Union Budget 2026 Live: ಬಜೆಟ್ ಭಾಷಣ ಸಮಯ, ಲೈವ್ ಸ್ಟ್ರೀಮಿಂಗ್, ಪಿಡಿಎಫ್ ಕಾಪಿ ಡೌನ್​ಲೋಡ್ ಇತ್ಯಾದಿ ಮಾಹಿತಿ – Kannada News | Union Budget 2026 FM Nirmala Sitharaman Speech Live Streaming on TV9 Kannada

ಯೂನಿಯನ್ ಬಜೆಟ್ 2026-27: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಫೆಬ್ರುವರಿ 1, ಭಾನುವಾರದಂದು 2026-27ನೇ ಸಾಲಿನ ಬಜೆಟ್ ಅನ್ನು ಮಂಡನೆ ಮಾಡುತ್ತಿದ್ದಾರೆ. ಭಾನುವಾರ ಬೆಳಗ್ಗೆ 11ಗಂಟೆಗೆ ಸಂಸತ್​ನ ಜಂಟಿ ಅಧಿವೇಶನದಲ್ಲಿ ಸಚಿವೆ ಬಜೆಟ್ ಮಂಡನೆ ಆರಂಭಿಸುತ್ತಾರೆ. ಬಜೆಟ್ ಭಾಷಣ ಮುಗಿಯಲು ಮಧ್ಯಾಹ್ನ ಎರಡು ಗಂಟೆ ದಾಟಬಹುದು. ಇದು ಭಾರತದಲ್ಲಿ ಮಂಡಿಲಾಗುವ 88ನೇ ಬಜೆಟ್ ಆಗಿದೆ. ನಿರ್ಮಲಾ ಸೀತಾರಾಮನ್ ಅವರಿಗೆ ಇದು 9ನೇ ಬಜೆಟ್ ಮಂಡನೆ. ಅದೂ ಸತತವಾಗಿ. ಸತತ 9 ಬಾರಿ ಬಜೆಟ್ ಮಂಡಿಸಿದ ದಾಖಲೆ ನಿರ್ಮಲಾ ಅವರದ್ದಾಗುತ್ತದೆ.

ಈ ಕೆಳಗಿನ ಯೂಟ್ಯೂಬ್​ನಲ್ಲಿ ಫೆಬ್ರುವರಿ 1ರಂದು ಬಜೆಟ್ ಭಾಷಣದ ಲೈವ್ ವೀಕ್ಷಿಸಬಹುದು
https://www.youtube.com/watch?v=g566v4ZRI4w
ಟ್ರಂಫ್ ಅವರ ಟ್ಯಾರಿಫ್ ಪ್ರತಾಪ, ವಿವಿಧ ದೇಶಗಳ ಮೇಲೆ ಅಮೆರಿಕದ ಧಮಕಿ, ರಷ್ಯಾ ಉಕ್ರೇನ್ ಯುದ್ಧ ಮುಂದುವರಿದಿರುವುದು, ಇವೇ ಮುಂತಾದ ಜಾಗತಿಕವಾಗಿ ಅನಿಶ್ಚಿತ ವಾತಾವರಣ ಒಂದೆಡೆ ಇದೆ. ಹಾಗೆಯೇ, ಯೂರೋಪ್ ಜೊತೆ ಭಾರತ ಒಪ್ಪಂದ ಮಾಡಿಕೊಂಡಿರುವುದು, ಜಿಡಿಪಿ ನಿರೀಕ್ಷೆಮೀರಿ ಬೆಳೆಯುತ್ತಿರುವುದು, ಹಣದುಬ್ಬರಕ್ಕೆ ಕಡಿವಾಣ ಬಿದ್ದಿರುವುದು ಇತ್ಯಾದಿ ಸಕಾರಾತ್ಮಕ ಅಂಶಗಳು ಇನ್ನೊಂದೆಡೆ ಇವೆ. ಇಂಥ ಮಿಶ್ರ ಸನ್ನಿವೇಶದಲ್ಲಿ ಬಜೆಟ್ ಮಂಡನೆ ಆಗುತ್ತಿದ್ದು, ನಿರೀಕ್ಷೆಗಳು ಹಲವಿವೆ.

ಬಜೆಟ್ ಭಾಷಣ ಎಲ್ಲಿ ವೀಕ್ಷಿಸುವುದು?

2026ರ ಫೆಬ್ರುವರಿ 1, ಭಾನುವಾರದಂದು ನಿರ್ಮಲಾ ಸೀತಾರಾಮನ್ ಅವರ ಬಜೆಟ್ ಭಾಷಣ ಆರಂಭವಾಗುತ್ತದೆ. ಟಿವಿ ಮತ್ತು ಡಿಜಿಟಲ್ ಪ್ಲಾಟ್​ಫಾರ್ಮ್​ಗಳಲ್ಲಿ ನೇರ ಪ್ರಸಾರ ಇರುತ್ತದೆ. ಟಿವಿ9 ಕನ್ನಡ ವಾಹಿನಿಯಲ್ಲಿ ನೇರ ಪ್ರಸಾರ ವೀಕ್ಷಿಸಬಹುದು. ಟಿವಿ9 ಕನ್ನಡ ಯೂಟ್ಯೂಬ್ ಮತ್ತು ವೆಬ್​ಸೈಟ್​ಗಳಲ್ಲೂ ಬಜೆಟ್ ಭಾಷಣದ ನೇರ ಪ್ರಸಾರ ವೀಕ್ಷಿಸಬಹುದು. ವೆಬ್​ಸೈಟ್​ನಲ್ಲಿ ಬಜೆಟ್ ಭಾಷಣ ಆರಂಭಕ್ಕೂ ಮುನ್ನ ಲೈವ್ ಬ್ಲಾಗ್ ಕೂಡ ಇರುತ್ತದೆ. ಬಜೆಟ್​ನ ಇಂಚಿಂಚೂ ಮಾಹಿತಿಯನ್ನು ಲೈವ್ ಬ್ಲಾಗ್​ನಲ್ಲಿ ಕಾಣಬಹುದು.

ಬಜೆಟ್ ಸಂಬಂಧಿತ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಜೆಟ್ ಪ್ರತಿ ಡೌನ್​ಲೋಡ್ ಮಾಡುವುದು

ನಿರ್ಮಲಾ ಸೀತಾರಾಮನ್ ಅವರ ಬಜೆಟ್ ಭಾಷಣ ಮುಗಿದ ಕೂಡಲೇ ಅದರ ಪ್ರತಿಯು ಆನ್​ಲೈನ್​ನಲ್ಲಿ ಲಭ್ಯವಾಗಿರುತ್ತದೆ. ಬಜೆಟ್ ಭಾಷಣದಿಂದ ಹಿಡಿದು ಬಜೆಟ್ ಹೈಲೈಟ್ಸ್​ವರೆಗೆ ವಿವಿಧ ಸಂಬಂಧಿತ ದಾಖಲೆಗಳು ಆನ್​ಲೈನ್​ನಲ್ಲೇ ದೊರಕುತ್ತವೆ. ಅದಕ್ಕೆಂದೇ ರೂಪಿಸಲಾಗಿರುವ indiabudget.gov.in ವೆಬ್​ಸೈಟ್​ನಲ್ಲಿ ಈ ದಾಖಲೆಗಳನ್ನು ನೋಡಬಹುದು, ಮಾತ್ರವಲ್ಲ, ಡೌನ್​ಲೋಡ್ ಕೂಡ ಮಾಡಬಹುದು. ಬಜೆಟ್ ಪ್ರತಿಯು ಪಿಡಿಎಫ್ ಫಾರ್ಮ್ಯಾಟ್​ನಲ್ಲಿ ಇರುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On – 5:33 pm, Fri, 30 January 26

Source link

ತೆರೆಗೆ ಬರುತ್ತಿದೆ ಮೈಕಲ್ ಜಾಕ್ಸನ್ ಜೀವನ: ಬಿಡುಗಡೆ ಯಾವಾಗ? – Kannada News | Michael Jackson biopic Michael to release on April 24

ವಿಶ್ವ ಸಂಗೀತ ಮತ್ತು ಪಾಪ್ ಕ್ಷೇತ್ರದಲ್ಲಿ ದಂತಕತೆ. ಅವರ ನೃತ್ಯ ಮತ್ತು ಹಾಡು ಅಮೆರಿಕದ ಪಾಪ್ ಸಂಸ್ಕೃತಿಯನ್ನೇ ಬದಲಾಯಿಸಿತು. ಮೈಕಲ್ ಜಾಕ್ಸನ್ (michael jackson) ಅವರ ನೃತ್ಯ ಶೈಲಿ, ಅವರ ಥ್ರಿಲ್ಲರ್, ಬ್ಯಾಡ್ ಮತ್ತು ಡೇಂಜರಸ್ ಆಲ್ಬಂಗಳು ಇತಿಹಾಸವನ್ನೇ ನಿರ್ಮಿಸಿವೆ. ಮೈಕಲ್ ಜಾಕ್ಸನ್ ಇಂದಿಗೂ ಸಹ ವಿಶ್ವದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಒಬ್ಬರು. ಭಾರತದ ಪ್ರಭುದೇವ ಸೇರಿದಂತೆ ಕೋಟ್ಯಂತರ ಕಲಾವಿದರಿಗೆ ಪ್ರೇರಣೆಯಾಗಿದ್ದಾರೆ. ಪಾಪ್ ರಾಜನೆಂಬ ಹೆಸರನ್ನು ಪಡೆದಿದ್ದ ಮೈಕಲ್ ಅವರ ಖಾಸಗಿ ಜೀವನ ಸಾಕಷ್ಟು ನೋವು, ಹೋರಾಟಗಳಿಂದ ಕೂಡಿತ್ತು. ಇದೀಗ ಮೈಕಲ್ ಜಾಕ್ಸನ್ ಜೀವನ ಸಿನಿಮಾ ರೂಪದಲ್ಲಿ ತೆರೆಗೆ ಬರಲು ಸಜ್ಜಾಗಿದ್ದು, ಸಿನಿಮಾದ ಟ್ರೈಲರ್ ಈಗಾಗಲೇ ಬಿಡುಗಡೆ ಆಗಿದೆ.

ಮೈಕಲ್ ಜಾಕ್ಸನ್ ಜೀವನ ಆಧರಿಸಿದ ಸಿನಿಮಾ ಹಾಲಿವುಡ್​​ನಲ್ಲಿ ನಿರ್ಮಾಣಗೊಂಡಿದ್ದು ಸಿನಿಮಾಕ್ಕೆ ‘ಮೈಕಲ್’ ಎಂದು ಹೆಸರಿಡಲಾಗಿದೆ. ಈ ಹಿಂದೆ ಭಾರತೀಯ ಮೂಲದ ಪಾಪ್ ತಾರೆ ಫ್ರೆಡ್ಡಿ ಮರ್ಕ್ಯುರಿ ಜೀವನ ಆಧರಿಸಿದ ‘ಬೊಹಿಮಿಯನ್ ರಾಪ್ಸಡಿ’ ಸಿನಿಮಾ ನಿರ್ಮಾಣ ಮಾಡಿದ್ದ ಗ್ರಹಾಂ ಕಿಂಗ್, ಇದೀಗ ಮೈಕಲ್ ಜಾಕ್ಸನ್ ಜೀವನ ಆಧರಿಸಿದ ‘ಮೈಖಲ್’ ಸಿನಿಮಾ ನಿರ್ಮಾಣ ಮಾಡಿದ್ದಾರೆ. ‘ಮೈಕಲ್’ ಸಿನಿಮಾವನ್ನು ಆಂಟೊನಿ ಫರುಖಾ ನಿರ್ದೇಶನ ಮಾಡಿದ್ದಾರೆ.

ಸಿನಿಮಾದ ಟ್ರೈಲರ್ ಈಗಾಗಲೇ ಬಿಡುಗಡೆ ಆಗಿದ್ದು ಸಖತ್ ವೈರಲ್ ಆಗಿದೆ. ಈ ಸಿನಿಮಾ ಮೈಖಲ್ ಜಾಕ್ಸನ್ ಅವರ ಬಾಲ್ಯ, ಯೌವ್ವನ ಅವರ ಜನಪ್ರಿಯತೆ, ಅವರ ಬಣ್ಣ ಬದಲಾವಣೆ ಅದಕ್ಕೆ ಕಾರಣ, ಮೈಕಲ್ ಅನ್ನು ಸುತ್ತಿಕೊಂಡ ವಿವಾದಗಳು, ಮೈಕಲ್​ ಆರೋಗ್ಯ ಸಮಸ್ಯೆ, ಅವರ ಸಾವು ಎಲ್ಲವನ್ನೂ ಒಳಗೊಂಡಿದೆ. ಸಿನಿಮಾದ ಟ್ರೈಲರ್ ಅಂತೂ ಅದ್ಭುತವಾಗಿ ಮೂಡಿ ಬಂದಿದೆ. ಮೈಕಲ್ ಅವರ ಒರಿಜಿನಲ್ ಹಾಡುಗಳನ್ನು ಹಾಗೆಯೇ ಬಳಸಿಕೊಳ್ಳಲಾಗಿದೆ.

ಇದನ್ನೂ ಓದಿ:ಹಾಲಿವುಡ್ ಸ್ಟಾರ್ ನಟನಿಗೆ ಭಾರತದ ಈ ನಿರ್ದೇಶಕನೊಟ್ಟಿಗೆ ಕೆಲಸ ಮಾಡುವ ಆಸೆ

ಮೈಕಲ್ ಜಾಕ್ಸನ್ ಪಾತ್ರದಲ್ಲಿ ಅವರ ಸಹೋದರನ ಪುತ್ರ ಆಗಿರುವ ಜಾಫರ್ ಜಾಕ್ಸನ್ ಅವರೇ ನಟಿಸುತ್ತಿರುವುದು ವಿಶೇಷ. ಜಾಫರ್ ಜಾಕ್ಸನ್ ಸ್ವತಃ ಗಾಯಕ ಮತ್ತು ನಟರಾಗಿದ್ದು, ತಮ್ಮ ಅಂಕಲ್​ ಪಾತ್ರದಲ್ಲಿಯೇ ಅವರು ನಟಿಸುತ್ತಿದ್ದಾರೆ. ಜಾಫರ್ ಜಾಕ್ಸನ್​​ಗೆ ‘ಮೈಕಲ್’ ಮೊದಲ ಸಿನಿಮಾ ಆಗಿದೆ. ಟ್ರೈಲರ್​​ನಲ್ಲಿ ಮೈಕಲ್ ಆಗಿ ಅವರು ಗಮನ ಸೆಳೆಯುತ್ತಿದ್ದಾರೆ. 1300 ಕೋಟಿ ಬಜೆಟ್​​ನಲ್ಲಿ ಸಿನಿಮಾವನ್ನು ನಿರ್ಮಿಸಲಾಗಿದ್ದು, ಸಿನಿಮಾದ ಮೊದಲ ಪ್ರೀಮಿಯರ್ ಏಪ್ರಿಲ್ 10 ರಂದು ಬರ್ಲಿನ್​​ನಲ್ಲಿ ನಡೆಯಲಿದೆ. ಬಳಿಕ ಏಪ್ರಿಲ್ 24 ರಂದು ವಿಶ್ವದಾದ್ಯಂತ ‘ಮೈಕಲ್’ ಸಿನಿಮಾ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಪಿಕಲ್ ಬಾಲ್ ಲೀಗ್: ಉತ್ತಮ ಆಟ ಮುಂದುವರಿಸಿದ ಅಟ್ಲಿ ಒಡೆತನದ ‘ಬೆಂಗಳೂರು ಜವಾನ್ಸ್’ ತಂಡ – Kannada News | Priya Atlee team Bengaluru Jawans won first match in world pickleball league

ಪ್ರಿಯಾ ಅಟ್ಲೀ ಮತ್ತು ಖ್ಯಾತ ನಿರ್ದೇಶಕ ಅಟ್ಲೀ ಮಾಲೀಕತ್ವದ ಬೆಂಗಳೂರು ಜವಾನ್ಸ್ ತಂಡವು ವಿಶ್ವ ಪಿಕಲ್ ಬಾಲ್ ಲೀಗ್​ನ ಮೊದಲ ಸೀಸನ್​ನ ಚಾಂಪಿಯನ್ ತಂಡವಾಗಿದ್ದು, ಮತ್ತೆ ತನ್ನ ಉತ್ತಮ ಆಟ ಮುಂದುವರಿಸಿದೆ.

Source link

SA vs WI: ಬೃಹತ್ ಮೊತ್ತ ಬೆನ್ನಟ್ಟಿ ವಿಶ್ವ ದಾಖಲೆ ನಿರ್ಮಿಸಿದ ದಕ್ಷಿಣ ಆಫ್ರಿಕಾ – Kannada News | South Africa Creates History: De Kock’s Record Century Powers Historic T20 Chase vs WI

ಸೆಂಚೂರಿಯನ್‌ನಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ 20 ಓವರ್‌ಗಳಲ್ಲಿ 4 ವಿಕೆಟ್‌ಗಳಿಗೆ 221 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಆದಾಗ್ಯೂ, ಮಾರ್ಕ್ರಾಮ್ ಔಟಾದ ನಂತರ ಬಂದ ರಿಕಲ್ಟನ್, ಡಿ ಕಾಕ್‌ಗೆ ಉತ್ತಮ ಬೆಂಬಲ ನೀಡಿದರು.

Source link

ಐಟಿ ದಾಳಿ ವೇಳೆಯೇ ಶೂಟ್​ ಮಾಡಿಕೊಂಡು ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿಜೆ ರಾಯ್​ ಆತ್ಮಹತ್ಯೆ – Kannada News | Confident Group Chairman C.J. Roy Dies by Suicide During IT Raid

ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್Image Credit source: facebook profile

ಬೆಂಗಳೂರು, ಜನವರಿ 30: ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಪಿಸ್ತೂಲ್​ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಲ್ಯಾಂಗ್​ಫೋರ್ಡ್ ರಸ್ತೆಯಲ್ಲಿರುವ ಬಂಗಲೆಯಲ್ಲಿ ನಡೆದಿದೆ. ಪದೇ ಪದೆ ಐಟಿ ಇಲಾಖೆ ಅಧಿಕಾರಿಗಳಿಂದ ದಾಳಿಗೆ ಹೆದರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಇಂದು ಕೂಡ IT ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದು, ಈ ವೇಳೆ ಪಿಸ್ತೂಲ್​​ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಅಶೋಕ್​​ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ಮಾಹಿತಿ ಅಪ್​​ಡೇಟ್​ ಆಗಲಿದೆ.

Source link

ಧಮ್ಕಿ ಕೇಸ್: ರಾಜೀವ್ ಗೌಡಗೆ ಬಿಗ್ ರಿಲೀಫ್, ಪಟಾಕಿ ಹಚ್ಚಿ ಸಂಭ್ರಮಿಸದಂತೆ ತಾಕೀತು – Kannada News | Rajeev Gowda Gets Bail In Shidlaghatta Municipal Commissioner threat Case

ಚಿಕ್ಕಬಳ್ಳಾಪುರ, (ಜನವರಿ 30): ಶಿಡ್ಲಘಟ್ಟ ನಗರಸಭೆ ಆಯುಕ್ತೆಗೆ ಅಮೃತಾ ಗೌಡಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಾಜೀವ್ ಗೌಡಗೆ (Rajeev Gowda) ಜಾಮೀನು ಸಿಕ್ಕಿದೆ. ಮಂಗಳೂರಿನಲ್ಲಿ ಸ್ಥಳ ಮಹಜರು ಮುಗಿಸಿ ಇಂದು (ಜನವರಿ 30) ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಈ ವೇಳೆ ಶಿಡ್ಲಘಟ್ಟದ ಜೆಎಂಎಫ್​ಸಿ ಕೋರ್ಟ್​, ರಾಜೀವ್ ಗೌಡನಿಗೆ ಷರತ್ತು ಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ.  50 ಸಾವಿರ ರೂಪಾಯಿ ಶ್ಯೂರಿಟಿ ಬಾಂಡ್, ಪೊಲೀಸರ ತನಿಖೆಗೆ ಸಹಕರಿಸಲು ಸೂಚನೆ ನೀಡಿದೆ. ಅಲ್ಲದೇ ಪ್ರಮುಖವಾಗಿ ಜಾಮೀನು ಸಿಕ್ಕ ಖುಷಿಯಲ್ಲಿ ಪಟಾಕಿ ಹಚ್ಚಿ, ಸಂಭ್ರಮಾಚರಣೆ ಮಾಡದಂತೆ ಜಡ್ಜ್​ ಮೊಹಮ್ಮದ್ ರೋಷನ್ ಶಾ ತಾಕೀತು ಮಾಡಿದ್ದಾರೆ.

Source link

Vikalpa Film Review: ಸೈಕಲಾಜಿಕಲ್ ಥ್ರಿಲ್ಲರ್ ಕಥೆಯ ಅಚ್ಚುಕಟ್ಟು ಸಿನಿಮಾ ‘ವಿಕಲ್ಪ’ – Kannada News | Vikalpa Film Review: Vikalpa Kannada movie tells an interesting psychological thriller story

  • Time – 113 Minutes
  • Released – January 30, 2026
  • Language – Kannada
  • Genre – Mystery, Psychological, Thriller

Cast – ಪೃಥ್ವಿರಾಜ್ ಪಾಟೀಲ್, ನಾಗಶ್ರೀ ಹೆಬ್ಬಾರ್, ಸಂಧ್ಯಾ ವಿನಾಯಕ್, ಪೂಜಾ, ಸ್ವರೂಪ್, ಗಣಪತಿ ಹೆಗಡೆ ವಡ್ಡಿನಗದ್ದೆ ಮುಂತಾದವರು.

Director – ಪೃಥ್ವಿರಾಜ್ ಪಾಟೀಲ್

ಕನ್ನಡದಲ್ಲಿ ಸೈಕಲಾಜಿಕಲ್ ಥ್ರಿಲ್ಲರ್ (Psychological Thriller) ಸಿನಿಮಾಗಳ ಸಂಖ್ಯೆ ಕಡಿಮೆ. ಈ ಪ್ರಕಾರದ ಸಿನಿಮಾಗಳಿಗೆ ಪ್ರೇಕ್ಷಕರನ್ನು ಸೆಳೆದುಕೊಳ್ಳುವ ಗುಣ ಇರುತ್ತದೆ. ಕೊನೆಯ ತನಕ ಕುತೂಹಲ ಜಾಗೃತವಾಗಿಯೇ ಇರುತ್ತದೆ. ಅಂಥ ಸಿನಿಮಾಗಳ ಸಾಲಿಗೆ ‘ವಿಕಲ್ಪ’ (Vikalpa Movie) ಕೂಡ ಸೇರ್ಪಡೆ ಆಗಿದೆ. ಜನವರಿ 30ರಂದು ರಿಲೀಸ್ ಆಗಿರುವ ಈ ಸಿನಿಮಾದಲ್ಲಿ ಪೃಥ್ವಿರಾಜ್ ಪಾಟೀಲ್ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ಅಲ್ಲದೇ, ಅವರೇ ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಮಾನಸಿಕ ಸಮಸ್ಯೆಗಳ ಒಂದಷ್ಟು ಆಯಾಮಗಳನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ. ಇಂದಿರಾ ಶಿವಸ್ವಾಮಿ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ.

‘ವಿಕಲ್ಪ’ ಚಿತ್ರದ ಕಥಾನಾಯಕ ಚಿಕ್ಕ ವಯಸ್ಸಿನಲ್ಲಿ ಏನನ್ನೋ ನೋಡಿ ಹೆದರಿಕೊಂಡಿರುತ್ತಾನೆ. ಆ ಭಯ 33ನೇ ವಯುಸ್ಸಿನ ತನಕವೂ ಕಾಡುತ್ತಲೇ ಇರುತ್ತದೆ. ಹಗಲು-ರಾತ್ರಿ, ನಗರ-ಹಳ್ಳಿ, ದೇಶ-ವಿದೇಶ ಎನ್ನದೇ ಎಲ್ಲ ಜಾಗದಲ್ಲೂ ಎಲ್ಲ ಸಮಯದಲ್ಲೂ ಆತನಿಗೆ ವಿಚಿತ್ರವಾದ ಅನುಭವ ಆಗುತ್ತದೆ. ಅದರಿಂದ ಅವನ ಜೀವನದಲ್ಲಿ ಹಲವು ತೊಂದರೆಗಳು ಉಂಟಾಗುತ್ತವೆ. ಅಂತಿಮವಾಗಿ ಅದಕ್ಕೆ ಯಾವ ರೀತಿಯ ಪರಿಹಾರ ಸಿಗುತ್ತದೆ ಎಂಬುದನ್ನು ತಿಳಿಯಲು ಪೂರ್ತಿ ಸಿನಿಮಾ ನೋಡಬೇಕು.

ಬೆಂಗಳೂರು ಮತ್ತು ಮಲೆನಾಡಿನ ಹಲವು ಪ್ರದೇಶಗಳಲ್ಲಿ ‘ವಿಕಲ್ಪ’ ಸಿನಿಮಾವನ್ನು ಚಿತ್ರಿಸಲಾಗಿದೆ. ಆಯಾ ಪ್ರದೇಶ ಮತ್ತು ಆ ಪ್ರದೇಶದ ಪಾತ್ರಗಳಿಗೆ ತಕ್ಕಂತೆ ಸಂಭಾಷಣೆಯನ್ನು ಬರೆಯಲಾಗಿದೆ. ಆ ಮೂಲಕ ಸಿನಿಮಾ ಹೆಚ್ಚು ನೈಜವಾಗಿ ಮೂಡಿಬರುವಂತೆ ನೋಡಿಕೊಳ್ಳಲಾಗಿದೆ. ಕಥೆಯ ಶುರುವಿನಿಂದ ಅಂತ್ಯದ ತನಕ ಸಸ್ಪೆನ್ಸ್ ಕಾಪಾಡಿಕೊಳ್ಳಲಾಗಿದೆ.

ಸಿನಿಮಾದ ಆರಂಭದಲ್ಲಿ ಹಾಸ್ಯ ಮತ್ತು ಹಾರರ್ ಅಂಶಗಳಿಗೆ ಒತ್ತು ನೀಡಲಾಗಿದೆ. ಕಥಾನಾಯಕನ ಅನುಭವಕ್ಕೆ ಬರುತ್ತಿರುವ ವಿಚಿತ್ರ ಘಟನೆಗಳನ್ನು ತೋರಿಸುವಾಗ ಹಾರರ್ ಸಿನಿಮಾ ನೋಡಿದ ಅನುಭವ ಆಗುತ್ತದೆ. ಆ ಘಟನೆಗಳಿಗೆ ಕಾರಣ ಏನಿರಬಹುದು ಎಂಬ ಕುತೂಹಲ ಪ್ರತಿ ಹಂತದಲ್ಲೂ ಮೂಡುತ್ತದೆ. ಜೊತೆಗೆ ಒಂದು ಲವ್ ಸ್ಟೋರಿ ಕೂಡ ಈ ಸಿನಿಮಾದಲ್ಲಿದೆ. ತಾಯಿ ಸೆಂಟಿಮೆಂಟ್ ಕೂಡ ಜಾಗ ಪಡೆದುಕೊಂಡಿದೆ. ಈ ಎಲ್ಲ ಅಂಶಗಳನ್ನು ಸರಿದೂಗಿಸಿಕೊಂಡು ಹೋಗುವ ಪ್ರಯತ್ನ ಮಾಡಿದ್ದಾರೆ ನಿರ್ದೇಶಕರು. ಯಕ್ಷಗಾನವನ್ನು ಒಂದು ಮುಖ್ಯ ಅಂಶವಾಗಿ ಬಳಸಿಕೊಳ್ಳಲಾಗಿದೆ.

‘ವಿಕಲ್ಪ’ ಕ್ಲೈಮ್ಯಾಕ್ಸ್​​ನಲ್ಲಿ ಒಂದಷ್ಟು ಮನೋವೈಜ್ಞಾನಿಕ ಅಂಶಗಳನ್ನು ಪ್ರೇಕ್ಷಕರಿಗೆ ತಿಳಿಸಲಾಗಿದೆ. ಆ ಮೂಲಕ ಮುಖ್ಯವಾದ ಸಂದೇಶ ನೀಡಲಾಗಿದೆ. ದೆವ್ವ-ಭೂತ ಎಂಬ ಮೌಢ್ಯ ಬಿತ್ತುವ ಸಿನಿಮಾಗಳ ನಡುವೆ ‘ವಿಕಲ್ಪ’ ಚಿತ್ರ ಒಂದು ಉತ್ತಮ ಪ್ರಯತ್ನವಾಗಿ ಇಷ್ಟ ಆಗುತ್ತದೆ. ಒಟ್ಟಾರೆ ಈ ಚಿತ್ರದ ಕಥೆ ಸಿಂಪಲ್ ಆಗಿದ್ದರೂ ಕೂಡ ಅದನ್ನು ಫ್ಲ್ಯಾಶ್​ಬ್ಯಾಕ್ ತಂತ್ರದ ಮೂಲಕ ಹೇಳಿದ್ದರಿಂದ ಕೊನೆವರೆಗೂ ಕುತೂಹಲ ಉಳಿಸಿಕೊಳ್ಳುತ್ತದೆ. ಆದರೆ ಕಥೆಯನ್ನು ಇನ್ನಷ್ಟು ರೋಚಕವಾಗಿಸಿದ್ದರೆ ‘ವಿಕಲ್ಪ’ ಸಿನಿಮಾ ಹೆಚ್ಚು ಆಪ್ತವಾಗಬಹುದಿತ್ತು.

ಇದನ್ನೂ ಓದಿ: Chowkidar Review: ಅಪ್ಪನ ಅಗಾಧ ಪ್ರೀತಿಯ ಪ್ಲಸ್, ಮೈನಸ್ ತೋರಿಸುವ ‘ಚೌಕಿದಾರ್’

ಪೃಥ್ವಿರಾಜ್ ಪಾಟೀಲ್ ಅವರು ತಮ್ಮ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ಇನ್ನುಳಿದ ಕಲಾವಿದರಾದ ನಾಗಶ್ರೀ ಹೆಬ್ಬಾರ್, ಸಂಧ್ಯಾ ವಿನಾಯಕ್, ಪೂಜಾ, ಸ್ವರೂಪ್ ಅವರು ತಮ್ಮ ಪಾತ್ರಗಳಿಗೆ ನ್ಯಾಯ ಒದಗಿಸಿದ್ದಾರೆ. ಕಾಮಿಡಿ ಪಾತ್ರದಲ್ಲಿ ಗಣಪತಿ ಹೆಗಡೆ ವಡ್ಡಿನಗದ್ದೆ ಅವರು ಸಖತ್ ರಿಲೀಫ್ ನೀಡುತ್ತಾರೆ. ಸಂವತ್ಸರ ಅವರ ಸಂಗೀತದಲ್ಲಿ ಮೂಡಿಬಂದ ಹಾಡುಗಳು ಚಿತ್ರಕ್ಕೆ ಪ್ಲಸ್ ಆಗಿವೆ. ಹಿನ್ನೆಲೆ ಸಂಗೀತ ಕೂಡ ಚೆನ್ನಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 5:23 pm, Fri, 30 January 26

Source link

ಎಲ್ಲ ಶಾಲೆಗಳಲ್ಲಿ ಬಾಲಕಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್‌ ನೀಡುವುದು ಕಡ್ಡಾಯ; ಸುಪ್ರೀಂ ಕೋರ್ಟ್ ಆದೇಶ – Kannada News | Supreme Court mandates free sanitary pads for girls in All schools

ನವದೆಹಲಿ, ಜನವರಿ 30: ಖಾಸಗಿ ಮತ್ತು ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ ಮುಟ್ಟಿನ ಸಂದರ್ಭದಲ್ಲಿ ಜೈವಿಕವಾಗಿ ವಿಘಟನೀಯ (ಬಳಸಿ ಬಿಸಾಡುವ) ಸ್ಯಾನಿಟರಿ ಪ್ಯಾಡ್‌ಗಳನ್ನು ಉಚಿತವಾಗಿ ಒದಗಿಸಬೇಕೆಂದು ಸುಪ್ರೀಂ ಕೋರ್ಟ್ (Supreme Court) ಇಂದು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ. ಮುಟ್ಟಿನ ಆರೋಗ್ಯದ ಹಕ್ಕು ಸಂವಿಧಾನದಲ್ಲಿ ಪ್ರತಿಪಾದಿಸಲಾದ ಜೀವನದ ಮೂಲಭೂತ ಹಕ್ಕಿನ ಒಂದು ಭಾಗವಾಗಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಜೆ.ಬಿ ಪಾರ್ದಿವಾಲಾ ಮತ್ತು ಆರ್ ಮಹಾದೇವನ್ ಅವರ ನ್ಯಾಯಪೀಠವು ಎಲ್ಲಾ ಶಾಲೆಗಳಲ್ಲಿ ಹೆಣ್ಣು ಮತ್ತು ಗಂಡು ಮಕ್ಕಳಿಗೆ ಪ್ರತ್ಯೇಕ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಬೇಕೆಂದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ. ಸರ್ಕಾರಿ ಸ್ವಾಮ್ಯದ್ದಾಗಿರಲಿ ಅಥವಾ ಸರ್ಕಾರದ ನಿಯಂತ್ರಣದಲ್ಲಿರಲಿ ಎಲ್ಲ ಶಾಲೆಗಳೂ ಅಂಗವಿಕಲ ಸ್ನೇಹಿ ಶೌಚಾಲಯಗಳನ್ನು ಒದಗಿಸಬೇಕಾಗುತ್ತದೆ ಎಂದು ಕೋರ್ಟ್ ಹೇಳಿದೆ.

ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನ ಅವಹೇಳನ ಸರಿಯಲ್ಲ; ನಿವೃತ್ತ ನ್ಯಾಯಮೂರ್ತಿಗಳಿಂದ ಸಹಿ ಅಭಿಯಾನ

“ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಮುಟ್ಟಿನ ಆರೋಗ್ಯದ ಹಕ್ಕು ಬದುಕುವ ಹಕ್ಕಿನ ಭಾಗವಾಗಿದೆ” ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಒಂದುವೇಳೆ ಖಾಸಗಿ ಶಾಲೆಗಳು ಹೆಣ್ಣುಮಕ್ಕಳಿಗೆ ಸ್ಯಾನಿಟರಿ ಪ್ಯಾಡ್ ಒದಗಿಸದಿದ್ದರೆ ಅವುಗಳ ಮಾನ್ಯತೆಯನ್ನು ರದ್ದುಗೊಳಿಸಲಾಗುತ್ತದೆ ಎಂದು ಕೋರ್ಟ್ ಎಚ್ಚರಿಕೆ ನೀಡಿದೆ. ಒಂದುವೇಳೆ ಬಾಲಕಿಯರಿಗೆ ಶೌಚಾಲಯ ಮತ್ತು ಉಚಿತ ಸ್ಯಾನಿಟರಿ ಪ್ಯಾಡ್‌ಗಳನ್ನು ಒದಗಿಸಲು ವಿಫಲವಾದರೆ ಅದಕ್ಕೆ ಸರ್ಕಾರಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಬೇರೆ ಜಾತಿ, ಧರ್ಮದವನನ್ನು ಮದುವೆಯಾದರೆ ಮಗಳಿಗೆ ಅಪ್ಪನ ಆಸ್ತಿಯಲ್ಲಿ ಪಾಲಿಲ್ಲ; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

6ರಿಂದ 12ನೇ ತರಗತಿಯ ಹದಿಹರೆಯದ ಬಾಲಕಿಯರಿಗೆ ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಕೇಂದ್ರ ಸರ್ಕಾರದ ‘ಶಾಲಾ ಬಾಲಕಿಯರಿಗೆ ಮುಟ್ಟಿನ ನೈರ್ಮಲ್ಯ ನೀತಿ’ಯನ್ನು ಭಾರತಾದ್ಯಂತ ಜಾರಿಗೆ ತರುವಂತೆ ಕೋರಿ ಜಯಾ ಠಾಕೂರ್ ಅವರು 2024ರ ಡಿಸೆಂಬರ್ 10ರಂದು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯ ವೇಳೆ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ. ಆದರೆ, ಈ ಪ್ರಕರಣದ ತೀರ್ಪನ್ನು ಇನ್ನೂ ಕಾಯ್ದಿರಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 5:14 pm, Fri, 30 January 26

Source link

Viral: ಕ್ಯಾಬ್ ಡ್ರೈವರ್ ಆಗಿ ಬದುಕು ಕಟ್ಟಿಕೊಂಡ ವ್ಯಕ್ತಿಯ ದಿನದ ಸಂಪಾದನೆ ಕೇಳಿದ್ರೆ ನೀವು ಶಾಕ್ ಆಗ್ತೀರಾ – Kannada News | Bengaluru: An unemployed man from Bengaluru got a job as a cab driver.

ಬೆಂಗಳೂರು, ಜನವರಿ 30: ಉದ್ಯೋಗ (job) ಎಲ್ಲರಿಗೂ ಅತ್ಯವಶ್ಯಕ. ಆದರೆ ಈಗಿನ ಕಾಲದಲ್ಲಿ ಎಷ್ಟೇ ಓದಿಕೊಂಡಿದ್ದರೂ ಕೈ ತುಂಬಾ ಸಂಬಳ ಸಿಗುವ ಒಂದೊಳ್ಳೆ ಉದ್ಯೋಗ ಗಿಟ್ಟಿಸಿಕೊಳ್ಳುವುದು ಸುಲಭದ ಕೆಲಸ ಅಲ್ಲ. ತಾವು ಓದಿರುವುದಕ್ಕೆ ತಕ್ಕ ಉದ್ಯೋಗವಿಲ್ಲದೇ ಸಿಕ್ಕ ಕೆಲಸವನ್ನೇ ಅನಿವಾರ್ಯ ಕಾರಣಕ್ಕಾಗಿ ಮಾಡುವವರೇ ಹೆಚ್ಚು. ಕೆಲಸವಿಲ್ಲದೇ ಖಾಲಿ ಕುಳಿತು ಕೊಂಡಿದ್ದ ಈ ವ್ಯಕ್ತಿಯೊಬ್ಬರು ಇದೀಗ ಬೆಂಗಳೂರಿನಲ್ಲಿ (Bengaluru) ಕ್ಯಾಬ್  ಡ್ರೈವರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಈತನ ದಿನದ ಸಂಪಾದನೆ 4000 ರೂ ಅಂತೆ. ಸ್ವತಃ ಈತನೇ ತನ್ನ ತಿಂಗಳ ಗಳಿಕೆಯ ಬಗ್ಗೆ ರೆಡ್ಡಿಟ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ.

ಆರ್‌/ಬೆಂಗಳೂರು ಹೆಸರಿನ ರೆಡ್ಡಿಟ್‌ ಪೋಸ್ಟ್‌ನಲ್ಲಿ ದಿ ರಾಂಟ್ ಆಫ್ ಎ ರಿವರ್” ಎಂಬ ಶೀರ್ಷಿಕೆಯಲ್ಲಿ ತನ್ನ ಉದ್ಯೋಗದ ಅನುಭವವನ್ನು ಹಂಚಿಕೊಂಡಿದ್ದು, . ಈ ಪೋಸ್ಟ್‌ನಲ್ಲಿ, 1.5 ವರ್ಷಗಳ ಕಾಲ ನಿರುದ್ಯೋಗಿಯಾಗಿದ್ದೆ, ಬ್ಯುಸಿನೆಸ್‌ ಮಾಡಿ ನನ್ನ ಕೈಯನ್ನು ಸುಟ್ಟುಕೊಂಡೆ, ಸಾಲ ಹಾಗೂ ಕ್ರೆಡಿಟ್ ಕಾರ್ಡ್ ಸಾಲಗಳಿಗೆ ಸಿಲುಕಿದೆ. ಯಾವುದೇ ಪ್ರಯೋಜನವಾಗಲಿಲ್ಲ. ದಿನಕ್ಕೆ 1.5 ಸಾವಿರಕ್ಕೆ ಹಳದಿ ಬೋರ್ಡ್ ಕಾರನ್ನು ಬಾಡಿಗೆಗೆ ಪಡೆದು ಕಳೆದ ತಿಂಗಳು ಚಾಲನೆ ಮಾಡಲು ಪ್ರಾರಂಭಿಸಿದೆ ಎಂದು ಹೇಳಿದ್ದಾರೆ.

ವೈರಲ್ ಪೋಸ್ಟ್ ಇಲ್ಲಿದೆ

ಉಬರ್ ಹಾಗೂ ರ್ಯಾಪಿಡೊದಂತಹ ರೈಡ್-ಹೇಲಿಂಗ್ ಪ್ಲಾಟ್‌ಫಾರ್ಮ್‌ಗಳಲ್ಲಿ ಕೆಲಸ ಮಾಡುತ್ತೇನೆ. ಬೆಂಗಳೂರಿನಲ್ಲಿ ದಿನಕ್ಕೆ ಸುಮಾರು 16 ಗಂಟೆಗಳ ಕಾಲ ಕಾರು ಚಲಾಯಿಸುತ್ತೇನೆ. ನನ್ನ ದೈನಂದಿನ ಗಳಿಕೆ ಸುಮಾರು 4,000 ರೂ. ಅದರಲ್ಲಿ 1.5 ಸಾವಿರ ಕಾರು ಬಾಡಿಗೆಗೆ ಹೋಗುತ್ತದೆ, 1.2 ಸಾವಿರ ಸಿಎನ್‌ಜಿಗೆ ಮತ್ತು 200 ಆಹಾರಕ್ಕೆ ಖರ್ಚಾಗುತ್ತದೆ. ನನಗೆ ಉಳಿಯುವುದು ಒಂದು ಸಾವಿರ ರೂ ಮಾತ್ರ. ವಿಶೇಷವಾಗಿ ನಗರದಲ್ಲಿನ ಸಂಚಾರದಟ್ಟಣೆಯೊಂದಿಗೆ ಈ ಕೆಲಸ ನಿಜವಾಗಿಯೂ ಕಷ್ಟಕರವಾಗಿದೆ ಎಂದು ವಿವರಿಸಿದ್ದಾರೆ.

ಹಣಕಾಸಿನ ಹೊರತಾಗಿ, ಕಾಲು, ಮೊಣಕಾಲು ನೋವು ಹಾಗೂ ಸೀಮಿತ ನಿದ್ರೆ ಸೇರಿದಂತೆ ಕೆಲಸದ ದೈಹಿಕ ಒತ್ತಡ ಅನುಭವಿಸಬೇಕು. ದಿನಕ್ಕೆ ಸುಮಾರು 6 ಗಂಟೆಗಳ ಕಾಲ ನಿದ್ರೆ ಅಷ್ಟೇ. ಕೆಲಸದ ಹೊರತಾಗಿ ಬೇರೆ ಯಾವುದಕ್ಕೂ ಸಮಯವಿಲ್ಲ. ಬೆಂಗಳೂರಿನಲ್ಲಿ ಲಕ್ಷಾಂತರ ಜನರು ಈ ಕ್ಯಾಬ್ ಚಾಲನೆಯನ್ನು ಹೇಗೆ ಮಾಡುತ್ತಿದ್ದಾರೆ ಎನ್ನುವುದೇ ನನಗೆ ಆಶ್ಚರ್ಯವಾಗುತ್ತದೆ. ಅಪ್ಲಿಕೇಶನ್‌ಗಳು ಸ್ವತಃ ರಾಕ್ಷಸದಂತೆ ಆಗಿದೆ. ಲಕ್ಷಾಂತರ ಜನರು ದಿನನಿತ್ಯದ ಜೀವನವನ್ನು ನಡೆಸಲು ಈ ರೀತಿ ಕೆಲಸ ಮಾಡಲು ಸಿದ್ಧರಾಗಿದ್ದಾರೆ, ಪ್ರತಿದಿನ ಕಠಿಣ ಪರಿಶ್ರಮದಿಂದ ಬದುಕುತ್ತಾರೆ, ಏನನ್ನೂ ಉಳಿಸಲು ಸಾಧ್ಯವಾಗುತ್ತಿಲ್ಲ, ಪ್ರತಿದಿನ ತಮ್ಮ ಆರೋಗ್ಯ ಮತ್ತು ಜೀವವನ್ನು ಪಣಕ್ಕಿಡುತ್ತಾರೆ ಎಂದು ವಾಸ್ತವ ಸ್ಥಿತಿಯನ್ನು ಎಂದು ಹೇಳಿದ್ದಾರೆ.

ಫೋನ್‌ನ ನಿರಂತರ ಮೇಲ್ವಿಚಾರಣೆ, ಸಂಚಾರ ಒತ್ತಡ, ಸವಾರಿ ರದ್ದತಿಯ ಭಯ ಮತ್ತು ದೈನಂದಿನ ವಾಹನ ನಿರ್ವಹಣೆ ಒತ್ತಡವನ್ನು ಹೆಚ್ಚಿಸುತ್ತದೆ
ಈ ಕಠಿಣ ಪರಿಶ್ರಮ ನನ್ನನ್ನು ಎಲ್ಲಿಗೂ ಕರೆದೊಯ್ಯುವುದಿಲ್ಲ ಆದರೆ ಕೋಟ್ಯಂತರ ಭಾರತೀಯರಿಗೆ ಉದ್ಯೋಗ ನೀಡಿದೆ. ಅಗ್ಗದ ದುಡಿಮೆಯಿಂದಾಗಿ ಇತರರು ಈ ಸವಲತ್ತನ್ನು ಆನಂದಿಸಬಹುದು ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಇಂಜಿನಿಯರ್, ಡಾಕ್ಟರನ್ನೆಲ್ಲ ನೂಕಾಚೆ ದೂರ! ಮ್ಯಾಗಿ ಮಾಡಿ ದಿನಕ್ಕೆ 21,000 ರೂ. ಗಳಿಸಿದ ಯುವಕ

ಈ ಪೋಸ್ಟ್ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ, ನಿಮ್ಮ ಕಥೆಯನ್ನು ಹಂಚಿಕೊಂಡಿದ್ದಕ್ಕಾಗಿ ಧನ್ಯವಾದಗಳು. ಇದು ತುಂಬಾ ಕಠಿಣ ಎಂದು ನನಗೆ ತಿಳಿದಿರಲಿಲ್ಲ ಎಂದು ಹೇಳಿದ್ದಾರೆ. ಮತ್ತೊಬ್ಬರು, ನಿಮ್ಮ ದುಡಿಮೆಗೆ ತಕ್ಕ ಪ್ರತಿಫಲ ಸಿಗುತ್ತದೆ, ಕಾಯುವ ತಾಳ್ಮೆ ಇರಲಿ ಎಂದಿದ್ದಾರೆ. ಇನ್ನೊಬ್ಬರು, ನಿಮ್ಮ ಕಥೆ ಕೇಳಿದ್ರೆ ನಿಜಕ್ಕೂ ಬೇಸರವಾಗುತ್ತದೆ. ಆದರೆ ಕೈಯಲ್ಲೊಂದು ಉದ್ಯೋಗ ಇದೆಯೆಂದು ಖುಷಿ ಪಡಿ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 5:07 pm, Fri, 30 January 26

Source link

ಹೊಸ ಆಧಾರ್ ಆ್ಯಪ್ ಬಿಡುಗಡೆ; ಹೆಚ್ಚುವರಿ ಮಾಹಿತಿ ಹಂಚಿಕೆ ಇಲ್ಲದೆ ವಯಸ್ಸು ದೃಢೀಕರಣ ಸಾಧ್ಯ – Kannada News | New Aadhaar App launched by UIDAI

ಯುಐಡಿಎಐ ಸಂಸ್ಥೆ ಹೊಸ ಆಧಾರ್ ಆ್ಯಪ್ (Aadhaar) ಬಿಡುಗಡೆ ಮಾಡಿದೆ. ಡಿಜಿಟಲ್ ವೈಯಕ್ತಿಕ ಡಾಟಾ ರಕ್ಷಣಾ ಕಾಯ್ದೆ ಅಡಿ ಯಾವುದೇ ಹೆಚ್ಚುವರಿ ಡಾಟಾ ಹಂಚಿಕೆ ಇಲ್ಲದೇ ಏಜ್ ವೆರಿಫಿಕೇಶನ್ ಮಾಡಲು ಈ ಹೊಸ ಆಧಾರ್ ಆ್ಯಪ್ ಸಹಾಯಕವಾಗಲಿದೆ. ಮೊನ್ನೆ ಬುಧವಾರ (ಜ. 28) ಈ ಆ್ಯಪ್ ಅನಾವರಣಗೊಂಡಿದೆ.

ಉತ್ತಮ ಆಡಳಿತಕ್ಕೆ ಆಧಾರ್ ದೃಢೀಕರಣ (ಸಮಾಜ ಕಲ್ಯಾಣ, ನಾವೀನ್ಯತೆ, ಜ್ಞಾನ) ಕಾಯ್ದೆಯ ನಿಯಮಗಳಿಗೆ (ಸ್ವಿಕ್ ರೂಲ್ಸ್) ತಿದ್ದುಪಡಿ ತರಲಾಗಿದೆ. ಈ ಕಾನೂನು ಅಡಿಯಲ್ಲಿ ಸುರಕ್ಷಿತ ರೀತಿಯಲ್ಲಿ ಆಧಾರ್ ಅಥೆಂಟಿಕೇಶನ್ ಬಳಸಿ ಸೇವೆ ಒದಗಿಲು ಖಾಸಗಿ ಸಂಸ್ಥೆಗಳಿಗೆ ಅನುವು ಮಾಡಿಕೊಡಲಾಗುತ್ತದೆ. ಈ ಮಾಹಿತಿಯನ್ನು ಹೊಸ ಆಧಾರ್ ಆ್ಯಪ್ ಬಿಡುಗಡೆ ಸಂದರ್ಭದಲ್ಲಿ ಕೇಂದ್ರ ಎಲೆಕ್ಟ್ರಾನಿಕ್ಸ್ ಸಚಿವಾಲಯದ ಕಾರ್ಯದರ್ಶಿ ಎಸ್ ಕೃಷ್ಣನ್ ತಿಳಿಸಿದರು.

ಇದನ್ನೂ ಓದಿ: ಈ ಡೇಂಜರಸ್ ಆ್ಯಪ್​ಗಳು ನಿಮ್ಮ ವೈಯಕ್ತಿಕ ಮಾಹಿತಿ ಕದಿಯಬಹುದು; ನಿಮ್ಮ ಫೋನ್​ನಲ್ಲಿ ಇವು ಇವೆಯಾ ಪರಿಶೀಲಿಸಿ…

ಆಧಾರ್ ಅನ್ನು ವಯಸ್ಸು ದೃಢೀಕರಣಕ್ಕೆ ಬಳಸಲಾಗುತ್ತದೆ. ಈ ವೇಳೆ, ಆಧಾರ್​ನ ಇತರ ಮಾಹಿತಿಯೂ ರವಾನೆಯಾಗುವ ಸಾಧ್ಯತೆ ಇರುತ್ತದೆ. ಹೊಸ ಆಧಾರ್ ಆ್ಯಪ್​ನಲ್ಲಿ ವಯಸ್ಸಿನ ದೃಢೀಕರಣ ಮಾತ್ರವೇ ಮಾಡಬಹುದು. ಸೋಷಿಯಲ್ ಮೀಡಿಯಾ, ಗೇಮ್ಸ್, ಇಕಾಮರ್ಸ್ ಇತ್ಯಾದಿ ಆನ್ಲೈನ್ ಪ್ಲಾಟ್​ಫಾರ್ಮ್​ಗಳು ತಮ್ಮ ಬಳಕೆದಾರರ ವಯಸ್ಸನ್ನು ದೃಢೀಕರಿಸಲು ಆಧಾರ್​ನ ಏಜ್ ಗೇಟಿಂಗ್ ಫೀಚರ್ ಬಳಸಬಹುದು.

ಏಜ್ ವೆರಿಫಿಕೇಶನ್ ಸಾಧ್ಯವಾದರೆ ಆನ್​ಲೈನ್ ಪ್ಲಾಟ್​ಫಾರ್ಮ್​ಗಳು ಇನ್ನಷ್ಟು ಉಪಯುಕ್ತವಾಗಿ ಸರ್ವಿಸ್ ನೀಡಬಹುದು. ಬಳಕೆದಾರರು ಮಕ್ಕಳಾಗಿದ್ದರೆ ಅವರ ವಯಸ್ಸಿಗೆ ಸೂಕ್ತವಲ್ಲದ ಕಂಟೆಂಟ್ ಅಥವಾ ಪ್ರಾಡಕ್ಟ್ ಅನ್ನು ಪ್ರದರ್ಶಿಸದಿರಬಹುದು.

ಇದನ್ನೂ ಓದಿ: ಫ್ರಾನ್ಸ್ ಕೊಡಲ್ಲವೆಂದಾಗ ಹುಟ್ಟುಕೊಂಡ ಕಿಚ್ಚು; ಡಿಆರ್​ಡಿಒ ವಿಜ್ಞಾನಿಗಳು ಗ್ಯಾನ್ ಚಿಪ್ ಟೆಕ್ನಾಲಜಿ ರಹಸ್ಯ ಭೇದಿಸಿದ ಕಥೆ

ಹೊಸ ಆಧಾರ್ ಆ್ಯಪ್ ಏಜ್ ಗೇಟಿಂಗ್​ಗೆ ಮಾತ್ರವೇ ಬಳಕೆ ಆಗುವಂಥದ್ದಲ್ಲ. ವ್ಯಕ್ತಿಯ ಗುರುತಿನ ಕಾರ್ಡ್ ರೀತಿ ಡಿಜಿಟಲ್ ಅಗಿ ಬಳಸಬಹುದು. ಹೋಟೆಲ್, ಚಿತ್ರಮಂದಿರ ಇತ್ಯಾದಿ ಸ್ಥಳಗಳಲ್ಲಿ ವ್ಯಕ್ತಿಯ ಗುರುತನ್ನು ಪರಿಶೀಲಿಸಲು ಅವರ ಈ ಆಧಾರ್ ಆ್ಯಪ್ ಅನ್ನು ಪರಿಶೀಲಿಸಬಹುದು. ಭೌತಿಕವಾಗಿ ಆಧಾರ್ ದಾಖಲೆ ಕೇಳುವ ಯಾವುದೇ ಸಂಸ್ಥೆಗೂ ಡಿಜಿಟಲ್ ಆಗಿ ಆಧಾರ್ ದೃಢೀಕರಣ ಕೊಡಲು ಈ ಹೊಸ ಆ್ಯಪ್ ನೆರವಾಗುತ್ತದೆ. ಆಧಾರ್ ಕಾಯ್ದೆ ಪ್ರಕಾರ ಖಾಸಗಿ ಸಂಸ್ಥೆಗಳು ಯಾವುದೇ ವ್ಯಕ್ತಿಯ ಆಧಾರ್ ದತ್ತಾಂಶವನ್ನು ಸಂಗ್ರಹಿಸುವಂತಿಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Exit mobile version