Headlines

ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಹಾವುಗಳು, ಮೊಸಳೆಗಳ ಗಸ್ತು

ಕೋಲ್ಕತ್ತಾ, ಏಪ್ರಿಲ್ 05: ಭಾರತ-ಬಾಂಗ್ಲಾ ಗಡಿಯಲ್ಲಿ ಬಿಎಸ್​ಎಫ್ ಜವಾನರಲ್ಲ ಇನ್ನುಮುಂದೆ ಹಾವು(Snake)ಗಳು, ಮೊಸಳೆಗಳು ಗಸ್ತು ತಿರುಗಲಿವೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಗಡಿಯಲ್ಲಿ ಸಾಕಷ್ಟು ಕಡೆ ಬೇಲಿಗಳೇ ಇಲ್ಲದ ಕಾರಣ ಒಳನುಸುಳುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಇದನ್ನು ತಡೆಯಲು ಗಡಿಯಲ್ಲಿ ಹಾವುಗಳು ಮತ್ತು ಮೊಸಳಗೆಗಳನ್ನು ನಿಯೋಜಿಸಲು ಬಿಎಸ್​ಎಫ್​ ಮುಂದಾಗಿದೆ. ಗಡಿಯಲ್ಲಿ ಸುಮಾರು 175 ಕಿ.ಮೀ ಬೇಲಿ ಇಲ್ಲದ ಪ್ರದೇಶದುದ್ದಕ್ಕೂ ಸರೀಸೃಪಗಳನ್ನು ನಿಯೋಜಿಸಲಾಗುತ್ತದೆ.  4,096 ಕಿ.ಮೀ.ಗಳಲ್ಲಿ, 850 ಕಿ.ಮೀ. ಬೇಲಿಯಿಲ್ಲದೇ ಉಳಿದಿದೆ.ಆದರೆ ಸರ್ಕಾರದಿಂದ ಯಾವುದೇ ಅಂತಿಮ ನಿರ್ಧಾರವಾಗಿಲ್ಲ. ಉನ್ನತ ಮಟ್ಟದ ಸಭೆಗಳ…

Read More

ಬೆಂಕಿ ಬಿರುಗಾಳಿ ಬ್ಯಾಟಿಂಗ್​ಗೆ ಹಳೆಯ ದಾಖಲೆಯೇ ಧ್ವಂಸ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಜೋಡಿಯಾದ ಯಶಸ್ವಿ ಜೈಸ್ವಾಲ್ ಮತ್ತು ವೈಭವ್ ಸೂರ್ಯವಂಶಿ ಹೊಸ ಇತಿಹಾಸ ಬರೆದಿದ್ದಾರೆ. ಏಪ್ರಿಲ್ 4ರಂದು ಗುಜರಾತ್ ಟೈಟಾನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಇವರಿಬ್ಬರು ಭಾರತೀಯ ಕ್ರಿಕೆಟ್‌ನ ದಿಗ್ಗಜ ಜೋಡಿ ವೀರೇಂದ್ರ ಸೆಹ್ವಾಗ್ ಮತ್ತು ಗೌತಮ್ ಗಂಭೀರ್ ಅವರ ಹೆಸರಿನಲ್ಲಿದ್ದ ಹಳೆಯ ದಾಖಲೆಯೊಂದನ್ನು ಅಳಿಸಿ ಹಾಕಿದ್ದಾರೆ. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಹಾಗೂ ವೈಭವ್ ಸೂರ್ಯವಂಶಿ ಮೊದಲ ವಿಕೆಟ್​ಗೆ 70 ರನ್​ಗಳ ಜೊತೆಯಾಟವಾಡಿದ್ದರು….

Read More

ಬೆಂಗಳೂರು-ದೆಹಲಿ ಇಂಡಿಗೋ ಫ್ಲೈಟ್‌ನಲ್ಲಿ ಹುಸಿ ಬಾಂಬ್ ಬೆದರಿಕೆ!

ಬೆಂಗಳೂರು, ಏಪ್ರಿಲ್ 05: ಬೆಂಗಳೂರಿನ ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಇಂಡಿಗೋ ವಿಮಾನದಲ್ಲಿ ಹುಸಿ ಬಾಂಬ್ ಬೆದರಿಕೆ ಪ್ರಕರಣ ಆತಂಕ ಮೂಡಿಸಿತ್ತು. ದೆಹಲಿಗೆ ತೆರಳುತ್ತಿದ್ದ ವಿಮಾನದ ಶೌಚಾಲಯದಲ್ಲಿ ಬಾಂಬ್ ಇದೆ ಎಂದು ಬರೆದ ಟಿಷ್ಯೂ ಪೇಪರ್ ಪತ್ತೆಯಾಗುತ್ತಿದ್ದಂತೆ ತಕ್ಷಣ ಎಚ್ಚರಿಕೆ ಕ್ರಮ ಕೈಗೊಳ್ಳಲಾಯಿತು.ವಿಮಾನದಲ್ಲಿದ್ದ 183 ಪ್ರಯಾಣಿಕರನ್ನು ಕೆಳಗಡೆ ಇಳಿಸಿ ತಪಾಸಣೆ ನಡೆಸಿದ ನಂತರ ಹುಸಿ ಬೆದರಿಕೆಯೆಂದು ಗೊತ್ತಾಗಿ ಸಿಬ್ಬಂದಿ ನಿಟ್ಟುಸಿರು ಬಿಟ್ಟಿದ್ದಾರೆ. ಹುಸಿ ಬೆದರಿಕೆ ಹಾಕಿದವರಿಗಾಗಿ ಶೋಧ ಪೈಲಟ್ ಏರ್ ಟ್ರಾಫಿಕ್…

Read More

Indian Navy Agniveer Musician 2026: ಭಾರತೀಯ ನೌಕಾಪಡೆಯಲ್ಲಿ ನೇಮಕಾತಿ; ಸಂಗೀತ ಆಸಕ್ತ ಯುವಜನರಿಗೆ ಸೇನೆ ಸೇರಲು ಸುವರ್ಣಾವಕಾಶ

ದೇಶದ ರಕ್ಷಣಾ ಪಡೆಯಲ್ಲಿ ಸೇವೆ ಸಲ್ಲಿಸುವುದರ ಜೊತೆಗೆ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವ ಯುವಜನರಿಗೆ ಭಾರತೀಯ ನೌಕಾಪಡೆಯು ಅದ್ಭುತ ಅವಕಾಶವೊಂದನ್ನು ಕಲ್ಪಿಸಿದೆ. 2026ನೇ ಸಾಲಿನ ಅಗ್ನಿವೀರ್ MR (ಸಂಗೀತಗಾರ) ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದ್ದು, ಇದು ವೃತ್ತಿಜೀವನದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಲು ಬಯಸುವವರಿಗೆ ಉತ್ತಮ ವೇದಿಕೆಯಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ನೇಮಕಾತಿ ಪ್ರಕ್ರಿಯೆಯ ಮೂಲಕ ದೇಶದ ಪ್ರತಿಷ್ಠಿತ ನೌಕಾಪಡೆಯ ಭಾಗವಾಗಬಹುದಾಗಿದೆ. ಈ ನೇಮಕಾತಿಯ ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಏಪ್ರಿಲ್ 11,…

Read More

KSRTC, ಖಾಸಗಿ ಬಸ್​​ ನಡುವೆ ಭೀಕರ ಅಪಘಾತ: ಇಬ್ಬರ ದಾರುಣ ಸಾವು; 35 ಮಂದಿಗೆ ಗಾಯ

ತುಮಕೂರು, ಏಪ್ರಿಲ್​​ 05: ಶಿರಾ ತಾಲ್ಲೂಕಿನ ಮಿನಿ ವಿಧಾನಸೌಧ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ಅಪಘಾತ ನಡೆದಿದ್ದು, ಖಾಸಗಿ ಸ್ಲೀಪರ್​​ ಬಸ್​​ಗೆ KSRTC ಬಸ್​​ ಹಿಂದಿನಿಂದ ಗುದ್ದಿದೆ. ಅಪಘಾತದ ತೀವ್ರತೆಗೆ ಖಾಸಗಿ ಬಸ್​​ನಲ್ಲಿದ್ದ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದು, 35 ಮಂದಿಗೆ ಗಂಭೀರ ಗಾಯಗಳಾಗಿವೆ. ಮೃತರನ್ನು ಹಾವೇರಿ ಮೂಲದ ಪ್ರವೀಣ್ ಕೃಷ್ಣಪ್ಪ (28) ಮತ್ತು ಗದಗ ಮೂಲದ ಸಂಗೀತಾ (16) ಎಂದು ಗುರುತಿಸಲಾಗಿದೆ. ಇಂದು ಮುಂಜಾನೆ 3 ಗಂಟೆಯ ಸುಮಾರಿಗೆ ಅಪಘಾತ ನಡೆದಿದೆ. ಅಪಘಾತವಾಗಿರುವ ಎರಡೂ ಬಸ್​​ಗಳು…

Read More

ಜಿಪಿಎಸ್ ಇಲ್ಲದರೂ ಹಡಗು, ವಿಮಾನ ಪತ್ತೆ: ಬೆಂಗಳೂರಿನ ಸ್ಟಾರ್ಟ್‌ಅಪ್ ಹೊಸ ಪ್ರಯತ್ನ!

ಬೆಂಗಳೂರು, ಏಪ್ರಿಲ್ 05: ಪಶ್ಚಿಮ ಏಷ್ಯಾ ಸಂಕಷ್ಟದ ಹಿನ್ನೆಲೆ ಕಳ್ಳ ಸಾಗಣೆ, ಅಕ್ರಮ ಮೀನುಗಾರಿಕೆ ಹಾಗೂ ‘ಡಾರ್ಕ್ ಶಿಪ್ಪಿಂಗ್’ ಬಗ್ಗೆ ಆತಂಕ ಹೆಚ್ಚುತ್ತಿರುವ ನಡುವೆಯೇ, ಬೆಂಗಳೂರಿನ (Bengaluru) ಸ್ಟಾರ್ಟ್‌ಅಪ್ ಕ್ಸೋವಿಯನ್ ಏರೋಸ್ಪೇಸ್ ಜಿಪಿಎಸ್ ಆಫ್ ಇದ್ದರೂ ಹಡಗು ಮತ್ತು ವಿಮಾನಗಳನ್ನು ಪತ್ತೆಹಚ್ಚುವ ಹೊಸ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದೆ. ಕೃತಕ ಬುದ್ಧಿಮತ್ತೆ (AI) ಆಧಾರಿತ ರೇಡಿಯೋ ಫ್ರೀಕ್ವೆನ್ಸಿ ಸಾಧನವು ಹಡಗುಗಳು, ವಿಮಾನಗಳು, ರಕ್ಷಣಾ ಕ್ಷೇತ್ರ ಹಾಗೂ ಕೈಗಾರಿಕಾ ಬಳಕೆಗೆ ಉಪಯುಕ್ತವಾಗಿದೆ. ವಾಣಿಜ್ಯ ಶಿಪ್ಪಿಂಗ್ ಕಂಪನಿಗಳೊಂದಿಗೆ ಪೈಲಟ್ ಯೋಜನೆಗಳು ನಡೆಯುತ್ತಿದ್ದು, ಭಾರತೀಯ…

Read More

ದಾವಣಗೆರೆ ಬೈ ಎಲೆಕ್ಷನ್​​: ಅಸಮಾಧಾನದ ಆರೋಪಕ್ಕೆ ಸಚಿವ ಜಮೀರ್​​ ಫಸ್ಟ್​​ ರಿಯಾಕ್ಷನ್​​

ಹುಬ್ಬಳ್ಳಿ, ಏಪ್ರಿಲ್​​ 05: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಅಖಾಡಕ್ಕೆ ಸಚಿವ ಜಮೀರ್ ಅಹ್ಮದ್ ಖಾನ್ ಕೊನೆಗೂ ಅಧಿಕೃತವಾಗಿ ಎಂಟ್ರಿ ನೀಡುತ್ತಿದ್ದಾರೆ. ಈ ನಡುವೆ ಹುಬ್ಬಳ್ಳಿಯಲ್ಲಿ ಟಿವಿ9ಗೆ ನೀಡಿದ ವಿಶೇಷ ಸಂದರ್ಶನದಲ್ಲಿ, ತಾವು ಚುನಾವಣಾ ಪ್ರಚಾರದಿಂದ ದೂರ ಉಳಿದಿದ್ದೆಂಬ ಆರೋಪ ಹಾಗೂ ಟಿಕೆಟ್ ವಿಚಾರದಲ್ಲಿನ ಅಸಮಾಧಾನದ ಕುರಿತ ಗೊಂದಲಗಳಿಗೆ ಅವತು ಸ್ಪಷ್ಟನೆ ನೀಡಿದ್ದಾರೆ. ದಾವಣಗೆರೆ ದಕ್ಷಿಣ ಟಿಕೆಟ್‌ಗಾಗಿ ತಾವು ಯಾವುದೇ ಲಾಬಿ ನಡೆಸಿಲ್ಲ. 2023ರ ವಿಧಾನಸಭಾ ಚುನಾವಣೆ ವೇಳೆ, ಶಾಮನೂರು ಶಿವಶಂಕರಪ್ಪನವರು ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಿ,…

Read More

Video: ಪಿಸ್ತೂಲ್ ಹಿಡಿದು ಹೋದ ವ್ಯಕ್ತಿ, ಗಂಟೆಗಳಿಂದ ಆಗಿದ್ದ ಟ್ರಾಫಿಕ್ ಜಾಮ್ ನಿಮಿಷಗಳಲ್ಲಿ ಕ್ಲಿಯರ್

ಲಕ್ನೋ, ಏಪ್ರಿಲ್ 05: ಟ್ರಾಫಿಕ್ ಜಾಮ್ ಕ್ಲಿಯರ್ ಮಾಡಲು ವ್ಯಕ್ತಿಯೊಬ್ಬ ಪಿಸ್ತೂಲ್ ಹಿಡಿದು ಹೋದ ಘಟನೆ ಲಕ್ನೋದಲ್ಲಿ ನಡೆದಿದೆ. ಗಂಟೆಗಳಿಂದ ಇದ್ದ ಸಂಚಾರ ದಟ್ಟಣೆ ನಿಮಿಷಗಳಲ್ಲೇ ಕಡಿಮೆಯಾಗಿತ್ತು. ಇದೀಗ ವಿಡಿಯೋ ವೈರಲ್ ಆಗಿದೆ. ಸಹದತ್ ಗಂಜ್ ಪೊಲೀಸ್ ಠಾಣೆ ಪ್ರದೇಶದ ರಾಜಬ್ ಗಂಜ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ವರದಿಗಳ ಪ್ರಕಾರ, ಆ ವ್ಯಕ್ತಿ ಪಿಸ್ತೂಲ್ ಹಿಡಿದು ರಸ್ತೆಯಲ್ಲಿ ನಡೆಯುತ್ತಿರುವುದು ಪ್ರಯಾಣಿಕರಲ್ಲಿ ಭೀತಿ ಮೂಡಿಸಿತ್ತು. ಟ್ರಾಫಿಕ್ ತೆರವುಗೊಳಿಸಲು ಮತ್ತು ತನ್ನ ವಾಹನವನ್ನು ಮುಂದೆ ಸಾಗಿಸಲು ಪಿಸ್ತೂಲ್ ಬಳಸಿದ್ದಾರೆ….

Read More

ಟೆಸ್ಟ್ ಕ್ರಿಕೆಟ್​ಗೆ ಹೊಸ ಕಾಯಕಲ್ಪ: ಬಿಸಿಸಿಐ ಭರ್ಜರಿ ಪ್ಲ್ಯಾನ್

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಈಗ ಟೆಸ್ಟ್ ಮತ್ತು ರೆಡ್ ಬಾಲ್ (ಕೆಂಪು ಚೆಂಡು) ಕ್ರಿಕೆಟ್‌ಗೆ ಹೊಸ ಚೈತನ್ಯ ನೀಡಲು ಸಜ್ಜಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮುಂಬರುವ ದಿನಗಳಲ್ಲಿ ಯುವ ಆಟಗಾರರನ್ನು ಟೆಸ್ಟ್ ಕ್ರಿಕೆಟ್‌ಗೆ ಸಿದ್ಧಪಡಿಸಲು ಬಿಸಿಸಿಐ ಹಲವಾರು ಕ್ರಾಂತಿಕಾರಿ ಕ್ರಮಗಳನ್ನು ಕೈಗೊಳ್ಳಲಿದೆ. ಅದರ ಸಂಪೂರ್ಣ ಜವಾಬ್ದಾರಿಯನ್ನು ಸೆಂಟರ್ ಆಫ್ ಎಕ್ಸಲೆನ್ಸ್ (CoE) ಮುಖ್ಯಸ್ಥರಾದ ವಿವಿಎಸ್ ಲಕ್ಷ್ಮಣ್ ಅವರಿಗೆ ನೀಡಲಾಗುತ್ತಿದೆ. ಟೆಸ್ಟ್ ಕ್ರಿಕೆಟ್​ನ ಸ್ಪೆಷಲಿಸ್ಟ್ ಎಂದೇ ಖ್ಯಾತರಾಗಿದ್ದ ವಿವಿಎಸ್​ ಲಕ್ಷ್ಮಣ್ ಅವರ ನೇತೃತ್ವದಲ್ಲಿ ಬಿಸಿಸಿಐ ಶೀಘ್ರದಲ್ಲೇ…

Read More

Weekly Horoscope: ಈ ವಾರ ಈ ರಾಶಿಗೆ ಆದಾಯದಲ್ಲಿ ಏರಿಕೆ ಮತ್ತು ಅದೃಷ್ಟ ಕೂಡಿಬರಲಿದೆ

ಖ್ಯಾತ ಜ್ಯೋತಿಷಿ ಮತ್ತು ವಾಸ್ತುಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಏಪ್ರಿಲ್ 6 ರಿಂದ ಏಪ್ರಿಲ್ 12 ರವರೆಗಿನ ವಾರಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಈ ವಾರದಲ್ಲಿ ಗ್ರಹಗಳ ಸ್ಥಿತಿ, ತಿಥಿಗಳ ಮಹತ್ವ, ಮತ್ತು ದ್ವಾದಶ ರಾಶಿಗಳ ಮೇಲೆ ಅವುಗಳ ಪ್ರಭಾವದ ಕುರಿತು ವಿವರವಾದ ಮಾಹಿತಿಯನ್ನು ಒದಗಿಸಿದ್ದಾರೆ. ಪರಾಭಾವನಾಂ ಸಮವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಮತ್ತು ಕೃಷ್ಣ ಪಕ್ಷದ ಪಂಚಾಂಗವು ಈ ವಾರದ ವಿಶೇಷವಾಗಿದೆ. ವಾರದ ಗ್ರಹಗತಿಗಳನ್ನು ಗಮನಿಸಿದರೆ, ಗುರು ಗ್ರಹವು ಮಿಥುನ ರಾಶಿಯಲ್ಲಿ, ಕೇತು ಗ್ರಹವು ಸಿಂಹ…

Read More