ಮೆಜೆಸ್ಟಿಕ್, ಮಲ್ಲೇಶ್ವರಂ ಸೇರಿದಂತೆ ನಗರದ ಹಲವೆಡೆ ಧಾರಾಕಾರ ಮಳೆ; ವಾಹನ ಸವಾರರು, ಪಾದಚಾರಿಗಳು ಹೈರಾಣು – Kannada News | Bengaluru Weekend Rain: Sudden Downpour Paralyses City, Causes Major Traffic Snarls
ಬೆಂಗಳೂರು, ಜು.18: ರಾಜಧಾನಿ ಬೆಂಗಳೂರಿನಲ್ಲಿ ವೀಕೆಂಡ್ ಮೂಡ್ನಲ್ಲಿದ್ದ ಜನರಿಗೆ ವರುಣದೇವ ತಂಪಾದ ಶಾಕ್ ನೀಡಿದ್ದಾನೆ. ಇಂದು (ಜುಲೈ 18) ಮಧ್ಯಾಹ್ನ ಸುಮಾರು 3:30ರ ನಂತರ ಬೆಂಗಳೂರು ನಗರದ ಕೇಂದ್ರ ಭಾಗ ಹಾಗೂ ಸುತ್ತಮುತ್ತಲಿನ ಹಲವು ಪ್ರಮುಖ ಬಡಾವಣೆಗಳಲ್ಲಿ ಇದ್ದಕ್ಕಿದ್ದಂತೆ ಧಾರಾಕಾರ ಮಳೆ ಆರಂಭವಾಗಿದ್ದು, ಸಾರ್ವಜನಿಕರು ಮತ್ತು ವಾಹನ ಸವಾರರು ತೀವ್ರ ಪರದಾಡುವಂತಾಗಿದೆ. ನಗರದ ಹೃದಯಭಾಗವಾದ ಮೆಜೆಸ್ಟಿಕ್ ಸೇರಿದಂತೆ ಹಲವು ಕಡೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ವಿಧಾನಸೌಧ ಸುತ್ತಮುತ್ತ, ವಸಂತನಗರ, ಶೇಷಾದ್ರಿಪುರಂ, ಟೌನ್ಹಾಲ್, ಕೆ.ಆರ್. ಮಾರುಕಟ್ಟೆ (ಮಾರ್ಕೆಟ್) ಮತ್ತು ಚಾಮರಾಜಪೇಟೆ….