Headlines

ಬಾಗಲಕೋಟೆ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ; ಇಬ್ಬರು ಪೊಲೀಸ್ ಆಫೀಸರ್ಸ್ ಎತ್ತಂಗಡಿ

ಬಾಗಲಕೋಟೆ, ಏಪ್ರಿಲ್​ 05: ರಾಜ್ಯದಲ್ಲಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರದ ಉಪಚುನಾವಣೆ (By-election) ಗೆಲ್ಲೋದಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ತಂತ್ರ ಪ್ರತಿತಂತ್ರ ಹೂಡುತ್ತಿವೆ. ಈ ಮಧ್ಯೆ ನಿನ್ನೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ NSUI ಘಟಕದಿಂದ ಕರಪತ್ರ ಹಂಚಿಕೆ ಆರೋಪ ಕೇಳಿಬಂದಿತ್ತು. ದೊಡ್ಡ ಹೈಡ್ರಾಮಾವೇ ನಡೆದಿತ್ತು. ಇದೀಗ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಎತ್ತಂಗಡಿ ಮಾಡಲಾಗಿದೆ. ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ NSUI ಸಂಘಟನೆ ಅಪಪ್ರಚಾರ ಮಾಡಿದ ಆರೋಪ…

Read More

ರಶ್ಮಿಕಾ ಮಂದಣ್ಣ ಹುಟ್ಟುಹಬ್ಬ: ಸ್ಪೆಷಲ್ ವಿಡಿಯೋ ಹಂಚಿಕೊಂಡ ವಿಜಯ್ ದೇವರಕೊಂಡ

ದಕ್ಷಿಣ ಭಾರತದ ಖ್ಯಾತ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಇಂದು (ಏಪ್ರಿಲ್ 5) 30ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಬಾರಿಯ ಹುಟ್ಟುಹಬ್ಬ ರಶ್ಮಿಕಾ ಪಾಲಿಗೆ ಅತ್ಯಂತ ವಿಶೇಷವಾಗಿದೆ. ಏಕೆಂದರೆ ನಟ ವಿಜಯ್ ದೇವರಕೊಂಡ ಅವರೊಂದಿಗೆ ವಿವಾಹವಾದ ನಂತರ ಆಚರಿಸಿಕೊಳ್ಳುತ್ತಿರುವ ಮೊದಲ ಜನ್ಮದಿನ ಇದಾಗಿದೆ. ಈ ದಿನದಂದು ಪತಿ ವಿಜಯ್ ದೇವರಕೊಂಡ (Vijay Deverakonda) ಅವರು ‘ರಣಬಾಲಿ’ ಸಿನಿಮಾದ ಮೇಕಿಂಗ್ ವಿಡಿಯೋ ಹಂಚಿಕೊಳ್ಳುವ ಮೂಲಕ ರಶ್ಮಿಕಾಗೆ ಶುಭ ಕೋರಿದ್ದಾರೆ. ಈ ಚಿತ್ರದಲ್ಲಿ ವಿಜಯ್ ಮತ್ತು ರಶ್ಮಿಕಾ ಜೋಡಿಯಾಗಿ…

Read More

ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಹುಲಿ ಫ್ಯಾಮಿಲಿ ದರ್ಶನ, ಅಪರೂಪದ ವಿಡಿಯೋ

ಚಾಮರಾಹನಗರ, (ಏಪ್ರಿಲ್ 05): ದೇಶದ ಜನಪ್ರಿಯ ಹುಲಿ (Tiger) ರಕ್ಷಿತಾರಣ್ಯಗಳಲ್ಲಿ ಒಂದಾದ ಚಾಮರಾಜನಗರ ಜಿಲ್ಲೆಯ (chamarajanagar)  ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ (bandipur national park)  ಹುಲಿಗಳ ದರ್ಶನವಾಗಿದೆ. ತಾಯಿಯೊಂದಿಗೆ ಚಿನ್ನಾಟ ಆಡುತ್ತಿರುವ ಹುಲಿ ಮರಿಗಳ ಅಪರೂಪದ ದೃಶ್ಯ ಪ್ರವಾಸಿಗ ಸೆರೆಹಿಡಿದಿದ್ದು, ಸದ್ಯ ವಿಡಿಯೋ ವೈರಲ್ ಆಗಿದೆ. ಮತ್ತೊಂದೆಡೆ ಮಳೆಯಲ್ಲೂ ಅಂಜದೆ ತ್ ವ್ಯಾಘ್ರ ಕುಳಿತು ಕ್ಯಾಮೆರಾಕ್ಕೆ ಪೋಸ್ ಕೊಟ್ಟಿದೆ. ಸಫಾರಿ ರೀ ಓಪನ್ ಆದ ಬಳಿಕ ಮೊದಲ ಬಾರಿಗೆ ವ್ಯಾಘ್ರನ ಕುಟುಂಬವನ್ನ ಕಣ್ತುಂಬಿಕೊಂಡು ಪ್ರವಾಸಿಗರು ಪುಳಕಿತರಾಗಿದ್ದಾರೆ. ವಿಡಿಯೋ…

Read More

ಕಮಲ್ ಹಾಸನ್ ಮೇಲೆ ಭುಗಿಲೆದ್ದ ಆಕ್ರೋಶ: 50 ಸಾವಿರ ಮರಳಿಸುವಂತೆ ಒತ್ತಾಯ

ಕಮಲ್ ಹಾಸನ್ (Kamal Haasan) ಭಾರತದ ಸ್ಟಾರ್ ನಟ, ನಿರ್ದೇಶಕ ಮತ್ತು ನಿರ್ಮಾಪಕ ಆಗಿರುವ ಜೊತೆಗೆ ರಾಜಕಾರಣಿಯೂ ಹೌದು. ಇತ್ತೀಚೆಗಷ್ಟೆ ಅವರು ರಾಜ್ಯಸಭೆಗೆ ಸಹ ಆಯ್ಕೆ ಆಗಿದ್ದಾರೆ. ಕೆಲ ವರ್ಷಗಳ ಹಿಂದೆ ಕಮಲ್ ಹಾಸನ್ ಅವರು ‘ಮಕ್ಕಳ್ ನಿಧಿ ಮಯಂ’ ಹೆಸರಿನ ರಾಜಕೀಯ ಪಕ್ಷ ಸ್ಥಾಪಿಸಿದ್ದರು. ರಾಜ್ಯದಾದ್ಯಂತ ಸಂಚರಿಸಿ ಪಕ್ಷವನ್ನು ಬಲಗೊಳಿಸುವ ಪ್ರಯತ್ನ ಮಾಡಿದ್ದರು. ತಮಿಳುನಾಡಿನ ಬಲಿಷ್ಟ ಪಕ್ಷವಾದ ಡಿಎಂಕೆಗೆ ಸವಾಲೊಡ್ಡುವ ಪಕ್ಷ ಎಂದೇ ಆರಂಭದಲ್ಲಿ ಬಿಂಬಿತವಾಗಿತ್ತು. ಆದರೆ ಈ ಬಾರಿ ಕಮಲ್ ಹಾಸನ್ ಅವರ ಪಕ್ಷ…

Read More

ಜಿಡಿಪಿಯಲ್ಲಿ 4ನೇ ಸ್ಥಾನ, ತಲಾದಾಯದಲ್ಲಿ 126ನೇ ಸ್ಥಾನ; ಭಾರತದ ಆರ್ಥಿಕ ಅಂತರ ಎತ್ತಿತೋರಿಸಿದ ಸ್ಟೀವ್ ಹ್ಯಾಂಕ್

ನವದೆಹಲಿ, ಏಪ್ರಿಲ್ 5: ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕತೆ ಹೊಂದಿರುವ ಭಾರತ, ಜಿಡಿಪಿ ತಲಾದಾಯದಲ್ಲಿ (GDP Per Capita Income) ಬಹಳ ಹಿಂದುಳಿದಿದೆ. ಬಡವರು ಮತ್ತು ಕೆಳಮಧ್ಯಮ ವರ್ಗದವರ ಸಂಖ್ಯೆಯೇ ಅತಿಹೆಚ್ಚು ಇರುವುದು. ವಿಶ್ವಖ್ಯಾತ ಆರ್ಥಿಕ ತಜ್ಞ ಸ್ಟೀವ್ ಹ್ಯಾಂಕ್ (Steve Hanke) ಅವರು ಈ ವಿಚಾರವನ್ನು ಪ್ರಸ್ತಾಪಿಸಿ ಮಾಡಿದ ಟ್ವೀಟ್​ವೊಂದು ಚರ್ಚೆ ಹುಟ್ಟುಹಾಕಿದೆ. ಭಾರತ ವಿಶ್ವದ ನಾಲ್ಕನೇ ಅತಿದೊಡ್ಡ ಜಿಡಿಪಿ ಹೊಂದಿದೆ. ಆದರೆ, ತಲಾದಾಯದಲ್ಲಿ 126ನೇ ಸ್ಥಾನದಲ್ಲಿದೆ ಎಂದಿರುವ ಅವರು 1980ರಲ್ಲಿ ಚೀನಾಗಿಂತಲೂ ಭಾರತದ ಜಿಡಿಪಿ…

Read More

SRH vs LSG IPL 2026 Live Score: ಎಸ್​ಆರ್​ಎಚ್- ಲಕ್ನೋ ಮುಖಾಮುಖಿ – Kannada News | Sunrisers Hyderabad vs Lucknow Super Giants IPL 2026 Live Cricket Score SRH vs LSG Match on 5th April latest news in Kannada

ಐಪಿಎಲ್ 2026 ರಲ್ಲಿ ಇಂದು ಎರಡು ಪಂದ್ಯಗಳು ನಡೆಯಿವೆ. ಇದರಲ್ಲಿ ಮೊದಲ ಪಂದ್ಯ ಸನ್‌ರೈಸರ್ಸ್ ಹೈದರಾಬಾದ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯುತ್ತಿದೆ. ಎರಡೂ ತಂಡಗಳ ನಡುವಿನ ಪಂದ್ಯವನ್ನು ಸನ್‌ರೈಸರ್ಸ್‌ನ ತವರು ಮೈದಾನವಾದ ಹೈದರಾಬಾದ್‌ನಲ್ಲಿ ನಡೆಸಲಾಗುತ್ತಿದೆ. ಐಪಿಎಲ್ 2026 ರಲ್ಲಿ ಸನ್‌ರೈಸರ್ಸ್ ತಮ್ಮ ತವರು ಮೈದಾನದಲ್ಲಿ ಆಡುವ ಮೊದಲ ಪಂದ್ಯ ಇದು. ಅದೇ ಸಮಯದಲ್ಲಿ, ಲಕ್ನೋ ಸೂಪರ್ ಜೈಂಟ್ಸ್ ತಮ್ಮ ಮನೆಯ ಹೊರಗೆ ಆಡುವ ಮೊದಲ ಪಂದ್ಯ ಇದು. Source link

Read More

ದೆಹಲಿಯಲ್ಲಿ ನಡೀತಿದೆ ನಕಲಿ ಔಷಧಿಗಳ ತಯಾರಿಸುವ ದಂಧೆ: ಡಿಸಿಪಿ ಆದಿತ್ಯ ಗೌತಮ್ ಹೇಳಿದ್ದೇನು?

ನವದೆಹಲಿ, ಏಪ್ರಿಲ್ 05: ದೆಹಲಿಯಲ್ಲಿ ನಕಲಿ ಔಷಧಿಗಳನ್ನು ತಯಾರಿಸುವ ದಂಧೆ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಕ್ರೈಂ ಬ್ರಾಂಚ್ ಡಿಸಿಪಿ ಆದಿತ್ಯ ಗೌತಮ್ ಹೇಳಿದ್ದಾರೆ. ಸೈಬರ್ ಸೆಲ್‌ನ ಎಎಸ್‌ಐಗೆ ಶಹದಾರಾ ಮತ್ತು ಉತ್ತರ ಪ್ರದೇಶದ ಇತರ ಭಾಗಗಳಿಂದ ಮಾಹಿತಿ ಬಂದಿತ್ತು.ಆರೋಪಿಯಿಂದ ಆತನಿಂದ 1.20 ಲಕ್ಷಕ್ಕೂ ಹೆಚ್ಚು ನಕಲಿ ಔಷಧಿಗಳನ್ನು ವಶಪಡಿಸಿಕೊಳ್ಳಲಾಗಿದೆ.ಮಾಯಾಂಕ್ ಅಗರ್ವಾಲ್ ಮತ್ತು ಮೋಹಿತ್ ಶರ್ಮಾ ಸೇರಿದಂತೆ ಇನ್ನೂ ಮೂವರನ್ನು ಬಂಧಿಸಲಾಗಿದೆ. ನಾವು ಮುಜಫರ್ನಗರದಲ್ಲಿ ಸಂಪೂರ್ಣ ಕಾರ್ಖಾನೆಯನ್ನು ಭೇದಿಸಿದ್ದೇವೆ. ಈ ವ್ಯಕ್ತಿಗಳು 2011-12 ರಿಂದ ಈ ಕಾರ್ಯಾಚರಣೆಯನ್ನು…

Read More

Weekly Horoscope: ಏಪ್ರಿಲ್ ತಿಂಗಳ ಮೊದಲ ವಾರ ಯಾವ ರಾಶಿಗೆ ಶುಭ? ಯಾರಿಗೆ ಅಶುಭ?

ಇದು 2026ರ ಏಪ್ರಿಲ್ ನ ಮೊದಲ ವಾರದಲ್ಲಿ ಸಾಲದ ಚಿಂತೆ, ನೆಂಟರ ಆಗಮನ, ಸಂಗಾತಿಯಿಂದ ಅಸಹಾಯಕತೆ, ಧಾರ್ಮಿಕ ನಂಬಿಕೆಗೆ ಹೆಚ್ಚು ಪ್ರಾಶಸ್ತ್ಯ ಸಿಗಲಿದೆ. ಸಿಗುವ ಗೌರವವನ್ನು ಕಾಳಜಿಯಿಂದ ಪಡೆಯುವ ಹೊಣೆಗಾರಿಕೆಯೂ ಈ ವಾರದ್ದು. ಮೇಷ: ಹೊಸ ಉದ್ಯೋಗ ಪ್ರಯತ್ನಕ್ಕೆ ಮನ್ನಣೆ ಸಿಗಲಿದೆ. ಕುಟುಂಬದಲ್ಲಿ ಶುಭ ಕಾರ್ಯದ ಚರ್ಚೆ ನಡೆಯಲಿದ್ದು, ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸುವುದು ಸೂಕ್ತ. ವೃಷಭ: ಭೂಮಿ ಅಥವಾ ವಾಹನ ಖರೀದಿ ಯೋಗವಿದೆ. ದೂರದ ಪ್ರಯಾಣದಿಂದ ಲಾಭವಾಗಲಿದೆ. ಸಂಗಾತಿಯೊಂದಿಗೆ ಮಧುರ…

Read More

ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಹಾವುಗಳು, ಮೊಸಳೆಗಳ ಗಸ್ತು

ಕೋಲ್ಕತ್ತಾ, ಏಪ್ರಿಲ್ 05: ಭಾರತ-ಬಾಂಗ್ಲಾ ಗಡಿಯಲ್ಲಿ ಬಿಎಸ್​ಎಫ್ ಜವಾನರಲ್ಲ ಇನ್ನುಮುಂದೆ ಹಾವು(Snake)ಗಳು, ಮೊಸಳೆಗಳು ಗಸ್ತು ತಿರುಗಲಿವೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಗಡಿಯಲ್ಲಿ ಸಾಕಷ್ಟು ಕಡೆ ಬೇಲಿಗಳೇ ಇಲ್ಲದ ಕಾರಣ ಒಳನುಸುಳುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಇದನ್ನು ತಡೆಯಲು ಗಡಿಯಲ್ಲಿ ಹಾವುಗಳು ಮತ್ತು ಮೊಸಳಗೆಗಳನ್ನು ನಿಯೋಜಿಸಲು ಬಿಎಸ್​ಎಫ್​ ಮುಂದಾಗಿದೆ. ಗಡಿಯಲ್ಲಿ ಸುಮಾರು 175 ಕಿ.ಮೀ ಬೇಲಿ ಇಲ್ಲದ ಪ್ರದೇಶದುದ್ದಕ್ಕೂ ಸರೀಸೃಪಗಳನ್ನು ನಿಯೋಜಿಸಲಾಗುತ್ತದೆ.  4,096 ಕಿ.ಮೀ.ಗಳಲ್ಲಿ, 850 ಕಿ.ಮೀ. ಬೇಲಿಯಿಲ್ಲದೇ ಉಳಿದಿದೆ.ಆದರೆ ಸರ್ಕಾರದಿಂದ ಯಾವುದೇ ಅಂತಿಮ ನಿರ್ಧಾರವಾಗಿಲ್ಲ. ಉನ್ನತ ಮಟ್ಟದ ಸಭೆಗಳ…

Read More

ಬೆಂಕಿ ಬಿರುಗಾಳಿ ಬ್ಯಾಟಿಂಗ್​ಗೆ ಹಳೆಯ ದಾಖಲೆಯೇ ಧ್ವಂಸ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಜೋಡಿಯಾದ ಯಶಸ್ವಿ ಜೈಸ್ವಾಲ್ ಮತ್ತು ವೈಭವ್ ಸೂರ್ಯವಂಶಿ ಹೊಸ ಇತಿಹಾಸ ಬರೆದಿದ್ದಾರೆ. ಏಪ್ರಿಲ್ 4ರಂದು ಗುಜರಾತ್ ಟೈಟಾನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಇವರಿಬ್ಬರು ಭಾರತೀಯ ಕ್ರಿಕೆಟ್‌ನ ದಿಗ್ಗಜ ಜೋಡಿ ವೀರೇಂದ್ರ ಸೆಹ್ವಾಗ್ ಮತ್ತು ಗೌತಮ್ ಗಂಭೀರ್ ಅವರ ಹೆಸರಿನಲ್ಲಿದ್ದ ಹಳೆಯ ದಾಖಲೆಯೊಂದನ್ನು ಅಳಿಸಿ ಹಾಕಿದ್ದಾರೆ. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಹಾಗೂ ವೈಭವ್ ಸೂರ್ಯವಂಶಿ ಮೊದಲ ವಿಕೆಟ್​ಗೆ 70 ರನ್​ಗಳ ಜೊತೆಯಾಟವಾಡಿದ್ದರು….

Read More