ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಹಾವುಗಳು, ಮೊಸಳೆಗಳ ಗಸ್ತು

ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಹಾವುಗಳು, ಮೊಸಳೆಗಳ ಗಸ್ತು

ಕೋಲ್ಕತ್ತಾ, ಏಪ್ರಿಲ್ 05: ಭಾರತ-ಬಾಂಗ್ಲಾ ಗಡಿಯಲ್ಲಿ ಬಿಎಸ್​ಎಫ್ ಜವಾನರಲ್ಲ ಇನ್ನುಮುಂದೆ ಹಾವು(Snake)ಗಳು, ಮೊಸಳೆಗಳು ಗಸ್ತು ತಿರುಗಲಿವೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಗಡಿಯಲ್ಲಿ ಸಾಕಷ್ಟು ಕಡೆ ಬೇಲಿಗಳೇ ಇಲ್ಲದ ಕಾರಣ ಒಳನುಸುಳುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಇದನ್ನು ತಡೆಯಲು ಗಡಿಯಲ್ಲಿ ಹಾವುಗಳು ಮತ್ತು ಮೊಸಳಗೆಗಳನ್ನು ನಿಯೋಜಿಸಲು ಬಿಎಸ್​ಎಫ್​ ಮುಂದಾಗಿದೆ. ಗಡಿಯಲ್ಲಿ ಸುಮಾರು 175 ಕಿ.ಮೀ ಬೇಲಿ ಇಲ್ಲದ ಪ್ರದೇಶದುದ್ದಕ್ಕೂ ಸರೀಸೃಪಗಳನ್ನು ನಿಯೋಜಿಸಲಾಗುತ್ತದೆ.  4,096 ಕಿ.ಮೀ.ಗಳಲ್ಲಿ, 850 ಕಿ.ಮೀ. ಬೇಲಿಯಿಲ್ಲದೇ ಉಳಿದಿದೆ.ಆದರೆ ಸರ್ಕಾರದಿಂದ ಯಾವುದೇ ಅಂತಿಮ ನಿರ್ಧಾರವಾಗಿಲ್ಲ.

ಉನ್ನತ ಮಟ್ಟದ ಸಭೆಗಳ ನಂತರ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಬಾಂಗ್ಲಾದೇಶದೊಂದಿಗಿನ 175 ಕಿಲೋಮೀಟರ್‌ಗಳಷ್ಟು ಬೇಲಿಯಿಲ್ಲದ ನದಿಗಳು ಮತ್ತು ಜೌಗು ಪ್ರದೇಶಗಳಲ್ಲಿ ದಾಟುವಿಕೆಯನ್ನು ತಡೆಯಲು ಹಾವುಗಳು ಮತ್ತು ಮೊಸಳೆಗಳನ್ನು ನಿಯೋಜಿಸಬಹುದು ಎಂದು ಸಲಹೆ ನೀಡಿತ್ತು.

ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಹಾವುಗಳು ಮತ್ತು ಮೊಸಳೆಗಳನ್ನು ನಿಯೋಜಿಸಲು ಬಿಎಸ್‌ಎಫ್ ಆಲೋಚಿಸಿದೆ. ಈ ಪ್ರಸ್ತಾವನೆಯನ್ನು ಅಂತಿಮಗೊಳಿಸಲಾಗಿದೆ. ಭಾರತ-ಬಾಂಗ್ಲಾದೇಶ ಗಡಿಯು 4,096 ಕಿಲೋಮೀಟರ್‌ಗಳವರೆಗೆ ವ್ಯಾಪಿಸಿದೆ.

ಮತ್ತಷ್ಟು ಓದಿ: ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ

ಬಿಎಸ್‌ಎಫ್‌ನೊಳಗೆ ಈ ವಿಷಯವನ್ನು ಉನ್ನತ ಮಟ್ಟದಲ್ಲಿ ಚರ್ಚಿಸಲಾಗುತ್ತಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಫೆಬ್ರವರಿ 9 ರಂದು ಮಹಾನಿರ್ದೇಶಕ ಪ್ರವೀಣ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಪ್ರಸ್ತಾಪವನ್ನು ಮಾಡಲಾಯಿತು.

ಮಾರ್ಚ್ 20 ರಂದು ನವದೆಹಲಿಯ ಬಿಎಸ್‌ಎಫ್ ಪ್ರಧಾನ ಕಚೇರಿಯಲ್ಲಿ ನಡೆದ ಮತ್ತೊಂದು ಉನ್ನತ ಮಟ್ಟದ ಸಭೆಯಲ್ಲಿ ಈ ವಿಚಾರವನ್ನು ಮತ್ತೊಮ್ಮೆ ಚರ್ಚಿಸಲಾಗಿದೆ ಎಂದು ವರದಿಯಾಗಿದೆ. ಇದರ ನಂತರ, ಪೂರ್ವ ಮತ್ತು ಈಶಾನ್ಯ ವಲಯಗಳ ಗಡಿ ಮಟ್ಟದ ಅಧಿಕಾರಿಗಳಿಗೆ ಸಂದೇಶಗಳನ್ನು ಕಳುಹಿಸಲಾಯಿತು.

ಪ್ರಸ್ತಾವನೆಯನ್ನು ಕಾರ್ಯಾಚರಣೆಯ ದೃಷ್ಟಿಕೋನದಿಂದ ಪರೀಕ್ಷಿಸಲು ಮತ್ತು ನಿಗದಿತ ಸಮಯದೊಳಗೆ ಕ್ರಮ ಕೈಗೊಂಡ ವರದಿಯನ್ನು ಸಲ್ಲಿಸಲು ಅಧಿಕಾರಿಗಳಿಗೆ ಕೇಳಲಾಯಿತು.
ಭಾರತ-ಬಾಂಗ್ಲಾದೇಶ ಗಡಿಯು ಜನನಿಬಿಡ ಪ್ರದೇಶಗಳು, ಕಾಡುಗಳು, ಪರ್ವತಗಳು, ಜೌಗು ಪ್ರದೇಶಗಳು ಮತ್ತು ನದಿ ಪ್ರದೇಶಗಳನ್ನು ಒಳಗೊಂಡಂತೆ ವೈವಿಧ್ಯಮಯ ಮತ್ತು ಕಷ್ಟಕರವಾದ ಭೂಪ್ರದೇಶದ ಮೂಲಕ ಹಾದುಹೋಗುತ್ತದೆ.

ಈ ಪ್ರದೇಶಗಳಲ್ಲಿ ಒಳನುಸುಳುವಿಕೆ, ಕಳ್ಳಸಾಗಣೆ ಮತ್ತು ಇತರ ಕಾನೂನುಬಾಹಿರ ಚಟುವಟಿಕೆಗಳಿಗೆ ಗುರಿಯಾಗುತ್ತವೆ. ಇತ್ತೀಚಿನ ವರ್ಷಗಳಲ್ಲಿ ಬಿಎಸ್‌ಎಫ್ ತನ್ನ ಕಣ್ಗಾವಲು ಮೂಲಸೌಕರ್ಯವನ್ನು ಗಮನಾರ್ಹವಾಗಿ ಹೆಚ್ಚಿಸಿದೆ. ಯೋಧರು ಬಾಡಿ ಕ್ಯಾಮರಾಗಳನ್ನು ಬಳಸುತ್ತಿದ್ದಾರೆ.

ಈ ಪ್ರಸ್ತಾಪವನ್ನು ಎಷ್ಟೇ ಗಂಭೀರವಾಗಿ ಪರಿಗಣಿಸಿದರೂ, ಹಲವಾರು ಪ್ರಾಯೋಗಿಕ ಪ್ರಶ್ನೆಗಳಿಗೆ ಉತ್ತರಿಸಲಾಗಿಲ್ಲ. ಗಡಿಯಲ್ಲಿ ಯಾವ ಭಾಗದಲ್ಲಿ ಅವುಗಳನ್ನು ಬಿಡಲಾಗುತ್ತದೆ ಎನ್ನುವ ಕುರಿತು ಸ್ಪಷ್ಟನೆ ಸಿಕ್ಕಿಲ್ಲ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಬೆಂಕಿ ಬಿರುಗಾಳಿ ಬ್ಯಾಟಿಂಗ್​ಗೆ ಹಳೆಯ ದಾಖಲೆಯೇ ಧ್ವಂಸ..!

Source link

ಬೆಂಗಳೂರು-ದೆಹಲಿ ಇಂಡಿಗೋ ಫ್ಲೈಟ್‌ನಲ್ಲಿ ಹುಸಿ ಬಾಂಬ್ ಬೆದರಿಕೆ!

ಬೆಂಗಳೂರು, ಏಪ್ರಿಲ್ 05: ಬೆಂಗಳೂರಿನ ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಇಂಡಿಗೋ ವಿಮಾನದಲ್ಲಿ ಹುಸಿ ಬಾಂಬ್ ಬೆದರಿಕೆ ಪ್ರಕರಣ ಆತಂಕ ಮೂಡಿಸಿತ್ತು. ದೆಹಲಿಗೆ ತೆರಳುತ್ತಿದ್ದ ವಿಮಾನದ ಶೌಚಾಲಯದಲ್ಲಿ ಬಾಂಬ್ ಇದೆ ಎಂದು ಬರೆದ ಟಿಷ್ಯೂ ಪೇಪರ್ ಪತ್ತೆಯಾಗುತ್ತಿದ್ದಂತೆ ತಕ್ಷಣ ಎಚ್ಚರಿಕೆ ಕ್ರಮ ಕೈಗೊಳ್ಳಲಾಯಿತು.ವಿಮಾನದಲ್ಲಿದ್ದ 183 ಪ್ರಯಾಣಿಕರನ್ನು ಕೆಳಗಡೆ ಇಳಿಸಿ ತಪಾಸಣೆ ನಡೆಸಿದ ನಂತರ ಹುಸಿ ಬೆದರಿಕೆಯೆಂದು ಗೊತ್ತಾಗಿ ಸಿಬ್ಬಂದಿ ನಿಟ್ಟುಸಿರು ಬಿಟ್ಟಿದ್ದಾರೆ.

ಹುಸಿ ಬೆದರಿಕೆ ಹಾಕಿದವರಿಗಾಗಿ ಶೋಧ

ಪೈಲಟ್ ಏರ್ ಟ್ರಾಫಿಕ್ ಕಂಟ್ರೋಲ್‌ಗೆ ಮಾಹಿತಿ ನೀಡಿದ ನಂತರ, ವಿಮಾನದಲ್ಲಿದ್ದ 183 ಪ್ರಯಾಣಿಕರನ್ನು ತುರ್ತಾಗಿ ಕೆಳಗಿಳಿಸಿ ಸಂಪೂರ್ಣ ತಪಾಸಣೆ ನಡೆಸಲಾಯಿತು. ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾದರೂ, ಯಾವುದೇ ಸ್ಫೋಟಕ ಅಥವಾ ಅನುಮಾನಾಸ್ಪದ ವಸ್ತು ಪತ್ತೆಯಾಗದ ಹಿನ್ನೆಲೆಯಲ್ಲಿ ಇದು ಹುಸಿ ಬೆದರಿಕೆ ಎಂದು ಅಧಿಕಾರಿಗಳು ಘೋಷಿಸಿದ್ದಾರೆ. ವಿಮಾನವು ನಂತರ ದೆಹಲಿಗೆ ಸುರಕ್ಷಿತವಾಗಿ ಪ್ರಯಾಣ ಮುಂದುವರಿಸಿದೆ.

ವಿಮಾನದ ಶೌಚಾಯಲದಲ್ಲಿ ಬಾಂಬ್ ಇದೆ ಎಂದು ಟಿಷ್ಯೂ ಪೇಪರ್‌ನಲ್ಲಿ ಬೆದರಿಕೆ ಸಂದೇಶ ಬರೆದಿರುವುದು ವಿಮಾನದಲ್ಲಿದ್ದ ಪ್ರಯಾಣಿಕರಲ್ಲೆ ಒಬ್ಬರಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಕಿಡಿಗೇಡಿಗಳನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Indian Navy Agniveer Musician 2026: ಭಾರತೀಯ ನೌಕಾಪಡೆಯಲ್ಲಿ ನೇಮಕಾತಿ; ಸಂಗೀತ ಆಸಕ್ತ ಯುವಜನರಿಗೆ ಸೇನೆ ಸೇರಲು ಸುವರ್ಣಾವಕಾಶ

ದೇಶದ ರಕ್ಷಣಾ ಪಡೆಯಲ್ಲಿ ಸೇವೆ ಸಲ್ಲಿಸುವುದರ ಜೊತೆಗೆ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವ ಯುವಜನರಿಗೆ ಭಾರತೀಯ ನೌಕಾಪಡೆಯು ಅದ್ಭುತ ಅವಕಾಶವೊಂದನ್ನು ಕಲ್ಪಿಸಿದೆ. 2026ನೇ ಸಾಲಿನ ಅಗ್ನಿವೀರ್ MR (ಸಂಗೀತಗಾರ) ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದ್ದು, ಇದು ವೃತ್ತಿಜೀವನದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಲು ಬಯಸುವವರಿಗೆ ಉತ್ತಮ ವೇದಿಕೆಯಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ನೇಮಕಾತಿ ಪ್ರಕ್ರಿಯೆಯ ಮೂಲಕ ದೇಶದ ಪ್ರತಿಷ್ಠಿತ ನೌಕಾಪಡೆಯ ಭಾಗವಾಗಬಹುದಾಗಿದೆ.

ಈ ನೇಮಕಾತಿಯ ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಏಪ್ರಿಲ್ 11, 2026 ರಿಂದ ಅಧಿಕೃತವಾಗಿ ಪ್ರಾರಂಭವಾಗಲಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಏಪ್ರಿಲ್ 26, 2026 ರವರೆಗೆ ಕಾಲಾವಕಾಶ ನೀಡಲಾಗಿದೆ. ಕೊನೆಯ ಕ್ಷಣದ ತಾಂತ್ರಿಕ ತೊಂದರೆಗಳನ್ನು ತಪ್ಪಿಸಲು ಆಸಕ್ತರು ನಿಗದಿತ ಅವಧಿಯೊಳಗೆ ಭಾರತೀಯ ನೌಕಾಪಡೆಯ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ.

ಅರ್ಹತೆಯ ಮಾನದಂಡಗಳನ್ನು ನೋಡುವುದಾದರೆ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ ಕನಿಷ್ಠ ಶೇ.50 ಅಂಕಗಳೊಂದಿಗೆ 10ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವುದು ಕಡ್ಡಾಯವಾಗಿದೆ. ಈ ಶೈಕ್ಷಣಿಕ ಅರ್ಹತೆಯ ಜೊತೆಗೆ ಸಂಗೀತ ಕ್ಷೇತ್ರದಲ್ಲಿನ ಪರಿಣತಿಯು ಅಭ್ಯರ್ಥಿಗಳಿಗೆ ಹೆಚ್ಚಿನ ಬಲ ನೀಡಲಿದೆ. ಆಯ್ಕೆ ಪ್ರಕ್ರಿಯೆಯು ಪ್ರಮುಖವಾಗಿ ಅಭ್ಯರ್ಥಿಗಳು 10ನೇ ತರಗತಿಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ (Merit Basis) ನಡೆಯಲಿದ್ದು, ನಂತರದ ಹಂತಗಳಲ್ಲಿ ಅಗತ್ಯವಿರುವ ಇತರ ಪರೀಕ್ಷೆಗಳನ್ನು ನಡೆಸಲಾಗುತ್ತದೆ.

ಇದನ್ನೂ ಓದಿ: ವಿಮಾನ ನಿಲ್ದಾಣದಲ್ಲಿ ಉದ್ಯೋಗ ಪಡೆಯುವುದು ಹೇಗೆ? ಅರ್ಹತೆ ಮತ್ತು ಆಯ್ಕೆ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ

ಅರ್ಜಿ ಸಲ್ಲಿಸುವ ಆಕಾಂಕ್ಷಿಗಳು ನೌಕಾಪಡೆಯ ಅಧಿಕೃತ ಪೋರ್ಟಲ್‌ಗೆ ಭೇಟಿ ನೀಡಿ, ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಸರಿಯಾಗಿ ಅಪ್‌ಲೋಡ್ ಮಾಡಬೇಕಾಗುತ್ತದೆ. ಅರ್ಜಿ ಸಲ್ಲಿಸಿದ ನಂತರ ಮಾಹಿತಿಯನ್ನು ಮತ್ತೊಮ್ಮೆ ಪರಿಶೀಲಿಸಿ ದೃಢೀಕರಿಸುವುದು ಅವಶ್ಯಕ. ದೇಶ ಸೇವೆ ಮತ್ತು ಕಲಾ ಪ್ರೇಮ ಎರಡನ್ನೂ ಸಮನಾಗಿ ಗೌರವಿಸುವ ಈ ಹುದ್ದೆಯು, ಯುವಜನರಿಗೆ ಗೌರವಯುತ ಬದುಕು ಮತ್ತು ಸಾಹಸಮಯ ವೃತ್ತಿಜೀವನವನ್ನು ನೀಡಲಿದೆ ಎಂಬುದು ವಿಶೇಷ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

KSRTC, ಖಾಸಗಿ ಬಸ್​​ ನಡುವೆ ಭೀಕರ ಅಪಘಾತ: ಇಬ್ಬರ ದಾರುಣ ಸಾವು; 35 ಮಂದಿಗೆ ಗಾಯ

ತುಮಕೂರು, ಏಪ್ರಿಲ್​​ 05: ಶಿರಾ ತಾಲ್ಲೂಕಿನ ಮಿನಿ ವಿಧಾನಸೌಧ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ಅಪಘಾತ ನಡೆದಿದ್ದು, ಖಾಸಗಿ ಸ್ಲೀಪರ್​​ ಬಸ್​​ಗೆ KSRTC ಬಸ್​​ ಹಿಂದಿನಿಂದ ಗುದ್ದಿದೆ. ಅಪಘಾತದ ತೀವ್ರತೆಗೆ ಖಾಸಗಿ ಬಸ್​​ನಲ್ಲಿದ್ದ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದು, 35 ಮಂದಿಗೆ ಗಂಭೀರ ಗಾಯಗಳಾಗಿವೆ. ಮೃತರನ್ನು ಹಾವೇರಿ ಮೂಲದ ಪ್ರವೀಣ್ ಕೃಷ್ಣಪ್ಪ (28) ಮತ್ತು ಗದಗ ಮೂಲದ ಸಂಗೀತಾ (16) ಎಂದು ಗುರುತಿಸಲಾಗಿದೆ. ಇಂದು ಮುಂಜಾನೆ 3 ಗಂಟೆಯ ಸುಮಾರಿಗೆ ಅಪಘಾತ ನಡೆದಿದೆ.

ಅಪಘಾತವಾಗಿರುವ ಎರಡೂ ಬಸ್​​ಗಳು ಬೆಂಗಳೂರಿಗೆ ಬರುತ್ತಿದ್ದವು ಎನ್ನಲಾಗಿದ್ದು ಹೆದ್ದಾರಿಯ ಮೂರನೇ ಲೇನ್​​ನಿಂದ ಏಕಾಏಕಿ ಎರಡನೇ ಲೇನ್​​ಗೆ ಖಾಸಗಿ ಬಸ್ ಬಂದಿರೋದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಈ ವೇಳೆ ಮತ್ತೊಂದು ಲೇನ್​​ನಲ್ಲಿ ವೇಗವಾಗಿ ಬರುತ್ತಿದ್ದ ಕೆಎಸ್​ಆರ್​​ಟಿಸಿ ಬಸ್​​ ನಿಯಂತ್ರಣ ತಪ್ಪಿ ಖಾಸಗಿ ಬಸ್​​ನ ಹಿಂಭಾಕ್ಕೆ ಗುದ್ದಿದೆ. ಪರಿಣಾಮ ಖಾಸಗಿ ಬಸ್​​ನ ಹಿಂಬದಿ ಸೀಟ್​​ಗಳಲ್ಲಿದ್ದ ಇಬ್ಬರು ಪ್ರಾಣಬಿಟ್ಟಿದ್ದಾರೆ. ಬೇಜವಾಬ್ದಾರಿ ಚಾಲನೆ ಹಿನ್ನಲೆ ಘಟನೆ ಸಂಬಂಧ ಶಿರಾ ನಗರ ಪೊಲೀಸ್ ಠಾಣೆಯಲ್ಲಿ ಎರಡು ಪತ್ಯೇಕ ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ: ಡಿಕ್ಕಿ ಹೊಡೆದ ರಭಸಕ್ಕೆ ಹೊತ್ತಿ ಉರಿದ ಕಾರು: ಓರ್ವ ಸಾವು, ಮೂವರು ಗಂಭೀರ

ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸಾವು

ಬೈಕ್ ಹಾಗೂ ಲಾರಿ ನಡುವೆ ಅಪಘಾತ ನಡೆದ ಪರಿಣಾಮ ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ನಗರದ ಕುಣಿಗಲ್ ಸರ್ಕಲ್​​ನಲ್ಲಿ ನಡೆದಿದೆ. ಗೂಳರಿವೆ ಗ್ರಾಮದ ನಿವಾಸಿ ರಾಜಣ್ಣ (60) ಮೃತರಾಗಿದ್ದು, ಘಟನಾ ಸ್ಥಳಕ್ಕೆ ತುಮಕೂರು ಸಂಚಾರ ಪೊಲೀಸರು ಭೇಟಿನೀಡಿ,‌ ಪರಿಶೀಲನೆ ನಡೆಸಿದ್ದಾರೆ. ಅಪಘಾತವಾದ ಲಾರಿ ಹಾಗೂ ಲಾರಿ ಚಾಲಕನನ್ನ ವಶಕ್ಕೆ ಪಡೆಯಲಾಗಿದ್ದು, ಮೃತದೇಹವನ್ನು ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಘಟನೆ ಸಂಬಂಧ ತುಮಕೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಜಿಪಿಎಸ್ ಇಲ್ಲದರೂ ಹಡಗು, ವಿಮಾನ ಪತ್ತೆ: ಬೆಂಗಳೂರಿನ ಸ್ಟಾರ್ಟ್‌ಅಪ್ ಹೊಸ ಪ್ರಯತ್ನ!

ಬೆಂಗಳೂರು, ಏಪ್ರಿಲ್ 05: ಪಶ್ಚಿಮ ಏಷ್ಯಾ ಸಂಕಷ್ಟದ ಹಿನ್ನೆಲೆ ಕಳ್ಳ ಸಾಗಣೆ, ಅಕ್ರಮ ಮೀನುಗಾರಿಕೆ ಹಾಗೂ ‘ಡಾರ್ಕ್ ಶಿಪ್ಪಿಂಗ್’ ಬಗ್ಗೆ ಆತಂಕ ಹೆಚ್ಚುತ್ತಿರುವ ನಡುವೆಯೇ, ಬೆಂಗಳೂರಿನ (Bengaluru) ಸ್ಟಾರ್ಟ್‌ಅಪ್ ಕ್ಸೋವಿಯನ್ ಏರೋಸ್ಪೇಸ್ ಜಿಪಿಎಸ್ ಆಫ್ ಇದ್ದರೂ ಹಡಗು ಮತ್ತು ವಿಮಾನಗಳನ್ನು ಪತ್ತೆಹಚ್ಚುವ ಹೊಸ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದೆ.

ಕೃತಕ ಬುದ್ಧಿಮತ್ತೆ (AI) ಆಧಾರಿತ ರೇಡಿಯೋ ಫ್ರೀಕ್ವೆನ್ಸಿ ಸಾಧನವು ಹಡಗುಗಳು, ವಿಮಾನಗಳು, ರಕ್ಷಣಾ ಕ್ಷೇತ್ರ ಹಾಗೂ ಕೈಗಾರಿಕಾ ಬಳಕೆಗೆ ಉಪಯುಕ್ತವಾಗಿದೆ. ವಾಣಿಜ್ಯ ಶಿಪ್ಪಿಂಗ್ ಕಂಪನಿಗಳೊಂದಿಗೆ ಪೈಲಟ್ ಯೋಜನೆಗಳು ನಡೆಯುತ್ತಿದ್ದು, ಭಾರತೀಯ ರಕ್ಷಣಾ ವಲಯದೊಂದಿಗೆ ಚರ್ಚೆಗಳು ಮುಂದುವರಿದಿವೆ ಎಂದು ಕಂಪನಿಯ ಸಹ-ಸ್ಥಾಪಕ ಅಂಕಿತ್ ಭಾತೇಜಾ ತಿಳಿಸಿದ್ದಾರೆ.

ನಿವೃತ್ತ ವಿಜ್ಞಾನಿಗಳ ತಂಡದಿಂದ ಕಾರ್ಯ

ಐಎಸ್ಆರ್‌ಒ ನಿವೃತ್ತ ವಿಜ್ಞಾನಿಗಳನ್ನೊಳಗೊಂಡ 14 ಸದಸ್ಯರ ತಂಡ ಎರಡು ವರ್ಷಗಳ ಪರಿಶ್ರಮದ ಬಳಿಕ ಈ ತಂತ್ರಜ್ಞಾನವನ್ನು ಪರಿಚಯಿಸಿದೆ. ಸಾಮಾನ್ಯವಾಗಿ ಟ್ರ್ಯಾಕಿಂಗ್ ಜಿಪಿಎಸ್ ಮತ್ತು ಉಪಗ್ರಹಗಳ ಮೇಲೆ ಅವಲಂಬಿತವಾಗಿರುತ್ತದೆ. ಆದರೆ ಜಿಪಿಎಸ್ ಆಫ್ ಮಾಡಿದರೂ, ಈ ಸಾಧನವು ಹಡಗು ಅಥವಾ ವಿಮಾನಗಳಿಂದ ಹೊರಬರುವ ರೇಡಿಯೋ ಫ್ರೀಕ್ವೆನ್ಸಿ ಸಿಗ್ನಲ್‌ಗಳನ್ನು ಹಾಗೂ ಅವು ಬಿಟ್ಟಿರುವ ಎಲೆಕ್ಟ್ರೋಮ್ಯಾಗ್ನೆಟಿಕ್ ಗುರುತುಗಳನ್ನು ವಿಶ್ಲೇಷಿಸಿ ಪತ್ತೆಹಚ್ಚುತ್ತದೆ.

ಹಡಗುಗಳು ಸಾಮಾನ್ಯವಾಗಿ AIS ಬ್ಯಾಂಡ್‌ನಲ್ಲಿ 160 MHz ಫ್ರೀಕ್ವೆನ್ಸಿಯಲ್ಲಿ ಸಿಗ್ನಲ್ ನೀಡುತ್ತವೆ. AIS ಆಫ್ ಮಾಡಿದರೂ, ಇತರ ಸಾಧನಗಳಿಂದ ಹೊರಬರುವ ಸಿಗ್ನಲ್‌ಗಳ ಮೂಲಕ ಅವುಗಳನ್ನು ಗುರುತಿಸಲು ಸಾಧ್ಯ. ಎಲ್ಲಾ ಸಂಪರ್ಕ ವ್ಯವಸ್ಥೆಗಳು ಆಫ್ ಇದ್ದರೂ ಕೊನೆಯ ಸ್ಥಳ ಮಾಹಿತಿ ಹಾಗೂ ಸುತ್ತಮುತ್ತಲಿನ ಚಲನವಲನ ಆಧರಿಸಿ ಲೊಕೇಶನ್ ಅಂದಾಜು ಮಾಡುತ್ತದೆ ಎಂದು ಹೇಳಲಾಗಿದೆ.

ಈಗ ಬಹುಮೂಲಗಳ ಡೇಟಾ ಬಳಕೆಯಿಂದ ಸುಮಾರು 20 ನಿಮಿಷಗಳ ವಿಳಂಬವಾಗುತ್ತಿದೆ. ಮುಂದಿನ ದಿನಗಳಲ್ಲಿ ಸ್ವಂತ ಉಪಗ್ರಹವನ್ನು ಉಡಾಯಿಸಿದ ಬಳಿಕ ಈ ಸಮಯವನ್ನು ಕೆಲವೇ ನಿಮಿಷಗಳಿಗೆ ಇಳಿಸುವ ಯೋಜನೆ ಇದೆ.ಈ ಸಂಬಂಧ ISRO ಹಾಗೂ ಅಂತರರಾಷ್ಟ್ರೀಯ ಉಡಾವಣಾ ಸಂಸ್ಥೆಗಳೊಂದಿಗೆ ಮಾತುಕತೆ ನಡೆಯುತ್ತಿದೆ ಎಂದು ಭತೇಜಾ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ದಾವಣಗೆರೆ ಬೈ ಎಲೆಕ್ಷನ್​​: ಅಸಮಾಧಾನದ ಆರೋಪಕ್ಕೆ ಸಚಿವ ಜಮೀರ್​​ ಫಸ್ಟ್​​ ರಿಯಾಕ್ಷನ್​​

ಹುಬ್ಬಳ್ಳಿ, ಏಪ್ರಿಲ್​​ 05: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಅಖಾಡಕ್ಕೆ ಸಚಿವ ಜಮೀರ್ ಅಹ್ಮದ್ ಖಾನ್ ಕೊನೆಗೂ ಅಧಿಕೃತವಾಗಿ ಎಂಟ್ರಿ ನೀಡುತ್ತಿದ್ದಾರೆ. ಈ ನಡುವೆ ಹುಬ್ಬಳ್ಳಿಯಲ್ಲಿ ಟಿವಿ9ಗೆ ನೀಡಿದ ವಿಶೇಷ ಸಂದರ್ಶನದಲ್ಲಿ, ತಾವು ಚುನಾವಣಾ ಪ್ರಚಾರದಿಂದ ದೂರ ಉಳಿದಿದ್ದೆಂಬ ಆರೋಪ ಹಾಗೂ ಟಿಕೆಟ್ ವಿಚಾರದಲ್ಲಿನ ಅಸಮಾಧಾನದ ಕುರಿತ ಗೊಂದಲಗಳಿಗೆ ಅವತು ಸ್ಪಷ್ಟನೆ ನೀಡಿದ್ದಾರೆ. ದಾವಣಗೆರೆ ದಕ್ಷಿಣ ಟಿಕೆಟ್‌ಗಾಗಿ ತಾವು ಯಾವುದೇ ಲಾಬಿ ನಡೆಸಿಲ್ಲ. 2023ರ ವಿಧಾನಸಭಾ ಚುನಾವಣೆ ವೇಳೆ, ಶಾಮನೂರು ಶಿವಶಂಕರಪ್ಪನವರು ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಿ, ತಾವೇ ಗೆಲ್ಲಿಸಿಕೊಂಡು ಬರುವುದಾಗಿ ಭರವಸೆ ನೀಡಿದ್ದರು. ಆದರೆ, ಪಕ್ಷದ ಹೈಕಮಾಂಡ್ ಕುಟುಂಬಕ್ಕೆ ಟಿಕೆಟ್ ನೀಡುವ ಸಂಪ್ರದಾಯದಂತೆ ಶಾಮನೂರು ಕುಟುಂಬದ ಸಮರ್ಥ್ ಶಾಮನೂರು ಅವರಿಗೆ ಟಿಕೆಟ್ ನೀಡಿದೆ. ಕಾಂಗ್ರೆಸ್ ಪಕ್ಷ ಹೈಕಮಾಂಡ್ ನಿರ್ಧಾರದಂತೆ ನಡೆಯುತ್ತದೆ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Video: ಪಿಸ್ತೂಲ್ ಹಿಡಿದು ಹೋದ ವ್ಯಕ್ತಿ, ಗಂಟೆಗಳಿಂದ ಆಗಿದ್ದ ಟ್ರಾಫಿಕ್ ಜಾಮ್ ನಿಮಿಷಗಳಲ್ಲಿ ಕ್ಲಿಯರ್

ಲಕ್ನೋ, ಏಪ್ರಿಲ್ 05: ಟ್ರಾಫಿಕ್ ಜಾಮ್ ಕ್ಲಿಯರ್ ಮಾಡಲು ವ್ಯಕ್ತಿಯೊಬ್ಬ ಪಿಸ್ತೂಲ್ ಹಿಡಿದು ಹೋದ ಘಟನೆ ಲಕ್ನೋದಲ್ಲಿ ನಡೆದಿದೆ. ಗಂಟೆಗಳಿಂದ ಇದ್ದ ಸಂಚಾರ ದಟ್ಟಣೆ ನಿಮಿಷಗಳಲ್ಲೇ ಕಡಿಮೆಯಾಗಿತ್ತು. ಇದೀಗ ವಿಡಿಯೋ ವೈರಲ್ ಆಗಿದೆ. ಸಹದತ್ ಗಂಜ್ ಪೊಲೀಸ್ ಠಾಣೆ ಪ್ರದೇಶದ ರಾಜಬ್ ಗಂಜ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ವರದಿಗಳ ಪ್ರಕಾರ, ಆ ವ್ಯಕ್ತಿ ಪಿಸ್ತೂಲ್ ಹಿಡಿದು ರಸ್ತೆಯಲ್ಲಿ ನಡೆಯುತ್ತಿರುವುದು ಪ್ರಯಾಣಿಕರಲ್ಲಿ ಭೀತಿ ಮೂಡಿಸಿತ್ತು. ಟ್ರಾಫಿಕ್ ತೆರವುಗೊಳಿಸಲು ಮತ್ತು ತನ್ನ ವಾಹನವನ್ನು ಮುಂದೆ ಸಾಗಿಸಲು ಪಿಸ್ತೂಲ್ ಬಳಸಿದ್ದಾರೆ. ವೈರಲ್ ಆಗಿರುವ ವಿಡಿಯೋವನ್ನು ಲಕ್ನೋ ಪೊಲೀಸರು ಗಮನಿಸಿದ್ದು, ಈ ವಿಷಯದ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಅಧಿಕಾರಿಗಳು ಆರೋಪಿಯ ಗುರುತಿಸುವ ಕೆಲಸ ಮಾಡುತ್ತಿದ್ದಾರೆ. ಪೊಲೀಸರು ನಂತರ ಆ ವಸ್ತುವು ವಾಸ್ತವವಾಗಿ ಬಂದೂಕನ್ನು ಹೋಲುವ ಲೈಟರ್ ಆಗಿತ್ತು ಎಂದು ಸ್ಪಷ್ಟಪಡಿಸಿದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಟೆಸ್ಟ್ ಕ್ರಿಕೆಟ್​ಗೆ ಹೊಸ ಕಾಯಕಲ್ಪ: ಬಿಸಿಸಿಐ ಭರ್ಜರಿ ಪ್ಲ್ಯಾನ್

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಈಗ ಟೆಸ್ಟ್ ಮತ್ತು ರೆಡ್ ಬಾಲ್ (ಕೆಂಪು ಚೆಂಡು) ಕ್ರಿಕೆಟ್‌ಗೆ ಹೊಸ ಚೈತನ್ಯ ನೀಡಲು ಸಜ್ಜಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮುಂಬರುವ ದಿನಗಳಲ್ಲಿ ಯುವ ಆಟಗಾರರನ್ನು ಟೆಸ್ಟ್ ಕ್ರಿಕೆಟ್‌ಗೆ ಸಿದ್ಧಪಡಿಸಲು ಬಿಸಿಸಿಐ ಹಲವಾರು ಕ್ರಾಂತಿಕಾರಿ ಕ್ರಮಗಳನ್ನು ಕೈಗೊಳ್ಳಲಿದೆ. ಅದರ ಸಂಪೂರ್ಣ ಜವಾಬ್ದಾರಿಯನ್ನು ಸೆಂಟರ್ ಆಫ್ ಎಕ್ಸಲೆನ್ಸ್ (CoE) ಮುಖ್ಯಸ್ಥರಾದ ವಿವಿಎಸ್ ಲಕ್ಷ್ಮಣ್ ಅವರಿಗೆ ನೀಡಲಾಗುತ್ತಿದೆ.

ಟೆಸ್ಟ್ ಕ್ರಿಕೆಟ್​ನ ಸ್ಪೆಷಲಿಸ್ಟ್ ಎಂದೇ ಖ್ಯಾತರಾಗಿದ್ದ ವಿವಿಎಸ್​ ಲಕ್ಷ್ಮಣ್ ಅವರ ನೇತೃತ್ವದಲ್ಲಿ ಬಿಸಿಸಿಐ ಶೀಘ್ರದಲ್ಲೇ ಹೊಸ ಯೋಜನೆಗಳು ಕಾರ್ಯರೂಪಕ್ಕೆ ತರಲಿದೆ. ಆ ಯೋಜನೆಗಳಾವುವು ಎಂದು ನೋಡುವುದಾದರೆ…

ಶ್ರೀಲಂಕಾ ಪ್ರವಾಸ: ಭಾರತದ ಅಂಡರ್-19 (U19) ಮತ್ತು ಅಂಡರ್-25 (U25) ತಂಡಗಳು ಶೀಘ್ರದಲ್ಲೇ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿವೆ. ವಿಶೇಷವೆಂದರೆ, ಈ ಸರಣಿಗಳು ಕೇವಲ ರೆಡ್ ಬಾಲ್ ಕ್ರಿಕೆಟ್‌ಗೆ ಸೀಮಿತವಾಗಿರಲಿವೆ. ಅಂದರೆ ಟೆಸ್ಟ್ ಕ್ರಿಕೆಟ್ ಆಡಲೆಂದೇ ಭಾರತದ ಕಿರಿಯರ ತಂಡಗಳು ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ.

ಐಪಿಎಲ್ ನಂತರ ವಿಶೇಷ ಟೂರ್ನಿ: 2026ರ ಐಪಿಎಲ್ ಮುಗಿದ ತಕ್ಷಣ, ಜೂನ್ ಮತ್ತು ಜುಲೈ ತಿಂಗಳಲ್ಲಿ U25 ಆಟಗಾರರಿಗಾಗಿ ವಿಶೇಷ ರೆಡ್ ಬಾಲ್ ಟೂರ್ನಿ ಆಯೋಜಿಸಲಾಗಿದೆ. ಇದರಲ್ಲಿ ಒಟ್ಟು ನಾಲ್ಕು ತಂಡಗಳು ಭಾಗವಹಿಸಲಿದ್ದು, ನಾಲ್ಕು ದಿನಗಳ ಟೆಸ್ಟ್​ ಪಂದ್ಯಗಳನ್ನು ಆಡಲಿವೆ.

ಪ್ರತಿಭೆಗಳ ಆಯ್ಕೆ: ಈ ಟೂರ್ನಿಗಾಗಿ ಸುಮಾರು 64 ಯುವ ಆಟಗಾರರನ್ನು ಗುರುತಿಸಲಾಗಿದೆ. ಸಿ.ಕೆ. ನಾಯುಡು ಟ್ರೋಫಿ ಮತ್ತು ರಣಜಿ ಟ್ರೋಫಿಯಲ್ಲಿ ಮಿಂಚಿದ ಆಟಗಾರರಿಗೆ ಇಲ್ಲಿ ಆದ್ಯತೆ ನೀಡಲಾಗುತ್ತದೆ. ಆಯೂಷ್ ಮ್ಹಾತ್ರೆ ಮತ್ತು ವೈಭವ್ ಸೂರ್ಯವಂಶಿ ಅವರಂತಹ ಉದಯೋನ್ಮುಖ ತಾರೆಗಳು ಈ ಪಟ್ಟಿಯಲ್ಲಿದ್ದಾರೆ ಎನ್ನಲಾಗಿದೆ.

ತಜ್ಞರ ಮಾರ್ಗದರ್ಶನ: ಟೆಸ್ಟ್​ ಕ್ರಿಕೆಟ್‌ನಲ್ಲಿ ಯುವ ಆಟಗಾರರ ಕೌಶಲ್ಯ ಹೆಚ್ಚಿಸಲು ಝಹೀರ್ ಖಾನ್ ಮತ್ತು ಹರ್ಭಜನ್ ಸಿಂಗ್ ಅವರಂತಹ ದಿಗ್ಗಜರಿಂದ ವಿಶೇಷ ಬೌಲಿಂಗ್ ಶಿಬಿರಗಳನ್ನು ಆಯೋಜಿಸಲು ಬಿಸಿಸಿಐ ಯೋಜಿಸಿದೆ.

ಯುವ ಪಡೆಯೇ ಗುರಿ:

ಕೇವಲ ಟಿ20 ಕ್ರಿಕೆಟ್‌ಗೆ ಮಾತ್ರ ಸೀಮಿತವಾಗದೆ, ಟೆಸ್ಟ್ ಕ್ರಿಕೆಟ್‌ನ ಸತ್ವವನ್ನು ಉಳಿಸಿಕೊಳ್ಳುವುದು ಬಿಸಿಸಿಐನ ಮೂಲ ಉದ್ದೇಶವಾಗಿದೆ. ಮುಂದಿನ ದಶಕದಲ್ಲಿ ಭಾರತೀಯ ಟೆಸ್ಟ್ ತಂಡಕ್ಕೆ ಬಲಿಷ್ಠ ಬೆನ್ನೆಲುಬನ್ನು ನಿರ್ಮಿಸಲು ಈ ‘ರೆಡ್ ಬಾಲ್ ಪೂಲ್’ ಸಹಾಯ ಮಾಡಲಿದೆ.

ಇದನ್ನೂ ಓದಿ: ಸಿರಾಜ್ ಮಾಡಿದ ತಪ್ಪಿನಿಂದಾಗಿ ಸೋತ ಗುಜರಾತ್ ಟೈಟಾನ್ಸ್

ಒಟ್ಟಾರೆಯಾಗಿ, ಬಿಸಿಸಿಐನ ಈ ‘ಮಿಷನ್ ರೆಡ್ ಬಾಲ್’ ಭಾರತೀಯ ಕ್ರಿಕೆಟ್‌ನ ಭವಿಷ್ಯದ ದೃಷ್ಟಿಯಿಂದ ಅತ್ಯಂತ ನಿರ್ಣಾಯಕ ಹೆಜ್ಜೆಯಾಗಿದೆ. ಈ ಮೂಲಕ ಟೆಸ್ಟ್ ಕ್ರಿಕೆಟ್​ಗೆ ಬಲಿಷ್ಠ ಟೀಮ್ ಇಂಡಿಯಾವನ್ನು ರೂಪಿಸಲು ಬಿಸಿಸಿಐ ಭರ್ಜರಿ ಪ್ಲ್ಯಾನ್​​ಗಳನ್ನು ರೂಪಿಸುತ್ತಿದೆ.

 

Source link

Weekly Horoscope: ಈ ವಾರ ಈ ರಾಶಿಗೆ ಆದಾಯದಲ್ಲಿ ಏರಿಕೆ ಮತ್ತು ಅದೃಷ್ಟ ಕೂಡಿಬರಲಿದೆ

ಖ್ಯಾತ ಜ್ಯೋತಿಷಿ ಮತ್ತು ವಾಸ್ತುಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಏಪ್ರಿಲ್ 6 ರಿಂದ ಏಪ್ರಿಲ್ 12 ರವರೆಗಿನ ವಾರಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಈ ವಾರದಲ್ಲಿ ಗ್ರಹಗಳ ಸ್ಥಿತಿ, ತಿಥಿಗಳ ಮಹತ್ವ, ಮತ್ತು ದ್ವಾದಶ ರಾಶಿಗಳ ಮೇಲೆ ಅವುಗಳ ಪ್ರಭಾವದ ಕುರಿತು ವಿವರವಾದ ಮಾಹಿತಿಯನ್ನು ಒದಗಿಸಿದ್ದಾರೆ. ಪರಾಭಾವನಾಂ ಸಮವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಮತ್ತು ಕೃಷ್ಣ ಪಕ್ಷದ ಪಂಚಾಂಗವು ಈ ವಾರದ ವಿಶೇಷವಾಗಿದೆ.

ವಾರದ ಗ್ರಹಗತಿಗಳನ್ನು ಗಮನಿಸಿದರೆ, ಗುರು ಗ್ರಹವು ಮಿಥುನ ರಾಶಿಯಲ್ಲಿ, ಕೇತು ಗ್ರಹವು ಸಿಂಹ ರಾಶಿಯಲ್ಲಿ, ಮತ್ತು ರಾಹು ಗ್ರಹವು ಕುಂಭ ರಾಶಿಯಲ್ಲಿ ಸಂಚರಿಸುತ್ತಿವೆ. ರವಿ, ಶನಿ, ಕುಜ, ಮತ್ತು ಬುಧ ಎಂಬ ನಾಲ್ಕು ಗ್ರಹಗಳು ಪ್ರಮುಖ ಸ್ಥಾನಗಳಲ್ಲಿವೆ. ಏಪ್ರಿಲ್ 11, ಶನಿವಾರದಂದು ಬುಧ ಗ್ರಹವು ಮೀನ ರಾಶಿಗೆ ಸಂಚಾರ ಪ್ರಾರಂಭಿಸುತ್ತದೆ. ಶುಕ್ರ ಗ್ರಹವು ವಾರಪೂರ್ತಿ ಮೇಷ ರಾಶಿಯಲ್ಲಿ ಇರುತ್ತದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Exit mobile version