದ 1.25 ಲಕ್ಷ ರೂಪಾಯಿಗಳ ವ್ಯತ್ಯಾಸವು ಸಾಮಾನ್ಯ ಚಾಲಕರಿಗೆ ಭರಿಸಲಾಗದ ಮೊತ್ತವಾಗಿದೆ. ಹಳೆಯ ಆಟೋಗಳನ್ನು ಮಾರಿ ಹೊಸದನ್ನು ಕೊಳ್ಳುವುದು ಸದ್ಯದ ಪರಿಸ್ಥಿತಿಯಲ್ಲಿ ಸವಾಲಾಗಿದೆ. ಎಲೆಕ್ಟ್ರಿಕ್ ವಾಹನಗಳ ಬಗ್ಗೆ ಕೆಲವು ಟೀಕೆಗಳೂ ಇವೆ. ಚಾರ್ಜಿಂಗ್ ಸ್ಟೇಷನ್‌ಗಳ ಕೊರತೆ, ಬ್ಯಾಟರಿ ಬಾಳಿಕೆ ಮತ್ತು ಮೆಕಾನಿಕ್‌ಗಳ ಅಲಭ್ಯತೆ ಚಾಲಕರನ್ನು ಕಾಡುತ್ತಿದೆ. ಅಲ್ಲದೆ, ಭಾರತದಲ್ಲಿ ಹೆಚ್ಚಿನ ವಿದ್ಯುತ್ ಕಲ್ಲಿದ್ದಲಿನಿಂದ ತಯಾರಾಗುವುದರಿಂದ ಪರಿಸರಕ್ಕೆ ಆಗುವ ಲಾಭ ತೀರಾ ಕಡಿಮೆ ಎಂಬ ವಾದವೂ ಇದೆ.

ರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Source link

ಹುಬ್ಬಳ್ಳಿಯಲ್ಲಿ ಲವ್​​​ ಜಿಹಾದ್​ ಪ್ರಕರಣ: ಸಮೀರ್ ಲೀಲೆಗಳು ಒಂದೊಂದಾಗಿ ಬಯಲು: ಮತ್ತೊಂದು ವಿಡಿಯೋ ವೈರಲ್

ಹುಬ್ಬಳ್ಳಿ, ಏ.6: ಹುಬ್ಬಳ್ಳಿ ಲವ್​​​ ಜಿಹಾದ್​ ಪ್ರಕರಣಕ್ಕೆ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಸಮೀರ್ ಲೀಲೆಗಳು ಒಂದೊಂದಾಗಿ ಬಯಲು ಆಗುತ್ತಿದೆ. ಜಿಮ್​​​​ ಟ್ರೈನರ್​ ಮಾಡಿದ ಒಂದೊಂದು ಕಹಾನಿಯ ಬಗ್ಗೆ ದಿನಕ್ಕೊಂದು ಹುಡುಗಿಯರು ಬಂದು ದೂರು ನೀಡುತ್ತಿದ್ದಾರೆ. ಇದೀಗ ಮತ್ತೊಂದು ಹುಡುಗಿ ಬಂದು ದೂರು ನೀಡಿದ್ದಾರೆ. ಈ ಬಗ್ಗೆ ಸಂಪೂರ್ಣ ವರದಿ ಇಲ್ಲಿದೆ ನೋಡಿ. ಇದರ ಜತೆಗೆ ಈಗಾಗಲೇ ದೂರು ನೀಡಿರುವ ಸಂತ್ರಸ್ತ ಯುವತಿಯನ್ನು ತನ್ನ ಐಷಾರಾಮಿ ಜೀವನಕ್ಕಾಗಿ ‘ಎಟಿಎಂ’ ತರಹ ಬಳಸಿಕೊಂಡಿರುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

ಆರೋಪಿ ಸಮೀರ್ ಮುಲ್ಲಾ ಸಂತ್ರಸ್ತ ಯುವತಿಯಿಂದ ಕಳೆದ ಎರಡು ವರ್ಷಗಳಲ್ಲಿ ಸಾವಿರಾರು ರೂಪಾಯಿಗಳನ್ನು ಹಣ ಪಡೆದಿದ್ದಾನೆ. 30 ರೂಪಾಯಿಯಿಂದ ಹಿಡಿದು 25 ಸಾವಿರ ರೂಪಾಯಿವರೆಗೆ ಫೋನ್ ಪೇ (PhonePe) ಮೂಲಕ ಹಣ ಹಾಕಿಸಿಕೊಂಡಿರುವ ಸ್ಕ್ರೀನ್‌ಶಾಟ್‌ಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. “ನಿನ್ನ ವಿಡಿಯೋಗಳನ್ನು ವೈರಲ್ ಮಾಡುತ್ತೇನೆ” ಎಂದು ಬೆದರಿಸಿ ಯುವತಿಯಿಂದ ಹಣ ಕೀಳುತ್ತಿದ್ದ ಎನ್ನಲಾಗಿದೆ. ಬ್ರ್ಯಾಂಡೆಡ್ ಬಟ್ಟೆಗಳನ್ನು ಧರಿಸಲು ಮತ್ತು ಹೈಫೈ ಜೀವನ ನಡೆಸಲು ಯುವತಿಯ ಹಣವನ್ನೇ ಈತ ಬಳಸುತ್ತಿದ್ದನು.

ಇದನ್ನೂ ಓದಿ: ಹುಬ್ಬಳ್ಳಿ ಲವ್ ಜಿಹಾದ್ ಕೇಸ್​ಗೆ ಟ್ವಿಸ್ಟ್: ಯುವಕನ ವಿರುದ್ಧ ದೂರು ಬೆನ್ನಲ್ಲೇ ಯುವತಿಯ ವಿಡಿಯೋಗಳು ವೈರಲ್

ಕೇವಲ ಈ ಸಂತ್ರಸ್ತ ಯುವತಿ ಮಾತ್ರವಲ್ಲದೆ, ಜಿಮ್‌ಗೆ ಬರುತ್ತಿದ್ದ ಇನ್ನೋರ್ವ ಹಿಂದೂ ಧರ್ಮದ ಯುವತಿಯೊಂದಿಗೂ ಸಮೀರ್ ಸಂಪರ್ಕ ಹೊಂದಿದ್ದ ಎನ್ನಲಾಗಿದೆ. ಆಕೆಯ ಮೇಲೆಯೂ ಲೈಂಗಿಕ ದೌರ್ಜನ್ಯ ಎಸಗಿ ವಿಡಿಯೋ ಮಾಡಿಟ್ಟುಕೊಂಡಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ವಿಷಯ ತಿಳಿಯುತ್ತಿದ್ದಂತೆಯೇ ಶ್ರೀರಾಮಸೇನೆ ಸಂಘಟನೆ ದೌರ್ಜನ್ಯಕ್ಕೊಳಗಾದ ಇನ್ನೊಬ್ಬ ಯುವತಿಯನ್ನು ಭೇಟಿಯಾಗಲು ಸಂಘಟನೆಯ ಕಾರ್ಯಕರ್ತರು ಯತ್ನಿಸುತ್ತಿದ್ದಾರೆ. “ಧೈರ್ಯವಾಗಿ ಮುಂದೆ ಬಂದು ದೂರು ನೀಡಿ, ನಾವು ನಿಮ್ಮ ಜೊತೆಗಿದ್ದೇವೆ” ಎಂದು ಸಂಘಟನೆಯ ಮುಖಂಡರು ಯುವತಿಯ ಮನವೊಲಿಸಲು ಪ್ರಯತ್ನಿಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಭವಿಷ್ಯದ ಕನಸು ಕಂಡಿದ್ದ 71 ಜನ ಸಮುದ್ರಪಾಲು: 32 ಜನರ ರಕ್ಷ ಣೆ

ರೋಮ್, ಏ.6: ಭವಿಷ್ಯದ ಕನಸು ಹೊತ್ತು ಸಮುದ್ರ ಮಾರ್ಗದ ಮೂಲಕ ಯುರೋಪ್ ತಲುಪಲು ಯತ್ನಿಸುತ್ತಿದ್ದ ವಲಸಿಗರಿಗೆ ಮಹಾಮೃತ್ಯು ಎದುರಾಗಿದೆ. ಇಟಲಿ ಕರಾವಳಿಯಲ್ಲಿ ಸಂಭವಿಸಿದ ಭೀಕರ ಬೋಟ್ ದುರಂತದಲ್ಲಿ 71 ವಲಸಿಗರು ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗುವ ಆತಂಕ ಎದುರಾಗಿದೆ.

ಲಿಬಿಯಾದಿಂದ ಯುರೋಪ್‌ಗೆ ಹೊರಟಿದ್ದ ಈ ಬೋಟ್‌ನಲ್ಲಿ ಒಟ್ಟು 105 ಜನರಿದ್ದರು ಎಂದು ಬದುಕುಳಿದವರು ತಿಳಿಸಿದ್ದಾರೆ. ಈಸ್ಟರ್ ರಜಾದಿನಗಳ ಸಂದರ್ಭದಲ್ಲಿ ಈ ಪ್ರಯಾಣವನ್ನು ಮಾಡಲಾತ್ತು. ಸಂತೋಷದಿಂದ ರಜೆ ದಿನವನ್ನು ಕಳೆಯುವ ಎಂದವರಿಗೆ ದೊಡ್ಡ ಅಘಾತವೇ ಕಾಯುತ್ತಿತ್ತು.ಆದರೆ, ಮೆಡಿಟರೇನಿಯನ್ ಸಮುದ್ರದ ಭೀಕರ ಅಲೆಗಳು ಮತ್ತು ಪ್ರತಿಕೂಲ ಹವಾಮಾನದಿಂದಾಗಿ ಬೋಟ್ ಭಾಗಶಃ ಮುಳುಗಿದೆ ಎಂದು ಹೇಳಲಾಗಿದೆ

ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸಿ 32 ಜನರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿವೆ. ದುರದೃಷ್ಟವಶಾತ್ ಇಬ್ಬರ ಶವಗಳು ಪತ್ತೆಯಾಗಿದ್ದು, ಇನ್ನುಳಿದ 71 ಜನರ ಪತ್ತೆಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರುವುದರಿಂದ ಕಾರ್ಯಾಚರಣೆಗೆ ಅಡ್ಡಿಯುಂಟಾಗುತ್ತಿದೆ ಎಂದು ಇಟಲಿ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಇರಾನ್​ನ ಅಣು ವಿದ್ಯುತ್ ಸ್ಥಾವರಕ್ಕೆ ಹಾನಿ; ವಿಕಿರಣ ಸೋರಿಕೆಯಿಂದ ಗಲ್ಫ್ ರಾಷ್ಟ್ರಗಳಲ್ಲಿ ಸರ್ವನಾಶ?

ಮೆಡಿಟರೇನಿಯನ್ ಸಮುದ್ರವು ವಿಶ್ವದ ಅತ್ಯಂತ ಅಪಾಯಕಾರಿ ಪ್ರದೇಶವಾಗಿ ಮಾರ್ಪಟ್ಟಿದೆ. ಹಳೆಯ ಮತ್ತು ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರನ್ನು ತುಂಬಿದ ಬೋಟ್‌ಗಳ ಮೂಲಕ ನಡೆಯುವ ಇಂತಹ ಪ್ರಯಾಣಗಳು ಪದೇ ಪದೇ ಇಂತಹ ದುರಂತಗಳಿಗೆ ಕಾರಣವಾಗುತ್ತಿವೆ. ಅಕ್ರಮ ವಲಸೆಯನ್ನು ತಡೆಗಟ್ಟಲು ಮತ್ತು ಸುರಕ್ಷಿತ ಮಾರ್ಗಗಳನ್ನು ಕಲ್ಪಿಸಲು ಅಂತರಾಷ್ಟ್ರೀಯ ಸಮುದಾಯವು ತಕ್ಷಣ ಎಚ್ಚೆತ್ತುಕೊಳ್ಳಬೇಕಾದ ಅನಿವಾರ್ಯತೆ ಈ ಘಟನೆಯಿಂದ ಮತ್ತೊಮ್ಮೆ ಸಾಬೀತಾಗಿದೆ.

ವಿದೇಶ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version